Darren Kent: ʻಗೇಮ್ ಆಫ್ ಥ್ರೋನ್ಸ್ʼ ಖ್ಯಾತಿಯ ಡ್ಯಾರೆನ್ ಕೆಂಟ್ ಇನ್ನಿಲ್ಲ! - Vistara News

ಸಿನಿಮಾ

Darren Kent: ʻಗೇಮ್ ಆಫ್ ಥ್ರೋನ್ಸ್ʼ ಖ್ಯಾತಿಯ ಡ್ಯಾರೆನ್ ಕೆಂಟ್ ಇನ್ನಿಲ್ಲ!

Darren Kent: ಇತ್ತೀಚೆಗೆ 2023ರ ಚಲನಚಿತ್ರ ‘ಡಂಜಿಯನ್ಸ್ ಆ್ಯಂಡ್ ಡ್ರಾಗನ್ಸ್ʼ (Dungeons and Dragons: Honor Among Thieves) ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.

VISTARANEWS.COM


on

Darren Kent
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ʻಗೇಮ್ ಆಫ್ ಥ್ರೋನ್ಸ್ʼ ಸಿನಿಮಾ ಖ್ಯಾತಿಯ ಡ್ಯಾರೆನ್ ಕೆಂಟ್ (Darren Kent ) ಆಗಸ್ಟ್ 11ರಂದು ನಿಧನರಾದರು. ‘ಗೇಮ್ ಆಫ್ ಥ್ರೋನ್ಸ್’, ‘ಡಂಜಿಯನ್ಸ್ ಆ್ಯಂಡ್ ಡ್ರಾಗನ್ಸ್: ಹಾನರ್ ಅಮಾಂಗ್ ಥೀವ್ಸ್ (Dungeons and Dragons: Honor Among Thieves’)’, ‘ಈಸ್ಟ್‌ಎಂಡರ್ಸ್'(EastEnder) ಹೀಗೆ ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಅವರಿಗೆ ಕೇವಲ 36 ವರ್ಷ ವಯಸ್ಸಾಗಿತ್ತು.

ಟ್ಯಾಲೆಂಟ್ ಏಜೆನ್ಸಿ ಕ್ಯಾರಿ ಡಾಡ್ ಅಸೋಸಿಯೇಟ್ಸ್ ಆಗಸ್ಟ್ 15ರಂದು ಟ್ವೀಟ್‌ನಲ್ಲಿ ಪೋಸ್ಟ್‌ ಮಾಡಿ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದೆ. ʻʻನಮ್ಮ ಆತ್ಮೀಯ ಸ್ನೇಹಿತ ಡ್ಯಾರೆನ್ ಕೆಂಟ್ ಅವರು ಆಗಸ್ಟ್ 11 ರಂದು ನಿಧನರಾದರುʼʼ ಎಂದು ಏಜೆನ್ಸಿ ಬರೆದಿದೆ.

ಬ್ರಿಟನ್‌ ಮೂಲದ ಕೆಂಟ್‌ ಅವರು ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದರು. ಕಾಯಿಲೆಯ ಹೆಸರು ಬಹಿರಂಗವಾಗಿರಲಿಲ್ಲ. “ಗೇಮ್‌ ಆಫ್‌ ಥ್ರೋನ್‌’ ನಲ್ಲಿ ಅವರ ಕುರಿಗಾಹಿ ಪಾತ್ರ ಜನಪ್ರಿಯವಾಗಿತ್ತು. 2008ರಲ್ಲಿ ಬಿಡುಗಡೆಯಾಗಿದ್ದ ಹಾಲಿವುಡ್‌ನ ಹಾರರ್‌ ಚಿತ್ರ ʻಮಿರರ್ಸ್‌ʼನಲ್ಲಿ ಅವರ ಪಾತ್ರ ಗಮನ ಸೆಳೆದಿತ್ತು. ಇತ್ತೀಚೆಗೆ 2023ರ ಚಲನಚಿತ್ರ ‘ಡಂಜಿಯನ್ಸ್ ಆ್ಯಂಡ್ ಡ್ರಾಗನ್ಸ್ʼ (Dungeons and Dragons: Honor Among Thieves) ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡರು.

ಇದನ್ನೂ ಓದಿ: Lance Reddick: ʻದಿ ವೈರ್ʼ ಖ್ಯಾತಿಯ ಹಾಲಿವುಡ್‌ ಆ್ಯಕ್ಷನ್‌ ನಟ ಲ್ಯಾನ್ಸ್ ರೆಡ್ಡಿಕ್ ನಿಧನ

ಡ್ಯಾರೆನ್ ಕೆಂಟ್ ನಟಿಸಿರುವ ಸಿನಿಮಾಗಳು!

‘ಸ್ನೋ ವೈಟ್ ಆ್ಯಂಡ್ ದಿ ಹಂಟ್ಸ್‌ಮ್ಯಾನ್ (Snow White and the Huntsman)’, ‘ಮಾರ್ಷಲ್ಸ್ ಲಾ (Marshal’s Law)’, ‘ಬ್ಲಡಿ ಕಟ್ಸ್ (Bloody Cuts’)’, ‘ದಿ ಫ್ರಾಂಕೆನ್‌ಸ್ಟೈನ್ ಕ್ರಾನಿಕಲ್ಸ್(The Frankenstein Chronicles), ‘ಬ್ಲಡ್ ಡ್ರೈವ್ (‘Blood Drive)’, ‘ಲೆಸ್ ಮಿಸರೇಬಲ್ಸ್ (Les Misérables)’, ‘ಗ್ರೀನ್ ಫಿಂಗರ್ಸ್ (Green Fingers)’, ‘ಈಸ್ಟ್‌ ಎಂಡರ್ಸ್ (‘EastEnders)’, ‘ ಹ್ಯಾಪಿ ಅವರ್ಸ್ (Happy Hours)’, ‘ಲವ್ ವಿದೌಟ್ ವಾಲ್ (‘Love Without Walls)’ ಮತ್ತು ‘ಬರ್ಡ್ಸ್ ಸಾರೋ’ (Birds Sorrow).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Kannada New Movie: ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿʼ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಇತ್ತೀಚೆಗೆ ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

VISTARANEWS.COM


on

Ibbani Thabbida Ileyali movie Helu Gelati song released
Koo

ಬೆಂಗಳೂರು: ವಿಹಾನ್, ಅಂಕಿತಾ ಅಮರ್ ಪ್ರಮುಖ ಭೂಮಿಕೆಯಲ್ಲಿರುವ ʼಇಬ್ಬನಿ ತಬ್ಬಿದ ಇಳೆಯಲಿʼ ಸಿನಿಮಾದ ಮತ್ತೊಂದು ಹಾಡು ರಿಲೀಸ್‌ ಆಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿʼ ಎಂಬ ಮೆಲೋಡಿ ಹಾಡನ್ನು ಚಿತ್ರತಂಡ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರತಂಡ (Kannada New Movie) ತಿಳಿಸಿದೆ.

ಈ ಹಿಂದೆ ಬಿಡುಗಡೆ ಮಾಡಿದ್ದ ಈ ಸಿನಿಮಾದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ರೆಟ್ರೋ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಈ ಮಾಧುರ್ಯಭರಿತ ಗೀತೆಯನ್ನು ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಮಾಡಿದೆ. ಚರಣ್‌ರಾಜ್ ಈ ಗೀತೆಗೆ ಧನಿಗೂಡಿಸಿರುವುದು ವಿಶೇಷ.

ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಟ್ರೆಂಡ್ ಹುಟ್ಟುಹಾಕಿರುವ ಈ ಗೀತೆಗೆ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ.

ಕಿರಿಕ್ ಪಾರ್ಟಿ ಹಾಗೂ ಅವನ್ನೇ ಶ್ರೀಮನ್ನಾರಾಯಣ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿʼ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.‌

ಇದನ್ನೂ ಓದಿ: Pralhad Joshi: ಕೇಂದ್ರದ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ; 1.3 ಕೋಟಿ ಜನರಿಂದ ನೋಂದಣಿ

ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಈ ಚಿತ್ರಕ್ಕಿದೆ.

Continue Reading

ಬಾಲಿವುಡ್

Alia Bhatt: ಪುತ್ರಿಯರಿಗೆ ಮುಸ್ಲಿಂ ಹೆಸರುಗಳನ್ನು ಇಟ್ಟಾಗ ನನ್ನ ತಾಯಿಗೆ ಚಿಂತೆಯಾಗಿತ್ತು ಎಂದ ಆಲಿಯಾ ಭಟ್‌ ತಂದೆ!

Alia Bhatt: ತಮ್ಮ ಹೆಣ್ಣುಮಕ್ಕಳಾದ ಆಲಿಯಾ ಮತ್ತು ಶಾಹೀನ್‌ ಭಟ್ ಅವರಿಗೆ ಮುಸ್ಲಿಂ ಹೆಸರುಗಳನ್ನು ಇಟ್ಟಾಗ ಮಹೇಶ್‌ ಭಟ್‌ (Alia Bhatt and Shaheen) ತಾಯಿ ಚಿಂತಿತರಾಗಿದ್ದರು ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Mahesh Bhatt said his mother was worried after he gave daughters Muslim names
Koo

ಬೆಂಗಳೂರು: ಬಾಲಿವುಡ್‌ ನಟಿ ಆಲಿಯಾ ಭಟ್ (Alia Bhatt) ಅವರ ತಂದೆ ಮಹೇಶ್ ಭಟ್ ಆಗಾಗ ವೈಯಕ್ತಿಕ ಹೇಳಿಕೆ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಮಹೇಶ್ ಅವರ ತಂದೆ ನಾನಾಭಾಯ್ ಭಟ್ ಗುಜರಾತಿ ಬ್ರಾಹ್ಮಣರಾಗಿದ್ದರು ಮತ್ತು ತಾಯಿ ಶಿರಿನ್ ಮೊಹಮ್ಮದ್ ಅಲಿ ಮುಸ್ಲಿಂ. ತಮ್ಮ ಹೆಣ್ಣುಮಕ್ಕಳಾದ ಆಲಿಯಾ ಮತ್ತು ಶಾಹೀನ್‌ ಭಟ್ ಅವರಿಗೆ ಮುಸ್ಲಿಂ ಹೆಸರುಗಳನ್ನು ಇಟ್ಟಾಗ ಮಹೇಶ್‌ ಭಟ್‌ (Alia Bhatt and Shaheen) ತಾಯಿ ಚಿಂತಿತರಾಗಿದ್ದರು ಎಂದು ಹೇಳಿಕೊಂಡಿದ್ದಾರೆ.

ಮಹೇಶ್ ಭಟ್‌ ಹಳೆಯ ಸಂದರ್ಶನವೊಂದರಲ್ಲಿ ತಮ್ಮ ಕುಂಟುಂಬದ ಬಗ್ಗೆ ಹೇಳಿಕೊಂಡಿದ್ದರು. ʻʻನನ್ನ ತಾಯಿ ಮುಸ್ಲಿಂ ಆಗಿದ್ದರೆ, ತಂದೆ ಜನಿವಾರ ಧರಿಸಿದ್ದರು. ಇಬ್ಬರೂ (ತಂದೆ ಮತ್ತು ತಾಯಿ) ತಮ್ಮ ವೈಯಕ್ತಿಕ ನಂಬಿಕೆಗಳನ್ನು ಉಳಿಸಿಕೊಂಡು ಬಂದರುʼʼಎಂದು ಹೇಳಿಕೊಂಡಿದ್ದಾರೆ.

“ನನ್ನ ತಾಯಿ ಯಾವಾಗಲೂ ದೊಡ್ಡದ್ದಾಗಿ ಹಣೆಗೆ ಬಿಂದಿ ಇಡುತ್ತಿದ್ದರು ಮತ್ತು ಸೀರೆಯನ್ನು ಧರಿಸುತ್ತಿದ್ದರು. ಅದೇ ಸಮಯದಲ್ಲಿ, ಅವರು ಏನೋ ಮರೆಮಾಚುವಂತೆ ನನಗೆ ಅನ್ನಿಸುತ್ತಿತ್ತು. ನಮ್ಮ ದೈನಂದಿನ ಜೀವನದಲ್ಲಿ ಅವಳ ಜಾತಿ ಎಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಅವರು ಭಾವಿಸಿದ್ದರು. 1992 ರಲ್ಲಿ ನಡೆದ ಕೋಮುಗಲಭೆಗಳ ಸಮಯದಲ್ಲಿ ಹೆಚ್ಚು ಚಿಂತಿತಳಾಗಿದ್ದಳು. ಆಲಿಯಾಗೆ ಮುಸ್ಲಿಂ ಹೆಸರನ್ನು ಇಟ್ಟಾಗ ಮತ್ತಷ್ಟು ಚಿಂತಿತಳಾದಳು. ನನ್ನ ಎರಡನೇ ಹೆಂಡತಿ (ಸೋನಿ ರಜ್ದಾನ್) ಆಲಿಯಾ ಹೆಸರನ್ನು ಇಷ್ಟಪಟ್ಟರುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

1970 ರಲ್ಲಿ, ಮಹೇಶ್ ಲೋರೆನ್ ಬ್ರೈಟ್ ಅವರನ್ನು ವಿವಾಹವಾದರು (ನಂತರದ ಹೆಸರು ಕಿರಣ್ ಭಟ್ ಎಂದು ಬದಲಾಯಿತು), ಅವರಿಗೆ ಇಬ್ಬರು ಮಕ್ಕಳಿದ್ದರು. ರಾಹುಲ್ ಮತ್ತು ಪೂಜಾ ಭಟ್. 1986ರಲ್ಲಿ ನಟ ಸೋನಿ ರಜ್ದಾನ್ ಅವರನ್ನು ವಿವಾಹವಾದರು. ಆಗ ಶಾಹೀನ್ ಮತ್ತು ಆಲಿಯಾ ಭಟ್ ಜನಿಸಿದರು. ಆಲಿಯಾ ಮಾರ್ಚ್ 1993 ರಲ್ಲಿ ಜನಿಸಿದರು. ಇದೀಗ ನಟ ರಣಬೀರ್ ಕಪೂರ್ ಅವರನ್ನು ವಿವಾಹವಾಗಿದ್ದಾರೆ.

ಹಿಂದಿಯಲ್ಲಿ ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾ ಕೂಡ ಅಕ್ಟೋಬರ್​ನಲ್ಲಿ ಬಿಡುಗಡೆ ಆಗಲಿದೆ. ಇದಲ್ಲದೆ ರಾಜ್​ಕುಮಾರ್ ರಾವ್ ಹಾಗೂ ತೃಪ್ತಿ ದಮ್ರಿ ನಟನೆಯ ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಹಾಗೂ ಶಾಹಿದ್ ಕಪೂರ್-ಪೂಜಾ ಹೆಗ್ಡೆ ನಟನೆಯ ‘ದೇವ’ ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ.

Continue Reading

ಸ್ಯಾಂಡಲ್ ವುಡ್

Vinay Guruji: ಬೈಕೊಂಡು ವಿನಯ್ ಗುರೂಜಿ ಆಶ್ರಮಕ್ಕೆ ಹೋಗಿದ್ದೆ ಆದರೆ ನನ್ನ ಅಷ್ಟೂ ಜಾತಕ ಬಿಚ್ಚಿಟ್ರು ಎಂದ ಮಾಸ್ಟರ್ ಆನಂದ್ ಸಹೋದರ!

Vinay Guruji: ದೇವರನ್ನು ನಂಬುವುದು ಕಷ್ಟ ಎನ್ನುವ ಸಮಯದಲ್ಲಿ ದೇವ ಮನುಷ್ಯರನ್ನು ಹೇಗೆ ನಂಬಲಿ ಎಂದು ಪದೇ ಪದೇ ಹೇಳುತ್ತಿದ್ದ ಅರುಣ್ ಹರಿಹರನ್‌ ವಿನಯ್ ಗುರೂಜಿ (Vinay Guruji) ಅವರನ್ನು ಭೇಟಿ ಮಾಡಿದ ಕ್ಷಣವನ್ನು ಮಾಧ್ಯಮವೊಂದರಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Vinay Guruji met by master anand brother
Koo

ಬೆಂಗಳೂರು: ಮಾಸ್ಟರ್ ಆನಂದ್ ಸಹೋದರ ಮಾಸ್ಟರ್ ಅರುಣ್ ಹರಿಹರನ್ (Arun Hariharan) ಕೂಡ ನಿರ್ದೇಶಕದಲ್ಲಿ ಬ್ಯುಸಿಯಾಗಿದ್ದಾರೆ. ಖಾಸಗಿ ವಾಹಿನಿಯಲ್ಲಿ ಇದೀಗ ‘Huu ಅಂತೀಯಾ…Uhuu ಅಂತೀಯಾ’ ಎಂಬ ಹೊಸ ಬಗೆಯ ವಿನೂತನ ಗೇಮ್ ಶೋ ನಿರೂಪಕ ಕೂಡ ಆಗಿದ್ದಾರೆ. ದೇವರನ್ನು ನಂಬುವುದು ಕಷ್ಟ ಎನ್ನುವ ಸಮಯದಲ್ಲಿ ದೇವ ಮನುಷ್ಯರನ್ನು ಹೇಗೆ ನಂಬಲಿ ಎಂದು ಪದೇ ಪದೇ ಹೇಳುತ್ತಿದ್ದ ಅರುಣ್ ಹರಿಹರನ್‌ ವಿನಯ್ ಗುರೂಜಿ (Vinay Guruji) ಅವರನ್ನು ಭೇಟಿ ಮಾಡಿದ ಕ್ಷಣವನ್ನು ಮಾಧ್ಯಮವೊಂದರಲ್ಲಿ ಹಂಚಿಕೊಂಡಿದ್ದಾರೆ.

ಅರುಣ್ ಹರಿಹರನ್ ಮಾತನಾಡಿ ʻʻನಾನು ದೇವರನ್ನ ನಂಬಲ್ಲ. ಇನ್ನೂ ದೇವ ಮಾನವನ್ನು ನಂಬಲು ಹೇಗೆ ಸಾಧ್ಯ? ಆದರೆ ನಮ್ಮ ಅಣ್ಣ ಬಾ ಎಂದು ಹೇಳಿದ ಅಂತ ವಿನಯ್ ಗುರೂಜೀ ಅವರನ್ನು ಭೇಟಿ ಮಾಡಲು ಹೋದೆ. ಅಲ್ಲಿ ಹೋದಾಗ ನಾವು ಹೋಗುತ್ತಿದ್ದಂತೆ ಗೇಟ್‌ ಬಳಿ ನಿಂತಿದ್ದರು ‘ಬನ್ನಿ ಬನ್ನಿ ನಿಮಗಾಗಿ ಕಾಯುತ್ತಿದ್ದೆ’ ಅಂತ ಹೇಳಿದರು. ಆನಂತ್ ಸಂಪೂರ್ಣ ವ್ಯವಸ್ಥೆ ಮಾಡಿದ್ದಾನೆ ಅಂದುಕೊಂಡು ಸುಮ್ಮನಾದೆʼʼಎಂದು ಮಾತು ಮುಂದುವರಿಸಿದರು.

ʻʻಗುರೂಜಿ ಫುಲ್‌ ಶಾರ್ಟ್ಸ್‌ ಹಾಕ್ಕೊಂಡು ಕೂತಿದ್ದಾರೆ. ನಾನು ಮಾಮೂಲಿ ಖಾವಿನೋ ಅಥವಾ ಬಿಳಿ ಬಣ್ಣದ ಉಡುಪನ್ನೋ ಧರಿಸುತ್ತಾರೆ ಅಂದುಕೊಂಡಿದ್ದೆ. ಆದರೆ ನೋಡುವಾಗ ಅವರು ಹಾಗೆ ಕಂಡಿಲ್ಲ. ನಮ್ಮ ಅಣ್ಣ ಕರೆದುಕೊಂಡು ಬಂದ ಮಕ್ಕರ್‌ ಮಾಡಿದ ಎಂದು ಅಂದುಕೊಂಡಿದ್ದೆ. ಇಡೀ ಟೀಂ ನೋಡಿ ನಿಮಗೆ ಕಾಯುತ್ತಿದ್ದೆ ಎಂದರು. ಗುರೂಜಿ ಅವರು ಊಟ ಬಡಿಸುತ್ತಿದ್ದರು. ಬಜ್ಜಿ ಬಡಿಸುವಾಗ ಇದರಷ್ಟೇ ಖಾರ ಇದ್ಯಲ್ಲ ನೀನು? ಎಂದು ಕೇಳಿದ್ದರು. ಎಷ್ಟು ಬೈಕ್ಕೊಂಡೆ ಅಲ್ವಾ? ಎಂದರು ನಾನು ಅಣ್ಣನೇ ನನ್ನ ಬಗ್ಗೆ ಅವರಿಗೆ ಇದೆಲ್ಲ ಹೇಳಿರಬೇಕು ಎಂದು ಅಂದುಕೊಂಡೆ. ನಮ್ಮ ಡಿಒಪಿ ಮೊಬೈಲ್‌ ಒಡೆದಿದ್ದೂ ಹೇಳಿದ್ದರು. ಮನೆ ಕೂಡ ಬೇಗ ಆಗುತ್ತೆ ಎಂದೂ ಹೇಳುತ್ತಾರೆ. ಇಷ್ಟೆಲ್ಲ ಹೇಳಿದಾಗ ಅಣ್ಣನೇ ಎಲ್ಲವೂ ಹೇಳಿರುತ್ತಾರೆ ಅಂದುಕೊಂಡೆʼʼಎಂದರು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ʻʻನಾನು ಆಗಷ್ಟೇ ಮದುವೆಯಾಗಿದ್ದೆ. ಆಗ ನನ್ನ ಹಳೆ ಪರಚಿಕೊಂಡ ಗಾಯದ ಬಗ್ಗೆ ಹೇಳಿಬಿಟ್ಟರು. ಹೆಂಗಿದ್ದಾಳೋ ಅವಳು ಅಂದುಬಿಟ್ಟರು. ಕಾಲು ಕೈ ಎಲ್ಲಾ ತಣ್ಣಗಾಯ್ತು. ಅಣ್ಣ ಇಷ್ಟೋಂದು ಹೇಳಿದ್ದಾನ ಯಾವ ಹುಡುಗಿ ಹೆಸರು ಹೇಳಿರಬಹುದು ಅಂತ ಯೋಚನೆ ಮಾಡುತ್ತಿದ್ದೆ. ಮತ್ತೊಂದು ರೌಂಡ್‌ ಬಂದರು ಲಿಸ್ಟ್ ತೆಗೆದು ಯೋಚನೆ ಮಾಡುತ್ತಿದ್ದೀಯಾ ಅಂದ್ರು. ಆ ಕ್ಷಣಕ್ಕೆ ನಾನು ಅವರಿಗೆ ಏನೋ ಪವರ್ ಇದೆ ಎಂದು ಅವರಿಗೆ ಸರೆಂಡರ್ ಆಗಿಬಿಟ್ಟೆ. ತುಂಬಾ ಫ್ರೆಂಡ್ಲಿಯಾಗಿ ಮಾತನಾಡಿಸುತ್ತಾರೆ ಯಾರು ಏನೇ ಕೊಟ್ಟರೂ ನಮಗೆ ಕೊಡುತ್ತಿದ್ದರು’ ಎಂದಿದ್ದಾರೆ ಅರುಣ್.

Continue Reading

ಟಾಲಿವುಡ್

Actor Chiranjeevi: ಸೆಲ್ಫಿ ತೆಗೆದುಕೊಳ್ಳಲು ಬಂದ ಇಂಡಿಗೋ ವಿಮಾನ ಸಿಬ್ಬಂದಿಯನ್ನು ತಳ್ಳಿದ ನಟ ಚಿರಂಜೀವಿ; ನೆಟ್ಟಿಗರಿಂದ ತರಾಟೆ!

Megastar Chiranjeevi: ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ವಿಮಾನ ನಿಲ್ದಾಣದಲ್ಲಿ ಲಿಫ್ಟ್‌ನಿಂದ ಹೊರಬರುತ್ತಾರೆ. ಇಂಡಿಗೋ ಏರ್‌ಲೈನ್ಸ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಚಿರಂಜೀವಿ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕೆಂದು ಬರುತ್ತಾರೆ. ಆಗ ನಟ ಚಿರಂಜೀವಿ ಅವರು ಪೋಸ್‌ ನೀಡದೆ, ಅಭಿಮಾನಿಯನ್ನು ತಳ್ಳಿ ಮುಂದೆ ಹೋಗುತ್ತಾರೆ.

VISTARANEWS.COM


on

Actor Chiranjeevi gets flak for ‘rudely’ pushing IndiGo employee
Koo

ಬೆಂಗಳೂರು: ನಾಗಾರ್ಜುನ ಮತ್ತು ಧನುಷ್ ಬಳಿಕ ವಿಮಾನ ನಿಲ್ದಾಣದಲ್ಲಿ ನಟ ಚಿರಂಜೀವಿ (Actor Chiranjeevi) ಅವರು ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಯನ್ನು ತಳ್ಳಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ಇದೀಗ ನಟನ ಈ ನಡವಳಿಕೆ ಬಗ್ಗೆ ನೆಟ್ಟಿಗರು ಕಮೆಂಟ್‌ ಮೂಲಕ ಕ್ಲಾಸ್‌ ತೆಗೆದುಕೊಂಡಿದ್ದಾರೆ. ವಿಡಿಯೊ ಕೂಡ ಭಾರಿ ವೈರಲ್‌ ಆಗುತ್ತಿದೆ.

ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ವಿಮಾನ ನಿಲ್ದಾಣದಲ್ಲಿ ಲಿಫ್ಟ್‌ನಿಂದ ಹೊರಬರುತ್ತಾರೆ. ಇಂಡಿಗೋ ಏರ್‌ಲೈನ್ಸ್‌ನಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಚಿರಂಜೀವಿ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕೆಂದು ಬರುತ್ತಾರೆ. ಆಗ ನಟ ಚಿರಂಜೀವಿ ಅವರು ಪೋಸ್‌ ನೀಡದೆ, ಅಭಿಮಾನಿಯನ್ನು ತಳ್ಳಿ ಮುಂದೆ ಹೋಗುತ್ತಾರೆ.

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ” ವಿಮಾನ ನಿಲ್ದಾಣದಲ್ಲಿ ಚಿರಂಜೀವಿ ಅಸಭ್ಯ ವರ್ತನೆ” ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರನ್ನು ನಟನನ್ನು ಸಮರ್ಥಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳನ್ನು ನಿರ್ಲಕ್ಷಿಸಿರುವುದು, ತಳ್ಳಿರುವುದು ಇದೇ ಮೊದಲಲ್ಲ. ಇತ್ತೀಚೆಗೆ, ನಾಗಾರ್ಜುನ ವಿಚಾರದಲ್ಲಿಯೂ ಇದೇ ಆಯ್ತು. ತಳ್ಳಿದ ವೀಡಿಯೊ ವೈರಲ್ ಆಗಿತ್ತು. ಬಳಿಕ ನಟ ನಾಗಾರ್ಜುನ (Actor Nagarjuna) ಅವರು ತಮ್ಮ ಬಾಡಿಗಾರ್ಡ್‌ ವಿಶೇಷ ಚೇತನ ಅಭಿಮಾನಿಯನ್ನು ತಳ್ಳಿದ ಹಿನ್ನೆಲೆಯಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಕ್ಷಮೆಯಾಚಿಸಿದ್ದರು.

ಚಿರಂಜೀವಿ ಶೀಘ್ರದಲ್ಲೇ ಮಲ್ಲಾಡಿ ವಸಿಷ್ಠ ಅವರ ʻವಿಶ್ವಂಭರʼದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಅಲ್ಲಿ ತ್ರಿಶಾ ಕೃಷ್ಣನ್ ಸಹನಟಿಯಾಗಲಿದ್ದಾರೆ. ಅವರು ಇತ್ತೀಚೆಗೆ ರಾಮ್ ಚರಣ್, ಉಪಾಸನಾ, ಕ್ಲಿನ್ ಕಾರಾ ಮತ್ತು ಸುರೇಖಾ ಅವರೊಂದಿಗೆ ಪ್ಯಾರಿಸ್‌ನಲ್ಲಿ 2024 ರ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Megastar Chiranjeevi: ಮೆಗಾಸ್ಟಾರ್ ಚಿರಂಜೀವಿ ‘ವಿಶ್ವಂಭರ’ ಸಿನಿಮಾಗೆ ತ್ರಿಷಾ ನಾಯಕಿ!

ವಿಶ್ವಂಭರ’ ಸಿನಿಮಾದ ಮೊದಲ ಶೆಡ್ಯೂಲ್ ಇತ್ತೀಚೆಗಷ್ಟೇ ಆರಂಭವಾಗಿದ್ದು, ಶೂಟಿಂಗ್‌ ಭರದಿಂದ ಸಾಗುತ್ತಿದೆ ಎನ್ನಲಾಗಿದೆ.ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಚಿತ್ರದಲ್ಲಿ ಚಿರಂಜೀವಿ ಜತೆ ತ್ರಿಶಾ ತೆರೆ ಹಂಚಿಕೊಳ್ಳಬೇಕಿತ್ತು. ಆದರೆ, ಕೆಲವು ಭಿನ್ನಾಭಿಪ್ರಾಯಗಳಿಂದಾಗಿ ಅವರು ಚಿತ್ರದಿಂದ ಹೊರಗುಳಿದರು. ತ್ರಿಶಾ ಅವರು ಚಿರಂಜೀವಿ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. 18 ವರ್ಷಗಳ ನಂತರ ಮೆಗಾಸ್ಟಾರ್ ಅವರೊಂದಿಗೆ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಮಲ್ಲಿಡಿ ವಸಿಷ್ಠ ಅವರು ಬರೆದು ನಿರ್ದೇಶಿಸಿದ ‘ವಿಶ್ವಂಭರ’ ಒಂದು ಸೋಷಿಯೋ-ಫ್ಯಾಂಟಸಿ ಚಿತ್ರವಾಗಿದ್ದು, ಚಿರಂಜೀವಿ ಮುಖ್ಯ ಪಾತ್ರದಲ್ಲಿದ್ದಾರೆ. ವರದಿಗಳ ಪ್ರಕಾರ, ‘ವಿಶ್ವಂಭರ’ ಚಿತ್ರವನ್ನು ಯುವಿ ಕ್ರಿಯೇಷನ್ಸ್‌ 250 ಕೋಟಿ ರೂಪಾಯಿಗೂ ಹೆಚ್ಚು ಬಜೆಟ್‌ನಲ್ಲಿ ನಿರ್ಮಿಸಲಿದೆ ಎನ್ನಲಾಗಿದೆ. ಸಾಯಿ ಮಾಧವ್ ಬುರ್ರಾ ಸಂಭಾಷಣೆ ಬರೆದರೆ, ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಚೋಟಾ ಕೆ ನಾಯ್ಡು ಛಾಯಾಗ್ರಹಣ ಸಿನಿಮಾಕ್ಕಿದೆ.

ಸಿನಿಮಾಗಾಗಿ ಚಿರಂಜೀವಿ ಅವರು ಸಖತ್‌ ವರ್ಕೌಟ್‌ ಮಾಡುತ್ತಿದ್ದಾರೆ. 2023ರಲ್ಲಿ `ಭೋಲಾ ಶಂಕರ’ ಸಿನಿಮಾ ರಿಲೀಸ್‌ ಆಗಿತ್ತು. ಆದರೆ ಸಿನಿಮಾ ಗಳಿಕೆ ಕಂಡಿರಲಿಲ್ಲ. ಇದೀಗ ವಿಶಿಷ್ಟ ಪಾತ್ರದ ಮೂಲಕ ಮತ್ತೆ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ಚಿರಂಜೀವಿ ಅವರನ್ನು ಹೊರತುಪಡಿಸಿ ಉಳಿದ ಪಾತ್ರಗಳಲ್ಲಿ ಯಾರೆಲ್ಲ ನಟಿಸಲಿದ್ದಾರೆ ಎಂಬುದು ಚಿತ್ರತಂಡ ಮಾಹಿತಿ ಹಂಚಿಕೊಂಡಿಲ್ಲ. ಇದಲ್ಲದೇ ಚಿರಂಜೀವಿ ಅವರು ಬೋಯಪತಿ ಶ್ರೀನು ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲೂ ಚಿರಂಜೀವಿ ನಟಿಸುತ್ತಿದ್ದಾರೆ.

Continue Reading
Advertisement
Wayanad Landslide
ದೇಶ29 mins ago

Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Sexual Abuse
Latest58 mins ago

Sexual Abuse: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

Karnataka Rain
ಕರ್ನಾಟಕ1 hour ago

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

FASTag new rule
ತಂತ್ರಜ್ಞಾನ1 hour ago

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

Koti Koti Rokka Galisi kannada song released
ಕರ್ನಾಟಕ1 hour ago

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Paris Olympics Archery
ಕ್ರೀಡೆ1 hour ago

Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

ITR Filing
ವಾಣಿಜ್ಯ1 hour ago

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Gunfire On School
Latest2 hours ago

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Ibbani Thabbida Ileyali movie Helu Gelati song released
ಕರ್ನಾಟಕ2 hours ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Ashwini Ponnappa
ಕ್ರೀಡೆ2 hours ago

Ashwini Ponnappa: ‘ಇದು ನನ್ನ ಕೊನೆಯ ಒಲಿಂಪಿಕ್ಸ್​’; ನಿವೃತ್ತಿ ಘೋಷಿಸಿದ ಶಟ್ಲರ್​ ಅಶ್ವಿನಿ ಪೊನ್ನಪ್ಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌