Bhagya Lakshmi Serial : 20 ಕೆಜಿ ತೂಕದ ಲೆಹೆಂಗಾ ತೊಟ್ಟಿದ್ದೇಕೆ ಈ ನಟಿ? - Vistara News

ಕಿರುತೆರೆ

Bhagya Lakshmi Serial : 20 ಕೆಜಿ ತೂಕದ ಲೆಹೆಂಗಾ ತೊಟ್ಟಿದ್ದೇಕೆ ಈ ನಟಿ?

ಹಿಂದಿಯ ಭಾಗ್ಯಲಕ್ಷ್ಮಿ ಧಾರಾವಾಹಿಯ(Bhagya Lakshmi Serial) ನಟಿ ಐಶ್ವರ್ಯ ಖರೆ ಅವರು ಧಾರಾವಾಹಿಯಲ್ಲಿ ಮದುವೆಗೆಂದು 20 ಕೆಜಿ ತೂಕದ ಲೆಹೆಂಗಾವನ್ನು ಧರಿಸಿದ್ದರಂತೆ.

VISTARANEWS.COM


on

Bhagya Lakshmi Serial
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಧಾರಾವಾಹಿಗಳನ್ನು ನೋಡುವುದೆಂದರೆ ಹೆಣ್ಣು ಮಕ್ಕಳಿಗೆ ಇಷ್ಟದ ಕೆಲಸ. ಅದೇ ಧಾರಾವಾಹಿಯಲ್ಲಿ ನಟಿಸಲೆಂದು ಅನೇಕ ನಟ, ನಟಿಯರು ಸಾಕಷ್ಟು ಕಷ್ಟಪಡುತ್ತಾರೆ ಕೂಡ. ಅದರಲ್ಲಿ ಕೆಲವು ಧಾರಾವಾಹಿಗಳು ಮಾತ್ರ ಹೆಣ್ಣು ಮಕ್ಕಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿ ವರ್ಷಗಳ ಕಾಲ ಪ್ರಸಾರವಾಗುತ್ತವೆ. ಅಂಥದ್ದರಲ್ಲಿ ಒಂದು ಹಿಂದಿಯ ʼಭಾಗ್ಯಲಕ್ಷ್ಮಿʼ ಧಾರಾವಾಹಿ(Bhagya Lakshmi Serial). ಈ ಧಾರಾವಾಹಿಯಲ್ಲಿ ನಾಯಕ ನಟಿಯಾಗಿರುವ ಐಶ್ವರ್ಯ ಖರೆ ಅವರು ಧಾರಾವಾಹಿಯ ತೆರೆ ಹಿಂದಿನ ಕಥೆಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ‘ಬಾಯಿ ಮುಚ್ಚೆ ಸಾಕು’, ಮೆಟ್ರೊದಲ್ಲಿ ಇಬ್ಬರು ನಾರಿಯರ ಜಗಳ; ವಾಗ್ವಾದದಲ್ಲಿ ಗೆದ್ದಿದ್ದು ಯಾರು?
ಹಿಂದಿಯ ʼಭಾಗ್ಯಲಕ್ಷ್ಮಿ ʼ ಧಾರಾವಾಹಿಯಲ್ಲಿ ಇತ್ತೀಚೆಗೆ ಲಕ್ಷ್ಮಿಗೆ, ಅಂದರೆ ಐಶ್ವರ್ಯ ಖರೆ ಅವರಿಗೆ ಮದುವೆ ಮಾಡಿಸಲಾಗಿದೆ. ಆ ಮದುವೆಗೆಂದು ಪೂರ್ತಿ ಧಾರಾವಾಹಿ ತಂಡ ಸಾಕಷ್ಟು ಶ್ರಮ ಹಾಕಿದೆಯಂತೆ. ಲಕ್ಷ್ಮಿಗೆ ಮದುವೆಯಂದು ಹಾಕಲು ಲೆಹೆಂಗಾ ಹೇಗಿರಬೇಕು ಎನ್ನುವುದರ ಬಗ್ಗೆಯೂ ಭಾರೀ ಚರ್ಚೆ ನಡೆಸಲಾಗಿತ್ತಂತೆ. ನಟಿ ಐಶ್ವರ್ಯ ಅವರು ತಾವು ಇದೇ ರೀತಿಯಲ್ಲಿ ಲೆಹೆಂಗಾ ಹಾಕಬೇಕು ಎಂದು ಒಂದಿಷ್ಟು ಸಲಹೆಯನ್ನು ಧಾರಾವಾಹಿಯ ಕಲಾ ತಂಡಕ್ಕೆ ನೀಡಿದ್ದರಂತೆ. ಅದರಂತೆ ಅವರು ಚಿನ್ನ ಮತ್ತು ಕೆಂಪು ಬಣ್ಣವಿರುವ ಲೆಹೆಂಗಾವನ್ನು ಸಿದ್ಧ ಮಾಡಿಸಿಕೊಂಡು ತಮ್ಮ ಮದುವೆಗೆ ಧರಿಸಿದ್ದರು. ಅಂದ ಹಾಗೆ ಆ ಲೆಹೆಂಗಾದ ತೂಕ ಬರೋಬ್ಬರಿ 20 ಕೆಜಿಯಷ್ಟಿತ್ತಂತೆ!

ಲೆಹೆಂಗಾ ಅಷ್ಟೊಂದು ತೂಕವಿದ್ದರೂ ನಟಿ ಉತ್ಸಾಹದಿಂದ ಅದನ್ನು ಹಾಕಿಕೊಂಡು ನಟನೆ ಮಾಡಿದ್ದಾರೆ. ಲೆಹೆಂಗಾ ಮಾತ್ರವಲ್ಲದೆ ನಟಿ ಅದಕ್ಕೆ ತಕ್ಕಂತಹ ಒಡವೆಗಳನ್ನೂ ಧರಿಸಿದ್ದರು. ಅವರು ಧರಿಸಿದ್ದ ನೆಕ್ಲೇಸ್‌ 5ರಿಂದ 6 ಕೆಜಿಯಷ್ಟು ತೂಕವಿತ್ತಂತೆ. ಈ ಬಗ್ಗೆ ಮಾತನಾಡಿರುವ ನಟಿ, “ವಧುವಿನ ರೀತಿ ರೆಡಿಯಾಗುವುದು ನನಗೆ ಯಾವಾಗಲೂ ಖುಷಿ ತಂದುಕೊಡುತ್ತದೆ. ಅದಕ್ಕಾಗಿಯೇ ಈ ಧಾರಾವಾಹಿಯಲ್ಲಿ ಹಲವಾರು ಮಂದಿ ಕುಳಿತುಕೊಂಡು ನನ್ನ ಲುಕ್‌ ಅನ್ನು ತೀರ್ಮಾನ ಮಾಡಿದೆವು. ಅಷ್ಟೊಂದು ತೂಕದ ಲೆಹೆಂಗಾ ಮತ್ತು ಆಭರಣ ಹಾಕಿಕೊಂಡಿದ್ದೆಯಾದರೂ ನನಗೆ ಅದರ ಬಗ್ಗೆ ಖುಷಿಯಿತ್ತು. ನಾನು ವಧುವಿನಂತೆ ಸಿದ್ಧವಾಗುವುದಕ್ಕೇ ಬರೋಬ್ಬರಿ ಒಂದೂವರೆ ತಾಸು ಸಮಯ ತೆಗೆದುಕೊಂಡಿದ್ದೆ” ಎಂದು ಹೇಳಿದ್ದಾರೆ.

ʼಭಾಗ್ಯಲಕ್ಷ್ಮಿ ʼ ಧಾರಾವಾಹಿ ಈಗಾಗಲೇ ಎರಡು ವರ್ಷಗಳನ್ನು ಸಂಪೂರ್ಣಗೊಳಿಸಿದೆ. ಈ ಬಗ್ಗೆ ಖಾಸಗಿ ವಾಹಿನಿಯೊಂದರ ಜತೆ ಸಂದರ್ಶನದಲ್ಲಿ ಮಾತನಾಡಿದ್ದ ಐಶ್ವರ್ಯ ಖರೆ ಅವರು, “ಈ ದಿನ ನಾನು ಎಷ್ಟು ಖುಷಿಯಾಗಿದ್ದೇನೆ ಮತ್ತು ಧನ್ಯಳಾಗಿದ್ದೇನೆ ಎನ್ನುವುದನ್ನು ಮಾತಿನಲ್ಲಿ ಹೇಳಲಾಗದು. ಲಕ್ಷ್ಮಿಯಾಗಿ ನನ್ನ ಪಯಣ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಈ ಎರಡು ವರ್ಷ ತುಂಬಾ ಪ್ರೀತಿ ಮತ್ತು ಭಾವನಾತ್ಮಕವಾಗಿ ಕಳೆದಿದೆ. ಈ ಧಾರಾವಾಹಿ ನನಗೆ ಸಾಕಷ್ಟು ಪ್ರೀತಿಯನ್ನು ಕೊಟ್ಟಿದೆ. ಇಂತಹ ಅದ್ಭುತ ಸಹ ಕಲಾವಿದರೊಂದಿಗೆ ನಟನೆ ಮಾಡುವುದಕ್ಕೆ ನಾನು ಪುಣ್ಯ ಮಾಡಿದ್ದೆ” ಎಂದು ಹೇಳಿದ್ದರು.

ಇದನ್ನೂ ಓದಿ: Viral Video: ಧೈರ್ಯ ಇದ್ರೆ ಮಾತ್ರ ಈ ವಿಡಿಯೋ ನೋಡಿ! ಎನ್‌ಸಿಸಿ ಕೆಡೆಟ್‌ನ ಅಮಾನವೀಯ ಕೃತ್ಯ
ರೋಹಿತ್‌ ಸುಚಂರಿ ಮತ್ತು ಐಶ್ವರ್ಯ ಖರೆ ನಟಿಸುತ್ತಿರುವ ʼಭಾಗ್ಯಲಕ್ಷ್ಮಿ ʼ ಧಾರಾವಾಹಿ ಹಿಂದಿಯಲ್ಲಿ ಅತಿ ಹೆಚ್ಚು ವೀಕ್ಷಕರನ್ನು ಹೊಂದಿರುವ ಧಾರಾವಾಹಿಗಳಲ್ಲಿ ಒಂದಾಗಿದೆ. ಐಶ್ವರ್ಯ ಅವರು 2014ರಿಂದ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ. ಅವರು ಈ ಹಿಂದೆ ನಾಗಿನ್‌ 5 ಸೇರಿದಂತೆ ಹಲವು ಧಾರಾವಹಿಗಳಲ್ಲಿ ನಟಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

Famous Serial Actress:  ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Famous Serial Actress kasthuri shankar half naked photos leaked
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಿಂದಾಗಿ ಹಲವು ನಟ ನಟಿಯರು (Famous Serial Actress) ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಇನ್ನು ಕೆಲವರು ಸೋಷಿಯಲ್ ಮೀಡಿಯಾವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥವರಿಂದ ನಾಯಕಿಯರು, ಹಿರಿಯ ನಟರು ಮುಜುಗರಕ್ಕೊಳಗಾದ ಪ್ರಕರಣಗಳು ಸಾಕಷ್ಟಿವೆ. ಇದೀಗ ಅಂಥಹದ್ದೇ ಘಟನೆಗೆ ಖ್ಯಾತ ನಟಿ ಒಳಗಾಗಿದ್ದಾರೆ. ಇತ್ತೀಚೆಗಷ್ಟೇ ಧಾರಾವಾಹಿ ನಟಿ ಕಸ್ತೂರಿ ಶಂಕರ್ (kasthuri shankar) ಅವರಿಗೂ ಇಂತಹದ್ದೇ ಘಟನೆ ನಡೆದಿದೆ. ʻಅನ್ನಮಯ್ಯʼ ಚಿತ್ರದ ಮೂಲಕ ಕಸ್ತೂರಿ ಶಂಕರ್ ಅವರಿಗೆ ಒಳ್ಳೆಯ ಮನ್ನಣೆ ಸಿಕ್ಕಿತು. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿದ್ದಾರೆ. ನಟಿಯ ಕೆಲವು ಅರೆನಗ್ನ ಫೋಟೊಗಳು ವೈರಲ್‌ ಆಗಿವೆ. ಇತ್ತೀಚೆಗಷ್ಟೇ ಈ ಫೋಟೋ ಶೂಟ್ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಕಸ್ತೂರಿ ಶಂಕರ್ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ನಟನೆಯಿಂದ ಸ್ವಲ್ಪ ಕಾಲ ಗ್ಯಾಪ್ ತೆಗೆದುಕೊಂಡ ಕಸ್ತೂರಿ ಧಾರಾವಾಹಿಗಳು ಮತ್ತು ವೆಬ್ ಸರಣಿಗಳಲ್ಲಿ ನಟಿಸಲು ಶುರು ಮಾಡಿದರು. ಲೈಂಗಿಕ ಕಿರುಕುಳದ ಬಗ್ಗೆ ನಟಿ ಅದೆಷ್ಟೋ ಬಾರಿ ಹೇಳಿಕೊಂಡಿದ್ದು ಇದೆ. ವಿಶೇಷವಾಗಿ ಮಲಯಾಳಂ ಇಂಡಸ್ಟ್ರಿಯಲ್ಲಿ ತಾನು ಅನೇಕ ಕಹಿ ಅನುಭವಗಳನ್ನು ಎದುರಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ನಟಿ ದೊಡ್ಡ ಪ್ರಾಜೆಕ್ಟ್ ಒಂದರಲ್ಲಿ ನಾಯಕಿಯಾಗಿ ನಟಿಸಿದ್ದು, ಆಮೇಲೆ ಏನಾಯಿತೋ ಗೊತ್ತಿಲ್ಲ, ಆದರೆ ಇತ್ತೀಚಿಗೆ ಕಸ್ತೂರಿಯ ಕೆಲವು ಅರೆನಗ್ನ ಫೋಟೋಗಳು ವೈರಲ್ ಆಗಿವೆ. ಈ ಫೋಟೊಗಳಿಂದ ನಟಿ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ. ಕಸ್ತೂರಿ ಇತ್ತೀಚೆಗೆ ತನ್ನ ಮಗುವಿಗೆ ಹಾಲುಣಿಸುವಾಗ ಅರೆಬೆತ್ತಲೆ ಫೋಟೋ ಶೂಟ್ ಮಾಡಿಸಿದ್ದರು. ಈ ಫೋಟೋಗಳು ಇದೀಗ ವೈರಲ್‌ ಆಗಿವೆ. ಈ ಬಗ್ಗೆ ನಟಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ʻವಿಕಾಸ ಪರ್ವʼ ಸಿನಿಮಾ ಆಡಿಯೊ ರೈಟ್ಸ್

ʻʻನನ್ನ ಅನುಮತಿಯಿಲ್ಲದೆ ಭಾರತದ ಪ್ರಮುಖ ಮಾಧ್ಯಮ ಸಂಸ್ಥೆಯು ಮೂಲ ಫೋಟೊಗಳನ್ನು ಕದ್ದು ಪ್ರಕಟಿಸಿದೆ. ನಿಜವಾಗಿಯೂ ನಾನು ಆ ಫೋಟೋ ಶೂಟ್ ಮಾಡಿದ್ದು ಭಾರತಕ್ಕಾಗಿ ಅಲ್ಲ. ಅಮೆರಿಕಾದಲ್ಲಿ ತಾಯ್ತನದ ಬಗ್ಗೆ ಪತ್ರಿಕೆಯೊಂದಕ್ಕೆ ಮಾಡಿಸಿದ್ದ ಪೋಟೋಶೂಟ್‌ ಅದು. ಭಾರತದಲ್ಲಿ ಬಿಡುಗಡೆ ಮಾಡಬೇಡಿ ಎಂದು ನಾನು ಅವರಿಗೆ ಹೇಳಿದೆ, ಆದರೆ ಅವರು ನನ್ನನ್ನು ಸಂಪರ್ಕಿಸದೆ ಭಾರತದಲ್ಲಿ ಅದನ್ನು ಸೋರಿಕೆ ಮಾಡಿದ್ದಾರೆ. ಸದ್ಯ ಈ ಅರೆಬೆತ್ತಲೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆʼʼಎಂದು ಹೇಳಿಕೊಂಡಿದ್ದಾರೆ.

Continue Reading

ಕಿರುತೆರೆ

Nisha Ravikrishnan:ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ʻಗಟ್ಟಿಮೇಳ’ ನಟಿ!

Nisha Ravikrishnan: ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ ‘ಗಟ್ಟಿಮೇಳ’ ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ ‘ಅಂಶು’ ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.

VISTARANEWS.COM


on

Nisha Ravikrishnan in new serial annayya
Koo
ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ 'ಗಟ್ಟಿಮೇಳ' ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ 'ಅಂಶು' ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.

‘ಗಟ್ಟಿಮೇಳ’ (Gattimela) ಸೀರಿಯಲ್ ನಾಯಕಿ ನಿಶಾ ರವಿಕೃಷ್ಣನ್ (Nisha Ravikrishnan) ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ತೆಲುಗಿನಲ್ಲಿ ಬ್ಯುಸಿಯಾಗಿದ್ದ ನಟಿ ಈಗ ಕನ್ನಡದ ಹೊಸ ಧಾರಾವಾಹಿಯನ್ನು ಒಪ್ಪಿಕೊಂಡಿದ್ದಾರೆ.

ಕಾಂತಾರ’ ಖ್ಯಾತಿಯ ಪ್ರಮೋದ್ ಶೆಟ್ಟಿ ಮತ್ತು ಅವರ ಪತ್ನಿ ಸುಪ್ರೀತಾ ಇದೀಗ ಹೊಸ ಸೀರಿಯಲ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

‘ಅಣ್ಣಯ್ಯ’ (Annayya) ಎಂಬ ಸೀರಿಯಲ್‌ಗೆ ನಿಶಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Duniya Vijay: ಕೋಟಿ ಸಿನಿಮಾದ ‘ದುನಿಯಾ ವಿಜಯ್’ ವಿಶೇಷ ಪಾತ್ರಕ್ಕೆ ಪ್ರೇಕ್ಷಕರು ಫಿದಾ

ನಿಶಾ ರವಿಕೃಷ್ಣನ್ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿದ್ದಾರೆ. ಇತ್ತೀಚೆಗೆ 'ಗಟ್ಟಿಮೇಳ' ಮುಗಿದ ಬಳಿಕ ಸಿನಿಮಾದತ್ತ ಮುಖ ಮಾಡಿದ್ದರು.ಇತ್ತೀಚೆಗೆ ತಮ್ಮ 'ಅಂಶು' ಸಿನಿಮಾದ ಪಾತ್ರದ ಬಗ್ಗೆ ವಾಹಿನಿಯೊಂದರ ಸಂದರ್ಶನದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಮಾತಾಡಿದ್ದರು.
ಅಣ್ಣಯ್ಯ ಧಾರಾವಾಹಿಯಲ್ಲಿ ಅವರ ಪಾತ್ರ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ. ಆದರೆ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಅಂತ್ಯ ಆಗುವ ಸಾಧ್ಯತೆ ಇದೆ. ನವೀನ್ ಕೃಷ್ಣ, ಕೃತಿಕಾ ರವೀಂದ್ರ, ಉಮೇಶ್, ಕಾರ್ತಿಕ್ ಸಾಮಗ್ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆರೂರು ಜಗದೀಶ್ ನಿರ್ದೇಶನ, ನಿರ್ಮಾಣದ ಧಾರಾವಾಹಿ ಇದಾಗಿದೆ.
Continue Reading

ಕಿರುತೆರೆ

Divya Uruduga: ದಿವ್ಯಾ ಉರುಡುಗ ಹಿಂದೆ ಬಿದ್ದ ಕಿಶನ್ ಬಿಳಗಲಿ!

Divya Uruduga: ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು. ಇದೀಗ ಧಾರಾವಾಹಿ ನಾಯಕಿ ರಚನಾ ಜತೆ ನಟನೆ ಮಾಡಿದ್ದಾರೆ.

VISTARANEWS.COM


on

Divya Uruduga kishan belgali In ninagagi serial
Koo

ನಟ ರಿತ್ವಿಕ್ ಮಠದ್ (Ritvvikk Mathad ) ಹಾಗೂ ನಟಿ ದಿವ್ಯಾ ಉರುಡುಗ (Actress Divya Uruduga) ಅಭಿನಯದ , ‘ನಿನಗಾಗಿ’ ಧಾರಾವಾಹಿ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಇದೀಗ ‘ಬಿಗ್ ಬಾಸ್ ಕನ್ನಡ 7’ರ (Bigg Boss Kannada 7) ಮೂಲಕ ಗಮನ ಸೆಳೆದ ಕಿಶನ್ ಬಿಳಗಲಿ (Kishen Bilagali ಈ ಸೀರಿಯಲ್‌ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ.

ಧಾರಾವಾಹಿ ನಾಯಕಿ ರಚನಾ ಜತೆ ನಟನೆ ಮಾಡಿದ್ದಾರೆ. ಅವರದ್ದು ಒಂದು ಸಸ್ಪೆನ್ಸ್​​ ಕ್ಯಾರೆಕ್ಟರ್​ ಆಗಿದೆ.

ಸದಾ ಒಂದಲ್ಲಾ ಒಂದು ವಿಭಿನ್ನವಾಗಿ ರೀಲ್ಸ್ ಮಾಡುವ ಮೂಲಕ ಗಮನ ಸೆಳೆದಿರುವ ಕಿಶನ್ ಈಗ ಕಿರುತೆರೆ ಎಂಟ್ರಿ ಕೊಟ್ಟಿರುವುದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. 

ಇದನ್ನೂ ಓದಿ: Sonakshi Sinha: ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ; ತಾಯಿ, ಸಹೋದರನೂ ಮದುವೆಗೆ ಹೋಗಲ್ಲ?

ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

Continue Reading

ಕಿರುತೆರೆ

Vaishnavi Gowda: ಸೀತಮ್ಮಗೆ ಕಿಡಿಗೇಡಿಗಳ ಕಾಟ; ವೈರಲ್ ಆಗ್ತಿದೆ ಡೀಪ್ ಫೇಕ್ ಫೋಟೊ!

Vaishnavi Gowda: ವೈಷ್ಣವಿ ಗೌಡ ಈ ಹಿಂದೆ ಧರಿಸಿದ್ದ ಕೆಂಪು ಬಣ್ಣದ ಗೌನ್ ಬಟ್ಟೆಯ ಫೋಟೋವನ್ನು ಎಡಿಟ್‌ ಮಾಡಿರುವ ಕಿಡಿಗೇಡಿಗಳು ಫೋಟೋವನ್ನು ಹರಿಬಿಟ್ಟಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.

VISTARANEWS.COM


on

Vaishnavi Gowda deep fake Photo viral
Koo

ಇತ್ತೀಚೆಗೆ, ರಶ್ಮಿಕಾ ಮಂದಣ್ಣ, ಕಾಜೋಲ್ ಮತ್ತು ಕತ್ರಿನಾ ಕೈಫ್ ಸೇರಿದಂತೆ ಹಲವಾರು ನಟರು ಡೀಪ್‌ಫೇಕ್‌ಗೆ ಬಲಿಯಾಗಿದ್ದಾರೆ. ಡೀಪ್‌ಫೇಕ್ ವಂಚನೆಗೆ ಒಳಗಾದವರಲ್ಲಿ 57 ಪ್ರತಿಶತದಷ್ಟು (Vaishnavi Gowda) ಸೆಲೆಬ್ರಿಟಿಗಳಾಗಿದ್ದಾರೆ. 

ಈಗ ಅಗ್ನಿಸಾಕ್ಷಿ, ಸೀತಾರಾಮ ಸೀರಿಯಲ್‌ ಖ್ಯಾತಿಯ ನಟಿ ವೈಷ್ಣವಿ ಗೌಡಗೆ (Vaishnavi Gowda) ಕಿಡಿಗೇಡಿಗಳಿಂದ ಡೀಪ್ ಫೇಕ್ ಕಾಟ ಎದುರಾಗಿದೆ.

ಇದನ್ನೂ ಓದಿ: Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

ವೈಷ್ಣವಿ ಅವರು ರೆಡ್‌ ಕಲರ್‌ ಡ್ರೆಸ್‌ನಲ್ಲಿರುವ ಫೋಟೊವನ್ನು ಪೋಸ್ಟ್‌ ಮಾಡಿದ್ದರು. ಕೆಲ ಕಿಡಿಗೇಡಿಗಳು ಈ ಫೋಟೊಗೆ ಬೋಲ್ಡ್ ಆಗಿ ಎಡಿಟ್ ಮಾಡಿ ಇಂಟರ್‌ನೆಟ್‌ನಲ್ಲಿ ವೈರಲ್ ಆಗುವಂತೆ ಮಾಡಿದ್ದಾರೆ.

ಸದ್ಯ ಈ ಡೀಪ್ ಫೇಕ್ ಬಗ್ಗೆ ‘ಸೀತಾರಾಮ’ (Seetharama) ನಟಿ ವೈಷ್ಣವಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ

ಈ ವರ್ಷದ ಆರಂಭದಲ್ಲಿ, ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ ಅವರ ಡೀಪ್‌ಫೇಕ್ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದಕ್ಕೂ ಮೊದಲು, ರಣವೀರ್ ಸಿಂಗ್ ಅವರ ಡೀಪ್‌ಫೇಕ್ ವೀಡಿಯೊ ಕೂಡ ವೈರಲ್ ಆಗಿದ್ದು, ಇದರಲ್ಲಿ ನಟ ಸರ್ಕಾರವನ್ನು ಟೀಕಿಸಿರುವಂತೆ ವೈರಲ್‌ ಆಗಿತ್ತು.

Continue Reading
Advertisement
Lok Sabha Speaker
ದೇಶ12 mins ago

Lok Sabha Speaker: ಎರಡನೇ ಬಾರಿ ಸ್ಪೀಕರ್‌ ಆದ ಓಂ ಬಿರ್ಲಾಗೆ ಮೋದಿ, ರಾಹುಲ್‌ ಅಭಿನಂದನೆ

Tharun Sudhir and sonal monteiro love story support By Darshan
ಸ್ಯಾಂಡಲ್ ವುಡ್15 mins ago

Tharun Sudhir: ದರ್ಶನ್‌ ತಮಾಷೆಯಿಂದಲೇ ಹುಟ್ಟಿತು ತರುಣ್‌- ಸೋನಲ್‌ ಪ್ರೀತಿ? ಇಬ್ಬರ ಲವ್ ಸ್ಟೋರಿ ಶುರುವಾಗಿದ್ದೇಗೆ?

Kenya Violence
ವಿದೇಶ23 mins ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ31 mins ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ34 mins ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್37 mins ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ1 hour ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್1 hour ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ1 hour ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌