Independence Day 2023 : ಹೀಗಿತ್ತು ಗಾಂಧೀಜಿ ಮತ್ತು ಕರ್ನಾಟಕದ ನಂಟು… - Vistara News

ದೇಶ

Independence Day 2023 : ಹೀಗಿತ್ತು ಗಾಂಧೀಜಿ ಮತ್ತು ಕರ್ನಾಟಕದ ನಂಟು…

ಕರ್ನಾಟಕಕ್ಕೂ ಹಾಗೂ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿ ಅವರಿಗೆ ಉತ್ತಮ ನಂಟಿದೆ. ಸ್ವಾತಂತ್ರ್ಯ ಸಂಗ್ರಾಮದ ವೇಳೆಯಲ್ಲಿ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

mahatma gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧೀಜಿ ಭಾರತದ ಪಿತಾಮಹ. ಶಾಂತಿಯ ಮಾರ್ಗದಲ್ಲೇ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾತ್ಮರವರು. ಸ್ವಾತಂತ್ರ್ಯಕ್ಕಾಗಿ ಗಾಂಧಿಜಿ ಅವರು ಪೂರ್ತಿ ದೇಶವನ್ನೇ ಒಂದು ಮಾಡುವ ಕೆಲಸ ಮಾಡಿದರು. ಅದರಲ್ಲೂ ನಮ್ಮ ಕರ್ನಾಟಕದ ನೆಲಕ್ಕೂ ಹಲವಾರು ಬಾರಿ ಬಂದು, ಇಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದವರು. ಸ್ವಾತಂತ್ರ್ಯ ಮತ್ತು ಸ್ವದೇಶಿ ವಸ್ತುಗಳ ಬಳಕೆ ಎಷ್ಟು ಮುಖ್ಯ ಎನ್ನುವುದನ್ನು ಸಾರಿದವರು. ಅವರ ಮತ್ತು ಕರ್ನಾಟಕದ ನಂಟಿನ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.

ನಿಮಗೆಲ್ಲರಿಗೆ ತಿಳಿದಿರುವ ಹಾಗೆ ಗಾಂಧೀಜಿ ಅವರು ಆಫ್ರಿಕಾದಿಂದ ಭಾರತಕ್ಕೆ ಮರಳಿದ್ದು 1915ರ ಜನವರಿ 9ರಂದು. ಆಫ್ರಿಕಾದಿಂದ ಬಂದೊಡನೆ ಗುರುಗಳಾದ ಗೋಖಲೆ ಅವರನ್ನು ಕಂಡು, ಅವರ ಮಾರ್ಗದರ್ಶನದ ಮೇರೆಗೆ ದೇಶದ ಪರ್ಯಟನೆಯನ್ನು ಆರಂಭಿಸಿದರು. ದೇಶದ ಮೂಲೆಮೂಲೆಗೆ ತೆರಳಿ ಸ್ವಾತಂತ್ರ್ಯದ ಮಹತ್ವವನ್ನು ಸಾರಲಾರಂಭಿಸಿದರು. ಈ ಮಧ್ಯೆ ಗೋಖಲೆ ಅವರು ನಿಧನರಾಗುತ್ತಾರೆ. ಇದೇ ಘಟನೆಯಿಂದಾಗಿ ಗಾಂಧಿ ಅವರು ಕರ್ನಾಟಕಕ್ಕೆ ಬರುವಂತಾಯಿತು. ಅವರು ಮೊದಲನೇ ಬಾರಿಗೆ 1915ರ ಮೇ 8ರಂದು ಕರ್ನಾಟಕಕ್ಕೆ ಬಂದಿಳಿದರು.

ಗಾಂಧೀಜಿ ಅವರು ಮೊದಲನೇ ಬಾರಿಗೆ ಕರ್ನಾಟಕಕ್ಕೆ ಬಂದಾಗ ಅವರ ಜತೆ ಅವರ ಪತ್ನಿ ಕಸ್ತೂರಬಾ ಬಾಯಿ ಅವರೂ ಬಂದಿದ್ದರು. ಅವರನ್ನು ಸ್ವಾಗತ ಮಾಡಲೆಂದು ರೈಲು ನಿಲ್ದಾಣದಲ್ಲಿ ದೊಡ್ಡ ಜನಸ್ತೋಮವೇ ಸೇರಿತ್ತು. ಅವರನ್ನು ಕುದುರೆ ಮೇಲೆ ಮೆರವಣಿಗೆ ಮಾಡಿಕೊಂಡು ಹೋಗಲು ಯುವಕರು ಸಿದ್ಧರಾಗಿದ್ದರು. ಆದರೆ ಹಾಗೆ ಮಾಡುವುದರಿಂದ ಪ್ರಾಣಿಹಿಂಸೆ ಮಾಡಿದಂತಾಗುತ್ತದೆ ಎಂದು ಗಾಂಧಿ ಅದನ್ನು ನಿರಾಕರಿಸಿದರು. ನಂತರ ಬೆಂಗಳೂರಿನ ಆನಂದರಾವ್‌ ವೃತ್ತದಲ್ಲಿದ್ದ ಬಿ.ಎಸ್‌.ಕೃಷ್ಣಸ್ವಾಮಿ ಅಯ್ಯಂಗಾರ್‌ ಅವರ ಮನೆಗೆ ಕಾಲ್ನಡಿಗೆಯಲ್ಲೇ ಸಾಗಿದರು. ಅಲ್ಲಿಂದ ಈಗಿನ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಾಗಿ ಅಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಗೋಖಲೆ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ ಅವರು ನಂತರ ಅಲ್ಲಿಂದ ಲಾಲ್‌ಬಾಗ್‌ಗೆ ತೆರಳಿ ಅಲ್ಲಿ ಮತ್ತೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇದನ್ನೂ ಓದಿ: Independence day 2023 : ಮೈಸೂರು ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ; ಬ್ರಿಟಿಷರ ಬೆವರಿಳಿಸಿದ ದೇಶ ಭಕ್ತರು
ಬೆಳಗಾವಿಗೆ ಆಗಮನ…

ಅದರ ಮಾರನೇ ವರ್ಷ ಅಂದರೆ 1916ರಲ್ಲಿ ಮುಂಬೈನಲ್ಲಿ ಪ್ರಾಂತೀಯ ಪರಿಷತ್ತಿನ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಗಾಂಧಿಯವರು ಕರ್ನಾಟಕದ ಬೆಳಗಾವಿ ಬಂದರು. ಏಪ್ರಿಲ್‌ 29ರಂದು ಅವರು ಪುತ್ರ ರಾಮದಾಸನೊಂದಿಗೆ ಬಂದಿದ್ದರು. ಆಗ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಎರಡನೇ ದಿನದಂದು ಶೋಷಿತ ವರ್ಗದ ಕುರಿತಾಗಿ ಮಾತನಾಡಿದರು. ಗಾಂಧೀಜಿ ಅವರು ಬಾಲಗಂಗಾಧರ ತಿಲಕರನ್ನು ಭೇಟಿ ಮಾಡಿದ್ದು ಇದೇ ಸಮಾವೇಶದಲ್ಲಾಗಿತ್ತು. ಇದಾದ ನಂತರ ಗಾಂಧಿಯವರು 1920ರ ಆಗಸ್ಟ್‌ 19ರಂದು ಮೌಲಾನಾ ಶೌಕತ್‌ ಅಲಿ ಅವರೊಂದಿಗೆ ಕೇರಳದಿಂದ ಮಂಗಳೂರಿಗೆ ಬಂದರು. ಕೇಂದ್ರ ಮೈದಾನದಲ್ಲಿ ಅಸಹಕಾರ ಚಳವಳಿ ಕುರಿತು ಸಭೆ ನಡೆಸಿದರು. ದೇಶದಲ್ಲಿ ಹಿಂದೂ ಮತ್ತು ಮುಸಲ್ಮಾನರ ಏಕತೆ ಮುಖ್ಯ ಎಂದು ಸಾರಿದರು.

ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಭಾಷಣ
ಅದೇ ವರ್ಷ ಆಗಸ್ಟ್‌ 21ರಂದು ಅವರು ಸೇಲಂ ಮಾರ್ಗವಾಗಿ ಬೆಂಗಳೂರಿಗೆ ಬಂದು ಬೆಂಗಳೂರಿನ ಈದ್ಗಾ ಮೈದಾನ ಮತ್ತು ಬೆನ್ಸನ್‌ ಟೌನ್‌ಗಳಲ್ಲಿ ಅಸಹಕಾರ ಚಳವಳಿ ಕುರಿತಾಗಿ ಭಾಷಣ ಮಾಡಿದರು. ನಂತರ ನವೆಂಬರ್‌ 8ರಂದು ನಿಪ್ಪಾಣಿಯಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಜಾತಿ ಪದ್ಧತಿ ಕುರಿತು ಸಂವಾದ ಮಾಡಿದರು. ಅದೇ ದಿನ ಬೆಳಗಾವಿಯ ಕೋಟೆ ಬಯಲಿನಲ್ಲಿ ಸಭೆ ನಡೆಸಿದರು. ಅಂದು ಗಾಂಧಿ ಅವರೊಂದಿಗೆ ಶೌಕತ್‌ ಅವರೂ ಜತೆಗಿದ್ದರು. ಸಭೆಯಲ್ಲಿ 15 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದರು. ಈ ಸಭೆಯಲ್ಲಿ ಮಾತನಾಡಿದ ಗಾಂಧಿ ಅವರು ನಂತರ ಮಾರುತಿ ಗುಡಿಯಲ್ಲಿ ಮಹಿಳೆಯರೊಂದಿಗೆ ಸಭೆ ನಡೆಸಿ ಅವರಿಂದ ನಿಧಿ ಸಂಗ್ರಹಣೆಯನ್ನೂ ಮಾಡಿದರು.

1921ರಲ್ಲಿ ಬಿಜಾಪುರಕ್ಕೆ ಭೇಟಿ
1921ರ ಮೇ 28ರಂದು ಗಾಂಧಿ ಅವರು ಬಿಜಾಪುರಕ್ಕೆ ಭೇಟಿ ನೀಡಿದರು. ಅಲ್ಲಿ ಮೊದಲನೇ ಮಹಿಳೆಯರ ಸಭೆಯಲ್ಲಿ ಪಾಲ್ಗೊಂಡರು. ತಾಸ್‌ಬಾವಡಿಯ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅದೇ ವರ್ಷ ಅಕ್ಟೋಬರ್‌ 1ರಂದು ತಿರುಪತಿ ಮಾರ್ಗವಾಗಿ ಬಳ್ಳಾರಿಗೆ ಬಂದರು. ಅಲ್ಲಿ ಶಾಂತಿ ಸಾಮರಸ್ಯದ ಕುರಿತ ಮಾತನಾಡಿದರು. ಈ ಸಮಯಕ್ಕಾಗಲೇ ಗಾಂಧೀಜಿ ಅವರು ಧೋತರ ತ್ಯಜಿಸಿ ತುಂಡು ಪಂಚೆ ಉಡುವುದಕ್ಕೆ ಪ್ರಾರಂಭಿಸಿದ್ದರು.

ಇದನ್ನೂ ಓದಿ: Independence Day 2023 : ಯುವಾ ಬ್ರಿಗೇಡ್‌ನಿಂದ ಈ ಸ್ವಾತಂತ್ರ್ಯ ಶ್ರಾವಣಕ್ಕೆ ವಿಶ್ವಗುರು ಭಾರತದ ಸಂಕಲ್ಪ
ಬೆಳಗಾವಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಅಧಿವೇಶನ

1924ರ ಡಿಸೆಂಬರ್‌ನಲ್ಲಿ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಏಕೈಕ ರಾಷ್ಟ್ರೀಯ ಕಾಂಗ್ರೆಸ್‌ ಅಧಿವೇಶನ ನಡೆಯಿತು. ಡಿಸೆಂಬರ್‌ 26 ಮತ್ತು 27ರಂದು ನಡೆಯಲಿದ್ದ ಅಧಿವೇಶನಕ್ಕೆ ಗಾಂಧಿ ಅವರು ಆರು ದಿನ ಮೊದಲೇ ಆಗಮಿಸಿದ್ದರು. ಅವರು ಸಭೆಗಳಲ್ಲಿ ಮಹಾರಾಷ್ಟ್ರ, ಮೈಸೂರು ಪ್ರಾಂತ್ಯಗಳಿಂದ ಬಂದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು. ಅಧಿವೇಶನ ನಡೆದ ಸ್ಥಳ ಈಗ ಟಿಳಕವಾಡಿ ಎಂದು ನಾಮಕರಣಗೊಂಡಿದೆ. ಅಧಿವೇಶನಕ್ಕಾಗಿ ತೆಗೆದಿದ್ದ ಬಾವಿ ಈಗ ಕಾಂಗ್ರೆಸ್‌ ವೆಲ್‌ ಎಂದು ಕರೆಸಿಕೊಳ್ಳುತ್ತದೆ.

1927ರಲ್ಲಿ ಸತತ ಭೇಟಿಗಳು

1927ರ ಸಮಯಕ್ಕೆ ಗಾಂಧೀಜಿ ಮತ್ತು ಕರ್ನಾಟಕದ ಬಾಂಧವ್ಯ ಹೆಚ್ಚಿತ್ತು. ಆ ವರ್ಷ ಫೆಬ್ರವರಿ 21ರಂದು ಅವರು ಶೋಲಾಪುರದಿಂದ ಗುಲ್ಬರ್ಗಕ್ಕೆ ರೈಲಿನಲ್ಲಿ ಬಂದರು. ಅದರ ಮಾರನೇ ದಿನ ಅವರು ಶರಣ ಬಸಪ್ಪ ದೇವಸ್ಥಾನದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಅದೇ ವರ್ಷ ಏಪ್ರಿಲ್‌ 19ರಂದು ಕರ್ನಾಟಕಕ್ಕೆ ಪ್ರವಾಸಕ್ಕೆ ಬಂದ ಅವರಿಗೆ ಅನಾರೋಗ್ಯ ಕಾಡಿತು. ಹಾಗಾಗಿ ಅವರನ್ನು ನಂದಿಬೆಟ್ಟದಲ್ಲಿ ವಿಶ್ರಾಂತಿಗೆ ಕಳುಹಿಸಲಾಯಿತು. ಅಲ್ಲಿ ಅವರು ನಿತ್ಯ ಪ್ರಾರ್ಥನೆ, ವಿವಿಧ ಭಾಗಗಳಿಂದ ಬಂದ ಕಾರ್ಯಕರ್ತರು ಮತ್ತು ನಾಯಕರೊಂದಿಗೆ ಮಾತುಕತೆ ನಡೆಸುತ್ತಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಅಲ್ಲಿಂದ ಹೊರಟ ಗಾಂಧೀಜಿ ಅವರು ಚಿಕ್ಕಬಳ್ಳಾಪುರದ ಪ್ರೌಢಶಾಲಾ ಆವರಣದಲ್ಲಿ ನಡೆದ ನಾಲ್ವಡಿ ಕೃಷ್ಣರಾಜರ ರಜತಮೋಹತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಲ್ಲಿಂದ ಬೆಂಗಳೂರಿಗೆ ತೆರಳಿದರು.

ಆ ವರ್ಷ ಜೂನ್‌ 5ರಿಂದ ಆಗಸ್ಟ್‌ 30ರವರೆಗೆ ಒಟ್ಟು 87 ದಿನಗಳ ಕಾಲ ಅವರು ಬೆಂಗಳೂರಿನ ಕುಮಾರ ಕೃಪಾದಲ್ಲಿ ತಂಗಿದ್ದರು. ಇಲ್ಲಿದ್ದುಕೊಂಡೇ ಅವರು ದಕ್ಷಿಣ ಕರ್ನಾಟಕದ ಪ್ರವಾಸವನ್ನು ಮುಂದುವರಿಸುತ್ತಾರೆ. ಕುಮಾರ ಕೃಪದಲ್ಲಿ ತಂಗಿದ್ದ ವೇಳೆ ಅಲ್ಲಿದ್ದ ಆಲದ ಮರದಡಿ ಪ್ರತಿದಿನ ಸಂಜೆ ಪ್ರಾರ್ಥನಾ ಸಭೆ ನಡೆಸುತ್ತಿದ್ದರು. ಈ ಸ್ಥಳ ಈಗ ಅಶೋಕ ಹೋಟೆಲ್‌ನಲ್ಲಿದ್ದು, ಅಲ್ಲಿ ಗಾಂಧಿ ಅವರ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಲಾಗಿದೆ.

ಈ 87 ದಿನಗಳಲ್ಲಿ ಅವರು ಜುಲೈ 9ರಂದು ಮೈಸೂರಿನ ಅಮೆಚ್ಯೂರ್‌ ಡ್ರಾಮಾಟಿಕ್‌ ಅಸೋಸಿಯೇಷನ್‌ಗೆ ಭೇಟಿ ನೀಡಿದರು. ಅಲ್ಲಿ ಖಾದಿ ನಿಧಿ ಸಂಗ್ರಹಕ್ಕಾಗಿ ಪಂಡಿತ ತಾರಾನಾಥರು ಪ್ರಮುಖ ಪಾತ್ರದಲ್ಲಿ ನಟಿಸಿ ನಾಟಕವೊಂದನ್ನು ನಡೆಸಿದರು. ಆ ನಾಟಕವನ್ನು ಗಾಂಧಿ ಅವರು ಪ್ರೇಕ್ಷಕರಾಗಿ ವೀಕ್ಷಿಸಿದರು. ಜುಲೈ 10-13ರವರೆಗೆ ಅವರು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ನಲ್ಲಿ, ಹಿಂದಿ ಸಮಾವೇಶದಲ್ಲಿ ಹಾಗೆಯೇ ಮಹಿಳಾ ಸಮಾಜಗಳಲ್ಲಿ ಭಾಷಣ ಮಾಡಿದರು. ಜುಲೈ 14ರಂದು ತುಮಕೂರಿನಲ್ಲಿ ನಗರಸಭೆ ಉದ್ದೇಶಿಸಿ ಮಾತನಾಡಿದರು. ಅಲ್ಲಿ ಪಂಚಮ ವಸತಿ ಶಾಲೆ, ಪ್ರಾಣಿ ದಯಾಸಂಘಕ್ಕೆ ಭೇಟಿ ನೀಡಿದರು. ಜುಲೈ 15ರಂದು ಮಧುಗಿರಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಜುಲೈ 19ರಿಂದ 23ರವರೆಗೆ ಅವರು ಮೈಸೂರಿನ ಶೇಷಾದ್ರಿ ಅಯ್ಯರ್‌ ಗೃಹದಲ್ಲಿ ವಾಸ್ತವ್ಯ ಹೂಡಿದರು. ಈಗ ಆ ಗೃಹ ವಾಣಿಜ್ಯ ತೆರಿಗೆ ಇಲಾಖೆಯ ಪ್ರಧಾನ ಕಚೇರಿಯಾಗಿದೆ. ಜುಲೈ 20ರಂದು ಮೈಸೂರಿನ ಸ್ವಾಗತ ಸಮಿತಿಯಿಂದ ಪುರಭವನದಲ್ಲಿ ಗಾಂಧಿ ಅವರಿಗೆ ಸ್ವಾಗತ ಕೋರಲಾಯಿತು.

ಜಗನ್ಮೋಹನ ಅರಮನೆಯಲ್ಲಿ ಮಹಿಳೆಯರ ಬೃಹತ್‌ ಸಭೆಯಲ್ಲಿ ಅವರು ಭಾಗವಹಿಸಿದರು. ಆಗಸ್ಟ್‌ 3ರಂದು ಹಾಸನದ ಟೌನ್‌ ಹಾಲ್‌ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಆಗಸ್ಟ್‌ 11ರಂದು ದಾವಣಗೆರೆಯಲ್ಲಿ ಮಹಿಳಾ ಸಭೆಯಲ್ಲಿ ಪಾಲ್ಗೊಂಡರು ಹಾಗೆಯೇ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಆಗಸ್ಟ್‌ 14ರಂದು ಹರಿಹರ ಮಾರ್ಗವಾಗಿ ಶಿವಮೊಗ್ಗ ತಲುಪಿ ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರು. ಆಗಸ್ಟ್‌ 18ರಂದು ಭದ್ರಾವತಿಯಲ್ಲಿ ಕಬ್ಬಿಣದ ಅದಿರಿನ ಕಾರ್ಖಾನೆಯಲ್ಲಿ ದುಡಿಯುವ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಆಗಸ್ಟ್‌ 28ರಂದು ಬೆಂಗಳೂರಿನಲ್ಲಿ ಐದು ಬಹಿರಂಗ ಸಭೆಗಳಲ್ಲಿ ಮಾತನಾಡಿದರು. ಆಗಸ್ಟ್‌ 29ರಂದು ಬೆಂಗಳೂರಿನಲ್ಲಿ ಅಸೋಸಿಯೇಟೆಡ್‌ ಪ್ರೆಸ್‌ಗೆ ಸಂದರ್ಶನ ನೀಡಿದರು.

1934ರಲ್ಲಿ ಕರ್ನಾಟಕ ಭೇಟಿ

1934ರ ಜನವರಿ 4ರಂದು ಗಾಂಧೀಜಿ ಅವರು ಹಿಂದುಪುರದಿಂದ ಗೌರಿಬಿದನೂರಿನ ಮಾರ್ಗವಾಗಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡುತ್ತಾರೆ. ಅಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹಾಗೆಯೇ ತುಮಕೂರಿನ ಹರಿಜನ ಕೇರಿಗಳಿಗೆ ಭೇಟಿ ನೀಡಿದರು. ಅಲ್ಲಿಂದ ತ್ಯಾಮಗೊಂಡ್ಲು, ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸಿದರು. ಬೆಂಗಳೂರಿನಲ್ಲಿ ಸಂಜೆ ನೇಕಾರ ಒಕ್ಕೂಟದ ಶಾಖೆ ಉದ್ಘಾಟಿಸಿ, ಮಹಿಳಾ ಸಭೆ ಉದ್ದೇಶಿಸಿ ಮಾತನಾಡಿದ ಅವರು ಹರಿಜನ ಕೇರಿಗಳಿಗೂ ಭೇಟಿ ನೀಡಿ, ಅಲ್ಲಿಂದ ಮೈಸೂರಿಗೆ ಪ್ರಯಾಣಿಸಿದರು. ಜನವರಿ 5ರಂದು ಮೈಸೂರಿನ ತಗಡೂರು ರಾಮಚಂದ್ರ ರಾವ್, ವಿ.ವೆಂಕಟಪ್ಪ, ಅಗರಂ ರಂಗಯ್ಯ ಮತ್ತಿತರರೊಂದಿಗೆ ತಗಡೂರಿನ ಆಶ್ರಮಕ್ಕೆ ಭೇಟಿ ನೀಡಿದರು. ಅಲ್ಲಿಂದ ಬದನವಾಳು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿ ಅಖಿಲ ಭಾರತ ಚರಕ ಸಂಘ ಸ್ಥಾಪಿಸಿದ್ದ ಖಾದಿ ಕೇಂದ್ರ ಮತ್ತು ರಾಮಮಂದಿರಕ್ಕೆ ಭೇಟಿ ನೀಡಿದರು.

ನಂತರ ನಂಜನಗೂಡಿನಲ್ಲಿ ಹರಿಜನರ ಕಲ್ಯಾಣ ಕುರಿತಾಗಿ ಭಾಷಣ ಮಾಡಿದರು. ಅದೇ ದಿನ ಸಂಜೆ ಮೈಸೂರಿನ ಹರಿಜನ ಕೇರಿಗಳಿಗೆ ಭೇಟಿ ನೀಡಿದರು. ಜನವರಿ 6ರಂದು ಮಂಡ್ಯ, ಮದ್ದೂರು, ಬಿಡದಿ, ಕೆಂಗೇರಿ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಬಂದರು. ಅಲ್ಲಿ ವಿದ್ಯಾರ್ಥಿ ಸಭೆ ಉದ್ದೇಶಿಸಿ ಭಾಷಣ ಮಾಡಿದರು. ಹೀಗೆ ಬೆಂಗಳೂರಿಗೆ ಬರುವ ಮುನ್ನ ಅವರು ಚೆನ್ನಪಟ್ಟಣದ ಅಭಯ ಕುಟೀರಕ್ಕೆ ಭೇಟಿ ನೀಡಿದರು. ಅಲ್ಲೂ ಅವರು ಹರಿಜನ ಬೀದಿಗಳಿಗೆ ಭೇಟಿ ನೀಡಿದರು. ಬೆಂಗಳೂರಿನಲ್ಲಿ ಮೂರು ದಿನ ತಂಗಿದ್ದ ಅವರು ಹಲವಾರು ಸಂಘಗಳು, ಮಹಿಳಾ ಸಭೆಗಳನ್ನು ನಡೆಸಿದರು. ನಂತರ ಫೆಬ್ರವರಿ 22ರಂದು ಮೈಸೂರಿನಿಂದ ಮಡಿಕೇರಿಗೆ ಗಾಂಧೀಜಿ ಅವರು ಆಗಮಿಸುತ್ತಾರೆ. ಅಲ್ಲಿ ಅವರು ಸಭೆ ನಡೆಸಿ ನಂತರ ಹುದೆಕೇರಿ, ಪನ್ನಾಮ್‌ಪೇಟೆಗೆ ಭೇಟಿ ನೀಡಿದರು. ಫೆಬ್ರವರಿ 24ರಂದು ಪುತ್ತೂರಿಗೆ ಭೇಟಿ ನೀಡಿ ಅಲ್ಲಿ ಸಾರ್ವಜನಿಕ ಸಭೆ, ಮಹಿಳಾ ಸಭೆಗಳನ್ನು ನಡೆಸಿದರು. ಮಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಫೆಬ್ರವರಿ 25-27ರವರೆಗೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದ ಅವರು ಮುಲ್ಕಿ, ಉಡುಪಿ, ಕುಂದಾಪುರಕ್ಕೆ ಭೇಟಿ ನೀಡಿದರು. 28ರಿಂದ ಮಾರ್ಚ್‌ 8ರವರೆಗೆ ಹುಬ್ಬಳ್ಳಿ, ಹಾವೇರಿ, ಗದಗ, ಬಿಜಾಪುರ, ಗೋಕಾಕಗಳಲ್ಲಿ ಸಭೆ ನಡೆಸಿದರು.

ಇದನ್ನೂ ಓದಿ: How To Become Rich: ಸುಲಭವಾಗಿ ಶ್ರೀಮಂತರಾಗಿ, ಆರ್ಥಿಕ ಸ್ವಾತಂತ್ರ್ಯ ಗಳಿಸುವುದು ಹೇಗೆ?

1936ರಲ್ಲಿ ಮತ್ತೆ ಸುತ್ತಾಟ

1934ರ ನಂತರ ಎರಡು ವರ್ಷ ಬಿಟ್ಟು ಗಾಂಧಿ ಅವರು ಮತ್ತೆ ಕರ್ನಾಟಕಕ್ಕೆ ಬರುತ್ತಾರೆ. ವಾರ್ಧಾದಿಂದ ಹೊರಡುವ ಅವರು 1936ರ ಮೇ 8ರಂದು ಸಂಜೆ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿಯುತ್ತಾರೆ. ಮಾರನೇ ದಿನ ಅಸೋಸಿಯೇಟೆಡ್‌ ಪ್ರೆಸ್‌ಗೆ ಸಂದರ್ಶನ ನೀಡುತ್ತಾರೆ. ಮೇ 10-31ರವರೆಗೆ ನಂದಿಬೆಟ್ಟದಲ್ಲಿ ವಾಸ್ತವ್ಯ ಹೂಡುತ್ತಾರೆ. ಅಲ್ಲಿ ಅವರನ್ನು ವಿಜ್ಞಾನಿ ಸರ್‌ ಸಿ.ವಿ.ರಾಮನ್‌ ಮತ್ತು ಪ್ರೊಫೆಸರ್‌ ರಹಮ್‌ ಅವರು ಭೇಟಿ ಮಾಡುತ್ತಾರೆ. ಮೇ 31ರಂದು ನಂದಿಬೆಟ್ಟದಿಂದ ಹೊರಡುವ ಅವರು ಚಿಕ್ಕಬಳ್ಳಾಪುರ, ಚಿಂತಾಮಣಿ, ಕೋಲಾರ, ಬೌರಿಂಗ್‌ಪೇಟೆ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಆಗಮಿಸಿದರು. ಮೇ 31ರಿಂದ ಜೂನ್‌ 12ರವರೆಗೆ ಕ್ರೆಸೆಂಟ್‌ ಹಾಲ್‌ನಲ್ಲಿ ತಂಗಿದ್ದರು. ಈ ವೇಳೆ ಅವರು ಹರಿಜನ ಮತ್ತು ಆದಿ ಕರ್ನಾಟಕ ಸಂಘಟನೆಗಳೊಂದಿಗೆ ಸಭೆ ನಡೆಸಿದರು. ಜೂನ್‌ 12ರಂದು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ಗೆ ಭೇಟಿ ನೀಡಿ ನಂತರ ವಾರ್ಧಾಕ್ಕೆ ತೆರಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

NCERT Textbooks: ಎನ್‌ಸಿಇಆರ್‌ಟಿ ಪಠ್ಯದಲ್ಲಿ ‘ಬಾಬ್ರಿ ಮಸೀದಿ’ ಎಂಬ ಪದವನ್ನು ತೆಗೆದುಹಾಕಲಾಗಿದೆ. ಬಾಬ್ರಿ ಮಸೀದಿಯನ್ನು ಮೂರು ಅಂತಸ್ತಿನ ಗೊಮ್ಮಟ ಎಂದು ಪ್ರಸ್ತಾಪಿಸಲಾಗಿದೆ. ಇನ್ನು ಅಯೋಧ್ಯೆಯ ಕುರಿತ ನಾಲ್ಕು ಪುಟಗಳ ಅಧ್ಯಾಯವನ್ನು ತೆಗೆದುಹಾಕಿದೆ. ಸೋಮನಾಥ ದೇವಾಲಯದಿಂದ ಅಯೋಧ್ಯೆವರೆಗೆ ಎಲ್‌.ಕೆ.ಅಡ್ವಾಣಿ ಅವರು ಕೈಗೊಂಡ ರಥಯಾತ್ರೆ, ಕರಸೇವೆ ಸೇರಿ ಹಲವು ಅಂಶಗಳನ್ನು ತೆಗೆದುಹಾಕಲಾಗಿದೆ.

VISTARANEWS.COM


on

NCERT Textbooks
Koo

ನವದೆಹಲಿ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಮಿತಿಯು (NCERT) 12ನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ (NCERT Textbooks) ಕೆಲ ಬದಲಾವಣೆಗಳನ್ನು ಮಾಡಿದೆ. ಅದರಲ್ಲೂ, ರಾಜಕೀಯ ಶಾಸ್ತ್ರ ಪುಸ್ತಕದಿಂದ ಬಾಬ್ರಿ ಮಸೀದಿ, ಕರಸೇವೆ ಸೇರಿ ಹಲವು ಅಧ್ಯಾಯಗಳನ್ನು ತೆಗೆದುಹಾಕಿದೆ. ಇದು ಈಗ ಚರ್ಚೆಗೂ ಗ್ರಾಸವಾಗಿದೆ.

ಎನ್‌ಸಿಇಆರ್‌ಟಿ ಪಠ್ಯದಲ್ಲಿ ‘ಬಾಬ್ರಿ ಮಸೀದಿ’ ಎಂಬ ಪದವನ್ನು ತೆಗೆದುಹಾಕಲಾಗಿದೆ. ಬಾಬ್ರಿ ಮಸೀದಿಯನ್ನು ಮೂರು ಅಂತಸ್ತಿನ ಗೊಮ್ಮಟ ಎಂದು ಪ್ರಸ್ತಾಪಿಸಲಾಗಿದೆ. ಇನ್ನು ಅಯೋಧ್ಯೆಯ ಕುರಿತ ನಾಲ್ಕು ಪುಟಗಳ ಅಧ್ಯಾಯವನ್ನು ತೆಗೆದುಹಾಕಿದೆ. ಸೋಮನಾಥ ದೇವಾಲಯದಿಂದ ಅಯೋಧ್ಯೆವರೆಗೆ ಎಲ್‌.ಕೆ.ಅಡ್ವಾಣಿ ಅವರು ಕೈಗೊಂಡ ರಥಯಾತ್ರೆ, ಕರಸೇವೆ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತ, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನೆಲಸಮಗೊಳಿಸಿದ್ದಕ್ಕೆ ಬಿಜೆಪಿ ನಾಯಕರ ವಿಷಾದದ ಹೇಳಿಕೆಗಳನ್ನು ಪಠ್ಯದಿಂದ ಕೈಬಿಡಲಾಗಿದೆ.

Ayodhya Babri Masjid

ಬಾಬ್ರಿ ಮಸೀದಿ ಉಲ್ಲೇಖ ತೆಗೆದುಹಾಕಿದ ಕುರಿತು ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಅವರು ಇಂಡಿಯಾ ಟುಡೇ ಟಿವಿಗೆ ಪ್ರತಿಕ್ರಿಯಿಸಿದ್ದಾರೆ. “ವಿದ್ಯಾರ್ಥಿಗಳು ಏಕೆ ಗಲಭೆ, ಹಿಂಸಾಚಾರ ಸೇರಿ ಹಲವು ನಕಾರಾತ್ಮಕ ಅಂಶಗಳ ಕುರಿತು ಕಲಿಯಬೇಕು. ಗುಜರಾತ್‌ ಹಿಂಸಾಚಾರ, ಬಾಬ್ರಿ ಮಸೀದಿ ನೆಲಸಮ ಸೇರಿ ಹಲವು ಅಂಶಗಳ ಕುರಿತು ಏಕೆ ಅಧ್ಯಯನ ಮಾಡಬೇಕು. ಅಷ್ಟಕ್ಕೂ, ನಾವು ಪಠ್ಯವನ್ನು ತಯಾರಿಸುವಾಗ ಯಾವುದೇ ಸಿದ್ಧಾಂತಗಳನ್ನು ಅನುಸರಿಸುವುದಿಲ್ಲ. ತಜ್ಞರ ಶಿಫಾರಸಿನಂತೆ ಬದಲಾವಣೆ ಮಾಡಲಾಗಿದೆ” ಎಂದು ತಿಳಿಸಿದರು.

ಬಾಬ್ರಿ ಮಸೀದಿ ಬದಲು ಮೂರು ಅಂತಸ್ತಿನ ಗುಮ್ಮಟ ಎಂದು ಪ್ರಸ್ತಾಪಿಸಿರುವುದು, ಗುಜರಾತ್‌ ಹಿಂಸಾಚಾರವನ್ನು ಕೈಬಿಟ್ಟಿರುವುದು ಸೇರಿ ಹಲವು ಅಂಶಗಳನ್ನು ಕೈಬಿಟ್ಟಿರುವ ಕುರಿತು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರದ ಸಿದ್ಧಾಂತಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದಾಗ್ಯೂ, ಎನ್‌ಸಿಇಆರ್‌ಟಿಯು ಬಳಿಕ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: Textbook Revision: ಪಠ್ಯ ಪುಸ್ತಕ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ; ಯಾವ ಪಾಠಗಳಿಗೆ ಕೊಕ್‌?

Continue Reading

ದೇಶ

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Amit Shah: ಕೆಲ ದಿನಗಳ ಹಿಂದಷ್ಟೇ ನರೇಂದ್ರ ಮೋದಿ ಅವರು ಕೂಡ ಜಮ್ಮು-ಕಾಶ್ಮೀರ ಭದ್ರತೆ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿದ್ದರು. ಎಲ್ಲ ಸೈನಿಕರನ್ನು ಗಡಿ ಸೇರಿ ಆಯಕಟ್ಟಿನ ಪ್ರದೇಶಗಳಿಗೆ ನಿಯೋಜಿಸಬೇಕು ಎಂಬುದಾಗಿ ಸೂಚಿಸಿದ್ದರು. ಈಗ ಅಮಿತ್‌ ಶಾ ಅವರೂ ಉನ್ನತ ಮಟ್ಟದ ಸಭೆ ನಡೆಸಿ, ಕಾಶ್ಮೀರದಲ್ಲಿ ಉಗ್ರವಾದವನ್ನು ನಿರ್ಮೂಲನೆ ಮಾಡಬೇಕು ಎಂಬುದಾಗಿ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗೆ ಸೂಚಿಸಿದ್ದಾರೆ.

VISTARANEWS.COM


on

Amit Shah
Koo

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಇತ್ತೀಚೆಗೆ ಉಗ್ರರ ದಾಳಿಗಳು ಜಾಸ್ತಿಯಾಗಿವೆ. ಅದರಲ್ಲೂ, ಯಾತ್ರೆಗೆ ತೆರಳುವ ಹಿಂದುಗಳು, ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ಮಾಡುತ್ತಿದ್ದು, ಕಣಿವೆಯಲ್ಲಿ ಭದ್ರತೆ ಕುರಿತು ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಜಮ್ಮು-ಕಾಶ್ಮೀರ ಭದ್ರತೆ ಕುರಿತು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. “ಜಮ್ಮುವಿನಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿಗ್ರಹಿಸಬೇಕು” ಎಂಬುದು ಸೇರಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌, ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ, ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ, ಗುಪ್ತಚರ ಸಂಸ್ಥೆ (IB) ನಿರ್ದೇಶಕ ತಪನ್‌ ದೇಕಾ, ಸಿಆರ್‌ಪಿಎಫ್‌ ಮಹಾ ನಿರ್ದೇಶಕ ದಯಾಳ್‌ ಸಿಂಗ್‌ ಸೇರಿ ಹಲವು ಅಧಿಕಾರಿಗಳೊಂದಿಗೆ ಅಮಿತ್‌ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಜೂನ್‌ 26ರಿಂದ ಅಮರನಾಥ್‌ ಯಾತ್ರೆ ಕೈಗೊಳ್ಳಲಾಗುತ್ತದೆ. ಜೂನ್‌ 21ರಂದು ಶ್ರೀನಗರದಲ್ಲಿ ನಡೆಯುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಹಾಗಾಗಿ, ಕಾಶ್ಮೀರದ ಭದ್ರತೆಯು ಪ್ರಮುಖವಾಗಿದೆ.

“ಜಮ್ಮು-ಕಾಶ್ಮೀರದಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಕಾಶ್ಮೀರದಲ್ಲಿ ನಿಗ್ರಹಿಸಿದಂತೆ ಜಮ್ಮುವಿನಲ್ಲೂ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು. ಗಡಿಗಳನ್ನು ಇನ್ನಷ್ಟು ಭದ್ರಗೊಳಿಸಬೇಕು. ಒಳನುಸುಳುಕೋರರ ಮೇಲೆ ಹದ್ದಿನ ಕಣ್ಣಿಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ಭದ್ರತಾ ಪಡೆಗಳಿಗೆ ಅಮಿತ್‌ ಶಾ ಸೂಚಿಸಿದರು. ಕೆಲ ದಿನಗಳ ಹಿಂದಷ್ಟೇ ನರೇಂದ್ರ ಮೋದಿ ಅವರು ಕೂಡ ಜಮ್ಮು-ಕಾಶ್ಮೀರ ಭದ್ರತೆ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿದ್ದರು. ಎಲ್ಲ ಸೈನಿಕರನ್ನು ಗಡಿ ಸೇರಿ ಆಯಕಟ್ಟಿನ ಪ್ರದೇಶಗಳಿಗೆ ನಿಯೋಜಿಸಬೇಕು ಎಂಬುದಾಗಿ ಸೂಚಿಸಿದ್ದರು.

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದರು. ಜಮ್ಮು-ಕಾಶ್ಮೀರದಲ್ಲಿರುವ ಶಿವ ಖೋರಿ ದೇವಸ್ಥಾನಕ್ಕೆ ಹಿಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಪಾಕಿಸ್ತಾನದ ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿ ನಡೆಸಿದ್ದು, ಉಗ್ರನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಲ್ಲದೆ, ಉಗ್ರನ ಕುರಿತು ಸುಳಿವು ನೀಡಿದರೆ 20 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Continue Reading

ದೇಶ

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Lok Sabha Speaker: ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಉದ್ಧವ್‌ ಠಾಕ್ರೆ ಬಣದ ಶಿವಸೇನೆ ವಕ್ತಾರ ಸಂಜಯ್‌ ರಾವತ್‌ ತಿಳಿಸಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ (Lok Sabha Speaker) ಮುಗಿದಿದ್ದು, ಎನ್‌ಡಿಎ ಮೈತ್ರಿಕೂಟದ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಗ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಕಸರತ್ತು ನಡೆದಿದೆ. ಇದರ ಮಧ್ಯೆಯೇ, ಟಿಡಿಪಿ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ (INDIA Bloc) ಬೆಂಬಲವು ಟಿಡಿಪಿಗೆ ಇರಲಿದೆ ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ವಕ್ತಾರ ಸಂಜಯ್‌ ರಾವತ್‌ (Sanjay Raut) ಹೇಳಿದ್ದಾರೆ.

“ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗೊಂದು ವೇಳೆ, ಬಿಜೆಪಿಯವರೇ ಕಣಕ್ಕಿಳಿರೆ, ಎನ್‌ಡಿಎ ಮೈತ್ರಿಕೂಟವೇ ಛಿದ್ರವಾಗಲಿದೆ” ಎಂದು ಸಂಜಯ್‌ ರಾವತ್‌ ಎಚ್ಚರಿಸಿದರು.

Modi 3.0 Government

ಸಂಜಯ್‌ ರಾವತ್‌ ಹೇಳಿಕೆಯ ಬೆನ್ನಲ್ಲೇ ಜೆಡಿಯು ಪ್ರತಿಕ್ರಿಯಿಸಿದೆ. “ಲೋಕಸಭೆ ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಬಿಜೆಪಿ ತೀರ್ಮಾನವೇ ಅಂತಿಮ” ಎಂಬುದಾಗಿ ತಿಳಿಸಿದೆ. ಹಾಗಾಗಿ, ಎನ್‌ಡಿಎ ಮೈತ್ರಿಕೂಟದಿಂದ ಲೋಕಸಭೆ ಸ್ಪೀಕರ್‌ ಚುನಾವಣೆಗೆ ಯಾವ ಪಕ್ಷದವರು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲಕ್ಕೆ ಈಡುಮಾಡಿದೆ. ಮೊದಲಿನಿಂದಲೂ ಟಿಡಿಪಿಯು ತಮ್ಮ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗಬೇಕು ಎಂಬ ಅಭಿಲಾಷೆ ಹೊಂದಿದೆ ಎಂದು ತಿಳಿದುಬಂದಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನವು ಪ್ರಮುಖವಾಗಿದೆ.

ಜೆಡಿಯು ಪಕ್ಷವು 12 ಸಂಸದರನ್ನು ಹೊಂದಿದ್ದರೆ, ಟಿಡಿಪಿ 16 ಸಂಸದರನ್ನು ಹೊಂದಿದೆ. ಎರಡೂ ಪಕ್ಷಗಳ ನಾಯಕರಾದ ನಿತೀಶ್‌ ಕುಮಾರ್‌ ಹಾಗೂ ಚಂದ್ರಬಾಬು ನಾಯ್ಡು ಅವರು ನಾವು ಎನ್‌ಡಿಎ ಜತೆ ನಿಲ್ಲುತ್ತೇವೆ ಎಂದಿದ್ದಾರೆ. ನರೇಂದ್ರ ಮೋದಿ ಅವರು ಸಂಪುಟ ರಚನೆಯ ವೇಳೆಯೂ ಪ್ರಾಬಲ್ಯ ಸಾಧಿಸಿದ್ದರು. ಕೇಂದ್ರ ಗೃಹ, ರಕ್ಷಣೆ, ಹಣಕಾಸು ಹಾಗೂ ವಿದೇಶಾಂಗ ಖಾತೆಗಳನ್ನು ಬಿಜೆಪಿಯೇ ಉಳಿಸಿಕೊಂಡಿದೆ. ಹಾಗಾಗಿ, ಟಿಡಿಪಿ ಅಭ್ಯರ್ಥಿಯೇ ಸ್ಪೀಕರ್‌ ಚುನಾವಣೆ ಕಣಕ್ಕೆ ಇಳಿಬಹುದು ಎನ್ನಲಾಗಿದೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದ್ದು, ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Continue Reading

ದೇಶ

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Patna Boat Accident: ದೇವರ ದರ್ಶನ ಮಾಡಿ ಮರಳುತ್ತಿದ್ದ 17 ಭಕ್ತರಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿ 6 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನದಿಯಲ್ಲಿ ಮುಳುಗಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಉಳಿದ 6 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅನಾಹುತ ನಡೆಯುವ ವೇಳೆ ದೋಣಿ ಬರ್ಹ್‌ನ ಉಮಾನಾಥ್ ಘಾಟ್‌ನಿಂದ ಡಿಯಾರಾಗೆ ಪ್ರಯಾಣಿಸುತ್ತಿತ್ತು.

VISTARANEWS.COM


on

Patna Boat Accident
Koo

ಪಟನಾ: ದೇವರ ದರ್ಶನ ಮಾಡಿ ಮರಳುತ್ತಿದ್ದ 17 ಭಕ್ತರಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿ 6 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನದಿಯಲ್ಲಿ ಮುಳುಗಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಉಳಿದ 6 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ (Patna Boat Accident).

ಪಾಟ್ನಾದಿಂದ 70 ಕಿಮೀ ದೂರದಲ್ಲಿರುವ ಬಾರ್ಹ್ ಪಟ್ಟಣದ ಬಳಿಯ ಗಂಗಾ ನದಿಯಲ್ಲಿ ಪ್ರಯಾಣಿಕರಿದ್ದ ದೋಣಿ ಮುಳುಗಿ ಈ ದುರಂತ ಸಂಭವಿಸಿದೆ. ಅನಾಹುತ ನಡೆಯುವ ವೇಳೆ ದೋಣಿ ಬರ್ಹ್‌ನ ಉಮಾನಾಥ್ ಘಾಟ್‌ನಿಂದ ಡಿಯಾರಾಗೆ ಪ್ರಯಾಣಿಸುತ್ತಿತ್ತು. ಸದ್ಯ ಸ್ಥಳಕ್ಕೆ ಧಾವಿಸಿರುವ ಎಸ್‌ಡಿಆರ್‌ಎಫ್ ತಂಡ ಶೋಧ ಕಾರ್ಯ ಆರಂಭಿಸಿದೆ.

ʼʼಉಮನಾಥ್ ಘಾಟ್ ಸಮೀಪದಲ್ಲೇ ದೋಣಿ ಮುಳುಗಿದೆ. ದೋಣಿಯಲ್ಲಿ ಒಂದೇ ಕುಟುಂಬದ 17 ಮಂದಿ ಪ್ರಯಾಣಿಸುತ್ತಿದ್ದರು. ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ದೋಣಿಯಲ್ಲಿ ಯಾರಿಗೂ ಲೈಫ್ ಜಾಕೆಟ್ ಇರಲಿಲ್ಲ. ಕೆಲವರು ಈಜಿ ದಡ ಸೇರಿದ್ದಾರೆ. ಕೆಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ನಾಪತ್ತೆಯಾದ 6 ಮಂದಿ ಇನ್ನೂ ಪತ್ತೆಯಾಗಿಲ್ಲʼʼ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

ʼʼಸಣ್ಣ ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಜನ ತುಂಬಿದ್ದರಿಂದ ಅದು ಮಗುಚಿ ಬಿದ್ದಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ದೋಣಿಯಲ್ಲಿದ್ದ 11 ಮಂದಿ ಸುರಕ್ಷಿತವಾಗಿದ್ದಾರೆ. ಉಳಿದ 6 ಮಂದಿಗಾಗಿ ಎಸ್‌ಡಿಆರ್‌ಎಫ್ ತಂಡ ಶೋಧ ನಡೆಸುತ್ತಿದೆʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಜನರನ್ನು ತುಂಬಿದ್ದೇ ಕಾರಣ?

ದೋಣಿ ಮಗುಚಿ ಬಿದ್ದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಕಾರಣ ಪತ್ತೆಗೆ ಆದೇಶ ಹೊರಡಿಸಿದ್ದಾರೆ. ಚಿಕ್ಕ ದೋಣಿಗೆ ಅಧಿಕ ಮಂದಿಯನ್ನು ತುಂಬಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಜಿಲ್ಲಾಡಳಿತ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಗೆ ಎಲ್ಲ ನೆರವು ನೀಡಿದೆ. ಸ್ಥಳದಲ್ಲಿ ನೂರಾರು ಮಂದಿ ನೆರೆದಿದ್ದಾರೆ.

ಇದನ್ನೂ ಓದಿ: boat capsizes: ಬೋಟ್ ಮಗುಚಿ 6 ಶಾಲಾ ಮಕ್ಕಳ ದುರ್ಮರಣ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಈ ವರ್ಷದ ಜನವರಿಯಲ್ಲಿ ಗುಜರಾತ್‌ನ ವಡೋದಾರದ ಹರಿಣಿ ಸರೋವರದಲ್ಲಿ ಬೋಟ್ ಮಗುಚಿ 13 ಶಾಲಾ ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಮೃತಪಟ್ಟಿದ್ದರು. ನ್ಯೂ ಸನ್‌ರೈಸ್ ಶಾಲೆಯ ಮಕ್ಕಳು ಪಿಕ್‌ನಿಕ್‌ಗಾಗಿ ಕೆರೆಗೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿತ್ತು. ಬೋಟ್‌ನಲ್ಲಿ 27 ವಿದ್ಯಾರ್ಥಿಗಳಿದ್ದರು. ಮಕ್ಕಳ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತ ಮಕ್ಕಳ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಅಲ್ಲದೇ, ಈ ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ. ನೆರವು ನೀಡುವುದಾಗಿ ಪ್ರಕಟಿಸಿದ್ದರು.

ಅಲ್ಲದೆ ಕೆಲವು ದಿನಗಳ ಹಿಂದೆ ಭೀಕರ ಗಾಳಿಗೆ ದೋಣಿಯಿಂದು ಮಗುಚಿ ಬಿದ್ದು ಆರು ಮಂದಿ ನೀರುಪಾಲಾಗಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿತ್ತು. ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಪುಟ್ಟ ಮಕ್ಕಳು ಸೇರಿ ಆರು ಮಂದಿ ಕಣ್ಮರೆಯಾಗಿದ್ದರು.

ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(30) ಕೋಮಲ್ ಜಾಧವ್(26) ಶುಭ ಜಾಧವ್(1) ಮಾಹಿ ಜಾಧವ್(3) ನೀರು ಪಾಲಾಗಿದ್ದರು.

Continue Reading
Advertisement
Cholera outbreak
ಕರ್ನಾಟಕ55 mins ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ57 mins ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ2 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ2 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ2 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ2 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ3 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ3 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ3 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ4 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ4 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ10 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌