Vijayapura Tourist Places : ನೋಡಬನ್ನಿ ವಿಜಯಪುರದಲ್ಲಿರುವ ಈ ಪ್ರಸಿದ್ಧ ತಾಣಗಳ... - Vistara News

ಕರ್ನಾಟಕ

Vijayapura Tourist Places : ನೋಡಬನ್ನಿ ವಿಜಯಪುರದಲ್ಲಿರುವ ಈ ಪ್ರಸಿದ್ಧ ತಾಣಗಳ…

ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿರುವ ಹಲವಾರು ಪ್ರವಾಸಿ ತಾಣಗಳ (Vijayapura Tourist Places) ಕುರಿತಾಗಿ ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

vijayapura tourist places
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಲ್ಲೆಲ್ಲೂ ಪ್ರವಾಸದ ಸುಗ್ಗಿ ನಡೆಯುತ್ತಿದೆ. ನಿಸರ್ಗ ತಾಣಗಳಿಂದ ಹಿಡಿದು, ಧಾರ್ಮಿಕ ಸ್ಥಳಗಳವರೆಗೆ ಎಲ್ಲೆಡೆಯೂ ಪ್ರವಾಸಿಗರೋ ಪ್ರವಾಸಿಗರು. ನೀವು ಈ ಬಾರಿ ದಕ್ಷಿಣ ಕರ್ನಾಟಕದ ಬದಲಾಗಿ ಉತ್ತರ ಕರ್ನಾಟಕದತ್ತ ಪ್ರಯಾಣ ಮಾಡಬೇಕು ಎಂದು ಯೋಚಿಸುತ್ತಿರಬಹುದು. ಅದಕ್ಕೆಂದೇ ಉತ್ತರ ಕರ್ನಾಟಕದ ಜಿಲ್ಲೆಯಾದ ವಿಜಯಪುರದಲ್ಲಿರುವ ಪ್ರಸಿದ್ಧ ತಾಣಗಳ (Vijayapura Tourist Places) ಬಗ್ಗೆ ನಾವಿಲ್ಲಿ ನಿಮಗೆ ಮಾಹಿತಿಯನ್ನು ಕೊಡುತ್ತಿದ್ದೇವೆ.

ಗೋಲ್‌ ಗುಂಬಜ್‌


ಇದು ಬಿಜಾಪುರದ ಅತ್ಯಂತ ಪ್ರಮುಖ ಆಕರ್ಷಣೆಯಾಗಿದೆ. 210 ಅಡಿ ಎತ್ತರದ ಮೊಹಮ್ಮದ್‌ ಆದಿಲ್‌ ಷಾ ಸಮಾಧಿಯನ್ನು ಇಲ್ಲಿ ಕಾಣಬಹುದು. ಇದು ವಿಶ್ವದ ಎರಡನೇ ಅತಿದೊಡ್ಡ ಗುಮ್ಮಟವಾಗಿದೆ. ಇಲ್ಲಿನ ಗುಮ್ಮಟದೊಳಗೆ ಏನನ್ನೇ ಪಿಸುಗುಟ್ಟಿದರೂ ಅದು ಹತ್ತು ಬಾರಿ ಪ್ರತಿಧ್ವನಿಸುತ್ತದೆ.

ಇಬ್ರಾಹಿಂ ರೋಜಾ


ಇಬ್ರಾಹಿಂ ರೋಜಾ ತಾಜ್‌ ಮಹಲ್‌ಗೆ ಸ್ಫೂರ್ತಿ ಎಂದು ಹೇಳಲಾಗುತ್ತದೆ. ಅತ್ಯಂತ ಸುಂದರವಾದ ಎರಡು ಕಟ್ಟಡಗಳನ್ನು ನೀವಿಲ್ಲಿ ಕಾಣಬಹುದು. ಇದು ಭಾರತದ ಅತ್ಯಂತ ಸುಂದರವಾದ ಇಸ್ಲಾಮಿಕ್‌ ಸ್ಮಾರಕಗಳಲ್ಲಿ ಒಂದಾಗಿದೆ. ಈ ಸಮಾಧಿ ಕಟ್ಟಡದ ಸುತ್ತ ಇರುವ ಉದ್ಯಾನ ಸಮಾಧಿಯನ್ನು ಇನ್ನಷ್ಟು ಚಂದವಾಗಿ ಕಾಣುವಂತೆ ಮಾಡುತ್ತದೆ.

ಬಾರಾ ಕಮಾನ್


ಅಲಿ ಆದಿಲ್ ಷಾ II ಅವರ ಸಮಾಧಿಯಿದು. ಇದರ ಕೆಲಸ ಅಪೂರ್ಣವಾಗಿದೆ. ಇಲ್ಲಿ 12 ಆಕರ್ಷಕ ಕಮಾನುಗಳಿವೆ. ಇದನ್ನು ಅಲಿ ಆದಿಲ್‌ ಷಾ II ಅವರ ತಂದೆಯ ಸಮಾಧಿಯಾದ ಗೋಲ್‌ ಗುಂಬಜ್‌ಗೆ ಪ್ರತಿಸ್ಪರ್ಧೆಯಾಗಿಸಲು ಉದ್ದೇಶಿಸಲಾಗಿತ್ತು. ಆದರೆ ಅದರ ಕಾರ್ಯ ಪೂರ್ಣಗೊಳ್ಳಲೇ ಇಲ್ಲ.

ಗಗನ್ ಮಹಲ್


ಗಗನ್‌ ಮಹಲ್‌ ಅನ್ನು ಅಲಿ ಆದಿಲ್ ಶಾ I ಅವರು 1561ರ ಸಮಯದಲ್ಲಿ ನಿರ್ಮಿಸಿದ. ಇದನ್ನು ರಾಜಮನೆತನದ ನಿವಾಸ ಮತ್ತು ದರ್ಬಾರ್‌ ಹಾಲ್‌ ಆಗಿ ಕಾಣಲೆಂದು ನಿರ್ಮಿಸಲಾಗಿತ್ತು. ಇದು ಇಂಡೋ ಇಸ್ಲಾಮಿಕ್‌ ವಾಸ್ತುಶಿಲ್ಪದಲ್ಲಿದೆ.

ಮಲಿಕ್-ಎ-ಮೈದಾನ್


55 ಟನ್‌ ತೂಕದ ಫಿರಂಗಿ ಇಲ್ಲಿದೆ. ಇದು ಭಾರತದಲ್ಲಿನ ಅತಿದೊಡ್ಡ ಮಧ್ಯಕಾಲೀನ ಫಿರಂಗಿಗಳಲ್ಲಿ ಒಂದು. ಫಿರಂಗಿಯ ತಲೆಯ ಭಾಗದಲ್ಲಿ ಆನೆಯನ್ನು ತಿನ್ನುವ ಸಿಂಹದ ಆಕಾರವಿದೆ. ಮೇಲ್ಮೈಯನ್ನು ಅರೇಬಿಕ್‌ ಮತ್ತು ಪರ್ಷಿಯನ್‌ ಭಾಷೆಗಳ ಶಾಸನಗಳಿಂದ ಅಲಂಕರಿಸಲಾಗಿದೆ.

ಮೆಹ್ತರ್ ಮಹಲ್


ಇದು ಮಸೀದಿ ಮತ್ತು ಉದ್ಯಾನಕ್ಕೆ ಇರುವ ದೊಡ್ಡ ಗೇಟು. ಇದನ್ನು ಇಬ್ರಾಹಿಂ ಆದಿಲ್‌ ಶಾ ನಿರ್ಮಿಸಿದ. ಅತ್ಯಂತ ಸುಂದರ ವಾಸ್ತುಶಿಲ್ಪವಿರುವ ಈ ಗೇಟು ಮೆಹ್ತರ್‌ ಮಹಲ್‌ ಹೆಸರಿನೊಂದಿಗೆ ದೊಡ್ಡ ಸ್ಮಾರಕವಾಗಿ ಗುರುತಿಸಿಕೊಳ್ಳುತ್ತಿದೆ.

ಉಪ್ಲಿ ಬುರುಜ್


ಇದು 16ನೇ ಶತಮಾನದ 80 ಅಡಿ ಎತ್ತರದ ಕಾವಲು ಗೋಪರವಾಗಿದೆ. ಈ ಗೋಪುರದ ಮೇಲೆ ಹತ್ತಿ ಬಿಜಾಪುರ ನಗರದ ಸೌಂದರ್ಯವನ್ನು ಕಾಣಬಹುದಾಗಿದೆ.

ತಾಜ್ ಬಾವಡಿ


ಇಬ್ರಾಹಿಂ ಆದಿಲ್‌ ಷಾ II ಅವರ ಪತ್ನಿ ತಾಜ್‌ ಸುಲ್ತಾನರ ನೆನಪಿನಲ್ಲಿ ಈ ನೀರಿನ ಟ್ಯಾಂಕ್‌ ನಿರ್ಮಿಸಲಾಯಿತು. ಇದು 223 ಅಡಿ ಅಗಲವಿರುವ ಹಾಗೂ 52 ಅಡಿ ಆಳವಿರುವ ದೊಡ್ಡ ಬಾವಿ. ಈ ಬಾವಿಯೊಳಗೆ ಇಳಿಯುವುದಕ್ಕೆ ಮೆಟ್ಟಿಲುಗಳಿವೆ.

ಆಲಮಟ್ಟಿ ಅಣೆಕಟ್ಟು


ಆಲಮಟ್ಟಿ ಅಣೆಕಟ್ಟು ಕೃಷ್ಣಾ ನದಿಯ ಜಲವಿದ್ಯುತ್ ಯೋಜನೆಯಾಗಿದೆ. ಇದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಅಂಚಿನಲ್ಲಿದೆ. ಆಲಮಟ್ಟಿ ಅಣೆಕಟ್ಟಿನಲ್ಲಿ ರಾಕ್ ಗಾರ್ಡನ್, ಮೊಘಲ್ ಗಾರ್ಡನ್, ಜಪಾನೀಸ್ ಗಾರ್ಡನ್ ರಚಿಸಲಾಗಿದ್ದು, ಬೋಟಿಂಗ್ ಸೌಲಭ್ಯ ಮತ್ತು ಸಂಗೀತ ಕಾರಂಜಿಯನ್ನೂ ಮಾಡಲಾಗಿದೆ.

ವಿಜಯಪುರ ಪುರಾತತ್ವ ವಸ್ತುಸಂಗ್ರಹಾಲಯ


ಗೋಲ್ ಗುಂಬಜ್ ಎದುರು ನಗರ್ ಖಾನಾದಲ್ಲಿ ವಿಜಯಪುರ ಪುರಾತತ್ವ ವಸ್ತುಸಂಗ್ರಹಾಲಯವಿದೆ. ಇಲ್ಲಿ ಹತ್ತಿರದ ಪ್ರದೇಶಗಳಲ್ಲಿ ಸಿಕ್ಕಿದ ಎಲ್ಲ ರೀತಿಯ ಪ್ರಾಚೀನ ವಸ್ತುಗಳನ್ನು ಸಂರಕ್ಷಿಸಿಡಲಾಗಿದೆ.

ಜಾಮಿಯಾ ಮಸೀದಿ


ಆದಿಲ್‌ ಶಾಹಿ ಅವರು ನಿರ್ಮಿಸಿದ ಇಂಡೋ ಇಸ್ಲಾಮಿಕ್‌ ವಾಸ್ತುಶಿಲ್ಪವಿರುವ ಸ್ಮಾರಕಗಳಲ್ಲಿ ಪ್ರಮುಖವಾದದ್ದು ಬಿಜಾಪುರದ ಜಾಮಿಯಾ ಮಸೀದಿ. ಇದರಲ್ಲಿ ಆಕರ್ಷಕವಾದ ಕಮಾನುಗಳು, ಸುಂದರವಾದ ಹಜಾರಗಳು, ಸುಂದರವಾದ ಸಭಾಂಗಣಗಳು ಮತ್ತು ದೊಡ್ದದೊಂದು ಗುಮ್ಮಟವಿದೆ. ಇದರ ಕಾಮಗಾರಿ ಪೂರ್ಣಗೊಂಡಿಲ್ಲ.

ಶಿವಗಿರಿ ದೇವಾಲಯ


ಈ ದೇವಾಲಯದಲ್ಲಿ 85 ಅಡಿ ಎತ್ತರದ ಶಿವನ ಪ್ರತಿಮೆಯಿದೆ. ಈ ಪ್ರತಿಮೆ ಸುಮಾರು 1500 ಟನ್‌ ತೂಕವಿದೆ. ಇದನ್ನು ದೇಶದ ಎರಡನೇ ಅತಿದೊಡ್ಡ ಶಿವನ ಪ್ರತಿಮೆ ಎಂದು ಪರಿಗಣಿಸಲಾಗಿದೆ. ದೊಡ್ಡ ಪ್ರತಿಮೆಯ ಕೆಳಗೆ ಶಿವಲಿಂಗದ ಸಣ್ಣ ವಿಗ್ರಹವಿದೆ.

ತೊರವಿ

ವಿಜಯಪುರದಿಂದ 10 ಕಿ.ಮೀ ದೂರದಲ್ಲಿರುವ ತೊರವಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನವಿದೆ. ಇದು ಹೆಸರಾಂತ ಧಾರ್ಮಿಕ ಸ್ಥಳವಾಗಿದೆ.

ಸಹಸ್ರಫಣಿ ಪಾರ್ಶ್ವನಾಥ ಬಸದಿ


ವಿಜಯಪುರದ ಹೊರವಲಯದಲ್ಲಿರುವ ಈ ಜೈನ ದೇವಾಲಯವು ಪಾರ್ಶ್ವನಾಥನ ವಿಶಿಷ್ಟ ವಿಗ್ರಹವನ್ನು ಹೊಂದಿದೆ. ಸುಂದರವಾಗಿ ಕೆತ್ತಲಾದ ಕಪ್ಪು ಕಲ್ಲಿನ ವಿಗ್ರಹವು ಸುಮಾರು 1500 ವರ್ಷಗಳಷ್ಟು ಹಳೆಯದು ಎಂದು ನಂಬಲಾಗಿದೆ. ಇಲ್ಲಿ ವಿಗ್ರಹಕ್ಕೆ 1008 ಹಾವಿನ ತಲೆಯ ರಕ್ಷಣೆಯಿದೆ. ಇಲ್ಲಿ ಪ್ರತಿ ಅಮವಾಸ್ಯೆ ಮತ್ತು ಹುಣ್ಣಿಮೆಗೆ ವಿಶೇಷ ಪೂಜೆ ನಡೆಸಲಾಗುತ್ತದೆ.

ಬಸವನ ಬಾಗೇವಾಡಿ


ವಿಜಯಪುರದಿಂದ 42ಕಿ.ಮೀ. ದೂರದಲ್ಲಿ ಬಸವನ ಬಾಗೇವಾಡಿ ಇದೆ. ಬಾಗೇವಾಡಿಯು 12 ನೇ ಶತಮಾನದ ಧಾರ್ಮಿಕ ಮತ್ತು ಸಾಮಾಜಿಕ ಸುಧಾರಕ ಮತ್ತು ಕಲ್ಯಾಣಿ ಚಾಲುಕ್ಯ ಸಾಮ್ರಾಜ್ಯದ ಪ್ರಧಾನ ಮಂತ್ರಿಯಾಗಿದ್ದ ಬಸವೇಶ್ವರರ ಜನ್ಮಸ್ಥಳವಾಗಿದೆ. ಇಲ್ಲಿ ಬಸವೇಶ್ವರ (ನಂದಿ) ಸಂಗಮೇಶ್ವರ, ಮಲ್ಲಿಕಾರ್ಜುನ ಮತ್ತು ಗಣಪತಿಯ ದೇವಾಲಯಗಳನ್ನು ಕಾಣಬಹುದಾಗಿದೆ.

ಇನ್ನಷ್ಟು ದೇಗುಲಗಳು

ಈ ಮೇಲಿನವಷ್ಟೇ ಅಲ್ಲದೆ ಯಳಗೂರಿನಲ್ಲಿ ಹನುಮಂತನ ದೇವಸ್ಥಾನ, ಸಿಂದಗಿಯಲ್ಲಿ ಶರಣಬಸವೇಶ್ವರ ದೇವಸ್ಥಾನ, ಸಂಗಮೇಶ್ವರ ದೇವಸ್ಥಾನ ಮತ್ತು ಬನಶಂಕರಿ, ನರಸಿಂಹ ಮತ್ತು ಬೌರಮ್ಮನ ದೇಗುಲಗಳು, ಸಾಲೋಟಗಿಯಲ್ಲಿ ಶಿವಯೋಗ ಈಶ್ವರ ದೇಗುಲ, ಯೆಲ್ಲಮ್ಮ ದೇವಸ್ಥಾನ, ಹನುಮಂತ ದೇವಸ್ಥಾನ, ಮುದ್ದೇಬಿಹಾಳದಲ್ಲಿ ಶಿವ, ಹನುಮ, ದತ್ತಾತ್ರೇಯ, ಪಾಂಡುರಂಗ, ದುರ್ಗಾದೇವಿ, ಮಲ್ಲಯ್ಯ, ಮರುಳಸಿಧೇಶ್ವರ, ಬನಶಂಕರಿ ದೇಗುಲಗಳು ಇವೆ. ಅದಲ್ಲದೆ ಬಾಗೇವಾಡಿಯ ಈಶಾನ್ಯಕ್ಕೆ 9ಕಿ.ಮೀ. ದೂರದಲ್ಲಿರುವ ಇಂಗಳೇಶ್ವರದಲ್ಲಿ ಎರಡು ಗುಹಾಂತರ ದೇವಾಲಯ ಸೇರಿದಂತೆ ಒಟ್ಟು ಎಂಟು ದೇವಾಲಯಗಳಿವೆ. ಮತ್ತು ಅಕ್ಕ ನಾಗಮ್ಮ ದೇವಾಲಯಗಳು ಬೆಟ್ಟದ ಮೇಲಿರುವ ಗುಹಾ ದೇವಾಲಯಗಳಾಗಿವೆ. ಇಂಡಿಯಲ್ಲಿ ಆದಿನಾಥ ದಿಗಂಬರ ಬಸದಿ, ಶಾಂತೇಶ್ವರ ದೇವಸ್ಥಾನ, ಹಿಪ್ಪರಗಿಯಲ್ಲಿ ರಾಷ್ಟ್ರಕೂಟರ ಕಾಲದ ಕಲ್ಮೇಶ್ವರ ದೇವಸ್ಥಾನ, ವೀರಭದ್ರ ದೇವಸ್ಥಾನ, ಮೈಲಾರ ದೇವಸ್ಥಾನಗಳು, ಅಗರಖೇಡದಲ್ಲಿ ಶಂಕರಲಿಂಗ ಮತ್ತು ಭೈರವ ಸಿದ್ದೇಶ್ವರ ದೇವಸ್ಥಾನಗಳು, ಅಲ್ಮೇಲ್ ಊರಿನಲ್ಲಿ ರಾಮಲಿಂಗ ದೇವಸ್ಥಾನ, ಹನುಮಾನ್ ದೇವಸ್ಥಾನ ಮತ್ತು ಭವಾನಿ ದೇವಸ್ಥಾನಗಳಿವೆ.

ರಾಜ ಸಮಾಧಿಗಳು

ವಿಜಯಪುರದಲ್ಲಿ ಅಫ್ಜಲ್ ಖಾನ್ ಅವರ ಪತ್ನಿಯರ ಸಮಾಧಿಗಳು, ಅಫ್ಜಲ್ ಖಾನ್ ಅವರ ಸಮಾಧಿ, ಐನ್ ಉಲ್ ಮುಲ್ಕ್ ಅವರ ಸಮಾಧಿ ಮತ್ತು ಮಸೀದಿ, ಅಲಿ ಆದಿಲ್ ಶಾ 1 ಅವರ ಸಮಾಧಿ, ಅಲಿ ಆದಿಲ್ ಶಾ 2 ಅವರ ಸಮಾಧಿ ಮತ್ತು ಅಲಿ ಶಾಹಿ ಪಿರ್ ಅವರ ಸಮಾಧಿಯಂತಹ ಹಲವಾರು ರಾಜ ವಿಶ್ರಾಂತಿ ಸ್ಥಳಗಳಿವೆ.

ಇನ್ನು ಕೆಲವು ಪ್ರಸಿದ್ಧ ತಾಣಗಳು

ತಾಳಿಕೋಟೆಯು ವಿಜಯನಗರ ಸೇನೆಯ ಧ್ವಂಸಕ್ಕೆ ಕಾರಣವಾದ ಪ್ರಮುಖ ಐತಿಹಾಸಿಕ ಯುದ್ಧದ ತಾಣ. ಇಲ್ಲಿ ಶಿವ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳು ಮತ್ತು ಮಸೀದಿಗಳಿವೆ. ಹಾಗೆಯೇ ಹಲಸಂಗಿಯಲ್ಲಿ ಆದಿಲ್‌ ಶಾಹಿ ಕಾಲದ ಹಳೆಯ ಕೋಟೆಯ ಅವಶೇಷಗಳಿವೆ. ಇನ್ನುಳಿದಂತೆ ಜೋಡ್ ಗುಂಬಜ್, ಅಸರ್ ಮಹಲ್, ಆನಂದ್ ಮಹಲ್, ಚೋಟಾ ಅಸರ್, ಚಿನಿ ಮಹಲ್, ಜಲ ಮಂಜಿಲ್, ಜಾಮಿ ಮಸೀದಿ, ಚಾಂದ್ ಬಾವಡಿ, ಬುಖಾರಿ ಮಸೀದಿ, ಔರಂಗಜೇಬ್ ಈದ್ಗಾ, ಮೋತಿ ಗುಂಬಜ್, ಮುಸ್ತಫಾ ಖಾನ್ ಅವರ ಮಸೀದಿ, ಮಸೀದಿ ಮತ್ತು ಅರಮನೆ ಸಂದಲ್ ಮಸೀದಿ, ಮಲಿಕ್ ಜಹಾನ್ ಬೇಗಂ ಮಸೀದಿ, ರಾಮಮಂದಿರ, ರತುಲ್ಲಾಖಾನ್ ಮಸೀದಿ, ಪರಮೇಶ್ವರ ದೇವಸ್ಥಾನ, ನವ್ ಗುಂಬಜ್, ನರಸಿಂಹ ದೇವಸ್ಥಾನ, ಪಾನಿ ಮಹಲ್, ಸಾತ್ ಮಂಜಿಲ್, ಸಿದ್ಧೇಶ್ವರ ದೇವಸ್ಥಾನ, ದೇವರ ನಿಂಬರಗಿ, ಯಾಕುತ್ ದಾಬುಲಿಯ ಸಮಾಧಿ ಮತ್ತು ಮಸೀದಿ, ಆರ್ಕ್-ಕಿಲ್ಲಾ ಇತ್ಯಾದಿ ತಾಣಗಳು ಬಿಜಾಪುರ ಜಿಲ್ಲೆಯಾದ್ಯಂತ ನಿಮಗೆ ಕಾಣಸಿಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

Cyber Crime: ಮಹತ್ವದ ಕಾರ್ಯಾಚರಣೆಯಲ್ಲಿ ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ ತಂಡ ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದೆ. ಸದ್ಯ ವಂಚಕ ಜಾಲಕ್ಕೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

Cyber Crime
Koo

ಬೆಂಗಳೂರು: ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ (Cyber Crime) ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದೆ. ಸದ್ಯ ವಂಚಕ ಜಾಲಕ್ಕೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವಿಶಾಖಪಟ್ಟಣಂ ಮೂಲದ ಈತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ವಂಚಕರ ಜಾಲ ನಕಲಿ ದಾಖಲೆ ನೀಡಿ ಏಜೆಂಟ್‌ಗಳ ಮೂಲಕ ವಿವಿಧ ಕಂಪನಿಗಳ ಸಿಮ್ ಖರೀದಿ ಮಾಡುತ್ತಿತ್ತು. ಬೆಂಗಳೂರು, ಚೆನ್ನೈ, ವಿಶಾಖಪಟ್ಟಣ ಸೇರಿ ದೇಶದ ಬೇರೆ ಬೇರೆ ಮಹಾನಗರಗಳಿಂದ ಸಿಮ್ ಖರೀದಿಸಿ ನಂತರ ಆಕ್ಟೀವ್ ಮಾಡಿ ವಿಯೆಟ್ನಾಂ ಹಾಗೂ ಕಾಂಬೋಡಿಯಾಕ್ಕೆ ಕೊರಿಯರ್ ಮೂಲಕ ಕಳುಹಿಸಲಾಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಚೆನ್ನೈನಿಂದ ಬೆಂಗಳೂರಿಗೆ ಬಳಿಕ ಬೆಂಗಳೂರಿಂದ ವಿಯೆಟ್ನಾಂಗೆ ಸಿಮ್ ರವಾನಿಯಾಗುತ್ತಿತ್ತು. ಜತೆಗೆ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬಂದು ಇಲ್ಲಿಂದ ಕಾಂಬೋಡಿಯಾಗೆ ಸಿಮ್ ಕಳುಹಿಸಲಾಗುತ್ತಿತ್ತು. ಭಾರತದಿಂದ ಕೊರಿಯರ್ ಮೂಲಕ ವಿದೇಶಕ್ಕೆ ಹೋದ ಸಿಮ್‌ಗಳಿಂದ ವಾಟ್ಸಾಪ್‌ ಓಪನ್‌ ಮಾಡಿಕೊಳ್ಳುತ್ತಿದ್ದ ವಂಚಕರು ಬಳಿಕ ಬಲೆ ಬೀಸುತ್ತಿದ್ದರು. ಭಾರತೀಯ ನಂಬರ್‌ಗಳೇ ಇವರ ಟಾರ್ಗೆಟ್‌. ದೇಶದ ಬೇರೆ ಬೇರೆ ಭಾಗದ ಜನರನ್ನು ಸೋಷಿಯಲ್ ಮೀಡಿಯಾ ಮೂಲಕ ಸಂಪರ್ಕಿಸಿ ವಂಚನೆ ನಡೆಸುತ್ತಿತ್ತು.

ವಂಚನೆ ಹೇಗೆ?

ವಾಟ್ಸಾಪ್‌ನಲ್ಲಿ ಷೇರು ಮಾರ್ಕೆಟ್ ಹೂಡಿಕೆ, ಮನೆಯಲ್ಲಿ ಕೂತು ಮಾಡಬಹುದುದಾದ ಪಾರ್ಟ್ ಟೈಂ ಜಾಬ್ ಆಫರ್ ನೀಡುವ ಮೂಲಕ ವಂಚಕರು ಗ್ರಾಹಕರನ್ನು ನಂಬಿಸುತ್ತಿದ್ದರು. ಆರೋಪಿಗಳು ಕಳುಹಿಸುವ ಜಾಹೀರಾತು ನಂಬಿ ಲಿಂಕ್ ಒಪನ್ ಮಾಡಿದರೆ, ಓಟಿಪಿ ಶೇರ್ ಮಾಡಿದರೆ ಸಾಕು ವಂಚಕರು ಹಣ ಎಗರಿಸುತ್ತಿದ್ದರು. ಸದ್ಯ ವಂಚಕ ಜಾಲಕ್ಕೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಈಶಾನ್ಯ ಸೈಬರ್ ಕ್ರೈಂ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಬೆನ್ನಲ್ಲೇ ನಡೆದ ಅಂಜಲಿ ಹತ್ಯೆ ಪ್ರಕರಣ (Anjali Murder Case) ಅವಳಿ ನಗರದ ಜನರನ್ನು ಬೆಚ್ಚಿ ಬೀಳಿಸಿದೆ. ಅಂಜಲಿ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್‌ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿದ ಬೆನ್ನಲ್ಲೇ ಇದೀಗ ಐಪಿಎಸ್ ಅಧಿಕಾರಿಯ ತಲೆದಂಡವಾಗಿದೆ. ಕಾನೂನು ಸುವ್ಯವಸ್ಥೆ‌ ಕಾಪಾಡುವಲ್ಲಿ ಲೋಪ ಎಸಗಿದ್ದರಿಂದ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅಮಾನತುಗೊಂಡಿದ್ದಾರೆ.

ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗೃಹ ಸಚಿವರು ಹುಬ್ಬಳ್ಳಿ‌ಗೆ ಭೇಟಿ ನೀಡುವ ಮುನ್ನಾ ಅಮಾನತು ಆದೇಶ ಹೊರಬಿದ್ದಿದ್ದು, ಸೋಮವಾರ ಹುಬ್ಬಳ್ಳಿಗೆ ಗೃಹ ಸಚಿವ ಪರಮೇಶ್ವರ್ ಆಗಮಿಸಲಿದ್ದಾರೆ. ಹುಬ್ಬಳ್ಳಿಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ವಿರುದ್ಧ ಕ್ರಮವಾಗಿದೆ. ಇನ್ನು ಈ ಪ್ರಕರಣದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತರ ತಲೆದಂಡವೂ ಆಗಲಿದೆ ಎನ್ನಲಾಗುತ್ತಿದೆ.

Continue Reading

ಐಪಿಎಲ್ 2024

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

IPL 2024: ಶನಿವಾರ ನಡೆದ ಐಪಿಎಲ್‌ 2024 (IPL 2024)ರ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಮಣಿಸಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊನೆಗೂ ಹಾಲಿ ಚಾಂಪಿಯನ್‌ ಚೆನ್ನೈಯನ್ನು 27 ರನ್‌ಗಳ ಅಂತರದಿಂದ ಸೋಲಿಸುವುದರೊಂದಿಗೆ ಆರ್‌ಸಿಬಿ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡು ಬಂತು.

VISTARANEWS.COM


on

IPL 2024
Koo

ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಗಳು ಗೆಲುವಿನ ನಿಟ್ಟುಸಿರು ಬಿಟ್ಟಿದ್ದಾರೆ. ಶನಿವಾರ ನಡೆದ ಐಪಿಎಲ್‌ 2024 (IPL 2024)ರ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK)​ ತಂಡವನ್ನು ಮಣಿಸಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿದೆ. ಅಭಿಮಾನಿಗಳು ಈ ಪಂದ್ಯವನ್ನು ಅಕ್ಷರಶಃ ಫೈನಲ್‌ ಎಂದೇ ಪರಿಗಣಿಸಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊನೆಗೂ ಹಾಲಿ ಚಾಂಪಿಯನ್‌ ಚೆನ್ನೈಯನ್ನು 27 ರನ್‌ಗಳ ಅಂತರದಿಂದ ಸೋಲಿಸುವುದರೊಂದಿಗೆ ಆರ್‌ಸಿಬಿ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡು ಬಂತು.

ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿಯದ್ದೇ ಹವಾ

ಇನ್ನು ಸೋಷಿಯಲ್‌ ಮೀಡಿಯಾದಲ್ಲಂತೂ ಆರ್‌ಸಿಬಿ ಹವಾ ಕಂಡು ಬಂದಿದೆ. ಸತತ ಸೋಲಿನ ಬಳಿಕ ಗ್ರೇಟ್‌ ಕಂಬ್ಯಾಕ್‌ ಎಂದೆಲ್ಲ ಫ್ಯಾನ್ಸ್‌ ಹೊಗಳುತ್ತಿದ್ದಾರೆ. ಮೊದಲ 8 ಪಂದ್ಯಗಳ ಪೈಕಿ 1ರಲ್ಲಿ ಮಾತ್ರ ಗೆಲುವು ಒಲಿದಿತ್ತು. ಆದರೆ ಬಳಿಕದ 6 ಪಂದ್ಯಗಳ ಪೈಕಿ 6ರಲ್ಲಿಯೂ ಗೆಲುವು ಸಾಧಿಸಿದ್ದೇವೆ. ಇದು ನಿಜವಾದ ಹೊಸ ಅಧ್ಯಾಯ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. ನಿಜವಾಗಿಯೂ ಒಂದು ಥ್ರಿಲ್ಲರ್‌ ಸಿನಿಮಾ ನೋಡಿದ ಅನುಭವವಾಯಿತು ಎಂದು ಪಂದ್ಯ ಮುಗಿದ ಬಳಿಕ ರೋಮಾಂಚಿತರಾದ ಆರ್‌ಸಿಬಿಯ ಕಟ್ಟಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 6 ಸತತ ಗೆಲುವಿನ ಮೂಲಕ ಪ್ಲೇ ಆಫ್‌ ಪ್ರವೇಶಿಸುವುದು ಸುಲಭದ ಮಾತಲ್ಲ. ಅತ್ಯುತ್ತಮ ಪ್ರದರ್ಶನ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಮತ್ತೆ ಸದ್ದು ಮಾಡುತ್ತಿದೆ ಈ ಸಲ ಕಪ್‌ ನಮ್ದೆ

ಬ್ಯಾಕ್‌ ಟು ಬ್ಯಾಕ್‌ ಗೆಲುವಿನ ಮೂಲಕ ರಾಯಲ್‌ ಆಗಿಯೇ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಈ ಸಲ ಜಪ್‌ ನಮ್ದೆ ಘೋಷ ವಾಕ್ಯ ಮತ್ತೆ ಮೊಳಗತೊಡಗಿದೆ. ಈ ಹಿಂದೆ ಆರ್‌ಸಿಬಿ ಮಹಿಳಾ ತಂಡ ಕಪ್‌ ಜಯಿಸಿತ್ತು. ಇದೀಗ ಪುರುಷರ ತಂಡದ ಸರದಿ ಎಂಬ ಲೆಕ್ಕಾಚಾರವೂ ಶುರುವಾಗಿದೆ.

ಇದನ್ನೂ ಓದಿ: RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

ಹೊರ ಬಿದ್ದ ಚೆನ್ನೈ

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

ಈ ಅಪರಾಧಗಳ ನಡುವೆ ಎದ್ದು ಕಾಣಿಸುತ್ತಿರುವುದು, ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಹೆಚ್ಚಳ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ಇತ್ತೀಚಿನ ನಿದರ್ಶನಗಳಾಗಿವೆ. ಇನ್ನೂ ಹತ್ತು ಹಲವನ್ನು ಉದಾಹರಿಸಬಹುದು. ರಾಜ್ಯದಲ್ಲಿ ಪೊಲೀಸ್ ಇಲಾಖೆ ಹಿಂದೆಂದೂ ಇಲ್ಲದಷ್ಟು ದುರ್ಬಲವಾದಂತೆ ಕಾಣುತ್ತಿದೆ.

VISTARANEWS.COM


on

Karnataka Police
Koo

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National crime records bureau- NCRB) ಇತ್ತೀಚೆಗಿನ ಅಪರಾಧಗಳ ಅಂಕಿ ಅಂಶವನ್ನು ಪ್ರಕಟಿಸಿದ್ದು, ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ (crimes) ಸಂಖ್ಯೆ ಮಿತಿ ಮೀರಿ ಹೆಚ್ಚಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಕಳೆದ ಜನವರಿಯಿಂದ ಏಪ್ರಿಲ್‌ವರೆಗೆ ಏರಿಕೆ ಪ್ರಮಾಣದಲ್ಲಿ ಕೊಲೆ (murder), ಅತ್ಯಾಚಾರ (physical abuse), ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು (Pocso) ನಡೆದಿವೆ. 2024ರ ಜನವರಿಯಿಂದ ಏಪ್ರಿಲ್ 30ರವರೆಗೆ ಅಂದರೆ 4 ತಿಂಗಳಲ್ಲಿ ಸುಮಾರು 430 ಕೊಲೆಗಳು (Murder), 198 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2327 ಮಹಿಳೆಯರ ಮೇಲೆ ದೌರ್ಜನ್ಯ, 1262 ಮಕ್ಕಳ ಮೇಲೆ ದೌರ್ಜನ್ಯ, 7421 ಸೈಬರ್ ಕ್ರೈಂ, 450 ರಾಬರಿಗಳು ಸಂಭವಿಸಿವೆ. ಲೈಂಗಿಕ ದೌರ್ಜನ್ಯ ಹಾಗೂ ಸೈಬರ್ ವಂಚನೆ (cyber crime) ಗಗನಕ್ಕೆ ಏರಿವೆ. ಹಲ್ಲೆ, ಮಾರಣಾಂತಿಕ ಹಲ್ಲೆ ಕೇಸ್‌ಗಳು ಅಧಿಕವಾಗುತ್ತಾ ಸಾಗುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ.

ಎಂದಿನಂತೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಈ ಅಸ್ತ್ರವನ್ನು ಹಿಡಿದುಕೊಂಡು ಸರ್ಕಾರದ ಮೇಲೆ ದಾಳಿಗೆ ಇಳಿದಿವೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡೊಂಬೊಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯಾ?” ಎಂದು ವಿಪಕ್ಷ ನಾಯಕರು ಟೀಕಿಸಿದ್ದಾರೆ. ಜನಸಾಮಾನ್ಯರ ಮನದಲ್ಲಿರುವ ಪ್ರಶ್ನೆಯನ್ನೇ ಅವರು ಕೇಳಿದ್ದಾರೆ ಎನ್ನಬೇಕು. ಈ ಪ್ರಶ್ನೆಯನ್ನು ಕೇಳಿ ಅರ್ಧದಲ್ಲೇ ಕೈಬಿಡಬಾರದು. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವತ್ತ ಪ್ರಯತ್ನಿಸಬೇಕು. ಗೃಹ ಸಚಿವರು, ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಮಾಡಬೇಕು.

ಆದರೆ ಗೃಹ ಸಚಿವರು ಇದನ್ನು ಒಂದು ವಿಷಯವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. “ಒಂದೊಂದು ಘಟನೆಗೂ ಒಂದೊಂದು ಕಾರಣ ಅಂತ ಇರುತ್ತದೆ. ಅವರ (ಪ್ರತಿಪಕ್ಷದ) ಕಾಲದಲ್ಲಿ ಎಷ್ಟು ಮರ್ಡರ್ ಆಗಿತ್ತು ಅಂತೆ ಹೇಳಿದರೆ ಯಾವ ಸರ್ಕಾರದಲ್ಲಿ ಸುರಕ್ಷತೆ ಇತ್ತು ಅನ್ನೋದು ತಿಳಿಯುತ್ತೆ” ಎಂದಿದ್ದಾರೆ. “ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಇವರನ್ನು ಹೇಳ್ಕೊಂಡು, ಕೇಳ್ಕೊಂಡು ಸರ್ಕಾರ ಕಾನೂನು ಸುವ್ಯವಸ್ಥೆ ಮಾಡೋಕೆ ಆಗೊಲ್ಲ. ಏನು ಕ್ರಮ ಬೇಕಾದ್ರೂ ತಗೊಳ್ತೇವೆ” ಎಂದಿದ್ದಾರೆ. ಇದು ಒಬ್ಬರು ಇನ್ನೊಬ್ಬರ ಮೇಲೆ ದೂರು ಹಾಕಿ ಮುಗಿಸಬೇಕಾದ ಸಂಗತಿಯಲ್ಲ. ಯಾರೂ ಇಂಥ ವಿಚಾರಗಳಲ್ಲಿ ಸುಮ್ಮಸುಮ್ಮನೆ ಆರೋಪ ಮಾಡುವುದಿಲ್ಲ. ಮೇಲಾಗಿ, ಇದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಒದಗಿಸಿದ ಅಂಕಿಸಂಖ್ಯೆಗಳನ್ನು ಆಧರಿಸಿದೆ. ಹೀಗಾಗಿ ಆಳುವವರು ಇದನ್ನು ಗಂಭೀರವಾಗಿಯೇ ಪರಿಗಣಿಸಬೇಕಿದೆ.

ಈ ಅಪರಾಧಗಳ ನಡುವೆ ಎದ್ದು ಕಾಣಿಸುತ್ತಿರುವುದು, ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಹೆಚ್ಚಳ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ, ಅಂಜಲಿ ಅಂಬಿಗೇರ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ಇತ್ತೀಚಿನ ನಿದರ್ಶನಗಳಾಗಿವೆ. ಇನ್ನೂ ಹತ್ತು ಹಲವನ್ನು ಉದಾಹರಿಸಬಹುದು. ಹುಬ್ಬಳ್ಳಿಯಲ್ಲಿ ಕೊಲೆ ಮಾಡಿದವನು ಅಂಜಲಿ ಕೊಲೆ ಮಾಡಿದವನು, ತಾನು ನೇಹಾ ಕೊಲೆ ಮಾದರಿಯಲ್ಲಿ ಕೊಲ್ಲುತ್ತೇನೆ ಎಂದು ಮೊದಲೇ ಹೇಳಿಯೇ ಇದನ್ನು ಮಾಡುತ್ತಾನೆ. ಇದನ್ನು ಪೊಲೀಸರ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುವುದಿಲ್ಲ. ಅಂದರೆ ಇಲ್ಲಿ ಪೊಲೀಸರು ಎಷ್ಟು ಕಾರ್ಯಪ್ರವೃತ್ತರಾಗಿದ್ದಾರೆ ಎಂಬ ಅಂದಾಜು ಸಿಗುತ್ತದೆ. ಬಡವರು ಅನ್ಯಾಯಕ್ಕೊಳಗಾದರೆ ಕೇಳುವವರೇ ಇಲ್ಲವೇ? ಇಲ್ಲಿ ಪ್ರಜ್ವಲ್‌ ರೇವಣ್ಣನಂಥ ಪ್ರಭಾವಿ ಅಪರಾಧಿಗಳನ್ನು ರಾಜಕೀಯ ಕಾರಣಗಳಿಗಾಗಿ ಬೆನ್ನು ಹತ್ತಲಾಗುತ್ತದೆ; ಆದರೆ ಶ್ರೀಸಾಮಾನ್ಯರಿಗೆ ಇಲ್ಲಿ ಯಾವ ರಕ್ಷಣೆಯೂ ಇಲ್ಲವೇ? ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ನೂರಾರು ಹೆಣ್ಣು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಹರಿಬಿಡಲಾಗಿದೆ. ನೂರಾರು ಕುಟುಂಬಗಳನ್ನು ಛಿದ್ರಗೊಳಿಸುವಂತಹ ಇಂಥ ಅಪರಾಧಿಗಳ ಮೇಲೆ ಯಾವ ಕ್ರಮವೂ ಇಲ್ಲ! ಬದಲಾಗಿ ಅವರನ್ನು ರಕ್ಷಿಸಲಾಗುತ್ತಿದೆ.

ಇವೆಲ್ಲವೂ ಅಪಾಯಕಾರಿ ಬೆಳವಣಿಗೆ. “ಹೆಣ್ಣು ನಡುರಾತ್ರಿಯಲ್ಲಿ ಒಬ್ಬಳೇ ಓಡಾಡುವಂತಾದರೆ ದೇಶ ಸ್ವತಂತ್ರವಾದುದಕ್ಕೆ ಸಾರ್ಥಕ” ಎಂದು ಗಾಂಧೀಜಿ ಹೇಳಿದ್ದರಂತೆ. ನಡುರಾತ್ರಿಯಲ್ಲಿ ಬೇಡ, ನಡುಹಗಲಿನಲ್ಲಾದರೂ ಸುರಕ್ಷಿತವಾಗಿ ಓಡಾಡುವಂತಾದರೆ ಸಾಕು! ಕಾಲೇಜಿಗೆ ಹೋಗುವುದು, ಮನೆಯಲ್ಲಿರುವುದು ಮುಂತಾದ ಸರಳ ಕ್ರಿಯೆಗಳ ಸಂದರ್ಭದಲ್ಲಿ ಕೂಡ ಪಾತಕಿಗಳು ದಾಳಿ ನಡೆಸುತ್ತಾರೆ ಎಂದರೆ ಏನು ಹೇಳೋಣ? ಬೆಂಗಳೂರಿನ ಬೀದಿಗಳಲ್ಲಿ ರೌಡಿ ಶೀಟರ್‌ಗಳು ಯಾರ ಭಯವಿಲ್ಲದೆ ಗ್ಯಾಂಗ್‌ ಕಟ್ಟಿಕೊಂಡು ಹೊಡೆದಾಡುವುದು, ಸರ ಎಗರಿಸುವುದು, ಹಲ್ಲೆ, ಬೈಕ್‌ ವ್ಹೀಲಿಂಗ್‌ ನಡೆಸುತ್ತಿದ್ದಾರೆ. ಗೃಹ ಇಲಾಖೆ ದುರ್ಬಲವಾದಾಗ, ಪುಂಡರಿಗೆ ರಾಜಕಾರಣಿಗಳೇ ಕುಮ್ಮಕ್ಕು ನೀಡಿದಾಗ ಇಂಥ ಪ್ರವೃತ್ತಿ ಹೆಚ್ಚುತ್ತದೆ. ಇದಕ್ಕೆ ಈಗಲೇ ಕಡಿವಾಣ ಹಾಕದೆ ಹೋದರೆ ಮುಂದಿನ ದಿನಗಳ ದುರ್ಭರವಾಗಲಿವೆ.

ಇದನ್ನೂ ಓದಿ: Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Continue Reading
Advertisement
Arvind Kejriwal
ದೇಶ11 mins ago

Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Cyber Crime
ಕ್ರೈಂ21 mins ago

Cyber Crime: ಸೈಬರ್ ಕ್ರೈಂ ಜಾಲ ಪತ್ತೆ; ಬಲೆಗೆ ಬಿದ್ದ ಸಿಮ್ ಕಾರ್ಡ್ ಪೂರೈಸುತ್ತಿದ್ದ ವ್ಯಕ್ತಿ

ಸೈಬರ್‌ ಸೇಫ್ಟಿ cyber safety rules
ಅಂಕಣ34 mins ago

ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Swati Maliwal Case
ದೇಶ1 hour ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 20241 hour ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ1 hour ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ1 hour ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ2 hours ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ2 hours ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ2 hours ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌