Contaminated Water : ಕವಾಡಿಗರಹಟ್ಟಿ ದುರಂತದಲ್ಲಿ 5ನೇ ಸಾವು; ಆಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು? - Vistara News

ಕರ್ನಾಟಕ

Contaminated Water : ಕವಾಡಿಗರಹಟ್ಟಿ ದುರಂತದಲ್ಲಿ 5ನೇ ಸಾವು; ಆಡಳಿತದ ದಿವ್ಯ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು?

Contaminated water : ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ನಡೆದ ವಿಷನೀರು ದುರಂತದಲ್ಲಿ ಐದನೇ ಸಾವು ಸಂಭವಿಸಿದೆ. ಇನ್ನೂ ಹಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇದರ ಜತೆಗೆ ಘಟನೆಯ ಸಂಪೂರ್ಣ ಚಿತ್ರಣ ಇಲ್ಲಿದೆ.

VISTARANEWS.COM


on

Contaminated water
ಚಿತ್ರದುರ್ಗ ಕವಾಡಿಗರ ಹಟ್ಟಿ ಕಲುಷಿತ ನೀರು ದುರಂತದಲ್ಲಿ ಮೃತಪಟ್ಟ ದುರ್ದೈವಿಗಳು: ಪಾರ್ವತಮ್ಮ, ಮಂಜುಳಾ, ರಘು, ಪ್ರವೀಣ್‌ ಮತ್ತು ರುದ್ರಪ್ಪ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ (Chitradurga News) ಕವಾಡಿಗರ ಹಟ್ಟಿಯಲ್ಲಿ ಸಂಭವಿಸಿದ ಕಲುಷಿತ ನೀರು (Contaminated Water) ದುರಂತದಲ್ಲಿ ಐದನೇ ಸಾವು ಸಂಭವಿಸಿದೆ. ಇನ್ನೂ ನಾಲ್ಕಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಇಷ್ಟೆಲ್ಲ ಸಾಲು ಸಾಲು ಸಾವುಗಳು ಸಂಭವಿಸಿದರೂ ಸರ್ಕಾರವಾಗಲೀ, ಆಡಳಿತವಾಗಲೀ ಇದನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಈ ವಿಷಪ್ರಾಶನ (Poisoning Case) ಪ್ರಕರಣದ ಹಿಂದಿರುವ ಜಾತಿ ವೈಷಮ್ಯದ (Caste revenge) ಬಗ್ಗೆಯಾಗಲೀ, ಇದರಲ್ಲಿ ಭಾಗಿಯಾದ ದುಷ್ಟರ ವಿಚಾರವಾಗಲೀ ಯಾರೂ ಚಕಾರವೆತ್ತದೆ ಕೇವಲ ನೀರಿನ ಪರೀಕ್ಷೆಯಲ್ಲಿ ಮತ್ತು ಕೆಲವರ ಅಮಾನತು ಸರ್ಕಸ್‌ನಲ್ಲಿ ನಿರತವಾಗಿದೆ. ಈ ಕುರಿತು ಜನಾಕ್ರೋಶ ಭುಗಿಲೆದ್ದಿದ್ದರೂ ಕಣ್ಣೆದುರು ಸಂಭವಿಸುತ್ತಿರುವ ಸರಣಿ ಸಾವಿನ ನಡುವೆ ಅಲ್ಲಿ ಭಯವೇ ಆವರಿಸಿದೆ.

ಭಾನುವಾರ ರಾತ್ರಿ ಇಲ್ಲಿ ನೀರು ಸೇವಿಸಿದ ಸುಮಾರು 40ಕ್ಕೂ ಅಧಿಕ ಮಂದಿಯಲ್ಲಿ ವಾಂತಿ ಮತ್ತು ಅತಿಸಾರ ಕಾಣಿಸಿಕೊಂಡಿತ್ತು. ಅವರನ್ನು ಚಿತ್ರದುರ್ಗದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ, ಹಾಗೂ ಕೆಲವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದಾದ ಬಳಿಕವೂ ಹಲವರಲ್ಲಿ ಸಮಸ್ಯೆ ಕಾಣಿಸಿಕೊಂಡು ಈಗ ಒಟ್ಟು 54 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಮಧ್ಯೆ ಐವರು ಆಗಲೇ ಪ್ರಾಣ ಕಳೆದುಕೊಂಡಿದ್ದಾರೆ.

Those who fell ill after consuming contaminated water
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು

ಮೃತಪಟ್ಟ ದುರ್ದೈವಿಗಳು

  1. ಮಂಜುಳಾ: ಕವಾಡಿಗರಹಟ್ಟಿಯಲ್ಲಿ ನಡೆದ ದುರಂತದಲ್ಲಿ ಮೊದಲು ಮೃತಪಟ್ಟಿದ್ದು ಮಂಜುಳಾ ಎಂಬ 27 ವರ್ಷದ ಯುವತಿ. ನೀರು ಕುಡಿದ ಬಳಿಕ ಅಸ್ವಸ್ಥಗೊಂಡ ಹಲವರಲ್ಲಿ ಆಕೆ ಒಬ್ಬರು. ಆದರೆ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
  2. ರಘು : ಕವಾಡಿಗರ ಹಟ್ಟಿಯ ರಘು (26) ಭಾನುವಾರ ದುರಂತ ನಡೆದ ದಿನ ರಾತ್ರಿ ಮನೆಯಲ್ಲಿ ಊಟ ಮಾಡಿ ಕೆಲಸದ ನಿಮಿತ್ತ ಬೆಂಗಳೂರು ಬಸ್‌ ಹತ್ತಿದ್ದರು. ಆದರೆ, ಬೆಳಗ್ಗೆ ಬೆಂಗಳೂರಿನಲ್ಲಿ ಇಳಿದಾಗ ವಾಂತಿ ಬೇಧಿ ಶುರುವಾಗಿತ್ತು. ಅಷ್ಟು ಹೊತ್ತಿಗೆ ಅವರಿಗೆ ಊರಿನಲ್ಲಿ ನಡೆದ ಘಟನಾವಳಿಗಳ ವಿವರ ದೊರಕಿತ್ತು. ಕೂಡಲೇ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸೇರಿದರು. ಆದರೆ, ಅಲ್ಲೂ ಅವರ ಪ್ರಾಣ ಉಳಿಯಲಿಲ್ಲ.
  3. ಪ್ರವೀಣ್‌: ವಡ್ಡರಸಿದ್ದವ್ವನ ಹಳ್ಳಿಯ ಪ್ರವೀಣ್‌ ಕಲುಷಿತ ನೀರಿಗೆ ನಡೆದ ಮೂರನೇ ಬಲಿ. ಪ್ರವೀಣ್‌ ಅವರು ಭಾನುವಾರ ರಾತ್ರಿ ಕವಾಡಿಗರ ಹಟ್ಟಿಗೆ ಬಂದಿದ್ದು, ಅಲ್ಲಿ ನೀರು ಕುಡಿದಿದ್ದರು. ಅವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೂ ಪ್ರಾಣ ಉಳಿಯಲಿಲ್ಲ.
  4. ರುದ್ರಪ್ಪ: ಕವಾಡಿಗರ ಹಟ್ಟಿ ನಿವಾಸಿ ರುದ್ರಪ್ಪ (57) ಅವರು ಶುಕ್ರವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಸಾವಿಗೀಡಾಗಿದ್ದಾರೆ. ಕಳೆದ ಮೂರು ದಿನದಿಂದ ಇವರು ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
  5. ಪಾರ್ವತಮ್ಮ: ಕವಾಡಿಗರ ಹಟ್ಟಿಯ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಪಾರ್ವತಮ್ಮ (60) ಅವರು ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಭಾನುವಾರ ಅಸ್ವಸ್ಥರಾಗಿದ್ದ ಪಾರ್ವತಮ್ಮ ಅವರು ಬಳಿಕ ಸ್ವಲ್ಪ ಗುಣಮುಖರಾಗಿ ಮನೆಗೆ ಹೋಗಿದ್ದರು. ಅವರು ಪಾರ್ಶ್ವ ವಾಯು ಪೀಡಿತರಾಗಿರುವುದರಿಂದ ಅವರಿಗೆ ಕಳೆದ ಮೂರು ದಿನಗಳಿಂದ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಸಾವೂ ಸಂಭವಿಸಿದೆ.

ಇನ್ನೂ ಹದಿನಾರು ಮಂದಿ ಐಸಿಯುನಲ್ಲಿ?

ಕಲುಷಿತ ನೀರು ಸೇವಿಸಿ ಸುಮಾರು 54 ಮಂದಿ ಅಸ್ವಸ್ಥರಾಗಿದ್ದು, ಅವರ ಪೈಕಿ ಇನ್ನೂ 16 ಮಂದಿಯ ಸ್ಥಿತಿ ಗಂಭೀರವಾಗಿಯೇ ಇದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಪ್ರಾಣ ಕಳೆದುಕೊಂಡ ಪಾರ್ವತಮ್ಮ ಅವರ ಮನೆಯವರೇ ಒಂಬತ್ತು ಮಂದಿ ಆಸ್ಪತ್ರೆಯಲ್ಲಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂಬ ಮಾಹಿತಿ ಇದೆ. ಪಾರ್ವತಮ್ಮ ಅವರ ಮೊಮ್ಮಗು ಒಂದು ವರ್ಷದ ಪುಟ್ಟ ಮಗು ಕೂಡಾ ಆಸ್ಪತ್ರೆಗೆ ದಾಖಲಾಗಿದೆ.

ಇನ್ನೂ ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ, ಸರ್ಕಾರ

ಇಷ್ಟೊಂದು ಭಯಾನಕ ದುರಂತ ಸಂಭವಿಸಿದ್ದರೂ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಈ ಪ್ರಕರಣದ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರ ಮೇಲೆ ಗಂಭೀರ ಆರೋಪವಿದೆ. ಇದರ ಜತೆಗೆ ರಾಜಕಾರಣಿಗಳು ಕೂಡಾ ಇದರ ಬಗ್ಗೆ ಕನಿಷ್ಠ ಕಾಳಜಿಯನ್ನೂ ವ್ಯಕ್ತಪಡಿಸಿಲ್ಲ.

ಇದೊಂದು ಜಾತಿವೈಷಮ್ಯದಿಂದ ನಡೆದ ಕೃತ್ಯ ಎಂದು ಸಾರ್ವಜನಿಕರು ಸಾರಿ ಸಾರಿ ಹೇಳುತ್ತಿದ್ದರೂ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಅದೊಂದು ವಿಷಯ ಬಿಟ್ಟು ಉಳಿದೆಲ್ಲ ಕೆಲಸಕ್ಕೆ ಬಾರದ ಸಂಗತಿಗಳ ತಪಾಸಣೆಯಲ್ಲಿ ಕಾಲ ಕಳೆದಿದೆ. ನೀರಿನ ತಪಾಸಣೆಗೆ ಮಾಡಿದ ಹಲವು ಪ್ರಯತ್ನಗಳಲ್ಲಿ ಯಾವ ವರದಿಯೂ ಸರಿಯಾಗಿ ಬಂದಿಲ್ಲ.

Water pollution

ಎಡವಟ್ಟು ವರದಿಗಳು

  1. ನೀರು ಕುಡಿದ ಮಂದಿ ಅಸ್ವಸ್ಥರಾಗಲು ಕಾರಣ ಅದರಲ್ಲಿ ಕಾಲರಾ ರೋಗ ಹರಡುವ ವೈರಸ್‌ ಇದ್ದಿದ್ದು ಎಂಬ ವರದಿ ಬಂದಿದೆ ಎಂದು ಸಹಾಯಕ ಕಮೀಷನರ್‌ ಕಾರ್ತಿಕ್‌ ಹೇಳಿದ್ದರು. ಆದರೆ, ಕಾಲರಾ ಅಂಶ ಕಂಡುಬಂದಿದ್ದು ಎಂಟು ಮಂದಿಯಲ್ಲಿ ಐವರಲ್ಲಿ ಮಾತ್ರ. ಕಾಲರಾವೇ ಆಗಿದ್ದರೆ ಎಲ್ಲರಲ್ಲೂ ಕಾಲರಾ ಅಂಶ ಕಾಣಿಸಿಕೊಳ್ಳಬೇಕಿತ್ತು. ನೀರಿನಲ್ಲಿ ವೈರಸ್‌ ಪತ್ತೆಯಾಗಿಬೇಕಿತ್ತು.
  2. ಜಿಲ್ಲಾ ಸರ್ವೇಕ್ಷಣಾ ಘಟಕದ ವರದಿಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಎಂಬ ವರದಿ ಬಂದಿದೆ.
  3. ಆದರೆ FSL ವರದಿಯಲ್ಲಿ ಯಾವುದೇ ವಿಷಕಾರಿ ಅಂಶ ಇಲ್ಲ ಎಂದು ಹೇಳಲಾಗಿದೆ.

ಒಂದೊಂದು ವರದಿ ಒಂದೊಂದು ಕಥೆ ಹೇಳುತ್ತಿದೆ. ಹಾಗಿದ್ದರೆ ನಿಜಕ್ಕೂ ಈ ರೀತಿ ಸಾವು ಸಂಭವಿಸಲು ಕಾರಣವೇನು ಎನ್ನುವ ಬಗ್ಗೆ ಯಾರಿಗೂ ಸ್ಪಷ್ಟತೆ ಇಲ್ಲ. ಇದು ಕುಡಿಯಲು ಯೋಗ್ಯವಲ್ಲದ ನೀರು ಎಂಬ ಕಾರಣಕ್ಕೆ ಈಗ ಊರಿಗೆ ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.

ಶಾಸಕರು, ಕೌನ್ಸಿಲರ್‌ ಎಲ್ಲರೂ ನಾಪತ್ತೆ

ಇಷ್ಟೊಂದು ದೊಡ್ಡ ಘಟನೆ ನಡೆದರೂ ಚಿತ್ರದುರ್ಗ ಶಾಸಕರಾಗಿರುವ ವೀರೇಂದ್ರ ಪಪ್ಪಿ ಅವರು ಆ ಕಡೆ ತಲೆ ಹಾಕಿ ಕೂಡಾ ಮಲಗಿರಲಿಲ್ಲ. ಗೋವಾ ಟ್ರಿಪ್‌ನಲ್ಲಿದ್ದ ವೀರೇಂದ್ರ ಪಪ್ಪಿ ಅವರು ಘಟನೆ ನಡೆದು ನಾಲ್ಕನೇ ದಿನ ʻಓಡೋಡಿʼ ಬಂದಿದ್ದಾರೆ. ಎಲ್ಲಿ ಶಾಸಕರು ಎಂದು ಕೇಳುತ್ತಿದ್ದ ಜನರು ಅವರು ಬಂದಾಗ ಪ್ರತಿಭಟನೆ ನಡೆಸಿದ್ದಾರೆ.

ಇದರ ನಡುವೆ ಆ ಪ್ರದೇಶದ ಕೌನ್ಸಿಲರ್‌ ಜಯಣ್ಣ ಘಟನೆ ನಡೆದು ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ. ಘಟನೆ ನಡೆದ ದಿನದಿಂದ ಅವರು ಕಣ್ಮರೆ ಆಗಿರುವುದೇಕೆ ಎನ್ನುವುದು ಭಾರಿ ನಿಗೂಢವಾಗಿದೆ. ಅವರು ಎಲ್ಲಿದ್ದರೂ ತಕ್ಷಣ ಬರಬೇಕು ಎಂದು ಆಗ್ರಹಿಸಿ ಜನರು ರಸ್ತೆಯಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ್ದರು.

Contaminated water
ನಾಪತ್ತೆಯಾಗಿರುವ ಜಯಣ್ಣ ಮತ್ತು ಜನರ ಪ್ರತಿಭಟನೆ

ಪಂಪ್‌ ಆಪರೇಟರ್‌ ಸೇರಿ ಐವರು ಅಮಾನತು

ಈ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ಇದೀಗ ಪಂಪ್‌ ಆಪರೇಟರ್‌ ಸೇರಿ ಐವರನ್ನು ಸಸ್ಪೆಂಡ್‌ ಮಾಡಲಾಗಿದೆ. ನಗರಸಭೆಯ ಸಿಬ್ಬಂದಿ ಪ್ರಕಾಶ್ ಬಾಬು, ಪಂಪ್ ಆಪರೇಟರ್, ವಾಲ್ ಮ್ಯಾನ್ ಪ್ರಕಾಶ್, ನೀರಗಂಟಿ ಸುರೇಶ್ ಅಮಾನತಾಗಿದ್ದಾರೆ. AEE ಮಂಜುನಾಥ್ ರೆಡ್ಡಿ, JE ಕಿರಣ್ ಅಮಾನತಿಗೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಇನ್ನೂ ತನಿಖೆ ನಡೆಯದ ಜಾತಿ ವೈಷಮ್ಯ

ಇಷ್ಟೆಲ್ಲ ಘಟನಾವಳಿಗಳ ನಡುವೆ ಪ್ರಕರಣವನ್ನು ಬೇರೆ ಬೇರೆ ಕೋನಗಳಲ್ಲಿ ತನಿಖೆ ನಡೆಸಿ ಮೂಲ ಕಾರಣವನ್ನು ಮರೆತು ಮುಚ್ಚಿ ಹಾಕಲಾಗುತ್ತಿದೆ ಎಂಬ ಆರೋಪ ಗಂಭೀರವಾಗಿ ಕೇಳಿಬರುತ್ತಿದೆ. ಎಸ್‌ಟಿ ಸಮುದಾಯ ವಾಸಿಸುತ್ತಿರುವ ಕವಾಡಿಗರ ಹಟ್ಟಿಗೆ ಈ ರೀತಿಯ ಕಲುಷಿತ ವಿಷಪೂರಿತ ನೀರು ಬಂದಿದ್ದು ಹೇಗೆ ಎಂಬ ಪ್ರಶ್ನೆಗೆ ಯಾರೂ ಉತ್ತರ ನೀಡುತ್ತಿಲ್ಲ. ಪಕ್ಕದಲ್ಲೇ ಇರುವ ಲಿಂಗಾಯತರ ವಸತಿ ಪ್ರದೇಶಕ್ಕೆ ಸರಿಯಾದ ನೀರು ಹೋಗುತ್ತದೆ. ಎಸ್‌ಟಿ ಸಮುದಾಯದ ಹಟ್ಟಿಗೆ ವಿಷದ ನೀರು ಬಂದಿದ್ದು ಹೇಗೆ ಎನ್ನುವ ಪ್ರಶ್ನೆಯನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ.

ನೀರುಗಂಟಿಯಾಗಿರುವ ಸುರೇಶ್‌ ಈ ಪ್ರಕರಣದ ಪ್ರಧಾನ ಆರೋಪಿ ಎನ್ನುವುದು ಎಲ್ಲರ ಆರೋಪ. ಇದಕ್ಕೆ ಸಾಕಷ್ಟು ಪುರಾವೆಗಳು ಇವೆ. ಅದೇನೆಂದರೆ, ಸುರೇಶ್‌ ಮಗಳ ಮದುವೆ!. ಸುರೇಶ್‌ ಲಿಂಗಾಯತ ಸಮುದಾಯದವರು. ಅವರ ಮಗಳನ್ನು ಈ ಊರಿನ ಎಸ್‌ಟಿ ಸಮುದಾಯದ ಯುವಕನೊಬ್ಬ ಪ್ರೀತಿ ಮಾಡುತ್ತಿದ್ದ. ಇದನ್ನು ಸುರೇಶ್‌ ವಿರೋಧಿಸಿದ್ದರು. ಆದರೆ, ಸುರೇಶ್‌ ಅವರನ್ನು ಧಿಕ್ಕರಿಸಿ ಈ ಜೋಡಿ ಕೆಲವು ದಿನಗಳ ಹಿಂದೆ ಮದುವೆ ಮಾಡಿಕೊಂಡಿದೆ. ಈ ಪ್ರೀತಿ ಮತ್ತು ಮದುವೆ ವಿಚಾರವಾಗಿ ಕಳೆದ ವಾರ ಸುರೇಶ್‌ ಭಾರಿ ಆಕ್ರೋಶದಿಂದ ಮಾತನಾಡಿದ್ದರು, ಜಗಳ ಮಾಡಿದ್ದರು. ಇದೇ ಜಾತಿ ವೈಷಮ್ಯದಿಂದ ಅವರು ಎಸ್‌ಟಿ ಸಮುದಾಯದವರೇ ಬಳಸುವ ನೀರಿಗೆ ಏನಾದರೂ ಬೆರೆಸಿದ್ದಾರೆ ಎನ್ನುವುದು ಎಲ್ಲರ ಸಂಶಯ.

ಇದಕ್ಕೆಲ್ಲ ಪುಷ್ಟಿ ನೀಡುವಂತೆ ನೀರಗಂಟಿ ಸುರೇಶ್‌ ನಾಪತ್ತೆಯಾಗಿದ್ದಾನೆ. ಪೊಲೀಸರು ಆತನ ಪತ್ತೆಗೂ ಪ್ರಯತ್ನಪಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.

ಇದನ್ನೂ ಓದಿ : Contaminated water: 3 ದಿನಗಳ ನಂತರ ಆಸ್ಪತ್ರೆಗೆ ಬಂದ ಶಾಸಕ ವೀರೇಂದ್ರ ಪಪ್ಪಿಗೆ ಜನರ ತರಾಟೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

ಬೆಂಗಳೂರು ರಸ್ತೆಗಳಲ್ಲಿ ಗುಂಡಿಗಳು ಸಾಮಾನ್ಯ, ಅಂತೆಯೇ ಜಗಳಗಳು. ಇದು ಕೆಲವೊಮ್ಮೆ ಕೈಕೈ ಮಿಲಾಯಿಸುವ ಹಂತಕ್ಕೂ ಹೋಗುವುದಿದೆ. ಇದನ್ನು ತಪ್ಪಿಸಲು ಬೆಂಗಳೂರು ಪೊಲೀಸರು ಕೆಲವೊಂದು ಸಲಹೆಗಳನ್ನು ನೀಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ (Viral Video) ಭಾರೀ ವೈರಲ್ ಆಗಿದೆ.

VISTARANEWS.COM


on

By

Viral Video
Koo

ಸಣ್ಣಪುಟ್ಟ ಘಟನೆಗಳು ರಸ್ತೆಯಲ್ಲಿ (road) ಕೆಲವೊಮ್ಮೆ ವಾಹನ (vehicle) ಸವಾರರ ನಡುವೆ ಜಗಳಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಇಂತಹ ಮಾತಿನ ಚಕಮಕಿಯ ಘಟನೆಗಳು ಸಾಮಾನ್ಯವಾಗಿದೆ. ಕೆಲವೊಮ್ಮೆ ಇಂತಹ ಘಟನೆಗಳು ಮಾರಾಮಾರಿಗೂ (physical fights) ಕಾರಣವಾಗಿ, ವಾಹನಗಳಿಗೆ ಹಾನಿ, ವ್ಯಕ್ತಿಗಳಿಗೆ ಗಾಯವನ್ನು ಉಂಟು ಮಾಡುತ್ತದೆ. ಕೊಲೆ ನಡೆದಿದ್ದೂ ಇದೆ.

ಹೆಚ್ಚುತ್ತಿರುವ ಇಂತಹ ಪ್ರಕರಣಗಳ ನಡುವೆ ಬೆಂಗಳೂರು ಪೊಲೀಸರು (bengaluru police) ಈ ರೀತಿಯ ಘಟನೆಗಳನ್ನು ಹೇಗೆ ಎದುರಿಸಬೇಕು ಎಂದು ಸಾಮಾಜಿಕ ಜಾಲತಾಣದ (Viral Video) ಮೂಲಕ ಸಾರ್ವಜನಿಕರಿಗೆ ಉಪಯುಕ್ತ ಸಲಹೆ ಮಾಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪೊಲೀಸ್ ಇಲಾಖೆ ಜಾಗೃತಿ ವಿಡಿಯೋವನ್ನು ಹಂಚಿಕೊಂಡಿದ್ದು, ಈ ರೀತಿಯ ಸಂದರ್ಭಗಳನ್ನು ಎದುರಿಸುವಾಗ ನಾವು ಶಾಂತವಾಗಿರುವುದು ಬಹಳ ಮುಖ್ಯ ಎಂದಿದ್ದಾರೆ. ಈ ವಿಡಿಯೋ ಕ್ಲಿಪ್ ಪ್ರಯಾಣಿಕರ ನಡುವಿನ ಜಗಳದಿಂದ ಪ್ರಾರಂಭವಾಗುತ್ತದೆ. ಇದು ಹಲವಾರು ಅಂಶಗಳನ್ನು ಒಳಗೊಂಡಿದೆ. ಇದೇ ರೀತಿಯ ಸಂದರ್ಭಗಳು ಬಂದರೆ ಪ್ರಯಾಣಿಕರು ಏನು ಮಾಡಬೇಕೆಂಬ ಕುರಿತು ಮಾರ್ಗದರ್ಶನ ನೀಡುತ್ತದೆ.

ರಸ್ತೆಯಲ್ಲಿ ವಾಹನ ಓಡಿಸುವಾಗ ಸುರಕ್ಷತೆ ಮೊದಲನೆಯದು. ಕೆಲವೊಂದು ಘಟನೆಗಳು ನಮಗೆ ಸಿಟ್ಟು ತರಿಸಬಹುದು. ಆದರೆ ಪರಿಸ್ಥಿತಿಗಳನ್ನು ಹೇಗೆ ಸುರಕ್ಷಿತವಾಗಿ ನಿರ್ವಹಿಸುವುದು ಎಂಬುದರ ಕುರಿತು ಪ್ರಾಯೋಗಿಕ ಸಲಹೆಗಳಿಗಾಗಿ ನಮ್ಮ ಇತ್ತೀಚಿನ ವಿಡಿಯೋವನ್ನು ಪರಿಶೀಲಿಸಿ. ಮಾಹಿತಿಯಲ್ಲಿರಿ, ಸುರಕ್ಷಿತವಾಗಿರಿ ಎಂದು ವಿಡಿಯೋವನ್ನು ಹಂಚಿಕೊಳ್ಳುವಾಗ ಬೆಂಗಳೂರು ಪೊಲೀಸರು ಬರೆದಿದ್ದಾರೆ.

ಶಾಂತವಾಗಿರಿ ಜಗಳ ತಪ್ಪಿಸಿ

ಪ್ರಯಾಣಿಕರೇ ಶಾಂತವಾಗಿರಿ, ಇತರ ವ್ಯಕ್ತಿಗಳೊಂದಿಗೆ ಜಗಳವಾಡುವುದನ್ನು ತಪ್ಪಿಸಿ, ಅದನ್ನು ನೀವೇ ಪರಿಹರಿಸಲು ಪ್ರಯತ್ನಿಸಬೇಡಿ. ವಾಹನದ ವಿವರಗಳನ್ನು ಗಮನಿಸಿ, ತುರ್ತು ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಮತ್ತು ಘಟನೆಯ ಬಗ್ಗೆ ತಕ್ಷಣ ಮಾಹಿತಿ ನೀಡಿ ಎಂದು ಬೆಂಗಳೂರು ಪೊಲೀಸ್ ಇಲಾಖೆ ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಟ್ರಾಫಿಕ್ ಅಡಚಣೆಯನ್ನು ತಪ್ಪಿಸಲು ಮತ್ತು ಘಟನೆ ಅಥವಾ ವಾಹನದ ಫೋಟೋಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ವೀಕ್ಷಕರಿಗೆ ಹೇಳಿದ್ದಾರೆ. ಪೊಲೀಸರು ಬಂದಾಗ ಏನಾಯಿತು ಎಂಬುದರ ಕುರಿತು ನಿಮ್ಮ ಸಂಪೂರ್ಣ ಮಾಹಿತಿಯನ್ನು ಒದಗಿಸಿ ಮತ್ತು ಇತರ ವ್ಯಕ್ತಿಗಳಿಗೆ ಅವರ ಅನಿಸಿಕೆ ಹಂಚಿಕೊಳ್ಳಲು ಅವಕಾಶ ಮಾಡಿಕೊಡಿ. ಕೊನೆಯದಾಗಿ ಪೊಲೀಸರಿಗೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡಿ ಎಂದು ಹೇಳಿದ್ದಾರೆ.

4 ಲಕ್ಷಕ್ಕೂ ಹೆಚ್ಚು ವೀಕ್ಷಣೆ

ಬೆಂಗಳೂರು ಪೊಲೀಸರು ಕೆಲವೇ ಗಂಟೆಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋ ಪೋಸ್ಟ್ ಇನ್ ಸ್ಟಾಗ್ರಾಮ್ ನಲ್ಲಿ 4,05,000 ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ಕ್ಲಿಪ್ ಅನ್ನು ಎಕ್ಸ್ ನಲ್ಲೂ ಹಂಚಿಕೊಳ್ಳಲಾಗಿದೆ. ಹಲವಾರು ಬಳಕೆದಾರರು ಈ ಜಾಗೃತಿ ವಿಡಿಯೋ ಗೆ ಪೊಲೀಸರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಆದರೂ ಇಂತಹ ಘಟನೆಗಳು ಸಂಭವಿಸಿದಾಗ ಇಲಾಖೆಯು ಏನನ್ನೂ ಮಾಡುತ್ತಿಲ್ಲ ಎಂದು ಕೆಲವರು ಆರೋಪಿಸಿದರು.

ಇದನ್ನೂ ಓದಿ: IndiGo Flight: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ನಿಂತುಕೊಂಡೇ ಪ್ರಯಾಣಿಸಲು ಮುಂದಾದ ಪ್ಯಾಸೆಂಜರ್‌!

ರಸ್ತೆ ಸುರಕ್ಷತೆಯ ಕುರಿತು ಬೆಂಗಳೂರು ಪೊಲೀಸರು ನೀಡಿರುವ ಸಾರ್ವಜನಿಕರಿಗೆ ಶಿಕ್ಷಣವನ್ನು ನಾನು ಇಷ್ಟಪಟ್ಟಿದ್ದೇನೆ. ಪೊಲೀಸ್ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ ಎಂದೊಬ್ಬರು ತಮ್ಮ ಅನಿಸಿಕೆ ಬರೆದಿದ್ದಾರೆ.

Continue Reading

ಚಿನ್ನದ ದರ

Gold Rate Today: ಬಂಗಾರದ ಬೆಲೆಯಲ್ಲಿ ಯಥಾಸ್ಥಿತಿ; ಇಂದಿನ ದರಗಳನ್ನು ಇಲ್ಲಿಯೇ ನೋಡಿ

ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಏನೂ ವ್ಯತ್ಯಾಸ ಕಂಡಿಲ್ಲ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

gold rate today beauty
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಏನೂ ವ್ಯತ್ಯಾಸ ಕಂಡಿಲ್ಲ. ನಿನ್ನೆ 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹600 ಹಾಗೂ ₹650 ಇಳಿಕೆಯಾಗಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,830ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,640 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,300 ಮತ್ತು ₹6,83,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,451 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,608 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,510 ಮತ್ತು ₹7,45,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹92.50, ಎಂಟು ಗ್ರಾಂ ₹740 ಮತ್ತು 10 ಗ್ರಾಂ ₹925ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,250 ಮತ್ತು 1 ಕಿಲೋಗ್ರಾಂಗೆ ₹92,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,45074,660
ಮುಂಬಯಿ68,30074,510
ಬೆಂಗಳೂರು68,30074,510
ಚೆನ್ನೈ68,60074,840

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading

ವೈರಲ್ ನ್ಯೂಸ್

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

CP Yogeshwara: ನಿಶಾ ಯೋಗೇಶ್ವರ್‌ ತಮ್ಮ ತಂದೆಯಿಂದ ದೂರವಾಗಿದ್ದು, ಕಾಂಗ್ರೆಸ್‌ ಸೇರ್ಪಡೆಗೆ ಯತ್ನಿಸುತ್ತಿದ್ದಾರೆ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ತಂದೆಯೇ ತಮ್ಮನ್ನು ದೂರವಿಟ್ಟಿದ್ದು, ಕಡೆಗಣಿಸುತ್ತಿದ್ದಾರೆ ಎಂದು ನಿಶಾ ಆರೋಪಿಸಿದ್ದಾರೆ. ಕುಟುಂಬದಿಂದ ತಮ್ಮನ್ನು ತಂದೆಯೇ ದೂರ ಮಾಡಿದ್ದಲ್ಲದೆ, ಕಿರಿಕಿರಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

VISTARANEWS.COM


on

nisha cp yogeshwara
Koo

ರಾಮನಗರ: ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್‌ (CP Yogeshwara) ಪುತ್ರಿ ನಿಶಾ (Nisha Yogeshwara) ಅವರು ತಮ್ಮ ತಂದೆಯ ವಿರುದ್ಧ ರೊಚ್ಚಿಗೆದ್ದಿದ್ದು, ಹಲವಾರು ವಿಡಿಯೋಗಳ ಮೂಲಕ ಇನ್‌ಸ್ಟಗ್ರಾಂನಲ್ಲಿ (Social media) ಸಾರ್ವಜನಿಕವಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ತಂದೆ ತಮ್ಮ ಮೇಲೆ ಹಲ್ಲೆ (Assault) ಮಾಡುತ್ತಾರೆ, ತಮ್ಮ ಕುಟುಂಬವನ್ನು, ತನ್ನನ್ನು ಕಡೆಗಣಿಸುತ್ತಿದ್ದಾರೆ ಎಂದು ನಿಶಾ (ಈ ಪೋಸ್ಟ್‌ಗಳಲ್ಲಿ ಆರೋಪಿಸಿದ್ದಾರೆ. ಅವರ ಈ ಪೋಸ್ಟ್‌ಗಳು ವೈರಲ್‌ (viral video) ಆಗಿವೆ.

ನಿಶಾ ಯೋಗೇಶ್ವರ್‌ ತಮ್ಮ ತಂದೆಯಿಂದ ದೂರವಾಗಿದ್ದು, ಕಾಂಗ್ರೆಸ್‌ ಸೇರ್ಪಡೆಗೆ ಯತ್ನಿಸುತ್ತಿದ್ದಾರೆ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ತಂದೆಯೇ ತಮ್ಮನ್ನು ದೂರವಿಟ್ಟಿದ್ದು, ಕಡೆಗಣಿಸುತ್ತಿದ್ದಾರೆ ಎಂದು ನಿಶಾ ಆರೋಪಿಸಿದ್ದಾರೆ. ಕುಟುಂಬದಿಂದ ತಮ್ಮನ್ನು ತಂದೆಯೇ ದೂರ ಮಾಡಿದ್ದಲ್ಲದೆ, ಕಿರಿಕಿರಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಯೋಗೇಶ್ವರ್ ಮಕ್ಕಳಾದ ತಮ್ಮನ್ನು ದೂರ ಮಾಡಿದ್ದಾರೆ. ಮನೆಗೆ ಹೋದರೆ ತಮ್ಮ ಮೇಲೆ ಹಲ್ಲೆ ಮಾಡ್ತಾರೆ. ಅವರನ್ನು ಮಾತನಾಡಿಸಲು ಹೋದರೆ ರಪರಪ ಎಂದು ಹೊಡೆಯುತ್ತಾರೆ. ಏನಾರೂ ಕೇಳಿದರೆ, ನಮ್ಮ ಬಳಿ ಬರಬೇಡ, ಬೇಕಾದರೆ ಭಿಕ್ಷೆ ಮಾಡಿಕೊಂಡು ಜೀವನ ಮಾಡು ಎನ್ನುತ್ತಾರೆ. ನಮಗೆ ತಂದೆಯ ಪ್ರೀತಿ ಸಿಗಲಿಲ್ಲ, ಅವರು ಆದರ್ಶ ಅಪ್ಪನಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ರಾಮಾಯಣದ ಕಥೆ ಹೇಳಿ, ಕುಟುಂಬದಲ್ಲಿರುವ ಜಗಳವನ್ನು ಎಳೆ ಎಳೆಯಾಗಿ ವಿವರಿಸಿದ್ದಾರೆ.

ʼನಿಶಾ ಯೋಗೇಶ್ವರ್‌ʼ ಎಂದು ಬಳಸುತ್ತಿರುವ ತನ್ನ ಹೆಸರಿನಲ್ಲಿ ʼಯೋಗೇಶ್ವರ್ʼ ಹೆಸರು ಬಳಸದಂತೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಧಮಕಿ ಹಾಕುತ್ತಿದ್ದಾರೆ. ತನ್ನ ತಾಯಿ ಯೋಗೇಶ್ವರ್‌ ಅವರ ಚುನಾವಣೆ ಪ್ರಚಾರಕ್ಕಾಗಿ ತೆರಳಿದ್ದರು. ಆದರೆ ತಂದೆ, ತಾಯಿಗೆ ಕಪಾಳಮೋಕ್ಷ ಮಾಡಿದರು. ತನ್ನ ತಮ್ಮನಿಗೂ ಥಳಿಸಿದ್ದಾರೆ. ಮೊದಲ ಪತ್ನಿ ಹಾಗೂ ಮಕ್ಕಳನ್ನು ಯೋಗೇಶ್ವರ್‌ ಕಡೆಗಣಿಸುತ್ತಿದ್ದಾರೆ ಎಂದು ನಿಶಾ ಅಳಲು ತೋಡಿಕೊಂಡಿದ್ದಾಎ.

20 ವರ್ಷ ಹಿಂದೆ ನಮಗೆ ಹೇಳದೆ ಕೇಳದೆ ತಂದೆ ಬೇರೆ ಸಂಸಾರ ಕಟ್ಟಿಕೊಂಡರು. ಆದರ್ಶ ಮಗಳಾಗು ಎಂದು ನನಗೆ ಹೇಳುತ್ತಾರೆ. ಅವರು ಆದರ್ಶ ತಂದೆಯಾಗಬೇಕಲ್ಲವೇ? ಮೊದಲನೇ ಮದುವೆಯ ಮಕ್ಕಳನ್ನು ಬೆಳೆಸಬೇಕಲ್ಲವೇ? ಇಂಥ ತಂದೆಯ ಜೊತೆಗೆ ಹೇಗಿರಲಿ? ಎಂದು ಯೋಗೇಶ್ವರ್ ಎರಡನೇ ಪತ್ನಿ, ಮಕ್ಕಳ ಬಗ್ಗೆ ಪ್ರಸ್ತಾಪ ಮಾಡಿ ಆಕ್ಷೇಪಿಸಿದ್ದಾರೆ.

ಇದನ್ನೂ ಓದಿ: Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

Continue Reading

ರಾಜಕೀಯ

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Nandini Milk: ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು, ಈಗ ಮತ್ತಷ್ಟು ಸಮಸ್ಯೆಗಳನ್ನು ಹೊತ್ತು ಜನರ ಮುಂದಿಡಲು ಪ್ರಯತ್ನ ಮಾಡುತ್ತಿವೆ. ಇದರ ಭಾಗವಾಗಿ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರಾಯೋಜಕತ್ವಕ್ಕೆ ಹಣ ಹಾಕಿರುವ ಬಗ್ಗೆ ಆರ್.‌ ಅಶೋಕ್‌ ಪ್ರಶ್ನೆ ಮಾಡಿದ್ದಾರೆ. ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಎಂದು ಟೀಕಿಸಿದ್ದಾರೆ.

VISTARANEWS.COM


on

Nandini Milk No incentives for milk producers Ashok slams govt for sponsoring foreign cricket team
Koo

ಬೆಂಗಳೂರು: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಡದ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಗರಂ ಆಗಿದ್ದಾರೆ. ಒಂದು ಕಡೆ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡು ಮತ್ತೊಂದು ಕಡೆ ಕೆಎಂಎಫ್‌ ಸಂಸ್ಥೆಯ ನಂದಿನಿ ಹಾಲು (Nandini Milk) ಉತ್ಪಾದನೆಯಿಂದ ಬಂದ ಲಾಭದಲ್ಲಿ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವವನ್ನು ಪಡೆದುಕೊಳ್ಳಲಾಗಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಆರ್.‌ ಅಶೋಕ್‌, ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು, ಈಗ ಮತ್ತಷ್ಟು ಸಮಸ್ಯೆಗಳನ್ನು ಹೊತ್ತು ಜನರ ಮುಂದಿಡಲು ಪ್ರಯತ್ನ ಮಾಡುತ್ತಿವೆ. ಇದರ ಭಾಗವಾಗಿ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರಾಯೋಜಕತ್ವಕ್ಕೆ ಹಣ ಹಾಕಿರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಆರ್.‌ ಅಶೋಕ್‌ ಪೋಸ್ಟ್‌ನಲ್ಲೇನಿದೆ?

“ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ.

ಸಿಎಂ ಸಿದ್ದರಾಮಯ್ಯ ಅವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ್ಮ ನಂದಿನಿ ಬ್ರ್ಯಾಂಡ್ ಉಳಿಸುವ ಪರಿ?

ಇದನ್ನೂ ಓದಿ: Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಇದೆ. ಆದರೆ, ನಂದಿನಿ ಬ್ರ್ಯಾಂಡ್ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು” ಎಂದು ಆರ್.‌ ಅಶೋಕ್‌ ರೈತರ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.

Continue Reading
Advertisement
List of Movies Releasing From may 24
ಟಾಲಿವುಡ್9 mins ago

List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

Prashant Kishor
ದೇಶ23 mins ago

Prashant Kishor: 3ನೇ ಅವಧಿಯ ಮೋದಿ ಸರ್ಕಾರದಿಂದ ಈ 4 ಕ್ರಾಂತಿಕಾರಕ ಬದಲಾವಣೆ; ಪ್ರಶಾಂತ್‌ ಕಿಶೋರ್‌ ಭವಿಷ್ಯ

Viral Video
ವೈರಲ್ ನ್ಯೂಸ್34 mins ago

Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

Diabetes Management Tips
Latest37 mins ago

Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

gold rate today beauty
ಚಿನ್ನದ ದರ37 mins ago

Gold Rate Today: ಬಂಗಾರದ ಬೆಲೆಯಲ್ಲಿ ಯಥಾಸ್ಥಿತಿ; ಇಂದಿನ ದರಗಳನ್ನು ಇಲ್ಲಿಯೇ ನೋಡಿ

Viral News
ವೈರಲ್ ನ್ಯೂಸ್40 mins ago

Viral News: ಸಿಂಹದ ಹಿಂಡನ್ನೇ ಹಿಮ್ಮೆಟ್ಟಿಸಿದ ಕಾಡುಕೋಣಗಳು; ರೋಮಾಂಚನಕಾರಿ ವಿಡಿಯೊ ನೀವೂ ನೋಡಿ

Rishab shetty family visit Hariharpur Narasimhaswamy
ಸ್ಯಾಂಡಲ್ ವುಡ್58 mins ago

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

nisha cp yogeshwara
ವೈರಲ್ ನ್ಯೂಸ್1 hour ago

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

Nandini Milk No incentives for milk producers Ashok slams govt for sponsoring foreign cricket team
ರಾಜಕೀಯ1 hour ago

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Viral video
ವೈರಲ್ ನ್ಯೂಸ್1 hour ago

Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌