Ajinkya Rahane : ಕ್ರಿಕೆಟ್​ನಿಂದ ಕೆಲವು ದಿನ ಬ್ರೇಕ್ ಪಡೆದುಕೊಂಡು ಭಾರತ ತಂಡದ ಆಟಗಾರ - Vistara News

ಕ್ರಿಕೆಟ್

Ajinkya Rahane : ಕ್ರಿಕೆಟ್​ನಿಂದ ಕೆಲವು ದಿನ ಬ್ರೇಕ್ ಪಡೆದುಕೊಂಡು ಭಾರತ ತಂಡದ ಆಟಗಾರ

ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ ಫೈನಲ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅಜಿಂಕ್ಯ ರಹಾನೆ (Ajinkya Rahane) ಭಾಗಿಯಾಗಿದ್ದರು.

VISTARANEWS.COM


on

ajinkya rahane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಭಾರತ ಟೆಸ್ಟ್​ ತಂಡದ ಉಪನಾಯಕ ಅಜಿಂಕ್ಯ ರಹಾನೆ ಕ್ರಿಕೆಟ್​ನಿಂದ ಸ್ವಲ್ಪ ದಿನಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದಾರೆ. ಹೀಗಾಗಿ ಅವರು ಮುಂಬರುವ ಏಕ ದಿನ ಕಪ್ ಗಾಗಿ ಲೀಸೆಸ್ಟರ್ ಶೈರ್ ತಂಡವನ್ನು ಸೇರಿಕೊಳ್ಳುತ್ತಿಲ್ಲ. ಅಜಿಂಕ್ಯ ರಹಾನೆ ಪೂರ್ವ ಯೋಜನೆಯಂತೆ ಜೂನ್​ನಲ್ಲಿ ಲಿಸೆಸ್ಟರ್​ ತಂಡ ಸೇರಬೇಕಿತ್ತು. ಆದರೆ ಅವರು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ ಫೈನಲ್ ಪಂದ್ಯಕ್ಕಾಗಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಅಲ್ಲದೆ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಆಡಿದ್ದರು. ಹೀಗಾಗಿ ಇಂಗ್ಲೆಂಡ್​ಗೆ ಹೋಗಲು ಅವರಿಗೆ ಸಾಧ್ಯವಾಗಿರಲಿಲ್ಲ. ಇದೀಗ ಅವರು ಸಂಪೂರ್ಣವಾಗಿ ಅದರಿಂದ ಮುಕ್ತಿ ಪಡೆದುಕೊಂಡಿದ್ದಾರೆ.

ಈ ಹಿಂದೆಯೇ ಭಾರತೀಯ ಆಟಗಾರ ತಂಡ ಸೇರಬೇಕಾಗಿತ್ತು. ಆದರೆ ಅವರಿಗೆ ರಾಷ್ಟ್ರಿಯ ತಂಡದ ಕೆಲಸವಿದ್ದ ಕಾರಣ ವೇಳಾಪಟ್ಟಿಗೆ ಪೂರಕವಾಗಿ ತಂಡ ಸೇರಿಕೊಳ್ಳುವುದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ35 ವರ್ಷದ ಆಟಗಾರ ಈಗ ಆಗಸ್ಟ್ ಮತ್ತು ಸೆಪ್ಟೆಂಬರ್​ನಲ್ಲಿ ಕ್ರಿಕೆಟ್​ನಿಂದ ವಿರಾಮ ತೆಗೆದುಕೊಳ್ಳುವ ಬಯಸಿದ್ದಾರೆ ” ಎಂದು ಲೀಸೆಸ್ಟರ್​ಶೈರ್​ ಹೇಳಿಕೆ ನೀಡಿದೆ.

ಅಜಿಂಕ್ಯ ರಹಾನೆ ಬದಲಿಗೆ ಕೌಂಟಿ ಚಾಂಪಿಯನ್ಶಿಪ್ ಮತ್ತು ಟಿ 20 ಬ್ಲಾಸ್ಟ್​ ಟೂರ್ನಿಗಾಗಿ ಲಿಸೆಸ್ಟರ್​ಶೈರ್ ತಂಡವು ಪೀಟರ್ ಹ್ಯಾಂಡ್ಸ್​​ಕಾಂಡ್​ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ಇದನ್ನೂ ಓದಿ : ind vs wi : 2ನೇ ಏಕದಿನ ಪಂದ್ಯಕ್ಕೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇರಲಿಲ್ಲ ಯಾಕೆ?

ಲೀಸೆಸ್ಟರ್​ಶೈರ್​ ಕ್ರಿಕೆಟ್ ನಿರ್ದೇಶಕ ಕ್ಲೌಡ್ ಹೆಂಡರ್ಸನ್ ಈ ಕುರಿತು ಮಾತನಾಡಿ, ಮೊದಲನೆಯದಾಗಿ, ಅಜಿಂಕ್ಯ ರಹಾನೆ ಅವರು ಇರುವ ಪರಿಸ್ಥಿತಿಯನ್ನು ನಾವು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇವೆ. ಅವರು ಇತ್ತೀಚಿನ ಕೆಲವು ತಿಂಗಳಲ್ಲಿ ಭಾರತದಲ್ಲಿ ಮತ್ತು ರಾಷ್ಟ್ರೀಯ ತಂಡದೊಂದಿಗೆ ಪ್ರಯಾಣಿಸುವ ಬಿಡುವಿಲ್ಲದ ವೇಳಾಪಟ್ಟಿ ಎದುರಿಸಿದ್ದರು. ಚೇತರಿಸಿಕೊಳ್ಳಲು ಮತ್ತು ಅವರ ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯುವ ಅವರ ಆಶಯಗಳನ್ನು ನಾವು ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ನಾವು ಅಜಿಂಕ್ಯ ರಹಾನೆ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಮತ್ತು ಕ್ರಿಟ್​ನಲ ಪರಿಸ್ಥಿತಿಗಳು ಹೇಗೆ ತ್ವರಿತವಾಗಿ ಬದಲಾಗಬಹುದು ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಅವರು ನಮಗೆ ಮಾಹಿತಿ ನೀಡಿದ್ದ ತುಂಬಾ ಕೃತಜ್ಞರಾಗಿದ್ದೇವೆ. ಇನ್ನೂ ಲೀಸೆಸ್ಟರ್​ಶೈಟ್​ ಪರ ಆಡುವ ಭರವಸೆ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಪೀಟರ್ ಹ್ಯಾಂಡ್ಸ್​ಕಾಂಬ್​ ತಂಡದೊಂದಿಗೆ ಉಳಿದಿರುವುದಕ್ಕೆ ನಮಗೆ ಸಂತೋಷವಾಗಿದೆ. ನಾವು ಈ ರೀತಿಯ ಪರಿಸ್ಥಿತಿಗೆ ಸಿದ್ಧರಾಗಿದ್ದೆವು. ಅವರ ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಜೊತೆಗೆ ಅವರು ಬಲವಾದ ನಾಯಕತ್ವದ ಶೈಲಿಯನ್ನು ಸಹ ಹೊಂದಿದ್ದಾರೆ. ಇದು ತಂಡದ ಡ್ರೆಸಿಂಗ್​ ರೂಮ್​ನಲ್ಲಿ ಸೇರುವ ಇತರ ಆಟಗಾರರಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Kamran Akmal: ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದಾರೆ. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ” ಎಂದು ಎಂದು ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Kamran Akmal
Koo

ನವದೆಹಲಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಟೀಮ್​ ಇಂಡಿಯಾದ ಯುವ ವೇಗಿ ಅರ್ಶ್​ದೀಪ್​ ಸಿಂಗ್​ ವಿರುದ್ಧ ನೇರ ಪ್ರಸಾರದಲ್ಲೇ ಜನಾಂಗೀಯ ನಿಂದನೆ ಮಾಡಿದ್ದ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್​ಗೆ(Kamran Akmal) ಭಾರತ ತಂಡದ ಮಾಜಿ ಸ್ಪಿನ್ನರ್​ ಹರ್ಭಜನ್​ ಸಿಂಗ್​(Harbhajan Singh) ಜಾಡಿಸಿದ್ದಾರೆ.

ಅರ್ಶ್​ದೀಪ್ ಅವರು ಪಂದ್ಯದ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದ ವೇಳೆ ಅಕ್ಮಲ್​ “ಕುಚ್ ಭೀ ಹೋ ಸಕ್ತಾ ಹೈ.. 12 ಬಜ್ ಗಯೇ ಹೈ (ಏನು ಬೇಕಾದರೂ ಸಂಭವಿಸಬಹುದು. 12 ರ ನಂತರ ಯಾವುದೇ ಸಿಖ್ಖರನ್ನು ನೀಡಲಾಗುವುದಿಲ್ಲ) ಎಂದು ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಅಕ್ಮಲ್​ ಅವರ ಹೇಳಿಕೆಗೆ ಹರ್ಭಜನ್​ ಸಿಂಗ್(Harbhajan Singh slams Kamran Akmal)​ ಅವರು ಟ್ವೀಟ್​ ಮಾಡಿ ತಿರುಗೇಟು ನೀಡಿದ್ದರು. ‘ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

ಕ್ಷಮೆ ಕೇಳಿದ ಅಕ್ಮಲ್​


ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದಾರೆ. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ. ನಿಜವಾಗಿಯೂ ಕ್ಷಮೆ ಯಾಚಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.


ಭಾನುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ಪಾಕ್​ ಬೌಲರ್​ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್​ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಇಲ್ಲಿಂದ ಪಾಕ್​ ಕುಸಿತ ಕೂಡ ಆರಂಭವಾಯಿಯು. ಕೊನೆಗೂ ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತು.

ಸೂಪರ್​-8ಗೆ ಪ್ರವೇಶಿಸಲು ಪಾಕಿಸ್ತಾನ ತಂಡವು ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಅಷ್ಟೇ ಅಲ್ಲದೆ ಯುಎಸ್‌ಎ ಮತ್ತು ಕೆನಡಾ ತಂಡಗಳು ಗುಂಪು ಹಂತದಲ್ಲಿ ಉಳಿದ ಪಂದ್ಯಗಳಲ್ಲಿ ಸೋಲು ಕಾಣಬೇಕು. ಅಮೆರಿಕ ಮುಂದಿನ 2 ಪಂದ್ಯಗಳಲ್ಲಿ ಸೋಲು ಕಂಡು, ಪಾಕ್​ 2 ಪಂದ್ಯ ಗೆದ್ದರೆ ಉಭಯ ತಂಡಗಳಿಗೆ ತಲಾ 4 ಅಂಕ ಆಗಲಿದೆ. ಹೀಗಾಗಿ ಪಾಕ್​ಗೆ ಕೇವಲ ಗೆಲುವು ಮಾತ್ರ ಸಾಲದು ಜತೆಗೆ ರನ್​ರೇಟ್​ ಕೂಡ ಬೇಕಾಗಿದೆ. ಅಮೆರಿಕ ಮತ್ತು ಭಾರತ ಮುಂದಿನ ಪಂದ್ಯದಲ್ಲಿ ಗೆದ್ದರೆ ಪಾಕ್​ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

Continue Reading

ಕ್ರೀಡೆ

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

IND vs PAK: ಭಾರತ ಮತ್ತು ಪಾಕ್​ ಪಂದ್ಯ ವೀಕ್ಷಿಸಲು ಪಾಕ್​ ಅಭಿಮಾನಿಯೊಬ್ಬ ಕರಾಚಿಯಿಂದ ನ್ಯೂಯಾರ್ಕ್​ಗೆ ಬಂದಿದ್ದ. ಈತ ತನ್ನ ಟ್ರ್ಯಾಕ್ಟರ್ ಮಾರಿ ಪಂದ್ಯವನ್ನು ನೋಡಲು ಆಗಮಿಸಿದ್ದ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಭಾರತ ಮತ್ತು ಪಾಕಿಸ್ತಾನ(IND vs PAK) ಪಂದ್ಯದ ಜೋಶ್‌ ದೊಡ್ಡ ಮಟ್ಟದಲ್ಲೇ ಇರುತ್ತದೆ. ಅಕ್ಷರಶಃ ಇದೊಂದು ಕದನವೇ ಆಗಿರುತ್ತದೆ. ಗೆದ್ದರೆ ಯುದ್ಧವನ್ನೇ ಜಯಿಸಿದ ಮಹಾಸಂಭ್ರಮ. ಅಭಿಮಾನಿಗಳು ಕೂಡ ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ದುಬಾರಿ ಬೆಲೆಯ ಟಿಕೆಟ್​ ಕೊಂಡುಕೊಳ್ಳಲು ಹಿಂದೇಟು ಹಾಕುವುದಿಲ್ಲ. ಪಾಕ್​ ತಂಡದ ಅಭಿಮಾನಿಯೊಬ್ಬ ತನ್ನ ಟ್ರ್ಯಾಕ್ಟರ್(Pakistani fan sells tractor) ಮಾರಿ ಲಕ್ಷಾಂತರ ರೂ ಖರ್ಚು ಮಾಡಿ ಪಂದ್ಯದ ಟಿಕೆಟ್​ ಖರೀದಿ ಮಾಡಿ ಪಂದ್ಯ ಸೋತ ಬಳಿಕ ಕಣ್ಣೀರು ಹಾಕಿದ್ದಾನೆ. ಈ ವಿಡಿಯೊ ವೈರಲ್​ ಆಗಿದೆ.

ಕಳೆದ ಭಾನುವಾರ ಭಾರತ ಮತ್ತು ಪಾಕ್​ ತಂಡಗಳು ಟಿ20 ವಿಶ್ವಕಪ್​ ಲೀಗ್​ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯವನ್ನು ಭಾರತ ಗೆದ್ದು ಬೀಗಿತ್ತು. ಈ ಪಂದ್ಯವನ್ನು ನೋಡಲು ಪಾಕ್​ ಅಭಿಮಾನಿಯೊಬ್ಬ ಕರಾಚಿಯಿಂದ ನ್ಯೂಯಾರ್ಕ್​ಗೆ ಬಂದಿದ್ದ. ಈತ ತನ್ನ ಟ್ರ್ಯಾಕ್ಟರ್ ಮಾರಿ ಪಂದ್ಯವನ್ನು ನೋಡಲು ಆಗಮಿಸಿದ್ದ. ಆದರೆ ಪಂದ್ಯ ಸೋತ ಕಾರಣ ಆತ ನಿರಾಸೆಗೊಂಡು ಕಣ್ಣೀರು ಹಾಕಿದ್ದಾನೆ. ಪಂದ್ಯದ ಬಳಿಕ ಎಎನ್​ಐ ಜತೆ ಮಾತನಾಡುವ ವೇಳೆ ಆತ ತಾನು ಟ್ರ್ಯಾಕ್ಟರ್ ಮಾರಿ ಪಂದ್ಯ ವೇಖ್ಷಣೆಗೆ ಬಂದ ವಿಚಾರವನ್ನು ತಿಳಿಸಿದ್ದಾನೆ. ಪಾಕ್​ ಆಟಗಾರರ ಕಳಪೆ ಪ್ರದರ್ಶನಕ್ಕೂ ಆತ ಆಕ್ರೋಶ ಹೊರಹಾಕಿದ್ದಾನೆ. ಇದರ ವಿಡಿಯೊ ವೈರಲ್​ ಆಗಿದೆ.

“ತಾನು ಸ್ಟೇಡಿಯಂನಲ್ಲೇ ಲೈವ್ ಆಗಿ ಪಂದ್ಯ ವೀಕ್ಷಿಸುವ ಸಲುವಾಗಿ ಮತ್ತು ನನ್ನ ದೇಶವನ್ನು ಬೆಂಬಲಿಸಲು ನನ್ನ ಟ್ರ್ಯಾಕ್ಟರ್‌ನ್ನು ಮಾರಿದೆ. (ಈ ಟಿಕೆಟ್‌ ಮೊತ್ತ 3000 ಯುಎಸ್‌ಡಿ ಅಂದರೆ ಪಾಕಿಸ್ತಾನದ ರೂಪಾಯಿಗೆ ಪರಿವರ್ತಿಸುವುದಾದರೆ 840,526.93) ಆದರೆ ಪಾಕಿಸ್ತಾನ ಈ ಪಂದ್ಯವನ್ನು ಹೀಗೆ ಆಡುತ್ತದೆ ಎಂದು ನಾನು ಊಹೆಯೂ ಮಾಡಿರಲಿಲ್ಲ. ಸೋಲಿಗೆ ತಂಡದ ಅತಿಯಾದ ಆತ್ಮವಿಶ್ವಾಸವೇ ಕಾರಣ” ಎಂದು ಈ ಅಭಿಮಾನಿ ಹತಾಶೆ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ಪಾಕ್​ ಬೌಲರ್​ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್​ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಇಲ್ಲಿಂದ ಪಾಕ್​ ಕುಸಿತ ಕೂಡ ಆರಂಭವಾಯಿಯು. ಕೊನೆಗೂ ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತು.

ಪಾಕ್​ 2 ಸೋಲು ಕಂಡಿದ್ದರೂ ಕೂಡ ಸೂಪರ್​-8 ಪ್ರವೇಶಿಸುವ ಕ್ಷೀಣ ಅವಕಾಶವೊಂದಿದೆ. ಜತೆಗೆ ಅದೃಷ್ಟ ಕೂಡ ಕೈಹಿಡಿಯಬೇಕಿದೆ.

ಸದ್ಯ ‘ಎ’ ಗುಂಪಿನಲ್ಲಿ ಭಾರತ ಮತ್ತು ಆತಿಥೇಯ ಅಮೆರಿಕ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ತಲಾ 4 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡಿದೆ. ಒಂದು ಪಂದ್ಯ ಗೆದ್ದ ಕೆನಾಡ ಮೂರನೇ ಸ್ಥಾನದಲ್ಲಿದೆ. ಗೆಲುವೇ ಕಾಣದ ಪಾಕಿಸ್ತಾನ 4ನೇ ಸ್ಥಾನಿಯಾಗಿದೆ. ಪಾಕ್​ ಮುಂದಿನ ಪಂದ್ಯದಲ್ಲಿ ಐರ್ಲೆಂಡ್​ ಮತ್ತು ಕೆನಡಾ ವಿರುದ್ಧ ಆಡಲಿದೆ. ಒಂದು ಗುಂಪಿನಿಂದ ಎರಡು ತಂಡಗಳು ಮಾತ್ರ ಸೂಪರ್ 8ಗೆ ಪ್ರವೇಶ ಪಡೆಯಲಿದೆ. ಪಾಕ್​ಗೂ ಕೂಡ ಈ ಹಂತಕ್ಕೇರಲು ಸಣ್ಣ ಅವಕಾಶವೊಂದಿದೆ. ಈ ಲೆಕ್ಕಾಚಾರ ಹೀಗಿದೆ.

ಸೂಪರ್​-8ಗೆ ಪ್ರವೇಶಿಸಲು ಪಾಕಿಸ್ತಾನ ತಂಡವು ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಅಷ್ಟೇ ಅಲ್ಲದೆ ಯುಎಸ್‌ಎ ಮತ್ತು ಕೆನಡಾ ತಂಡಗಳು ಗುಂಪು ಹಂತದಲ್ಲಿ ಉಳಿದ ಪಂದ್ಯಗಳಲ್ಲಿ ಸೋಲು ಕಾಣಬೇಕು. ಅಮೆರಿಕ ಮುಂದಿನ 2 ಪಂದ್ಯಗಳಲ್ಲಿ ಸೋಲು ಕಂಡು, ಪಾಕ್​ 2 ಪಂದ್ಯ ಗೆದ್ದರೆ ಉಭಯ ತಂಡಗಳಿಗೆ ತಲಾ 4 ಅಂಕ ಆಗಲಿದೆ. ಹೀಗಾಗಿ ಪಾಕ್​ಗೆ ಕೇವಲ ಗೆಲುವು ಮಾತ್ರ ಸಾಲದು ಜತೆಗೆ ರನ್​ರೇಟ್​ ಕೂಡ ಬೇಕಾಗಿದೆ. ಅಮೆರಿಕ ಮತ್ತು ಭಾರತ ಮುಂದಿನ ಪಂದ್ಯದಲ್ಲಿ ಗೆದ್ದರೆ ಪಾಕ್​ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

Continue Reading

ಕ್ರೀಡೆ

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Virat Kohli: ಸತತ 2 ಗೆಲುವು ಸಾಧಿಸಿ ‘ಎ’ ಗುಂಪಿನಲ್ಲಿ ಅಜೇಯ ಓಟ ಮುಂದಿವರಿಸಿರುವ ಭಾರತ ಮತ್ತು ಅಮೆರಿಕ ನಾಳೆ ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ವಿರಾಟ್ ಕೊಹ್ಲಿ(Virat Kohli) ವಿಶ್ವದ ಅತ್ಯಂತ ಜನಪ್ರಿಯ ಕ್ರಿಕೆಟಿಗ. ಅವರ ಅಭಿಮಾನಿಗಳಿಗೆ ಯಾವುದೇ ಗಡಿಯ ಮಿತಿ ಇಲ್ಲ. ಭಾರತದ ಬದ್ಧ ಎದುರಾಳಿ ಪಾಕಿಸ್ತಾನದಲ್ಲಿಯೂ ವಿರಾಟ್​ ಕೊಹ್ಲಿ ಅಪಾರ ಅಭಿಮಾನಿಗಳಿದ್ದಾರೆ. ಅಭಿಮಾನಿಗಳು ಅವರ ಜತೆ ಒಂದು ಫೋಟೊ ತೆಗೆದುಕೊಳ್ಳಲು, ಆಟೋಗ್ರಾಫ್ ಪಡೆಯಲು ಮತ್ತು ಅವರನ್ನು ಭೇಟಿಯಾಗಲೆಂದೇ ವರ್ಷಾನುಗಟ್ಟಲೆ ಕಾದು ಕುಳಿತಿರುತ್ತಾರೆ. ಆದರೆ, ನ್ಯೂಯಾರ್ಕ್​ನಲ್ಲಿ ಕೊಹ್ಲಿ ಯಾರೆಂಬುದೇ ಹಲವರಿಗೆ ತಿಳಿದಿಲ್ಲ.

ಕ್ರಿಕೆಟ್​ ಹೆಚ್ಚು ಪ್ರಸಿದ್ಧಿ ಪಡೆಯದ ನ್ಯೂಯಾರ್ಕ್​ನಲ್ಲಿ ಅನೇಕ ಕ್ರಿಕೆಟಿಗರು ಇಲ್ಲಿನ ಪಾರ್ಕ್, ರಸೆಗಳಲ್ಲಿ ಸಾಮಾನ್ಯ ಜನರಂತೆ ತಿರುಗಾಡುತ್ತಿದ್ದಾರೆ. ವಿರಾಟ್​ ಕೊಹ್ಲಿ ಕೂಡ ಇಲ್ಲಿನ ಜಿಮ್​ ಸೆಂಟರ್​ ಒಂದಕ್ಕೆ ಜಿಮ್(Kohli SPOTTED In Gym)​ ಮಾಡಲು ಏಕಾಂಗಿಯಾಗಿ ತೆರಳಿದ್ದಾರೆ. ಯಾರು ಕೂಡ ಕೊಹ್ಲಿ ಬಳಿ ಬಂದು ಸೆಲ್ಫಿ, ಆಟೋಗ್ರಾಫ್​ಗೆ ಮುಂದಾಗಲಿಲ್ಲ. ಏಕೆಂದರೆ ಅಲ್ಲಿನ ಜನರಿಗೆ ಕೊಹ್ಲಿ ಎಂದರೆ ಅಷ್ಟಾಗಿ ತಿಳಿದಿಲ್ಲ. ಹೀಗಾಗಿ ಕೊಹ್ಲಿ ಕೂಡ ಯಾವುದೇ ಕಿರಿಕಿರಿ ಇಲ್ಲದೆ ಪ್ರಶಾಂತವಾಗಿ ಸಾಮಾನ್ಯರಂತೆ ಜಿಮ್​ಗೆ ತೆರಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ(viral video). ಕೆಲ ದಿನಗಳ ಹಿಂದೆ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಡೇಲ್​ ಸ್ಟೇನ್​ ಅವರಿಗೆ ಇಲ್ಲಿನ ಕ್ರಿಕೆಟ್​ ಗೇಮ್​ ಸೆಂಟರ್​ನಲ್ಲಿ ಸಿಬ್ಬಂದಿ ಬೌಲಿಂಗ್​ ಹೇಗೆ ನಡೆಸಬೇಕು ಎಂದು ಹೇಳಿಕೊಡುವ ವಿಡಿಯೊ ವೈರಲ್​ ಆಗಿತ್ತು. ಆತನಿಗೆ ಸ್ಟೇನ್​ ಕ್ರಿಕೆಟಿಗ ಎನ್ನುವುದು ತಿಳಿದಿರಲಿಲ್ಲ. ಸ್ಟೇನ್​ ಅವರೇ ಈ ವಿಡಿಯೊವನ್ನು ಹಂಚಿಕೊಂಡಿದ್ದರು.

ಟೀಮ್​ ಇಂಡಿಯಾದ ಕೋಚ್​ ರಾಹುಲ್​ ದ್ರಾವಿಡ್​ ಕೂಡ ಕೆಲ ದಿನಗಳ ಹಿಂದೆ ನ್ಯೂಯಾರ್ಕ್​ನ ಪಾರ್ಕ್​ಗಳಲ್ಲಿ ನಾವು ಆರಾಮವಾಗಿ ವ್ಯಾಯಾಮ ಮಾಡುತ್ತಿದ್ದೇವೆ. ಇಲ್ಲಿನ ಜನತೆಗೆ ನಾವು ಯಾರೆಂದು ಕೂಡ ತಿಳಿದಿಲ್ಲ. ಇದೊಂದು ಹೊಸ ಅನುಭವ ಎಂದು ಹೇಳಿಕೊಂಡಿದ್ದರು. ಬಾಸ್ಕೆಟ್​ ಬಾಲ್​, ಬೇಸ್​ ಬಾಲ್​, ಫುಟ್ಬಾಲ್​ ಹೆಚ್ಚಾಗಿ ನೆಚ್ಚಿಕೊಂಡಿರುವ ಅಮೆರಿಕದಲ್ಲಿ ಕ್ರಿಕೆಟ್​ ಈಗ ತಾನೆ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ಜತೆಗೆಯಲ್ಲೂ ಕ್ರಿಕೆಟ್​ ಪ್ರೀತಿ ಹೆಚ್ಚಾಗಬಹುದು.

ಇದನ್ನೂ ಓದಿ T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

ನಾಳೆ ಭಾರತ-ಅಮೆರಿಕ ಮುಖಾಮುಖಿ


ಸತತ 2 ಗೆಲುವು ಸಾಧಿಸಿ ‘ಎ’ ಗುಂಪಿನಲ್ಲಿ ಅಜೇಯ ಓಟ ಮುಂದಿವರಿಸಿರುವ ಭಾರತ ಮತ್ತು ಅಮೆರಿಕ ನಾಳೆ ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಒಂದು ತಂಡಕ್ಕೆ ಸೋಲು ಎದುರಾಗುವುದು ಖಚಿತ. ಈ ತಂಡ ಯಾವುದೆಂಬುದು ಪಂದ್ಯದ ಕೌತುಕ. ಇತ್ತಂಡಗಳ ಮೊದಲ ಕ್ರಿಕೆಟ್​ ಮುಖಾಮುಖಿಯೂ ಇದಾಗಿದೆ.

ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಆಟಗಾರನಾಗಿ ಮೂಡಿಬಂದಿದ್ದರೂ ಕೂಡ ಟಿ20 ವಿಶ್ವಕಪ್​ನಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. 2 ಪಂದ್ಯಗಳಲ್ಲಿಯೂ ಒಂದಂಕಿಗೆ ಸೀಮಿತರಾಗಿದ್ದರು. ಇದೀಗ ಅಮೆರಿಕ ವಿರುದ್ಧದ ಪಂದ್ಯದಲ್ಲಾದರೂ ಅವರು ಬ್ಯಾಟಿಂಗ್​ ಲಯಕ್ಕೆ ಮರಳುವ ಅನಿವಾರ್ಯತೆ ಇದೆ.

Continue Reading

ಪ್ರಮುಖ ಸುದ್ದಿ

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

Amol Kale: ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ಅಧ್ಯಕ್ಷ ಅಮೋಲ್‌ ಕಾಳೆ ಅವರು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ್ದರು. ಎಂಸಿಎ ಕಾರ್ಯದರ್ಶಿ ಅಜಿಂಕ್ಯ ರಹಾನೆ ಸೇರಿ ಹಲವರ ಜತೆ ತೆರಳಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಂದ್ಯ ಮುಗಿದ ಬಳಿಕ ಕ್ರೀಡಾಂಗಣದಿಂದ ತೆರಳುವಾಗ ಅವರಿಗೆ ಹೃದಯ ಸ್ತಂಭನ ಉಂಟಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Amol Kale
Koo

ವಾಷಿಂಗ್ಟನ್:‌ ಅಮೆರಿಕದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ (T20 World Cup 2024)​ ಟೂರ್ನಿಯ ಭಾರತ ಹಾಗೂ ಪಾಕಿಸ್ತಾನ (India vs Pakistan Match) ನಡುವಿನ ರೋಚಕ ಪಂದ್ಯವನ್ನು ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ (MCA) ಅಧ್ಯಕ್ಷ ಅಮೋಲ್‌ ಕಾಳೆ (Amol Kale) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ನಡೆದ ಭಾನುವಾರವೇ (ಜೂನ್‌ 9) ಅಮೋಲ್‌ ಕಾಳೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ರೋಚಕ ಪಂದ್ಯವನ್ನು ವೀಕ್ಷಿಸಲು ಅಮೋಲ್‌ ಕಾಳೆ ಅವರು ನ್ಯೂಯಾರ್ಕ್‌ಗೆ ತೆರಳಿದ್ದರು. ಪಂದ್ಯ ವೀಕ್ಷಿಸಿದ ಬಳಿಕ ಅವರು ಸಹೋದ್ಯೋಗಿಗಳೊಂದಿಗೆ ಕ್ರೀಡಾಂಗಣದಿಂದ ವಾಪಸಾಗುವಾಗ ಹೃದಯ ಸ್ತಂಭನದಿಂದ (Cardiac Arrest) ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೋಲ್‌ ಕಾಳೆ ಅವರ ನಿಧನವನ್ನು ಮಹಾರಾಷ್ಟ್ರ ಪ್ರತಿಪಕ್ಷದ ಉಪ ನಾಯಕ ಜಿತೇಂದ್ರ ಅಹ್ವಾದ್‌ ಅವರು ಖಚಿತಪಡಿಸಿದ್ದಾರೆ. “ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ಅವರು ಉತ್ತಮ ಸಂಘಟಕರಾಗಿದ್ದರು. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕ ನಷ್ಟವಾಗಿದೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಮೋಲ್‌ ಕಾಳೆ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.

47 ವರ್ಷದ ಅಮೋಲ್‌ ಕಾಳೆ ಅವರು 2022ರ ಅಕ್ಟೋಬರ್‌ನಿಂದಲೂ ಎಂಸಿಎ ಅಧ್ಯಕ್ಷರಾಗಿದ್ದರು. 2022ರ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಕಾಳೆ ಅವರು ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಸಂದೀಪ್‌ ಪಾಟೀಲ್‌ ಅವರನ್ನು ಸೋಲಿಸಿದ್ದರು. ನಾಗ್ಪುರ ಮೂಲದವರಾದ ಅಮೋಲ್‌ ಕಾಳೆ ಅವರು ಉದ್ಯಮಿಯೂ ಆಗಿದ್ದಾರೆ. ಇವರು ಜೆ ಕೆ ಸೊಲ್ಯೂಷನ್ಸ್‌ ಪ್ರೈವೇಟ್‌ ಲಿಮಿಟೆಡ್‌ ಹಾಗೂ ಅರ್ಪಿತಾ ಎಂಟರ್‌ಪ್ರೈಸಸ್‌ನ ಸಂಸ್ಥಾಪಕರೂ ಆಗಿದ್ದಾರೆ.

ಭಾರತ ಹಾಗೂ ಪಾಕಿಸ್ತಾನದ ಪಂದ್ಯವು ಕಡಿಮೆ ಸ್ಕೋರಿಂಗ್ ಥ್ರಿಲ್ಲರ್ ಆಗಿತ್ತು. 2 ನೇ ಇನ್ನಿಂಗ್ಸ್ ನ ಅಂತಿಮ ಎಸೆತದವರೆಗೂ ಸಂಪೂರ್ಣವಾಗಿ ಸಾಗಿತು. ಪಾಕಿಸ್ತಾನಕ್ಕೆ 120 ಎಸೆತಗಳಲ್ಲಿ ಕೇವಲ 120 ರನ್​ಗಳ ಅಗತ್ಯವಿತ್ತು. ಈ ಸಮೀಕರಣ ಬರೆಯಲು ಸರಳವಾಗಿ ಕಂಡರೂ, ಅನುಷ್ಠಾನವು ಅತ್ಯಂತ ಕಳಪೆಯಾಗಿತ್ತು. ಕೊನೆಯಲ್ಲಿ ಗ್ರೀನ್ ಆರ್ಮಿ 6 ರನ್​ಗಳಿಂದ ಸೋತಿತು.

ಸದ್ಯ ‘ಎ’ ಗುಂಪಿನಲ್ಲಿ ಭಾರತ ಮತ್ತು ಆತಿಥೇಯ ಅಮೆರಿಕ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ತಲಾ 4 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡಿದೆ. ಒಂದು ಪಂದ್ಯ ಗೆದ್ದ ಕೆನಾಡ ಮೂರನೇ ಸ್ಥಾನದಲ್ಲಿದೆ. ಗೆಲುವೇ ಕಾಣದ ಪಾಕಿಸ್ತಾನ 4ನೇ ಸ್ಥಾನಿಯಾಗಿದೆ. ಪಾಕ್​ ಮುಂದಿನ ಪಂದ್ಯದಲ್ಲಿ ಐರ್ಲೆಂಡ್​ ಮತ್ತು ಕೆನಡಾ ವಿರುದ್ಧ ಆಡಲಿದೆ. ಒಂದು ಗುಂಪಿನಿಂದ ಎರಡು ತಂಡಗಳು ಮಾತ್ರ ಸೂಪರ್ 8ಗೆ ಪ್ರವೇಶ ಪಡೆಯಲಿದೆ.

ಇದನ್ನೂ ಓದಿ: T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Continue Reading
Advertisement
Pavithra Gowda
ಕರ್ನಾಟಕ51 seconds ago

Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

black magic
ದಕ್ಷಿಣ ಕನ್ನಡ11 mins ago

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Kamran Akmal
ಕ್ರಿಕೆಟ್18 mins ago

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Actor Darshan
ಕರ್ನಾಟಕ23 mins ago

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Saptami Gowda
ಸಿನಿಮಾ39 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Actor Darshan
ಸಿನಿಮಾ48 mins ago

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan
ಪ್ರಮುಖ ಸುದ್ದಿ1 hour ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ1 hour ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ1 hour ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Gold Rate Today
ಪ್ರಮುಖ ಸುದ್ದಿ1 hour ago

Gold Rate Today: ಚಿನ್ನದ ದರದಲ್ಲಿ ತುಸು ಇಳಿಕೆ; ಇಷ್ಟಿದೆ ಇಂದಿನ ಬೆಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Saptami Gowda
ಸಿನಿಮಾ39 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಟ್ರೆಂಡಿಂಗ್‌