Mann Ki Baat : ಇದು ವೃಕ್ಷ ಸಂರಕ್ಷಣೆ, ಜಲ ಸಂರಕ್ಷಣೆ ಮಾಡಬೇಕಾದ ಸಮಯ ಎಂದ ಮೋದಿ - Vistara News

ದೇಶ

Mann Ki Baat : ಇದು ವೃಕ್ಷ ಸಂರಕ್ಷಣೆ, ಜಲ ಸಂರಕ್ಷಣೆ ಮಾಡಬೇಕಾದ ಸಮಯ ಎಂದ ಮೋದಿ

Mann Ki Baat ಕಳೆದ ಸಲದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆಗೆ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ. 103ನೇ ಮನ್‌ ಕಿ ಬಾತ್‌ ವಿವರ ಇಲ್ಲಿದೆ.

VISTARANEWS.COM


on

Prime minister Modi in 103th Mann ki Baat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಜೂನ್-ಜುಲೈ ಎಂದರೆ ಮುಂಗಾರು ಮಾರುತದ ಅವಧಿ. ಯಮುನಾ ನದಿ ಸೇರಿದಂತೆ ಹಲವಾರು ನದಿ ಪ್ರದೇಶಗಳಲ್ಲಿ ಜನರಿಗೆ ಸಂಕಷ್ಟವಾಗಿದೆ. ದೇಶದ ಪಶ್ಚಿಮ ಭಾಗ ಹಾಗೂ ಉತ್ತರದ ವಲಯದಲ್ಲಿ ಭಾರಿ ಮಳೆ, ಸೈಕ್ಲೋನ್‌ ಪರಿಣಾಮ ಜನತೆಗೆ ಸಂಕಷ್ಟವಾಗಿದೆ. ಆದರೂ, ಪ್ರಾಕೃತಿಕ ವಿಕೋಪ ಎದುರಿಸಲು ಭಾರತ ಹಿಂದೆಂದಿಗಿಂತ ಹೆಚ್ಚು ಸಜ್ಜಾಗಿದೆ. ಈಗ ಗಿಡ ಮರಗಳನ್ನು ನೆಟ್ಟು ವೃಕ್ಷ ಸಂರಕ್ಷಣೆ, ಜಲ ಸಂರಕ್ಷಣೆ ಮಾಡಬೇಕಾದ ಸಮಯ ಎಂದು ಪ್ರಧಾನಿ ನರೇಂದ್ರ ಮೋದಿ (Mann Ki Baat) ಹೇಳಿದ್ದಾರೆ.

ಸ್ವಾತಂತ್ರ್ಯೋತ್ಸವದ ಸಂದರ್ಭ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ತಮ್ಮ ನೆಚ್ಚಿನ ಬಾನುಲಿ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ ಮನವಿ ಮಾಡಿದ್ದಾರೆ. ಹರ್‌ ಘರ್‌ ತಿರಂಗಾ (Har Ghar Tiranga) ಸಂಪ್ರದಾಯವನ್ನು ಮುಂದುವರಿಸಲು ಕರೆ ಕೊಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು 103ನೇ ಮನ್‌ ಕಿ ಬಾತ್‌ನಲ್ಲಿ ಮಾತನಾಡಿ, ಭಾರತೀಯರ ಕಠಿಣ ಪರಿಶ್ರಮ, ಬುದ್ಧಿವಂತಿಕೆ, ಕೌಶಲಗಳು, ಸಾಹಸ ಪ್ರವೃತ್ತಿ ಅನನ್ಯ. ಎರಡು ದಶಕಗಳ ಹಿಂದೆ ಗುಜರಾತಿನ ಕಛ್‌ ಜಿಲ್ಲೆ ಭೀಕರ ಭೂಕಂಪಕ್ಕೀಡಾಗತ್ತು. ಇನ್ನೆಂದಿಗೂ ಕಛ್‌ ಸುಧಾರಣೆ ಆಗದು ಎಂದು ಭಾವಿಸಲಾಗಿತ್ತು. ಆದರೆ ಕಛ್‌ ಈಗ ಹೇಗೆ ಚೇತರಿಸಿದೆ ಎಂದರೆ ದೇಶದ ವಿಕಸಿತ ಜಿಲ್ಲೆಗಳಲ್ಲಿ ಇದೂ ಒಂದಾಗಿದೆ.

ಪ್ರಾಕೃತಿಕ ವಿಕೋಪಗಳನ್ನು ನಿಯಂತ್ರಿಸುವುದು ಯಾರ ಕೈಯಲ್ಲೂ ಇಲ್ಲ. ಆದರೆ ಅವುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯ. ಭಾರತ ಅಂಥ ಸಾಮರ್ಥ್ಯವನ್ನು ಗಣನೀಯವಾಗಿ ವೃದ್ಧಿಸಿದೆ. ಇತ್ತೀಚೆಗೆ ದೇಶದ ಪಶ್ಚಿಮ ಭಾಗದಲ್ಲಿ ಭೀಕರ ಸೈಕ್ಲೋನ್‌ ಅಪ್ಪಳಿಸಿತ್ತು. ಹೀಗಿದ್ದರೂ ಕಛ್‌ ಇಂಥ ಸೈಕ್ಲೋನ್‌ ಅನ್ನೂ ಯಶಸ್ವಿಯಾಗಿ ಎದುರಿಸಿದೆ. ಇತರ ಸೈಕ್ಲೋನ್ ಪೀಡಿತ ಪ್ರದೇಶಗಳೂ ಶೀಘ್ರ ಚೇತರಿಸುವ ವಿಶ್ವಾಸ ಇದೆ ಎಂದರು.

ಪ್ರಾಕೃತಿಕ ವಿಕೋಪಗಳನ್ನು ಎದುರಿಸುವ ವಿಧಾನಗಳಲ್ಲಿ ಪ್ರಕೃತಿಯ ಸಂರಕ್ಷಣೆಯೂ ಒಂದು. ಈ ಹಿಂದಿನ ಮನ್‌ ಕಿ ಬಾತ್‌ನಲ್ಲಿ ನೀರಿನ ಸಂರಕ್ಷಣೆಯಲ್ಲಿ ತೊಡಗಿಸಿರುವ ಸ್ಟಾರ್ಟಪ್‌ಗಳ ಬಗ್ಗೆ ಚರ್ಚಿಸಲಾಗಿತ್ತು. ನೈಋತ್ಯ ಮುಂಗಾರಿನ ಸಂದರ್ಭ ದೇಶವಾಸಿಗಳ ರಕ್ಷಣೆಯೂ ದೊಡ್ಡದು. ಉತ್ತರಪ್ರದೇಶದ ಬಾಂದ್ರಾ, ಬುಂದೇಲ್ ಖಂಡ್‌ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಹೆಚ್ಚು. ಬಾಂದ್ರಾ ಜಿಲ್ಲೆಯ ಲುಕ್ತರಾ ಗ್ರಾಮದ ಪಂಚಾಯಿತಿ ಮುಖ್ಯಸ್ಥ ತುಳಸಿ ರಾಮ್‌ ಯಾದವ್‌ ಜಿ ಬಗ್ಗೆ ಪ್ರಧಾನಿ ಸ್ಮರಿಸಿದರು. ನೀರಿನ ಸಮಸ್ಯೆ ನೀಗಿಸಲು ತುಳಸಿ ರಾಮ್‌ ಅವರು ಗ್ರಾಮಗಳಲ್ಲಿ 40ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ್ದಾರೆ. ಈ ಕೆಲಸ ಪರಿಣಾಮಕಾರಿಯಾಗಿದೆ. ಅಂತರ್ಜಲದ ಮಟ್ಟ ಸುಧಾರಿಸಿದೆ.

ನದಿಯ ಪುನರುಜ್ಜೀವನ: ಉತ್ತರಪ್ರದೇಶದ ಹಾಪುರ್‌ ಜಿಲ್ಲೆಯಲ್ಲಿ ನೀಮ್‌ ಎಂಬ ನದಿ ಇತ್ತು. ಕ್ರಮೇಣ ಮರೆಯಾಗಿತ್ತು. ಆದರೆ ಜನ ಮರೆತಿರಲಿಲ್ಲ. ಎಲ್ಲರೂ ಸೇರಿ ನದಿಯ ಪುನರುಜ್ಜೀವನ ಕಾಯಕಲ್ಪ ಕೈಗೊಂಡರು. ನದಿ, ಸರೋವರ ಕೇವಲ ನೀರಿನ ತಾಣವಲ್ಲ, ಜನ ಜೀವನದ ಮೂಲ ದ್ರವ್ಯವೂ ಹೌದು ಎಂದು ಪ್ರಧಾನಿ ಹೇಳಿದರು. ನದಿಯ ಉಗಮ ಸ್ಥಳದಲ್ಲಿ ಅಮೃತ ಸರೋವರ ನಿರ್ಮಿಸಲಾಗಿದೆ.

ಮಹಾರಾಷ್ಟ್ರದ ಜಿಲ್ಲೆಯೊಂದರಲ್ಲಿ 53 ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ನಿಲ್‌ವಂಡೆ ಕಾಲುವೆಯ ಕಾಮಗಾರಿ ಮುಕ್ತಾಯವಾಗಿದೆ. ಈ ಯೋಜನೆಯನ್ನು 1970ರಲ್ಲಿ ಅಂದಾಜು 7.9 ಕೋಟಿ ರೂ.ಗಳ ವೆಚ್ಚದೊಂದಿಗೆ ಅನುಮೋದಿಸಲಾಗಿತ್ತು. ನಾಸಿಕ್‌ ವಲಯದ ಆರು ತಾಲ್ಲೂಕಿನಲ್ಲಿ ನೀರಿನ ಕೊರತೆಯನ್ನು ಈ ಕಾಲುವೆ ನೀಗಿಸಲಿದೆ. (ಈಗ ಯೋಜನೆಗೆ 5,177 ಕೋಟಿ ರೂ. ವೆಚ್ಚ) ಇತ್ತೀಚೆಗೆ ಪ್ರಾಯೋಗಿಕವಾಗಿ ಕಾಲುವೆಗೆ ನೀರು ಹರಿಸಿದಾಗ ಸ್ಥಳೀಯರು ಹಬ್ಬದಂತೆ ಆಚರಿಸಿದ್ದರು.

ಛತ್ರಪತಿ ಶಿವಾಜಿ ಮಹಾರಾಜರು ಶೌರ್ಯ-ಸಾಹಸಕ್ಕೆ ಹೆಸರಾಗಿದ್ದಲ್ಲದೆ, ಉತ್ತಮ ಆಡಳಿತಗಾರರೂ, ದೂರದೃಷ್ಟಿ ಇರುವ ನಾಯಕರೂ ಆಗಿದ್ದರು. ಜಲ ಸಂರಕ್ಷಣೆಗೆ ಶಿವಾಜಿಯವರು ಪಣ ತೊಟ್ಟಿದ್ದರು. ಶಿವಾಜಿ ಅವರ ನಾಯಕತ್ವದಲ್ಲಿ ಸಮುದ್ರ ಮತ್ತು ನದಿಗಳ ಸಮೀಪದ ಜಲದುರ್ಗ ಕೆರೆ, ಕೋಟೆಗಳು ಶತ ಶತಮಾನಗಳ ಬಳಿಕವೂ ಉಳಿದುಕೊಂಡು ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಭಾರತವನ್ನು ಕ್ಷಯ ರೋಗದಿಂದ ಮುಕ್ತಗೊಳಿಸಲು ಮಕ್ಕಳು, ಯುವ ಜನತೆ ನೆರವು ನೀಡುತ್ತಾರೆ. ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ 7 ವರ್ಷದ ಬಾಲಕಿ ನಳಿನಿ ಸಿಂಗ್‌ ತನ್ನ ಪಾಕೆಟ್‌ ಮನಿಯನ್ನು ಬಳಸಿ ಕ್ಷಯ ರೋಗದ ವಿರುದ್ಧ ಜನ ಜಾಗೃತಿ ಮೂಡಿಸುತ್ತಿದ್ದಾಳೆ. ಟಿಬಿ ರೋಗಿಗಳಿಗೆ ನೆರವು ನೀಡುತ್ತಾಳೆ. ಮಧ್ಯಪ್ರದೇಶದ 13 ವರ್ಷದ ಮೀನಾಕ್ಷಿ, ಪಶ್ಚಿಮ ಬಂಗಾಳದ ಬಶ್ವರ್‌ ಮುಖರ್ಜಿ ಕೂಡ ಕ್ಷಯ ರೋಗದ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ. ಇದು ಸ್ಪೂರ್ತಿ ನೀಡುವಂಥದ್ದು ಎಂದು ಪ್ರಧಾನಿ ವಿವರಿಸಿದರು.

ಜಮ್ಮು ಕಾಶ್ಮೀರದಲ್ಲಿ ಜಿ 20 ಶೃಂಗ ಸಭೆಯ ಕಾರ್ಯಕ್ರಮಗಳಿಂದ ಗಮನ ಸೆಳೆಯುತ್ತದೆ. ಬಾರಾಮುಲ್ಲಾದಲ್ಲಿ ಹಾಲಿನ ಕೊರತೆ ಇತ್ತು. ಈ ಗ್ರಾಮದಲ್ಲಿ ಮಹಿಳೆಯರು ಹೈನೋದ್ಯಮಕ್ಕೆ ತೊಡಗಿಸಿದ್ದಾರೆ. ಇಶ್ರತ್‌ ನಬಿ ಎಂಬ ಪದವೀಧರೆ ಡೇರಿ ಸ್ಥಾಪಿಸಿದ್ದಾರೆ. ಅದು ದಿನಕ್ಕೆ 150 ಲೀಟರ್‌ ಹಾಲು ಮಾರಾಟ ಮಾಡುತ್ತದೆ.

ಇತ್ತೀಚೆಗೆ ಅಮೆರಿಕ್ಕೆ ಹೋಗಿದ್ದಾಗ ಭಾರತದ ಪ್ರಾಚೀನ ಕಲಾಕೃತಿಗಳನ್ನು ಭಾರತಕ್ಕೆ ವಾಪಸ್‌ ತರಲಾಯಿತು. ದೇಶದ ಪ್ರಾಚೀನ ಸಂಸ್ಕೃತಿ ಬಗ್ಗೆ ತಿಳಿಯಲ ಇದು ಅನುಕೂಲಕರ. ಪಂಜಾಬ್‌ನಲ್ಲಿ ಮಾದಕ ದ್ರವ್ಯಗಳಿಂದ ಯುವ ಜನತೆಯನ್ನು ಪಾರು ಮಾಡಲು ಅಭಿಯಾನ ಕೈಗೊಳ್ಳಲಾಗಿದೆ. ಭವಿಷ್ಯದ ಪೀಳಿಗೆಗೋಸ್ಕರ 2020ರ ಆಗಸ್ಟ್‌ 15ರಂದು ಇದಕ್ಕಾಗಿ ಅಭಿಯಾನ ಕೈಗೋಳ್ಳಲಾಗಿದೆ.

ಮಿನಿ ಬ್ರೆಜಿಲ್‌ : ಮಧ್ಯಪ್ರದೇಶದ ಬಿಚಾರ್‌ಪುರ್‌ ಗ್ರಾಮವನ್ನು ಮಿನಿ ಬ್ರೆಜೆಲ್‌ ಎಂದು ಕರೆಯುತ್ತಾರೆ. ಈ ಗ್ರಾಮವು ಫುಟ್ಬಾಲ್‌ಗೆ ವಿಶೇಷ ಗಮನ ನೀಡುತ್ತಿರುವುದು ಇದಕ್ಕೆ ಕಾರಣ. ಎರಡು ದಶಕಗಳ ಹಿಂದೆ ಈ ಕುರಿತ ಅಭಿಯಾನ ಕೈಗೊಳ್ಳಲಾಗಿತ್ತು. ಈಗ ಫುಟ್ಬಾಲ್‌ ಕ್ರಾಂತಿಯೇ ಅಲ್ಲಿ ಆರಂಭವಾಗಿದೆ. ವಿಶ್ವ ದರ್ಜೆಯ ತರಬೇತುದಾರರು ತರಬೇತಿ ನೀಡುತ್ತಿದ್ದಾರೆ. ನಮ್ಮ ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಅವರ ಅನ್ವೇಷಣೆ ಮತ್ತು ತರಬೇತಿ ಮುಖ್ಯ ಎಂದರು.

ಇದನ್ನೂ ಓದಿ: PM Narendra Modi Interview: ಜಾಗತಿಕ ನಾಯಕತ್ವ ವಹಿಸಲು ಭಾರತ ಸಿದ್ಧ: ಫ್ರಾನ್ಸ್‌ ಪತ್ರಿಕೆಗೆ ನರೇಂದ್ರ ಮೋದಿ ವಿಶೇಷ ಸಂದರ್ಶನ

ಅಮೃತ ಮಹೋತ್ಸವ ಆಚರಣೆ: ನಾವು ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಪೂರ್ಣಗೊಳಿಸಿದ್ದೇವೆ. ದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಸಲಾಗಿತ್ತು. ದೇಶದ ರಕ್ಷಣೆಯಲ್ಲಿ ಹುತಾತ್ಮರಾದವರನ್ನು ಗೌರವಿಸಲು ಅವರ ಸ್ಮರಣಾರ್ಥ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ದೇಶದಲ್ಲಿ ಅಮೃತ್‌ ಕಲಶ್‌ ಯಾತ್ರಾ ನಡೆಯಲಿದೆ. ದೇಶದ ಮೂಲೆ ಮೂಲೆಗಳಿಂದ 7,500 ಕಲಶಗಳಲ್ಲಿ ಮಣ್ಣನ್ನು ತುಂಬಿ ದಿಲ್ಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಅಮೃತ್‌ ವಾಟಿಕಾ ನಿರ್ಮಿಸಲಾಗುವುದು. ಇದು ಏಕ್‌ ಭಾರತ್‌ ಶ್ರೇಷ್ಠ್‌ ಭಾರತ್‌ ಸಂದೇಶ ಬಿಂಬಿಸಲಿದೆ ಎಂದು ಪ್ರಧಾನಿ ವಿವರಿಸಿದರು. ಕಳೆದ ವರ್ಷದಂತೆ ಈ ಸಲವೂ ಆಗಸ್ಟ್‌ 15ರಂದು ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ್ಯ ಆಚರಿಸೋಣ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಮಾರ್ಗದಲ್ಲಿ ಕವಚ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

VISTARANEWS.COM


on

Train Accident
Koo

ಕೋಲ್ಕೊತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿಯಾಗಿ (Train Accident) 15 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದರಲ್ಲೂ, ಈ ಮಾರ್ಗದಲ್ಲಿ ರೈಲುಗಳ ಸುರಕ್ಷತೆಗಾಗಿ ಅಳವಡಿಸಿಕೊಳ್ಳಲಾಗಿರುವ ಕವಚ (Kavach) ಸುರಕ್ಷಾ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಹಾಗಾದರೆ, ಏನಿದು ಕವಚ ಸುರಕ್ಷಾ ವ್ಯವಸ್ಥೆ? ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

ಏನಿದು ಕವಚ?

ಆತ್ಮನಿರ್ಭರ ಭಾರತದ ಭಾಗವಾಗಿ 2022-23ರಲ್ಲಿ ರೈಲುಗಳ ಸುರಕ್ಷತೆ ಮತ್ತು ಸಾಮರ್ಥ್ಯ ಹೆಚ್ಚಳಕ್ಕಾಗಿ ಸುಮಾರು 2,000 ಕಿ.ಮೀ. ಮಾರ್ಗವನ್ನು ಕವಚ ಸುರಕ್ಷತಾ ವಿಧಾನದ ಅಡಿಯಲ್ಲಿ ತರಲಾಗುವುದು ಎಂದು ಸಚಿವಾಲಯ ಹೇಳಿತ್ತು. ಕವಚ ಎಂಬುದು ಸೇಫ್ಟಿ ಇಂಟೆಗ್ರಿಟಿ ಲೆವೆಲ್ 4 ಮಾನದಂಡಗಳಾಗಿವೆ. ಇದನ್ನು ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್​​ಡಿಎಸ್​​ಒ) ಅಭಿವೃದ್ಧಿಪಡಿಸಿದೆ. ಕವಚ​ ವ್ಯವಸ್ಥೆಯು ರೈಲುಗಳು ಕೆಂಪು ಸಿಗ್ನಲ್​ ದಾಟಿ ಮುಂದಕ್ಕೆ ಹೋಗುವುದನ್ನು ತಡೆಯುತ್ತದೆ. ಒಂದು ವೇಳೆ ದಾಟಿದರೆ ಸ್ವಯಂಚಾಲಿತ ಬ್ರೇಕಿಂಗ್ ವ್ಯವಸ್ಥೆ ಆ್ಯಕ್ವಿವೇಟ್​ ಆಗುತ್ತದೆ. ಹೀಗಾಗಿ ಎರಡು ರೈಲುಗಳ ನಡುವಿನ ಮುಖಾಮುಖಿ ಡಿಕ್ಕಿಯ ಸಂಭವ ಕಡಿಮೆ.

ಕವಚ ಕಾರ್ಯನಿರ್ವಹಿಸುವುದು ಹೇಗೆ?

ಯಾವುದೇ ತುರ್ತು ಸಂದರ್ಭದಲ್ಲಿ ರೈಲು ಅಪಘಾತ ತಡೆಯುವುದೇ ಕವಚದ ಉದ್ದೇಶವಾಗಿದೆ. ರೈಲು ಹಳಿಗಳು, ಸ್ಟೇಷನ್‌ ಯಾರ್ಡ್‌ ಹಾಗೂ ಸಿಗ್ನಲ್‌ಗಳಿಗೆ ಆರ್‌ಎಫ್‌ಐಡಿ (ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್)‌ ಟ್ಯಾಗ್‌ಗಳನ್ನು ಅಳವಡಿಸಲಾಗಿರುತ್ತದೆ. ಇದರಿಂದ ರೈಲುಗಳು ಎದುರು ಬದಿರಾಗಿ ಒಂದೇ ಹಳಿಯ ಮೇಲೆ ಚಲಿಸಿದರೂ ಎರಡೂ ಡಿಕ್ಕಿಯಾಗುವ ಮುನ್ನ ಸ್ವಯಂಚಾಲಿತವಾಗಿಯೇ ರೈಲುಗಳು ಬ್ರೇಕ್‌ ಹಾಕಿಕೊಳ್ಳುತ್ತವೆ. ಲೋಕೊ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸಿಗ್ನಲ್‌ನಿಂದಾಗಿಯೇ ಸ್ವಯಂಚಾಲಿತವಾಗಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ಅಷ್ಟೇ ಅಲ್ಲ, ಒಂದು ರೈಲಿನ ಹಿಂದೆ ಮತ್ತೊಂದು ರೈಲು ಚಲಿಸುವಾಗ ಹಿಂದಿನ ರೈಲು ನಿಧಾನಗತಿಯಲ್ಲಿ ಸಾಗುವುದು, ರೈಲಿನ ಸಮೀಪ ಹೋದಾಗ ಬ್ರೇಕ್‌ ಹಾಕುವುದು, ಹವಾಮಾನ ವೈಪರೀತ್ಯದಿಂದ ಮಂದ ಬೆಳಕು ಇದ್ದಾಗ ಬ್ರೇಕ್‌ ಹಾಕುವುದು, ಗೇಟ್‌ಗಳು ಅಡ್ಡ ಬಂದಾಗ ಬ್ರೇಕ್‌ ಹಾಕುವುದು ಸೇರಿ ಯಾವುದೇ ತುರ್ತು ಸಂದರ್ಭದಲ್ಲಿ ಲೋಕೊಮೋಟಿವ್‌ ಪೈಲಟ್‌ ಬ್ರೇಕ್‌ ಹಾಕುವುದನ್ನು ಮರೆತರೂ, ಸ್ವಯಂಚಾಲಿತವಾಗಿ ಕವಚ ವ್ಯವಸ್ಥೆಯ ಅಡಿಯಲ್ಲಿ ಬ್ರೇಕ್‌ ಹಾಕಿಕೊಳ್ಳುತ್ತವೆ.

ದೇಶಾದ್ಯಂತ ವಿಸ್ತರಣೆ ಯಾವಾಗ?

ಕವಚ ಸುರಕ್ಷಾ ವಿಧಾನದ ಅಳವಡಿಕೆಯಿಂದ ರೈಲುಗಳ ಅಪಘಾತವು ಗಣನೀಯವಾಗಿ ಕುಸಿದಿದೆ. ಆದರೆ, ಇದುವರೆಗೆ 1,500 ಕಿಲೋಮೀಟರ್‌ ರೈಲು ಮಾರ್ಗಕ್ಕೆ ಮಾತ್ರ ಕವಚ ಅಳವಡಿಸಲಾಗಿದೆ. ಆರಂಭಿಕ ಹಂತದಲ್ಲಿ 2 ಸಾವಿರ ಕಿಲೋಮೀಟರ್‌ ಹಾಗೂ ಹಂತ ಹಂತವಾಗಿ 34 ಸಾವಿರ ಕಿಲೋಮೀಟರ್‌ ಉದ್ದದ ರೈಲು ಮಾರ್ಗಕ್ಕೆ ಕವಚ ಅಳವಡಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಭಾರತೀಯ ರೈಲ್ವೆಯು ಸುಮಾರು 1 ಲಕ್ಷ ಕಿಲೋಮೀಟರ್‌ ಮಾರ್ಗವನ್ನು ಹೊಂದಿರುವ ಕಾರಣ ಎಲ್ಲ ಮಾರ್ಗಗಳಲ್ಲೂ ಕವಚ ಅಳವಡಿಸಲು ಸಮಯ ಬೇಕಾಗುತ್ತದೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; ಕನಿಷ್ಠ 15 ಮಂದಿ ಸಾವು

Continue Reading

ದೇಶ

Train Accident: ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲು​ ದುರಂತ; ಮೃತರ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ

Train Accident: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಮಾತ್ರವಲ್ಲ ಗಾಯಗೊಂಡವರಿಗೆ 50 ಸಾವಿರ ರೂ. ಪ್ರಕಟಿಸಿದ್ದಾರೆ.

VISTARANEWS.COM


on

Train Accident
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಗರ್ತಲಾದಿಂದ ಪಶ್ಚಿಮ ಬಂಗಾಳದ ಸೀಲ್ಡಾಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ (Train Accident).

ಆಘಾತ ವ್ಯಕ್ತಪಡಿಸಿದ ಮೋದಿ

ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ʼʼಪಶ್ಚಿಮ ಬಂಗಾಳದಲ್ಲಿ ನಡೆದ ರೈಲು ದುರಂತದ ಸುದ್ದಿ ಕೇಳಿ ಆಘಾತವಾಯಿತು. ಅಪಘಾತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಮಾತುಕಡೆ ನಡೆಸಿದ್ದೇನೆ. ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಸ್ಥಳ ಪರಿಶೀಲನೆ ನಡೆಸಲಿದ್ದಾರೆʼʼ ಎಂದು ಹೇಳಿದ್ದಾರೆ.

ಪರಿಹಾರ ಧನ ಘೋಷಣೆ

ಇದರ ಜತೆಗೆ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಈತನ್ಮಧ್ಯೆ ಡಾರ್ಜಿಲಿಂಗ್‌ಗೆ ತೆರಳುತ್ತಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮೃತರ ಸಂಬಂಧಿಕರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣ ಪುಟ್ಟ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಕಟಿಸಿದ್ದಾರೆ. ಘಟನೆ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತಿತರರು ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮಮತಾ ಬ್ಯಾನರ್ಜಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾರಣವೇನು?

ಸೀಲ್ಡಾಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತ ಹೊಡೆದ ರಭಸಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳು ಹಳಿ ತಪ್ಪಿವೆ. ದುರಂತ ಯಾಕೆ ಸಂಭವಿಸಿತು ಎನ್ನುವುದನ್ನು ಕಂಡುಕೊಳ್ಳಲು ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗೂಡ್ಸ್‌ ರೈಲಿನ ಲೋಕೋ ಪೈಲಟ್‌ ಮತ್ತು ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಗಾರ್ಡ್‌ ಕೂಡ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೂಡ್ಸ್ ರೈಲು ಸಿಗ್ನಲ್ ಅನ್ನು ಜಂಪ್‌ ಮಾಡಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಹಿಂಭಾಗದ ಪಾರ್ಸೆಲ್ ಬೋಗಿಗೆ ಡಿಕ್ಕಿ ಹೊಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ʼʼರಕ್ಷಣಾ ಕಲಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ರೈಲ್ವೆ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ನೆರವಿಗೆ ಧಾವಿಸಿವೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರಗರ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ಮೇಲ್ವಿಚಾರಣೆ ನಡೆಸುತ್ತಿದ್ದಾರೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; ಕನಿಷ್ಠ 15 ಮಂದಿ ಸಾವು

Continue Reading

ದೇಶ

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು.

VISTARANEWS.COM


on

Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Kisan Samman Nidhi).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Continue Reading

ವಾಣಿಜ್ಯ

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

ಖರೀದಿ ಮಾಡಿರುವ ಒಂದು ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ದೇಶದಲ್ಲಿ ಖಾಲಿ ಇವೆ. ಮಾತ್ರವಲ್ಲದೆ ದೇಶದಲ್ಲಿ ಅಗ್ಗದ ಮನೆಗಳಿಗೆ ಬೇಡಿಕೆ ವೇಗವಾಗಿ ಕುಸಿಯುತ್ತಿದ್ದು, ದುಬಾರಿ ಮನೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರ ಅರ್ಥ ಎಲ್ಲರೂ ಶ್ರೀಮಂತರಾಗಿದ್ದಾರೆ ಎಂದಲ್ಲ. ರಿಯಲ್ ಎಸ್ಟೇಟ್ (Real Estate) ಉದ್ಯಮಿಗಳು ಶೇ. 10ರಷ್ಟಿರುವ ಶ್ರೀಮಂತರಿಗೆ ತಮ್ಮ ಆಸ್ತಿ ಮಾರಾಟಕ್ಕೆ ಆಸಕ್ತಿ ವಹಿಸಿರುವುದು ಇದಕ್ಕೆ ಮುಖ್ಯ ಕಾರಣ ಎಂದಿದ್ದಾರೆ ಭಾರತದ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಮಂಡಳಿ (ನರೆಡ್ಕೊ) ಅಧ್ಯಕ್ಷ ಜಿ. ಹರಿಬಾಬು.

VISTARANEWS.COM


on

By

Real Estate
Koo

ಬಳಕೆಯಾಗದ ಆಸ್ತಿಯನ್ನು (assets) ಇಟ್ಟುಕೊಳ್ಳುವುದು ಒಂದು ರಾಷ್ಟ್ರೀಯ ಅಪರಾಧ (national crime) ಎಂದು ನಾನು ಭಾವಿಸುತ್ತೇನೆ. ದೇಶದಲ್ಲಿ ಒಂದೆಡೆ ವಸತಿ ಕೊರತೆಯಿದೆ. ಇನ್ನೊಂದೆಡೆ 1.14 ಕೋಟಿ ಫ್ಲಾಟ್‌ಗಳು ಖಾಲಿ ಇವೆ ಎಂದು ಭಾರತದ ರಾಷ್ಟ್ರೀಯ ರಿಯಲ್ ಎಸ್ಟೇಟ್ (Real Estate) ಅಭಿವೃದ್ಧಿ ಮಂಡಳಿ (NAREDCO) ಅಧ್ಯಕ್ಷ ಜಿ. ಹರಿಬಾಬು (G. Haribabu) ತಿಳಿಸಿದ್ದಾರೆ.

ಪ್ರಸ್ತುತ ದೇಶದಲ್ಲಿ ಸುಮಾರು ಒಂದು ಕೋಟಿ ಮನೆಗಳು ಖಾಲಿ ಬಿದ್ದಿವೆ. ಒಂದೆಡೆ ದುಬಾರಿ ಮನೆಗಳಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ಮತ್ತೊಂದೆಡೆ ದೇಶದ ದೊಡ್ಡ ನಗರಗಳಲ್ಲಿ ಅಗ್ಗದ ಮನೆಗಳ ಬೇಡಿಕೆ ವೇಗವಾಗಿ ಕುಸಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಂಕಿಅಂಶಗಳ ಪ್ರಕಾರ 2019 ಮತ್ತು 2023 ರ ನಡುವೆ 1.5 ಕೋಟಿ ರೂ. ಗಿಂತ ಹೆಚ್ಚು ವೆಚ್ಚದ ಮನೆಗಳ ಬೇಡಿಕೆಯು ಸುಮಾರು 1000 ಪ್ರತಿಶತದಷ್ಟು ಹೆಚ್ಚಾಗಿದೆ. ಶ್ರೀಮಂತರು ಮತ್ತು ಸಾಂಸ್ಥಿಕ ಹೂಡಿಕೆದಾರರು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಜಿಗಿದಿರುವುದರಿಂದ ಈ ರೀತಿಯಾಗಿದೆ. ಆದರೆ, ದೇಶಕ್ಕೆ ಅಗ್ಗದ ಮನೆಗಳ ಅಗತ್ಯವಿದ್ದು, ರಿಯಲ್ ಎಸ್ಟೇಟ್ ಕ್ಷೇತ್ರದ ಅಭಿವೃದ್ಧಿಗೆ ಅವರ ಬೇಡಿಕೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.


ಬಿಲ್ಡರ್‌ ಗಳಿಗೆ ಕೇವಲ ಶೇ. 10ರಷ್ಟು ಜನರಷ್ಟೇ ಗುರಿ

2022ರಲ್ಲಿ ಹೈದರಾಬಾದ್‌ನಲ್ಲಿ 5,300 ಅಗ್ಗದ ಮನೆಗಳನ್ನು ಮಾರಾಟ ಮಾಡಲಾಗಿದೆ. 2023ರಲ್ಲಿ ಈ ಸಂಖ್ಯೆ ಕೇವಲ 3,800 ಕ್ಕೆ ಇಳಿಕೆಯಾಗಿದೆ. ಕೆಲವೇ ಜನರಲ್ಲಿ ಹಣವು ವೇಗವಾಗಿ ಹೆಚ್ಚುತ್ತಿದೆ. ದೇಶದ ಜನಸಂಖ್ಯೆಯ ಶೇ. 10ರಷ್ಟು ಮಂದಿಯಲ್ಲಿ ಶೇ. 63ರಷ್ಟು ಸಂಪತ್ತು ಸಂಗ್ರಹವಾಗಿದೆ. ಈ ಸಂಖ್ಯೆ 14 ಕೋಟಿ ಜನರದ್ದು. ಈ ಸಮಯದಲ್ಲಿ ಹೆಚ್ಚಿನ ಬಿಲ್ಡರ್‌ಗಳು ಈ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ಸುಮಾರು 1.14 ಕೋಟಿ ಮನೆಗಳು ಖಾಲಿ ಬಿದ್ದಿರುವುದಕ್ಕೆ ಇದೇ ಮುಖ್ಯ ಕಾರಣ ಎಂದು ಅವರು ಹೇಳಿದ್ದಾರೆ.

ಖರೀದಿಸಿ ಬಳಕೆಯಾಗದ ಮನೆಗಳು

ಹೂಡಿಕೆದಾರರು ಖರೀದಿಸುವ ಮನೆಗಳನ್ನು ಬಳಸುತ್ತಿಲ್ಲ ಎಂದು ತಿಳಿಸಿರುವ ಹರಿಬಾಬು, ಈ ಮನೆಗಳನ್ನು ಬಾಡಿಗೆಗೆ ಸಹ ನೀಡುತ್ತಿಲ್ಲ. ಒಂದೆಡೆ ಜನ ಮನೆ ಹುಡುಕಿಕೊಂಡು ಅಲೆದಾಡುತ್ತಿದ್ದರೆ, ಮತ್ತೊಂದೆಡೆ ಈ ಮನೆಗಳು ಖಾಲಿ ಬಿದ್ದಿವೆ. ಹೂಡಿಕೆಗಾಗಿ ಖರೀದಿಸಿದ ಈ ಮನೆಗಳು ಬಳಕೆಯಾಗುತ್ತಿಲ್ಲ. ಇದೊಂದು ರೀತಿಯ ಅಪರಾಧ. ಅಂತಹ ಮನೆಗಳ ಮೇಲಿನ ಆಸ್ತಿ ತೆರಿಗೆಯನ್ನು ಎರಡು ಅಥವಾ ಮೂರು ಪಟ್ಟು ಹೆಚ್ಚಿಸಬೇಕು. ಇದರಿಂದ ಈ ಆಸ್ತಿಯನ್ನು ಬಳಸಬಹುದು. ನಮ್ಮ ಜನಸಂಖ್ಯೆಯ ಶೇ.60ರಷ್ಟು ಮಂದಿಗೆ ಮನೆ ಖರೀದಿಸಲು ಸಾಧ್ಯವಾಗುತ್ತಿಲ್ಲ. ಅವರು ಸಂಪೂರ್ಣವಾಗಿ ಸರ್ಕಾರದ ಯೋಜನೆಗಳ ಮೇಲೆ ಅವಲಂಬಿತರಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

ಶುಲ್ಕಗಳಲ್ಲಿ ರಿಯಾಯಿತಿ

ಕೈಗೆಟಕುವ ದರದಲ್ಲಿ ಮನೆ ನಿರ್ಮಿಸಲು ಬಿಲ್ಡರ್ ಗಳ ಮೇಲೆ ಸರಕಾರ ಒತ್ತಡ ಹೇರಬೇಕು ಎಂದ ಅವರು, ಕೈಗೆಟಕುವ ಬೆಲೆಯ ಮನೆಗಳಿಗೆ ಜಿಎಸ್‌ಟಿ, ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕವನ್ನು ಮನ್ನಾ ಮಾಡಬೇಕು. ಈ ಬದಲಾವಣೆಗಳು ಕೈಗೆಟುಕುವ ದರದ ವಸತಿ ವಲಯದಲ್ಲಿ ಶೇ. 25ರಷ್ಟು ಬೆಳವಣಿಗೆಯನ್ನು ತರುವ ನಿರೀಕ್ಷೆಯಿದೆ. ಕೆಳಮಧ್ಯಮ ಮತ್ತು ಮಧ್ಯಮ ವರ್ಗದವರ ಬಗ್ಗೆ ಸರಕಾರ ಚಿಂತನೆ ನಡೆಸಬೇಕಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನಾವು ಸಾಗುತ್ತಿದ್ದೇವೆ. ನಮ್ಮ ಜನಸಂಖ್ಯೆಯ ಶೇ. 40ರಷ್ಟು ಮಂದಿ ಕೊಳೆಗೇರಿಗಳಲ್ಲಿ ವಾಸಿಸುತ್ತಿದ್ದರೆ, ನಾವು ಅಭಿವೃದ್ಧಿ ಹೊಂದಿದ ದೇಶ ಎಂದು ಹೇಗೆ ಕರೆಯಬಹುದು ಎಂದು ಅವರು ಪ್ರಶ್ನಿಸಿದ್ದಾರೆ.

Continue Reading
Advertisement
Train Accident
EXPLAINER5 mins ago

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident
ದೇಶ9 mins ago

Train Accident: ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲು​ ದುರಂತ; ಮೃತರ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ

Model Fashion pratibha nataraj
ಫ್ಯಾಷನ್13 mins ago

Model Fashion: ಸೀಸನ್‌ ಗೆ ತಕ್ಕಂತೆ ಫ್ಯಾಷನ್‌ ಬದಲಿಸುವ ಮಿಸೆಸ್‌ ಬೆಂಗಳೂರು ಟೈಟಲ್‌ ವಿಜೇತೆ ಪ್ರತಿಭಾ ನಟರಾಜ್‌

Amy Jackson shares a glimpse of her Paris bachelorette
ಸಿನಿಮಾ25 mins ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ29 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ33 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ41 mins ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ50 mins ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Hunters Arrest
ಕ್ರೈಂ1 hour ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು3 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ21 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ22 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌