Arecanut Price : ಭೂತಾನ್‌ನಿಂದ 17 ಸಾವಿರ ಟನ್‌ ಅಡಿಕೆ ಆಮದು; ಬೆಲೆಗೆ ಪೆಟ್ಟು, ಬೆಳೆಗಾರರಿಗೆ ಇಕ್ಕಟ್ಟು - Vistara News

ಉತ್ತರ ಕನ್ನಡ

Arecanut Price : ಭೂತಾನ್‌ನಿಂದ 17 ಸಾವಿರ ಟನ್‌ ಅಡಿಕೆ ಆಮದು; ಬೆಲೆಗೆ ಪೆಟ್ಟು, ಬೆಳೆಗಾರರಿಗೆ ಇಕ್ಕಟ್ಟು

Arecanut Price : ಭೂತಾನ್‌ನಿಂದ ಅಡಿಕೆ ಆಮದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಇದು ರಾಜ್ಯದ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರ ಇಂಥ ನಿರ್ಧಾರ ಕೈಗೊಳ್ಳಬಾರದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

VISTARANEWS.COM


on

Bhutan arecanut import and arecanut price‌ drop
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾಸ್ಕರ್ ಆರ್. ಗೆಂಡ್ಲ, ಶಿರಸಿ
ಭೂತಾನ್‌ನಿಂದ ಭಾರತಕ್ಕೆ ವಾರ್ಷಿಕವಾಗಿ 17 ಸಾವಿರ ಟನ್‌ ಹಸಿ ಅಡಿಕೆಯನ್ನು ಆಮದು (Bhutan arecanut import) ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ನಿಗದಿಯಾಗಿದ್ದ ಕನಿಷ್ಠ ಆಮದು ಬೆಲೆಯನ್ನೂ (Import Price) ಪಡೆಯದೇ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿರುವುದು ಉತ್ತರ ಕನ್ನಡ (Uttara Kannada) ಜಿಲ್ಲೆ ಸೇರಿದಂತೆ‌ ರಾಜ್ಯದ ವಿವಿಧ ಜಿಲ್ಲೆ ಅಡಿಕೆ ಬೆಳೆಗಾರರಲ್ಲಿ (Arecanut growers) ಆತಂಕ‌ವನ್ನು ಸೃಷ್ಟಿಸಿದೆ. ಇದು ಅಡಿಕೆ ಬೆಲೆ (Arecanut Price) ಮೇಲೆ ತೀವ್ರ ಪೆಟ್ಟು ಕೊಡುವ ಸಾಧ್ಯತೆ ಇದ್ದು, ಕೂಡಲೇ ಈ ಆದೇಶವನ್ನು ಹಿಂಪಡೆದು ಬೆಳೆಗಾರರ ಹಿತ ಕಾಪಾಡಬೇಕು ಎಂಬ ಆಗ್ರಹಗಳು ಕೇಳಿಬಂದಿವೆ.

ಕೆಲವು ತಿಂಗಳಿನಿಂದ ಅಡಿಕೆ ಧಾರಣೆಯು ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಬೆಳೆಗಾರರು ನೆಮ್ಮದಿಯಲ್ಲಿ ಇರುವಾಗಲೇ ಕೇಂದ್ರ ಸಚಿವಾಲಯ‌ದ‌ ಈ ತೀರ್ಮಾನ ಅಡಿಕೆ ಬೆಳೆಗಾರರ‌ ನಿದ್ದೆಗೆಡಿಸಿದೆ. ಪೂರಕವೆಂಬತೆ ಶಿರಸಿ ಟಿಎಸ್ಎಸ್ ಅಡಿಕೆ ಮಾರುಕಟ್ಟೆಯಲ್ಲಿ (Arecanut Market) ಧಾರಣೆ ಕುಸಿತ (Price drop) ಕಂಡಿದ್ದು, ಮಾರುಕಟ್ಟೆಯಲ್ಲಿ ಅಡಿಕೆಯ ಚಾಲ್ತಿಯಲ್ಲಿರುವ ದರಕ್ಕಿಂತ ಕ್ವಿಂಟಾಲ್‌ಗೆ 2000 ರೂ. ಇಳಿದಿದೆ. ಭೂತಾನ್‌ನಿಂದ ಅಡಿಕೆ ಆಮದಿಗೆ ಅಡಿಕೆ ಬೆಳೆಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಪರಂಪರಾಗತವಾಗಿ ಅಡಿಕೆ ಬೆಳೆಯುವ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಪ್ರದೇಶವನ್ನು ದಾಟಿ ಐದು ವರ್ಷಗಳಲ್ಲಿ ವಿವಿಧ ಜಿಲ್ಲೆಗಳಿಗೆ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಹೊರ ರಾಜ್ಯಗಳಲ್ಲೂ ಅಡಿಕೆ ಕ್ಷೇತ್ರ ವಿಸ್ತರಣೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬೇಡಿಕೆ ಇಲ್ಲದಿದ್ದರೂ ಹೊರ ದೇಶದಿಂದ ಆಮದು ಮಾಡಿಕೊಳ್ಳುವುದು ಇಲ್ಲಿನ ಬೆಳಗಾರರಿಗೆ ನೀಡುವ ಪೆಟ್ಟು ಎಂದು ಹೇಳಲಾಗುತ್ತಿದೆ.

Bhutan arecanut import and arecanut price‌ drop

ರಾಜ್ಯದಲ್ಲಿ ಒಟ್ಟಾರೆ 4.20 ಲಕ್ಷ ಹೆಕ್ಟೇರ್ ಅಡಿಕೆ ಪ್ರದೇಶವಿದೆ. ದೇಶದ ಅಡಿಕೆ ಉತ್ಪಾದನೆಯ ಶೇ.35ಕ್ಕೂ ಹೆಚ್ಚು ಅಡಿಕೆಯನ್ನು ಕರ್ನಾಟಕ ರಾಜ್ಯದಿಂದಲೇ ಉತ್ಪಾದಿಸಲಾಗುತ್ತಿದೆ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅಡಿಕೆ ಉತ್ಪಾದನೆಯು ಶೇ.30ರಷ್ಟು ಹೆಚ್ಚಿದೆ’ ಎಂದು ಮಾರುಕಟ್ಟೆ ತಜ್ಞರು ಮಾಹಿತಿ ನೀಡಿದ್ದಾರೆ.

ಏನಿದು ಆಮದು?

ದೇಶೀ ಅಡಿಕೆಗೆ ಮನ್ನಣೆ ಸಿಗಬೇಕೆಂಬ ದೃಷ್ಟಿಯಲ್ಲಿ ವಿದೇಶದಿಂದ ಭಾರತಕ್ಕೆ ಆಮದಾಗುವ ಅಡಿಕೆಗೆ ಪ್ರತಿ ಕೆ.ಜಿ.ಗೆ 251 ರೂ. ಕನಿಷ್ಠ ಆಮದು ಬೆಲೆ ನಿಗದಿಪಡಿಸಲಾಗಿತ್ತು. ಆದರೆ, ಈ ನಿಯಮ ಉಲ್ಲಂಘಿಸಿ ಭೂತಾನ್‌ನಿಂದ ಆಮದು ಬೆಲೆ ವಿಧಿಸದೆ ಅಡಿಕೆ ಆಮದಿಗೆ ನಿರ್ಧರಿಸಲಾಗಿದೆ. ಇದು ಹಲವು ಅಡ್ಡ ಪರಿಣಾಮ ಸೃಷ್ಟಿಸುವ ಭೀತಿ ಉಂಟಾಗಿದೆ. ಈ ಹಿಂದೆ ದಕ್ಷಿಣ ಏಷ್ಯಾ ಉಚಿತ ವ್ಯಾಪಾರ ಒಪ್ಪಂದ ಹಿನ್ನೆಲೆಯಲ್ಲಿ ಅಡಿಕೆ ಆಮದಿಗೆ ಸರ್ಕಾರ ಒಪ್ಪಿಗೆ ನೀಡಿದ ಪರಿಣಾಮ ಅಡಿಕೆ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆ ಧಾರಣೆ ಪಾತಾಳಕ್ಕೆ ಕುಸಿದಿತ್ತು. ಅಂತಹ ಸ್ಥಿತಿ ಮತ್ತೊಮ್ಮೆ ಉಂಟಾಗುವ ಆತಂಕ ಬೆಳೆಗಾರರದ್ದಾಗಿದೆ‌.

Bhutan arecanut import and arecanut price‌ drop

ಆಮದು ಹಾಗೂ ಪರಿಣಾಮ

ಭೂತಾನ್‌ ದೇಶದಲ್ಲಿ ಬಂದರುಗಳು ಇಲ್ಲದಿರುವುದರಿಂದ ಅಡಿಕೆಯನ್ನು ಭೂಮಾರ್ಗದಿಂದ ತಂದ ಬಳಿಕ ಪಶ್ಚಿಮ ಬಂಗಾಲದ ಜಯಗಾನ್ ಹಾಗೂ ಚಾಮೂರ್ಚಿ ಬಂದರಿನಿಂದ ಆಮದು ಮಾಡಿಕೊಳ್ಳಬೇಕು. ಇದರಿಂದ ಸಾಗಣೆ ವೆಚ್ಚ ಹೆಚ್ಚಾಗುತ್ತದೆ ಅನ್ನುವ ವಾದ ಇದೆ. ತಜ್ಞರ ಪ್ರಕಾರ ಭೂತಾನ್‌ ಪ್ರದೇಶದಲ್ಲಿ ಇತ್ತೀಚೆಗಷ್ಟೇ ಅಡಿಕೆ ಬೆಳೆ ಬೆಳೆಯಲು ಪ್ರಾರಂಭಿಸಿದ್ದು ಅಲ್ಲಿನ ಅಡಿಕೆ ಗುಣಮಟ್ಟದಿಂದ ಕೂಡಿಲ್ಲ. ಒಂದು ಕ್ವಿಂಟಾಲ್‌ ಹಸಿ ಅಡಿಕೆಯಲ್ಲಿ ಕಾಲು ಭಾಗಕ್ಕಿಂತಲೂ ಕಡಿಮೆ ಒಣ ಅಡಿಕೆ ಸಿಗುವುದರಿಂದ ಮಾರುಕಟ್ಟೆಯಲ್ಲಿ ಪರಿಣಾಮ ಬೀರಲಾರದು ಎನ್ನುವ ಅಭಿಪ್ರಾಯವೂ ಇದೆ.

ಬೆಳಗಾರರಿಗೆ ತೊಂದರೆ
ವಿದೇಶದಿಂದ ಅಡಿಕೆ ಆಮದಿಗೆ ನಮ್ಮ ತಕರಾರಿಲ್ಲ. ಆದರೆ, ಆಮದಾಗುವ ಅಡಿಕೆಗೆ ಸೂಕ್ತ ತೆರಿಗೆ ವಿಧಿಸಬೇಕಾಗುತ್ತದೆ. ಕರ್ನಾಟಕ, ಕೇರಳ ಹಾಗೂ ಆಂಧ್ರಪ್ರದೇಶದಲ್ಲಿ ಅಡಿಕೆ ಬೆಳೆಗಾರರು ಇದ್ದಾರೆ. ನಮ್ಮಲ್ಲಿ ಅಡಿಕೆಗೆ ಏನು ಕೊರತೆಯಿಲ್ಲ. ಕೊರತೆ ಇದ್ದರೆ ವಿದೇಶದಿಂದ ಆಮದು ಮಾಡಿಕೊಳ್ಳುದರಲ್ಲಿ ಅರ್ಥವಿದೆ. ಆದರೆ ಈ ನಿಲುವು ಸಂಪೂರ್ಣ ದೊಡ್ಡ ಲಾಭಿಯಿಂದ ಕೂಡಿದೆ. ಭೂತಾನ್‌ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದರೆ, ಕಂಟೇನರ್‌ನಲ್ಲಿ ತುಂಬಿದ ಅಡಿಕೆ ನಮ್ಮಲ್ಲಿ ಬರಲು 18 ದಿನಗಳಾದರೂ ಬೇಕು. ಅಷ್ಟರಲ್ಲಿ ಅಡಿಕೆ ಕೊಳೆತು ಹೋಗುತ್ತದೆ. ಉತ್ತಮ ಗುಣಮಟ್ಟದ ಅಡಿಕೆ ನಮಗೆ ದೊರೆಯುವುದು ಕಷ್ಟ ಸಾಧ್ಯವಾಗಿದೆ. ಅಡಿಕೆ ಆಮದು ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ನಿರ್ಧಾರ ಕೈಗೊಳ್ಳಲಾಗಿದೆ. ಭೂತಾನ್ ಅಡಿಕೆ ಆಮದಿನಿಂದಾಗಿ ಮೊದಲೇ ಸಂಕಷ್ಟದಲ್ಲಿರುವ ಬೆಳೆಗಾರರು ಇನ್ನಷ್ಟು ತೊಂದರೆಗೆ ಒಳಗಾಗುವ ಸಾಧ್ಯತೆ ಇದೆ.
| ಎಂ.ಆರ್. ಹೆಗಡೆ, ಅಧ್ಯಕ್ಷ, ಮಲೆನಾಡು ಕೃಷಿ ಅಭಿವೃದ್ಧಿ ಸೊಸೈಟಿ, ಯಲ್ಲಾಪುರ

ಎಲ್ಲೆಲ್ಲಿ ಎಷ್ಟೆಷ್ಟು ಪ್ರದೇಶದಲ್ಲಿ ಬೆಳೆ?

ಶಿವಮೊಗ್ಗ ಜಿಲ್ಲೆಯಲ್ಲಿ 1.20 ಲಕ್ಷ ಹೆಕ್ಟೇರ್‌, ಉತ್ತರ ಕನ್ನಡ 33,365 ಹೆಕ್ಟೇರ್‌, ದಕ್ಷಿಣ ಕನ್ನಡ 30,450 ಹೆಕ್ಟೇರ್‌ನಷ್ಟು ಅಡಿಕೆ ಪ್ರದೇಶವಿದೆ. ಇದರ ಜೊತೆ ಅಸಾಂಪ್ರದಾಯಿಕವಾಗಿ ವಿಸ್ತರಣೆಯಾದ ಅಡಿಕೆಯು ತುಮಕೂರು ಜಿಲ್ಲೆಯಲ್ಲಿ 35,839 ಹೆಕ್ಟೇರ್‌, ಚಿತ್ರದುರ್ಗ 25,061 ಹೆಕ್ಟೇರ್‌, ದಾವಣಗೆರೆ 30,811 ಹೆಕ್ಟೇರ್‌, ಹಾವೇರಿ 6,901 ಹೆಕ್ಟೇರ್‌, ಚಿಕ್ಕಮಗಳೂರು 29,214 ಹೆಕ್ಟೇರ್‌ ಪ್ರದೇಶದಲ್ಲಿ ಫಲ ನೀಡುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಸಾಂಕ್ರಾಮಿಕ ರೋಗಗಳ ಜಾಗೃತಿ ಮೂಡಿಸಲು ಯಲ್ಲಾಪುರ ತಹಸೀಲ್ದಾರ್ ಸೂಚನೆ

Uttara Kannada News: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಯಲ್ಲಾಪುರ ತಹಸೀಲ್ದಾರ್ ತನುಜಾ ಟಿ. ಸವದತ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Yallapur Tehsildar Tanuja T savadatti instructed to create awareness about infectious diseases
Koo

ಯಲ್ಲಾಪುರ: ಮಳೆಗಾಲ ಪ್ರಾರಂಭವಾಗುತ್ತಿದ್ದು, ಕಲುಷಿತ ನೀರಿನಿಂದ ಹರಡುವ ಸಾಂಕ್ರಾಮಿಕ ರೋಗಗಳ (infectious diseases) ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರ್ ತನುಜಾ ಟಿ ಸವದತ್ತಿ (Uttara Kannada News) ಹೇಳಿದರು.

ಶುಕ್ರವಾರ ಮಿನಿ ವಿಧಾನಸೌಧದಲ್ಲಿ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಕುರಿತು ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ವಹಣೆ ತುರ್ತು ಅವಶ್ಯಕತೆಯಾಗಿದೆ. ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ಬ್ಲೀಚಿಂಗ್ ಪೌಂಡರ್ ಬಳಸಿ ಸ್ವಚ್ಛಗೊಳಿಸುವುದು, ಕುಡಿಯುವ ನೀರು ಕಲುಷಿತವಾಗದಂತೆ ಪೂರೈಕೆ ವ್ಯವಸ್ಥೆಯಲ್ಲಿ ಸೋರುವಿಕೆಗಳನ್ನು ಗುರುತಿಸಿ ತಕ್ಷಣ ದುರಸ್ತಿಗೊಳಿಸಬೇಕು. ಡೆಂಗ್ಯೂ, ಚಿಕುನ್‌ಗುನ್ಯ, ಮಲೇರಿಯಾ, ಆನೆಕಾಲುರೋಗ, ಮೆದುಳು ಜ್ವರಗಳ ಬಗ್ಗೆ ಕ್ಷೇತ್ರ ಮಟ್ಟದಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Indian 2: ಜು.12ಕ್ಕೆ ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರ ರಿಲೀಸ್‌

ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಮಾತನಾಡಿ, ಕಲುಷಿತ ನೀರಿನಿಂದ ವಾಂತಿ, ಭೇದಿ, ಅತಿಸಾರ ಭೇದಿ, ಕಾಲರಾ, ಕರುಳು ಬೇನೆ, ಕಾಮಾಲೆ ರೋಗಗಳು ಕಾಣಿಸಿಕೊಳ್ಳುವ ಸಂಭವ ಇರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಾಯಿಸಿ ಆರಿಸಿದ ನೀರನ್ನೇ ಕುಡಿಯುವುದು ಸೂಕ್ತ. ಇಲಾಖಾ ಸಿಬ್ಬಂದಿಗಳು ಮನೆ ಭೇಟಿ ನೀಡಿದಾಗ ಜ್ವರ ಮತ್ತು ಇತರೆ ಕಾಯಿಲೆಗಳಿದ್ದರೆ ಸರಿಯಾಗಿ ಮಾಹಿತಿ ನೀಡಬೇಕು ಎಂದ ಅವರು, ಓ.ಆರ್.ಎಸ್. ತಯಾರಿಸಿ ಬಳಸುವ ವಿಧಾನ, ಸೊಳ್ಳೆ ನಿಯಂತ್ರಣ, ವೈಯಕ್ತಿಕ ಸ್ವಚ್ಛತೆ, ಮನೆಯ ಸುತ್ತಮುತ್ತ ಶುಚಿತ್ವ ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರು ಜಾಗೃತಿ ವಹಿಸಬೇಕು ಎಂದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಎಲ್ಲ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಬಹಳ ಮುಖ್ಯವಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕ್ಷಿಪ್ರ ಪ್ರತಿಕ್ರಿಯಾ ತಂಡ ರಚಿಸಲಾಗಿದ್ದು ಯಾವುದೇ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಯಿಲೆಗಳು ಕಂಡು ಬಂದರೆ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಡೆದ ಲಸಿಕಾ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರ್‌.ಸಿ.ಎಚ್.‌ ಅಧಿಕಾರಿ ಡಾ. ನಟರಾಜ್‌ ಕೆ., ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಲಸಿಕೆಯಿಂದ ತಡೆಗಟ್ಟಬಹುದಾದ ರೋಗಗಳಲ್ಲಿ ದಡಾರ ಕೂಡ ಒಂದಾಗಿದ್ದು, ದಡಾರ ನಿರ್ಮೂಲನೆಗೆ ಗುರಿ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

ಸಭೆಯಲ್ಲಿ ಬಿಪಿಎಂ ಎಸ್‌.ಎಸ್‌. ಪಾಟೀಲ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟೆ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ ವಂದಿಸಿದರು.

Continue Reading

ಮಳೆ

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Karnataka Weather Forecast : ಮಳೆ ಅವಾಂತರವು ಮುಂದುವರಿದಿದೆ. ನಿರಂತರ ಮಳೆಗೆ (Rain News) ಕೆಎಸ್‌ಆರ್‌ಟಿಸಿ ಬಸ್ಸಿನೊಳಗೆ ನೀರು ಸೋರುತ್ತಿರುವ ಕಾರಣಕ್ಕೆ ಚಾಲಕನೊಬ್ಬ ಕೈಯಲ್ಲಿ ಛತ್ರಿ ಹಿಡಿದು ಚಲಾಯಿಸಿದ್ದಾರೆ. ಇತ್ತ ವ್ಯಾಪಕ ಮಳೆಗೆ ಮಾಳಿಗೆ ಮನೆ ಕುಸಿದಿದ್ದು, ಮನೆಯಲ್ಲಿದ್ದ ಮಕ್ಕಳಿಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Karnataka Weather Forecast
Koo

ಧಾರವಾಡ/ದಾವಣಗೆರೆ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆ (Rain News) ಬಂದರು ಕಷ್ಟ ಬಾರದೆ ಇದ್ದರೂ ನಷ್ಟ ಎನ್ನುವಂತಾಗಿದೆ. ಮಳೆಯಿಂದಾಗಿ (karnataka Weather Forecast) ಅವಾಂತರವೇ ಸೃಷ್ಟಿಯಾಗಿದ್ದು, ಸಾವು-ನೋವು ಸಂಭವಿಸಿದೆ. ಧಾರವಾಡದಲ್ಲಿ ಭಾರಿ ಮಳೆಗೆ ಸಾರಿಗೆ ಬಸ್‌ನಲ್ಲಿ ನೀರು ಸೋರುತ್ತಿದ್ದ ಕಾರಣಕ್ಕೆ, ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಬಸ್ ಡ್ರೈವಿಂಗ್ ಮಾಡಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಗೆ ಗ್ರಾಮಕ್ಕೆ ಸಂಚರಿಸುವ ಸಾರಿಗೆ ಬಸ್‌ ಇದಾಗಿದ್ದು, ಭಾರಿ ಮಳೆಗೆ ಎಲ್ಲ ಕಡೆಯು ನೀರು ಸೋರಿದೆ. ಮಳೆಯಿಂದ ರಕ್ಷಣೆ ಪಡೆಯುವ ಸಲುವಾಗಿ ಚಾಲಕ ಛತ್ರಿ ಹಿಡಿದುಕೊಂಡು ಬಸ್‌ ಅನ್ನು ಚಾಲನೆ ಮಾಡಿದ್ದಾರೆ. ಈ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ಚಾಲಕ ಛತ್ರಿ ಹಿಡಿದ ದೃಶ್ಯವನ್ನು ನಿರ್ವಾಹಕಿ ವಿಡಿಯೊ ಮಾಡಿದ್ದಾರೆ ಎನ್ನಲಾಗಿದೆ.

karnataka Weather Forecast

ದಾವಣಗೆರೆಯಲ್ಲಿ ಕುಸಿದು ಬಿದ್ದ ಮಾಳಿಗೆ ಮನೆ

ಭಾರಿ ಮಳೆಗೆ ಮಾಳಿಗೆ ಮನೆಯೊಂದು ಕುಸಿದು ಬಿದ್ದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಸುರಿದ ಮಳೆಯಿಂದ ಮಾಳಿಗೆ ಮನೆ ಕುಸಿದಿದೆ. ಕುಟುಂಬಸ್ಥರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲಾ ಎಂಬುವರಿಗೆ ಸೇರಿದ ಮಾಳಿಗೆ ಮನೆಯಲ್ಲಿ ಮಕ್ಕಳು ಪಾರಾಗಿದ್ದು, ಸನಾವುಲ್ಲಾ ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಹಾಸನದಲ್ಲಿ ಮಳೆ ಗಾಳಿಗೆ ರಸ್ತೆಗೆ ಬಿದ್ದ ಮರ

ಹಾಸನ ನಗರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಸತತ ಒಂದು ಗಂಟೆಗಳ ಕಾಲ ಸುರಿದ ಗಾಳಿ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇದರಿಂದಾಗಿ ಒಂದು ಕಾರು ಜಖಂ ಆಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹಾಸನ ನಗರದ ಹೌಸಿಂಗ್ ಬೋರ್ಡ್‌ ಬಡಾವಣೆಯಲ್ಲಿ ಈ ಘಟೆನೆ ನಡೆದಿದೆ. ಇತ್ತ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತ್ತು. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ಹಾಸನ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಧರೆಗುರುಳಿದ 50 ವರ್ಷದ ಅರಳಿ ಮರ

ಬಿರುಗಾಳಿ ಸಹಿತ‌ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಳಿಕಟ್ಟೆಯಲ್ಲಿದ್ದ 50 ವರ್ಷಗಳಿಗೂ ಹಳೆಯ ಅರಳಿ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್‌ ಆ ಸಮಯದಲ್ಲಿ ಯಾರು ಇಲ್ಲದ ಕಾರಣಕ್ಕೆ ಅಪಾಯವೊಂದು ತಪ್ಪಿದೆ. ಇಶಾ ಫೌಂಡೇಶನ್ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬಿರುಗಾಳಿಗೆ ಜಾಹೀರಾತು ಫಲಕಗಳು ನೆಲಕ್ಕೆ ಬಿದ್ದಿವೆ. ಚಿಕನ್ ಹಾಗೂ ಚಾಟ್ಸ್ ಅಂಗಡಿ ಮೇಲೆ ಫಲಕ ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

Bank fraud: ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ತಿಳಿದುಬಂದಿದೆ.

VISTARANEWS.COM


on

Bank fraud Scam in Urban Co operative Bank of Karwar
Koo

ಕಾರವಾರ: ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಸೇರಿದಂತೆ ಹಲವಾರು ಕಡೆ ಸಹಕಾರಿ ಬ್ಯಾಂಕ್‌ಗಳ ಹಗರಣ (Bank fraud) ನಡೆದು ಗ್ರಾಹಕರು ಪರದಾಡುತ್ತಿರುವ ಹೊತ್ತಿನಲ್ಲಿಯೇ ಈಗ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ (Karwar Urban Co operative Bank) ಅವ್ಯವಹಾರ ನಡೆದಿದೆ ಎಂಬ ಸಂಗತಿ ಗೊತ್ತಾಗಿದೆ. ಆದರೆ, ಗ್ರಾಹಕರು ಯಾವುದೇ ರೀತಿಯಲ್ಲಿ ಭಯ ಪಡುವುದು ಬೇಡ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ.

ಬ್ಯಾಂಕ್ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ಗೊತ್ತಾಗಿದೆ.

54 ಕೋಟಿ ರೂಪಾಯಿ ಅವ್ಯವಹಾರ

ಸುಮಾರು 54 ಕೋಟಿ ರೂಪಾಯಿ ಅವ್ಯವಹಾರವನ್ನು ಈ ಮ್ಯಾನೇಜರ್ ಗುರುದಾಸ್ ಬಾಂದೇಕರ್ ಮಾಡಿದ್ದಾರೆನ್ನಲಾಗಿದೆ. ವರ್ಷದ ಹಿಂದೆ ಇವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮ್ಮ ಸಂಬಂಧಿ ಹಾಗೂ ಪರಿಚಯಸ್ಥರ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ ಎಂದು ಈಗ ತಿಳಿದುಬಂದಿದೆ.

ಪ್ರತಿ ವರ್ಷ ‌ಆಡಿಟ್‌ನಲ್ಲೂ ಗುರುದಾಸ್ ವ‌ಂಚನೆ ಮಾಡಿದ್ದರು. ಈಗ ಮ್ಯಾನೇಜರ್ ಮೃತಪಟ್ಟಿದ್ದರಿಂದ ಆಡಳಿತ ಮಂಡಳಿಗೆ ದೊಡ್ಡ ತಲೆನೋವಾಗಿದೆ. ಆಡಿಟ್ ಮಾಡಿಸುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಕಾರವಾರ ನಗರ ಠಾಣೆಯಲ್ಲಿ ಈ ಸಂಬಂಧ ಬ್ಯಾಂಕ್ ಆಡಳಿತ ಮಂಡಳಿ ದೂರು ನೀಡಿದೆ.

ಬ್ಯಾಂಕ್‌ ದಿವಾಳಿ ಆಗಿಲ್ಲವೆಂದ ಆಡಳಿತ ಮಂಡಳಿ

ಈ ನಡುವೆ ಅವ್ಯವಹಾರದ ಸುದ್ದಿ ಎಲ್ಲೆಡೆ ಹರಡಿದ್ದರಿಂದ ಗ್ರಾಹಕರು ಆತಂಕಗೊಂಡಿದ್ದಾರೆ. ಬ್ಯಾಂಕ್ ದಿವಾಳಿಯಾಗಿದೆ ಎಂದು ತಮ್ಮ ಖಾತೆಯಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆಯಬೇಕು ಎಂದು ಗ್ರಾಹಕರು ಮುಗಿಬಿದ್ದಿದ್ದಾರೆ. ಆದರೆ, ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಆಡಳಿತ ಮಂಡಳಿಯು, ಗ್ರಾಹಕರ ಹಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.

ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಹಗರಣದ (Bank fraud) ತನಿಖೆ ಹೊಣೆಯನ್ನು ಎಸ್‌ಐಟಿಗೆ (SIT Investigation) ವಹಿಸುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಕಳೆದ ಏಪ್ರಿಲ್‌ 25ರಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭರವಸೆ ನೀಡಿದ್ದರು. ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಗುರುವಾರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈ ಭರವಸೆ ನೀಡಿದ್ದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ (Priyanka Gandhi) ಆಗಮಿಸಿದ್ದ ವೇಳೆ ಅವರನ್ನು ಭೇಟಿ ಮಾಡಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂಪಾಯಿಯನ್ನು ಹೂಡಿಕೆ ಮಾಡಿದ್ದೇವೆ. ಈಗ ಹಗರಣದಿಂದಾಗಿ ನಮಗೆ ನಯಾ ಪೈಸೆ ಸಿಗುತ್ತಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕಷ್ಟಪಟ್ಟು ನಾವು ದುಡಿದಿದ್ದ ಹಣವನ್ನೆಲ್ಲ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿಟ್ಟಿದ್ದೇವೆ. ಇದರಿಂದ ನಮಗೆ ತೀವ್ರ ಸಮಸ್ಯೆಯಾಗುತ್ತಿದೆ. ಈವರೆಗೆ ಯಾವ ಸರ್ಕಾರಗಳೂ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ನಮಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದ್ದರು. ‌

ಎಸ್‌ಐಟಿ ತನಿಖೆಯ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ

ಠೇವಣಿದಾರರ ಮನವಿ ಸ್ವೀಕಾರ ಮಾಡಿದ್ದ ಪ್ರಿಯಾಂಕಾ ಗಾಂದಿ, ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದರು.

ಸಿಎಂಗೆ ಪತ್ರ ಬರೆಯಲು ಮುಂದಾದ ಡಿ.ಕೆ. ಶಿವಕುಮಾರ್

ಮನವಿ ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುತ್ತೇನೆ. ಶೀಘ್ರವೇ ಎಸ್‌ಐಟಿ ರಚನೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಕೂಡಲೇ ಈ ಸಂಬಂಧ ಸಿಎಂಗೆ ಪತ್ರವನ್ನು ಸಿದ್ಧಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರೆದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ: Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್‌​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

Continue Reading

ಮಳೆ

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Karnataka Rain : ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಹಲವೆಡೆ ಭಾರಿ ಮಳೆ-ಗಾಳಿಯಿಂದಾಗಿ ಮರಗಳು ಧರೆಗುರುಳುತ್ತಿವೆ. ಪರಿಣಾಮ ಅನಾಹುತಗಳು ಸಂಭವಿಸುತ್ತಿವೆ. ಮರದ ಬೃಹತ್‌ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಜಾನುವಾರವೊಂದು ಮೃತಪಟ್ಟಿದೆ. ಕೆಲವೆಡೆ ಮನೆಯ ಶೆಡ್‌ಗಳು ಹಾರಿ ಹೋಗಿವೆ.

VISTARANEWS.COM


on

By

Karnataka Rain
Koo

ಉಡುಪಿ/ಬೆಳಗಾವಿ: ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಸಾವು- ನೋವು (Karnataka Rain) ಸಂಭವಿಸುತ್ತಿದೆ. ಉಡುಪಿಯಲ್ಲಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ. ಉಡುಪಿಯ ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಘಟನೆ ನಡೆದಿದೆ. ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿ ಮೃತ ದುರ್ದೈವಿ.

ರಕ್ಷಿತ್‌ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್‌ನನ್ನು ಕೂಡಲೇ ಕುಟುಂಬಸ್ಥರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಗೆ ಮೃತಪಟ್ಟಿದ್ದಾನೆ.

ಬೆಳಗಾವಿಯಲ್ಲಿ ಮರದಡಿ ನಿಂತಿದ್ದ ಆಕಳು ಸಾವು

ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಗಾಳಿಯೊಂದಿಗೆ ಭಾರಿ‌ ಮಳೆಯಾಗಿದೆ. ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದೆ. ಗುರುವಾರ ಸಂಜೆ ಸುರಿದ ಮಳೆಯಿಂದ ಮನೆ ಮುಂದಿದ್ದ ಮರ ಬಿದ್ದಿದೆ. ಮರದ ಕೆಳಗೆ ಕಟ್ಟಿದ್ದ ಆಕಳು ಮೇಲೆ ಬೃಹತ್‌ ಗಾತ್ರದ ಕೊಂಬೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದೆ. ರೈತ ಶಂಕರ್ ರೊಡ್ಡಣ್ಣವರ್ ಎಂಬುವವರಿಗೆ ಸೇರಿದ ಆಕಳು ಮೃತಪಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಳೆಗೆ ಮನೆ ಬಿದ್ದು ಬೀದಿಗೆ ಬಂದ ಕುಟುಂಬ

ಕಳೆದ ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಎಲ್ಲವನ್ನೂ ಕಳೆದುಕೊಂಡು ಕುಟುಂಬವೊಂದು ಬೀದಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಭಾರಿ ಮಳೆಗೆ ಲಕ್ಷ್ಮೀ ಮಾದರ್ ಎಂಬುವವರ ಮನೆಯ ಚಾವಣಿ ಹಾರಿ ಹೋಗಿದೆ. ಲಕ್ಷ್ಮಿ ಅವರ ಕೈ ಮೇಲೂ ಚಾವಣಿ ಬಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಎಲ್ಲ ಸಾಮಾಗ್ರಿಗಳಿಗೂ ಹಾನಿಯಾಗಿವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಲಕ್ಷ್ಮೀ ಮನವಿ ಮಾಡಿದ್ದಾರೆ. ಇನ್ನೂ ಭಾರಿ ಬಿರುಗಾಳಿಗೆ 5ಕ್ಕೂ ಹೆಚ್ಚು ಶೆಡ್‌ಗಳ ಚಾವಣಿ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಮನೆಗಳಿಗೆ ಹಾನಿ ಹಿನ್ನೆಲೆ ಇಬ್ಬರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಾಗಲಕೋಟೆಯಲ್ಲಿ ನೆಲಕ್ಕುರುಳಿದ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌

ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಾಗಲಕೋಟೆಯ ತುಳಸಿಗೇರಿ ಗ್ರಾಮದಲ್ಲಿ ಬಿರುಗಾಳಿಗೆ ಮರ ಮುರಿದು ಬಿದ್ದು, ಚಾವಣಿಗೆ ಹಾರಿಹೋಗಿದೆ. ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ನೆಲಕ್ಕುರಳಿದೆ. ನೋಡ ನೋಡುತ್ತಿದ್ದಂತೆ ಶೆಡ್‌ನ ಚಾವಣಿ ಶಿಟ್ ಗಾಳಿಯಲ್ಲಿ ಹಾರಾಡಿದ್ದವು. ಕಾಯಿ ಅಂಗಡಿಗಳ ಮೇಲೆ ಮರದ ಕೊಂಬೆ ಮುರಿದು ಬಿದ್ದ ಹಾನಿಯಾಗಿತ್ತು.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

ಕುಸಿದು ಬಿದ್ದ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರ

ಭಾರಿ ಗಾಳಿ ಮಳೆಗೆ ದೇವಳದ ಅನ್ನಛತ್ರ ಕುಸಿದು ಭಾರಿ ಅನಾಹುತ ತಪ್ಪಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಳವಾಡಿ ಈಶ್ವರ ಮಾರಿಕಾಂಬಾ ದೇವಳದ ಅನ್ನಛತ್ರದಲ್ಲಿ ಘಟನೆ ನಡೆದಿದೆ. ಕೊಲ್ಲೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ವಿದ್ಯುತ್ ತಂತಿಯ ಮೇಲೆ ಮರ ಬಿದ್ದು, ತಡರಾತ್ರಿಯವರಗೂ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಚಿಕ್ಕಮಗಳೂರಲ್ಲಿ ಮರ ಬಿದ್ದು ಐವರು ಕೂದಲೆಳೆ ಅಂತರದಲ್ಲಿ ಪಾರು

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಬಿರುಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದೇ ವೇಳೆ ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಮಲಗಿದ್ದಾಗ ಮಂಚದ ಮೇಲೆಯೇ ಬೃಹತ್ ಗಾತ್ರದ ಕೊಂಬೆ ಬಿದ್ದಿದೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮನೆಯೊಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು, ಪಿಠೋಪಕರಣಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಈ ಅವಘಡ ಸಂಭವಿಸಿದೆ. ಬೃಹತ್ ಗಾತ್ರದ ಮರ ಬಿದ್ದರೂ ಐವರು ಉಳಿದಿದ್ದೆ ಪವಾಡ ಎಂದಿದ್ದಾರೆ.

ಮಳೆ ಅನಾಹುತಕ್ಕೆ ಶುಂಠಿ ಬೆಳೆ ನಾಶ

ಮೈಸೂರಿನಲ್ಲಿ ಮಳೆ ಅನಾಹುತ ಮುಂದುವರಿದಿದೆ. ಸರಗೂರು ತಾಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಅವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಜಮೀನಿನಲ್ಲಿ ಮಳೆ ನೀರು ನಿಂತಿದ್ದರಿಂದ ಪುಟ್ಟತಾಯಮ್ಮ ಕಣ್ಣೀರಿಟ್ಟು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ರಾಯಚೂರಲ್ಲಿ ಸುರಿದ ಒಂದೇ ಮಳೆಗೆ ಜಮೀನು ಜಲಾವೃತ

ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಒಂದೇ ಮಳೆಗೆ ಜಮೀನು ಜಲಾವೃತಗೊಂಡಿದೆ. ಮಳೆಯಿಂದಾಗಿ ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದರಿಂದ ಬಿತ್ತನೆಗೆ ತಯಾರಿ ನಡೆಸಿದ್ದ ರೈತರಿಗೆ ಭಾರೀ‌ ನಿರಾಸೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ದೇಶ3 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ3 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು3 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ3 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ4 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ4 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Kangana Ranaut
ದೇಶ5 hours ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ5 hours ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ5 hours ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್5 hours ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌