Power point with HPK : ನಾನು ಯಾರನ್ನೂ ಅವಲಂಬಿಸಿಲ್ಲ, I am Independent; ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟ ನುಡಿ - Vistara News

ಕರ್ನಾಟಕ

Power point with HPK : ನಾನು ಯಾರನ್ನೂ ಅವಲಂಬಿಸಿಲ್ಲ, I am Independent; ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟ ನುಡಿ

Power point with HPK : ನನ್ನ ಖಾತೆಯನ್ನು, ನನ್ನ ಜವಾಬ್ದಾರಿಯನ್ನು ನಿಭಾಯಿಸಲು ನಾನು ಶಕ್ತಳಿದ್ದೇನೆ. ನಾನು ಯಾರ ಮೇಲೂ ಅವಲಂಬಿಸಿಲ್ಲ ಎಂದು ಹೇಳಿದ್ದಾರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಪವರ್‌ ಪಾಯಿಂಟ್‌ ವಿಥ್‌ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಮಾತನಾಡಿದರು.

VISTARANEWS.COM


on

Lakshmi Hebbalkar Power point with HPK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನನ್ನ ಖಾತೆಯನ್ನು ನಿಭಾಯಿಸುವಲ್ಲಿ, ಆಡಳಿತದಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳುವಲ್ಲಿ ನಾನು ಯಾರನ್ನು ಅವಲಂಬಿಸಿಲ್ಲ. ಈ ವೇದಿಕೆಯಲ್ಲಿ ನಿಮ್ಮ ಮುಂದೆ ಒಂದು ವಿಚಾರವನ್ನು ಅತ್ಯಂತ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಐ ಯಾಮ್‌ ನಾಟ್‌ ಡಿಪೆಂಡೆಂಟ್‌ ಆನ್‌ ಎನಿಬಡಿ. ಹಿಂದೆಯೂ ಅಷ್ಟೆ, ಈಗಲೂ ಅಷ್ಟೆ, ಮುಂದೆಯೂ ಅಷ್ಟೆ- ಹೀಗೆಂದು ಗಟ್ಟಿ ಧ್ವನಿಯಲ್ಲಿ ಮಾತನಾಡಿದರು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar).

ಅವರು ವಿಸ್ತಾರ ನ್ಯೂಸ್‌ನಲ್ಲಿ ನಡೆದ ಪವರ್‌ ಪಾಯಿಂಟ್‌ ವಿಥ್‌ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಈ ಮಾತನ್ನು ಸ್ಪಷ್ಟಪಡಿಸಿದರು.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ (Hariprakash Konemane) ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಬೆಳಗಾವಿ ರಾಜಕಾರಣ, ಮುಂದಿನ ಲೋಕಸಭಾ ಚುನಾವಣೆ, ತಮ್ಮ ರಾಜಕೀಯ ಹೆಜ್ಜೆಗಳು, ಅದಕ್ಕೆ ಬೆಂಗಾವಲಾಗಿ ನಿಂತವರ ಬಗ್ಗೆ ಮುಕ್ತವಾಗಿ ಮಾತನಾಡಿದರು.

ʻʻನಾನು ಇದುವರೆಗೂ ಒಂಟಿಯಾಗಿಯೇ ರಾಜಕಾರಣ ಮಾಡಿದವಳು. ನಮ್ಮ ಕುಟುಂಬದ ಮೊದಲ ಪೀಳಿಗೆಯ ರಾಜಕಾರಣಿ ನಾನು. ಸಾಮಾನ್ಯ ಕಾರ್ಯಕರ್ತೆಯಿಂದ, ಈ ಮಟ್ಟಕ್ಕೆ ಬಂದಿದ್ದೇನೆ. ಅದು ನನ್ನ ತಮ್ಮನೇ ಇರಬಹುದು, ನನ್ನ ಮಗನೇ ಇರಬಹುದು. ನಾನು ಯಾರ ಮೇಲೂ ಅವಲಂಬಿಸಿಲ್ಲ. ನನಗೆ ಶಕ್ತಿ ಇದೆ, ನನಗೆ ತಕ್ಕಮಟ್ಟಿಗೆ ಬುದ್ಧಿಯೂ ಇದೆ. ನನ್ನ ಇಲಾಖೆಯನ್ನು ನಾನು ನಡೆಸುತ್ತೇನೆʼʼ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ತಮ್ಮನ್ನು ರಾಜಕೀಯವಾಗಿ ಬೆಳೆಸಿದ ಹಿರಿಯ ನಾಯಕರನ್ನು ನೆನಪಿಸಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಈಗ ಜತೆಯಾಗಿ ಕೆಲಸ ಮಾಡುತ್ತಿರುವ ಸಹೋದರ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಮತ್ತು ಪುತ್ರನ ಸಹಕಾರವನ್ನು ನೆನೆಯುತ್ತಲೇ ಯಾರೂ ಕೂಡಾ ತಮ್ಮನ್ನು ಓವರ್‌ ಟೇಕ್‌ ಮಾಡುವುದಾಗಲೀ ಇಲಾಖೆಯನ್ನು ಟೇಕ್‌ ಓವರ್‌ ಮಾಡುವುದಾಗಲೀ ಸಾಧ್ಯವೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ಸಹೋದರ ಚನ್ನರಾಜ್‌ ಹಟ್ಟಿಹೊಳಿ ಅವರು ಆಡಳಿತದಲ್ಲಿ ಮೂಗು ತೂರಿಸುತ್ತಾರೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ನೋಡಿ ಅವನು ಕೂಡಾ ಎಂಎಲ್‌ಸಿ. ಇಲಾಖೆಯ ಮಂತ್ರಿಗಳನ್ನು ಶಾಸಕರು ಹೇಗೆ ಭೇಟಿ ಮಾಡಲು ಬರ್ತಾರೋ ಹಾಗೆ ಅವನೂ ಬರ್ತಾನೆ. ನೀವೇ ಯೋಚನೆ ಮಾಡಿ, ಒಬ್ಬ ತಮ್ಮ, ಅಕ್ಕನ ಊಟಕ್ಕಾಗಲೀ, ಒಂದೇ ಗಾಡಿಯಲ್ಲಿ ಪ್ರಯಾಣಿಸುವುದಾಗಲೀ ತಪ್ಪಾ? ನಮ್ದು ಜಾಯಿಂಟ್‌ ಫ್ಯಾಮಿಲಿ. ನಾವು ಜತೆಯಾಗಿ ಬರುವುದು ಹೋಗುವುದಕ್ಕೂ ಹೀಗೆ ವ್ಯಾಖ್ಯಾನ ಮಾಡಿದರೆ ಹೇಗೆ ಎಂದು ಕೇಳಿದರು.

ಗೃಹಲಕ್ಷ್ಮಿ ಯೋಜನೆ ಜಾರಿ ತಡ ಯಾಕೆ? ಸರ್ವರ್‌ ಸಮಸ್ಯೆ ಯಾಕಾಗ್ತಿದೆ?

ಗೃಹ ಲಕ್ಷ್ಮಿ ಯೋಜನೆ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ಜಾರಿಗೊಳ್ಳಬೇಕಾಗಿತ್ತು, ತಡ ಆಯಿತು ಅನಿಸುತ್ತಿಲ್ಲವೇ? ಸರ್ವರ್‌ ಸಮಸ್ಯೆ ಕಾಡುತ್ತಿದೆ, ಇಲಾಖೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿರಲಿಲ್ಲವೇ? ಎಂಬ ಪ್ರಶ್ನೆಗೆ ಲಕ್ಷ್ಮೀ ಹೆಬ್ಬಾಳ್ಕರ್‌ ಉತ್ತರ ನೀಡಿದರು.

ಗೃಹಲಕ್ಷ್ಮಿ ಯೋಜನೆಗೆ ಈ ವರ್ಷ 17000 ಕೋಟಿ ರೂ ಬಜೆಟ್‌ ಇಟ್ಟಿದ್ದೇವೆ. ಮುಂದಿನ ವರ್ಷ ಅದು 34000 ಕೋಟಿ ರೂ. ಆಗಬಹುದು. ಗೃಹಿಣಿಯರ ಖಾತೆಗೆ ನೇರವಾಗಿ ಹಣವನ್ನು ಹಾಕುವ ಈ ಯೋಜನೆ ಇದು ರಾಜ್ಯದಲ್ಲಿ ಮೊದಲು ಮಾತ್ರವಲ್ಲ, ಭಾರತದಲ್ಲಿ ಮಾತ್ರವಲ್ಲ, ವಿಶ್ವದಲ್ಲೇ ಮೊದಲು. ಈ ಯೋಜನೆಯನ್ನು ಜಾರಿಗೊಳಿಸುವಾಗ ಬಹಳಷ್ಟು ಸಿದ್ಧತೆಗಳನ್ನು, ಯೋಚನೆಗಳನ್ನು ಮಾಡಬೇಕಾಗುತ್ತದೆ. ಹೀಗಾಗಿ ಸ್ವಲ್ಪ ತಡವಾಗಿದೆ. ಇನ್ನು ಸರ್ವರ್‌ ಸಮಸ್ಯೆ ಎನ್ನುವುದು ಅಷ್ಟರ ಮಟ್ಟಿಗೆ ಗಮನಕ್ಕೆ ಬಂದಿಲ್ಲ. ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದೇವೆ. ಕೆಲವು ಕಡೆ ಸ್ವಲ್ಪ ಮಟ್ಟಿಗೆ ಡಾಟಾ ಸಮಸ್ಯೆ ಎದುರಾಗಿತ್ತು. ಇದಕ್ಕೆ ವೈರಸ್‌ ಸಮಸ್ಯೆ, ಕೆಲವು ಕಡೆ ಮಳೆಯ ಸಮಸ್ಯೆಯಿಂದ ಹೀಗಾಗಿದೆ ಬಿಟ್ಟರೆ ಬೇರಾವ ತಾಂತ್ರಿಕ ಸಮಸ್ಯೆಯೂ ಇಲ್ಲ. ಉಳಿದಂತೆ ಎಲ್ಲವೂ ಸ್ಮೂತ್‌ ಆಗಿ ಹೋಗುತ್ತಿದೆ. 1.28 ಕೋಟಿ ಕುಟುಂಬಗಳಿವೆ. ಬಿಪಿಎಲ್‌, ಎಪಿಎಲ್‌, ಅಂತ್ಯೋದಯ ಕಾರ್ಡ್‌ ಹೊಂದಿರುವ, ಆದಾಯ ತೆರಿಗೆ ಮತ್ತು ಜಿಎಸ್‌ಟಿ ಪಾವತಿದಾರರಲ್ಲದ ಕುಟುಂಬಗಳು ಗೃಹ ಲಕ್ಷ್ಮಿ ವ್ಯಾಪ್ತಿಗೆ ಬರುತ್ತವೆ. ಇದರಲ್ಲಿ ಆಧಾರ್‌ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌, ಪಡಿತರ ಚೀಟಿಯಲ್ಲಿರುವ ಮೊಬೈಲ್‌ ನಂಬರ್‌, ಚಾಲನೆಯಲ್ಲಿರುವ ಮೊಬೈಲ್‌ ನಂಬರ್‌ ಹೊಂದಿರುವ 88 ಲಕ್ಷ ಮಂದಿಗೆ ಸಂದೇಶವನ್ನು ನೀಡಿದ್ದೇವೆ ಎಂದರು.

ಯಜಮಾನಿಯನ್ನು ನಿರ್ಧರಿಸುವುದು ಸಿದ್ದರಾಮಯ್ಯ, ಹೆಬ್ಬಾಳ್ಕರ್‌ ಅಲ್ಲ

ಗೃಹಲಕ್ಷ್ಮಿ ಯೋಜನೆ ಕುಟುಂಬಗಳ ನಡುವೆ ಜಗಳ ಹಚ್ಚುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಉತ್ತರಿಸಿದ ಅವರು, ಗೃಹಲಕ್ಷ್ಮಿ ಯೋಜನೆ ಮನೆಯ ಯಾವ ಹೆಣ್ಮಗಳಿಗೆ ಸಿಗಬೇಕು ಎನ್ನುವ ವಿಚಾರದಲ್ಲಿ ನಾವು ಜಗಳ ಹಚ್ಚುವ ಪ್ರಶ್ನೆಯೇ ಇಲ್ಲ. ಪ್ರಿಯಾಂಕಾ ಗಾಂಧಿಯವರು ಗೃಹಲಕ್ಷ್ಮಿ ಯೋಜನೆಯನ್ನು ಅರಮನೆ ಮೈದಾನದಲ್ಲಿ ಘೋಷಣೆ ಮಾಡಿದ ದಿನವೇ ಈ ಯೋಜನೆಯಡಿ ಮನೆಯ ಯಜಮಾನಿಗೆ ನಾವು ಹಣ ಕೊಡುತ್ತೇವೆ ಎಂದು ಹೇಳಿದ್ದೇವೆ. ಯಾವ ಮನೆಯ ಪಡಿತರ ಚೀಟಿಯಲ್ಲಿ ಯಾರನ್ನು ಮನೆಯ ಯಜಮಾನಿ ಎಂದು ನಮೂದು ಮಾಡಲಾಗಿದೆಯೋ ಅವರಿಗೆ ಈ ಹಣ ಸಿಗುತ್ತದೆ. ಮನೆಯ ಯಜಮಾನಿ ಎನ್ನುವುದು ಈಗಲ್ಲ, ಪಡಿತರ ಚೀಟಿ ಮಾಡಿದಾಗಲೇ ನಮೂದಾಗಿರುತ್ತದೆ. ಅದು ಹತ್ತು ವರ್ಷದ ಹಿಂದಿರಬಹುದು, ಐದು ವರ್ಷದ ಹಿಂದೆ ಇರಬಹುದು. ಯಜಮಾನಿ ಎಂದು ನಿರ್ಧರಿಸಿದ್ದು ಕುಟುಂಬವೇ ಹೊರತು ಸಿದ್ದರಾಮಯ್ಯ ಸರ್‌ ಅಲ್ಲ, ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡಾ ಅಲ್ಲ.

ಈ ಯೋಜನೆ ಲೋಕಸಭಾ ಚುನಾವಣೆವರೆಗೆ ಮಾತ್ರ ಇರುತ್ತದೆ ಎನ್ನುವುದು ಬಿಜೆಪಿಯವರ ಭ್ರಮೆ. ಅವರು ಮೊದಲು ಈ ಯೋಜನೆಯ ಅನುಷ್ಠಾನ ಸಾಧ್ಯವೇ ಇಲ್ಲ ಎಂದು ಹೇಳುತ್ತಿದ್ದರು. ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಬಡವರಿಗೆ ಸಹಕಾರ ನೀಡಿದರೆ ನಿಮಗೆ ಯಾಕೆ ಇಷ್ಟೊಂದು ಸಿಟ್ಟು?

ನೀವು ದೇಶದ ಕಂಪನಿಗಳನ್ನು ಮಾರಾಟ ಮಾಡಿದ್ರೆ ನಿಮಗೆ ಓಕೆ, ಶ್ರೀಮಂತರ ಟ್ಯಾಕ್ಸ್‌ ಮನ್ನಾ ಮಾಡಿದರೆ ನಿಮಗೆ ಓಕೆ, ಬಡವರಿಗೆ ಏನಾದರೂ ಕೊಟ್ಟರೆ ಯಾಕೆ ಇಷ್ಟೊಂದು ಸಿಟ್ಟು? ನಾವು ಕೊಡುತ್ತಿರುವುದು ಬಡವರಿಗೇರಿ, ಯಾವುದೋ ಗಲ್ಲಿಯಲ್ಲಿ ಬೆಳಗ್ಗಿನಿಂದ ಸಂಜೆವರೆಗೆ ಸೂಜಿಯಲ್ಲಿ ಹೂವು ಪೋಣಿಸಿ, ಪೋಣಿಸಿ ಐವತ್ತು ರೂ. ಕೂಡಾ ದುಡಿಯಲು ಕಷ್ಟಪಡುವ ಬಡ ಮಹಿಳೆಯರು, ಮಗುವನ್ನು ತೊಡೆಯಲ್ಲಿ ಮಲಗಿಸಿಕೊಂಡು ಹಣ್ಣು ಮಾರುವ ಹೆಣ್ಮಗಳು, ಬೀದಿ ಬದಿ ವ್ಯಾಪಾರ ಮಾಡುವವರು, ಪಂಕ್ಚರ್‌ ಹಾಕೋರು, ಹೀಗೆ ಪ್ರತಿಯೊಂದರಲ್ಲೂ ಹೆಣ್ಮಗಳಿದ್ದಾಳೆ. ಇಂಥವರ ಬಗ್ಗೆ ಯೋಚನೆ ಮಾಡಿ ನಾವು ಯೋಜನೆ ಕೊಟ್ಟಿದ್ದಕ್ಕೇ ಇಷ್ಟೆಲ್ಲ ಮಾತಾಡ್ತೀರಲ್ಲಾ… ಎಂದು ಗ್ಯಾರಂಟಿ ಯೋಜನೆಗಳ ಟೀಕೆಗೆ ಉತ್ತರಿಸಿದರು.

ನಾನೂ ರಾಮ ಭಕ್ತಳೇ, ಮಂದಿರ ಕಟ್ಟಲು 2 ಲಕ್ಷ ಕೊಟ್ಟಿದ್ದೇನೆ

ರಾಮ ಮಂದಿರ ಕಟ್ಟುವಾಗ ನಾನು ಆರೆಸ್ಸೆಸ್‌ನವರನ್ನು ಕರೆದು, ವಿಶ್ವ ಹಿಂದು ಪರಿಷತ್‌ನವರನ್ನು ಕರೆದು ಎರಡು ಲಕ್ಷ ರೂ. ಕೊಟ್ಟೆ, ಯಾಕೆಂದರೆ ನಾನು ರಾಮನ ಭಕ್ತಳು. ಇದನ್ನು ರಾಜಕಾರಣ ಅಂತ ಮಾಡಿಲ್ಲ. ಇವತ್ತು ಪ್ರಸಂಗ ಬಂತು ನಿಮ್ಮ ಮುಂದೆ ಹೇಳಿದೆ. ಅಷ್ಟು ಕೋಟಿ ಕೋಟಿ ಖರ್ಚು ಮಾಡಿ ಮಂದಿರ ಕಟ್ಟಿದ್ದಾರಲ್ಲಾ… ಅದರ ಹಿಂದಿರುವುದು ಭಕ್ತಿ ತಾನೇ? ಕಾಂಗ್ರೆಸ್‌ ಪಕ್ಷ ಬಡವರ ಬಗ್ಗೆ ಭಕ್ತಿ ಇಟ್ಟುಕೊಂಡಿದೆ.

ನಾವೀಗ ಜಗತ್ತಿನಲ್ಲೇ ನಂಬರ್‌ 3 ಸನಿಹದಲ್ಲಿದ್ದೇವೆ, ಇದು ಬೆಳವಣಿಗೆ ಅಲ್ವಾ?

ಸ್ವಾತಂತ್ರ್ಯ ಬಂದಾಗ ದೇಶದ ಜನಸಂಖ್ಯೆ 35 ಕೋಟಿ, ಈಗ ಅದು 135 ಕೋಟಿ ಆಗಿದೆ. ಆಗ ನಮ್ಮಲ್ಲಿ ಒಂದು ಸೂಜಿಯನ್ನು ಮಾಡುವ ಫ್ಯಾಕ್ಟರಿ ಇರಲಿಲ್ಲ. ಈಗ ಚಂದ್ರಯಾನ ಮಾಡುವ ಹಂತಕ್ಕೆ ಬಂದಿದ್ದೇವೆ. ಎಲ್ಲ ಹಂತದಲ್ಲೂ ಬೆಳೆದಿದ್ದೇವೆ. ನಮಗೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗಿವೆ. ಅಮೆರಿಕಕ್ಕೆ ಸ್ವಾತಂತ್ರ್ಯ ಸಿಕ್ಕಿ ಮುನ್ನೂರು ವರ್ಷಗಳಾಗಿವೆ. ನಾವು ಇನ್ನೇನು ನಂಬರ್‌ 3, ನಂಬರ್‌ 2 ಎನ್ನುವ ಹಂತಕ್ಕೆ ಏರಲಿದ್ದೇವೆ. ಇದನ್ನು ಬೆಳವಣಿಗೆ ಅನ್ನಲ್ವಾ?

ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟ ನಿಖರ ಅಭಿಪ್ರಾಯಗಳು

  1. ವಯಸ್ಸು ಮತ್ತು ಅನುಭವದಲ್ಲಿ ಸತೀಶ್‌ ಜಾರಕಿಹೊಳಿ ಅವರು ತುಂಬ ದೊಡ್ಡವರು. ಅವರ ಹಿಂದಿನಿಂದ ನಾನು ಬೆಳೆಯುತ್ತಿದ್ದೇನೆ. ನನಗೆ ನನ್ನದೇ ಆದ ಸ್ಥಾನಮಾನ ಇದೆ.
  2. ಬೆಳಗಾವಿ ಬಿಟ್ಟು ಉಡುಪಿ ಜಿಲ್ಲಾ ಉಸ್ತುವಾರಿ ನೀಡಿದ್ದು ನನಗೆ ಆಗಿರುವ ಹಿನ್ನಡೆ ಅಲ್ಲ, ಇದು ಕಲಿಯಲು ಸಿಕ್ಕಿರುವ ಅವಕಾಶ.
  3. ನನ್ನನ್ನು ಸೋಲಿಸುತ್ತೇನೆ ಎಂದು ಶಪಥ ಮಾಡಿದ್ದು ರಮೇಶ್‌ ಜಾರಕಿಹೊಳಿ. ನಾನ್ಯಾವತ್ತೂ ಅವರ ವಿರುದ್ಧ ಮಾತಾಡಿಲ್ಲ. ಈಗ ಎದುರು ಸಿಕ್ಕಿದರೂ ಹಲೋ ಎಂದರೆ ಹಲೋ ಅನ್ನುತ್ತೇನೆ.
  4. ನಾನು ತುಂಬ ವಿಶ್ವಾಸ ಹೊಂದಿದ್ದೇನೆ ಸರ್‌.. ಐದು ಗ್ಯಾರಂಟಿಗಳು, ನುಡಿದಂತೆ ನಡೆದ ಸರ್ಕಾರ, ಸಿದ್ದರಾಮಯ್ಯನವರ ಜನಪ್ರಿಯತೆ, ಡಿ.ಕೆ. ಶಿವಕುಮಾರ್‌ ಅವರ ಸಂಘಟನಾ ಶಕ್ತಿಯಿಂದ ಖಂಡಿತವಾಗಿಯೂ ನಾವು ಉಡುಪಿಯಲ್ಲೂ ಗೆಲ್ತೀವಿ, ಬೆಳಗಾವಿ, ಚಿಕ್ಕೋಡಿಯಲ್ಲೂ ಗೆಲ್ತೀವಿ.
  5. ನನ್ನ ಮಗನ ಚುನಾವಣಾ ಸ್ಪರ್ಧೆ ಬಗ್ಗೆ ಈಗಲೇ ಏನೂ ಹೇಳೊಲ್ಲ.

ಇದನ್ನೂ ಓದಿ: Power Point with HPK : ಸಿದ್ದರಾಮಯ್ಯ ಸೆಕ್ಯುಲರ್‌ ಅಲ್ಲ, ಗ್ಯಾರಂಟಿಯಿಂದ ಬದುಕೇ ಸರ್ವನಾಶ: ಸಿ.ಟಿ. ರವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

Liquid Nitrogen Paan: ಬಾಲಕಿಯೊಬ್ಬಳು ಪಾನ್‌ ಸೇವಿಸಿ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿಕೊಂಡಿದ್ದಾಳೆ. ಬೆಂಗಳೂರಿ(Bangalore)ನಲ್ಲಿ ಈ ಘಟನೆ ನಡೆದಿದ್ದು, ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.ಈ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿರುವುದನ್ನು ವೈದ್ಯರು ಗಮನಿಸಿ ಶಾಕ್‌ ಆಗಿದ್ದಾರೆ.

VISTARANEWS.COM


on

Liquid Nitrogen Paan
Koo

ಬೆಂಗಳೂರು: ಪಾನ್‌(ಬೀಡಾ)(Liquid Nitrogen Paan) ಸೇವಿಸೋದಂದ್ರೆ ಬಹುತೇಕ ಎಲ್ಲರಿಗೂ ಇಷ್ಟ ಇರುತ್ತದೆ. ಮೊದಲೆಲ್ಲಾ ವಯಸ್ಸಾದವರು ಪಾನ್‌ ಸೇವಿಸೋ ಅಭ್ಯಾಸ ಇಟ್ಟುಕೊಂಡಿದ್ದರು. ಈಗೀಗ ಯುವಕರೂ ಪಾನ್‌ ಹಾಕುವ ಶೋಕಿ ರೂಢಿಸಿಕೊಂಡಿದ್ದಾರೆ. ಇದೀಗ ಬಾಲಕಿಯೊಬ್ಬಳು ಪಾನ್‌ ಸೇವಿಸಿ ಪ್ರಾಣಕ್ಕೆ ಅಪಾಯವನ್ನು ತಂದೊಡ್ಡಿಕೊಂಡಿದ್ದಾಳೆ. ಬೆಂಗಳೂರಿ(Bangalore)ನಲ್ಲಿ ಈ ಘಟನೆ ನಡೆದಿದ್ದು, ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದ್ದು, ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿರುವುದನ್ನು ವೈದ್ಯರು ಗಮನಿಸಿ ಶಾಕ್‌ ಆಗಿದ್ದಾರೆ. ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ ಈ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಟ್ರೆಂಡಿ ಫುಡ್‌ಗಳು ಕೆಲವೊಮ್ಮೆ ಹೇಗೆ ಪ್ರಾಣಕ್ಕೆ ಕುತ್ತಾಗಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ..

ಬಾಲಕಿಯನ್ನು ಇಂಟ್ರಾಆಪರೇಟಿವ್ OGD ಸ್ಕೋಪಿಯೊಂದಿಗೆ ಪರಿಶೋಧನಾತ್ಮಕ ಲ್ಯಾಪರೊಟಮಿಗೆ ಒಳಪಡಿಸಲಾಯಿತು. ಅಲ್ಲಿ ಅನ್ನನಾಳ, ಹೊಟ್ಟೆ ಮತ್ತು ಡ್ಯುವೋಡೆನಮ್ ಅನ್ನು ಪರೀಕ್ಷಿಸಲು ಎಂಡೋಸ್ಕೋಪ್ ಬಳಸಲಾಯಿತು. ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿ ಸುಮಾರು 4×5 ಸೆಂ.ಮೀ ಅಳತೆಯ ಅನಾರೋಗ್ಯಕರ ಪ್ಯಾಚ್ ಕಂಡುಬಂದಿದೆ. ಇದೀಗ ಶಸ್ತ್ರ ಚಿಕಿತ್ಸೆ ಯಶಸ್ವಿ ಆಗಿದ್ದು, ಬಾಲಕಿ ವೈದ್ಯರ ನಿಗಾದಲ್ಲಿದ್ದಾಳೆ.

ಏನಿದು ಲಿಕ್ವಿಡ್‌ ನೈಟ್ರೋಜನ್‌ ಪಾನ್‌?

ಬಾಯಲ್ಲಿ ಪಾನ್ ಹಾಕಿಕೊಂಡ ಕೂಡಲೇ ಹೊಗೆ ಬರುವಂತಹ ಟ್ರೆಂಡಿ ಪಾನ್‌ ಈ ಲಿಕ್ವಿಡ್ ನೈಟ್ರೋಜನ್ ಪಾನ್. ಪಾನ್‌ನಲ್ಲಿ ದ್ರವರೂಪದಲ್ಲಿ ಸಾರಜನಕವನ್ನು ತುಂಬಲಾಗುತ್ತದೆ. ಇದನ್ನು ಸೇವಿಸಿದಾಗ ಬಾಯಲ್ಲಿ ಹೊಗೆ ಬರಲು ಶುರು ಆಗುತ್ತದೆ. ಇದು ಬಾಯಿಯ ಚರ್ಮವನ್ನು ಹಾನಿಗೊಳಿಸುತ್ತದೆ ಮತ್ತು ತೀವ್ರ ಆರೋಗ್ಯ ಸಮಸ್ಯೆಯನ್ನುಂಟು ಮಾಡುತ್ತದೆ. ಈ ಆವಿಯನ್ನು ಉಸಿರಾಡುವುದರಿಂದ ಉಸಿರಾಟದ ಸಮಸ್ಯೆ ಎದುರಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಿಕ್ವಿಡ್ ನೈಟ್ರೋಜನ್ ಜಗತ್ತಿನಲ್ಲಿಯೇ ಅತಿ ತಣ್ಣನೆಯ ವಸ್ತುವಾಗಿದ್ದು, ಅದನ್ನು ಸಾರಜನಕದ ದ್ರವೀಕರಣದಿಂದ ಮಾಡಲಾಗುತ್ತದೆ. ಅದರ ತಂಪಿನಲ್ಲಿ ಎಷ್ಟೊಂದು ತೀಕ್ಷ್ಣತೆ ಇರುತ್ತದೆ ಎಂದರೆ ಅಂಗೈ ಮೇಲೆ ಸುರಿದುಕೊಂಡರೆ ಅಂಗೈ ತೂತಾಗುತ್ತದೆ. ಇದನ್ನು ಸೇವಿಸುವುದರಿಂದ ಇದು ಅಂಗಾಂಶಗಳಿಗೆ ಆಮ್ಲಜನಕದ ಪೂರೈಕೆಯನ್ನು ಕಡಿತಗೊಳಿಸುವ ಮೂಲಕ ಉಸಿರುಕಟ್ಟುವಿಕೆಗೆ ಕಾರಣವಾಗುತ್ತದೆ. ಸ್ಮೋಕ್‌ ಬಿಸ್ಕತ್‌, ಬಿಯರ್‌, ಐಸ್‌ ಕ್ರೀಂಗಳಲ್ಲಿ ಇದನ್ನು ಬಳಸಲಾಗುತ್ತಿದೆ. ಈಗಾಗಲೇ ತಮಿಳುನಾಡು ಇದರ ನೇರ ಬಳಕೆಯನ್ನು ನಿಷೇಧಿಸಿದ್ದು, ಕರ್ನಾಟಕದಲ್ಲೂ ಬ್ಯಾನ್ ಮಾಡುವಂತೆ ಹಲವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ:Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

ಕೆಲವು ತಿಂಗಳ ಹಿಂದೆ ದಾವಣಗೆರೆಯಲ್ಲೂ ಇಂತಹದ್ದೇ ಒಂ ಘಟನೆ ವರದಿ ಆಗಿತ್ತು. ವಸ್ತುಪ್ರದರ್ಶನದಲ್ಲಿ ಬಾಲಕನೊಬ್ಬ ‘ಸ್ಮೋಕ್ ಬಿಸ್ಕೆಟ್’ ಸೇವಿಸಿದ ಬಳಿಕ ಅತೀವ್ರ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಳಿಕ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ ಕುರಿತು ಹಲವರು ದ್ವನಿಯೆತ್ತಿದ್ದರು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಅದನ್ನು ಬ್ಯಾನ್‌ ಮಾಡಿತ್ತು.

Continue Reading

ಮಂಡ್ಯ

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

Road Accident : ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

By

road Accident in Mandya
Koo

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident ) ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ರಸ್ತೆಯ ಬೋರಾಪುರದಲ್ಲಿ ಅಪಘಾತ ನಡೆದಿದೆ.

ಮದ್ದೂರಿನಿಂದ ಮಳವಳ್ಳಿ ಕಡೆಗೆ ಸ್ವಿಫ್ಟ್ ಕಾರು ತೆರಳುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್‌ ಮಳವಳ್ಳಿಯಿಂದ ಮದ್ದೂರು ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ. ಬಸ್‌ನ ಮುಂಭಾಗ ಜಖಂಗೊಂಡಿದೆ.

ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿದ್ದು, ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಬೋರಾಪುರ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಛಿದ್ರಗೊಂಡಿದ್ದ ಕಾರನ್ನು ತೆರವು ಮಾಡಿದ್ದರು. ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Drowned in water.. road Accident

ಉಡುಪಿಯಲ್ಲಿ ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿ; ಸವಾರ ಸಾವು

ಉಡುಪಿಯ ಕಾರ್ಕಳ ಸಮೀಪದ ಬಳ್ಳಿ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಮಲ್ (32) ಮೃತ ದುರ್ದೈವಿ. ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿ ಹೊಡೆದ ಪರಿಣಾಮ ಕಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊರ್ವ ಸ್ಕೂಟರ್ ಸವಾರ ಪ್ರಸನ್ನ ಎಂಬಾತ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನೈಸ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಸವಾರ ಸಾವು

ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಬೈಕ್‌ ಸವಾರ ಮೃತಪಟ್ಟಿದ್ದಾನೆ. ವಿನಾಯಕ ಎಸ್ ಪಲ್ಲೆದ್ (20) ಮೃತ ದುರ್ದೈವಿ. ಹಿಂಬದಿ ಸವಾರ ಗಿರೀಶ್ (22) ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ನೈಸ್ ರಸ್ತೆಯ ಮಂಗನಹಳ್ಳಿಯ ಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

CET Result: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ. ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

VISTARANEWS.COM


on

CET result only after II PU 2nd exam Published on May 30 or 31
Koo

ಬೆಂಗಳೂರು: 2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ಗಾಗಿ (CET Result) ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಪಷ್ಟನೆ ನೀಡಿದೆ. ಹೀಗಾಗಿ ಮೇ 30 ಇಲ್ಲವೇ ಮೇ 31ಕ್ಕೆ ಪ್ರಕಟವಾಗುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಅಧಿಕಾರಿಗಳ ಎಡವಟ್ಟು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿದೆ.

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ.

ಮೇ 30ಕ್ಕೆ ಪಿಯು ಪರೀಕ್ಷೆ-2ರ ಫಲಿತಾಂಶ?

ಜೆಕೆವಿಕೆಯ ಪ್ರಾಯೋಗಿಕ ಪರೀಕ್ಷೆ ಮೇ 25ರಂದು ನಡೆಯಲಿದ್ದು, ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ. ಇತ್ತ ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶವೂ ಇನ್ನಷ್ಟೇ ಹೊರ ಬರಬೇಕಿದೆ. ಇದರ ಫಲಿತಾಂಶ ಮೇ 30ರಂದು ಹೊರಬರುವ ನಿರೀಕ್ಷೆ ಇದೆ.

ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳ ಎಡವಟ್ಟಿನಿಂದ ಫಲಿತಾಂಶ ವಿಳಂಬವಾಗಿದೆ ಎಂಬ ದೂರುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

ರಿಸಲ್ಟ್‌ ಚೆಕ್‌ ಮಾಡುವ ವಿಧಾನ

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ.

  • ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಈ ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.
  • ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ.
Continue Reading

ಧಾರ್ಮಿಕ

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Pretha Maduve: ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ.

VISTARANEWS.COM


on

pretha maduve
Koo

ಮಂಗಳೂರು: ಕರ್ನಾಟಕ ಕರಾವಳಿಯ (karnataka Coastal) ತುಳುನಾಡಿನ (Tulunadu) ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ (Pretha Maduve) ಸಜ್ಜಾಗಿದ್ದ ವಧುವಿಗೆ (bride) ವರ (groom) ಹಾಗೂ ದಿನಾಂಕ ಫಿಕ್ಸ್‌ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ (Souls) ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ (Folk) ರೀತಿಯಲ್ಲಿ ನಡೆಯುತ್ತದೆ.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಧುವೊಬ್ಬಳಿಗೆ ʼವರ ಬೇಕಾಗಿದೆ’ ಎಂಬ ಜಾಹೀರಾತು ಭಾರಿ ಸುದ್ದಿಯಾಗಿತ್ತು. ಈ ʼವಧುʼ ಒಂದು ವಾರದ ಮಗುವಾಗಿದ್ದಾಗಲೇ ತೀರಿಕೊಂಡಿದ್ದಳು. ಇದು ನಡೆದು 30 ವರ್ಷಗಳು ಆಗಿವೆ. ಜ್ಯೋತಿಷ್ಯ ಪ್ರಕಾರ ನೋಡಿದಾಗ, ಹೆಣ್ಣುಮಗಳ ಆತ್ಮಕ್ಕೆ ವಿವಾಹ ಆಗಬೇಕು ಎಂದು ಕಂಡುಬಂದಿತ್ತು ಎನ್ನಲಾಗಿದೆ. ಈ ಮಗುವಿಗೆ ನಾಮಕರಣವೂ ಆಗಿರಲಿಲ್ಲ. ನಂತರ ಆಕೆಗೆ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿತ್ತು. ಈ ಕುರಿತು ಜಾಹೀರಾತು ಪ್ರಕಟಿಸಲಾಗಿತ್ತು.

Pretha Maduve

ಇದೀಗ ಈ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ “ವರ’ನೊಬ್ಬ ನಿಗದಿಯಾಗಿದ್ದಾನೆ. ಮುಂದಿನ “ಆಟಿ’ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ” ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ ಬಾಯಾರು ಸಮೀಪದ ನಿವಾಸಿ ಸಂಬಂಧಪಟ್ಟವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಮೊದಲ ಕರೆ ಅದಾಗಿತ್ತು. ಬಳಿಕ ಸರಿಹೊಂದುವ ಸುಮಾರು 30ಕ್ಕೂ ಅಧಿಕ ಸಂಬಂಧದವರು ಸಂಪರ್ಕಿಸಿದ್ದರು. ಪ್ರಶ್ನಾಚಿಂತನೆಯಲ್ಲಿ ಅವಲೋಕಿಸಿದಾಗ ಬಾಯಾರುವಿನ ವರ ಅಂತಿಮಗೊಳಿಸುವ ಬಗ್ಗೆ ಸಲಹೆ ಬಂದಿತ್ತು.

ಪ್ರೇತ ಮದುವೆಯಲ್ಲಿ, ಜೀವಂತ ಇರುವಾಗ ನಡೆಯದಿದ್ದ ಮದುವೆ ಕ್ರಮಗಳನ್ನು ಎರಡೂ ಕುಟುಂಬ ವರ್ಗ ಸೇರಿ ಸಾಂಕೇತಿಕವಾಗಿ ನಡೆಸುತ್ತವೆ. ಮುಂದಿನ ರವಿವಾರ “ಪ್ರೇತ ವರ’ನ ಕಡೆಯವರು “ವಧು’ವಿನ ಮನೆಗೆ ಬರಲಿದ್ದಾರೆ. ಬಳಿಕ ನಾವು ಅವರ ಮನೆಗೆ ಹೋಗುತ್ತೇವೆ. ಬಳಿಕ ನಿಶ್ಚಿತಾರ್ಥ. ಆಟಿಯಲ್ಲಿ ಮದುವೆ ನಿಗದಿಯಾಗಿದೆ ಎನ್ನುತ್ತಾರೆ ಪುತ್ತೂರು ನಿವಾಸಿ.

ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ. ವಿವಿಧ ಸಮಾಜದ ಬಂಧುಗಳು ಪ್ರತಿಕ್ರಿಯಿಸಿದ್ದಾರೆ. ನಮ್ಮ ಮನೆಗೆ ಪ್ರೇತ ವರ ಬೇಕಾಗಿದ್ದ ಹಾಗೆಯೇ ನೂರಾರು ಮನೆಗೆ ವಧು-ವರ ಬೇಕಾಗಿದ್ದ ವಿಚಾರ ಆ ಸಂದರ್ಭ ಬೆಳಕಿಗೆ ಬಂತು. ಈ ಕುರಿತು ಜಾಗೃತಿಯೊಂದು ಮೂಡಿದಂತಾಗಿದೆ ಎನ್ನುತ್ತಾರೆ ಸಂಬಂಧಪಟ್ಟ ಮನೆಯವರು.

ಇದನ್ನೂ ಓದಿ: Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Continue Reading
Advertisement
Liquid Nitrogen Paan
ದೇಶ2 mins ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ8 mins ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ8 mins ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ11 mins ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ23 mins ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ30 mins ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ33 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Survival Story
ವಿದೇಶ44 mins ago

Survival Story: ಆ 17 ದಿನಗಳು…ಥೈಲ್ಯಾಂಡ್‌ನ ಥಾಮ್ ಲುವಾಂಗ್ ಗುಹೆಯಲ್ಲಿ ಸಿಕ್ಕಿಬಿದ್ದ 13 ಮಂದಿಯ ರಕ್ಷಣೆಯ ರೋಚಕ ಕಹಾನಿ

Lok Sabha Election 2024
ದೇಶ45 mins ago

Lok Sabha Election 2024: ರ್‍ಯಾಲಿಯಲ್ಲಿ ಕಾಲ್ತುಳಿತದ ಸ್ಥಿತಿ ನಿರ್ಮಾಣ; ಭಾಷಣ ಮಾಡದೇ ವೇದಿಕೆಯಿಂದ ತೆರಳಿದ ರಾಹುಲ್‌, ಅಖಿಲೇಶ್‌

ಲಕ್ಕೂರು ಆನಂದ lakkuru Anand
ಶ್ರದ್ಧಾಂಜಲಿ1 hour ago

ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ಲಕ್ಕೂರು ಆನಂದ ನಿಧನ, ಅನುಮಾನಾಸ್ಪದ ಸಾವು ಕೇಸು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ33 mins ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ22 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ23 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌