Ration Card : ಹೊಸ ರೇಷನ್ ಕಾರ್ಡ್ ಸದ್ಯಕ್ಕಿಲ್ಲ; ಗೃಹಲಕ್ಷ್ಮಿ, ಅನ್ನಭಾಗ್ಯದ ಕನಸು ನನಸು ದೂರ! - Vistara News

ಕರ್ನಾಟಕ

Ration Card : ಹೊಸ ರೇಷನ್ ಕಾರ್ಡ್ ಸದ್ಯಕ್ಕಿಲ್ಲ; ಗೃಹಲಕ್ಷ್ಮಿ, ಅನ್ನಭಾಗ್ಯದ ಕನಸು ನನಸು ದೂರ!

Ration Card : ರಾಜ್ಯದಲ್ಲಿ ಹೊಸ ರೇಷನ್‌ ಕಾರ್ಡ್‌ ವಿತರಣೆ ಸದ್ಯಕ್ಕೆ ಇಲ್ಲ. ಈ ಬಗ್ಗೆ ಸ್ವತಃ ರಾಜ್ಯ ಸರ್ಕಾರವೇ ಸ್ಪಷ್ಟನೆ ನೀಡಿದೆ. ಹೀಗಾಗಿ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಲು ಕಾಯುತ್ತಿರುವವರು ಇನ್ನೂ ಸ್ವಲ್ಪ ಸಮಯ ಕಾಯಬೇಕಿದೆ.

VISTARANEWS.COM


on

cm siddaramaiah infront of vidhana soudha No new Ration card in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೊಸ ರೇಷನ್‌ ಕಾರ್ಡ್‌ಗೆ (New Ration Card) ಅರ್ಜಿ ಕರೆಯುವ ತೀರ್ಮಾನವನ್ನು ರಾಜ್ಯ ಸರ್ಕಾರ (Congress Government) ತಾತ್ಕಾಲಿಕವಾಗಿ ಮುಂದೂಡಿದೆ. ಈ ಮೂಲಕ ಗೃಹಲಕ್ಷ್ಮಿ (Gruha lakshmi scheme), ಅನ್ನಭಾಗ್ಯ ಯೋಜನೆಯ (Anna Bhagya Scheme) ಫಲಾನುಭವಿಗಳಾಗಲು ಉತ್ಸುಕರಾಗಿದ್ದ ಅರ್ಹ ಫಲಾನುಭವಿಗಳ ಕನಸಿಗೆ ತಣ್ಣೀರೆರಚಿದಂತೆ ಆಗಿದೆ. ಶೀಘ್ರವೇ ಹೊಸ ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ಗೆ (APL and BPL Card) ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ (KH Muniyappa) ಹೇಳಿದ್ದರು. ಅಲ್ಲದೆ, ಯೆಲ್ಲೋ ಬೋರ್ಡ್‌ ಕಾರು (Yellow Board Car) ಹೊಂದಿರುವವರೂ ಬಿಪಿಎಲ್ ಪಡಿತರವನ್ನು ಪಡೆಯಬಹುದು ಎಂದು ಹೇಳಿದ್ದರು. ಈಗ ಸರ್ಕಾರ ಈ ನಿರ್ಧಾರದಿಂದ ಸ್ವಲ್ಪ ಹಿಂದೆ ಸರಿದಂತೆ ಕಾಣುತ್ತಿದೆ.

ರಾಜ್ಯದಲ್ಲಿ 14 ಲಕ್ಷ ಎಪಿಎಲ್ ಕಾರ್ಡ್‌ಗಳು ಇವೆ. ಇದರಲ್ಲಿ ಹಲವರು ಬಳಸುತ್ತಿಲ್ಲ. ಕೆಲವರು ಮೃತಪಟ್ಟ ಹಿನ್ನೆಲೆಯಲ್ಲಿ ಚಾಲ್ತಿಯಲ್ಲಿ ಇಲ್ಲ. ಆದರೆ, ಇವುಗಳ ರದ್ದು ಪ್ರಕ್ರಿಯೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಒಂದು ನಿಗದಿತ ಲೆಕ್ಕ ಸಿಗುತ್ತಿಲ್ಲ. ಕಾರ್ಡ್‌ಗಳ ಸಂಖ್ಯೆಗೂ ಪಡಿತರ ಪಡೆಯುತ್ತಿರುವವರ ಸಂಖ್ಯೆಗೂ ಬಹಳವೇ ವ್ಯತ್ಯಾಸ ಇದೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ಮೊದಲು ಸರಿಪಡಿಸುವತ್ತ ಹೆಜ್ಜೆ ಇಡುತ್ತಿದೆಯೇ ಎಂಬ ಅನುಮಾನ ಮೂಡಿದೆ.

ಇದನ್ನೂ ಓದಿ: Gruha Lakshmi Scheme : ಸೆಪ್ಟೆಂಬರ್‌ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ ಹಣ? 2500 ಕೋಟಿ ಉಳಿಸಲು ಪ್ಲ್ಯಾನ್!

ಇದಕ್ಕೆ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ಅವರ ಹೇಳಿಕೆಯೂ ಪುಷ್ಟಿ ನೀಡುತ್ತದೆ. ಹೊಸದಾಗಿ ಎಪಿಎಲ್ ಇಲ್ಲವೇ ಬಿಪಿಎಲ್ ಕಾರ್ಡ್​​ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸದ್ಯಕ್ಕೆ ಅನುಮತಿ ನೀಡಲಾಗುತ್ತಿಲ್ಲ. ಇದಕ್ಕೆ ಕಾರಣ ಇದ್ದು, ಈಗಲೇ ಹೇಳಲಾಗದು. ಆ ಬಗ್ಗೆ ಸದ್ಯದಲ್ಲಿಯೇ ಹೇಳುತ್ತೇನೆ ಎಂದು ಹೇಳಿದ್ದಾರೆ.

ಮೇಜರ್‌ ಸರ್ಜರಿ?

ರಾಜ್ಯ ಸರ್ಕಾರವು ಈಗ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿರುವುದರಿಂದ ಸಹಜವಾಗಿಯೇ ಆರ್ಥಿಕ ಹೊರೆಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಲ್ಲಿ ಉಳಿತಾಯ ಮಾಡಲು ಸಾಧ್ಯವೋ ಅಲ್ಲಲ್ಲಿ ಉಳಿತಾಯಕ್ಕೆ ಮುಂದಾಗುತ್ತಿದೆ. ಇನ್ನು ಬಿಪಿಎಲ್‌ ಕಾರ್ಡ್‌ದಾರರಿಗೆ ಅನ್ನಭಾಗ್ಯ ಯೋಜನೆಯಡಿ ತಿಂಗಳಿಗೆ 10 ಕೆ.ಜಿ. ಕೊಡುವುದಾಗಿ ಘೋಷಿಸಿದೆ. ಅಂದರೆ ರಾಜ್ಯದ ಲೆಕ್ಕ 5 ಕೆ.ಜಿ. ಆಗುತ್ತದೆ. ಎಲ್ಲರಿಗೂ ಈಗ ಐದು ಕೆ.ಜಿ. ಅಕ್ಕಿ ಬದಲು ಹಣ ಹಾಕಲಾಗುತ್ತಿದೆ. ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಚಾಲನೆ ಸಿಕ್ಕ ಬಳಿಕ ಅಕ್ಕಿ ವಿತರಣೆಯನ್ನು ಮಾಡಲಾಗುತ್ತದೆ. ಆದರೆ, ಈ ವೇಳೆ ರೇಷನ್‌ ಕಾರ್ಡ್‌ ಸಂಖ್ಯೆಯನ್ನೇ ಕಡಿಮೆ ಮಾಡಿದರೆ ಎಂಬ ಆಲೋಚನೆ ಸರ್ಕಾರಕ್ಕೆ ಬಂದಿದೆಯೇ ಎಂಬ ಪ್ರಶ್ನೆ ಮೂಡಿದೆ. ಅಂದರೆ, ಅನರ್ಹರು ಸಹ ರೇಷನ್‌ ಕಾರ್ಡ್‌ ಪಡೆಯುತ್ತಿದ್ದಾರೆ ಎಂಬ ಅಂಶ ಹಾಗೂ ದೂರುಗಳು ಸರ್ಕಾರಕ್ಕೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಈಗಿರುವ ಅರ್ಹತೆ ಇಲ್ಲದವರ ಬಿಪಿಎಲ್‌ ಕಾರ್ಡ್‌ಗೆ ಕತ್ತರಿ ಹಾಕುತ್ತದೆಯೇ ಎಂಬ ಚರ್ಚೆ ಹುಟ್ಟಿಕೊಂಡಿದೆ.

ಇದನ್ನೂ ಓದಿ: Karnataka Politics : ಕಾಂಗ್ರೆಸ್‌ನಲ್ಲಿ ಸಿಡಿದ ಮತ್ತೊಂದು ಟೀಂ; ಬ್ಯಾಡ್ಮಿಂಟನ್ ಕ್ಲಬ್‌ನಲ್ಲಿ ರಹಸ್ಯ ಸಭೆ!

ಈ ಹಿಂದೆ ನೋಂದಣಿ ಸ್ಥಗಿತಗೊಂಡಿದ್ದು ಏಕೆ?

ಈ ಹಿಂದೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ತಡೆ ನೀಡಲಾಗಿತ್ತು. ಈ ಸಂಬಂಧ ಆಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ಇದ್ದ ಪಡಿತರ ಚೀಟಿ ಪಡೆಯುವ ಪೋರ್ಟಲ್ ಅನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಸದ್ಯಕ್ಕೆ ಅರ್ಜಿ ಕರೆಯಲಾಗುವುದಿಲ್ಲ ಎಂದು ಈಗ ಸ್ವತಃ ಆಹಾರ ಸಚಿವರೇ ಹೇಳಿದ್ದಾರೆ. ಈ ನಿರ್ಧಾರದ ಹಿಂದಿನ ಕಾರಣವನ್ನು ಶೀಘ್ರದಲ್ಲಿಯೇ ಹೇಳಲಾಗುತ್ತದೆ ಎಂದೂ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Baby Death : ತುಮಕೂರು ರೈಲ್ವೆ ನಿಲ್ದಾಣದಲ್ಲಿ (Tumkur railway station) ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಹಸೂಗೂಸಿನ ಶವ ಪತ್ತೆಯಾಗಿತ್ತು. ಇದೀಗ ಮಗುವಿನ ಪೋಷಕರ ಸುಳಿವು ಸಿಕ್ಕಿದ್ದು, ಶವ ಸಾಗಿಸಲು ಹಣವಿಲ್ಲದೆ ಬಿಟ್ಟು ಹೋಗಿರುವುದು ಗೊತ್ತಾಗಿದೆ.

VISTARANEWS.COM


on

By

baby Death
Koo

ತುಮಕೂರು: ತುಮಕೂರು ರೈಲ್ವೆ ನಿಲ್ದಾಣದಲ್ಲಿ ಹಸೂಗೂಸಿನ ಶವವೊಂದು (Dead body) ಪತ್ತೆಯಾಗಿತ್ತು. ಪೊಲೀಸರು ಪ್ರಕರಣದ ತನಿಖೆಗಿಳಿದಾಗ, ಶವ ಸಾಗಿಸಲು (Baby Death) ಹಣವಿಲ್ಲದೆ ಪೋಷಕರು ರೈಲ್ವೆ ನಿಲ್ದಾಣದಲ್ಲಿ (Tumkur railway station) ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕಳೆದ 27ರಂದು ತುಮಕೂರು ರೈಲ್ವೆ ನಿಲ್ದಾಣದಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟ ಸ್ಥಿತಿಯಲ್ಲಿ ಹಸೂಗೂಸಿನ ಶವ ಪತ್ತೆಯಾಗಿತ್ತು. ಇದನ್ನೂ ಗಮನಿಸಿದ ಪ್ರಯಾಣಿಕರು ಕೂಡಲೇ ಪೊಲೀಸರಿಗೆ ‌ಮಾಹಿತಿ ನೀಡಿದ್ದರು. ತನಿಖೆಗಿಳಿದ ಪೊಲೀಸರು ಹಸುಗೂಸಿನ ಕೈಗೆ ಹಾಕಿದ್ದ ಟ್ಯಾಗ್‌ನಿಂದ ಪೋಷಕರ ಸುಳಿವು ಸಿಕ್ಕಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕುಂದರ್ತಿ ಮಂಡಲದ ಅಂಬಿಕಾಗೆ ಎಂಬುವವರಿಗೆ ಇದೇ ತಿಂಗಳ 23ರಂದು ಪಾವಗಡ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಮಗುವಿಗೆ ಉಸಿರಾಟದ ತೊಂದರೆ ಇದ್ದ ಕಾರಣಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಂಬಿಕಾಳ ಪತಿ ಜತೆಗೆ ಆಕೆ ತಾಯಿಯು ಮಗುವನ್ನು ಆಸ್ಪತ್ರೆಗೆ ಕರೆತಂದಿದ್ದರು.

ಈ ವೇಳೆ ಆಸ್ಪತ್ರೆ ಖರ್ಚಿಗೆ ಹಣ ತರಲು ಮಗುವಿನ ತಂದೆ ಬೆಂಗಳೂರಿಗೆ ಹೋಗಿದ್ದರು. ಆದರೆ ಅನಾರೋಗ್ಯದಿಂದ ಹಸುಗೂಸು ಮೃತಪಟ್ಟಿತ್ತು. ಇತ್ತ ಮಗುವಿನ ಅಜ್ಜಿ ಊರಿಗೆ ಶವ ಸಾಗಿಸಲು ಹಣವಿಲ್ಲದೇ ರೈಲು ನಿಲ್ದಾಣದಲ್ಲಿಯೇ ಬಿಟ್ಟು ಹೋಗಿದ್ದರು. ಸದ್ಯ ತನಿಖೆ ನಡೆಸಿ ಮೃತ ಮಗುವಿನ ಪೋಷಕರ ವಿಳಾಸ ಪತ್ತೆ ಹಚ್ಚಿರುವ ತಿಲಕ್ ಪಾರ್ಕ್ ಪೊಲೀಸರು, ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಇದನ್ನೂ ಓದಿ: Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು

ಬೆಂಗಳೂರು: ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶು (Newborn Baby) ಪತ್ತೆಯಾಗಿದೆ. ಜನಿಸಿದ ನಾಲ್ಕೈದು ಗಂಟೆಯಲ್ಲೇ ಗಂಡು ಮಗುವೊಂದು ನರಳಾಡಿ ಪ್ರಾಣ ಬಿಟ್ಟಿದೆ. ಪಾಪಿ ತಾಯಿಯೊಬ್ಬಳು ರೈಲಿನಲ್ಲೇ ಹೆರಿಗೆಯಾಗಿ ಡಸ್ಟ್ ಬಿನ್‌ನಲ್ಲೇ ಶಿಶುವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಈ ಅಮಾನವೀಯ ಕೃತ್ಯಕ್ಕೆ ಎಲ್ಲೆಡೆ ವ್ಯಾಪಕ ಟೀಕೆಗಳು (Yelahanka Railway ) ವ್ಯಕ್ತವಾಗಿವೆ.

ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಬುಧವಾರ ಮುಂಜಾನೆ ಭುವನೇಶ್ವರದಿಂದ ಬೆಂಗಳೂರಿಗೆ ಬಂದಿದ್ದ ಪ್ರಶಾಂತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ರೂರಿ ತಾಯಿಯೊಬ್ಬಳು ಗಂಡು ಮಗುವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ಕಸದ ಬುಟ್ಟಿಯಲ್ಲಿ ಹಾಕಿ ಹೋಗಿದ್ದಾಳೆ.

ಕಸದ ಬುಟ್ಟಿಯಲ್ಲಿ ನವಜಾತ ಶಿಶುವಿನ ಮೃತದೇಹ ಕಂಡ ಪ್ರಯಾಣಿಕರೊಬ್ಬರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಯಶವಂತಪುರ ರೈಲ್ವೆ ಪೊಲೀಸರು ಮೃತದೇಹವನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮಗು ಯಾರದ್ದು? ಯಾರು ಬಿಸಾಡಿ ಹೋಗಿರುವುದು ಎಂದು ತಿಳಿಯಲು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Satish Jarkiholi: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್‌ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Satish Jarkiholi
Koo

ಚಿಕ್ಕೋಡಿ: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಒಗ್ಗಟ್ಟಿನ ಮಂತ್ರ ಪಠಿಸಿದ್ದ ಕಾಂಗ್ರೆಸ್‌ ನಾಯಕರ ಮಧ್ಯೆಯೇ ಈಗ ಭಿನ್ನಾಭಿಪ್ರಾಯಗಳು ಮೂಡಿವೆ. ಅದರಲ್ಲೂ, ಮುಖ್ಯಮಂತ್ರಿ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದ್ದು, ಸ್ವಾಮೀಜಿಗಳು ಕೂಡ ಇದರ ಚರ್ಚೆಗೆ ಪದಾರ್ಪಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ’ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳುವ ಮೂಲಕ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, “2028ರಲ್ಲಿ ನಾನು ಕೂಡ ಸಿಎಂ ಆಗುತ್ತೇನೆ. ಆಗಿನ ಚುನಾವಣೆ ಫಲಿತಾಂಶದ ಬಳಿಕದ ಪರಿಸ್ಥಿತಿ ನೋಡಿಕೊಂಡು ಸಿಎಂ ಸ್ಥಾನಕ್ಕೆ ಹಕ್ಕು ಚಲಾವಣೆ ಮಾಡುತ್ತೇನೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದುಹೋಗಿದೆ. ಸಿಎಂ ಬದಲಾವಣೆ ವಿಚಾರವು ಹೈಕಮಾಂಡ್‌ ತೀರ್ಮಾನವಾಗಿದೆ. ಡಿಸಿಎಂಗಳ ವಿಚಾರವೂ ಚುನಾವಣೆಗೆ ಮೊದಲು ಕೇಳಿಬಂದಿತ್ತು. ಈಗ ಮಾಡಬೇಕಾ, ಬೇಡವಾ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ” ಎಂದು ಹೇಳಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್‌ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದಿಷ್ಟು

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.

ಲಿಂಗಾಯತ ಸಿಎಂ ಕೂಗು

ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು‌ಶ್ರೀ ರಂಭಾಪುರಿ ಡಾ.ವೀರ‌ಸೋಮೇಶ್ವರ ಜಗದ್ಗುರು ಆಗ್ರಹಿಸಿದ್ದಾರೆ. “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹಾಗಾಗಿ, ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ತಪ್ಪಿಲ್ಲ. ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯ‌ವು ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿಯಾಗುತ್ತದೆ. ಸಿಎಂ ಸ್ಥಾನ ಅಲ್ಲದಿದ್ದರೂ ಡಿಸಿಎಂ ಸ್ಥಾನವನ್ನಾದರೂ ಕೊಡಬೇಕು” ಎಂದು ಹೇಳಿದರು.

ಇದನ್ನೂ ಓದಿ: Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!

Continue Reading

ಕರ್ನಾಟಕ

Kalaburagi News: ಮೊರಾರ್ಜಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥ

Kalaburagi News: ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರ ಸೇವಿಸಿದ ಬಳಿಕ 17 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.

VISTARANEWS.COM


on

Kalaburagi News
Koo

ಕಲಬುರಗಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಡೆದಿದೆ. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ಉಪಾಹಾರ ಸೇವನೆ ಬಳಿಕ ಏಕಾಏಕಿ ವಾಂತಿ ಮಾಡಿಕೊಂಡು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ ಈ ರೀತಿಯಾಗಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ | Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

Road Accident

ಉಡುಪಿ: ವಾಹನಗಳಿಗೆ ನಾಯಿಗಳು ಅಡ್ಡ ಬಂದು ಅಪಘಾತ (Road Accident) ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಕೆಳಗೆ ಬಿದ್ದು ನವವಿವಾಹಿತೆ ಮೃತಪಟ್ಟಿದ್ದಾಳೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತಪಟ್ಟವರು.

ಎರಡು ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ ಮದುವೆಯಾಗಿದ್ದರು. ಮಂಗಳೂರು ತೆರಳುವ ಖಾಸಗಿ ಬಸ್ ಏರಲು ಪತಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಉಡುಪಿಯ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ಬೈಕ್‌ಗೆ ಅಚಾನಕ್‌ ಆಗಿ ಶ್ವಾನ ಅಡ್ಡ ಬಂದಿದೆ.

ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮುಗುಚಿ ಬಿದ್ದಿದ್ದಾರೆ. ಬೈಕ್ ಹಿಂಭಾಗದಲ್ಲಿದ್ದ ನೀಕ್ಷಾ, ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರವಾಗಿದೆ. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಶಾಲ್‌ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸವಾರನ ಬಲಿ ಪಡೆದ ಬೊಲೆರೋ ವಾಹನ

Road Accident

ಚಿಕ್ಕಬಳ್ಳಾಪುರ: ಬೊಲೆರೋ ವಾಹನಕ್ಕೆ ಬೈಕ್ ಸವಾರ ಬಲಿಯಾಗಿದ್ದಾನೆ. ಚಿಕ್ಕಬಳ್ಳಾಪುರದ ಗುಡಿಬಂಡೆ – ಪೆರೇಸಂದ್ರ ಮಾರ್ಗದ ಕಮ್ಮಗುಟ್ಟಹಳ್ಳಿ ಕ್ರಾಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಾಗೇಶ್(21) ಮೃತ ದುರ್ದೈವಿ.

ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ನಾಗೇಶ್‌ ಬೈಕ್‌ನಲ್ಲಿ ಬರುವಾಗ ಜಿಲಿಟಿನ್ ಸ್ಫೋಟಕ ತುಂಬಿದ್ದ ಬೊಲೆರೋ ವಾಹನದ ನಡುವೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ನಾಗೇಶ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

ಇತ್ತ ಅಪಘಾತ ಸಂಭವಿಸುತ್ತಿದ್ದಂತೆ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹಿರೇನಾಗವಲ್ಲಿ ಬೆಟ್ಟ ಸುತ್ತಮುತ್ತ ಕಲ್ಲು ಗಣಿಗಾರಿಕೆಗೆ ಸ್ಫೋಟಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದರು. ಅತಿ ವೇಗದಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Murder Case: ಕುಡಿದ ಅಮಲಿನಲ್ಲಿ ಕಟ್ಟಡದಿಂದ ಸ್ನೇಹಿತನನ್ನೇ ತಳ್ಳಿ ಕೊಂದ ಯುವಕ!

ಇತ್ತೀಚೆಗೆ ಟಿಪ್ಪರ್‌ಗಳು, ಜಿಲೆಟಿನ್ ವಾಹನಗಳಿಗೆ ಹತ್ತಾರು ಜನ ಬಲಿಯಾಗಿದೆ. ಕಲ್ಲು ಗಣಿಗಾರಿಕೆಯಿಂದ ಸಾಕಷ್ಟು ಅವಾಂತರವೇ ಸೃಷ್ಟಿಯಾಗಿದೆ. ಘಟನಾ ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪರಾರಿ ಆದ ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Continue Reading

ಕಲಬುರಗಿ

Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

Kalaburagi murder : ಆಟೋ ಚಾಲಕನನ್ನು ಚಾಕುವಿನಿಂದ ಕೊಂದಿರುವ ಹಂತಕರು ಬಳಿಕ ಮರಕ್ಕೆ ನೇಣು ಹಾಕಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಕೊಲೆಗಾರರ ಹುಡುಕಾಟ ನಡೆಸಿದ್ದಾರೆ.

VISTARANEWS.COM


on

By

kalaburagi Murder Case
Koo

ಕಲಬುರಗಿ: ಕಲಬುರಗಿಯಲ್ಲಿ (Kalaburagi murder) ಚಾಕುವಿನಿಂದ ಇರಿದು ಆಟೋ ಚಾಲಕನ (Auto Driver) ಬರ್ಬರ ಹತ್ಯೆ ನಡೆಸಲಾಗಿದೆ. ಗೋಪಾಲ್ ಜಾಧವ್ (48) ಮೃತಪಟ್ಟವನು. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ನಿನ್ನೆ ಶುಕ್ರವಾರ ಸಂಜೆ ಜಮೀನಿಗೆ ತೆರಳಿದ್ದ ಗೋಪಾಲ್‌ ಮೇಲೆ ಎರಗಿದ ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ಇರಿದಿದ್ದಾರೆ. ಚಾಕುವಿನಿಂದ ಇರಿದು ಕೊಂದ ಬಳಿಕ ಜಮೀನಿನಲ್ಲಿರುವ ಮರಕ್ಕೆ ನೇಣು ಹಾಕಿ ಪರಾರಿ ಆಗಿದ್ದಾರೆ. ಈ ವೇಳೆ ಮರಕ್ಕೆ ಮೃತದೇಹವನ್ನು ಕಟ್ಟಿದ್ದ ಹಗ್ಗ ಕಟ್‌ ಆಗಿ ಬಿದ್ದಿದೆ.

ಜಮೀನಿನಲ್ಲಿ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಂಚಾವರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಹಂತಕರಿಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ: Road Accident: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

ಕುಡಿದ ಅಮಲಿನಲ್ಲಿ ಕಟ್ಟಡದಿಂದ ಸ್ನೇಹಿತನನ್ನೇ ತಳ್ಳಿ ಕೊಂದ ಯುವಕ

ಬೆಂಗಳೂರು: ಕುಡಿದ ಅಮಲಿನಲ್ಲಿ ಯುವಕನೊಬ್ಬ ಕಟ್ಟಡದಿಂದ ಸ್ನೇಹಿತನನ್ನೇ ತಳ್ಳಿ ಕೊಲೆ‌ ಮಾಡಿರುವ ಘಟನೆ (Murder Case) ಬೆಂಗಳೂರಿನ ತಲಘಟ್ಟಪುರದ ಅಂಜನಾಪುರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ವಿಶಾಲ್ ಯಾದವ್ ಕೊಲೆಯಾದವನು. ಅಭಿಷೇಕ್ ಎಂಬಾತ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ.

ಇಬ್ಬರೂ ಉತ್ತರ ಪ್ರದೇಶ ಮೂಲದವರಾಗಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ದಿನಗೂಲಿ ನೌಕರನಾಗಿದ್ದರು. ನಿನ್ನೆ ಕಟ್ಟಡದಲ್ಲಿ ಇವರಿಬ್ಬರು ಎಣ್ಣೆ ಪಾರ್ಟಿ ಮಾಡಿದ್ದರು. ಈ ವೇಳೆ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದಿದೆ. ಕಟ್ಟಡದ ಮೇಲಿಂದ ವಿಶಾಲ್ ಯಾದವ್‌ನನ್ನು ಅಭಿಷೇಕ್‌ ನೂಕಿದ್ದಾನೆ. ಇದರಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ವಿಶಾಲ್ ಯಾದವ್‌ ಮೃತಪಟ್ಟಿದ್ದಾನೆ. ಘಟನೆ ಬಳಿಕ ಅಭಿಷೇಕ್ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
baby Death
ತುಮಕೂರು27 mins ago

Baby Death : ಶವ ಸಾಗಿಸಲು ಹಣವಿಲ್ಲದೇ ರೈಲಿನಲ್ಲೇ ಶಿಶು ಬಿಟ್ಟು ಹೋದ ಪೋಷಕರು

Viral Video
Latest32 mins ago

Viral Video: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Shabbar Zaidi
ವಿದೇಶ37 mins ago

Shabbar Zaidi: ಮಸೀದಿಗಳ ಧ್ವನಿವರ್ಧಕದ ಬಗ್ಗೆ ಪಾಕಿಸ್ತಾನದಲ್ಲೇ ಕೇಳಿ ಬಂತು ಅಪಸ್ವರ; ಮೊಹಮ್ಮದ್ ಶಬ್ಬರ್ ಜೈದಿ ಹೇಳಿದ್ದೇನು?

Satish Jarkiholi
ಕರ್ನಾಟಕ38 mins ago

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Baby Death
Latest39 mins ago

Baby Death : ಆಟವಾಡುತ್ತಿದ್ದ ಮಗುವಿನ ಪಾಲಿಗೆ ಯಮದೂತ ಆದ ಟಿವಿ ಸ್ಟ್ಯಾಂಡ್‌!

Kalaburagi News
ಕರ್ನಾಟಕ40 mins ago

Kalaburagi News: ಮೊರಾರ್ಜಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ 17 ವಿದ್ಯಾರ್ಥಿನಿಯರು ಅಸ್ವಸ್ಥ

Kidnapping Case
ದೇಶ48 mins ago

Kidnapping Case: ಮಿಠಾಯಿ ತರಲೆಂದು ಮಕ್ಕಳನ್ನು ಬಿಟ್ಟು ಹೋದ ತಂದೆ-ತಾಯಿ; ಕಾರು ಸಮೇತ ಮಕ್ಕಳು ಕಿಡ್ನಾಪ್‌!

kalaburagi Murder Case
ಕಲಬುರಗಿ54 mins ago

Kalaburagi murder : ಚಾಕುವಿನಿಂದ ಇರಿದು ಕೊಂದು ಆಟೋ ಚಾಲಕನನ್ನು ಮರಕ್ಕೆ ನೇತು ಹಾಕಿದ ಹಂತಕರು

Battlegrounds Mobile India
ಬೆಂಗಳೂರು55 mins ago

Battlegrounds Mobile India : ಬಿಜಿಎಮ್​ಐ ಜತೆ ಹೊಸ ಪಾಲುದಾರಿಕೆ ಮಾಡಿಕೊಂಡ ಕೆಎಫ್​​ಸಿ

Varalaxmi Sarathkumar invite PM Narendra Modi for wedding
ಸಿನಿಮಾ1 hour ago

Varalaxmi Sarathkumar: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ20 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌