Spandana Vijay Raghavendra : ಸ್ಪಂದನಾ ಪಾರ್ಥಿವ ಶರೀರ ರಾತ್ರಿ 11.25ಕ್ಕೆ ಬೆಂಗಳೂರಿಗೆ, ಮಲ್ಲೇಶ್ವರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ - Vistara News

ಕರ್ನಾಟಕ

Spandana Vijay Raghavendra : ಸ್ಪಂದನಾ ಪಾರ್ಥಿವ ಶರೀರ ರಾತ್ರಿ 11.25ಕ್ಕೆ ಬೆಂಗಳೂರಿಗೆ, ಮಲ್ಲೇಶ್ವರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

Spandana Vijay Raghavendra : ಸ್ಪಂದನಾ ವಿಜಯ ರಾಘವೇಂದ್ರ ಅವರ ಪಾರ್ಥಿವ ಶರೀರ ಆಗಲೇ ಬ್ಯಾಂಕಾಕ್‌ನಿಂದ ಹೊರಟಿದ್ದು ರಾತ್ರಿ 11.25ಕ್ಕೆ ಬೆಂಗಳೂರು ತಲುಪಲಿದೆ. ಇಲ್ಲಿ ಅವರ ಅಂತಿಮ ದರ್ಶನಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Spandana vijay Raghavendra Photo
ಬಿ.ಕೆ ಶಿವರಾಮ್‌ ಅವರ ಮನೆಯಲ್ಲಿ ಸ್ಪಂದನಾ ಅವರ ಭಾವಚಿತ್ರ ಇಟ್ಟು ದೀಪ ಹಚ್ಚಲಾಗಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಥಾಯ್ಲೆಂಡ್‌ ಪ್ರವಾಸದಲ್ಲಿರುವ (Thailand tour) ವೇಳೆ ಹಠಾತ್‌ ಹೃದಯಾಘಾತದಿಂದ (Sudden Cardiac Arrest) ನಿಧನರಾದ ನಟ ವಿಜಯ ರಾಘವೇಂದ್ರ (Vijay Raghavendra) ಅವರ ಪತ್ನಿ ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿ ಬಿ.ಕೆ. ಶಿವರಾಂ ಅವರ ಪುತ್ರಿ ಸ್ಪಂದನಾ ವಿಜಯ ರಾಘವೇಂದ್ರ (Spandana Vijay Raghavendra) ಅವರ ಪಾರ್ಥಿವ ಶರೀರ ಥಾಯ್ ಏರ್ ವೇಸ್‌ಗೆ (Thai Airways) ಸೇರಿದ ವಿಮಾನದಲ್ಲಿ ಮಂಗಳವಾರ ರಾತ್ರಿ 11.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International airport) ಆಗಮಿಸಲಿದೆ.

ಕಳೆದ ಭಾನುವಾರ ರಾತ್ರಿ ಕುಸಿದು ಬಿದ್ದು ಮೃತಪಟ್ಟಿದ್ದ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಬ್ಯಾಂಕಾಕ್‌ನ ಆಸ್ಪತ್ರೆಯಲ್ಲಿ ಮುಕ್ತಾಯಗೊಂಡು ದಾಖಲೆಗಳ ವಿನಿಮಯ ನಡೆದಿದೆ. ಭಾರತೀಯ ದೂತಾವಾಸದ ಜತೆಗಿನ ಪ್ರಕ್ರಿಯೆ ಮತ್ತು ವಿಮಾನದಲ್ಲಿ ಮೃತದೇಹ ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳ ಪ್ರಕ್ರಿಯೆಯನ್ನು ಮುಗಿಸಲಾಗಿದೆ. ಥಾಯ್ಲೆಂಡ್‌ ಟು ಬೆಂಗಳೂರು ವಿಮಾನ ಆಗಲೇ ಬ್ಯಾಂಕಾಕ್‌ನಿಂದ ಹೊರಟಿದ್ದು, ಮೃತದೇಹದೊಂದಿಗೆ ವಿಜಯ ರಾಘವೇಂದ್ರ ಅವರು ಆಗಮಿಸಲಿದ್ದಾರೆ. ಜತೆಗೆ ಅವರೊಂದಿಗೆ ಥಾಯ್ಲೆಂಡ್‌ಗೆ ಹೋಗಿದ್ದ ಸಂಬಂಧಿಕ ಯುವತಿಯರು, ಕುಟುಂಬದ ಬಂಧುಗಳು ಮರಳಲಿದ್ದಾರೆ.

ಥಾಯ್‌ ಏರ್‌ವೇಸ್‌ನ ಈ ವಿಮಾನವು ರಾತ್ರಿ 11:25ಕ್ಕೆ‌ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ವಿಮಾನ ನಿಲ್ದಾಣದ WFS ಏರ್ ಕಾರ್ಗೋ ಟರ್ಮಿನಲ್‌ಗೆ ಮೃತದೇಹವನ್ನು ತರಲಾಗುತ್ತದೆ.

ನಿಯಮಾನುಸಾರ ಮೃತದೇಹ ಸ್ಕ್ಯಾನ್ ಮಾಡಿ ದಾಖಲೆ ಪರಿಶೀಲನೆ ಮಾಡಲಿರುವ ಅಧಿಕಾರಿಗಳು, ಬಳಿಕ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಲಿದ್ದಾರೆ. ಕಸ್ಟಮ್ಸ್ ಕ್ಲಿಯರೆನ್ಸ್ ಆದ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ನಡೆಯಲಿದೆ.

Spandana vijay Raghavendra
ಮಲ್ಲೇಶ್ವರದ ಬಿ.ಕೆ. ಶಿವರಾಂ ಮನೆಯ ಪರಿಸರದಲ್ಲಿ ಸ್ಪಂದನಾ ಅವರ ಭಾವಚಿತ್ರಗಳನ್ನು ಇಟ್ಟಿರುವುದು.

ತಡರಾತ್ರಿ ಮಲ್ಲೇಶ್ವರದ ಮನೆಗೆ ಆಗಮನ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತಲುಪಲಿರುವ ಪಾರ್ಥಿವ ಶರೀರವನ್ನು ಮಲ್ಲೇಶ್ವರದಲ್ಲಿರುವ ಬಿಕೆ ಶಿವರಾಂ ಅವರ ಮನೆಗೆ (No.34, 4ನೇ ದೇವಸ್ಥಾನ ರಸ್ತೆ, 15ನೇ ಅಡ್ಡರಸ್ತೆ, ಮಲ್ಲೇಶ್ವರ) ತರಲಾಗುತ್ತದೆ. ಮಧ್ಯರಾತ್ರಿಯಿಂದ ಬುಧವಾರ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕ ನಗರದ ಸತ್ಯಹರಿಶ್ಚಂದ್ರ ರುದ್ರಭೂಮಿಯಲ್ಲಿ ಈಡಿಗ ಸಮುದಾಯದ ವಿಧಿವಿಧಾನದಂತೆ ಅಂತ್ಯಕ್ರಿಯೆ ನೇರವೇರಿಸಲಾಗುವುದು ಎಂದು ಕುಟುಂಬದ ಪ್ರಕಟಣೆ ತಿಳಿಸಿದೆ.

ಶಿವರಾಂ ಮನೆಯ ಪರಿಸರದಲ್ಲಿ ಸಕಲ ಸಿದ್ಧತೆ

ಪಾರ್ಥಿವ ಶರೀರದ ಆಗಮನ ಮತ್ತು ಅಂತಿಮ ದರ್ಶನಕ್ಕೆ ಸಂಬಂಧಿಸಿ ಬಿ.ಕೆ. ಶಿವರಾಂ ಅವರ ಮನೆಯ ಪರಿಸರದಲ್ಲಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಈಗಾಗಲೇ ಬಂಧುಗಳು, ಕುಟುಂಬಿಕರು ಮನೆಗೆ ಆಗಮಿಸಿದ್ದಾರೆ. ಬ್ಯಾರಿಕೇಡ್, ಟೇಬಲ್, ಕುರ್ಚಿಗಳನ್ನು ಹಾಕಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಬಿ.ಕೆ ಹರಿಪ್ರಸಾದ್ ಹಾಗೂ ಶ್ರೀಮುರುಳಿ ಅವರು ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.

ಸಾರ್ವಜನಿಕರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸುವುದಕ್ಕೂ ಅವಕಾಶ ನೀಡಲಾಗಿದ್ದು, ಯಾವುದೇ ಒತ್ತಡವಿಲ್ಲದೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಿತ್ರನಟರು, ವಿಜಯ ರಾಘವೇಂದ್ರ ಅಭಿಮಾನಿಗಳು, ರಾಜಕಾರಣಿಗಳು ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ.

ಇದನ್ನೂ ಓದಿ: Spandana Vijay Raghavendra : ಸ್ಪಂದನಾ ಜಿಮ್‌ ಸೇರಿದ್ದು ಬಾಡಿ ಬಿಲ್ಡ್‌ ಮಾಡಲು ಅಲ್ಲ, ಜೋತುಬಿದ್ದ ಚರ್ಮ tight ಆಗಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು ಗ್ರಾಮಾಂತರ

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Love Failure : ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಹುಡುಗಿ ಪ್ರೀತಿಸಿ ದೂರಾಗಿದ್ದಕ್ಕೆ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

VISTARANEWS.COM


on

By

Love Failure
Koo

ದೊಡ್ಡಬಳ್ಳಾಪುರ: ಪ್ರೀತಿಸಿದ ಹುಡುಗಿ (Love Failure) ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಕಾಳುಮಾತ್ರೆ ಸೇವಿಸಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ನಿವಾಸಿ ಬಾಲಾಜಿ (23) ಮೃತಪಟ್ಟಿದ್ದಾನೆ.

ಬಾಲಾಜಿಗೆ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಯುವತಿಯೊಬ್ಬಳು ಪರಿಚಯವಾಗಿದ್ದಳು. ಕನಕಪುರ ಮೂಲದ ಯುವತಿ ಜತೆಗೆ ಪರಿಚಯವು ಪ್ರೀತಿಗೆ ತಿರುಗಿತ್ತು. ಪ್ರೀತಿ- ಪ್ರೇ‌ಮದ ಗುಂಗಿನಲ್ಲಿ ಇಬ್ಬರು ಒಟ್ಟೊಟ್ಟಿಗೆ ಸುತ್ತಾಡಿದ್ದಾರೆ. ಎಲ್ಲ ಕಡೆ ಜತೆಯಾಗಿ ಸುತ್ತಾಡಿ ಕೊನೆಗೆ ಬೇರೊಬ್ಬನ ಜತೆ ಲವ್‌ನಲ್ಲಿರುವುದಾಗಿ ಹೇಳಿ ಕೈಕೊಟ್ಟಿದ್ದಾಳೆ ಎಂಬ ಆರೋಪವಿದೆ.

ಯುವತಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮದುವೆ ಮಾಡಿಕೊಳ್ಳೋಣ ಅಂದಿದ್ದಕ್ಕೆ ಮನೆಯಲ್ಲಿ ಒಪ್ಪಲ್ಲ ಎಂದಿದ್ದಾಳಂತೆ. ಜತೆಗೆ ಬೇರೆ ಯುವಕನ ಜತೆ ಲವ್‌ನಲ್ಲಿರುವುದಾಗಿ ಹೇಳಿದ್ದಳಂತೆ. ಈ ಕಾರಣಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಮೆಜಾನ್‌ನಲ್ಲಿ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬಾಲಾಜಿ ಬಡ ಕುಟುಂಬಕ್ಕೆ ಆಧಾರವಾಗಿದ್ದ. ಆದರೆ ಇದೀಗ ಮಗನ ದುರಂತ ಅಂತ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಮೃತ ಕುಟುಂಬಸ್ಥರು ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಜೈಪುರ: ರಾಜಸ್ಥಾನದಲ್ಲಿ (Rajasthan) ಮುಸ್ಲಿಂ ಯುವಕನೊಬ್ಬ ಹಿಂದು ಯುವತಿಗೆ ತಾನು ಕೂಡ ಹಿಂದು ಎಂಬುದಾಗಿ ನಂಬಿಸಿ, ಮದುವೆಯಾಗುವುದಾಗಿ ಭರವಸೆ ನೀಡಿ, ಈಗ ಕೊನೆಗೆ ಆಕೆಯ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಹಾಗಾಗಿ, ಪ್ರಕರಣದಲ್ಲಿ ಲವ್‌ ಜಿಹಾದ್‌ (Love Jihad) ಶಂಕೆ ವ್ಯಕ್ತವಾಗಿದೆ. ಹಿಂದು ಯುವತಿ ದಾಖಲಿಸಿದ ದೂರಿನ ಅನ್ವಯ ಪೊಲೀಸರು ಮುಸ್ಲಿಂ ಯುವಕನ ವಿರುದ್ಧ ಕೇಸ್‌ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾಜಸ್ಥಾನದ ದೌಸಾ ಪ್ರದೇಶದಲ್ಲಿ ಉತ್ತರ ಪ್ರದೇಶ ಮೂಲದ ರಶೀದ್‌ ಖಾನ್‌ ಎಂಬುವನು ಹಿಂದು ಯುವತಿ ಜತೆ ಸ್ನೇಹ ಸಂಪಾದಿಸಿದ್ದಾನೆ. ತಾನು ಕೂಡ ಹಿಂದು ಎಂದು ಆಕೆಯನ್ನು ನಂಬಿಸಿದ್ದಾನೆ. ಕೊನೆಗೆ ಒಂದು ದಿನ ಯುವತಿಯ ಎದುರು ಪ್ರೇಮ ನಿವೇದನೆ ಮಾಡಿದ್ದು, ಮದುವೆಯಾಗುವುದಾಗಿ ನಂಬಿಸಿದ್ದಾನೆ. ಆದರೆ, ಕಳೆದ 7 ತಿಂಗಳಿಂದ ಯುವತಿ ಮೇಲೆ ರಶೀದ್‌ ಖಾನ್‌ ಅತ್ಯಾಚಾರ ಎಸಗಿದ್ದು, ಆತನ ಬಂಧನದಿಂದ ಬಿಡಿಸಿಕೊಂಡು ಬಂದ ಯುವತಿಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ರಶೀದ್‌ ಖಾನ್‌, ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ. ನಾನೀಗ ಗರ್ಭಿಣಿಯಾಗಿದ್ದು, ಗರ್ಭಪಾತ ಮಾಡಿಸಿಕೊ ಎಂದು ಒತ್ತಾಯಿಸುತ್ತಿದ್ದಾನೆ. ಹಾಗಾಗಿ, ರಶೀದ್‌ ಖಾನ್‌ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂಬುದಾಗಿ ಸೀತಾ ಯಾದವ್‌ ಎಂಬ ಯುವತಿಯು ದೂರು ದಾಖಲಿಸಿದ್ದಾರೆ. ರಶೀದ್‌ ಖಾನ್‌ ವಿರುದ್ಧ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

physical abuse women

ಹೋಟೆಲ್‌ನಲ್ಲಿ ಹಿಂದು ಯುವತಿ ಶವ ಪತ್ತೆ

ಒಂದು ದಿನದ ಹಿಂದಷ್ಟೇ, ಮಧ್ಯಪ್ರದೇಶದಲ್ಲಿ ಹೋಟೆಲ್‌ ರೂಮ್‌ನಲ್ಲಿ ಹಿಂದು ಯುವತಿ ಶವ ಪತ್ತೆಯಾಗಿದ್ದ, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಹೊಟೇಲ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹಿಂದೂ ಯುವತಿಯ ಮೃತದೇಹ ಪತ್ತೆಯಾಗಿದ್ದು, ಆಕೆ ಪ್ರಿಯಕರ ಜುನೈದ್‌ ಎಂಬಾತನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಈ ಘಟನೆ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಬಹಳ ಸುದ್ದಿ ಮಾಡುತ್ತಿದೆ. ಪೊಲೀಸ್‌ ಮಾಹಿತಿ ಪ್ರಕಾರ, ಜುನೈದ್‌ ಎಂಬಾತನ ಹೆಸರಿನಲ್ಲಿ ಬುಕ್‌ ಆಗಿದ್ದ ಹೊಟೇಲ್‌ ರೂಂನಲ್ಲಿ ಹಿಂದೂ ಯುವತಿಯ(24) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಇದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಟಿಕಾ ಎಂಬ ಹೊಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ಯುವತಿ ಎರಡು ದಿನಗಳಿಂದ ಆರೋಪಿ ಜುನೈದ್‌ ಜೊತೆ ಹೊಟೇಲ್‌ನಲ್ಲಿ ತಂಗಿದ್ದಳು. ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಾಗಿಲು ಒಡೆದು ನೋಡಿದಾಗ ಆಕೆಯ ದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡುತ್ತಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

HD Revanna Bail: ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು.

VISTARANEWS.COM


on

HD Revanna Bail I am not happy that Revanna has been released says HD Kumaraswamy
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಜಾಮೀನು ಸಿಕ್ಕಿದೆ ನಿಜ. ಆದರೆ, ಇದಕ್ಕೆ ನಾನು ಸಂತೋಷ ಪಡಲಾರೆ. ಪಟಾಕಿ ಸಿಡಿಸಿ ಸಂಭ್ರಮಿಸುವ ಸಮಯವೂ ಇದಲ್ಲ ಎಂದು ಕಾರ್ಯಕರ್ತರಿಗೆ ಹೇಳಬಯಸುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮ ಪಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊ ಲೀಕ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಸರಿಯಾದ ತನಿಖೆಯನ್ನು ನಡೆಸುತ್ತಿಲ್ಲ. ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರು ಕೂಡ ಎಸ್‌ಐಟಿಯಿಂದ ಆರೋಪ ಎದುರಿಸಬೇಕಾಯಿತು. ಅವರಿಗೆ ನಿನ್ನೆ (ಸೋಮವಾರ – ಮೇ 13) ಜಾಮೀನು ಸಿಕ್ಕಿದೆ. ಅದಕ್ಕೆ ನಾನು ಸಂತೋಷವನ್ನು ಪಡುವುದಿಲ್ಲ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮವನ್ನು ಪಡೋಣ. ಈಗ ನಡೆದಿರುವುದು ರಾಜ್ಯವೇ ತಲೆ ತಗ್ಗಿಸುವ ವಿಚಾರವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ? ಎಸ್‌ಐಟಿ ಅಧಿಕಾರಿಗಳೇ ನಿಮಗೂ ಅಕ್ಕ – ತಂಗಿ, ತಂದೆ – ತಾಯಿ ಇರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾರು ಪೆನ್ ಡ್ರೈವ್ ಹಂಚಿದರೋ ಅವರನ್ನು ಇದುವರೆಗೂ ಮುಟ್ಟಿಲ್ಲ. ಹಾಸನ ಜಿಲ್ಲಾದ್ಯಂತ ಪೆನ್‌ ಡ್ರೈವ್‌ ಅನ್ನು ರಿಲೀಸ್‌ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ನ ನವೀನ್‌ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುತ್ತಾನೆ. ಆದರೆ, ಇಲ್ಲಿಯವರೆಗೆ ಆತನನ್ನು ಮುಟ್ಟಿಲ್ಲ. ಈ ಘಟನೆಗೆ ಕಾರಣವಾದ ವ್ಯಕ್ತಿಯನ್ನೂ ಹಿಡಿಯಲಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಸರ್ಕಾರದ ಜವಾಬ್ದಾರಿ ಅದು

ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲಗಳನ್ನು ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯ ವಾದವರನ್ನು ಹಿಡಿಯಲಾಗುತ್ತೆ ಅಂದಿದ್ದಾರೆ. ಹಾಗಾದರೆ ಎಸ್ಐಟಿ ತನಿಖೆ ಹೇಗೆ ಸೋರಿಕೆ ಆಗ್ತಾ ಇದೆ? ಎಫ್‌ಐಆರ್ ಆಗಿರುವ ಒಬ್ಬ ವ್ಯಕ್ತಿಯನ್ನೂ ಹಿಡಿಯಲಿಲ್ಲ. ಖಾಸಗಿ ಚಾನಲ್‌ನಲ್ಲಿ ಒಂದೂವರೆ ಗಂಟೆಗಳ ಕಾಲ ಸಂದರ್ಶನ ಕೊಡುತ್ತಾರೆ. ನವೀನ್ ಗೌಡ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳುತ್ತಾನೆ. ಕೆಲವೇ ಕ್ಷಣಗಳಲ್ಲಿ ಪೆನ್ ಡ್ರೈವ್ ಬರುತ್ತದೆ ಅಂತಾ ಪೋಸ್ಟ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದ ಆತನನ್ನು ಹಿಡಿದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ವಿಡಿಯೊದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಅನುಕಂಪ‌ ಇದೆಯಾ? ಇದರಲ್ಲಿ ಯಾವುದನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಿನ ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ, ನಿರಪರಾಧಿ ಆಗುತ್ತಾನೆ, ನಿರಪರಾಧಿ ಅಪರಾಧಿ ಆಗುತ್ತಾನೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ನನ್ನ ಮೇಲೂ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಎಚ್.ಡಿ. ರೇವಣ್ಣ ಅವರ ಕುಟುಂಬವನ್ನು ಮುಗಿಸಲು ನಾನು ಪ್ರಯತ್ನ ಪಡುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ.

ನಾನು ನ್ಯಾಯದ ಪರ, ಮಹಿಳೆಯರ ಪರ ಇದ್ದೇನೆ. ಈ ವಿಡಿಯೊದಲ್ಲಿ ಆ ವ್ಯಕ್ತಿಯ ಯಾವುದೇ ಚಿತ್ರಣ ಇಲ್ಲ ಅಂತ ಪತ್ರಿಕೆಯೊಂದು ಬರೆದಿದೆ. ಅಲ್ಲಿಗೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ? ಎಂದು ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಹೆದರಿಸಿ ದೂರು ಪಡೆಯಲು ಯತ್ನ

ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆಕ್ರೋಶವನ್ನು ಹೊರಹಾಕಿದರು. ಅಲ್ಲದೆ, ದೊಡ್ಡ ತಿಮಿಂಗಿಲವು ಸರ್ಕಾರದಲ್ಲಿದೆ. ಆ ದೊಡ್ಡ ತಿಮಿಂಗಲವನ್ನು ಹಿಡಿಯಲಾಗದೇ ಇದ್ದರೆ ಸಣ್ಣ ತಿಮಿಂಗಲಗಳನ್ನು ಹಿಡಿಯಲಾಗುತ್ತದೆಯೇ? ಈ ಸರ್ಕಾರದಲ್ಲಿ ಹಲವಾರು ತಪ್ಪುಗಳು ನಡೆದಿವೆ. ಎಚ್.ಡಿ. ರೇವಣ್ಣ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಿಡಿಕಾರಿದರು.

ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಒಂದು ಮಹಿಳೆ ದೂರು ಕೊಟ್ಟಿದ್ದು, ಆ ಹೆಣ್ಣುಮಕ್ಕಳಿಗೆ ಹೆದರಿಸಿ‌ ದೂರು ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದೆಲ್ಲ ಕೆಲವೇ ದಿನಗಳಲ್ಲಿ ಹೊರಗೆ ಬರಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಗೃಹ ಸಚಿವರಿಗೆ ನೇರ ಪ್ರಶ್ನೆ

ಈ ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ಕೊಟ್ಟರೆ ಅಂಥವರನ್ನು ವಿಚಾರಣೆಗೆ ಕರೆಸಬೇಕಾಗುತ್ತದೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ತಿರುಗೇಟು ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದ ಬಗ್ಗೆ, ವಿಡಿಯೊ ಬಗ್ಗೆ ಹೇಳಿಕೆ ನೀಡಿದ್ದ ನವೀನ್‌ ಗೌಡ ಸೇರಿ ಉಳಿದವರ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ವಿದೇಶಕ್ಕೆ ಹೋಗಿರುವ ಪ್ರಜ್ವಲ್ ಅವರನ್ನು ಏಕೆ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ನನಗೆ ಅಣ್ಣನ ಮಗನೇ ಇರಬಹುದು. ಆದರೆ, ಅವನು ಹೋಗುವಾಗ ನನ್ನನ್ನು ಕೇಳಿ ಹೋಗುತ್ತಿದ್ದನಾ? ಬೆಳೆದ ಮಕ್ಕಳು ನಮ್ಮನ್ನು ಕೇಳಿ ಹೋಗ್ತಾರಾ.? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಇದನ್ನೂ ಓದಿ: HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

ಇನ್ನೆರಡು ದಿನದಲ್ಲಿ ಪರಿಷತ್‌ ಅಭ್ಯರ್ಥಿ ಆಯ್ಕೆ

ಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ಮೈತ್ರಿ ಒಪ್ಪಂದದ ಪ್ರಕಾರ ಜೆಡಿಎಸ್‌ಗೆ ಇನ್ನೊಂದು ಸೀಟ್‌ ಅನ್ನು ಬಿಟ್ಟುಕೊಡಲಾಗಿದೆ. ಅದಕ್ಕೆ ಸೂಕ್ತ ಅಭ್ಯರ್ಥಿಯ ಆಯ್ಕೆ ಆಗಬೇಕಿದೆ. ಇನ್ನೆರಡು ದಿನಗಳಲ್ಲಿ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Continue Reading

ದಾವಣಗೆರೆ

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Davanagere News : ಇತ್ತೀಚೆಗೆ ಯುವಜನತೆ ಮದುವೆಗೆ ವರ ಸಿಗುತ್ತಿಲ್ಲ, ವಧು ಸಿಗುತ್ತಿಲ್ಲ ಅಂತ ಪೆಚಾಡುತ್ತಿದ್ದರೆ, ಇತ್ತ ದಾವಣಗೆರೆಯಲ್ಲಿ ಇಳಿ ವಯಸ್ಸಿನಲ್ಲಿ (Marriage at an early age) ಕಂಕಣ ಭಾಗ್ಯ ಕೂಡಿ ಬಂದಿದ್ದು, ಜೋಡಿಯ ಒಂಟಿತನವು ದೂರಾಗಿದೆ. ಕುಟುಂಬಸ್ಥರ ಸಮ್ಮುಖದಲ್ಲೇ ಸರಳ ಮದುವೆ ಕಾರ್ಯವು ನೆರವೇರಿದೆ.

VISTARANEWS.COM


on

By

Davanagere News Marriage at an early age
Koo

ದಾವಣಗೆರೆ: ಆ ಗ್ರಾಮದಲ್ಲಿ ನಡೆದ ಮದುವೆಯು (Marriage) ಸಂಭ್ರಮದೊಂದಿಗೆ ವಿಶೇಷವಾಗಿಯೂ ಇತ್ತು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರನಿಗೆ 61 ಆದರೆ ವಧುವಿಗೆ 56 ವರ್ಷ.. ಈ ಹಿರಿಯರ ಮದುವೆಗೆ ಕುಟುಂಬಸ್ಥರು ಸೇರಿ ಗ್ರಾಮಸ್ಥರು ಸಾಕ್ಷಿಯಾಗಿದ್ದರು. ಇಳಿ ವಯಸ್ಸಿನಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದ್ದು, ಕೊನೆಗಾಲದಲ್ಲಿ ಆಸರೆಯಾಗಿರಲು ಇಳಿ ವಯಸ್ಸಿನ ‌ವಧು-ವರ (Marriage at an early age) ಒಂದಾಗಿದ್ದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಈ ವಿಶೇಷ ಮದುವೆ ನಡೆದಿದೆ. 56 ವರ್ಷದ ರುಕ್ಮಿಣಿ ಹಾಗೂ 61 ವರ್ಷದ ನಿವೃತ್ತ ಶಿಕ್ಷಕ ನಾಗರಾಜ್‌ ಎಂಬುವವರು ಸತಿಪತಿಗಳಾದ ಜೋಡಿ.

ಶಾಲಾ‌ ಶಿಕ್ಷಕರಾಗಿ ನಿವೃತ್ತಿ ‌ಹೊಂದಿದ್ದ ನಾಗರಾಜ್, ಪತ್ನಿಯನ್ನು ಕಳೆದುಕೊಂಡು ಏಕಾಂಗಿ ಜೀವನ ನಡೆಸುತ್ತಿದ್ದರು. ಇತ್ತ ರುಕ್ಮಿಣಿ ಮದುವೆಯಾಗದೇ ತವರು ಮನೆಯಲ್ಲೇ ಆಶ್ರಯ ಪಡೆದಿದ್ದರು. ಒಂಟಿ ಜೀವಕ್ಕೆ ಜೋಡಿಯೊಂದು ಬೇಕೆಂದು ಹಂಬಲಿಸಿದ್ದ ನಾಗರಾಜ್‌ ಅವರು ಒಬ್ಬಂಟಿಯಾಗಿದ್ದ ರುಕ್ಮಿಣಿಯವರ ಕೈಹಿಡಿದಿದ್ದಾರೆ.

ಇನ್ನೂ ಇವರಿಬ್ಬರ ಮದುವೆಗೆ ಕುಟುಂಬಸ್ಥರು ಒಪ್ಪಿಗೆ ಮುದ್ರೆ ಒತ್ತಿದ್ದಾರೆ. ಕುಂಬಳೂರು ಗ್ರಾಮದ ದೇವಸ್ಥಾನದಲ್ಲಿ ಎರಡು ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಸರಳವಾಗಿ ವಿವಾಹ ನೆರವೇರಿದೆ.

Davanagere News Marriage at an early age

ಇದನ್ನೂ ಓದಿ: Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

ಚಿನ್ನದ ಬೆಲೆಗಳು ಇಂದು ಮತ್ತೆ ಇಳಿದಿವೆ. ನಿನ್ನೆಯೂ ಇಳಿದಿತ್ತು. ಅಕ್ಷಯ ತದಿಗೆಯಂದು ನಡೆದ ಭಾರಿ ಏರಿಕೆ ಹಾಗೂ ವ್ಯಾಪಾರದ ಬಳಿಕ ಬಂಗಾರದ ಬೆಲೆ (Gold Rate Today) ಬೆಂಗಳೂರಿನಲ್ಲಿ ಇಳಿಯುತ್ತಿದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹40 ಹಾಗೂ ₹43 ಇಳಿಕೆಯಾಗಿವೆ. ಅಕ್ಷಯ ತದಿಗೆಯಂದು ಚಿನ್ನ ಬೆಳ್ಳಿ ದರಗಳು ತೀವ್ರವಾಗಿ ಏರಿಕೆ ಕಂಡಿದ್ದವು. ಚಿನ್ನದ ಮಾರುಕಟ್ಟೆಯಲ್ಲಿ ಭಾರಿ ವ್ಯಾಪಾರ ಆಗಿತ್ತು. ಇಂದು ಅದು ಹಿಂದಿನ ಸ್ಥಿತಿಗೆ ಮರಳಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,675ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,400 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,750 ಮತ್ತು ₹6,67,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,282 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,256 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,820 ಮತ್ತು ₹7,28,200 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹86, ಎಂಟು ಗ್ರಾಂ ₹688 ಮತ್ತು 10 ಗ್ರಾಂ ₹860ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,600 ಮತ್ತು 1 ಕಿಲೋಗ್ರಾಂಗೆ ₹86,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,90072,970
ಮುಂಬಯಿ66,750 72,820
ಬೆಂಗಳೂರು66,750 72,820
ಚೆನ್ನೈ66,90072,980

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading
Advertisement
Viral Video
Latest2 mins ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Love Failure
ಬೆಂಗಳೂರು ಗ್ರಾಮಾಂತರ4 mins ago

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

HD Revanna Bail I am not happy that Revanna has been released says HD Kumaraswamy
ರಾಜಕೀಯ24 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

Bomb threat
ದೇಶ25 mins ago

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

T20 World Cup 2024
ಕ್ರಿಕೆಟ್30 mins ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Davanagere News Marriage at an early age
ದಾವಣಗೆರೆ30 mins ago

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Ramayana Movie
ಸಿನಿಮಾ32 mins ago

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

gold rate today
ಚಿನ್ನದ ದರ40 mins ago

Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

pm narendra modi nomination varanasi
ಪ್ರಮುಖ ಸುದ್ದಿ1 hour ago

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

karnataka Rain Effected
ಬೆಂಗಳೂರು1 hour ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail I am not happy that Revanna has been released says HD Kumaraswamy
ರಾಜಕೀಯ24 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 hour ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ8 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ18 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ19 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ19 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ20 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌