HD Kumaraswamy : 2 ದಿನ ಕಾಯಿರಿ, ಬಿಬಿಎಂಪಿ ಕರ್ಮಕಾಂಡ ಮುಂದಿಡುತ್ತೇನೆ: ಎಚ್.ಡಿ. ಕುಮಾರಸ್ವಾಮಿ - Vistara News

ಕರ್ನಾಟಕ

HD Kumaraswamy : 2 ದಿನ ಕಾಯಿರಿ, ಬಿಬಿಎಂಪಿ ಕರ್ಮಕಾಂಡ ಮುಂದಿಡುತ್ತೇನೆ: ಎಚ್.ಡಿ. ಕುಮಾರಸ್ವಾಮಿ

HD Kumaraswamy : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಇನ್ನೆರೆಡು ದಿನದಲ್ಲಿ ಬಿಬಿಎಂಪಿಯಲ್ಲಿ ನಡೆಯುತ್ತಿರುವ ವಿದ್ಯಮಾನವನ್ನು ಬಹಿರಂಗ ಪಡಿಸುವುದಾಗಿ ಹೇಳಿದ್ದಾರೆ.

VISTARANEWS.COM


on

HD Kumaraswamy and DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇನ್ನು ಎರಡು ದಿನ ಕಾಯಿರಿ, ಬಿಬಿಎಂಪಿಯಲ್ಲಿ (BBMP) ಏನು ನಡೆಯುತ್ತಿದೆ ಎಂಬುದನ್ನು ನಿಮ್ಮ ಮುಂದೆ ಇಡುತ್ತೇನೆ. ಆದರೆ, ಯಾವುದೇ ದಾಖಲೆ ಬಿಡುಗಡೆ ಮಾಡುವುದಿಲ್ಲ. ನಾನು ಪೆನ್‌ಡ್ರೈವ್ ಬಿಡುಗಡೆ ಮಾಡಿದರೆ ನಕಲಿ ಅಂತಾರೆ. ಸಿಒಡಿಯನ್ನು ಜತೆಯಲ್ಲಿಯೇ ಇಟ್ಟುಕೊಂಡಿದ್ದಾರೆ. ದಾಖಲೆ ಬಿಡುಗಡೆ ಮಾಡಿದರೆ ಸಿಒಡಿ ತನಿಖೆ (COD investigation) ಅಂತಾರೆ. ಅಧಿಕಾರಿಗಳು ಇವರು ಹೇಳಿದ ಹಾಗೆ ವರದಿ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ನನ್ನ ಹತ್ತಿರ ಇರುವುದು ಖಾಲಿ ಪೆನ್‌ಡ್ರೈವ್‌ ಅಲ್ಲ. ಇವರು ನನ್ನ ಬಗ್ಗೆ ಹಿಟ್ ಆ್ಯಂಡ್ ರನ್ ಅಂತ ಮಾತನಾಡುತ್ತಾರೆ. 1983ರಲ್ಲಿ ವೀರಪ್ಪ ಮೊಯ್ಲಿ ಟೇಪ್ (Veerappa Moily tape) ಅಂತಾನೇ ನಡೆಯಿತು. ಅದು ಏನಾದ್ರೂ ತಾರ್ಕಿಕ ಅಂತ್ಯ ಕಂಡಿತಾ? ಫೇಕ್ ಟೇಪ್ ಅಂದರು. ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ರಾಜ್ಯಪಾಲರಿಗೆ ನಾನು ಲೆಟರ್ ಬರೆದೆನಾ? ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ (Chief Secretary of Karnataka) ಸಹ ಪತ್ರ ಬರೆದಿದ್ದಾರೆ. ಸಿಎಸ್‌ಗೂ ಪತ್ರ ಬರೆದಿದ್ದಾರೆ. ನಾನು ರಾಜ್ಯಪಾಲರ ಮೇಲೆ ಪ್ರಭಾವ ಬೆಳೆಸುವ ಮಟ್ಟಿಗೆ ಇದ್ದೇನಾ? ಇದರ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಾರೆ. ಅಧಿಕಾರ ಮತ್ತು ದುಡ್ಡು ಇರುವವರ ನಡುವೆ ಸತ್ಯ ಹೊರ ಬರುತ್ತಾ? ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: PM Speech: ಪರಿವಾರವಾದದ ವಿರುದ್ಧ ಮೋದಿ ಗುಡುಗು; ಕೆಂಪು ಕೋಟೆ ಮೇಲೆ ನಿಂತು ಪ್ರತಿಪಕ್ಷಗಳಿಗೆ ವಾಗ್ಬಾಣ

ಕರ್ನಾಟಕಕ್ಕೆ ಬಂದಿದೆ ಆಪತ್ತು

ದೇಶ ಅಪಾಯದ ಸ್ಥಿತಿಯಲ್ಲಿದೆ. ದೇಶದ ಭದ್ರತೆ, ಆರ್ಥಿಕತೆ ಹಾಳಾಗಿದೆ ಎಂದು ಡಿ.ಕೆ. ಶಿವಕುಮಾರ್ ಭಾಷಣ ಮಾಡುತ್ತಾರೆ. ಅವರು ಹೇಳಿದಂತೆ ದೇಶದ ಭದ್ರತೆ ಹಾಳಾಗಿದೆ ಎಂದೇ ಅಂದುಕೊಳ್ಳೋಣ ಬಿಡಿ. ಆದರೆ, ರಾಜ್ಯದ ಭದ್ರತೆ ಏನಾಗಿದೆ? ಅದರ ಬಗ್ಗೆ ಡಿಕೆಶಿ ಮೊದಲು ಮಾತನಾಡಲಿ. ಆ ಗುತ್ತಿಗೆದಾರ ಅಂದು ಅಜ್ಜಯ್ಯನ ಮೇಲೆ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದರು. ಆದರೆ, ಸೋಮವಾರ (ಆಗಸ್ಟ್‌ 14) ಹೇಳಿಕೆ ಬದಲಿಸಿ, ನಾನು ಮನನೊಂದು ಹಾಗೆ ಹೇಳಿದೆ ಅಂತಾನೆ. ಆ ಗುತ್ತಿಗೆದಾರ ಯಾರನ್ನು ಎಷ್ಟು ಗಂಟೆಗೆ ಎಲ್ಲಿ ಭೇಟಿ ಮಾಡಿದ ಅಂತ ಹೇಳಲಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು. ಹಾಗಾದರೆ ಗುತ್ತಿಗೆದಾರ ಹೇಮಂತ್‌ಗೆ ಬೆದರಿಕೆ ಹಾಕಲಾಗಿದೆಯಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಎಚ್‌ಡಿಕೆ ಅದನ್ನೇ ನಾನು ಹೇಳುತ್ತಾ ಇರೋದು. ಇವರು ರಾಜ್ಯದಲ್ಲಿನ ಜನರ ಭದ್ರತೆ ಏನಾಗಿದೆ ಎಂಬುದನ್ನು ಹೇಳಲಿ. ಮೊದಲು ಆ ಗುತ್ತಿಗೆದಾರ ಯಾಕೆ ಉಲ್ಟಾ ಹೊಡೆಯುತ್ತಿದ್ದಾರೆ ಎಂಬುದು ಮುಖ್ಯ. ಇದೇ ಕರ್ನಾಟಕಕ್ಕೆ ಬಂದಿರುವ ಆಪತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಅವರಿಗೆ ಮಾತ್ರ ಅಜ್ಜಯ್ಯನ ರಕ್ಷಣೆ ಇರೋದಾ? ನಮಗೆ ಇಲ್ಲವೇ? ನಾವು ರಕ್ಷಣೆಗಾಗಿ ಹುಡಕಬೇಕು. ಮುಂದಿನ 10-20 ವರ್ಷ ನಾವೇ ಅಂತ ಹೇಳುತ್ತಿದ್ದಾರೆ. ಸದನದಲ್ಲಿ ಆಗ ಬಿ.ಎಸ್.‌ ಯಡಿಯೂರಪ್ಪ ಅವರು ಮುಂದಿನ 20 ವರ್ಷ ತಾವೇ ಅಧಿಕಾರದಲ್ಲಿ ಇರೋದು ಅಂತ ಹೇಳಿದರು. ಆ ಮಾತು ಸದನದಲ್ಲಿ ರೆಕಾರ್ಡ್‌ ಕೂಡಾ ಆಗಿದೆ. ಈಗ ನೀವು 20 ವರ್ಷ ನಮ್ಮದೇ ಅಧಿಕಾರ ಅಂತ ಹೇಳುತ್ತಿದ್ದೀರ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ದುಡ್ಡಿದ್ದರೆ ಏನು ಬೇಕಾದರೂ ಮಾಡಬಹುದಾ?

ಸೋಮವಾರ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಯಿತು. ಅಲ್ಲಿ 20 ಸ್ಥಾನ ಗೆಲ್ಲಲು ಸಭೆ ಮಾಡಿದ್ದಾರೆ. ಸಭೆಯಲ್ಲಿ‌ ಸಿಎಂ, ಡಿಸಿಎಂ ವೀರಾವೇಷದಲ್ಲಿ ಮಾತನಾಡಿದ್ದಾರೆ. ಅವರ ಹಿನ್ನೆಲೆ ಜಗಜ್ಜಾಹೀರಾಗಿದೆ. ನನಗೆ ಬುದ್ಧಿ ಭ್ರಮಣೆ ಆಗಿದೆ ಅಂದರು. ನನ್ನ ಆರೋಗ್ಯ ನೋಡಿಕೊಳ್ಳಲು ನನ್ನ ಕುಟುಂಬದಲ್ಲಿ ಡಾಕ್ಟರ್‌ಗಳಿದ್ದಾರೆ. ಇವರೆಲ್ಲರೂ ಎಲ್ಲಿ ಇದ್ದರು? ಹೇಗೆ ಬಂದರು ಅನ್ನೋದು ನನಗೆ ಗೊತ್ತಿದೆ. ಇಂಥ ಸರ್ಕಾರ ಹಿಂದೆ ಬಂದಿಲ್ಲ ಮುಂದೆ ಬರುವುದೂ ಇಲ್ಲ. ಇವರು 40 ಪರ್ಸೆಂಟ್‌ ಕೇಳುತ್ತಾರೆಂದು ಕಂಟ್ರ್ಯಾಕ್ಟರ್ ಅಸೋಸಿಯೇಷನ್‌ವರು ಹೇಳಿದರು. ಬಾಣಲೆಯಿಂದ ಬೆಂಕಿಗೆ ಬಿದ್ದಿದ್ದೀವಿ ಅಂತ ಹೇಳಿದ್ದಾರೆಂದರೆ ಏನರ್ಥ? ಎಂದು ಪ್ರಶ್ನೆ ಮಾಡಿದ ಎಚ್.ಡಿ. ಕುಮಾರಸ್ವಾಮಿ, ಕಾಂಬೋಡಿಯಾಗೆ ಹೋಗುವುದಕ್ಕಿಂತ ಮುಂಚೆ 23 ಜನ‌ ಕಾಂಟ್ರ್ಯಾಕ್ಟರ್ ಬಂದಿದ್ದರು. ಶಾಸಕರೊಬ್ಬರ ಮಧ್ಯಸ್ಥಿಕೆಯಲ್ಲಿ ಹೇಳಿಕೆ ಕೊಡಿಸಿದ್ದಾರೆ. ದುಡ್ಡಿದ್ದರೆ ಏನು ಬೇಕಾದರೂ ಮಾಡಬಹುದು ಅಂದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಪ್ಯಾನ್‌ ಇಂಡಿಯಾ ಸಿನಿಮಾದಂತೆ ಇಂದಿನ ರಾಜಕೀಯ

ಒಂದು ಅಂತ್ಯ ಅನ್ನೋದು ಇದೆ. ಸಿನಿಮಾ ತೆಗೆದಾಗ ಅಂತ್ಯ ಅನ್ನೋದು ಇರಲೇಬೇಕಲ್ಲವೇ? ಆದರೆ, ಇಂದು ಪ್ಯಾನ್ ಇಂಡಿಯಾದ ಸಿನಿಮಾಗಳು (Pan India Cinema) ಅಂತ್ಯ ಆಗುತ್ತಿಲ್ಲ. ಭಾಗ 1, ಭಾಗ 2 ಅಂತ ಬರುತ್ತಿವೆ. ಈಗಿನ‌ ರಾಜಕೀಯವೂ ಹಾಗೇ ಆಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಆಗ ಸಿಎಂ ಆದಾಗ ಯಾಕೆ ಮಾಡಲಿಲ್ಲ?

ನನಗೆ ಯೋಗ್ಯತೆ ಇಲ್ಲ, ನಿಮಗೆ ಇದೆ ಅಂತ ತಾನೇ ಜನ ಈಗ ನಿಮ್ಮನ್ನು ಕೂರಿಸಿದ್ದಾರೆ. ಗರೀಭಿ ಹಠಾವೋ ಅಂತ ಹೇಳಿಕೊಂಡು ಆಗ ಅಧಿಕಾರಕ್ಕೆ ಬಂದಿರಿ. ಹಸಿದವರಿಗೆ ಅನ್ನ ಕೊಡುತ್ತೇವೆ ಎಂದು ರಾಜಸ್ಥಾನದ ಸಿಎಂ ಹೇಳುತ್ತಾರೆ. ಅವರು ಎಷ್ಟು ಭಾರಿ ಸಿಎಂ ಆಗಿದ್ದರು. ಆಗ ಯಾಕೆ ಮಾಡಲಿಲ್ಲ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಜನ ಏಕೆ ಮತ ಹಾಕಿದ್ದಾರೆಂದು ಮುಂದೆ ಗೊತ್ತಾಗತ್ತೆ

ಬಿಜೆಪಿಗೆ ನಾನು ಅಡಿಯಾಳಲ್ಲ, ನಿಮ್ಮ ತಪ್ಪನ್ನ ತಪ್ಪು ಅಂತಾ ಹೇಳೋಕೆ ಆಗದಿದ್ದರೆ ಆ ಜಾಗದಲ್ಲಿ ಏಕೆ‌ ಕೂರಬೇಕು? ಜನ ನನ್ನ ಆ ಸ್ಥಾನದಲ್ಲಿ ಕೂರಿಸಿದ್ದಾರೆ. ನನಗೆ ಹೊಟ್ಟೆ ಹುರಿಯೋ, ತಲೆ‌ನೋವೋ, ಬುದ್ಧಿಭ್ರಮಣೆಯೋ ಆಗಿದೆಯೋ ಅದಕ್ಕೆ ಔಷಧಿ ತೆಗೆದುಕೊಳ್ಳುತ್ತೇನೆ. ಜನ ಗ್ಯಾರಂಟಿ ನಂಬಿ ಮತ ಹಾಕಿದ್ದಾರೋ ಗೊತ್ತಿಲ್ಲ, ಮುಂದೆ ಗೊತ್ತಾಗುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಮಾಜಿ ಸಿಎಂ ಕುಮಾರಸ್ವಾಮಿ ಭಾಷಣ

2ಜಿ ಮತ್ತು ಕಲ್ಲಿದ್ದಲು ಹಗರಣ ನಡೆದಿದೆ ಎಂದು ಬಿಜೆಪಿಯವರು ಆರೋಪ ಮಾಡಿದರು. ಅದರ ಬಗ್ಗೆ ತನಿಖೆ ಮಾಡಿದರಾ? ಅಧಿಕಾರಕ್ಕೆ ಬಂದು 10 ವರ್ಷ ಆಗುತ್ತಾ ಬಂದಿದೆ. 1985-86ರಲ್ಲಿ ನಡೆದಿದ್ದ ಬೋಫೋರ್ಸ್ ಹಗರಣದ ಸತ್ಯಾಂಶ ಹೊರ ಬಂತಾ? ಯಾವುದೇ ಸತ್ಯಾಂಶ ಹೊರಬಂದಿಲ್ಲ. ಈಗ ಎಲ್ಲದಕ್ಕೂ ಸಾಕ್ಷಿ ಕೊಡಿ ಅಂತಾರೆ ಕೇಳುತ್ತಾರೆ. ಯಾವುದಕ್ಕೆ ಸಾಕ್ಷಿ ಕೋಡೋಣ? ನಮ್ಮ ಕರ್ನಾಟಕ ಕಾಂಗ್ರೆಸ್ ಅನ್ನು ಎಟಿಎಂ ಮಾಡಿಕೊಂಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಇದನ್ನೂ ಓದಿ: Independence day 2023 : ಅಭಿವೃದ್ಧಿಗೆ ಕರ್ನಾಟಕ ಮಾದರಿ; ಗ್ಯಾರಂಟಿ ಸಮರ್ಥನೆ ಮಾಡಿದ ಸಿದ್ದರಾಮಯ್ಯ

ಅವತ್ತಿನ ಜನತಾ ಪಕ್ಷದ ಒಂದು ತುಣುಕು ಜನತಾದಳ ಎಸ್ ಆಗಿದೆ. ಇನ್ನೂ ರಾಜ್ಯದ ಜನಗಳ ಆಶೀರ್ವಾದ ನಮ್ಮ ಮೇಲಿದೆ. ನಾವು ಆರೂವರೆ ಕೋಟಿ ಜನರ ವಕ್ತಾರನಾಗಿ ಕೆಲಸ ಮಾಡುತ್ತೇವೆ. ನಾನು ಇಡೀ ರಾಜ್ಯದ ಜನರ ವಕ್ತಾರನಾಗಿದ್ದೇನೆ. ಈ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ದೃಢ ಸಂಕಲ್ಪವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು. ಈ ಮೂಲಕ ನಾವು ಹೋರಾಟ ಆರಂಭ ಮಾಡೋಣ ಎಂದು ಎಚ್.ಡಿ. ಕುಮಾರಸ್ವಾಮಿ ಕರೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Self Harming: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದದ ಮನೆಯಲ್ಲೇ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Self Harming
Koo

ಕಾರವಾರ: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಹನುಮಾನ್‌ ಗಲ್ಲಿಯಲ್ಲಿ ನಡೆದಿದೆ.

ಬೆಳಗಾವಿಯ ಲೋಂಡಾದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ವರ್ಷ 5ನೇ ತರಗತಿಗೆ ವಿದ್ಯಾರ್ಥಿ ಹೋಗಬೇಕಿದ್ದ. ಇನ್ನೆರಡು ದಿನಗಳಲ್ಲಿ ಶಾಲೆ ಆರಂಭವಾಗಲಿತ್ತು. ಆದರೆ, ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಿದ್ದ ವಿದ್ಯಾರ್ಥಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿ ಗೋವಾದಲ್ಲಿ ಕೆಲಸಕ್ಕೆ ಹೋಗಿದ್ದು, ತಂದೆ ಮಲಗಿದ್ದ ವೇಳೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದ ಮೇಘಾಂಜಲಿ ಕಲ್ಯಾಣ ಮಂಟಪ ಸಮೀಪದ ಕನಕದಾಸ ವೃತ್ತದಲ್ಲಿ ನಡೆದಿದೆ. ಉಮೇಶ್( 51) ಮೃತ ದುರ್ದೈವಿ.

ತಂದೆ-ಮಗ ಬೈಕ್‌ನಲ್ಲಿ ಅರಳುಮಲ್ಲಿಗೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದರು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಹಿನ್ನೆಲೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಕೊನೆಯುಸಿರೆದಿದ್ದಾರೆ. ಅದೃಷ್ಟವಶಾತ್ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ನಾಪತ್ತೆಯಾಗಿದ್ದ ಯುವ ಶವವಾಗಿ ಪತ್ತೆ

ತುಮಕೂರು: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯಿರುವ ಲಕ್ಷ್ಮೀಪುರದಲ್ಲಿ ನಡೆದಿದೆ. ಪ್ರದೀಪ್ (30) ಮೃತ ದುರ್ದೈವಿ.

ಲಕ್ಷ್ಮೀಪುರ ಬಳಿಯಿರುವ ಉಲ್ಲಾಳಬೆಟ್ಟದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಹುಲಿಯೂರುದುರ್ಗ ಬಳಿಯ ಮೂದನಹಳ್ಳಿ ಗ್ರಾಮದ ಪ್ರದೀಪ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಕುಡಿತದ ದಾಸನಾಗಿದ್ದರಿಂದ ಆಗಾಗ ಪತ್ನಿ ಹಾಗೂ ತಾಯಿ ಜೊತೆ ಗಲಾಟೆ ಮಾಡುತ್ತಿದ್ದ. ಈತನ ಕಿರುಕುಳಕ್ಕೆ ಬೇಸತ್ತು ಒಂದು ತಿಂಗಳ ಹಿಂದೆ ಪತ್ನಿ ಹಾಗೂ ತಾಯಿ ಮನೆ ಬಿಟ್ಟು ತವರು ಮನೆಗೆ ಹೋಗಿದ್ದರು. ಹೀಗಾಗಿ ಪ್ರದೀಪ್ ಮನೆಯಲ್ಲಿ ಒಬ್ಬನೇ ಇದ್ದ.

ಕಳೆದ ಮೂರು ದಿನಗಳ ಹಿಂದೆ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದ ಪ್ರದೀಪ್‌, ಬುಧವಾರ ಸಂಜೆ ಉಲ್ಲಾಳಬೆಟ್ಟದ ಅರಣ್ಯ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಮೃತದೇಹ ನೋಡಿ ಹುಲಿಯೂರುದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Bitcoin Scam: ಬಿಟ್ ಕಾಯಿನ್ ಪ್ರಕರಣದಲ್ಲಿ ಮತ್ತೊಬ್ಬ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿದ ಎಸ್ಐಟಿ

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಪತ್ತೆಯಾದ ಜಾಗದಲ್ಲಿ ಮದ್ಯದ ಬಾಟಲ್ ಹಾಗೂ ಚಾಕು ಪತ್ತೆಯಾಗಿದೆ. ಪ್ರದೀಪ್ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಹುಬ್ಬಳ್ಳಿ

Hubballi Train: ಪ್ರಯಾಣಿಕರೇ ಗಮನಿಸಿ; ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯ ಬದಲಾಗಿದೆ

Hubballi Train: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಲಾಗಿದ್ದು, ಈ ರೈಲುಗಳ ಬದಲಾವಣೆಯು ಯಾವ ದಿನಾಂಕದಿಂದ ಜಾರಿ ಬರಲಿದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Timing change of 5 trains arriving at Sri Siddharooda Swamiji Railway Station Hubballi
ಸಾಂದರ್ಭಿಕ ಚಿತ್ರ.
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಲಾಗಿದ್ದು, ಈ ರೈಲುಗಳ (Hubballi Train) ಬದಲಾವಣೆಯು ಯಾವ ದಿನಾಂಕದಿಂದ ಜಾರಿ ಬರಲಿದೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಜೂನ್ 21ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16532 ಕೆಎಸ್ಆರ್ ಬೆಂಗಳೂರು-ಅಜ್ಮೀರ್ ಗರೀಬ್ ನವಾಜ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ಇದನ್ನೂ ಓದಿ: LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

ಜೂ.22ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16506 ಕೆಎಸ್ಆರ್ ಬೆಂಗಳೂರು-ಗಾಂಧಿ ಧಾಮ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ಜೂ. 23 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16534 ಕೆಎಸ್ಆರ್ ಬೆಂಗಳೂರು-ಜೋಧಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ಜೂ.24 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16508 ಕೆಎಸ್ಆರ್ ಬೆಂಗಳೂರು-ಜೋಧಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ.

ಇದನ್ನೂ ಓದಿ: KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ಜೂ.25 ರಿಂದ ಜಾರಿಗೆ ಬರುವಂತೆ ರೈಲು ಸಂಖ್ಯೆ 16210 ಮೈಸೂರು-ಅಜ್ಮೀರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಿಗ್ಗೆ 06:00/06:10 ಗಂಟೆಯ ಬದಲು 05:35 ಗಂಟೆಗೆ ಆಗಮಿಸಿ, 05:45 ಗಂಟೆಗೆ ಹೊರಡಲಿದೆ ಎಂದು ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದೆ.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Valmiki Corporation Scam: 88 ಕೋಟಿ ರೂ. ದುರುಪಯೋಗ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು, ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

VISTARANEWS.COM


on

Valmiki corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ (Valmiki Corporation Scam) ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ, ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ನಿಗಮದ ಪ್ರಭಾರ ಎಂಡಿಯಾಗಿ ಡಾ. ಕೆ. ಆರ್. ರಾಜ್ ಕುಮಾರ್ ನೇಮಕ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 88 ಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ MD ಜೆ. ಜೆ. ಪದ್ಮನಾಭ ಅವರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದ ಬೆನ್ನಲ್ಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಪ್ರಭಾರರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Continue Reading

ಕರ್ನಾಟಕ

Sudha Murty: ಡಾ.ಮಂಜುನಾಥ್‌ ಗೆಲುವಿಗಾಗಿ ರಾಯರಿಗೆ ವಿಶೇಷ ಹರಕೆ ಹೊತ್ತ ಸುಧಾಮೂರ್ತಿ; ಏನದು?

Sudha Murty: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಿ.ಕೆ.ಸುರೇಶ್‌ ಅವರ ವಿರುದ್ಧ ಕಣಕ್ಕಿಳಿದಿರುವ ಹೃದಯವಂತ ಡಾ.ಸಿ.ಎನ್.ಮಂಜುನಾಥ್‌ ಅವರ ಗೆಲುವಿಗಾಗಿ ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಅವರು ವಿಶೇಷ ಹರಕೆಯೊಂದನ್ನು ಹೊತ್ತುಕೊಂಡಿದ್ದಾರೆ. ಹರಕೆ ಕುರಿತು ಅವರೇ ಮಾತನಾಡಿದ್ದಾರೆ. ಹಾಗಾದರೆ, ಸುಧಾ ಮೂರ್ತಿ ಅವರ ವಿಶೇಷ ಹರಕೆ ಏನು? ಇಲ್ಲಿದೆ ಮಾಹಿತಿ.

VISTARANEWS.COM


on

Sudha Murty
Koo

ಬೆಂಗಳೂರು: ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ, ರಾಜ್ಯಸಭೆ ಸದಸ್ಯೆ, ಲೇಖಕಿ ಹಾಗೂ ಸಮಾಜ ಸೇವೆಯಿಂದಲೂ ಗುರುತಿಸಿಕೊಂಡಿರುವ ಸುಧಾ ಮೂರ್ತಿ (Sudha Murty) ಅವರು ವಿಶೇಷ ಹರಕೆ ಹೊತ್ತಿದ್ದಾರೆ. ಹಾಗಂತ, ಸುಧಾ ಮೂರ್ತಿ ಅವರು ತಮಗಾಗಿ, ತಮ್ಮ ಕುಟುಂಬಸ್ಥರ ಏಳಿಗೆಗಾಗಿ ಹರಕೆ ಹೊತ್ತಿಲ್ಲ. ಬದಲಾಗಿ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ.ಸಿ.ಎನ್‌.ಮಂಜುನಾಥ್‌ (Dr C N Manjunath) ಅವರ ಗೆಲುವಿಗಾಗಿ ಮಂತ್ರಾಲಯದ ರಾಯರ ಬಳಿ ಸುಧಾ ಮೂರ್ತಿ ಅವರು ಹರಕೆ ಹೊತ್ತಿದ್ದಾರೆ.

ಡಾ.ಮಂಜುನಾಥ್ ಅವರೇ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಡಾ.ಸಿ.ಎನ್‌. ಮಂಜುನಾಥ್‌ ಅವರು ಗೆಲುವು ಸಾಧಿಸಿದರೆ ಮಂತ್ರಾಲಯದಿಂದ 6 ಕಿಲೋಮೀಟರ್‌ ದೂರದ ಜಾಗದಿಂದ ಕಾಲ್ನಡಿಗೆಯಲ್ಲಿ ತೆರಳಿ ರಾಯರ ಪೂಜೆ ಮಾಡುತ್ತೇನೆ ಎಂಬುದಾಗಿ ಸುಧಾ ಮೂರ್ತಿ ಅವರು ಹೇಳಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಾನು ಸುಧಾ ಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದೆ. ಇದೇ ವೇಳೆ ಸುಧಾ ಮೂರ್ತಿ ಅವರು ತಮ್ಮ ಹರಕೆ ಕುರಿತು ಹೇಳಿದ್ದಾರೆ” ಎಂದು ಮಂಜುನಾಥ್‌ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ಡಾ.ಮಂಜುನಾಥ್‌ ಅವರ ಭಾಷಣದ ವಿಡಿಯೊವನ್ನು ‘ಬೆಂಗಳೂರು ಮೀಡಿಯಾ ವರ್ಲ್ಡ್‌ ಬಿಎಂಡಬ್ಲ್ಯೂ’ ಯುಟ್ಯೂಬ್‌ನಲ್ಲಿ ಹಂಚಿಕೊಂಡಿದೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲ 28 ಕ್ಷೇತ್ರಗಳ ನೂರಾರು ಅಭ್ಯರ್ಥಿಗಳಲ್ಲಿ ಕುತೂಹಲ ನೂರ್ಮಡಿಯಾಗಿದೆ. ಹಾಗಾಗಿ, ಆಯಾ ಅಭ್ಯರ್ಥಿಗಳ ಕುಟುಂಬಸ್ಥರು ದೇವರಿಗೆ ಹತ್ತಾರು ಹರಕೆ ಹೊತ್ತುಕೊಂಡಿದ್ದಾರೆ. ಆದರೆ, ಸುಧಾ ಮೂರ್ತಿ ಅವರು ಜಯದೇವ ಆಸ್ಪತ್ರೆ ನಿರ್ದೇಶಕರೂ ಆಗಿದ್ದ ಡಾ.ಸಿ.ಎನ್.ಮಂಜುನಾಥ್‌ ಅವರ ಗೆಲುವಿಗಾಗಿ ಹರಕೆ ಹೊತ್ತುಕೊಂಡಿರುವುದು ವಿಶೇಷವಾಗಿದೆ.

ಕಳೆದ ಮಾರ್ಚ್‌ನಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಸುಧಾ ಮೂರ್ತಿ ಅವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ರಾಜ್ಯಸಭೆಯ ಅಧ್ಯಕ್ಷರಾಗಿರುವ ಜಗದೀಪ್‌ ಧನಕರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದರು. ರಾಜ್ಯಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ಪಿಯೂಷ್‌ ಗೋಯಲ್‌ ಅವರು ಉಪಸ್ಥಿತರಿದ್ದರು. ಸುಧಾಮೂರ್ತಿ ಅವರ ಜೀವನ ಸಂಗಾತಿ ಎನ್‌.ಆರ್‌. ನಾರಾಯಣ ಮೂರ್ತಿ ಅವರು ಕೂಡ ಇದ್ದರು.

ಇದನ್ನೂ ಓದಿ: Sudha Murthy : ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಸುಧಾ ಮೂರ್ತಿ; ನಾರಾಯಣಮೂರ್ತಿ ಸಾಥ್‌

Continue Reading
Advertisement
Girlfriend
ದೇಶ3 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ4 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ5 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

T20 World Cup 2024
ಕ್ರೀಡೆ5 hours ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ6 hours ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ6 hours ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ6 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Timing change of 5 trains arriving at Sri Siddharooda Swamiji Railway Station Hubballi
ಹುಬ್ಬಳ್ಳಿ7 hours ago

Hubballi Train: ಪ್ರಯಾಣಿಕರೇ ಗಮನಿಸಿ; ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯ ಬದಲಾಗಿದೆ

Valmiki corporation Scam
ಕರ್ನಾಟಕ7 hours ago

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

PM Kisan Samman
ಕೃಷಿ7 hours ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌