Manipur Violence: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸೆ, ಮೂವರ ಸಾವು - Vistara News

ದೇಶ

Manipur Violence: ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸೆ, ಮೂವರ ಸಾವು

ಕೆಲವು ದುಷ್ಕರ್ಮಿಗಳು ಬಫರ್ ಝೋನ್ ದಾಟಿ ಮೈತಿ ಪ್ರದೇಶಗಳಿಗೆ ಬಂದು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

VISTARANEWS.COM


on

manipur violence
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಫಾಲ: ಮಣಿಪುರದಲ್ಲಿ ಮತ್ತೆ ಹಿಂಸೆ (Manipur Violence) ಭುಗಿಲೆದ್ದಿದೆ. ಶುಕ್ರವಾರ ತಡರಾತ್ರಿ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಹಿಂಸಾಚಾರದ ತಾಜಾ ಘಟನೆಗಳಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.

ಮೃತರು ಕ್ವಾಕ್ಟಾ ಪ್ರದೇಶದ ಮೈತಿ ಸಮುದಾಯದವರು ಎಂದು ವರದಿಯಾಗಿದೆ. ಕುಕಿ ಸಮುದಾಯದ ಹಲವಾರು ಮನೆಗಳು ಸಹ ಸುಟ್ಟುಹೋಗಿವೆ. ಬಿಷ್ಣುಪುರ ಜಿಲ್ಲೆಯ ಕ್ವಾಕ್ಟಾ ಪ್ರದೇಶದಲ್ಲಿ ಕುಕಿ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯಿತು. ಮಣಿಪುರ ಪೊಲೀಸರು ಮತ್ತು ಕಮಾಂಡೋಗಳು ಪ್ರತಿದಾಳಿ ನಡೆಸಿದರು.

ಗುಂಡಿನ ದಾಳಿಯಲ್ಲಿ ಮಣಿಪುರದ ಒಬ್ಬ ಕಮಾಂಡೋ ತಲೆಗೆ ಗಾಯವಾಗಿದೆ. ಬಿಷ್ಣುಪುರದಲ್ಲಿ ಪರಿಸ್ಥಿತಿ ಸಾಕಷ್ಟು ಗಂಭೀರವಾಗಿದೆ ಎನ್ನಲಾಗಿದ್ದು, ಆ ಪ್ರದೇಶದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಕೆಲವು ದುಷ್ಕರ್ಮಿಗಳು ಬಫರ್ ಝೋನ್ ದಾಟಿ ಮೈತಿ ಪ್ರದೇಶಗಳಿಗೆ ಬಂದು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕ್ವಾಕ್ಟಾ ಪ್ರದೇಶದಿಂದ 2 ಕಿ.ಮೀಗಿಂತಲೂ ಹೆಚ್ಚು ದೂರದಲ್ಲಿ ಕೇಂದ್ರೀಯ ಪಡೆಗಳ ಮೂಲಕ ಬಫರ್ ವಲಯವನ್ನು ರಕ್ಷಿಸಲಾಗಿದೆ. ಪೊಲೀಸ್ ಪಡೆಗಳು ಸ್ಥಳದಲ್ಲಿವೆ.

ಗುರುವಾರ ಬಿಷ್ಣುಪುರ್ ಜಿಲ್ಲೆಯಲ್ಲಿ ಸಶಸ್ತ್ರ ಪಡೆಗಳು ಮತ್ತು ಮೈತಿ ಸಮುದಾಯದ ಪ್ರತಿಭಟನಾಕಾರರ ನಡುವೆ ಹೊಸದಾಗಿ ಘರ್ಷಣೆ ಭುಗಿಲೆದ್ದಿತು. ಘರ್ಷಣೆಯಲ್ಲಿ 17 ಜನರು ಗಾಯಗೊಂಡರು. ಜಿಲ್ಲೆಯ ಕಾಂಗ್ವೈ ಮತ್ತು ಫೌಗಕ್ಚಾವೊ ಪ್ರದೇಶಗಳಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪಡೆಗಳು ಮತ್ತು ಮಣಿಪುರ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು. ಈ ಘಟನೆಯಿಂದಾಗಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದಲ್ಲಿ ಹಿಂದೆಗೆದುಕೊಳ್ಳಲಾಗಿದ್ದ ಕರ್ಫ್ಯೂಗಳನ್ನು ಮತ್ತೆ ಬಿಗಿಗೊಳಿಸಲಾಯಿತು.

ಸುಮಾರು ಮೂರು ತಿಂಗಳಿನಿಂದ ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದೆ. ಅಂದಿನಿಂದ ಇಂದಿನವರೆಗೆ 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಸಂಘಟನೆಗಳು ಮೆರವಣಿಗೆ ಆಯೋಜಿಸಿದ ಬಳಿಕ ಮೇ 3ರಂದು ಹಿಂಸಾಚಾರ ಭುಗಿಲೆದ್ದಿತ್ತು. ಆ ಸಂದರ್ಭದಲ್ಲಿ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ರೇಪ್‌ ಮಾಡಲಾಗಿತ್ತ. ಇದರ ವಿಡಿಯೋ ಇತ್ತೀಚೆಗೆ ವೈರಲ್‌ ಆಗಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

ಇದನ್ನೂ ಓದಿ: Manipur Violence: ಶಾಲೆಗೆಂದು ಹೋದ 30 ಮಕ್ಕಳು ಮನೆಗೆ ಬರಲೇ ಇಲ್ಲ; ‘ಮಣಿಪುರ ಫೈಲ್ಸ್‌’ ಬಗೆದಷ್ಟೂ ಕರಾಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ, ಸಿಕ್ಕಿಂನಲ್ಲಿ ಕ್ಲೀನ್‌ ಸ್ವೀಪ್‌ನತ್ತ SKM

Assembly Election Results 2024: ಸಿಕ್ಕಿಂನ 32 ಸ್ಥಾನಗಳಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆಗಳು ಆರಂಭವಾಗಿವೆ. ಇಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಖಾತೆ ತೆರಯುವಲ್ಲಿ ವಿಫಲವಾಗಿದೆ. ಇನ್ನು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಕ್ಲೀನ್‌ ಸ್ವೀಪ್‌ ಮಾಡೋದ್ರಲ್ಲಿ ಡೌಟೇ ಇಲ್ಲ.

VISTARANEWS.COM


on

Assembly Election Results 2024:
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯಷ್ಟೇ ಅರುಣಾಚಲ ಪ್ರದೇಶ(Aruchal Pradesh) ಮತ್ತು ಸಿಕ್ಕಿಂ(Sikkim) ವಿಧಾನಸಭೆ ಚುನಾವಣೆ(Assembly Election Results 2024)ಗಳೂ ದೇಶದ ಗಮನ ಸೆಳೆದಿತ್ತು. ಇದೀಗ, ಈ ಎರಡು ರಾಜ್ಯಗಳ ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದ್ದು, ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಪಕ್ಷ ಧೂಳೆಬ್ಬಿಸುವ ಲಕ್ಷಣ ದಟ್ಟವಾಗಿದ್ದು, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಭರ್ಜರಿಯಾಗಿ ಗೆಲುವಿಗೆ ಸಜ್ಜಾಗಿದೆ. ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈಗ ಹೊಸ ಇತಿಹಾಸ ನಿರ್ಮಿಸುತ್ತಿದ್ದು, ಬರೋಬ್ಬರಿ 36 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಸಿಕ್ಕಿಂನಲ್ಲಿ ಅಧಿಕಾರದಲ್ಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ, 32 ಸ್ಥಾನಗಳ ಪೈಕಿ 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಸಿಕ್ಕಿಂನಲ್ಲಿ ಸಂಭ್ರಮಾಚರಣೆ

ಸಿಕ್ಕಿಂನ 32 ಸ್ಥಾನಗಳಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆಗಳು ಆರಂಭವಾಗಿವೆ. ಇಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಖಾತೆ ತೆರಯುವಲ್ಲಿ ವಿಫಲವಾಗಿದೆ. ಇನ್ನು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಕ್ಲೀನ್‌ ಸ್ವೀಪ್‌ ಮಾಡೋದ್ರಲ್ಲಿ ಡೌಟೇ ಇಲ್ಲ.

ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಮತ್ತೆ ಗದ್ದುಗೆ

ಅರುಣಾಚಲ ಪ್ರದೇಶದಲ್ಲಿ 60 ಕ್ಷೇತ್ರದಲ್ಲಿ 50 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ. ಈಗಾಗಲೇ 10 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದು, 33 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಮಿತ್ರ ಪಕ್ಷ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಎಂಟು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ ಕೇವಲ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಮತ್ತೆ ಪೆಮಾ ಖಂಡು ಮುಖ್ಯಮಂತ್ರಿಯಾಗಿ ಗದ್ದುಗೆ ಏರುವುದು ಖಚಿತವಾಗಿದೆ.

ಅವಿರೋಧ ಆಯ್ಕೆ ಆದ ಬಿಜೆಪಿ ಶಾಸಕರು ಯಾರು?

ಮುಕ್ತೋ ಕ್ಷೇತ್ರದಲ್ಲಿ ಪೇಮಾ ಖಂಡು, ಬೊಮ್ಡಿಲದಲ್ಲಿ ಡೊಂಗ್ರು ಸಿಯೊಂಗ್ಜು, ಚೌಕಂನಲ್ಲಿ ಚೌನಾ ಮೇ ಹಯುಲಿಯಾಂಗ್‌ನಲ್ಲಿ ದಸಾಂಗ್ಲು ಪುಲ್, ಇಟಾನಗರದಲ್ಲಿ ಟೆಚಿ ಕಾಸೊ, ರೋಯಿಂಗ್‌ದಲ್ಲಿ ಮುಚ್ಚು ಮಿಥಿ, ಸಾಗಲೀ ಕ್ಷೇತ್ರದಲ್ಲಿ ರತು ಟೆಚಿ, ತಾಲಿ ಕ್ಷೇತ್ರದಲ್ಲಿ ಜಿಕ್ಕೆ ಟಾಕೊ, ತಾಲಿಹಾದಲ್ಲಿ ನ್ಯಾತೋ ದುಕಮ್ ಜಿರೋ, ಹಾಪೋಲಿ ಕ್ಷೇತ್ರದಲ್ಲಿ ಹಗೆ ಅಪ್ಪಾ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಅರುಣಾಚಲ ಪ್ರದೇಶ & ಸಿಕ್ಕಿಂನಲ್ಲಿ ಮ್ಯಾಜಿಕ್‌ ನಂಬರ್‌ ಎಷ್ಟು?

ರಾಜ್ಯದಲ್ಲಿ ಸರ್ಕಾರ ರಚಿಸಲು ಪ್ರತಿ ಪಕ್ಷ ಅಥವಾ ಯಾವುದೇ ಒಕ್ಕೂಟವು ವಿಧಾನಸಭೆಯಲ್ಲಿ ಬಹುಮತದ ಅಂಕವನ್ನು ತಲುಪಬೇಕು. ಪ್ರತಿ ರಾಜ್ಯ ಅಸೆಂಬ್ಲಿಯಲ್ಲಿನ ಬಹುಮತದ ಗುರುತು ನಿರ್ದಿಷ್ಟ ರಾಜ್ಯದ ವಿಧಾನಸಭೆಯಲ್ಲಿನ ಒಟ್ಟು ಸ್ಥಾನಗಳ ಮೇಲೆ ಅವಲಂಬಿತವಾಗಿರುತ್ತದೆ. ಯಾವುದೇ ರಾಜ್ಯದಲ್ಲಿ ಬಹುಮತವು ಒಟ್ಟು ಅಸೆಂಬ್ಲಿ ಸ್ಥಾನಗಳ ಅರ್ಧಕ್ಕಿಂತ ಹೆಚ್ಚಿನ ಸ್ಥಾನವಾಗಿದೆ. ಅರುಣಾಚಲ ಪ್ರದೇಶ ವಿಧಾನಸಭೆಯು 60 ಸ್ಥಾನಗಳನ್ನು ಹೊಂದಿದ್ದು, 31 ಸ್ಥಾನಗಳನ್ನು ಪಡೆದ ಪಕ್ಷ ಅಧಿಕಾರ ರಚಿಸಲಿದೆ.ಸಿಕ್ಕಿಂ ಅಸೆಂಬ್ಲಿ 32 ಸ್ಥಾನಗಳನ್ನು ಹೊಂದಿದ್ದು, ಸರ್ಕಾರ ರಚಿಸಲು 17 ಸ್ಥಾನಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಸುಮಾರು 2000 ಜನ ಅಧಿಕಾರಿಗಳ ತಂಡದಿಂದ ಮತ ಏಣಿಕೆ ಕಾರ್ಯ ಅರುಣಾಚಲದಲ್ಲಿ ನಡೆಯುತ್ತಿದೆ.

ಇದನ್ನೂ ಓದಿ:Assembly Election Results 2024: ಇಂದು ಅರುಣಾಚಲ ಪ್ರದೇಶ & ಸಿಕ್ಕಿಂ ರಿಸಲ್ಟ್‌; 10 ಅಭ್ಯರ್ಥಿಗಳು ಅವಿರೋಧ ಆಯ್ಕೆ

Continue Reading

ಗ್ಯಾಜೆಟ್ಸ್

WhatsApp Features: ವಾಟ್ಸ್ ಆ್ಯಪ್ ನಲ್ಲಿರುವ ಈ 7 ವಿಶೇಷ ಫೀಚರ್ ಗಳ ಬಗ್ಗೆ ಗೊತ್ತೇ? ನೀವೂ ಬಳಸಿ

ಸಂದೇಶ ಕಳುಹಿಸುವಲ್ಲಿ ಬಹುತೇಕ ಮಂದಿಯ ಮೆಚ್ಚಿನ ಆಪ್ ಎನಿಸಿರುವ ವಾಟ್ಸ್ ಆಪ್ ನಲ್ಲಿ (WhatsApp Features) ಹಲವು ವೈಶಿಷ್ಟ್ಯಗಳಿವೆ. ಇದನ್ನು ಹೆಚ್ಚಿನವರು ಬಳಸಿರಲಿಕ್ಕಿಲ್ಲ. ಆದರೆ ಇವುಗಳಿಂದ ಹೊಸ ಅನುಭವವಂತೂ ಸಿಗುವುದು. ಸಾಕಷ್ಟು ಪ್ರಯೋಜನಕಾರಿಯಾಗಿರುವ ಇದನ್ನು ಉಪಯೋಗಿಸಿಕೊಳ್ಳಲು ಸೆಟ್ಟಿಂಗ್ ನಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಬೇಕು ಅಷ್ಟೇ. ಅದು ಹೇಗೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

WhatsApp Features
Koo

ಸಂದೇಶಗಳನ್ನು (messaging) ಕಳುಹಿಸುವ ಆ್ಯಪ್ ಗಳ (Apps) ಕ್ಷೇತ್ರದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ವಾಟ್ಸ್ ಆ್ಯಪ್ (WhatsApp Features) ಅನ್ನು ವಿಶ್ವದಾದ್ಯಂತ ಕೋಟ್ಯಂತರ ಜನರು ಬಳಸುತ್ತಿದ್ದಾರೆ. ನಿರಂತರ ಹೊಸತನವನ್ನು ಪರಿಚಯಿಸುವಲ್ಲಿ ಮುಂಚೂಣಿಯಲ್ಲಿರುವ ಈ ಆಪ್ ಗ್ರಾಹಕ ಸ್ನೇಹಿ ಎಂದೆನಿಸಿಕೊಂಡಿದೆ.

ಕೇವಲ ಸಂದೇಶ ಕಳುಹಿಸಲು, ಕರೆ ಮಾಡಲು, ಸ್ಟೇಟಸ್ ಹಂಚಿಕೊಳ್ಳಲು ಸೀಮಿತ ಎಂದೆನಿಸುವ ವಾಟ್ಸ್ ಆಪ್ ನಲ್ಲಿ ಇನ್ನೂ ಹಲವಾರು ವೈಶಿಷ್ಟ್ಯಗಳಿವೆ. ಇದರ ಇಂಟರ್ಫೇಸ್ ಅಡಿಯಲ್ಲಿ ಹಲವು ‘ಗುಪ್ತ ರತ್ನ’ಗಳಿವೆ. ಇದು ನಿಮ್ಮ ಊಹೆಗೂ ಮೀರಿ ವಾಟ್ಸ್ ಆಪ್ ಬಳಕೆಯ ಅನುಭವವನ್ನು ಹೆಚ್ಚಿಸುತ್ತದೆ. ಅವುಗಳು ಯಾವುದು ಎಂಬ ವಿವರ ಇಲ್ಲಿದೆ.

ಟೋನ್ ಸೆಟ್ಟಿಂಗ್

ಮೆಸೇಜ್ ಸ್ವೀಕರಿಸುವಾಗ ಸಾಮಾನ್ಯ ಟೋನ್ ನಿಂದ ಬೇಸತ್ತಿದ್ದೀರೆ ವೈಯಕ್ತಿಕ ಸಂಪರ್ಕ ಅಥವಾ ಗುಂಪುಗಳಿಗಾಗಿ ಟೋನ್ ಗಳನ್ನು ಸೆಟ್ ಮಾಡಲು ವಾಟ್ಸ್ ಆಪ್ ಅನುಮತಿಸುತ್ತದೆ. ಚಾಟ್ ಅನ್ನು ಸರಳವಾಗಿ ತೆರೆದು, ಸಂಪರ್ಕದ ಹೆಸರು ಅಥವಾ ಗುಂಪಿನ ಶೀರ್ಷಿಕೆಯ ಮೇಲೆ ಟ್ಯಾಪ್ ಮಾಡಿ. “ಕಸ್ಟಮ್ ನೋಟಿಫಿಕೇಶನ್ ” ಆಯ್ಕೆ ಮಾಡಿ ಮತ್ತು ಆದ್ಯತೆಯ ಟೋನ್ ಅನ್ನು ಸೆಟ್ ಮಾಡಿ. ಈಗ ಪರದೆಯನ್ನು ನೋಡದೆಯೇ ಯಾರು ನಿಮಗೆ ಸಂದೇಶ ಕಳುಹಿಸುತ್ತಿದ್ದಾರೆ ಎಂಬುದನ್ನು ತಕ್ಷಣ ತಿಳಿದುಕೊಳ್ಳಬಹುದು.

ಸುಲಭ ಪ್ರವೇಶಕ್ಕಾಗಿ ಸ್ಟಾರ್

ಚಾಟ್‌ ಗಳು ಸಾಕಷ್ಟು ಇದ್ದಾಗ ಪ್ರಮುಖ ಸಂದೇಶ ಮಧ್ಯೆ ಕಳೆದು ಹೋಗುತ್ತದೆ. ಅಗತ್ಯವಿದ್ದಾಗ ಎಷ್ಟು ಹುಡುಕಿದರೂ ಸಿಗುವುದಿಲ್ಲ. WhatsApp ನ “Starred Messages” ವೈಶಿಷ್ಟ್ಯದಲ್ಲಿ ಸ್ಕ್ರೋಲಿಂಗ್‌ಗೆ ವಿದಾಯ ಹೇಳಿ. ಸಂದೇಶವನ್ನು ದೀರ್ಘವಾಗಿ ಒತ್ತಿ ಸ್ಟಾರ್ ಐಕಾನ್ ಅನ್ನು ಟ್ಯಾಪ್ ಮಾಡಿ. ಅನಂತರ ಸುಲಭವಾಗಿ ಈ ಸಂದೇಶಗಳನ್ನು ಮರುಪಡೆಯಲು ನಕ್ಷತ್ರ ಹಾಕಿದ ಸಂದೇಶಗಳ ಫೋಲ್ಡರ್‌ ನಲ್ಲಿ ಅದನ್ನು ಉಳಿಸಲಾಗುತ್ತದೆ.


ಹಿಡನ್ ಚಾಟ್ ಆರ್ಕೈವ್

ಕೆಲವು ಚಾಟ್‌ಗಳನ್ನು ಮರೆ ಮಾಚಬೇಕಾದರೆ WhatsApp ನ “ಆರ್ಕೈವ್ ಚಾಟ್” ವೈಶಿಷ್ಟ್ಯವು ಸಂಭಾಷಣೆಗಳನ್ನು ಅಳಿಸದೆಯೇ ಗೌಪ್ಯವಾಗಿ ಇಡುತ್ತದೆ. ಚಾಟ್‌ನಲ್ಲಿ ಎಡಕ್ಕೆ ಸ್ವೈಪ್ ಮಾಡಿ, “ಆರ್ಕೈವ್” ಟ್ಯಾಪ್ ಮಾಡಿ ಮತ್ತು ಅದು ನಿಮ್ಮ ಮುಖ್ಯ ಚಾಟ್ ಪಟ್ಟಿಯಿಂದ ಕಣ್ಮರೆಯಾಗುತ್ತದೆ. ನಿಮ್ಮ ಖಾಸಗಿ ಸಂಭಾಷಣೆಗಳನ್ನು ಖಾಸಗಿಯಾಗಿ ಇರಿಸುತ್ತದೆ. ಆರ್ಕೈವ್ ಮಾಡಿದ ಚಾಟ್‌ಗಳನ್ನು ಪ್ರವೇಶಿಸಲು, ನಿಮ್ಮ ಚಾಟ್ ಪಟ್ಟಿಯ ಕೆಳಭಾಗಕ್ಕೆ ಸ್ಕ್ರಾಲ್ ಮಾಡಿ ಅಥವಾ ಅವುಗಳನ್ನು ಹುಡುಕಿ.

ಗ್ರೂಪ್ ಚಾಟ್‌ ಗಳ ಮ್ಯೂಟ್

ಗ್ರೂಪ್ ಚಾಟ್‌ಗಳು ಕೆಲವೊಮ್ಮೆ ಕಿರಿಕಿರಿ ಉಂಟು ಮಾಡುತ್ತದೆ. ಯಾಕೆಂದರೆ ಇದರಲ್ಲಿ ಸಾಕಷ್ಟು ಸಂದೇಶಗಳು ನಿರಂತರವಾಗಿ ಬರುತ್ತಿರುತ್ತದೆ. ಇಂತಹ ಗುಂಪುಗಳನ್ನು ಮ್ಯೂಟ್ ಮಾಡಲು WhatsApp ಅನುಮತಿಸುತ್ತದೆ. ಗುಂಪು ಚಾಟ್ ತೆರೆಯಿರಿ ಗುಂಪಿನ ಹೆಸರಿನ ಮೇಲೆ ಟ್ಯಾಪ್ ಮಾಡಿ, “ಅಧಿಸೂಚನೆಗಳನ್ನು ಮ್ಯೂಟ್ ಮಾಡಿ” ಆಯ್ಕೆ ಮಾಡಿ ಮತ್ತು ಬಯಸಿದ ಅವಧಿಯನ್ನು ಸೆಟ್ ಮಾಡಿಕೊಳ್ಳಿ. ಇದರಲ್ಲಿ 8 ಗಂಟೆಗಳು, 1 ವಾರ ಅಥವಾ 1 ವರ್ಷ ಮ್ಯೂಟ್ ಮಾಡುವ ಅವಕಾಶವಿರುತ್ತದೆ.

ಬ್ಲೂ ಟಿಕ್ ಇಲ್ಲದೆ ಸಂದೇಶಗಳನ್ನು ಓದಿ

ಬ್ಲೂ ಟಿಕ್‌ಗಳು ಸಂದೇಶ ಓದಿದ್ದಾರೆ ಎನ್ನುವ ಕುರುಹು ಕೊಡುತ್ತದೆ. ಇದು ಕೆಲವರಿಗೆ ಆತಂಕವನ್ನು ಉಂಟುಮಾಡಬಹುದು. ಸಂದೇಶಗಳನ್ನು ಓದಿ ರಿಪ್ಲೈ ಮಾಡಿಲ್ಲ ಎನ್ನುವ ಬೇಸರವನ್ನು ಮಾಡಬಹುದು. ಆದರೆ ಬ್ಲೂ ಟಿಕ್ ಇಲ್ಲದೆಯೂ ನೀವು ಅಜ್ಞಾತವಾಗಿ ಸಂದೇಶಗಳನ್ನು ಓದಬಹುದು. ಇದಕ್ಕಾಗಿ ಸೆಟ್ಟಿಂಗ್‌ಗಳು- ಖಾತೆ- ಗೌಪ್ಯತೆಗೆ ಹೋಗುವ ಮೂಲಕ ರೀಡ್ ರಿಸಿಪ್ಟ್ ಅನ್ನು ನಿಷ್ಕ್ರಿಯಗೊಳಿಸಿ.

ಇದನ್ನೂ ಓದಿ: WhatsApp Update : ವಾಯ್ಸ್ ನೋಟ್ ಅವಧಿ ಹೆಚ್ಚಿಸಲಿದೆ ವಾಟ್ಸ್ಆ್ಯಪ್; ವಿಸ್ತರಣೆ ಅವಧಿ ಎಷ್ಟು ಗೊತ್ತೇ?

ಚಾಟ್‌ಗಳಿಗಾಗಿ ವೈಯಕ್ತಿಕ ವಾಲ್‌ಪೇಪರ್‌

ವೈಯಕ್ತಿಕ ಸಂಭಾಷಣೆಗಳಿಗಾಗಿ ಕಸ್ಟಮ್ ವಾಲ್‌ಪೇಪರ್‌ಗಳನ್ನು ಹೊಂದಿಸುವ ಮೂಲಕ ನಿಮ್ಮ ಚಾಟ್‌ಗಳಿಗೆ ವೈಯಕ್ತಿಕ ಸ್ಪರ್ಶವನ್ನು ನೀಡಬಹುದು. ಚಾಟ್ ತೆರೆಯಿರಿ ಮೇಲಿನ ಬಲ ಮೂಲೆಯಲ್ಲಿರುವ ಮೂರು ಚುಕ್ಕೆಗಳ ಮೇಲೆ ಟ್ಯಾಪ್ ಮಾಡಿ, “ವಾಲ್‌ಪೇಪರ್” ಆಯ್ಕೆ ಮಾಡಿ ಮತ್ತು WhatsApp ನ ಅಂತರ್ನಿರ್ಮಿತ ಆಯ್ಕೆಗಳಿಂದ ಆಯ್ಕೆ ಮಾಡಿ ಅಥವಾ ಸ್ವಂತ ಹಿನ್ನೆಲೆ ಚಿತ್ರವನ್ನು ಹೊಂದಿಸಿ. ಇದು ನಿಮ್ಮ ಚಾಟ್‌ ಗಳಿಗೆ ವಿಶೇಷತೆಯನ್ನು ಒದಗಿಸುತ್ತದೆ.

ಬ್ರಾಡ್‌ಕಾಸ್ಟ್ ಪಟ್ಟಿಗಳು

ಒಂದೇ ಸಂದೇಶವನ್ನು ಅನೇಕ ಸಂಪರ್ಕಗಳಿಗೆ ಕಳುಹಿಸುವುದು ಬೇಸರದ ಸಂಗತಿಯಾಗಿದೆ. ಆದರೆ WhatsApp ನ ಪ್ರಸಾರ ಪಟ್ಟಿ ಈ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ. ಮೇಲಿನ ಬಲ ಮೂಲೆಯಲ್ಲಿರುವ ಮೂರು ಚುಕ್ಕೆಗಳನ್ನು ಟ್ಯಾಪ್ ಮಾಡುವ ಮೂಲಕ ಪ್ರಸಾರ ಪಟ್ಟಿಯನ್ನು ರಚಿಸಿ, “ಹೊಸ ಪ್ರಸಾರ” ಆಯ್ಕೆ ಮಾಡಿ ಮತ್ತು ನಿಮ್ಮ ಸಂಪರ್ಕ ಪಟ್ಟಿಯಿಂದ ಸ್ವೀಕರಿಸುವವರನ್ನು ಆಯ್ಕೆ ಮಾಡಿ. ಈಗ, ಗುಂಪು ಚಾಟ್‌ನೊಂದಿಗೆ ಪ್ರತಿಯೊಬ್ಬರ ಇನ್‌ಬಾಕ್ಸ್‌ಗಳನ್ನು ಅಸ್ತವ್ಯಸ್ತಗೊಳಿಸದೆ ಸಾಮೂಹಿಕ ಸಂದೇಶಗಳನ್ನು ಕಳುಹಿಸಬಹುದು.

Continue Reading

ದೇಶ

Arvind Kejriwal: ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಇಂದು ಮತ್ತೆ ತಿಹಾರ್‌ ಜೈಲಿಗೆ

Arvind Kejriwal:ಅರವಿಂದ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿ ವಿಚಾರಣೆ ಜೂ.5ರಂದು ದಿಲ್ಲಿ ಕೋರ್ಟ್‌ನಲ್ಲಿ ನಡೆಯಲಿದೆ. ಇಂದು ಅವರು ಜೈಲಿಗೆ ಮರಳಲೇಬೇಕಿದೆ. ನಿನ್ನೆಯಷ್ಟೇ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ನಾನು ಶರಣಾಗಲು ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಅದಕ್ಕೆ ನಾನು ತಲೆಬಾಗುವುದಿಲ್ಲ” ಎಂದು ಅವರು ಹೇಳಿದರು. ದೆಹಲಿಯ ಜನರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳು ಅವರ ಅನುಪಸ್ಥಿತಿಯಲ್ಲಿಯೂ ಮುಂದುವರಿಯುತ್ತವೆ ಎಂದು ಭರವಸೆ ನೀಡಿದರು.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಮಧ್ಯಂತರ ಜಾಮೀನು ಅವಧಿ ನಿನ್ನೆಗೆ ಪೂರ್ಣಗೊಂಡಿದ್ದು, ಇಂದು ಅವರು ಮತ್ತೆ ತಿಹಾರ್‌ ಜೈಲಿಗೆ ಮರಳಲಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕೋರ್ಟ್‌ ಈ ಹಿಂದೆ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಚುನಾವಣೆ ಪೂರ್ಣಗೊಂಡ ಮರುದಿನವೇ ಜೈಲಿಗೆ ಮರಳುವಂತೆ ಕೋರ್ಟ್‌ ಹೇಳಿತ್ತು.

ಇನ್ನು ಅರವಿಂದ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿ ವಿಚಾರಣೆ ಜೂ.5ರಂದು ದಿಲ್ಲಿ ಕೋರ್ಟ್‌ನಲ್ಲಿ ನಡೆಯಲಿದೆ. ಇಂದು ಅವರು ಜೈಲಿಗೆ ಮರಳಲೇಬೇಕಿದೆ. ನಿನ್ನೆಯಷ್ಟೇ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ನಾನು ಶರಣಾಗಲು ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಅದಕ್ಕೆ ನಾನು ತಲೆಬಾಗುವುದಿಲ್ಲ” ಎಂದು ಅವರು ಹೇಳಿದರು. ದೆಹಲಿಯ ಜನರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳು ಅವರ ಅನುಪಸ್ಥಿತಿಯಲ್ಲಿಯೂ ಮುಂದುವರಿಯುತ್ತವೆ ಎಂದು ಭರವಸೆ ನೀಡಿದರು.

ನೀವು ನಿಮ್ಮ ಬಗ್ಗೆ ಕಾಳಜಿ ವಹಿಸಿ, ಜೈಲಿನಲ್ಲಿ ನಿಮ್ಮ ಬಗ್ಗೆ ನಾನು ತುಂಬಾ ಚಿಂತೆ ಮಾಡುತ್ತೇನೆ. ನೀವು ಸಂತೋಷವಾಗಿದ್ದರೆ ನಿಮ್ಮ ಕೇಜ್ರಿವಾಲ್ ಕೂಡ ಸಂತೋಷವಾಗಿರುತ್ತಾರೆ. ನಾನು ಖಂಡಿತವಾಗಿಯೂ ನಿಮ್ಮ ನಡುವೆ ಇರುವುದಿಲ್ಲ, ಆದರೆ ನಿಮ್ಮ ಎಲ್ಲಾ ಕೆಲಸಗಳು ಮುಂದುವರಿಯುತ್ತವೆ. ಹಿಂದಿರುಗಿದ ನಂತರ ನಾನು ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1000 ರೂ.ಗಳನ್ನು ನೀಡಲು ಪ್ರಾರಂಭಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ವೈದ್ಯಕೀಯ ಪರೀಕ್ಷೆಗಳಿಗಾಗಿ ಅವರ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ ವಿಸ್ತರಿಸುವ ಮನವಿಯನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ನಿರಾಕರಿಸಿದ ನಂತರ ಎಎಪಿ ಮುಖ್ಯಸ್ಥರು ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಪಡೆಯುವ ಆಯ್ಕೆಯನ್ನು ಹೊಂದಿರುವುದರಿಂದ ಅವರ ಮನವಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿತ್ತು.

ಹೆಚ್ಚಿನ ಕೀಟೋನ್ ಮಟ್ಟ ಹೆಚ್ಚಳದಿಂದಾಗಿ ತೂಕ ನಷ್ಟ ದಿಂದಾಗಿ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಹಲವಾರು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನು ವಿಸ್ತರಣೆ ಕೋರಿದ್ದರು. ಈ ರೋಗಲಕ್ಷಣಗಳು ಮೂತ್ರಪಿಂಡದ ಸಮಸ್ಯೆಗಳು, ಗಂಭೀರ ಹೃದಯದ ಪರಿಸ್ಥಿತಿಗಳು ಅಥವಾ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಆಪ್​ ವಕೀಲರು ವಾದಿಸಿದ್ದರು.

ಇದನ್ನೂ ಓದಿ: Assembly Election Results 2024: ಇಂದು ಅರುಣಾಚಲ ಪ್ರದೇಶ & ಸಿಕ್ಕಿಂ ರಿಸಲ್ಟ್‌; 10 ಅಭ್ಯರ್ಥಿಗಳು ಅವಿರೋಧ ಆಯ್ಕೆ

Continue Reading

ದೇಶ

Assembly Election Results 2024: ಇಂದು ಅರುಣಾಚಲ ಪ್ರದೇಶ & ಸಿಕ್ಕಿಂ ರಿಸಲ್ಟ್‌; 10 ಅಭ್ಯರ್ಥಿಗಳು ಅವಿರೋಧ ಆಯ್ಕೆ

Assembly Election Results 2024:ಉಭಯ ರಾಜ್ಯಗಳ ಒಟ್ಟು 82 ಸ್ಥಾನಗಳ ಮತ ಎಣಿಕೆ ಈಗಾಗಲೇ ಆರಂಭಗೊಂಡಿದ್ದು, 60 ಸದಸ್ಯ ಬಲದ ಅರುಣಾಚಲದಲ್ಲಿ ಈಗಾಗಲೇ ಬಿಜೆಪಿ 10 ಶಾಸಕರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಇನ್ನು ಉಳಿದ 50 ಸ್ಥಾನಗಳ ಫಲಿತಾಂಶ ಇಂದು ಹೊರ ಬೀಳಲಿದೆ. ಸಿಕ್ಕಿಂನ ಎಲ್ಲಾ 32 ಸ್ಥಾನ ಮತ ಏಣಿಕೆ ಪ್ರಕ್ರಿಯೆ ಶುರುವಾಗಿದ್ದು, ಎರಡೂ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರ ವಹಿಸಿಕೊಳ್ಳಲಿದೆ ಎಂಬುದು ಬಹಳ ಕುತೂಹಲ ಮೂಡಿಸಿದೆ.

VISTARANEWS.COM


on

Assembly Election Results 2024:
Koo

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ(Lok Sabha Election 2024) ಮುಕ್ತಾಯಗೊಂಡಿದ್ದು, ಜೂ. 4 ರಂದು ಹೊರ ಬೀಳಲಿರುವ ಚುನಾವಣೆಯ ಫಲಿತಾಂಶ(Result)ದತ್ತ ಎಲ್ಲರ ಚಿತ್ತ ನೆಟ್ಟಿದೆ. ಯಾವ ಪಕ್ಷ ಎಷ್ಟು ಬಹುಮತದಲ್ಲಿ ಕೇಂದ್ರದಲ್ಲಿ ಗದ್ದುಗೆ ಏರಲಿದೆ ಎಂಬುದು ನಿನ್ನೆ ಹೊರಬಿದ್ದಿರುವ ಎಕ್ಸಿಟ್‌ ಪೋಲ್‌(Exit Poll) ಫಲಿತಾಂಶದಲ್ಲಿ ದೇಶದ ಜನರಿಗೆ ಬಹುತೇಕ ಖಚಿತವಾಗಿದೆ. ಆದರೂ ಜೂ. 4ರ ಫಲಿತಾಂಶ ಬಹಳ ಕುತೂಹಲ ಮೂಡಿದಿದೆ. ಇದಕ್ಕೂ ಮುನ್ನ ಎರಡು ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ(Arunachala Pradesh) ಹಾಗೂ ಸಿಕ್ಕಿಂ(Sikkim) ವಿಧಾನಸಭಾ ಕ್ಷೇತ್ರಗಳ ಮತ ಏಣಿಕೆ(Assembly Election Results 2024) ಇಂದು ನಡೆಯುತ್ತಿದ್ದು, ಈಗಾಗಲೇ ಮತಏಣಿಕೆ ಪ್ರಕ್ರಿಯೆ ಬೆಳಗ್ಗೆ 6 ರಿಂದಲೇ ಪ್ರಾರಂಭವಾಗಿದೆ.

ಉಭಯ ರಾಜ್ಯಗಳ ಒಟ್ಟು 82 ಸ್ಥಾನಗಳ ಮತ ಎಣಿಕೆ ಈಗಾಗಲೇ ಆರಂಭಗೊಂಡಿದ್ದು, 60 ಸದಸ್ಯ ಬಲದ ಅರುಣಾಚಲದಲ್ಲಿ ಈಗಾಗಲೇ ಬಿಜೆಪಿ 10 ಶಾಸಕರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಇನ್ನು ಉಳಿದ 50 ಸ್ಥಾನಗಳ ಫಲಿತಾಂಶ ಇಂದು ಹೊರ ಬೀಳಲಿದೆ. ಸಿಕ್ಕಿಂನ ಎಲ್ಲಾ 32 ಸ್ಥಾನ ಮತ ಏಣಿಕೆ ಪ್ರಕ್ರಿಯೆ ಶುರುವಾಗಿದ್ದು, ಎರಡೂ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರ ವಹಿಸಿಕೊಳ್ಳಲಿದೆ ಎಂಬುದು ಬಹಳ ಕುತೂಹಲ ಮೂಡಿಸಿದೆ.

ಅವಿರೋಧ ಆಯ್ಕೆ ಆದ ಬಿಜೆಪಿ ಶಾಸಕರು ಯಾರು?

ಮುಕ್ತೋ ಕ್ಷೇತ್ರದಲ್ಲಿ ಪೇಮಾ ಖಂಡು, ಬೊಮ್ಡಿಲದಲ್ಲಿ ಡೊಂಗ್ರು ಸಿಯೊಂಗ್ಜು, ಚೌಕಂನಲ್ಲಿ ಚೌನಾ ಮೇ ಹಯುಲಿಯಾಂಗ್‌ನಲ್ಲಿ ದಸಾಂಗ್ಲು ಪುಲ್, ಇಟಾನಗರದಲ್ಲಿ ಟೆಚಿ ಕಾಸೊ, ರೋಯಿಂಗ್‌ದಲ್ಲಿ ಮುಚ್ಚು ಮಿಥಿ, ಸಾಗಲೀ ಕ್ಷೇತ್ರದಲ್ಲಿ ರತು ಟೆಚಿ, ತಾಲಿ ಕ್ಷೇತ್ರದಲ್ಲಿ ಜಿಕ್ಕೆ ಟಾಕೊ, ತಾಲಿಹಾದಲ್ಲಿ ನ್ಯಾತೋ ದುಕಮ್ ಜಿರೋ, ಹಾಪೋಲಿ ಕ್ಷೇತ್ರದಲ್ಲಿ ಹಗೆ ಅಪ್ಪಾ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಅರುಣಾಚಲ ಪ್ರದೇಶ & ಸಿಕ್ಕಿಂನಲ್ಲಿ ಮ್ಯಾಜಿಕ್‌ ನಂಬರ್‌ ಎಷ್ಟು?

ರಾಜ್ಯದಲ್ಲಿ ಸರ್ಕಾರ ರಚಿಸಲು ಪ್ರತಿ ಪಕ್ಷ ಅಥವಾ ಯಾವುದೇ ಒಕ್ಕೂಟವು ವಿಧಾನಸಭೆಯಲ್ಲಿ ಬಹುಮತದ ಅಂಕವನ್ನು ತಲುಪಬೇಕು. ಪ್ರತಿ ರಾಜ್ಯ ಅಸೆಂಬ್ಲಿಯಲ್ಲಿನ ಬಹುಮತದ ಗುರುತು ನಿರ್ದಿಷ್ಟ ರಾಜ್ಯದ ವಿಧಾನಸಭೆಯಲ್ಲಿನ ಒಟ್ಟು ಸ್ಥಾನಗಳ ಮೇಲೆ ಅವಲಂಬಿತವಾಗಿರುತ್ತದೆ. ಯಾವುದೇ ರಾಜ್ಯದಲ್ಲಿ ಬಹುಮತವು ಒಟ್ಟು ಅಸೆಂಬ್ಲಿ ಸ್ಥಾನಗಳ ಅರ್ಧಕ್ಕಿಂತ ಹೆಚ್ಚಿನ ಸ್ಥಾನವಾಗಿದೆ. ಅರುಣಾಚಲ ಪ್ರದೇಶ ವಿಧಾನಸಭೆಯು 60 ಸ್ಥಾನಗಳನ್ನು ಹೊಂದಿದ್ದು, 31 ಸ್ಥಾನಗಳನ್ನು ಪಡೆದ ಪಕ್ಷ ಅಧಿಕಾರ ರಚಿಸಲಿದೆ.ಸಿಕ್ಕಿಂ ಅಸೆಂಬ್ಲಿ 32 ಸ್ಥಾನಗಳನ್ನು ಹೊಂದಿದ್ದು, ಸರ್ಕಾರ ರಚಿಸಲು 17 ಸ್ಥಾನಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಸುಮಾರು 2000 ಜನ ಅಧಿಕಾರಿಗಳ ತಂಡದಿಂದ ಮತ ಏಣಿಕೆ ಕಾರ್ಯ ಅರುಣಾಚಲದಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

Continue Reading
Advertisement
Karnataka Rain
ಮಳೆ42 seconds ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Bhavani Revanna hide Not Present For SIT Questioning At Home
ಕರ್ನಾಟಕ4 mins ago

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಟ!

IND vs PAK
ಕ್ರಿಕೆಟ್11 mins ago

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

Foeticide Case Foeticide another Case in Bagalkot
ಬಾಗಲಕೋಟೆ43 mins ago

Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Healthy Sandwich Spread
ಆರೋಗ್ಯ47 mins ago

Healthy Sandwich Spread: ಮನೆಯಲ್ಲೇ ಮಾಡಿ ಕಡಿಮೆ ಕ್ಯಾಲರಿಯ ಆರೋಗ್ಯಕರ ಸ್ಯಾಂಡ್‌ವಿಚ್‌ ಸ್ಪ್ರೆಡ್‌!

Taiwan Athletics Open
ಕ್ರೀಡೆ59 mins ago

Taiwan Athletics Open: ತೈವಾನ್‌ ಓಪನ್​ನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿ.ಪಿ. ಮನು

Assembly Election Results 2024:
ದೇಶ60 mins ago

Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ, ಸಿಕ್ಕಿಂನಲ್ಲಿ ಕ್ಲೀನ್‌ ಸ್ವೀಪ್‌ನತ್ತ SKM

Man
ಆರೋಗ್ಯ1 hour ago

Health Tips For Rainy Season: ಮಳೆಗಾಲ ಶುರುವಾಗಿದೆ, ಅನಾರೋಗ್ಯಕ್ಕೆ ತುತ್ತಾಗದಿರಲು ಈ ಸಲಹೆ ಪಾಲಿಸಿ

WhatsApp Features
ಗ್ಯಾಜೆಟ್ಸ್1 hour ago

WhatsApp Features: ವಾಟ್ಸ್ ಆ್ಯಪ್ ನಲ್ಲಿರುವ ಈ 7 ವಿಶೇಷ ಫೀಚರ್ ಗಳ ಬಗ್ಗೆ ಗೊತ್ತೇ? ನೀವೂ ಬಳಸಿ

USA vs CAN
ಕ್ರೀಡೆ1 hour ago

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು18 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌