Dina Bhavishya : ಈ ರಾಶಿಯವರು ಇಂದು ಹೂಡಿಕೆ ಮಾಡಿ ಅಧಿಕ ಲಾಭ ಪಡೆಯಿರಿ! - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರು ಇಂದು ಹೂಡಿಕೆ ಮಾಡಿ ಅಧಿಕ ಲಾಭ ಪಡೆಯಿರಿ!

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲದ ತದಿಗೆ/ಚೌತಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ಷ್ಮಿ ದೇವಿಯ ವಾರ ಎಂದೇ ಕರೆಯಲ್ಪಡುವ ಶುಕ್ರವಾರದಂದು ಸಹ ಚಂದ್ರನು ಕನ್ಯಾರಾಶಿಯಲ್ಲೇ ನೆಲೆಸಿದ್ದು, ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭಾ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮಿಥುನ ರಾಶಿಯವರು ಇಂದು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಮೀನ ರಾಶಿಯವರಿಗೆ ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ, ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (21-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ದಕ್ಷಿಣಾಯನ,
ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ

ತಿಥಿ: ತದಿಗೆ 06:57 ವಾರ: ಶುಕ್ರವಾರ
ನಕ್ಷತ್ರ: ಮಘಾ 13:56 ಯೋಗ: ವ್ಯತಿಪಾತ 12:22
ಕರಣ: ಗರಜ 06:57 ದಿನ ವಿಶೇಷ: ಆಡಿ ಶುಕ್ರವಾರ
ಅಮೃತ ಕಾಲ: ಬೆಳಗ್ಗೆ 11:16ರಿಂದ ಮಧ್ಯಾಹ್ನ 01:04ರ ವರೆಗೆ

ಸೂರ್ಯೋದಯ : 06:03 ಸೂರ್ಯಾಸ್ತ : 06:49

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ, ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗೆ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಮಾನ್ಯ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು. ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಪರಿಪೂರ್ಣ ಆರೋಗ್ಯ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೊಡಿಕೆ ಕುರಿತಾಗಿ ಆಲೋಚನೆ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಲಾಭ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸುವುದು. ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮನೆಯಲ್ಲಿ ಶಾಂತಿ ನೆಲೆಸಲು ಏನು ಮಾಡಬೇಕು? ಈ ವಿಡಿಯೋ ನೋಡಿ.
Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣ, ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ : Adhika Masa 2023 : ಅಧಿಕಮಾಸದಲ್ಲಿ ಈ ಕೆಲಸಗಳನ್ನು ಮಾಡಲೇಬೇಡಿ!

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

Viral Video: ದೇಶದಲ್ಲಿ ಸಾಮರಸ್ಯ ಕದಡುವ ಘಟನೆ ಆಗಾಗ ನಡೆಯುತ್ತಲೇ ಇರುತ್ತವೆ. ಅದರಲ್ಲೂ ಈ ಧಾರ್ಮಿಕ ಹಬ್ಬಗಳು ಬಂದಾಗ ಏನಾದರೊಂದು ಘಟನೆ ಮಾಡಿ ನೆಮ್ಮದಿ ಹಾಳು ಮಾಡುತ್ತಿರುತ್ತಾರೆ. ಬಕ್ರೀದ್ ಹಬ್ಬದ ಹಿನ್ನೆಲೆ ಮಟನ್ ಅಂಗಡಿ ಮಾಲೀಕನೊಬ್ಬ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಕೆಲಸ ಮಾಡಿದ್ದಾನೆ. ಬಿಳಿ ಬಣ್ಣದ ಮೇಕೆಯ ಮೈ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆದು ಮಾಂಸದ ಅಂಗಡಿಯ ಹೊರಗೆ ಆ ಮೇಕೆಯನ್ನು ಕಟ್ಟಿಹಾಕಿದ್ದಾನೆ. ಇದು ಹಿಂದೂಗಳ ಕಣ್ಣಿಗೆ ಬಿದ್ದು ಕೋಲಾಹಲಕ್ಕೆ ಕಾರಣವಾಗಿದೆ ಇದಕ್ಕೆ ಸಂಬಂಧಿಸಿದ ವಿಡಿಯೊ ಈ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಮುಂಬೈ : ಮುಸ್ಲಿಮರಿಗೆ ಬಕ್ರೀದ್ ಹಬ್ಬ ತುಂಬಾ ವಿಶೇಷವಾದದ್ದು. ಹಾಗಾಗಿ ಈ ದಿನ ಅವರ ಸಂಪ್ರದಾಯದಂತೆ ಮೇಕೆಗಳನ್ನು ಬಲಿಕೊಡಲಾಗುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಗಳೂ ಕೂಡ ಇತರರ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಯಾವುದೇ ದುರ್ಘಟನೆಗಳು ನಡೆಯಬಾರದೆಂದು ಮುಸ್ಲಿಂರಿಗೆ ಹಾಗೂ ಆಡಳಿತ ಅಧಿಕಾರಿಗೂ ಸೂಚಿಸಿದೆ. ಆದರೂ ಇದರ ನಡುವೆ ಮಟನ್ ಅಂಗಡಿ ಮಾಲೀಕನೊಬ್ಬ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಹ ಕೆಲಸ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೊ ವೈರಲ್
(Viral Video )ಆಗಿದೆ.

ಮುಂಬೈನ ಬೆಲಾಪುರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ನಲ್ಲಿರುವ ಗುಡ್ ಲಕ್ ಮಟನ್ ಅಂಗಡಿ ಮಾಲೀಕ ಮಹಮ್ಮದ್ ಶಾಫಿ ಎಂಬುವವನು ಬಲಿದಾನದ ಬಿಳಿ ಬಣ್ಣದ ಮೇಕೆಯ ಮೈ ಮೇಲೆ ಹಳದಿ ಬಣ್ಣದಲ್ಲಿ ರಾಮ್ ಎಂದು ಬರೆದು ಮಾಂಸದ ಅಂಗಡಿಯ ಹೊರಗೆ ಆ ಮೇಕೆಯನ್ನು ಕಟ್ಟಿಹಾಕಿದ್ದ. ಇದು ಹಿಂದೂಗಳ ಕಣ್ಣಿಗೆ ಬಿದ್ದು ಕೋಲಾಹಲಕ್ಕೆ ಕಾರಣವಾಗಿದೆ. ಜೂನ್ 15ರಂದು ಈ ಘಟನೆ ನಡೆದಿದ್ದು, ರಾಮ ಎನ್ನುವುದು ಹಿಂದೂಗಳ ದೇವರಾದ ಕಾರಣ ಹಿಂದೂ ಸಂಘಟನೆಯ ಕೆಲವು ಜನರು ಅಲ್ಲಿಗೆ ಬಂದು ಗಲಾಟೆ ಮಾಡಿದ್ದಾರೆ. ಹಾಗೇ ಈ ದೃಶ್ಯವನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೊದಲ್ಲಿ ಹಿಂದೂಗಳು ಅಂಗಡಿಗೆ ನುಗ್ಗಿ ಮಾಲೀಕನ ಜೊತೆ ಗಲಾಟೆ ನಡೆಸಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹಾಗೂ ಆತನ ಅಂಗಡಿಯನ್ನು ಮುಚ್ಚಲಾಗಿದೆ. ಸೋಶಿಯಲ್ ಮೀಡಿಯಾದ ಬಳಕೆದಾರರು, ಹಿಂದೂ ಸಂಘಟನೆಗಳು ಸೇರಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:  ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

ಹಿಂದುತ್ವ ನೈಟ್ ಎಂಬ ಬಳಕೆದಾರರು ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ನಲ್ಲಿ ತಮ್ಮ ಕೋಪವನ್ನು ಹೊರಹಾಕಿದ್ದಾರೆ. “ಇದು ಅತಿರೇಕವಾಗಿದೆ. ಗುಡ್ ಲಕ್ ಮಟನ್ ಸ್ಟೋರ್ ಮಾರಾಟ ಮಾಡುವ ಮೇಕೆಯ ಮೇಲೆ ರಾಮ್ ಹೆಸರನ್ನು ಬರೆಯಲಾಗಿದೆ. ಬಕ್ರೀದ್ ದಿನದಂದು ಈ ಮೇಕೆಯನ್ನು ಬಹಿರಂಗವಾಗಿ ಕೊಲ್ಲುವುದರ ಮೂಲಕ ಹಿಂದೂ ಸಮುದಾಯವನ್ನು ಉದ್ದೇಶಪೂರ್ವಕವಾಗಿ ಪ್ರಚೋದಿಸುತ್ತಿದ್ದಾರೆ. ಈ ಮೂಲಕ ಅವರು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಕ್ಕಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಲ್ಲಿ ವಿನಂತಿಸುತ್ತೇವೆ” ಎಂದು ಪೋಸ್ಟ್ ಮಾಡಿದ್ದಾರೆ.

Continue Reading

Latest

Yogi Adithyanath: ಎರಡು ವರ್ಷಗಳ ಬಳಿಕ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

Yogi Adityanath: ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರು ಉತ್ತರಾಖಂಡದ ಹೃಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯೋಗಿ ಆದಿತ್ಯನಾಥ್ ಸುಮಾರು 20 ನಿಮಿಷಗಳ ಕಾಲ ತಮ್ಮ ತಾಯಿಯ ಜೊತೆ ಸಮಯ ಕಳೆದಿದ್ದಾರೆ.

VISTARANEWS.COM


on

Yogi Adithyanath
Koo

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿಯವರು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಉತ್ತರಾಖಂಡದ ಹೃಷಿಕೇಶದಲ್ಲಿರುವ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಾಗಾಗಿ ಮುಖ್ಯಮಂತ್ರಿಗಳು ಭಾನುವಾರದಂದು ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ತಾಯಿಯ ಯೋಗ ಕ್ಷೇಮ ವಿಚಾರಿಸಿದ್ದಾರೆ. ಅವರು ಸುಮಾರು 20 ನಿಮಿಷಗಳ ಕಾಲ ತಮ್ಮ ತಾಯಿಯ ಜೊತೆ ಸಮಯ ಕಳೆದಿದ್ದಾರೆ.

ಈ ವೇಳೆ ಮುಖ್ಯಮಂತ್ರಿಗಳ ಜೊತೆ ಉತ್ತರಾಖಂಡದ ಆರೋಗ್ಯ ಸಚಿವ ಧನ್ ಸಿಂಗ್ ರಾವತ್ ಮತ್ತು ಹರಿದ್ವಾರ ಸಂಸದ ತ್ರಿವೇಂದ್ರ ಸಿಂಗ್ ಜೊತೆಗಿದ್ದರು ಎನ್ನಲಾಗಿದೆ. ಹಾಗೇ ಶನಿವಾರದಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕೂಡ ಮುಖ್ಯಮಂತ್ರಿ ಯೋಗಿಯವರ ತಾಯಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದು ಮುಖ್ಯಮಂತ್ರಿಯವರು ಎರಡು ವರ್ಷಗಳ ಬಳಿಕ ತಮ್ಮ ತಾಯಿಯನ್ನು ಮೊದಲ ಬಾರಿಗೆ ಭೇಟಿ ಮಾಡುತ್ತಿರುವುದಾಗಿದೆ. ಅವರ ತಾಯಿ ಸಾವಿತ್ರಿ ದೇವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿಂದೆ ಅವರು ಕಣ್ಣಿನ ಸೋಂಕಿಗೂ ಕೂಡ ಒಳಗಾಗಿದ್ದರು ಎಂಬುದಾಗಿ ತಿಳಿದುಬಂದಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂಲತಃ ಉತ್ತರಾಖಂಡದವರಾಗಿದ್ದು, ಅವರ ಕುಟುಂಬದವರು ಪೌರಿ ಗಢವಾಲ್ ನ ಪಚೌರ್ ಗ್ರಾಮದಲ್ಲಿ ನೆಲೆಸಿದ್ದಾರೆ. ಮುಖ್ಯಮಂತ್ರಿಗಳು ಈ ಹಿಂದೆ 2022ರಲ್ಲಿ ತಮ್ಮ ಕುಟುಂಬದವರಿರುವ ಗ್ರಾಮಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದಿದ್ದರು.

ಇದನ್ನೂ ಓದಿ: Head Shave: ಪೋಷಕರು ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ದಲಿತ ಹುಡುಗನ ತಲೆ ಬೋಳಿಸಿದರು!

ಮುಖ್ಯಮಂತ್ರಿ ಯೋಗಿ ಅವರು ತಮ್ಮ ತಾಯಿಯನ್ನು ಭೇಟಿ ಬಳಿಕ ರುದ್ರಪ್ರಯಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಹಾಗೇ ಗಾಯಾಳುಗಳು ಹಾಗೂ ವೈದ್ಯರ ಜೊತೆ ಮಾತುಕತೆ ನಡೆಸಿ ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ರಾಜ್ಯ ಸರ್ಕಾರದ ಕಡೆಯಿಂದ ಭರವಸೆ ನೀಡಿದ್ದಾರೆ. ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಶನಿವಾರ 26 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟೆಂಪೊವೊಂದು ಆಳವಾದ ಕಣಿವೆಗೆ ಬಿದ್ದ ಪರಿಣಾಮ ಕನಿಷ್ಠ 14 ಮಂದಿ ಸಾವನಪ್ಪಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉತ್ತರಾಖಂಡ ಸರ್ಕಾರ ಆದೇಶಿಸಿತ್ತು.

Continue Reading

Latest

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Bakrid ಬಕ್ರೀದ್ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಮುಸ್ಲಿಂರು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಕೇಳಿದ್ರೆ ಎಲ್ಲರೂ ಶಾಕ್ ಆಗುತ್ತಾರೆ. ಇನ್ನು ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ.ಅದುವೇ ಬ್ರಾಡ್ ಹೆಸರಿನ ಮೇಕೆ.

VISTARANEWS.COM


on

Bakrid
Koo

ಬೆಂಗಳೂರು : ಬಕ್ರೀದ್‌ ಮುಸ್ಲಿಂ ಭಾಂದವರು ಆಚರಿಸುವ ಹಬ್ಬ. ಬಕ್ರೀದ್‌ (Bakrid) ಹಬ್ಬದಂದು ಮೇಕೆಗಳನ್ನು ಬಲಿಕೊಡುವುದು ಅವರ ಸಂಪ್ರದಾಯ. ಇನ್ನು ವಿಶೇಷವೆಂದರೆ ಈ ಬಕ್ರೀದ್‌ ಹಬ್ಬದಂದು ಬಲಿದಾನದ ಫಲ ಸಿಗಬೇಕೆಂದರೆ ಮೇಕೆಯನ್ನು ಅವರ ಸ್ವಂತ ಹಣದಿಂದ ಖರೀದಿಸಬೇಕಂತೆ. ಈ ರೀತಿ ಮಾಡುವುದರಿಂದ ಅವರಿಗೆ ಬಲಿದಾನದ ಸಂಪೂರ್ಣ ಫಲ ಸಿಗುತ್ತದೆ ಎನ್ನುವುದು ಅವರ ನಂಬಿಕೆ. ಹಾಗಾಗಿ ಮುಸ್ಲಿಂರು ಮೇಕೆಗಳನ್ನು ಕಷ್ಟಪಟ್ಟು ದುಡಿದ ಹಣದಿಂದ ಖರೀದಿಸುತ್ತಾರಂತೆ. ಆದರೆ ಬಕ್ರೀದ್ ದಿನ ಮೇಕೆಗಳ ಬೆಲೆ ಮಾತ್ರ ಗಗನಕ್ಕೇರಿರುತ್ತದೆ.

ಇನ್ನು ಈ ಸಂದರ್ಭದಲ್ಲಿ ಲಕ್ಷಾಂತರ ಬೆಲೆಗೆ ಮೇಕೆಗಳು ಮಾರಾಟವಾಗುತ್ತವೆ. ಒಂದೊಂದು ಮೇಕೆಗೂ ಒಂದೊಂದು ಬೆಲೆ ಇರುತ್ತದೆ. ಆದರೆ ಈ ಮೇಕೆಗಳಲ್ಲಿ ಒಂದು ಬಹಳ ದುಬಾರಿ ಮೇಕೆ ಇದೆ. ಅದರ ಬಗ್ಗೆ ತಿಳಿದುಕೊಳ್ಳಿ.
ಬ್ರಾಡ್ ಎಂಬ ಹೆಸರಿನ ಮೇಕೆ ವಿಶ್ವದಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತದೆ. ಹಾಗಾಗಿ ಅದರ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.. ವರ್ಲ್ಡ್ ರೆಕಾರ್ಡ್ಸ್ ನ ಪ್ರಕಾರ, ಈ ಮೇಕೆಯ ಬೆಲೆ 82,600 ಯುಎಸ್ ಡಿ ಆಗಿದೆ. ಅಂದರೆ ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಇದರ ಬೆಲೆ ಅಂದಾಜು 69 ಲಕ್ಷ ರೂ.ಗಳಾಗಿವೆ. ಇಂತಹ ಅತ್ಯಂತ ದುಬಾರಿ ಬೆಲೆಯ ಮೇಲೆ ಬ್ರಿಟನ್ ನಲ್ಲಿ ಹೆಚ್ಚು ಮಾರಾಟವಾಗುತ್ತದೆಯಂತೆ. ಇದಕ್ಕೆ ಇತ್ತೀಚಿನ ದಿನಗಳಲ್ಲಿ ಈ ಬೆಲೆ ನಿಗದಿಯಾಗಿಲ್ಲ ಬಹಳ ಹಿಂದೆ ಅಂದರೆ 1985ರಲ್ಲಿಯೇ ಈ ಮೇಕೆಗೆ ದುಬಾರಿ ಬೆಲೆ ನೀಡಲಾಗುತ್ತಿತ್ತಂತೆ.

ಅಂಗೋರಾ ಮೇಕೆಯ ವಿಶೇಷತೆಗಳು:

ಬಿಳಿ ಬಣ್ಣದ ಕೂದಲನ್ನು ಹೊಂದಿರುವ ಈ ಅಂಗೋರಾ ಮೇಕೆಗಳು ವಿಶ್ವದ ಅತ್ಯುತ್ತಮ ಮೇಕೆ ತಳಿಗಳಲ್ಲಿ ಒಂದಾಗಿದೆ. ಈ ಮೇಕೆಗಳನ್ನು ಉಣ್ಣೆಗಳಿಗಾಗಿ ಹೆಚ್ಚಿನ ಜನರು ಸಾಕುತ್ತಾರೆ. ಇದರಿಂದ ದೊರೆಯುವ ಉಣ್ಣೆಗಳಿಗೆ ಮೊಹೇರ್ ಎಂದು ಕರೆಯುತ್ತಾರೆ. ಇದರ ಉಣ್ಣೆ ಉತ್ತಮ ಗುಣಮಟ್ಟದಾಗಿರುತ್ತದೆ. ಹಾಗಾಗಿ ಈ ಮೇಕೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಬಕ್ರೀದ್ ಸಮಯದಲ್ಲಿ ಅನೇಕ ಜನರು ಹಣಕ್ಕಾಗಿ ಅವುಗಳನ್ನು ಮಾರಾಟ ಮಾಡುತ್ತಾರೆ.
ಮೇಕೆಗಳು ಅವುಗಳ ತಳಿಗಳ ಆಧಾರದ ಮೇಲೆ ವಿಶೇಷತೆಯನ್ನು ಹೊಂದಿರುತ್ತವೆ. ಮೇಕೆಗಳಲ್ಲಿ ಕೆಲವು ಕಪ್ಪು, ಬಿಳಿ ಬಣ್ಣದಲ್ಲಿದ್ದರೆ ಕೆಲವು ತಳಿಗಳ ಮೇಕೆಗಳ ಮೈಮೇಲೆ ವಿಶಿಷ್ಟವಾದ ಗುರುತುಗಳಿರುತ್ತದೆ. ಹಾಗಾಗಿ ಅವುಗಳನ್ನು ವಿಶೇಷವಾದವು ಎನ್ನಲಾಗುತ್ತದೆ.

ಇದನ್ನೂ ಓದಿ:ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

ಇದೇ ರೀತಿ 2023ರಲ್ಲಿ ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಮೇಕೆಯೊಂದು ಬಹಳ ಪ್ರಸಿದ್ಧವಾಗಿತ್ತು. ಅದು ಮೈಮೇಲೆ ವಿಶಿಷ್ಟ ಗುರುತುಗಳನ್ನು ಹೊಂದಿರುವ ಕಾರಣ ಅದರ ಮಾಲೀಕ 1 ಕೋಟಿ 12 ಲಕ್ಷದ 786 ರೂ. ಎಂಬುದಾಗಿ ತಿಳಿಸಿದ್ದ. ಈ ಮೇಕೆಯ ಹೆಸರು ಶೇರು. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಮೇಕೆ ಮಾಲೀಕನೊಬ್ಬನ ಬಳಿ ಇದು ಇತ್ತು. ಇದರ ದೇಹದ ಮೇಲೆ ಇದ್ದ ಗುರುತುಗಳನ್ನು ಹತ್ತಿರದಿಂದ ನೋಡಿದರೆ ಅದು “ ಅಲ್ಲಾ” ಮತ್ತು “ಮೊಹಮ್ಮದ್” ಎಂದು ಉರ್ದುವಿನಲ್ಲಿ ಬರೆದಿರುವುದನ್ನು ಕಾಣಬಹುದು. ಆದರೆ ಈ ಮೇಕೆ ಮಾರಾಟವಾಗುವ ಮುನ್ನವೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Continue Reading

Latest

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actress Nayanathara: ಬಾಹುಬಲಿ…. ಈ ಸಿನಿಮಾದ ಹೆಸರು ಕೇಳುತ್ತಲೇ ಮೈ ನವಿರೇಳುತ್ತದೆ. ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಸಿನಿಮಾವಿದು. ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಈ ಸೂಪರ್ ಹಿಟ್ ಚಿತ್ರದ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ನಟಿ ನಯನತಾರಾ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Actress Nayanathara
Koo

ಬೆಂಗಳೂರು: ಕಾಲಿವುಡ್ ನಟಿ ನಯನತಾರಾ(Actress Nayanathara) ಹಾಗೂ ನಿರ್ಮಾಪಕ ವಿಘ್ನೇಶ್ ದಂಪತಿ ಉಯಿರ್ ಮತ್ತು ಉಲಗ್ ಎಂಬ ಅವಳಿ ಮಕ್ಕಳನ್ನು ಹೊಂದಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಈ ದಂಪತಿ ಇತ್ತೀಚಿಗೆ ತಮ್ಮ ಮುದ್ದಿನ ಮಕ್ಕಳೊಂದಿಗೆ ಖುಷಿ ಖುಷಿಯಾಗಿ ಸಮಯವನ್ನು ಕಳೆಯುತ್ತಿದ್ದಾರೆ. ಈ ನಡುವೆ ಈ ದಂಪತಿ ಸೂಪರ್ ಹಿಟ್ ಸಿನಿಮಾವೊಂದರ ದೃಶ್ಯವನ್ನು ತಮ್ಮ ಮಕ್ಕಳ ಮೂಲಕ ಮರು ಸೃಷ್ಟಿ ಮಾಡಿದ್ದಾರೆ.

ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಹಾಗಾಗಿ ಅದು ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಇಂತಹ ಸೂಪರ್ ಹಿಟ್ ಚಿತ್ರ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ.

ಈ ಚಿತ್ರದಲ್ಲಿ ರಮ್ಯಕೃಷ್ಣರವರು ಶಿವಗಾಮಿ ಪಾತ್ರದಲ್ಲಿ ನೀರಿನಲ್ಲಿ ಮುಳುಗುತ್ತಿರುವಾಗ ಬಾಹುಬಲಿಯನ್ನು ಕೈಯಲ್ಲಿ ಎತ್ತಿ ಹಿಡಿದಿರುವ ದೃಶ್ಯ ಇಂದಿಗೂ ಎಲ್ಲರ ಮನದಲ್ಲಿ ನೆಲೆಯೂರಿದೆ. ಅಂತಹ ದೃಶ್ಯವನ್ನು ಇದೀಗ ವಿಘ್ನೇಶ್‌ ಅವರು ಮರುಸೃಷ್ಟಿ ಮಾಡಿದ್ದಾರೆ. ತಮ್ಮ ಮಕ್ಕಳಿಗೆ ಬಾಹುಬಲಿ ಸಾಂಪ್ರದಾಯಿಕ ಉಡುಗೆಯನ್ನು ತೊಡಿಸಿ, ವಿಘ್ನೇಶ್ ಅವರು ನೀರಿನಲ್ಲಿ ಮುಳುಗಿಕೊಂಡು ತಮ್ಮ ಮಕ್ಕಳನ್ನು ಕೈಯಲ್ಲಿ ಎತ್ತಿ ಹಿಡಿದಿದ್ದಾರೆ. ಹಾಗೇ ಇದಕ್ಕೆ ಸಂಬಂಧಿಸಿದ ಫೋಟೊವನ್ನು ನಯನತಾರಾ ಅವರು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡು “My dear Baahubali 1&2 cos of U 2. It’s a Happy Father’s Day. Life with U boys sooo sooo amazingly satisfying. Love you my uyir & ulag @nayanathara(sic)” ಎಂಬ ಶೀರ್ಷಿಕೆ ನೀಡಿದ್ದಾರೆ.

ನಯನತಾರಾ ಈ ಫೋಟೊವನ್ನು ಹಂಚಿಕೊಳ್ಳುವ ಮೂಲಕ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ. ಹಾಗೇ ಮಕ್ಕಳ ಆಗಮನದಿಂದ ಅವರ ಜೀವನ ಎಷ್ಟು ತೃಪ್ತಿಕರವಾಗಿದೆ ಎಂಬುದನ್ನು ವಿವರಿಸಿದ್ದಾರೆ.
ನಯನತಾರಾ ಹಾಗೂ ವಿಘ್ನೇಶ್ ತಮ್ಮ ಅವಳಿ ಗಂಡುಮಕ್ಕಳಾದ ಉಯಿರ್ ಮತ್ತು ಉಲಗ್ ಅವರನ್ನು ಅಕ್ಟೋಬರ್ 2022ರಲ್ಲಿ ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದರು. ಅಂದಿನಿಂದ ಅವರು ತಮ್ಮ ಮುದ್ದಾದ ಮಕ್ಕಳೊಂದಿಗಿನ ಫೋಟೊಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಮಕ್ಕಳೊಂದಿಗೆ ಮೋಜು ಮಸ್ತಿ ಮಾಡಲು ಹಾಂಗ್‌ಕಾಂಗ್‌ಗೆ ಹೋಗಿದ್ದರು.

ಇದನ್ನೂ ಓದಿ: Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

ಪ್ರಸ್ತುತ ನಯನತಾರಾ ಅವರು ನಿವಿನ್ ಪೌಲಿ ಅವರೊಂದಿಗೆ ‘ಡಿಯರ್ ಸ್ಟೂಡೆಂಟ್ಸ್’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ಹಾಗೇ ಟೆಸ್ಟ್’ ಮತ್ತು ‘ಮನ್ನಂಗಟ್ಟಿ 1960’ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಅವರು ಪ್ರದೀಪ್ ರಂಗನಾಥನ್, ಕೃತಿ ಶೆಟ್ಟಿ ಮತ್ತು ಎಸ್.ಜೆ ಸೂರ್ಯ ಅಭಿನಯದ ‘ಲವ್ ಇನ್ಶೂರೆನ್ಸ್ ಕಾರ್ಪೊರೇಷನ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Continue Reading
Advertisement
Actor Darshan support by Anusha Rai
ಸ್ಯಾಂಡಲ್ ವುಡ್3 mins ago

Actor Darshan: ದರ್ಶನ್‌ರ ದಾನ ಧರ್ಮಗಳೇ ಅವರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Gold Rate Today
ಚಿನ್ನದ ದರ14 mins ago

Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

GPF Interest
ಕರ್ನಾಟಕ14 mins ago

GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

Actor Darshan
ಮೈಸೂರು15 mins ago

Actor Darshan : ಕೊಲೆ ಕೇಸ್‌ ಬೆನ್ನಲ್ಲೆ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Actor Darshan Police To Serve Notice To sandalwood comedy actor
ಸ್ಯಾಂಡಲ್ ವುಡ್29 mins ago

Actor Darshan: ದರ್ಶನ್ ಪ್ರಕರಣ; ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌?

Viral Video
ಪ್ರಮುಖ ಸುದ್ದಿ32 mins ago

Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

Sandeep Lamichhane
ಕ್ರೀಡೆ34 mins ago

Sandeep Lamichhane: ಪಾಕ್​ ಆಟಗಾರನನ್ನು ಹಿಂದಿಕ್ಕಿ ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ನೇಪಾಳ ಸ್ಪಿನ್ನರ್​

Yogi Adithyanath
Latest36 mins ago

Yogi Adithyanath: ಎರಡು ವರ್ಷಗಳ ಬಳಿಕ ತಾಯಿಯನ್ನು ಭೇಟಿಯಾದ ಯೋಗಿ ಆದಿತ್ಯನಾಥ್

Reasi Terror Attack
ವೈರಲ್ ನ್ಯೂಸ್47 mins ago

Reasi Terror Attack: ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ; ವಿಡಿಯೊ ವೈರಲ್‌

Bakrid 2024
ಬೆಂಗಳೂರು1 hour ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು1 hour ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ19 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ20 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌