Madanlal Dhingra: ಸ್ವಾತಂತ್ರ್ಯದ ಕಿಡಿ ಮದನ್‍ಲಾಲ್ ಢಿಂಗ್ರಾ ಬಲಿದಾನದ ನೆನಪು - Vistara News

ದೇಶ

Madanlal Dhingra: ಸ್ವಾತಂತ್ರ್ಯದ ಕಿಡಿ ಮದನ್‍ಲಾಲ್ ಢಿಂಗ್ರಾ ಬಲಿದಾನದ ನೆನಪು

ಕೇವಲ 26ನೇ ವಯಸ್ಸಿನಲ್ಲಿ ತನ್ನ ದೇಶಕ್ಕಾಗಿ ನೇಣಗಂಬವನ್ನೇರಿದ ಮಹಾನ್ ಬಲಿದಾನಿ ಮದನ್‍ಲಾಲ್ ಢಿಂಗ್ರಾ (Madanlal Dhingra). ಆಗಸ್ಟ್ 17, 1909 ಈತನ ಬಲಿದಾನ ದಿನ.

VISTARANEWS.COM


on

madanlal dhingra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
mayuralakshmi

:: ಮಯೂರಲಕ್ಷ್ಮೀ

ಸೆಪ್ಟೆಂಬರ್ 18, 1883, ಪಂಜಾಬ್ ಪ್ರಾಂತದ ಶ್ರೀಮಂತ ಕುಟುಂಬದಲ್ಲಿ ಜನಿಸಿದವರು ಮದನ್‍ಲಾಲ್ ಢಿಂಗ್ರಾ. ಅವರ ತಂದೆ ದಿತ್ತಮಾಲ್ ಢಿಂಗ್ರಾ ಸಿವಿಲ್ ಬ್ರಿಟಿಷ್ ಸರ್ಕಾರದಲ್ಲಿ ಸರ್ಜನ್ ಆಗಿದ್ದರು. ಅವರು ಬ್ರಿಟಿಷರೊಂದಿಗೆ ಅತ್ಯಂತ ಸೌಹಾರ್ದತೆಯಿಂದಿದ್ದರು. ಬ್ರಿಟಿಷರ ಪ್ರಭಾವದಿಂದ ತಮ್ಮ ಪುತ್ರರನ್ನು ಆಧುನಿಕವಾಗಿ ಬೆಳೆಸಿದ್ದಲ್ಲದೇ ಉನ್ನತ ವಿದ್ಯಾಭ್ಯಾಸಕ್ಕಾಗಿ ಲಂಡನ್ನಿಗೆ ಕಳುಹಿಸಿದ್ದರು. ಮದನ್ ಲಾಲ್ ತಾಯಿ ಧಾರ್ಮಿಕ ಶ್ರದ್ಧೆಯುಳ್ಳ ಭಾರತೀಯ ಮಾತೆಯಾಗಿದ್ದರು. ಅವರ ಪ್ರಭಾವ ಮದನ್ ಮೇಲಿತ್ತು. ಆದರೆ ಬ್ರಿಟಿಷರ ವಿರುದ್ಧ ಕ್ರಾಂತಿಕಾರಕ ಚಟುವಟಿಕೆಗಳಲ್ಲಿ ತೊಡಗಿದ್ದ ಮದನ್ ಲಾಹೋರ್ ಕಾಲೇಜಿನಿಂದ ಹೊರಬಂದರು.

ಅಣ್ಣನ ಸಲಹೆಯಂತೆ ಉನ್ನತ ಶಿಕ್ಷಣಕ್ಕಾಗಿ ಲಂಡನ್ನಿಗೆ ತೆರಳಿ ಅಲ್ಲಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನೀಯರಿಂಗ್ ಶಿಕ್ಷಣ ಪಡೆಯಲಾರಂಭಿಸಿದರು. ಅಲ್ಲಿ ಸಾವರ್ಕರ್ ಮತ್ತು ಶ್ಯಾಂಜೀ ಕೃಷ್ಣಶರ್ಮ ಅವರ ಸಂಪರ್ಕವಾಯಿತು. “ಇಂಡಿಯಾ ಹೌಸ್”ನಲ್ಲಿ ವಾಸಿಸುತ್ತಿದ್ದು ಕ್ರಾಂತಿಕಾರಕ ವಿಚಾರಗಳಲ್ಲಿ ಆಸಕ್ತಿ ವಹಿಸತೊಡಗಿದರು. ಲಂಡನ್ನಿನಲ್ಲಿ ಅಭಿನವ ಭಾರತದಲ್ಲಿದ್ದ ಕ್ರಾಂತಿಕಾರಿಗಳನ್ನು ಬಂಧಿಸಿ ಸೆರೆಯಲ್ಲಿಟ್ಟು ನಾನಾ ರೀತಿಯಲ್ಲಿ ಹಿಂಸಿಸಲಾಗಿತ್ತು. ಜೊತೆಗೆ ಸಾವರ್ಕರ್ ಸಹೋದರನನ್ನು ಬಂಧಿಸಿ ಸೆರೆಯಲ್ಲಿಟ್ಟಿದ್ದರು.

ಇತ್ತ ಭಾರತದಲ್ಲಿದ್ದ ಬ್ರಿಟಿಷ್ ಅಧಿಕಾರಿಗಳು ಮುಗ್ಧ ಭಾರತೀಯರ ಮೇಲೆ ದೌರ್ಜನ್ಯವೆಸಗಿ, ಪ್ರತಿರೋಧಿಸಿದವರನ್ನು ಬಂಧಿಸಿ ಕೊಲ್ಲುತ್ತಿದ್ದರು. ಬ್ರಿಟಿಷ್ ಅಧಿಕಾರಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಮದನ್ ಯೋಜನೆ ಮಾಡಿದರು. ಅದೇ ಸಮಯದಲ್ಲಿ ಬ್ರಿಟಿಷ್ ಅಧಿಕಾರಿ ಸರ್ ಕರ್ಜನ್ ವಿಲ್ಲೀ ನಿಷ್ಠೆಯಿಂದ ಭಾರತದಲ್ಲಿ ಅಧಿಕಾರ ನಡೆಸಿ ಲಂಡನ್ನಿಗೆ ಹಿಂತಿರುಗಿದ್ದನು. ಲಂಡನ್ನಿನ ಭಾರತದ ಕಛೇರಿಯ ಮುಖ್ಯಸ್ಥನಾಗಿ ನೇಮಕಗೊಂಡ ನಂತರ ಅಲ್ಲಿದ್ದ ಭಾರತೀಯ ಕ್ರಾಂತಿಕಾರಿಗಳನ್ನು ಮುಗಿಸಲು ಸಂಚು ಹೂಡಿದ್ದನು. ಅವನನ್ನು ಕೊಂದು ಬ್ರಿಟಿಷರ ವಿರುದ್ಧ ಸೇಡು ತೀರಿಸಿಕೊಳ್ಳುವ ಮದನ್‍ಲಾಲ್ ನಿರ್ಧಾರ ಅಚಲವಾಗಿತ್ತು.

ಜುಲೈ 1, 1909 ಸಂಜೆ ಇಂಡಿಯನ್ ನ್ಯಾಶನಲ್ ಅಸೋಸಿಯೇಶನ್ ಹಾಲ್‍ನಲ್ಲಿ ವಾರ್ಷಿಕ ಸಭೆ ನಡೆದಿತ್ತು. ಕಾರ್ಯಕ್ರಮ ಮುಗಿದ ನಂತರ ಸರ್ ಕರ್ಜನ್ ಹೊರಡಲನುವಾದನು. ಕೂಡಲೇ ಅಲ್ಲಿ ಪ್ರವೇಶಿಸಿದ ಮದನ್‍ಲಾಲ್ ಕರ್ಜನ್ ಎದುರು ನಿಂತು ತನ್ನ ಕೈಯಲ್ಲಿದ್ದ ಪಿಸ್ತೂಲಿನಿಂದ ಪಾಯಿಂಟ್-ಬ್ಲಾಂಕ್ ರೇಂಜಿನಲ್ಲಿ ಗುಂಡು ಹಾರಿಸಿದರು. ಕುಸಿದು ಬಿದ್ದ ಕರ್ಜನನ್ನು ಕಂಡು ಎಲ್ಲರೂ ಗಾಬರಿಯಾದರು. ಯಾವುದೇ ಉದ್ವೇಗವಿಲ್ಲದೆ ಮದನ್‍ಲಾಲ್ ಎದುರಾದ ಪೋಲೀಸರಿಗೆ ಶರಣಾದರು.

ಜೇಬಿನಲ್ಲಿ ತಾನೇ ಸಿದ್ಧಪಡಿಸಿಕೊಂಡಿದ್ದ ಹೇಳಿಕೆಯ ಚೀಟಿಯಿತ್ತು. ಅಮಾನುಷವಾಗಿ ಭಾರತೀಯ ಕ್ರಾಂತಿಕಾರಿಗಳನ್ನು ಗಲ್ಲುಶಿಕ್ಷೆ ನೀಡಿ ಕೊಂದ ಬ್ರಿಟಿಷರ ವಿರುದ್ಧ ತನ್ನ ಸೇಡು. ಭಾರತಾಂಬೆಯ ಪುತ್ರನಾಗಿ ಸೇಡನ್ನು ತೀರಿಸಿಕೊಂಡು ಬಲಿದಾನಿಗಳ ತ್ಯಾಗಕ್ಕೆ ನ್ಯಾಯ ಸಲ್ಲಿಸಿರುವೆ, ಮತ್ತೆ ಭಾರತಕ್ಕೆ ವಿಜಯಿಯಾಗಿ ಹಿಂದಿರುಗುವೆ ಎಂದು ಮದನ್ ಬರೆದಿದ್ದರು. ಆದರೆ ಆ ಚೀಟಿಯನ್ನು ವಶಪಡಿಸಿಕೊಂಡ ಪೋಲೀಸರು ಆ ವಿಷಯವನ್ನು ರಹಸ್ಯವಾಗಿಟ್ಟರು. ವಿಚಾರ ಪತ್ರಿಕೆಗಳಲ್ಲಿ ಬಂದರೆ ಕ್ರಾಂತಿ ಇನ್ನಷ್ಟು ತೀವ್ರವಾಗಬಹುದೆಂದು ಬ್ರಿಟಿಷರು ಹೆದರಿದರು. ಮುಂದೆ ವಿಚಾರಣೆಗೂ ಅದನ್ನು ಪ್ರಸ್ತುತಪಡಿಸಲಿಲ್ಲ.

ಕರ್ಜನ್ ಕೊಲೆಯ ಸುದ್ದಿ ಮಿಂಚಿನಂತೆ ಹರಡಿತು. ಲಂಡನ್ನಿನಲ್ಲಿದ್ದ ಎಲ್ಲಾ ಮುಖ್ಯ ಪತ್ರಿಕೆಗಳಲ್ಲಿ ಮದನ್‍ಲಾಲ್ ಕರ್ಜನನ್ನು ಹತ್ಯೆಗೈದ ಸುದ್ದಿಯಾಯಿತು. ಮದನ್‍ರನ್ನು ಸೆರೆಹಿಡಿದು ಬ್ರಿಕ್ಸ್ಟನ್ ಜೈಲಿನಲ್ಲಿರಿಸಲಾಯಿತು. ವಿಷಯ ತಿಳಿದ ಮದನ್ ಸಹೋದರ ಮತ್ತು ತಂದೆ ಹತ್ಯೆಗೈದದ್ದನ್ನು ವಿರೋಧಿಸಿ ಬೇಸರ ವ್ಯಕ್ತಪಡಿಸಿದರು. ಆದರೆ ಜೈಲಿನಲ್ಲಿದ್ದ ಮದನ್‍ಲಾಲ್‍ರನ್ನು ಭೇಟಿಯಾಗಲು ಸ್ನೇಹಿತರು ಬರುತ್ತಿದ್ದರು. ಭೇಟಿಯಾಗಲು ಬಂದ ತಮ್ಮ ಸಹೋದರನ ಮುಖವನ್ನೂ ನೋಡಲು ಮದನ್ ಇಚ್ಛಿಸಲಿಲ್ಲ. ಅವರ ದೇಶಭಕ್ತಿಯ ಕಿಚ್ಚು ಅಷ್ಟು ತೀವ್ರವಾದದ್ದು!

ಇತ್ತ ಭಾರತದಲ್ಲೂ ಕ್ರಾಂತಿಕಾರಿಗಳೆಲ್ಲರೂ ಮದನ್‍ಲಾಲ್ ಸಾಹಸವನ್ನು ಕೊಂಡಾಡಿದರು. ಲಂಡನ್ನಿನ ಇಂಗ್ಲಿಷ್ ಟೈಮ್ಸ್, ಕ್ರಾನಿಕಲ್ ಮುಂತಾದ ಪತ್ರಿಕೆಗಳಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆ ಸುದ್ದಿಯಾಗತೊಡಗಿತು. ಪ್ರತಿದಿನ ಅವರ ಚಲನವಲನಗಳನ್ನು ಜೈಲಿನಲ್ಲಿ ಗಮನಿಸುತ್ತಿದ್ದರು. ಭಾರತದಲ್ಲಿ ಸಾಮ್ರಾಜ್ಯ ಕಟ್ಟಿ ಮೆರೆಯುತ್ತಿದ್ದ ಬ್ರಿಟಷರ ವಿರುದ್ಧ ತನ್ನ ಸೇಡು, ಮುಂದಿನ ಕ್ರಾಂತಿಕಾರಿಗಳಿಗೆ ಸ್ಫೂರ್ತಿಯಾಗುತ್ತದೆ ಎಂದು ಮದನ್‍ಲಾಲ್ ವಾದಿಸಿದರು. ಭಾರತ ಖಂಡಿತಾ ಸ್ವತಂತ್ರವಾಗುತ್ತದೆ ಎಂದರು. ವಿಚಾರಣೆಗಳು ಮುಗಿದವು. ನ್ಯಾಯಾಲಯ ಅವರಿಗೆ ಮರಣದಂಡನೆ ವಿಧಿಸಿತು.

ಬ್ರಿಟಿಷರು ರಹಸ್ಯವಾಗಿಟ್ಟಿದ್ದ ಮದನ್‍ಲಾಲ್ ಬರೆದಿದ್ದ ಚೀಟಿಯ ಮತ್ತೊಂದು ಪ್ರತಿ ಅವರ ಸ್ನೇಹಿತನ ಮೂಲಕ ಹೊರಬಂದಿತ್ತು. ಮರುದಿನ ಪತ್ರಿಕೆಗಳಲ್ಲಿ ಅದರಲ್ಲಿದ್ದ ವಿಷಯಗಳು ಪ್ರಕಟವಾದವು. ಇಂಗ್ಲೆಂಡಿನಿಂದ ಅಮೇರಿಕಾಗೂ ಹರಡಿ ಅಲ್ಲಿನ ಪತ್ರಿಕೆಗಳಲ್ಲೂ ಪ್ರಕಟವಾಯಿತು. ಐರ್ಲೆಂಡಿನ ಪತ್ರಿಕೆಗಳು ಮದನ್‍ಲಾಲನ್ನು ವೀರಯೋಧ ಎಂದು ಬಣ್ಣಿಸಿದವು. ಆಗಸ್ಟ್ 16ರಂದು ಮುಂಜಾನೆ ಮದನ್‍ಲಾಲ್ ನೇಣಿಗೆ ಹೆಮ್ಮೆಯಿಂದ ಕೊರಳೊಡ್ಡಲು ತಯಾರಾದರು. ಯಾವುದೇ ಉದ್ವೇಗ, ಬೇಸರ ಮತ್ತು ಅಸಹನೆಯಿರಲಿಲ್ಲ.

ಬ್ರಿಟಿಷರು ವಾಡಿಕೆಯಂತೆ ಕೊನೆಯ ವಿಧಿಗಳಿಗಾಗಿ ಅವನ ಬಳಿ ಕ್ಲರ್ಗಿಯನ್ನು ಕಳಿಸಿದರು. ಆದರೆ ಮದನ್‍ಲಾಲ್ ತಾನು ಹೆಮ್ಮೆಯ ಭಾರತೀಯನಾದ್ದರಿಂದ ಹಿಂದೂವಾಗಿಯೇ ಸಾಯುವೆನೆಂದು ಅವರ ವಿಧಾನಗಳನ್ನು ತಿರಸ್ಕರಿಸಿದರು. ಕೇವಲ 26ನೇ ವಯಸ್ಸಿನಲ್ಲಿ ತನ್ನ ದೇಶಕ್ಕಾಗಿ ನೇಣಗಂಬವನ್ನೇರಿದ ಮಹಾನ್ ಬಲಿದಾನಿ ಮದನ್‍ಲಾಲ್ ಢಿಂಗ್ರಾ.

ಇದನ್ನೂ ಓದಿ: Shivakumara Swami: ಶ್ರೀ ಶಿವಕುಮಾರ ಸ್ವಾಮೀಜಿ ಸ್ಮರಣೆ: ಕರುಣೆಯೇ ಕಣ್ಣು ತೆರೆದಂತೆ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

Yamuna Bridge: ರೈಲ್ವೆ ಸಚಿವಾಲಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಆಗ್ರಾದಲ್ಲಿನ ಯಮುನಾ ರೈಲ್ವೆ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿದೆ. ರೈಲ್ವೆ ಹಂಚಿಕೊಂಡಿರುವ, ಡ್ರೋನ್‌ ಸೆರೆಹಿಡಿರುವ ಈ ಚಿತ್ರದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ ಸೇತುವೆಯ ಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದ್ದು, ನೆಟ್ಟಿಗರು ಮನ ಸೋತಿದ್ದಾರೆ. ಫೋಟೊ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಈಗಾಗಲೇ 28 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 490ಕ್ಕೂ ಹೆಚ್ಚು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ. 200ಕ್ಕೂ ಹೆಚ್ಚು ಶೇರ್‌ ಆಗಿದೆ. ಯಮುನೆಯ ಸೌಂದರ್ಯಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

VISTARANEWS.COM


on

Yamuna Bridge
Koo

ಹೊಸದಿಲ್ಲಿ: ಭಾರತೀಯ ರೈಲ್ವೆ ಇಲಾಖೆ (Railways Ministry) ಆಗಾಗ ತನ್ನ ಕಾಮಗಾರಿಗಳ ವಿವರಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತದೆ. ಸ್ವೇಷನ್‌, ಸೇತುವೆ ನಿರ್ಮಾಣ ಕಾಮಗಾರಿ, ಹೊಸ ಯೋಜನೆಗಳ ಮಾಹಿತಿಯನ್ನು ನೀಡುತ್ತಿರುತ್ತದೆ. ಇದೀಗ ರೈಲ್ವೆ ಸಚಿವಾಲಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಆಗ್ರಾದಲ್ಲಿನ ಯಮುನಾ ರೈಲ್ವೆ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿದೆ. ರೈಲ್ವೆ ಹಂಚಿಕೊಂಡಿರುವ, ಡ್ರೋನ್‌ ಸೆರೆಹಿಡಿರುವ ಈ ಚಿತ್ರದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ ಸೇತುವೆಯ ಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದ್ದು, ನೆಟ್ಟಿಗರು ಮನ ಸೋತಿದ್ದಾರೆ (Viral News).

“ಆಗ್ರಾದಲ್ಲಿನ ಯಮುನಾ ಸೇತುವೆಯ ಪಕ್ಷಿ ನೋಟ. ಸೇತುವೆಯ ಹಿನ್ನೆಲೆಯಲ್ಲಿ ಭವ್ಯವಾದ ತಾಜ್ ಮಹಲ್ ಅನ್ನೂ ಕಾಣಬಹುದುʼʼ ಎಂದು ಫೋಟೊಕ್ಕೆ ಕ್ಯಾಪ್ಶನ್‌ ನೀಡಲಾಗಿದೆ. ಫೋಟೊ ಹಂಚಿಕೊಂಡ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಈಗಾಗಲೇ 28 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 490ಕ್ಕೂ ಹೆಚ್ಚು ಮಂದಿ ಲೈಕ್‌ ಬಟನ್‌ ಒತ್ತಿದ್ದಾರೆ. 200ಕ್ಕೂ ಹೆಚ್ಚು ಶೇರ್‌ ಆಗಿದೆ. ಯಮುನೆಯ ಸೌಂದರ್ಯಕ್ಕೆ ನೆಟ್ಟಿಗರು ಮನ ಸೋತಿದ್ದಾರೆ.

ನೆಟ್ಟಿಗರು ಏನಂದ್ರು?

ʼʼವಾವ್‌ ತಾಜ್‌ʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಹಿನ್ನೆಲೆಯಲ್ಲಿ ತಾಜ್‌ಮಹಲ್‌ ಕಾಣಿಸುತ್ತಿದೆʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼಜೈ ಭಾರತ್‌, ಜೈ ಭಾರತಿʼʼ ಎಂದು ಮತ್ತೊಬ್ಬರು ಹೇಳಿದ್ದಾರೆ. ʼʼವಿಹಂಗಮ ದೃಶ್ಯʼʼ ಎಂದು ಮಗದೊಬ್ಬರು ಉದ್ಘರಿಸಿದ್ದಾರೆ. ʼʼನಿಜವಾಗಿಯೂ ಈ ಫೋಟೊ ಮನಮೋಹಕವಾಗಿದೆʼʼ ಎಂದು ನೆಟ್ಟಿಗರೊಬ್ಬರು ಮೆಚ್ಚುಗೆ ಸೂಚಿಸಿದ್ದಾರೆ. ಒಟ್ಟಿನಲ್ಲಿ ಯಮುನೆಯ ಒನಪು, ಸೇತುವೆಯ ಗಾಂಭೀರ್ಯ, ತಾಜ್‌ ಮಹಲ್‌ನ ಸೌಂದರ್ಯ ಹಲವರ ಗಮನ ಸೆಳೆದಿದ್ದು ಸುಳ್ಳಲ್ಲ.

ಶತಮಾನಗಳ ಇತಿಹಾಸ

ವಿಶೇಷವೆಂದರೆ ಭಾರತೀಯ ರೈಲ್ವೆಯ ಪ್ರಮುಖ ಜೀವನಾಡಿಯಾದ ಈ ಸೇತುವೆ 1875ರಲ್ಲಿ ಸಂಚಾರಕ್ಕೆ ಮುಕ್ತವಾಗಿತ್ತು. ಆಗ್ರಾ ಈಸ್ಟ್ ಬ್ಯಾಂಕ್ ನಿಲ್ದಾಣ ಮತ್ತು ಆಗ್ರಾ ಕೋಟೆ ನಿಲ್ದಾಣವನ್ನು ಇದು ಸಂಪರ್ಕಿಸುತ್ತದೆ. ಶತಮಾನಗಳ ಇತಿಹಾಸ ಹೊಂದಿರುವ ಯಮುನಾ ಸೇತುವೆಯ ಸಮೀಪದ ಆಗ್ರಾ ರೈಲ್ವೆ ನಿಲ್ದಾಣವು ಅತ್ಯಂತ ಜನನಿಬಿಡ ರೈಲ್ವೆ ನಿಲ್ದಾಣಗಳಲ್ಲಿ ಒಂದಾಗಿದೆ. ಇದು ಪ್ರಯಾಣಿಕರು ಮತ್ತು ಸರಕುಗಳೆರಡಕ್ಕೂ ಪ್ರಮುಖ ಸಾರಿಗೆ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಜತೆಗೆ ಆಗ್ರಾವನ್ನು ಭಾರತದ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ.

ಜನರೊಂದಿಗೆ ನಿರಂತರ ಸಂಪರ್ಕ

ರೈಲ್ವೆ ಸಚಿವಾಲಯವು ರೈಲುಗಳು ಮತ್ತು ಅವುಗಳ ಸೇವೆಗಳ ಬಗ್ಗೆ ಆಗಾಗ ಆಸಕ್ತಿದಾಯಕ ಸಂಗತಿಗಳು ಮತ್ತು ಮಾಹಿತಿಯನ್ನು ಹಂಚಿಕೊಂಡು ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತದೆ. ಕೆಲವು ವಾರಗಳ ಹಿಂದೆ ಸಚಿವಾಲಯವು ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗಾಗಿ ನಿರ್ಮಿಸಲಾದ ಗುಜರಾತ್‌ನ ಔರಂಗ ಸೇತುವೆಯ ಅದ್ಭುತ ಚಿತ್ರವನ್ನು ಹಂಚಿಕೊಂಡಿತ್ತು. ವಲ್ಸಾದ್ ಜಿಲ್ಲೆಯ ಔರಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಕಾಮಗಾರಿ 2023ರ ಆಗಸ್ಟ್‌ನಲ್ಲಿ ಪೂರ್ಣಗೊಂಡಿತ್ತು. ಜತೆಗೆ ಪಶ್ಚಿಮ ಘಟ್ಟದ ಹಸಿರಿನ ನಡುವೆ, ಗುಡ್ಡಗಳ ಮಧ್ಯೆ ಚಲಿಸುವ ರೈಲಿನ ವಿಡಿಯೊವನ್ನು ಇತ್ತೀಚೆಗೆ ಹಂಚಿಕೊಂಡಿತ್ತು. ʼʼಸ್ವರ್ಗ ಸದೃಶ ಪಶ್ಚಿಮ ಘಟ್ಟದ ಸೌಂದರ್ಯವನ್ನು ಭಾರತೀಯ ರೈಲ್ವೆಯೊಂದಿಗೆ ಆನಂದಿಸಿʼʼ ಎನ್ನುವ ಶೀರ್ಷಿಕೆಯಡಿ ಹಂಚಿಕೊಂಡ ಈ ಪೋಸ್ಟ್‌ಗೂ ನೂರಾರು ಲೈಕ್‌ಗಳು ಸಂದಿವೆ.

ಇದನ್ನೂ ಓದಿ: India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Continue Reading

ಪ್ರಮುಖ ಸುದ್ದಿ

Road Accident: ಪಿಕ್‌ಅಪ್‌ ವಾಹನ ಕಂದಕಕ್ಕೆ ಬಿದ್ದು 18 ಕಾರ್ಮಿಕರ ದುರ್ಮರಣ; ಕೆಲಸಕ್ಕೆ ಹೊರಟವರು ಮಸಣಕ್ಕೆ!

Road Accident: ಅಪಘಾತ ಸಂಭವಿಸಿ 18 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ವಿಜಯ್‌ ಶರ್ಮಾ ಸಂತಾಪ ಸೂಚಿಸಿದ್ದಾರೆ. ಕವಾರ್ಧ ಜಿಲ್ಲೆಯಲ್ಲಿ ಪಿಕ್‌ಅಪ್‌ ವಾಹನ ಕಂದಕಕ್ಕೆ ಉರುಳಿ 15 ಜನ ಮೃತಪಟ್ಟಿರುವ ಸುದ್ದಿ ತಿಳಿದು ಅತೀವ ನೋವಾಯಿತು. ಕುಟುಂಬಸ್ಥರ ನೋವಿನಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Road Accident
Koo

ರಾಯ್‌ಪುರ: ಛತ್ತೀಸ್‌ಗಢದ ಕವಾರ್ಧ ಜಿಲ್ಲೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದ್ದು, 18 ಕಾರ್ಮಿಕರು ಮೃತಪಟ್ಟಿದ್ದಾರೆ. ಛತ್ತೀಸ್‌ಗಢದ (Chhattisgarh) ಕವಾರ್ಧ (Kawardha) ಪ್ರದೇಶದಲ್ಲಿ ಸುಮಾರು 25-30 ಕಾರ್ಮಿಕರಿದ್ದ ಪಿಕ್‌ಅಪ್‌ ವಾಹನವು ತೆರಳುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಾಹ್‌ಪನಿ ಪ್ರದೇಶದ ಕಂದಕಕ್ಕೆ ಉರುಳಿದೆ. 8 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸೋಮವಾರ (ಮೇ 20) ಬೆಳಗಿನ ಜಾವವೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬೈಗಾ ಬುಡಕಟ್ಟು ಸಮುದಾಯದವರು ಕೆಲಸಕ್ಕೆಂದು ಪಿಕ್‌ಅಪ್‌ ವಾಹನದಲ್ಲಿ ತೆರಳುತ್ತಿದ್ದರು. ಸುಮಾರು 20 ಅಡಿ ಆಳದ ಕಂದಕಕ್ಕೆ ಬಸ್‌ ಉರುಳಿದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸುತ್ತಲೇ ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಯಿತಾದರೂ ವಾಹನ ಬಿದ್ದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಹಿಳೆಯರು ಕೂಡ ಇದ್ದಾರೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. ಇವರು ಕುಯಿ ಗ್ರಾಮದವರು ಎಂಬ ಮಾಹಿತಿಯೂ ಲಭ್ಯವಾಗಿದೆ.

ಸಂತಾಪ ಸೂಚಿಸಿದ ಡಿಸಿಎಂ

ಅಪಘಾತ ಸಂಭವಿಸಿ 18 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ವಿಜಯ್‌ ಶರ್ಮಾ ಸಂತಾಪ ಸೂಚಿಸಿದ್ದಾರೆ. “ಕವಾರ್ಧ ಜಿಲ್ಲೆಯಲ್ಲಿ ಪಿಕ್‌ಅಪ್‌ ವಾಹನ ಕಂದಕಕ್ಕೆ ಉರುಳಿ 15 ಜನ ಮೃತಪಟ್ಟಿರುವ ಸುದ್ದಿ ತಿಳಿದು ಅತೀವ ನೋವಾಯಿತು. ಕುಟುಂಬಸ್ಥರ ನೋವಿನಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರು ಹಾಗೂ ಅವರ ಕುಟುಂಬಸ್ಥರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದಷ್ಟೇ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಖಾಸಗಿ ಸಂಸ್ಥೆಯೊಂದರ 12 ಕಾರ್ಮಿಕರು ಮೃತಪಟ್ಟು, 14 ಮಂದಿ ಗಾಯಗೊಂಡಿದ್ದರು. ದುರ್ಗದ ಗಣಿಯಲ್ಲಿ ಕಾರ್ಮಿಕರಿಂದ ತುಂಬಿದ್ದ ಬಸ್ ಪಲ್ಟಿಯಾಗಿತ್ತು. ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ) ಗೆ ಸ್ಥಳಾಂತರಿಸಲಾಗಿತ್ತು, ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಘಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದರು.

ಇದನ್ನೂ ಓದಿ: Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Continue Reading

ದೇಶ

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Physical Abuse & Murder:ಬಾಲಕಿಯನ್ನು ಅತ್ಯಾಚಾರಗೈದು ಬಳಿಕ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೇಬಿಯಾ ಬುಡಗಟ್ಟು ಜನಾಂಗದ ಇಬ್ಬರು ಸಹೋದರರಾದ ಕಲು ಮತ್ತು ಕಹ್ನಾ ವಿರುದ್ಧ ಪೋಕ್ಸೋ ಕಾಯ್ದೆಯಲ್ಲಿ ಕೇಸು ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ಮಹಿಳೆಯರು ಸೇರಿದಂತೆ ಇತರೆ ಏಳು ಜನರ ವಿರುದ್ಧವೂ ಕೇಸ್‌ ದಾಖಲಿಸಲಾಗಿತ್ತು. ಅವರು ಆರೋಪಿಗಳಿಗೆ ಸಾಕ್ಷ್ಯಾಧಾರ ನಾಶಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿದ್ದರು. ಇದೀಗ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಿರುವ ಕೋರ್ಟ್‌ ಉಳಿದ ಏಳು ಜನರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ.

VISTARANEWS.COM


on

Physical Abuse & Murder
Koo

ನವದೆಹಲಿ: ಕಳೆದ ವರ್ಷ ಅಪ್ರಾಪ್ತೆ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಬರ್ಬರ ಕೊಲೆ(Physical Abuse & Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹಂತಕರಿಗೆ ರಾಜಸ್ಥಾನ(Rajasthan)ದ ಬಿಲ್ವಾರ ವಿಶೇಷ ಕೋರ್ಟ್‌ ಮರಣದಂಡನೆ(Death Penalty) ವಿಧಿಸಲಾಗಿದೆ. ನ್ಯಾಯಮೂರ್ತಿ ಅನಿಲ್‌ ಗುಪ್ತಾ ಇದ್ದ ನ್ಯಾಯಪೀಠ, ಪ್ರಕರಣದ ದೋಷಿಗಳಾದ ಕಲು ಮತ್ತು ಕಹ್ನಾ ಎಂಬ ಸಹೋದರರಿಗೆ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದ್ದು, ಇದು ಅಪರೂಪಗಳಲ್ಲಿ ಅಪರೂಪದ ಪ್ರಕರಣ ಎಂದು ಹೇಳಿದೆ.

ಬಾಲಕಿಯನ್ನು ಅತ್ಯಾಚಾರಗೈದು ಬಳಿಕ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲೇಬಿಯಾ ಬುಡಗಟ್ಟು ಜನಾಂಗದ ಇಬ್ಬರು ಸಹೋದರರಾದ ಕಲು ಮತ್ತು ಕಹ್ನಾ ವಿರುದ್ಧ ಪೋಕ್ಸೋ ಕಾಯ್ದೆಯಲ್ಲಿ ಕೇಸು ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೂರು ಮಹಿಳೆಯರು ಸೇರಿದಂತೆ ಇತರೆ ಏಳು ಜನರ ವಿರುದ್ಧವೂ ಕೇಸ್‌ ದಾಖಲಿಸಲಾಗಿತ್ತು. ಅವರು ಆರೋಪಿಗಳಿಗೆ ಸಾಕ್ಷ್ಯಾಧಾರ ನಾಶಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿದ್ದರು. ಇದೀಗ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಿರುವ ಕೋರ್ಟ್‌ ಉಳಿದ ಏಳು ಜನರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಿದೆ. ಇದೀಗ ಇವರ ಬಿಡುಗಡೆ ಪ್ರಶ್ನಿಸಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಇನ್ನು ಮೂವರು ಮಹಿಳೆಯರಲ್ಲಿ ಇಬ್ಬರು ಕಲು ಮತ್ತು ಕಹ್ನಾನ ಪತ್ನಿಯರು ಎಂದು ಹೇಳಲಾಗಿದೆ.

ಇನ್ನು ಈ ಬಗ್ಗೆ ಸರ್ಕಾರಿ ವಕೀಲ ಮಹಾವೀರ್‌ ಸಿಂಗ್‌ ಕಿಶ್ವಂತ್‌ ಪ್ರತಿಕ್ರಿಯಿಸಿದ್ದು, ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲು ಮತ್ತು ಕಹ್ನಾಗೆ ಮರಣದಂಡನೆ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದಿತ್ತು ಪೈಶಾಚಿಕ ಕೃತ್ಯ

ಬಿಲ್ವರಾ ಜಿಲ್ಲೆಯ ಕೊಟ್ರಿ ತಾಲೂಕಿನ ಶಹಾಪುರದಲ್ಲಿ ನಡೆದಿದ್ದು, ದನ ಮೇಯಿಸಲು ಹೋಗಿದ್ದ 14ವರ್ಷದ ಬಾಲಕಿ ನಿಗೂಢವಾಗಿ ಕಣ್ಮರೆ ಆಗಿದ್ದಳು. ದನಗಳು ಹಟ್ಟಿಗೆ ವಾಪಾಸಾದರೂ ಮಗಳು ಬಾರದೇ ಇರುವುದನ್ನು ಕಂಡ ಪೋಷಕರು ಗಾಬರಿಗೊಂಡಿದ್ದರು. ಆಕೆಗಾಗಿ ಮನೆಯವರೆಲ್ಲಾ ಹುಡುಕಾಟ ಶುರು ಮಾಡಿದ್ದರು. ಸುಮಾರು ಹೊತ್ತಿನ ಹುಡುಕಾಟದ ಬಳಿಕ ರಾತ್ರಿ 10ಗಂಟೆ ವೇಳೆಗೆ ಇದ್ದಿಲಿನ ಕುಲುಮೆಯಿಂದ ಹೊಗೆ ಹೋಗುತ್ತಿರುವುದನ್ನು ಗಮನಿಸಿದ್ದರು. ಅದನ್ನು ಕೆದಕಿ ನೋಡಿದಾಗ ಬಾಲಕಿ ಧರಿಸಿದ್ದ ಬಟ್ಟೆ ತುಂಡುಗಳು, ಚಪ್ಪಲಿ ಪತ್ತೆಯಾಗಿತ್ತು.

ತಕ್ಷಣ ಪೊಲೀಸರಿಗೆ ಕರೆ ಮಾಡಿದ ಕುಟುಂಬಸ್ಥರು ಘಟನೆ ಬಗ್ಗೆ ವಿವರಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಅರೆಬೆಂದ ಮೃತದೇಹ ಸಿಕ್ಕಿತ್ತು. ಇದರಿಂದ ಆಕೆಯನ್ನು ಹಂತಕರು ಜೀವಂತವಾಗಿ ಸುಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಇದಾದ ಬಳಿಕ ವಿಧಿ ವಿಜ್ಞಾನ ವಿಭಾಗಕ್ಕೆ ಮೃತದೇಹ ಕಳಿಸಿದಾಗ, ಬಾಲಕಿ ಪ್ರಜ್ಞಾ ಹೀನ ಸ್ಥಿತಿಯಲ್ಲಿರುವಾಗಲೇ ಆಕೆಯನ್ನು ಇದ್ದಿಲಿನ ಕುಲುಮೆಯಲ್ಲಿ ಸುಟ್ಟಿದ್ದಾರೆ. ಆಕೆಯನ್ನು ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿತ್ತು.

ಇನ್ನು ಈ ಕೃತ್ಯ ಇಡೀ ರಾಜ್ಯದಲ್ಲೇ ಸಂಚಲನ ಮೂಡಿಸಿತ್ತು. ಅಲ್ಲದೇ ರಾಜಕೀಯ ಟೀಕಾಪ್ರಹಾರಕ್ಕೂ ಕಾರಣವಾಗಿತ್ತು. ಪೊಲೀಸರು ಪ್ರಕರಣದಕ್ಕೆ ಸಂಬಂಧಿಸಿದಂತೆ ಕೇವಲ 30ದಿನಗಳಲ್ಲಿ 400ಕ್ಕೂ ಅಧಿಕ ಪುಟುಗಳ ಚಾರ್ಜ್‌ಶೀಟ್‌ ದಾಖಲಿಸಿದ್ದರು.

ಇದನ್ನೂ ಓದಿ:Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Continue Reading

ದೇಶ

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

Crime News: ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕಿದೆ. ಅದೂ ಬಂಧನವಾದ 15 ಗಂಟೆಯೊಳಗೆ ಎನ್ನುವುದು ವಿಶೇಷ. ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬ ಷರತ್ತುಗಳ ಮೇಲೆ ನ್ಯಾಯಾಲಯವು ನೀಡಿದೆ ಮೂಲಗಳು ತಿಳಿಸಿವೆ. ಸದ್ಯ ಈ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

VISTARANEWS.COM


on

Crime News
Koo

ಮುಂಬೈ: ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕಿದೆ. ಅದೂ ಬಂಧನವಾದ 15 ಗಂಟೆಯೊಳಗೆ ಎನ್ನುವುದು ವಿಶೇಷ. 17 ವರ್ಷದ ಈತ ಶನಿವಾರ ಪುಣೆಯಲ್ಲಿ ಚಲಾಯಿಸುತ್ತಿದ್ದ ಪೋರ್ಷೆ ಕಾರು ಕೋರೆಗಾಂವ್ ಪಾರ್ಕ್‌ ಸಮೀಪ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪುರುಷ ಮತ್ತು ಮಹಿಳೆ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು (Crime News).

ʼʼಬಾಲಕನಿಗೆ ಜಾಮೀನು ಸಿಕ್ಕಿದೆ. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು ಕೆಲವೊಂದು ಷರತ್ತನ್ನೂ ವಿಧಿಸಿದೆ. ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬ ಷರತ್ತುಗಳ ಮೇಲೆ ನ್ಯಾಯಾಲಯವು ನೀಡಿದೆʼʼ ಎಂದು ಆತನ ವಕೀಲ ಪ್ರಶಾಂತ್ ಪಾಟೀಲ್ ಹೇಳಿದ್ದಾರೆ. ಆರೋಪಿ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗ.

ಘಟನೆಯ ವಿವರ

ಪುಣೆಯಲ್ಲಿ ಉದ್ಯೋಗ ನಿರ್ವಹಿಸುತ್ತಿರುವ, ಮಧ್ಯಪ್ರದೇಶದ ಎಂಜಿನಿಯರ್‌ಗಳಾದ 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಅವರು ಬೈಕ್‌ನಲ್ಲಿ ಹಿಂದಿರುಗುತ್ತಿದ್ದಾಗ ಈ ಅಪ್ರಾಪ್ತ ಚಾಲಾಯಿಸುತ್ತಿದ್ದ, ಗಂಟೆಗೆ 200 ಕಿ.ಮೀ. ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಅಶ್ವಿನಿ ಸುಮಾರು 20 ಅಡಿ ಎತ್ತರಕ್ಕೆ ಚಿಮ್ಮಿದ್ದರು. ಕಾರಿನ ಮೇಲೆ ಎಸೆಯಲ್ಪಟ್ಟ ಅನೀಶ್‌ ಗಂಭೀರ ಗಾಯಗೊಂಡಿದ್ದರು. ಬಳಿಕ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ʼʼಮುಂಜಾನೆ 2.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ವೇಗದಲ್ಲಿತ್ತು. ಕಾರು ಬೈಕಿಗೆ ಡಿಕ್ಕಿ ಹೊಡೆದ ನಂತರ ಚಾಲಕ ಪರಾರಿಯಾಗಲು ಯತ್ನಿಸಿದ್ದ. ಸ್ಥಳೀಯರು ಆತನನ್ನು ಹಿಡಿದು ನಿಲ್ಲಿಸಿದ್ದರು. ಚಾಲಕನಲ್ಲದೆ ಕಾರಿನಲ್ಲಿ ಇನ್ನೂ ಇಬ್ಬರಿದ್ದರು. ಆ ಪೈಕಿ ಓರ್ವ ತಪ್ಪಿಸಿಕೊಂಡಿದ್ದ. ಸಿಕ್ಕ ಬಿದ್ದ ಚಾಲಕ ಸೇರಿದಂತೆ ಇಬ್ಬರನ್ನು ಜನಸಮೂಹವು ಥಳಿಸಿದೆʼʼ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ. ಘಟನೆ ನಡೆದು 15 ನಿಮಿಷಗಳಲ್ಲಿ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಧಾವಿಸಿದ್ದರು. ಈ ವೇಳೆಗಾಗಲೇ ದಂಪತಿ ಅಸುನೀಗಿದ್ದರು.

ಮದ್ಯ ಸೇವಿಸಿದ್ದ

ಪಬ್‌ನಲ್ಲಿ ಪಾರ್ಟಿ ಮಾಡಿದ್ದ ಅಪ್ರಾಪ್ತರು ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯ ಕಾರಣ ನೀಡಿ ಎಫ್ಐಆರ್ ದಾಖಲಿಸಲಾಗಿದೆ. ಕಾರು ಚಲಾಯಿಸಿದ ಹದಿಹರೆಯದವನ ತಂದೆ ಮತ್ತು ಆತನಿಗೆ ಮದ್ಯ ಪೂರೈಸಿದ ಪಬ್ ವಿರುದ್ಧವೂ ದೂರು ದಾಖಲಿಸುವ ಸಾಧ್ಯತೆ ಇದೆ. ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು, ಇದು ʼಘೋರ ಅಪರಾಧʼ ಆಗಿರುವುದರಿಂದ ಆರೋಪಿಯನ್ನು ವಯಸ್ಕನಂತೆ ಪರಿಗಣಿಸಿ ಆತನನ್ನು ಕಸ್ಟಡಿಗೆ ನೀಡಬೇಕೆಂದು ಕೋರಿದ್ದರು. ಜಾಮೀನು ಆದೇಶದ ವಿರುದ್ಧ ಅವರು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

Continue Reading
Advertisement
Money Guide
ಮನಿ-ಗೈಡ್3 mins ago

Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Yamuna Bridge
ವೈರಲ್ ನ್ಯೂಸ್9 mins ago

Yamuna Bridge: ಯಮುನಾ ಸೇತುವೆಯ ಅದ್ಭುತ ಚಿತ್ರ ಹಂಚಿಕೊಂಡ ಭಾರತೀಯ ರೈಲ್ವೆ: ವಾವ್‌ ತಾಜ್‌ ಎಂದ ನೆಟ್ಟಿಗರು; ನೀವೂ ನೋಡಿ

KKR vs SRH Qualifier 1
ಕ್ರೀಡೆ23 mins ago

KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

Road Accident
ಪ್ರಮುಖ ಸುದ್ದಿ27 mins ago

Road Accident: ಪಿಕ್‌ಅಪ್‌ ವಾಹನ ಕಂದಕಕ್ಕೆ ಬಿದ್ದು 18 ಕಾರ್ಮಿಕರ ದುರ್ಮರಣ; ಕೆಲಸಕ್ಕೆ ಹೊರಟವರು ಮಸಣಕ್ಕೆ!

theft case
ತುಮಕೂರು48 mins ago

Theft Case : ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

Physical Abuse & Murder
ದೇಶ50 mins ago

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Crime News
ದೇಶ52 mins ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

ISIS Terrorists
ದೇಶ53 mins ago

ISIS Terrorists: ಐಪಿಎಲ್‌ ಪಂದ್ಯಕ್ಕೂ ಮೊದಲೇ ಗುಜರಾತ್‌ನಲ್ಲಿ ನಾಲ್ವರು ಐಸಿಸ್‌ ಉಗ್ರರ ಬಂಧನ; ಇವರ ಸಂಚೇನು?

Deepika Padukone Enjoy Lunch Date After Casting Their Vote
ಬಾಲಿವುಡ್55 mins ago

Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

Prajwal Revanna Case One more SPP appointed for SIT cases Govt gears up for arguments in High Court
ಕ್ರೈಂ1 hour ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇನ್ನೊಬ್ಬ ಎಸ್‌ಪಿಪಿ ನೇಮಕ; ಹೈಕೋರ್ಟ್‌ನಲ್ಲಿ ವಾದಕ್ಕೆ ಸಜ್ಜಾದ ಸರ್ಕಾರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌