Neeraj Chopra: ಖಂಡಿತವಾಗಿಯೂ 90 ಮೀ. ದೂರ ಜಾವೆಲಿನ್‌ ಎಸೆಯುವೆ; ನೀರಜ್‌ ವಿಶ್ವಾಸ - Vistara News

ಕ್ರೀಡೆ

Neeraj Chopra: ಖಂಡಿತವಾಗಿಯೂ 90 ಮೀ. ದೂರ ಜಾವೆಲಿನ್‌ ಎಸೆಯುವೆ; ನೀರಜ್‌ ವಿಶ್ವಾಸ

ಆಗಸ್ಟ್​ 19ರಿಂದ 27ರ ತನಕ ನಡೆಯುವ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಟೂರ್ನಿಯ ಭಾರತದ 28 ಸದಸ್ಯರ ತಂಡಕ್ಕೆ ನೀರಜ್‌ ಚೋಪ್ರಾ(Olympic champion Neeraj Chopra) ಸಾರಥ್ಯ ವಹಿಸಿಕೊಂಡಿದ್ದಾರೆ.

VISTARANEWS.COM


on

javelin throw at Diamond League
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಹಂಗೇರಿಯ ಬುಡಾಪೆಸ್ಟ್​ನಲ್ಲಿ(Budapest) ಶನಿವಾರದಿಂದ ಆರಂಭಗೊಳ್ಳಲಿರುವ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ(World Athletics Championships) 90 ಮೀ. ದೂರ ಜಾವೆಲಿನ್‌ ಎಸೆಯುವುದು ನನ್ನ ಪ್ರಮುಖ ಗುರಿ ಎಂದು ಟೋಕಿಯೊ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ನೀರಜ್​ ಚೋಪ್ರಾ(Olympic champion Neeraj Chopra) ಹೇಳಿದ್ದಾರೆ. ಆಗಸ್ಟ್​ 19ರಿಂದ 27ರ ತನಕ ನಡೆಯುವ ಈ ಟೂರ್ನಿ ಭಾರತದ 28 ಸದಸ್ಯರ ತಂಡಕ್ಕೆ ನೀರಜ್‌ ಚೋಪ್ರಾ(Olympic champion Neeraj Chopra) ಸಾರಥ್ಯ ವಹಿಸಿಕೊಂಡಿದ್ದಾರೆ.

ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದ ಗೆದ್ದ ನೀರಜ್​ ಆ ಬಳಿಕ ಹಲವು ಟೂರ್ನಿಗಳಲ್ಲಿ ಶ್ರೇಷ್ಠ ಸಾಧನೆ ತೋರಿದ್ದರು. ಡೈಮಂಡ್‌ ಲೀಗ್‌ ಚಾಂಪಿಯನ್‌ ಆಗಿರುವ ಅವರ ಮೇಲೆ ಬುಡಾಪೆಸ್ಟ್‌ ಕೂಟದಲ್ಲೂ ಚಿನ್ನದ ಪದಕ ನಿರೀಕ್ಷೆಯೊಂದನ್ನು ಮಾಡಲಾಗಿದೆ. 2022ರ ಯೂಜೀನ್‌ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಅವರು ಬೆಳ್ಳಿ ಜಯಿಸಿದ್ದರು. ಈ ಬಾರಿ ಚಿನ್ನಕ್ಕೆ ಗುರಿ ಇಡುವುದು ಮಾತ್ರವಲ್ಲದೆ ತನ್ನ ಎಸೆತವನ್ನು 90 ಮೀ. ದಾಟಿಸುವ ವಿಶ್ವಾಸದಲ್ಲಿದ್ದಾರೆ.

ಲಾಸನ್​ನಲ್ಲಿ ಕಳೆದ ವರ್ಷ ನಡೆದ ಡೈಮಂಡ್​ ಲೀಗ್​ನಲ್ಲಿ ಚೋಪ್ರಾ 89.04 ದೂರ ಜಾವೆಲಿನ್‌ ಎಸೆದಿದ್ದರು. ಇದು ಅವರ ಇದುವರೆಗೆ ಅತ್ಯುತ್ತಮ ಸಾಧನೆಯಾಗಿದೆ. ವಿಶ್ವ ಆ್ಯತ್ಲೆಟಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಮುಂದಿನ ವರ್ಷ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ಗೆ ಸಿದ್ಧತೆ ಮಾಡಿಕೊಳ್ಳುವುದು ಅವರ ಯೋಜನೆಯಾಗಿದೆ.

ಗಾಯದಿಂದ ಚೇತರಿಕೆ

ನೀರಜ್‌ ಚೋಪ್ರಾ ಇದೇ ಮೇ 5ರಂದು ದೋಹಾದಲ್ಲಿ ನಡೆದಿದ್ದ ಡೈಮಂಡ್‌ ಲೀಗ್‌ನಲ್ಲಿ(Diamond League) ಚಿನ್ನದ ಪದಕ ಗೆದ್ದಿದ್ದರು. ಈ ಕೂಟದಲ್ಲಿ ಅವರು ತಮ್ಮ 4ನೇ ಅತ್ಯುತ್ತಮ ದೂರದ(88.67 ಮೀ.) ಸಾಧನೆಯೊಂದಿಗೆ ಗುರುತಿಸಿಕೊಂಡಿದ್ದರು. ಬಳಿಕ ಸ್ನಾಯು ಸೆಳೆತಕ್ಕೆ ಸಿಲುಕಿದ ಕಾರಣ ವಿಶ್ರಾಂತಿ ಪಡೆದಿದ್ದರು. ಹೀಗಾಗಿ ಮೇ 29ರಂದು ನೆದರ್ಲೆಂರ್ಡ್ಸ್​ನಲ್ಲಿ ನಡೆದಿದ್ದ ಎಫ್ಬಿಕೆ ಗೇಮ್ಸ್‌ ಮತ್ತು ಜೂನ್​ 13ರಂದು ಫಿನ್​ಲೆಂಡ್‌ನ‌ಲ್ಲಿ ನಡೆದ ಪಾವೋ ನುರ್ಮಿ ಟೂರ್ನಿಯಿಂದ ಹೊರಗುಳಿದಿದ್ದರು. ಆದರೆ ಜುಲೈನಲ್ಲಿ ನಡೆದ ಲೌಸನ್ನೆ ಚರಣರದ ಡೈಮಂಡ್​ ಲೀಗ್​ನಲ್ಲಿ(Lausanne Diamond League) ಚಿನ್ನ ಗೆದ್ದಿದ್ದರು.

ಇದನ್ನೂ ಓದಿ Neeraj Chopra : ಚಿನ್ನದ ಹುಡುಗ ನೀರಜ್​ಗೆ ಗಾಯದ ಬಾಧೆ, ಏನಾಯಿತು ಅವರಿಗೆ?

ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಭಾರತ ತಂಡ

ಪುರುಷರ ತಂಡ

ಕೃಷ್ಣ ಕುಮಾರ್‌ (800 ಮೀ.), ಅಜಯ್‌ ಕುಮಾರ್‌ ಸರೋಜ್‌ (1,500 ಮೀ.), ಸಂತೋಷ್‌ ಕುಮಾರ್‌ ತಮಿಳರಸನ್‌ (400 ಮೀ. ಹರ್ಡಲ್ಸ್‌), ಅವಿನಾಶ್‌ ಮುಕುಂದ್‌ ಸಬ್ಲೆ (3,000 ಮೀ. ಸ್ಟೀಪಲ್‌ಚೇಸ್‌), ಸರ್ವೇಶ್‌ ಅನಿಲ್‌ ಕುಶಾರೆ (ಹೈಜಂಪ್‌), ಜೆಸ್ವಿನ್‌ ಅಲ್ಡಿನ್‌, ಮುರಳಿ ಶ್ರೀಶಂಕರ್‌ (ಲಾಂಗ್‌ಜಂಪ್‌), ಪ್ರವೀಣ್‌ ಚಿತ್ರವೇಲ್‌ (ಟ್ರಿಪಲ್‌ ಜಂಪ್‌), ಅಬ್ದುಲ್ಲ ಅಬೂಬಕರ್‌ (ಟ್ರಿಪಲ್‌ ಜಂಪ್‌), ಎಲೊಸ್‌ ಪೌಲ್‌ (ಟ್ರಿಪಲ್‌ ಜಂಪ್‌), ನೀರಜ್‌ ಚೋಪ್ರಾ, ಡಿ.ಪಿ. ಮನು, ಕಿಶೋರ್‌ ಕುಮಾರ್‌ ಜೀನ (ಜಾವೆಲಿನ್‌ ತ್ರೊ), ಆಕಾಶ್‌ದೀಪ್‌ ಸಿಂಗ್‌, ವಿಕಾಸ್‌ ಸಿಂಗ್‌, ಪರಮ್‌ಜೀತ್‌ ಸಿಂಗ್‌ (20 ಕಿ.ಮೀ. ರೇಸ್‌ ವಾಕ್‌), ರಾಮ್‌ಬಾಬು (35 ಕಿ.ಮೀ. ರೇಸ್‌ವಾಕ್‌), ಅಮೋಜ್‌ ಜೇಕಬ್‌, ಮುಹಮ್ಮದ್‌ ಅಜ್ಮಲ್‌, ಮುಹಮ್ಮದ್‌ ಅನಾಸ್‌, ರಾಜೇಶ್‌ ರಮೇಶ್‌, ಅನಿಲ್‌ ರಾಜಲಿಂಗಂ, ಮಿಜೊ ಚಾಕೊ ಕುರಿಯನ್‌ (4×400 ಮೀ. ರಿಲೇ).

ಮಹಿಳಾ ತಂಡ

ಜ್ಯೋತಿ ಯರ್ರಾಜಿ (100 ಮೀ. ಹರ್ಡಲ್ಸ್‌), ಪಾರುಲ್‌ ಚೌಧರಿ (3,000 ಮೀ. ಸ್ಟೀಪಲ್‌ಚೇಸ್‌), ಶೈಲಿ ಸಿಂಗ್‌ (ಲಾಂಗ್‌ಜಂಪ್‌), ಅನ್ನು ರಾಣಿ (ಜಾವೆಲಿನ್‌ ತ್ರೊ), ಭಾವನಾ ಜಾಟ್‌ (20 ಕಿ.ಮೀ. ರೇಸ್‌ವಾಕ್‌).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup : ಕ್ರಿಕೆಟ್​ ಕೂಸು ಅಮೆರಿಕ ತಂಡದ ವಿರುದ್ಧ ಸೋತ ಪಾಕಿಸ್ತಾನ

T20 World Cup: ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಬ್ಯಾಟಿಂಗ್ ವೈಫಲ್ಯ ಎದುರಿಸಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 159 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಅಮೆರಿಕದ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 3 ವಿಕೆಟ್​ ನಷ್ಟಕ್ಕೆ 159 ರನ್​ ಬಾರಿಸಿತು. ಕೊನೇ ಓವರ್​ನಲ್ಲಿ ಅಮೆರಿಕಕ್ಕೆ 15 ರನ್​ ಗೆಲುವಿಗೆ ಬೇಕಾಗಿತ್ತು. ಆದರೆ, 14 ರನ್ ಬಾರಿಸಿದ ಕಾರಣ ಸೂಪರ್​ ಓವರ್​ ಅನಿವಾರ್ಯವಾಯಿತು.

VISTARANEWS.COM


on

T 20 Wordl Cup
Koo

ಡಲ್ಲಾಸ್​: ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಟಿ20 ವಿಶ್ವ ಕಪ್​ನ (T20 World Cup) ತನ್ನ ಮೊದಲ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ್ದು, ಕ್ರಿಕೆಟ್​ ಕ್ಷೇತ್ರದಲ್ಲಿ ಕಣ್ಣರಳಿಸುತ್ತಿರುವ ಅಮೆರಿಕ ವಿರುದ್ಧವೇ ಸೋತಿದೆ. ಎ ಗುಂಪಿನ ಈ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿನ ಪಂದ್ಯ ಟೈ ಆದ ಕಾರಣ ಸೂಪರ್​ ಓವರ್​ ಮೊರೆ ಹೋಗಲಾಯಿತು. ಅಂತಿಮವಾಗಿ ಪಾಕಿಸ್ತಾನವನ್ನು ಕಟ್ಟಿ ಹಾಕಿದ ಅಮೆರಿಕದ ತಂಡ ಜಯದ ಕೇಕೆ ಹಾಕಿತು. ಇದು ಅಮೆರಿಕ ತಂಡಕ್ಕೆ ಹಾಲಿ ವಿಶ್ವ ಕಪ್​ನಲ್ಲಿ ಸತತ ಎರಡನೇ ವಿಜಯವಾಗಿದ್ದು ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ಟಾಸ್​ ಗೆದ್ದ ಅಮೆರಿಕ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಬ್ಯಾಟಿಂಗ್ ವೈಫಲ್ಯ ಎದುರಿಸಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 159 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಅಮೆರಿಕದ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 3 ವಿಕೆಟ್​ ನಷ್ಟಕ್ಕೆ 159 ರನ್​ ಬಾರಿಸಿತು. ಕೊನೇ ಓವರ್​ನಲ್ಲಿ ಅಮೆರಿಕಕ್ಕೆ 15 ರನ್​ ಗೆಲುವಿಗೆ ಬೇಕಾಗಿತ್ತು. ಆದರೆ, 14 ರನ್ ಬಾರಿಸಿದ ಕಾರಣ ಸೂಪರ್​ ಓವರ್​ ಅನಿವಾರ್ಯವಾಯಿತು.

ಅನುಭವಿ ಬೌಲರ್​ ಮೊಹಮ್ಮದ್ ಅಮೀರ್​ ದಾಳಿಯನ್ನು ಎದುರಿಸಿದ ಅಮೆರಿಕ ತಂಡ ಒಂದು ಓವರ್​ನಲ್ಲಿ 19 ರನ್ ಬಾರಿಸಿತು. ಇದನ್ನು ಬೆನ್ನಟ್ಟಲು ಹೊರಟ ಪಾಕಿಸ್ತಾನ 1 ವಿಕೆಟ್ ನಷ್ಟ ಮಾಡಿಕೊಂಡು ಕೇವಲ 13 ರನ್ ಬಾರಿಸಿ ಐದು ರನ್​ಗಳ ಪರಾಜಯಕ್ಕೆ ಗುರಿಯಾಯಿತು.

ಪಾಕಿಸ್ತಾ ತಂಡಕ್ಕೆ ಇದು ಹಾಲಿ ವಿಶ್ವ ಕಪ್​ನಲ್ಲಿ ಮೊದಲ ಪಂದ್ಯವಾಗಿತ್ತು. ಅದರಲ್ಲೇ ಸೋಲುವ ಮೂಲಕ ಹೀನಾಯ ಅರಂಭ ಮಾಡಿತು. ಅದೂ ಅಮೆರಿಕದ ವಿರುದ್ಧ ಸೋಲುವ ಮೂಲಕ ಇದ್ದ ಮರ್ಯಾದೆಯನ್ನೂ ಕಳೆದುಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಪವರ್ ಪ್ಲೇನಲ್ಲಿ 30 ರನ್ ಗಳಿಸಿ ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್ ಮತ್ತು ಉಸ್ಮಾನ್ ಖಾನ್ ಅವರ ವಿಕೆಟ್ ಗಳನ್ನು ಕಳೆದುಕೊಂಡಿತು. ಮತ್ತೊಂದೆಡೆ ನಾಯಕ ಬಾಬರ್ ಅಝಾಮ್ ಒತ್ತಡದಲ್ಲಿ ಉತ್ತಮ ಆರಂಭ ನೀಡಿದರು. ಬಾಬರ್ ಮತ್ತು ಶದಾಬ್ ಖಾನ್ ನಾಲ್ಕನೇ ವಿಕೆಟ್​ಗೆ 8 ಓವರ್​ಗಳಲ್ಲಿ 72 ರನ್​ಗಳ ಜೊತೆಯಾಟ ನೀಡಿದರು.

ಇದನ್ನೂ ಓದಿ:Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

ಶದಾಬ್ 25 ಎಸೆತಗಳಲ್ಲಿ 4 ಮತ್ತು 3 ಸಿಕ್ಸರ್​ಗಳೊಂದಿಗೆ 40 ರನ್ ಗಳಿಸಿದರು. ಬಾಬರ್ 23 ಎಸೆತಗಳಲ್ಲಿ 44 ರನ್ ಸಿಡಿಸಿ ಔಟಾದರು. ನಂತರ ಫಾರ್ಮ್​ನಲ್ಲಿ ಇಲ್ಲದ ಅಜಂ ಖಾನ್ ಗೋಲ್ಡನ್ ಡಕ್ಗೆ ಕಳುಹಿಸಿದರು.

ಅಮೆರಿಕ ಪರ ಮಿಂಚಿದ ಮೊನಾಂಕ್​

ಗುರಿ ಬೆನ್ನಟ್ಟಿದ ಅಮೆರಿಕ ಪರ 38 ಎಸೆತಗಳಲ್ಲಿ 50 ರನ್ ಗಳಿಸಿದ ಮೊನಾಂಕ್ ಮಿಂಚಿದರು. ಕೊನೆಯ ಓವರ್​ನಲ್ಲಿ 12 ರನ್​ಗಳ ಅಗತ್ಯವಿದ್ದಾಗ ಮಿಂಚಿದ ಜೋನ್ಸ್ 11 ರನ್ ಗಳಿಸಿದರು. ಅವರು 26 ಎಸೆತಗಳಲ್ಲಿ 36 ರನ್ ಗಳಿಸಿ ಔಟಾಗದೆ ಉಳಿದರು.

Continue Reading

ಪ್ರಮುಖ ಸುದ್ದಿ

Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

Sunil Chhetri :ಕುವೈತ್ ವಿರುದ್ಧದ ಡ್ರಾದ ನಂತರ ಎರಡೂ ತಂಡದ ಆಟಗಾರರು ಅವರಿಗೆ ಗಾರ್ಡ್​ ಆಫ್​ ಹಾನರ್​ ಸಲ್ಲಿಸಿದರು. ಈ ವೇಳೆ ಛೆಟ್ರಿ ಆನಂದ ಭಾಷ್ಪ ಸುರಿಸಿದರು. ಭಾರತೀಯ ಅಭಿಮಾನಿಗಳಿಂದ ಭಾರಿ ಹರ್ಷೋದ್ಗಾರ ಗೌರವ ಸಲ್ಲಿಸಿದರು. ಆಟಗಾರರು ಅವರಿಗೆ ಅಭಿನಂದನೆ ಸಲ್ಲಿಸಿದರು.

VISTARANEWS.COM


on

sunil chhetri
Koo

ಕೋಲ್ಕತ್ತಾ: ಇಲ್ಲಿನ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ 58,000 ಕ್ಕೂ ಹೆಚ್ಚು ಅಭಿಮಾನಿಗಳ ಸಮ್ಮುಖದಲ್ಲಿ ಭಾರತ ಫುಟ್ಬಾಲ್ ತಾರೆ ಸುನಿಲ್ ಛೆಟ್ರಿ (Sunil Chhetri) ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ವಿದಾಯ ಹೇಳಿದರು. ಕತಾರ್ ವಿರುದ್ಧದ ಪಂದ್ಯದ ಫಲಿತಾಂಶವು ಡ್ರಾದಲ್ಲಿ ಕೊನೆಗೊಂಡ ಕಾರಣ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯಗಳಲ್ಲಿ ಭಾರತದ ಪ್ರಗತಿ ಹಾದಿಗೆ ಅಡಚಣೆ ಉಂಟಾಯಿತು. ಇದು ಭಾರತದ ಫುಟ್ಬಾಲ್ ಪಾಲಿಗೆ ಬೇಸರದ ವಿಷಯ. ಆದಾಗ್ಯೂ ಅಭಿಮಾನಿಗಳು ಕೆಲವು ಕ್ಷಣಗಳವರೆಗೆ ನಿರಾಶೆ ಬದಿಗಿಟ್ಟರು. ಛೆಟ್ರಿಗೆ ಪ್ರೇಕ್ಷಕರು ಗಾರ್ಡ್​ ಆಫ್​ ಹಾನರ್ ಸಲ್ಲಿಸಿದರು.

ಕುವೈತ್ ವಿರುದ್ಧದ ಡ್ರಾದ ನಂತರ ಎರಡೂ ತಂಡದ ಆಟಗಾರರು ಅವರಿಗೆ ಗಾರ್ಡ್​ ಆಫ್​ ಹಾನರ್​ ಸಲ್ಲಿಸಿದರು. ಈ ವೇಳೆ ಛೆಟ್ರಿ ಆನಂದ ಭಾಷ್ಪ ಸುರಿಸಿದರು. ಭಾರತೀಯ ಅಭಿಮಾನಿಗಳಿಂದ ಭಾರಿ ಹರ್ಷೋದ್ಗಾರ ಗೌರವ ಸಲ್ಲಿಸಿದರು. ಆಟಗಾರರು ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಪಂದ್ಯದಲ್ಲಿ, 39 ವರ್ಷದ ಆಟಗಾರ ಅತ್ಯಂತ ಉತ್ಸಾಹದಲ್ಲಿದ್ದಂತೆ ಕಂಡರು. ತಮ್ಮ ಯುವ ಸಹ ಆಟಗಾರರನ್ನು ಮೀರಿಸಿ ಓಡಾಡುತ್ತಿದ್ದರು. ತಮ್ಮ 151 ನೇ ಪ್ರದರ್ಶನದಲ್ಲಿ 94 ಗೋಲುಗಳ ದಾಖಲೆಯ ಸಂಖ್ಯೆಯನ್ನು ಸೇರಿಸುವ ಭರವಸೆಯಲ್ಲಿದ್ದರು. ಆದಾಗ್ಯೂ, ಭಾರತದ ದಾಖಲೆಯ ಗೋಲ್ ಸ್ಕೋರರ್​ಗೆ ಪರಿಪೂರ್ಣ ವಿದಾಯ ಸಿಗಲಿಲ್ಲ, ಕುವೈತ್ ಆಟದಲ್ಲಿ ಪ್ರಾಬಲ್ಯ ಸಾಧಿಸಿತು.

ಛೆಟ್ರಿ 94ಗೋಲ್​ಗಳ ಸರದಾರ

39 ವರ್ಷದ ಛೆಟ್ರಿ, 94 ಗೋಲುಗಳನ್ನು ಗಳಿಸುವ ಮೂಲಕ ಕ್ರೀಡೆಯ ಇತಿಹಾಸದಲ್ಲಿ ನಾಲ್ಕನೇ ಅತಿ ಹೆಚ್ಚು ಗೋಲ್ ಸ್ಕೋರರ್ ಆಗಿ ತಮ್ಮ 19 ವರ್ಷಗಳ ಅಂತರರಾಷ್ಟ್ರೀಯ ಫುಟ್ಬಾಲ್ ವೃತ್ತಿಜೀವನವನ್ನು ಕೊನೆಗೊಳಿಸಿದರು. ಪೋರ್ಚುಗಲ್​ನ ಕ್ರಿಸ್ಟಿಯಾನೊ ರೊನಾಲ್ಡೊ (128 ಗೋಲುಗಳು), ಇರಾನ್​ನ ಅಲಿ ಡೇಯ್ (108 ಗೋಲುಗಳು) ಮತ್ತು ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ (106 ಗೋಲುಗಳು) ಅವರಿಗಿಂತ ಮೊದಲಿನ ಸ್ಥಾನಗಳಲ್ಲಿ ಇದ್ದಾರೆ.

ಪೋಷಕರು ಭಾಗಿ

ಛೆಟ್ರಿ ಅವರ ಅಂತಾರಾಷ್ಟ್ರೀಯ ಫುಟ್ಬಾಲ್​​ಗೆ ವಿದಾಯ ಹೇಳಿರುವುದು ಹೃದಯಸ್ಪರ್ಶಿ ಕ್ಷಣವಾಗಿತ್ತು. ಏಕೆಂದರೆ ಭಾವನಾತ್ಮಕ ಬೀಳ್ಕೊಡುಗೆಯಲ್ಲಿ ಅವರ ಹೆತ್ತವರಾದ ಖಾರ್ಗಾ ಮತ್ತು ಸುಶೀಲಾ, ಅವರ ಪತ್ನಿ ಸೋನಮ್ ಭಟ್ಟಾಚಾರ್ಯ ಮತ್ತು ಹಲವಾರು ಅಧಿಕಾರಿಗಳು ಮತ್ತು ಮಾಜಿ ಆಟಗಾರರು ಹಾಜರಿದ್ದರು, ಇದು ಅವರು ಭಾರತೀಯ ಫುಟ್ಬಾಲ್ ಮೇಲೆ ಬೀರಿದ ಆಳ ಪ್ರಭಾವಕ್ಕೆ ಸಾಕ್ಷಿಯಾಗಿದೆ.

ಒಂದು ವೇಳೆ ಭಾರತ ಕತಾರ್ ತಂಡವನ್ನು ಸೋಲಿಸಲು ವಿಫಲವಾದರೆ, ಪ್ರಸ್ತುತ ನಾಲ್ಕು ಅಂಕಗಳನ್ನು ಹೊಂದಿರುವ ಕುವೈತ್ ಜೂನ್ 11 ರಂದು ಅಫ್ಘಾನಿಸ್ತಾನವನ್ನು ಸೋಲಿಸಿದರೆ ವಿಶ್ವಕಪ್ ಅರ್ಹತಾ ಸುತ್ತಿನ ಮೂರನೇ ಸುತ್ತಿಗೆ ಪ್ರವೇಶಿಸಬಹುದು.

Continue Reading

ಕ್ರಿಕೆಟ್

IND vs PAK T20 Match: 10 ಸೆಕೆಂಡ್‌ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿ!

IND vs PAK T20 Match: ವರದಿಗಳ ಪ್ರಕಾರ ಈ ವಿಶ್ವಕಪ್‌ನ ಸಾಮಾನ್ಯ ಪಂದ್ಯಗಳ ಜಾಹೀರಾತು ಶುಲ್ಕ 10 ಸೆಕೆಂಡ್‌ಗೆ 6 ಲಕ್ಷ ಇದ್ದು, ಇನ್ನುಳಿದ ಪ್ರಮುಖ ಪಂದ್ಯಗಳಿಗೆ 12ರಿಂದ 15 ಲಕ್ಷದ ವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಭಾರತ ನಾಕೌಟ್‌ ಹಂತಕ್ಕೇರಿದರೆ, ಆ ಪಂದ್ಯಗಳ ಜಾಹೀರಾತಿಗೆ ಕನಿಷ್ಠ 26 ಲಕ್ಷ ನಿಗದಿಯಾಗಬಹುದು ಎನ್ನಲಾಗಿದೆ.

VISTARANEWS.COM


on

IND vs PAK T20 Match
Koo

ಮುಂಬಯಿ: ಭಾರತ-ಪಾಕ್‌(IND vs PAK T20 Match) ನಡುವೆ ಪಂದ್ಯ ನಡೆದರೆ, ಜಾಹೀರಾತು ಕಂಪನಿಗಳಿಂದ ಬಿಸಿಸಿಐ, ಪಿಸಿಬಿ ಮತ್ತು ಐಸಿಸಿಗಳಿಗೆ ಹಣ ಹೊಳೆಯೇ ಹರಿದುಹೋಗುತ್ತದೆ. ಎರಡೂ ದೇಶಗಳ ನಡುವೆ ಎಂದಿಗೂ ಮುಗಿಯದಂತೆ ಕಾಣುತ್ತಿರುವ ದ್ವೇಷಗಳ ಜತೆಗೆ ಹಣಕಾಸಿನ ಲೆಕ್ಕಾಚಾರವೂ ಅಲ್ಲಿರುತ್ತವೆ. ಇದೀಗ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಉಭಯ ತಂಡಗಳ ಪಂದ್ಯದ ವೇಳೆ ಪ್ರಸಾರಗೊಳ್ಳುವ 10 ಸೆಕೆಂಡ್‌ಗಳ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಭಾರತ ಮತ್ತು ಪಾಕ್​ ಪಂದ್ಯ ಜೂನ್​ 9ರಂದು ನಡೆಯಲಿದೆ.

ವರದಿಗಳ ಪ್ರಕಾರ ಈ ವಿಶ್ವಕಪ್‌ನ ಸಾಮಾನ್ಯ ಪಂದ್ಯಗಳ ಜಾಹೀರಾತು ಶುಲ್ಕ 10 ಸೆಕೆಂಡ್‌ಗೆ 6 ಲಕ್ಷ ಇದ್ದು, ಇನ್ನುಳಿದ ಪ್ರಮುಖ ಪಂದ್ಯಗಳಿಗೆ 12ರಿಂದ 15 ಲಕ್ಷದ ವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಭಾರತ ನಾಕೌಟ್‌ ಹಂತಕ್ಕೇರಿದರೆ, ಆ ಪಂದ್ಯಗಳ ಜಾಹೀರಾತಿಗೆ ಕನಿಷ್ಠ 26 ಲಕ್ಷ ನಿಗದಿಯಾಗಬಹುದು ಎನ್ನಲಾಗಿದೆ. ವೆಸ್ಟ್​ ಇಂಡೀಸ್​ ಮತ್ತು ಅಮೆರಿಕದಲ್ಲಿ ಪಂದ್ಯಗಳು ಹಗಲು ಮತ್ತು ಬೆಳಗಿನ ಜಾವ ನಡೆಯುವ ಕಾರಣ ಹೆಚ್ಚಿನ ಸಂಖ್ಯೆಯ ಪ್ರೇಕ್ಷರು ಬರುತ್ತಿಲ್ಲ. ಈ ನಷ್ಟವನ್ನೆಲ್ಲ ಆಯೋಜಕರು ಭಾರತ-ಪಾಕ್‌ ಪಂದ್ಯದ ಮೂಲಕ ಭರಿಸುವ ಯೋಜನೆಯಲ್ಲಿದ್ದಾರೆ.

ಪಂದ್ಯ ನೋಡಲು ಅಭಿಮಾನಿಗಳ ನಿರಾಸಕ್ತಿ


ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಕೂಡ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದೆ. ಇದು ಹಲವರಲ್ಲಿ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ. ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. 

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

Continue Reading

ಕ್ರೀಡೆ

Virat Kohli: ‘ಕೊಹ್ಲಿ ಕೊ ಬೌಲಿಂಗ್​ ದೋ’ ನ್ಯೂಯಾರ್ಕ್​ ಸ್ಟೇಡಿಯಂನಲ್ಲಿ ಮೊಳಗಿದ ಅಭಿಮಾನಿಗಳ ಕೂಗು

Virat Kohli: ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾದ(Team India) ಘಾತಕ ಬೌಲಿಂಗ್​ ದಾಳಿಗೆ ನೆಲಕಚ್ಚಿದ ಐರ್ಲೆಂಡ್(India vs Ireland)​, ಕೇವಲ 96 ರನ್​ಗೆ ಸರ್ವಪತನ ಕಂಡು ಹೀನಾಯ ಸೋಲು ಕಂಡಿತ್ತು. ಇದೇ ಪಂದ್ಯದಲ್ಲಿ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(virat kohli) ಅವರಿಗೆ ಬೌಲಿಂಗ್​ ನೀಡುವಂತೆ ಪ್ರೇಕ್ಷಕರು ವಿಶೇಷವಾಗಿ ಮನವಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್(viral video) ಆಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಐರ್ಲೆಂಡ್​ ತಂಡದ ಬ್ಯಾಟರ್​ಗಳು ಭಾರತೀಯ ಬೌಲರ್​ಗಳ ಬಿಗಿ ದಾಳಿಗೆ ಸತತವಾಗಿ ವಿಕೆಟ್​ ಕಳೆದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಭಾರತೀಯ ಅಭಿಮಾನಿಗಳು ಗ್ಯಾಲರಿಯಿಂದ ಜೋರಾಗಿ ಹಿಂದಿಯಲ್ಲಿ “ಕೊಹ್ಲಿ ಕೊ ಬೌಲಿಂಗ್​ ದೋ….ಕೊಹ್ಲಿ ಕೊ ಬೌಲಿಂಗ್​ ದೋ” ಎಂದು ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.

ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು. ಇದು 9 ವರ್ಷಗಳ ನಂತರ ಕೊಹ್ಲಿಗೆ ಲಭಿಸಿದ ವಿಕೆಟ್ ಆಗಿತ್ತು.

ಇದನ್ನೂ ಓದಿ Rohit Sharma: ಹಲವು ದಾಖಲೆಗಳ ಸರದಾರನಾದ ಹಿಟ್​ಮ್ಯಾನ್​ ರೋಹಿತ್​

ವಿರಾಟ್​ ಕೊಹ್ಲಿ ಕೂಡ ಬೌಲಿಂಗ್​ ಅನುಭವವನ್ನು ಹೊಂದಿದ್ದಾರೆ. 2015ರ ವಿಶ್ವಕಪ್​ನಲ್ಲಿ ಆಸೀಸ್​ ವಿರುದ್ಧ ಮತ್ತು ಇದಕ್ಕೂ ಮುನ್ನ 2011ರಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಬೌಲಿಂಗ್​ ನಡೆಸಿದ್ದರು. ಇಲ್ಲಿ ತಲಾ ಓವರ್ ಬೌಲಿಂಗ್​ ನಡೆಸಿ ವಿಕೆಟ್​ ಪಡೆಯದಿದ್ದರೂ ಉತ್ತಮ ರನ್​ ಕಂಟ್ರೋಲ್​ ಮಾಡಿದ್ದರು. ಏಕದಿನದಲ್ಲಿ ಕೊಹ್ಲಿ 5 ವಿಕೆಟ್​, ಟಿ20 ಮತ್ತು ಐಪಿಎಲ್​ನಲ್ಲಿಯೂ ತಲಾ 4 ವಿಕಟ್​ ಪಡೆದ ಸಾಧನೆ ಮಾಡಿದ್ದಾರೆ. ಹೀಗಾಗಿ ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ. ಕಳೆದ ವರ್ಷ ಏಕದಿನ ವಿಶ್ವಕಪ್​ನಲ್ಲಿಯೂ ಅಭಿಮಾನಿಗಳು ಕೊಹ್ಲಿಗೆ ಬೌಲಿಂಗ್ ನೀಡುವಂತೆ ಆಗ್ರಹಿಸಿದ್ದರು.

ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಆರಂಭಿನಾಗಿ ಕಣಕ್ಕಿಳಿದ ಕೊಹ್ಲಿ ಕೇವಲ 1 ರನ್​ ಗಳಿಸಿ ವಿಫಲರಾದರು. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಟೂರ್ನಿಯಲ್ಲೇ ಅತ್ಯಧಿಕ ರನ್​ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಭಾರತ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಕೊಹ್ಲಿಯ ಮೇಲೆ ಹೆಚ್ಚಿನ ಭರವಸೆ ಇರಿಸಲಾಗಿದೆ. ಕೊಹ್ಲಿ ಪಾಕಿಸ್ತಾನ ವಿರುದ್ಧ ಇದುವರೆಗೂ ಉತ್ತಮ ಪ್ರದರ್ಶನ ತೋರಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ ಏಕಾಂಗಿಯಾಗಿ ಹೋರಾಡಿ ಪಾಕ್​ಗೆ ಸೋಲುಣಿಸಿದ್ದರು.

Continue Reading
Advertisement
Road Accident in Vijayanagara
ವಿಜಯನಗರ10 mins ago

Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

uttarakhand trekking tragedy 2
ಕರ್ನಾಟಕ10 mins ago

Uttarakhand Trekking Tragedy: ಚಾರಣಿಗರ ಮೃತದೇಹಗಳು ಬೆಂಗಳೂರಿಗೆ, ಸಾವಿನ ಕಣಿವೆಯಿಂದ ಹಿಂದಿರುಗಿದವರ ನಿಟ್ಟುಸಿರು

RBI Monetary Policy
ವಾಣಿಜ್ಯ20 mins ago

RBI Monetary Policy: ಸತತ 8ನೇ ಬಾರಿ ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ

PM Narendra Modi
ದೇಶ24 mins ago

PM Narendra Modi: WHO ಅಧ್ಯಕ್ಷರಿಂದ ಶುಭಾಶಯ; ಥ್ಯಾಂಕ್ಸ್‌ ʼತುಳಸಿ ಭಾಯ್‌ʼ ಎಂದ ಮೋದಿ-ಭಾರೀ ಕುತೂಹಲಕ್ಕೆ ಕಾರಣವಾಯ್ತು ಟ್ವೀಟ್‌

Varalaxmi Sarathkumar invites Rajinikanth for her wedding
ಟಾಲಿವುಡ್30 mins ago

Varalaxmi Sarathkumar: ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

dhananjaya sarji mlc election
ಪ್ರಮುಖ ಸುದ್ದಿ1 hour ago

MLC Election Results: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಧನಂಜಯ ಸರ್ಜಿಗೆ ಗೆಲುವು; ರಘುಪತಿ ಭಟ್‌ ಬಂಡಾಯ ವಿಫಲ

Narendra Modi
ದೇಶ1 hour ago

ಮೋದಿಯ ಮುಸ್ಲಿಂ ವಿರೋಧಿ ಹೇಳಿಕೆ ಬಳಿಕ ಬಿಜೆಪಿ ಸ್ಥಾನ ಗಳಿಕೆ ಏರಿಕೆ! 7 ಹಂತಗಳಲ್ಲಿ ಬಿಜೆಪಿ ಏರಿಳಿತದ ಪಟ್ಟಿ ಇಲ್ಲಿದೆ

NDA 3.0
Lok Sabha Election 20241 hour ago

NDA 3.0: ಎನ್‌ಡಿಎ ನಾಯಕರಿಂದ ಇಂದು ರಾಷ್ಟ್ರಪತಿ ಭೇಟಿ; ಸರ್ಕಾರ ರಚನೆಯ ಹಕ್ಕು ಮಂಡನೆ ಸಾಧ್ಯತೆ

Ira Khan faces trolling for dancing in a bikini
ಬಾಲಿವುಡ್1 hour ago

Ira Khan: ಬಿಕಿನಿ ಧರಿಸಿ ಕುಣಿದು ಕುಪ್ಪಳಿಸಿದ ಆಮೀರ್ ಪುತ್ರಿ; ಟ್ರೋಲ್‌ ಆದ ಇರಾ ಖಾನ್!

Lok Sabha Election 2024
ರಾಜಕೀಯ1 hour ago

Lok Sabha Election 2024: ನೂತನ ಸಂಸದರಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧೀಶರು, ಶೇ.46ರಷ್ಟು ಮಂದಿ ವಿರುದ್ಧ ಕ್ರಿಮಿನಲ್ ಕೇಸ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌