Road accident: ಬೈಕ್‌ಗೆ ಲಾರಿ ಡಿಕ್ಕಿ: ಮಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಅಪ್ಪ ಸ್ಥಳದಲ್ಲೇ ಸಾವು, ಮಗಳಿಗೂ ಗಾಯ - Vistara News

ಕ್ರೈಂ

Road accident: ಬೈಕ್‌ಗೆ ಲಾರಿ ಡಿಕ್ಕಿ: ಮಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಅಪ್ಪ ಸ್ಥಳದಲ್ಲೇ ಸಾವು, ಮಗಳಿಗೂ ಗಾಯ

Road accident : ಬೆಂಗಳೂರು ಗ್ರಾಮಾಂತರದ ದೊಡ್ಡ ಬಳ್ಳಾಪುರದಲ್ಲಿ ಮಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಅಪ್ಪ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದೂ ಮಗಳ ಕಣ್ಣೆದುರೇ. ಮಗಳಿಗೂ ಗಾಯಗಳಾಗಿವೆ.

VISTARANEWS.COM


on

road accident in doddaballapura
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೊಡ್ಡಬಳ್ಳಾಪುರ: ಮಗಳನ್ನು ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದ ಅಪ್ಪ ಮಗಳ ಕಣ್ಣೆದುರಲ್ಲೇ (Father dies in accident) ಒದ್ದಾಡಿ ಪ್ರಾಣ (Road Accident) ಕಳೆದುಕೊಂಡಿದ್ದಾರೆ. ಮಗಳು ಕೂಡಾ ಗಂಭೀರವಾಗಿ ಗಾಯಗೊಂಡು (Daughter injured) ಆಸ್ಪತ್ರೆ ಸೇರಿದ್ದಾಳೆ. ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಈ ದುರಂತ ನಡೆದಿರುವುದು ದೊಡ್ಡಬಳ್ಳಾಪುರ (Doddaballapura news) ನಗರದ ಎಪಿಎಂಸಿ ಮಾರುಕಟ್ಟೆ ಬಳಿ.

ಗುರುವಾರ ಮುಂಜಾನೆ ಬೈಕ್‌ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ ಅಪ್ಪನನ್ನು ವೆಂಕಟೇಶ್‌ (45) ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮುದ್ದನಾಯಕನ ಪಾಳ್ಯದ ನಿವಾಸಿಯಾಗಿರುವ ವೆಂಕಟೇಶ್ ಅವರು ಎಂದಿನಂತೆ ತಮ್ಮ ಮಗಳು ಯಶಸ್ವಿನಿ (15)ಯನ್ನು ಶಾಲೆಗೆ ಬಿಡಲೆಂದು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.

ಅವರು ನಗರದ ಎಪಿಎಂಸಿ ಬಳಿ ಸಾಗುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಬೈಕ್‌ ಲಾರಿಯ ಒಳಭಾಗಕ್ಕೆ ಹೋಗಿದೆ. ಡಿಕ್ಕಿಯ ರಭಸಕ್ಕೆ ವೆಂಕಟೇಶ್‌ ಮತ್ತು ಯಶಸ್ವಿನಿ ಹಾರಿ ಬಿದ್ದಿದ್ದು, ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ವೆಂಕಟೇಶ್‌ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ ಯಶಸ್ವಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆಯುತ್ತಿದ್ದಂತೆಯೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ Murder Case : ಅವನಿಗೆ ಕೊಲೆ ಮಾಡಿದ್ದೇ ನೆನಪಿಲ್ಲ, ಕಾರಣ ಮೊದಲೇ ಗೊತ್ತಿಲ್ಲ! ಕಲ್ಲಿನೊಂದಿಗೆ ಠಾಣೆಗೆ ಬಂದವನ ಡೆಡ್ಲಿ ಕತೆ!

Road Accident: ಸ್ಕೂಟಿಗೆ ಬಸ್ಸು ಡಿಕ್ಕಿ, ಯುವಕ ಸಾವು

ಶಿರಸಿ:‌ ಸ್ಕೂಟಿಯೊಂದಕ್ಕೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವಿಗೀಡಾಗಿದ್ದಾರೆ. ರಸ್ತೆ ಅಪಘಾತ (Road Accident) ಶಿರಸಿಯ ಯಲ್ಲಾಪುರ ರಸ್ತೆಯ ಅಂಬೇಡ್ಕರ ಭವನ ಬಳಿ ಘಟನೆ ನಡೆದಿದೆ.

ಭೈರುಂಬೆ ಗ್ರಾ.ಪಂ ವ್ಯಾಪ್ತಿಯ ದೇವರ ಕೆರಿ ಗ್ರಾಮದ ಗಣೇಶ್ ಕರಾಳೆ(20) ಮೃತ ಯುವಕ. ಕೆಎಸ್ಆರ್ಟಿಸಿ‌ ಬಸ್ ಚಾಲಕನ ಎಡವಟ್ಟಿನಿಂದ ನಡೆದ ಘಟನೆ ಇದಾಗಿದ್ದು, ಯುವಕನಿಗೆ ತಲೆಗೆ ಗಂಭೀರ ಸ್ವರೂಪದ ಗಾಯವಾಯಿತು. ತೀವ್ರವಾಗಿ ಗಾಯಗೊಂಡ ಗಣೇಶ್‌, ಆಸ್ಪತ್ರೆ ಸಾಗಿಸುವಾಗ ದಾರಿಯಲ್ಲಿ ಮೃತಪಟ್ಟರು. ಶಿರಸಿ ಮಾರ್ಕೆಟ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Self Harming: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯ ನವೋದಯ ಶಾಲೆಯಲ್ಲಿ 8 ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ

ದಾವಣಗೆರೆ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಗ್ರಾಮದಲ್ಲಿ ನಡೆದಿದೆ. ಬೆಳಗುತ್ತಿ ಗ್ರಾಮದ ಸೋಮಸುಂದರ ರಾಜ್ ಅರಸ್ (60) ಮೃತ ರೈತ.

ಸತತ ಮಳೆ ಕೊರತೆ ಹಾಗೂ ಕೃಷಿಗೆ ಮಾಡಿದ ಸಾಲದಿಂದ ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗುತ್ತಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2 ಲಕ್ಷ, ಎಲ್‌ಎನ್‌ಟಿ ಫೈನಾನ್ಸ್‌ನಲ್ಲಿ 1 ಲಕ್ಷ, ಗ್ರಾಮೀಣ ಕೂಟ ಫೈನಾನ್ಸ್‌ನಲ್ಲಿ 1 ಲಕ್ಷ, ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ಸೇರಿದಂತೆ ಕೈ ಗಡ ಸೇರಿ 10 ಲಕ್ಷ ರೂ. ಸಾಲ ಮಾಡಿದ್ದರು. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಿಪ್ಪರ್ ಹರಿದು ಬೈಕ್ ಸವಾರ ಸಾವು

ಕೊಪ್ಪಳ: ಟಿಪ್ಪರ್ ಹರಿದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಕಾಸನಕಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಡಿಕ್ಕಿಯಾಗಿದೆ. ಈ ವೇಳೆ ಟಿಪ್ಪರ್ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Student death Nursing college student commits suicide in Bengaluru

ಬೆಂಗಳೂರು: ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ (Student Death) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಪಶ್ಚಿಮ ಬಂಗಾಳ‌ ಮೂಲದ ದಿಯಾ ಮಂಡೋಲ್‌ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ: Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Continue Reading

ದೇಶ

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Mumbai Hit And Run: ಈ ಬಗ್ಗೆ ಬಾರ್‌ ಮಾಲಿಕ ಕರಣ್‌ ಶಾ ಮಾಹಿತಿ ನೀಡಿದ್ದು, ಮಿಹಿರ್‌ ಶಾ ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾರ್‌ಗೆ ಬಂದಿದ್ದ. ಈ ವೇಳೆ ಆತನ ಜೊತೆ ಯಾರೂ ಮಹಿಳೆಯರು ಇರಲಿಲ್ಲ. ಅವರು 18,730 ಬಿಲ್‌ ಪಾವತಿಸಿ ತಮ್ಮ ಮರ್ಸಿಡಿಸ್‌ ಬೆನ್ಸ್‌ ಕಾರಿನಲ್ಲಿ ತೆರಳಿದ್ದರು. ಮಿಹಿರ್‌ನ ಹೊರತಾಗಿ ಉಳಿದವರೆಲ್ಲವರೂ ಒಂದೊಂದು ಬಿಯರ್‌ ಕುಡಿದಿದ್ದರು. ಮಿಹಿರ್‌ ಮಾತ್ರ ರೆಡ್‌ ಬುಲ್‌ ಸೇವಿಸಿದ್ದ. ಬಾರ್‌ಗೆ ಅವರು ಪ್ರವೇಶಿಸುವ ಮುನ್ನ ಅವರ ಗುರುತಿನ ಚೀಟಿ ಪರಿಶೀಲನೆ ಮಾಡಲಾಗಿತ್ತು. ಪೊಲೀಸರಿಗೆ ಅಗತ್ಯವಿರವ ಎಲ್ಲಾ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

Mumbai hit and run
Koo

ಮುಂಬೈ: ನಿನ್ನೆ ಮುಂಬೈನಲ್ಲಿ ನಡೆದ ಡ್ರಂಕ್‌ ಆಂಡ್‌ ಡ್ರೈವ್‌(Mumbai Hit And Run) ಕೇಸ್‌ನ ಪ್ರಮುಖ ಆರೋಪಿ ಶಿವಸೇನೆ ಮುಖಂಡ(ShivSena Leader)ನ ಪುತ್ರ ಘಟನೆಗೂ ಮುನ್ನ ಆರೋಪಿ ಮಿಹಿರ್‌ ಶಾ(Mihir Shah) ಮತ್ತು ಆತನ ಸ್ನೇಹಿತರು ಬಾರ್‌ಗೆ ತೆರಳಿದ್ದು, ಬರೋಬ್ಬರಿ 18 ಸಾವಿರಕ್ಕೂ ಅಧಿಕ ಬಿಲ್‌ ಆಗಿತ್ತು ಎಂಬ ವಿಚಾರ ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ಮಿಹಿರ್‌ ಹಾಗೂ ಆತನ ಸೇಹಿತರು ಜೂಹೂನಲ್ಲಿರುವ ಗ್ಲೋಬಲ್‌ ತಾಪಸ್‌ ಬಾರ್‌ಗೆ ತೆರಳಿದ್ದರು ಎನ್ನಲಾಗಿದೆ.

ಇನ್ನು ಈ ಬಗ್ಗೆ ಬಾರ್‌ ಮಾಲಿಕ ಕರಣ್‌ ಶಾ ಮಾಹಿತಿ ನೀಡಿದ್ದು, ಮಿಹಿರ್‌ ಶಾ ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾರ್‌ಗೆ ಬಂದಿದ್ದ. ಈ ವೇಳೆ ಆತನ ಜೊತೆ ಯಾರೂ ಮಹಿಳೆಯರು ಇರಲಿಲ್ಲ. ಅವರು 18,730 ಬಿಲ್‌ ಪಾವತಿಸಿ ತಮ್ಮ ಮರ್ಸಿಡಿಸ್‌ ಬೆನ್ಸ್‌ ಕಾರಿನಲ್ಲಿ ತೆರಳಿದ್ದರು. ಮಿಹಿರ್‌ನ ಹೊರತಾಗಿ ಉಳಿದವರೆಲ್ಲವರೂ ಒಂದೊಂದು ಬಿಯರ್‌ ಕುಡಿದಿದ್ದರು. ಮಿಹಿರ್‌ ಮಾತ್ರ ರೆಡ್‌ ಬುಲ್‌ ಸೇವಿಸಿದ್ದ. ಬಾರ್‌ಗೆ ಅವರು ಪ್ರವೇಶಿಸುವ ಮುನ್ನ ಅವರ ಗುರುತಿನ ಚೀಟಿ ಪರಿಶೀಲನೆ ಮಾಡಲಾಗಿತ್ತು. ಪೊಲೀಸರಿಗೆ ಅಗತ್ಯವಿರವ ಎಲ್ಲಾ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಆರೋಪಿಯ ತಂದೆ ಅರೆಸ್ಟ್‌

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಹಿರ್‌ನ ತಂದೆ, ಶಿವಸೇನೆ ನಾಯಕ ನಾಯಕ ರಾಜೇಶ್‌ ಶಾ ಅವರನ್ನು ಪಾಲ್ಘರ್‌ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರು ರಾಜೇಶ್‌ ಶಾ ಅವರ ಹೆಸರಿನಲ್ಲಿ ನೋಂದಣಿಯಾಗಿರುವ ಕಾರಣ ಅವರನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಕಾರು ಚಾಲಕ ರಾಜಋಷಿ ಬಿದಾವತ್‌ ಎಂಬುವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಮುಂಬೈನ ವೊರ್ಲಿಯಲ್ಲಿ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah) ಕುಡಿದು ವಾಹನ ಚಲಾಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ 24 ವರ್ಷದ ಮಿಹಿರ್‌ ಶಾ ಪರಾರಿಯಾಗಿದ್ದ, ಬಳಿಕ ಪೊಲೀಸರು ಅವನ ತಂದೆಯನ್ನು ವಶಪಡಿಸಿಕೊಂಡಿದ್ದಾರೆ.

ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಮಿಹಿರ್‌ ಶಾ ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಮಿಹಿರ್‌ ಪೊಲೀಸರಿಗೆ ಹೆದರಿ ತನ್ನ ಪ್ರೇಯಸಿ ಮನೆಯಲ್ಲಿ ಅವಿತಿದ್ದ. ಪೊಲೀಸರು ಆತನನ್ನು ಅರೆಸ್ಟ್‌ ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಇದನ್ನೂ ಓದಿ: Mumbai Rain : ಭಾನುವಾರ ರಾತ್ರಿ ಪೂರ್ತಿ ಸುರಿದ ಮಳೆಗೆ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತ

Continue Reading

ಕ್ರೈಂ

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Actor Darshan: ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನನ್ನು ಗುರುತು ಹಿಡಿಯಲಾಗಿದೆ. ಸಾಕ್ಷಿಗಳ ಮುಂದೆ ಪೊಲೀಸರು ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದರು. ಕೃತ್ಯದ ದಿನ ಆರೋಪಿಗಳನ್ನು ನೋಡಿದ ಸಾಕ್ಷಿಗಳಿಂದ, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿಯೇ ಐಡೆಂಟಿಫಿಕೇಶನ್ ಪೆರೇಡ್ ನಡೆಯಿತು.

VISTARANEWS.COM


on

Actor Darshan Will Attend The Court Hearing From Online
Koo

ಬೆಂಗಳೂರು: ನಟ ದರ್ಶನ್‌ (Actor Darshan) ಭಾಗಿ ಆಗಿರುವ ರೇಣುಕಾ ಸ್ವಾಮಿ ಕೊಲೆ (Ranuka Swamy Murder) ಪ್ರಕರಣದಲ್ಲಿ, ಸಾಕ್ಷಿಗಳು (Witness) ಮೂವರು ಆರೋಪಿಗಳನ್ನು ಐಡೆಂಟಿಫಿಕೇಶನ್‌ ಸಂದರ್ಭದಲ್ಲಿ ನಿಖರವಾಗಿ ಪತ್ತೆ ಹಚ್ಚಿದ್ದಾರೆ. ಜೈಲಿನಲ್ಲಿ ನಡೆದ ಈ ಐಡೆಂಟಿಫಿಕೇಶನ್‌ ಪರೇಡ್‌ನಲ್ಲಿ (Identification parade) ಹತ್ತಾರು ಇತರ ಕೈದಿಗಳ ನಡುವೆ ಆರೋಪಿಗಳನ್ನು ಸಾಕ್ಷಿಗಳು ಖಚಿತವಾಗಿ ಕಂಡು ಹಿಡಿದರು.

ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನನ್ನು ಗುರುತು ಹಿಡಿಯಲಾಗಿದೆ. ಸಾಕ್ಷಿಗಳ ಮುಂದೆ ಪೊಲೀಸರು ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದರು. ಕೃತ್ಯದ ದಿನ ಆರೋಪಿಗಳನ್ನು ನೋಡಿದ ಸಾಕ್ಷಿಗಳಿಂದ, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿಯೇ ಐಡೆಂಟಿಫಿಕೇಶನ್ ಪೆರೇಡ್ ನಡೆಯಿತು.

ಈ ಪರೇಡ್‌ನಲ್ಲಿ ಆರೋಪಿಗಳನ್ನು ಜೈಲಿನಲ್ಲಿರುವ ಇತರ ಕೈದಿಗಳ ನಡುವೆ ನಿಲ್ಲಿಸಿ, ತಾನು ನೋಡಿದ ಆರೋಪಿಯ ಗುರುತು ಹಿಡಿಯಲು ಸಾಕ್ಷಿಗೆ ಸೂಚಿಸಲಾಗುತ್ತದೆ. ಈ ವೇಳೆ ತಾಲೂಕು ದಂಡಾಧಿಕಾರಿಗಳು ಹಾಜರಿರುತ್ತಾರೆ. ಈ ರೀತಿಯಾಗಿ ಕಾರ್ತಿಕ್, ನಿಖಿಲ್ ನಾಯಕ್ ಹಾಗೂ ರಘುಗೆ ಐಡೆಂಟಿಫಿಕೇಶನ್ ಪೆರೇಡ್ ನಡೆಸಲಾಯಿತು. ತುಮಕೂರು ಜೈಲಲ್ಲಿ ಕಾರ್ತಿಕ್ ಹಾಗೂ ನಿಖಿಲ್‌ಗೆ, ಪರಪ್ಪನ ಆಗ್ರಹಾರ ಜೈಲಿನಲ್ಲಿ ರಘುಗೆ ಐಡೆಂಟಿಫಿಕೇಶನ್ ಪರೇಡ್ ನಡೆಯಿತು. ಈ ಐಡೆಂಟಿಫಿಕೇಶನ್ ಪರೇಡ್‌ನಲ್ಲಿ ಪತ್ತೆ ಹಚ್ಚಿದ್ದು ಐ ವಿಟ್ನೆಸ್ ಆಗಿ ಪರಿಗಣನೆ ಆಗಲಿದೆ.

ದರ್ಶನ್ ಕೇಸಲ್ಲೂ ಎರಡು ಪೆನ್ ಡ್ರೈವ್

ಈ ಪ್ರಕರಣದಲ್ಲೂ ದರ್ಶನ್‌ (Actor Darshan) ವಿರುದ್ಧ ಎರಡು ಪೆನ್ ಡ್ರೈವ್‌ಗಳು ಪ್ರಮುಖ ಸಾಕ್ಷಿಗಳಾಗಿವೆ. ಆದರೆ ಇವು ಆರೋಪಿ ಮಾಡಿದ್ದಲ್ಲ, ಬದಲಾಗಿ ಆರೋಪಿಗಳ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿದ್ಧಪಡಿಸಿರುವ ಪೆನ್ ಡ್ರೈವ್.

8 ಜಿಬಿಯ ಎರಡು ಪೆನ್ ಡ್ರೈವ್ ಸಿದ್ಧಪಡಿಸಿರುವ ಪೊಲೀಸರು, ಆರೋಪಿಗಳಾದ ದೀಪಕ್ ಹಾಗೂ ನಂದೀಶ್ ಇವರ ಗೂಗಲ್ ಟೈಮ್ ಲೈನ್ ಡಾಟಾವನ್ನು ಅದರಲ್ಲಿ ಸಂಗ್ರಹಿಸಿದ್ದಾರೆ. ದೀಪಕ್ ಶಾಸಕರ ಸಂಬಂಧಿ, ನಂದೀಶ್ ದರ್ಶನ್ ಮನೆಯ ಕೆಲಸದವನು. ಇಬ್ಬರ ಮೊಬೈಲ್‌ನಲ್ಲೂ ಗೂಗಲ್ ಟೈಮ್ ಲೈನ್ ಇತ್ತು. ಅಪರಾಧ ನಡೆದ ಪ್ರತಿ ಜಾಗಕ್ಕೂ ಇವರಿಬ್ಬರು ಓಡಾಡಿದ್ದಾರೆ. ಹೀಗಾಗಿ ಇದನ್ನು ಎರಡು ಪೆನ್ ಡ್ರೈವ್‌ಗಳಲ್ಲಿ ಪೊಲೀಸರು ಶೇಖರಿಸಿಟ್ಟಿದ್ದಾರೆ. ಆರೋಪಿಗಳು ಘಟನಾ ಸ್ಥಳದಲ್ಲಿ ಇದ್ದರು ಎನ್ನುವುದಕ್ಕೆ ಈ ಎರಡು ಪೆನ್ ಡ್ರೈವ್ ನಲ್ಲಿರುವ ಡಾಟಾ ಮಹತ್ವದ ಸಾಕ್ಷಿಯಾಗಿದೆ.

ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

ಇವರಲ್ಲಿ ಒಬ್ಬಾತ ಕಾರ್ತಿಕ್‌ ಪುರೋಹಿತ್.‌ ಈತನಿಗೆ ಇಂದು ಇಂದು ವಿಚಾರಣೆಗೆ ಹಾಜರಾಗಲು ನೊಟೀಸ್ ಹೋಗಿದೆ. ಶನಿವಾರ ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್‌ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್‌ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.

ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್‌ಗೆ ಇತ್ತೇ ಎಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಕೊಲೆ ಮಾಹಿತಿ ಇದ್ದೂ ಪೊಲೀಸರಿಗೆ ತಿಳಿಸಲಿಲ್ಲವಾದರೆ ಸಂಕಷ್ಟ ಗ್ಯಾರಂಟಿ ಆಗಿದೆ. ಜೊತೆಗೆ ಎರಡು ದಿನಗಳ ಕಾಲ ಆರೋಪಿಗೆ ಆಶ್ರಯ ಕೊಟ್ಟಿರುವ ಶಂಕೆ ಇದೆ. ಆಶ್ರಯದ ಜೊತೆಗೆ ಹಣಕಾಸು ಸಹಾಯವೂ ಮಾಡಿರುವ ಅನುಮಾನ ಇದೆ. ಹೀಗಾಗಿ ಇಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ.

ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ವಿಚಾರಣೆಗೆ ಹಾಜರಾದ್ದಾಳೆ. ಈಕೆ ಆರೋಪಿ ಧನರಾಜ್‌ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ. ಹೀಗಾಗಿ ಸಮತಾಳನ್ನು ಮತ್ತೆ ವಿಚಾರಣೆಗೆ ಪೊಲೀಸರು ಕರೆದಿದ್ದು, ಇಂದು ಹಾಜರಾಗಲು ಸೂಚಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮುಂದೆ ಸಮತಾ ಹಾಜರಾಗಲಿದ್ದಾಳೆ.

ಇದನ್ನೂ ಓದಿ: Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

Continue Reading

ಬೆಂಗಳೂರು

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Murder case : ಬೆಂಗಳೂರಲ್ಲಿ ಯುವಕನೊಬ್ಬ ಕುಡಿದ ನಶೆಯಲ್ಲಿ ತನ್ನ ಸ್ನೇಹಿತರಿಂದಲೇ ಕೊಲೆಯಾಗಿ ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ‌ ನಡೆಸಿ ಯುವಕನೊಬ್ಬನ ಕೊಲೆ (Murder case) ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನೇಪಾಳಿ ಮೂಲದ ಬಾಲಾಜಿ ಮೃತ ದುರ್ದೈವಿ.

ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಾಲಾಜಿ ಸ್ನೇಹಿತರೊಂದಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಅಮಲಿನಲ್ಲಿ ಕ್ಯಾತೆ ತೆಗೆದು ಸ್ನೇಹಿತರೊಟ್ಟಿಗೆ ಜಗಳ ಶುರು ಮಾಡಿದ್ದ. ಜಗಳವು ವಿಕೋಪಕ್ಕೆ ತಿರುಗಿದ್ದು, ಬಾಲಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ.

ಕೋಣನಕುಂಟೆ ಸಮುದಾಯ ಭವನ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಹಾಗೂ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಕೋರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಹಳೇ ವೈಷಮ್ಯದಿಂದ ಗ್ರಾಮ ಪಂಚಾಯಿತಿ ಸದಸ್ಯನ ಕೊಚ್ಚಿ ಕೊಲೆ

ಹೊಸಕೋಟೆ: ಹಳೆ ವೈಷಮ್ಯದ (Old vengeance) ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು (Gram Panchayat Member) ಬರ್ಬರವಾಗಿ (Hacked to death) ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಹೊಸಕೋಟೆ (Hosakote News) ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಅಪಾಕ್ ಅಮೀರ್ ಖಾನ್ (45) ಮೃತ ಗ್ರಾಮ ಪಂಚಾಯತಿ ಸದಸ್ಯ. ಕಳೆದ ರಾತ್ರಿ ಅಟ್ಯಾಕ್ ಮಾಡಿ ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಅಪಾಕ್‌ ಅಮೀರ್‌ ಖಾನ್‌ ಗ್ರಾಮ ಪಂಚಾಯತಿ ಮುಂದೆ ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಗ್ರಾಮದ ಮೆಹಬೂಬ್ ಎಂಬಾತ ನುಗ್ಗಿ ಬಂದು ಕೊಚ್ಚಿ ಕೊಂದು ಹಾಕಿದ್ದಾನೆ.

ಕೊಲೆ ನಂತರ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

ನವದೆಹಲಿ: ಟೆರೇಸ್‌ನಲ್ಲಿ ನಿಂತು ಹೊಡೆದಾಟವನ್ನು ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ (Accident) ಗುಂಡು (shot) ತಾಗಿರುವ ಘಟನೆ ಉತ್ತರ ದೆಹಲಿಯ (north delhi) ದಯಾಲ್‌ಪುರದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಗುಂಡು ಹಾರಿಸಿದಾಗ ಅದು ತಪ್ಪಿ ಟೆರೇಸ್ ಮೇಲೆ ನಿಂತು ಇವರ ಜಗಳ ನೋಡುತ್ತಿದ್ದ ಮಹಿಳೆಗೆ ತಗುಲಿದೆ ಎನ್ನಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈಶಾನ್ಯ ದೆಹಲಿಯ ದಯಾಲ್‌ಪುರ್‌ನಲ್ಲಿ ಜುಲೈ 2ರಂದು ಶನಿವಾರ ಇಬ್ಬರ ನಡುವೆ ಜಗಳವಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, 17 ಲಕ್ಷ ರೂಪಾಯಿಗಾಗಿ ಇವರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ತಪ್ಪಿ ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ಹೊಡೆದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಕೆಯ ಕುಟುಂಬದವರು ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿಗಳ ಪೈಕಿ ಬಬ್ಲು ಎಂಬಾತನಿಗೆ 17 ಲಕ್ಷ ರೂ.ಗಳನ್ನು ಸಾಲವಾಗಿ ನೀಡಿದ್ದಾಗಿ ದೂರುದಾರ ಹಾಶಿಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತ ಬಬ್ಲುವನ್ನು ವಿಚಾರಿಸಲು ಹೋದಾಗ ವಾದವು ವಿಕೋಪಕ್ಕೆ ತಿರುಗಿದೆ. ಬಬ್ಲು ತನ್ನ ಸಹಚರರಾದ ಕಮರುಲ್, ಸುಹಾಲೆ ಮತ್ತು ಸಮ್ರುನ್‌ನೊಂದಿಗೆ ಬಂದಿದ್ದು, ಹಾಶಿಮ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ನಡುವೆ ಕಮರುಲ್ ಎಂಬಾತ ಹಾಶಿಮ್‌ ಮೇಲೆ ಗುಂಡು ಹಾರಿಸಿದ ಎನ್ನಲಾಗಿದೆ. ಆದರೆ ಇದು ಗುರಿ ತಪ್ಪಿ ಮಹಿಳೆಗೆ ಹೊಡೆದಿದೆ. ಗುಂಡಿನ ದಾಳಿಯ ಅನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರು ದೆಹಲಿಯ ಬ್ರಿಜ್‌ಪುರಿ ನಿವಾಸಿಗಳಾದ ಬಬ್ಲು (38) ಮತ್ತು ಕಮರುಲ್ (26) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mumbai Cricket Association
ಪ್ರಮುಖ ಸುದ್ದಿ3 mins ago

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Paris Olympics 2024
ದೇಶ17 mins ago

Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

gold rate today
ಕರ್ನಾಟಕ21 mins ago

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Self Harming
ಕ್ರೈಂ24 mins ago

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Karnataka weather Forecast
ಮಳೆ34 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Deepika Padukone
Latest37 mins ago

Deepika Padukone: 1.92 ಲಕ್ಷ ರೂ. ಬೆಲೆಯ ʼಹುಕುಮ್‌ ಕಿ ರಾಣಿʼ ಸೀರೆಯಲ್ಲಿ ಮಿಂಚಿದ ದೀಪಿಕಾ ಪಡುಕೋಣೆ!

CM Siddaramaiah
ಕರ್ನಾಟಕ39 mins ago

CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Sourav Ganguly
ಪ್ರಮುಖ ಸುದ್ದಿ57 mins ago

Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

Riteish Deshmukh Genelia Deshmukh Pledge To Donate Their Organ
ಬಾಲಿವುಡ್59 mins ago

Riteish Deshmukh: ಅಂಗಾಗ ದಾನ ಮಾಡುವ ಘೋಷಣೆ ಮಾಡಿದ  ರಿತೇಶ್- ಜೆನಿಲಿಯಾ ದಂಪತಿ!

Mumbai hit and run
ದೇಶ1 hour ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ34 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ17 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ20 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ20 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

ಟ್ರೆಂಡಿಂಗ್‌