Spandana Vijay Raghavendra: ಸ್ಪಂದನಾ ಉತ್ತರ ಕ್ರಿಯೆಗೆ ಸಿದ್ಧತೆ; ಸರ್ವರಿಗೂ ಆಹ್ವಾನಿಸಿದ ವಿಜಯ ರಾಘವೇಂದ್ರ ಕುಟುಂಬ - Vistara News

South Cinema

Spandana Vijay Raghavendra: ಸ್ಪಂದನಾ ಉತ್ತರ ಕ್ರಿಯೆಗೆ ಸಿದ್ಧತೆ; ಸರ್ವರಿಗೂ ಆಹ್ವಾನಿಸಿದ ವಿಜಯ ರಾಘವೇಂದ್ರ ಕುಟುಂಬ

ಆಗಸ್ಟ್‌ 16ರಂದು ಸ್ಪಂದನಾ ಉತ್ತರ ಕ್ರಿಯೆಗೆ ಕುಟುಂಬ ಸಿದ್ಧತೆ ಮಾಡುಕೊಳ್ಳುತ್ತಿದೆ. ಜತೆಗೆ ಅಭಿಮಾನಿಗಳಿಗೆ ಭಾಗವಹಿಸುವಂತೆ ವಿಜಯ ಕುಟುಂಬ ಆಹ್ವಾನ ನೀಡಿದ್ದಾರೆ. ಬೆಳಗ್ಗೆ 8 ಗಂಟೆಗೆ ಶಾಂತಿ ಹೋಮ ಕೂಡ ನಡೆಯಲಿದೆ.

VISTARANEWS.COM


on

Spandana Vijay Raghavendra with Family
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ವಿಜಯ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ (Spandana Vijay Raghavendra) ಅವರು ಕೆಲದಿನಗಳ ಹಿಂದೆ ಹೃದಯಾಘಾತದಿಂದ ನಿಧನರಾಗಿದ್ದರು. ಆಗಸ್ಟ್‌ 16ರಂದು ಸ್ಪಂದನಾ (vijay raghavendra wife) ಉತ್ತರ ಕ್ರಿಯೆಗೆ (Vijay Raghavendra wife death) ಕುಟುಂಬ ಸಿದ್ಧತೆ ಮಾಡುಕೊಳ್ಳುತ್ತಿದೆ ಜತೆಗೆ ಅಭಿಮಾನಿಗಳಿಗೆ ಭಾಗವಹಿಸುವಂತೆ ವಿಜಯ ಕುಟುಂಬ ಆಹ್ವಾನ ನೀಡಿದ್ದಾರೆ. ಬೆಳಗ್ಗೆ 8 ಗಂಟೆಗೆ ಶಾಂತಿಹೋಮ ಕೂಡ ನಡೆಯಲಿದೆ.

“ನಮ್ಮ ಮನೆಯ ಮಗಳು ಶ್ರೀಮತಿ ಸ್ಟಂದನಾ ವಿಜಯ್‌ ರಾಘವೇಂದ್ರ (ಅಚ್ಚು) ಅವರು ದಿನಾಂಕ 6/08/2023ರ ಭಾನುವಾರದಂದು ನಮ್ಮನ್ನಗಲಿರುವುದು ನಿಮಗೆಲ್ಲರಿಗೂ ತಿಳಿದ ವಿಷಯ. ಉತ್ತರ ಕ್ರಿಯೆಯನ್ನು ದಿನಾಂಕ 16/08 /2023ರ ಬುಧವಾರದಂದು ಮಲ್ಲೇಶ್ವರದ ಸ್ವಗೃಹದಲ್ಲಿ ಬೆಳಗ್ಗೆ 8 ಗಂಟೆಯಿಂದ ಶಾಂತಿಹೋಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಯಿಂದ ಕೋದಂಡರಾಮಪುರದ ಯಂಗ್‌ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ (ಬಿಬಿಎಂಪಿ ಮೈದಾನ) ಭೋಜನವನ್ನು ಹಮ್ಮಿಕೊಂಡಿದ್ದೇವೆ. ಆದ್ದರಿಂದ ನೀವು ಭಾಗವಹಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಇಂತಿ ಬಿ. ಕೆ. ಶಿವರಾಂ ಹಾಗೂ ಎಸ್‌. ಎ. ಚಿನ್ನೆಗೌಡರು. ಮತ್ತು ಸಮಸ್ತ ಕುಟುಂಬಸ್ಥರುʼʼಎಂದು ಆಹ್ವಾನ ನೀಡಿದ್ದಾರೆ.

ಬ್ಯಾಂಕಾಕ್‌ ಪ್ರವಾಸದಲ್ಲಿದ್ದ ಸ್ಪಂದನಾ ಅವರು ಆಗಸ್ಟ್ 6ರಂದು ಸ್ಪಂದನಾ ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ 11.35ಕ್ಕೆ ಥಾಯ್‌ ಏರ್‌ವೇಸ್‌ ವಿಮಾನದ ಮೂಲಕ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಅಲ್ಲಿಂದ ರಾತ್ರಿಯೇ ಮಲ್ಲೇಶ್ವರದಲ್ಲಿರುವ ಸ್ಪಂದನಾ ಅವರ ತಂದೆ, ನಿವೃತ್ತ ಪೊಲೀಸ್‌ ಅಧಿಕಾರಿ ಬಿ.ಕೆ. ಶಿವರಾಮ್‌ ಅವರ ನಿವಾಸಕ್ಕೆ ತರಲಾಗಿತ್ತು.

Spandana Vijay Raghavendra

ಇದನ್ನೂ ಓದಿ: Spandana Vijay Raghavendra: ಲೀನವಾಯ್ತು ಸ್ಪಂದನಾ ಅಸ್ಥಿ!

ಹರಿಶ್ಚಂದ್ರ ಘಾಟ್‌ನ ವಿದ್ಯುತ್‌ ಚಿತಾಗಾರಕ್ಕೆ ಪಾರ್ಥಿವ ಶರೀರವನ್ನು ತಂದು ಅಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗಿತ್ತು. ಈಡಿಗ ಸಂಪ್ರದಾಯದಂತೆ ಸರಳವಾಗಿ ನಡೆದ ಸ್ಪಂದನಾ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಪತಿ ವಿಜಯ ರಾಘವೇಂದ್ರ ಮತ್ತು ಪುತ್ರ ಶೌರ್ಯ ನೆರವೇರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Actor Darshan: ದರ್ಶನ್‌ ರೇಣುಕಾ ಸ್ವಾಮಿ ಕೊಲೆ ಕೇಸ್‌ ಒಂದಲ್ಲ ಸಾಕಷ್ಟು ಕೇಸ್‌ಗಳು ಇದೀಗ ಬೆಳಕಿಗೆ ಬರುತ್ತಿದೆ. ಈಗ ದರ್ಶನ್‌ ಅವರ ವಿಡಿಯೊವೊಂದು ವೈರಲ್‌ ಆಗಿದೆ. ʻʻಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಆಮೇಲೆ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಏನೋ ಸಮಯ ಕೊಡಬಹುದಿತ್ತು. ಪರಿಹಾರ ಕಂಡುಹಿಡಯಬಹುದಿತ್ತಲ್ಲ ಎಂದು ಆಮೇಲೆ ಕೊರಗುತ್ತಾನೆʼʼಎಂದು ಹೇಳಿದ್ದರು. ಇದೀಗ ದರ್ಶನ್‌ ಅವರ ಈ ವಿಡಿಯೊ ಕಂಡು ನೆಟ್ಟಿಗರು ʻʻದರಾನ್‌ ತಾವು ಕಲಿತ ಪಾಠವನ್ನೇ ಮರೆತು ಬಿಟ್ರಲ್ಲʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Actor Darshan old interview goes viral Explain About Murder And His Mindset
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ (Actor Darshan) ಅರೆಸ್ಟ್‌ ಆಗಿದ್ದಾರೆ. ಈ ಪ್ರಕರಣಕ್ಕೂ ಮುಂಚೆ 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. ಆ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನದಲ್ಲಿದ್ದರು ದರ್ಶನ್‌. ಆ ಸಮಯದಲ್ಲಿ ದರ್ಶನ್‌ ಅವರು ಜೈಲಿನ ಅನುಭವವನ್ನು ಹೇಳಿಕೊಂಡಿದ್ದರು. ಇದೀಗ ಈ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ. ವಿಡಿಯೊದಲ್ಲಿ ದರ್ಶನ್‌ ʻʻಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಆಮೇಲೆ ಆ ಬಗ್ಗೆ ಕೊರಗುತ್ತಾ ಇರುತ್ತಾನೆ. ಏನೋ ಸಮಯ ಕೊಡಬಹುದಿತ್ತು. ಪರಿಹಾರ ಕಂಡುಹಿಡಯಬಹುದಿತ್ತಲ್ಲ ಎಂದು ಆಮೇಲೆ ಕೊರಗುತ್ತಾನೆʼʼಎಂದು ಹೇಳಿದ್ದರು. ಇದೀಗ ದರ್ಶನ್‌ ಅವರ ಈ ವಿಡಿಯೊ ಕಂಡು ನೆಟ್ಟಿಗರು ʻʻದರಾನ್‌ ತಾವು ಕಲಿತ ಪಾಠವನ್ನೇ ಮರೆತು ಬಿಟ್ರಲ್ಲʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ.

ದರ್ಶನ್‌ ರೇಣುಕಾ ಸ್ವಾಮಿ ಕೊಲೆ ಕೇಸ್‌ ಒಂದಲ್ಲ ಸಾಕಷ್ಟು ಕೇಸ್‌ಗಳು ಇದೀಗ ಬೆಳಕಿಗೆ ಬರುತ್ತಿದೆ. ಈಗ ದರ್ಶನ್‌ ಅವರ ವಿಡಿಯೊವೊಂದು ವೈರಲ್‌ ಆಗಿದೆ. ಈ ಹಿಂದೆ 14 ದಿನ ಜೈಲಿನಲ್ಲಿ ಇದ್ದು ಬಂದ ದರ್ಶನ್‌ ವಿಡಿಯೊದಲ್ಲಿ ಈ ರೀತಿ ಹೇಳಿಕೊಂಡಿದ್ದಾರೆ. ʻನಾನು 14 ದಿನ ಜೈಲಿನಲ್ಲಿ ಇದ್ದವನು. ಸುಮಾರು ಜನರನ್ನ ನಾನು ಮೀಟ್‌ ಮಾಡ್ದೆ ಅಲ್ಲಿ. ಕೆಲವರು ಮಾಡದೇ ಇರುವ ತಪ್ಪಿಗೆ ಅಲ್ಲಿ ಇದ್ದಾರೆ. ಇನ್ನು ಕೆಲವರಿಗೆ ಕೋಪ ಆ ಟೈಮಿಗೆ ಕೈ ಕೊಟ್ಟು ಜೈಲು ಪಾಲಾಗಿದ್ದರು. ಆ ಬಗ್ಗೆ ಅವತ್ತು ನಾನು ಯೋಚನೆ ಮಾಡಿದಾಗ, ಕೊಲೆ ಮಾಡುವವನು ಆತುರದಲ್ಲಿ ಮಾಡಿರುತ್ತಾನೆ. ಬಳಿಕ ಕೊರಗುತ್ತಿರುತ್ತಾನೆ. ಸ್ವಲ್ಪ ಸಮಯ ಕೊಡಬೇಕಿತ್ತು. ಏನೋ ಪರಿಹಾರ ಕಂಡು ಹಿಡಿಯಬಹುದಾಗಿತ್ತು ಎಂದು ಅವನಿಗೆ ಆಮೇಲೆ ಅನ್ನಿಸಿರುತ್ತದೆ. ಇದೆಲ್ಲ ನಾನು ಜೈಲಿನಲ್ಲಿ ಇದ್ದಾಗ ಕಲಿತ ಪಾಠʼʼಎಂದಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಈ ಪಾಠ ಮರೆತು ಬಿಟ್ರಾ ಎಂದು ಕಮೆಂಟ್‌ ಮಾಡುತ್ತಿದ್ದಾರೆ ನೆಟ್ಟಿಗರು. ಇದೀಗ ಟ್ರೋಲಿಗರಿಗೂ ಈ ವಿಡಿಯೊ ಆಹಾರವಾಗಿದೆ.

ಇದನ್ನೂ ಓದಿ: Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

ಹೊಸ ಆರೋಪಗಳು ಬೆಳಕಿಗೆ

10 ವರ್ಷಗಳ ಹಿಂದೆ, ಪರಿಹಾರ ಕೇಳಲು ಹೋಗಿದ್ದ ಕೂಲಿ ಕೆಲಸಗಾರನ ಮೇಲೆ ನಾಯಿ ಛೂ ಬಿಟ್ಟು ವಿಕೃತಿ ಮೆರೆದಿದ್ದರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿತ್ತು. ಆ ಬಳಿಕ ದರ್ಶನ್‌ ಕಡೆಯವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದರು. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ. ಬಳಿಕ ಕಾರ್ಮಿಕ ತನ್ನ ಸಂಬಂಧಿಕರ ಜತೆ ಪರಿಹಾರ ಕೇಳಲು ಫಾರ್ಮ್ ಹೌಸ್​ಗೆ ಹೋದರೆ ದರ್ಶನ್‌ ಗ್ಯಾಂಗ್‌ ಅವರ ಮೇಲೆ ಸಾಕುನಾಯಿ ಛೂ ಬಿಟ್ಟಿದ್ದರಂತೆ. ಮೈಸೂರಿನ ಹೊಟೇಲ್​ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ

ಮತ್ತೊಂದು ಪ್ರಕರಣದಲ್ಲಿ ಕೊಡಗಿನ ಹೋಂ ಸ್ಟೇ ಒಂದರಲ್ಲಿ ಮಹಿಳೆ ಮೇಲೆ ನಟ ದರ್ಶನ್ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಕೊಡಗು ಜಿಲ್ಲೆಯ ಹೊಂ ಸ್ಟೇ ಯಲ್ಲಿ ಕೆಲವು ವರ್ಷಗಳ ಹಿಂದೆ ಘಟನೆ ನಡೆದಿತ್ತು. ನಟ ದರ್ಶನ್ ಸ್ನೇಹಿತರ ಜತೆ ಹೋಂ ಸ್ಟೇ ಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಹೋಂ ಸ್ಟೇಯಲ್ಲಿ ಕೆಲಸ ಮಾಡುವ ಮಹಿಳೆಗೆ ಸಿಗರೇಟ್‌ನಿಂದ ಸುಟ್ಟು ಹಲ್ಲೆ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

Actor Darshan: ʻಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದುʼʼಎಂದು ನೇರವಾಗಿಯೇ ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan case real star upendra react about case
Koo

ಬೆಂಗಳೂರು: ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಉಪೇಂದ್ರ ಅವರು ಈಗ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ʻʻಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದುʼʼಎಂದು ನೇರವಾಗಿಯೇ ಹೇಳಿಕೊಂಡಿದ್ದಾರೆ.

ಉಪೇಂದ್ರ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ …..
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,
ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೊ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು.

ಇದನ್ನೂ ಓದಿ: Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

(ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) ಅದೇ ರೀತಿ
ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆʼʼಎಂದು ಬರೆದುಕೊಂಡಿದ್ದಾರೆ.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

Continue Reading

ಟಾಲಿವುಡ್

Ram Pothineni: ರಾಮ್ ಪೋತಿನೇನಿ ಅಭಿನಯದ ʻಡಬಲ್ ಇಸ್ಮಾರ್ಟ್ʼ ಬಿಡುಗಡೆಗೆ‌ ಮುಹೂರ್ತ ಫಿಕ್ಸ್!

Ram Pothineni: ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ.

VISTARANEWS.COM


on

Double iSmart to release on August 15
Koo

ಬೆಂಗಳೂರು: ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ (Ram Pothineni) ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ ‘ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್​ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ಡಬಲ್ ಇಸ್ಮಾರ್ಟ್ ಚಿತ್ರ ತೆರೆಗೆ ಬರಲಿದೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್​’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ಒಂದು ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

ಇದನ್ನೂ ಓದಿ: Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ. ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

Continue Reading

ಸ್ಯಾಂಡಲ್ ವುಡ್

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

V Cinemas: ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ʻʻಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

V Cinemas multiplex inauguration by dolly dhanjay Ramesh arvind
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ (V Cinemas) ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ “ವಿ ಸಿನಿಮಾಸ್” ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು.‌ ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ಮಾರ್ಸ್ ಸುರೇಶ್, ಮಾಲೀಕರಾದ ಅಜಿತ್ ಜಗದೀಶ್ ಹಾಗೂ ತಂತ್ರಜ್ಞ ಮ್ಯಾಥ್ಯೂ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ʻʻಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ದರ ಕೂಡ ಬೇರೆ ಮಲ್ಟಿಪ್ಲೆಕ್ಸ್ ಗಳಿಗಿಂತ ತುಂಬಾ ಕಡಿಮೆ ಇರುತ್ತದೆ. ಮೊದಲ ಪ್ರಾಧಾನ್ಯತೆ ಕನ್ನಡ ಚಿತ್ರಗಳಿಗಿರುತ್ತದೆ. ಇಂದು ಮೊದಲ ಚಿತ್ರವಾಗಿ ಡಾಲಿ ಧನಂಜಯ ಅಭಿನಯದ “ಕೋಟಿ” ಚಿತ್ರ ಪ್ರದರ್ಶನವಾಗಿದೆʼʼ ಎಂದರು.

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಏನೇ ಆಧುನಿಕ ತಂತ್ರಜ್ಞಾನ ಬಂದರೂ ಥಿಯೇಟರ್ ನಲ್ಲಿ ಸಾವಿರಾರು ಜನರ ಮಧ್ಯೆ ಕುಳಿತು ಸಿನಿಮಾ ನೋಡುವ ಅನುಭವವೇ ಬೇರೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ. ಚಿತ್ರಮಂದಿರ ಪ್ರಾರಂಭ ಮಾಡಿರುವ ಮಾಲೀಕರಿಗೆ ಹಾಗೂ ಮಾರ್ಸ್ ಸುರೇಶ್ ಅವರಿಗೆ ಅಭಿನಂದನೆಗಳು ಎಂದರು ರಮೇಶ್ ಅರವಿಂದ್.

ಚಿತ್ರಮಂದಿರಲ್ಲಿ ಸಿನಿಮಾ ನೋಡುವ ಖುಷಿ ಮನೆಯಲ್ಲಿ ನೋಡಿದರೆ ಬರುವುದಿಲ್ಲ.. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರವನ್ನು ನೋಡಿ ಆನಂದಿಸಿದಾಗ, ನಮ್ಮಂತಹ ನಟರಿಗೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರಗಳನ್ನು ನೋಡಿ ಎಂದು ತಿಳಿಸಿದ ಡಾಲಿ ಧನಂಜಯ, “ವಿ ಸಿನಿಮಾಸ್” ಗೆ ಶುಭ ಹಾರೈಸಿದರು.

Continue Reading
Advertisement
murder Case in chikkodi
ಬೆಳಗಾವಿ5 mins ago

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Train Accident
ದೇಶ16 mins ago

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; 5 ಮಂದಿ ಸಾವು

Actor Darshan old interview goes viral Explain About Murder And His Mindset
ಸ್ಯಾಂಡಲ್ ವುಡ್17 mins ago

Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

Paris Olympics 2024
ಕ್ರೀಡೆ17 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಗೀತ ಗೋವಿಂದಂ ಚಿತ್ರದ ಹಾಡು; ಹರ್ಷ ವ್ಯಕ್ತಪಡಿಸಿದ ರಶ್ಮಿಕಾ-ದೇವರಕೊಂಡ

Actor Darshan case real star upendra react about case
ಸ್ಯಾಂಡಲ್ ವುಡ್23 mins ago

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

water Price hike in bwssb
ಬೆಂಗಳೂರು28 mins ago

Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Maoists Killed
ದೇಶ44 mins ago

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

petrol diesel price hike
ಪ್ರಮುಖ ಸುದ್ದಿ52 mins ago

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Shah Rukh Khan Took ₹1 As Signing Amount For 'Nayak'
ಬಾಲಿವುಡ್1 hour ago

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Encounter In Bandipora
ದೇಶ1 hour ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ17 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ18 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ24 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌