ಜುಲೈ 11ರ ಬಳಿಕ ಮಹಾ ಸಂಪುಟ ವಿಸ್ತರಣೆ: ಬಿಜೆಪಿಯಿಂದ 25, ಶಿವಸೇನೆಯಿಂದ 13 ಮಂತ್ರಿಗಳು? - Vistara News

ದೇಶ

ಜುಲೈ 11ರ ಬಳಿಕ ಮಹಾ ಸಂಪುಟ ವಿಸ್ತರಣೆ: ಬಿಜೆಪಿಯಿಂದ 25, ಶಿವಸೇನೆಯಿಂದ 13 ಮಂತ್ರಿಗಳು?

Maha Politics: ಮಹಾರಾಷ್ಟ್ರದಲ್ಲಿ ಏಕನಾಥ್‌ ಶಿಂಧೆ ಸಂಪುಟ ವಿಸ್ತರಣೆಯ ಚರ್ಚೆ ನಡೆಯುತ್ತಿದೆ. ಜುಲೈ 11ರಂದು ಸುಪ್ರೀಂಕೋರ್ಟ್‌ ಅನರ್ಹತೆ ಅರ್ಜಿಗಳನ್ನು ವಿಲೇವಾರಿ ಮಾಡಿದ ಬಳಿಕ ಅದು ಮುಂದಿನ ಹೆಜ್ಜೆ ಇಡಲಿದೆ ಎನ್ನಲಾಗಿದೆ.

VISTARANEWS.COM


on

bjp-shinde
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

Mumbai: ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸಚಿವ ಸಂಪುಟ ಜುಲೈ ೧೧ರ ಬಳಿಕ ಯಾವುದೇ ದಿನ ವಿಸ್ತರಣೆಯಾಗುವ ಸಾಧ್ಯತೆ ಇದೆ. ಪೂರ್ಣ ಸಂಪುಟದಲ್ಲಿ ಒಟ್ಟು ೪೫ ಮಂದಿ ಇರುವ ನಿರೀಕ್ಷೆ ಇದ್ದು, ಹೆಚ್ಚಿನ ಸ್ಥಾನಗಳು ಬಿಜೆಪಿಗೆ ಸಿಗಲಿದೆ.

ಈಗ ಶಿವಸೇನೆಯ ಮುಖ್ಯಮಂತ್ರಿ ಮತ್ತು ಬಿಜೆಪಿಯ ಉಪ ಮುಖ್ಯಮಂತ್ರಿ ಇದ್ದಾರೆ. ಇನ್ನು ಬಿಜೆಪಿಯಿಂದ ೨೫ ಮಂದಿ ಹಾಗೂ ಶಿವಸೇನೆಯಿಂದ ೧೩ ಮಂದಿ ಸಂಪುಟ ಸೇರುವ ನಿರೀಕ್ಷೆ ಇದೆ. ಉಳಿದ ಸ್ಥಾನಗಳು ಪಕ್ಷೇತರರು ಮತ್ತು ಇತರ ಬೆಂಬಲಿಗ ಪಕ್ಷಗಳಿಗೆ ಸಿಗಲಿದೆ ಎನ್ನಲಾಗಿದೆ.

ಹೊಸಬರಿಗೆ ಮಣೆ ನಿರೀಕ್ಷೆ
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೊರತುಪಡಿಸಿದಂತೆ ಈ ಬಾರಿ ಹೊಸ ಮುಖಗಳಿಗೆ ಅವಕಾಶ ದೊರೆಯುವ ಸಾಧ್ಯತೆ ಇದೆ. ಇದುವರೆಗೂ ಮಂತ್ರಿ ಸ್ಥಾನ ವಂಚಿತರಾಗಿರುವವರಿಗೆ ಈ ಬಾರಿ ಹುದ್ದೆ ನೀಡುವ ಬಗ್ಗೆ ಚರ್ಚೆ ನಡೆದಿದೆ. ಅವರ ಮಂತ್ರಿಗಿರಿಯ ಅವಧಿ ಎರಡೂವರೆ ವರ್ಷಗಳಾಗಿರುವುದರಿಂದ ಹೊಸಬರಿಗೆ ಅವಕಾಶ ನೀಡುವ ಮನಸ್ಸು ಮಾಡಲಾಗುತ್ತಿದೆ ಎನ್ನಲಾಗಿದೆ.

ಮೂವರಲ್ಲಿ ಒಬ್ಬರಿಗೆ ಸ್ಥಾನ
ಬಿಜೆಪಿ-ಶಿವಸೇನೆ ಮೈತ್ರಿ ಕೂಟದಲ್ಲಿ ಈಗ ಬಿಜೆಪಿಯ ೧೦೬ ಮತ್ತು ಶಿವಸೇನೆಯ ೪೦ ಶಾಸಕರು ಇದ್ದಾರೆ. ಸದ್ಯದ ಲೆಕ್ಕಾಚಾರ ಪ್ರಕಾರ ಬಿಜೆಪಿಯಲ್ಲಿ ಪ್ರತಿ ನಾಲ್ವರು ಶಾಸಕರಲ್ಲಿ ಒಬ್ಬರಿಗೆ ಮತ್ತು ಶಿವಸೇನೆಯಲ್ಲಿ ಮೂವರಲ್ಲಿ ಒಬ್ಬರಿಗೆ ಮಂತ್ರಿ ಪಟ್ಟ ಸಿಗಲಿದೆ. ಉಳಿದ ಸ್ಥಾನಗಳು ಪಕ್ಷೇತರ ಹಾಗೂ ಇತರರಿಗೆ ಸಿಗಲಿದೆ.

ಜುಲೈ ೧೧ರ ನಂತರ ಯಾಕೆ?
ಶಿವಸೇನೆಯಿಂದ ಬಂಡಾಯವೆದ್ದ ಏಕನಾಥ ಶಿಂಧೆ ಬಣ ಈಗ ಅಧಿಕಾರವನ್ನು ಹಿಡಿದಿದೆ. ಈ ನಡುವೆ ಬಂಡಾಯವನ್ನು ಬಗ್ಗುಬಡಿಯುವ ಪ್ರಯತ್ನದಲ್ಲಿ ಶಿವಸೇನೆಯ ಉದ್ಧವ್‌ ಠಾಕ್ರೆ ಬಣವು ಶಿಂಧೆ ಬಣದ ೧೬ ಶಾಸಕರನ್ನು ಅನರ್ಹಗೊಳಿಸುವಂತೆ ಡೆಪ್ಯುಟಿ ಸ್ಪೀಕರ್‌ ಅವರನ್ನು ಕೋರಿತ್ತು. ಅವರು ಶಿಂಧೆ ಬಣದ ೧೬ ಶಾಸಕರಿಗೆ ನೋಟಿಸ್‌ ಕೂಡಾ ಜಾರಿಗೊಳಿದ್ದರು. ಈ ನಡುವೆ, ಶಿಂಧೆ ಬಣ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೊರೆ ಹೊಕ್ಕಿತ್ತು. ಸುಪ್ರೀಂಕೋರ್ಟ್‌ ಈ ಅರ್ಜಿಯ ವಿಚಾರಣೆಯನ್ನು ಕೆಲವು ಸೂಚನೆ, ಆದೇಶಗಳೊಂದಿಗೆ ಜುಲೈ ೧೧ಕ್ಕೆ ನಿಗದಿಪಡಿಸಿದೆ.

ಈ ನಡುವೆ, ಶಿಂಧೆ ಬಣವು ತನ್ನದೇ ನಿಜವಾದ ಶಿವಸೇನೆ ಎಂದು ಹೇಳಿಕೊಳ್ಳುತ್ತಿದ್ದು, ಶಿಂಧೆ ಅವರನ್ನು ಪಕ್ಷದ ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಿದೆ. ಗೋಗಾವಾಲೆ ಅವರನ್ನು ಮುಖ್ಯ ಸಚೇತಕರಾಗಿಯೂ ನೇಮಕ ಮಾಡಿದೆ. ಇಷ್ಟಕ್ಕೇ ನಿಲ್ಲದೆ, ಆದಿತ್ಯ ಠಾಕ್ರೆ ಒಬ್ಬರನ್ನು ಹೊರತುಪಡಿಸಿ ಉದ್ಧವ್‌ ಬಣದ ಉಳಿದೆಲ್ಲ ೧೫ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ಮನವಿ ಮಾಡಿದೆ. ಈ ಪ್ರಕರಣದ ವಿಚಾರಣೆಯೂ ಜುಲೈ ೧೧ರಂದು ನಡೆಯಲಿದೆ. ಹೀಗಾಗಿ ಅದರ ತೀರ್ಪು ಬಂದ ಮೇಲೆಯೇ ಮುಂದಿನ ಹೆಜ್ಜೆ ಇಡುವ ಸಾಧ್ಯತೆ ಕಂಡುಬಂದಿದೆ.

ಇದನ್ನೂ ಓದಿ| Maha politics: ಸಿಎಂ ಆಗಿ ವಿಶ್ವಾಸ ಮತ ಗೆದ್ದ ಏಕನಾಥ್‌ ಶಿಂಧೆ, 164 ಶಾಸಕರ ಬೆಂಬಲ, ಅಘಾಡಿಗೆ ಕೇವಲ 99

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

ಗುಜರಾತ್‌ನಲ್ಲಿ ಕಾಂಗ್ರೆಸ್‌ನಿಂದ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಣಕ್ಕೆ ಇಳಿಸಿಲ್ಲ. ಬಿಎಸ್‌ಪಿ ಮಾತ್ರ ಇಲ್ಲಿ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಈ ಕುರಿತ ವಿಶ್ಲೇಷಣಾತ್ಮಕ ವರದಿ ಇಲ್ಲಿದೆ.

VISTARANEWS.COM


on

By

Lok Sabha Election-2024
Koo

ಗುಜರಾತ್‌ನಲ್ಲಿ (gujarat) ಲೋಕಸಭೆ ಚುನಾವಣೆಗೆ (Lok Sabha Election 2024) ಮುಸ್ಲಿಂ (muslim) ಅಭ್ಯರ್ಥಿಯನ್ನು (candidate) ಕಣಕ್ಕಿಳಿಸಿದ ಏಕೈಕ ರಾಷ್ಟ್ರೀಯ ಪಕ್ಷ ಬಿಎಸ್‌ಪಿ (BSP). ಕಾಂಗ್ರೆಸ್‌ನಿಂದ (congress) ಯಾವುದೇ ಮುಸ್ಲಿಂ ಅಭ್ಯರ್ಥಿ ಗುಜರಾತ್‌ನಲ್ಲಿ ಕಣಕ್ಕೆ ಇಳಿದಿಲ್ಲ. ಮೇ 7ರಂದು ಮತದಾನ ನಡೆಯಲಿರುವ ರಾಜ್ಯದಲ್ಲಿ ಒಟ್ಟು 266 ಅಭ್ಯರ್ಥಿಗಳ ಪೈಕಿ ಕೇವಲ 32 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇಲ್ಲಿ ಹೆಚ್ಚಿನ ಮುಸ್ಲಿಂ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ಕೆಲವರು ಖೇಡಾ, ಲಾಗ್ ಪಾರ್ಟಿ, ರೈಟ್ ಟು ರೀಕಾಲ್ ಪಾರ್ಟಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಭಾರತೀಯ ಜನನಾಯಕ್ ಪಕ್ಷದಂತಹ ಸಣ್ಣ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ. ಗಾಂಧಿನಗರದಲ್ಲಿ ಅತೀ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಅಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ಮತ್ತು ಸೋನಾಲ್ ಪಟೇಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಇದರ ನಂತರ ಭರೂಚ್ ಮತ್ತು ಪಟಾನ್ ನಲ್ಲಿ ತಲಾ ನಾಲ್ಕು ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಗುಜರಾತ್‌ನ ಜನಸಂಖ್ಯೆಯಲ್ಲಿ ಸುಮಾರು ಶೇ. 10ರಷ್ಟು ಮುಸ್ಲಿಮರು ಎಂದು ಅಂದಾಜಿಸಲಾಗಿದೆ. ಕಚ್, ಜಾಮ್‌ನಗರ, ಜುನಾಗಢ್, ಭರೂಚ್, ಭಾವನಗರ, ಸುರೇಂದ್ರನಗರ, ಪಟಾನ್, ಬನಸ್ಕಾಂತ, ಸಬರ್ಕಾಂತ, ಅಹಮದಾಬಾದ್ ಪಶ್ಚಿಮ, ಅಹಮದಾಬಾದ್ ಪೂರ್ವ, ಗಾಂಧಿನಗರ, ನವಸಾರಿ, ಪಂಚಮಹಲ್‌ಗಳು ಮತ್ತು ಆನಂದ್ ಸೇರಿದಂತೆ ಕನಿಷ್ಠ 15 ಸ್ಥಾನಗಳಲ್ಲಿ ಅವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಹಿಂದಿನ ಚುನಾವಣೆ

2019, 2009 ಮತ್ತು 2004ರಲ್ಲಿ ಕಾಂಗ್ರೆಸ್ ಭರೂಚ್‌ನಿಂದ ತಲಾ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದು ಹಿರಿಯ ನಾಯಕ ಅಹ್ಮದ್ ಪಟೇಲ್‌ ಅವರ ಭದ್ರಕೋಟೆಯಾಗಿತ್ತು. ಬಳಿಕ ಶೇರ್ಖಾನ್ ಪಠಾಣ್, ಅಜೀಜ್ ಟಂಕರ್ವಿ ಮತ್ತು ಮೊಹಮ್ಮದ್ ಪಟೇಲ್ ನಾಮನಿರ್ದೇಶನಗೊಂಡರು. ಈ ಬಾರಿ ಆಮ್ ಆದ್ಮಿ ಪಕ್ಷವು ಇಂಡಿಯಾ ಬ್ಲಾಕ್ ಪ್ರತಿನಿಧಿಯಾಗಿ ಭರೂಚ್ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, ಪಕ್ಷವು ತನ್ನ ಶಾಸಕ ಚೈತಾರ್ ವಾಸವ ಅವರನ್ನು ಇಲ್ಲಿ ಕಣಕ್ಕಿಳಿಸಿದೆ.

2014 ರಲ್ಲಿ ಕಾಂಗ್ರೆಸ್ ಭರೂಚ್‌ನಿಂದ ಜಯೇಶ್ ಪಟೇಲ್ ಅವರನ್ನು ಕಣಕ್ಕಿಳಿಸಿತು. ಆದರೆ ನವಸಾರಿಯಲ್ಲಿ ಬಿಜೆಪಿಯ ಸಿ.ಆರ್. ಪಾಟೀಲ್ ಅವರನ್ನು ಎದುರಿಸಲು ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತು.


ಬಿಜೆಪಿಯ ಭದ್ರಕೋಟೆ

ಕಳೆದ ಎರಡು ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಗುಜರಾತ್‌ನ ಎಲ್ಲಾ 26 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ 25 ಕ್ಷೇತ್ರಗಳಲ್ಲಿ ಮಾತ್ರ ಮತದಾನ ನಡೆಯಲಿದ್ದು, ಸೂರತ್‌ನಲ್ಲಿ ಬಿಜೆಪಿ ಅವಿರೋಧವಾಗಿ ಗೆಲುವು ಸಾಧಿಸಿದೆ.

ಏಕೈಕ ಮುಸ್ಲಿಂ ಶಾಸಕ

ಪ್ರಸ್ತುತ ಗುಜರಾತ್ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಏಕೈಕ ಮುಸ್ಲಿಂ ಶಾಸಕ ಇಮ್ರಾನ್ ಖೇಡವಾಲಾ ಅವರು ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಶೇ.10ರಷ್ಟು ಮುಸ್ಲಿಂ ಜನಸಂಖ್ಯೆ ಇದ್ದರೂ ಕಾಂಗ್ರೆಸ್‌ ಒಂದೇ ಒಂದು ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಎಂಬ ಬಗ್ಗೆ ಇವರು ಸ್ಪಷ್ಟ ವಿವರಣೆ ನೀಡಲು ವಿಫಲರಾಗಿದ್ದಾರೆ.

ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು

1957ರಲ್ಲಿ ಭರೂಚ್ ಲೋಕಸಭಾ ಸ್ಥಾನವು 1984ರವರೆಗೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. 1977 ಮತ್ತು 1984ರ ನಡುವೆ ಅಹ್ಮದ್ ಪಟೇಲ್ ಮೂರು ಬಾರಿ ಗೆದಿದ್ದರು. ಇವರು ಈ ಸ್ಥಾನದಿಂದ ಗೆದ್ದ ಕೊನೆಯ ಕಾಂಗ್ರೆಸ್ ಸಂಸದರಾಗಿದ್ದರು. 1989ರಲ್ಲಿ ಅವರನ್ನು ಸೋಲಿಸಿದ ಬಿಜೆಪಿಯ ಚಂದುಭಾಯಿ ದೇಶಮುಖ್, ಬಳಿಕ ಮನ್ಸುಖ್ ವಾಸವಾ ಮರು ಚುನಾಯಿಸಲ್ಪಟ್ಟರು. ಈ ವರ್ಷ ಮನ್ಸುಖ್ ಈ ಕ್ಷೇತ್ರದಿಂದ ಏಳನೇ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ.

ಅಹ್ಮದ್ ಪಟೇಲ್ ಅವರ ಮಕ್ಕಳಾದ ಫೈಸಲ್ ಮತ್ತು ಮುಮ್ತಾಜ್ ಅವರು ಭರೂಚ್‌ನಿಂದ ಟಿಕೆಟ್ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಇಮ್ರಾನ್‌ ಖೇಡಾವಾಲಾ, ಅವರು ಅಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕ್ಷೇತ್ರದಲ್ಲಿ ಸುಮಾರು ಮೂರು ಲಕ್ಷ ಮುಸ್ಲಿಂ ಮತಗಳಿವೆ. ಅವರೆಲ್ಲರೂ ಮತ ಹಾಕಿದರೂ ಸಾಕಾಗುವುದಿಲ್ಲ. ಕೇವಲ ಮುಸ್ಲಿಂ ಮತಗಳಿಂದ ಗೆಲ್ಲಲು ಸಾಧ್ಯವಿಲ್ಲ. ಹಿಂದೂ ಮತಗಳನ್ನು ಪಡೆಯಬೇಕು ಎನ್ನುತ್ತಾರೆ.

ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಮತ್ತು ಇಸ್ಲಾಮಿಕ್ ಹೂಡಿಕೆ ಸಲಹಾ ಸೇವೆಗಳ ಪ್ಲಾಟ್‌ಫಾರ್ಮ್ ಪಾರ್ಸೋಲಿ ಕಾರ್ಪೊರೇಷನ್ ಮಾಲೀಕ ಜಾಫರ್ ಸರೇಶ್‌ವಾಲಾ, ಯಾವುದೇ ರಾಷ್ಟ್ರೀಯ ಪಕ್ಷವು ಮುಸ್ಲಿಮರನ್ನು ಕಣಕ್ಕಿಳಿಸಿಲ್ಲ ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ಗುಜರಾತ್‌ನಲ್ಲಿ ಮುಸ್ಲಿಮರ ಬಗ್ಗೆ ಹೆಮ್ಮೆಪಡಲು ಸಾಕಷ್ಟು ವಿಷಯಗಳಿವೆ. 2002ರ ಅನಂತರ ಮುಸ್ಲಿಮರು ಶಿಕ್ಷಣ, ಉದ್ಯಮಶೀಲತೆ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ ಎನ್ನುತ್ತಾರೆ ಸುರೇಶ್ ವಾಲಾ.

ಗುಜರಾತ್‌ನಲ್ಲಿ ಬಿಜೆಪಿ 30 ವರ್ಷಗಳಿಂದ ಅಧಿಕಾರದಲ್ಲಿದೆ. 2022ರವರೆಗೂ ಮೂವರು ಶಾಸಕರಾದ ಗಯಾಸುದ್ದೀನ್ (ಶೇಖ್), ಜಾವೇದ್ ಪೀರ್ಜಾದಾ ಮತ್ತು ನಾನು ಇದ್ದೆವು. ಈಗ ನಾನು ಒಬ್ಬನೇ ರಾಜ್ಯಾದ್ಯಂತ ಇರುವ ಎಲ್ಲಾ ಮುಸ್ಲಿಂ ಸಮಸ್ಯೆಗಳನ್ನು ನಿಭಾಯಿಸಬೇಕಾಗಿದೆ ಎನ್ನುತ್ತಾರೆ ಶಾಸಕ ಇಮ್ರಾನ್ ಖೇಡವಾಲಾ.

Continue Reading

ದೇಶ

12 ತಾಸು, 6 ಮಷೀನ್‌ಗಳಿಂದ 30 ಕೋಟಿ ರೂ. ಎಣಿಕೆ; ಕಾಂಗ್ರೆಸ್‌ ಮುಖಂಡನ ಪಿಎ ಮನೆಯಲ್ಲಿ ಹಣದ ರಾಶಿ!

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಂಚಿಯ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಂಜೀವ್‌ ಲಾಲ್‌ ಮನೆಯಲ್ಲಂತೂ ಹಣದ ರಾಶಿಯೇ ಇದೆ. ಸಂಜೀವ್‌ ಲಾಲ್‌ ಸೇರಿ ಹಲವರ ಕೋಣೆಗಳಲ್ಲಿ ಮಾತ್ರವಲ್ಲ, ಅವರ ಮನೆಗೆಲಸದವನ ಮನೆಯಲ್ಲೂ ಹಣದ ರಾಶಿ ಕಂಡುಬಂದಿದೆ. 30 ಕೋಟಿ ರೂಪಾಯಿಯನ್ನು ಎಣಿಸಿದರೂ, ಇನ್ನೂ ಎಣಿಕೆ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.

VISTARANEWS.COM


on

Ranchi Cash
Koo

ರಾಂಚಿ: ಜಾರ್ಖಂಡ್‌ ಗ್ರಾಮೀಣ ಅಭಿವೃದ್ಧಿ ಸಚಿವ, ಕಾಂಗ್ರೆಸ್‌ ನಾಯಕ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಹಣದ ರಾಶಿ ಕಂಡು ಖುದ್ದು ಇ.ಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಕಳೆದ 12 ತಾಸುಗಳಿಂದ 6 ನೋಟು ಎಣಿಸುವ ಮಷೀನ್‌ಗಳಿಂದ ನಿರಂತರವಾಗಿ ಎಣಿಕೆ ಮಾಡಿದರೂ ಇದುವರೆಗೆ 30 ಕೋಟಿ ರೂಪಾಯಿಯನ್ನು ಎಣಿಸಲು ಸಾಧ್ಯವಾಗಿದೆ. ಇಷ್ಟಾದರೂ, ಇನ್ನೂ ಹಣದ ರಾಶಿಯೇ ಇದ್ದು, ಮಷೀನ್‌ಗಳಿಂದ ಎಣಿಸಲು ಕೂಡ ಕಷ್ಟವಾಗುತ್ತಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಂಚಿಯ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಂಜೀವ್‌ ಲಾಲ್‌ ಮನೆಯಲ್ಲಂತೂ ಹಣದ ರಾಶಿಯೇ ಇದೆ. ಸಂಜೀವ್‌ ಲಾಲ್‌ ಸೇರಿ ಹಲವರ ಕೋಣೆಗಳಲ್ಲಿ ಮಾತ್ರವಲ್ಲ, ಅವರ ಮನೆಗೆಲಸದವನ ಮನೆಯಲ್ಲೂ ಹಣದ ರಾಶಿ ಕಂಡುಬಂದಿದೆ. ಮೂಲಗಳ ಪ್ರಕಾರ, ಇದುವರೆಗೆ ಇ.ಡಿ ಅಧಿಕಾರಿಗಳು 30 ಕೋಟಿ ರೂಪಾಯಿಯನ್ನು ಎಣಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇ.ಡಿಯು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ನಕಲಿ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಸದ್ಯ ನೋಟಿನ ರಾಶಿಯನ್ನು ತೋರಿಸುವ ವಿಡಿಯೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ವೈರಲ್‌ ಆಗಿದೆ. ಈ ದಾಳಿಯ ಬಗ್ಗೆ ಮಾತನಾಡಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಾಹದೇವ್, ”ಜಾರ್ಖಂಡ್‌ನಲ್ಲಿ ಭ್ರಷ್ಟಾಚಾರ ಕೊನೆಗೊಳ್ಳುತ್ತಿಲ್ಲ. ಈ ಹಣಗಳನ್ನು ಇವರು (ಕಾಂಗ್ರೆಸ್‌) ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕುʼʼ ಎಂದು ಆಗ್ರಹಿಸಿದ್ದಾರೆ.

ಜಾರ್ಖಂಡ್‌ನ ಮತ್ತೋರ್ವ ಬಿಜೆಪಿ ಸಂಸದ ದೀಪಕ್ ಪ್ರಕಾಶ್ ಮಾತನಾಡಿ, “ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಆರ್‌ಜೆಡಿ ಜಾರ್ಖಂಡ್ ಅನ್ನು ‘ಲೂಟ್‌ಖಂಡ್‌ʼ ಆಗಿ ಪರಿವರ್ತಿಸುವ ಕೆಲಸವನ್ನು ಮಾಡುತ್ತಿವೆ. ಇಂದು ಮತ್ತೆ 25 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದ್ದು, ಅದು ಆಡಳಿತ ಪಕ್ಷದ ಸಚಿವರಿಗೆ ಸೇರಿದೆ. ಇದು ಜಾರ್ಖಂಡ್‌ನ ಜನರಿಗೆ ಮಾಡಿದ ಅವಮಾನ” ಎಂದು ವಾಗ್ದಾಳಿ ನಡೆಸಿದ್ದಾರೆ.

ವಿವಿಧ ಕಡೆ ದಾಳಿ

ರಾಂಚಿಯ ಸೈಲ್ ಸಿಟಿ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ತನಿಖಾ ಸಂಸ್ಥೆ ಏಕಕಾಲದಲ್ಲಿ ದಾಳಿ ಕೈಗೊಂಡಿದೆ. ಇಡಿಯ ಒಂದು ತಂಡ ಸೋಮವಾರ ಬೆಳಗ್ಗೆ, ರಸ್ತೆ ನಿರ್ಮಾಣ ವಿಭಾಗದ ಇಂಜಿನಿಯರ್ ವಿಕಾಸ್ ಕುಮಾರ್ ಅವರ ಮನೆ ಮೇಲೂ ದಾಳಿ ನಡೆಸಿತ್ತು. ಇನ್ನೊಂದು ತಂಡ ಬರಿಯಾತು, ಮೊರಬದಿ ಮತ್ತು ಬೋಡಿಯಾ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಕಳೆದ ವರ್ಷ ಬಂಧಿತರಾದ ವೀರೇಂದ್ರ ರಾಮ್‌ ಅಕ್ಮವಾಗಿ 100 ಕೋಟಿ ರೂ. ಮೌಲ್ಯದ ಆಸ್ತಿ ಗಳಿಸಿದ ಆರೋಪ ಹೊತ್ತಿದ್ದಾರೆ. ಜತೆಗೆ ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವಹಿವಾಟಿನ ವಿವರಗಳನ್ನು ಅವರಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ: Shiv Sena : ಇಡಿ ದಾಳಿಗೆ ಒಳಗಾಗಿದ್ದ ಉದ್ಧವ್​ ಬಣದ ಶಾಸಕ, ಶಿಂಧೆ ಬಣಕ್ಕೆ ಸೇರ್ಪಡೆ

Continue Reading

ದೇಶ

Rahul Gandhi : ಸುಳ್ಳು ಹರಡಬೇಡಿ, ಸುಮ್ಮನಿರಿ; ರಾಹುಲ್​ ಗಾಂಧಿಗೆ ಬಹಿರಂಗ ಪತ್ರ ಬರೆದು ಕುಟುಕಿದ ಯೂನಿವರ್ಸಿಟಿಗಳ ಕುಲಪತಿಗಳು

Rahul Gandhi: ಉಪಕುಲಪತಿಗಳ ನೇಮಕಾತಿಯನ್ನು ಅರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಮಾಡುವ ಬದಲು ಬಿಜೆಪಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳೊಂದಿಗಿನ ಸಂಬಂಧದ ಆಧಾರದ ಮೇಲೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಶಿಯಲ್ ಮೀಡಿಯಾ ಪೋಸ್ಟ್​ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಆ ಮೂಲಕ ಉಪಕುಲಪತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯ ಅರ್ಹತೆಯನ್ನು ಪ್ರಶ್ನಿಸಲಾಗಿದೆ ಎಂದು 181 ಉಪಕುಲಪತಿಗಳು ಪತ್ರ ಬರೆದಿದ್ದಾರೆ.

VISTARANEWS.COM


on

Rahul Gandi
Koo

ನವದೆಹಲಿ: ವಿಶ್ವವಿದ್ಯಾಲಯಗಳ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿರುವ ಹೇಳಿಕೆ ಖಂಡಿಸಿ 180 ಕ್ಕೂ ಹೆಚ್ಚು ಉಪಕುಲಪತಿಗಳು ಮತ್ತು ಹೆಸರಾಂತ ಶಿಕ್ಷಣ ತಜ್ಞರು ಬಹಿರಂಗ ಪತ್ರ ಬರೆದಿದ್ದಾರೆ. “ಜ್ಯೋತಿ ಬೆಳಗುವವರಿಗೇ ಬೆಳಕು” ಎಂಬ ಶೀರ್ಷಿಕೆಯ ಬಹಿರಂಗ ಪತ್ರ ಬರೆದಿದೆ. ಉಪಕುಲಪತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯ ಅರ್ಹತೆಯನ್ನು ರಾಹುಲ್ ಗಾಂಧಿ ಪ್ರಶ್ನಿಸಿರುವುದಕ್ಕೆ ಈ ಪತ್ರದಲ್ಲಿ ತಕರಾರು ಎತ್ತಲಾಗಿದೆ.

ಉಪಕುಲಪತಿಗಳ ನೇಮಕಾತಿಯನ್ನು ಅರ್ಹತೆ ಮತ್ತು ಅರ್ಹತೆಯ ಆಧಾರದ ಮೇಲೆ ಮಾಡುವ ಬದಲು ಬಿಜೆಪಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳೊಂದಿಗಿನ ಸಂಬಂಧದ ಆಧಾರದ ಮೇಲೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಶಿಯಲ್ ಮೀಡಿಯಾ ಪೋಸ್ಟ್​ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಆ ಮೂಲಕ ಉಪಕುಲಪತಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯ ಅರ್ಹತೆಯನ್ನು ಪ್ರಶ್ನಿಸಲಾಗಿದೆ ಎಂದು 181 ಉಪಕುಲಪತಿಗಳು ಪತ್ರ ಬರೆದಿದ್ದಾರೆ.

ಉಪಕುಲಪತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಕಠಿಣ ಪಾರದರ್ಶಕ, ಕಠಿಣ ಕಾರ್ಯವಿಧಾನದಿಂದ ಕೂಡಿದೆ. ಇದು ಅರ್ಹತೆ ಪಾಂಡಿತ್ಯದ ವ್ಯತ್ಯಾಸ ಮತ್ತು ಸಮಗ್ರತೆಯ ಮೌಲ್ಯಗಳನ್ನು ಆಧರಿಸಿದೆ. ಈ ಆಯ್ಕೆಯು ಸಂಪೂರ್ಣವಾಗಿ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸಾಧನೆಯನ್ನು ಆಧರಿಸಿದೆ. ವಿಶ್ವವಿದ್ಯಾಲಯಗಳನ್ನು ಮುಂದೆ ಕೊಂಡೊಯ್ಯುವ ದೃಷ್ಟಿಕೋನ ಹೊಂದಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

ಸತ್ಯವನ್ನು ಕಾಲ್ಪನಿಕತೆಯಿಂದ ಪ್ರತ್ಯೇಕಿಸುವಲ್ಲಿ ವಿವೇಚನೆ ಪ್ರದರ್ಶಿಸಬೇಕು. ಆಧಾರರಹಿತ ವದಂತಿಗಳನ್ನು ಹರಡುವುದರಿಂದ ದೂರವಿರಬೇಕು” ಎಂದು ಶಿಕ್ಷಣ ತಜ್ಞರು ರಾಹುಲ್ ಗಾಂಧಿಗೆ ಕುಟುಕಿದ್ದಾರೆ.

ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಸುಳ್ಳು ಹರಡುತ್ತಿರುವ ರಾಹುಲ್ ಗಾಂಧಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ತಜ್ಞರು ಆಗ್ರಹಿಸಿದ್ದಾರೆ.

“ರಾಹುಲ್ ಗಾಂಧಿ ಅವರು ಸುಳ್ಳು ಹೇಳುತ್ತಿದ್ದಾರೆ ಮತ್ತು ಅದರಿಂದ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಉಪಕುಲಪತಿಗಳ ಹುದ್ದೆಗಳ ಮಾನಹಾನಿ ಮಾಡಿದ್ದಾರೆ. ಆದ್ದರಿಂದ, ಕಾನೂನಿನ ಪ್ರಕಾರ ಅವರ ವಿರುದ್ಧ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಾಮಾಣಿಕವಾಗಿ ಪ್ರಾರ್ಥಿಸುತ್ತೇವೆ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ನೇಮಕ ಮಾಡಲಾಗುತ್ತಿಲ್ಲ. ಆಡಳಿತಾರೂಢ ಬಿಜೆಪಿ ಸೈದ್ಧಾಂತಿಕ ನೆಲೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ ದೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ನೇಮಕ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಯುಪಿ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಪತ್ರಕ್ಕೆ ಪ್ರತಿಕ್ರಿಯಿಸಿ, “ಆರ್​ಎಸ್​​ಎಸ್​​ ಸಂಬಂಧ ಹೊಂದಿರುವ ಜನರನ್ನು ವಿಸಿಗಳನ್ನಾಗಿ ಮಾಡಲಾಗುತ್ತಿದೆ. ಈ ದೇಶದ ಭವಿಷ್ಯದ ಬಗ್ಗೆ ಕಾಳಜಿ ಹೊಂದಿರುವವರು ಚಿಂತಿತರಾಗಿದ್ದಾರೆ. ಒಂದು ರೀತಿಯಲ್ಲಿ ಇದು ಕ್ರಿಮಿನಲ್ ಕೃತ್ಯ ಮತ್ತು ದೇಶದ ಜನರು ಮತ್ತು ದೇಶದ ಭವಿಷ್ಯದೊಂದಿಗೆ ಆಟವಾಡುವುದು ಎಂದು ನಾನು ಭಾವಿಸುತ್ತೇನೆ.

Continue Reading

ದೇಶ

Medical Students: ಸಮುದ್ರದಲ್ಲಿ ಮುಳುಗಿ 5 ಮೆಡಿಕಲ್‌ ವಿದ್ಯಾರ್ಥಿಗಳ ಸಾವು!

Medical Students: ಕನ್ಯಾಕುಮಾರಿಯ ಬೀಚ್‌ನಲ್ಲಿ ಐವರು ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ತಂಜಾವೂರಿನ ಚಾರುಕವಿ, ನೇಯ್‌ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್‌, ದಿಂಡಿಗಲ್‌ನ ಪ್ರವೀಣ್‌ ಸ್ಯಾಮ್‌ ಹಾಗೂ ಆಂಧ್ರಪ್ರದೇಶದ ವೆಂಕಟೇಶ್‌ ಎಂಬುದಾಗಿ ಗುರುತಿಸಲಾಗಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಈಜಾಡಲು ಹೋಗಿದ್ದಾಗ ಐವರು ನೀರುಪಾಲಾಗಿದ್ದಾರೆ.

VISTARANEWS.COM


on

Medical Students
Koo

ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ (Kanniyakumari) ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು (Medical Students) ಮೃತಪಟ್ಟಿದ್ದಾರೆ. ಮದುವೆ ಸಮಾರಂಭಕ್ಕೆಂದು ಐವರು ವಿದ್ಯಾರ್ಥಿಗಳು ತೆರಳಿದ್ದರು. ಇದೇ ವೇಳೆ, ಲೆಮುರ್‌ ಬೀಚ್‌ನಲ್ಲಿ (Lemur Beach) ಈಜಾಡುವಾಗ ಐವರೂ ನೀರುಪಾಲಾಗಿದ್ದಾರೆ. ಐವರಲ್ಲಿ ಇಬ್ಬರು ಯುವತಿಯರಿದ್ದರು ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಐವರೂ ತಿರುಚಿರಪಳ್ಳಿಯಲ್ಲಿರುವ ಎಸ್‌ಆರ್‌ಎಂ ಮೆಡಿಕಲ್‌ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ.

ಮೃತರನ್ನು ತಂಜಾವೂರಿನ ಚಾರುಕವಿ, ನೇಯ್‌ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್‌, ದಿಂಡಿಗಲ್‌ನ ಪ್ರವೀಣ್‌ ಸ್ಯಾಮ್‌ ಹಾಗೂ ಆಂಧ್ರಪ್ರದೇಶದ ವೆಂಕಟೇಶ್‌ ಎಂಬುದಾಗಿ ಗುರುತಿಸಲಾಗಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಈಜಾಡಲು ಹೋಗಿದ್ದಾಗ ಐವರು ನೀರುಪಾಲಾಗಿದ್ದಾರೆ. ಇಂಟರ್ನ್‌ಗಳಾಗಿದ್ದ ಕರೂರಿನ ನೇಶಿ, ಥೆಂಗಿಯ ಪ್ರಿಯಾಂಕಾ ಹಾಗೂ ಮದುರೈನ ಶರಣ್ಯ ಎಂಬ ಯುವತಿಯರನ್ನು ರಕ್ಷಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರವೇಶ ನಿರಾಕರಿಸಲಾಗಿತ್ತು

“ಲೆಮುರ್‌ ಬೀಚ್‌ ಖಾಸಗಿ ಬೀಚ್‌ ಆಗಿದ್ದು, ಇಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಭಾನುವಾರ (ಮೇ 5) ಮದುವೆಗೆ ಬಂದಿದ್ದ ವಿದ್ಯಾರ್ಥಿಗಳು ಅವರಲ್ಲೇ ಗುಂಪುಗಳಾಗಿ ಚದುರಿ ಹೋಗಿದ್ದಾರೆ. ಗೆಳೆಯರು ಸೇರಿ ಪ್ರವಾಸಿ ತಾಣಗಳಿಗೆ ಹೆಸರಾದ ಕನ್ಯಾಕುಮಾರಿಯನ್ನು ಸುತ್ತಲು ಮುಂದಾಗಿದ್ದಾರೆ. ಇವರಲ್ಲಿ ಎಂಟು ವಿದ್ಯಾರ್ಥಿಗಳು ಲೆಮುರ್‌ ಬೀಚ್‌ ಪ್ರವೇಶಿಸಿದ್ದಾರೆ. ಸಮುದ್ರದಲ್ಲಿ ಭಾರಿ ಅಲೆಗಳಿರುವ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಹೀಗಿದ್ದರೂ ಅವರು ಹೇಗೆ ಹೋದರು ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಕನ್ಯಾಕುಮಾರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇ. ಸುಂದರವದನಂ ಮಾಹಿತಿ ನೀಡಿದ್ದಾರೆ.

ಕೆಲವೇ ತಿಂಗಳಲ್ಲಿ ಕೋರ್ಸ್‌ ಮುಗಿಯುವುದಿತ್ತು

ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳ ಕೋರ್ಸ್‌ ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯುವುದಿತ್ತು. ಎಲ್ಲರೂ ವೈದ್ಯರಾಗುವ ಕನಸು ಕಾಣುತ್ತಿದ್ದರು. ಯಾವ ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್‌ ಮಾಡಬೇಕು, ಯಾವ ನಗರಕ್ಕೆ ಹೋದರೆ ಸೂಕ್ತ ಎಂಬ ಕುರಿತು ಅವರ ಮಧ್ಯೆಯೇ ಚರ್ಚೆ ನಡೆಯುತ್ತಿತ್ತು. ಅವರ ಪೋಷಕರು ಕೂಡ ನೂರಾರು ಕನಸು ಕಂಡಿದ್ದರು. ಆದರೆ, ಮದುವೆಗೆ ಹೋದವರು, ಮದುವೆ ಮುಗಿಸಿ, ಖಾಸಗಿ ಬೀಚ್‌ನಲ್ಲಿ ಪ್ರವೇಶ ಇಲ್ಲದಿದ್ದರೂ ಈಜಲು ಹೋಗಿದ್ದೇ ಅವರ ಪ್ರಾಣಕ್ಕೆ ಕುತ್ತು ತಂದಿದೆ.

ಇದನ್ನೂ ಓದಿ: Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

Continue Reading
Advertisement
Lok Sabha Election-2024
ದೇಶ4 mins ago

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

marriage cancel in kodagu
ಕೊಡಗು21 mins ago

Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

Jasprit Bumrah
ಪ್ರಮುಖ ಸುದ್ದಿ22 mins ago

Jasprit Bumrah : ಪತ್ನಿ ಸಂಜನಾಗೆ ರೊಮ್ಯಾಂಟಿಕ್​​ ಬರ್ತ್​ಡೇ ವಿಶಸ್​ ಹೇಳಿದ ಜಸ್​ಪ್ರಿತ್​ ಬುಮ್ರಾ

Chinese Scientists
ವಿಜ್ಞಾನ29 mins ago

Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

Ranchi Cash
ದೇಶ31 mins ago

12 ತಾಸು, 6 ಮಷೀನ್‌ಗಳಿಂದ 30 ಕೋಟಿ ರೂ. ಎಣಿಕೆ; ಕಾಂಗ್ರೆಸ್‌ ಮುಖಂಡನ ಪಿಎ ಮನೆಯಲ್ಲಿ ಹಣದ ರಾಶಿ!

Weight Loss Tips kannada
ಲೈಫ್‌ಸ್ಟೈಲ್36 mins ago

Weight Loss Tips Kannada: ಈ ಐದರಲ್ಲಿ ಒಂದು ಜ್ಯೂಸ್‌ ಕುಡಿಯುತ್ತಿದ್ದರೂ ಸಾಕು, ನಿಮ್ಮ ದೇಹ ತೂಕ ಇಳಿಯುತ್ತದೆ!

Laborer died by falling tree in Somawarpet
ಕೊಡಗು37 mins ago

Kodagu News: ಸೋಮವಾರಪೇಟೆಯಲ್ಲಿ ಮರ ಬಿದ್ದು ಕಾರ್ಮಿಕ ಸಾವು

Akshaya Tritiya-2024
ಲೈಫ್‌ಸ್ಟೈಲ್41 mins ago

Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

Rahul Gandi
ದೇಶ46 mins ago

Rahul Gandhi : ಸುಳ್ಳು ಹರಡಬೇಡಿ, ಸುಮ್ಮನಿರಿ; ರಾಹುಲ್​ ಗಾಂಧಿಗೆ ಬಹಿರಂಗ ಪತ್ರ ಬರೆದು ಕುಟುಕಿದ ಯೂನಿವರ್ಸಿಟಿಗಳ ಕುಲಪತಿಗಳು

Lok Sabha Election 2024
ಬಾಗಲಕೋಟೆ55 mins ago

Lok Sabha Election 2024: ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ22 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ24 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ5 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌