Income Tax Refund: ಐಟಿಆರ್‌ ಫೈಲ್‌ ಆಗಿದೆ, ರಿಫಂಡ್‌ಗಾಗಿ ಕಾಯುತ್ತಿದ್ದೀರಾ? ಇದಿಷ್ಟು ಗಮನದಲ್ಲಿರಲಿ - Vistara News

ಪ್ರಮುಖ ಸುದ್ದಿ

Income Tax Refund: ಐಟಿಆರ್‌ ಫೈಲ್‌ ಆಗಿದೆ, ರಿಫಂಡ್‌ಗಾಗಿ ಕಾಯುತ್ತಿದ್ದೀರಾ? ಇದಿಷ್ಟು ಗಮನದಲ್ಲಿರಲಿ

Income Tax Refund: ಐಟಿಆರ್‌ ಸಲ್ಲಿಸಿದವರ ಕೆಲ ತಪ್ಪುಗಳು ಸೇರಿ ಹಲವು ಕಾರಣಗಳಿಂದ ಐಟಿ ರಿಫಂಡ್ ವಿಳಂಬವಾಗುತ್ತದೆ. ಹಾಗಾಗಿ, ಐಟಿ ರಿಫಂಡ್‌ ವಿಳಂಬವಾದಾಗ ಏನು ಮಾಡಬೇಕು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Income Tax Refund
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್‌ (ITR) ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾದ ಕಾರಣ ಹೆಚ್ಚಿನ ಜನ ಕೊನೆ ಕ್ಷಣದವರೆಗೂ ಐಟಿಆರ್‌ ಸಲ್ಲಿಸಿದ್ದಾರೆ. ದೇಶಾದ್ಯಂತ 2022-23ನೇ ಸಾಲಿನಲ್ಲಿ 6.77 ಕೋಟಿ ಜನ ಐಟಿಆರ್‌ ಸಲ್ಲಿಸಿದ್ದಾರೆ. ಇನ್ನು, ಇಷ್ಟು ಐಟಿಆರ್‌ಗಳಲ್ಲಿ 3.44 ಕೋಟಿ ಐಟಿಆರ್‌ಗಳನ್ನು ಆದಾಯ ತೆರಿಗೆ ಇಲಾಖೆ ಪರಿಶೀಲನೆ ಮಾಡಿದೆ. ಅದರಂತೆ, ಅರ್ಹರಿಗೆ ಆದಾಯ ತೆರಿಗೆ ಮರುಪಾವತಿ (Income Tax Refund) ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಆದರೆ, ಐಟಿಆರ್‌ ಸಲ್ಲಿಸಿಯೂ ಐಟಿ ರಿಫಂಡ್‌ ವಿಳಂಬವಾಗುವ ಸಾಧ್ಯತೆ ಇರುತ್ತದೆ. ಐಟಿಆರ್‌ ಸಲ್ಲಿಸಿದವರ ಕೆಲ ತಪ್ಪುಗಳು ಸೇರಿ ಹಲವು ಕಾರಣಗಳಿಂದ ವಿಳಂಬವಾಗುತ್ತದೆ. ಹೀಗೆ ಇನ್ನಷ್ಟು ವಿಳಂಬವಾಗುವುದನ್ನು ತಡೆಯಲು ಐಟಿಆರ್‌ ಸಲ್ಲಿಸಿದವರು ಒಂದಷ್ಟು ಪ್ರಕ್ರಿಯೆಗಳನ್ನು ಪಾಲಿಸಿದರೆ ಕ್ಷಿಪ್ರವಾಗಿ ಐಟಿ ರಿಫಂಡ್‌ ಪಡೆಯಬಹುದಾಗಿದೆ.

ಐಟಿ ರಿಫಂಡ್‌ ವಿಳಂಬಕ್ಕೆ ಕಾರಣಗಳೇನು?

  1. ಹೆಚ್ಚುವರಿ ದಾಖಲೆಗಳು ಬೇಕಾಗುತ್ತವೆ
  2. ಸರಿಯಾದ ಬ್ಯಾಂಕ್‌ ಖಾತೆ ಮಾಹಿತಿ ನೀಡದಿರುವುದು
  3. ರಿಫಂಡ್‌ಗಾಗಿ ಸರಿಯಾದ ಮಾಹಿತಿ ಒದಗಿಸದಿರುವುದು
  4. ಟಿಡಿಸ್‌ ಅಥವಾ ಟಿಸಿಎಸ್‌ನಲ್ಲಿ ಮಿಸ್‌ಮ್ಯಾಚ್‌ ಆಗಿರುತ್ತದೆ
  5. ರಿಫಂಡ್‌ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲೇ ಇರುವುದು

ರಿಫಂಡ್‌ ಆಗದಿದ್ದರೆ ಏನು ಮಾಡಬೇಕು?

ನೀವು ಐಟಿಆರ್‌ ಸಲ್ಲಿಸಿ ತುಂಬ ದಿನ ಆದರೂ ನಿಮ್ಮ ಬ್ಯಾಂಕ್‌ ಖಾತೆಗೆ ರಿಫಂಡ್‌ ಮೊತ್ತ ಜಮೆಯಾಗದಿದ್ದರೆ ಮೊದಲು ಇ-ಮೇಲ್‌ ಚೆಕ್‌ ಮಾಡಬೇಕು. ಹೆಚ್ಚುವರಿ ದಾಖಲೆ, ಮಾಹಿತಿ ಬೇಕಾಗಿದ್ದರೆ ಆದಾಯ ತೆರಿಗೆ ಇಲಾಖೆಯು ನಿಮಗೊಂದು ಮೇಲ್‌ ಕಳುಹಿಸಿರುತ್ತದೆ. ಆಗ ನೀವು, ಅಗತ್ಯ ಮಾಹಿತಿ ಒದಗಿಸಿದರೆ ರಿಫಂಡ್‌ ಆಗುತ್ತದೆ. ಹಾಗೊಂದು ವೇಳೆ ರಿಫಂಡ್‌ ಕಾಲಮಿತಿ ಮುಗಿದಿದ್ದರೆ (Expire) ರಿಫಂಡ್‌ಗೆ ಮತ್ತೆ ಅರ್ಜಿ (Reissue) ಸಲ್ಲಿಸಬೇಕು. ರಿಫಂಡ್‌ ಸ್ಟೇಟಸ್‌ನಲ್ಲಿ Returned ಅಂತ ಇದ್ದರೆ, ಆಗ ನೀವು ಇ-ಫೈಲಿಂಗ್‌ ಪೋರ್ಟಲ್‌ ಅತೌಆ ಅಸೆಸಿಂಗ್‌ ಆಫೀಸರ್‌ಗೆ ಮತ್ತೆ ಅರ್ಜಿ (Reissue) ಸಲ್ಲಿಸಬೇಕು.

ದೂರು ಸಲ್ಲಿಸುವುದು ಹೇಗೆ?

ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿದ 30 ದಿನಗಳೊಳಗೆ ರಿಫಂಡ್‌ ಆಗಿರುವುದನ್ನು ದೃಢಪಡಿಸಿಕೊಳ್ಳಬೇಕು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಇ-ಫೈಲಿಂಗ್‌ ಪೋರ್ಟಲ್‌ನಲ್ಲಿ ನಿಮಗೆ ರಿಫಂಡ್‌ ಆಗದಿರಲು ಕಾರಣ ನೀಡಿರದಿದ್ದರೆ (Non-receipt) ಈ ಕುರಿತು incometax.gov.inಗೆ ಭೇಟಿ ನೀಡಿ ದೂರು ನೀಡಬಹುದು. ಹಾಗೆಯೇ, 1800-103-4455ಗೆ (Toll Free) ಕರೆ ಮಾಡಿ ದೂರು ಸಲ್ಲಿಸಬಹುದು. ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯೊಳಗೆ ಮಾತ್ರ ಕರೆ ಮಾಡಿ ದೂರು ನೀಡಬಹುದು.

ಇದನ್ನೂ ಓದಿ: ITR Filing: ಈ ವರ್ಷ ದಾಖಲೆ ಐಟಿಆರ್ ಸಲ್ಲಿಕೆ, ಎಷ್ಟು ಮಂದಿ ಸಲ್ಲಿಸಿದ್ದಾರೆ ನೋಡಿ!

ರಿಫಂಡ್‌ ಸ್ಟೇಟಸ್‌ ಚೆಕ್‌ ಮಾಡುವುದು ಹೇಗೆ?

ಇ-ಫೈಲಿಂಗ್‌ ವೆಬ್‌ಸೈಟ್‌ incometaxindiaefiling.gov.in ಅಥವಾ ನ್ಯಾಷನಲ್‌ ಸೆಕ್ಯುರಿಟೀಸ್‌ ಡೆಪಾಸಿಟರಿ ಲಿಮಿಟೆಡ್‌ನ tin.nsdl.comಗೆ ಭೇಟಿ ನೀಡುವ ಮೂಲಕ ರಿಫಂಡ್‌ ಸ್ಟೇಟಸ್‌ ಚೆಕ್‌ ಮಾಡಬಹುದಾಗಿದೆ. ಹಾಗೆಯೇ, www.incometax.gov.in ಗೆ ಭೇಟಿ ನೀಡಿ, ಲಾಗ್‌ ಇನ್‌ ಆಗಿಯೂ ಸ್ಟೇಟಸ್‌ ಚೆಕ್‌ ಮಾಡಬಹುದಾಗಿದೆ. ಪ್ಯಾನ್‌ಕಾರ್ಡ್‌ ಹಾಗೂ ಪಾಸ್‌ವರ್ಡ್‌ ನಮೂದಿಸಬೇಕು. ನಂತರ ಇ-ಫೈಲ್‌ (E-File) ಆಪ್ಶನ್‌ ಮೇಲೆ ಕ್ಲಿಕ್‌ ಮಾಡಬೇಕು. ನಂತರ ಇನ್‌ಕಮ್‌ ಟ್ಯಾಕ್ಸ್‌ ರಿಟರ್ನ್‌ (Income Tax Return) ಆಯ್ಕೆ ಮಾಡಿಕೊಂಡು ವ್ಯೂ ಫೈಲ್ಡ್‌ ರಿಟರ್ನ್‌ (View Filed Return) ಎಂಬುದರ ಮೇಲೆ ಕ್ಲಿಕ್‌ ಮಾಡಬೇಕು. ನಂತರ ವ್ಯೂ ಡಿಟೇಲ್ಸ್‌ ಆಪ್ಶನ್‌ (View Details Option) ಆಯ್ಕೆ ಮಾಡಿಕೊಂಡರೆ ಸ್ಟೇಟಸ್‌ ಕಾಣುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Exit Poll 2024: Exit Poll 2024 Live: ಲೋಕಸಭೆ ಚುನಾವಣೆಯು ಕೊನೆಯ ಹಂತಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಏಳನೇ ಹಂತದ ಮತದಾನವೂ ಮುಕ್ತಾಯಗೊಂಡಿದ್ದು, ಎಲ್ಲರ ಗಮನವೀಗ ಮತಗಟ್ಟೆ ಸಮೀಕ್ಷೆಗಳ ಮೇಲಿದೆ. ಮತಗಟ್ಟೆ ಸಮೀಕ್ಷೆಯು ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿ ಎಂದೇ ಹೇಳಲಾಗುತ್ತದೆ. ಹಾಗಾಗಿ, ಮತಗಟ್ಟೆ ಸಮೀಕ್ಷೆಗಳ ಪಿನ್‌ ಟು ಪಿನ್‌ ಮಾಹಿತಿಯ ಲೈವ್‌ಅನ್ನು ಇಲ್ಲಿ ವೀಕ್ಷಿಸಿ.

VISTARANEWS.COM


on

Exit Poll 2024
Koo

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ, ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯು (Lok Sabha Election 2024) ಮುಕ್ತಾಯಗೊಂಡಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತಗಟ್ಟೆ ಸಮೀಕ್ಷೆಯ ವರದಿಗಳು ಲಭ್ಯವಾಗಲಿವೆ. ಚುನಾವಣೆ ಫಲಿತಾಂಶ ಏನಾಗಬಹುದು? ಯಾವ ಪಕ್ಷಕ್ಕೆ ಹೆಚ್ಚಿನ ಕ್ಷೇತ್ರಗಳು ಸಿಗಬಹುದು? ಯಾರು ದೇಶದ ಪ್ರಧಾನಿಯಾಗಬಹುದು ಎಂಬುದಕ್ಕೆ ಮತಗಟ್ಟೆ ಸಮೀಕ್ಷೆಯು ದಿಕ್ಸೂಚಿಯಾಗಿದೆ. ಹಾಗಾಗಿ, ಚುನಾವಣೋತ್ತರ ಸಮೀಕ್ಷೆಯು ಫಲಿತಾಂಶದಷ್ಟೇ ಕುತೂಹಲ ಕೆರಳಿಸಿದೆ. ಈ ಮತಗಟ್ಟೆ ಸಮೀಕ್ಷೆಯ ಕ್ಷಣಕ್ಷಣದ (Exit Poll 2024 Live) ಮಾಹಿತಿಯ ಲೈವ್‌ ಅನ್ನು ಇಲ್ಲಿ ವೀಕ್ಷಿಸಿ.

ಮುಂಬೈ ಸಟ್ಟಾ ಬಜಾರ್‌ ವರದಿ ಹೀಗಿದೆ

ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಾರ, ಚುನಾವಣೆಯಲ್ಲಿ ಬಿಜೆಪಿಯು 295-305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಈ ಬಾರಿ 55-65 ಕ್ಷೇತ್ರಗಳಲ್ಲಿ ಮಾತ್ರ ಜಯಿಸಲಿದೆ. ಇನ್ನು, ರಾಮಮಂದಿರ ಕಾರಣದಿಂದ ಬಿಜೆಪಿಗೆ ಪ್ರಮುಖವಾಗಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 64-66 ಕ್ಷೇತ್ರಗಳು ಲಭಿಸಲಿವೆ ಎಂದು ವರದಿ ತಿಳಿಸಿದೆ. ಇದಕ್ಕೂ ಮೊದಲು ಮುಂಬೈ ಸಟ್ಟಾ ಬಜಾರ್‌ ಸಮೀಕ್ಷೆಯು ಬಿಜೆಪಿ 270-280 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದರೆ, ಕಾಂಗ್ರೆಸ್‌ 70-80 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂದು ತಿಳಿಸಿತ್ತು.

ಯೋಗೇಂದ್ರ ಯಾದವ್‌ ಹೇಳಿದ್ದಿಷ್ಟು

ಬಿಜೆಪಿಯು ಮತ್ತೊಂದು ಸಾರ್ವತ್ರಿಕ ಚುನಾವಣೆಯ ವಿಜಯವನ್ನು ಪಡೆಯುತ್ತದೆ ಎಂದು ಚುನಾವಣಾ ರಣತಂತ್ರಗಾರ ಯೋಗೇಂದ್ರ ಯಾದವ್‌ ಅವರು ಭವಿಷ್ಯ ನುಡಿದಿದ್ದಾರೆ. ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಯಾದವ್‌ ಅಚ್ಚರಿ ಮೂಡಿಸಿದ್ದಾರೆ. ಯಾದವ್ ಪ್ರಕಾರ ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲಬಹುದು. ಅಂದರೆ ಎನ್‌ಡಿಎ (NDA) ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಸುಳಿದಾಡಬಹುದು.

ಪ್ರಶಾಂತ್‌ ಕಿಶೋರ್‌ ಲೆಕ್ಕಾಚಾರ ಈ ರೀತಿ ಇದೆ

ಚುನಾವಣೆ ತಜ್ಞ, ರಾಜಕೀಯ ಪರಿಣತರಾದ ಪ್ರಶಾಂತ್‌ ಕಿಶೋರ್‌ ಅವರು ಕೂಡ ದೇಶದಲ್ಲಿ ಮೋದಿ ಹ್ಯಾಟ್ರಿಕ್‌ ಗಳಿಸಲಿದ್ದಾರೆ ಎಂದು ಹೇಳಿದ್ದಾರೆ. “ದೇಶದಲ್ಲಿ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾದರೂ ಜನಕ್ಕೆ ಅವರ ಮೇಲೆ ಸಿಟ್ಟಿಲ್ಲ. ಹಾಗಾಗಿ, ಬಿಜೆಪಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದು ತಿಳಿಸಿದ್ದಾರೆ. ಹಾಗೆಯೇ, ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ‌

ಇದನ್ನೂ ಓದಿ: Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

Continue Reading

ಕರ್ನಾಟಕ

Rahul Gandhi: ರಾಹುಲ್ ಗಾಂಧಿಗೆ ರಿಲೀಫ್; ಜೂನ್‌ 7ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್‌ ಸೂಚನೆ

Rahul Gandhi: ಬಿಜೆಪಿಗೆ ಮಾನನಷ್ಟ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿಗೆ ಜಾಮೀನು ರಹಿತ ವಾರಂಟ್‌ ಭೀತಿ ಎದುರಾಗಿತ್ತು. ಆದರೆ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌, ಜೂನ್‌ 7ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

VISTARANEWS.COM


on

Rahul Gandhi
Koo

ಬೆಂಗಳೂರು: ಬಿಜೆಪಿಗೆ ಮಾನನಷ್ಟ ಪ್ರಕರಣದಲ್ಲಿ (Defamation Case) ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಜಾಮೀನು ಸಿಕ್ಕ ಬೆನ್ನಲ್ಲೇ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ. ಪ್ರಕರಣದ 4ನೇ ಆರೋಪಿ ರಾಹುಲ್ ಗಾಂಧಿ (Rahul Gandhi) ಅವರು ಶನಿವಾರ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ವಾರಂಟ್ ಜಾರಿ ಮಾಡುವಂತೆ ದೂರುದಾರರ ಪರ ವಕೀಲ ಮನವಿ ಮಾಡಿದ್ದರು. ಆದರೆ, ವಾರಂಟ್‌ ನೀಡದೆ, ಜೂನ್ 7 ರಂದು ಖುದ್ದು ಹಾಜರಾಗಲು 42ನೇ ಎಸಿಎಂಎಂ ಕೋರ್ಟ್‌ ಸೂಚನೆ ನೀಡಿದೆ.

ಸಿಆರ್‌ಪಿಸಿ 205 ಅಡಿಯಲ್ಲಿ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಲಾಗಿದ್ದು, ಜೂನ್ 7 ರಂದು ಖುದ್ದು ಹಾಜರಾಗಲು ರಾಹುಲ್‌ ಗಾಂಧಿಗೆ ಸೂಚನೆ ನೀಡಲಾಗಿದೆ. ಬಿಜೆಪಿ ಮಾನನಷ್ಟ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ಇಂದು ಕೋರ್ಟ್‌ಗೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಜಾಮೀನು ನೀಡಲಾಗಿತ್ತು. ರಾಹುಲ್ ಗಾಂಧಿ ಹಾಜರಾಗದ ಹಿನ್ನಲೆ ವಾರಂಟ್ ಜಾರಿ ಮಾಡುವಂತೆ ದೂರುದಾರ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಕೋರ್ಟ್‌ ವಿಚಾರಣೆಗೆ ಹಾಜರಾಗಲು ರಾಹುಲ್‌ ಗಾಂಧಿಗೆ ಸೂಚಿಸಿದೆ.

ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು

ಬಿಜೆಪಿಗೆ ಮಾನನಷ್ಟ ಪ್ರಕರಣದಲ್ಲಿ (Defamation Case) 42ನೇ ಎಸಿಎಂಎಂ ಕೋರ್ಟ್‌ (ACMM court) ಮುಂದೆ ಇಂದು ಹಾಜರಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರಿಗೆ ಶರತ್ತುಬದ್ಧ ಜಾಮೀನು (Bail) ನೀಡಲಾಗಿತ್ತು. ಪ್ರಕರಣದ ಇನ್ನೊಬ್ಬ ಆರೋಪಿ ರಾಹುಲ್‌ ಗಾಂಧಿ (Rahul Gandhi) ಗೈರು ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಗರಂ ಆಗಿದ್ದರು.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಕೋರ್ಟ್‌ ವಿಚಾರಣೆ ನಡೆಸಿತ್ತು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ A4 ಆರೋಪಿಯಾಗಿದ್ದಾರೆ.

ವಿಚಾರಣೆಗೆ ಮುನ್ನ ಆಗಮಿಸಿದ ಸಿಎಂ ಹಾಗೂ ಡಿಸಿಎಂ, ಕೋರ್ಟ್ ಹಾಲ್ ಮುಂದೆ ಸಾಮಾನ್ಯರಂತೆ, ಜೊತೆಯಾಗಿ ಕುಳಿದಿದ್ದರು. ನಂತರ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಾಧೀಶ ಕೆ. ಎನ್. ಶಿವಕುಮಾರ್ ಮುಂದೆ ಇಬ್ಬರೂ ಹಾಜರಾದರು. ಪಾರ್ಟಿ ಪ್ರೆಸಿಡೆಂಟ್ ಹಾಗೂ ಎರಡನೇ ಆರೋಪಿ ಒಂದೇ ಎಂದು ವಕೀಲರು ತಿಳಿಸಿದರು. ಇಬ್ಬರನ್ನೂ ಹೊರ ಹೋಗಬಹುದೆಂದು ಜಡ್ಜ್‌ ಸೂಚಿಸಿದರು. ಇಬ್ಬರಿಗೂ ಶರತ್ತುಬದ್ಧ ಜಾಮೀನು ಮಂಜೂರು ಮಾಡಲಾಯಿತು. ಡಿಸಿಎಂ ಪರ ಎಎಜಿ ಎಸ್.ಎ ಅಹಮದ್ ವಾದಿಸಿದ್ದರು.

ನಾಲ್ಕನೇ ಆರೋಪಿ ರಾಹುಲ್ ಗಾಂದಿ ದೆಹಲಿಯಲ್ಲಿದ್ದಾರೆ. ಇಂದು ಇಂಡಿಯಾ ಕೂಟದ ಮೀಟಿಂಗ್ ಇದೆ. ಹೀಗಾಗಿ ರಾಹುಲ್ ಗಾಂಧಿ ಹಾಜರಾಗಲಾಗುತ್ತಿಲ್ಲ. ನಾಲ್ಕನೇ ತಾರೀಕು ಚುನಾವಣೆ ರಿಸಲ್ಟ್ ಇದೆ. ಹೀಗಾಗಿ ಕಾಲಾವಕಾಶ ನೀಡುವಂತೆ ವಿನಂತಿಸಿದ್ದರು. ಹಾಗಿದ್ದರೆ ಇಂದೇ ಬಂದು ಮುಗಿಸಿಕೊಂಡು ಹೋಗಬಹುದಿತ್ತಲ್ಲ, ದೆಹಲಿಗೆ ಹೋಗೋದಕ್ಕೆ ಐದು ದಿನ ಬೇಕಾಗಿಲ್ಲವಲ್ಲ ಎಂದು ಜಡ್ಜ್ ಪ್ರಶ್ನಿಸಿದ್ದರು.

ದೂರುದಾರರ ಪರ ಹಾಜರಾದ ವಕೀಲ ವಿನೋದ್ ಕುಮಾರ್, “ನ್ಯಾಯಾಲಯದಿಂದ ಸಮನ್ಸ್ ಜಾರಿ ಆದಾಗ ಬರಬೇಕು. ಪದೇ ಪದೆ ಕಾರಣ ನೀಡಿದ್ರೆ ಹೇಗೆ? ಎರಡು ಮೂರು ಸಲ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಮುಂದೆಯೂ ಬೇರೆ ಬೇರೆ ಸಭೆ ಇದೆ ಅಂತ ಹಾಜರಾಗದೇ ಇರಬಹುದು. ಇವತ್ತಿಗೆ ಎಲೆಕ್ಷನ್ ಮುಗಿಯುತ್ತೆ. ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರೇ ಆಗಿರಲಿ, ಕಾನೂನಿನ ಮುಂದೆ ಎಲ್ಲರೂ ಒಂದೇ. ಹೀಗಾಗಿ ರಾಹುಲ್ ಗಾಂಧಿಗೆ ವಾರಂಟ್ ಜಾರಿ ಮಾಡಿ” ಎಂದು ಮನವಿ ಮಾಡಿದ್ದರು.

ಏನಿದು ಪ್ರಕರಣ?

2023ರ ಮೇ 8ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಇದನ್ನೂ ಓದಿ | Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

Continue Reading

ಪ್ರಮುಖ ಸುದ್ದಿ

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

Arvind Kejriwal : ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿದ್ದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಅಥವಾ ಇತರ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ತನಿಖಾ ಸಂಸ್ಥೆ ಹೈಕೋರ್ಟ್​​ಗೆ ತಿಳಿಸಿತ್ತು.

VISTARANEWS.COM


on

Arvind Kejriwal
Koo

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದ ಡೆಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಖಾತರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಸ್ಥಳೀಯ ನ್ಯಾಯಾಲಯವು ಜೂನ್ 5 ಕ್ಕೆ ಕಾಯ್ದಿರಿಸಿದ್ದರಿಂದ ನಾಳೆ (ಜೂನ್ 2) ತಿಹಾರ್ ಜೈಲಿಗೆ ಮರಳಬೇಕಾಗುತ್ತದೆ. ವೈದ್ಯಕೀಯ ಕಾರಣಗಳಿಗಾಗಿ ಒಂದು ವಾರ ಮಧ್ಯಂತರ ಜಾಮೀನು ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದಾಗ್ಯೂ, ಅವರ ಅರ್ಜಿಯನ್ನು ಜಾರಿ ನಿರ್ದೇಶನಾಲಯವು ತೀವ್ರವಾಗಿ ವಿರೋಧಿಸಿತ್ತು. ಎಎಪಿ ಮುಖ್ಯಸ್ಥರು ಸತ್ಯಗಳನ್ನು ಮರೆಮಾಚಿದ್ದಾರೆ ಮತ್ತು ಅವರ ಆರೋಗ್ಯದ ಬಗ್ಗೆ ಸೇರಿದಂತೆ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಅದು ಹೇಳಿದೆ.

ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿದ್ದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಅಥವಾ ಇತರ ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ತನಿಖಾ ಸಂಸ್ಥೆ ಹೈಕೋರ್ಟ್​​ಗೆ ತಿಳಿಸಿತ್ತು.

ಮಧ್ಯಂತರ ಜಾಮೀನು ಸಿಕ್ಕಿತ್ತು

ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಮಧ್ಯಂತರ ಜಾಮೀನು ನೀಡಿತ್ತು. ಅದು ಜೂನ್ 1 ರಂದು ಕೊನೆಗೊಳ್ಳುತ್ತದೆ. ಅವರು ಜೂನ್ 2 ರಂದು (ಭಾನುವಾರ) ತಿಹಾರ್ ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕಾಗಿತ್ತು. ಅವರ ಜಾಮೀನು ಅರ್ಜಿ ಮಾನ್ಯವಾಗದ ಕಾರಣ ಜೈಲಿಗೆ ಹೋಗಲೇಬೇಕಾಗಿದೆ.

ಇದನ್ನೂ ಓದಿ: Narendra Modi : 45 ಗಂಟೆಗಳaಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

ವೈದ್ಯಕೀಯ ಪರೀಕ್ಷೆಗಳಿಗಾಗಿ ಅವರ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ ವಿಸ್ತರಿಸುವ ಮನವಿಯನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ನಿರಾಕರಿಸಿದ ನಂತರ ಎಎಪಿ ಮುಖ್ಯಸ್ಥರು ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಪಡೆಯುವ ಆಯ್ಕೆಯನ್ನು ಹೊಂದಿರುವುದರಿಂದ ಅವರ ಮನವಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿತ್ತು.

ಹೆಚ್ಚಿನ ಕೀಟೋನ್ ಮಟ್ಟ ಹೆಚ್ಚಳದಿಂದಾಗಿ ತೂಕ ನಷ್ಟ ದಿಂದಾಗಿ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಹಲವಾರು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನು ವಿಸ್ತರಣೆ ಕೋರಿದ್ದರು. ಈ ರೋಗಲಕ್ಷಣಗಳು ಮೂತ್ರಪಿಂಡದ ಸಮಸ್ಯೆಗಳು, ಗಂಭೀರ ಹೃದಯದ ಪರಿಸ್ಥಿತಿಗಳು ಅಥವಾ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಆಪ್​ ವಕೀಲರು ವಾದಿಸಿದ್ದರು.

ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಕೇಜ್ರಿವಾಲ್​, ಜೂನ್ 2 ರಂದು ಶರಣಾಗುವುದಾಗಿ ಹೇಳಿದ್ದರು. ನಂತರ ತಮ್ಮ ವಯಸ್ಸಾದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಪೋಷಕರನ್ನು ನೋಡಿಕೊಳ್ಳುವಂತೆ ಜನರನ್ನು ಕೇಳಿಕೊಂಡಿದ್ದರು.

ನಾನು ಶರಣಾಗಲು ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಅದಕ್ಕೆ ನಾನು ತಲೆಬಾಗುವುದಿಲ್ಲ” ಎಂದು ಅವರು ಹೇಳಿದರು. ದೆಹಲಿಯ ಜನರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳು ಅವರ ಅನುಪಸ್ಥಿತಿಯಲ್ಲಿಯೂ ಮುಂದುವರಿಯುತ್ತವೆ ಎಂದು ಭರವಸೆ ನೀಡಿದರು.

ನೀವು ನಿಮ್ಮ ಬಗ್ಗೆ ಕಾಳಜಿ ವಹಿಸಿ, ಜೈಲಿನಲ್ಲಿ ನಿಮ್ಮ ಬಗ್ಗೆ ನಾನು ತುಂಬಾ ಚಿಂತೆ ಮಾಡುತ್ತೇನೆ. ನೀವು ಸಂತೋಷವಾಗಿದ್ದರೆ ನಿಮ್ಮ ಕೇಜ್ರಿವಾಲ್ ಕೂಡ ಸಂತೋಷವಾಗಿರುತ್ತಾರೆ. ನಾನು ಖಂಡಿತವಾಗಿಯೂ ನಿಮ್ಮ ನಡುವೆ ಇರುವುದಿಲ್ಲ, ಆದರೆ ನಿಮ್ಮ ಎಲ್ಲಾ ಕೆಲಸಗಳು ಮುಂದುವರಿಯುತ್ತವೆ. ಹಿಂದಿರುಗಿದ ನಂತರ ನಾನು ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1000 ರೂ.ಗಳನ್ನು ನೀಡಲು ಪ್ರಾರಂಭಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

Narendra Modi :2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

VISTARANEWS.COM


on

Narendra Modi
Koo

ಚೆನ್ನೈ: ಹಲವಾರು ತಿಂಗಳ ಲೋಕ ಸಭಾ ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಕೈಗೊಂಡಿದ್ದ 45 ಗಂಟೆಗಳ ಧ್ಯಾನವನ್ನು ಪೂರ್ಣಗೊಳಿಸಿದ್ದಾರೆ. ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾಗಿರುವ ಧ್ಯಾನ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಧ್ಯಾತ್ಮಿಕ ಕೈಂಕರ್ಯ ಮಾಡಿದ್ದರು.

2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನದ ಮುಕ್ತಾಯದೊಂದಿಗೆ ಅವರು ಧ್ಯಾನ ಕಾರ್ಯ ಕೈಗೊಂಡಿದ್ದರು. ಮೇ 30ರ ಗುರುವಾರ ಮೋದಿ ಕನ್ಯಾಕುಮಾರಿಗೆ ಆಗಮಿಸಿದ್ದರು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿದ್ದ ಅದೇ ಸ್ಥಳದಲ್ಲಿ ಒಂದೇ ಕಾಲಿನಲ್ಲಿ ಧ್ಯಾನ ಮಾಡಿದ್ದಳು.

ಇದನ್ನೂ ಓದಿ: Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

ಇದು ಭಾರತದ ದಕ್ಷಿಣ ತುದಿಯಾಗಿದೆ. ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಪ್ರದೇಶ ಸಂಗಮವಾಗುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳ. ಕನ್ಯಾಕುಮಾರಿಗೆ ಹೋಗುವ ಮೂಲಕ ಮೋದಿ ರಾಷ್ಟ್ರೀಯ ಏಕತೆಯ ಸಂಕೇತವನ್ನು ಸಾರಿದ್ದರು ಎನ್ನಲಾಗಿದೆ.

ಜೂನ್ 1 ರಂದು ನಡೆಯಲಿರುವ 2024 ರ ಲೋಕಸಭಾ ಚುನಾವಣೆಯ ಅಂತಿಮ ಮತ್ತು ಏಳನೇ ಹಂತದ ಹಿನ್ನೆಲೆಯಲ್ಲಿ ಮೋದಿ ಗುರುವಾರ ಪಂಜಾಬ್​​ ಹೋಶಿಯಾರ್​ಪುರದಲ್ಲಿ ತಮ್ಮ ಚುನಾವಣಾ ಪ್ರಚಾರ ಮುಕ್ತಾಯಗೊಳಿಸಿದರು.

ಸುದೀರ್ಘ ಪ್ರಚಾರ ರ್ಯಾಲಿ

ಮೋದಿ 75 ದಿನಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳು ಸೇರಿದಂತೆ ಸುಮಾರು 206 ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಅವರು ವಿವಿಧ ಸುದ್ದಿ ಮತ್ತು ಮಾಧ್ಯಮ ವೇದಿಕೆಗಳೊಂದಿಗೆ ಸುಮಾರು 80 ಸಂದರ್ಶನಗಳನ್ನು ಮಾಡಿದ್ದಾರೆ. ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಆಧ್ಯಾತ್ಮಿಕ ಪ್ರವಾಸಗಳನ್ನು ಕೈಗೊಂಡಿದ್ದರು. 2019ರಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ್ದ ಅವರು, 2014ರಲ್ಲಿ ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. 543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಮುಖಂಡ ತೇಜಸ್ವಿ ಯಾದವ್ ಅವರು ಶನಿವಾರ ಕನ್ಯಾಕುಮಾರಿಯಲ್ಲಿ ಮೋದಿಯವರ ನಡೆಸುತ್ತಿರುವ ಆಧ್ಯಾತ್ಮಿಕ ಚಟುವಟಿಕೆಯನ್ನು ಫೋಟೋ ಶೂಟ್” ಎಂದು ಲೇವಡಿ ಮಾಡಿದ್ದರು. ಮೋದಿ ಅವರು ಯಾವುದೇ ಧ್ಯಾನ ಮಾಡುತ್ತಿಲ್ಲ, ಫೋಟೋ ಶೂಟ್ ಮಾತ್ರ ನಡೆಯುತ್ತಿದೆ. ಫೋಟೋ ಶೂಟ್ ಮುಗಿದ ನಂತರ, ಅವರು ಹಿಂತಿರುಗುತ್ತಾರೆ” ಎಂದು ತೇಜಸ್ವಿ ಯಾದವ್ ಹೇಳಿದರು.

Continue Reading
Advertisement
Exit Poll 2024
ದೇಶ26 mins ago

Exit Poll 2024 Live: ಮೋದಿನಾ? ರಾಹುಲ್‌ ಗಾಂಧಿನಾ? ಮತಗಟ್ಟೆ ಸಮೀಕ್ಷೆಯ ಲೈವ್‌ ಇಲ್ಲಿ ವೀಕ್ಷಿಸಿ

Rahul Gandhi
ಕರ್ನಾಟಕ37 mins ago

Rahul Gandhi: ರಾಹುಲ್ ಗಾಂಧಿಗೆ ರಿಲೀಫ್; ಜೂನ್‌ 7ಕ್ಕೆ ವಿಚಾರಣೆಗೆ ಹಾಜರಾಗಲು ಕೋರ್ಟ್‌ ಸೂಚನೆ

Karnataka Weather Forecast
ಮಳೆ47 mins ago

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Star Saree Fashion
ಫ್ಯಾಷನ್51 mins ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Arvind Kejriwal
ಪ್ರಮುಖ ಸುದ್ದಿ1 hour ago

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

World Milk Day
ಆರೋಗ್ಯ1 hour ago

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

Narendra Modi
ಪ್ರಮುಖ ಸುದ್ದಿ1 hour ago

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

KCET Result 2024
ಕರ್ನಾಟಕ2 hours ago

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

Exit Poll Live 2024
Live News2 hours ago

Exit Poll 2024 Live: ಮೋದಿ ಹ್ಯಾಟ್ರಿಕ್‌ ಖಚಿತ; ಪಿ ಮಾರ್ಕ್‌, ಇಂಡಿಯಾ ನ್ಯೂಸ್‌ ಸೇರಿ ಹಲವು ಸಮೀಕ್ಷೆಗಳು ಬಹಿರಂಗ; ಇಲ್ಲಿದೆ ಮಾಹಿತಿ

Shah Rukh Khan shooting for King in Spain
ಬಾಲಿವುಡ್2 hours ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು2 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌