Mohan Tamil Actor: ಕಮಲ್ ಹಾಸನ್ ಜತೆಗೆ ನಟಿಸಿದ್ದ ನಟ ಮೋಹನ್‌ ಇನ್ನಿಲ್ಲ; ಭಿಕ್ಷೆ ಬೇಡುತ್ತಲೇ ಅನಾಥ ಹೆಣವಾದ! - Vistara News

South Cinema

Mohan Tamil Actor: ಕಮಲ್ ಹಾಸನ್ ಜತೆಗೆ ನಟಿಸಿದ್ದ ನಟ ಮೋಹನ್‌ ಇನ್ನಿಲ್ಲ; ಭಿಕ್ಷೆ ಬೇಡುತ್ತಲೇ ಅನಾಥ ಹೆಣವಾದ!

Mohan Tamil Actor: ಚಿತ್ರರಂಗವನ್ನೇ ಆಶ್ರಯಿಸಿಕೊಂಡಿದ್ದ ಮೋಹನ್​ ಅವರು ಬೇರೆ ವೃತ್ತಿಯ ಕಡೆಗೂ ಮುಖ ಮಾಡಲೇ ಇಲ್ಲ. ಅನಿವಾರ್ಯವಾಗಿ ಅವರು ತುತ್ತು ಅನ್ನಕ್ಕಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿತ್ತು. ಕೆಲ ವರ್ಷ ಭಿಕ್ಷೆ ಬೇಡುತ್ತಲೇ ಇದ್ದರೂ ಚಿತ್ರರಂಗದವರು ಯಾರೂ ಅವರ ನೆರವಿಗೆ ಬಂದಿರಲಿಲ್ಲ.

VISTARANEWS.COM


on

Apoorva Sagotharargal actor Mohan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಮಲ್ ಹಾಸನ್ ಅಭಿನಯದ ‘ಅಪೂರ್ವ ಸಾಗೋತರರ್ಗಲ್’ನಲ್ಲಿ (Apoorva Sagotharargal) ಕಾಣಿಸಿಕೊಂಡಿದ್ದ ಖ್ಯಾತ ಪೋಷಕ ನಟ ಮೋಹನ್ (Mohan Tamil Actor) ಅವರು ತಮಿಳುನಾಡಿನ ಮಧುರೈನ (Madhurai) ತಿರುಪರಂಕುಂದ್ರಮ್‌ ಬಳಿಯ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಸೇಲಂ ಜಿಲ್ಲೆಯ ಮೆಟ್ಟೂರಿನವರಾದ ಮೋಹನ್ ಅವರಿಗೆ 60 ವರ್ಷ ವಯಸ್ಸಾಗಿತ್ತು. ತಮಿಳು ಚಲನಚಿತ್ರಗಳಲ್ಲಿ ಪೋಷಕ ನಟರಾಗಿ ಕೆಲಸ ಮಾಡುತ್ತಿದ್ದರು. ಚಿತ್ರರಂಗವನ್ನೇ ಆಶ್ರಯಿಸಿಕೊಂಡಿದ್ದ ಮೋಹನ್​ ಅವರು ಬೇರೆ ವೃತ್ತಿಯ ಕಡೆಗೂ ಮುಖ ಮಾಡಲೇ ಇಲ್ಲ. ಅನಿವಾರ್ಯವಾಗಿ ಅವರು ತುತ್ತು ಅನ್ನಕ್ಕಾಗಿ ಭಿಕ್ಷೆ ಬೇಡುವ ಸ್ಥಿತಿ ಬಂದಿತ್ತು. ಕೆಲ ವರ್ಷ ಭಿಕ್ಷೆ ಬೇಡುತ್ತಲೇ ಇದ್ದರೂ ಚಿತ್ರರಂಗದವರು ಯಾರೂ ಅವರ ನೆರವಿಗೆ ಬಂದಿರಲಿಲ್ಲ.

ಮೋಹನ್ ಅವರು ನಟ ಆರ್ಯ ಅಭಿನಯದ ‘ನಾನ್ ಕಡವುಲ್’, ‘ಅತಿಶಯ ಮಣಿತರಗಳು ಹೀಗೆ ಹಲವಾರು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಬಾಲಾ ನಿರ್ದೇಶನದ ನಾನ್​ ಕಡವುಳ್​ ಸಿನಿಮಾ 2009ರಲ್ಲಿ ತೆರೆ ಕಂಡಿತ್ತು. ಇದು ಬ್ಲಾಕ್​ ಬಸ್ಟರ್​ ಎಂದೂ ಸಾಬೀತು ಮಾಡಿತ್ತು. ಆದರೆ ಇದರ ಬಳಿಕ ಅವರಿಗೆ ಅದೃಷ್ಟ ಕೈಹಿಡಿರಲಿಲ್ಲ. ಒಂದರ ಮೇಲೊಂದರಂತೆ ಚಿತ್ರ ಹಳ್ಳಹಿಡಿದವು. ಅವಕಾಶಗಳೇ ಸಿಗಲಿಲ್ಲ. ಸಿನಿಮಾದಲ್ಲಿ ಸಿಗದ ಅವಕಾಶದಿಂದಾಗಿ ಹುಟ್ಟೂರು ತಿರುಪರಂಕುಂದ್ರಮ್‌ಗೆ ಮರಳಿದ್ದರು. ಅಲ್ಲಿಯೇ ಭಿಕ್ಷೆ ಬೇಡುತ್ತಿದ್ದರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Death News: ನಿವೃತ್ತ ನೌಕರ ಎಸ್. ವೆಂಕಟರಮಣ ಆಚಾರ್ ನಿಧನ

Mohan Tamil Actor

ಇದೀಗ ಅವರು, ತಮಿಳುನಾಡಿನ ಮಧುರೈನ (Madhurai) ತಿರುಪರಂಕುಂದ್ರಮ್‌ ಬಳಿಯ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರಿಗೆ 60 ವರ್ಷ ವಯಸ್ಸಾಗಿತ್ತು. ಪತ್ನಿ 10 ವರ್ಷಗಳ ಹಿಂದೆಯೇ ನಿಧನರಾಗಿದ್ದರು. ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಅವರು ಈಗ ಅನಾಥವಾಗಿ ಕೊನೆಯುಸಿರೆಳೆದಿದ್ದಾರೆ. ಆರಂಭದಲ್ಲಿ ನಟ ಎಂಬ ಗುರುತೂ ಸಿಕ್ಕಿರಲಿಲ್ಲ. ಬಳಿಕ ಗುರುತು ಪತ್ತೆಯಾಗಿದೆ. ಕಲಾವಿದನ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

A Movie Re-Release: “A” ಸಿನಿಮಾ ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಎಂದು ಸಿನಿಮಾ ಜಗತ್ತಿಗೆ ಉಪೇಂದ್ರ ರವರು ತೋರಿಸಿಕೊಟ್ಟರು. ಈ ಸಿನಿಮಾ ಆ ಕಾಲಕ್ಕೆ ಹೇಗೆ ಪ್ರಸ್ತುತವೋ, ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ.

VISTARANEWS.COM


on

A Movie Re-ReleaseActress Chandni relives memories
Koo

ಬೆಂಗಳೂರು: ಕನ್ನಡ ಚಿತ್ರರಂಗದ ಸಾರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ. ಉಪೇಂದ್ರ (A Movie Re-Release) ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024ರ ಮೇ 17ರಂದು (ಶುಕ್ರವಾರದಂದು) “A” ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದಿನಿ (Actress Chandini ) ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ಇದು ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಎಂದು ಸಿನಿಮಾ ಜಗತ್ತಿಗೆ ಉಪೇಂದ್ರ ರವರು ತೋರಿಸಿಕೊಟ್ಟರು. ಈ ಸಿನಿಮಾ ಆ ಕಾಲಕ್ಕೆ ಹೇಗೆ ಪ್ರಸ್ತುತವೋ, ಈ ಕಾಲಕ್ಕೂ ಕೂಡ ಈ ಸಿನಿಮಾ ಸಲ್ಲುತ್ತದೆ.

ವರ್ಣಿಸಲು ಪದಗಳೇ ಇಲ್ಲ‌

ನಾಯಕಿ ಚಾಂದಿನಿ “A” ಸಿನಿಮಾದಲ್ಲಿ ಹೇಗಿದ್ದರೋ, ಈಗಲು ಹಾಗೆ ಇದ್ದಾರೆ. ಅದಕ್ಕೆ ಅವರು ನೀಡುವ ಕಾರಣ, ನನ್ನ ಜೀವನವನ್ನೇ ಬದಲಿಸಿದಂತಹ ಸಿನಿಮಾ ಅದು. ಅದರಿಂದ ನನಗೆ ಸಿಕ್ಕ ಕನ್ನಡ ಜನರ ಪ್ರೀತಿ ಹಾಗು ಆ ಸಿನಿಮಾದ ಅ ಒಂದು ಫೇಮಸ್ ಡೈಲಾಗ್ “GOD IS GREAT” ಅನ್ನುವ ಹಾಗೆ, ಈ ಎರೆಡರ ಆಶೀರ್ವಾದದಿಂದ ನಾನು ಇವತ್ತಿಗೂ “A” ಚಾಂದಿನಿ ರೀತಿಯಲ್ಲೆ ಇದ್ದೀನಿ. ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಎನ್ನುತ್ತಾರೆ ನಾಯಕಿ.

ಇದನ್ನೂ ಓದಿ: Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

ʻʻನಿರ್ದೇಶಕ ಉಪೇಂದ್ರ ಅವರ ನಿರ್ದೇಶನದ ಬಗ್ಗೆ ವರ್ಣಿಸಲು ಪದಗಳೇ ಇಲ್ಲ‌. ಅಂದಿಗು ಇಂದಿಗೂ ನನ್ನ ಮೆಚ್ಚಿನ ನಿರ್ದೇಶಕ ಉಪೇಂದ್ರ ಅವರು. ಗುರುಕಿರಣ್ ಅವರ ಸಂಗೀತದಲ್ಲಿ ಮೂಡಿಬಂದಿರುವ “A” ಚಿತ್ರದ ಹಾಡುಗಳು ಈಗಲೂ ಜನಪ್ರಿಯ. ಕನ್ನಡಿಗರು “A” ಚಿತ್ರದಿಂದ ಇಲ್ಲಿಯವರೆಗೂ ನನಗೆ ತೋರುತ್ತಿರುವ ಪ್ರೀತಿಗೆ ಚಿರ ಋಣಿ. ಇಂತಹ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಮೇ 17 ಚಿತ್ರ ರೀ ರಿಲೀಸ್ ಆಗುತ್ತಿದೆ. ಈಗಲೂ ಭರ್ಜರಿ ಯಶಸ್ಸು ಕಾಣಲಿದೆ ಎಂದು ತಿಳಿಸಿದ ನಾಯಕಿ ಚಾಂದಿನಿ, ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಚಿತ್ರಗಳಲ್ಲಿ ನಟಿಸುತ್ತೇನೆʼʼಎಂದಿದ್ದಾರೆ.

ತನ್ನ ವಿಭಿನ್ನ ಶೀರ್ಷಿಕೆಯಿಂದಲೇ ಆ ಕಾಲದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆದಿದ್ದ ಚಿತ್ರ ʼಎʼ. ಅದುವರೆಗೆ ನಿರ್ದೇಶಕನಾಗಿ ಹಾಗೂ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಉಪೇಂದ್ರ ಈ ಚಿತ್ರದ ಮೂಲಕ ನಾಯಕನಾಗಿಯೂ ಪರಿಚಿತರಾದರು. ವಿಭಿನ್ನ ಕಥಾ ಹಂದರ, ಮೇಕಿಂಗ್‌ ಶೈಲಿಯಿಂದ ಈ ಚಿತ್ರ ನೋಡುಗರನ್ನು ಆಕರ್ಷಿಸಿತ್ತು. ನಾಯಕಿಯಾಗಿ ಚಾಂದಿನಿ ಕಾಣಿಸಿಕೊಂಡ ಈ ಸಿನಿಮಾ ಸಾಂಪ್ರದಾಯಿಕ ಕಟ್ಟು-ಕಟ್ಟಳೆಗಳನ್ನು ಮುರಿದು ಪ್ರಯೋಗಾತ್ಮಕ ಚಿತ್ರ ಎನಿಸಿಕೊಂಡಿತ್ತು.

ಹಿಟ್‌ ಚಿತ್ರ

ಒಬ್ಬ ನಿರ್ದೇಶಕ ಹಾಗೂ ನಾಯಕಿಯ ನಡುವಿನ ಪ್ರೇಮಕಥೆಯನ್ನೆ ಈ ಚಿತ್ರ ಆಧರಿಸಿತ್ತು. ಆದರೆ ಅದನ್ನೇ ಉಪೇಂದ್ರ ವಿಭಿನ್ನವಾಗಿ ತೆರೆ ಮೇಲೆ ತಂದಿದ್ದರು. ಎಲ್ಲವನ್ನೂ ರಿವರ್ಸ್ ಸ್ಕ್ರೀನ್ ಪ್ಲೇಯಲ್ಲಿ ಉಪೇಂದ್ರ ಹೇಳಿದ್ದರು. ಈ ಪ್ರಯೋಗವನ್ನು ವೀಕ್ಷಕರೂ ಮೆಚ್ಚಿಕೊಂಡಿದ್ದರು. ಆ ಮೂಲಕ ಉಪೇಂದ್ರ ಎಂಬ ನಿರ್ದೇಶಕ ಮತ್ತು ನಟ ಗೆಲುವು ಸಾಧಿಸಿದ್ದರು. ಪರಿಣಾಮ ಸೂಪರ್‌ ಚಿತ್ರ ಹಿಟ್‌ ಆಗಿತ್ತು. ಜತೆಗೆ ಸಂಭಾಷಣೆಯೂ ಮೆಚ್ಚುಗೆ ಗಳಿಸಿತ್ತು.

ಮೋಡಿ ಮಾಡಿದ ಸಂಗೀತ

ಚಿತ್ರದ ಯಶಸ್ಸಿನಲ್ಲಿ ಸಂಗೀತದ ಪಾತ್ರವೂ ಮುಖ್ಯವಾಗಿತ್ತು. ಸಿನಿಮಾದ ಹಾಡುಗಳು ಇಂದಿಗೂ ಜನಪ್ರಿಯ. ವಿಶೇಷ ಎಂದರೆ ಗುರು ಕಿರಣ್‌ ʼಎʼ ಸಿನಿಮಾದ ಮೂಲಕ ಮೊದಲ ಬಾರಿ ಸಂಗೀತ ಸಂಯೋಜನೆ ಮಾಡಿದ್ದರು. ಮೊದಲ ಸಿನಿಮಾದಲ್ಲೇ ಸಿಕ್ಸರ್‌ ಭಾರಿಸಿದ್ದರು. ʼಸುಮ್‌ ಸುಮ್ನೆʼ, ʼಚಾಂದಿನಿʼ, ʼಹೇಳ್‌ಕೊಳ್ಳೊಕೆ ಒಂದೂರುʼ, ʼಇದು ಒನ್‌ ಡೇ ಮ್ಯಾಚ್‌ʼ, ʼಮಾರಿ ಕಣ್ಣುʼ ಹೀಗೆ ಸಿನಿಮಾದ ಎಲ್ಲ ಹಾಡುಗಳೂ ಹಿಟ್‌ ಆಗಿದ್ದವು. ಇಂದಿಗೂ ಈ ಹಾಡುಗಳನ್ನು ಸಿನಿ ಪ್ರೇಮಿಗಳು ಗುನುಗುತ್ತಿರುತ್ತಾರೆ. ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ತಯಾರಾದ ಸಿನಿಮಾ ಸುಮಾರು 20 ಕೋಟಿ ರೂ. ಗಳಿಸಿತ್ತು ಎನ್ನಲಾಗಿದೆ.

ಈ ಮಧ್ಯೆ ಹಲವು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನಕ್ಕೆ ಇಳಿದಿರುವ ʼಯುಐʼ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರದ ʼಟ್ರೋಲ್‌ ಆಗುತ್ತೆʼ ಹಾಡು ಸೂಪರ್‌ ಹಿಟ್‌ ಆಗಿದ್ದು, ಸಿನಿಮಾ ರಿಲೀಸ್‌ಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿಯೂ ʼಯುಐʼ ತೆರೆಗೆ ಬರಲಿದೆ.

Continue Reading

ಸಿನಿಮಾ

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

777 Charlie: 2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಚಾರ್ಲಿ ಮುಖ್ಯ ಪಾತ್ರ ವಹಿಸಿತ್ತು. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮರಿಗಳಿಗೆ ಚಾರ್ಲಿ ಜನ್ಮ ನೀಡಿತ್ತು. ಆದರೆ ರಿಯಲ್​ ಲೈಫ್​ನಲ್ಲಿ ಇಷ್ಟು ವರ್ಷ ಕಳೆದರೂ ಚಾರ್ಲಿಗೆ ತಾಯಿ ಆಗುವ ಸಮಯ ಬಂದಿರಲಿಲ್ಲ. ಈಗ ಅದು ನೆರವೇರಿದೆ. ಈ ಚಿತ್ರದಲ್ಲಿ ಚಾರ್ಲಿಯ ಹೃದಯಸ್ಪರ್ಶಿ ಅಭಿನಯ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಮಾತ್ರವಲ್ಲದೆ ಪ್ಯಾನ್-ಇಂಡಿಯಾ ಪ್ರೇಕ್ಷಕರನ್ನೂ ಗೆದ್ದಿತ್ತು. ಇದೀಗ ಚಾರ್ಲಿ ಚಾರ್ಲಿಯಾಗಿರುವ ಸುದ್ದಿಯನ್ನು ಅಭಿಮಾನಿಗಳೊಂದಿಗೆ ರಕ್ಷಿತ್ ಶೆಟ್ಟಿ ಲೈವ್ ನಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

777 Charlie Dog Gives Birth To 6 Puppies Rakshit Shetty on live
Koo

‘777 ಚಾರ್ಲಿ’ (777 Charlie) ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ ತಾಯಿ ಆಗಿದೆ. 6 ಮರಿಗಳಿಗೆ ಜನ್ಮ ನೀಡಿದೆ.

ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಚಾರ್ಲಿ ಮುಖ್ಯ ಪಾತ್ರ ವಹಿಸಿತ್ತು. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮರಿಗಳಿಗೆ ಚಾರ್ಲಿ ಜನ್ಮ ನೀಡಿತ್ತು. ಆದರೆ ರಿಯಲ್​ ಲೈಫ್​ನಲ್ಲಿ ಇಷ್ಟು ವರ್ಷ ಕಳೆದರೂ ಚಾರ್ಲಿಗೆ ತಾಯಿ ಆಗುವ ಸಮಯ ಬಂದಿರಲಿಲ್ಲ. ಈಗ ಅದು ನೆರವೇರಿದೆ.

ರಕ್ಷಿತ್‌ ಶೆಟ್ಟಿ ಲೈವ್‌ಗೆ ಬಂದು ಮಾತನಾಡಿ ʻʻ777 ಚಾರ್ಲಿ ಸಿನಿಮಾ ಬಿಡುಗಡೆಯಾಗಿ 2 ವರ್ಷ ಆಗುತ್ತ ಬಂತು. ಒಂದು ವೇಳೆ ಚಾರ್ಲಿ ತಾಯಿಯಾದರೆ ಈ ಜರ್ನಿಗೆ ಒಂದು ಅರ್ಥ ಬರುತ್ತೆ ಎಂದು ನಾವು ಅದೆಷ್ಟೋ ಬಾರಿ ಯೋಚಿಸಿದ್ದೇವು. ಕಿರಣ್‌ ರಾಜ್‌ ನಾವೆಲ್ಲ ಚಾರ್ಲಿ ತಾಯಿಯಾಗಬೇಕು ಎಂದು ಕಾದಿದ್ದೆವುʼʼಎಂದರು.

ʻʻಪ್ರಮೋದ್‌ ಜತೆ ಚಾರ್ಲಿ ಇರುತ್ತದೆ. ಅವರು ಕಾಲ್‌ ಮಾಡಿದಾಗೆಲ್ಲ ಕೇಳುತ್ತಿದ್ದೆ. ಅದಕ್ಕೆ ವಯಸ್ಸು ಆಗಿದ್ದರಿಂದ ಏನಾಗತ್ತೋ ಗೊತ್ತಿಲ್ಲ ಅಂತ ಅವರು ಹೇಳುತ್ತಿದ್ದರು. ಮೇ 9ರಂದು ಚಾರ್ಲಿ 6 ಮರಿಗಳಿಗೆ ಜನ್ಮ ನೀಡಿದೆ. ಹಾಗಾಗಿ ಚಾರ್ಲಿ ಮತ್ತು ಅದರ ಮರಿಗಳನ್ನು ನೋಡಲು ನಾನು ಮೈಸೂರಿಗೆ ಬಂದೆ’ ಎಂದಿದ್ದಾರೆ ರಕ್ಷಿತ್​ ಶೆಟ್ಟಿ.

Continue Reading

ಟಾಲಿವುಡ್

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Ram Pothineni ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ.

VISTARANEWS.COM


on

Ram Pothineni Double iSmart teaser with Sanjay Dutt
Koo

ಬೆಂಗಳೂರು: ಉಸ್ತಾದ್ ರಾಮ್ ಪೋತಿನೇನಿ (Ram Pothineni) ಹಾಗೂ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ `ಡಬಲ್ ಇಸ್ಮಾರ್ಟ್‘ (Double iSmart) ಟೀಸರ್‌ ಬಿಡುಗಡೆಗೊಂಡಿದೆ. ಇಸ್ಮಾರ್ಟ್ ಶಂಕರ್ ಚಿತ್ರದ ಸೀಕ್ವೆಲ್ ಆಗಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾದ ಟೀಸರ್ ಡೈನಾಮಿಕ್ ಸ್ಟಾರ್ ರಾಮ್ ಪೋತಿನೇನಿ ಜನ್ಮದಿನಕ್ಕೆ ಬಿಡುಗಡೆ ಮಾಡಲಾಗಿದೆ. ಭರ್ಜರಿ ಆಕ್ಷನ್ ಮೂಲಕ ರಾಮ್ ಅಬ್ಬರಿಸಿದ್ದಾರೆ.

ಮಾಸ್ ಮತ್ತು ಆಕ್ಷನ್-ಪ್ಯಾಕ್ಡ್ ಟೀಸರ್‌ನಲ್ಲಿ ರಾಮ್ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. 1.26 ಸೆಕೆಂಡ್ ಇರುವ ಟೀಸರ್ ನಲ್ಲಿ ರಾಮ್ ಪೋತಿನೇನಿ ಹಾಗೂ ಸಂಜು ಬಾಬು ಜುಗಲ್ಬಂದಿ ನೋಡುಗರಿಗೆ ಕಿಕ್ ಕೊಡುವಂತಿದೆ. ‘ಡಬಲ್ ಇಸ್ಮಾರ್ಟ್’ ಟೀಸರ್ ಕ್ಲೈಮ್ಯಾಕ್ಸ್ ಸೀನ್ಸ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ.

ಇದನ್ನೂ ಓದಿ: Sanjay Dutt: ‘ಡಬಲ್ ಇಸ್ಮಾರ್ಟ್’ಗೆ ʻಬಿಗ್ ಬುಲ್ʼ ಎಂಟ್ರಿ; ಸಂಜಯ್ ದತ್ ಬರ್ತ್‌ಡೇ ಸ್ಪೆಷಲ್‌!

ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

ಬಿಗ್ ಬುಲ್ ಪಾತ್ರದಲ್ಲಿ ಸಂಜಯ್ ದತ್

ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್‌ದತ್‌ ಇತ್ತೀಚೆಗೆ ಸೌತ್ ಸಿನಿಮಾಗಳದತ್ತ ಚಿತ್ತ ಹರಿಸುತ್ತಿದ್ದಾರೆ. ಕೆಜಿಎಫ್ ಬಳಿಕ ಬ್ಯಾಕ್ ಟು ಬ್ಯಾಕ್ ದಕ್ಷಿಣ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಸಂಜು ಬಾಬಾ ಈಗ ‘ಡಬಲ್ ಇಸ್ಮಾರ್ಟ್’ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಈ ಹಿಂದೆ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಗಡ್ಡ ಬಿಟ್ಟು ಬಿಟ್ಟು ಸ್ಟೈಲೀಶ್ ಲುಕ್‌ನಲ್ಲಿ ಸಿಗಾರ್ ಸೇದುತ್ತಾ ರಗಡ್ ಆಗಿ ಮುನ್ನಾಭಾಯಿ ಕಾಣಿಸಿಕೊಂಡಿದ್ದು, ಈ ಪಾತ್ರಕ್ಕೆ ಬಿಗ್ ಬುಲ್ ಎಂದು ಹೆಸರಿಡಲಾಗಿದೆ. ಸಂಜಯ್ ದತ್ ಹಿಂದೆಂದೂ ಕಾಣದ ರೀತಿಯಲ್ಲಿ ತೋರಿಸಲು ನಿರ್ದೇಶಕ ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾಗೆ ಹಾಲಿವುಡ್ ಗಿಯಾನಿ ಜಿಯಾನೆಲ್ಲಿ ಕ್ಯಾಮೆರಾ ಹಿಡಿಯಲಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’ ಚಿತ್ರೀಕರಣ ಮುಕ್ತಾಯ

Kannada New Movie: ‘ಸ್ವಪ್ನ ಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.

VISTARANEWS.COM


on

Kannada New Movie swapna mantapa shooting compleated
Koo

ಬೆಂಗಳೂರು: ಮೈಸೂರಿನ ಬಾಬು ನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್‌ಪ್ರೈಸಿಸ್‌ ಸಂಸ್ಥೆಯಿಂದ (Kannada New Movie) ‘ಸ್ವಪ್ನ ಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.

‘ಸ್ವಪ್ನ ಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.

‘ಸ್ವಪ್ನ ಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನ ಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

ಇದನ್ನೂ ಓದಿ: Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

ಬಾಬುನಾಯ್ಕ್ ನಿರ್ಮಾಣ ಮತ್ತು ಬರಗೂರರ ನಿರ್ದೇಶನದ ಈ ಚಿತ್ರವು ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.

Continue Reading
Advertisement
Suspicious Case in Bengaluru
ಬೆಂಗಳೂರು31 mins ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Star Suvarna HuAnthiya UhuuAnthiya new celebrity game show
ಕಿರುತೆರೆ35 mins ago

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Hepatitis-A
ದೇಶ35 mins ago

Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

Anita Goyal
ದೇಶ36 mins ago

Anita Goyal: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಪತ್ನಿ ಅನಿತಾ ಗೋಯಲ್‌ ನಿಧನ

hunsur road accident
ಕ್ರೈಂ44 mins ago

Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

A Movie Re-ReleaseActress Chandni relives memories
ಸ್ಯಾಂಡಲ್ ವುಡ್51 mins ago

A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

Sunil Chhetri
ಕ್ರೀಡೆ1 hour ago

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Aishwarya Rai Injured heads to Cannes Film Festival with daughter
ಬಾಲಿವುಡ್1 hour ago

Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

Robert Fico
ವಿದೇಶ1 hour ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಕವಿ; ಯಾಕೀ ದ್ವೇಷ?

self harming gym trainer
ಕ್ರೈಂ1 hour ago

Self Harming: ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌