Sridevi 60th Birth Anniversary: ಲೇಡಿ ಸೂಪರ್‌ ಸ್ಟಾರ್‌ ʻಶ್ರೀದೇವಿʼಗೆ 60ನೇ ಹುಟ್ಟುಹಬ್ಬ; ಗೂಗಲ್‌ ಡೂಡಲ್‌ ಗೌರವ! - Vistara News

ಬಾಲಿವುಡ್

Sridevi 60th Birth Anniversary: ಲೇಡಿ ಸೂಪರ್‌ ಸ್ಟಾರ್‌ ʻಶ್ರೀದೇವಿʼಗೆ 60ನೇ ಹುಟ್ಟುಹಬ್ಬ; ಗೂಗಲ್‌ ಡೂಡಲ್‌ ಗೌರವ!

Sridevi 60th Birth Anniversary: ಭಾರತದ ‘ಮೊದಲ ಮಹಿಳಾ ಸೂಪರ್‌ಸ್ಟಾರ್’ ಎಂದು ಬಿರುದು ಪಡೆದ ಶ್ರೀದೇವಿ 2018ರಲ್ಲಿ 54 ನೇ ವಯಸ್ಸಿನಲ್ಲಿ ದುಬೈನಲ್ಲಿ ನಿಧನರಾದರು.

VISTARANEWS.COM


on

Sridevi actress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಗಸ್ಟ್‌ 13 ಬಾಲಿವುಡ್‌ ನಟಿ ಶ್ರೀದೇವಿ (Sridevi 60th Birth Anniversary) ಅವರ ಜನುಮದಿನ. ನಮ್ಮ ನಡುವೆ ಅವರು ಬದುಕಿದ್ದಿದ್ದರೆ ಅವರಿಗೆ ಭರ್ತಿ 60 ವರ್ಷ ತುಂಬುತ್ತಿದ್ದವು. ಈ ವಿಶೇಷ ದಿನದಂದು ಗೂಗಲ್‌ ಡೂಡಲ್‌ ಮೂಲಕ ಗೌರವ ಸೂಚಿಸಿದೆ. ಪತಿ-ನಿರ್ಮಾಪಕ ಬೋನಿ ಕಪೂರ್ (sridevi husband) ಮತ್ತು ಪುತ್ರಿಯರಾದ ಜಾನ್ವಿ ಕಪೂರ್ (janhvikapoor) ಮತ್ತು ಖುಷಿ ಕಪೂರ್ ಹಳೆಯ ಫೋಟೊ ಶೇರ್‌ ಮಾಡಿಕೊಂಡು ಶ್ರೀದೇವಿ ಅವರನ್ನು ನೆನಪಿಸಿಕೊಂಡರು. ಭಾರತದ ‘ಮೊದಲ ಮಹಿಳಾ ಸೂಪರ್‌ಸ್ಟಾರ್’ ಎಂದು ಬಿರುದು ಪಡೆದ ಶ್ರೀದೇವಿ 2018ರಲ್ಲಿ ತಮ್ಮ 54 ನೇ ವಯಸ್ಸಿನಲ್ಲಿ ದುಬೈನಲ್ಲಿ ನಿಧನರಾದರು.

ಭಾರತದ ಮೊದಲ ಮಹಿಳಾ ಸೂಪರ್ ಸ್ಟಾರ್ (Sridevi 60th Birth Anniversary)

ಬಾಲಿವುಡ್ ಮೊದಲ ಮಹಿಳಾ ಸೂಪರ್ ಸ್ಟಾರ್ ಎಂತಲೇ ಖ್ಯಾತಿ ಪಡೆದ ಶ್ರೀದೇವಿ 1963 ಆಗಸ್ಟ್ 13ರಂದು ತಮಿಳುನಾಡಿನಲ್ಲಿ ಶ್ರೀ ಅಮ್ಮ ಯಂಗೇರ್ ಆಯಪ್ಪರ್ ಜನಿಸಿದರು. ಶ್ರೀದೇವಿ ನಾಲ್ಕನೇ ವಯಸ್ಸಿನಲ್ಲಿಯೇ ಬಾಲನಟಿಯಾಗಿ ಮಿಂಚಿದವರು. ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಶ್ರೀದೇವಿ ಅವರು ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಚಲನಚಿತ್ರೋದ್ಯಮಗಳಲ್ಲಿ ಕೂಡ ಖ್ಯಾತಿ ಪಡೆದರು.

ಸ್ಟಾರ್‌ ಹೀರೋಗಳಿದ್ದರೂ, ಅವರೆಲ್ಲರನ್ನೂ ಮೀರಿಸಿ ಬೆಳೆದ ಏಕೈಕ ನಟಿ. ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರಿಗಿಂತಲೂ ಹೆಚ್ಚು ಸಂಭಾವನೆ ಪಡೆದ ನಾಯಕಿ ಶ್ರೀದೇವಿ. ತಮಿಳಿನ ಕಂದನ್‌ ಕರುಣೈ ಅವರ ಮೊದಲ ಸಿನಿಮಾ. ನಟನೆಯ ಜತೆಗೆ ದಕ್ಷಿಣ ಭಾರತದ ಎಲ್ಲ ಭಾಷೆಗಳನ್ನೂ ಸುಲಲಿತವಾಗಿ ಮಾತನಾಡಲು ಕಲಿತರು. 1976ರಲ್ಲಿ ಪೂರ್ಣಪ್ರಮಾಣದ ನಾಯಕಿಯಾಗಿ ಕೆ ಬಾಲಚಂದರ್‌ ಅವರ ಮೂಂಡ್ರು ಮುಡಿಚು ಸಿನಿಮಾದಲ್ಲಿ ನಟಿಸಿದ ಶ್ರೀದೇವಿ ಮತ್ತೆ ಹಿಂದೆ ತಿರುಗಿ ನೋಡಲೇ ಇಲ್ಲ.. ಆ ಕಾಲದ ಸ್ಟಾರ್‌ ನಟರಾದ ಕಮಲ್‌ ಹಾಸನ್, ರಜಿನಿಕಾಂತ್‌, ಅಮಿತಾಬ್‌ ಬಚ್ಚನ್‌ ಅವರಂಥ ಮೇರು ಕಲಾವಿದರ ಜತೆ ನಟಿಸಿ ಸೈ ಎನಿಸಿಕೊಂಡರು. ಆ ಕಾರಣಕ್ಕೆ ಲೇಡಿ ಸೂಪರ್‌ಸ್ಟಾರ್‌ ಎಂಬ ಹೆಸರಿನಿಂದಲೂ ಅವರನ್ನು ಕರೆಯುವಂತಾಯಿತು.

ಇದನ್ನೂ ಓದಿ: Actress Sridevi : ಶ್ರೀದೇವಿಯನ್ನು ನೆನಪಿಸಿಕೊಂಡ ಕುಟುಂಬ; ನಿನಗಾಗಿ ಇಂದಿಗೂ ಹುಡುಕುವೆ ಎಂದ ಜಾಹ್ನವಿ

ಹೊಟೇಲ್‌ ಕೋಣೆಯಲ್ಲಿ ಶವವಾಗಿ ಪತ್ತೆ

2017ರಲ್ಲಿ ಹಿಂದಿಯಲ್ಲಿ ತೆರೆಗೆ ಬಂದ ಮಾಮ್‌ (MOM) ಚಿತ್ರವೇ ಅವರ ಕೊನೆಯ ಸಿನಿಮಾ (Sridevi 60th Birth Anniversary). 2018ರಲ್ಲಿ ಶಾರುಖ್‌ ಖಾನ್‌ ಜತೆಗೆ ಜೀರೋ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 2018ರ ಫೆಬ್ರವರಿ 24ರಂದು ದುಬೈನಲ್ಲಿ ನಟಿ ಶ್ರೀದೇವಿ ಅಕಾಲಿಕ ನಿಧನರಾಗುತ್ತಾರೆ. ಆಪ್ತರ ಮದುವೆ ಸಮಾರಂಭಕ್ಕೆ ಹೋದಾಗ ಮದುವೆ ಮುಗಿದ ಬಳಿಕ ತಂಗಿದ್ದ ಹೊಟೇಲ್‌ ಕೋಣೆಯಲ್ಲಿ ಶವವಾಗಿ ಪತ್ತೆಯಾಗುತ್ತಾರೆ. ಕೆಲವರು ಆತ್ಮಹತ್ಯೆ ಎಂದು ಬಿಂಬಿಸಿದರೆ, ಇನ್ನು ಕೆಲವರು ಇದು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದರು. ಹೃದಯಾಘಾತದಿಂದ ನಿಧನದ ಸುದ್ದಿ ಅಧಿಕೃತವಾಯಿತು. ಫೆಬ್ರವರಿ 28ರಂದು ಅಂತ್ಯ ಕ್ರಿಯೆ (sridevi death) ನೆರವೇರಿಸಲಾಯಿತು.

ಮೀಡಿಯಂನ 2022ರ ವರದಿಯ ಪ್ರಕಾರ, ಚಲನಚಿತ್ರ ನಿರ್ಮಾಪಕ ಸುನೀಲ್ ಸಿಂಗ್ ಶ್ರೀದೇವಿಯ ಸಾವನ್ನು ಕೊಲೆ ಎಂದು ಹೇಳಿದ್ದಾರೆ. ಆಕೆಯ ಸಾವಿನ ತನಿಖೆಗೆ ಒತ್ತಾಯಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದರು. ಒಮಾನ್‌ನಲ್ಲಿ ಶ್ರೀದೇವಿ ಹೆಸರಿನಲ್ಲಿ 240 ಕೋಟಿ ರೂ. ಮೌಲ್ಯದ ವಿಮಾ ಪಾಲಿಸಿ ಇದೆ ಎಂದು ಸುನೀಲ್ ಸಿಂಗ್ ಅವರ ವಕೀಲರು ಪ್ರತಿಪಾದಿಸಿದ್ದರು. ಸುನೀಲ್ ಸಿಂಗ್ ಅವರ ಮನವಿಯನ್ನು ತಿರಸ್ಕರಿಸಿತ್ತು ಸುಪ್ರೀಂ ಕೋರ್ಟ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Latest

Sonakshi Sinha: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

Sonakshi Sinha: ಇತ್ತೀಚೆಗಷ್ಟೇ ಜಹೀರ್ ಇಕ್ಬಾಲ್ ಜೊತೆ ಹೊಸ ಬದುಕಿಗೆ ಕಾಲಿಟ್ಟ ಸೋನಾಕ್ಷಿ ಸಿನ್ಹಾ ಈಗ ಪ್ರೆಗ್ನೆಂಟ್ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್ ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊ ತೆಗೆಯಲು ಪ್ರಯತ್ನಿಸಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Sonakshi Sinha
Koo

ನವದೆಹಲಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಇತ್ತೀಚೆಗಷ್ಟೇ ತಮ್ಮ ಪ್ರೇಮಿ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಹೊಸತರಲ್ಲೇ ನಟಿ ತಮ್ಮ ಪತಿಯ ಜೊತೆ ಆಸ್ಪತ್ರೆಯೊಂದರ ಹೊರಗೆ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಪಟ್ಟ ಪೋಟೊ, ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಾಗಾಗಿ ಆಕೆ ಗರ್ಭಿಣಿಯೇ ಎಂಬ ಸಂಶಯ ನೆಟ್ಟಿಗರಲ್ಲಿ ವ್ಯಕ್ತವಾಗಿದೆ.

ಮುಂಬೈನ ಲೀಲಾವತಿ ಆಸ್ಪತ್ರೆಯ ಹೊರಗೆ ನಟಿ ಸೋನಾಕ್ಷಿ ಅವರು ತಮ್ಮ ಪತಿ ಜಹೀರ್ ಅವರ ಜೊತೆ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ವೇಳೆ ಕೆಲವರು ಅವರನ್ನು ಪೋಟೊಗಳಲ್ಲಿ ಸೆರೆ ಹಿಡಿದಿದ್ದಾರೆ. ದಂಪತಿ ಪೋಟೊ ಕ್ಲಿಕ್ ನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಇದರಲ್ಲಿ ಕಂಡುಬಂದಿದೆ. ಈ ವಿಡಿಯೊ ಹಾಗೂ ಪೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದು, ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿಯೇ ಎಂಬ ಸಂಶಯನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

Sonakshi Sinha

ಯಾಕೆಂದರೆ ಈ ಹಿಂದೆ ಮದುವೆಯಾದ ಬಾಲಿವುಡ್ ನಟಿಯರಾದ ಆಲಿಯಾ ಭಟ್, ಸ್ವರಾ ಭಾಸ್ಕರ್ ಅವರು ತಮ್ಮ ಮದುವೆಯಾದ ಕೆಲವೇ ದಿನಗಳಲ್ಲಿ ತಾವು ಗರ್ಭಿಣಿ ಎಂದು ಘೋಷಣೆ ಮಾಡಿದ್ದು, ಈ ಬಗ್ಗೆ ಅನೇಕರು ಗಾಸಿಪ್ ಮಾಡಿದ್ದರು. ಹಾಗಾಗಿ ಸೋನಾಕ್ಷಿ ಅವರು ಕೂಡ ಇವರಂತೆ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ನೆಟ್ಟಿಜನ್ ಮನಸ್ಸಿನಲ್ಲಿ ಮೂಡಿದೆ ಎನ್ನಲಾಗಿದೆ. ಹಾಗಾಗಿ ನೆಟ್ಟಿಜನ್ ಸೋನಾಕ್ಷಿಯವರನ್ನು ಗರ್ಭಿಣಿ ಅವತಾರದಲ್ಲಿ ನೋಡಲು ಬಯಸುವುದಾಗಿ ತಿಳಿಸಿದ್ದಾರೆ.

ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಅವರು ಜೂನ್ 23ರಂದು ವಿವಾಹವಾದರು. ಅವರ ಮದುವೆಯ ಪೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅವರ ಜೋಡಿ ನೋಡಿ ಸ್ವರ್ಗದಲ್ಲಿ ಮಾಡಿದ ಪರಿಪೂರ್ಣ ಜೋಡಿ ಎಂದು ಹೊಗಳಿದ್ದಾರೆ.

Sonakshi Sinha

ಆದರೆ ಇವರಿಬ್ಬರು ಅಂತರ್ಧಮೀಯ ವಿವಾಹವಾಗಿದ್ದರಿಂದ ಈ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಸೋನಾಕ್ಷಿ ಅವರ ತಂದೆ ಶತ್ರುಘ್ನ ಸಿನ್ಹಾ ಕೂಡ ಅಸಮಾಧಾನಗೊಂಡಿದ್ದರು. ಅವರ ಮದುವೆಯಿಂದ ಅವರ ಕುಟುಂಬದವರು ಸಂತೋಷವಾಗಿಲ್ಲ ಎನ್ನಲಾಗಿತ್ತು. ಆದರೆ ಆ ಬಳಿಕ ಶತ್ರುಘ್ನ ಸಿನ್ಹಾ ಅವರು ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು.

ಈ ದಂಪತಿ ಮದುವೆಗೂ ಮುನ್ನ 7 ವರ್ಷಗಳ ಕಾಲ ಸಂಬಂಧದಲ್ಲಿದ್ದರು. ಹಾಗಾಗಿ ಇವರು ಲಿವಿಂಗ್ ಟು ಗೇದರ್ ರಿಲೆಷನ್ಶಿಪ್‌ನಲ್ಲಿದ್ದರು ಎಂದು ಅನೇಕರು ಊಹಿಸಿದ್ದರು.

ಆದರೆ ನಟಿ ಈ ವದಂತಿಯನ್ನು ಅಲ್ಲಗೆಳೆದಿದ್ದು, ತಾನು ಹೆತ್ತವರೊಂದಿಗೆ ವಾಸಿಸುತ್ತಿರುವುದಾಗಿ ತಿಳಿಸುವ ಮೂಲಕ ಈ ವದಂತಿಗೆ ತೆರೆ ಎಳೆದಿದ್ದರು.

Continue Reading

ಬಾಲಿವುಡ್

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

Bigg Boss OTT 3: ಖ್ಯಾತ ಯುಟ್ಯೂಬರ್‌ ಅರ್ಮಾನ್‌ ಮಲಿಕ್‌ ಅವರು ಯುಟ್ಯೂಬ್‌ ಸೇರಿ ಯಾವುದೇ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿದರೂ ಅದು ಲಕ್ಷಾಂತರ ಜನರನ್ನು ತಲುಪುತ್ತದೆ, ಸುದ್ದಿಯಾಗುತ್ತದೆ. ಆದರೆ, ಈಗ ಅರ್ಮಾನ್‌ ಮಲಿಕ್‌ ಬಿಗ್‌ ಬಾಸ್‌ ಮನೆಯಿಲ್ಲಿದ್ದಾರೆ. ಹೊಸ ಪ್ರೋಮೊದಲ್ಲಿ ಅರ್ಮಾನ್ ಮಲಿಕ್ ಮೊದಲ ಪತ್ನಿ ಪಾಯಲ್, ಕೃತಿಕಾ ಮತ್ತು ಅವರ ಪತಿಯ ಎರಡನೇ ಮದುವೆ ಬಗ್ಗೆ ಮಾತನಾಡಿ ಕಣ್ಣೀರು ಹಾಕಿದ್ದಾರೆ.

VISTARANEWS.COM


on

Bigg Boss OTT 3 Armaan Malik both Kritika Malik and Payal Malik in bigg bos house
Koo

ಬೆಂಗಳೂರು: ಬಿಗ್ ಬಾಸ್ OTT ಸೀಸನ್‌ನಲ್ಲಿ (Bigg Boss OTT 3) ಅರ್ಮಾನ್ ಮಲಿಕ್ (Arman Malik) ಮತ್ತು ಅವರ ಇಬ್ಬರು ಪತ್ನಿಯರಾದ ಪಾಯಲ್ ಮತ್ತು ಕೃತಿಕಾ ಭಾಗವಹಿಸಿರುವುದು ಗೊತ್ತೇ ಇದೆ.

ಈ ಶೋ ಬಹುಪತ್ನಿತ್ವವನ್ನು ಉತ್ತೇಜಿಸುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಹೊಸ ಪ್ರೋಮೊ ಒಂದು ವೈರಲ್‌ ಆಗಿದೆ.

ಹೊಸ ಪ್ರೋಮೊದಲ್ಲಿ ಅರ್ಮಾನ್ ಮಲಿಕ್ ಮೊದಲ ಪತ್ನಿ ಪಾಯಲ್, ಕೃತಿಕಾ ಮತ್ತು ಅವರ ಪತಿಯ ಎರಡನೇ ಮದುವೆ ಬಗ್ಗೆ ಮಾತನಾಡಿ ಕಣ್ಣೀರು ಹಾಕಿದ್ದಾರೆ. ಅರ್ಮಾನ್ ಮತ್ತು ಕೃತಿಕಾ ವಿವಾಹಿತ ಜೋಡಿಯಾಗಿ ಹೇಗೆ ಮರಳಿದರು ಎಂಬುದನ್ನು ಪಾಯಲ್ ವಿವರಿಸಿದ್ದಾರೆ.

ಇದನ್ನೂ ಓದಿ: Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

ಅವರಿಬ್ಬರ ನಿರ್ಧಾರದಿಂದ ಪಾಯಲ್ ಎಷ್ಟು ದುಃಖಿತರಾಗಿದ್ದಾರೆಂಬುವುದು ಎಂಬುದು ಈ ಪ್ರೋಮೊದಲ್ಲಿದೆ.

Continue Reading

ಸಿನಿಮಾ

Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಬೆಳ್ಳುಳ್ಳಿ ಎಸಳು ಪದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ ಎಂಬುದರ ಕುರಿತು ಅವರು ಹೇಳಿರುವುದು ವೈರಲ್ ಆಗಿದೆ.

VISTARANEWS.COM


on

By

Priyanka Chopra
Koo

ಬಾಲಿವುಡ್ ನಟಿ (Bollywood actress) ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ತಮ್ಮ ಪಾದಗಳಿಗೆ ಬೆಳ್ಳುಳ್ಳಿಯ (Garlic) ಎಸಳುಗಳನ್ನು ಉಜ್ಜಿಕೊಳ್ಳುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿದ್ದು, ಹಲವಾರು ಬಳಕೆದಾರರು ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ. ಸಾಕಷ್ಟು ಮಂದಿ ಬೆಳ್ಳುಳ್ಳಿಯನ್ನು ಉಜ್ಜಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾ ಪ್ರಸ್ತುತ ದಿ ಬ್ಲಫ್ ಇನ್ ಆಸ್ಟ್ರೇಲಿಯಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪತಿ ನಿಕ್ ಜೋನಾಸ್, ಮಗಳು ಮಾಲತಿ ಮೇರಿ ಮತ್ತು ತಾಯಿ ಮಧು ಚೋಪ್ರಾ ಅವರೊಂದಿಗೆ ಕೆಲವು ಅಮೂಲ್ಯ ಕ್ಷಣಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರ ಪೋಸ್ಟ್ ನೊಂದಿಗೆ ಇದ್ದ ವಿಡಿಯೋವೊಂದು ಎಲ್ಲರ ಗಮನ ಸೆಳೆದಿದೆ. ಚಿತ್ರದ ಸೆಟ್‌ಗಳಲ್ಲಿ ಪ್ರಿಯಾಂಕಾಗೆ ಉಂಟಾದ ಗಮನಾರ್ಹ ಗಾಯಗಳನ್ನು ಇದು ಬಹಿರಂಗಪಡಿಸಿದೆ. ನಟಿ ಕೆಲವು ಎಸಳು ಬೆಳ್ಳುಳ್ಳಿ ಮತ್ತು ಲವಂಗವನ್ನು ಬಲವಾಗಿ ಅವಳ ಪಾದಗಳಿಗೆ ಉಜ್ಜುತ್ತಿರುವ ವಿಡಿಯೋ ಇದರಲ್ಲಿದೆ. ಇದು ವಾಸ್ತವವಾಗಿ ಕೆಲವು ಖಾಯಿಲೆಗಳನ್ನು ಎದುರಿಸಲು ಅನೇಕರು ಬಳಸುವ ಸಾಂಪ್ರದಾಯಿಕ ಔಷಧವಾಗಿದೆ.

ಬೆಳ್ಳುಳ್ಳಿಯನ್ನು ಪಾದಗಳಿಗೆ ಉಜ್ಜುವುದು ಏಕೆ?

ನಟಿ ಪ್ರಿಯಾಂಕಾ ಹಂಚಿಕೊಂಡ್ಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಇದು ವೈಜ್ಞಾನಿಕ ಅಂಶಗಳ ಬಗ್ಗೆಯೂ ಚರ್ಚೆಯನ್ನು ಹುಟ್ಟು ಹಾಕಿತ್ತು.

ಟಿಸರ್ ಮತ್ತು ಇನ್‌ಸ್ಟಿಟ್ಯೂಟ್ ವರದಿಯ ಪ್ರಕಾರ ಈ ಪ್ರಕ್ರಿಯೆಯ ಸಾಕಷ್ಟು ಪರಿಣಾಮಕಾರಿಯಾಗಿದೆ. ಬೆಳ್ಳುಳ್ಳಿ ಮತ್ತು ಲವಂಗವನ್ನು ಕತ್ತರಿಸಿ ಪುಡಿ ಮಾಡಿದಾಗ ಇದು ಅಲಿನ್ ಅನ್ನು ಅಲಿನೇಸ್ ಕಿಣ್ವದೊಂದಿಗೆ ಸೇರುವಂತೆ ಮಾಡುತ್ತದೆ. ಇದು ಅಲಿಸಿನ್ ಎಂಬ ಹೊಸ ಸಂಯುಕ್ತವನ್ನು ಸೃಷ್ಟಿಸುತ್ತದೆ. ಬೆಳ್ಳುಳ್ಳಿ ಮತ್ತು ಪುಡಿ ಮಾಡಿದ ಲವಂಗವನ್ನು ಪಾದಗಳ ಮೇಲೆ ಉಜ್ಜಿದಾಗ ಅದು ದೇಹದಲ್ಲಿ ರಕ್ತಪ್ರವಾಹ ಚೆನ್ನಾಗಿ ನಡೆಯಲು ಸಹಾಯ ಮಾಡುತ್ತದೆ.

ವೆರಿವೆಲ್ ಹೆಲ್ತ್ ವರದಿಯ ಪ್ರಕಾರ, ಇದು ಕೆಲವು ರೀತಿಯ ಕ್ಯಾನ್ಸರ್‌ಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಮಧುಮೇಹ, ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ವ್ಯಾಯಾಮದ ಅನಂತರ ಸ್ನಾಯುವಿನ ಚೇತರಿಕೆಗೆ ಸಹಾಯ ಮಾಡುತ್ತದೆ ಮತ್ತು ಸೋಂಕುಗಳಿಂದ ರಕ್ಷಿಸುತ್ತದೆ.


ಪ್ರಯೋಜನಗಳೇನು?

ಕ್ಲೀವ್ ಲ್ಯಾಂಡ್ ಕ್ಲಿನಿಕ್ ವರದಿಯ ಪ್ರಕಾರ, ಬೆಳ್ಳುಳ್ಳಿಯು ಉರಿಯೂತದ ಗುಣಲಕ್ಷಣಗಳ ಜೊತೆಗೆ ಅಪಾರವಾದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಕೀಲು ಮತ್ತು ಸ್ನಾಯುಗಳಲ್ಲಿನ ನೋವನ್ನು ನಿವಾರಿಸಲು ಇದು ಸೂಕ್ತವಾಗಿದೆ. ಬೆಳ್ಳುಳ್ಳಿ ಲವಂಗವನ್ನು ಮೊಡವೆಗಳ ಮೇಲೆ ಉಜ್ಜುವುದರಿಂದ ಮೊಡವೆಗಳನ್ನು ದೂರಮಾಡಬಹುದು. ಆದರೂ ಅದು ನಿಮ್ಮ ಚರ್ಮಕ್ಕೆ ಸೂಕ್ತವೇ ಎಂಬುದನ್ನು ತಿಳಿದುಕೊಳ್ಳಲು ಚರ್ಮಶಾಸ್ತ್ರಜ್ಞರನ್ನು ಸಂಪರ್ಕಿಸಬೇಕು.

ಕೆಂಪು ರಕ್ತ ಕಣಗಳು ಬೆಳ್ಳುಳ್ಳಿಯಲ್ಲಿರುವ ಸಲ್ಫರ್ ಅನ್ನು ಹೈಡ್ರೋಜನ್ ಸಲ್ಫೈಡ್ ಅನಿಲವಾಗಿ ಪರಿವರ್ತಿಸುತ್ತವೆ. ಇದು ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಅಂತಿಮವಾಗಿ ಬೆಳ್ಳುಳ್ಳಿ ಕ್ರೀಡಾಪಟುವಿನ ಪಾದಕ್ಕೆ ಚಿಕಿತ್ಸೆ ನೀಡಲು ಉತ್ತಮ ಪ್ರತಿವಿಷವಾಗಿದೆ. ಇದು ಶಿಲೀಂಧ್ರದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಳ್ಳುಳ್ಳಿಯನ್ನು ಸತತವಾಗಿ ಆಹಾರದಲ್ಲಿ ಸೇರಿಸುವುದು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನವನ್ನು ಕೊಡುತ್ತದೆ. ಬೆಳ್ಳುಳ್ಳಿಯ ಎಣ್ಣೆ ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ಹೆಲ್ತ್‌ಲೈನ್ ವರದಿಯ ಪ್ರಕಾರ ಪ್ರತಿ ಊಟದಲ್ಲಿ 1 ಎಸಳಿಗಿಂತ ಹೆಚ್ಚು ಬೆಳ್ಳುಳ್ಳಿಯನ್ನು ಸೇವಿಸಲು ಪ್ರಯತ್ನಿಸುವುದು ಆರೋಗ್ಯಕ್ಕೆ ಒಳ್ಳೆಯದು.

ಪ್ರಿಯಾಂಕಾ ಬಳಸುತ್ತಿರುವುದು ಏಕೆ?

ಬಳಕೆದಾರರ ಕಾಮೆಂಟ್ ಗಳಿಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಚೋಪ್ರಾ ಅವರು, ಇದು ಉರಿಯೂತ ಮತ್ತು ದೇಹದ ತಾಪವನ್ನು ಇಳಿಸಲು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

Continue Reading

ಬಾಲಿವುಡ್

Payal Ghosh: 9 ವರ್ಷ ಆಯ್ತು ಯಾರ ಜತೆಗೂ ಮಲಗಿಲ್ಲ, ಇರ್ಫಾನ್‌ ಪಠಾಣ್‌ನೇ ಕೊನೆ ಎಂದ ನಟಿ ಪಾಯಲ್‌ ಘೋಷ್‌ !

Payal Ghosh: ಕೋಲ್ಕತ್ತಾದ ಪಾಯಲ್ ಘೋಷ್‌ ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿದರೂ ಅಷ್ಟೊಂದು ಯಶಸ್ಸು ಸಿಗಲಿಲ್ಲ.ಈಗಾಗಲೇ ಸಿನಿಮಾ ಮೂಲಕ ಎಲ್ಲೂ ಸುದ್ದಿಯಲ್ಲಿ ಇಲ್ಲದ ಪಾಯಲ್‌ ಘೋಷ್‌, ಪ್ರತಿ ಬಾರಿಯೂ ಇಂಥ ಪೋಸ್ಟ್‌ ಹಾಗೂ ವಿವಾದಾತ್ಮಕ ಕಮೆಂಟ್‌ ಮಾಡುವ ಮೂಲಕ ಟ್ರೆಂಡಿಂಗ್‌ನಲ್ಲಿ ಇರುತ್ತಾರೆ.

VISTARANEWS.COM


on

Payal Ghosh says she did not had physical relationship with anyone in past 9 years
Koo

ಬೆಂಗಳೂರು: ನಟಿ ಹಾಗೂ ರಾಜಕಾರಣಿ ಪಾಯಲ್‌ ಘೋಷ್‌ (Payal Ghosh) ಆಗಾಗ ತಮ್ಮ ಹೇಳಿಕೆ ಮೂಲಕ ಸುದ್ದಿಯಲ್ಲಿ ಇರುತ್ತಾರೆ. ಇದೀಗ 9 ವರ್ಷಗಳಾದವು. ನಾನು ಯಾರೊಂದಿಗೂ ಸೆಕ್ಸ್ ಮಾಡಿಲ್ಲ. ಇರ್ಫಾನ್ ಪಠಾಣ್ ಜತೆ ಬ್ರೇಕಪ್ ಆದ ನಂತರ ಯಾರೊಂದಿಗೂ ಸೆಕ್ಸ್ ಮಾಡಲಿಲ್ಲ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ಆಗುತ್ತಿವೆ.

ಆಗಾಗ ತಮ್ಮ ಹೇಳಿಕೆ ಮೂಲಕ ಪಾಯಲ್‌ ಘೋಷ್‌ ಸುದ್ದಿಯಲ್ಲಿ ಇರುತ್ತಾರೆ. ಇದೀಗ 9 ವರ್ಷಗಳಾದವು. ನಾನು ಯಾರೊಂದಿಗೂ ಸೆಕ್ಸ್ ಮಾಡಿಲ್ಲ. ಇರ್ಫಾನ್ ಪಠಾಣ್ ಜತೆ ಬ್ರೇಕಪ್ ಆದ ನಂತರ ಯಾರೊಂದಿಗೂ ಸೆಕ್ಸ್ ಮಾಡಲಿಲ್ಲ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ಆಗುತ್ತಿವೆ.

ನಟಿ ಪೋಸ್ಟ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻ9 ವರ್ಷಗಳಾದವು. ನಾನು ಯಾರೊಂದಿಗೂ ಸೆಕ್ಸ್ ಮಾಡಿಲ್ಲ. ಇರ್ಫಾನ್ ಪಠಾಣ್ ಜೊತೆ ಬ್ರೇಕಪ್ ಆದ ನಂತರ ಯಾರೊಂದಿಗೂ ಸೆಕ್ಸ್ ಮಾಡಲಿಲ್ಲ. ಇದು ಸುಳ್ಳು ಅಂತ ಅನಿಸಬಹುದು. ಆದರೆ ಇದುವೇ ನಿಜ ಎಂದು ನಟಿ ತಮ್ಮ ಇನ್​ಸ್ಟಾ ಪೋಸ್ಟ್​ನಲ್ಲಿ ಹೇಳಿದ್ದಾರೆ.ನಟಿ ತಾನು ಹಾಗೂ ಇರ್ಫಾನ್ ಪಠಾಣ್ ಲವ್ ಮಾಡುತ್ತಿದ್ದೆವು ಎಂದು ಸೋಷಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್ ಮಾಡಿ ಹೇಳಿದ್ದಾರೆ.

ಇದನ್ನೂ ಓದಿ: Kalki 2898 AD: ಮೊದಲ ದಿನವೇ ಗಳಿಕೆಯಲ್ಲಿ ದಾಖಲೆ ಬರೆದ ‘ಕಲ್ಕಿ 2898 ಎಡಿ’ ಸಿನಿಮಾ; ಕಲೆಕ್ಷನ್‌ ಎಷ್ಟು?

ಈ ಪೋಸ್ಟ್ ನೋಡಿ ಸಾಕಷ್ಟು ಮಂದಿ ಆಕೆಯನ್ನು ಟ್ರೋಲ್ ಮಾಡುತ್ತಿದ್ದಾರೆ. ಇರ್ಫಾನ್‌ ಪಠಾಣ್‌ ಸಾಂಪ್ರದಾಯಿಕ ಕುಟುಂಬ , ಹಾಗಾಗಿ ನಾನು ಬ್ರೇಕಪ್‌ ಆದೆ ಎಂದು ಹೇಳಿಕೊಂಡಿದ್ದಾರೆ. ಇದೀಗ ನೆಟ್ಟಿಗರು ಒಂದು ಕುಟುಂಬವನ್ನು ಹಾಳು ಮಾಡಬೇಡಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ, ಇರ್ಫಾನ್ ಪಠಾಣ್ ಸೌದಿ ಮಾಡೆಲ್ ಸಫಾ ಬೇಗ್ ಅವರನ್ನು ವಿವಾಹವಾದರು. ಹಿಂದೆ ಶಿವಾಂಗಿ ಎಂಬ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದರು. ಕೋಲ್ಕತ್ತಾದ ಪಾಯಲ್ ಘೋಷ್‌ ಕೆಲವು ಹಿಂದಿ ಸಿನಿಮಾಗಳಲ್ಲಿ ನಟಿಸಿದರೂ ಅಷ್ಟೊಂದು ಯಶಸ್ಸು ಸಿಗಲಿಲ್ಲ.

ಈಗಾಗಲೇ ಸಿನಿಮಾ ಮೂಲಕ ಎಲ್ಲೂ ಸುದ್ದಿಯಲ್ಲಿ ಇಲ್ಲದ ಪಾಯಲ್‌ ಘೋಷ್‌, ಪ್ರತಿ ಬಾರಿಯೂ ಇಂಥ ಪೋಸ್ಟ್‌ ಹಾಗೂ ವಿವಾದಾತ್ಮಕ ಕಮೆಂಟ್‌ ಮಾಡುವ ಮೂಲಕ ಟ್ರೆಂಡಿಂಗ್‌ನಲ್ಲಿ ಇರುತ್ತಾರೆ. ʻʻನನ್ನ ಜೀವನದಲ್ಲಿ ಇರ್ಫಾನ್‌ ಪಠಾಣ್‌ಗಿಂತ ಚೆನ್ನಾಗಿರುವ ಆಯ್ಕೆ ಇದ್ದವು. ಆದರೆ, ಪ್ರೀತಿ ಯಾವಾಗಲೂ ಪ್ರೀತಿಯೇ ಅಲ್ಲವೇ? ನನ್ನ ತಂದೆ ನನ್ನ ಸಂಬಂಧಕ್ಕೆ ಎಷ್ಟೇ ವಿರೋಧ ವ್ಯಕ್ತ ಪಡಿಸಿದರೂ ನಾನೆಂದೂ ಮೋಸ ಮಾಡಲಿಲ್ಲ ಎಂದು ಬರೆದಿದ್ದಾರೆ. ನನ್ನ ತಂದೆ ಮುಸ್ಲಿಮರನ್ನು ದ್ವೇಷಿಸುತ್ತಾರೆ. ಆದರೆ ನಾನು ಅವನನ್ನು ಯಾವಾಗಲೂ ಸಪೋರ್ಟ್ ಮಾಡಿದ್ದೆ. ಆದರೆ ಅವನು ನನಗೆ ಕೊಟ್ಟಿದ್ದೇನು?ʼʼ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

Continue Reading
Advertisement
Job Alert
ಉದ್ಯೋಗ11 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್15 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ16 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ16 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ18 mins ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್28 mins ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ43 mins ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ46 mins ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ46 mins ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ57 mins ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌