Uttara Kannada News: ಉ.ಕ. ಜಿಲ್ಲೆಯಲ್ಲಿ ಮುಂದುವರಿದ ವರುಣನ ಆರ್ಭಟ; ನದಿತೀರದ ಮನೆಗಳಿಗೆ ನುಗ್ಗುತ್ತಿರುವ ನೀರು - Vistara News

ಉತ್ತರ ಕನ್ನಡ

Uttara Kannada News: ಉ.ಕ. ಜಿಲ್ಲೆಯಲ್ಲಿ ಮುಂದುವರಿದ ವರುಣನ ಆರ್ಭಟ; ನದಿತೀರದ ಮನೆಗಳಿಗೆ ನುಗ್ಗುತ್ತಿರುವ ನೀರು

Uttara Kannada News: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಗಂಗಾವಳಿ ನದಿ‌ ಮೈದುಂಬಿ ಹರಿಯುತ್ತಿರುವ ಪರಿಣಾಮ ಅಂಕೋಲಾ ಭಾಗದ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಲಾರಂಭಿಸಿದೆ. ಧಾರಾಕಾರ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನಲೆ ಡಿಸಿ ಪ್ರಭುಲಿಂಗ ಕವಳಿಕಟ್ಟಿ ಜು.25 ರಂದು ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

VISTARANEWS.COM


on

In Bilihonygi village, the locals are transporting goods by boats as water has entered the houses due to flood of Gangavali river
ಬಿಳಿಹೋಂಯ್ಗಿ ಗ್ರಾಮದಲ್ಲಿ ಗಂಗಾವಳಿ ನದಿ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗಿರುವುದರಿಂದ ಸ್ಥಳೀಯರು ಬೋಟುಗಳ ಮೂಲಕ ವಸ್ತುಗಳನ್ನು ಸಾಗಿಸುತ್ತಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ (Heavy rain) ಮುಂದುವರಿದಿದ್ದು, ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿರುವ ಹಿನ್ನಲೆ ಗಂಗಾವಳಿ ನದಿ‌ (Gangavali river) ಮೈದುಂಬಿ ಹರಿಯುತ್ತಿರುವ ಪರಿಣಾಮ ಅಂಕೋಲಾ (Ankola) ಭಾಗದ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಲಾರಂಭಿಸಿದೆ.

ಭಾನುವಾರ ಸಂಜೆಯಿಂದಲೂ ಸಹ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಜನರು ಭಯದಲ್ಲಿಯೇ ದಿನ‌ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಕೆಲ‌ ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಅದರಲ್ಲೂ ಗಂಗಾವಳಿ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು ನದಿತೀರದ ಮನೆಗಳಿಗೆ ನೀರು ನುಗ್ಗಲಾರಂಭಿಸಿದೆ.

ಇದನ್ನೂ ಓದಿ: ISRO Launch: ಜುಲೈ 30ಕ್ಕೆ 6 ಸಹ ಪ್ರಯಾಣಿಕರ ಸಹಿತ ಉಪಗ್ರಹ ಲಾಂಚ್ ಮಾಡಲಿದೆ ಇಸ್ರೋ!

ಬಿಳಿಹೊಂಯ್ಗಿಯಲ್ಲಿ ಪ್ರವಾಹ ಭೀತಿ

ಗಂಗಾವಳಿ ಸಮೀಪವೇ ಇರುವ ಅಂಕೋಲಾ ತಾಲೂಕಿನ ಬಿಳಿಹೊಂಯ್ಗಿ ಗ್ರಾಮದಲ್ಲಿ ರಸ್ತೆ ಸಂಪೂರ್ಣ ಮುಳುಗಡೆಯಾಗಿದ್ದು, ಸುಮಾರು 20ಕ್ಕೂ ಅಧಿಕ ಮನೆಗಳ ಅಂಗಳಕ್ಕೆ ನೀರು ಬಂದಿದೆ. ಅಲ್ಲದೇ ಕೆಲ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನ ಪರದಾಡುವಂತಾಗಿದೆ. ಈ ಭಾಗದಲ್ಲಿ ಕಳೆದ 4 ವರ್ಷಗಳಿಂದ ನಿರಂತರವಾಗಿ ಪ್ರವಾಹ ಎದುರಾಗುತ್ತಿರುವ ಕಾರಣ ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಗಂಗಾವಳಿ ನದಿ ಸಮೀಪದ ದಂಡೆಭಾಗದಲ್ಲಿ ಖಾರ್ಲ್ಯಾಂಡ್ ಒಡ್ಡು ಒಡೆದ ಪರಿಣಾಮ ಬಿಳಿಹೊಂಯ್ಗಿ ಗ್ರಾಮದಲ್ಲಿ ನಿರಂತರ ನೆರೆ ಹಾವಳಿ ಸೃಷ್ಟಿಯಾಗುವಂತಾಗಿದೆ. ಕೂಡಲೇ ಖಾರ್ಲ್ಯಾಂಡ್ ಸರಿಪಡಿಸಿ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಗಂಗಾವಳಿ ನದಿ ಪಾತ್ರದ ಗ್ರಾಮಗಳ ಮನೆ ಹಾಗೂ ತೋಟಗಳು ಜಲಾವೃತವಾಗಿರುವುದು.

ಅಗತ್ಯ ವಸ್ತುಗಳ ಸ್ಥಳಾಂತರಕ್ಕೆ ಮುಂದಾದ ನಿವಾಸಿಗಳು

ನಿರಂತರವಾಗಿ ನೆರೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನರು ಕೂಡ ಮನೆಯಲ್ಲಿನ ಅಕ್ಕಿ, ಬಟ್ಟೆ, ಬಂಗಾರ ಸೇರಿದಂತೆ ಅತ್ಯಗತ್ಯ ವಸ್ತುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡುತ್ತಿದ್ದಾರೆ. ಜತೆಗೆ ನೀರು ಹೆಚ್ಚಾದಲ್ಲಿ ಮನೆಯ ಇನ್ನುಳಿದ ವಸ್ತುಗಳನ್ನೂ ಸಾಗಾಟ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ. ಮನೆಗಳ ಸುತ್ತ ನೀರು ನಿಂತಿರುವ ಹಿನ್ನಲೆ ಬೋಟುಗಳ ಮೂಲಕವೇ ವಸ್ತುಗಳನ್ನು ಸಾಗಿಸಬೇಕಾಗಿದೆ. ಸದ್ಯ ನೀರಿನ ಪ್ರಮಾಣ ಕಡಿಮೆಯಿದ್ದು, ನೀರು ಹೆಚ್ಚಾದಲ್ಲಿ ಮಾತ್ರ ಕಾಳಜಿ ಕೇಂದ್ರಕ್ಕೆ ತೆರಳುವುದಾಗಿ ನಿವಾಸಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Lakshmi Hebbalkar : ಗೃಹಲಕ್ಷ್ಮಿ ನೋಂದಣಿಗೆ ದುಡ್ಡು ಪಡೆದರೆ, ಅಸಡ್ಡೆ ತೋರಿದರೆ ಕ್ರಿಮಿನಲ್ ಕೇಸ್‌: ಹೆಬ್ಬಾಳ್ಕರ್‌ ವಾರ್ನಿಂಗ್

ತುರ್ತು ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ

ನೆರೆ ಪ್ರದೇಶದಲ್ಲಿ ಇಲ್ಲಿನ ಹೊನ್ನೇಬೈಲ್ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಸಿಬ್ಬಂದಿ ನೀರು ನುಗ್ಗುವ ಆತಂಕವಿರುವ ಮನೆಗಳಿಗೆ ತೆರಳಿ ಕಾಳಜಿ ಕೇಂದ್ರಕ್ಕೆ ತೆರಳುವಂತೆ ತಿಳಿಸುತ್ತಿದ್ದಾರೆ. ಸಮೀಪದ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನೆರೆ ಹೆಚ್ಚಾದಲ್ಲಿ ಜನರನ್ನು ಸ್ಥಳಾಂತರ ಮಾಡಲು ದೋಣಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯತ್ ಕಾರ್ಯದರ್ಶಿ ಗಣಪತಿ ನಾಯ್ಕ ತಿಳಿಸಿದ್ದಾರೆ.

ಗಂಗಾವಳಿ ಸಮೀಪವೇ ಇರುವ ಅಂಕೋಲಾ ತಾಲೂಕಿನ ಬಿಳಿಹೊಂಯ್ಗಿ ಗ್ರಾಮದಲ್ಲಿ ರಸ್ತೆ ಸಂಪೂರ್ಣ ಮುಳುಗಡೆಯಾಗಿರುವುದು.

ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವು

ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹೊನ್ನಾವರದ ರಾಮತೀರ್ಥದಲ್ಲಿ ನಡೆದಿದೆ. ಪಟ್ಟಣದ ರಾಯಲಕೇರಿ ನಿವಾಸಿಯಾಗಿದ್ದ ಮಣಿಕಂಠ ಮಂಜುನಾಥ ನಾಯ್ಕ(17) ಮೃತ ದುರ್ದೈವಿಯಾಗಿದ್ದಾನೆ. ಪಟ್ಟಣದ ಮೋಹನ ಕೆ ಶೆಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ಮಣಿಕಂಠ ಸೋಮವಾರ ಮಳೆ ಹಿನ್ನಲೆ ಕಾಲೇಜಿಗೆ ರಜೆ ಇದ್ದಿದ್ದರಿಂದ ಈಜಲು ರಾಮತೀರ್ಥಕ್ಕೆ ತೆರಳಿದ್ದ. ನೀರಲ್ಲಿ ಈಜುತ್ತಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದು ಸ್ಥಳೀಯರ ಸಹಾಯದಿಂದ ಪೊಲೀಸರು ಶವವನ್ನು ಮೇಲಕ್ಕೆತ್ತಿ, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Diamond Cross 11: ಸದ್ಯದಲ್ಲೇ ತೆರೆಗೆ ಬರಲಿದೆ ಡೈಮಂಡ್ ಕ್ರಾಸ್ 11 ಸಿನಿಮಾ

ಜು.25 ರಂದು ರಜೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ

ಉತ್ತರಕನ್ನಡ ಜಿಲ್ಲೆಯಲ್ಲಿ ಮಂಗಳವಾರವೂ ಧಾರಾಕಾರ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನಲೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಜುಲೈ 25 ರಂದು ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಜುಲೈ 25 ರಂದು ಉತ್ತರಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ರೆಡ್ ಅಲರ್ಟ್ ನೀಡಿದೆ. ಈಗಾಗಲೇ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಎಲ್ಲೆಡೆ ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನಲೆ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಕರಾವಳಿ ಹಾಗೂ ಘಟ್ಟದ ಮೇಲಿನ ಎಲ್ಲ ತಾಲೂಕುಗಳ ಅಂಗನವಾಡಿ, ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ ರಜೆ ಮುಂದುವರೆಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ಹೇಗೆ?

Karnataka Weather Forecast : ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಸೋಮವಾರವು (Heavy Rain) ಮುಂದುವರಿಯಲಿದೆ.ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ (Rain News) ಬೀಸಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯೊಂದಿಗೆ ಗುಡುಗು ಸಹಿತ ಮಿಂಚಿನೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Rainfall Expect: ನಕ್ಷತ್ರಗಳ ಪ್ರಕಾರ ಈ ವರ್ಷ ಯಾವಾಗ ಮಳೆ ಬರಬಹುದು? ಇಲ್ಲಿದೆ ಪಕ್ಕಾ ಲೆಕ್ಕಾಚಾರ!

ಬಿಸಿಲಿನ ತಾಪ ದಿನೇದಿನೇ ಹೆಚ್ಚಾಗುತ್ತಿದ್ದು, ದಿನಕ್ಕೊಮ್ಮೆಯಾದರೂ ತಲೆ ಎತ್ತಿ ಆಕಾಶದತ್ತ (sky) ನೋಡಿ ಒಂದೆರಡು ಹನಿ ಮಳೆ (Rainfall Expect) ಇವತ್ತಾದರೂ ಸುರಿಯಬಾರದೇ ಎನ್ನುವಂತಾಗಿದೆ. ಈ ನಡುವೆ ಅಗತ್ಯ ಕೆಲಸಗಳಿಗೆ ಮಾತ್ರವಲ್ಲ ಕೆಲವೆಡೆ ಕುಡಿಯಲೂ ನೀರಿಲ್ಲ. ಇನ್ನು ತೋಟ, ಗದ್ದೆಗಳಲ್ಲಿನ ಫಸಲು ಬಿಸಿಲಿನ ಬೇಗೆಯಿಂದ ಸುಟ್ಟು ಹೋದಂತಾಗಿದೆ. ಈ ಬಾರಿ ಏಪ್ರಿಲ್ (april) ಮತ್ತು ಮೇ (may) ತಿಂಗಳ ತೀವ್ರವಾದ ಶಾಖವನ್ನು ಗಮನಿಸಿದರೆ ಈಗಲೇ ಹೀಗೆ ಇನ್ನು ಭವಿಷ್ಯದಲ್ಲಿ ಹೇಗಿರಬಹುದು ಎನ್ನುವ ಚಿಂತೆ ಎಂಥವರನ್ನೂ ಕಾಡದೇ ಇರಲಾರದು.

ಮಳೆ (rain) ಯಾವಾಗ ಬರುತ್ತದೆ ಎನ್ನುವುದನ್ನು ಈಗ ವಿಜ್ಞಾನಿಗಳು (Scientist) ನಿಖರವಾಗಿ ಹೇಳುತ್ತಾರೆ. ಆದರೆ ಹಿಂದಿನ ಕಾಲದಲ್ಲಿ ನಕ್ಷತ್ರಗಳ (star) ಚಲನೆಯನ್ನು ಆಧರಿಸಿ ಮಳೆ ಯಾವಾಗ ಬರಬಹುದು ಎನ್ನುವುದನ್ನು ನಮ್ಮ ಹಿರಿಯರು ಅಂದಾಜು ಮಾಡುತ್ತಿದ್ದರು.

ಮಳೆಯ ಮುನ್ಸೂಚನೆ

ಆಕಾಶದಲ್ಲಿ ಆಗಾಗ ಕಾಣಿಸುವ ಮೋಡಗಳು ಮಳೆಯ ಮುನ್ಸೂಚನೆ ನೀಡಿದರೂ ಕೆಲವೇ ಕ್ಷಣಗಳಲ್ಲಿ ಮೋಡ ಮರೆಯಾಗಿ ಬೇಸರ ಮೂಡುವಂತೆ ಮಾಡುತ್ತದೆ. ಆದರೆ ನಕ್ಷತ್ರಗಳು ನಿಖರವಾಗಿ ಮಳೆಯ ಮುನ್ಸೂಚನೆಯನ್ನು ನೀಡುತ್ತವೆ. ಹಿಂದೆ ನಮ್ಮ ಹಿರಿಯರು ಈ ನಕ್ಷತ್ರಗಳನ್ನೇ ನೋಡಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ನಿಖರವಾಗಿ ಹೇಳುತ್ತಿದ್ದರು.

ಯಾವ ನಕ್ಷತ್ರಗಳು?

ಅಶ್ವಿನಿಯಿಂದ ವಿಶಾಖ ನಕ್ಷತ್ರದವರೆಗೆ ಗುರುತಿಸಲಾದ ಮಳೆ ನಕ್ಷತ್ರಗಳು ಸಾಂಪ್ರದಾಯಿಕವಾಗಿ ಜಾನಪದ ಮತ್ತು ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ ಮಳೆಯನ್ನು ಸೂಚಿಸುತ್ತವೆ ಎಂದೇ ನಂಬಲಾಗಿದೆ. ಅನಾದಿ ಕಾಲದಿಂದಲೂ ಈ ನಕ್ಷತ್ರಗಳು ರೈತರಿಗೆ ಮಳೆಯ ಮಾಹಿತಿ ನೀಡುತ್ತಿದ್ದವು.

ಈಗ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದರೆ ಶತಮಾನಗಳಿಗಿಂತಲೂ ಹಿಂದೆ ನಕ್ಷತ್ರ ನೋಡಿಯೇ ಮಳೆಯ ಸೂಚನೆ ಪಡೆಯುತ್ತಿದ್ದರು, ಈ ಬಾರಿ ಮಳೆಯ ನಕ್ಷತ್ರಗಳು ಏನು ಹೇಳುತ್ತವೆ ಎಂಬುದರ ಕುರಿತಾದ ಒಂದು ಕಿರು ಮಾಹಿತಿ ಇಲ್ಲಿದೆ.

ಏಪ್ರಿಲ್‌ನಲ್ಲಿ ಮಳೆ ಸಾಧ್ಯತೆ ಕಡಿಮೆ

ಏಪ್ರಿಲ್ 13ರಂದು ಪ್ರಾರಂಭವಾಗುವ ಅಶ್ವಿನಿ ನಕ್ಷತ್ರವು ಆಗಾಗ ಸಾಮಾನ್ಯ ಮತ್ತು ಸಣ್ಣ ಮಳೆಯನ್ನು ತರುವ ನಿರೀಕ್ಷೆಯಿದೆ. ಏಪ್ರಿಲ್ 27ರಂದು ಪ್ರಾರಂಭವಾಗುವ ಭರಣಿ ನಕ್ಷತ್ರವು ಸಾಮಾನ್ಯ ಮಳೆಯನ್ನು ತರುತ್ತದೆ. ಆದರೂ ಈ ಬಾರಿ ಏಪ್ರಿಲ್ ನಲ್ಲಿ ಈ ಮಳೆ ನಕ್ಷತ್ರಗಳು ಮಳೆಯಾಗುವ ಸೂಚನೆಯನ್ನು ಖಾತ್ರಿಪಡಿಸಿಲ್ಲ. ಹೀಗಾಗಿ ಏಪ್ರಿಲ್ ನಲ್ಲಿ ಮಳೆ ಕಾಣಿಸಿಕೊಳ್ಳುವುದು ಬಹುತೇಕ ಅನುಮಾನ.

ಮೇ 11ರ ಬಳಿಕ ಮಳೆ ಸಾಧ್ಯತೆ

ಮೇ 11ರ ಬಳಿಕ ಕೃತ್ತಿಕಾ ನಕ್ಷತ್ರವು ಮಳೆ ಸೂಚನೆ ನೀಡಿದೆ. ಮೇ 24ರಿಂದ ರೋಹಿಣಿ ನಕ್ಷತ್ರವು ಸಾಮಾನ್ಯ ಮಳೆ ತರುವ ನಿರೀಕ್ಷೆಯಿದೆ. ಆದರೂ ಇದು ಧರೆಯ ಬಿಸಿಲಿನ ತಾಪವನ್ನು ಸಂಪೂರ್ಣ ಕಡಿಮೆ ಮಾಡುತ್ತದೆ ಎಂದು ಹೇಳಲಾಗದು.

ಜೂನ್ 21ರಿಂದ ಪುನರ್ವಸು, ಜುಲೈ 5ರಿಂದ ಆರ್ಧ್ರ, ಜುಲೈ 19 ರಿಂದ ಪುಷ್ಯ, ಆಗಸ್ಟ್ 2ರಿಂದ ಆಶ್ಲೇಷ, ಜುಲೈ 16 ರಿಂದ ಮಾಘ ಮತ್ತು ಜುಲೈ 30 ರಿಂದ ಹಸ್ತ ನಕ್ಷತ್ರಗಳು ಉತ್ತಮ ಮಳೆಯಾಗುವ ಸೂಚನೆ ನೀಡಿದೆ. ಇದರ ಭವಿಷ್ಯವನ್ನು ಆಧರಿಸಿ ಸೆಪ್ಟೆಂಬರ್ 13 ರಿಂದ ಉತ್ತರ ಮಳೆ ನಿರೀಕ್ಷಿಸಲಾಗಿದೆ, ಹಸ್ತ ಸೆಪ್ಟೆಂಬರ್ 26 ರಿಂದ, ಅಕ್ಟೋಬರ್ 10 ರಿಂದ ಚಿತ್ರ ಮಳೆ, ಅಕ್ಟೋಬರ್ 23 ರಿಂದ ಸ್ವಾತಿ ಮಳೆ ಮತ್ತು ನವೆಂಬರ್ 1 ರಿಂದ ವಿಶಾಖ ಮಳೆಯಾಗುವ ನಿರೀಕ್ಷೆ ಇದೆ.

ಹಿಂದೂ ಜ್ಯೋತಿಷ್ಯದಲ್ಲಿ ಬಳಸಲಾಗುವ ಒಟ್ಟು 27 ನಕ್ಷತ್ರಗಳಿವೆ. ಇದು ಒಂದು ವರ್ಷದಲ್ಲಿ ಆಕಾಶಗೋಳದಾದ್ಯಂತ ಸೂರ್ಯನ ದಾರಿಯನ್ನು ನಿರ್ಧರಿಸತ್ತದೆ. ಹಿಂದೂ ಸಂಸ್ಕೃತಿಯಲ್ಲಿ ಜ್ಯೋತಿಷ್ಯ, ಜಾತಕ ಹೊಂದಾಣಿಕೆ, ಆಚರಣೆಗಳು ಮತ್ತು ಶುಭ ಸಮಾರಂಭಗಳ ಸಮಯದಲ್ಲಿ ನಕ್ಷತ್ರಗಳ ಪಾತ್ರ ಮಹತ್ವದ್ದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Karnataka Rain : ಭಾನುವಾರ ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ವಿಜಯನಗರ ಹಾಗೂ ರಾಯಚೂರಿನಲ್ಲಿ ಸಿಡಿಲು ಬಡಿದು ತಲಾ 1 ಎಮ್ಮೆ ಮೃತಪಟ್ಟಿವೆ. ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಗುರುಮಠಕಲ್‌ (karnataka weather Forecast) ಕೆರೆಯಂತಾಗಿದೆ.

VISTARANEWS.COM


on

By

Karnataka Rain
Koo

ವಿಜಯನಗರ/ರಾಯಚೂರು/ಯಾದಗಿರಿ: ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ವರುಣ ಶಾಕ್‌ (Karnataka Rain) ಕೊಟ್ಟಿದ್ದಾನೆ. ರಾಜ್ಯ ಹಲವೆಡೆ ಬಿರುಗಾಳಿ ಸಹಿತ (Karnataka weather Forecast) ಮಳೆಯಾಗುತ್ತಿದ್ದು, ಪ್ರತ್ಯೇಕ ಕಡೆಗಳಲ್ಲಿ ಸಿಡಿಲು ಬಡಿದು ಕಟ್ಟಿಗೆಯಲ್ಲಿ ಕಟ್ಟಿದ್ದ ಎಮ್ಮೆ ಮೃತಪಟ್ಟಿವೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಎಂ.ಕಲ್ಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಎಮ್ಮೆ ಮೃತಪಟ್ಟಿದೆ. ಕೆಂಚನಗೌಡ್ರ ಬಸವರಾಜ ಎಂಬ ರೈತ ಎಮ್ಮೆಯನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಮಳೆಯೊಂದಿಗೆ ಗುಡುಗು, ಸಿಡಿಲು ಬಡಿದ ಪರಿಣಾಮ ಎಮ್ಮೆ ಮೃತಪಟ್ಟಿದೆ.

ಇನ್ನೂ ರಾಯಚೂರಿನ ಲಿಂಗಸುಗೂರಿನ ಕರೆಮರಡಿ ತಾಂಡದಲ್ಲಿ ಸಿಡಿಲು ಬಡಿದು ಎಮ್ಮೆಯೊಂದು ಮೃತಪಟ್ಟಿದೆ. ಲಕ್ಷಣ್ಣ ಗುಂಡಪ್ಪ ರಾಠೋಡ ಎಂಬುವವರ ಎಮ್ಮೆಯನ್ನು ಮನೆ ಪಕ್ಕದಲ್ಲಿರುವ ಮರಕ್ಕೆ ಕಟ್ಟಿಹಾಕಿದ್ದರು. ಗುಡುಗು ಮಿಂಚು ಸಹಿತ ಸುರಿದ ಮಳೆ ವೇಳೆ ಸಿಡಿಲು ಬಡಿದ್ದರಿಂದ ಎಮ್ಮೆ ಸ್ಥಳದಲ್ಲೇ ಮೃತಪಟ್ಟಿದೆ. ಮುದಗಲ್ ಠಾಣೆ ಪೊಲೀಸ್ ಸಿಬ್ಬಂದಿ ಹಾಗೂ ನಾಗಲಾಪೂರು ಪಶು ಆಸ್ಪತ್ರೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವರುಣನ ಅಬ್ಬರಕ್ಕೆ ಕೆರೆಯಂತಾದ ಗುರುಮಠಕಲ್‌

ಯಾದಗಿರಿ ಜಿಲ್ಲೆಯಲ್ಲಿ ಭಾನುವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಗುರುಮಠಕಲ್ ಹಾಗೂ ಯಾದಗಿರಿ ನಗರದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಕಾಲ ವರುಣ ಅಬ್ಬರಿಸಿದ್ದ. ಭಾರಿ ಮಳೆಗೆ ಗುರುಮಠಕಲ್ ರಸ್ತೆ ಮೇಲೆ ನೀರು ಹರಿದು ಕೆರೆಯಂತಾಗಿತ್ತು. ಇತ್ತ ಬಿರುಗಾಳಿ ಸಹಿತ ಭಾರಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಯಾದಗಿರಿ ತಾಲೂಕಿನ ಗಣಾಪುರ ಸಮೀಪದ ಯಾದಗಿರಿ-ಗುರುಮಠಕಲ್ ರಸ್ತೆ ಮಾರ್ಗದಲ್ಲಿ ಮರಗಳು ಧರೆಗುರುಳಿತ್ತು.

ಯಾದಗಿರಿಯ ಗಣಾಪುರ ಸಮೀಪದ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಮರಗಳು ಬಿದ್ದಿತ್ತು. ಗುರುಮಠಕಲ್-ಯಾದಗಿರಿ ರಾಜ್ಯ ಹೆದ್ದಾರಿಯಲ್ಲಿ ಮರಗಳು ಉರುಳಿ ಬಿದ್ದಿತ್ತು. ಹೀಗಾಗಿ ಸ್ಥಳೀಯರು ಹಾಗೂ ಸವಾರರಿಂದಲೇ ರಸ್ತೆ ಮೇಲೆ ಬಿದ್ದಿದ್ದ ಮರಗಳ ತೆರವು ಮಾಡಲಾಯಿತು. ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಂಡರು. ರಸ್ತೆ ಮೇಲೆ ಮರಗಳು ಬಿದ್ದ ಕಾರಣದಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಇದನ್ನೂ ಓದಿ: Basavanagudi News : ಪೂಜಾ ಸಾಮಾಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Road Accident : ಬಸ್‌ಗೆ ಸ್ಕೂಟರ್‌ ಡಿಕ್ಕಿ; ಸವಾರನ ಪ್ರಾಣವನ್ನೇ ಕಸಿದ ಅತಿ ವೇಗ ಚಾಲನೆ

Road Accident : ವೇಗವಾಗಿ ಬಂದ ಸ್ಕೂಟರ್‌ವೊಂದು ಎದುರಿಗೆ ಬಂದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

By

Road Accident
Koo

ಕಾರವಾರ: ಬಸ್‌ಗೆ ಸ್ಕೂಟರ್‌ ಡಿಕ್ಕಿಯಾಗಿದ್ದು, ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಹಳದೀಪುರ ಗ್ರಾಮದ ಬಳಿ ಘಟನೆ (Road Accident) ನಡದಿದೆ. ಸವಾರ ಶಂಕರ ಹೆಗಡೆ (50) ಮೃತ ದುರ್ದೈವಿ.

ಕೆಎಸ್‌ಆರ್‌ಟಿಸಿ ಬಸ್‌ ಭಟ್ಕಳ ಭಾಗದಿಂದ ಕುಮಟಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಕೂಟರ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸ್ಕೂಟರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಶಂಕರ ಅವರು ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಬಸ್‌ ಮುಂಭಾಗ ಹಾನಿಯಾಗಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಹಾಸನ: ಹಾಸನ ಹೊರವಲಯದ ಈಚನಹಳ್ಳಿ (Ichanahalli Village) ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ (ಮೇ.26) ಸಂಭವಿಸಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು (Five died on the spot) ಆಗಿದೆ. ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು (Hassan Accident Terrible accident) ಹರಸಾಹಸ ಪಟ್ಟಿದ್ದಾರೆ.

ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Hassan Accident:

ಇಬ್ಬರು ಮಹಿಳೆ, ಮೂವರು ಪುರುಷರು, ಒಂದು ಮಗು ಕೂಡ ಮೃತಪಟ್ಟಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಕುಟುಂಬ ತೆರಳಿತ್ತು. ವಾಪಸ್ ಊರಿಗೆ ಮರಳುವಾಗ ನಿದ್ರೆ ಮಂಪರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೃತರು ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಬಾಲಕ ಚೇತನ್ , ಡ್ರೈವರ್‌ ರಾಕೇಶ್ ಮೃತರು ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Monsoon 2024: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯು ಅಬ್ಬರಿಸುತ್ತಿದ್ದು, ಮುಂಗಾರು ಮಳೆಯ ದರ್ಬಾರ್‌ಗೆ ದಿನಗಣನೆ‌ ಶುರುವಾಗಿದೆ. ಈ ಬಾರಿ ಮುಂಗಾರು ಮಳೆಯು ಉತ್ತಮವಾಗಿರಲಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ.

VISTARANEWS.COM


on

By

Monsoon 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಇದನ್ನೂ ಓದಿ: Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್‌ ಘೋಷಣೆ

ಮೇ 26ರಂದು ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannada New Movie Gumti new post
ಸ್ಯಾಂಡಲ್ ವುಡ್33 seconds ago

Kannada New Movie: ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ ಇದೀಗ `ಗುಂಮ್ಟಿ’ ಅವತಾರದಲ್ಲಿ!

Prajwal Revanna Case Will SIT team go abroad for arrest Prajwal
ಕ್ರೈಂ9 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Robert Vadra
ದೇಶ9 mins ago

Robert Vadra: “ಮಣಿಶಂಕರ್‌ ಅಯ್ಯರ್‌ ಬಾಯಿ ಬಡುಕ…ಕೇಜ್ರಿವಾಲ್‌ ಅವಕಾಶವಾದಿ”-ರಾಬರ್ಟ್‌ ವಾದ್ರಾ ಅಚ್ಚರಿಯ ಹೇಳಿಕೆ

Gautam Gambhir
ಕ್ರೀಡೆ23 mins ago

Gautam Gambhir : ಟ್ರೋಫಿ ಗೆದ್ದ ಸಂಭ್ರಮ; ಗಂಭೀರ್​ಗೆ ಖಾಲಿ ಚೆಕ್​ ಕೊಟ್ಟರೇ ಶಾರುಖ್​ ಖಾನ್​ ?

Netraa Jadhav Out From Serial perform Yakshagana on the special occasion
ಕಿರುತೆರೆ37 mins ago

Netraa Jadhav: ಸೀರಿಯಲ್‌ನಿಂದ ಔಟ್‌ ಆಗುತ್ತಿದ್ದಂತೆ ʻಯಕ್ಷಗಾನʼದಲ್ಲಿ ಶಾರ್ವರಿ ಶೈನ್‌!

Pune Porsche accident
ದೇಶ56 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಇಬ್ಬರು ವೈದ್ಯರು ಅರೆಸ್ಟ್‌

Chris Gayle
ಕ್ರಿಕೆಟ್57 mins ago

Chris Gayle : ಎಣ್ಣೆ ಹೊಡಿತಾ ಕೆಕೆಆರ್ ತಂಡಕ್ಕೆ ಶುಭಾಶಯ ತಿಳಿಸಿದ ಕ್ರಿಸ್​ ಗೇಲ್; ಇಲ್ಲಿದೆ ವಿಡಿಯೊ

Comedy Khiladigalu anchor anushree and Jaggesh Remembers Dogs
ಕಿರುತೆರೆ1 hour ago

Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

kalaburagi illegal relationship
ಕ್ರೈಂ1 hour ago

Illegal Relationship:`ಅತ್ತಿಗೆಯಿಂದ ದೂರ ಇರುʼ ಎಂದ ಮೈದುನನ ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ

IPL 2024
ಕ್ರೀಡೆ1 hour ago

IPL 2024 : ಕೆಕೆಆರ್​ ಗೆದ್ದ ಬಳಿಕ ವಿವಾದಿತ ಫ್ಲೈಯಿಂಗ್ ಕಿಸ್​ ಕೊಟ್ಟ ಶಾರುಖ್ ಖಾನ್​; ಇದಕ್ಕೂ ಒಂದು ಕಾರಣವಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು18 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌