Ishan Kishan: ಧೋನಿ ದಾಖಲೆ ಸರಿಗಟ್ಟಿ ಸಚಿನ್​ ದಾಖಲೆ ಮುರಿದ ಇಶಾನ್​ ಕಿಶನ್​ - Vistara News

ಕ್ರಿಕೆಟ್

Ishan Kishan: ಧೋನಿ ದಾಖಲೆ ಸರಿಗಟ್ಟಿ ಸಚಿನ್​ ದಾಖಲೆ ಮುರಿದ ಇಶಾನ್​ ಕಿಶನ್​

ಎಡಗೈ ಆಟಗಾರ ಇಶಾನ್​ ಕಿಶನ್(ishan kishan)​ ಅವರು ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

VISTARANEWS.COM


on

ishan kishan batting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾರ್ಬಡಾಸ್: ವೆಸ್ಟ್​ ಇಂಡೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ(India tour of West Indies, 2023) ಸತತ ಎರಡು ಅರ್ಧಶತಕ ಬಾರಿಸಿ ಮಿಂಚಿರುವ ಎಡಗೈ ಆಟಗಾರ ಇಶಾನ್​ ಕಿಶನ್(ishan kishan)​, ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಜತೆಗೆ ಸಚಿನ್​ ತೆಂಡೂಲ್ಕರ್(Sachin Tendulkar) ಅವರ​ ದಾಖಲೆಯೊಂದನ್ನು ಕೂಡ ಮುರಿದಿದ್ದಾರೆ.

ಶನಿವಾರ ನಡೆದ ದ್ವಿತೀಯ(West Indies vs India, 2nd ODI) ಪಂದ್ಯದಲ್ಲಿ ಆರಂಭಿನಾಗಿ ಕಣಕ್ಕಿಳಿದ ಇಶಾನ್​ ಕಿಶನ್​ 6 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 55 ರನ್​ ಬಾರಿಸಿ ಅಧರ್ಶಶಕ ಪೂರ್ತಿಗೊಳಿಸಿದರು. ಇದೇ ವೇಳೆ ವಿಶ್ವಕಪ್​ ವಿಜೇತ ಧೋನಿ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಧೋನಿ ಬಳಿಕ ವೆಸ್ಟ್​ ಇಂಡೀಸ್​ ನೆಲದಲ್ಲಿ ಸತತ ಎರಡು ಅರ್ಧಶತಕ ಬಾರಿಸಿದ ದ್ವಿತೀಯ ವಿಕೆಟ್​ ಕೀಪರ್-ಬ್ಯಾಟರ್​​ ಎನಿಸಿಕೊಂಡರು. ಧೋನಿ ಅವರು 2017 ವಿಂಡೀಸ್​ ಪ್ರವಾಸದಲ್ಲಿ ಮೂರನೇ ಮತ್ತು ನಾಲ್ಕನೇ ಏಕದಿನದಲ್ಲಿ ಪಂದ್ಯದಲ್ಲಿ ಕ್ರಮವಾಗಿ 78 ಮತ್ತು 54 ರನ್​ ಪೇರಿಸಿದ್ದರು. ಇದೀಗ ಇಶಾನ್​ ಕಿಶನ್​ ಮೊದಲ ಪಂದ್ಯದಲ್ಲಿ 52 ಮತ್ತು ದ್ವಿತೀಯ ಪಂದ್ಯದಲ್ಲಿ 55 ರನ್​ ಬಾರಿಸುವ ಮೂಲಕ ಧೋನಿ ದಾಖಲೆಯನ್ನು ಸರಿಗಟ್ಟಿದರು. ಅಂತಿಮ ಪಂದ್ಯದಲ್ಲಿ ಇಶಾನ್​ ಕಿಶನ್​ ಅರ್ಧಶತಕ ಬಾರಿಸಿದರೆ ಧೋನಿ ದಾಖಲೆ ಪತನಗೊಳ್ಳಲಿದೆ.

ಸಚಿನ್​ ದಾಖಲೆ ಉಡೀಸ್​

ಕ್ರಿಕೆಟ್​ ದೇವರು ಎಂದು ಕರೆಯಲ್ಪಡುವ ಸಚಿನ್​ ತೆಂಡೂಲ್ಕರ್​ ಅವರ ದಾಖಲೆಯೊಂದನ್ನು ಇಶಾನ್​ ಕಿಶನ್​ ಮುರಿದಿದ್ದಾರೆ. ಐದು ಇನಿಂಗ್ಸ್​ಗಳ ಬಳಿಕ ನಂತರ ಭಾರತ ಪರ ಆರಂಭಿನಾಗಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಇಶಾನ್​ ಮೊದಲ ಸ್ಥಾನ ಪಡೆದಿದ್ದಾರೆ. ತೆಂಡೂಲ್ಕರ್ ಅವರು ಆರಂಭಿಕನಾಗಿ ಮೊದಲ ಐದು ಇನಿಂಗ್ಸ್​ನಲ್ಲಿ 321 ರನ್‌ ಬಾರಿಸಿದ್ದರು. ಕಿಶನ್ ಇದೀಗ 348 ರನ್ ಗಳಿಸಿ ಸಚಿನ್​ ಅವರನ್ನು ಹಿಂದಿಕ್ಕಿದ್ದಾರೆ.

ಇದನ್ನೂ ಓದಿ Shubman Gill: ಪಾಕ್​ ನಾಯಕ ಬಾಬರ್ ಅಜಂ ವಿಶ್ವ ದಾಖಲೆ ಪುಡಿಗಟ್ಟಿದ ಶುಭಮನ್​ ಗಿಲ್​

ಬ್ಯಾಟಿಂಗ್​ ಬಡ್ತಿ ಪಡೆದು ಉತ್ತಮವಾಗಿ ಆಡುತ್ತಿರುವ ಇಶಾನ್​ ಕಿಶನ್​ ವಿಶ್ವಕಪ್​ ತಂಡದ ರೇಸ್​ನಲ್ಲಿ ತಾನು ಕೂಡ ಪ್ರತಿಸ್ಪರ್ಧಿ ಎಂಬ ಸಷ್ಟ ಸಂದೇಶವೊಂದನ್ನು ಇತರ ಆಟಗಾರರಿಗೆ ನೀಡಿದ್ದಾರೆ. ರಿಷಭ್​ ಪಂತ್​ ಅವರ ಅನುಪಸ್ಥಿತಿಯಲ್ಲಿ ವಿಕೆಟ್​ ಕೀಪಿಂಗ್​ ಹೊಣೆ ಹೊತ್ತಿರುವ ಅವರು ಮುಂದಿನ ಸರಣಿಯಲ್ಲಿಯೂ ಶ್ರೇಷ್ಠಮಟ್ಟದ ಬ್ಯಾಟಿಂಗ್​ ಮತ್ತು ಕೀಪಿಂಗ್​ ನಡೆಸಿದರೆ ವಿಶ್ವಕಪ್​ಗೆ ಆಯ್ಕೆಯಾಗಬಹುದು. ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಅತಿ ಕಿರಿಯ ಆಟಗಾರ ಎಂಬ ದಾಖಲೆಯೂ ಇಶಾನ್​ ಕಿಶನ್​ ಹೆಸರಿನಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

ಐಪಿಎಲ್ 2024 ರ ಕೊನೆಯ ಲೀಗ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್​ಸಿಬಿ ಶನಿವಾರ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅತಿಥ್ಯ ನೀಡಲಿದೆ. ನಾಳೆ ರಾತ್ರಿ ಗೆಲುವಿನೊಂದಿಗೆ ಕೊನೆಯ 4 ರ ಪಟ್ಟಿಗೆ ಪ್ರವೇಶ ಪಡೆಯಲು ಕಾಯುತ್ತಿದೆ. ಪ್ಲೇಆಫ್​ಗೆ ಎರಡೂ ತಂಡಗಳಿಗೆ ಅವಕಾಶ ಇರುವುದರಿಂದ ಈ ಪಂದ್ಯದಲ್ಲಿ ನಿರೀಕ್ಷೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ 2024ರ (IPL 2024 ) ಅತ್ಯಂತ ರೋಚಕ ಪಂದ್ಯವಾಗಿರುವ ಸಿಎಸ್​ಕೆ ಮತ್ತು ಆರ್​ಸಿಬಿ ನಡುವಿನ ಕದನದಲ್ಲಿ ಯಾರು ಗೆಲ್ಲುತ್ತಾರೆ ಎಂದು ಹೈದರಾಬಾದ್ ತಂಡದ ಮಾಜಿ ಮುಖ್ಯ ಕೋಚ್ ಬ್ರಿಯಾನ್ ಲಾರಾ (Brian Lara) ಊಹಿಸಿದ್ದಾರೆ. ಅವರು ಆರ್​ಸಿಬಿಗೆ ಬೆಂಬಲ ವ್ಯಕ್ತಪಡಿಸಿದ್ದು ರಿವರ್ಸ್ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಮಿಂಚಲಿರುವ ಆರ್​ಸಿಬಿ ಪ್ಲೇಆಫ್​ಗೇರಲಿದೆ ಎಂದು ಹೇಳಿದ್ದಾರೆ.

ಐಪಿಎಲ್ 2024 ರ ಕೊನೆಯ ಲೀಗ್ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್​ಸಿಬಿ ಶನಿವಾರ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅತಿಥ್ಯ ನೀಡಲಿದೆ. ನಾಳೆ ರಾತ್ರಿ ಗೆಲುವಿನೊಂದಿಗೆ ಕೊನೆಯ 4 ರ ಪಟ್ಟಿಗೆ ಪ್ರವೇಶ ಪಡೆಯಲು ಕಾಯುತ್ತಿದೆ. ಪ್ಲೇಆಫ್​ಗೆ ಎರಡೂ ತಂಡಗಳಿಗೆ ಅವಕಾಶ ಇರುವುದರಿಂದ ಈ ಪಂದ್ಯದಲ್ಲಿ ನಿರೀಕ್ಷೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ.

ಇದಕ್ಕೂ ಮುನ್ನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇತ್ತಂಡಗಳ ನಡುವಿನ ಪಂದ್ಯದಲ್ಲಿ ಸಿಎಸ್​ಕೆ ಗೆಲುವು ಸಾಧಿಸಿತ್ತು. ಆದಾಗ್ಯೂ, ಶನಿವಾರದ ರಿವರ್ಸ್ ಪಂದ್ಯದಲ್ಲಿ ಬೆಂಗಳೂರು ತಂಡ ವಿಭಿನ್ನ ಮನಸ್ಥಿತಿ ಮತ್ತು ಕಳೆದ 5 ಪಂದ್ಯಗಳ ಉಜ್ವಲ ಫಾರ್ಮ್​ನೊಂದಿಗೆ ಆಡಲಿದೆ.

ಲಾರಾ ಅಭಿಮತನವೇನು?

ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಬ್ರಿಯಾನ್ ಲಾರಾ ಪಂದ್ಯದ ಫಲಿತಾಂಶದ ಬಗ್ಗೆ ದಿಟ್ಟ ಭವಿಷ್ಯ ನುಡಿದಿದ್ದಾರೆ. ಲಾರಾ ಬೆಂಗಳೂರು ಮೂಲದ ಫ್ರಾಂಚೈಸಿಯನ್ನು ಬೆಂಬಲಿಸಿದ್ದಾರೆ. ಸೂಪರ್ ಕಿಂಗ್ಸ್​​ಗೆ ಪ್ಲೇ ಆಫ್ ಸ್ಥಾನ ನಿರಾಕರಿಸಲು ಆರ್​ಸಿಬಿ ಎಲ್ಲಾ ಸಿದ್ಧತೆಗಳನ್ನು ನಡೆಸಿದೆ ಎಂದು ವೆಸ್ಟ್ ಇಂಡೀಸ್​​ ಮಾಜಿ ನಾಯಕ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಋತುವಿನ ದ್ವಿತೀಯಾರ್ಧ ಪ್ರಾರಂಭವಾದಾಗಿನಿಂದ ಆರ್​ಸಿಬಿ ಸಂಪೂರ್ಣವಾಗಿ ವಿಭಿನ್ನ ತಂಡವಾಗಿ ಕಾಣುತ್ತಿದೆ ಎಂದು ಬ್ರಿಯಾನ್ ಲಾರಾ ಹೇಳಿದ್ದಾರೆ. ಬೆಂಗಳೂರು ಎಂದಿಗೂ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲದ ಕಾರಣ ಅವರು ಪ್ರಶಸ್ತಿ ಗೆಲ್ಲಲು ಹಸಿದಿದ್ದಾರೆ ಎಂದು ಲಾರಾ ಹೇಳಿದ್ದಾರೆ. ಈ ಪಂದ್ಯವು ಪ್ಲೇಆಫ್ ತಲುಪಲು ಅವರಿಗೆ ಸಹಾಯ ಮಾಡಲಿದೆ. ಹೀಗಾಗಿ ಪಂದ್ಯವನ್ನು ಕಳೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಸಿಎಸ್​ಕೆ ವಿರುದ್ಧದ ಪಂದ್ಯವು ಆರ್​ಸಿಸಿ ತಮ್ಮ ರೆಡ್-ಹಾಟ್ ಫಾರ್ಮ್ ಅನ್ನು ಮುಂದುವರಿಸಲು ಉತ್ತಮ ಅವಕಾಶವಾಗಿದೆ ಎಂದು ಬ್ರಿಯಾನ್ ಲಾರಾ ಅಭಿಪ್ರಾಯಪಟ್ಟಿದ್ದಾರೆ.

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಮೊಹಮ್ಮದ್ ಸಿರಾಜ್ ಉತ್ತಮ ಪ್ರದರ್ಶನ ನೀಡುತ್ತಿರುವುದರಿಂದ ಮತ್ತು ಕೆಲವು ಆಟಗಾರರ ಅನುಪಸ್ಥಿತಿಯ ಹೊರತಾಗಿಯೂ ಬೆಂಗಳೂರು ಸಿಎಸ್​ಕೆ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಅವರು ಹೇಳಿದ್ದಾರೆ.

“ಆರ್​ಸಿಬಿ ಎಂದಿಗೂ ಐಪಿಎಲ್ ಗೆದ್ದಿಲ್ಲ ಮತ್ತು ಅದನ್ನು ಗೆಲ್ಲಲು ಅವರು ಹಸಿದಿದ್ದಾರೆ. ಈ ಪಂದ್ಯವು ಪ್ಲೇಆಫ್ ತಲುಪಲು ಅವರಿಗೆ ಸಹಾಯ ಮಾಡುತ್ತದೆ. ಇದು ಉತ್ತಮ ಅವಕಾಶ, ತಂಡದ ಫಾರ್ಮ್ ಉತ್ತಮವಾಗಿದೆ, ಗೆಲುವಿನ ಹಸಿವು ಇದೆ. ಡು ಪ್ಲೆಸಿಸ್, ಸಿರಾಜ್ ಮತ್ತು ವಿರಾಟ್ ಅವರಂತಹ ಹಿರಿಯ ಆಟಗಾರರು ಸಹ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ” ಎಂದು ಲಾರಾ ಸ್ಟಾರ್ ಸ್ಪೋರ್ಟ್ಸ್ ಮೂಲಕ ಹೇಳಿದರು.

ದೊಡ್ಡ ಅಂತರದ ಗೆಲುವು ಸಾಧಿಸಬೇಕು

ಪ್ಲೇ ಆಫ್​ಗೆ ಅರ್ಹತೆ ಪಡೆಯಲು ಆರ್​ಸಿಬಿಗೆ ಇರುವ ಏಕೈಕ ಮಾರ್ಗವೆಂದರೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸುವುದು. ಫಾಫ್ ಡು ಪ್ಲೆಸಿಸ್ ಪಡೆ 2ನೇ ಇನ್ನಿಂಗ್ಸ್​​ನ್ಲಿ ಸಿಎಸ್ಕೆ ತಂಡವನ್ನು 18 ರನ್​ಗಳಿಂದ ಸೋಲಿಸಬೇಕು ಮತ್ತು ಮೊತ್ತವನ್ನು ಬೆನ್ನಟ್ಟಬೇಕಾದರೆ ಅವರು ಪಂದ್ಯವನ್ನು 18.1 ಓವರ್​ಗಳಲ್ಲಿ ಗುರಿ ಮುಟ್ಟಬೇಕು.

ಆ ಸಂದರ್ಭದಲ್ಲಿ, ಬೆಂಗಳೂರಿನ ನೆಟ್ ರನ್ ರೇಟ್ ಸುಧಾರಿಸುತ್ತದೆ ಮತ್ತು ಅವರು ಸಿಎಸ್​ಕೆ ಮಾತ್ರವಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಹಿಂದಿಕ್ಕಿ ಕೊನೆಯ ಹಂತಕ್ಕೆ ಅರ್ಹತೆ ಪಡೆಯುತ್ತಾರೆ.

Continue Reading

ಕ್ರೀಡೆ

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

VISTARANEWS.COM


on

RCB vs CSK
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ನಾಳೆ (ಮೇ​ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಇಲ್ಲಿ ಪಾರ್ಕಿಂಗ್​ ನಿಷೇಧ


ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್​ ನಿಷೇಧ ಮಾಡಲಾಗಿದೆ.

ಎಲ್ಲಿ ಪಾರ್ಕಿಂಗ್​ ಮಾಡಬಹುದು?


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಮೆಟ್ರೋ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಕ್ರೀಡೆ

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

RCB vs CSK: ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​(Chennai Super Kings) ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ(Royal Challengers Bengaluru) ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ ಅನುವು ಮಾಡಿಕೊಡುವುದು ಬಹುತೇಖ ಅನುಮಾನ ಎನ್ನುವಂತಿದೆ. ಶುಕ್ರವಾರವೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಇದೀಗ ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಪ್ಲೇ ಆಫ್​ ಪ್ರವೇಶ ಪಡೆಯಬೇಕಿದ್ದರೆ ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ ಪಂದ್ಯ ರದ್ದಾದರೆ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಹೇಗಾದರೂ ಪಂದ್ಯದ ದಿನ ಮಳೆ ಬಾರದಿರಲಿ ಎಂದು ಆರ್​ಸಿಬಿ ಆಟಗಾರರು ಡ್ರೆಸಿಂಗ್​ ರೋಮ್​ನಲ್ಲಿ ಹರೇ ರಾಮ ಹರೇ ರಾಮ, ರಾಮ ರಾಮ ಹರೇ ಹರೇ, ಹರೇ ಕೃಷ್ಣ ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ ಎಂದು ಕೃಷ್ಣ ನಾಮ ಜಪಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಅಸಲಿಗೆ ಆರ್​ಸಿಬಿ ಆಟಗಾರರು ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿಲ್ಲ. ಬದಲಾಗಿ ನೆಟ್ಟಿಗರು ಈ ವಿಡಿಯೊವನ್ನು ಎಡಿಟ್​ ಮಾಡಿ ವೈರಲ್​ ಮಾಡಿದ್ದಾರೆ. ಪ್ರತಿ ಪಂದ್ಯ ಗೆದ್ದಾಗ ಆರ್​ಸಿಬಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಸಂಭ್ರಮಿಸುತ್ತಾರೆ. ಈ ವಿಡಿಯೊಗೆ ಕೃಷ್ಣ ನಾಮ ಜಪವನ್ನು ಮತ್ತು ಹವಾಮಾನ ಇಲಾಖೆಯ ವರದಿಯ ಫೋಟೊವನ್ನು ಎಡಿಟ್​​ ಮಾಡಲಾಗಿದೆ.

ಇದನ್ನೂ ಓದಿ RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

2. ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ ಅಂತಿಮ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

3. ಒಂದು ವೇಳೆ ಮಳೆ ಬಂದು, ಉದಾಹರಣೆಗೆ ನಿಗದಿತ 10 ಓವರ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್​ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್​ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.

4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

Continue Reading

ಕ್ರೀಡೆ

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

RCB vs CSK: ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

VISTARANEWS.COM


on

RCB vs CSK
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮೇ 18 ರ ಶನಿವಾರ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (IPL 2024) 17ನೇ ಆವೃತ್ತಿಯ ಐಪಿಎಲ್​ನ ತಮ್ಮ ಅತಿದೊಡ್ಡ ಪಂದ್ಯವನ್ನಾಡಲು ಸಜ್ಜಾಗಿವೆ. ಎರಡೂ ತಂಡಗಳಿಗೂ ಪ್ಲೇಆಫ್ ಅರ್ಹತೆ ಪಡೆಯಲು ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಆದರೆ, ಪಂದ್ಯಕ್ಕೆ ಮಳೆ ಭೀತಿ(rcb vs csk match weather) ಎದುರಾಗಿರುವುದು ಇತ್ತಂಡಗಳಿಗೆ ಆತಂಕ ಪಡುವಂತೆ ಮಾಡಿದೆ. ಈ ಪಂದ್ಯದ ಮಳೆ ನಿಯಮ ಹೇಗಿದೆ ಎನ್ನುವ ಮಾಹಿತಿ ಇಂತಿದೆ.

1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

2. ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ ಅಂತಿಮ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

3. ಒಂದು ವೇಳೆ ಮಳೆ ಬಂದು ಉದಾಹರಣೆಗೆ ನಿಗದಿತ 10 ಓವರ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್​ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್​ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.

4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading
Advertisement
IPL 2024
ಪ್ರಮುಖ ಸುದ್ದಿ8 mins ago

IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

Job Alert
ಉದ್ಯೋಗ8 mins ago

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Bomb Blast
ದೇಶ15 mins ago

Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

KSRTC BUS Woman locks in window of KSRTC bus after going to spit
ಬೆಂಗಳೂರು17 mins ago

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

banned plastic seized by corporation in Mysore
ಮೈಸೂರು20 mins ago

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

RCB vs CSK
ಕ್ರೀಡೆ41 mins ago

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

Amith Shah lok sabha election 2024
ಪ್ರಮುಖ ಸುದ್ದಿ60 mins ago

Lok Sabha Election 2024: 272 ಸೀಟು ಗೆಲ್ಲದೇ ಹೋದರೆ ಬಿಜೆಪಿಯ ಪ್ಲ್ಯಾನ್ ಬಿ ಏನು? ಅಮಿತ್ ಶಾ ಉತ್ತರ ಹೀಗಿದೆ

PM Narendra Modi
ದೇಶ1 hour ago

PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Raveena tandon Saree fashion magic in Jayanthi Ballal designer
ಫ್ಯಾಷನ್1 hour ago

Raveena tandon Saree fashion: ಜಯಂತಿ ಬಲ್ಲಾಳ್‌ ಡಿಸೈನರ್‌ ಸೀರೆಯಲ್ಲಿ ನಟಿ ರವೀನಾ ಟಂಡನ್‌ ಜಾದೂ!

Prajwal Revanna Case Lawyer Devarajegowda sent to judicial custody End of police custody
ಕ್ರೈಂ2 hours ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌