IIT Bombay: ಬಾಂಬೆ ಐಐಟಿ ಕ್ಯಾಂಟೀನ್‌ನಲ್ಲಿ 'ಸಸ್ಯಾಹಾರಿಗಳಿಗೆ ಮಾತ್ರ' ಎಂಬ ಪೋಸ್ಟರ್; ಭಾರಿ ವಿವಾದ - Vistara News

ದೇಶ

IIT Bombay: ಬಾಂಬೆ ಐಐಟಿ ಕ್ಯಾಂಟೀನ್‌ನಲ್ಲಿ ‘ಸಸ್ಯಾಹಾರಿಗಳಿಗೆ ಮಾತ್ರ’ ಎಂಬ ಪೋಸ್ಟರ್; ಭಾರಿ ವಿವಾದ

IIT Bombay: ಐಐಟಿ ಬಾಂಬೆ ಸಂಸ್ಥೆಯ ಕ್ಯಾಂಟೀನ್‌ನಲ್ಲಿ ಸಸ್ಯಾಹಾರಿಗಳು ಮಾತ್ರ ಇಲ್ಲಿ ಕುಳಿತುಕೊಳ್ಳಬೇಕು ಎಂಬ ಪೋಸ್ಟರ್‌ ಅಂಟಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಪೋಸ್ಟರ್‌ ವಿರುದ್ಧ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

VISTARANEWS.COM


on

IIT Bombay Poster Row
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ವಿದೇಶಕ್ಕೆ ಹೋದಾಗ ಚಮಚ ತೆಗೆದುಕೊಂಡು ಹೋಗುತ್ತೇನೆ, ವೆಜಿಟೇರಿಯನ್‌ ಹೋಟೆಲ್‌ಗಳಿಗೆ ಮಾತ್ರ ಹೋಗುತ್ತೇನೆ ಎಂದು ಇತ್ತೀಚೆಗೆ ಇನ್ಫೋಸಿಸ್‌ ಪ್ರತಿಷ್ಠಾನದ ಸುಧಾ ಮೂರ್ತಿ ನೀಡಿದ ಹೇಳಿಕೆ ವಿರುದ್ಧ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ-ಬಾಂಬೆ (IIT-Bombay) ಶಿಕ್ಷಣ ಸಂಸ್ಥೆಯಲ್ಲಿ ಆಹಾರ ತಾರತಮ್ಯ ಕುರಿತು ವಿವಾದ ಭುಗಿಲೆದ್ದಿದೆ. ಐಐಟಿಯ ಕ್ಯಾಂಟೀನ್‌ನಲ್ಲಿ “ಸಸ್ಯಾಹಾರಿಗಳಿಗೆ ಮಾತ್ರ” ಎಂಬ ಪೋಸ್ಟರ್‌ ಅಂಟಿಸಿದ್ದು, ಇದರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಐಟಿ ಬಾಂಬೆಯ ಹಾಸ್ಟೆಲ್‌ 12ರಲ್ಲಿರುವ ಕ್ಯಾಂಟೀನ್‌ನಲ್ಲಿ “ಸಸ್ಯಾಹಾರಿಗಳು ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶವಿದೆ” ಎಂಬ ಪೋಸ್ಟರ್‌ ಅಂಟಿಸಲಾಗಿದೆ. ವಿದ್ಯಾರ್ಥಿ ಸಂಘಟನೆಯಾದ ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌ (APPSC) ಈ ಕೃತ್ಯವನ್ನು ಖಂಡಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಆಹಾರ ತಾರತಮ್ಯ ಸರಿಯಲ್ಲ. ಸಸ್ಯಾಹಾರಿಗಳು ಮಾತ್ರ ಮನುಷ್ಯರಲ್ಲ ಎಂದು ಪೋಸ್ಟರ್‌ ಅಂಟಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟರ್‌ ಅಂಟಿಸಿರುವ ಫೋಟೊಗಳು ವೈರಲ್‌ ಆಗಿದ್ದು, ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ಆಕ್ರೋದ ಬೆನ್ನಲ್ಲೇ, ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನ ಕಾರ್ಯದರ್ಶಿಯು ಇ-ಮೇಲ್‌ ಮಾಡಿದ್ದಾರೆ. “ಕ್ಯಾಂಟೀನ್‌ಗಳಲ್ಲಿ ಪೋಸ್ಟರ್‌ ಅಂಟಿಸುವುದು, ಆಹಾರ ಪದ್ಧತಿಯಲ್ಲಿ ತಾರತಮ್ಯ ನೀತಿ ಅನುಸರಿಸುವುದು ಸರಿಯಲ್ಲ. ನಾವು ಎಲ್ಲರ ವಿಚಾರಗಳನ್ನು, ಆಚರಣೆಗಳನ್ನು ಗೌರವಿಸಬೇಕು. ಯಾವುದೇ ಕಾರಣಕ್ಕೂ ಇಂತಹ ಅಸಹಿಷ್ಣುತೆ ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Neha Singh: ಐಐಟಿಯಲ್ಲಿ ಓದಿ, ಐದಂಕಿ ಸಂಬಳದ ಕೆಲಸ ಬಿಟ್ಟು ಉದ್ಯಮಿಯಾದ ಯುವತಿ; ಈಕೆಗೆ ರತನ್‌ ಟಾಟಾ ಫಿದಾ

ಹೀಗೊಂದು ನಿಯಮ ಇದೆಯೇ?

ಸಸ್ಯಾಹಾರಿಗಳಿಗೆ ಪ್ರತ್ಯೇಕ ಕ್ಯಾಂಟೀನ್‌ ವ್ಯವಸ್ಥೆ ಕುರಿತು ಇಂತಹದ್ದೊಂದು ನಿಯಮ ಇದೆ ಎಂಬ ಕುರಿತು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಮಾಹಿತಿ ಕೋರಿದ್ದು, ಇಂತಹ ಯಾವುದೇ ನಿಯಮವಿಲ್ಲ ಎಂದು ತಿಳಿದುಬಂದಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಸ್ಯಾಹಾರ, ಮಾಂಸಾಹಾರ ಎಂಬ ಭೇದ-ಭಾವ ಇಲ್ಲ. ಹಾಗೆಯೇ, ಸಸ್ಯಾಹಾರಿಗಳಿಗೆ ಎಂದು ಪ್ರತ್ಯೇಕ ಕ್ಯಾಂಟೀನ್‌ ವ್ಯವಸ್ಥೆ ಇರುವುದಿಲ್ಲ. ಜೈನ ಸಮುದಾಯದವರಿಗೆಂದೇ ಯಾವುದೇ ಪ್ರತ್ಯೇಕ ವ್ಯವಸ್ಥೆ ಮಾಡಿಲ್ಲ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Maharashtra Rain: ಮಹಾರಾಷ್ಟ್ರದಲ್ಲಿ ರಾಯಗಢ ಕೋಟೆಯಲ್ಲಿ ತೀವ್ರವಾದ ನೀರಿನ ತೊರೆಗಳಿಗೆ ಪ್ರವಾಸಿಗರು ತತ್ತರಿಸಿ ಹೋಗಿದ್ದಾರೆ. ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಈ ಧಾರಾಕಾರ ಮಳೆಗೆ ಐತಿಹಾಸಿಕ ಸ್ಥಳದಲ್ಲಿ ಅಪಾಯಕಾರಿ ಪರಿಸ್ಥಿತಿಗಳು ಉಂಟಾಗಿವೆ. ಜನಪ್ರಿಯ ಪ್ರವಾಸಿ ತಾಣವಾದ ರಾಯಗಡ್ ಕೋಟೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕೋಟೆಯ ಮೆಟ್ಟಿಲುಗಳು ನೀರಿನಿಂದ ಜಲಪಾತಗಳಾಗಿ ಪರಿವರ್ತನೆಯಾಗಿವೆ.

VISTARANEWS.COM


on

Maharashtra Rain
Koo

ಮುಂಬಯಿ: ಇತ್ತೀಚೆಗೆ ದೇಶದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ಅಂತಹದೊಂದು ಭೀಕರ ಘಟನೆ ಮಹಾರಾಷ್ಟ್ರದಲ್ಲಿ (Maharashtra Rain) ನಡೆದಿದ್ದು, ರಾಯಗಢ ಕೋಟೆಯಲ್ಲಿ ತೀವ್ರವಾದ ನೀರಿನ ತೊರೆಗಳಿಗೆ ಪ್ರವಾಸಿಗರು ತತತ್ತರಿಸಿ ಹೋಗಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಈ ಧಾರಾಕಾರ ಮಳೆಗೆ ಐತಿಹಾಸಿಕ ಸ್ಥಳದಲ್ಲಿ ಅಪಾಯಕಾರಿ ಪರಿಸ್ಥಿತಿಗಳು ಉಂಟಾಗಿವೆ. ಜನಪ್ರಿಯ ಪ್ರವಾಸಿ ತಾಣವಾದ ರಾಯಗಢ ಕೋಟೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕೋಟೆಯ ಮೆಟ್ಟಿಲುಗಳು ನೀರಿನಿಂದ ಜಲಪಾತಗಳಾಗಿ ಪರಿವರ್ತನೆಯಾಗಿವೆ. ಮತ್ತು ಕೋಟೆಯ ಮೆಟ್ಟಿಲಿನಿಂದ ಇಳಿಯುವುದು ತುಂಬಾ ಕಷ್ಟಕರವಾಗಿದೆ. ಹಾಗಾಗಿ ಕೋಟೆಗೆ ಭೇಟಿ ನೀಡಿದ್ದ ಶಿವ ಭಕ್ತರು ಮತ್ತು ಪ್ರವಾಸಿಗರೂ ಸೇರಿದಂತೆ 30ಕ್ಕೂ ಹೆಚ್ಚು ಜನರು ಈ ನೀರಿನ ತೊರೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಜನರು ಭಯಗೊಂಡಿದ್ದಾರೆ. ಆದರೆ ಈ ಪ್ರವಾಸಿಗರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಮುಖ್ಯ ಮೆಟ್ಟಿಲುಗಳ ಮೇಲಿನ ಅಪಾಯಕಾರಿ ಪರಿಸ್ಥಿತಿಗಳಲ್ಲಿ ಸಾಗಿ ದುರಂತದಿಂದ ಪಾರಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಲಾಗಿದೆ, ಸಿಕ್ಕಿಬಿದ್ದ ಎಲ್ಲಾ ವ್ಯಕ್ತಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಭಾರೀ ಮಳೆಯ ಸಮಯದಲ್ಲಿ ಕೋಟೆಗಳು ಮತ್ತು ಇತರ ಅಪಾಯಕಾರಿ ಪ್ರದೇಶಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದಾರೆ.

ಭಾರೀ ಮಳೆಗೆ ರಾಯಗಢ ಮಾತ್ರವಲ್ಲ ಮುಂಬೈ, ಥಾಣೆ, ನವೀ ಮುಂಬೈ ಮತ್ತು ಕಲ್ನೈ ಸೇರಿದಂತೆ ಮಹಾರಾಷ್ಟ್ರದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂಬ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಹಾಗಾಗಿ ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ್ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

ವಿಶೇಷವಾಗಿ ರತ್ನಗಿರಿಯ ಮೇಲೆ ಭಾರಿ ಪರಿಣಾಮ ಬೀರಿದ್ದು, ನದಿಗಳ ನೀರಿನ ಮಟ್ಟವು ಅಪಾಯಕಾರಿಯಾಗಿ ಏರುತ್ತಿದೆ. ರಾಜಾಪುರ ತಾಲ್ಲೂಕಿನ ಜಗ್ಬುಡಿ ನದಿ ಅಪಾಯದ ಮಟ್ಟವನ್ನು ಮೀರಿದ್ದು, ಹತ್ತಿರದ ಹಳ್ಳಿಗಳಿಗೆ ಎಚ್ಚರಿಕೆ ನೀಡಲಾಗಿದೆ. ರತ್ನಗಿರಿಯಲ್ಲಿ ಭಾರಿ ಮಳೆಯ ಹಲವಾರು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪರಿಸ್ಥಿತಿಯ ತೀವ್ರತೆಯನ್ನು ಬಗ್ಗೆ ವಿವರವಾಗಿ ತಿಳಿಸುತ್ತಿವೆ.

Continue Reading

ಮನಿ-ಗೈಡ್

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

ಕಡಿಮೆ ಸಮಯದಲ್ಲಿ ಒಂದು ಕೋಟಿ ರೂಪಾಯಿ (Money Guide) ಗಳಿಸುವುದು ಅಸಾಧ್ಯವಲ್ಲ. ಇಲ್ಲಿ ಗಮನಿಸಬೇಕಾದ ಕೆಲವು ಪ್ರಮುಖ ಸಂಗತಿಗಳಿವೆ. ಅವುಗಳಲ್ಲಿ ಮುಖ್ಯವಾಗಿ ಅಗತ್ಯವಿರುವ ಹೂಡಿಕೆಯ ಮೊತ್ತವು ಅವಧಿ (duration) ಮತ್ತು ಹೂಡಿಕೆಯ ಮೇಲಿನ ಆದಾಯದ ಅಂದಾಜು ದರವನ್ನು (estimated rate) ಆಧರಿಸಿ ಗಮನಾರ್ಹವಾಗಿ ಬದಲಾಗುತ್ತದೆ ಎಂಬುದು ಕೂಡ ಗಮನಿಸಬೇಕು. 10, 15, ಮತ್ತು 20 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ತಲುಪಲು ಎಷ್ಟು ಹೂಡಿಕೆ ಅಗತ್ಯವಿದೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು.

VISTARANEWS.COM


on

By

Money Guide
Koo

ಕಡಿಮೆ ವರ್ಷಗಳಲ್ಲಿ ಕೋಟಿ ರೂಪಾಯಿ ಸಂಪಾದಿಸಬೇಕು ಎನ್ನುವ ಕನಸು (financial goal) ಎಲ್ಲರಿಗೂ ಇರುತ್ತದೆ. ಆದರೆ ದಾರಿಯ ಮೂಲ (Money Guide) ಯಾವುದು ಎಂಬುದು ಗೊತ್ತಿರುವುದಿಲ್ಲ. ಹೂಡಿಕೆದಾರರಲ್ಲಿ (Investment) ಹೆಚ್ಚಿನವರು 1 ಕೋಟಿ ರೂಪಾಯಿಗಳ ಆರ್ಥಿಕ ಗುರಿಯನ್ನು ಸಾಧಿಸಬೇಕು ಎಂದುಕೊಳ್ಳುತ್ತಾರೆ. ಇದಕ್ಕಾಗಿ ಅನೇಕ ಹೂಡಿಕೆದಾರರು ತಮ್ಮ ಹೂಡಿಕೆಯಲ್ಲಿ ಸ್ಥಿರತೆಗಾಗಿ ಶ್ರಮಿಸುತ್ತಾರೆ. ಆದರೂ ಬಹುತೇಕ ಸಂದರ್ಭದಲ್ಲಿ ವಿಫಲರಾಗುತ್ತಾರೆ.

ಇಲ್ಲಿ ಗಮನಿಸಬೇಕಾದ ಕೆಲವು ಪ್ರಮುಖ ಸಂಗತಿಗಳಿವೆ. ಅವುಗಳಲ್ಲಿ ಮುಖ್ಯವಾಗಿ ಅಗತ್ಯವಿರುವ ಹೂಡಿಕೆಯ ಮೊತ್ತವು ಅವಧಿ (duration) ಮತ್ತು ಹೂಡಿಕೆಯ ಮೇಲಿನ ಆದಾಯದ ಅಂದಾಜು ದರವನ್ನು (estimated rate) ಆಧರಿಸಿ ಗಮನಾರ್ಹವಾಗಿ ಬದಲಾಗುತ್ತದೆ ಎಂಬುದು ಕೂಡ ಗಮನಿಸಬೇಕು. 10, 15, ಮತ್ತು 20 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ತಲುಪಲು ಎಷ್ಟು ಹೂಡಿಕೆ ಅಗತ್ಯವಿದೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು.

10 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

ಕಡಿಮೆ ಸಮಯದಲ್ಲಿ ಒಂದು ಕೋಟಿ ರೂಪಾಯಿ ಗಳಿಸುವುದು ಕಷ್ಟವಲ್ಲ. ಇದಕ್ಕಾಗಿ ಹೂಡಿಕೆದಾರರು 10 ವರ್ಷಗಳಲ್ಲಿ 1 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲು ಮಾಸಿಕ ಆಧಾರದ ಮೇಲೆ ಗಮನಾರ್ಹ ಮೊತ್ತವನ್ನು ಉಳಿಸಬೇಕು. ಈಕ್ವಿಟಿ ಮ್ಯೂಚುವಲ್ ಫಂಡ್‌ಗಳು ಅಥವಾ ಸ್ಟಾಕ್‌ಗಳಲ್ಲಿ ಸಕ್ರಿಯ ಹೂಡಿಕೆ ಮಾಡುವ ಮೂಲಕ ಶೇ. 12ರಷ್ಟು ವಾರ್ಷಿಕ ಆದಾಯವನ್ನು ನಿರೀಕ್ಷಿಸಿದರೆ ತಿಂಗಳ ಹೂಡಿಕೆಯು ಸುಮಾರು 44,640 ರೂ. ಗಳಾಗಿರುತ್ತದೆ.

15 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

15 ವರ್ಷಗಳವರೆಗೆ ಯೋಜನೆಯು ಹೆಚ್ಚು ಪರಿಣಾಮಕಾರಿಯಾಗಿದೆ. ಶೇ. 12ರ ವಾರ್ಷಿಕ ಆದಾಯವನ್ನು ನಿರೀಕ್ಷಿಸಿದರೆ ಮಾಸಿಕ ಹೂಡಿಕೆಯು ತುಂಬಾ ಚಿಕ್ಕದಾಗಿದೆ. ಪ್ರತಿ ತಿಂಗಳು ಸುಮಾರು 21,020 ರೂ. ಉಳಿತಾಯ ಮಾಡಬೇಕಾಗುತ್ತದೆ. ಇದು ಮುಂಚಿತವಾಗಿ ಪ್ರಾರಂಭಿಸುವುದರ ಪ್ರಯೋಜನಗಳನ್ನು ಎತ್ತಿ ತೋರಿಸುತ್ತದೆ. ಹೂಡಿಕೆಗಳು ಹೆಚ್ಚು ಫಲ ನೀಡಲು ಹೆಚ್ಚಿನ ಸಮಯವನ್ನು ನೀಡುತ್ತದೆ.

20 ವರ್ಷಗಳಲ್ಲಿ 1 ಕೋಟಿ ರೂ. ಗಳಿಸಿ

ಸುದೀರ್ಘ ವರ್ಷದ ಹೂಡಿಕೆಯು ಮಾಸಿಕ ಹೂಡಿಕೆಯ ಅವಶ್ಯಕತೆಯು ಇನ್ನಷ್ಟು ಕಡಿಮೆಯಾಗುತ್ತದೆ. ದೀರ್ಘಾವಧಿಯ ಲಾಭವನ್ನು ಕೊಡುತ್ತದೆ. ಶೇ. 12 ವಾರ್ಷಿಕ ಆದಾಯದಲ್ಲಿ ಹೂಡಿಕೆದಾರರು 1 ಕೋಟಿ ರೂ. ಗುರಿಯನ್ನು ತಲುಪಲು ಪ್ರತಿ ತಿಂಗಳು ಸುಮಾರು 10,880 ರೂ. ಹೂಡಿಕೆ ಮಾಡಬೇಕಾಗುತ್ತದೆ.


ಹೂಡಿಕೆ ಶಿಸ್ತು ಬದ್ಧವಾಗಿರಲಿ

ನಿರ್ದಿಷ್ಟ ಗುರಿಯನ್ನು ತಲುಪಬೇಕಾದರೆ ಇದಕ್ಕಾಗಿ ಶಿಸ್ತುಬದ್ಧ ಹೂಡಿಕೆಯ ಅಗತ್ಯವಿರುತ್ತದೆ ಮತ್ತು ಆದಾಯವನ್ನು ಗರಿಷ್ಠಗೊಳಿಸಲು ಸರಿಯಾದ ಆಯ್ಕೆ ಮಾಡುವುದು ಕೂಡ ಮುಖ್ಯ. ಅದಕ್ಕಾಗಿ ಹೂಡಿಕೆದಾರರು ಮಾರುಕಟ್ಟೆಯ ಅಪಾಯಗಳ ಬಗ್ಗೆ ಜಾಗರೂಕರಾಗಿರಬೇಕು ಮತ್ತು ಅವರ ಹೂಡಿಕೆಯ ತಂತ್ರವು ಅವರ ಅಪಾಯ ಸಹಿಷ್ಣುತೆ ಮತ್ತು ಹಣಕಾಸಿನ ಗುರಿಗಳೊಂದಿಗೆ ಹೊಂದಿಕೆಯಾಗುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಹೂಡಿಕೆ ಪೋರ್ಟ್‌ಫೋಲಿಯೊವನ್ನು ವೈವಿಧ್ಯಗೊಳಿಸುವುದು ಮತ್ತು ನಿಯತಕಾಲಿಕವಾಗಿ ಪರಿಶೀಲಿಸುವುದು ಸಹ ಟ್ರ್ಯಾಕ್‌ನಲ್ಲಿ ಉಳಿಯಲು ನಿರ್ಣಾಯಕವಾಗಿದೆ.

ಇದನ್ನೂ ಓದಿ: Money Guide: ಹಿರಿಯ ನಾಗರಿಕರು ಮಾಸಿಕ 20,000 ರೂ. ಆದಾಯ ಗಳಿಸಲು ಈ ಯೋಜನೆಯಲ್ಲಿ ಹೂಡಿಕೆ ಮಾಡಿ

ಗಮನಿಸಬೇಕಾದ ಅಂಶಗಳು

ಸಂಪತ್ತು ಕ್ರೋಡೀಕರಣಕ್ಕೆ ಸ್ಥಿರವಾದ ಮತ್ತು ಶಿಸ್ತಿನ ಹೂಡಿಕೆಯು ನಿರ್ಣಾಯಕವಾಗಿರುವುದರಿಂದ ಸಾಧ್ಯವಾದಷ್ಟು ಬೇಗ ಹೂಡಿಕೆಯನ್ನು ಪ್ರಾರಂಭಿಸಿ.

ಈಕ್ವಿಟಿ ಮ್ಯೂಚುಯಲ್ ಫಂಡ್‌ಗಳಂತಹ ಸೂಕ್ತವಾದ ಹೂಡಿಕೆಯ ವಿಧಾನಗಳನ್ನು ಆಯ್ಕೆ ಮಾಡಿ. ಅದು ಹಣಕಾಸಿನ ಉದ್ದೇಶಗಳನ್ನು ಪೂರೈಸಲು ಅಗತ್ಯವಾದ ಆದಾಯವನ್ನು ನೀಡುತ್ತದೆ.

ಹೆಚ್ಚುವರಿಯಾಗಿ ನಿಯಮಿತವಾಗಿ ಹೂಡಿಕೆಗಳನ್ನು ಪರಿಶೀಲಿಸಬೇಕು ಮತ್ತು ಗುರಿಗಳು ಮತ್ತು ಅಪಾಯ ಸಹಿಷ್ಣುತೆಯೊಂದಿಗೆ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ಅವುಗಳನ್ನು ಸರಿಹೊಂದಿಸಬೇಕು.

ಇವುಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಅನ್ವಯಿಸುವುದರಿಂದ ಹೂಡಿಕೆದಾರರು ತಮ್ಮ ಆಯ್ಕೆ ಮಾಡಿದ ಕಾಲಮಿತಿಯೊಳಗೆ 1 ಕೋಟಿ ರೂ. ಅನ್ನು ಸಂಗ್ರಹಿಸುವುದು ಕಷ್ಟವಾಗುವುದಿಲ್ಲ.

Continue Reading

ಪ್ರಮುಖ ಸುದ್ದಿ

Terrorists Attack: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ನಾಲ್ವರು ಯೋಧರು ಹುತಾತ್ಮ, 6 ಸೈನಿಕರಿಗೆ ಗಾಯ

Terrorists Attack: ಕಠುವಾ ಜಿಲ್ಲೆ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದರು. ಸೇನಾ ವಾಹನ ಬರುವುದನ್ನೇ ಕಾದು ಕುಳಿತಿದ್ದ ಹಲವು ಉಗ್ರರು, ವಾಹನದ ಮೇಲೆ ಗ್ರೆನೇಡ್‌ಗಳ ಮೂಲಕ ದಾಳಿ ನಡೆಸಿದ್ದರು. ಇದಾದ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

VISTARANEWS.COM


on

Terrorists Attack
Koo

ಶ್ರೀನಗರ: ಜಮ್ಮು-ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಯೋಧರು ಹಾಗೂ ಉಗ್ರರ ನಡುವೆ ಭಾರಿ ಪ್ರಮಾಣದ ಚಕಮಕಿ (Encounter) ನಡೆದಿದ್ದು, ಉಗ್ರರ ಗುಂಡಿಗೆ (Terrorists Attack) ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೆ, ಆರು ಯೋಧರು ಗಾಯಗೊಂಡಿದ್ದು, ಅವರನ್ನು ಸೇನೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಕಠುವಾ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಉಗ್ರರು ಸೋಮವಾರ (ಜುಲೈ 8) ಮಧ್ಯಾಹ್ನ ದಾಳಿ ನಡೆಸಿದ ಬಳಿಕ ಯೋಧರು ಕಾರ್ಯಾಚರಣೆ ಕೈಗೊಂಡಾಗ ಗುಂಡಿನ ಚಕಮಕಿ ನಡೆದಿದೆ. ಇದೇ ವೇಳೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಕಠುವಾ ಜಿಲ್ಲೆ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದರು. ಸೇನಾ ವಾಹನ ಬರುವುದನ್ನೇ ಕಾದು ಕುಳಿತಿದ್ದ ಹಲವು ಉಗ್ರರು, ವಾಹನದ ಮೇಲೆ ಗ್ರೆನೇಡ್‌ಗಳ ಮೂಲಕ ದಾಳಿ ನಡೆಸಿದ್ದರು. ಇದಾದ ಬಳಿಕ ಯೋಧರು ಕಾಡನ್ನು ಸುತ್ತುವರಿದು, ಉಗ್ರರಿಗಾಗಿ ಕಾರ್ಯಾಚರಣೆ ನಡೆಸಿದ್ದರು. ಆದರೆ, ಕಾರ್ಯಾಚರಣೆ ವೇಳೆ ಉಗ್ರರು ಸತತವಾಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾದರು ಎಂದು ತಿಳಿದುಬಂದಿದೆ.

ಕಠುವಾ ಅರಣ್ಯ ಪ್ರದೇಶವನ್ನು ಸುತ್ತುವರಿದ ಯೋಧರು ಉಗ್ರರಿಗಾಗಿ ಶೋಧ ನಡೆಸುತ್ತಿದ್ದರು. ಇದೇ ವೇಳೆ ಉಗ್ರರು ಕೂಡ ಗುಂಡಿನ ದಾಳಿ ನಡೆಸಿದ್ದಾರೆ. ಯೋಧರು ಹಾಗೂ ಉಗ್ರರ ಮಧ್ಯೆ ಸತತ ಗುಂಡಿನ ಚಕಮಕಿ ನಡೆದಿದೆ. ಆದರೆ, ಉಗ್ರರ ಗುಂಡಿಗೆ ಯೋಧರು ಹುತಾತ್ಮರಾದರು. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಆರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಎರಡು ದಿನಗಳ ಹಿಂದಷ್ಟೇ ಭದ್ರತಾ ಸಿಬ್ಬಂದಿಯು ಆರು ಉಗ್ರರನ್ನು (Kashmir Encounter) ಹೊಡೆದುರುಳಿಸಿದ್ದಾರೆ. ಇನ್ನು ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಲ್ಗಾಮ್‌ ಜಿಲ್ಲೆಯ ಫ್ರೈಸಲ್‌ ಚಿನ್ನಿಗಮ್‌ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆಗ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಆರು ಉಗ್ರರು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಯವರು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Continue Reading

ದೇಶ

Union Budget 2024: ಕೇಂದ್ರ ಬಜೆಟ್‌ನಲ್ಲಿ ಉದ್ಯೋಗ, ಗ್ರಾಮೀಣಾಭಿವೃದ್ಧಿಗೆ ಒತ್ತು-ಅರ್ಥಶಾಸ್ತ್ರಜ್ಞರು ಹೇಳೋದೇನು?

Union Budget 2024: ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

VISTARANEWS.COM


on

Union Budget 2024
Koo

ಹೊಸದಿಲ್ಲಿ: ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್‌ಗೆ (Union Budget 2024) ದಿನಾಂಕ ದಿನಗಣನೆ ಶುರುವಾಗಿದೆ. ಜುಲೈ 23ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ (Union Budget Session) ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿ ಬಜೆಟ್‌ ಉದ್ಯೋಗ ಸೃಷ್ಟಿ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಕೇಂದ್ರೀಕರಿಸುವ ಸಾಧ್ಯತೆ ಇದೆ ಎಂದು ಗೋಲ್ಡ್‌ಮ್ಯನ್‌ ಸ್ಯಾಚ್ಸ್‌ನ ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ನಿಗದಿಪಡಿಸಿದ GDPಯ 5.1% ರಷ್ಟು ಹಣಕಾಸಿನ ಕೊರತೆಯ ಗುರಿಗೆ ಬದ್ಧವಾಗಿರುತ್ತದೆ ಎಂದು ನಿರೀಕ್ಷೆ ಇದೆ. ಕಾರ್ಮಿಕ-ತೀವ್ರ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ, ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ವಿಸ್ತರಿಸುವ ಮೂಲಕ ಸೇವಾ ರಫ್ತಿನ ಮೇಲೆ ನಿರಂತರ ಗಮನ ಮತ್ತು ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವುದರ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದನ್ನು ನಾವು ನೋಡುತ್ತೇವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶಾಂತನು ಸೇನ್‌ಗುಪ್ತಾ ಉಲ್ಲೇಖಿಸಿದೆ.

ಈ ಬಾರಿ ಬಜೆಟ್‌ನಲ್ಲಿ ವಾಣಿಜ್ಯ ವಿಮಾನ ತಯಾರಿಕೆಯ ಜೊತೆಗೆ ಆಟಿಕೆಗಳು, ಜವಳಿ ಮತ್ತು ಉಡುಪುಗಳ ತಯಾರಿಕೆಯಂತಹ ಕೈಗಾರಿಕಾ ವಲಯಗಳಿಗೆ ಹಣಕಾಸಿನ ಪ್ರೋತ್ಸಾಹ ನೀಡುವ ನಿರೀಕ್ಷೆ ಇದೆ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ:Gururaj Gantihole: ಬೈಂದೂರಿನ ನೆರೆ ಸಂತ್ರಸ್ತ ಪ್ರದೇಶಗಳಿಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ; ಪರಿಹಾರ ನೀಡಲು ಸೂಚನೆ

Continue Reading
Advertisement
Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ15 mins ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Maharashtra Rain
Latest16 mins ago

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Money Guide
ಮನಿ-ಗೈಡ್25 mins ago

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

land fraud
ಕರ್ನಾಟಕ28 mins ago

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

Golden Star Ganesh starring Krishnam Pranaya Sakhi movie releasing on 15th August
ಕರ್ನಾಟಕ33 mins ago

Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

Heavy rain in coastal areas of Uttara Kannada district
ಉತ್ತರ ಕನ್ನಡ34 mins ago

Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

Sri Kyatha Lingeshwara Swamy new temple Inauguration on 13th August
ತುಮಕೂರು37 mins ago

Shira News: ಆ.13ರಂದು ಶ್ರೀ ಕ್ಯಾತಲಿಂಗೇಶ್ವರ ಸ್ವಾಮಿ ನೂತನ ದೇವಾಲಯದ ಜೀರ್ಣೋದ್ಧಾರ ಸಮಾರಂಭ

defrauding the government in Quarry Mine Royalty CM Siddaramaiah instructs for strict action
ಕರ್ನಾಟಕ39 mins ago

CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

New Medical Colleges
ಕರ್ನಾಟಕ42 mins ago

New Medical Colleges: ಕರ್ನಾಟಕಕ್ಕೆ 3 ಪದವಿಪೂರ್ವ ವೈದ್ಯಕೀಯ ಕಾಲೇಜು ಮಂಜೂರು; 350 ಸೀಟುಗಳು ಲಭ್ಯ

Jay Shah
ಕ್ರೀಡೆ46 mins ago

Jay Shah: ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ನೀಡಲು ಮುಂದಾದ ಜಯ್ ಶಾ; ಕಾರಣವೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ4 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ6 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ8 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು10 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌