Bairagee Movie | ಹ್ಯಾಟ್ರಿಕ್‌ ಹೀರೋ ನೋಡಲು ಮುಗಿಬಿದ್ದ ಫ್ಯಾನ್ಸ್‌ : ಅಪ್ಪು ಹೆಸರಿನಲ್ಲಿ ಜೈಕಾರ - Vistara News

ಸಿನಿಮಾ

Bairagee Movie | ಹ್ಯಾಟ್ರಿಕ್‌ ಹೀರೋ ನೋಡಲು ಮುಗಿಬಿದ್ದ ಫ್ಯಾನ್ಸ್‌ : ಅಪ್ಪು ಹೆಸರಿನಲ್ಲಿ ಜೈಕಾರ

Bairagee Movie : ಅಭಿಮಾನಿಗಳಿಂದ ಸಿನಿಮಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮತ್ತೊಮ್ಮೆ ಡಾಲಿ ಹಾಗೂ ಶಿವಣ್ಣ ಕಾಂಬಿನೇಷನ್‌ ಅನ್ನು ಜನ ಮೆಚ್ಚಿದ್ದಾರೆ.

VISTARANEWS.COM


on

Bairagee Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು : ಜಿಲ್ಲೆಯ ಟಿ. ನರಸಿಪುರದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ. ದೊಡ್ಮನೆ ಅಭಿಮಾನಿಗಳು ಆರತಿ ಎತ್ತಿ ಶಿವಣ್ಣನಿಗೆ ಸ್ವಾಗತ ಕೋರಿದ್ದಾರೆ.

ವಿಜಯ, ಭಗವಾನ್ ಚಿತ್ರಮಂದಿರಗಳು ಹೌಸ್ ಫುಲ್ ಆಗಿದ್ದು, ಶಿವಣ್ಣ ಹೋದಲ್ಲೆಲ್ಲ ಅಪ್ಪು ಹೆಸರಿನಲ್ಲಿ ಅಭಿಮಾನಿಗಳು ಜೈಕಾರ ಕೂಗಿದ್ದಾರೆ. ಇದೀಗ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮತ್ತೊಮ್ಮೆ ಡಾಲಿ ಹಾಗೂ ಶಿವಣ್ಣ ಕಾಂಬಿನೇಷನ್‌ ಅನ್ನು ಅಭಿಮಾನಿಗಳು ಮೆಚ್ಚಿದ್ದಾರೆ.

ಇದನ್ನೂ ಓದಿ | Bairagee Movie | ಚಿತ್ರಮಂದಿರಗಳಿಗೆ ಭೇಟಿ ನೀಡಲಿದ್ದಾರೆ ಹ್ಯಾಟ್ರಿಕ್‌ ಹೀರೋ: ರಾರಾಜಿಸುತ್ತಿದೆ ಶಿವಣ್ಣನ ಕಟೌಟ್‌

ಶುಕ್ರವಾರ (ಜು.1) ಬೈರಾಗಿ ರಾಜ್ಯದಾದ್ಯಂತ ತೆರೆ ಕಂಡಿತ್ತು. “ಟಗರುʼ ಸಿನಿಮಾ ನಂತರ ಡಾಲಿ ಧನಂಜಯ್‌ ಹಾಗೂ ಶಿವರಾಜ್‌ಕುಮಾರ್‌ ಒಟ್ಟಿಗೆ ಅಭಿನಯಿಸಿರುವ ಚಿತ್ರ ಇದಾಗಿದೆ.

ಶಿವರಾಜ್‌ ಕುಮಾರ್‌ ಈ ಚಿತ್ರದಲ್ಲಿ ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಅವರ ೧೨೩ನೇ ಚಿತ್ರ. ಡಾಲಿ ಧನಂಜಯ್‌ ಗ್ರೇ ಶೇಡ್‌ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಣ್ಣ ಮತ್ತು ಡಾಲಿಯ ಜತೆ ನಟ ಶಶಿಕುಮಾರ್‌, ಅಂಜಲಿ ಸೇರಿದಂತೆ ದೊಡ್ಡ ತಾರಾ ಬಳಗವೇ ಈ ಚಿತ್ರದಲ್ಲಿದೆ.

ಇದನ್ನೂ ಓದಿ |ಬೆಂಗಳೂರಿನಿಂದ ಚಾಮರಾಜನಗರಕ್ಕೆ ಹೊರಟಿತು ʻಬೈರಾಗಿʼ ಯಾತ್ರೆ, ಅಭಿಮಾನಿಗಳ ಸಂಭ್ರಮದಲ್ಲಿ ಮುಳುಗೆದ್ದ ಚಿತ್ರತಂಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Kannada New Movie: ಕನ್ನಡದ ಖ್ಯಾತ ನಿರ್ದೇಶಕ ಎಸ್‌.ನಾರಾಯಣ್‌ ಹೊಸ ಚಿತ್ರವನ್ನು ಸದ್ದಿಲ್ಲದೆ ಆರಂಭಿಸಿದ್ದಾರೆ. ಈ ನೂತನ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ. ನಾಯಕಿಯಾಗಿ ಬೃಂದಾ ಕಾಣಿಸಿಕೊಳ್ಳುತ್ತಿದ್ದು, ಚಿತ್ರಕ್ಕೆ ಶೀರ್ಷಿಕೆ ಇನ್ನಷ್ಟೇ ಅಂತಿಮವಾಗಬೇಕಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಡಾ. ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ. ಎಸ್‌.ನಾರಾಯಣ್ ನಿರ್ದೇಶನದ ʼಪ್ರೊಡಕ್ಷನ್ ನಂ. 1ʼ ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ (Kannada New Movie). ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್. ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌.

ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನ ಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧಾ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತ ರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿರುವ ʼಪ್ರೊಡಕ್ಷನ್ ನಂ. 1ʼ ಚಿತ್ರದ ಪಿ.ಆರ್.ಒ. ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Continue Reading

ಕಾಲಿವುಡ್

Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

Kamal Haasan: ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

VISTARANEWS.COM


on

Kamal Haasan gives a fiery speech at Indian 2 event
Koo

ಚೆನ್ನೈ: ಕಮಲ್‌ ಹಾಸನ್‌ (Kamal Haasan) ಅಭಿನಯದ ʻಇಂಡಿಯನ್ 2ʼ ಸಿನಿಮಾ ಆಡಿಯೊ ಲಾಂಚ್‌ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ನಿರ್ದೇಶಕ ಶಂಕರ್, ಕಮಲ್ ಹಾಸನ್, ಅನಿರುದ್ಧ್ ರವಿಚಂದರ್, ರಕುಲ್ ಪ್ರೀತ್ ಸಿಂಗ್ ಮತ್ತು ಕಾಜಲ್ ಅಗರ್ವಾಲ್, ಸಿಲಂಬರಸನ್ ಟಿಆರ್, ಲೋಕೇಶ್ ಕನಕರಾಜ್, ನೆಲ್ಸನ್ ದಿಲೀಪ್‌ಕುಮಾರ್, ಬಾಬಿ ಸಿಂಹ ಮತ್ತು ಬ್ರಹ್ಮಾನಂದಂ ಹಾಜರಿದ್ದರು. ಕಾರ್ಯಕ್ರಮದಲ್ಲಿ ಅತ್ಯಂತ ಖಡಕ್‌ ಆಗಿ ಭಾಷಣ ಮಾಡಿದರು ಕಮಲ್‌ ಹಾಸನ್‌.

ಕಮಲ್‌ ಭಾಷಣದಲ್ಲಿ ʻʻನಾನು ತಮಿಳಿಗ ಮತ್ತು ಭಾರತೀಯ. ನಾನು ಒಮ್ಮೆ ತಮಿಳಿಗ ಹಾಗೂ ಒಮ್ಮೆ ಭಾರತೀಯ ಎರಡೂ ಆಗಬಲ್ಲೆ. ಒಡೆದು ಆಳುವುದು ಬ್ರಿಟಿಷ್ ಪರಿಕಲ್ಪನೆಯಾಗಿತ್ತು. ಅವರು ಹಾಗೆ ಮಾಡಿದರು. ಏಕೆಂದರೆ ಭಾರತೀಯರು ಒಗ್ಗಟ್ಟಾದಾಗ ಓಡಿಹೋಗಲು ಅವರಿಗೆ ಒಂದು ಮನೆ ಎಂಬುದಿತ್ತು. ಆದರೆ ಇಂದು ಒಡೆದು ಆಳುತ್ತಿರುವವರು ಎಲ್ಲಿಗೆ ಓಡಿಹೋಗುತ್ತಾರೆ?’ ಎಂದು ಅವರು ಪ್ರಶ್ನೆ ಮಾಡಿದರು. ಭಾರತವನ್ನು ಒಡೆದು ಆಳುತ್ತಿರುವವರ ವಿರುದ್ಧ ಭಾರತೀಯರು ಒಂದಲ್ಲ ಒಂದು ದಿನ ದಂಗೆ ಏಳುತ್ತಾರೆ ಎಂದರು.

“ಪ್ರತಿಯೊಂದು ನಗರವೂ ​​ನಿಮ್ಮ ನಗರವೇ, ಎಲ್ಲರೂ ನಿಮ್ಮ ಬಂಧುಗಳೇ. ನಮ್ಮ ಈ ತಮಿಳು ರಾಜ್ಯಕ್ಕೆ ಬಂದವರಿಗೆ ನಾವು ಜೀವ ಕೊಡುವುದರಲ್ಲಿಯೂ ಹೆಸರುವಾಸಿಯಾಗಿದ್ದೇವೆ. ತಮಿಳಿಗನೊಬ್ಬ ದೇಶವನ್ನು ಆಳುವ ದಿನ ಏಕೆ ಬರಬಾರದು? ಇದು ನನ್ನ ದೇಶ, ಮತ್ತು ನಾವು ಏಕತೆಯನ್ನು ಕಾಪಾಡಬೇಕುʼʼಎಂದರು.  ಕಮಲ್ ಹಾಸನ್ ನಟರಾಗಿರುವ ಜೊತೆಗೆ ರಾಜಕಾರಣಿಯೂ ಹೌದು, ‘ಮಕ್ಕಳ್ ನಿಧಿ ಮಯಂ’ ಹೆಸರಿನ ಪಕ್ಷ ಕಟ್ಟಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ `ಇಂಡಿಯನ್ 2‘ (Indian 2 Audio Launch) ಬಿಡುಗಡೆಗೆ ಮುಂಚಿತವಾಗಿ, ಜೂನ್ 1ರಂದು ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಮೆಗಾ ಆಡಿಯೊ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ.

1996ರಲ್ಲಿ ತೆರೆಕಂಡ ಎಸ್‌. ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನೆಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

Continue Reading

ಸಿನಿಮಾ

Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

Dolly Dhananjay: ಡಾಲಿ ಧನಂಜಯ ‘ದವನ’ದ ವೇದಿಕೆಯ ಮೇಲೆ ಬರುತ್ತಿದ್ದಂತೆ ಅಭಿಮಾನಿಗಳ ಕೇಕೆ, ಕೂಗಾಟ ಮುಗಿಲ ಮುಟ್ಟಿತ್ತು. ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ‘ಕೋಟಿ’ಯ ಟೀಸರ್ ಮತ್ತು ಹಾಡುಗಳಿಗೆ ಅದ್ಭುತ ಪ್ರತಿಕ್ರಿಯೆ ದೊರೆಯಿತು. ಧನಂಜಯ್ ಕಾರ್ಯಕ್ರಮದಿಂದ ವಾಪಸ್ಸು ಹೋಗುವವರೆಗೂ ಇಡೀ ಕಾಲೇಜಿನ‌ ಮೂಲೆಮೂಲೆಯಲ್ಲಿ ‘ಡಾಲಿ ಡಾಲಿ’ ಎಂಬ ಅಭಿಮಾನಿಗಳ‌ ಪ್ರೀತಿಯ ದನಿ ಮೊಳಗುತ್ತಿತ್ತು.

VISTARANEWS.COM


on

Kotee Movie in Davanagere Release event
Koo

ಬೆಂಗಳೂರು: ಡಾಲಿ ಧನಂಜಯ್ (Dolly Dhananjay) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೋಟಿ’ ಜೂನ್ 14ರಂದು ಬಿಡುಗಡೆಯಾಗಲು ಸಿದ್ಧವಾಗಿದೆ.‌ ಈಗಾಗಲೇ ಚಿತ್ರದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದು, ಇದೇ ಬುಧವಾರ (ಮೇ.12) ‘ಕೋಟಿ’ ಸಿನಿಮಾ ಟ್ರೈಲರ್‌ ಬಿಡುಗಡೆಯಾಗಲಿದೆ.

‘ಕೋಟಿ’ಯ ಪ್ರಮೋಶನ್ ಸಲುವಾಗಿ ಡಾಲಿ ಧನಂಜಯ ದಾವಣಗೆರೆಗೆ ತೆರಳಿದ್ದರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ‘ದವನ ಫೆಸ್ಟ್’ ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು. ಇಲ್ಲಿಗೆ ಡಾಲಿ ಮುಖ್ಯ ಅತಿಥಿಯಾಗಿ ಬಂದಿದ್ದು ಅಭಿಮಾನಿಗಳನ್ನು ಖುಷಿಯ ಕಡಲಿನಲ್ಲಿ ತೇಲಿಸಿತ್ತು. ಸುಮಾರು ಐದು ಸಾವಿರಕ್ಕೂ ಅಧಿಕ ವಿಧ್ಯಾರ್ಥಿಗಳು ಸೇರಿದ್ದ ಈ ಸಮಾರಂಭದಲ್ಲಿ ಡಾಲಿಯ ಜತೆ ಕೋಟಿಯ ನಾಯಕಿ ಮೋಕ್ಷಾ ಕುಶಾಲ್, ಸಹಕಲಾವಿದರಾದ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್ ಮತ್ತು ಅಭಿಷೇಕ್ ಶ್ರೀಕಾಂತ್ ಪಾಲ್ಗೊಂಡಿದ್ದರು.

ಡಾಲಿ ಧನಂಜಯ ‘ದವನ’ದ ವೇದಿಕೆಯ ಮೇಲೆ ಬರುತ್ತಿದ್ದಂತೆ ಅಭಿಮಾನಿಗಳ ಕೇಕೆ, ಕೂಗಾಟ ಮುಗಿಲ ಮುಟ್ಟಿತ್ತು. ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ‘ಕೋಟಿ’ಯ ಟೀಸರ್ ಮತ್ತು ಹಾಡುಗಳಿಗೆ ಅದ್ಭುತ ಪ್ರತಿಕ್ರಿಯೆ ದೊರೆಯಿತು. ಧನಂಜಯ್ ಕಾರ್ಯಕ್ರಮದಿಂದ ವಾಪಸ್ಸು ಹೋಗುವವರೆಗೂ ಇಡೀ ಕಾಲೇಜಿನ‌ ಮೂಲೆಮೂಲೆಯಲ್ಲಿ ‘ಡಾಲಿ ಡಾಲಿ’ ಎಂಬ ಅಭಿಮಾನಿಗಳ‌ ಪ್ರೀತಿಯ ದನಿ ಮೊಳಗುತ್ತಿತ್ತು.

ಜೂನ್ 14 ರಂದು ಬಿಡುಗಡೆಗೆ ಸಿದ್ಧವಾಗಿರುವ ʻಕೋಟಿʼ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Kannada Upcoming Movies: ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಲು ಬರುತ್ತಿವೆ ಕನ್ನಡ ಸಿನಿಮಾಗಳು!

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ʻಕಾಂತಾರʼ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮೆರಮನ್.

ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸ್ಯಾಂಡಲ್ ವುಡ್

Kannada Upcoming Movies: ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಲು ಬರುತ್ತಿವೆ ಕನ್ನಡ ಸಿನಿಮಾಗಳು!

Kannada Upcoming Movies:
ಜೂನ್ 10ಕ್ಕೆ ‘ಯುಐ’ ಸಿನಿಮಾ ಅಪ್‌ಡೇಟ್ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇನ್ನು 6 ತಿಂಗಳಲ್ಲಿ 10ಕ್ಕೂ ಅಧಿಕ ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲಿವೆ. ಶಿವಣ್ಣ ‘ಭೈರತಿ ರಣಗಲ್’ ಚಿತ್ರದ ಅಗಸ್ಟ್ 15ಕ್ಕೆ ರಿಲೀಸ್ ಎಂದು ಚಿತ್ರತಂಡ ಹೇಳಿದೆ. ಅಲ್ಲಿಗೆ ಉಳಿದಿರುವುದು ‘ಯುಐ’, ‘ಭೀಮ’, ‘ಮ್ಯಾಕ್ಸ್’ ಸಿನಿಮಾಗಳು ಮಾತ್ರ.

VISTARANEWS.COM


on

Kannada Upcoming Movies KD Martin Bheema Movies
Koo

ಬೆಂಗಳೂರು: ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ.  ‘ಭೀಮ’ ಹಾಗೂ ‘ಯುಐ’ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಸಿಗುವ ಸುಳಿವು ಸಿಕ್ಕಿದೆ. ಆದಷ್ಟು ಬೇಗ (Kannada Upcoming Movies) ‘ಭೀಮ’ ಸಿನಿಮಾ ಅನೌನ್ಸ್‌ಮೆಂಟ್ ಎಂದು ಹೇಳಲಾಗುತ್ತಿದೆ. ಜೂನ್ 10ಕ್ಕೆ ‘ಯುಐ’ ಸಿನಿಮಾ ಅಪ್‌ಡೇಟ್ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇನ್ನು 6 ತಿಂಗಳಲ್ಲಿ 10ಕ್ಕೂ ಅಧಿಕ ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲಿವೆ. ಶಿವಣ್ಣ ‘ಭೈರತಿ ರಣಗಲ್’ ಚಿತ್ರದ ಅಗಸ್ಟ್ 15ಕ್ಕೆ ರಿಲೀಸ್ ಎಂದು ಚಿತ್ರತಂಡ ಹೇಳಿದೆ. ಅಲ್ಲಿಗೆ ಉಳಿದಿರುವುದು ‘ಯುಐ’, ‘ಭೀಮ’, ‘ಮ್ಯಾಕ್ಸ್’ ಸಿನಿಮಾಗಳು ಮಾತ್ರ.

ಬಾಕ್ಸ್‌ ಆಫೀಸ್‌ನಲ್ಲಿ ʻಕೆಡಿʼ-ʻಡೆವಿಲ್‌ʼ ಕಾದಾಟ!

ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಮೊದಲೇ ದರ್ಶನ್‌ ಹಾಗೂ ಧ್ರುವ ನಡುವೆ ಸಂಬಂಧ ಚೆನ್ನಾಗಿಲ್ಲ. ಹೀಗಾಗಿ ಬಾಕ್ಸ್‌ ಆಫೀಸ್‌ ವಾರ್‌ ಜತೆ ಫ್ಯಾನ್ಸ್‌ ವಾರ ಕೂಡ ಆಗಬಹುದು ಎನ್ನಲಾಗುತ್ತಿದೆ.

ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Kannada New Movie: ‘ಶೆಫ್​ ಚಿದಂಬರ’ ಸಿನಿಮಾ ಟ್ರೈಲರ್‌​ ಅನಾವರಣ ಮಾಡಿ ಹಾರೈಸಿದ ರಮೇಶ್ ಅರವಿಂದ್!

ಇದೀಗ ‘ಭೀಮ’ ಹಾಗೂ ‘ಯುಐ’ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಸಿಗುವ ಸುಳಿವು ಸಿಕ್ಕಿದೆ. ಆದಷ್ಟು ಬೇಗ ‘ಭೀಮ’ ಸಿನಿಮಾ ಅನೌನ್ಸ್‌ಮೆಂಟ್ ಎಂದು ಹೇಳಲಾಗುತ್ತಿದೆ.ಜುಲೈನಲ್ಲೇ ‘ಯುಐ’ ಚಿತ್ರ ತೆರೆಗಪ್ಪಳಿಸುವ ಸಾಧ್ಯತೆಯಿದೆ. ತಪ್ಪಿದರೆ ಸೆಪ್ಟೆಂಬರ್‌ನಲ್ಲಿ ರಿಲೀಸ್ ಫಿಕ್ಸ್ ಎನ್ನಲಾಗ್ತಿದೆ. ಇನ್ನು ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಭೀಮ’ ಸಿನಿಮಾ ಕೂಡ ನಿರೀಕ್ಷೆ ಹುಟ್ಟಾಕ್ಕಿದೆ.

ಭೀಮ’ ಸಿನಿಮಾ

ʻಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.

ಭೈರತಿ ರಣಗಲ್

ʻಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ (Bhairathi Ranagal) ಆಗಿ ಸಾಕಷ್ಟು ಗಮನ ಸೆಳೆದಿದ್ದರು ಶಿವರಾಜ್‌ಕುಮಾರ್‌. ವೇದ ಸಿನಿಮಾ ಬಳಿಕ ‘ಗೀತಾ ಪಿಕ್ಚರ್ಸ್​’ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಆಗಿಲ್ಲರಲಿಲ್ಲ. ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ. ಭೈರತಿ ರಣಗಲ್ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ರವಿ ಬಸ್ರೂರು ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

Continue Reading
Advertisement
Tattoo Care
ಆರೋಗ್ಯ8 mins ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Banglore rain
ಪ್ರಮುಖ ಸುದ್ದಿ38 mins ago

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Chamarajanagar Lok Sabha Constituency
ಪ್ರಮುಖ ಸುದ್ದಿ38 mins ago

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Dina Bhavishya
ಭವಿಷ್ಯ38 mins ago

Dina Bhavishya : ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ

Amul Milk
ದೇಶ5 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ6 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ7 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ8 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ8 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20248 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌