Nag Panchami : ಚಿಕ್ಕಬಳ್ಳಾಪುರದ ನಾಗ ಮಂಟಪದಲ್ಲಿ ಇಂದು ಸದ್ಗುರು ಸಮ್ಮುಖದಲ್ಲಿ ನಾಗಮಂಡಲ - Vistara News

ಚಿಕ್ಕಬಳ್ಳಾಪುರ

Nag Panchami : ಚಿಕ್ಕಬಳ್ಳಾಪುರದ ನಾಗ ಮಂಟಪದಲ್ಲಿ ಇಂದು ಸದ್ಗುರು ಸಮ್ಮುಖದಲ್ಲಿ ನಾಗಮಂಡಲ

Nag Panchami : ನಾಗರ ಪಂಚಮಿಯ ದಿನವಾದ ಆಗಸ್ಟ್‌ 21ರಂದು ಚಿಕಬಳ್ಳಾಪುರದಲ್ಲಿರುವ ಆದಿಯೋಗಿ ಪ್ರತಿಮೆ ಬಳಿ ನಾಗಮಂಡಲ ನಡೆಯಲಿದೆ. ಸ್ವತಃ ಸದ್ಗುರು ಇದರಲ್ಲಿ ಭಾಗವಹಿಸಲಿದ್ದಾರೆ.

VISTARANEWS.COM


on

Nagamandala sadguru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಗರ ಪಂಚಮಿಯ (Nag Panchami 2023) ದಿನವಾದ ಸೋಮವಾರ (ಆಗಸ್ಟ್‌ 21) ಸಂಜೆ 5 ಗಂಟೆಯಿಂದ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿರುವ ನಾಗ ಮಂಟಪದಲ್ಲಿ (Chikkaballapura Naga Mantapa) ಉಡುಪಿಯ ನಾಗಪಾತ್ರಿಗಳಿಂದ ನಾಗಾರಾಧನೆಯು (Nagamandala at Chikkaballapur) ನಡೆಯಲಿದೆ. ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಸರ್ಪ ದೋಷ ನಿವಾರಣೆಗಾಗಿ ಸಾಂಪ್ರದಾಯಿಕವಾದ ಆಶ್ಲೇಷಬಲಿ ಪೂಜೆಯೂ ನಡೆಯಲಿದೆ. ಈ ಪೂಜೆಯಲ್ಲಿ (Nag Panchami) ಪಾಲ್ಗೊಳ್ಳಲು ಯಾವುದೇ ನೋಂದಣಿ ಅಗತ್ಯವಿಲ್ಲ. ಭಕ್ತರು ಮುಕ್ತವಾಗಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಾಗರ ಪಂಚಮಿಯ ಪ್ರಯುಕ್ತವಾಗಿ ಆಗಸ್ಟ್ 19ರಿಂದಲೇ ಇಲ್ಲಿ ಇಲ್ಲಿ ಹಳ್ಳಿ ಜಾತ್ರೆ ನಡೆಯುತ್ತಿವೆ. ಇದರ ಅಂತಿಮ ಚರಣದಲ್ಲಿ ಸಂಜೆ 5 ಗಂಟೆಗೆ ದೈವಿಕವಾದ ನಾಗನನ್ನು ಸಂಭ್ರಮಿಸುವ ನಾಗರ ಪಂಚಮಿಯ ವಿಶೇಷ ಕಾರ್ಯಕ್ರಮ ಸಂಜೆ ನಡೆಯಲಿದೆ. ನಾಗಮಂಡಲದ ಸಂದರ್ಭದಲ್ಲಿ ಸದ್ಗುರುಗಳು (Sadguru Jaggi Vasudev) ಉಪಸ್ಥಿತರಿದ್ದು ನಾಗನಿಗೆ ಆರತಿಯನ್ನು ಅರ್ಪಿಸುವ ಮೂಲಕ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಾರೆ.

Nagamandala at Chikkaballapur

ನಾಗರ ಪಂಚಮಿಯ ವೈಜ್ಞಾನಿಕ ಅಂಶಗಳು

ನಾಗಮಂಡಲವು ನಾಗನ ಅನುಗ್ರಹವನ್ನು ಪಡೆಯುವ ಸಾಂಪ್ರದಾಯಿಕ ಆಚರಣೆಯಾಗಿದ್ದು, ಆಧ್ಯಾತ್ಮಿಕ ಬೆಳವಣಿಗೆ ಸೇರಿದಂತೆ ವಿವಿಧ ಪ್ರಯೋಜನಗಳನ್ನು ತರುತ್ತದೆ ಎಂಬ ನಂಬಿಕೆಯಿದೆ. ಜ್ಯಾಮಿತೀಯ ವಿನ್ಯಾಸದ ಮಂಡಲದ ರೇಖಾಚಿತ್ರ ಬಿಡಿಸುವುದು, ಸ್ತೋತ್ರ ಮತ್ತು ಮಂತ್ರಗಳ ಪಠಣ ಹಾಗು ಅರ್ಪಣೆ ಸಲ್ಲಿಸುವುದು ಈ ನಾಗಾರಾಧನೆಯಲ್ಲಿದೆ. ಇದರಿಂದ ಜೀವನದಲ್ಲಿರುವ ಅಡೆತಡೆಗಳು ನಿವಾರಣೆಗೊಂಡು, ಸಾಮರಸ್ಯ, ಶಾಂತಿ, ಸಮೃದ್ಧಿ ಉಂಟಾಗಿ, ಒಬ್ಬರ ಪ್ರಯತ್ನದಲ್ಲಿ ಯಶಸ್ಸು ಮೂಡಿ, ಆಧ್ಯಾತ್ಮಿಕ ಪ್ರಗತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ರಾಜ ಮಾರ್ಗ ಅಂಕಣ : ಇಂದು ನಾಗರ ಪಂಚಮಿ; ಹಾವಿಗೆ ಹಾಲೆರೆಯುವ ಜತೆಗೆ ತಿಳಿದುಕೊಳ್ಳಬೇಕಾದ 4 ಸಂಗತಿಗಳು

ಪಂಚೇಂದ್ರಿಯಗಳು ಸೋತಾಗ ನಾಗ ದೋಷ ಕಾಣಿಸುತ್ತದೆ

ನಾಗರ ಪಂಚಮಿಯ ಮಹತ್ವದ ಬಗ್ಗೆ ಸದ್ಗುರುಗಳು ಮಾತನಾಡುತ್ತಾ, “ತಮ್ಮ ಭೌತಿಕತೆಯನ್ನು ಮೀರಿ, ಇಂದ್ರಿಯಗಳನ್ನು ಮೀರಿ ಜೀವನವನ್ನು ಆಳವಾಗಿ ತಿಳಿದುಕೊಳ್ಳಲು ಬಯಸುವವರಿಗೆ ನಾಗರ ಪಂಚಮಿ ಬಹಳ ಮಹತ್ವಪೂರ್ಣವಾದ ದಿನವಾಗಿದೆ. ಎಲ್ಲಿ ಜನರು ಪಂಚೇಂದ್ರಿಯಗಳನ್ನು ಮೀರಿ ವಿಷಯಗಳನ್ನು ಗ್ರಹಿಸುತ್ತಾರೋ ಅಲ್ಲಿ ನಾಗನ ಉಪಸ್ಥಿತಿ ಇರುತ್ತದೆ. ಎಲ್ಲಿ ಪಂಚೇಂದ್ರಿಯಗಳು ಸೋಲುತ್ತವೆಯೋ ಅಲ್ಲಿ ನಾಗನ ಕೆಲಸ ಶುರುವಾಗುತ್ತದೆ. ನಿಮ್ಮ ಜೀವನ ಎಷ್ಟು ಉತ್ಸಾಹಭರಿತವಾಗಿದೆ, ಎಷ್ಟು ಸಂತೋಷದಾಯಕವಾಗಿದೆ, ಎಷ್ಟು ಅದ್ಭುತವಾಗಿದೆ- ಅದು ಮುಖ್ಯವಾದುದು. ಈ ಅನ್ವೇಷಣೆಯಲ್ಲಿ, ನಾಗನಿಗೆ ಬಹಳ ಮಹತ್ವವಿದೆ. ಅವನಂತೆ ಇರುವುದೆಂದರೆ- ನಿಶ್ಚಲತೆ, ಲವಲವಿಕೆ ಮತ್ತು ಉನ್ಮತ್ತತೆ- ಈ ಎಲ್ಲವೂ ಒಬ್ಬರಲ್ಲಿರಬೇಕು. ಜೀವನವು ನಿಮಗೆ ಅತಿ ಉನ್ನತ ರೀತಿಯಲ್ಲಿ ಸಂಭವಿಸುತ್ತದೆ- ಇದನ್ನೇ ನಾಗರ ಪಂಚಮಿ ಪ್ರತಿನಿಧಿಸುತ್ತದೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ : Nag Panchami 2023: ನಾಗರ ಪಂಚಮಿ ದಿನ ಜೀವಂತ ಹಾವಿಗೆ ಹಾಲು ಕುಡಿಸಬಹುದೆ?

ಚಿಕ್ಕಬಳ್ಳಾಪುರದಲ್ಲಿ ಮಾನವ ವ್ಯವಸ್ಥೆಯಲ್ಲಿನ ಐದು ಪ್ರಮುಖ ಚಕ್ರಗಳ ಅಭಿವ್ಯಕ್ತಿಯಾಗಿ ಯೋಗೇಶ್ವರ ಲಿಂಗವು 112-ಅಡಿ ಆದಿಯೋಗಿಯ ಬಳಿ ಸದ್ಗುರುಗಳಿಂದ ಪ್ರಾಣಪ್ರತಿಷ್ಠಾಪನೆಯಾಗಿದೆ. ಪ್ರಪಂಚದಾದ್ಯಂತ ಆಧ್ಯಾತ್ಮಿಕ ಮೂಲಸೌಕರ್ಯವನ್ನು ನಿರ್ಮಿಸುವ ಸದ್ಗುರುಗಳ ದೂರದೃಷ್ಟಿಯ ಒಂದು ಭಾಗವಾಗಿ, ಸದ್ಗುರು ಸನ್ನಿಧಿಯು, ಮಾನವಕುಲಕ್ಕೇ “ಆಧ್ಯಾತ್ಮಿಕತೆಯ ಒಂದು ಹನಿ” ಯಾಗಿದೆ. ಪ್ರಸ್ತುತದಲ್ಲಿ, ನಾಗ ಮಂಟಪ, ಆದಿಯೋಗಿ ಮತ್ತು ಯೋಗೇಶ್ವರ ಲಿಂಗ ಇಲ್ಲಿವೆ. ಮುಂದೆ, ಲಿಂಗ ಭೈರವಿ ದೇವಿ, ನವಗ್ರಹ, ಎರಡು ತೀರ್ಥಕುಂಡಗಳು ಮತ್ತು ಯೋಗ ಸಭಾಂಗಣಗಳು ಬರಲಿವೆ ಎಂದೂ ಪ್ರಕಟಣೆ ತಿಳಿಸಿದೆ.

ನಾಗಮಂಡಲಕ್ಕೆ ನೋಂದಾಯಿಸಲು ಭೇಟಿ ನೀಡಿ: https://sadhguru.co/nagamandala-kan-ig

ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ: https://www.youtube.com/watch?v=xY5NIi9Tf2w

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Rain News : ಭಾನುವಾರ ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಬೆಂಗಳೂರು: ಭಾನುವಾರ ರಾಯಚೂರು ನಗರದಾದ್ಯಂತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ (Rain News) ವಾತಾವರಣ ಕೂಲ್‌ (Karnataka weather Forecast) ಆಗಿತ್ತು. ದಿಢೀರ್‌ ಮಳೆಯಿಂದಾಗಿ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಕೊಂಚ ನಿರಾಸೆಯಾಗಿತ್ತು. ಕೆಲವಡೆ ಮಳೆಯಿಂದ ವಾಹನ ಸವಾರರು ಪರದಾಡಿದರು.

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಗೋಕರ್ಣದಲ್ಲಿ 2, ಶಿರಾಲಿ ಹಾಗೂ ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಮುಂದಿನ 24 ಗಂಟೆ ಮಳೆ ಸಾಧ್ಯತೆ

ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

Murder case : ಪೊಲೀಸ್‌ ಠಾಣೆ ಸಮೀಪವೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

VISTARANEWS.COM


on

By

murder case
Koo

ಚಿಕ್ಕಬಳ್ಳಾಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ (Murder Case) ನಡೆದಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಸಮೀಪವೇ ಈ ಕೃತ್ಯ ನಡೆದಿದೆ. ಶೇಖರ್ ಎಂಬಾತ ಕೊಲೆಯಾದವನು. ಶಿವಕುಮಾರ್ (35) ಕೊಲೆಗೈದ ಆರೋಪಿಯಾಗಿದ್ದಾನೆ.

ಅನೈತಿಕ ಸಂಬಂಧ, ಕಿರುಕುಳ, ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಡುರಸ್ತೆಯಲ್ಲಿ ಶೇಖರ್‌ ಮೇಲೆ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆ ನಿವಾಸಿ ಶಿವಕುಮಾರ್ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೇಖರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಶಿವಕುಮಾರ್‌ ಪತ್ತೆಗೆ ಚಿಕ್ಕಬಳ್ಳಾಪುರ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

ಬೆಳಗಾವಿ: ಬೆಂಗಳೂರು ಹಾಗೂ ಮಂಡ್ಯದಲ್ಲಿ ಕೆಲ ತಿಂಗಳ ಹಿಂದೆ ಹೆಣ್ಣು ಭ್ರೂಣಹತ್ಯೆಯ ಬೃಹತ್‌ ಜಾಲವೊಂದು ಪತ್ತೆಯಾದ ಬೆನ್ನಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲೂ ನಕಲಿ ವೈದ್ಯನು ಭ್ರೂಣ ಹತ್ಯೆ (Foeticide) ಮಾಡಿರುವ ಪ್ರಕರಣವು ಬಯಲಾಗಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿದೆ. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಸಹಾಯಕನಾಗಿರುವ ರೋಹಿತ್ ಕುಪ್ಪಸಗೌಡರ್ ಎಂಬಾತನನ್ನು ಕರೆದುಕೊಂಡು ಹೋಗಿರುವ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಕಲಿ ವೈದ್ಯನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿದೆ. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಭ್ರೂಣಗಳನ್ನು ಹೂಳುತ್ತಿದ್ದ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆತ ತೋರಿಸಿದ ಜಾಗದಲ್ಲಿ ಶೋಧ ನಡೆಸಲಾಗುತ್ತಿದೆ.

ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ. ಈತನನ್ನು ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿರುವ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ. ರೋಹಿತ್‌ ತೋರಿಸಿದ ಜಾಗದಲ್ಲಿಯೇ ಒಂದು ಭ್ರೂಣ ಪತ್ತೆಯಾಗಿರುವ ಕಾರಣ ಇನ್ನಷ್ಟು ಭ್ರೂಣಗಳು ಇರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್‌ ಗಫಾರ್‌ ಲಾಡಖಾನ್‌ ಹಿಂದೆ ಯಾರಿದ್ದಾರೆ? ಜಾಲದಲ್ಲಿ ಯಾರೆಲ್ಲ ತೊಡಗಿಸಿಕೊಂಡಿದ್ದಾರೆ? ಫಾರ್ಮ್‌ಹೌಸ್‌ ಸೇರಿ ಇನ್ನೂ ಹಲವು ಪ್ರದೇಶಗಳಲ್ಲಿ ಭ್ರೂಣಗಳನ್ನು ಹೂಳಲಾಗಿದೆಯೇ ಎಂಬುದು ಸೇರಿ ಹತ್ತಾರು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲೂ ಭ್ರೂಣ ಹತ್ಯೆ ಪ್ರಕರಣಗಳು ಬಯಲಾಗಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಪ್ರಮಾಣ ತಗ್ಗಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ (Karnataka Weather Forecast) ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯ ಸಿಂಚನ

ಉತ್ತರ ಒಳನಾಡು, ಕರಾವಳಿಯ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂ.ಮೀ, ಉಡುಪಿ, ಶೋರಾಪುರ, ಸೈದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಗೋಕರ್ಣ, ಕುಮಟಾ , ಕೆಂಭಾವಿ , ತಾವರಗೇರಾ , ಮುದಗಲ್, ಮಂಠಾಳದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೋಟ, ಹೊನಾವರ ವೀಕ್ಷಣಾಲಯ , ಕಾರ್ಕಳ, ಸಿದ್ದಾಪುರ, ಮಂಕಿ, ಯಲ್ಲಾಪುರ, ಯಡ್ರಾಮಿ ಸೇರಿದಂತೆ ದೇವದುರ್ಗ, ಕವಡಿಮಟ್ಟಿ ಎ.ಆ‌ರ್.ಜಿ, ಮಸ್ಕಿ, ಕಲಬುರಗಿ ವೀಕ್ಷಣಾಲಯ , ಕಕ್ಕೇರಿ, ಕಮಲಾಪುರ, ಮಾನ್ವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 16ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಒಳನಾಡಿನ ಕೆಲವು ಸ್ಥಳಗಳಲ್ಲಿ ಕೆಲವೊಮ್ಮೆ ಗುಡುಗು ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ತಗ್ಗಿದೆ. ಮೀನುಗಾರರಿಗೆ ನೀಡಲಾಗಿದ್ದ ಸೂಚನೆಯು ಮುಗಿದಿದೆ.

ರಾಜಧಾನಿ ಬೆಂಗಳೂರಿನಲ್ಲಿ ತಣ್ಣನೆಯ ವಾತಾವರಣ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಪ್ರತ್ಯೇಕ ಸ್ಥಳದಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

Vitamin C foods

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂಟಲಲ್ಲಿ ನೋವಿದ್ದರೆ ಬೆಚ್ಚಗಿನ ಶುಂಠಿಯ ಕಷಾಯಕ್ಕೆ ಕೊಂಚ ಜೇನುತುಪ್ಪ ಸೇರಿಸಿ ಕುಡಿದರೆ ಆರಾಮ ದೊರೆತೀತು.

iamge of Zinc Foods

ಜಿಂಕ್‌ ಆಹಾರಗಳು

ನಮ್ಮ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸತುವಿನಂಶ ಇರುವ ಆಹಾರಗಳು ಸಹ ಅಗತ್ಯ. ಇದನ್ನು ಸಿ ಜೀವಸತ್ವದಂತೆ ಹೇರಳವಾಗಿ ಪಡೆಯಲಾಗದು. ಬದಲಿಗೆ, ಹಲವಾರು ಆಹಾರಗಳಿಂದ ಮಿಲಿ ಗ್ರಾಂ ಗಳ ಲೆಕ್ಕದಲ್ಲಿಯೇ ಪಡೆಯಬೇಕು ನಾವು. ಇದಕ್ಕಾಗಿ ಅಣಬೆಗಳು, ಪಾಲಕ್‌ ಸೊಪ್ಪು, ದ್ವಿದಳ ಧಾನ್ಯಗಳು, ಮೊಸರು, ಹಾಲು, ಗೋಡಂಬಿ, ಕುಂಬಳಕಾಯಿ ಬೀಜ, ಶೇಂಗಾ, ಬಾದಾಮಿಯಂಥ ಆಹಾರಗಳ ಮೂಲಕ ಈ ಸತ್ವವನ್ನು ಪಡೆಯಬಹುದು.

ಒಮೇಗಾ 3 ಕೊಬ್ಬಿನಾಮ್ಲ

ಇದು ನಮ್ಮ ಮೆದುಳು ಮತ್ತು ಹೃದಯದ ಯೋಗಕ್ಷೇಮ ನೋಡಿಕೊಳ್ಳುವುದಷ್ಟೇ ಅಲ್ಲ, ಸೋಂಕುಗಳನ್ನು ದೂರ ಮಾಡುವ ಸಾಮರ್ಥ್ಯವನ್ನೂ ಹೊಂದಿದೆ. ಇದಕ್ಕಾಗಿ ಮಳೆಗಾಲದ ಆರಂಭದಲ್ಲಿ ದೊರೆಯುವ ಬೆಣ್ಣೆ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿ. ಜೊತೆಗೆ ವಾಲ್‌ನಟ್‌, ಬಾದಾಮಿ, ಅಗಸೆಬೀಜ, ಕೊಬ್ಬಿರುವ ಮೀನುಗಳನ್ನು ಸೇವಿಸುವುದರಿಂದ ಒಮೇಗಾ ೩ ಕೊಬ್ಬಿನಾಮ್ಲ ವಿಫುಲವಾಗಿ ಲಭಿಸುತ್ತದೆ.

Probiotic foods

ಪ್ರೊಬಯಾಟಿಕ್‌ ಆಹಾರಗಳು

ನಮ್ಮ ಜೀರ್ಣಾಂಗಗಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರವೇ ದೇಹದ ಪ್ರತಿರೋಧಕ ಶಕ್ತಿ ಬಲವಾಗಿರುತ್ತದೆ. ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆ ಭರಪೂರ ಇದ್ದಷ್ಟೂ ದೇಹ ರೋಗಮುಕ್ತವಾಗಿರುತ್ತದೆ ಎನ್ನುತ್ತವೆ ಅ‍ಧ್ಯಯನಗಳು. ಹಾಗಾಗಿ ಪ್ರೊಬಯಾಟಿಕ್‌ ಆಹಾರಗಳು ನಮ್ಮ ದೇಹಕ್ಕೆ ಬೇಕೇಬೇಕು. ಇದಕ್ಕಾಗಿ ಮೊಸರು, ಮಜ್ಜಿಗೆಯಂಥ ಹುದುಗು ಬರಿಸಿದ ಆಹಾರಗಳನ್ನು ಪ್ರತಿದಿನ ಸೇವಿಸಿ.

infusions

ಕಷಾಯಗಳು

ಶೀತದ ದಿನಗಳಲ್ಲಿ ದೇಹವನ್ನು ಬೆಚ್ಚಗೆ ಇರಿಸಿಕೊಳ್ಳುವುದಕ್ಕೆ ತರಹೇವಾರಿ ಕಷಾಯಗಳನ್ನು ಮಾಡಿಕೊಳ್ಳಬಹುದು. ಇದರಿಂದಲೂ ನಮ್ಮ ದೇಹದ ಸೋಂಕು ನಿರೋಧಕ ಶಕ್ತಿ ಪ್ರಬಲವಾಗುತ್ತದೆ. ಇದಕ್ಕಾಗಿ ಯಾವೆಲ್ಲ ವಸ್ತುಗಳನ್ನು ಉಪಯೋಗಿಸಬಹುದು ಎನ್ನುವುದಕ್ಕೆ ಉಪಯುಕ್ತ ವಿವರಗಳು ಇಲ್ಲಿವೆ. ಈ ಯಾವುದೇ ವಸ್ತುಗಳನ್ನು ಬಳಸಿ ಕಷಾಯ ಮಾಡಿಕೊಳ್ಳಬಹುದು.

Raw Turmeric with Powder Cutout

ಅರಿಶಿನ

ಇದರಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಸೋಂಕುಗಳನ್ನು ಹೊಡೆದೋಡಿಸುತ್ತದೆ

Benefits Of Ginger

ಶುಂಠಿ

ಇದರ ಜಿಂಜರಾಲ್‌ ಅಂಶದಲ್ಲಿ ಉರಿಯೂತ ಶಮನ ಮಾಡಿ, ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ

Garlic

ಬೆಳ್ಳುಳ್ಳಿ

ಇದರ ಅಲ್ಲಿಸಿನ್‌ ಅಂಶದಲ್ಲಿ ವೈರಸ್‌ ಮತ್ತು ಬ್ಯಾಕ್ಟೀರಿಯ ನಿರೋಧಕ ಗುಣವಿದೆ

Cinnamon sticks Anti Infective Foods

ದಾಲ್ಚಿನ್ನಿ ಚಕ್ಕೆ

ಇದರಲ್ಲಿರುವ ಉರಿಯೂತ ಶಾಮಕ ಸತ್ವಗಳು ರೋಗನಿರೋಧಕವೂ ಹೌದು

black pepper

ಕಾಳು ಮೆಣಸು

ಇದರ ಕ್ಯಾಪ್ಸೈಸಿನ್‌ನಲ್ಲಿ ದೇಹದ ಪ್ರತಿರೋಧಕತೆಯನ್ನು ವೃದ್ಧಿಸುವ ಸಾಮರ್ಥ್ಯವಿದೆ

cumin

ಜೀರಿಗೆ

ಇದರ ಉತ್ಕರ್ಷಣ ನಿರೋಧಕಗಳು ಸೋಂಕಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ

coriander Coriander Benefits

ಧನಿಯ

ಇದರ ಉತ್ಕರ್ಷಣ ನಿರೋಧಕ ಸತ್ವಗಳು ಸೋಂಕುಗಳನ್ನು ನಿವಾರಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina Bhavishya
ಭವಿಷ್ಯ2 mins ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ6 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ8 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ8 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ9 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ9 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ10 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ10 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ10 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ10 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ11 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ12 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ17 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌