IND vs WI: ಜಿಂಕೆಯಂತೆ ಜಿಗಿದು ಕ್ಯಾಚ್​ ಪಡೆದ ಅಜಿಂಕ್ಯ; ವಿಡಿಯೊ ವೈರಲ್​ - Vistara News

ಕ್ರಿಕೆಟ್

IND vs WI: ಜಿಂಕೆಯಂತೆ ಜಿಗಿದು ಕ್ಯಾಚ್​ ಪಡೆದ ಅಜಿಂಕ್ಯ; ವಿಡಿಯೊ ವೈರಲ್​

ಉಪನಾಯಕ ಅಜಿಂಕ್ಯ ರಹಾನೆ ಸ್ಲಿಪ್​ನಲ್ಲಿ ಹಿಡಿದ ಕ್ಯಾಚ್(Ajinkya Rahane Catch)​ನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರ(viral video)​ ಆಗಿದೆ.

VISTARANEWS.COM


on

utstanding catch by Ajinkya Rahane in the slips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೋರ್ಟ್‌ ಆಫ್‌ ಸ್ಪೇನ್‌: ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ನಲ್ಲಿ ಪೆವಿಲಿಯನ್‌ ಪರೇಡ್‌ ನಡೆಸಿ 150ರ ಗಡಿ ದಾಟಲು ವಿಫಲವಾಗಿದ್ದ ವಿಂಡೀಸ್‌ ಬ್ಯಾಟರ್‌ಗಳು 2ನೇ ಟೆಸ್ಟ್‌ನಲ್ಲಿ(IND vs WI) ತಿರುಗಿ ಬಿದ್ದಿದ್ದಾರೆ. ಭಾರತದ 438 ರನ್‌ಗೆ ಉತ್ತರವಾಗಿ ಮೂರನೇ ದಿನದಾಟದಂತ್ಯದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 229 ರನ್ ಬಾರಿಸಿ ಪ್ರತಿ ಹೋರಾಟ ನಡೆಸುತ್ತಿದೆ. ಸದ್ಯ ಭಾರತದ ಮೊತ್ತವನ್ನು ಮೀರಿಸಲು ವಿಂಡೀಸ್​ಗೆ ಇನ್ನು 209 ರನ್‌ಗಳ ಅಗತ್ಯವಿದೆ. ಮೂರನೇ ದಿನದಾಟದಲ್ಲಿ ಉಪನಾಯಕ ಅಜಿಂಕ್ಯ ರಹಾನೆ ಹಿಡಿದ ಕ್ಯಾಚ್(Ajinkya Rahane Catch)​ನ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರ(viral video)​ ಆಗಿದೆ.

ಸ್ಲಿಪ್​ನಲ್ಲಿ ನಿಂತಿದ್ದ ಅಜಿಂಕ್ಯ ರಹಾನೆ ಕಣ್ಣು ಮಿಟುಕಿಸುವಷ್ಟರಲ್ಲಿ ಒಂದೇ ಕೈಯಲ್ಲಿ ಕ್ಯಾಚ್ ಹಿಡಿದಿದ್ದು ಎಲ್ಲರನ್ನೂ ದಂಗಾಗಿಸಿದರು. ರವೀಂದ್ರ ಜಡೇಜಾ ಅವರ ಓವರನ್​ನ ಮೂರನೇ ಎಸೆತದಲ್ಲಿ ಈ ಘಟನೆ ಸಂಭವಿಸಿದೆ. ಜಡೇಜಾ ಎಸೆತಕ್ಕೆ ಜರ್ಮೈನ್ ಬ್ಲಾಕ್​ವುಡ್ ಡಿಫೆನ್ಸ್​ ಮಾಡಲು ಯತ್ನಿಸಿದರು. ಆದರೆ ಚೆಂಡು ಬ್ಯಾಟ್​ನ ಸೈಡ್​ಗೆ ಬಡಿದು ಹಿಂದೆ ಸಾಗಿತು. ಫಸ್ಟ್ ಸ್ಲಿಪ್​ನಲ್ಲಿದ್ದ ರಹಾನೆ ಜಿಂಕೆಯಂತೆ ಜಿಗಿದು ಈ ಕ್ಯಾಚ್​ ಪಡೆಯುವಲ್ಲಿ ಯಶಸ್ವಿಯಾದರು. ರಹಾನೆ ಹಿಡಿದ ಕ್ಯಾಚ್​ನ ವಿಡಿಯೊವನ್ನು ಹಂಚಿಕೊಮಡಿರುವ ಅನೇಕ ನೆಟ್ಟಿಗರು. ಅಬ್ಬಾ… ಕ್ವಿಕ್​ ಸ್ಟಾರ್ಟ್​,​ ಕ್ರಿಕೆಟ್ ಇತಿಹಾಸದಲ್ಲೇ ಇದು ಅಜಿಂಕ್ಯ ಹಿಡಿದ ಅದ್ಭುತ ಕ್ಯಾಚ್ ಎಂದು ಹೇಳಿದ್ದಾರೆ.

ಇದನ್ನೂ ಓದಿ INDvsWI: ಟೆಸ್ಟ್​ ತಂಡಕ್ಕೆ ಅಜಿಂಕ್ಯ ರಹಾನೆ ನಾಯಕ; ರೋಹಿತ್​ಗೆ ಕೊಕ್​ ಸಾಧ್ಯತೆ

ವಿಂಡೀಸ್‌ ಒಂದು ವಿಕೆಟಿಗೆ 86 ರನ್‌ ಮಾಡಿದಲ್ಲಿಂದ ಶನಿವಾರದ ಆಟ ಮುಂದುವರಿಸಿತ್ತು. ನಾಯಕ ಕ್ರೆಗ್‌ ಬ್ರಾತ್‌ವೇಟ್‌ (73) ಮತ್ತು ಕರ್ಕ್‌ ಮೆಕೆಂಝಿ(35) ಉತ್ತಮ ಆಟಗಾಡುವ ಮೂಲಕ ತಂಡಕ್ಕೆ ಆಸರೆಯಾದರು. 10.4 ಓವರ್‌ ಆಟ ಮುಗಿದ ಕೂಡಲೇ ಮಳೆ ಸುರಿದ ಕಾರಣ 1 ಗಂಟೆಗೂ ಹೆಚ್ಚು ಕಾಲ ಆಟ ಸ್ಥಗಿತಗೊಂಡಿತು. ಹೀಗಾಗಿ ನಿಗದಿತ ಸಮಯಕ್ಕೂ ಮೊದಲೇ ಅಂಪೈರ್‌ಗಳು ಭೋಜನ ವಿರಾಮ ಘೋಷಿಸಿದರು. ಕರ್ಕ್‌ ಮೆಕೆಂಝಿ ವಿಕೆಟ್​ ಕಿತ್ತ ಮುಕೇಶ್‌ ಕುಮಾರ್‌ ಚೊಚ್ಚಲ ಪಂದ್ಯದಲ್ಲಿ ವಿಕೆಟ್​ ಖಾತೆ ತೆರೆದರು. ಕ್ರೇಗ್ ಬ್ರಾಥ್‌ವೇಟ್ ವಿಕೆಟ್​ ಅಶ್ವಿನ್​ ಪಲಾಯಿತು.

ರಹಾನೆ ಫಿಲ್ಡಿಂಗ್​ನಲ್ಲಿ ಮಿಂಚಿದರೂ ಬ್ಯಾಡಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಕಂಡಿದ್ದಾರೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ಎರಡೂ ಇನಿಂಗ್ಸ್​ನಲ್ಲಿ ಭಾರತ ತಂಡಕ್ಕೆ ಆಸೆಯಾಗಿದ್ದ ಅವರ ಮೇಲೆ ಈ ಪಂದ್ಯದಲ್ಲಿಯೂ ಹೆಚ್ಚಿನ ನಿರೀಕ್ಷೆ ಮಾಡಲಾಗಿತ್ತು. ಆದರೆ ಈ ನಿರೀಕ್ಷೆ ಹುಸಿಯಾಗಿದೆ. ದ್ವಿತೀಯ ಇನಿಂಗ್ಸ್​ನಲ್ಲಾದರೂ ಉತ್ತಮ ಪ್ರದರ್ಶನ ತೋರಲಿದ್ದಾರಾ ಎಂದು ಕಾದು ನೋಡಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rahul Dravid: ನಾನು ನಿರುದ್ಯೋಗಿ, ಎಲ್ಲಾದರೂ ಕೆಲಸ ಇದ್ದರೆ ಹೇಳಿ ಎಂದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Rahul Dravid: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕೋಚ್ ಹುದ್ದೆಯಿಂದ ಕೆಳಗಿಳಿದ ರಾಹುಲ್ ದ್ರಾವಿಡ್ ಅವರಿಗೆ ಸಂದರ್ಶಕರೊಬ್ಬರು ಮುಂದಿನ ನಡೆಯ ಬಗ್ಗೆ ಪ್ರಶ್ನೆ ಮಾಡಿದರು. ಈ ಪ್ರಶ್ನೆಗೆ ಉತ್ತರಿಸಿದ ದ್ರಾವಿಡ್​, ಈ ಗೆಲುವಿನಿಂದ ನಾನು ಶೀಘ್ರದಲ್ಲೇ ಹೊರಬರುತ್ತೇನೆ. ಏಕೆಂದರೆ ಮುಂದಿನ ವಾರದಿಂದ ನಾನು ನಿರುದ್ಯೋಗಿರುತ್ತೇನೆ. ಹೊಸ ಕೆಲಸ ಇದ್ದರೆ ಹೇಳಿ ಎಂದು ದ್ರಾವಿಡ್ ಹಾಸ್ಯ ಚಟಾಕಿ ಹಾರಿಸಿದರು.

VISTARANEWS.COM


on

Rahul Dravid
Koo

ಬಾರ್ಬಡೋಸ್​: ಟಿ20 ವಿಶ್ವಕಪ್​ ಟೂರ್ನಿಯ ಮುಕ್ತಾಯದೊಂದಿಗೆ ರಾಹುಲ್​ ದ್ರಾವಿಡ್​(Rahul Dravid) ಅವರ ಕೋಚಿಂಗ್​ ಕೂಡ ಮುಕ್ತಾಯಗೊಂಡಿದೆ. ಮುಂದಿನ ನಡೆ ಏನೆಂದು ಕೇಳಿದ ಪ್ರಶ್ನೆಗೆ ಹಾಸ್ಯಾಸ್ಪದವಾಗಿ(Rahul Dravid jokes) ಉತ್ತರಿಸಿದ ದ್ರಾವಿಡ್​, ಮುಂದಿನ ವಾರದಿಂದ ನಾನು ನಿರುದ್ಯೋಗಿರುತ್ತೇನೆ(Rahul Dravid jokes unemployed from next week) ಎಲ್ಲಾದರೂ ಕೆಲಸ ಇದ್ದರೆ ಹೇಳಿ ಎಂದರು. ಈ ವಿಡಿಯೊ ವೈರಲ್​ ಆಗಿದೆ.

2021ರಲ್ಲಿ ಟಿ20 ವಿಶ್ವಕಪ್‌ ಬಳಿಕ, ಕೋಚ್‌ ಆಗಿದ್ದ ರವಿಶಾಸ್ತ್ರಿ ನಿರ್ಗಮನದಿಂದ ತೆರವಾದ ಸ್ಥಾನವನ್ನು ದ್ರಾವಿಡ್‌ ವಹಿಸಿದ್ದರು. ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕಳೆದ ವರ್ಷದ ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಅಂತ್ಯಗೊಂಡಿತ್ತು. ಆ ಬಳಿಕ, ದ್ರಾವಿಡ್​ಗೆ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಕೂಡ ಇರಲಿಲ್ಲ. ಆದರೂ ಕೂಡ ದ್ರಾವಿಡ್​ ಮತ್ತು ಇತರ ತರಬೇತಿ ಸಿಬ್ಬಂದಿಯನ್ನು ಟಿ20 ವಿಶ್ವಕಪ್​ ತನಕ ಮುಂದುವರಿಸಲಾಗಿತ್ತು. ತಮ್ಮ ಕೊನೆಯ ಮಾರ್ಗದರ್ಶದಲ್ಲಿ ಭಾರತ ಟಿ20 ವಿಶ್ವಕಪ್​ ಗೆದ್ದಿರುವುದು ಅವರಿಗೂ ಸಂತಸ ತಂದಿದೆ.

ಟಿ20 ವಿಶ್ವಕಪ್ ಗೆಲುವಿನ ಬಳಿಕ ಕೋಚ್ ಹುದ್ದೆಯಿಂದ ಕೆಳಗಿಳಿದ ರಾಹುಲ್ ದ್ರಾವಿಡ್ ಅವರಿಗೆ ಸಂದರ್ಶಕರೊಬ್ಬರು ಮುಂದಿನ ನಡೆಯ ಬಗ್ಗೆ ಪ್ರಶ್ನೆ ಮಾಡಿದರು. ಈ ಪ್ರಶ್ನೆಗೆ ಉತ್ತರಿಸಿದ ದ್ರಾವಿಡ್​, ಈ ಗೆಲುವಿನಿಂದ ನಾನು ಶೀಘ್ರದಲ್ಲೇ ಹೊರಬರುತ್ತೇನೆ. ಏಕೆಂದರೆ ಮುಂದಿನ ವಾರದಿಂದ ನಾನು ನಿರುದ್ಯೋಗಿರುತ್ತೇನೆ. ಹೊಸ ಕೆಲಸ ಇದ್ದರೆ ಹೇಳಿ ಎಂದು ದ್ರಾವಿಡ್ ಹಾಸ್ಯ ಚಟಾಕಿ ಹಾರಿಸಿದ್ದಾರೆ” ಈ ವಿಡಿಯೊ ವೈರಲ್​ ಆಗಿದೆ. ಕಳೆದ ವರ್ಷವೇ ದ್ರಾವಿಡ್​ ಅವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿ ಮತ್ತೊಮ್ಮೆ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಇಷ್ಟವಿಲ್ಲ ಎಂದು ಹೇಳಿದ್ದರು. ದ್ರಾವಿಡ್​ ಅವರ ಇಬ್ಬರು ಮಕ್ಕಳು ಕೂಡ ಕ್ರಿಕೆಟರ್​ ಆಗಿರುವ ಕಾರಣ ಇವರ ಕ್ರಿಕೆಟ್​ ಭವಿಷ್ಯ ರೂಪಿಸುವಲ್ಲಿ ದ್ರಾವಿಡ್​ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬಹುದು.

ಇದನ್ನೂ ಓದಿ Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ.

1996ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ರಾಹುಲ್‌ ದ್ರಾವಿಡ್‌ 2012ರ ವರೆಗೆ ಭಾರತ ತಂಡದ ಪರವಾಗಿ ಆಡಿದ್ದರು. ಆದರೆ ವಿಶ್ವಕಪ್ ಎನ್ನುವುದು ಅವರಿಗೆ ಕನಸಾಗಿತ್ತು. ಈ ಕೊರಗು ಕೂಡ ಅವರಲ್ಲಿತ್ತು. ಇದೀಗ ನಾಯಕನಾಗಿ, ಆಟಗಾರನಾಗಿ ಗೆಲ್ಲಲಾಗದ ವಿಶ್ವಕಪ್‌ ಅನ್ನು ತರಬೇತುದಾರನಾಗಿ ಗಳಿಸಿಕೊಂಡಿದ್ದಾರೆ.

2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿ ತಮ್ಮ ಎಲ್ಲ ಹಿಂದಿನ ನೋವನ್ನು ಮರೆತರು.

Continue Reading

ಕ್ರಿಕೆಟ್

Rahul Dravid : ಕ್ರಿಕೆಟ್ ಬುದ್ಧ ನಕ್ಕು ನಲಿದಾಡಿದಾಗ, ಅರಿವಿಲ್ಲದೇ ಕೆನ್ನೆಗೆ ಜಾರಿತ್ತು ಭಾವಾತಿಶಯದ ಅಶ್ರುಧಾರೆ – ಸಲಾಂ ಜಾಮಿ ಭಾಯ್!

Rahul Dravid : ದ್ರಾವಿಡ್ ಅವರ ವಿಚಿತ್ರ ವರ್ತನೆ ಗೆಳೆಯರಿಗೂ ಅಚ್ಚರಿಯನ್ನುಂಟು ಮಾಡಿತ್ತಂತೆ. ಆದ್ರೆ ಇದಕ್ಕೆ ಕಾರಣ ಕೇಳಿದಾಗ ಯಾರಿಗೂ ಕೂಡ ನಗುಬರಬಹುದು. ಯಾಕಂದ್ರೆ ಬ್ಯಾಟ್‍ನ ಗ್ರಿಪ್ ಪಡೆದುಕೊಳ್ಳಲು ದ್ರಾವಿಡ್ ಈ ತಂತ್ರವನ್ನು ಬಳಸುತ್ತಿದ್ದರಂತೆ. ಹೀಗೆ ದ್ರಾವಿಡ್ ಬಗ್ಗೆ ಹಲವಾರು ಸ್ವಾರಸ್ಯಕರವಾದ ಘಟನೆಗಳಿವೆ.

VISTARANEWS.COM


on

Rahul Dravid
Koo

ಸನತ್ ರೈ, ಬೆಂಗಳೂರು

ನಾನು ರಾಹುಲ್ ದ್ರಾವಿಡ್ (Rahul Dravid) ಅವರ ಅಪ್ಪಟ ಅಭಿಮಾನಿಯೇನಲ್ಲ. ಆದ್ರೂ ಜಾಮಿ ಬಗ್ಗೆ ಆಗಾಧವಾದ ಪ್ರೀತಿ ಇದೆ. ಅವರ ಕಲಾತ್ಮಕ ಆಟದ ಶೈಲಿಗಂತೂ ಮನಸೋತಿದೆ. ಆಟದ ಮೇಲಿನ ಪ್ರೀತಿ, ಆಕರ್ಷಣೆ, ಬದ್ಧತೆ, ತಾಳ್ಮೆ, ಸ್ಥಿರತೆ, ಶಿಸ್ತು, ಏಕಾಗ್ರತೆ, ಕಲಿಯುವ ಹಂಬಲ, ಪ್ಲ್ಯಾನಿಂಗ್, ಟ್ಯಾಕ್ಟಿಕ್ಸ್, ಸ್ಟ್ರಾಟೆಜಿ ಹೀಗೆ ಕ್ರಿಕೆಟ್ ಆಟವನ್ನು ಪರಿಪೂರ್ಣವಾಗಿ ಪರವಶಮಾಡಿಕೊಂಡವರು ನಮ್ಮ ದಿ ವಾಲ್..

ಆದ್ರೆ ಒಬ್ಬ ಆಟಗಾರನಾಗಿ, ನಾಯಕನಾಗಿ ಅವರ ಕ್ರಿಕೆಟ್ ಬದುಕು ಪರಿಪೂರ್ಣತೆಯನ್ನು ಪಡೆದುಕೊಂಡಿರಲಿಲ್ಲ. ದಿ ಇಂಡಿಯನ್ ಗ್ರೇಟ್ ವಾಲ್, ಕ್ರಿಕೆಟ್ ಬುದ್ಧ.. ಅಪತ್ಭಾಂದವ..ಸೈಲೆಂಟ್ ಕಿಲ್ಲರ್ ಬಿರುದುಗಳು ಅವರ ಹೆಸರಿಗೆ ಅಂಟಿಕೊಂಡಿದ್ದವು. ಹಾಗೇ ನಿಧಾನಗತಿಯ ಬ್ಯಾಟಿಂಗ್‍ನಿಂದಾಗಿ ಹಲವಾರು ಟೀಕೆಗಳಿಗೂ ಗುರಿಯಾಗಿದ್ದರು. ಆದ್ರೆ ದ್ರಾವಿಡ್ ಯಾವತ್ತೂ ಯಾವುದಕ್ಕೂ ಉತ್ತರ ನೀಡುತ್ತಿರಲಿಲ್ಲ. ಬದಲಾಗಿ ತನ್ನ ಬ್ಯಾಟ್‍ನಿಂದಲೇ ಎಲ್ಲರ ಬಾಯಿ ಮುಚ್ಚಿಸುತ್ತಿದ್ದರು. ಇದು ದ್ರಾವಿಡ್ ಅವರ ಜಾಯಮಾನವಾಗಿತ್ತು. ಕ್ರಿಕೆಟ್ ಬದುಕಿನಲ್ಲಿ ಅಂದೂ.. ಇಂದೂ ರೂಢಿಸಿಕೊಂಡು ಬಂದಿರುವ ಪದ್ಧತಿಯೂ ಹೌದು.

ತಂಡಕ್ಕಾಗಿ ಸರ್ವಸ್ಸವನ್ನೇ ತ್ಯಾಗ ಮಾಡಿದ ತ್ಯಾಗಿ..!

1996ರಿಂದ 2012ರವರೆಗೆ ಟೀಮ್ ಇಂಡಿಯಾದ ಹಲವು ಐತಿಹಾಸಿಕ ಗೆಲುವಿನಲ್ಲಿ ರಾಹುಲ್ ದ್ರಾವಿಡ್ ಪ್ರಮುಖ ಪಾತ್ರ ವಹಿಸಿದವರು. ಅದು ಆಸ್ಟ್ರೇಲಿಯಾ ವಿರುದ್ಧದ ಈಡನ್ ಗಾರ್ಡನ್ ಟೆಸ್ಟ್ ಪಂದ್ಯದ ರಣರೋಚಕ ಟೆಸ್ಟ್ ಗೆಲುವು ಆಗಿರಬಹುದು, ಅಂತದ್ದೇ ಹತ್ತು ಹಲವು ಪಂದ್ಯಗಳಿರಬಹುದಯ; ಧೋನಿ ಟೀಮ್ ಇಂಡಿಯಾದೊಳಗೆ ಬರುವುದಕ್ಕಿಂತ ಮುನ್ನ ವಿಕೆಟ್ ಕೀಪರ್ ಜವಾಬ್ದಾರಿಯನ್ನು ನಿಭಾಯಿಸಿದವರು ನಮ್ಮ ರಾಹುಲ್. ಮಧ್ಯಮ ಕ್ರಮಾಂಕದಲ್ಲಿ ಟೀಮ್ ಇಂಡಿಯಾದ ಗೋಡೆಯೂ ಆಗಿದ್ದರು. ಹೀಗೆ ತಂಡದ ಹಿತಕ್ಕಾಗಿ ಒಂಚೂರು ಸ್ವಾರ್ಥವಿಲ್ಲದೆ ಸರ್ವಸ್ವವನ್ನು ತ್ಯಾಗ ಮಾಡಿದ್ದ ಕ್ರಿಕೆಟ್ ಜಗತ್ತಿನ ಬುದ್ಧ ನಮ್ಮ ರಾಹುಲ್ ದ್ರಾವಿಡ್.

ರಾಹುಲ್ ಮೂರು ವಿಶ್ವಕಪ್ ಟೂರ್ನಿಗಳನ್ನು ಆಡಿದ್ದಾರೆ. ಆಟಗಾರನಾಗಿ 1999ರ ವಿಶ್ವಕಪ್‍ನಲ್ಲೂ ನಿರಾಸೆ ಅನುಭವಿಸಿದ್ದರು. ಉಪನಾಯಕನಾಗಿ 2003ರ ವಿಶ್ವಕಪ್‍ನಲ್ಲಿ ಕೈಗೆ ಬಂದಿದ್ದ ಟ್ರೋಫಿ ಕೊನೆ ಹಂತದಲ್ಲಿ ಕೈಜಾರಿತ್ತು. ಇನ್ನೂ ನಾಯಕನಾಗಿ 2007ರ ವಿಶ್ವಕಪ್ ಟೂರ್ನಿಯನ್ನು ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಸಾಕಷ್ಟು ನಿರೀಕ್ಷೆಯನ್ನಿಟ್ಟುಕೊಂಡಿದ್ದ ರಾಹುಲ್ ಹುಡುಗರು ಲೀಗ್‍ನಲ್ಲಿ ಮುಖಭಂಗ ಅನುಭವಿಸಿದ್ದರು. ಹೀಗಾಗಿ ಸೋಲಿನ ಹೊಣೆ ಹೊತ್ತು ನಾಯಕತ್ವ ಸ್ಥಾನವನ್ನೇ ತ್ಯಜಿಸಿದ ತ್ಯಾಗ ಮೂರ್ತಿ ನಮ್ಮ ಜಾಮಿ.

ಅಷ್ಟೇ ಅಲ್ಲ, ಆಗಷ್ಟೇ ಪ್ರವರ್ಧಮಾನಕ್ಕೆ ಬಂದಿದ್ದ ಟಿ-20 ಕ್ರಿಕೆಟ್ ಯುವಕರ ಆಟ ಅಂತ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗೆ ಕಾರಣೀಕರ್ತರಾಗಿದ್ದು ಕೂಡ ರಾಹುಲ್ ದ್ರಾವಿಡ್. ಏಕದಿನ ವಿಶ್ವಕಪ್‍ನಲ್ಲಿ ಸೋತು ಸುಣ್ಣವಾಗಿದ್ದ ಟೀಮ್ ಇಂಡಿಯಾಗೆ ಭರವಸೆಯ ಬೆಳಕು ಮೂಡಿಸುವಂತೆ ಮಾಡಿದ್ದು ಕೂಡ ರಾಹುಲ್ ಅವರ ದೂರದೃಷ್ಟಿಯ ಯೋಚನೆ. ವೃತ್ತಿ ಬದುಕಿನ ಕೊನೆಯ ದಿನಗಳಲ್ಲಿ ರಾಹುಲ್ ದ್ರಾವಿಡ್ ಕೇವಲ ಟೆಸ್ಟ್ ಪಂದ್ಯಗಳಿಗೆ ಸೀಮಿತವಾಗಿದ್ದರು. ಹೀಗಾಗಿ 2011ರ ವಿಶ್ವಕಪ್ ಟೂರ್ನಿಯಲ್ಲೂ ರಾಹುಲ್‍ಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಆದ್ರೂ ರಾಹುಲ್ ಯಾವುದಕ್ಕೂ ತಲೆಕೆಡಿಸಿಕೊಳ್ಳಲಿಲ್ಲ. ದೂರದಿಂದಲೇ ಟೀಮ್ ಇಂಡಿಯಾದ ಐತಿಹಾಸಿಕ ಗೆಲುವನ್ನು ನೋಡಿ ಖುಷಿಪಟ್ಟಿದ್ದರು.

ಸಂಕಷ್ಟದ ಸನ್ನಿವೇಶದಲ್ಲಿ ಏಕಾಂಗಿಯಾಗಿ ನಿಂತು ಟೀಮ್ ಇಂಡಿಯಾದ ಮರ್ಯಾದೆ ಕಾಪಾಡಿದ್ದ ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿಐ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಶ್ವ ಕ್ರಿಕೆಟ್‍ನ ಮಹಾನ್ ಆಟಗಾರನಿಗೆ ಒಂದು ವಿದಾಯದ ಪಂದ್ಯವನ್ನು ಆಯೋಜನೆ ಮಾಡಲಿಲ್ಲ. ಸಚಿನ್, ಗಂಗೂಲಿ, ಅನಿಲ್ ಕುಂಬ್ಳೆಗೆ ಸಿಕ್ಕ ಗೌರವ ರಾಹುಲ್‍ಗೆ ಸಿಗಲೇ ಇಲ್ಲ. ಅಷ್ಟೇ ಯಾಕೆ, ಟೀಮ್ ಇಂಡಿಯಾ ಆಟಗಾರರು ಕೂಡ ಜಾಮಿಗೆ ಗೆಲುವಿನೊಂದಿಗೆ ವಿದಾಯ ಹೇಳಲಿಲ್ಲ. ಇಂಗ್ಲೆಂಡ್ ವಿರುದ್ಧ 2011ರಲ್ಲಿ ಟಿ-20 ಮತ್ತು ಏಕದಿನ ಪಂದ್ಯಗಳಿಗೆ ಸೋಲಿನೊಂದಿಗೆ ವಿದಾಯ ಹೇಳಿದ್ರು. ಹಾಗೇ ಆಸ್ಟ್ರೇಲಿಯಾ ವಿರುದ್ಧ 2012ರಲ್ಲಿ ಟೆಸ್ಟ್ ಕ್ರಿಕೆಟ್‍ಗೂ ಸೋಲಿನೊಂದಿಗೆ ತನ್ನ 16 ವರ್ಷಗಳ ಕ್ರಿಕೆಟ್ ಬದುಕಿಗೆ ಗುಡ್‍ಬೈ ಹೇಳಿದ್ರು.

ಚೆಂಡಿನಲ್ಲಿ ನೂಲಿನಂತೆ ಗೆರೆ ಎಳೆಯುವ ಕಲಾಕಾರ..!

ಅದೇನೇ ಇರಲಿ, ರಾಹುಲ್ ದ್ರಾವಿಡ್ ನೋಡೋಕೆ ಸೌಮ್ಯ ಸ್ವಭಾವದವರು. ಎಂದೂ ಕೂಡ ತಾಳ್ಮೆಯನ್ನು ಕಳೆದುಕೊಳ್ಳುವುದಿಲ್ಲ. ಒಂದು ವೇಳೆ ತಾಳ್ಮೆ ಕಳೆದುಕೊಂಡ್ರೆ ಮೈದಾನದಲ್ಲಿ ರೌದ್ರವತಾರದ ಇನ್ನೊಂದು ಮುಖವನ್ನು ನೋಡಿದ್ದೇವೆ. ಆದ್ರೆ ಇವತ್ತಿಗೂ ರಾಹುಲ್ ದ್ರಾವಿಡ್ ಅಂದ ತಕ್ಷಣ ಕಣ್ಣ ಮುಂದೆ ಬರೋದು ಅವರ ಕಲಾತ್ಮಕ ಶೈಲಿಯ ಬ್ಯಾಟಿಂಗ್ ವೈಖರಿ. ಅದು ಶೋಯಿಬ್ ಅಖ್ತರ್, ಬ್ರೇಟ್ ಲೀ ಸೇರಿದಂತೆ ಘಾತಕ ವೇಗಿಗಳ ಬೆಂಕಿ ಎಸೆತಗಳಿಗೆ ತಲೆ ತಗ್ಗಿಸಿ ತನ್ನ ಕಾಲ ಬುಡದಲ್ಲಿ ನಿಲ್ಲಿಸುವಂತಹ ಸಾಮಥ್ರ್ಯ ಇರೋ ಏಕೈಕ ವಿಶ್ವದ ಬ್ಯಾಟ್ಸ್‍ಮೆನ್ ಅಂದ್ರೆ ಅದು ರಾಹುಲ್ ದ್ರಾವಿಡ್. ಇನ್ನು, ದ್ರಾವಿಡ್ ಅವರ ಬ್ಯಾಟ್‍ನ ಸ್ಪರ್ಶಕ್ಕೆ ಚೆಂಡು ನೂಲಿನಲ್ಲಿ ಗೆರೆ ಎಳೆದಂತೆ ಬೌಂಡರಿ ಲೈನ್ ದಾಟುವುದನ್ನು ನೋಡುವುದೇ ಒಂದು ಚೆಂದ. ‘ನೋಡಲೆರಡು ಕಂಗಳು ಸಾಲದು’ ಅಂತರಲ್ಲ, ಹಾಗೇ ಮತ್ತೆ ಮತ್ತೆ ನೋಡಬೇಕು ಅನ್ನಿಸುವಂತಿರುವ ಕಲಾತ್ಮಕ ತಾಂತ್ರಕ ಪರಿಪೂರ್ಣತೆಯ ಬ್ಯಾಟಿಂಗ್ ವೈಖರಿ ನಮ್ಮ ರಾಹುಲ್ ಬಾಬಾರದ್ದು.

ಇದನ್ನೂ ಓದಿ: IND vs ZIM: ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡಲ್ಲಿ ದಿಢೀರ್​ ಬದಲಾವಣೆ ಮಾಡಿದ ಬಿಸಿಸಿಐ

ರಾಹುಲ್ ದ್ರಾವಿಡ್ ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಶಿಸ್ತು ಮತ್ತು ಬದ್ಧತೆ ಯುವ ಕ್ರಿಕೆಟಿಗರಿಗೆ ದಾರಿದೀಪ. ಅದಕ್ಕೆ ಸಾಕಷ್ಟು ನಿದರ್ಶನಗಳಿವೆ. ಅದರಲ್ಲಿ ಇದೊಂದು ಸಣ್ಣ ನಿದರ್ಶನ. ಒಂದು ಬಾರಿ ಕಾಲೇಜ್ ಕ್ಲಾಸ್ ರೂಂನಲ್ಲಿ ರಾಹುಲ್ ದ್ರಾವಿಡ್ ಕೈಗೆ ಗ್ಲೌಸ್ ಹಾಕೊಂಡು ಬರೆಯುತ್ತಿದ್ದರು. ದ್ರಾವಿಡ್ ಅವರ ವಿಚಿತ್ರ ವರ್ತನೆ ಗೆಳೆಯರಿಗೂ ಅಚ್ಚರಿಯನ್ನುಂಟು ಮಾಡಿತ್ತಂತೆ. ಆದ್ರೆ ಇದಕ್ಕೆ ಕಾರಣ ಕೇಳಿದಾಗ ಯಾರಿಗೂ ಕೂಡ ನಗುಬರಬಹುದು. ಯಾಕಂದ್ರೆ ಬ್ಯಾಟ್‍ನ ಗ್ರಿಪ್ ಪಡೆದುಕೊಳ್ಳಲು ದ್ರಾವಿಡ್ ಈ ತಂತ್ರವನ್ನು ಬಳಸುತ್ತಿದ್ದರಂತೆ. ಹೀಗೆ ದ್ರಾವಿಡ್ ಬಗ್ಗೆ ಹಲವಾರು ಸ್ವಾರಸ್ಯಕರವಾದ ಘಟನೆಗಳಿವೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ಮಹಾ ಗುರು ಆಗಿದ್ದೇಗೆ..?

ಇನ್ನು, ವೃತ್ತಿಪರ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ನಂತ್ರ ದ್ರಾವಿಡ್ ಸುಮ್ಮನೆ ಮನೆಯಲ್ಲಿ ಕೂರಲಿಲ್ಲ. ಮನಸು ಮಾಡಿದ್ರೆ ವೀಕ್ಷಕ ವಿವರಣೆಕಾರನಾಗಬಹುದಿತ್ತು.. ತನ್ನದೇ ಕ್ರಿಕೆಟ್ ಅಕಾಡೆಮಿ ಕೂಡ ಶುರು ಮಾಡಬಹುದಿತ್ತು. ಆದ್ರೆ ದ್ರಾವಿಡ್ ಉದ್ದೇಶವೇ ಬೇರೆ ಇತ್ತು. ದೇಶದ ಯುವ ಕ್ರಿಕೆಟಿಗರ ಪ್ರತಿಭೆಯನ್ನು ಬೆಳಕಿಗೆ ತರುವಂತಹ ದೂರದೃಷ್ಟಿಯನ್ನು ಹೊಂದಿದ್ದರು. ಬಲಿಷ್ಠ ಟೀಮ್ ಇಂಡಿಯಾ ಕಟ್ಟುವಂತಹ ಮಹೋನ್ನತ ಕಾರ್ಯಕ್ಕೆ ದ್ರಾವಿಡ್ ಮುಂದಾದ್ರು. ಅದಕ್ಕೆ ಪೂರಕವಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ನಿದೇರ್ಶಕನಾದ್ರು. ಬಳಿಕ 19 ವಯೋಮಿತಿ ತಂಡದ ಕೋಚ್ ಆಗಿ ವಿಶ್ವಕಪ್ ಕೂಡ ಗೆಲ್ಲಿಸಿಕೊಂಡು ಬಂದ್ರು. ಆದಾದ ನಂತ್ರ ಭಾರತ ಎ ತಂಡದ ಕೋಚ್ ಆಗಿ ಭವಿಷ್ಯದ ಟೀಮ್ ಇಂಡಿಯಾಗೆ ಫೌಂಡೇಶನ್ ಕಟ್ಟುವ ಕಾರ್ಯದಲ್ಲಿ ನಿರತರಾದ್ರು. ನಮ್ಮ ಕಣ್ಣ ಮುಂದೆ ಸಾಲು ಸಾಲಾಗಿ ಸಮರ್ಥ ಟೀಮ್ ಇಂಡಿಯಾದ ಯುವ ಪಡೆ ನಿಂತಿದೆ ಅಂದ್ರೆ ಅದಕ್ಕೆ ಮೂಲ ಕಾರಣ ಜಾಮಿ. ಯುವ ಆಟಗಾರರಿಗೆ ಶಿಸ್ತು, ಬದ್ಧತೆಯನ್ನು ಹೇಳಿಕೊಟ್ಟ ಹೆಡ್ ಮಾಸ್ಟರ್ ಕೂಡ ಹೌದು ರಾಹುಲ್.

ಸರಿಯಾಗಿ ಮೂರು ವರ್ಷಗಳ ಹಿಂದೆ ದ್ರಾವಿಡ್ ದ್ರಾವಿಡ್ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ನೇಮಕಗೊಂಡ್ರು. ಸುಮಾರು 9-10 ವರ್ಷಗಳ ನಂತ್ರ ಟೀಮ್ ಇಂಡಿಯಾದ ಗರ್ಭಗುಡಿಯೊಳಗೆ ಮಹಾಗುರುವಾಗಿ ಪ್ರವೇಶಿಸಿದ್ರು. ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮಾತ್ರ ದ್ರಾವಿಡ್ ಜೊತೆ ಆಡಿದ್ದರು. ಇನ್ನುಳಿದವರು ಅನುಭವ ಮಾಗದ ಎಳೆತನದ ಯುವ ಆಟಗಾರರು. ದ್ರಾವಿಡ್ ಎಂಟ್ರಿಯಾಗುತ್ತಿದ್ದಂತೆ ತಂಡದಲ್ಲಿ ಕೆಲವೊಂದು ಬದಲಾವಣೆಗಳು ಕೂಡ ಆಗಿದ್ದವು. ರೋಹಿತ್ ಶರ್ಮಾ ಹೆಗಲಿಗೆ ನಾಯಕತ್ವವೂ ಒಲಿದು ಬಂತು. ಹಾಗೇ ನಾಯಕನ ಜೊತೆ ಸೇರಿಕೊಂಡು ಮೂರು ವರ್ಷಗಳ ಪ್ಲ್ಯಾನ್ ಕೂಡ ರೆಡಿಯಾಗಿತ್ತು. ‘ಮಿಷನ್ ಐಸಿಸಿ ಟ್ರೋಫಿ’ ಗೆಲ್ಲಲು ಸೈನ್ಯ ಕಟ್ಟುವ ಕೆಲಸಕ್ಕೆ ಮುಂದಾದ್ರು. ಪ್ರತಿ ಸರಣಿಗಳಲ್ಲೂ ಪ್ರಯೋಗ ಮಾಡಿದ್ರು. ಯುವ ಆಟಗಾರರಿಗೆ ಅವಕಾಶಗಳನ್ನು ನೀಡಿದ್ರು. ಪ್ರತಿ ಆಟಗಾರನ ಸಾಮಥ್ರ್ಯವನ್ನು ಅರಿತುಕೊಂಡ್ರು. ಆದ್ರೆ 2023ರ ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್ ಮತ್ತು ಏಕದಿನ ವಿಶ್ವಕಪ್ ಫೈನಲ್‍ನಲ್ಲಿ ಸೋತಾಗ ಮಂಕಾಗಿದ್ದು ನಿಜ. ಆದ್ರೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳಲಿಲ್ಲ. ಮಾನಸಿಕವಾಗಿ ಕುಗ್ಗಿ ಹೋಗಿದ್ದ ಆಟಗಾರರ ಮನಸ್ಥಿತಿಯನ್ನು ಅರಿತುಕೊಂಡು ಮತ್ತೆ ಪ್ರೇರಣೆ ನೀಡಿದ್ದು ಕೂಡ ಮಹಾ ಗುರು ರಾಹುಲ್ ದ್ರಾವಿಡ್.

ಮಿಷನ್ ಟಿ-20 ವಿಶ್ವಕಪ್ -2024 ಕಂಪ್ಲೀಟ್…

ಹಾಗೇ ನೋಡಿದ್ರೆ 2024ರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆದ್ದೇ ಗೆಲ್ಲುತ್ತೆ ಅನ್ನೋ ನಂಬಿಕೆ ಬಹುತೇಕ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಇರಲಿಲ್ಲ. ಯಾಕಂದ್ರೆ 13 ವರ್ಷಗಳಿಂದ ಟೀಮ್ ಇಂಡಿಯಾ ಆಟಗಾರರು ಸತತವಾಗಿ ತಮ್ಮ ಮೇಲಿಟ್ಟಿದ್ದ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದರು. ಹೀಗಾಗಿ ಫೈನಲ್‍ಗೆ ಬರಬಹುದು ಎಂಬ ಲೆಕ್ಕಾಚಾರವಂತೂ ಇದ್ದೇ ಇತ್ತು. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ನೆಲದಲ್ಲಿ ದ್ರಾವಿಡ್ ಶಿಷ್ಯಂದಿರು ನಿರೀಕ್ಷಿತ ಪ್ರದರ್ಶನವನ್ನೇ ನೀಡಿದ್ರು. ಟೀಮ್ ಇಂಡಿಯಾ ಆಡಿರುವ ಎಂಟು ಪಂದ್ಯಗಳ ಗೆಲುವನ್ನು ನೋಡಿದಾಗ ದಶಕಗಳ ಹಿಂದಿನ ಸ್ಟೀವ್ ವಾ, ಪಾಟಿಂಗ್ ನಾಯಕತ್ವದ ಆಸ್ಟ್ರೇಲಿಯಾ ತಂಡವನ್ನು ನೆನಪಿಸುವಂತಿತ್ತು. ಯಾಕಂದ್ರೆ, ದ್ರಾವಿಡ್ ಶಿಷ್ಯಂದಿರು ಎಲ್ಲೂ ಕೂಡ ‘ಶೃತಿ’ ತಪ್ಪಲಿಲ್ಲ. ಬ್ಯಾಟರ್‍ಗಳು ‘ತಾಳ‘ ತಪ್ಪಿದಾಗ ಬೌಲರ್‍ಗಳು ‘ವೀಣೆ’ ನುಡಿಸುವಂತೆ ಬೌಲಿಂಗ್ ಮಾಡುತ್ತಾ ಗೆಲುವಿನ ದಡ ಸೇರಿಸುತ್ತಿದ್ದರು. ಹಾಗೇ ಬೌಲರ್‍ಗಳು ‘ಲಯ‘ ತಪ್ಪಿದಾಗ ಬ್ಯಾಟರ್‍ಗಳು ‘ಡ್ರಮ್ಸ್‘ ಬಾರಿಸುವಂತೆ ಅಂಗಣದಲ್ಲಿ ದರ್ಬಾರು ಮಾಡಿ ಅಭಿಮಾನಿಗಳಿಗೆ ‘ರಸಮಂಜರಿ’ಯ ಮನರಂಜನೆಯನ್ನು ನೀಡುತ್ತಿದ್ದರು. ಇತ್ತ ಡಕೌಟ್‍ನಲ್ಲಿ ನಿರ್ದೇಶಕ/ ಮಹಾ ಗುರು ರಾಹುಲ್ ದ್ರಾವಿಡ್ ಆಚಾರ್ಯನಂತೆ ಶಿಷ್ಯಂದಿರ ಸಾಧನೆಯನ್ನು ಮನದೊಳಗೆ ಖುಷಿಪಟ್ಟು ಹೆಮ್ಮೆಯಿಂದ ಬೀಗುತ್ತಿದ್ದರು. ಅಷ್ಟೇ ಅಲ್ಲ, ರೋಹಿತ್ ಹುಡುಗರು ಟ್ರೋಫಿ ಸ್ವೀಕರಿಸುವಾಗ ತೆರೆಮರೆಯಲ್ಲಿ ನೋಡುತ್ತಿದ್ದ ದ್ರಾವಿಡ್ ಮುಖದಲ್ಲಿ ಮಿಷನ್ ಟಿ-20 ವಿಶ್ವಕಪ್ ಕಂಪ್ಲೀಟ್ ಮಾಡಿದ ಸಾರ್ಥಕತೆ ಎದ್ದುಕಾಣುತ್ತಿತ್ತು.

ಮತ್ತೆ ಕ್ರಿಕೆಟ್ ಬುದ್ಧ ನಕ್ಕಾಗ… ನಕ್ಕು ನಲಿದಾಡಿದಾಗ…ನಾ ಸೋತು ಹೋದೆ..!

ಹೌದು, ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಸೋತಾಗ ಕಣ್ಣೀರು ಹಾಕಿದ್ದಾರೆ. ವೇದನೆ ಅನುಭವಿಸಿದ್ದಾರೆ. ಹಾಗೇ, ಟೀಮ್ ಇಂಡಿಯಾ ಗೆದ್ದಾಗಲೂ ಸಂಭ್ರಮಪಟ್ಟಿದ್ದಾರೆ. ಆದ್ರೆ ಗೆದ್ದಾಗ ಕಣ್ಣೀರು ಹಾಕಿದ್ದು ಇದೇ ಮೊದಲು.. ಜೊತೆಗೆ ಈ ಪರಿ ಸಂಭ್ರಮಪಟ್ಟಿದ್ದು ಇದೇ ಮೊದಲ ಸಲ. ಈ ರೀತಿ ದ್ರಾವಿಡ್ ಯಾವತ್ತೂ ಸಂಭ್ರಮಪಟ್ಟಿರುವುದನ್ನು ಯಾರು ಕೂಡ ನೋಡಿರಲಿಲ್ಲ. ಯಾಕಂದ್ರೆ ತನಗೆ ಗಗನ ಕುಸುಮವಾಗಿದ್ದ ಐಸಿಸಿ ವಿಶ್ವಕಪ್ ಟ್ರೋಫಿಯನ್ನು ತನ್ನ ಶಿಷ್ಯಂದಿರ ಮೂಲಕ ಪಡೆದುಕೊಂಡು ತನ್ನ ಕ್ರಿಕೆಟ್ ಬದುಕನ್ನು ಸಾರ್ಥಕವನ್ನಾಗಿಸಿಕೊಂಡ ಸಂತೃಪ್ತಿ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ರೋಹಿತ್, ವಿರಾಟ್, ಜಡೇಜಾ ಅವರ ಕಣ್ಣೇದುರೇ ಸೋಲಿನೊಂದಿಗೆ ವಿದಾಯ ಹೇಳಿದ್ದ ದ್ರಾವಿಡ್‍ಗೆ ವಿಶ್ವಕಪ್ ಗೆಲ್ಲುವ ಮೂಲಕ ಮಹಾ ಗುರುವಿಗೆ ಅರ್ಥಪೂರ್ಣ ವಿದಾಯ ಹೇಳುವಂತೆ ಮಾಡಿದವರು ಇದೇ ಕೋಹ್ಲಿ, ಶರ್ಮಾ & ಜಡೇಜಾ.. ಅಷ್ಟೇ ಅಲ್ಲ, ಟೀಮ್ ಇಂಡಿಯಾ ಹುಡುಗರು ದ್ರಾವಿಡ್‍ಗೆ ಟಿ-20 ವಿಶ್ವಕಪ್ ಟ್ರೋಫಿಯನ್ನೇ ಗುರು ಕಾಣಿಕೆಯನ್ನಾಗಿ ನೀಡಿದ್ರು. ಅಲ್ಲದೆ ವಿರಾಟ್, ರೋಹಿತ್ ಸೇರಿದಂತೆ ಟೀಮ್ ಇಂಡಿಯಾ ಹುಡುಗರು ಗುರು ಎಂಬುದನ್ನು ಮರೆತು ದ್ರಾವಿಡ್ ಅವರನ್ನು ಮಗುವಿನಂತೆ ಮೇಲಕ್ಕೆತ್ತಿ ಕೊಂಡಾಟ ಮಾಡಿ ಸಂಭ್ರಮಿಸಿದ ಕ್ಷಣವನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ. ಹಾಗೇ ರೋಹಿತ್ ಮತ್ತು ವಿರಾಟ್‍ನನ್ನು ದ್ರಾವಿಡ್ ತಬ್ಬಿಕೊಂಡು ಮುದ್ದಾಡುತ್ತಿದ್ದ ದೃಶ್ಯವನ್ನು ಯಶಸ್ವಿ ಜೈಸ್ವಾಲ್ ಪುಟ್ಟ ಮಗುವಿನಂತೆ ನೋಡುತ್ತಿದ್ದ ದೃಶ್ಯವಂತೂ ಕಣ್ಣಿಗೆ ಕಟ್ಟುವಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿ ವಿಶ್ವಕಪ್ ಟ್ರೋಫಿಯನ್ನು ದ್ರಾವಿಡ್ ಕೈಗಿಟ್ಟಾಗ ಭಾವೋದ್ರಿಕ್ತರಾಗಿ ಒಂದು ಕ್ಷಣ ಸುಮ್ಮನಿದ್ದ ದ್ರಾವಿಡ್, ಏಕಾಏಕಿ ಟ್ರೋಪಿಯನ್ನು ಮೇಲಕ್ಕೆತ್ತಿ ಸಂಭ್ರಮಿಸಿದ ರೀತಿಯನ್ನು ವರ್ಣಿಸಲು ಅಸಾಧ್ಯ. ಟ್ರೋಫಿಯೊಂದಿಗೆ ಮನ ತಣಿಸುವಷ್ಟು ಜಾಮಿ ಸಂಭ್ರಮಿಸಿ, ಕುಣಿದಾಡಿದ್ರು. ಎರಡು ದಶಕಗಳ ನೋವುಗಳನ್ನು ಕೇವಲ ಎರಡು ನಿಮಿಷಗಳಲ್ಲಿ ಮರೆಮಾಚುವಂತೆ ಮಾಡಿ ನಾಚಿ ನೀರಾದ್ರು.

ಒಟ್ಟಿನಲ್ಲಿ ಐಸಿಸಿ ಟಿ-20 ವಿಶ್ವಕಪ್ ಟ್ರೋಫಿ ದ್ರಾವಿಡ್ ಕೈಗೆ ಸ್ಪರ್ಶಿಸುತ್ತಿದ್ದಂತೆ ಎಲ್ಲ ನೋವು , ಬೇಸರ, ವೇದನೆ ಮಾಯವಾಗಿ ಅಲ್ಲಿ ತುಂಬಿಕೊಂಡಿದ್ದು ಬರೀ ಸಂಭ್ರಮ..ಸಡಗರ.. ಭಾವೋದ್ವೇಗ, ಆನಂದಭಾಷ್ಟ.. ಆ ಭಾವುಕ ದೃಶ್ಯಗಳನ್ನು ನೋಡಿದ ಕೋಟ್ಯಾನುಕೋಟಿ ಅಭಿಮಾನಿಗಳ ಹೃನ್ಮನ ತುಂಬಿ ಬಂದಿದೆ. ನನ್ನಲ್ಲೂ ಅರಿವಿಲ್ಲದೇ ಭಾವೋದ್ವೇಗದಿಂದ ಕಣ್ಣೀರಧಾರೆ.. ಅರೇ ಕ್ಷಣ ನನ್ನನ್ನೇ ಮರೆತಂಗೆ ಶೂನ್ಯ ಭಾವ… ಕೊನೆಗೂ ನಾನು ದ್ರಾವಿಡ್‍ನ ಅಪ್ಪಟ ಅಭಿಮಾನಿಯಾದೆ.. ಸಲಾಂ ಜಾಮಿ ಭಾಯ್!

Continue Reading

ಕ್ರೀಡೆ

IND vs ZIM: ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡಲ್ಲಿ ದಿಢೀರ್​ ಬದಲಾವಣೆ ಮಾಡಿದ ಬಿಸಿಸಿಐ

IND vs ZIM: ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

VISTARANEWS.COM


on

IND vs ZIM
Koo

ಮುಂಬಯಿ: ಜುಲೈ 6 ರಿಂದ ಆರಂಭಗೊಳ್ಳಲಿರುವ ಜಿಂಬಾಬ್ವೆ (IND vs ZIM) ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಈಗಾಗಲೇ ಭಾರತ ತಂಡ ಪ್ರಕಟಗೊಂಡಿದೆ. ಶುಭಮನ್​ ಗಿಲ್​ ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಅಂತಿಮ ಕ್ಷಣದಲ್ಲಿ ಬಿಸಿಸಿಐ ತಂಡದಲ್ಲಿ ಮೂರು ಬದಲಾವಣೆ ಮಾಡಿದೆ.

ಚಂಡಮಾರುತದಿಂದ ಬಾರ್ಬಡೋಸ್‌ನಲ್ಲಿ ಸಿಲುಕಿರುವ ಟಿ20 ವಿಶ್ವಕಪ್​ ತಂಡದ ಭಾಗವಾಗಿದ್ದ, ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಸಾಯಿ ಸುದರ್ಶನ್(Sai Sudharsan), ಜಿತೇಶ್ ಶರ್ಮಾ(Jitesh Sharma) ಮತ್ತು ಹರ್ಷಿತ್ ರಾಣಾ(Harshit Rana) ಅವರನ್ನು ಮೊದಲ ಎರಡು ಪಂದ್ಯಗಳಿಗಾಗಿ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಪರಿಷ್ಕೃತ ತಂಡವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪ್ರಕಟಿಸಿದೆ.

ಹರ್ಷಿತ್ ರಾಣಾ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ಮೂಲಕ ಒಟ್ಟು 19 ವಿಕೆಟ್​ ಕಿತ್ತು ಮಿಂಚಿದ್ದರು. ಮಾಯಾಂಕ್​ ಅಗರ್ವಾಲ್​ ವಿಕೆಟ್​ ಕಿತ್ತು ದುರ್ವರ್ತನೆ ತೋರಿದ ಕಾರಣಕ್ಕೆ ದಂಡ ಮತ್ತು ಒಂದು ಪಂದ್ಯದ ನಿಷೇಧ ಶಿಕ್ಷೆ ಕೂಡ ಎದುರಿಸಿದ್ದರು.

ಮೊದಲ 2 ಪಂದ್ಯಕ್ಕೆ ಪರಿಷ್ಕೃತ ತಂಡ


ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ಇದನ್ನೂ ಓದಿ Team India : ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ, ಶುಭ್​ಮನ್ ಗಿಲ್​ಗೆ ನಾಯಕತ್ವ

5 ಪಂದ್ಯಗಳ ಟಿ20 ಸರಣಿ ಇದಾಗಿದ್ದು, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ರಿಯಾನ್ ಪರಾಗ್ 2024 ರ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಫಲಿತಾಂಶವಾಗಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಪಂದ್ಯಗಳನ್ನಾಡಲಿದ್ದಾರೆ. ಪರಾಗ್ ಅಸ್ಸಾಂ ನಿಂದ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಮೊದಲ ಕ್ರೀಡಾಪಟುವಾಗಿದ್ದಾರೆ.

ವೇಳಾಪಟ್ಟಿ: ಭಾರತದ ಜಿಂಬಾಬ್ವೆ ಪ್ರವಾಸ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading

ಕ್ರೀಡೆ

AR Rahman: ಹಾಡಿನ ಮೂಲಕ ಟೀಮ್​ ಇಂಡಿಯಾಕ್ಕೆ ‘ಜೈ ಹೋ’ ಎಂದ ಎಆರ್ ರೆಹಮಾನ್

AR Rahman: ಭಾರತೀಯ ಫುಟ್ಬಾಲ್ ಕೋಚ್ ಸೈಯದ್ ಅಬ್ದುಲ್ ರಹೀಮ್ ಅವರ ಜೀವನವನ್ನು ಆಧರಿಸಿದ ಅಜಯ್ ದೇವಗನ್ ಅವರ ‘ಮೈದಾನ್’ ಸಿನೆಮಾದ ‘ಟೀಮ್ ಇಂಡಿಯಾ ಹೈ ಹಮ್’ ಎಂಬ ಹಾಡನ್ನು ಹಾಡುವ ಮೂಲಕ ಟಿ20 ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಎಆರ್ ರೆಹಮಾನ್ ಅಭಿನಂಧಿಸಿದ್ದಾರೆ.

VISTARANEWS.COM


on

AR Rahman
Koo

ಮುಂಬಯಿ: ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29, ಶನಿವಾರ ರಾತ್ರಿ ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು. ಈ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎಆರ್ ರೆಹಮಾನ್(AR Rahman) ವಿಶೇಷ ಹಾಡೊಂದರ ಮೂಲಕ ಅಭಿನಂಧಿಸಿದ್ದಾರೆ.

‘ಟೀಮ್ ಇಂಡಿಯಾ ಹೈ ಹಮ್’ ಎಂಬ ಶೀರ್ಷಿಕೆಯ ಹಾಡೊಂದನ್ನು ಹಾಡುವ ಮೂಲಕ ವಿಶ್ವಕಪ್​ ಗೆದ್ದ ತಂಡಕ್ಕೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊ ಸಾಂಗ್​ ಸದ್ಯ ಸಾಮಾಜಿಕ ಕಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಹಾಡಿನ ಲಿಂಕ್​ ಅನ್ನು ಎಆರ್ ರೆಹಮಾನ್ ಅವರು ತಮ್ಮ ಅಧಿಕೃತ ಟ್ವೀಟರ್​ ಎಕ್ಸ್​ ಮತ್ತು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ರೆಹಮಾನ್ ಅವರು ತಮ್ಮ ಮಹಾಕಾವ್ಯವನ್ನು ವಿಶ್ವಕಪ್ ವಿಜಯದ ಸಲುವಾಗಿ ಮೆನ್ ಇನ್ ಬ್ಲೂಗೆ ಅರ್ಪಿಸಿದರು. ವೀಡಿಯೊದಲ್ಲಿ, ಭಾರತೀಯ ಫುಟ್ಬಾಲ್ ಕೋಚ್ ಸೈಯದ್ ಅಬ್ದುಲ್ ರಹೀಮ್ ಅವರ ಜೀವನವನ್ನು ಆಧರಿಸಿದ ಅಜಯ್ ದೇವಗನ್ ಅವರ ‘ಮೈದಾನ್’ ಸಿನೆಮಾದ ‘ಟೀಮ್ ಇಂಡಿಯಾ ಹೈ ಹಮ್’ ಹಾಡು ಹಾಡುತ್ತಿರುವುದನ್ನು ಕಾಣಬಹುದು. ಮೂಲ ಹಾಡನ್ನು ಎಆರ್ ರೆಹಮಾನ್ ಮತ್ತು ನಕುಲ್ ಅಭ್ಯಂಕರ್ ಹಾಡಿದ್ದಾರೆ.


ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಇದನ್ನೂ ಓದಿ Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

ಒಂದು ಪಂದ್ಯ – ಹಲವು ಪಾಠ!

ಭಾರತ ಟಿ 20 ವಿಶ್ವಕಪ್ಪನ್ನು ಅರ್ಹವಾಗಿ ಗೆದ್ದು ಬೀಗಿತು, ವಿರಾಟ್ ಕೊಹ್ಲಿ (Virat Kohli) ಮತ್ತು ರಾಹುಲ್ ದ್ರಾವಿಡ್ (Rahul Dravid) ಅವರಿಗೆ ಗೆಲುವಿನ ವಿದಾಯ ನೀಡಿತು, ರೋಹಿತ್ ಶರ್ಮಾ ತನ್ನ ಮೊದಲ ಐಸಿಸಿ ಟ್ರೋಫಿ ಲಿಫ್ಟ್ ಮಾಡಿದರು ಅನ್ನುವುದು ಮುಂದಿನ ಇತಿಹಾಸದ ಭಾಗ. ತಾಳ್ಮೆಯಿಂದ ನರಗಳನ್ನು ಬಿಗಿ ಹಿಡಿದು ಆಡಿದರೆ ಯಾವ ಪಂದ್ಯವನ್ನೂ ಗೆಲ್ಲಲು ಸಾಧ್ಯ ಎನ್ನುವುದು ಕ್ರಿಕೆಟ್ ಕಲಿಸಿದ ಜೀವನದ ಪಾಠ. ಕ್ಲಾಸೆನ್ ಮತ್ತು ಕ್ಲಿಂಟನ್ ಡಿಕಾಕ್ ಅವರು ಕ್ರೀಸಿನಲ್ಲಿ ಗಟ್ಟಿ ನಿಂತು ಆಡುತ್ತಿದ್ದಾಗ ದಕ್ಷಿಣ ಆಫ್ರಿಕಾ ಗೆದ್ದೇ ಬಿಟ್ಟಿತು ಎಂದು ಭಾವಿಸಿಕೊಂಡು ಟಿವಿ ಆಫ್ ಮಾಡಿ ಮಲಗಿದವರಿಗೆ ಇದು Life Time Lesson!

ಐಪಿಎಲ್ ಪಂದ್ಯಗಳ ಉದ್ದಕ್ಕೂ ಬಾಸುಂಡೆ ಬರುವ ಹಾಗೆ ಹೊಡೆಸಿಕೊಂಡಿದ್ದ ಭಾರತದ ಬೌಲರಗಳಿಗೆ ಈ ವಿಶ್ವಕಪ್ ಸ್ಟಾರ್ ವ್ಯಾಲ್ಯೂ ಕೊಟ್ಟಿತು ಅನ್ನುವುದು ಭರತವಾಕ್ಯ.

Continue Reading
Advertisement
Narendra Modi
ದೇಶ1 min ago

Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Printed Handbags Fashion
ಫ್ಯಾಷನ್18 mins ago

Printed Handbags Fashion: ಉದ್ಯೋಗಸ್ಥ ಮಹಿಳೆಯರನ್ನು ಸೆಳೆಯುತ್ತಿರುವ ಪ್ರಿಂಟೆಡ್‌ ಹ್ಯಾಂಡ್‌ ಬ್ಯಾಗ್ಸ್

Bomb Blast
ಕರ್ನಾಟಕ23 mins ago

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Pune Porsche Crash
ಪ್ರಮುಖ ಸುದ್ದಿ24 mins ago

Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

K Annamalai
ರಾಜಕೀಯ32 mins ago

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

karnataka weather Forecast
ಮಳೆ35 mins ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Snake Bites
ವೈರಲ್ ನ್ಯೂಸ್39 mins ago

Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Uttar Pradesh Stampede
ದೇಶ1 hour ago

Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Valmiki Development Corporation Scam Opposition party leader R Ashok has demanded that CM Siddaramaiah should resign
ಕರ್ನಾಟಕ1 hour ago

R Ashok: ಲೂಟಿಯಾದ ದಲಿತರ ಹಣವನ್ನು ಸಿದ್ದರಾಮಯ್ಯ ಜೇಬಿನಿಂದ ಕೊಡ್ತಾರಾ? ಆರ್‌. ಅಶೋಕ್‌ ಪ್ರಶ್ನೆ

Actor Darshan
ಸಿನಿಮಾ1 hour ago

Actor Darshan: ದರ್ಶನ್ ಭೇಟಿ ಮಾಡಿದ ಪವಿತ್ರಾ ಗೌಡ ಆಪ್ತೆ; ನಟ ಧನ್ವೀರ್‌ಗೆ ಸಿಗದ ಅವಕಾಶ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ35 mins ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌