ITR Filing : ಐಟಿ ರಿಟರ್ನ್‌ನಲ್ಲಿ ಎಷ್ಟು ವಿಧಗಳಿವೆ? ಯಾರು ಯಾವುದನ್ನು ಬಳಸಬೇಕು? - Vistara News

ವಾಣಿಜ್ಯ

ITR Filing : ಐಟಿ ರಿಟರ್ನ್‌ನಲ್ಲಿ ಎಷ್ಟು ವಿಧಗಳಿವೆ? ಯಾರು ಯಾವುದನ್ನು ಬಳಸಬೇಕು?

ITR Filing ಆದಾಯ ತೆರಿಗೆ ವಿವರ ಸಲ್ಲಿಕೆಯನ್ನು ಜುಲೈ 31ರೊಳಗೆ ಮಾಡುವುದು ಸೂಕ್ತ. ಆದಾಯ ತೆರಿಗೆ ರಿಟರ್ನ್‌ ವಿಧಗಳ ವಿವರ ಇಲ್ಲಿದೆ.

VISTARANEWS.COM


on

tax
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಳೆದ 2022-23ರ ಆದಾಯ ತೆರಿಗೆಯ ವಿವರ ಸಲ್ಲಿಕೆಗೆ (Income tax return filing) ಕೊನೆಯ ದಿನಾಂಕ ಜುಲೈ 31 ಆಗಿದೆ. ಇನ್ನು ಆರು ದಿನ ಮಾತ್ರ ಉಳಿದಿದೆ. ಹೀಗಾಗಿ ಐಟಿ ರಿಟರ್ನ್‌ ಸಲ್ಲಿಸದಿದ್ದರೆ ಗಡುವಿನ ಒಳಗಾಗಿ ಸಲ್ಲಿಸುವುದು ಸೂಕ್ತ. ಐಟಿಆರ್‌ಗಳಲ್ಲಿ ಏಳು ವಿಧಗಳಿವೆ. ಐಟಿಆರ್-‌1ರಿಂದ ಐಟಿಆರ್‌ -7 ತನಕ ಅರ್ಜಿ ವಿಧಗಳು ಇವೆ. ಇವುಗಳಲ್ಲಿ ನಿಮಗೆ ಯಾವುದು ಸೂಕ್ತ ಎಂಬುದನ್ನು ಆಯ್ಕೆ ಮಾಡಿಕೊಳ್ಳ ಬೇಕು.

ಐಟಿಆರ್-‌1 ಸಹಜ್:

ಐಟಿಆರ್-‌1 ಯಾರಿಗೆ ಅನ್ವಯವಾಗುತ್ತದೆ ಎಂಬುದ್ನು ತಿಳಿಯೋಣ. ಈ ಅರ್ಜಿಯು ಕೆಳಕಂಡವರಿಗೆ ಅಗತ್ಯ.

  1. ವೇತನ/ ಪಿಂಚಣಿ ಆದಾಯ ಇರುವವರಿಗೆ ಅನ್ವಯ.
  2. ಒಂದು ಮನೆಯ ಆಸ್ತಿಯಿಂದ ಆದಾಯ ಇರುವವರಿಗೆ (ಹಳೆ ವರ್ಷದ ನಷ್ಟ ಫಾರ್‌ವರ್ಡ್‌ ಆಗಿರುವುದನ್ನು ಹೊರತುಪಡಿಸಿ)
  3. ಇತರ ಮೂಲಗಳಿಂದ ಆದಾಯ ಇರುವವರಿಗೆ ( ಲಾಟರಿ ಮತ್ತು ಕುದುರೆ ರೇಸ್‌ ಇತ್ಯಾದಿಗಳಿಂದ)
  4. 5,000 ರೂ. ತನಕ ಕೃಷಿ ಆದಾಯ ಇರುವವರಿಗೆ ಅನ್ವಯ.

ಯಾರು ಐಟಿಆರ್-‌1 ಬಳಸಬಾರದು?

  1. ಒಟ್ಟು ಆದಾಯ 50 ಲಕ್ಷ ರೂ.ಗಿಂತ ಹೆಚ್ಚು ಇರುವವರು.
  2. ಕೃಷಿ ಆದಾಯ 5,000 ರೂ.ಗಿಂತ ಹೆಚ್ಚು ಇರುವವರು.
  3. ತೆರಿಗೆಗೆ ಅರ್ಹ ಕ್ಯಾಪಿಟಲ್‌ ಗೇನ್ಸ್‌ ಇರುವವರು.
  4. ಬಿಸಿನೆಸ್‌ ಅಥವಾ ಪ್ರೊಫೆಷನ್‌ ಮೂಲಕ ಆದಾಯ ಗಳಿಸುವವರು.
  5. ಕಂಪನಿಯ ನಿರ್ದೇಶಕ ಆಗಿದ್ದರೆ.
  6. ಅನ್‌ ಲಿಸ್ಟೆಡ್‌ ಈಕ್ವಿಟಿ ಷೇರುಗಳಲ್ಲಿ ಹೂಡಿಕೆ ಇದ್ದರೆ.
  7. ವಿದೇಶಿ ಮೂಲದ ಆದಾಯ ಇದ್ದರೆ.
  8. ಸೆಕ್ಷನ್‌ 194 N ಅಡಿಯಲ್ಲಿ ತೆರಿಗೆ ಕಡಿತ ಆಗಿದ್ದರೆ.
  9. ಇಎಸ್‌ಒಪಿ ಅಡಿಯಲ್ಲಿ ತೆರಿಗೆ ಕಡಿತ ಮುಂದೂಡಿಕೆಯಾಗಿದ್ದರೆ.
  10. ಫಾರ್‌ ವರ್ಡ್‌ ಲಾಸ್‌ ಆಗಿದ್ದರೆ.

ಐಟಿಆರ್-‌2 ಇದು ಕೆಳಕಂಡವರಿಗೆ ಅಗತ್ಯ:

  1. ಐಟಿಆರ್‌ 2 ವೇತನ/ಪಿಂಚಣಿ ಆದಾಯ ಇರುವವರಿಗೆ ಬೇಕು.
  2. ಮನೆಯ ಪ್ರಾಪರ್ಟಿಯಿಂದ ಆದಾಯ ಇರುವವರಿಗೆ ಅಗತ್ಯ.
  3. ಇತರ ಮೂಲಗಳಿಂದ ಆದಾಯ.
  4. ಕಂಪನಿಯ ನಿರ್ದೇಶಕ ಆಗಿದ್ದರೆ.
  5. ಕಂಪನಿಯ ಪಾಲುದಾರಿಕೆ ಇದ್ದರೆ
  6. ಅನ್‌ ಲಿಸ್ಟೆಡ್‌ ಈಕ್ವಿಟಿ ಶೇರುಗಳಿಂದ ಆದಾಯ ಇದ್ದರೆ
  7. ಕ್ಯಾಪಿಟಲ್‌ ಗೈನ್ಸ್‌ ಆದಾಯ ಇದ್ದರೆ
  8. ವಿದೇಶಿ ಮೂಲದ ಆದಾಯ ಇದ್ದರೆ
  9. ಕೃಷಿ ಆದಾಯ 5,000 ರೂ. ಮೀರಿದ್ದರೆ.
  10. ಒಟ್ಟು ಆದಾಯ 50 ಲಕ್ಷ ರೂ. ಮೀರಿದ್ದರೆ.

ಯಾರು ಐಟಿಆರ್-‌2 ಬಳಸಬಾರದು? : ಬಿಸಿನೆಸ್‌ ಮೂಲಕ ಆದಾಯ ಇರುವವರು ಐಟಿಆರ್-‌2 ಬಳಸಬಾರದು.

ಇದನ್ನೂ ಓದಿ: Mutual fund : ಮ್ಯೂಚುವಲ್‌ ಫಂಡ್‌ನಲ್ಲಿ 6 ವರ್ಷಕ್ಕೆ ಹೂಡಿಕೆ ಡಬಲ್‌, ವೀಕ್ಷಿಸಿ ವಿಸ್ತಾರ ಮನಿ ಪ್ಲಸ್

ಐಟಿಆರ್-‌3 ಯಾರಿಗೆ ಅಗತ್ಯ? ಪ್ರಾಪರ್ಟಿ ಅಥವಾ ಬಿಸಿನೆಸ್‌, ಪ್ರೊಫೆಶನ್ ಮೂಲಕ ಆದಾಯ ಇರುವವರು ಐಟಿಆರ್-‌3 ಬಳಸಬೇಕು. ಕಂಪನಿಯ ನಿರ್ದೇಶಕರಾಗಿರುವವರು, ಅನ್‌ ಲಿಸ್ಟೆಡ್‌ ಕಂಪನಿಯ ಈಕ್ವಿಟಿ ಶೇರುಗಳನ್ನು ಹೊಂದಿರುವವರು, ಹೌಸ್‌ ಪ್ರಾಪರ್ಟಿ, ವೇತನ/ಪಿಂಚಣಿ, ಇತರ ಮೂಲಗಳಿಂದ ಆದಾಯ ಇರುವವರು ಬಳಸಬಹುದು. ಕಂಪನಿಯ ಪಾಲುದಾರಿಕೆ ಇದ್ದರೆ ಸಲ್ಲಿಸಬಹುದು. ಕೊನೆಯ ಗಳಿಗೆಯಲ್ಲಿ ಐಟಿಆರ್‌ ಸಲ್ಲಿಸುವುದಕ್ಕಿಂತ ಸಾಕಷ್ಟು ಮೊದಲೇ ಸಿದ್ಧತೆ ನಡೆಸಿ ರಿಟರ್ನ್‌ ಫೈಲಿಂಗ್‌ ಮಾಡುವುದು ಸೂಕ್ತ. ಈ ಸಲ ಗಡುವು ಮುಂದೂಡಿಕೆ ಆಗುವ ಸಾಧ್ಯತೆ ಕಡಿಮೆ ಎಂದು ಕೂಡ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಗಡುವಿನ ಒಳಗೆ ಸಲ್ಲಿಸುವುದು ಸೂಕ್ತ. ಗಡುವು ಮೀರಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ವಿಳಂಬಿತ ಶುಲ್ಕ, ಪೆನಾಲ್ಟಿ, ಬಡ್ಡಿ ಅನ್ವಯವಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

Shehbaz Sharif: ಆರ್ಥಿಕವಾಗಿ ದಿವಾಳಿಯಾಗಿರುವ, ಉತ್ತಮ ನಾಯಕ ಸಿಗದೆ ಆಡಳಿತಾತ್ಮಕವಾಗಿಯೂ ಅರಾಜಕತೆಯಿಂದ ಕೂಡಿರುವ, ಉಗ್ರರ ಪೋಷಣೆಗಾಗಿ ಜಾಗತಿಕವಾಗಿ ಹಣಕಾಸು ನೆರವು ಸಿಗದೆ ಒದ್ಡಾಡುತ್ತಿರುವ ಪಾಕಿಸ್ತಾನ ಇದೀಗ ಕಾರ್ಯತಂತ್ರದ ಘಟಕಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಈ ಬಗ್ಗೆ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಮಾಹಿತಿ ನೀಡಿ, ʼʼನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆʼʼ ಎಂದಿದ್ದಾರೆ.

VISTARANEWS.COM


on

Shehbaz Sharif
Koo

ಇಸ್ಲಾಮಾಬಾದ್:‌ ಆರ್ಥಿಕವಾಗಿ ದಿವಾಳಿಯಾಗಿರುವ, ಉತ್ತಮ ನಾಯಕ ಸಿಗದೆ ಆಡಳಿತಾತ್ಮಕವಾಗಿಯೂ ಅರಾಜಕತೆಯಿಂದ ಕೂಡಿರುವ, ಉಗ್ರರ ಪೋಷಣೆಗಾಗಿ ಜಾಗತಿಕವಾಗಿ ಹಣಕಾಸು ನೆರವು ಸಿಗದೆ ಒದ್ಡಾಡುತ್ತಿರುವ ಪಾಕಿಸ್ತಾನ(Pakistan) ಈಗ ಕಾರ್ಯತಂತ್ರದ ಘಟಕಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಈ ಬಗ್ಗೆ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ (Shehbaz Sharif) ಮಂಗಳವಾರ ತಿಳಿಸಿದರು.

ಶೆಹಬಾಜ್ ಷರೀಫ್ ನೇತೃತ್ವದಲ್ಲಿ ನಡೆದ ಸರ್ಕಾರಿ ಉದ್ಯಮಗಳ (SOEs) ಖಾಸಗೀಕರಣ ಪ್ರಕ್ರಿಯೆಯ ಪರಿಶೀಲನಾ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದು 2024ರಿಂದ 29ರವರೆಗೆ ಹಂತ ಹಂತವಾಗಿ ನಡೆಯಲಿರುವ ಖಾಸಗೀಕರಣದ ಮಾರ್ಗಸೂಚಿಯನ್ನು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

“ಲಾಭದಲ್ಲಿರಲಿ ಅಥವಾ ನಷ್ಟದಲ್ಲಿರಲಿ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ಯಮಗಳನ್ನು ಖಾಸಗೀಕರಣಗೊಳಿಸಲಾಗುವುದು” ಎಂದು ಷರೀಫ್ ತಿಳಿಸಿದರು. ʼʼಈ ಕ್ರಮದಿಂದ ತೆರಿಗೆದಾರರ ಹಣವನ್ನು ಉಳಿಸಬಹುದುʼʼ ಎಂದು ಅವರು ಹೇಳಿದರು. ಆದರೆ ಯಾವ ಕ್ಷೇತ್ರಗಳನ್ನು ಕಾರ್ಯತಂತ್ರ ಮತ್ತು ಕಾರ್ಯತಂತ್ರೇತರ ಎಂದು ಪರಿಗಣಿಸಲಾಗುತ್ತದೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟನೆ ಹೊರ ಬಿದ್ದಿಲ್ಲ. ಹೀಗಾಗಿ ಯಾವೆಲ್ಲ ಕಂಪನಿಗಳು ಖಾಸಗೀಕರಣಕ್ಕೆ ಒಳಪಡುತ್ತವೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ. ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನಕ್ಕೆ 3 ಶತಕೋಟಿ ಡಾಲರ್‌ ಮೊತ್ತದ ಸಾಲದ ಪ್ಯಾಕೇಜ್‌ ಒದಗಿಸಲು ಐಎಂಎಫ್‌ (International Monetary Fund) ಸಮ್ಮತಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಐಎಂಎಫ್‌ನ ಶಿಫಾರಸ್ಸು

ಐಎಂಎಫ್‌ ಪಾಕಿಸ್ತಾನಕ್ಕೆ ಸೂಚಿದ ಶಿಫಾರಸ್ಸಿನ ಪಟ್ಟಿಯಲ್ಲಿ ನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣವೂ ಸೇರಿದೆ. ಸದ್ಯ ಪಾಕ್‌ ಹಣಕಾಸಿನ ಕೊರತೆಯಿಂದ ಬಳಲುತ್ತಿದೆ. ವಿದೇಶಿ ವಿನಿಮಯ ಮೀಸಲು ನಿಧಿ ಆಮದನ್ನು ಪೂರೈಸಲು ಸಾಕಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಕೆಲವು ಮಧ್ಯಪ್ರಾಚ್ಯ ದೇಶಗಳಿಗೆ ಹೋಲಿಸಿದರೆ ಪಾಕಿಸ್ತಾನದ ಸರ್ಕಾರಿ ಉದ್ಯಮಗಳು 2019ರಲ್ಲಿ ಜಿಡಿಪಿಯ ಶೇ. 44ರಷ್ಟು ಗಣನೀಯ ಪಾಲನ್ನು ಹೊಂದಿವೆ. 2019ರಲ್ಲಿ ಸುಮಾರು ಅರ್ಧದಷ್ಟು ಸರ್ಕಾರಿ ಉದ್ಯಮಗಳು ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದವು ಎಂದು ಐಎಂಎಫ್‌ ಹೇಳಿದೆ.

ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಹಿಂದಿನ ಖಾಸಗೀಕರಣ ಪ್ರಯತ್ನಗಳು ವಿಫಲವಾಗಿದ್ದವು ಎಂದು ಆರ್ಥಿಕ ತಜ್ಞರು ಕಂಡುಕೊಂಡಿದ್ದಾರೆ. ನಷ್ಟದಲ್ಲಿರುವ ಅತಿದೊಡ್ಡ ಉದ್ಯಮಗಳಲ್ಲಿ ಒಂದಾದ ಪಾಕಿಸ್ತಾನ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ ಸೇರಿದಂತೆ ಹಲವು ಎಸ್ಒಇಗಳಿಗೆ ಪಾಕಿಸ್ತಾನ ವರ್ಷಗಳಿಂದ ಶತಕೋಟಿ ಡಾಲರ್‌ ಖರ್ಚು ಮಾಡುತ್ತಿದೆ. ಸದ್ಯ ಇದು ಮಾರಾಟದ ಅಂತಿಮ ಹಂತದಲ್ಲಿದೆ. ಖರೀದಿದಾರರಿಗೆ ಈ ವಾರಾಂತ್ಯದವರೆಗೆ ಗಡುವು ನೀಡಲಾಗಿದೆ.

ಇದನ್ನೂ ಓದಿ: ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

ಮಾರಾಟ ಮಾಡಲು ನಿರ್ಧರಿಸಿರುವ ಪಟ್ಟಿಯಲ್ಲಿ ಅಮೆರಿಕದ ನ್ಯೂಯಾರ್ಕ್‌ನ ಮ್ಯಾನ್ಹ್ಯಾಟನ್‌ನಲ್ಲಿರುವ ಐಷಾರಾಮಿ ರೂಸ್‌ವೆಲ್ಟ್‌ ಹೋಟೆಲ್ ಮತ್ತು ಎರಡು ವಿಮಾ ಕಂಪೆನಿಗಳು ಸೇರಿವೆ. ಇದರ ಜತೆಗೆ ನಾಲ್ಕು ವಿದ್ಯುತ್ ಸ್ಥಾವರಗಳೂ ಇವೆ. ʼʼನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಹಂತ ಹಂತವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆʼʼ ಎಂದು ಪ್ರಧಾನಿ ಶೆಹಬಾಜ್ ಷರೀಫ್ ವಿವರಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Bank Loan Fraud: ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Bank Loan Fraud
Koo

ನವದೆಹಲಿ: 17 ಸದಸ್ಯರ ಬ್ಯಾಂಕ್ ಒಕ್ಕೂಟಕ್ಕೆ 34,000 ಕೋಟಿ ರೂ. ವಂಚನೆ ಮಾಡಿದ (Bank Loan Fraud) ಆರೋಪದ ಮೇಲೆ ಡಿಎಚ್ಎಫ್ಎಲ್ ಮಾಜಿ ನಿರ್ದೇಶಕ ಧೀರಜ್ ವಾಧ್ವಾನ್ ಅವರನ್ನು ಸಿಬಿಐ ಮಂಗಳವಾರ ಬಂಧಿಸಿದೆ ಸೋಮವಾರ ರಾತ್ರಿ ಮುಂಬೈನಲ್ಲಿ ವಶಕ್ಕೆ ಪಡೆದ ವಾಧ್ವಾನ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅದು ಅವರನ್ನು ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಡಿಎಚ್ಎಫ್ಎಲ್​​ನ ಮಾಜಿ ನಿರ್ದೇಶಕ ಮತ್ತು ಅವರ ಸಹೋದರ ಕಪಿಲ್ ಅವರನ್ನು ಈ ಹಿಂದೆ ಜುಲೈ 19, 2022 ರಂದು ಬಂಧಿಸಲಾಗಿತ್ತು. ಅಕ್ಟೋಬರ್ 15, 2022 ರಂದು ಕಪಿಲ್ ಮತ್ತು ಧೀರಜ್ ಸೇರಿದಂತೆ 75 ಸಂಸ್ಥೆಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್​ ಸಲ್ಲಿಸಲಾಗಿತ್ತು. ತನಿಖೆ ಅಪೂರ್ಣವಾಗಿದೆ ಮತ್ತು ಸಲ್ಲಿಸಲಾದ ಚಾರ್ಜ್​ಶೀಟ್​ನಲ್ಲಿ ತೊಡಕುಗಳಿಗೆ ಎಂಬ ಆಧಾರದ ಮೇಲೆ ಅವರಿಗೆ ಡಿಸೆಂಬರ್ 3, 2022 ರಂದು ವಿಶೇಷ ನ್ಯಾಯಾಲಯದಿಂದ “ಶಾಸನಬದ್ಧ” ಜಾಮೀನು ನೀಡಿತ್ತು. ಈ ಆದೇಶವನ್ನು ದೆಹಲಿ ಹೈಕೋರ್ಟ್ ಕೂಡ ಎತ್ತಿಹಿಡಿದಿದೆ.

ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮತ್ತು ಇತ್ಯರ್ಥಪಡಿಸಿದ ಕಾನೂನು ಸ್ಥಾನವನ್ನು ನಿರ್ಲಕ್ಷಿಸುವಲ್ಲಿ “ಕಾನೂನಿನ ಗಂಭೀರ ತಪ್ಪು ಮಾಡಿದೆ” ಎಂದು ಉಲ್ಲೇಖಿಸಿ ಜಾಮೀನು ಆದೇಶಗಳನ್ನು ಸರ್ವೋಚ್ಛ ರದ್ದುಗೊಳಿಸಿತು.

ಏತನ್ಮಧ್ಯೆ, ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಧೀರಜ್ ವಾಧ್ವಾನ್ ಮತ್ತು ಅವರ ಸಹೋದರ ಕಪಿಲ್ ವಾಧ್ವಾನ್ ಮತ್ತು ಅಜಯ್ ನವಂದರ್ ಈ ಆರೋಪಿಗಳಾಗಿದ್ದಾರೆ.

ಸಾಲ ವಾಪಸ್​ ಕೊಡದ ಡಿಎಚ್​ಎಲ್​ಎಫ್​

2010 ಮತ್ತು 2018 ರ ನಡುವೆ ಡಿಎಚ್ಎಫ್ಎಲ್​ಗೆ 42,871 ಕೋಟಿ ರೂ.ಗಳ ಸಾಲ ನೀಡಿದ್ದ 17 ಸದಸ್ಯರ ಸಾಲದಾತ ಒಕ್ಕೂಟದ ಮುಂಚೂಣಿ ಸಂಸ್ಥೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಮೇರೆಗೆ ಸಿಬಿಐ ವಾಧ್ವಾನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಕಪಿಲ್ ಮತ್ತು ಧೀರಜ್ ವಾಧ್ವಾನ್ ಇತರರೊಂದಿಗೆ ಕ್ರಿಮಿನಲ್ ಪಿತೂರಿ ಮಾಡಿದ್ದು ಸತ್ಯ ಮರೆ ಮಾಚಲಾಗಿದೆ ಎಂದು ಹೇಳಲಾಗಿದೆ. ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮಾಡಿದ್ದಾರೆ ಮತ್ತು 2019 ರ ಮೇ ತಿಂಗಳಿನಿಂದ ಸಾಲ ಮರುಪಾವತಿಯಲ್ಲಿ ವಿಫಲರಾಗುವ ಮೂಲಕ ಒಕ್ಕೂಟಕ್ಕೆ 34,615 ಕೋಟಿ ರೂ.ಗಳನ್ನು ವಂಚಿಸಲಾಗಿದೆ. ಅಲ್ಲದೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ತನ್ನ ಚಾರ್ಜ್​ಶೀಟ್​ನಲ್ಲಿ ಆರೋಪಿಸಿದೆ.

Continue Reading

ಮನಿ-ಗೈಡ್

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Money Guide: ಟೈಮ್ ಡೆಪಾಸಿಟ್ ಅಥವಾ ಟರ್ಮ್ ಡೆಪಾಸಿಟ್ ಎಂದೂ ಕರೆಯಲ್ಪಡುವ ನಿಶ್ಚಿತ ಠೇವಣಿ ಭಾರತೀಯರ ನೆಚ್ಚಿನ ಹೂಡಿಕೆಯ ಆಯ್ಕೆ ಎನಿಸಿಕೊಂಡಿದೆ. ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇದು ಉತ್ತಮ. ಈ ಯೋಜನೆ ಮುಖಾಂತರ ಹೂಡಿಕೆದಾರರು ತಮ್ಮ ಹೆಚ್ಚುವರಿ ಹಣವನ್ನು ನಿಗದಿತ ಅವಧಿಗೆ ಠೇವಣಿ ಇರಿಸಿಕೊಳ್ಳಬಹುದು. ಫಿಕ್ಸೆಡ್ ಡೆಪಾಸಿಟ್‌ಗೆ ವಿವಿಧ ಬ್ಯಾಂಕ್‌ಗಳು ಎಷ್ಟು ಬಡ್ಡಿದರ ನೀಡುತ್ತವೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಟೈಮ್ ಡೆಪಾಸಿಟ್ ಅಥವಾ ಟರ್ಮ್ ಡೆಪಾಸಿಟ್ ಎಂದೂ ಕರೆಯಲ್ಪಡುವ ನಿಶ್ಚಿತ ಠೇವಣಿ (Fixed Deposit) ಭಾರತೀಯರ ನೆಚ್ಚಿನ ಹೂಡಿಕೆಯ ಆಯ್ಕೆ ಎನಿಸಿಕೊಂಡಿದೆ. ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇದು ಉತ್ತಮ. ಈ ಯೋಜನೆ ಮುಖಾಂತರ ಹೂಡಿಕೆದಾರರು ತಮ್ಮ ಹೆಚ್ಚುವರಿ ಹಣವನ್ನು ನಿಗದಿತ ಅವಧಿಗೆ ಠೇವಣಿ ಇರಿಸಿಕೊಳ್ಳಬಹುದು. ಆಯ್ಕೆ ಮಾಡಿದ ಅವಧಿಗೆ ಸ್ಥಿರ ಬಡ್ಡಿಯನ್ನೂ ಪಡೆಯಬಹುದು ಎನ್ನುವ ಕಾರಣಕ್ಕೆ ಇದು ಅನೇಕರ ಗಮನ ಸೆಳೆಯುತ್ತದೆ. ಹೂಡಿಕೆಯ ಅವಧಿಯನ್ನು ಅವಲಂಬಿಸಿ ವಿವಿಧ ಬ್ಯಾಂಕ್‌ಗಳು ಶೇ. 3ರಿಂದ 7.50 ರವರೆಗೆ ಬಡ್ಡಿದರಗಳನ್ನು ನೀಡುತ್ತವೆ. ಹಿರಿಯ ನಾಗರಿಕರು ಹೆಚ್ಚುವರಿ ಶೇ. 0.5 ಬಡ್ಡಿಯೂ ಲಭ್ಯ. ಇಂದಿನ ಮನಿಗೈಡ್‌ (Money Guide)ನಲ್ಲಿ ಫಿಕ್ಸೆಡ್ ಡೆಪಾಸಿಟ್‌ಗೆ ವಿವಿಧ ಬ್ಯಾಂಕ್‌ಗಳು ಎಷ್ಟು ಬಡ್ಡಿದರ ನೀಡುತ್ತವೆ ಎನ್ನುವುದನ್ನು ಗಮನಿಸೋಣ.

ನಿಶ್ಚಿತ ಠೇವಣಿಯಲ್ಲಿ ಹೂಡಿಕೆಯ ಅವಧಿ ಮತ್ತು ಬಡ್ಡಿದರವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಸಾಮಾನ್ಯವಾಗಿ 7 ದಿನಗಳಿಂದ 10 ವರ್ಷಗಳವರೆಗಿನ ಅವಧಿಯಲ್ಲಿ ನೀವು ಒಂದು ಬಾರಿ ಹೂಡಿಕೆ ಮಾಡಬಹುದು. ಇದರ ಮೇಲಿನ ಬಡ್ಡಿಯನ್ನು ನಿಯಮಿತ ಮಧ್ಯಂತರಗಳಲ್ಲಿ ಪಡೆಯಬಹುದು ಅಥವಾ ನೀವು ಮುಕ್ತಾಯದ ಸಮಯದಲ್ಲಿ ಅದನ್ನು ಸ್ವೀಕರಿಸುವ ಆಯ್ಕೆಯನ್ನು ಆಯ್ದುಕೊಳ್ಳಬಹುದು. 

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (2 ಕೋಟಿ ರೂ.ಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರ)

ಎಸ್‌ಬಿಐಯ ಸ್ಥಿರ ಠೇವಣಿಗಳಲ್ಲಿ ಹೂಡಿಕೆ ಮಾಡುವ ಗ್ರಾಹಕರಿಗೆ ಶೇ. 3ರಿಂದ 7ರವರೆಗೆ ಬಡ್ಡಿ ಲಭಿಸುತ್ತದೆ. ಜತೆಗೆ ಹಿರಿಯ ನಾಗರಿಕರು ಹೆಚ್ಚುವರಿ 50 ಬೇಸಿಸ್ ಪಾಯಿಂಟ್‌ (ಬಿಪಿಎಸ್) ಪಡೆಯಲಿದ್ದಾರೆ. ನಿರ್ದಿಷ್ಟವಾಗಿ ಒಂದು ವರ್ಷದಲ್ಲಿ ಮುಕ್ತಾಯಗೊಳ್ಳುವ ಎಫ್‌ಡಿಗೆ ಬ್ಯಾಂಕ್ ಶೇ. 6.80ರಷ್ಟು ಬಡ್ಡಿದರವನ್ನು ಒದಗಿಸುತ್ತದೆ. ಇದಲ್ಲದೆ, ಎರಡರಿಂದ ಮೂರು ವರ್ಷಗಳ ಅವಧಿಗೆ ಬ್ಯಾಂಕ್ ಶೇ. 7ರಷ್ಟು ಬಡ್ಡಿದರವನ್ನು ನೀಡುತ್ತದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (2 ಕೋಟಿ ರೂ.ಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರ)

ಪಿಎನ್‌ಬಿ ಸ್ಥಿರ ಠೇವಣಿಗೆ ಶೇ. 3.50ರಿಂದ 7.50ರವರೆಗೆ ಬಡ್ಡಿದರ ಒದಗಿಸುತ್ತದೆ. ನಿರ್ದಿಷ್ಟವಾಗಿ ಒಂದು ವರ್ಷದಲ್ಲಿ ಮುಕ್ತಾಯಗೊಳ್ಳುವ ಸ್ಥಿರ ಠೇವಣಿಗಳಿಗೆ ಸಾಮಾನ್ಯ ಹೂಡಿಕೆದಾರರಿಗೆ ಬಡ್ಡಿದರವು ಶೇಕಡಾ 6.75ರಷ್ಟಿದ್ದರೆ, ಹಿರಿಯ ನಾಗರಿಕರು ಶೇ. 7.25ರಷ್ಟು ಪಡೆಯಲಿದ್ದಾರೆ.

ಎಚ್‌ಡಿಎಫ್‌ಸಿ ಬ್ಯಾಂಕ್ (2 ಕೋಟಿ ರೂ.ಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರ)

ಎಚ್‌ಡಫ್‌ಸಿ ಬ್ಯಾಂಕ್ ಒಂದು ವರ್ಷದ ಸ್ಥಿರ ಠೇವಣಿಗಳಿಗೆ ಆಕರ್ಷಕ ಬಡ್ಡಿ ದರವನ್ನು ನೀಡುತ್ತದೆ. ನಿಯಮಿತ ಹೂಡಿಕೆದಾರರು ಶೇಕಡಾ 6.60ರಷ್ಟು ಬಡ್ಡಿದರವನ್ನು ಪಡೆಯಬಹುದು. ಮಾತ್ರವಲ್ಲ ಹಿರಿಯ ನಾಗರಿಕರು ಅಂತಹ ಠೇವಣಿಗಳ ಮೇಲೆ ಶೇಕಡಾ 7.10ರಷ್ಟು ಬಡ್ಡಿದರ ಹೊಂದಬಹುದು.

ಐಸಿಐಸಿಐ ಬ್ಯಾಂಕ್ (5 ಕೋಟಿ ರೂ.ಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರ)

ಐಸಿಐಸಿಐ ಬ್ಯಾಂಕ್ ತನ್ನ ಎಫ್‌ಡಿ ಖಾತೆಗಳಿಗೆ ಬಡ್ಡಿದರಗಳನ್ನು ಶೇ. 3ರಿಂದ 7.50ರವರೆಗೆ ನೀಡುತ್ತದೆ. ಮಾತ್ರವಲ್ಲ ಹಿರಿಯ ನಾಗರಿಕರು ಹೆಚ್ಚುವರಿ ಶೇ. 0.5ರಷ್ಟು ಬಡ್ಡಿ ಪಡೆಯಲಿದ್ದಾರೆ. ನಿರ್ದಿಷ್ಟವಾಗಿ ಒಂದು ವರ್ಷದಲ್ಲಿ ಮುಕ್ತಾಯಗೊಳ್ಳುವ ಸ್ಥಿರ ಠೇವಣಿಗಳಿಗೆ ಸಾಮಾನ್ಯ ಗ್ರಾಹಕರಿಗೆ ಶೇ. 6.70ರಷ್ಟು ಬಡ್ಡಿ ಇದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

Continue Reading

ಮನಿ-ಗೈಡ್

Money Guide: ಎಫ್‌ಡಿ V/S ಆರ್‌ಡಿ; ಯಾವುದು ಉತ್ತಮ? ಯಾವುದರಲ್ಲಿ ಹೂಡಿಕೆ ಮಾಡಬೇಕು?

Money Guide: ಉಳಿತಾಯವು ಅನಿರೀಕ್ಷಿತ ಆಘಾತ, ಆರ್ಥಿಕ ಸಮಸ್ಯೆಗಳಿಂದ ನಿಮ್ಮನ್ನು ಕುಗ್ಗದಂತೆ ಕಾಪಾಡುತ್ತದೆ. ಹೀಗಾಗಿ ನೀವು ಭವಿಷ್ಯದ ದೃಷ್ಟಿಯಿಂದ ವಿವಿಧ ಯೋಜನೆಗಳಲ್ಲಿ ನಿಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ಪೈಕಿ ನಿಶ್ಚಿತ ಠೇವಣಿ ಮತ್ತು ರಿಕರಿಂಗ್‌ ಠೇವಣಿ ಪ್ರಮುಖವಾದುದು. ಹಾಗಾದರೆ ಈ ಎರಡು ಯೋಜನೆಗಳ ವೈಶಿಷ್ಟ್ಯಗಳೇನು ಎನ್ನುವುದನ್ನು ನೋಡೋಣ. ಎಫ್‌ಡಿ ಮತ್ತು ಆರ್‌ಡಿ ಇವೆರಡೂ ಭಾರತದಲ್ಲಿನ ಅತ್ಯಂತ ಜನಪ್ರಿಯ ಹೂಡಿಕೆ ಯೋಜನೆಗಳು ಎನಿಸಿಕೊಂಡಿವೆ. ವಿಶೇಷವಾಗಿ ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇವು ಉತ್ತಮ ಆಯ್ಕೆ.

VISTARANEWS.COM


on

Money Guide
Koo

ಬೆಂಗಳೂರು: ಇಂದಿನ ಉಳಿತಾಯವೇ ನಾಳೆಯ ಆದಾಯ ಎನ್ನುವ ಮಾತಿದೆ. ಅಂದರೆ ನಾವು ಎಷ್ಟು ಉಳಿತಾಯ ಮಾಡುತ್ತೇವೆಯೋ ಭವಿಷ್ಯದಲ್ಲಿ ಅಷ್ಟು ನೆಮ್ಮದಿ ಇರುತ್ತದೆ ಎನ್ನುವುದು ಇದಕ್ಕೆ ಕಾರಣ. ಇದಕ್ಕಾಗಿಯೇ ಆರ್ಥಿಕ ತಜ್ಞರು ಉಳಿತಾಯದತ್ತ ಗಮನ ಹರಿಸುವಂತೆ ಸಲಹೆ ನೀಡುತ್ತಾರೆ. ಉಳಿತಾಯವು ಅನಿರೀಕ್ಷಿತ ಆಘಾತ, ಆರ್ಥಿಕ ಸಮಸ್ಯೆಗಳಿಂದ ನಿಮ್ಮನ್ನು ಕುಗ್ಗದಂತೆ ಕಾಪಾಡುತ್ತದೆ. ಹೀಗಾಗಿ ನೀವು ಭವಿಷ್ಯದ ದೃಷ್ಟಿಯಿಂದ ವಿವಿಧ ಯೋಜನೆಗಳಲ್ಲಿ ನಿಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ಪೈಕಿ ನಿಶ್ಚಿತ ಠೇವಣಿ (Fixed Deposits) ಮತ್ತು ರಿಕರಿಂಗ್‌ ಠೇವಣಿ (Recurring Deposits) ಪ್ರಮುಖವಾದುದು. ಹಾಗಾದರೆ ಈ ಎರಡು ಯೋಜನೆಗಳ ವೈಶಿಷ್ಟ್ಯಗಳೇನು ಎನ್ನುವುದನ್ನು ನೋಡೋಣ (Money Guide).

ಎಫ್‌ಡಿ ಮತ್ತು ಆರ್‌ಡಿ ಇವೆರಡೂ ಭಾರತದಲ್ಲಿನ ಅತ್ಯಂತ ಜನಪ್ರಿಯ ಹೂಡಿಕೆ ಯೋಜನೆಗಳು ಎನಿಸಿಕೊಂಡಿವೆ. ವಿಶೇಷವಾಗಿ ಯಾವುದೇ ರಿಸ್ಕ್‌ಗಳನ್ನು ತೆಗೆದುಕೊಳ್ಳದೆ ಇರುವ ಹೂಡಿಕೆದಾರರಿಗೆ ಇವು ಉತ್ತಮ ಆಯ್ಕೆ. ಇದರಿಂದ ಯಾವುದೇ ಅಪಾಯವಿಲ್ಲದೆ ಸ್ಥಿರ ಆದಾಯವನ್ನು ಗಳಿಸಬಹುದು ಎನ್ನುವ ಕಾರಣಕ್ಕೆ ಇದನ್ನು ಬಹುತೇಕರು ನೆಚ್ಚಿಕೊಂಡಿದ್ದಾರೆ.

ನಿಶ್ಚಿತ ಠೇವಣಿಯಲ್ಲಿ ಹೂಡಿಕೆಯ ಅವಧಿ ಮತ್ತು ಬಡ್ಡಿದರವನ್ನು ಮೊದಲೇ ನಿಗದಿಪಡಿಸಲಾಗಿರುತ್ತದೆ. ಸಾಮಾನ್ಯವಾಗಿ 7 ದಿನಗಳಿಂದ 10 ವರ್ಷಗಳವರೆಗಿನ ಅವಧಿಯಲ್ಲಿ ನೀವು ಒಂದು ಬಾರಿ ಹೂಡಿಕೆ ಮಾಡಬಹುದು. ಇದರ ಮೇಲಿನ ಬಡ್ಡಿಯನ್ನು ನಿಯಮಿತ ಮಧ್ಯಂತರಗಳಲ್ಲಿ ಪಡೆಯಬಹುದು ಅಥವಾ ನೀವು ಮುಕ್ತಾಯದ ಸಮಯದಲ್ಲಿ ಅದನ್ನು ಸ್ವೀಕರಿಸುವ ಆಯ್ಕೆಯನ್ನು ಆಯ್ದುಕೊಳ್ಳಬಹುದು. 

ರಿಕರಿಂಗ್ ಡೆಪಾಸಿಟ್ ಯೋಜನೆಯಲ್ಲಿ ನೀವು ನಿರ್ದಿಷ್ಟ ಮೊತ್ತಗಳನ್ನು ಠೇವಣಿ ಇಡಬಹುದು. ಇದು 6 ತಿಂಗಳಿಂದ 10 ವರ್ಷಗಳು ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯಲ್ಲಿರಬಹುದು. ರಿಕರಿಂಗ್ ಡೆಪಾಸಿಟ್‌ನಲ್ಲಿ ನೀವು ಹೂಡಿಕೆ ಮಾಡಬಹುದಾದ ಕನಿಷ್ಠ ಮೊತ್ತವು ಸಾಮಾನ್ಯವಾಗಿ ಕೇವಲ ರೂ. 100 ಅಥವಾ ಅದಕ್ಕೂ ಕಡಿಮೆ ಇರುತ್ತದೆ. ಮೆಚ್ಯೂರಿಟಿ ಸಮಯದಲ್ಲಿ ಬಡ್ಡಿಯೊಂದಿಗೆ ಅಸಲನ್ನು ಪಡೆಯಬಹುದು.

ಎಫ್‌ಡಿಯ ವೈಶಿಷ್ಟ್ಯ

  • ಒಟ್ಟು ಮೊತ್ತದ ಹೂಡಿಕೆ: ಎಫ್‌ಡಿಗಳಿಗೆ ಒಂದು ಬಾರಿಯ ದೊಡ್ಡ ಮೊತ್ತದ ಠೇವಣಿ ಅಗತ್ಯ.
  • ಸ್ಥಿರ ಬಡ್ಡಿದರ: ಬಡ್ಡಿದರವನ್ನು ಹೂಡಿಕೆಯ ಸಮಯದಲ್ಲಿ ನಿಗದಿಪಡಿಸಲಾಗುತ್ತದೆ ಮತ್ತು ಅವಧಿಯುದ್ದಕ್ಕೂ ಸ್ಥಿರವಾಗಿರುತ್ತದೆ.
  • ಬಡ್ಡಿ ಪಾವತಿ ಆಯ್ಕೆಗಳು: ನಿಮ್ಮ ಆದ್ಯತೆಯನ್ನು ಅವಲಂಬಿಸಿ ಬಡ್ಡಿಯನ್ನು ಸಂಯೋಜಿಸಬಹುದು ಮತ್ತು ಮರುಹೂಡಿಕೆ ಮಾಡಬಹುದು.
  • ಕಡಿಮೆ ದ್ರವ್ಯತೆ: ಗಮನಿಸಿ ಅವಧಿ ಮುಕ್ತಾಯಗೊಳ್ಳುವ ಮೊದಲು ಎಫ್‌ಡಿಯನ್ನು ಹಿಂಪಡೆಯುವುದು ದಂಡಕ್ಕೆ ಮತ್ತು ಬಡ್ಡಿ ನಷ್ಟಕ್ಕೆ ಕಾರಣವಾಗಬಹುದು.

ಆರ್‌ಡಿಯ ವೈಶಿಷ್ಟ್ಯ

  • ನಿಯಮಿತ ಉಳಿತಾಯ: ಆರ್‌ಡಿ ನಿಮಗೆ ನಿಯಮಿತವಾಗಿ ಸಾಮಾನ್ಯವಾಗಿ ಮಾಸಿಕವಾಗಿ ನಿಗದಿತ ಮೊತ್ತವನ್ನು ಉಳಿಸಲು ಅನುವು ಮಾಡಿಕೊಡುತ್ತದೆ.
  • ಫ್ಲೆಕ್ಸಿಬಲ್ ಡೆಪಾಸಿಟ್ ಮೊತ್ತ: ನೀವು ಪ್ರತಿ ತಿಂಗಳು ಠೇವಣಿ ಮಾಡಬೇಕಾದ ಮೊತ್ತವನ್ನು ಆಯ್ಕೆ ಮಾಡಬಹುದು.
  • ಸ್ಥಿರ ಬಡ್ಡಿದರ: ಎಫ್‌ಡಿಯಂತೆಯೇ ಆರ್‌ಡಿ ಕೂಡ ಇಡೀ ಅವಧಿಗೆ ಸ್ಥಿರ ಬಡ್ಡಿದರವನ್ನು ನೀಡುತ್ತದೆ.
  • ನಿಗದಿತ ಅವಧಿ: ಆರ್‌ಡಿ ನಿಗದಿತ ಅವಧಿಯನ್ನು ಹೊಂದಿರುತ್ತದೆ. ಮೆಚ್ಯೂರಿಟಿ ಮೊತ್ತವನ್ನು ಮೊದಲೇ ನಿರ್ಧರಿಸಲಾಗುತ್ತದೆ.
  • ಹೆಚ್ಚಿನ ದ್ರವ್ಯತೆ: ಎಫ್‌ಡಿಗೆ ಹೋಲಿಸಿದರೆ ಆರ್‌ಡಿ ಉತ್ತಮ ದ್ರವ್ಯತೆಯನ್ನು ನೀಡುತ್ತವೆ. ನೀವು ಸಂಗ್ರಹಿಸಿಟ್ಟ ಮೊತ್ತವನ್ನು ಯಾವಾಗ ಬೇಕಾದರೂ ಹಿಂಪಡೆಯಬಹುದು ಅಥವಾ ತುರ್ತು ಸಂದರ್ಭಗಳಲ್ಲಿ ಅದರ ಮೇಲೆ ಸಾಲವನ್ನು ತೆಗೆದುಕೊಳ್ಳಬಹುದು.

ಯಾವುದು ಉತ್ತಮ?

ಮೊದಲೇ ಹೇಳಿದಂತೆ ಎಫ್‌ಡಿ ಮತ್ತು ಆರ್‌ಡಿ ಎರಡೂ ಉತ್ತಮ ಉಳಿತಾಯ ಯೋಜನೆ ಎನಿಸಿಕೊಂಡಿದೆ. ಎಫ್‌ಡಿಯಲ್ಲಿ ಹೂಡಿಕೆ ಮಾಡಲು ದೊಡ್ಡ ಮೊತ್ತವನ್ನು ಹೊಂದಿರಬೇಕಾಗುತ್ತದೆ. ಆದರೆ ಮಾಸಿಕ ಆದಾಯದಿಂದ ಸಣ್ಣ ಭಾಗವನ್ನು ಹೂಡಿಕೆ ಮಾಡುವವರಿಗೆ ಆರ್‌ಡಿ ಉತ್ತಮ. ಆರ್‌ಡಿ ಮತ್ತು ಎಫ್‌ಡಿ ಎರಡೂ ಕಡಿಮೆ ತೆರಿಗೆ ಸ್ಲ್ಯಾಬ್‌ನಲ್ಲಿರುವ ರಿಸ್ಕ್‌ಗಳನ್ನು ತೆಗೆದುಕೊಳ್ಳದ ಹೂಡಿಕೆದಾರರಿಗೆ ಹೆಚ್ಚು ಸೂಕ್ತವಾಗಿವೆ. ನಿಮಗೆ ಯಾವುದು ಉತ್ತಮ ಎಂಬುದು ನಿಮ್ಮ ಆರ್ಥಿಕ ಗುರಿಗಳು ಮತ್ತು ಆದ್ಯತೆಗಳನ್ನು ಅವಲಂಬಿಸಿರುತ್ತದೆ. ನೀವು ಹೂಡಿಕೆ ಮಾಡಲು ದೊಡ್ಡ ಮೊತ್ತವನ್ನು ಹೊಂದಿದ್ದರೆ ಮತ್ತು ದ್ರವ್ಯತೆ ಅಗತ್ಯವಿಲ್ಲದಿದ್ದರೆ ಎಫ್‌ಡಿ ಸೂಕ್ತವಾಗಬಹುದು. ಮತ್ತೊಂದೆಡೆ ನೀವು ನಿಯಮಿತವಾಗಿ ಉಳಿತಾಯ ಮಾಡಲು ಮತ್ತು ದ್ರವ್ಯತೆಗೆ ಆದ್ಯತೆ ನೀಡಲು ಬಯಸಿದರೆ ಆರ್‌ಡಿ ಉತ್ತಮ ಆಯ್ಕೆಯಾಗಿದೆ. ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ನಿರ್ಣಯಿಸುವುದು ಮತ್ತು ಹಣಕಾಸು ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿ.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading
Advertisement
Madhavi Raje Scindia
ದೇಶ48 seconds ago

Madhavi Raje Scindia: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

woman murder case kengeri
ಕ್ರೈಂ10 mins ago

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Anchor Anushree talking with fans on instagram live
ಕಿರುತೆರೆ11 mins ago

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

NewsClick case
ದೇಶ42 mins ago

NewsClick Case: ಚೀನಾ ಪರ ಪ್ರಚಾರ; ಬಂಧನದಲ್ಲಿದ್ದ ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ರಿಲೀಸ್‌

Drone Prathap Special Gift For sangeetha sringeri Birthday
ಕಿರುತೆರೆ54 mins ago

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

gold rate today
ಚಿನ್ನದ ದರ55 mins ago

Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

Actor Diganth role in Crazystar Ravichandran The Judgement movie Kannada
ಸ್ಯಾಂಡಲ್ ವುಡ್1 hour ago

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

US sanction
ದೇಶ1 hour ago

US sanction: ನಿರ್ಬಂಧ ಹೇರುವ ಎಚ್ಚರಿಕೆ ನೀಡಿದ್ದ ಅಮೆರಿಕಕ್ಕೆ ಭಾರತ ತಿರುಗೇಟು

Shehbaz Sharif
ವಿದೇಶ2 hours ago

Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

Rakhi Sawant Rushed to Hospital After Heart-Related Ailment
ಬಾಲಿವುಡ್2 hours ago

Rakhi Sawant: ಆಸ್ಪತ್ರೆಗೆ ದಾಖಲಾದ ನಟಿ ರಾಖಿ ಸಾವಂತ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ7 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ17 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202420 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202423 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ24 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌