Karnataka Politics : ತಾರಕಕ್ಕೆ ರಾಜ್ಯ ಸರ್ಕಾರ- ಗುತ್ತಿಗೆದಾರರ ತಿಕ್ಕಾಟ; ರಾಷ್ಟ್ರ ಮಟ್ಟದಲ್ಲಿ ಕೈ ಮಾನ ತೆಗೆಯಲು ಬಿಜೆಪಿ ರೆಡಿ! - Vistara News

ಕರ್ನಾಟಕ

Karnataka Politics : ತಾರಕಕ್ಕೆ ರಾಜ್ಯ ಸರ್ಕಾರ- ಗುತ್ತಿಗೆದಾರರ ತಿಕ್ಕಾಟ; ರಾಷ್ಟ್ರ ಮಟ್ಟದಲ್ಲಿ ಕೈ ಮಾನ ತೆಗೆಯಲು ಬಿಜೆಪಿ ರೆಡಿ!

Karnataka Politics : ಬಿಬಿಎಂಪಿಯಲ್ಲಿ ಕಳೆದ 2 ವರ್ಷದ ಹಿಂದೆ ನಡೆದ ಕಾಮಗಾರಿಗಳಿಗೆ ಇನ್ನೂ ಹಣ ಬಿಡುಗಡೆ ಆಗಿಲ್ಲ. ಈ ನಡುವೆ ಸರ್ಕಾರ ತನಿಖೆ ನಡೆಸುವುದಾಗಿ ಹೇಳಿದ್ದರಿಂದ ಗುತ್ತಿಗೆದಾರರು ಕೆಂಡಾಮಂಡಲರಾಗಿದ್ದಾರೆ. ತಮ್ಮ ಹೋರಾಟಕ್ಕೆ ಬಿಜೆಪಿಯ ಬೆಂಬಲವನ್ನೂ ಕೋರಿದ್ದಾರೆ.

VISTARANEWS.COM


on

BBMP Contractors Association Appeals To Basavaraj Bommai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಗುತ್ತಿಗೆದಾರರ ನಡುವಿನ ತಿಕ್ಕಾಟ ತಾರಕಕ್ಕೇರಿದೆ. ಈ ವಿಚಾರವಾಗಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು (Karnataka Politics) ನಡೆದಿವೆ. ಕಳೆದ ಬಿಜೆಪಿ ಸರ್ಕಾರವನ್ನು 40 ಪರ್ಸೆಂಟ್‌ ಕಮಿಷನ್‌ ಕೇಳುತ್ತಿದೆ ಎಂದು ಆರೋಪಿಸಿದ್ದ ಗುತ್ತಿಗೆದಾರರ ಸಂಘದವರು (Contractors Association) ಈಗ ಬಾಕಿ ಬಿಲ್‌ ಪಾವತಿಗಾಗಿ ಬಿಜೆಪಿಯ ಸಹಾಯವನ್ನು ಕೇಳಿದ್ದಾರೆ. ಅಲ್ಲದೆ, ಈಗಾಗಲೇ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ವಿರುದ್ಧ 15 ಪರ್ಸೆಂಟ್‌ ಕಮಿಷನ್‌ ಕೇಳಿದ್ದಾರೆಂದು ರಾಜ್ಯಪಾಲರಿಗೂ (Governor of Karnataka) ದೂರನ್ನು ಸಲ್ಲಿಸಲಾಗಿದೆ. ಈ ನಡುವೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (Karnataka State Contractors Association) ಅಧ್ಯಕ್ಷ ಕೆಂಪಣ್ಣ ಶುಕ್ರವಾರ (ಆಗಸ್ಟ್‌ 11) ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಇನ್ನು ಬಿಜೆಪಿ ಈ ವಿಷಯವನ್ನು ರಾಷ್ಟ್ರಮಟ್ಟಕ್ಕೆ ತೆಗೆದುಕೊಂಡು ಹೋಗುವ ಪ್ಲ್ಯಾನ್‌ ಹಾಕಿಕೊಂಡಿದೆ. ಗುತ್ತಿಗೆದಾರರ ಸಂಘದವರನ್ನು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲು ಯಾರು ಕರೆಯುತ್ತಿದ್ದಾರೆ? ಇದರ ಹಿಂದೆ ಯಾರು ಇದ್ದಾರೆ ಎಂಬುದು ನನಗೆ ಗೊತ್ತು ಎಂದು ‌ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಬಿಬಿಎಂಪಿ ಗುತ್ತಿಗೆದಾರರು ನಿರ್ವಹಿಸಿರುವ ಕಾಮಗಾರಿಗಳ ಕುರಿತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರು ಸಂಶಯ ವ್ಯಕ್ತಪಡಿಸಿ ಹಣ ಪಾವತಿಯನ್ನು ತಡೆಹಿಡಿದಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧದ ತಮ್ಮ ಹೋರಾಟಕ್ಕೆ ಕೈ ಜೋಡಿಸಿ ಎಂದು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ನೇತೃತ್ವದ ನಿಯೋಗದವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ (Former CM Basavaraj Bommai) ಹಾಗೂ ಮಾಜಿ ಸಚಿವ ಆರ್.‌ ಅಶೋಕ್‌ (Former minister R Ashok) ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: No Confidence Motion: ಪ್ರತಿಪಕ್ಷಗಳಿಂದ ನೋ ಬಾಲ್‌, ನಮ್ಮಿಂದ ಸೆಂಚುರಿ ಮೇಲೆ ಸೆಂಚುರಿ; ಕುಟುಕಿದ ಮೋದಿ

ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಲವಾರು ಕಾಮಗಾರಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರು(Bruhat Bengaluru Mahanagara Palike (BBMP) Contractor) ತಮ್ಮ ಸಮ್ಮುಖದಲ್ಲಿ ನೆರವೇರಿಸಿದ್ದಾರೆ. ಆದರೆ, ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್‌ ಅವರು, ಕಾಮಗಾರಿ ಬಗ್ಗೆ ಸಂಶಯ ವ್ಯಕ್ತಪಡಿಸಿ ತನಿಖಾ ತಂಡವನ್ನು ರಚಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಆದರೆ, ಈ ತನಿಖಾ ಸಂಸ್ಥೆಗಳು ಪ್ರತಿಯೊಂದು ಕಾಮಗಾರಿಗಳನ್ನು ಪರಿಶೀಲಿಸಿ ವರದಿ ನೀಡುವುದು ತುಂಬಾ ತಡವಾಗುತ್ತದೆ. ಈಗಾಗಲೇ ಪಾಲಿಕೆಯಲ್ಲಿ ಹಣ ಪಾವತಿ ವಿಳಂಬವಾಗಿ ಗುತ್ತಿಗೆದಾರರ ಪರಿಸ್ಥಿತಿ ಸಂಕಷ್ಟಕ್ಕೆ ತುತ್ತಾಗಿದೆ. ಹಲವಾರು ಗುತ್ತಿಗೆದಾರರು ಈಗಾಗಲೇ ದಯಾಮರಣ ಪತ್ರವನ್ನು ರಾಷ್ಟ್ರಪತಿಗೆ ಸಲ್ಲಿಸಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನು ತನಿಖಾ ತಂಡದವರು ತನಿಖೆ ನಡೆಸಿ ವರದಿ ನೀಡಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ. ಈಗಾಗಲೇ ಪೂರ್ಣಗೊಳಿಸಿರುವ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಎಂದು ಡಿಸಿಎಂ ಸಹಿತ ಸಿಎಂಗೆ ಮನವಿ ಮಾಡಿದ್ದೇವೆ. ಆದರೂ ಪಾವತಿ ಮಾಡಿಲ್ಲ. ನಮ್ಮ ನ್ಯಾಯ ಸಮ್ಮತ ಕೋರಿಕೆಗೆ ಸಹಕಾರವನ್ನು ನೀಡಿ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಕೋರಿದ್ದಾರೆ. ಬುಧವಾರವಷ್ಟೇ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ, ಶಾಸಕ ಅಶ್ವತ್ಥನಾರಾಯಣ್ ಅವರನ್ನು ಭೇಟಿಯಾಗಿದ್ದ ನಿಯೋಗ ಸಹಕಾರ ಕೋರಿತ್ತು. ಅಲ್ಲದೆ, ಸಚಿವರಾಗಿರುವ ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿತ್ತು.

ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಬಿಜೆಪಿ ತಂತ್ರ

ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲಿನ‌ 15 ಪರ್ಸೆಂಟ್ ಕಮಿಷನ್ ಬಗ್ಗೆ‌ ದೆಹಲಿಯಲ್ಲಿ ಪ್ರಸ್ತಾಪಿಸಿ, ಕಾಂಗ್ರೆಸ್‌ಗೆ ದೊಡ್ಡ ಮುಜುಗರ ತರಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಸಮಸ್ಯೆ ಬಗೆಹರಿಸುತ್ತೇವೆ: ಆರ್‌. ಅಶೋಕ್‌

ಗುತ್ತಿಗೆದಾರರು ಸಮಸ್ಯೆಯನ್ನು ಆಲಿಸಿದ ಮಾಜಿ ಸಚಿವ ಆರ್.‌ ಅಶೋಕ್‌, ನಿಮ್ಮ ಸಮಸ್ಯೆಗಳನ್ನು ನಾವು ಸರ್ಕಾರಕ್ಕೆ ತಿಳಿಸುತ್ತೇವೆ. ನಿಮ್ಮ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಮ್ಮ ಉದ್ದೇಶ ಬೆಂಗಳೂರಿನ ಕೆಲಸ ನಿಲ್ಲಬಾರದು. ಪಾರ್ಕ್ ಕ್ಲೀನಿಂಗ್, ಕಸ‌ ಎತ್ತುವುದು ಯಾವುದೂ ‌ನಿಲ್ಲಬಾರದು. ಕಾಂಗ್ರೆಸ್‌ನವರು ‌ಒಂದು ರೂಪಾಯಿ ಹಣ ತಗೊಳ್ಳಲ್ಲ ಅಂತ ಬಂದರು. ಎರಡು ತಿಂಗಳಿಂದ ಯಾವುದೇ ಪ್ಲ್ಯಾನ್ ಮಂಜೂರು ಆಗಿಲ್ಲ.26 ಕಂಡಿಷನ್ ಹಾಕಿದ್ದಾರೆ. ಅದೆಲ್ಲಾ ಪೂರೈಸಬೇಕಾದ್ರೆ 26 ವರ್ಷ ಬೇಕಾಗುತ್ತದೇನೋ ಎಂದು ಕುಟುಕಿದರು.

ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಟ್ ಮಾಡಲು ಹೊರಟಿದ್ದಾರೆ

3 ವರ್ಷದ ಹಿಂದೆ ಕಳೆ ಕಿತ್ತಿರುವುದನ್ನು ಚೆಕ್ ಮಾಡಲು ಹೊರಟಿದ್ದಾರೆ. ಆದರೆ, ಅಲ್ಲಿಂದ ಇಲ್ಲಿಯವರೆಗೆ 30 ಸಲ ಕಳೆ ಬಂದಿರುತ್ತದೆ. ಕಿತ್ತಿರುತ್ತಾರೆ. ಅಂದ್ರೆ ದಾಖಲೆ ಯಾವುದಕ್ಕೂ ಸಿಗಬಾರದು. ದಾಖಲೆ ಇಲ್ಲ‌‌ ಅಂತ ಬಿಲ್ ಕೊಡುವುದಿಲ್ಲ. ನಾನು ನಾಲ್ಕು ಸಾರಿ ಬೆಂಗಳೂರು ಉಸ್ತುವಾರಿ ಆಗಿದ್ದೆ. ಆದ್ರೆ ಹೀಗೆ ಯಾವತ್ತೂ ಮಾಡಿಲ್ಲ. ಅವರು ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಟ್ ಮಾಡಲು ಹೊರಟಿದ್ದಾರೆ. ಬಿಜೆಪಿ‌ ಇದ್ದಾಗ ಪೇ ಸಿಎಂ ಅಂತ ಮಾಡಿದ್ರಿ. ಆದರೆ, ನೀವು ಈಗ ಮಾಡುತ್ತಿರುವುದು ಏನು? ಎಂದು ಆರ್.‌ ಅಶೋಕ್‌ ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಸರ್ಕಾರಕ್ಕೆ 11 ಪ್ರಶ್ನೆ ಹಾಕಿದ ಮಾಜಿ ಸಚಿವ ಅಶೋಕ್

ಇದೇ ವೇಳೆ ಕಾಂಗ್ರೆಸ್‌ ಸರ್ಕಾರಕ್ಕೆ ಮಾಜಿ ಸಚಿವ ಆರ್‌. ಅಶೋಕ್‌ 11 ಪ್ರಶ್ನೆಗಳನ್ನು ಕೇಳಿದ್ದಾರೆ.

  • ನಮ್ಮ ಮೇಲೆ 40% ಕಮಿಷನ್‌ ಆರೋಪ ಮಾಡಿದಿರಿ. ಈಗ ನಿಮ್ಮ ಮೇಲೆ 15 ಪರ್ಸೆಂಟ್‌ ಕಮಿಷನ್‌ ಆರೋಪ ಬಂದಿದೆ. ಇದಕ್ಕೆ ನಿಮ್ಮ ಉತ್ತರ ಏನು?
  • ನೀವು ಗುತ್ತಿಗೆದಾರರ ಬಳಿ 15 ಪರ್ಸೆಂಟ್‌ ಕಮಿಷನ್‌ ಕೇಳಿಲ್ಲ ಎಂದರೆ, ಅಜ್ಜಯ್ಯನ ಮೇಲೆ ಪ್ರಮಾಣ ಮಾಡಲು ಅವರು ಹಾಕಿದ ಸವಾಲನ್ನು ಏಕೆ ಒಪ್ಪಿಕೊಂಡಿಲ್ಲ?
  • ಕಮಿಷನ್‌ ದಂಧೆ ಶುರು ಮಾಡಿರೋದು ಲೋಕಸಭೆ ಫಂಡ್‌ ಸಂಗ್ರಹಕ್ಕಾ?
  • ಗುತ್ತಿಗೆದಾರರ ಹಿತಾಸಕ್ತಿ ಕಾಪಾಡುತ್ತೇವೆಂದು ಅಧಿಕಾರ ಹಿಡಿದಿರುವ ನೀವು ಈಗ ಅವರನ್ನು ಏಕೆ ಕಡೆಗಣನೆ ಮಾಡುತ್ತಿದ್ದೀರಿ?
  • ಬಿಬಿಎಂಪಿಯಲ್ಲಿ 2019-2023ರವರೆಗಿನ ಕಾಮಗಾರಿಗಳ ತನಿಖೆಯನ್ನಷ್ಟೇ ಏಕೆ ಮಾಡುತ್ತೀರಿ? 2013ರದ್ದೂ ಮಾಡಬಹುದಲ್ಲವೇ?
  • ಗುತ್ತಿಗೆದಾರರು ಕಳ್ಳರಾದರೆ, 50 ವರ್ಷ ರಾಜ್ಯವನ್ನಾಳಿದ ಕಾಂಗ್ರೆಸ್‌ ಬಳುವಳಿಗರಾ ಇವರು?
  • ಗುತ್ತಿಗೆದಾರರು ಕಾಂಗಾರಿ ಸ್ಥಗಿತಗೊಳಿಸಿದರೆ ನಿಮ್ಮ ಬ್ರಾಂಡ್‌ ಬೆಂಗಳೂರು ಕಥೆ ಏನು?
  • 300 ಜನ ಗುತ್ತಿಗೆದಾರರು ದಯಾ ಮರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್‌ ಉತ್ತರ ಏನು?
  • ದೆಹಲಿಯಲ್ಲಿ ಕಾಂಗ್ರೆಸ್‌ ಮಂತ್ರಿಗಳ ಸಭೆ ಕರೆದು ಚರ್ಚೆ ಮಾಡಿದ್ದು ಲೋಕಸಭೆ ಸೀಟ್‌ ಗೆಲ್ಲೋಕೋ? ಸೂಟ್‌ಕೇಸ್‌ ತುಂಬಿಸೋಕೋ?
  • ಮಾನ್ಯ ಡಿ.ಕೆ. ಶಿವಕುಮಾರ್‌ ಅವರೇ ನಿಮ್ಮದು ಬ್ರಾಂಡ್‌ ಬೆಂಗಳೂರೋ ಅಥವಾ ಬ್ಲಾಕ್‌ ಬೆಂಗಳೂರೋ?
  • ಸಿಎಂ ಹಣ ಬಿಡುಗಡೆ ಮಾಡಿದರೆ ಡಿಸಿಎಂ ತಡೆ ಹಿಡಿದಿದ್ದಾರೆ. ಹಾಗಾದರೆ ಹಣ ಬಿಡುಗಡೆ ಮಾಡಲು ಸಿಎಂಗೆ ವೇಣುಗೋಪಾಲ್‌ ಸೂಚನೆ ನೀಡಿದರೆ, ಸುರ್ಜೇವಾಲ್‌ ತಡೆ ಹಿಡಿಯಲು ಡಿಸಿಎಂಗೆ ಸೂಚನೆ ನೀಡಿದರಾ?

ಡೆಲ್ಲಿಗೆ ಯಾರು ಕರಿಯುತ್ತಾ ಇದ್ದಾರೆ ಅಂತ ಗೊತ್ತಿದೆ: ಡಿಸಿಎಂ ಡಿ‌.ಕೆ. ಶಿವಕುಮಾರ್

ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ‌.ಕೆ. ಶಿವಕುಮಾರ್, ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ ಹೇಳಿದ್ದೇವೆ. ಕೆಂಪಣ್ಣ ದೂರು ಕೊಟ್ಟಿದ್ದಾರೆ. ಅವರಿಗೆ ನ್ಯಾಯ ಒದಗಿಸಬೇಕು. ಕೆಲಸಕ್ಕೆ ಮತ್ತು ಜನರಿಗೆ ನ್ಯಾಯ ಒದಗಿಸಬೇಕು. ಸರ್ಕಾರಕ್ಕೆ ನ್ಯಾಯ ಒದಗಿಸಬೇಕು. ಪ್ರಚಾರಕ್ಕೆ ಯಾರು ಬೇಕಾದರೂ ಹೋಗಲಿ. ಡೆಲ್ಲಿಗೆ ಯಾರು ಕರೆಯುತ್ತಿದ್ದಾರೆ ಅಂತ ನನಗೆ ಗೊತ್ತಿದೆ. ದೆಹಲಿಗೆ ಬಂದು ಸ್ಟೇಟ್‌ಮೆಂಟ್ ಕೊಡಿ ಅಂತ ಕರೆಯುತ್ತಿದ್ದಾರೆ. ಪ್ರೆಸ್ ಮುಂದೆ ಯಾರು ಕಳಿಸುತ್ತಿದ್ದಾರೆ ಅಂತ ಎಲ್ಲವೂ ನನಗೆ ಗೊತ್ತಿದೆ. ನಾವು ತನಿಖೆಗೆ ಆರ್ಡರ್ ಮಾಡಿದ್ದೇವೆ. ಅವರು ಮಾಡಿರುವ ಕಾಮಗಾರಿ ಪ್ರೂವ್ ಮಾಡಲಿ. ಯಾರೆಲ್ಲ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆಯೋ ಅವರಿಗೆಲ್ಲ ನ್ಯಾಯ ಕೊಡಿಸುವ ಕೆಲಸವನ್ನು ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Cabinet Meeting : ಲೋಕಾಯುಕ್ತ ಕೈಯಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ; ಸಂಪುಟ ಒಪ್ಪಿಗೆ

ಶುಕ್ರವಾರ ಸುದ್ದಿಗೋಷ್ಠಿ ಕರೆದ ಕೆಂಪಣ್ಣ

ಬಾಕಿ ಬಿಲ್ ಪಾವತಿ ವಿಚಾರದಲ್ಲಿ ಸರ್ಕಾರ ವರ್ಸಸ್ ಗುತ್ತಿಗೆದಾರರು ಎಂಬಂತೆ ಆಗಿದ್ದು, ಕಳೆದ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದ ಕರ್ನಾಟಕ ಸ್ಟೇಟ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ ಶುಕ್ರವಾರ ಸುದ್ದಿಗೋಷ್ಠಿ ಕರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Karnataka CM: ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಪಂಚ ಪೀಠದಿಂದ ಬೇಡಿಕೆ ಮಂಡನೆಯಾಗಿದೆ. ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

VISTARANEWS.COM


on

cm siddaramaiah karnataka cm
Koo

ಚಿಕ್ಕೋಡಿ: ಡಿಕೆ ಶಿವಕುಮಾರ್‌ (DK Shivakumar) ಅವರನ್ನು ಸಿಎಂ (Karnataka CM) ಮಾಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಕೆಶಿ ಸಮ್ಮುಖದಲ್ಲಿಯೇ ನಿನ್ನೆ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ಡಿಮಾಂಡ್‌ ಇಟ್ಟಿದ್ದರು. ಇದೀಗ ಲಿಂಗಾಯತ (Lingayat) ಸ್ವಾಮೀಜಿಗಳು, ಲಿಂಗಾಯತ ಸಿಎಂ ಬೇಡಿಕೆ ಮಂಡಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಪಂಚ ಪೀಠದಿಂದ ಬೇಡಿಕೆ ಮಂಡನೆಯಾಗಿದೆ. ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ. ನಿನ್ನೆ ಚಂದ್ರಶೇಖರ ಸ್ವಾಮೀಜಿ ಅವರು ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಹೇಳಿಕೆ ನೀಡಿದ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.

ಆಯಾ ಸಮುದಾಯಗಳ ಸ್ವಾಮೀಜಿಗಳ ಮೂಲಕವೇ ಲಿಂಗಾಯತ ಮುಖ್ಯಮಂತ್ರಿಗೆ ಒತ್ತಡ ಹಾಕಿಸುವ ಪ್ರಯತ್ನ ಮುಂದುವರಿದಿದೆ. ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರುಗಳು ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನು ಹೆಚ್ಚುವರಿ ಮಾಡಿದರೆ ಲಿಂಗಾಯತ ಮಂತ್ರಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದಿದ್ದಾರೆ.

ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ. ಒಂದು ವೇಳೆ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಒಡಂಬಡಿಕೆ ಆಗಿದ್ದರೆ ಒಡಂಬಡಿಕೆಯ ಪ್ರಕಾರ ನಡೆದುಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ಡಿಕೆಶಿ ಸಿಎಂ ಮಾಡಿ: ಚಂದ್ರಶೇಖರ ಸ್ವಾಮೀಜಿ

ಡಿಕೆ ಶಿವಕುಮಾರ್ (DK Shivakumar) ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದೆ ವೇದಿಕೆಯ ಮೇಲೆಯೇ ಬೇಡಿಕೆ ಇಟ್ಟ ಪ್ರಸಂಗ ಕೆಂಪೇಗೌಡ ಜಯಂತಿ (Kempegowda Jayanthi) ಕಾರ್ಯಕ್ರಮದಲ್ಲಿ ನಡೆಯಿತು. ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Chandrashekhara swamiji) ಅವರು ಸಿದ್ದರಾಮಯ್ಯ ಅವರಿಗೆ ವೇದಿಕೆಯಲ್ಲೇ ಬಹಿರಂಗವಾಗಿ ಈ ಬೇಡಿಕೆಯನ್ನು ಇಟ್ಟಿದ್ದಾರೆ.

ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿಕೆ ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಆಗ್ರಹಿಸಿದರು.

ಇದು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಇದು ಆಗಲಿದೆ, ಇಲ್ಲಾಂದ್ರೆ ಆಗಲ್ಲ. ಹಾಗಾಗಿ ದಯವಿಟ್ಟು ಡಿಕೆಶಿಯನ್ನು ಸಿಎಂ ಆಗಿ ಮಾಡಿ ಎಂದು ಮನವಿ ಮಾಡುತ್ತೇನೆ ಎಂದು ವೇದಿಕೆಯಲ್ಲಿ ಕೇಳಿಕೊಂಡರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಸಚಿವರು ಕೂಡಾ ಉಪಸ್ಥಿತರಿದ್ದರು. ಸ್ವಾಮೀಜಿ ನೀಡಿದ ಈ ಹೇಳಿಕೆಯನ್ನು ಸಭಿಕರಲ್ಲಿದ್ದ ಡಿಕೆ ಶಿವಕುಮಾರ್ ಬೆಂಬಲಿಗರು ಚಪ್ಪಾಳೆ ಶಿಳ್ಳೆಗಳ ಮೂಲಕ ಸ್ವಾಗತಿಸಿದರು.

ಸ್ವಾಮೀಜಿ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆಶಿ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. “ನಮ್ಮದು ಹೈಕಮಾಂಡ್ ಸಂಸ್ಕೃತಿಯ ಪಕ್ಷ. ಹೈಕಮಾಂಡ್ ನಿರ್ಧಾರವೇ ಅಂತಿಮ” ಎಂದು ಹೇಳಿದರು. ಈ ಮೂಲಕ, ಸಿಎಂ ಸ್ಥಾನ ಅಷ್ಟು ಸುಲಭವಿಲ್ಲ ಎಂಬ ಸಂದೇಶ ರವಾನೆ ಮಾಡಿದರು. ಡಿಕೆಶಿ ಸಿಎಂ ಆಗೋದು ಹೈಕಮಾಂಡ್ ಕೈಯಲ್ಲಿ ಇದೆ ಅನ್ನುವುದನ್ನು ಸ್ಪಷ್ಟಪಡಿಸಿದರು.

ಇದನ್ನೂ ಓದಿ: HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

Continue Reading

ಬೆಂಗಳೂರು

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಸೇರಿ ಒಟ್ಟು 17 ಮಂದಿ ಜೈಲು ಸೇರಿದ್ದಾರೆ. ಈ ಪೈಕಿ ಪ್ರಕರಣದ 17ನೇ ಆರೋಪಿ ನಿಖಿಲ್‌ ನಾಯಕ್‌ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

By

Renukaswamy murder case 17th accused files bail plea
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy Murder) ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಬರ್ಬರ ಕೊಲೆಯಾದ ಬಳಿಕ ಪ್ರಕರಣದ ಆರೋಪಿಯೊಬ್ಬ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ 17ನೇ ಆರೋಪಿ ನಿಖಿಲ್ ನಾಯಕ್ ಶರಣಾಗಿದ್ದ.

ಒಟ್ಟಾರೆ 17 ಆರೋಪಿಗಳ ಪೈಕಿ ನಿಖಿಲ್‌ ನಾಯಕ್‌ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್‌ನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬನ್ನೇರುಘಟ್ಟ ರಸ್ತೆ ಕೆಂಬತ್ತಹಳ್ಳಿ ನಿವಾಸಿ ನಿಖಿಲ್ ನಾಯಕ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ರೇಣುಕಾಸ್ವಾಮಿ ಕೊಲೆ ಬಳಿಕ ಪಟ್ಟಣಗೆರೆ ಶೆಡ್‌ನಿಂದ ಮೃತದೇಹವನ್ನು ಸಾಗಿಸಿದ್ದ ಆರೋಪವಿದೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Renukaswamy murder case 17th accused files bail plea
ಕೊಲೆಯಾದ ರೇಣುಕಾಸ್ವಾಮಿ ಹಾಗೂ ಕೊಲೆ ಕೇಸ್‌ನಲ್ಲಿ ಬಂಧಿತನಾಗಿರುವ ನಿಖಿಲ್‌ ನಾಯಕ್

ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ್ದ ನಿಖಿಲ್‌ ನಾಯಕ್‌

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಅದರಲ್ಲಿ ನಿಖಿಲ್‌ ನಾಯಕ್‌ ಸೇರಿ ರವಿಶಂಕರ್, ಕಾರ್ತಿಕ್, ಕೇಶವ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದರು.

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.

ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಇದೀಗ ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಇದೀಗ ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದಾರೆ. ʻʻಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು. ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾʼʼಎಂದು ಬರೆದುಕೊಂಡಿದ್ದಾರೆ. ಇದೀಗ ಅವರ ಪೋಸ್ಟ್‌ ವೈರಲ್‌ ಆಗುತ್ತಿದೆ.

ʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದಾರೆ.

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್‌ (Actor Darshan) ಹಾಗೂ ಸಹಚರರು ಜೈಲುವಾಸದಲ್ಲಿದ್ದಾರೆ. ಇತ್ತ ನಿತ್ಯವೂ ಅಭಿಮಾನಿಗಳು ದರ್ಶನ್‌ (Darshan Fans) ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸುತ್ತಿದ್ದು, ಪೊಲೀಸರಿಗೆ ತಲೆ ಬಿಸಿಯಾಗಿದೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Haveri Accident: ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Haveri Accident: ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದ 13 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

VISTARANEWS.COM


on

Haveri Accident
Koo

ಬೆಂಗಳೂರು: ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Haveri Accident) ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಶವಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು, ಗ್ರಾಮಸ್ಥರು ಆಗ್ರಹಿಸಿದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಶುಕ್ರವಾರ ಮುಂಜಾನೆ ಭೀಕರ ಅಪಘಾತ ನಡೆದು 13 ಮಂದಿ ಸಾವನ್ನಪ್ಪಿದ್ದರೂ ಜಿಲ್ಲಾಸ್ಪತ್ರೆಗೆ ಯಾರೂ ಜನಪ್ರತಿನಿಧಿಗಳು ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸರ್ಕಾರದಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಪರಿಹಾರ ನೀಡದಿದ್ದರೆ ಶವಾಗಾರದಿಂದ ಶವ ತೆಗೆದುಕೊಂಡು ಹೋಗಲ್ಲ ಎಂದು ಕಿಡಿಕಾರಿ, ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಮೊದಲಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪವನ್ನಷ್ಟೇ ತಿಳಿಸಿದ್ದರು. ಬಳಿಕ ಪರಿಹಾರ ಘೋಷಣೆ ಮಾಡಿದ್ದಾರೆ.

ಸಿಎಂ ಸಂತಾಪ

ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಸಚಿವ ಶಿವಾನಂದ ಪಾಟೀಲ್‌ ವೈಯಕ್ತಿಕ ನೆರವು; ತಲಾ 50 ಸಾವಿರ ಪರಿಹಾರ

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ವೈಯಕ್ತಿಕವಾಗಿ ತಲಾ 50 ಸಾವಿರ ಪರಿಹಾರ ನೀಡಿದ್ದಾರೆ. 13 ಜನರಿಗೆ 6.50 ಲಕ್ಷ ವೈಯಕ್ತಿಕ ಪರಿಹಾರ ನೀಡಿದ್ದಾರೆ. ಹಾವೇರಿ ಜಿಲ್ಲಾ ಕೈ ಮುಖಂಡರ ಮೂಲಕ ಪರಿಹಾರದ ಹಣ ಹಸ್ತಾಂತರ ಮಾಡಿದ್ದಾರೆ.

ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

ಹಾವೇರಿ: ಬ್ಯಾಡಗಿಯಲ್ಲಿ (Haveri Accident) ಇಂದು ಮುಂಜಾನೆ 13 ಮಂದಿಯನ್ನು ಬಲಿ ಪಡೆದುಕೊಂಡ ಅಪಘಾತ (Road Accident) ಸಂಭವಿಸಿದ ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ವಾಹನದ ಪೂಜೆಗಾಗಿ (Vehicle Puja) ಕುಟುಂಬ ತೆರಳಿದ್ದು, ಪೂಜೆ ಮುಗಿಸಿಕೊಂಡು ಮರಳಿ ಬರುತ್ತಿತ್ತು.

ಕಳೆದ 15 ದಿನದ ಹಿಂದಷ್ಟೇ ಹೊಸ ಸೆಕೆಂಡ್ ಹ್ಯಾಂಡ್ ಟೆಂಪೊ ಟ್ರಾಕ್ಸ್‌ ವಾಹನ ಖರೀದಿ ಮಾಡಿದ್ದ ಕುಟುಂಬ, ವಾಹನಕ್ಕೆ ಪೂಜೆ ಮಾಡಿಸಲು ಮನೆ ದೇವರು ಯಲ್ಲಮ್ಮ ದೇವಾಲಯಕ್ಕೆ ತೆರಳಿದ್ದರು. ನಾಗೇಶ್‌ ಕುಟುಂಬಸ್ಥರು ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಮ್ಮ ದೇವಾಲಯಕ್ಕೆ ಸೋಮವಾರ ರಾತ್ರಿ ತೆರಳಿದ್ದರು. ವಾಹನಕ್ಕೆ ಪೂಜೆ ಮಾಡಿಸಿಕೊಂಡು ಮರಳುತ್ತಿದ್ದಾಗ ಈ ಘೋರ ದುರಂತ ಸಂಭವಿಸಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು.

ಟಿಟಿ ವಾಹನ ಖರೀದಿಸಿ ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದರು. ಸೋಮವಾರದಿಂದ ದೇವರ ದರ್ಶನಕ್ಕೆ ಹೊರಟಿದ್ದ ಆದರ್ಶ, ನಿನ್ನೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ಟೆಂಪಲ್‌ನಲ್ಲಿ ವಾಹನ ಪೂಜೆ ಮಾಡಿಸಿ ಪೂಜೆ ಪೋಟೋಗಳನ್ನ ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದರು. ಇಂದು ವಾಹನ ಛಿದ್ರಛಿದ್ರವಾಗಿದೆಯಲ್ಲದೆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡಿದೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ದುರ್ಘಟನೆ ನಡೆದಿದೆ. ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿ ನಂಬರ್ ಕೆಎ 51 ಡಿ3530ಗೆ ಟಿಟಿ ವಾಹನ ಸಂಖ್ಯೆ ಕೆಎ01 ಎಬಿ4760 ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಕಾಣದೆ ಟಿಟಿ ಚಾಲಕ ಆದರ್ಶ ಇದಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಬಹುಶಃ ಲಾರಿ ಕಾಣಿಸಿರಲಾರದು. ಬೆಳಗಿನ ಜಾವ ನಿದ್ರೆಯ ಮಂಪರಿನಲ್ಲಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆದರು. ಸ್ಥಳಕ್ಕೆ ಹಾವೇರಿ ಎಸ್‌ಪಿ ಅಂಶುಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ | Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದಿಂದ 17 ಜನ ಪ್ರಯಾಣ ಟಿಟಿ ವಾಹನದಲ್ಲಿ ಮಾಡುತ್ತಿದ್ದರು. 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿರುವ ಗಾಯಾಳುಗಳು.

Continue Reading

ಬೆಂಗಳೂರು

Convergence Foundation : ಕನ್ವರ್ಜನ್ಸ್ ಫೌಂಡೇಷನ್ ಸಹಯೋಗದೊಂದಿಗೆ ‘ವ್ಯವಸ್ಥಿತ ಪರಿಣಾಮ ಸೃಷ್ಟಿ’ ಕುರಿತು ಸಂವಾದ

Convergence Foundation:’ವ್ಯವಸ್ಥಿತ ಪರಿಣಾಮಕ್ಕಾಗಿ ಹೂಡಿಕೆಯ ಅವಕಾಶಗಳನ್ನು ಮುಕ್ತಗೊಳಿಸುವ’ ಕುರಿತು ಕನ್ವರ್ಜನ್ಸ್ ಫೌಂಡೇಷನ್‌ನ ಕಾರ್ಯತಂತ್ರ ಮತ್ತು ಹೂಡಿಕೆ ವಿಭಾಗದ ಮುಖ್ಯಸ್ಥ ಪ್ರವೀಣ್ ಖಂಘ್ತಾ ಅವರು ನಡೆಸಿದ ಸಂವಾದ ಗೋಷ್ಠಿಯು ಈ ಸಮ್ಮೇಳನದ ಪ್ರಮುಖ ಅಂಶವಾಗಿತ್ತು.

VISTARANEWS.COM


on

Convergence Foundation
Koo

ಬೆಂಗಳೂರು: ಕನ್ವರ್ಜನ್ಸ್ ಫೌಂಡೇಷನ್ (Convergence Foundation ), ರೋಹಿಣಿ ನಿಲೇಕಣಿ ಫಿಲಾಂತ್ರೋಪೀಸ್, ಸೆಂಟರ್ ಫಾರ್ ಎಕ್ಸ್‌ಪೋನೆನ್ಷಿಯಲ್ ಚೇಂಜ್ ಮತ್ತು ಇಂಡಿಯಾ ಇಂಪ್ಯಾಕ್ಟ್ ಶೆರ್ಪಾಸ್ ಸಹಯೋಗದಲ್ಲಿ, ‘ವ್ಯವಸ್ಥಿತ ಪರಿಣಾಮ ಸೃಷ್ಟಿ’ ಕುರಿತು ಬೆಂಗಳೂರಿನಲ್ಲಿ ಸಮ್ಮೇಳನ ನಡೆಯಿತು. ಅಭಿವೃದ್ಧಿ ಸಾಧಕರು, ಚಿಂತಕರು ವ್ಯವಸ್ಥೆಗಳ ಬದಲಾವಣೆಯ ನಡವಳಿಕೆಗಳು ಮತ್ತು ಸಶಕ್ತಗೊಳಿಸುವಿಕೆಗಳ ಕುರಿತು ಈ ಸಂವಾದದಲ್ಲಿ ಮಾತನಾಡಿದರು.

ರೋಹಿಣಿ ನಿಲೇಕಣಿ ಫಿಲಾಂತ್ರೋಪೀಸ್ ಅಧ್ಯಕ್ಷೆ ರೋಹಿಣಿ ನಿಲೇಕಣಿ ಅವರು ಮಾತನಾಡಿ, “ಎಲ್ಲರನ್ನೂ ಒಳಗೊಳ್ಳುವ ಮತ್ತು ಗಮನಾರ್ಹ ಬಗೆಯಲ್ಲಿ ಸಾಮಾಜಿಕ ಬದಲಾವಣೆ ಬಯಸುವ ಈ ದಶಕವು ಮಾನವ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ . ಭಯಪಡುವುದಕ್ಕಿಂತ ಭಿನ್ನವಾಗಿ ಉತ್ತಮ ಭವಿಷ್ಯ ಸೃಷ್ಟಿಸಲು ಉಜ್ವಲ ಅವಕಾಶಗಳನ್ನು ನಾವು ಹೊಂದಬೇಕು. ಸಮಾಜ, ಸರ್ಕಾರ ಮತ್ತು ಮಾರುಕಟ್ಟೆ ನಡುವಿನ ಘರ್ಷಣೆ ಕಡಿಮೆ ಮಾಡಲು ಮತ್ತು ಪ್ರತಿಯೊಂದರ ನೈಜ ಸಾಮರ್ಥ್ಯ ಪೂರ್ಣವಾಗಿ ಬಳಸಿಕೊಳ್ಳಲು ಬಂಡವಾಳವನ್ನು ಕಾರ್ಯತಂತ್ರವಾಗಿ ಮತ್ತು ತುರ್ತಾಗಿ ನಿಯೋಜಿಸಬೇಕಾಗಿದೆ. ಲೋಕಹಿತ ಬಯಸುವ ವ್ಯಕ್ತಿಗಳು ಮತ್ತು ಪ್ರತಿಷ್ಠಾನಗಳು ಈ ನಿಟ್ಟಿನಲ್ಲಿ ಮುಂದಡಿ ಇಡಬೇಕು. ನಾವೆಲ್ಲ ದೊಡ್ಡ ಮಟ್ಟದಲ್ಲಿ ಯೋಚಿಸೋಣ, ವ್ಯವಸ್ಥಿತ ಬದಲಾವಣೆಯಲ್ಲಿ ಹೂಡಿಕೆ ಮಾಡುವ ವ್ಯಕ್ತಿಗಳ ಜೊತೆ ಚೆನ್ನಾಗಿ ಕೆಲಸ ಮಾಡಲು ಪಣತೊಡೋಣ” ಎಂದರು.

‘ವ್ಯವಸ್ಥಿತ ಪರಿಣಾಮಕ್ಕಾಗಿ ಹೂಡಿಕೆಯ ಅವಕಾಶಗಳನ್ನು ಮುಕ್ತಗೊಳಿಸುವ’ ಕುರಿತು ಕನ್ವರ್ಜನ್ಸ್ ಫೌಂಡೇಷನ್‌ನ ಕಾರ್ಯತಂತ್ರ ಮತ್ತು ಹೂಡಿಕೆ ವಿಭಾಗದ ಮುಖ್ಯಸ್ಥ ಪ್ರವೀಣ್ ಖಂಘ್ತಾ ಅವರು ನಡೆಸಿದ ಸಂವಾದ ಗೋಷ್ಠಿಯು ಈ ಸಮ್ಮೇಳನದ ಪ್ರಮುಖ ಅಂಶವಾಗಿತ್ತು. ಗೋಷ್ಠಿಯಲ್ಲಿ ವೆಡ್ಡಿಸ್ ಫೌಂಡೇಷನ್‌ನ ಸಿಇಒ ಮುರುಗನ್ ವಾಸುದೇವನ್, ತಮಾರಾ ಲೈಸರ್ ಎಕ್ಸ್‌ಪೀರಿಯನ್ಸ್‌ನ ಸಿಇಒ ಮತ್ತು ನಿರ್ದೇಶಕಕಾದ ಶ್ರುತಿ ಶಿಬುಲಾಲ್, ಜನಾಗ್ರಹ ಸಿಇಒ ಶ್ರೀಕಾಂತ್ ವಿಶ್ವನಾಥನ್ ಮತ್ತು ಗಿವ್ ಇಂಡಿಯಾದ ಸಿಇಒ ಸುಮಿತ್ ತಯಲ್ ಅವರು ಪಾಲ್ಗೊಂಡಿದ್ದರು.

ಕನ್ವರ್ಜನ್ಸ್ ಫೌಂಡೇಷನ್‌ನ ಕಾರ್ಯನಿರ್ವಾಹಕ ಪಾಲುದಾರ ಬಿಕ್ರಮ ದೌಲೆತ್ ಸಿಂಗ್ ಮಾತನಾಡಿ, ʼವ್ಯವಸ್ಥಿತ ಪ್ರಭಾವಕ್ಕಾಗಿ ಹೂಡಿಕೆಯನ್ನು ಮುಕ್ತವಾಗಿ ಬಳಸುವ ತುರ್ತು ಅಗತ್ಯ ಒತ್ತಿಹೇಳುತ್ತಾ, “ವ್ಯವಸ್ಥೆ ಬದಲಾವಣೆ ವಿಧಾನವು ಪರಿವರ್ತಕ ಬದಲಾವಣೆಗೆ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದೆ. ಹೂಡಿಕೆಯ ಮೇಲೆ ಗರಿಷ್ಠ ಲಾಭ ಬಯಸುವ ದಾನಿಗಳು ಅಳೆಯಬಹುದಾದ ಮತ್ತು ಸುಸ್ಥಿರ ಫಲಿತಾಂಶಗಳನ್ನು ಸಾಧಿಸಲು ಸರ್ಕಾರಗಳ ಜೊತೆಗೆ ಸಹಕರಿಸುವ ಸಂಸ್ಥೆಗಳನ್ನು ಬೆಂಬಲಿಸಲು ಆದ್ಯತೆ ನೀಡಬೇಕು. ದಾನಿಗಳು ಮತ್ತು ವ್ಯವಸ್ಥೆಯ ಸಮನ್ವಯಕಾರರು ತಮ್ಮ ಸಾಮೂಹಿಕ ಪ್ರಭಾವವನ್ನು ಗರಿಷ್ಠಗೊಳಿಸಲು ಯಾವ ಪ್ರಯತ್ನಗಳನ್ನು ಮಾಡಬೇಕು ಎಂಬುದನ್ನು ಕಲಿಯಲು, ಪ್ರತಿಬಿಂಬಿಸಲು ಮತ್ತು ನಿರಂತರವಾಗಿ ಜೋಡಿಸಲು ಇದು ನಿರ್ಣಾಯಕವಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

ಪುಸ್ತಕ ಬಿಡುಗಡೆ

ಸಮ್ಮೇಳನದಲ್ಲಿ ಸಂಜಯ್ ಪುರೋಹಿತ್ ಅವರ ಪುಸ್ತಕ, ʼಥಿಂಕ್ ಬುಕ್‌ ಸರಣಿಯ ಮೂರನೇ ಕಂತು, ʼಥಿಂಕ್ ಸಸ್ಟೇನ್ʼ ಬಿಡುಗಡೆ ಮಾಡಲಾಯಿತು. ಈ ಪುಸ್ತಕವನ್ನು ರೋಹಿಣಿ ನಿಲೇಕಣಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಥಿಂಕ್ ಸ್ಕೇಲ್ ಮತ್ತು ಥಿಂಕ್ ಸ್ಪೀಡ್, ಥಿಂಕ್ ಸಸ್ಟೇನ್ ಪರಿಣಾಮಕಾರಿ ಪರಿವರ್ತನೆಗೆ ಕಾರಣವಾಗುವ ಬದಲಾವಣೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. ಈ ಥಿಂಕ್ ಬುಕ್‌ ಕೃತಿಗಳು ದೊಡ್ಡ ಪ್ರಮಾಣದಲ್ಲಿ ಪ್ರಭಾವ ಸಾಧಿಸಲು ನೆರವಾಗಲಿವೆ.

ಲೇಖಕ, ಸಿಇಒ ಮತ್ತು ಸೆಂಟರ್ ಫಾರ್ ಎಕ್ಸ್‌ಪೋನೆನ್ಷಿಯಲ್ ಚೇಂಜ್‌ನ ಮುಖ್ಯ ಮೇಲ್ವಿಚಾರಕ ಸಂಜಯ್ ಪುರೋಹಿತ್ ಅವರು ಸಮ್ಮೇಳನದಲ್ಲಿ ಮಾತನಾಡಿ “ಇದು ನವೀನ ಸ್ಥಳವಾಗಿದ್ದು, ಗಮನಾರ್ಹ ಬದಲಾವಣೆಯ ಪ್ರಯಾಣ ಕಾರ್ಯಗತಗೊಳಿಸಲು ವ್ಯವಸ್ಥೆಯ ಸಮನ್ವಯಕಾರರು, ವೈವಿಧ್ಯಮಯ ಸಶಕ್ತಗೊಳಿಸುವವರು ಮತ್ತು ಪ್ರಭಾವಶಾಲಿಗಳನ್ನು ಒಗ್ಗೂಡಿಸಲಿದೆ. ಈ ಬದಲಾವಣೆಯ ಈ ಅಲೆಗಳನ್ನು ಪ್ರೇರೇಪಿಸಲು ನಾವೆಲ್ಲರೂ ಒಗ್ಗೂಡಬೇಕಾಗಿದೆ ಎಂದು ಹೇಳಿದರು.

Continue Reading
Advertisement
cm siddaramaiah karnataka cm
ಕರ್ನಾಟಕ4 mins ago

Karnataka CM: ಒಕ್ಕಲಿಗ ಆಯ್ತು, ಈಗ ಲಿಂಗಾಯತ ಮುಖ್ಯಮಂತ್ರಿಗೆ ಪಂಚ ಪೀಠ ಶ್ರೀಗಳಿಂದ ಬೇಡಿಕೆ!

Ajinkya Rahane
ಕ್ರೀಡೆ27 mins ago

Ajinkya Rahane: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಅಜಿಂಕ್ಯ ರಹಾನೆ

BGauss RUV350
Latest39 mins ago

BGauss RUV350 : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಆರ್‌ಯುವಿ350 ಬಿಡುಗಡೆ ಮಾಡಿದ ಬಿಗಾಸ್

Renukaswamy murder case 17th accused files bail plea
ಬೆಂಗಳೂರು42 mins ago

Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Hina Khan diagnosed with breast cancer
ಸಿನಿಮಾ51 mins ago

Hina Khan: ಬಿಗ್ ಬಾಸ್ ಸ್ಪರ್ಧಿ, ʻಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈʼ ಧಾರಾವಾಹಿ ಖ್ಯಾತಿಯ ನಟಿಗೆ ಸ್ತನ ಕ್ಯಾನ್ಸರ್!

Haveri Accident
ಪ್ರಮುಖ ಸುದ್ದಿ52 mins ago

Haveri Accident: ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Convergence Foundation
ಬೆಂಗಳೂರು1 hour ago

Convergence Foundation : ಕನ್ವರ್ಜನ್ಸ್ ಫೌಂಡೇಷನ್ ಸಹಯೋಗದೊಂದಿಗೆ ‘ವ್ಯವಸ್ಥಿತ ಪರಿಣಾಮ ಸೃಷ್ಟಿ’ ಕುರಿತು ಸಂವಾದ

Renuka swamy Murder case actor darshan
ಕ್ರೈಂ1 hour ago

Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

IND Vs SA T20 WC Final
ಕ್ರೀಡೆ1 hour ago

IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

Hemant Soren
ದೇಶ1 hour ago

Hemant Soren: ಜಾಮೀನು ಮಂಜೂರು; ಹೇಮಂತ್‌ ಸೊರೆನ್‌ಗೆ ಬಿಗ್‌ ರಿಲೀಫ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು22 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌