IND vs WI 2nd Odi: ದ್ವಿತೀಯ ಏಕದಿನದಲ್ಲಿ ಸೋಲು; ಕೋಚ್​ ದ್ರಾವಿಡ್​ ವಿರುದ್ಧ ಆಕ್ರೋಶ - Vistara News

ಕ್ರಿಕೆಟ್

IND vs WI 2nd Odi: ದ್ವಿತೀಯ ಏಕದಿನದಲ್ಲಿ ಸೋಲು; ಕೋಚ್​ ದ್ರಾವಿಡ್​ ವಿರುದ್ಧ ಆಕ್ರೋಶ

ವಿಶ್ವಕಪ್​ಗೆ ಕೆಲ ದಿನಗಳು ಮಾತ್ರ ಉಳಿದಿರುವಾಗ ತಂಡ ಸಂಯೋಜನೆಗೆ ಉತ್ತಮ ಅವಕಾಶ ಎನಿಸಿರುವ ಈ ಸರಣಿಯಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಪ್ರಯೋಗ ನಡೆಸಿದ ತಂಡದ ಕೋಚ್​ ರಾಹುಲ್​ ದ್ರಾವಿಡ್​(Rahul Dravid) ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

VISTARANEWS.COM


on

Rahul dravid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾರ್ಬಡಾಸ್:​ ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್​ ಕ್ರಮಾಂಕದ ಪ್ರಯೋಗ ನಡೆಸಿದ ಭಾರತ ತಂಡ ದ್ವಿತೀಯ ಏಕದಿನದಲ್ಲಿ(IND vs WI 2nd Odi) ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ವಿರಾಟ್​ ಕೊಹ್ಲಿ(Virat Kohli)ಗೆ ವಿಶ್ರಾಂತಿ ನೀಡಿತು. ಉಪನಾಯಕನಾಗಿದ್ದ ಹಾರ್ದಿಕ್ ಪಾಂಡ್ಯ(Hardik Pandya)​ ತಂಡವನ್ನು ಮುನ್ನಡೆಸಿದರು. ಆದರೆ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಸೋಲು ಕಂಡಿತು.

ಏಷ್ಯಾ ಕಪ್​ ಮತ್ತು ವಿಶ್ವಕಪ್​ಗೆ ಕೆಲ ದಿನಗಳು ಮಾತ್ರ ಉಳಿದಿರುವಾಗ ತಂಡ ಸಂಯೋಜನೆಗೆ ಉತ್ತಮ ಅವಕಾಶ ಎನಿಸಿರುವ ಈ ಸರಣಿಯಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಪ್ರಯೋಗ ನಡೆಸಿದ ತಂಡದ ಕೋಚ್​ ರಾಹುಲ್​ ದ್ರಾವಿಡ್​(Rahul Dravid) ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು ಅವರನ್ನು ತಂಡದ ಕೋಚ್​ ಹುದ್ದೆಯಿಂದ ಕೈಬಿಡಬೇಕು ಎನ್ನುವ ಮಾತುಗಳು ಕೂಡ ಕೇಳಿಬಂದಿವೆ. ಹಾಲಿ ವರ್ಷದಲ್ಲಿ 11 ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್​ 9 ಮತ್ತು ವಿರಾಟ್​ ಅವರು 10 ಪಂದ್ಯಗಳನ್ನು ಆಡಿದ್ದಾರೆ. ಅದಲ್ಲದೆ ಟಿ20 ಸರಣಿಯಿಂದ ಉಭಯ ಆಟಗಾರರನ್ನು ಕೈಬಿಟ್ಟಿರುವಾಗ ಏಕದಿನ ಪಂದ್ಯದಲ್ಲಿ ಆಡಿಸಬೇಕಿತ್ತು ಎಂಬುದು ಹಲವರ ಅಭಿಪ್ರಾಯವಾಗಿದೆ.

ವಿಶ್ವಕಪ್​ ಸಮಯದಲ್ಲಿ ಉತ್ತಮ ಫಾರ್ಮ್​ನಲ್ಲಿರುವ ಆಟಗಾರರಿಗೆ ವಿಶ್ರಾಂತಿ ಮತ್ತು ಅವರ ಬ್ಯಾಟಿಂಗ್​ ಕ್ರಮಾಂಕವನ್ನು ಬದಲಿಸುವುದು ಅತ್ಯಂತ ಅಪಾಯಕಾರಿ. ಇದು ತಂಡದ ಮೇಲೆ ದೊಡ್ಡ ಪ್ರಭಾವ ಬೀರಲಿದೆ. ಕಳೆದ ಹಲವು ವರ್ಷಗಳಿಂದ ನಡೆಸದ ಈ ಪ್ರಯೋಗ ಇದೀಗ ವಿಶ್ವಕಪ್​ಕೆ ಕೆಲ ದಿನಗಳು ಬಾಕಿ ಇರುವಾಗ ನಡೆಸಿದರೆ ಏನೂ ಪ್ರಯೋಜನವಿಲ್ಲ ಎಂದು ಅನೇಕ ಮಾಜಿ ಆಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IND vs WI: ಭಾರತಕ್ಕೆ 6 ವಿಕೆಟ್​ ಸೋಲು; ಸರಣಿಯಲ್ಲಿ ಹಿಡಿತ ಸಾಧಿಸಿದ ವಿಂಡೀಸ್​

ಕೋಚ್​ ದ್ರಾವಿಡ್​ ಅವರು ಮಾತ್ರ ವಿಶ್ವಕಪ್​ಗೆ ಬಲಿಷ್ಠ ತಂಡವನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸಿ ನಮ್ಮ ಬೆಂಚ್​ ಸಾಮರ್ಥ್ಯವನ್ನು ಪರೀಕ್ಷಿಸಲು ಈ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

India vs Ireland: ನಿಧಾನಗತಿಯ ಟ್ರ್ಯಾಕ್​ನಲ್ಲಿ ಆರಂಭದಲ್ಲಿ ರನ್​ ಗಳಿಸಲು ತಿಣುಕಾಡಿದ ರೋಹಿತ್, ಆ​ ಬಳಿಕ ಸಿಡಿದು ನಿಂತರು. ಸತತವಾಗಿ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ಮೈಲುಗಲ್ಲು ನಿರ್ಮಿಸಿದರು.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಹಾರ್ದಿಕ್​ ಪಾಂಡ್ಯ(3), ಜಸ್​ಪ್ರೀತ್​ ಬುಮ್ರಾ(2) ಅವರ ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ, ನಾಯಕ ರೋಹಿತ್​ ಶರ್ಮಾ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐರ್ಲೆಂಡ್(India vs Ireland)​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ (T20 World Cup 2024 ಶುಭಾರಂಭ ಕಂಡಿದೆ. ಭಾರತ ತನ್ನ ದ್ವಿತೀಯ ಪಂದ್ಯವನ್ನು ಜೂನ್​ 9 ರಂದು ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ. ಇತ್ತಂಡಗಳ ಈ ಹೈವೋಲ್ಟೇಜ್​ ಪಂದ್ಯ ಕೂಡ ಇದೇ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಲ್ಲಿನ ನಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ನಾಯಕ ರೋಹಿತ್​ ಶರ್ಮಾ ಅವರ ಆಯ್ಕೆಯನ್ನು ಬೌಲರ್​ಗಳು ಸಮರ್ಥಿಸಿಕೊಂಡರು. ಹಾರ್ದಿಕ್​ ಪಾಂಡ್ಯ, ಅರ್ಶದೀಪ್​, ಜಸ್​ಪ್ರೀತ್ ಬುಮ್ರಾ, ಸಿರಾಜ್ ಮತ್ತು ಅಕ್ಷರ್​​ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಕಿತ್ತು ಪಾರಮ್ಯ ಮೆರೆದರು. ಭಾರತೀಯ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಐರ್ಲೆಂಡ್​ ಕೇವಲ 96 ರನ್​ಗಳಿಗೆ ಸರ್ವಪತನ ಕಂಡಿತು. ಜವಾಬಿತ್ತ ಭಾರತ, ಈ ಸಣ್ಣ ಮೊತ್ತವನ್ನು 12.2 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 97 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಕೊಹ್ಲಿವಿಫಲ


ರೋಹಿತ್​ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದರು. ಆದರೆ, ಕೊಹ್ಲಿ ಈ ಪ್ರಯೋಗದಲ್ಲಿ ಯಶಸ್ಸು ಕಾಣಲಿಲ್ಲ. ಕೇವಲ 1 ರನ್​ಗೆ ವಿಕೆಟ್​ ಕಳೆದುಕೊಂಡರು. ಇದಕ್ಕೂ ಮುನ್ನ ಈ ಜೋಡಿ 2019ರಲ್ಲಿ ಅಹಮದಾಬಾದ್​ನಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧ ಟಿ20 ಸರಣಿಯಲ್ಲಿ ಆರಂಭಿಕರಾಗಿ ಬ್ಯಾಟ್​ ಬೀಸಿತ್ತು. ಕೊಹ್ಲಿ ಐರ್ಲೆಂಡ್​ ವಿರುದ್ಧ ಆರಂಭಿಕನಾಗಿ ಆಡಿದ ಕಾರಣ ಜೈಸ್ವಾಲ್​ಗೆ ಅವಕಾಶ ಕೈತಪ್ಪಿತು.

ರೋಹಿತ್​ ಅರ್ಧಶತಕ


ನಿಧಾನಗತಿಯ ಟ್ರ್ಯಾಕ್​ನಲ್ಲಿ ಮೊದಲು ರನ್​ ಗಳಿಸಲು ತಿಣುಕಾಡಿದ ರೋಹಿತ್, ಆ​ ಬಳಿಕ ಸಿಡಿದು ನಿಂತರು. ಸತತ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ಮೈಲುಗಲ್ಲು ನಿರ್ಮಿಸಿದರು. 36 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ರೋಹಿತ್​, 52 ರನ್​ ಗಳಿಸಿದ ವೇಳೆ ಭುಜದ ಗಾಯದ ಸಮಸ್ಯೆಗೆ ಸಿಲುಕಿ ರಿಟರ್ಡ್ ಹರ್ಟ್ ಆದರು. ಅವರ ಈ ಅರ್ಧಶತಕ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ಅಂತಿಮವಾಗಿ ರಿಷಭ್​ ಪಂತ್ ಅಜೇಯ 36(3 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಗೆಲುವಿಗೆ ರನ್​ ಬೇಕಿದ್ದಾಗ ಸಿಕ್ಸರ್​ ಬಾರಿಸುವ ಯತ್ನದಲ್ಲಿ ವಿಫಲವಾದ ಸೂರ್ಯಕುಮಾರ್(2)​ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು.

ಇದಕ್ಕೂ ಮುನ್ನ ಇನಿಂಗ್ಸ್​ ಆರಂಭಿಸಿದ ಐರ್ಲೆಂಡ್​ಗೆ ಎಡಗೈ ವೇಗಿ ಅರ್ಶ್​ದೀಪ್​ ತಮ್ಮ ದ್ವಿತೀಯ ಓವರ್​ನಲ್ಲಿ ಆಘಾತವಿಕ್ಕಿದರು. ನಾಯಕ ಪೌಲ್​ ಸ್ಟಿರ್ಲಿಂಗ್(7) ವಿಕೆಟ್​ ಕಿತ್ತು ಭಾರತಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇಷ್ಟಕ್ಕೇ ತೃಪ್ತಿಯಾಗದ ಅರ್ಶ್​ದೀಪ್ ಇದೇ ಓವರ್​ನ ಅಂತಿಮ ಎಸೆತದಲ್ಲಿ ಮತ್ತೊಂದು ವಿಕೆಟ್​ ಉಡಾಯಿಸಿದರು. ಐರ್ಲೆಂಡ್​ 9 ರನ್​ಗೆ ಆರಂಭಿಕರಿಬ್ಬರ ವಿಕೆಟ್​ ಕಳೆದುಕೊಂಡಿತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ನೂತನ ದಾಖಲೆ ಸೃಷ್ಟಿಸಿದ ಲಂಕಾ-ದಕ್ಷಿಣ ಆಫ್ರಿಕಾ ಪಂದ್ಯ

ಅರ್ಶದೀಪ್​ ಬಳಿಕ ಜಸ್​ಪ್ರೀತ್​ ಬುಮ್ರಾ ಮತ್ತು ಹಾರ್ದಿಕ್​ ಪಾಂಡ್ಯ ಕೂಡ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಬೇಟೆಯಾಡಿದರು. ಮೊದಲೇ ಆರಂಭಿಕ ಆಘಾತ ಕಂಡಿದ್ದ ಐರ್ಲೆಂಡ್​ಗೆ ಚೇತರಿಸಿಕೊಳ್ಳಲು ಸಮಯವೇ ಸಿಗಲಿಲ್ಲ. ಬಡಬಡನೆ ವಿಕೆಟ್​ ಕಳೆದುಕೊಂಡು ಪೆವಿಯನ್​ ಕಡೆಗೆ ಹೆಜ್ಜೆ ಹಾಕಿದರು. 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಜೋಶುವಾ ಲಿಟಲ್(14) ಮತ್ತು 7ನೇ ಕ್ರಮಾಂಕದ ಬ್ಯಾಟರ್​ ಗರೆಥ್ ಡೆಲಾನಿ ಕೊನೆಯ ಹಂತದಲ್ಲಿ ಶಕ್ತಿ ಮೀರಿ ನಡೆಸಿದ ಹೋರಾಟದ ಫಲದಿಂದ ತಂಡ 100ರ ಸನಿಹದ ಮೊತ್ತ ಕಲೆಹಾಕಿತು.

ಪಾಂಡ್ಯ ಬೌಲಿಂಗ್​ ಕಮಾಲ್​

ಆರಂಭಿಕ ಮೂರು ಓವರ್​ಗಳಲ್ಲಿ ಉತ್ತಮ ಬೌಲಿಂಗ್​ ದಾಳಿ ನಡೆಸಿ 2 ವಿಕೆಟ್​ ಕಿತ್ತಿದ್ದ ಅರ್ಶದೀಪ್​ ಸಿಂಗ್​ ತಮ್ಮ ಅಂತಿಮ ಓವರ್​ನಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್​ ಬಿಟ್ಟುಕೊಟ್ಟು 15 ರನ್​ ಹೊಡೆಸಿಕೊಂಡರು. ಗರೆಥ್ ಡೆಲಾನಿ 14 ಎಸೆತಗಳಿಂದ ತಲಾ 2 ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ 26 ರನ್​ ಗಳಿಸಿ ರನೌಟ್​ ಆದರು. ಇವರ ವಿಕೆಟ್​ ಪತನದೊಂದಿಗೆ ಐರ್ಲೆಂಡ್​ ಬ್ಯಾಟಿಂಗ್​ ಇನಿಂಗ್ಸ್​ ಕೂಡ ಮುಕ್ತಾಯ ಕಂಡಿತು. ಭಾರತ ಪರ ಉಪನಾಯಕ ಹಾರ್ದಿಕ್​ ಪಾಂಡ್ಯ 4 ಓವರ್​ ಎಸೆದು 1 ಮೇಡನ್​ ಸಹಿತ 27 ರನ್​ ವೆಚ್ಚದಲ್ಲಿ 3 ವಿಕೆಟ್​ ಉರುಳಿಸಿದರು. ಉಳಿದಂತೆ ಬುಮ್ರಾ ಮತ್ತು ಅರ್ಶ್​ದೀಪ್​ ತಲಾ 2, ಸಿರಾಜ್​ ಮತ್ತು ಅಕ್ಷರ್​ ತಲಾ 1 ವಿಕೆಟ್​ ಪಡೆದರು. ಆದರೆ ಅನುಭವಿ ಸ್ಪಿನ್ನರ್​ ಜಡೇಜಾ ವಿಕೆಟ್​ ಲೆಸ್​ ಎನಿಸಿಕೊಂಡರು. ಅಲ್ಲದೆ ಒಂದು ಕ್ಯಾಚ್​ ಕೂಡ ಕೈಚೆಲ್ಲಿದರು. ಅಕ್ಷರ್​ ಪಟೇಲ್​ ಅವರು ಒಂದು ವಿಕೆಟ್​ ಕೀಳುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ ಪೂರ್ತಿಗೊಳಿಸಿದ ಮೈಲುಗಲ್ಲು ತಲುಪಿದರು.

Continue Reading

ಕ್ರೀಡೆ

India vs Ireland: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಭಾರತ; ರೋಹಿತ್​ ಜತೆ ಕೊಹ್ಲಿ ಇನಿಂಗ್ಸ್​ ಆರಂಭ

India vs Ireland: ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡಿದ್ದಾರೆ. ಇದೇ ಕಾರಣಕ್ಕೆ ಪಿಚ್​ ವರ್ತನೆಯನ್ನು ಅರ್ಥ ಮಾಡಿಕೊಳ್ಳುವ ಸಲುವಾಗಿಯೇ ರೋಹಿತ್​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಂತಿದೆ.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಐರ್ಲೆಂಡ್(India vs Ireland)​ ವಿರುದ್ಧದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ(Rohit Sharma) ಅವರು ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದ್ದಾರೆ. ನಿರೀಕ್ಷೆಯಂತೆ ರೋಹಿತ್​ ಜತೆ ವಿರಾಟ್​ ಕೊಹ್ಲಿ(Virat Kohli) ಅವರು ಭಾರತದ ಇನಿಂಗ್ಸ್​ ಆರಂಭಿಸಲಿದ್ದಾರೆ. ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್​ಗೆ ಅವಕಾಶ ಸಿಗಲಿಲ್ಲ.

ಭಾರತ ಈ ಪಂದ್ಯಕ್ಕೆ ಅಚ್ಚರಿಯ ತಂಡವನ್ನು ಕಣಕ್ಕಿಳಿಸಿದೆ. ನಿರೀಕ್ಷೆಯೇ ಮಾಡದ ಶಿವಂ ದುಬೆ, ಅಕ್ಷರ್​ ಪಟೇಲ್​ ಮತ್ತು ಅರ್ಶದೀಪ್​ ಸಿಂಗ್​ ಅವರು ಪ್ಲೇಯಿಂಗ್​ ಇಲೆವೆನ್​ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅನುಭವಿ ಸ್ಪಿನ್ನರ್​ಗಳಾದ ಕುಲ್​ದೀಪ್​ ಯಾದವ್​ ಮತ್ತು ಯಜುವೇಂದ್ರ ಚಹಲ್​ ಬೆಂಚ್​ ಕಾಯಬೇಕಿದೆ. ರಿಷಭ್​ ಪಂತ್​ ವಿಕೆಟ್​ ಕೀಪರ್​ ಆಗಿದ್ದಾರೆ. ಅಲ್ಲದೆ ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ. ಒಟ್ಟು 4 ವೇಗಿಗಳು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ದುಬೆ ಕೂಡ ಬೌಲಿಂಗ್​ ಮಾಡಿದರೆ 5 ಮಂದಿ ವೇಗಿಗಳು ಆಡಿದಂತಾಗುತ್ತದೆ.

ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಕೂಡ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡಿದ್ದಾರೆ. ಇದೇ ಕಾರಣಕ್ಕೆ ಪಿಚ್​ ವರ್ತನೆಯನ್ನು ಅರ್ಥ ಮಾಡಿಕೊಳ್ಳುವ ಸಲುವಾಗಿಯೇ ರೋಹಿತ್​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಂತಿದೆ.

ಟಿ20 ಮುಖಾಮುಖಿ


ಉಭಯ ತಂಡಗಳು ಇದುವೆರೆಗೆ ಟಿ20 ಕ್ರಿಕೆಟ್​ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ. ಇದರಲ್ಲೊಂದು ಟಿ20 ವಿಶ್ವಕಪ್​ ಪಂದ್ಯವಾಗಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿ ಗೋಚರಿಸಿದರೂ ಕೂಡ ಐರ್ಲೆಂಡ್​ ಸವಾಲನ್ನು ಹಗುರವಾಗಿ ಕಾಣುವಂತಿಲ್ಲ. ಏಕೆಂದರೆ ಬಲಿಷ್ಠ ತಂಡಗಳು ಕೂಡ ದುರ್ಬಲ ತಂಡದ ವಿರುದ್ಧ ಸೋತ ಹಲವು ನಿದರ್ಶನಗಳಿವೆ. ಹೀಗಾಗಿ ಪ್ರತಿ ಹೆಚ್ಚುಗೂ ಎಚ್ಚರಿಕೆಯಿಂದ ಆಡಬೇಕು.

ಇದನ್ನು ಓದಿ Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇತ್ತಂಡಗಳ ಆಡುವ ಬಳಗ


ಭಾರತ: ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್(ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಐರ್ಲೆಂಡ್​: ಪಾಲ್ ಸ್ಟಿರ್ಲಿಂಗ್(ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್(ವಿಕೆಟ್​ ಕೀಪರ್​), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

Continue Reading

ಕ್ರೀಡೆ

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Rahul Dravid: ಟಿ20 ವಿಶ್ವಕಪ್​ ಟೂರ್ನಿ ಬಳಿಕ ರಾಹುಲ್​ ದ್ರಾವಿಡ್​ ಅವರು ಭಾರತ ತಂಡದ ಕೋಚ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈಗಾಗಲೇ ಅವರು ತಮ್ಮ ಈ ನಿರ್ಧಾರವನ್ನು ಕೂಡ ಪ್ರಕಟಿಸಿದ್ದಾರೆ. ದ್ರಾವಿಡ್ ನವೆಂಬರ್ 2021ರಲ್ಲಿ ಭಾರತ ತಂಡದ ಕೋಚ್ ಆಗಿ ಆಯ್ಕೆಯಾದರು.

VISTARANEWS.COM


on

Rahul Dravid
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾ ಇಂದು(ಬುಧವಾರ) ಐರ್ಲೆಂಡ್(India vs Ireland)​ ವಿರುದ್ಧ ತನ್ನ ಮೊದಲ ಟಿ20 ವಿಶ್ವಕಪ್(T20 World Cup 2024)​ ಪಂದ್ಯವನ್ನಾಡಲಿದೆ. ಈ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತ ತಂಡದ ಮುಖ್ಯ ಕೋಚ್(head coach Rahul Dravid)​ ರಾಹುಲ್ ದ್ರಾವಿಡ್(Rahul Dravid)​ ಅವರು ಉರ್ದುವಿನಲ್ಲಿ(Dravid Speaks Urdu) ಮಾತನಾಡಿ ಎಲ್ಲರನ್ನು ಅಚ್ಚರಿ ಪಡುವಂತೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದ್ರಾವಿಡ್​ ತಮ್ಮ ತಂಡದ ತಯಾರಿಯ ಬಗ್ಗೆ ಮಾತನಾಡುವ ವೇಳೆಯಲ್ಲಿ ಉರ್ದು ಭಾಷೆಯಲ್ಲಿಯೂ ಮಾತನಾಡಿದರು. ‘ಈ ಸ್ವರೂಪದ ಕ್ರಿಕೆಟ್​ನಲ್ಲಿ ಯಾರನ್ನೂ ಕಡೆಗಣಿಸಲು ಅಥವಾ ಯಾರನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ” ಎಂದು ಉರ್ದುವಿನಲ್ಲಿ ಹೇಳಿ ಜೋರಾಗಿ ನಕ್ಕಿದ್ದಾರೆ. ಜತೆಗೆ ವೆಲ್​ ಡನ್​ ರಾಹುಲ್​ ಎಂದು ಸ್ವತಃ ತಮ್ಮನ್ನು ತಾವೇ ಪ್ರಶಂಶಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿದ್ದ ಪತ್ರಕರ್ತರು ಕೂಡ ಜೋರಾಗಿ ನಗಾಡಿದ್ದಾರೆ. ದ್ರಾವಿಡ್ ಉರ್ದುವಿನಲ್ಲಿ ಮಾತನಾಡಿದ ವಿಡಿಯೊ ವೈರಲ್(viral video)​ ಆಗಿದೆ.

ಇದನ್ನೂ ಓದಿ Rahul Dravid: ಕೋಚ್ ಹುದ್ದೆಯಲ್ಲಿ ಮುಂದುವರಿಯಲ್ಲ; ಅಧಿಕೃತ ಹೇಳಿಕೆ ನೀಡಿದ ದ್ರಾವಿಡ್


ಟಿ20 ವಿಶ್ವಕಪ್​ ಟೂರ್ನಿ ಬಳಿಕ ರಾಹುಲ್​ ದ್ರಾವಿಡ್​ ಅವರು ಭಾರತ ತಂಡದ ಕೋಚ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈಗಾಗಲೇ ಅವರು ತಮ್ಮ ಈ ನಿರ್ಧಾರವನ್ನು ಕೂಡ ಪ್ರಕಟಿಸಿದ್ದಾರೆ. ದ್ರಾವಿಡ್ ನವೆಂಬರ್ 2021ರಲ್ಲಿ ಭಾರತ ತಂಡದ ಕೋಚ್ ಆಗಿ ಆಯ್ಕೆಯಾದರು. ದ್ರಾವಿಡ್ ಕೋಚ್​ ಆದಾಗ ಅವರ ಮೇಲೆ ಅತಿಯಾದ ನಿರೀಕ್ಷೆಯಿತ್ತು. ಆದರೆ ನಿರೀಕ್ಷೆಗೆ ತಕ್ಕ ಪ್ರದರ್ಶನ ಅವರ ಕೋಚಿಂಗ್​ ಅವಧಿಯಲ್ಲಿ ಕಂಡು ಬರಲಿಲ್ಲ. ಹೀಗಾಗಿ ಅವರ ಕೋಚಿಂಗ್​ ಬಗ್ಗೆ ಹಲವು ಟೀಕೆಗಳು ಕೂಡ ವ್ಯಕ್ತವಾಗಿತ್ತು. ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಹೆಡ್ ಕೋಚ್ ಆದ ಬಳಿಕ ನಿರೀಕ್ಷಿತ ಯಶಸ್ಸು ತಂಡಕ್ಕೆ ಸಿಕ್ಕಿಲ್ಲ. ಅಂಡರ್​-19 ಕ್ರಿಕೆಟ್​ ಮಾರ್ಗದರ್ಶನದಲ್ಲಿ ಅವರಿಗೆ ಸಿಕ್ಕಷ್ಟು ಯಶಸ್ಸು ಸೀನಿಯರ್ಸ್‌ ತಂಡದಲ್ಲಿ ಸಿಗಲಿಲ್ಲ.

ದ್ರಾವಿಡ್​ಗೆ ಟೀಮ್​ ಇಂಡಿಯಾದ ಕೋಚಿಂಗ್​ ಬಗ್ಗೆ ಮೊದಲಿನಿಂದಲೇ ಆಸಕ್ತಿ ಇರಲಿಲ್ಲ. ಆದರೆ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಅಂದಿನ ಅಧ್ಯಕ್ಷ ಸೌರವ್ ಗಂಗೂಲಿ ಅವರ ಒತ್ತಾಯದ ಮೇರೆಗೆ ದ್ರಾವಿಡ್​ ಕೋಚ್​ ಹುದ್ದೆ ವಹಿಸಿಕೊಂಡಿದ್ದರು. ಕೊನೆಯ ಬಾರಿಗೆ ಕೋಚಿಂಗ್​ ನಡೆಸುತ್ತಿರುವ ದ್ರಾವಿಡ್​ ಟಿ20 ವಿಶ್ವಕಪ್​ನಲ್ಲಾದರೂ ಕಪ್​ ಗೆದ್ದು ಗೆಲುವಿನ ವಿದಾಯ ಸಿಗಲಿ ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ಆಶಯ.

Continue Reading

T20 ವಿಶ್ವಕಪ್

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Pakistan Players: ಇನ್ನೊಂದು ಮೂಲಗಳ ಪ್ರಕಾರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಕೈವಾಡವೂ ಇದೆ ಎಂದು ಹೇಳಲಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಸಂಕಷ್ಟದಿಂದ ಹೊರ ಬರುವ ನಿಟ್ಟಿನಲ್ಲಿ ಆಟಗಾರರ ಮೂಲಕ ಮಂಡಳಿ ಈ ಕೆಲಸ ಮಾಡಿತೇ ಎಂಬ ಅನುಮಾನ ಕೂಡ ಹುಟ್ಟಿಕೊಂಡಿದೆ.

VISTARANEWS.COM


on

Pakistan Players
Koo

ನ್ಯೂಯಾರ್ಕ್​: ಎಲ್ಲ ದೇಶಗಳು ಟಿ20 ವಿಶ್ವಕಪ್​ ಟ್ರೋಫಿ(T20 World Cup) ಗೆಲ್ಲುವತ್ತ ಗಮನಹರಿಸಿದರೆ, ನಮ್ಮ ನೆರೆ ರಾಷ್ಟ್ರ ಪಾಕಿಸ್ತಾನದ ಆಟಗಾರರು(Pakistan Players) ಆರ್ಥಿಕ ಸಂಕಷ್ಟದಿಂದ ಪಾರಾಗುವತ್ತ ಗಮನ ಹರಿಸಿದಂತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನ ಆಟಗಾರರು ದಂಧೆಗೆ ಇಳಿದು ವಿವಾದಕ್ಕೀಡಾಗಿದ್ದಾರೆ.

ಪಾಕಿಸ್ತಾನದ ಆಟಗಾರರು ಖಾಸಗಿ ಔತಣಕೂಟ(Pakistan Players Host Private Dinner) ಒಂದನ್ನು ಆಯೋಜಿಸಿ ಈ ಔತಣಕೂಟದಲ್ಲಿ ಅಭಿಮಾನಿಗಳು ಕೂಡ ಪಾಲ್ಗೊಳ್ಳಬಹುದು ಎಂದು ಹೇಳಲಾಗಿದೆ. ಆದರೆ ಒಂದು ಕ್ಷರತ್ತು ಕೂಡ ವಿಧಿಸಿದೆ. ಈ ಔತಣ ಕೂಟದಲ್ಲಿ ಪಾಲ್ಗೊಳ್ಳುವ ಅಭಿಮಾನಿಗಳು 25 ಯುಎಸ್​ ಡಾಲರ್​ ಪಾವತಿಸಬೇಕು ಎಂದು ಹೇಳಿದೆ. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪಾಕ್​ ಆಟಗಾರರನ್ನು ಸ್ವತಃ ಪಾಕಿಸ್ತಾನದ ಜನರೇ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಿದ್ದಾರೆ. ಇಷ್ಟು ಗತಿಗೆಟ್ಟು ನೀವು ದೇಶವನ್ನು ಪ್ರತಿನಿಧಿಸಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

ಅಭಿಮಾನಿಗಳು ನೀಡಿದ 25 ಯುಎಸ್ ಡಾಲರ್​ಗಳನ್ನೆಲ್ಲ ಒಟ್ಟುಗೂಡಿಸಿ ಅಂತಿಮವಾಗಿ ಎಲ್ಲ ಆಟಗಾರರು ಸಮಾನವಾಗಿ ಹಂಚಿಕೊಂಡು ಹಣ ಗಳಿಸುವುದು ಆಟಗಾರರ ಉಪಾಯವಾಗಿತ್ತು. ಆದರೆ, ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್ ಆಡಲು ತೆರಳಿದ ತಂಡವೊಂದು ಔತಣಕೂಟ ಏರ್ಪಡಿಸಿ ಅಭಿಮಾನಿಗಳಿಂದ ದುಡ್ಡುಗಳಿಸಲು ಮುಂದಾಗುತ್ತಿರುವ ಅತ್ಯಂತ ನಾಚಿಕೆಗೇಡಿನ ಸಂಗತಿ. ಇದೊಂದು ದರೋಡೆ ಎಂದು ಅನೇಕರು ಕಿಡಿಕಾರಿದ್ದಾರೆ.

ಇನ್ನೊಂದು ಮೂಲಗಳ ಪ್ರಕಾರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಕೈವಾಡವೂ ಇದೆ ಎಂದು ಹೇಳಲಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಸಂಕಷ್ಟದಿಂದ ಹೊರ ಬರುವ ನಿಟ್ಟಿನಲ್ಲಿ ಆಟಗಾರರ ಮೂಲಕ ಮಂಡಳಿ ಈ ಕೆಲಸ ಮಾಡಿತೇ ಎಂಬ ಅನುಮಾನ ಕೂಡ ಹುಟ್ಟಿಕೊಂಡಿದೆ. ಈ ಅನುಮಾನ ಹುಟ್ಟಿಕೊಳ್ಳಲು ಕೂಡ ಕಾರಣವಿದೆ, ಇಷ್ಟೆಲ್ಲಾ ನಡೆದರೂ ಪಾಕ್​ ಕ್ರಿಕೆಟ್​ ಮಂಡಳಿ ಈ ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಈ ಕೃತ್ಯದ ಹಿಂದೆ ಮಂಡಳಿಯ ಕೈವಾಡವಿದೆ ಎನ್ನಲಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 9, ಭಾನುವಾರ ನಡೆಯಲಿದೆ. ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading
Advertisement
Pradeep Eshwar
ಕರ್ನಾಟಕ12 mins ago

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

India vs Ireland
ಕ್ರೀಡೆ51 mins ago

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

Sunita Williams
ಪ್ರಮುಖ ಸುದ್ದಿ1 hour ago

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Dr C N Manjunath
ಕರ್ನಾಟಕ2 hours ago

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

New Cancer Drug
ಆರೋಗ್ಯ2 hours ago

New Cancer Drug: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಕ್ರಾಂತಿ; ಹೊಸ ಔಷಧ ಪ್ರಯೋಗ ಶೇ. 100 ಯಶಸ್ವಿ!

World Environment Day celebration in karatagi
ಕೊಪ್ಪಳ2 hours ago

World Environment Day: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಬೇಕು

500 Rs deposit in the name of new admission children by old students of Government Kannada School Lingasugur
ಕರ್ನಾಟಕ2 hours ago

Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Koti Movie
ಸಿನಿಮಾ2 hours ago

Koti Movie: ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೈಲರ್ ರಿಲೀಸ್; ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ

Belagavi Election Result 2024
ಬೆಳಗಾವಿ2 hours ago

ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

French Open 2024
ಕ್ರೀಡೆ3 hours ago

French Open 2024: ಸೆಮಿಫೈನಲ್​ ಪ್ರವೇಶಿಸಿದ ಬೋಪಣ್ಣ-ಮ್ಯಾಥ್ಯೂ ಜೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌