Randeep Hooda: ಕಾಪಿರೈಟ್‌ ವಿಚಾರಕ್ಕೆ ʻಸ್ವಾತಂತ್ರ್ಯ ವೀರ್ ಸಾವರ್ಕರ್ʼ ಸಿನಿಮಾ ನಟ-ನಿರ್ಮಾಪಕರ ನಡುವೆ ಫೈಟ್ - Vistara News

South Cinema

Randeep Hooda: ಕಾಪಿರೈಟ್‌ ವಿಚಾರಕ್ಕೆ ʻಸ್ವಾತಂತ್ರ್ಯ ವೀರ್ ಸಾವರ್ಕರ್ʼ ಸಿನಿಮಾ ನಟ-ನಿರ್ಮಾಪಕರ ನಡುವೆ ಫೈಟ್

Randeep Hooda: ಸಿನಿಮಾ ಘೋಷಿಸಿದ್ದಾಗಿನಿಂದಲೂ, ರಣದೀಪ್‌ ಚಿತ್ರದ ಸಹ-ನಿರ್ಮಾಪಕ, ನಾಯಕ ನಟ ಮತ್ತು ನಿರ್ದೇಶಕರಾಗಿದ್ದರು. ಆನಂದ್ ಪಂಡಿತ್ ಮತ್ತು ಸಂದೀಪ್ ಸಿಂಗ್ ಕೂಡ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

VISTARANEWS.COM


on

Randeep Hooda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ರಣದೀಪ್ ಹೂಡಾ (Randeep Hooda) ʻಸ್ವಾತಂತ್ರ್ಯ ವೀರ್ ಸಾವರ್ಕರ್ʼ (Swatantrya Veer Savarkar) ಸಿನಿಮಾ ಮೂಲಕ ತೆರೆಗೆ ಬರುತ್ತಿದ್ದಾರೆ. ಸಿನಿಮಾ ಅನೌನ್ಸ್‌ ಮಾಡಿದ್ದಾಗಿನಿಂದಲೂ ಸದಾ ವಿವಾದದಲ್ಲಿರುವ ಈ ಸಿನಿಮಾ ಇದೀಗ ನಿರ್ದೇಶಕ ಮತ್ತು ನಿರ್ಮಾಪಕನ ನಡುವೆ ಕಥೆಯ ಹಕ್ಕುಸ್ವಾಮ್ಯದ (Copyright) ಕುರಿತು ಕಾನೂನು ಹೋರಾಟ ನಡೆಸುತ್ತಿದ್ದಾರೆ. ‘ ವೀರ್ ಸಾವರ್ಕರ್ ಅವರ ಸ್ಪೂರ್ತಿದಾಯಕ ಜೀವನ ಮತ್ತು ಕೊಡುಗೆಗಳನ್ನು ಮುಂಚೂಣಿಗೆ ತರುವ ಗುರಿಯನ್ನು ಹೊಂದಿರುವ’ ಚಿತ್ರದಲ್ಲಿ ರಣದೀಪ್ ಅವರು ಸಾವರ್ಕರ್ ಪಾತ್ರವನ್ನು ನಿರ್ವಹಿಸಿದ್ದಾರೆ.

ಸಿನಿಮಾ ಘೋಷಿಸಿದ್ದಾಗಿನಿಂದಲೂ, ರಣದೀಪ್‌ ಚಿತ್ರದ ಸಹ-ನಿರ್ಮಾಪಕ, ನಾಯಕ ನಟ ಮತ್ತು ನಿರ್ದೇಶಕರಾಗಿದ್ದರು. ಆನಂದ್ ಪಂಡಿತ್ ಮತ್ತು ಸಂದೀಪ್ ಸಿಂಗ್ ಕೂಡ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇತ್ತೀಚೆಗೆ, ರಣದೀಪ್ ಹೂಡಾ ಪ್ರೊಡಕ್ಷನ್ಸ್ ಚಿತ್ರದ ಹಕ್ಕುಸ್ವಾಮ್ಯಗಳ ಸಂಪೂರ್ಣ ಮಾಲೀಕತ್ವವನ್ನು ಹೊಂದುವ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿತು, ಇದು ರಣದೀಪ್ ಹೂಡಾ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ. ಇದೀಗ ನಿರ್ದೇಶಕ ಮತ್ತು ನಿರ್ಮಾಪಕr ನಡುವೆ ಕಥೆಯ ಹಕ್ಕುಸ್ವಾಮ್ಯದ ಕುರಿತು ಕಾನೂನು ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Randeep Hooda: ಕೇವಲ 4 ತಿಂಗಳಲ್ಲಿ 26 ಕೆಜಿ ತೂಕ ಇಳಿಸಿಕೊಂಡ ರಣದೀಪ್ ಹೂಡಾ; ಪ್ರಶ್ನೆ ಮಾಡೋರಿಗೆ ನಿರ್ಮಾಪಕ ಹೇಳಿದ್ದೇನು?

ಇದೀಗ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಕಡೆಯಿಂದ ರಣದೀಪ್ ಹೂಡಾ ಅವರು ಮಾಡಿದ ಸುಳ್ಳು ಮತ್ತು ಆಧಾರರಹಿತ ಎಂದು ಹೇಳಿದ್ದಾರೆ. ನಾವೂ ಕೂಡ ಚಿತ್ರದಲ್ಲಿ ಮೊದಲಿನಿಂದಲೂ ಭಾಗವಾಗಿದ್ದರಿಂದ ಕಥೆಯ ಹಕ್ಕುಸ್ವಾಮ್ಯ ನಮಗೆ ಬರತಕ್ಕದ್ದು, ಇದರಲ್ಲಿ ರಣದೀಪ್‌ ಹೂಡಾ ಅವರ ಪಾಲು ಇಲ್ಲ ಎಂದು, ಆನಂದ್ ಪಂಡಿತ್ ಮತ್ತು ಸಂದೀಪ್ ಸಿಂಗ್ ಪರ ವಕೀಲರು ಆರೋಪಿಸಿದ್ದಾರೆ. ಇದೀಗ ನಿರ್ಮಾಪಕರು ರಣದೀಪ್ ಹೂಡಾ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್, ಸೂಕ್ತ ಕಾನೂನು ಕ್ರಮ ಮೂಲಕ ಪ್ರಕ್ರಿಯೆಯಲ್ಲಿದ್ದಾರೆ.

ಚಿತ್ರಕಥೆ ಬರಹಗಾರ ಉತ್ಕರ್ಷ್ ನೈತಾನಿ ಜತೆ ರಣದೀಪ್ ಕೂಡ ಸಿನಿಮಾ ಕಥೆ ಬರೆದಿದ್ದಾರೆ. 2023ರ ಅಂತ್ಯದಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಸಿನಿಮಾ ರಿಲೀಸ್ ಆಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Priyanka Upendra: ’ಕಮರ್ ಫಿಲಂ ಫ್ಯಾಕ್ಟರಿ’ ಸಹಯೋಗದಲ್ಲಿ ‘ರೆಡ್ ರಾಕ್ ಸ್ಟುಡಿಯೊ’ ಶುಭಾರಂಭ: ಪ್ರಿಯಾಂಕ ಉಪೇಂದ್ರ ಸಾಥ್‌!

Priyanka Upendra : ಬೆಂಗಳೂರಿನ ನಾಗರಬಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಸುಸಜ್ಜಿತ ರೀತಿಯಲ್ಲಿ, ಆಧುನಿಕ ಶೈಲಿಯಲ್ಲಿ ‘ಕಮರ್ ಫಿಲಂ ಫ್ಯಾಕ್ಟರಿ’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗಿರುವ ‘ರೆಡ್ ರಾಕ್ ಸ್ಟುಡಿಯೋ’ವನ್ನು ನಟಿ ಪ್ರಿಯಾಂಕಾ ಉಪೇಂದ್ರ ಉದ್ಘಾಟಿಸಿದರು. ನಿರ್ಮಾಪಕ ಯೋಗಿ ದ್ವಾರಕೀಶ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

VISTARANEWS.COM


on

Priyanka Upendra Red Rock Studio in collaboration with Comer Film Factory
Koo

ಬೆಂಗಳೂರು : ಚಲನಚಿತ್ರಗಳು, ಶಾರ್ಟ್ ಫಿಲಂ, ವೆಬ್ ಸಿರೀಸ್ ಮೊದಲಾದವುಗಳ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅಗತ್ಯವಿರುವ ತಂತ್ರಜ್ಞಾನ ಮತ್ತು ಸುಸಜ್ಜಿತ ಸೌಲಭ್ಯ ಹೊಂದಿರುವ ‘ರೆಡ್ ರಾಕ್ ಸ್ಟುಡಿಯೋ’ ಇತ್ತೀಚೆಗೆ ಲೋಕಾರ್ಪಣೆಯಾಯಿತು. ಬೆಂಗಳೂರಿನ ನಾಗರಬಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಸುಸಜ್ಜಿತ ರೀತಿಯಲ್ಲಿ, ಆಧುನಿಕ ಶೈಲಿಯಲ್ಲಿ ‘ಕಮರ್ ಫಿಲಂ ಫ್ಯಾಕ್ಟರಿ’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗಿರುವ ‘ರೆಡ್ ರಾಕ್ ಸ್ಟುಡಿಯೋ’ವನ್ನು ನಟಿ ಪ್ರಿಯಾಂಕಾ ಉಪೇಂದ್ರ ಉದ್ಘಾಟಿಸಿದರು. ನಿರ್ಮಾಪಕ ಯೋಗಿ ದ್ವಾರಕೀಶ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದೇ ವೇಳೆ ಮಾತನಾಡಿದ ನಟಿ ಪ್ರಿಯಾಂಕಾ ಉಪೇಂದ್ರ, ‘ಇಂದಿನ ದಿನಗಳಲ್ಲಿ ಸಿನಿಮಾಗಳಿಗೆ ಕಂಟೆಂಟ್ ಮತ್ತು ಕ್ವಾಲಿಟಿ ತುಂಬ ಮುಖ್ಯ. ಇತ್ತೀಚೆಗೆ ಬರುತ್ತಿರುವ ಸಾಕಷ್ಟು ಹೊಸ ಸಿನಿಮಾ ಮೇಕರ್ಸ್ ತುಂಬ ಹೊಸದಾಗಿ ಯೋಚಿಸುತ್ತಿದ್ದಾರೆ. ಅಂಥವರಿಗೆ ಕೈಗೆಟಕುವ ದರದಲ್ಲಿ ತಂತ್ರಜ್ಞಾನ ಲಭ್ಯತೆಯಿದ್ದರೆ ಗುಣಮಟ್ಟದಲ್ಲಿ ಸಿನಿಮಾ ಮಾಡಬಹುದು. ‘ರೆಡ್ ರಾಕ್ ಸ್ಟುಡಿಯೋ’ದಲ್ಲಿ ಇಂದಿನ ಸಿನಿಮಾ ಮೇಕರ್ಸ್ ಗೆ ಬೇಕಾದ ಎಲ್ಲ ಸೌಲಭ್ಯಗಳಿದ್ದು, ಇದರಿಂದ ಚಿತ್ರರಂಗಕ್ಕೆ ಒಳ್ಳೆಯದಾಗಲಿದೆ’ ಎಂದು ಆಶಿಸಿದರು.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಇನ್ನು ನೂತನವಾಗಿ ಆರಂಭವಾಗಿರುವ ‘ರೆಡ್ ರಾಕ್ ಸ್ಟುಡಿಯೋ’ದಲ್ಲಿ ಸಿನಿಮಾ ಮತ್ತು ದೃಶ್ಯ ಮಾಧ್ಯಮಗಳಿಗೆ ಬೇಕಾದ ಎಡಿಟಿಂಗ್, ಡಬ್ಬಿಂಗ್, ಡಿ.ಐ, ವಿಎಫ್ಎಕ್ಸ್, ಗ್ರೀನ್ ಮ್ಯಾಟ್ ಶೂಟ್, ಪೋಟೋ ಶೂಟ್, 5.1 &
7.1 ಸೌಂಡ್ ಸಿಸ್ಟಂ, ಅಟ್ಮೋಸ್ ಹೀಗೆ ಎಲ್ಲ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳಿದ್ದು, ಕೈಗೆಟಕುವ ದರದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಒಂದೇ ಸೂರಿನಡಿ ಬೆಂಗಳೂರಿನಲ್ಲೇ ಮಾಡಬಹುದಾಗಿದೆ.

ಈ ಸಂದರ್ಭದಲ್ಲಿ ಹಾಜರಿದ್ದ ‘ಕಮರ್ ಫಿಲಂ ಫ್ಯಾಕ್ಟರಿ’ಯ ಕಮರ್, ಹಿರಿಯ ನಿರ್ದೇಶಕ ಬುಕ್ಕಾಪಟ್ಟಣ ವಾಸು, ಕೃಷ್ಣ ಮೊದಲಾದವರು ‘ರೆಡ್ ರಾಕ್ ಸ್ಟುಡಿಯೋ’ ದ ಹಿಂದಿನ ಉದ್ದೇಶ, ಲಭ್ಯವಿರುವ ಸೌಲಭ್ಯಗಳು, ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

Continue Reading

South Cinema

Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Dhruva Sarja: ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

VISTARANEWS.COM


on

Dhruva Sarja KD Movie Release date announce
Koo

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅಭಿನಯದ ಬಹುನೀರಿಕ್ಷಿತ ʼಮಾರ್ಟಿನ್ʼ ಚಿತ್ರದ ರಿಲೀಸ್ ಡೇಟ್ ಈಗಾಗಲೇ ರಿವೀಲ್‌ ಆಗಿದೆ. ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಂಚ ಭಾಷೆಗಳಲ್ಲಿ ಅಕ್ಟೋಬರ್‌ 11ಕ್ಕೆ ತೆರೆಗೆ ಅಪ್ಪಲಿಸಲಿದೆ. ಈ ಸುದ್ದಿ ಬೆನ್ನಲ್ಲೇ ಮತ್ತೊಮ್ಮೆ ಧ್ರುವ ಸರ್ಜಾ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇಮ್ ಕಾಂಬಿನೇಷನ್ ಸಿನಿಮಾ ‘ಕೆಡಿ’ ಇದೇ ಡಿಸೆಂಬರ್‌ಗೆ ತೆರೆ ಕಾಣಲಿದೆ. ಮೇಕಿಂಗ್ ವಿಡಿಯೊ ರಿಲೀಸ್ ಮಾಡಿ ಸಿಹಿ ಸುದ್ದಿ ಕೊಟ್ಟಿದೆ ʻಕೆಡಿʼ ಸಿನಿಮಾ ಚಿತ್ರತಂಡ.

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

ಇದನ್ನೂ ಓದಿ: Dhruva Sarja: ಬರೋಬ್ಬರಿ 9 ಕೋಟಿ ರೂ.ಗೆ ಮಾರಾಟ ಆಯ್ತು ʻಮಾರ್ಟಿನ್‌ʼ ಆಡಿಯೊ ರೈಟ್ಸ್‌!

ಆರ್ಕೆಸ್ಟ್ರಾ ಗ್ಲಿಂಪ್ಸ್

ಇದೀಗ ಕೆಡಿ ಸಿನಿಮಾ ಆರ್ಕೆಸ್ಟ್ರಾ ಗ್ಲಿಂಪ್ಸ್‌ವನ್ನು ವಿಡಿಯೊ ಶೇರ್‌ ಮಾಡಿಕೊಂಡಿದೆ ಚಿತ್ರತಂಡ. ವಿದೇಶದಲ್ಲಿ ಮ್ಯೂಸಿಕ್‌ ರೆಕಾರ್ಡ್‌ ಮಾಡಲಾಗಿದೆ. ಈ ಬಗ್ಗೆ ಚಿಕ್ಕ ವಿಡಿಯೊ ಮೂಲಕ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ. ‘ಕೆಡಿ’ ಸಿನಿಮಾದ ಆಡಿಯೋ ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ ಎಂದೂ ಹೇಳಿಕೊಂಡಿದೆ ಚಿತ್ರತಂಡ. ಈ ವರ್ಷವೇ ಧ್ರುವ ನಟನೆಯ ಮಾರ್ಟಿನ್ ಹಾಗು ಕೆಡಿ ಎರಡು ಸಿನಿಮಾಗಳು ತೆರೆಗೆ ಬರಲಿವೆ .

ಮಾರ್ಟಿನ್ ಚಿತ್ರ

ಪೊಗರು ಚಿತ್ರದ ಬಳಿಕ 3 ವರ್ಷಗಳ ನಂತರ ಧ್ರುವ ಸರ್ಜಾ ತೆರೆಗೆ ಎಂಟ್ರಿ ನೀಡುತ್ತಿದ್ದು, ಮಾರ್ಟಿನ್‌ ಹಾಗೂ ಕೆಡಿ ಚಿತ್ರಗಳು ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡಿರುವ ಸಿನಿಮಾ ‘ಮಾರ್ಟಿನ್ ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Continue Reading

ಟಾಲಿವುಡ್

Kannada New Movie: ʻಸಂಭವಾಮಿ ಯುಗೇ ಯುಗೇʼ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ನಟಿ ಶ್ರುತಿ ಹರಿಹರನ್!

Kannada New Movie: ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

VISTARANEWS.COM


on

Sambavami Yuge Yuge song release By sruthi hariharan
Koo

ಬೆಂಗಳೂರು: ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ (Kannada New Movie) ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ʻʻಇದು ನನ್ನ ಮೊದಲ ಚಿತ್ರ. ನನ್ನ ಮೇಲೆ ನಂಬಿಕೆ ಇಟ್ಟು ಇಂಥದ್ದೊಂದು ಅವಕಾಶ ಕೊಟ್ಟ ನಿರ್ಮಾಪಕಿ ಪ್ರತಿಭಾ ಅವರಿಗೆ ಧನ್ಯವಾದಗಳು. ಇದೊಂದು ಕಮರ್ಷಿಯಲ್‍ ಥ್ರಿಲ್ಲರ್ ನ ಚಿತ್ರ. ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ನಾನು ಹತ್ತು ವರ್ಷಗಳಿಂದ ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿದ್ದೆ. ಇದೊಂದು ಹಳ್ಳಿ ಹಿನ್ನೆಲೆಯ ಚಿತ್ರ. ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲಸಬೇಕು ಎಂಬುದೆ ಚಿತ್ರದ ಕಥಾ ಸಾರಾಂಶ. ಜೂನ್‍ 21ಕ್ಕೆ ಚಿತ್ರ ಬಿಡುಗಡೆ ಆಗಲಿದೆ. ಇದು ಕಮರ್ಷಿಯಲ್‍ ಚಿತ್ರವಾದರೂ ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳಿವೆʼʼ ಎಂದರು ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ನಾಯಕ ಜಯ್ ಶೆಟ್ಟಿ ಮಾತನಾಡಿ ʻʻನನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನಾಗುತ್ತದೆ ಎಂಬುದು ಚಿತ್ರದ ಕಥೆ. ನಾನು ಹೊಸಬನಾದರೂ ನನ್ನ ಮೇಲೆ ನಂಬಿಕೆ ಇಟ್ಟು, ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಧನ್ಯವಾದಗಳುʼʼ ಎಂದರು.

ʻʻನಾನು ಬಿಜಾಪುರ ಮೂಲದವಳು. ಆದರೆ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಒಂಬತ್ತು ವರ್ಷಗಳ ಕಾಲ ಮಾಡಲಿಂಗ್‍ ಮಾಡಿದ್ದೇನೆ. ಹೀಗಿರುವಾಗಲೇ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ನನ್ನ ಭಾಷೆ ಮತ್ತು ನಟನೆಯನ್ನು ತಿದ್ದಿತೀಡಿದ ನಿರ್ದೇಶಕ ಚೇತನ್‍ ಶೆಟ್ಟಿ ಅವರಿಗೆ ಧನ್ಯವಾದಗಳುʼʼ ಎಂದರು ನಾಯಕಿ ನಿಶಾ ರಜಪೂತ್ .

ಪ್ರಮುಖಪಾತ್ರದಲ್ಲಿ ನಟಿಸಿರುವ ಅಶೋಕ್ ಕುಮಾರ್ ಹಾಗೂ ಮಧುರಗೌಡ ಕೂಡ ತಮ್ಮ ಪಾತ್ರದ ಕುರಿತು ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ರಾಜೇಂದ್ರ ಕಾರಂತ್‍, ಅಶ್ವಿನ್‍ ಹಾಸನ್‍, ವಿಕ್ಟರಿ ವಾಸು, ಛಾಯಾಗ್ರಾಹಕ ರಾಜು ಹೆಮ್ಮಿಗೆಪುರ, ಕಾರ್ಯಕಾರಿ ನಿರ್ಮಾಪಕ ದಿನೇಶ್ ರಾಜನ್ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಹಾಜರಿದ್ದರು. ನಿರ್ಮಾಪಕಿ ಪ್ರತಿಭಾ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.

Continue Reading

ಸ್ಯಾಂಡಲ್ ವುಡ್

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

Actor  Ravichandran: ನಟ ರವಿಚಂದ್ರನ್ (Ravichandran), ತುಸು ಗರಂ ಆಗಿಯೇ ಮಾತನಾಡಿದ್ದಾರೆ. ಒಳ್ಳೆ ಸಿನಿಮಾ ಮಾಡಿದರೆ ಖಂಡಿತ ಜನ ಬಂದೇ ಬರುತ್ತಾರೆ. ಪ್ರೇಕ್ಷಕರ ತಪ್ಪಿಲ್ಲ ಎಂದಿದ್ದಾರೆ.ಹಾಗೇ ವರ್ಷಕ್ಕೆ ಯಶ್ ಮೂರು ಸಿನಿಮಾ. ದರ್ಶನ್ ಮೂರು ಸಿನಿಮಾ ಮಾಡಲು ಪ್ರಾರಂಭಿಸಿದರೆ ಎರಡು ವರ್ಷಕ್ಕೆ ಅವರನ್ನೆಲ್ಲ ಮನೆಗೆ ಕಳಿಸಿಬಿಡುತ್ತಾರೆ ಅಷ್ಟೆ ಎಂದು ನೇರವಾಗಿಯೇ ಹೇಳಿದ್ದಾರೆ.

VISTARANEWS.COM


on

Actor  Ravichandran Talks About Kannada Movie Industry Problems yash darshan
Koo

ಬೆಂಗಳೂರು: ಇತ್ತೀಚೆಗೆ ಕನ್ನಡ ಸಿನಿಮಾಗಳನ್ನು ನೋಡಲು ಜನ ಚಿತ್ರಮಂದಿರಗಳಲ್ಲಿ ಬರುತ್ತಿಲ್ಲ ಎಂಬ ದೂರು ಜೋರಾಗಿ ಕೇಳಿ ಬರುತ್ತಿದೆ. ಇತ್ತೀಚೆಗೆ ಫಿಲ್ಮ್‌ ಚೇಂಬರ್​ನವರು ಸಭೆ ನಡೆಸಿ, ಸ್ಟಾರ್ ನಟರು ಹೆಚ್ಚು ಹೆಚ್ಚು ಸಿನಿಮಾಗಳನ್ನು ಮಾಡುವಂತೆ ಒತ್ತಾಯಿಸಲು ನಿರ್ಣಯಿಸಿರುವ ಸುದ್ದಿ ಹರಿದಾಡಿತು. ಈ ಬಗ್ಗೆ ಮಾತನಾಡಿರುವ ನಟ ರವಿಚಂದ್ರನ್ (Actor  Ravichandran), ತುಸು ಗರಂ ಆಗಿಯೇ ಮಾತನಾಡಿದ್ದಾರೆ. ಒಳ್ಳೆ ಸಿನಿಮಾ ಮಾಡಿದರೆ ಖಂಡಿತ ಜನ ಬಂದೇ ಬರುತ್ತಾರೆ. ಪ್ರೇಕ್ಷಕರ ತಪ್ಪಿಲ್ಲ ಎಂದಿದ್ದಾರೆ.ಹಾಗೇ ವರ್ಷಕ್ಕೆ ಯಶ್ (Yash) ಮೂರು ಸಿನಿಮಾ. ದರ್ಶನ್ ಮೂರು ಸಿನಿಮಾ ಮಾಡಲು ಪ್ರಾರಂಭಿಸಿದರೆ ಎರಡು ವರ್ಷಕ್ಕೆ ಅವರನ್ನೆಲ್ಲ ಮನೆಗೆ ಕಳಿಸಿಬಿಡುತ್ತಾರೆ ಅಷ್ಟೆ ಎಂದು ನೇರವಾಗಿಯೇ ಹೇಳಿದ್ದಾರೆ.

ರವಿಚಂದ್ರನ್‌ ಮಾತನಾಡಿ ʻʻಮಾತು ಎತ್ತರೆ ಸಾಕು ಮಲಯಾಳಂ ಸಿನಿಮಾ ನೋಡ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನಾನು ಹೇಳೋದು ಏನಂದರೆ ಹೋಗಿ ಮಲಯಾಳಂ ರೈಟರ್ಸ್‌ ಹತ್ತಿರ ಕಥೆ ಬರೆಸಿಕೊಂಡು ಬನ್ನಿ. ನಂತರ ಕನ್ನಡದಲ್ಲಿ ಸಿನಿಮಾ ಮಾಡಿ. ಯಾರು ಬೇಡ ಅಂತಾರೆ. ಕಥೆ ಎಲ್ಲಿ ಸಿಗುತ್ತೋ ಅಲ್ಲಿಂದ ತನ್ನಿ. ಜನ ಒಳ್ಳೆ ಕಥೆ ಸಿನಿಮಾಗೆ ಪ್ರೋತ್ಸಾಹ ಕೊಡುತ್ತಲೇ ಇದ್ದಾರೆ. ನಾನು ನಾಳೆ 10 ಸಿನಿಮಾ ಮಾಡ್ತೀನಿ. ಸಹಿ ಮಾಡೋಕೆ ಹೇಳಿ ನಿರ್ಮಾಪಕರಿಗೆ. ಅವರಿಗೆಲ್ಲಾ ಯಶ್, ದರ್ಶನ್ ಬೇಕಲ್ವಾ? ಅದು ಅವರವರ ಆಯ್ಕೆ. ಕಥೆ ಅವ್ರು ಓಕೆ ಮಾಡ್ಬೇಕಲ್ವಾ? ನಾಳೆ ಬೆಳಗ್ಗೆ ಯಶ್ 3, ದರ್ಶನ್ 3 ಸಿನಿಮಾ ಮಾಡಿಬಿಟ್ರೆ, 2 ವರ್ಷಕ್ಕೆ ಮನೆಗೆ ಕಳ್ಸಿಬಿಡ್ತಿರಾ. ಅವರಿಗೆ ಆದ ಬ್ರ್ಯಾಂಡ್, ತಾಕತ್ತು, ಅದಕ್ಕೆ ತಕ್ಕ ಬಜೆಟ್, ಸ್ಟೇಜ್ ಇರುತ್ತದೆ. ಯಾರಿಗೂ ಸಿನಿಮಾ ಮಾಡುವುದನ್ನು ಬಲವಂತ ಮಾಡಬಾರದು” ಎಂದು ರವಿಚಂದ್ರನ್ ಹೇಳಿದ್ದಾರೆ.

ಇದನ್ನೂ ಓದಿ: ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ಚೇಸ್‌ ಮಾಡಿ ಹಾಲಿವುಡ್ ಸಿನಿಮಾ ಸ್ಟೈಲಲ್ಲಿ ಕಳ್ಳತನ; ರೋಚಕ Video ಇಲ್ಲಿದೆ!

ʻʻಒಬ್ಬ ಹಿರೋ ಆದವನ್ನು ಕಥೆಯನ್ನು ಓಕೆ ಮಾಡ್ಬೇಕು. ಅವನಿಗೆ ಅವನದ್ದೇ ಆದ ಬ್ರ್ಯಾಂಡ್‌ ಮತ್ತು ಪೊಸಿಷನ್‌ ಇರುತ್ತೆ. ಕೆಜಿಎಫ್‌ ಆದಮೇಲೆ ಯಶ್‌ ಯಾವ ಸಿನಿಮಾ ಮಾಡ್ಬೇಕು? ಅವರಿಂದ ಜನರಿಗೆ ಭಾರಿ ನಿರೀಕ್ಷೆ ಇರತ್ತೆ. ದರ್ಶನ್‌ ಕಾಟೇರ ಆದ ಮೇಲೆ ಏನು ಮಾಡಬೇಕು?ಅವರ ಇಮೇಜ್, ಬ್ರ್ಯಾಂಡ್, ಬಜೆಟ್‌ನಲ್ಲಿ ಯೋಚನೆ ಮಾಡ್ತಾರೆ. ಅವರಿಗೆ ವರ್ಷಕ್ಕೆ 3 ಸಿನಿಮಾ ಮಾಡಿ ಅಂದ್ರೆ ಸಾಧ್ಯವಿಲ್ಲ. ಅವರಿಗೆ ಪಾಕೆಟ್‌ ತುಂಬಿದೆ. ಅವರು ಕಥೆ ಕೇಳ್ತಾರೆ” ಎಂದಿದ್ದಾರೆ.

ʻʻಸಮಸ್ಯೆ ಎಲ್ಲ ಕಡೆ ಇದ್ದಿದ್ದೆ. ಚಿತ್ರರಂಗದಲ್ಲಿ ಯಾವುದೇ ಸಮಸ್ಯೆ ಇಲ್ಲ. ಇಲ್ಲಿ ಸ್ಟ್ರೈಕ್‌ ಮಾಡಿದರೆ ಪ್ರಯೋಜನ ಇಲ್ಲ. ಇದು ಉದ್ಯಮಕ್ಕೆ ಸರಿ ಅಲ್ಲ. ಬ್ಯಾಡ್‌ ಟೈಮ್‌ ಬರತ್ತೆ. ಮೊದಲು ಒಳ್ಳೆಯ ಸಿನಿಮಾ ಹುಡಕಬೇಕು. ಕಾಂಪೀಟ್‌ ಮಾಡಲೇಬೇಕು. ಐದು ಭಾಷೆಗಳ ಸಿನಿಮಾ ಜತೆ ನಾವು ಕಾಂಪೀಟ್‌ ಮಾಡಲೇಬೇಕು. ಯಾವತ್ತಿಗೂ ಗ್ರಾಫ್ ಒಂದೇ. ನೂರರಲ್ಲಿ 5 ಸಿನಿಮಾ ಲಾಭ ಮಾಡುತ್ತೆ. 5 ಅಲ್ಲಿಗಲ್ಲಿಗೆ ಸರಿ ಹೋಗತ್ತೆ. 90 ಸಿನಿಮಾ ಫ್ಲಾಪ್ ಆಗಿರುತ್ತದೆ. ಆ ಕಾಲದಿಂದ ಇದೇ ನಡೆದು ಬರುತ್ತಿರುವುದು ಇದೆʼʼಎಂದರು.

Continue Reading
Advertisement
Iran-Israel Conflict
ವಿದೇಶ8 mins ago

Iran-Israel Conflict: “ಅಚ್ಚರಿಯ ದಾಳಿ ನಿರೀಕ್ಷಿಸಿ”- ಇಸ್ರೇಲ್‌ಗೆ ಇರಾನ್‌ನಿಂದ ವಾರ್ನಿಂಗ್‌

Congress Karnataka
ಕರ್ನಾಟಕ1 hour ago

Congress Karnataka: ಬದಲಾಗ್ತಾರಾ ಕೆಪಿಸಿಸಿ ಅಧ್ಯಕ್ಷರು?; ಡಿಕೆಶಿ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು!

Malaysia Masters Final
ಕ್ರೀಡೆ1 hour ago

Malaysia Masters Final: ಮಲೇಷ್ಯಾ ಮಾಸ್ಟರ್ಸ್ ಫೈನಲ್​ನಲ್ಲಿ ಸೋಲು ಕಂಡ ಪಿ.ವಿ.ಸಿಂಧು

Priyanka Upendra Red Rock Studio in collaboration with Comer Film Factory
ಸ್ಯಾಂಡಲ್ ವುಡ್1 hour ago

Priyanka Upendra: ’ಕಮರ್ ಫಿಲಂ ಫ್ಯಾಕ್ಟರಿ’ ಸಹಯೋಗದಲ್ಲಿ ‘ರೆಡ್ ರಾಕ್ ಸ್ಟುಡಿಯೊ’ ಶುಭಾರಂಭ: ಪ್ರಿಯಾಂಕ ಉಪೇಂದ್ರ ಸಾಥ್‌!

Mob Attacks
ವಿದೇಶ1 hour ago

Mob Attacks: ಕುರಾನ್ ಅಪವಿತ್ರ ನೆಪ; ಪಾಕಿಸ್ತಾನದಲ್ಲಿ ಕ್ರಿಶ್ಚಿಯನ್ನರ ಮೇಲೆ ಮುಸ್ಲಿಮರ ದಾಳಿ

theft Case
ಚಿಕ್ಕಬಳ್ಳಾಪುರ1 hour ago

Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

Flight Emergency Landing
ದೇಶ2 hours ago

Flight Emergency Landing: ತಪ್ಪಿದ ಮತ್ತೊಂದು ಭಾರೀ ಅವಘಡ; ಸ್ಪೈಸ್‌ ಜೆಟ್‌ ವಿಮಾನ ತುರ್ತು ಭೂಸ್ಪರ್ಶ

Lockup Death
ಪ್ರಮುಖ ಸುದ್ದಿ2 hours ago

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್; 23 ಕಿಡಿಗೇಡಿಗಳ ಸೆರೆ

theft Case
ಬೆಂಗಳೂರು2 hours ago

Theft case : ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

Amrithadhare Serial Fans reaction about goutham Bhoomika
ಕಿರುತೆರೆ2 hours ago

Amrithadhare Serial: ಭೂಮಿಗೆ ಒಲವಿನುಸಿರ ಕೊಟ್ಟು ಮರುಜನ್ಮ ನೀಡಿದ ಗೌತಮ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌