Best Places to Visit in Haveri: ಹಾವೇರಿಯಲ್ಲಿನ ಈ ಪ್ರಸಿದ್ಧ ತಾಣಗಳನ್ನು ನೀವು ನೋಡಿದ್ದೀರಾ? - Vistara News

ಕರ್ನಾಟಕ

Best Places to Visit in Haveri: ಹಾವೇರಿಯಲ್ಲಿನ ಈ ಪ್ರಸಿದ್ಧ ತಾಣಗಳನ್ನು ನೀವು ನೋಡಿದ್ದೀರಾ?

ಹಲವಾರು ಸಾಧಕರನ್ನು ನೀಡಿರುವ ಹಾವೇರಿ ಜಿಲ್ಲೆಯಲ್ಲಿ ವಿಶಿಷ್ಟ ಪ್ರವಾಸಿ ತಾಣಗಳಿವೆ. ಅವುಗಳ ಕುರಿತಾಗಿ ಇಲ್ಲಿದೆ (Best Places to Visit in Haveri) ಮಾಹಿತಿ.

VISTARANEWS.COM


on

haveri railway board at junction
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಂತ ಶಿಶುನಾಳ ಶರೀಫ, ಕನಕದಾಸರು, ಸರ್ವಜ್ಞ, ಜ್ಞಾನಯೋಗಿ ಪಂಚಾಕ್ಷರಿ ಗವಾಯಿ ಸೇರಿ ಅನೇಕ ಸಾಧಕರನ್ನು ಕರುನಾಡಿಗೆ ಕೊಟ್ಟ ಜಿಲ್ಲೆ ಹಾವೇರಿ. ಏಲಕ್ಕಿ ಬೆಳೆ ಮತ್ತು ಬ್ಯಾಡಗಿ ಮೆಣಸಿನಿಂದಾಗಿ ಪ್ರಸಿದ್ಧವಾದ ಈ ಜಿಲ್ಲೆಯು ಪ್ರವಾಸಿಗರ ನೆಚ್ಚಿನ ಸ್ಥಳವೂ ಹೌದು. ಹಲವಾರು ಪ್ರವಾಸಿ ತಾಣಗಳನ್ನು ಹೊಂದಿರುವ ಈ ಜಿಲ್ಲೆಗೆ ಪ್ರತಿ ವರ್ಷ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ತೆರಳುತ್ತಾರೆ. ಈ ಜಿಲ್ಲೆಗೆ ಪ್ರವಾಸಕ್ಕೆ ಹೋದಾಗ ಯಾವ ಯಾವ ಸ್ಥಳಗಳನ್ನು ಮರೆಯದೆ ನೋಡಬೇಕು ಎನ್ನುವ ಮಾಹಿತಿ (Best Places to Visit in Haveri) ಇಲ್ಲಿದೆ.

ಹಾನಗಲ್‌

hanagal temple haveri


ಹಾವೇರಿ ಜಿಲ್ಲೆಗೆ ಸೇರಿದ ಸಣ್ಣ ಪಟ್ಟಣ ಹಾನಗಲ್‌. ಈ ಪಟ್ಟಣದ ವ್ಯಾಪ್ತಿಯಲ್ಲಿ ಹಲವಾರು ದೇವಾಲಯಗಳಿದ್ದು, ಅವುಗಳು ತಮ್ಮ ಐತಿಹಾಸಿಕ ಮಹತ್ವದಿಂದಾಗಿ ಜನಪ್ರಿಯವಾಗಿವೆ. ಕದಂಬರ ಕಾಲದಲ್ಲಿ ಹಾನಗಲ್‌ ಕದಂಬರ ಶಾಖೆಯ ರಾಜಧಾನಿಯಾಗಿತ್ತು. ಈ ಪ್ರದೇಶದಲ್ಲಿ 12 ಮತ್ತು 13ನೇ ಶತಮಾನಕ್ಕೆ ಸೇರಿದ 200ಕ್ಕೂ ಹೆಚ್ಚು ಶಾಸನಗಳು ದೊರೆತಿವೆ.

ಐರಾಣಿ

ರಾಣೆಬೆನ್ನೂರಿನಿಂದ 24 ಕಿ.ಮೀ ದೂರದಲ್ಲಿ ಐರಾಣಿ ಹೆಸರಿನ ಸ್ಥಳವಿದೆ. ಇಲ್ಲಿ ಪಾಳುಬಿದ್ದ ಕೋಟೆಯೊಂದನ್ನು ನೋಡಬಹುದು. ಹಾಗೆಯೇ ಅದರ ಜತೆಗೆ ವೀರಶೈವ ಮಠವನ್ನೂ ನೋಡಿಕೊಂಡು ಬರಬಹುದು. ಇಲ್ಲಿನ ಜನರು ಕಂಬಳಿ ತಯಾರಿಕೆಯಲ್ಲಿ ಪ್ರಸಿದ್ಧವಾಗಿರುವುದರಿಂದ ಇಲ್ಲಿಗೆ ಹೋದಾಗ ಕಂಬಳಿ ಕೊಳ್ಳುವುದನ್ನು ಮರೆಯದಿರಿ.

ಸವಣೂರು

baobab trees in savanur  india


ಆಫ್ರಿಕಾದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುದು ಬಾವೊಬಾಬ್‌ ಮರಗಳು. ವಿಶೇಷವೆಂದರೆ ಈ ಬಾವೊಬಾಬ್‌ ಮರಗಳು ಹಾವೇರಿಯ ಸವಣೂರಿನಲ್ಲೂ ಇವೆ. ಮೂರು ಬಾವೊಬಾಬ್‌ ಮರಗಳನ್ನು ಹತ್ತಿರ ಹತ್ತಿರದಲ್ಲೇ ತ್ರಿಕೋನಾಕಾರದಲ್ಲಿ ನೆಡಲಾಗಿದೆ. ಈ ರೀತಿ ಹತ್ತಿರದಲ್ಲಿ ಮೂರು ಬಾವೊಬಾಬ್‌ ಮರಗಳನ್ನು ಹೊಂದಿರುವ ದೇಶದ ಏಕೈಕ ಸ್ಥಳ ಎನ್ನುವ ಖ್ಯಾತಿ ಸವಣೂರಿಗೆ ಸಿಕ್ಕಿದೆ. ಆಫ್ರಿಕಾದ ಈ ಗಿಡವನ್ನು ಇಲ್ಲಿಗೆ ಯಾರು ತಂದು ನೆಟ್ಟರು ಎನ್ನುವುದಕ್ಕೆ ಯಾವುದೇ ಮಾಹಿತಿಯಿಲ್ಲ. ಈ ಮರಗಳು ಸರಿಸುಮಾರು 2 ಸಾವಿರ ವರ್ಷಗಳಷ್ಟು ಹಳೆಯವು ಎನ್ನಲಾಗುತ್ತದೆ. ಈ ಸ್ಥಳಕ್ಕೆ ಭೇಟಿ ನೀಡಿ ನೀವು ಅಪರೂಪದ ಮರಗಳನ್ನು ನೋಡಬಹುದು.

ಸಿದ್ದೇಶ್ವರ ದೇವಸ್ಥಾನ

siddeshwara temple haveri


ಸಿದ್ದೇಶ್ವರ ದೇವಸ್ಥಾನವು ಹಾವೇರಿ ಪಟ್ಟಣದಲ್ಲಿಯೇ ಇದೆ. ಈ ದೇವಸ್ಥಾನವನ್ನು 12ನೇ ಶತಮಾನದ ಪಶ್ಚಿಮ ಚಾಲುಕ್ಯರ ಕಲೆಯ ಉದಾಹರಣೆ ಎಂದು ಪರಿಗಣಿಸಲಾಗಿದೆ. ಈ ದೇಗುಲವು ಸೂರ್ಯನು ಉದಯಿಸುವ ದಿಕ್ಕಾದ ಪೂರ್ವಕ್ಕೆ ಮುಖ ಮಾಡದೆ ಪಶ್ಚಿಮಕ್ಕೆ ಮುಖ ಮಾಡಿದೆ. ಈ ರೀತಿಯ ದೇವಸ್ಥಾನಗಳನ್ನು ಚಾಲುಕ್ಯರು ಕಟ್ಟಿಸುತ್ತಿದ್ದರು. ದೇವಾಲಯದ ಮಂಟಪವು ಉಮಾ ಮಹೇಶ್ವರ, ವಿಷ್ಣು ಮತ್ತು ಅವನ ಪತ್ನಿ ಲಕ್ಷ್ಮಿ, ಸೂರ್ಯ ದೇವರು, ನಾಗ-ನಾಗಿಣಿ, ಗಣಪತಿ ಮತ್ತು ಕಾರ್ತಿಕೇಯನ ಶಿಲ್ಪಗಳನ್ನು ಒಳಗೊಂಡಿದೆ.

ತಾರಕೇಶ್ವರ ದೇವಾಲಯ

Tarakeshwara Temple Hangal


ಈ ದೇವಾಲಯವು ಭಗವಾನ್ ತಾರಕೇಶ್ವರನಿಗೆ (ಶಿವನ ರೂಪ) ಸಮರ್ಪಿತವಾಗಿದೆ. ಈ ದೇವಾಲಯದ ನಿರ್ಮಾಣವನ್ನು ಕದಂಬರು ಮಾಡಿದ್ದಾರೆ ಎಂದು ನಂಬಲಾಗಿದೆ. ಆದರೆ ಕಲ್ಯಾಣಿ ಚಾಲುಕ್ಯರು ದೇವಾಲಯದಲ್ಲಿ ಹಲವು ಗಮನಾರ್ಹ ಬದಲಾವಣೆಗಳನ್ನು ಮಾಡಿದರು.

ಗಳಗೇಶ್ವರ ದೇವಸ್ಥಾನ

galageshwara temple


ಗಳಗನಾಥ ದೇವಸ್ಥಾನ ಎಂದೂ ಕರೆಯಲ್ಪಡುವ ಗಳಗೇಶ್ವರ ದೇವಸ್ಥಾನವು ಗಳಗನಾಥ ಎಂಬ ಸಣ್ಣ ಹಳ್ಳಿಯಲ್ಲಿದೆ. ಇದನ್ನು ಚಾಲುಕ್ಯರ ಆಳ್ವಿಕೆಯಲ್ಲಿ ನಿರ್ಮಿಸಲಾಯಿತು. ಈ ದೇವಾಲಯದ ತುಂಬ ಶಿಲ್ಪಗಳು ಮತ್ತು ಸಂಕೀರ್ಣವಾದ ಕೆತ್ತನೆಗಳನ್ನು ಕಾಣಬಹುದಾಗಿದೆ. ಈ ದೇವಸ್ಥಾನದ ಗೋಪುರ ನೆಲದಿಂದಲೇ ಮೇಲಕ್ಕೆದ್ದಂತೆ ಕಾಣುವುದರಿಂದಾಗಿ ಇದು ಬೇರೆ ದೇಗುಲಗಳಿಗಿಂತ ವಿಭಿನ್ನವಾಗಿದೆ.

ಕಾಗಿನೆಲೆ

santa kanakadasara gaddige kaginele


ಕಾಗಿನೆಲೆಯು ಇತಿಹಾಸ ಪ್ರಸಿದ್ಧ ಸ್ಥಳವಾಗಿದ್ದು, ಇಲ್ಲಿ ನೀವು ಸಂಗಮೇಶ್ವರ ದೇವಾಲಯ, ಆದಂ ಶಾಫಿಯಾ ದರ್ಗಾ, ಆದಿಕೇಶ್ವರ ದೇವಸ್ಥಾನವು ಇಲ್ಲಿದೆ. ಹಾಗೆಯೇ ಪ್ರಸಿದ್ಧ ಕನಕದಾಸರ ಬೃಂದಾವನ ಮತ್ತು ಕನಕ ಗುರು ಪೀಠವನ್ನು ಇಲ್ಲಿ ನೀವು ಕಾಣಬಹುದು.

ನಗರೇಶ್ವರ ದೇವಸ್ಥಾನ

nagareshwara temple haveri


ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದಲ್ಲಿ ನಗರೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನವು 12ನೇ ಶತಮಾನದಲ್ಲಿ ಚಾಲುಕ್ಯರ ವಾಸ್ತುಶಿಲ್ಪದಂತೆ ನಿರ್ಮಾಣಗೊಂಡಿರುವುದಾಗಿದೆ. ಇಲ್ಲಿ ಸುಂದರವಾಗಿ ಕೆತ್ತಲ್ಪಟ್ಟಿರುವ 60 ಕಂಬಗಳಿವೆ. ಈ ದೇವಸ್ಥಾನದಲ್ಲಿ ಶಿವನನ್ನು ಆರಾಧಿಸಲಾಗುತ್ತದೆ.

ಇತರೆ ದೇವಸ್ಥಾನಗಳು

ಇವಷ್ಟೇ ಅಲ್ಲದೆ ಇನ್ನೂ ಹಲವಾರು ದೇವಸ್ಥಾನಗಳನ್ನು ನೀವು ಹಾವೇರಿ ಜಿಲ್ಲೆಯಾದ್ಯಂತ ಕಾಣಬಹುದು. ಚೌಡದಾನಪುರದಲ್ಲಿನ ಮುಕ್ತೇಶ್ವರ ದೇವಸ್ಥಾನ, ದೇವರಗುಡ್ಡದಲ್ಲಿನ ಮೈಲಾರ ಸ್ವಾಮಿ ದೇವಸ್ಥಾನ, ರಟ್ಟಹಳ್ಳಿಯಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ಕೆಲವು ಅತ್ಯುತ್ತಮ ಸ್ಮಾರಕಗಳನ್ನು ಪ್ರದರ್ಶಿಸುವ ಕದಂಬೇಶ್ವರ ದೇವಸ್ಥಾನ, ಸಾತೇನಹಳ್ಳಿ, ಹಾಗೆಯೇ ಹಾವೇರಿ ಜಿಲ್ಲಾ ಕೇಂದ್ರದಲ್ಲೇ ಇರುವ ಉಗ್ರನರಸಿಂಹ ದೇವಸ್ಥಾನ, ವೀರಶೈವ ಮಠಗಳನ್ನು ನೀವು ಕಣ್ತುಂಬಿಸಿಕೊಳ್ಳಬಹುದು.

ಕೃಷ್ಣಮೃಗ ಅಭಯಾರಣ್ಯ

3 blackbucks  at ranebennur


ರಾಣೆಬೆನ್ನೂರಿನಲ್ಲಿ ಕೃಷ್ಣಮೃಗ ಅಭಯಾರಣ್ಯವಿದೆ. ಈ ಅಭಯಾರಣ್ಯವು 119 ಚದರ ಕಿ.ಮೀ.ಗೆ ಹಬ್ಬಿದೆ. ಅದರಲ್ಲಿ 14.87 ಕಿ.ಮೀ. ಅನ್ನು ಮುಖ್ಯ ಅಭಯಾರಣ್ಯವೆಂದು ಪರಿಗಣಿಸಲಾಗಿದೆ. ಇಲ್ಲಿ ಕುರುಚಲು ಕಾಡು ಮತ್ತು ನೀಲಗಿರಿ ತೋಟ ಹೆಚ್ಚಿದೆ. ಕೃಷ್ಣಮೃಗ ಮಾತ್ರವಲ್ಲದೆ ಇಲ್ಲಿ ತೋಳ, ಕಾಡು ಹಂದಿ, ಕತ್ತೆ ಕಿರುಬ, ನರಿ, ಲಾಂಗುರ್‌, ಮುಳ್ಳು ಹಂದಿ, ಮುಂಗುಸಿ, ಮೊಲ ಮತ್ತು ಪ್ಯಾಂಗೋಲಿನ್‌ಗಳೂ ಇವೆ. ಅದಲ್ಲದೆ ನವಿಲು, ಸಿರ್ಕೀರ್‌ ಕೋಗಿಲೆ, ಬೂದು ಬಣ್ಣದ ಬಾಬ್ಲರ್‌, ಬೇಬ್ಯಾಕ್ಡ್‌ ಶ್ರೈಕ್‌, ಬ್ಲ್ಯಾಕ್‌ ಡ್ರೊಂಗೊ, ಗ್ರೇ ಪಾರ್ಟ್ರಿಡ್ಜ್, ಸ್ಯಾಂಡ್ ಗ್ರೌಸ್ ಹೆಸರಿನ ಹಕ್ಕಿಗಳು ಕೂಡ ಇವೆ.

ಬಂಕಾಪುರ ನವಿಲು ಅಭಯಾರಣ್ಯ

male and female peacocks at garden


ಬಂಕಾಪುರ ನವಿಲು ಅಭಯಾರಣ್ಯವು ಕರ್ನಾಟಕದಲ್ಲಿ ನವಿಲುಗಳ ಸಂರಕ್ಷಣೆ ಮತ್ತು ಸಂತಾನೋತ್ಪತ್ತಿಗೆ ಎರಡನೇ ಪ್ರಮುಖ ಅಭಯಾರಣ್ಯವಾಗಿದೆ. ಇನ್ನೊಂದು ನವಿಲು ಅಭಯಾರಣ್ಯ ಆದಿಚುಂಚನಗಿರಿಯಲ್ಲಿದೆ. ಬಂಕಾಪುರ ನವಿಲು ಅಭಯಾರಣ್ಯದಲ್ಲಿ ಸುಮಾರು 1000 ನವಿಲುಗಳು ಇವೆ ಎಂದು ಅಂದಾಜಿಸಲಾಗಿದೆ. ಇಲ್ಲಿ ನವಿಲುಗಳು ಮಾತ್ರವಲ್ಲದೆ ವುಡ್ ಪೆಕರ್, ಗೂಬೆಗಳು, ಮ್ಯಾಗ್ಪಿ, ರಾಬಿನ್, ಗ್ರೀನ್ ಬೀ ಈಟರ್, ಪ್ಯಾರಡೈಸ್ ಫ್ಲೈಕ್ಯಾಚರ್, ಸ್ಪಾಟೆಡ್ ಡವ್, ಪ್ಯಾರಾಕೀಟ್, ಕಿಂಗ್‌ಫಿಷರ್, ಗ್ರೇ ಹಾರ್ನ್‌ಬಿಲ್, ಮುಂತಾದ ಪಕ್ಷಿಗಳನ್ನು ಸಹ ಇವೆ.

ಉತ್ಸವ ರಾಕ್‌ ಗಾರ್ಡನ್‌

utsav rock garden


ಖ್ಯಾತ ಕಲಾವಿದರಾದ ಡಾ. ಟಿ. ಬಿ. ಸೊಲಬಕ್ಕನವರ್‌ ಅವರು ಕಲ್ಪಿಸಿ ವಿನ್ಯಾಸಗೊಳಿಸಿದ ಉದ್ಯಾನವನ ಉತ್ಸವ ರಾಕ್‌ ಗಾರ್ಡನ್‌. ಇದು ಒಳಾಂಗಣ ಮತ್ತು ಹೊರಾಂಗಣ ವಸ್ತು ಸಂಗ್ರಾಹಲಯಗಳನ್ನು ಹೊಂದಿರುವ ವಿಶಿಷ್ಟ ಉದ್ಯಾನವಾಗಿದೆ. ಈ ಉದ್ಯಾನವು 8 ವಿಶ್ವ ದಾಖಲೆಗಳನ್ನು ಹೊಂದಿದೆ. ಇದು ಮನೋರಂಜನೆಯ ಪಾರ್ಕ್‌ ಮಾತ್ರವಲ್ಲದೆ ಕಲೆ, ಸಂಸ್ಕೃತಿ ಮತ್ತು ಶಿಕ್ಷಣದ ಕೇಂದ್ರವೂ ಹೌದು. ಇಲ್ಲಿ ಉತ್ತರ ಕರ್ನಾಟಕದ ಗ್ರಾಮೀಣ ಸಂಸ್ಕೃತಿಯನ್ನು ತೋರಿಸುವಂತಹ ಶಿಲ್ಪಗಳನ್ನು ಕಾಣಬಹುದು. ಇಲ್ಲಿ ಸುಮಾರು 2 ಸಾವಿರ ಶಿಲ್ಪಗಳನ್ನು ಇರಿಸಲಾಗಿದೆ. ಅದರಲ್ಲಿ ಕನ್ನಡದ ಖ್ಯಾತ ನಟ ಡಾ.ರಾಜ್‌ಕುಮಾರ್‌ ಅವರ ಹಲವು ಚಿತ್ರಗಳ ವಿವಿಧ ಪಾತ್ರಗಳದ್ದೂ ಶಿಲ್ಪಗಳಿರುವುದು ವಿಶೇಷ.

ಬ್ಯಾಡಗಿ

byadagi chilli


ಎಲ್ಲರ ಬಾಯಲ್ಲೂ ಕೇಳಿಬರುವ ಬ್ಯಾಡಗಿ ಮೆಣಿಸಿನಕಾಯಿಯ ಮೂಲ ಹಾವೇರಿ ಜಿಲ್ಲೆಯ ಬ್ಯಾಡಗಿ. ದೇಶದಲ್ಲಿ ಅತಿ ಹೆಚ್ಚಿನ ವಹಿವಾಟು ಹೊಂದಿರುವ ಮೆಣೆಸಿನಕಾಯಿಯ ಪ್ರಭೇದಕ್ಕೆ ಆ ಹೆಸರನ್ನು ತಂದುಕೊಟ್ಟ ಊರನ್ನು ನೀವೊಮ್ಮೆ ಭೇಟಿ ಮಾಡಬೇಕು. ಈ ಮೆಣಸಿಕಾಯಿಗೆ ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಕೂಡ ನೀಡಲಾಗಿದೆ. ಈ ಮೆಣಸಿನಕಾಯಿಗಳ ಬೀಜಗಳಿಂದ ತೆಗೆದ ಎಣ್ಣೆಯನ್ನು ನೇಲ್ ಪಾಲಿಷ್ ಮತ್ತು ಲಿಪ್‌ಸ್ಟಿಕ್‌ಗಳ ತಯಾರಿಕೆಯಲ್ಲಿಯೂ ಬಳಸಲಾಗುತ್ತದೆ.

ಬಾಡ

ಕನಕದಾಸರು ಕನ್ನಡಿಗರೆಲ್ಲರಿಗೂ ಗೊತ್ತಿರುವ ವ್ಯಕ್ತಿ. ಅವರು ಹುಟ್ಟಿದ್ದು ಇದೇ ಹಾವೇರಿಯ ಬಾಡ ಗ್ರಾಮದಲ್ಲಿ. ಅದರ ನೆನಪಿಗಾಗಿ ಇಲ್ಲಿ ಕನಕದಾಸರ ಅರಮನೆಯನ್ನು ನಿರ್ಮಿಸಲಾಗಿದೆ. ಇಲ್ಲಿಗೆ ಭೇಟಿ ನೀಡಿ ನೀವು 16ನೇ ಶತಮಾನದ ಕವಿ, ದಾರ್ಶನಿಕ ಮತ್ತು ಸಂಗೀತಕಾರನ ನೆನಪುಗಳನ್ನು ಮನದಲ್ಲಿ ತುಂಬಿಕೊಂಡು ಬರಬಹುದು.

ಶಿಶುನಾಳ

santa shishunala sharif samaadhi


ಕನಕದಾಸರಂತೆಯೇ ಶಿಶುನಾಳ ಶರೀಫರು ಕೂಡ ಸಮಾಜದಲ್ಲಿ ಬದಲಾವಣೆಗಾಗಿ ಹೋರಾಡಿದವರು. ಅವರ ಜನ್ಮಸ್ಥಳ ಹಾವೇರಿಯ ಶಿಶುವಿನಹಾಳ. ಈ ಗ್ರಾಮದಲ್ಲಿಯೇ ಶಿಶುನಾಳ ಶರೀಫರು ಜನಿಸಿದ್ದು. 19ನೇ ಶತಮಾನದಲ್ಲಿ ಅವರು ಸಮಾಜ ಸುಧಾರಕರಾಗಿ, ದಾರ್ಶನಿಕರಾಗಿ ಹಾಗೂ ಕವಿಯಾಗಿ ಗುರುತಿಸಿಕೊಂಡಿದ್ದರು.

ಅಬಲೂರು

abalur basaveshwara temple entry


ಕನ್ನಡದ ಶ್ರೇಷ್ಠ ಕವಿ ಸರ್ವಜ್ಞ ಅವರ ಜನ್ಮಸ್ಥಳ ಹಾವೇರಿಯ ಅಬಲೂರು. ಇಲ್ಲಿ ನಂದಿ ದೇವಾಲಯವೊಂದಿದ್ದು, ಅದು ಕೂಡ ಸಾಕಷ್ಟು ಪ್ರಸಿದ್ಧವಾಗಿದೆ.

ಹೊಳೆ ಆನೆವೇರಿ

ಕರ್ನಾಟಕದ ಎರಡು ಪ್ರಮುಖ ನದಿಗಳಾದ ತುಂಗಭದ್ರಾ ಮತ್ತು ಕುಮುದ್ವತಿ ನದಿಗಳು ಹಾವೇರಿನ ಹೊಳೆ ಆನೆವೇರಿ ಸ್ಥಳದಲ್ಲಿ ವಿಲೀನಗೊಳ್ಳುತ್ತವೆ. ಇಲ್ಲಿ ರಾಮೇಶ್ವರ ದೇವಸ್ಥಾನ ಮತ್ತು ಬನಶಂಕರಿ ದೇವಸ್ಥಾನಗಳೂ ಇದ್ದು, ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.

FAQs

ಹಾವೇರಿ ಏಕೆ ಪ್ರಸಿದ್ಧವಾಗಿದೆ?

ಹಾವೇರಿಯು ಏಲಕ್ಕಿ , ಮಾಲೆ ಮತ್ತು ಬ್ಯಾಡಗಿ ಕೆಂಪು ಮೆಣಸಿನಕಾಯಿಗೆ ಹೆಸರುವಾಸಿಯಾಗಿದೆ.

ಹಾವೇರಿಯ ಪ್ರಸಿದ್ಧ ವ್ಯಕ್ತಿಗಳು ಯಾರು?

ಸರ್ವಜ್ಞ, ಸಂತ ಕನಕದಾಸರು, ಶಿಶುನಾಳ ಷರೀಫ್, ಹಾನಗಲ್ ಕುಮಾರ ಶಿವಯೋಗಿಗಳು, ವಾಗೀಶ್ ಪಂಡಿತರು, ಲೇಖಕ ಗಳಗನಾಥರು, ಗಾನಯೋಗಿ ಪಂಚಾಕ್ಷರಿ ಗವಾಯಿಗಳು, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಡಾ.ವಿ.ಕೆ. ಗೋಕಾಕ್ ಮತ್ತು ಇನ್ನೂ ಅನೇಕ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Rage: ರಾಜಧಾನಿಯಲ್ಲಿ ಹೆಚ್ಚುತ್ತಿದೆ ರೋಡ್‌ ರೇಜ್‌, ಮತ್ತೊಂದು ಹಲ್ಲೆ

Road Rage: ಸರ್ಜಾಪುರ ರಸ್ತೆಯಲ್ಲಿ ಕುಟುಂಬದೊಂದಿಗೆ ಅಖಿಲ್ ಸಾಬು ಕಾರಿನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದಾಗ, ಹೋಂಡಾ ಆ್ಯಕ್ಟಿವಾ ಬೈಕ್‌ನಲ್ಲಿ ಬಂದ ವ್ಯಕ್ತಿ ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ನಡುರಸ್ತೆಯಲ್ಲಿ ಜಗಳವಾಗಿದೆ.

VISTARANEWS.COM


on

road rage bangalore
Koo

ಬೆಂಗಳೂರು: ರಾಜಧಾನಿಯಲ್ಲಿ ರೋಡ್ ರೇಜ್ (Road Rage) ಪ್ರಕರಣಗಳು ಮಿತಿಮೀರಿ ಹೆಚ್ಚುತ್ತಿವೆ. ಕೆಲವು ವರದಿಯಾಗುತ್ತಿವೆ, ಕೆಲವು ಗಮನಕ್ಕೆ ಬರದೇ ಹೋಗುತ್ತಿವೆ. ಮೇ 17ರಂದು ಸರ್ಜಾಪುರ ರಸ್ತೆಯಲ್ಲಿ (Sarjapura road) ನಡೆದ ಘಟನೆಯ ವಿಡಿಯೋವನ್ನು ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ದೂರು ನೀಡಲಾಗಿದ್ದು, ಇದರಲ್ಲಿ ಸ್ಕೂಟರ್‌ ಸವಾರನೊಬ್ಬ ಕಾರು ಪ್ರಯಾಣಿಕರ ಮೇಲೆ ಹಲ್ಲೆ (Assault Case) ನಡೆಸಿದ್ದಾನೆ.

ಕೇರಳ ಮೂಲದ ಅಖಿಲ್ ಸಾಬು ಎಂಬವರು ಸರ್ಜಾಪುರ ರಸ್ತೆಯಲ್ಲಿ ಅನುಭವಿಸಿದ ಯಾತನೆಯನ್ನು ನಗರ ಪೊಲೀಸರು, ಗೃಹ ಸಚಿವರಿಗೆ ಎಕ್ಸ್‌ನಲ್ಲಿ ಟ್ಯಾಗ್ ಮಾಡಿ ದೂರು‌‌ ನೀಡಿದ್ದಾರೆ. ಬಳಿಕ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸರ್ಜಾಪುರ ರಸ್ತೆಯಲ್ಲಿ ಕುಟುಂಬದೊಂದಿಗೆ ಅಖಿಲ್ ಸಾಬು ಕಾರಿನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದಾಗ, ಹೋಂಡಾ ಆ್ಯಕ್ಟಿವಾ ಬೈಕ್‌ನಲ್ಲಿ ಬಂದ ವ್ಯಕ್ತಿ ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ನಡುರಸ್ತೆಯಲ್ಲಿ ಜಗಳವಾಗಿದೆ. ಜಗಳದ ವೇಳೆ ಕಾರಿನ ಎಡಭಾಗದ ಕಿಟಕಿಯನ್ನು ಆರೋಪಿ ಹೆಲ್ಮೆಟ್‌ನಿಂದ ಹೊಡೆದು ಒಡೆದುಹಾಕಿದ್ದಾನೆ. ಆಗ ಕಾರಿನಲ್ಲಿದ್ದ ಅಖಿಲ್ ಪತ್ನಿ ಹಾಗೂ ಮಗುವಿನ ಕೈಗೆ ಗಾಯವಾಗಿದೆ.

ಇದನ್ನು ಪ್ರಶ್ನೆ ಮಾಡಿದ ಅಖಿಲ್ ಮೇಲೂ ಹಲ್ಲೆ ಎಸಗಲಾಗಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿದೆ. ಜಗದೀಶ್ ಎಂಬಾತನ ಮೇಲೆ ವರ್ತೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಾರು ಚಾಲಕನ ಹುಚ್ಚಾಟ

ಬೆಂಗಳೂರಿನಲ್ಲಿ ಕಾರು ಚಾಲಕನೊಬ್ಬ ಮನ ಬಂದಂತೆ ಕಾರು ಚಲಾಯಿಸಿ ಕಂಡ ಕಂಡವರಿಗೆ ಡಿಕ್ಕಿ ಹೊಡೆದಿದ್ದಾನೆ. ಹುಚ್ಚಾಪಟ್ಟೆ ಕಾರು ಚಲಾಯಿಸಿ ಪಾದಚಾರಿಗಳಿಗೆ ಹಾಗೂ ಅನೇಕ ವಾಹನಗಳಿಗೆ ಡಿಕ್ಕಿ ಹೊಡೆದ ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಚಾಲಕ‌ನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೇ 21ರ ಬೆಳಿಗ್ಗೆ 8:30ರ ಸುಮಾರಿಗೆ ವೆಸ್ಟ್ ಆಫ್ ಕಾರ್ಡ್ ರೋಡ್‌ನ ಎನ್‌ಪಿಎಸ್ ಜಂಕ್ಷನ್ ಬಳಿ KA02MK4206 ಸಂಖ್ಯೆಯ ಮಾರುತಿ ಕಾರಿನಲ್ಲಿ ಬಂದ ಚಾಲಕನಿಂದ ಕೃತ್ಯ ನಡೆದಿದೆ. ಘಟನೆಯಲ್ಲಿ ಪಾದಚಾರಿ ವೆಂಕಟೇಶ್ ಎಂಬವರ ಕೈಕಾಲುಗಳಿಗೆ ಗಾಯವಾಗಿದೆ. ಇದೇ ವೇಳೆ ಬೇರೆ ವಾಹನಗಳಿಗೂ ಡಿಕ್ಕಿ ಹೊಡೆಸಿದ್ದಾನೆ.

ಘಟನೆ ಸಂಬಂಧ ವಿಜಯನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳು ವೆಂಕಟೇಶ್ ಮಗನ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ವಾಹನದ ಜೊತೆ ಚಾಲಕನನ್ನು ವಶಕ್ಕೆ ಪಡೆದು ವಿಜಯನಗರ ಸಂಚಾರಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!

ಕಾರವಾರ: ತಾನು ಪ್ರೀತಿಸುತ್ತಿದ್ದ ಯುವತಿ ತನ್ನ ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿರುವುದಕ್ಕೆ ಕೋಪಗೊಂಡ ಮಾಜಿ ಪ್ರಿಯಕರ ಹಾಲಿ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದು ಹಲ್ಲೆ (Assault Case) ಮಾಡಿರುವ ಘಟನೆ ಕುಮಟಾ ಪಟ್ಟಣ ಮಣಕಿ ಮೈದಾನದಲ್ಲಿ ನಡೆದಿದೆ.

ಸಂತೋಷ ಅಂಬಿಗ ಎಂಬಾತನೆ ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದು, ರಾಜೇಶ ಅಂಬಿಗ ಎಂಬಾತ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ರಾಜೇಶ ಅಂಬಿಗ ಯುವತಿಯೋರ್ವಳನ್ನು ಪ್ರೀತಿ ಮಾಡುತ್ತಿದ್ದು, ಇಬ್ಬರೂ ಚೆನ್ನಾಗಿಯೇ ಇದ್ದರು ಎನ್ನಲಾಗಿದೆ. ಕಳೆದ ‌ಒಂದು ವರ್ಷದಿಂದ ರಾಜೇಶನ ನಡವಳಿಕೆ ಸರಿಯಿಲ್ಲದ ಕಾರಣ ಆಕೆ ರಾಜೇಶ ಪ್ರೀತಿಯನ್ನು ನಿರಾಕರಣೆ ಮಾಡಿದ್ದಳು ಎನ್ನಲಾಗಿದೆ. ನಂತರದಲ್ಲಿ ಇದೀಗ ಹಲ್ಲೆಗೆ ಒಳಗಾದ ಸಂತೋಷ ಅಂಬಿಗ ಈ ಹಿಂದೆ ರಾಜೇಶ ಪ್ರೀತಿ ಮಾಡುತ್ತಿದ್ದ ಯುವತಿಯನ್ನ ಪ್ರೀತಿ ಮಾಡಲು ಆರಂಭಿಸಿ ವಿವಾಹ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.

ಇದೇ ವಿಚಾರಕ್ಕೆ ಸಿಟ್ಟಾದ ರಾಜೇಶ ಅಂಬಿಗ ಬುಧವಾರ ಸಂತೋಷ ಅಂಬಿಗನಿಗೆ ಪೋನ್ ಮಾಡಿ ಮಾತನಾಡಬೇಕೆಂದು ಒಬ್ಬನನ್ನೇ ಮಣಕಿ ಮೈದಾನಕ್ಕೆ ಕರೆಸಿಕೊಂಡಿದ್ದಾನೆ. ಆದರೆ ಸಂತೋಷ ಬರುವಾಗ ತನ್ನ ಜತೆ ಒಂದಿಬ್ಬರು ಸ್ನೇಹಿತರನ್ನ ಕರೆದುಕೊಂಡು ಬಂದಿದ್ದು, ಈ ವೇಳೆ ರಾಜೇಶ, ಸಂತೋಷನ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ‌ ಎಂದು ತಿಳಿದುಬಂದಿದೆ‌. ಘಟನೆಯಿಂದ ಸಂತೋಷ ಅಂಬಿಗ ಗಂಭೀರವಾಗಿ ಗಾಯಗೊಂಡಿದ್ದು, ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case: ನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಹತ್ಯೆ ಆರೋಪಿ ಪತಿಯ ಬಂಧನ

Continue Reading

ಕರ್ನಾಟಕ

Karnataka Weather: ಇಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ಅಂದರೆ ಮೇ 29ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಮೇ 23ರಂದು ಗುರುವಾರ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಕೂಡ ಗುರುವಾರ ಹಲವೆಡೆ ಗುಡುಗು ಸಹಿತ ಗಾಳಿ (40-50 ಕಿ.ಮೀ) ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹಾಗೆಯೇ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-45 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ | Rain News: ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಹಾರಿದ 10ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್, ಇಬ್ಬರಿಗೆ ಗಾಯ

ಇದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ, ಅಂದರೆ ಮೇ 29ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮೇ 23ರಂದು ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ (40-50 ಕಿ.ಮೀ) ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಮೇ 24ರಂದು ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರೆಡು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರೆಡು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಾಪಮಾನದ ಮುನ್ಸೂಚನೆ

ಮೇ 23 ರಿಂದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಲಿಯನ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ 55 ಕಿ.ಮೀ. ವೇಗದಲ್ಲಿ ಗಂಟೆಗೆ 40 ಕಿ.ಮೀ. ನಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನು ಓದಿ | Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಒಂದು ಕಡೆ ಸರಣಿ ಕೊಲೆ, ಇನ್ನೊಂದೆಡೆ ಪೊಲೀಸರ ಬೀದಿ ಸುಲಿಗೆ!

ಚಿಲ್ಲರೆ ಕಾಸಿಗೆ ಕೈಚಾಚುವ ಖದೀಮರು, ಬೀದಿ ಬದಿ ವ್ಯಾಪಾರಿಗಳಿಂದ ಸುಲಿಗೆ ಮಾಡುವವರು, ಅಂಗಡಿಯವರನ್ನು ಬೆದರಿಸಿ ಕಾಸು ಕೀಳುವವರು, ನ್ಯಾಯಕ್ಕಾಗಿ ಠಾಣೆಗೆ ಬಂದಾಗ ಹಣ ತೆಗೆದುಕೊಂಡು ರಾಜಿ ಕಬೂಲಿ ಮಾಡಿ ಕಳಿಸುವವರು, ಸ್ಥಳೀಯ ಪುಢಾರಿಗಳನ್ನು ಅಡ್ಜಸ್ಟ್‌ಮೆಂಟ್‌ ಮಾಡಿಕೊಂಡು ಆಯಕಟ್ಟಿನ ಜಾಗಗಳಲ್ಲಿ ಸದಾ ಇರುವವರು, ಆಡಳಿತಗಾರರ ಮರ್ಜಿಗೆ ಸದಾ ಕಾಯುತ್ತ ಎಂಜಲು ಕಾಸಿಗೆ ಜೊಲ್ಲು ಸುರಿಸುವವರು- ಇಂಥವರಿಂದಾಗಿ ಪೊಲೀಸ್‌ ಇಲಾಖೆಗೆ ಅಪಖ್ಯಾತಿ ಬಂದಿದೆ.

VISTARANEWS.COM


on

Karnataka police
Koo

ರಾಜಧಾನಿಯ ರಾಜಗೋಪಾಲನಗರದ ಪೊಲೀಸ್‌ ಸಿಬ್ಬಂದಿಗಳಿಬ್ಬರನ್ನು ಹಫ್ತಾ ವಸೂಲಿ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಈ ಸಿಬ್ಬಂದಿಯನ್ನು ಸಾರ್ವಜನಿಕರು ಅಟ್ಟಿಸಿಕೊಂಡು ಹೋದ ದೃಶ್ಯವೊಂದು ವೈರಲ್‌ ಆಗಿತ್ತು. ಹೊಯ್ಸಳ ಸಿಬ್ಬಂದಿಯಾಗಿದ್ದ ಇವರು ವಾಹನ ನಿಲ್ಲಿಸಿ ಹೋಟೆಲ್‌ನಿಂದ ಊಟ ಹಾಗೂ ನೀರಿನ ಬಾಟಲ್ ಪಡೆದಿದ್ದರು. ಅದಲ್ಲದೇ ಅಂಗಡಿಗಳಿಂದ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ಆರೋಪದ ಮೇಲೆ ಸಾರ್ವಜನಿಕರು ವಿಡಿಯೋ ಮಾಡಿದ್ದು, ಇದನ್ನು ಕಂಡ ಪೊಲೀಸರು ಹೊಯ್ಸಳ ವಾಹನ ಹತ್ತಿ ವೇಗವಾಗಿ ಕಳ್ಳರಂತೆ ಆ ಸ್ಥಳದಿಂದ ಎಸ್ಕೇಪ್ ಆಗಿದ್ದರು. ಹಿಂಬದಿಯಿಂದ ಜನರು ʼಪೊಲೀಸ್ ಕಳ್ಳ ಪೊಲೀಸ್ ಕಳ್ಳʼ ಎಂದು ಕೂಗುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದಲ್ಲದೆ, ಪೊಲೀಸ್‌ ಇಲಾಖೆಗೆ (Karnataka Police) ಮುಜುಗರಕ್ಕೆ ಕಾರಣವಾಗಿತ್ತು. ಸದ್ಯ ಇಬ್ಬರು ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಿರುವ ಉತ್ತರ ವಿಭಾಗ ಡಿಸಿಪಿ, ಭ್ರಷ್ಟ ಸಿಬ್ಬಂದಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇಲಾಖಾ ತನಿಖೆ ನಡೆಯುತ್ತಿದೆ.

ಪೊಲೀಸ್‌ ಇಲಾಖೆಯಲ್ಲಿ ಭ್ರಷ್ಟಾಚಾರ ಇದೆ ಎಂಬುದು ಹೊಸ ವಿಚಾರವೇನಲ್ಲ. ಇದು ಪೊಲೀಸ್‌ ಪರೀಕ್ಷೆಯಿಂದ ಹಿಡಿದು, ದೊಡ್ಡ ಅಧಿಕಾರಿಗಳ ವರ್ಗಾವಣೆಯವರೆಗೆ ವ್ಯಾಪಿಸಿದೆ. ಕಾನ್‌ಸ್ಟೇಬಲ್‌ಗಳಿಂದ ಹಿಡಿದು ಐಪಿಎಸ್‌ ಮಟ್ಟದ ಅಧಿಕಾರಿಗಳವರೆಗೂ ಇದರ ಬೇರು ಕೊಂಬೆಗಳು ವ್ಯಾಪಿಸಿವೆ. ಪೊಲೀಸ್‌ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ವ್ಯಾಪಕ ಅವ್ಯವಹಾರ ನಡೆದುದರ ಬಗ್ಗೆ ನಾವು ಓದಿಯೇ ಇದ್ದೇವೆ. ಇನ್ನು ಹೀಗೆ ಪರೀಕ್ಷೆ ಬರೆಯುವಾಗಲೇ ಅವ್ಯವಹಾರ ನಡೆಸಿದವರು ಪೋಸ್ಟಿಂಗ್‌ ಆದ ಬಳಿಕ ಭ್ರಷ್ಟಾಚಾರ ನಡೆಸದೇ ಬಿಟ್ಟಾರೆಯೇ? ಅನುಕೂಲಕರ ಸ್ಥಳಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುವುದಕ್ಕಾಗಿ ಐಪಿಎಸ್‌ ಅಧಿಕಾರಿಗಳಿಂದ ಹಿಡಿದು ಕಾನ್‌ಸ್ಟೇಬಲ್‌ಗಳವರೆಗೆ ಶಾಸಕಾಂಗದ ಆಯಕಟ್ಟಿನ ಸ್ಥಾನಗಳಲ್ಲಿರುವವರಿಗೆ ದೊಡ್ಡ ಮೊತ್ತದ ಕಾಣಿಕೆ ಸಲ್ಲಿಸುತ್ತಾರೆ ಎಂಬುದು ಬರಿಯ ಅರೋಪ ಇರಲಾರದು. ಹೀಗೆ ಹಣ ಚೆಲ್ಲಿದವರು ಆ ಹಣಕಾಸನ್ನು ವಸೂಲಿ ಮಾಡದೇ ಬಿಟ್ಟಾರೆಯೇ? ಹೀಗೆ ವಸೂಲಿಗೆ ಇಳಿಯುವವರಿಗೆ ಸಿಗುವವರೇ ಜನಸಾಮಾನ್ಯರು. ಪೊಲೀಸರ ಭಯದಿಂದಲೇ ಸುಲಿಗೆಗೊಳಗಾಗುವವರು ತುಟಿ ಪಿಟಕ್ಕೆನ್ನದೆ ಸುಮ್ಮನಿರುವುದು ಸಾಮಾನ್ಯ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

ಹೀಗೆಂದು ಪೊಲೀಸ್‌ ಇಲಾಖೆಯಲ್ಲಿರುವ ಎಲ್ಲರೂ ಹೀಗೆ ಎಂದು ಅರ್ಥೈಸಬೇಕಿಲ್ಲ. ಶಿಸ್ತು, ಗಾಂಭಿರ್ಯ, ಪ್ರಾಮಾಣಿಕತೆ, ದಕ್ಷತೆಗೆ ಹೆಸರಾದವರು ಸಾಕಷ್ಟು ಮಂದಿ ಇದ್ದಾರೆ. ಆದರೆ ಚಿಲ್ಲರೆ ಕಾಸಿಗೆ ಕೈಚಾಚುವ ಖದೀಮರು, ಬೀದಿ ಬದಿ ವ್ಯಾಪಾರಿಗಳಿಂದ ಸುಲಿಗೆ ಮಾಡುವವರು, ಅಂಗಡಿಯವರನ್ನು ಬೆದರಿಸಿ ಕಾಸು ಕೀಳುವವರು, ನ್ಯಾಯಕ್ಕಾಗಿ ಠಾಣೆಗೆ ಬಂದಾಗ ಹಣ ತೆಗೆದುಕೊಂಡು ರಾಜಿ ಕಬೂಲಿ ಮಾಡಿ ಕಳಿಸುವವರು, ಸ್ಥಳೀಯ ಪುಢಾರಿಗಳನ್ನು ಅಡ್ಜಸ್ಟ್‌ಮೆಂಟ್‌ ಮಾಡಿಕೊಂಡು ಆಯಕಟ್ಟಿನ ಜಾಗಗಳಲ್ಲಿ ಸದಾ ಇರುವವರು, ಆಡಳಿತಗಾರರ ಮರ್ಜಿಗೆ ಸದಾ ಕಾಯುತ್ತ ಎಂಜಲು ಕಾಸಿಗೆ ಜೊಲ್ಲು ಸುರಿಸುವವರು- ಇಂಥವರಿಂದಾಗಿ ಪೊಲೀಸ್‌ ಇಲಾಖೆಗೆ ಅಪಖ್ಯಾತಿ ಬಂದಿದೆ. ಸದ್ಯ ಹೀಗೆ ಚಿಲ್ಲರೆ ಕಾಸಿಗಾಗಿ ಆಸೆಪಟ್ಟ ಇಬ್ಬರು ಸಿಕ್ಕಿಬಿದ್ದಿರಬಹುದು. ಆದರೆ ಇದರಿಂದ ಇಲಾಖೆಯ ಬೇರುಬೇರುಗಳಲ್ಲಿ ವ್ಯಾಪಿಸಿರುವ ಭ್ರಷ್ಟಾಚಾರದ ಮೇಲೆ ಏನೂ ಪರಿಣಾಮವಾಗದು.

ಇದೆಲ್ಲ ಸರಿಹೋಗಲು ಪೊಲೀಸ್‌ ಇಲಾಖೆಯ ಆಮೂಲಾಗ್ರ ಸುಧಾರಣೆ ಅಗತ್ಯ. ಮೇಲಿನಿಂದ ಸುಧಾರಣೆಯಾಗದೇ ಕೆಳಗಿನ ಹಂತದಲ್ಲಿ ಏನೂ ಮಾಡಲಾಗದು. ಈ ಸುಧಾರಣೆಗೆ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳೂ, ಅದರ ಮೇಲೆ ಹಿಡಿತ ಸಾಧಿಸಿರುವ ರಾಜಕಾರಣಿಗಳೂ ಮನಸ್ಸು ಮಾಡಬೇಕು. ಒಂದೆಡೆ ಸರಣಿ ಕೊಲೆಗಳು ನಡೆಯುತ್ತಿವೆ, ಇನ್ನೊಂದೆಡೆ ಪೊಲೀಸರು ಬೀದಿ‌ ಸುಲಿಗೆಯಲ್ಲಿ ತೊಡಗಿದ್ದಾರೆ. ಇದು ರಾಜ್ಯ ಪೊಲೀಸ್ ಇಲಾಖೆಯ ಘನತೆಯನ್ನು ಕುಗ್ಗಿಸಿದೆ.

Continue Reading

ಕರ್ನಾಟಕ

Harish Poonja: ವಿಚಾರಣೆ ಮುಗಿಸಿ ಠಾಣೆಯಿಂದ ಹೊರಬಂದ ಶಾಸಕ ಹರೀಶ್‌ ಪೂಂಜಾ

Harish Poonja: ಶಾಸಕ ಹರೀಶ್ ಪೂಂಜಾ ವಿಚಾರಣೆ ನಡೆಸಲಾಗಿದೆ. ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರನ್ನು ವಿಚಾರಣೆಗೆ ಕಳುಹಿಸಿಕೊಡುವುದಾಗಿ ವಿನಂತಿಸಿದ್ದರು. ಅದರಂತೆ ಶಾಸಕರನ್ನು ವಿಚಾರಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Harish Poonja
Koo

ಮಂಗಳೂರು: ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಬುಧವಾರ ರಾತ್ರಿ ವಿಚಾರಣೆಗೆ ಹಾಜರಾದ ಬಳಿಕ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಬೆಳ್ತಂಗಡಿ ಪೊಲೀಸ್‌ ಠಾಣೆಯಿಂದ ಹೊರಬಂದಿದ್ದಾರೆ. ಪೊಲೀಸರು ಬುಧವಾರ ಮಧ್ಯಾಹ್ನ ಶಾಸಕರ ನಿವಾಸಕ್ಕೆ ತೆರಳಿ ಬಂಧಿಸಲು ಮುಂದಾಗಿದ್ದರು. ಆದರೆ, ಬಿಜೆಪಿ ಕಾರ್ಯಕರ್ತರು, ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ಅಲ್ಲಿಂದ ತೆರಳಿದ್ದರು. ಹೀಗಾಗಿ ವಿಚಾರಣೆ ಮುಗಿಸಿ ಠಾಣೆಯಿಂದ ಶಾಸಕ ಹರೀಶ್ ಪೂಂಜಾ‌ ವಾಪಸ್‌ ಆಗಿದ್ದಾರೆ.

ಪೂಂಜಾಗೆ ಶಾಸಕ ಸುನೀಲ್ ಕುಮಾರ್, ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ ಮತ್ತಿತರರ ಬಿಜೆಪಿ ನಾಯಕರು ಸಾಥ್ ನೀಡಿದರು. ಈ ವೇಳೆ ಶಾಸಕ ಸುನೀಲ್‌ಕುಮಾರ್ ಮಾತನಾಡಿ, ಕಾನೂನುಬಧ್ದವಾಗಿ ಹರೀಶ್ ಪೂಂಜಾ ವಿಚಾರಣೆಗೆ ಹಾಜಾರಾಗಿದ್ದಾರೆ. ಇದೇ ರೀತಿ ಪೊಲೀಸರೂ ಬಂದು ನೋಟಿಸ್ ಕೊಡಬಹುದಿತ್ತು. ನೂರು ಇನ್ನೂರು ಪೊಲೀಸರ ಜತೆ ಬರುವ ಅಗತ್ಯ ಇರಲಿಲ್ಲ. ಈ ವಿಚಾರವನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ. ಮುಂದೆ ಅಧಿವೇಶನದಲ್ಲಿ ಇದನ್ನು ಚರ್ಚೆ ಮಾಡುತ್ತೇವೆ. ಈ ವಿಚಾರವಾಗಿ ಅಧಿವೇಶವನ್ನು ಮಾಡಲು ಬಿಡವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಶಾಸಕ ಹರೀಶ್ ಪೂಂಜಾರನ್ನು ಅರೆಸ್ಟ್‌ ಮಾಡದೇ ವಾಪಸ್‌ ಹೋದ ಪೊಲೀಸರು!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಪ್ರೆಸ್ ನೋಟ್

ಮಂಗಳೂರು: ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಪ್ರೆಸ್ ನೋಟ್ ಬಿಡುಗಡೆ ಮಾಡಲಾಗಿದೆ. ಶಾಸಕ ಹರೀಶ್ ಪೂಂಜಾ ವಿಚಾರಣೆ ನಡೆಸಲಾಗಿದೆ. ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರನ್ನು ವಿಚಾರಣೆಗೆ ಕಳುಹಿಸಿಕೊಡುವುದಾಗಿ ವಿನಂತಿಸಿದ್ದರು. ಅದರಂತೆ ಸಂಸದರು ಪೊಲೀಸರ ಜೊತೆ ಆರೋಪಿಯನ್ನು ಠಾಣೆಗೆ ಕಳುಹಿಸಿಕೊಟ್ಟಿದ್ದಾರೆ. 2 ಪ್ರಕರಣದ ಆರೋಪಿ ಶಾಸಕ ಹರೀಶ್ ಪೂಂಜಾ ವಿಚಾರಣೆ ನಡೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading
Advertisement
road rage bangalore
ಕ್ರೈಂ34 seconds ago

Road Rage: ರಾಜಧಾನಿಯಲ್ಲಿ ಹೆಚ್ಚುತ್ತಿದೆ ರೋಡ್‌ ರೇಜ್‌, ಮತ್ತೊಂದು ಹಲ್ಲೆ

Viral Video
ವೈರಲ್ ನ್ಯೂಸ್7 mins ago

Viral Video: ಛೇ…ಇವರೆಂಥಾ ರಾಕ್ಷಸರು! ಕೈ ಕಾಲು ಕಟ್ಟಿ ಚೆನ್ನಾಗಿ ಥಳಿಸಿ ಯುವಕನ ಹತ್ಯೆ-ವಿಡಿಯೋ ನೋಡಿ

Indian 2
ಸಿನಿಮಾ20 mins ago

Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌

dhavala dharini column buddha ಧವಳ ಧಾರಿಣಿ
ಅಂಕಣ43 mins ago

ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

Karnataka Weather
ಕರ್ನಾಟಕ1 hour ago

Karnataka Weather: ಇಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Brain Tumour In Kids
ಆರೋಗ್ಯ1 hour ago

Brain Tumour In Kids: ಮಕ್ಕಳ ಜೀವ ಹಿಂಡುವ ಮೆದುಳಿನ ಟ್ಯೂಮರ್‌ನ ಲಕ್ಷಣಗಳಿವು

Buddha Purnima
ಧಾರ್ಮಿಕ2 hours ago

Buddha Purnima: ಇಂದು ಬುದ್ಧ ಪೂರ್ಣಿಮೆ; ಬುದ್ಧನ ಬೋಧನೆಯನ್ನು ಸ್ಮರಿಸಿಕೊಳ್ಳುವ ದಿನ

Health Benefits Of Okra
ಆರೋಗ್ಯ2 hours ago

Health Benefits Of Okra: ಬೆಂಡೆಕಾಯಿ ತಿನ್ನುತ್ತೀರಿ ನಿಜ; ಅದರಿಂದಾಗುವ ಪ್ರಯೋಜನಗಳೇನು ಗೊತ್ತಿದೆಯಾ?

dina bhavishya read your daily horoscope predictions for May 23 2024
ಭವಿಷ್ಯ3 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

IPL 2024
ಕ್ರೀಡೆ8 hours ago

IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ3 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌