Independence Day 2023: ಭಾರತ ಸ್ವಾತಂತ್ರ್ಯ ಚಳವಳಿಯ ಟಾಪ್ 10 ಹೋರಾಟಗಾರರು - Vistara News

ದೇಶ

Independence Day 2023: ಭಾರತ ಸ್ವಾತಂತ್ರ್ಯ ಚಳವಳಿಯ ಟಾಪ್ 10 ಹೋರಾಟಗಾರರು

Independence Day 2023: ಆಗಸ್ಟ್ 15ರಂದು ಭಾರತವು 77ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಟಾಪ್ 10 ಸ್ವಾತಂತ್ರ್ಯ ಹೋರಾಟಗಾರರ ಪರಿಚಯ ಇಲ್ಲಿದೆ.

VISTARANEWS.COM


on

Freedom Fighters
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾವೀಗ 77ನೇ ಸ್ವಾತಂತ್ರ್ಯೋತ್ಸವನ್ನು (Independence Day 2023) ಆಚರಿಸುವ ಸಂದರ್ಭದಲ್ಲಿದ್ದೇವೆ. ಬ್ರಿಟಿಷರ ಗುಲಾಮಗಿರಿಯನ್ನು ಕಿತ್ತೆಸೆದು ನಮ್ಮದೇ ಆದ ಸ್ವರಾಜ್ಯ, ಸುರಾಜ್ಯ ಸ್ಥಾಪನೆಯ ತನಕ ಅನೇಕ ಮಹನೀಯರು ತಮ್ಮ ತ್ಯಾಗ ಮತ್ತು ಬಲಿದಾನ ಮಾಡಿದ್ದಾರೆ. ಈ ಸ್ವಾತಂತ್ರ್ಯೋತ್ಸವದ ವೇಳೆ ಅವರನ್ನೆಲ್ಲ ನೆನೆಯುವುದು ನಮ್ಮ ಕರ್ತವ್ಯವೂ ಹೌದು. 1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮದಿಂದ (1857 freedom movement) ಹಿಡಿದು ಕ್ವಿಟ್ ಇಂಡಿಯಾ ಚಳವಳಿ (Quit India Moivement) ತನಕ ಭಾರತವು ಅನೇಕ ಹೋರಾಟಗಳನ್ನು ಕಂಡಿದೆ. ಕ್ರಾಂತಿಕಾರಿಗಳ ಬಂದೂಕಿನ ಶಬ್ದದಿಂದ ಹಿಡಿದು ನಾಗರಿಕ ಅಸಹಕಾರ ಚಳವಳಿ ಹಾಗೂ ಪಾದಯಾತ್ರೆಗಳರೆಗೂ ಭಾರತವು ಸಾಕ್ಷಿಯಾಗಿದೆ. ಆದರೆ, ಭಾರತದ ಒಟ್ಟು ಸ್ವಾತಂತ್ರ್ಯ ಚಳವಳಿಗೆ ನಿರ್ದಿಷ್ಟ ದಿಕ್ಕು ಮತ್ತು ಮುಂದಾಳತ್ವವನ್ನು ಮಹಾತ್ಮ ಗಾಂಧಿ ಅವರು ವಹಿಸಿದರು. ಹೋರಾಟದ ನೇತೃತ್ವವನ್ನು ವಹಿಸಿದ್ದ ಕಾಂಗ್ರೆಸ್‌ಗೆ ನಾಯಕತ್ವವನ್ನು ಒದಗಿಸಿದ ಗಾಂಧಿ, ತಾವು ನಂಬಿದ ತತ್ವ- ಸಿದ್ಧಾಂತಗಳಲ್ಲಿ ಹಾದಿಯಲ್ಲಿ ಸಾಗಿ ಅಂತಿಮವಾಗಿ ಜಯವನ್ನು ತಂದಿತ್ತರು. ಅವರನ್ನು ಆಧರಿಸಿ ಅವರ ದಾರಿಯಲ್ಲಿ ಸಾಗಿದವರು ಕೋಟ್ಯಂತರ ಜನರು. ಖಂಡಿತವಾಗಿಯೂ ಈ ಸ್ವಾತಂತ್ರ್ಯ ದಿನದಂದು ಗಾಂಧಿಯಾದಿಯಾಗಿ ಎಲ್ಲ ಹೋರಾಟಗಾರರನ್ನು ಸ್ಮರಿಸುವ ಅಪೂರ್ವ ಅವಕಾಶವಿದು. ಬನ್ನಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರನ್ನು ತಿಳಿದುಕೊಳ್ಳೋಣ.

ರಾಷ್ಟ್ರಪಿತ ಮಹಾತ್ಮ ಗಾಂಧಿ

mahatma gandhi

ಮಹಾತ್ಮ ಗಾಂಧಿ (Mahatma Gandhi) ಅವರು ಭಾರತದ ಸ್ವಾತಂತ್ರ್ಯ ಸಂಗ್ರಾಮವನ್ನು 27 ವರ್ಷಗಳ ಕಾಲ ಮುನ್ನಡೆಸಿದ ಮಹಾನ್ ಚೇತನ. ಮಹಾತ್ಮ ಗಾಂಧಿ ಎಂದು ಖ್ಯಾತರಾದ ಮೋಹನದಾಸ್ ಕರಮಚಂದ್ ಗಾಂಧಿ ಅವರು 1869 ಅಕ್ಟೋಬರ್ 2ರಂದು ಜನಿಸಿದರು. ಸ್ವಾತಂತ್ರ್ಯ ಹೋರಾಟಕ್ಕಾಗಿ ಸಾಕಷ್ಟು ತ್ಯಾಗ ಮಾಡಿರುವ ಗಾಂಧಿ, ಇಡೀ ದೇಶವನ್ನು ಒಗ್ಗೂಡಿಸಿ ಬ್ರಿಟಿಷ್ ವಿರುದ್ಧ ಹೋರಾಡಿದ್ದು ಅವರ ಹೆಗ್ಗಳಿಕೆ. ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ದೇಶವನ್ನು ಬಂಧಮುಕ್ತ ಮಾಡುವುದರಲ್ಲಿ ಗಾಂಧಿಯವರ ಕೊಡುಗೆ ಅನನ್ಯವಾಗಿದೆ. ಅದೇ ಕಾರಣಕ್ಕೆ ಅವರನ್ನು ಜನರು ಪ್ರೀತಿಯಿಂದ ರಾಷ್ಟ್ರಪಿತ ಎಂದು ಕರೆಯುತ್ತಾರೆ. ಗಾಂಧಿ ಅವರ ಹೋರಾಟವು ಅನೇಕ ರಾಷ್ಟ್ರಗಳ ಸ್ವಾತಂತ್ರ್ಯ ಹೋರಾಟಕ್ಕೆ ಪ್ರೇರಣೆಯಾಗಿದೆ. ದಂಡಿ ಯಾತ್ರೆ, ಕ್ವಿಟ್ ಇಂಡಿಯಾ ಚಳವಳಿಗಳು ಗಾಂಧಿ ಅವರ ಪ್ರಮುಖ ಹೋರಾಟಗಳು. ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿ ಅವರನ್ನು 1948 ಜನವರಿ 30ರಂದು ಗುಂಡಿಕ್ಕಿ ಹತ್ಯೆ ಮಾಡಿದನು. ಆದರೆ, ಅವರ ವಿಚಾರಗಳು ಇಂದಿಗೂ ಭಾರತವನ್ನು ಮುನ್ನಡೆಸುತ್ತಿವೆ.

ಪಂಡಿತ ಜವಾಹರ್ ಲಾಲ್ ನೆಹರು

Pandit Jawahar Lal Nehru

ಪಂಡಿತ ಜವಾಹರ್ ಲಾಲ್ ನೆಹರು (pandit jawaharlal nehru) ಅವರು ಸುಪ್ರಸಿದ್ಧ ವಕೀಲರು ಮತ್ತು ಚಿಂತಕರಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಪೈಕಿ ಅಗ್ರಗಣ್ಯರು. ನೆಹರು ಅವರು 1889ರ ನವೆಂಬರ್ 14ರಂದು ಜನಿಸಿದರು. ತಂದೆ ಮೋತಿಲಾಲ್ ನೆಹರು ಹಾಗೂ ತಾಯಿ ಸ್ವರೂಪಾ ರಾಣಿ. 1930ರ ಬಳಿಕ ನೆಹರು ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ಬಂದರು. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಬಾರಿ ಜೈಲುವಾಸ ಕಂಡಿದ್ದಾರೆ. ವಿದೇಶದಲ್ಲಿ ಶಿಕ್ಷಣ ಪಡೆದಿದ್ದ ನೆಹರು ಅವರಿಗೆ ಜಗತ್ತಿನ ಸಮಕಾಲಿನ ರಾಜಕಾರಣದಳ ಒಳ ಹೊರಗುಗಳ ಬಗ್ಗೆ ಸ್ಪಷ್ಟವಾದ ಮಾಹಿತಿ ಇತ್ತು, ದೂರದೃಷ್ಟಿ ಇತ್ತು. ಜತೆಗೆ, ಸ್ವತಂತ್ರ ಭಾರತವನ್ನು ಪ್ರಗತಿಯತ್ತ ಯಾವ ರೀತಿ ಮುನ್ನಡೆಸಬೇಕೆಂಬ ಕಲ್ಪನೆಗಳಿದ್ದವು. ಈ ಗುಣಗಳೇ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗುವಂತೆ ಮಾಡಿದವು. ನೆಹರು ಪ್ರಧಾನಿಯಾದ ಬಳಿಕ ಆಧುನಿಕ ಭಾರತದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು. ಸುಮಾರು 17 ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದಿದ್ದಾರೆ. ಜವಾಹರ್ ಲಾಲ್ ನೆಹರು ಅವರ ನವೆಂಬರ್ 14 ಅನ್ನು ಮಕ್ಕಳ ದಿನವಾಗಿ ಭಾರತದಲ್ಲಿಆಚರಣೆ ಮಾಡಲಾಗುತ್ತದೆ.

ಸರ್ದಾರ್ ವಲ್ಲಭ್ ಭಾಯ್ ಪಟೇಲ್

sardar patel

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮತ್ತೊಬ್ಬ ನಾಯಕರು ಇವರು(sardar vallabhbhai patel). ಭಾರತದ ಉಕ್ಕಿನ ಮನುಷ್ಯ ಮತ್ತು ಭಾರತದ ಬಿಸ್ಮಾರ್ಕ್ ಎಂದೇ ಕರೆಯುತ್ತಾರೆ. ರಾಜಮನೆತನಗಳಲ್ಲಿ ಹಂಚಿ ಹೋಗಿದ್ದ ಭಾರತವನ್ನು ಗೃಹ ಸಚಿವರಾಗಿ ಒಂದುಗೂಡಿಸಿದರು. ಅಂದಿನ ಅವರ ಪ್ರಯತ್ನಗಳ ಫಲವಾಗಿ ಇಂದು ಭಾರತವು ಒಂದಾಗಿ ಉಳಿಯಲು ಕಾರಣವಾಗಿದೆ. ಸ್ವತಂತ್ರ ಸಿಕ್ಕಾಗ ಹಲವು ರಾಜಮನೆಗಳು ಸ್ವತಂತ್ರ ಭಾರತದ ಒಕ್ಕೂಟದೊಂದಿಗೆ ವಿಲೀನಗೊಳ್ಳಲು ಹಿಂದೇಟು ಹಾಕಿದವು. ಅಂಥ ರಾಜಮನೆತಗಳ ಜತೆಗೆ ಮಾತುಕತೆ ಅಥವಾ ಸೇನಾ ಪ್ರಯೋಗದ ಮೂಲಕ ಒಕ್ಕೂಟದೊಂದಿಗೆ ವಿಲೀನಗೊಳಿಸುವಲ್ಲಿ ಅವರು ಯಶಸ್ವಿಯಾದರು. ಕೇಂದ್ರ ಗೃಹ ಸಚಿವರಾಗಿ, ಉಪ ಪ್ರಧಾನಿಯಾಗಿ ಸರ್ದಾರ್ ಪಟೇಲ್ ಸೇವೆ ಸಲ್ಲಿಸದ್ದಾರೆ. 1875 ಅಕ್ಟೋಬರ್ 31ರಂದು ಜನಿಸಿದ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅವರು 1950 ಡಿಸೆಂಬರ್ 15ರಂದು ನಿಧನರಾದರು.

ನೇತಾಜಿ ಸುಭಾಶ್ ಚಂದ್ರ ಬೋಸ್

Netaji Subhash Chndra Bose

ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಪ್ರೀತಿಯಿಂದ ಕರೆದ ನೇತಾಜಿ ಸುಭಾಶ್ ಚಂದ್ರ ಬೋಸ್ (netaji subhas chandra bose) ಅವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮದೇ ಪ್ರತ್ಯೇಕ ಕಾಣಿಕೆಯನ್ನು ನೀಡಿದ್ದಾರೆ. ಆ ಮೂಲಕ ಅಂದು ಲಕ್ಷಾಂತರ ಭಾರತೀಯರು ಸಂಗ್ರಾಮದಲ್ಲಿ ಪಾಲ್ಗೊಳ್ಳಲು ಪ್ರೇರಣೆಯಾದರು. ಆಜಾದ್ ಹಿಂದ್ ಫೌಜ್ ಸ್ಥಾಪಿಸಿ ಬ್ರಿಟಿಷರ ವಿರುದ್ಧ ಸಶಸ್ತ್ರ ಬಂಡಾಯವನ್ನು ಹೂಡಿದರು. ಮೊದಲು ಕಾಂಗ್ರೆಸ್ ಮೂಲಕವೇ ಹೋರಾಟದಲ್ಲಿ ಪಾಲ್ಗೊಂಡರಾದರೂ ಗಾಂಧಿ ಮಾರ್ಗ ಅವರಿಗೆ ಹಿಡಿಸಲಿಲ್ಲ. ಸ್ವಾತಂತ್ರ್ಯವನ್ನು ಅಹಿಂಸಾ ಮಾರ್ಗದ ಬದಲಿಗೆ ಸಶಸ್ತ್ರದ ಹೋರಾಟದ ಮೂಲಕವೇ ಗಳಿಸಬೇಕೆಂದು ಪ್ರಬಲವಾಗಿ ಪ್ರತಿಪಾದಿಸಿದರು ಮತ್ತು ಅದೇ ನಿಟ್ಟಿನಲ್ಲಿ ನಡೆದರು. ಅದರ ಫಲವಾಗಿ ಅವರು ಆಜಾದ್ ಹಿಂದ್ ಸೇನೆಯನ್ನು ಕಟ್ಟಿದರು. ಹಾಗಾಗಿ, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸುಭಾಶ್ ಚಂದ್ರ ಭೋಸರದ್ದು ಮಹತ್ವದ ಪಾತ್ರವಿದೆ. ಆ ಕಾರಣಕ್ಕಾಗಿಯೇ ಜನರು ಅವರನ್ನು ಪ್ರೀತಿಯಿಂದ ನೇತಾಜಿ ಎಂದು ಕರೆಯುತ್ತಿದ್ದರು.

ಕ್ರಾಂತಿಯ ಕಿಡಿ ಭಗತ್ ಸಿಂಗ್

bhagat singh birthday

ಭಗತ್ ಸಿಂಗ್ (bhagat singh)ಅವರು ದೇಶಕಂಡ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರ ಪೈಕಿ ಅಗ್ರಗಣ್ಯರು. ಅವಿಭಜಿತ ಪಂಜಾಬ್ ರಾಜ್ಯದ ಸಿಖ್ ಕುಟುಂಬದಲ್ಲಿ 1907 ಸೆಪ್ಟೆಂಬರ್ 28ರಂದು ಜನಿಸಿದರು. 1928ರಲ್ಲಿ ಲಾಲಾ ಲಜಪತ್ ರಾಯ್ ಅವರ ಸಾವಿಗೆ ಪ್ರತೀಕಾರವಾಗಿ ಬ್ರಿಟಿಷ್ ಪೊಲೀಸ್ ಸೂಪರಿಂಟೆಂಡೆಂಟ್ ಜೇಮ್ಸ್ ಸ್ಕಾಟ್ ಅವರನ್ನು ಕೊಲ್ಲುವ ಯೋಜನೆಯಲ್ಲಿ ಭಗತ್ ಸಿಂಗ್ ಅವರು ಭಾಗಿಯಾಗಿದ್ದರು. ಆದರೆ, ಆಕಸ್ಮಿಕವಾಗಿ ಇನ್ನೊಬ್ಬ ಯುವ ಪೋಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದರು. ಬ್ರಿಟಿಷ್‌ರಿಂದ ತಪ್ಪಿಸಿಕೊಳ್ಳಲು ಲಾಹೋರ್‌ಗೆ ಪರಾರಿಯಾದರು. ತಮ್ಮ ಕ್ರಾಂತಿಕಾರಿ ವಿಚಾರಗಳ ಮೂಲಕ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ತುಂಬಿದರು. ಬಾಲಕರಿದ್ದಾಗಲೇ ಜಲಿಯನ್ ವಾಲಾಬಾಗ್ ಹತ್ಯಾಕಾಂಡವು ಅವರ ಮೇಲೆ ಪ್ರಭಾವ ಬೀರಿತ್ತು. ಅದೇ ಕಾರಣಕ್ಕೆ ಅವರು ಬ್ರಿಟಿಷರ ವಿರುದ್ಧ ಕಾಂತ್ರಿಯ ಮಾರ್ಗ ಹಿಡಿದರು. ಅಂತಿಮವಾಗಿ ಬ್ರಿಟಿಷರು ಅವರನ್ನು ಸೆರೆ ಹಿಡಿದು ಗಲ್ಲಿಗೇರಿಸಿದರು. ನೇಣಿಗೆ ಕೊರಳೊಡ್ಡಿದಾಗ ಅವರಿಗೆ ಕೇವಲ 23 ವರ್ಷ ವಯಸ್ಸಾಗಿತ್ತಷ್ಟೇ. ಈ ತರುಣ ಕ್ರಾಂತಿಕಾರಿ ಭಗತ್ ಸಿಂಗ್ ಈಗಲೂ ಭಾರತೀಯರಿಗೆ ಪ್ರೇರಣೆಯಾಗಿದ್ದಾರೆ.

ಲಾಲ್ ಬಹದ್ದೂರ್ ಶಾಸ್ತ್ರಿ

lal bahaddur shastri

ಭಾರತ ಕಂಡ ಅತ್ಯಂತ ಧೀಮಂತ ನಾಯಕ ಲಾಲ್ ಬಹದ್ದೂರ್ ಶಾಸ್ತ್ರಿ(Lal bahadur shastri). 1904 ಅಕ್ಟೋಬರ್ 2ರಂದು ಉತ್ತರ ಪ್ರದೇಶದ ಮೊಘಲ್‌ಸರಾಯಿಯಲ್ಲಿ ಜನಿಸಿದರು. ಅವರು ಕಾಶಿ ವಿದ್ಯಾಪೀಠದಲ್ಲಿ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದಾಗ ಅವರಿಗೆ “ಶಾಸ್ತ್ರಿ” ವಿದ್ವಾಂಸ ಎಂಬ ಬಿರುದು ನೀಡಲಾಯಿತು. ಗಾಂಧಿ ಅವರಿಂದ ಪ್ರೇರಣೆಗೊಂಡ ಶಾಸ್ತ್ರಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡರು. ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಅನೇಕ ಬಾರಿ ಅವರು ಸೆರೆಮನೆವಾಸ ಕೂಡ ಅನುಭವಿಸಬೇಕಾಯಿತು. ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿ ಗಮನಾರ್ಹ ಕೊಡುಗೆಯನ್ನು ನೀಡಿದ್ದಾರೆ. ಜೈ ಜವಾನ್ ಮತ್ತು ಜೈ ಕಿಸಾನ್ ಎಂಬ ಮಂತ್ರದ ಮೂಲಕ ದೇಶವನ್ನು ಪ್ರಗತಿಯಲ್ಲಿ ಕೊಂಡೊಯ್ದರು. 1966ರ ಜನವರಿ 11ರಂದು ಶಾಸ್ತ್ರಿ ಅವರು ತಾಷ್ಕೆಂಟ್‌ನಲ್ಲಿ ನಿಧನರಾದರು.

ರಾಮ ಪ್ರಸಾದ್ ಬಿಸ್ಮಿಲ್

Ram Prasad Bismil

ಭಾರತ ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳ ಪೈಕಿ ರಾಮ್ ಪ್ರಸಾದ್ ಬಿಸ್ಮಿಲ್ (ram prasad bismil) ಪ್ರಮುಖರು. ಸ್ವಾತಂತ್ರ್ಯದೆಡೆಗಿನ ಉತ್ಕಟ ಬಯಕೆ ಹಾಗೂ ಕಾಂತ್ರಿಕಾರಿ ಮನೋಭಾವ ಅವರನ್ನು ಇತರ ನಾಯಕರಿಗಿಂತಲೂ ಭಿನ್ನವಾಗಿಸಿತ್ತು. ಹಾಗಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ರಾಮ್ ಪ್ರಸಾದ್ ಅವರಿಗೆ ವಿಶೇಷವಾದ ಸ್ಥಾನವಿದೆ. ಕ್ರಾಂತಿಕಾರಿಗಳಿಗೆ ಪ್ರೇರಣೆ ನೀಡುತ್ತಿದ್ದ ಸರ್ಪರೋಷಿ ಕಿ ತಮ್ಮನ್ನ ಗೀತೆಯನ್ನು ಬರೆದಿದ್ದು ಇವರೇ. ರಾಮ್ ಪ್ರಸಾದ್ ಅವರು ಹೋರಾಟಗಾರರು ಮಾತ್ರವಲ್ಲದೇ, ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಉತ್ತಮ ಕವಿಯೂ ಆಗಿದ್ದರು. ರಾಮ್, ಅಜ್ಞಾತ್ ಮತ್ತು ಬಿಸ್ಮಿಲ್ ಎಂಕ ಅಂಕಿತನಾಮದಲ್ಲಿ ದೇಶಭಕ್ತಿಯನ್ನು ಬಡಿದೆಬ್ಬಿಸುವ ಕವಿತೆಗಳನ್ನು ಬರೆಯುತ್ತಿದ್ದರು. ಹಿಂದುಸ್ತಾನ್ ರಿಪಬ್ಲಿಕನ್ ಅಸೋಷಿಯೇಶನ್ ಎಂಬ ಕ್ರಾಂತಿಕಾರಿ ಸಂಸ್ಥೆಯನ್ನು ಸ್ಥಾಪಿಸಿದ್ದರು. ಬ್ರಿಟಿಷರ್ ರಾಮಪ್ರಸಾದ್ ಬಿಸ್ಮಿಲ್ ಅವರನ್ನು 1927 ಡಿಸೆಂಬರ್ 27ರಂದು ಗೋರಖಪುರ ಜೈಲಿನಲ್ಲಿ ನೇಣಿಗೇರಿಸಿದರು.

ರಾಣಿ ಲಕ್ಷ್ಮೀಬಾಯಿ

Rani Laxmibai

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳಾ ಹೋರಾಟಗಾರರ ಪಾತ್ರವೂ ಹಿರಿದಾಗಿದೆ. ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ ಎಂದು ದಾಖಲಾಗಿರುವ 1857ರ ಹೋರಾಟದ ನೇತೃತ್ವವನ್ನು ಝಾನ್ಸಿಯ ರಾಣಿ ಲಕ್ಷ್ಮೀ ಬಾಯಿ (rani lakshmi bai) ಅವರು ಹೊತ್ತುಕೊಂಡಿದ್ದರು. ಭಾರತದ ಹೋರಾಟದಲ್ಲಿ ಲಕ್ಷ್ಮೀ ಬಾಯಿ ಅವರ ಕಾಣಿಕೆ ಅತ್ಯಮೂಲ್ಯವಾಗಿದೆ. 1828ರಲ್ಲಿ ಜನಿಸಿದ ಝಾನ್ಸಿ ರಾಣಿ ಸ್ವಾತಂತ್ರ್ಯ ಹೋರಾಟದ ಕಿಚ್ಚಿಗೆ ಕಾರಣರಾದರು. ಅಂದು ಅವರು ಬ್ರಿಟಿಷ್‌ರ ವಿರುದ್ಧ ತೋರಿದ ಕೆಚ್ಚೆದೆಯ ಹೋರಾಟವು ಮುಂದೆ ಹೋರಾಟದಲ್ಲಿ ಅನೇಕರಿಗೆ ದಾರೀದೀಪವಾಯಿತು.

ಮಂಗಲ್ ಪಾಂಡೆ

Mangal Pandey

1827ರಲ್ಲಿ ಜನಿಸಿದ ಮಂಗಲ್ ಪಾಂಡೆ (mangal pandey) ಸ್ವಾತಂತ್ರ್ಯ ಚಳುವಳಿಯ ಪ್ರವರ್ತಕರಾಗಿದ್ದರು. 1857ರ ಸ್ವಾತಂತ್ರ್ಯ ಹೋರಾಟ ಆರಂಭವಾಗಲು ಕಾರಣರಾದರು. ಬ್ರಿಟಿಷ್ ಸೇನೆಯಲ್ಲಿ ಭಾರತೀಯ ಯೋಧರು ಬ್ರಿಟಿಷರ ವಿರುದ್ಧ ತಿರುಗಿ ಬೀಳಲು ಕಾರಣಿಭೂತರಾದರು. ಈಸ್ಟ್ ಇಂಡಿಯಾ ಕಂಪನಿಯ ಮೂಲಕ ಭಾರತದಲ್ಲಿ ಅಧಿಕಾರ ನಡೆಸುತ್ತಿದ್ದ ಬ್ರಿಟಿಷ್‌ರಿಗೆ ಮೊದಲ ಬಾರಿಗೆ ಚುರುಕು ಮುಟ್ಟಿಸಿದರು. 1857ರ ದಂಗೆಯ ಬಳಿಕ ಈಸ್ಟ್ ಇಂಡಿಯಾ ಕಂಪನಿ ಕೈಯಲ್ಲಿದ್ದ ಅಧಿಕಾರವನ್ನು ಬ್ರಿಟಿಷ್ ಆಡಳಿತವು ತನ್ನ ಕೈಗೆ ತೆಗೆದುಕೊಂಡಿತು. ಅಷ್ಟರ ಮಟ್ಟಿಗೆ ಮಂಗಲ್ ಪಾಂಡೆ ಅವರು ಬ್ರಿಟಿಷ್‌ರಿಗೆ ದುಸ್ವಪ್ನವಾಗಿದ್ದರು. ಭಾರತ ಸ್ವಾತಂತ್ರ್ಯ ಹೋರಾಟದ ಮೊದಲ ಕ್ರಾಂತಿಯ ಕಿಡಿ ಮಂಗಲ್ ಪಾಂಡೆ ಅವರು.

ಈ ಸುದ್ದಿಯನ್ನೂ ಓದಿ: Independence Day 2023 : ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾದ ಸ್ಥಳಗಳಿವು

ನಾನಾ ಸಾಹೀಬ್

Nana Sahib

1857ರ ಸ್ವಾತಂತ್ರ್ಯ ಹೋರಾಟದಲ್ಲಿ ತೀವ್ರ ಕ್ರಾಂತಿಕಾರಿಗಳ ಗುಂಪನ್ನು ಮುನ್ನಡೆಸಿದವರು ನಾನಾ ಸಾಹಿಬ್ (Nana Sahib) ಅವರು. ಈಸ್ಟ್ ಇಂಡಿಯಾ ಕಂಪನಿಯ ಸೈನಿಕರನ್ನು ಕಾನ್ಪುರದಲ್ಲಿ ಸದೆಬಡಿದರು. ಅಳಿದುಳಿದ ಬ್ರಿಟಿಷ್ ಸೈನಿಕರಿಗೆ ಯಮಲೋಕದ ದಾರಿ ತೋರಿಸಿದರು. ಬ್ರಿಟಿಷ್ ಶಿಬಿರವನ್ನು ಧ್ವಂಸ ಮಾಡಿದರು. ನಾನಾ ಸಾಹಿಬ್ ಕೇವಲ ಧೈರ್ಯಶಾಲಿ ಮಾತ್ರವಲ್ಲ ನಿರ್ಭಿತ ಕೂಡ ಆಗಿದ್ದರು. ಜತೆಗೆ, ನೂರಾರು ಭಾರತೀಯ ಪಡೆಗಳನ್ನು ನಿರ್ವಹಿಸಿದ ಮತ್ತು ಸಂಘಟಿಸಿದ ಪ್ರತಿಭಾನ್ವಿತ ಆಡಳಿತಗಾರರಾಗಿದ್ದರು. ಅವರು ಭಾರತದ ಅತ್ಯುತ್ತಮ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ( FSSAI Warning) ನೀಡಲಾಗಿದೆ.

VISTARANEWS.COM


on

By

FSSAI alert
Koo

ಮಾರುಕಟ್ಟೆಯಲ್ಲಿ (market) ಮಾವಿನ (mango) ಹಣ್ಣುಗಳ ರಾಶಿ ಕಂಡಾಗ ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ಆದರೆ ನಾವು ಹಣ ಕೊಟ್ಟು ಖರೀದಿ ಮಾಡಿ ತಂದ ಮಾವಿನ ಹಣ್ಣುಗಳು ಸುರಕ್ಷಿತವಾಗಿ ಇದೆಯೇ? ಯಾಕೆಂದರೆ ಮಾವಿನ ಹಣ್ಣುಗಳಲ್ಲಿರುವ ಕ್ಯಾಲ್ಸಿಯಂ ಕಾರ್ಬೈಡ್ (calcium carbide) ಅಪಾಯಗಳ ವಿರುದ್ಧ ಕೇಂದ್ರ ಆಹಾರ ನಿಯಂತ್ರಣ ಸಂಸ್ಥೆಯಾದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI Warning) ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವುದರ ಬಗ್ಗೆ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರೈಪನಿಂಗ್ ಚೇಂಬರ್‌ಗಳನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಎಫ್‌ಎಸ್‌ಎಸ್‌ಎಐ ಎಚ್ಚರಿಕೆ ನೀಡಿದೆ.
ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ನೀಡಲಾಗಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸುವುದರ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಫ್‌ಎಸ್‌ಎಸ್‌ಎಐ ಹಣ್ಣಿನ ವ್ಯಾಪಾರಿಗಳು, ಹ್ಯಾಂಡ್ಲರ್‌ಗಳು ಮತ್ತು ಫುಡ್ ಬ್ಯುಸಿನೆಸ್ ಆಪರೇಟರ್‌ಗಳು (ಎಫ್‌ಬಿಒಗಳು) ಪಕ್ವಗೊಳಿಸುವ ಕೋಣೆಗಳನ್ನು ನಿರ್ವಹಿಸುವ ಎಚ್ಚರಿಕೆ ನೀಡಿದೆ.

ಕ್ಯಾಲ್ಸಿಯಂ ಕಾರ್ಬೈಡ್‌ನ ಪರಿಣಾಮ?

ಮಾವಿನಹಣ್ಣಿನಂತಹ ಹಣ್ಣುಗಳನ್ನು ಹಣ್ಣಾಗಲು ಬಳಸುವ ಕ್ಯಾಲ್ಸಿಯಂ ಕಾರ್ಬೈಡ್, ಆರ್ಸೆನಿಕ್ ಮತ್ತು ಫಾಸ್ಪರಸ್‌ನ ಹಾನಿಕಾರಕ ಕುರುಹುಗಳನ್ನು ಹೊಂದಿರುವ ಅಸಿಟಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತದೆ. ‘ಮಸಾಲಾ’ ಎಂದು ಕರೆಯಲ್ಪಡುವ ಈ ಪದಾರ್ಥಗಳು ತಲೆತಿರುಗುವಿಕೆ, ಆಗಾಗ್ಗೆ ಬಾಯಾರಿಕೆ, ಕಿರಿಕಿರಿ, ದೌರ್ಬಲ್ಯ, ನುಂಗಲು ತೊಂದರೆ, ವಾಂತಿ ಮತ್ತು ಚರ್ಮದ ಹುಣ್ಣುಗಳನ್ನು ಉಂಟುಮಾಡಬಹುದು. ಅಸಿಟಿಲೀನ್ ಅನಿಲವು ಹ್ಯಾಂಡ್ಲರ್‌ಗಳಿಗೆ ಅಪಾಯಕಾರಿಯಾಗಿದೆ ಮತ್ತು ಆರ್ಸೆನಿಕ್ ಮತ್ತು ರಂಜಕದ ಅವಶೇಷಗಳು ಹಣ್ಣುಗಳ ಮೇಲೆ ಉಳಿಯಬಹುದು.

ಸಾಮಾನ್ಯವಾಗಿ ಕಾರ್ಬೈಡ್ ಗ್ಯಾಸ್ ಎಂದು ಕರೆಯಲ್ಪಡುವ ಅಸಿಟಿಲೀನ್ ಅನಿಲದ ಬಳಕೆಯಿಂದ ಕೃತಕವಾಗಿ ಮಾಗಿದ ಹಣ್ಣುಗಳನ್ನು ಯಾವುದೇ ವ್ಯಕ್ತಿಯು ಮಾರಾಟ ಮಾಡಬಾರದು ಎಂದು ಆಹಾರ ಸುರಕ್ಷತೆ ಮತ್ತು ಮಾನದಂಡಗಳು ನಿಷೇಧ ಮತ್ತು ಮಾರಾಟದ ಮೇಲಿನ ನಿರ್ಬಂಧಗಳ ನಿಯಮಗಳು-2011 ಹೇಳುತ್ತವೆ.


ಯಾವುದಕ್ಕೆ ಅನುಮತಿ ಇದೆ?

ಎಫ್‌ಎಸ್‌ಎಸ್‌ಎಐ ಪ್ರಕಾರ ಹಣ್ಣು ಹಣ್ಣಾಗಿಸಲು ಸುರಕ್ಷಿತ ಪರ್ಯಾಯವಾಗಿ ಎಥಿಲೀನ್ ಅನಿಲವನ್ನು ಬಳಸಲು ಅನುಮತಿ ನೀಡುತ್ತದೆ. ಎಥಿಲೀನ್ ಅನಿಲ, 100ಪಿಪಿಎಂವರೆಗಿನ ಸಾಂದ್ರತೆಗಳಲ್ಲಿ ಹಣ್ಣಾಗುವುದನ್ನು ನಿಯಂತ್ರಿಸುವ ನೈಸರ್ಗಿಕ ಹಾರ್ಮೋನ್ ಆಗಿದೆ. ಹಣ್ಣು ಎಥಿಲೀನ್ ಅನ್ನು ಗಣನೀಯ ಪ್ರಮಾಣದಲ್ಲಿ ಉತ್ಪಾದಿಸುವವರೆಗೆ ಇದು ನೈಸರ್ಗಿಕ ಮಾಗಿದ ಪ್ರಕ್ರಿಯೆಯನ್ನು ಪ್ರಚೋದಿಸುತ್ತದೆ. ಹೆಚ್ಚುವರಿಯಾಗಿ ಕೇಂದ್ರೀಯ ಕೀಟನಾಶಕ ಮಂಡಳಿ ಮತ್ತು ನೋಂದಣಿ ಸಮಿತಿ (CIB & RC) ಮಾವು ಮತ್ತು ಇತರ ಹಣ್ಣುಗಳ ಏಕರೂಪದ ಪಕ್ವತೆಗಾಗಿ ಎಥೆಫೋನ್ 39 ಪ್ರತಿಶತ ಎಸ್ ಎಲ್ ಅನ್ನು ಅನುಮೋದಿಸಿದೆ.

ಗುರುತಿಸುವುದು ಹೇಗೆ?

ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಹಣ್ಣಾದ ಮಾವಿನ ಹಣ್ಣನ್ನು ಗುರುತಿಸುವುದು ಸುಲಭ.

ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿ

ಹಣ್ಣುಗಳು ಮತ್ತು ತರಕಾರಿಗಳನ್ನು ತಿಳಿದಿರುವ ಮಾರಾಟಗಾರರು, ಪ್ರತಿಷ್ಠಿತ ಅಂಗಡಿಗಳು ಅಥವಾ ವಿತರಕರು ತಮ್ಮ ಉತ್ಪನ್ನಗಳನ್ನು ಹಾನಿಕಾರಕ ಅಥವಾ ನಿಷೇಧಿತ ರಾಸಾಯನಿಕಗಳಿಂದ ಹಣ್ಣಾಗಿಲ್ಲ ಎಂದು ಹೇಳಿಕೊಳ್ಳುತ್ತಾರೆ.

ಸಂಪೂರ್ಣವಾಗಿ ತೊಳೆಯುವುದು

ಯಾವುದೇ ಸಂಭಾವ್ಯ ಮೇಲ್ಮೈ ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ತಿನ್ನುವ ಮೊದಲು ಕುಡಿಯುವ ನೀರಿನಲ್ಲಿ ಹಣ್ಣುಗಳನ್ನು ಚೆನ್ನಾಗಿ ತೊಳೆಯಿರಿ.

ಕಪ್ಪು ಕಲೆಗಳನ್ನು ತಪ್ಪಿಸಿ

ಮಾವಿನ ಹಣ್ಣುಗಳ ಚರ್ಮದ ಮೇಲೆ ಕಪ್ಪು ಮಚ್ಚೆಗಳಿರುವ ಹಣ್ಣುಗಳಿಂದ ದೂರವಿರಿ. ಏಕೆಂದರೆ ಇವುಗಳು ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಅಸಿಟಿಲೀನ್ ಅನಿಲದಿಂದ ಹಣ್ಣಾಗುತ್ತವೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ವಿನ್ಯಾಸವನ್ನು ಪರಿಶೀಲಿಸಿ

ಏಕರೂಪದ ಬಣ್ಣದ ವಿನ್ಯಾಸದೊಂದಿಗೆ ಮಾವಿನಹಣ್ಣು ಮತ್ತು ಇತರ ಹಣ್ಣುಗಳ ಬಗ್ಗೆ ಜಾಗರೂಕರಾಗಿರಿ. ಏಕೆಂದರೆ ಇದು ಸಂಭವನೀಯ ರಾಸಾಯನಿಕ ಪಕ್ವತೆಯ ಸಂಕೇತವಾಗಿದೆ.

ವಾಸನೆ ಮತ್ತು ಶೆಲ್ಫ್ ಲೈಫ್

ಕಲಬೆರಕೆ ಹಣ್ಣುಗಳು ಸ್ವಲ್ಪ ಕಟುವಾದ ವಾಸನೆ ಮತ್ತು ಕಡಿಮೆ ಶೆಲ್ಫ್ ಜೀವಿತಾವಧಿಯನ್ನು ಹೊಂದಿರುತ್ತದೆ ಎಂಬುದು ತಿಳಿದಿರಲಿ. ಸಾಮಾನ್ಯವಾಗಿ ಮಾಗಿದ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಸೂಚಿಸುತ್ತದೆ.

Continue Reading

ದೇಶ

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

British Journalist:ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

VISTARANEWS.COM


on

British Journalist
Koo

ನವದೆಹಲಿ: ಹಾವು ಆಡಿಸುವವರ ದೇಶ ಎಂದು ಭಾರತವನ್ನು ಜರಿಯುತ್ತಿದ್ದ ಪ್ರಪಂಚದ ದೊಡ್ಡ ದೊಡ್ಡ ರಾಷ್ಟ್ರಗಳು ಇತ್ತೀಚಿನ ಕೆಲವು ವರ್ಷಗಳಿಂದ ಭಾರತದ ಎದುರು ಮಂಡಿಯೂರಿದೆ ಎಂದರೆ ತಪ್ಪಾಗಲಾರದು. ಶತ್ರು ರಾಷ್ಟ್ರ ಪಾಕಿಸ್ತಾನ(Pakistan)ವೂ ಸೇರಿದಂತೆ ವಿವಿಧ ರಾಷ್ಟ್ರಗಳು ನಿರಂತರವಾಗಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಭಾರತವನ್ನು ಹಾಡಿ ಹೊಗಳುತ್ತಿವೆ. ಇದೀಗ ಇಂಗ್ಲೆಂಡ್‌ನ ಪತ್ರಕರ್ತ(British Journalist)ನೋರ್ವ ಭಾರತ(India)ದ ಬಗ್ಗೆ ಬಹಳ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಇಂಗ್ಲೆಂಡ್‌ ಮೂಲಕ ಪತ್ರಿಕೆ ಡೈಲಿ ಎಕ್ಸ್‌ಪ್ರೆಸ್‌ನ ಸಹಾಯಕ ಸಂಪಾದಕರಾಗಿರುವ ಸ್ಯಾಮ್‌ ಸ್ಟೀವನ್‌ಸನ್‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಭಾರತದ ಬಗ್ಗೆ ಹೇಳಲು ಸಾಕಷ್ಟು ವಿಚಾರಗಳಿವೆ. ಭಾರತ ವಿರೋಧಿ ಎಂಬ ಬಕ್ವಾಸ್‌ ಚಿಂತನೆ ಮೂಲಕ ಭಾರತದ ಬಗ್ಗೆ ತಪ್ಪು ಮಾಹಿತಿ ಹಂಚುವ ಪ್ರಯತ್ನಗಳು ನಡೆಯುತ್ತಿದೆ. ನಾವು ಭಾರತದ ಬಗ್ಗೆ ಸತ್ಯವನ್ನು ಹೇಳಬೇಕಿದೆ. ಅಲ್ಲದೇ ನವ ಭಾರತದ ಧನಾತ್ಮಕವಾದ ವಿಚಾರಗಳನ್ನು ಪ್ರಪಂಚಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.

ಭಾರತದ ಬಗ್ಗೆ ಇಂಗ್ಲೆಂಡ್‌ನಲ್ಲಿ ಕೆಲವೊಂದು ನಕಾರಾತ್ಮಕ ವಿಚಾರಗಳನ್ನು ತುಂಬಲಾಗುತ್ತಿದೆ. ಅದೂ ಅಲ್ಲದೇ ಇಡೀ ಯೂರೋಪ್‌ನಲ್ಲಿ ಭಾರತದ ಬಗ್ಗೆ ಇಲ್ಲ ಸಲ್ಲದ ಕಥೆಗಳನ್ನು ಹುಟ್ಟಿಸಿ ಹೇಳಲಾಗುತ್ತಿದೆ. ನಮಗೆ ಭಾರತದಲ್ಲಿ ಧಾರ್ಮಿಕ ಸಂಘರ್ಘ ಇರುವುದನ್ನೇ ಎತ್ತಿ ತೋರಿಸಲಾಗುತ್ತಿದೆ. ಆದರೆ ಭಾರತಕ್ಕೆ ಬಂದು ನೋಡದಾಗಲೇ ಕೇಳಿವ ವಿಚಾರಕ್ಕೂ ವಾಸ್ತವಕತೆಗೂ ಬಹಳಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ಸಂಪೂರ್ಣವಾಗಿ ಬುರ್ಖಾ ಧರಿಸಿ ಮುಸ್ಲಿಂ ಮಹಿಳೆಯರು ಭಾಗಿಯಾಗುವುದನ್ನು ನಾನು ನೋಡಿದ್ದೇನೆ. ವಿವಿಧತೆಯಲ್ಲಿ ಏಕತೆ ಎಂಬ ವಿಚಾರವನ್ನು ನಾವು ಇಲ್ಲಿ ಮಾತ್ರ ಕಾಣಬಹುದಾಗಿದೆ. ನಾವು ಇಲ್ಲಿ ಭಾರತದ ಬಗ್ಗೆ ಸುದ್ದಿ ಕವರೇಜ್‌ಗಾಗಿ ಬಂದಿದ್ದೇವೆ. ನಾವು ಇಲ್ಲಿ ಭಾರತದ ಬಗ್ಗೆ ಹಲವು ನಿಜಾಂಶವನ್ನು ಕಂಡುಕೊಂಡಿದ್ದು, ಅವುಗಳನ್ನು ಲಂಡನ್‌ಗೆ ಮರಳಿ ಕೊಂಡೊಯ್ಯವುದೇ ನಮ್ಮ ಗುರಿ. ವಿದೇಶಿ ಮಾಧ್ಯಮಗಳಲ್ಲಿ ಭಾರತ ಬಗೆಗಿನ ನಕಾರಾತ್ಮಕ ಸುದ್ದಿಗಳ ಬಿತ್ತರದಿಂದ ನಾವು ಬೇಸತ್ತಿದ್ದೇವೆ. ಇದು ನಿಜಕ್ಕೂ ನಾಚಿಗೇಡಿನ ವಿಚಾರ. ನಿಜಕ್ಕೂ ಜನ ಇಲ್ಲಿ ಬಂದು ಕಣ್ಣಾರೆ ನೋಡಬೇಕು, ಇಲ್ಲಿ ಕೆಲ ಕಾಲ ಜನರೊಡನೆ ಬೆರೆಯಬೇಕು. ಆಗ ಮಾತ್ರ ಭಾರತ ಏನು ಎಂಬ ವಿಚಾರ ಅರ್ಥವಾಗಲು ಸಾಧ್ಯ ಎಂದು ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20). ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20) (Job Alert). ಗಮನಿಸಿ ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.
Continue Reading

ದೇಶ

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

IT Raid:ರೇಡ್‌ ವೇಳೆ 40ಕೋಟಿ ರೂ. ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇವಲ 500ರೂ. ಮುಖಬೆಲೆಯ ನೋಟುಗಳಾಗಿದ್ದು, ಅಧಿಕಾರಿಗಳು ನೋಟು ಎಣಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

IT Raid
Koo

ಉತ್ತರಪ್ರದೇಶ: ಶೂ ತಯಾರಿಕಾ ಉದ್ಯಮಿಗಳ ಮೇಲೆ ಆದಾಯ ತೆರಿಗೆ(IT Raid) ಅಧಿಕಾರಿಗಳು ದಾಳಿ ನಡೆಸಿ, ಬರೊಬ್ಬರಿ 40 ಕೋಟಿ ರೂ.ನಗದನ್ನು ವಶಕ್ಕೆ ಪಡೆದಿರುವ ಘಟನೆ ಉತ್ತರಪ್ರದೇಶ(Uttar Pradesh)ದ ಆಗ್ರಾದಲ್ಲಿ ನಡೆದಿದೆ. ಶನಿವಾರ ಆಗ್ರಾದ ಮೂರು ಶೂ ವ್ಯಾಪಾರಿ(Shoe Business)ಗಳ ನಿವಾಸ ಮತ್ತು ಕಚೇರಿ ಮೇಲೆ ರೇಡ್‌ ಮಾಡಿರುವ ಐಟಿ, ಭಾರೀ ಶೋಧ ಕಾರ್ಯಾಚರಣೆ ನಡೆಸಿದೆ.

ರೇಡ್‌ ವೇಳೆ 40ಕೋಟಿ ರೂ. ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಅಕ್ರಮ ಹಣದ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇವಲ 500ರೂ. ಮುಖಬೆಲೆಯ ನೋಟುಗಳಾಗಿದ್ದು, ಅಧಿಕಾರಿಗಳು ನೋಟು ಎಣಿಕೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೂ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ವ್ಯಾಪಾರಿಗಳ ವಿವರ ಇನ್ನೂ ಬಹಿರಂಗಪಡಿಸಿಲ್ಲ. ಇನ್ನು ಮಂಚದ ಮೇಲೆ ಕಂತೆ ಕಂತೆ ನೋಟುಗಳನ್ನು ಅಧಿಕಾರಿಗಳು ಜೋಡಿಸಿಟ್ಟಿರುವ ಫೋಟೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಕೆಲವು ದಿನಗಳ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದರು. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

Continue Reading
Advertisement
Prajwal Revanna Case
ಕರ್ನಾಟಕ4 mins ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Karnataka Rain
ಮಳೆ7 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

FSSAI alert
ಆರೋಗ್ಯ14 mins ago

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

Kannada New Movie Sambavami Yuge Yuge 4K Motion Poster
ಸಿನಿಮಾ24 mins ago

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

Prajwal Revanna Case
ಕರ್ನಾಟಕ34 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ41 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ44 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ46 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ52 mins ago

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ53 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ53 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌