Operation Hasta : ಸಸ್ಪೆಂಡ್‌ ಮಾಡಿದಾಕ್ಷಣ ಎಲ್ಲವೂ ಬದಲಾಗಲ್ಲ: ಎಸ್‌.ಟಿ. ಸೋಮಶೇಖರ್‌ ಖಡಕ್‌ ರಿಯಾಕ್ಷನ್ - Vistara News

ಕರ್ನಾಟಕ

Operation Hasta : ಸಸ್ಪೆಂಡ್‌ ಮಾಡಿದಾಕ್ಷಣ ಎಲ್ಲವೂ ಬದಲಾಗಲ್ಲ: ಎಸ್‌.ಟಿ. ಸೋಮಶೇಖರ್‌ ಖಡಕ್‌ ರಿಯಾಕ್ಷನ್

Operation Hasta : ಆಪರೇಷನ್‌ ಹಸ್ತದ ಬಗ್ಗೆ ಮಾಜಿ ಸಚಿವ ಎಸ್.ಟಿ. ಸೋಮಶೇಖರ್‌ ಪ್ರತಿಕ್ರಿಯೆ ನೀಡಿದ್ದು, ತಾವು ಬಿಜೆಪಿ ತೊರೆಯುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಒಂದಿಬ್ಬರನ್ನು ಉಚ್ಚಾಟನೆ ಮಾಡಿದಾಕ್ಷಣ ಎಲ್ಲವೂ ಸರಿಯಾಗುವುದಿಲ್ಲ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

VISTARANEWS.COM


on

bs yediyurappa dcm dk shivakumar cm siddaramaiah and ST Somashekhar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಸಚಿವ, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌ (Yeshwanthpur MLA ST Somashekar) ಅವರು ಆಪರೇಷನ್‌ ಹಸ್ತಕ್ಕೆ (Operation Hasta ) ಒಳಪಟ್ಟಿದ್ದಾರೆಯೇ ಎಂಬ ಚರ್ಚೆ ದಟ್ಟವಾಗಿದೆ. ಅವರ ಇತ್ತೀಚಿನ ನಡೆ ಸಹ ಇದಕ್ಕೆ ಪುಷ್ಟೀಕರಣವನ್ನು ನೀಡುತ್ತದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭೇಟಿ ಸೇರಿದಂತೆ ಅವರ ಹಲವು ಹೇಳಿಕೆಗಳು, ಬೆಂಬಲಿಗರ ನಡೆ ರಾಜ್ಯ ರಾಜಕೀಯದಲ್ಲಿ (Karnataka Politics) ಹಲವು ಬದಲಾವಣೆಗಳಾಗುವ ಮುನ್ಸೂಚನೆಯನ್ನು ಕೊಡುತ್ತಿದೆ. ಈ ನಡುವೆ ಅವರ ಮುನಿಸನ್ನು ಶಮನ ಮಾಡುವ ನಿಟ್ಟಿನಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪದ ಮೇರೆಗೆ ಇಬ್ಬರನ್ನು ಉಚ್ಚಾಟಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಟಿಎಸ್‌, ಇಬ್ಬರನ್ನು ಉಚ್ಚಾಟನೆ ಮಾಡಿದ ಕೂಡಲೇ ಒಳಗೆ ಮತ್ತು ಹೊರಗೆ ಇರುವ ಪರಿಸ್ಥಿತಿಗಳು ಬದಲಾಗುವುದಿಲ್ಲ ಎಂದು ಖಡಕ್‌ ಆಗಿಯೇ ಉತ್ತರ ಕೊಟ್ಟಿದ್ದಾರೆ.

ಆಪರೇಷನ್‌ ಹಸ್ತದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರನ್ನೂ ಉಚ್ಚಾಟನೆ ಮಾಡಿ ಎಂದು ನಾನು ಹೇಳಿಲ್ಲ. ನೆಮ್ಮದಿಯಾಗಿ ಕೆಲಸ ಮಾಡಲು ಅವಕಾಶ ನೀಡಿ ಎಂಬುದಷ್ಟೇ ನನ್ನ ಬೇಡಿಕೆ ಆಗಿದೆ. ಯಾರೋ ಇಬ್ಬರನ್ನು ಪಕ್ಷದಿಂದ ಕಿತ್ತೊಗೆದಾಕ್ಷಣ ಎಲ್ಲವೂ ಬದಲಾಗದು. ಬಿಜೆಪಿಯ ಎಲ್ಲ ವಾಟ್ಸಾಪ್ ಗ್ರೂಪಲ್ಲಿ ವಿಡಿಯೊಗಳನ್ನು ಹಾಕುತ್ತಿದ್ದಾರೆ. ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ವಲಸೆ ಬಂದವರಲ್ಲಿ ಇರುವವವರು ಇರುತ್ತಾರೆ. ಹೋಗುವವರು ಹೋಗುತ್ತಾರೆ ಎಂದೆಲ್ಲ ಹೇಳಿದ್ದಾರೆ. ಅಂತಹ ಹೇಳಿಕೆಗಳನ್ನು ನಿಲ್ಲಿಸಬೇಕು ಎಂಬುದು ನನ್ನ ವಾದವಾಗಿದೆ ಎಂದು ಎಸ್.ಟಿ. ಸೋಮಶೇಖರ್‌ ಹೇಳಿದರು.

ಇದನ್ನೂ ಓದಿ: Physical abuse : ಅಬ್ಬಾ ಇವನೆಂಥಾ ಕಾಮುಕ? ; ಅಕ್ಕ-ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 21ರ ಯುವಕ

ಚುನಾವಣೆಗೆ ಮೊದಲು ಸೋಮಶೇಖರ್ ಈಗ ಹೋಗುತ್ತಾನೆ ಅಂತೆಲ್ಲ ಹೇಳಿದ್ದರು. ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಹೋಗಲ್ಲ ಅಂತ ಹೇಳಿದ್ದೆ. ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಜತೆ ಮಾತನಾಡಿದ್ದೇ ತಪ್ಪಾ? ಸಿದ್ದರಾಮಯ್ಯ ಅವರ ಜತೆ ರಾಜಕಾರಣ ಮಾತನಾಡಿಲ್ಲ. ನಮ್ಮ ಕ್ಷೇತ್ರದ ವಿಚಾರದ ಬಗ್ಗೆ ಮಾತ್ರವೇ ಮಾತನಾಡಿದ್ದೇನೆ. ಅದಾದ ಮೇಲೆ ಸೋಮಶೇಖರ್ ಕಾಂಗ್ರೆಸ್ ಎಂಪಿಗೆ ಹೋಗುತ್ತಾನೆ. ಮಗ ಎಂಎಲ್‌ಎಗೆ ನಿಲ್ತಾನೆ
ಬಿಜೆಪಿಯಲ್ಲಿ ಅಪ್ಪ ಮಗನಿಗೆ ಟಿಕೆಟ್ ಕೊಡಲ್ಲ ಅಂತೆಲ್ಲ ಸುದ್ದಿಯಾಗಿದೆ. ಹೀಗಾಗಿ ಪಕ್ಷದ ಒಳಗೆ ಒಳ್ಳೆಯ ವಾತಾವರಣ ಸೃಷ್ಟಿ ಮಾಡಿ ಅಂತ ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಹೇಳಿದ್ದೇನೆ ಎಂದರು.

ಯಡಿಯೂರಪ್ಪ ಅವರನ್ನು ಹೊರತಾಗಿ ನಾನು ಏನೂ ಮಾಡಲ್ಲ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ‌ ಅವರು ಕರೆದಿದ್ದ ಸಭೆಗೆ ಗೈರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್.ಟಿ. ಸೋಮಶೇಖರ್, ಯಡಿಯೂರಪ್ಪ ಅವರು ನನ್ನ ಜತೆ ಮಾತನಾಡಿದ್ದಾರೆ. ನನಗೆ ತಡವಾಗಿ ಮೆಸೇಜ್ ಸಿಕ್ಕಿದೆ ಅಂತ ಹೇಳಿದೆ. ಯಡಿಯೂರಪ್ಪ ಅವರು ನಮ್ಮ ನಾಯಕರು. ನನ್ನನ್ನು ಬಿಜೆಪಿಗೆ ಕರೆತಂದವರು ಅವರೇ. ನನ್ನನ್ನು ಸಹಕಾರ ಸಚಿವನನ್ನಾಗಿ ಮಾಡಿ, ಮೈಸೂರು ಉಸ್ತುವಾರಿ ಕೂಡ ನೀಡಿದ್ದರು. ಯಡಿಯೂರಪ್ಪ ಅವರನ್ನು ಹೊರತಾಗಿ ನಾನು ಏನೂ ಮಾಡಲ್ಲ. ಬಾ ಮನೆಗೆ ಅಂತ ಕರೆದಿದ್ದಾರೆ. ಹೋಗಿ ಭೇಟಿಯಾಗಿ ಮಾತನಾಡುತ್ತೇನೆ. ದುಡುಕಿ ನಿರ್ಧಾರ ಮಾಡಬೇಡ ಅಂತ ಹೇಳಿದ್ದಾರೆ. ಏನಾಗಿದೆ ಅಂತ ಮಾಹಿತಿ ಕೊಡುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್‌ನವರು ಸಂಪರ್ಕ ಮಾಡಿದ್ದಾರೆ

ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಸ್.ಟಿ. ಸೋಮಶೇಖರ್‌, ನಾನು ಪ್ರಬಲ ನಾಯಕ ಅಲ್ಲ. ಯಶವಂತಪುರ ಕ್ಷೇತ್ರಕ್ಕೆ ಮಾತ್ರ ಸೀಮಿತ. ಯಶವಂತಪುರ ಹೊರತುಪಡಿಸಿ ಯಾವ ನಾಯಕನೂ ನಾನಲ್ಲ. ಸಮುದಾಯದ ಪ್ರಬಲ ನಾಯಕನೂ ಅಲ್ಲ. ಸಂಪರ್ಕ ಮಾಡುತ್ತಾರೆ ಅಂದರೆ ನಾನು ಕಾಂಗ್ರೆಸ್‌ನಲ್ಲಿ 20 ವರ್ಷ ಇದ್ದೆ. ಹಾಗಾಗಿ ನನ್ನ ಸಂಪರ್ಕ ಮಾಡಿದ್ದಾರೆ. ಕಳೆದ ಬಾರಿ ಚುನಾವಣೆ ಮೊದಲು ಸಂಪರ್ಕ ಮಾಡಿದ್ದರು. ನಾನು ಕಾಂಗ್ರೆಸ್‌ಗೆ ಹೋದೆನಾ? ಹೋಗಲಿಲ್ಲ. ಆದರೂ ನಾನು ಹೋಗುತ್ತಿರುವುದಾಗಿ ಕೆಲವು ಕ್ರಿಯೇಟ್ ಮಾಡುತ್ತಾರೆ. ಸೋಮಶೇಖರ್ ಹೋಗ್ತಾನೆ, ಈ ವಾರದಲ್ಲಿ ಹೋಗ್ತಾನೆ ಅಂತ ಸುದ್ದಿ ಹಬ್ಬಿಸಿದ್ದಾರೆ ಎಂದು ಹೇಳಿದರು.

ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್, ನಮಗೆ ಟಿಕೆಟ್ ಕೊಡುತ್ತಾರೋ ಇಲ್ಲವೋ, ಡಿ ಲಿಮಿಟೇಷನ್ ಮಾಡುತ್ತಾರೋ ಇಲ್ಲವೋ ಅನ್ನೋದು. ಟಿಕೆಟ್ ಆಕಾಂಕ್ಷಿಗಳಿಗೆ ಅನುಮಾನ ಇದೆ. ಈಗಾಗಲೇ ಕೆಲವರ ಜತೆ ಮಾತನಾಡಿದ್ದೇನೆ. ಯಾರು ಹೋಗುತ್ತಾರೆ ಅವರೆಲ್ಲರಿಗೂ ಮಾತನಾಡಿದ್ದೇನೆ. ಯಾವ ಕ್ಯಾಟಗಿರಿ ಆದರೆ ಏನು ನೋಡೋಣ ಅಂತ ಹೇಳಿದ್ದೇನೆ ಎಂದು ತಿಳಿಸಿದರು.

ನಮ್ಮ ಅವಧಿಯಲ್ಲಿಯೇ ಬಿಬಿಎಂಪಿ ಚುನಾವಣೆ ನಡೆಸಲು ಬಿಬಿಎಂಪಿ ಸಮಸ್ಯೆ ಇತ್ತು. ಡಿ ಲಿಮಿಟೇಷನ್ ಸಮಸ್ಯೆ ಇತ್ತು, ವಾರ್ಡ್ ವಿಂಗಡಣೆ ಆಗಿತ್ತು. ಮೀಸಲಾತಿ ಸಮಸ್ಯೆ ಆಗಿ ಸುಪ್ರೀಂ ಕೋರ್ಟ್‌ಗೆ ಹೋಗಲಾಗಿತ್ತು. ಬಿಜೆಪಿ ಸರ್ಕಾರ ಚುನಾವಣೆ ಮಾಡಲು ರೆಡಿ ಇತ್ತು ಎಂದು ಎಸ್.ಟಿ ಸೋಮಶೇಖರ್ ಹೇಳಿದರು.

ಕ್ಷೇತ್ರದ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇನೆ

ಸಿಎಂ ಭೇಟಿ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್.ಟಿ. ಸೋಮಶೇಖರ್‌, ಸಿಎಂ ಭೇಟಿಗೆ ಮೊದಲೇ ಅವಕಾಶ ಕೇಳಿದ್ದೆ. ಕ್ಷೇತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇನೆ. ಪೇಪರ್ಸ್ ತರಬೇಕು ಅಂತ ಹೇಳಿದ್ದರು. ಬಿಡಿಎ ಚೇರ್ಮನ್, ಕಾರ್ಪೋರೇಷನ್, ಕಮಿಷನರ್ ಕರೆಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು. ಹೀಗಾಗಿ ಅವರನ್ನು ಭೇಟಿ ಮಾಡಿದ್ದೇನೆ ಎಂದರು.

ತಮ್ಮ ಕ್ಷೇತ್ರಕ್ಕೆ 7.64 ಕೋಟಿ ಅನುದಾನ ಬಿಡುಗಡೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್.ಟಿ. ಸೋಮಶೇಖರ್‌, ನಮ್ಮ ಕ್ಷೇತ್ರದಲ್ಲಿ ಸಮಸ್ಯೆ ಆಗಿತ್ತು. ಒಂದೇ ಒಂದು ಬೋರ್ವೆಲ್ ಕೊರೆಸಲು ಆಗಿರಲಿಲ್ಲ. ಕುಡಿಯುವ ನೀರು ಕೊಡಲು ಆಗಿರಲಿಲ್ಲ. ಧರಣಿ ಕೂರುವುದಾಗಿ ಹೇಳಿದ್ದೆ. ಈ ಸಂಬಂಧ ಬಿಬಿಎಂಪಿ ಕಮಿಷನರ್ ಹಾಗೂ ರಾಕೇಶ್ ಸಿಂಗ್ ಅವರಿಗೂ ಮಾತನಾಡಿದ್ದೆ. ಗಾಡಿಯಲ್ಲಿ ನೀರು ಕೊಡುವುದಕ್ಕೂ ಸಮಸ್ಯೆ ಆಗಿತ್ತು. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಳಿಯೂ ಮಾತನಾಡಿದ್ದೆ. ಕೆಂಪೇಗೌಡ ಬಡಾವಣೆ ವೀಕ್ಷಣೆಗೆ ಬಂದಿದ್ದರು. ಆಗ ವಾಸ್ತವ ಸ್ಥಿತಿ ಹೇಳಿದ್ದೆ ಎಂದು ತಿಳಿಸಿದರು.

ಇದನ್ನೂ ಓದಿ: Gruha Lakshmi Scheme : ಆಗಸ್ಟ್‌ 30ಕ್ಕೆ ಗೃಹಲಕ್ಷ್ಮಿ ದುಡ್ಡು ಬರುತ್ತೆ, ನಿಮ್ಗೂ ಹಣ ಬೇಕೆಂದ್ರೆ ತಕ್ಷಣವೇ ಹೀಗೆ ಮಾಡಿ!

ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್‌ ಹೋದರೆ ಮುಂದೇನು? ಲೋಕಸಭಾ ಚುನಾವಣೆಗೆ ಸಮಸ್ಯೆ ಆಗುವುದಿಲ್ಲವೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್.ಟಿ. ಸೋಮಶೇಖರ್‌, ಕಾರ್ಪೊರೇಷನ್ ವಾರ್ಡಿಗೆ ಹಲವರು ಆಕಾಂಕ್ಷಿಗಳು ಇದ್ದಾರೆ. ಹಲವು ಜಾತಿ, ಸಮುದಾಯದವರಿದ್ದಾರೆ. ಸಂಘಟನೆಗೆ ಸಮಸ್ಯೆ ಆಗಲ್ಲ. ಎಲ್ಲರಿಗೂ ಕ್ಯಾಟಗಿರಿ ಚೇಂಜ್ ಮಾಡಬಹುದು ಎಂಬ ಆತಂಕ ಇದೆ. ಇಲ್ಲಿ ಯಾವುದೇ ಸಮಸ್ಯೆ ಆಗಲ್ಲ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

police constable : 3 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಕಾನ್ಸ್‌ಟೇಬಲ್‌ ನಾಪತ್ತೆ; ಪಾಳು ಬಾವಿಯಲ್ಲಿ ಶವವಾಗಿ ಪತ್ತೆ

Missing Case : ಮೂರು ತಿಂಗಳ ಹಿಂದೆಷ್ಟೇ ಮದುವೆ ಆಗಿದ್ದ ಮಡಿವಾಳ ಠಾಣೆ ಕಾನ್ಸ್‌ಟೇಬಲ್‌ (police constable) ಪಾಳುಬಾವಿಯಲ್ಲಿ ಶವವಾಗಿ (Dead Body Found)ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

police constable commits suicide
Koo

ಬೆಂಗಳೂರು: ನಾಪತ್ತೆಯಾಗಿದ್ದ (Missing Case) ಕಾನ್ಸ್‌ಟೇಬಲ್‌ (police constable) ಪಾಳು ಬಾವಿಯಲ್ಲಿ ಶವವಾಗಿ (Dead Body Found) ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ. 26ರಂದು ನಾಪತ್ತೆ ಆಗಿದ್ದರು.

2020ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ ಕಾನ್ಸ್‌ಟೇಬಲ್‌ ಶಿವರಾಜ್‌ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ ಕಳೆದ 26ರಂದು ಶಿವರಾಜ್‌ ಯಾರ ಸಂಪರ್ಕಕ್ಕೂ ಸಿಗದೆ ಏಕಾಏಕಿ ನಾಪತ್ತೆ ಆಗಿದ್ದರು. ಹೀಗಾಗಿ ಶಿವರಾಜ್‌ ಸಹೋದರ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದೂರು ನೀಡಿದ್ದರು. ಸಹೋದರ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮದುವೆಯಾದ ಮೂರೇ ತಿಂಗಳಿಗೆ ಪತಿ-ಪತ್ನಿ ದೂರ

ಕೌಟುಂಬಿಕ ಕಾರಣಕ್ಕೆ ಮನನೊಂದು ಶಿವರಾಜ್‌ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನವು ಶುರುವಾಗಿದೆ. ಯಾಕೆಂದರೆ ಮೂರು ತಿಂಗಳ ಹಿಂದಷ್ಟೇ ಶಿವರಾಜ್, ವಾಣಿ ಎಂಬಾಕೆಯನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಬಳಿಕ ಪತಿ-ಪತ್ನಿ ದೂರುವಾಗಿದ್ದರು.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ಶಿವರಾಜ್‌ ಹಾಗು ಕುಟುಂಬದವರ ವಿರುದ್ಧ ವಾಣಿ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೇಲಿಂದ ಮೇಲೆ ಬೆದರಿಕೆ ಹಾಕಿದ್ದಳು. ಕರ್ತವ್ಯಕ್ಕೆ ಹೊರಟ ಶಿವರಾಜ್ ನಾಪತ್ತೆಯಾಗಿದ್ದ, ಪತ್ನಿ ವಾಣಿ ಕಿರುಕುಳದಿಂದ ಬೇಸತ್ತು ಹೋಗಿದ್ದ ಎಂದು ಶಿವರಾಜ್ ಸಹೋದರ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದೀಗ ನಾಪತ್ತೆಯಾಗಿದ್ದ ಮಡಿವಾಳ ಠಾಣೆ ಕಾನ್ಸ್‌ಟೇಬಲ್‌ ಶವವಾಗಿ ಪತ್ತೆಯಾಗಿದ್ದಾರೆ. ಶವ ಪತ್ತೆಯಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಳು ಬಾವಿಯಲ್ಲಿ ಬಿದ್ದಿದ್ದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

New Criminal Law: ಹಾಸನ ರೂರಲ್ ಪೊಲೀಸ್ ಠಾಣೆಯಲ್ಲಿ ರಾಜ್ಯದ ಈ ಮೊದಲ ಬಿಎನ್ಎಸ್ ಪ್ರಕರಣ ಬೆಳಗ್ಗೆ 6.30‌ಕ್ಕೆ ದಾಖಲಾಗಿದೆ. ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಇದನ್ನು ಕಾಯಿದೆಯ ಸೆಕ್ಷನ್ 281, 106 ಅಡಿ ದಾಖಲು ಮಾಡಿಕೊಳ್ಳಲಾಗಿದೆ.

VISTARANEWS.COM


on

new criminal law
Koo

ಹಾಸನ: ರಾಜ್ಯದಲ್ಲಿ ಮೊದಲ ಬಿಎನ್ಎಸ್ (BNS FIR) ಪ್ರಕರಣ ಹಾಸನದಲ್ಲಿ (Hassan) ದಾಖಲಾಗಿದೆ. ಇಂದಿನಿಂದ ದೇಶಾದ್ಯಂತ ಜಾರಿಯಾಗುತ್ತಿರುವ ನೂತನ ಅಪರಾಧ ಕಾಯಿದೆ (New Criminal law) ಭಾರತೀಯ ನ್ಯಾಯ ಸಂಹಿತೆಯ (Bharatiya Nyaya Sanhita) ಅಡಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಮಹಿಳೆಯೊಬ್ಬರ ಸಾವಿಗೆ ಕಾರಣನಾದ ಚಾಲಕನ ಮೇಲೆ ಪ್ರಯೋಗಿಸಲ್ಪಟ್ಟಿದೆ.

ಹಾಸನ ರೂರಲ್ ಪೊಲೀಸ್ ಠಾಣೆಯಲ್ಲಿ ರಾಜ್ಯದ ಈ ಮೊದಲ ಬಿಎನ್ಎಸ್ ಪ್ರಕರಣ ಬೆಳಗ್ಗೆ 6.30‌ಕ್ಕೆ ದಾಖಲಾಗಿದೆ. ವೈದ್ಯ ಶಂಕರೇಗೌಡ ಎಂಬವರು ನೀಡಿದ ದೂರಿನ ಮೇಲೆ ಇದನ್ನು ಕಾಯಿದೆಯ ಸೆಕ್ಷನ್ 281, 106 ಅಡಿ ದಾಖಲು ಮಾಡಿಕೊಳ್ಳಲಾಗಿದೆ. ಸಾಗರ್ ಎಂಬ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಈತ ಅತಿ ವೇಗ ಹಾಗು ನಿರ್ಲಕ್ಷ್ಯತನದಿಂದ ವಾಹನ ಚಾಲನೆ ಮಾಡಿ ಮಹಿಳೆಯ ಸಾವಿಗೆ ಕಾರಣನಾಗಿದ್ದಾನೆ ಎಂದು ದೂರಲಾಗಿದೆ.

ದೂರು ನೀಡಿದ ವೈದ್ಯರ ಅತ್ತೆಯಾದ ಇಂದು ಎಂಬ ಮಹಿಳೆ ಮೃತಪಟ್ಟಿದ್ದಾರೆ. ಹಾಸನದ ಹಳೆಬೀಡು ರಸ್ತೆ ಸೀಗೇಗೇಟ್ ಹತ್ತಿರ ಸೇತುವೆಯಿಂದ ಕೆಳಗೆ ಕಾರು ಪಲ್ಟಿಯಾಗಿತ್ತು. ಬೆಂಗಳೂರು ಏರ್‌ಪೋರ್ಟ್‌ನಿಂದ ಶಂಕರೇಗೌಡನರ ಅತ್ತೆ ಇಂದು, ‌ಮಾವ ಯೋಗೇಶ್ ಅವರನ್ನು ಚಾಲಕ ಸಾಗರ್ ಪಿಕಪ್ ಮಾಡಿದ್ದ. ಅಪಘಾತದಲ್ಲಿ ಯೋಗೇಶ್ ಬಚಾವ್ ಆಗಿದ್ದರೆ, ಇಂದು ಸಾವಿಗೀಡಾಗಿದ್ದರು.

ಬೀದಿ ವ್ಯಾಪಾರಿಯ ಮೇಲೆ ಮೊದಲ ಕೇಸ್

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದೆ (New Criminal Law). ಹೊಸ ಕಾನೂನಿನ ಪ್ರಕಾರ ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.

ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.‌

ಭಾನುವಾರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಬೀದಿ ಬದಿ ವ್ಯಾಪಾರಿ ಭಾನುವಾರ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದ ಬಳಿಯ ಪಾದಚಾರಿ ಮೇಲ್ಸೇತುವೆಯ ಕೆಳಗೆ ತನ್ನ ಅಂಗಡಿಯನ್ನು ನಿಲ್ಲಿಸಿದ್ದ ಎಂದು ಹೇಳಲಾಗಿದೆ. “ಆ ವ್ಯಾಪಾರಿಯು ಬೀದಿಯಲ್ಲಿ ನೀರಿನ ಬಾಟಲಿ, ಬೀಡಿ ಮತ್ತು ಸಿಗರೇಟುಗಳನ್ನು ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆತನ ಅಂಗಡಿ ಅಡ್ಡಿಯಾಗುತ್ತಿತ್ತು. ರಸ್ತೆಯಿಂದ ಅಂಗಡಿಯನ್ನು ತೆರವುಗೊಳಿಸುವಂತೆ ಸಬ್ ಇನ್ಸ್‌ಪೆಕ್ಟರ್ ಆ ವ್ಯಾಪಾರಿ ಬಳಿ ಹಲವು ಬಾರಿ ಮನವಿ ಮಾಡಿದರು. ಆದರೆ ಆತ ಅದಕ್ಕೆ ಒಪ್ಪಲಿಲ್ಲ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವ್ಯಾಪಾರಿಯನ್ನು ಬಿಹಾರದ ಪಾಟ್ನಾ ಮೂಲದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Continue Reading

ತುಮಕೂರು

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Tumkur News : ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ನಿರಾಕರಿಸಿದ್ದಕ್ಕೆ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಉಪಾಧ್ಯಕ್ಷ ಹಲ್ಲೆ (Assault Case) ನಡೆಸಿದ್ದಾನೆ.

VISTARANEWS.COM


on

By

tumkur News Assault Case
Koo

ತುಮಕೂರು: ಮದುವೆ ಸಮಾರಂಭಕ್ಕೆ ಹೋಗಿದ್ದಾಗ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ (Assault Case) ನಡೆಸಲಾಗಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ (Tumkur news) ಘಟನೆ ನಡೆದಿದೆ.

ತುರುವೇಕೆರೆ ತಾಲೂಕಿನ ತಂಡಗ ಗ್ರಾಮ ಪಂಚಾಯತಿಯ ಸದಸ್ಯ ಮೋಹನ್ ಎಂಬಾತನ ಮೇಲೆ ಉಪಧ್ಯಾಕ್ಷ ಚನ್ನಬಸವೇಗೌಡನಿಂದ ಹಲ್ಲೆ ನಡೆದಿದೆ. ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ಮೋಹನ್ ನಿರಾಕರಿಸಿದ್ದರು ಎನ್ನಲಾಗಿದೆ. ಹೀಗಾಗಿ ಸಹಿ ಹಾಕುವಂತೆ ಮೋಹನ್‌ಗೆ ಚನ್ನಬಸವೇಗೌಡ ಒತ್ತಾಯಿಸಿದ್ದರು.

ಸಹಿ ಹಾಕಲು ಒಪ್ಪದಿದ್ದಾಗ ಚನ್ನಬಸವೇಗೌಡ ಸಿಟ್ಟಿನಲ್ಲಿ ಮುಖಕ್ಕೆ ಹೊಡೆದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಸದ್ಯ ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

ಕಚೇರಿಗೆ ನುಗ್ಗಿ ದರದರನೆ ಎಳೆದು ಪಿಡಿಓ ಥಳಿಸಿದ ಪುಂಡರ ಗ್ಯಾಂಗ್‌!

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ ಕರ್ತವ್ಯನಿರತ ಪಿಡಿಓ (PDO) ಮೇಲೆ ಹಲ್ಲೆ (Assault Case) ನಡೆದಿದೆ. ಪಿಡಿಓ ವಿವೇಕ್ ತೇಜಸ್ವಿ ಎಂಬುವವರು ಹಲ್ಲೆಗೊಳಗಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸ ಯಳನಾಡು ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಘಟನೆ ನಡೆದಿದೆ. ಹಲ್ಲೆ ನಡೆಸುವ ವಿಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳೆದ ಜೂನ್‌ 29ರ ಬೆಳಗ್ಗೆ ಹೊಸಯಳನಾಡು ಗ್ರಾಮ ಪಂಚಾಯತಿಗೆ ಆಲೂರು ಗ್ರಾಮದ ಬಾಲ ರಾಮಯ್ಯ, ಅಜ್ಜಯ್ಯ ಸಿದ್ದರಾಮೇಶ್ವರ, ಬೋರ್ ವೆಲ್ ರಾಮಚಂದ್ರಪ್ಪ ಎಂಬುವವರು ಬಂದಿದ್ದರು. ಕಚೇರಿಯೊಳಗೆ ನುಗ್ಗಿ ಬಂದವರೇ ಪಿಡಿಒ ವಿವೇಕ್‌ ತೇಜಸ್ವಿ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ನಿನ್ನಿಂದ ಆಲೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸರಿಯಾಗಿ ನೀರು ಸರಬಾರಜು ಆಗುತ್ತಿಲ್ಲ ಎಂದು ಹೇಳಿ ದರದರನೇ ಹೊರಗಡೆ ಎಳೆದುಹೋಗಿದ್ದಾರೆ.

ಬಳಿಕ ಹತ್ತಾರು ಮಂದಿ ವಿವೇಕ್‌ ಅವರನ್ನು ಸುತ್ತುವರೆದು ಜಗಳವಾಡಿ ಮನಬಂದಂತೆ ಥಳಿಸಿದ್ದಾರೆ. ಇತ್ತ ವಿವೇಕ್‌ ತೇಜಸ್ವಿ ಅವರ ಕೂಗಾಟ ಕೇಳಿ ಹೊರ ಬಂದ ಇತರೆ ಸಿಬ್ಬಂದಿ ಜಗಳವನ್ನು ಬಿಡಿಸಿದ್ದಾರೆ. ಈ ವೇಳೆ ನಿನಗೆ ಕೆಲಸ ಮಾಡಲು ಬಿಡುವುದಿಲ್ಲ ಎಂದೇಳಿ ಬೆದರಿಕೆಯನ್ನು ಹಾಕಿದ್ದಾರೆ.

ಹಲ್ಲೆ ಬಳಿಕ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಇವರ ವಿರುದ್ಧ ಐಪಿಸಿ 323, 504, 353, 506 ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆಹಾಕಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

Assault case : ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಹೊಡೆದಾಟ ಬಡಿದಾಟ ನಡೆದಿದೆ. ಪುಡಿ ರೌಡಿಗಳ ಗ್ಯಾಂಗ್‌ ವಾರ್‌ ನಡೆದಿದ್ದು, ದೂರು-ಪ್ರತಿದೂರು ದಾಖಲಾಗಿದೆ. ಇತ್ತ ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಉಪಾಧ್ಯಕ್ಷ ಚಪ್ಪಲಿ ಎಸೆದು ಹಲ್ಲೆ ನಡೆಸಿದ್ದಾನೆ.

VISTARANEWS.COM


on

By

Assault Case in Hubballi
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ನಡುವೆ ಗ್ಯಾಂಗ್ ವಾರ್ (Gang War) ನಡೆದಿದ್ದು, ಎರಡು ಗ್ಯಾಂಗ್‌ಗಳಿಂದ ದೂರು ಪ್ರತಿದೂರು ದಾಖಲಾಗಿದೆ. ಗನ್ ತೋರಿಸಿ‌ ಕೊಲೆ ಮಾಡಲು ಯತ್ನಿಸಿರುವ ಆರೋಪದಡಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (Assault case) ದಾಖಲಾಗಿದೆ.

ಸುಂದರ್, ಪಿಲೋಮಿನ್, ಚಂದ್ರ ಪೌಲ್ ಎಂಬುವವರ ವಿರುದ್ಧ ಹುಬ್ಬಳ್ಳಿಯ ಸೆಟ್ಲಮೆಂಟ್ ನಿವಾಸಿ ಅಭಿಷೇಕ್ ಜಾಧವ್ ದೂರು ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಶಾಮ್ ಜಾಧವ ಹಾಗೂ ಪಾಲಿಕೆ ಸದಸ್ಯೆ ಮಂಜುಳಾ ಜಾಧವ ಅವರ ಪುತ್ರ ಅಭಿಷೇಕ್ ಜಾಧವ್‌ಗೆ ಈ ಆರೋಪಿಗಳು ಹುಬ್ಬಳ್ಳಿಗೆ ನಾವೇ ಡಾನ್‌ಗಳು ಎಂದು‌ ಧಮ್ಕಿ ಹಾಕಿದ್ದರಂತೆ.

ಇತ್ತ ಸುಂದರ ಪೌಲ್ ಆ್ಯಂಡ್ ಟೀಮ್ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಅಭಿಷೇಕ್‌ ಜಾಧವ್ ಗ್ಯಾಂಗ್‌ನವರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ನಾಲ್ವರ ವಿರುದ್ಧ ದೂರು ನೀಡಿದ್ದಾರೆ. ಹಲವು ಕ್ರಿಮಿನಲ್ ಆರೋಪ ಹೊತ್ತಿರುವ ಈ ಎರಡು ಗ್ಯಾಂಗ್‌ಗಳ ನಡುವೆ ಕಲಹ ಶುರುವಾಗಿದೆ. ಈ ಮಧ್ಯೆ ಪರಸ್ಪರ ಅವಾಜ್ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ಕ್ಷುಲ್ಲಕ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಮಾರಾಮಾರಿ

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮಾರಣಾಂತಿಕ ಹಲ್ಲೆ ಮಾಡಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಹುಬ್ಬಳ್ಳಿಯ ಸೆಟ್ಲ್‌ಮೆಂಟ್‌‌ ಏರಿಯಾದಲ್ಲಿ ಪ್ರಜ್ವಲ ಬೆಳ್ಳಿಗಟ್ಟಿ, ವಿಕಾಸ ಭಜಂತ್ರಿ ಎಂಬುವವರ ಸ್ವಯಂ ಜಾಧವ, ಪ್ರಜ್ವಲ ಜಾಧವ ಎಂಬುವವರು ಗುಂಪು ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ.

assault Case in hubballi

ಕ್ರಿಮಿನಲ್ ಹಿನ್ನೆಲೆ ಇರುವವರಿಗೆ ಹೊಂದಾಣಿಕೆಗೆ ಅವಕಾಶ ಕೊಟ್ಟು ಪೊಲೀಸರು ಸುಮ್ಮನಾಗಿದ್ದಾರೆ ಎಂದು ಹಲ್ಲೆಗೊಳಗಾದ ಗುಂಪು ಆರೋಪಿಸಿವೆ. ಇನ್ನೂ ಹಲ್ಲೆಗೊಳಗಾದವರು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪೊಲೀಸರು ಗಾಯಾಳುಗಳ MLC ಮಾಡಿ ಸುಮ್ಮನಾಗಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆತ

ಮದುವೆ ಸಮಾರಂಭಕ್ಕೆ ಹೋಗಿದ್ದಾಗ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ಘಟನೆ ನಡೆದಿದೆ.

ತುರುವೇಕೆರೆ ತಾಲೂಕಿನ ತಂಡಗ ಗ್ರಾಮ ಪಂಚಾಯತಿಯ ಸದಸ್ಯ ಮೋಹನ್ ಮೇಲೆ ಉಪಧ್ಯಾಕ್ಷ ಚನ್ನಬಸವೇಗೌಡನಿಂದ ಹಲ್ಲೆ ನಡೆದಿದೆ. ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ಮೋಹನ್ ನಿರಾಕರಿಸಿದ್ದರು ಎನ್ನಲಾಗಿದೆ.

ಹೀಗಾಗಿ ಸಹಿ ಹಾಕುವಂತೆ ಮೋಹನ್‌ಗೆ ಚನ್ನಬಸವೇಗೌಡ ಒತ್ತಾಯಿಸಿದ್ದರು. ಸಹಿ ಹಾಕಲು ಒಪ್ಪದಿದ್ದಾಗ ಚನ್ನಬಸವೇಗೌಡ ಸಿಟ್ಟಿನಲ್ಲಿ ಮುಖಕ್ಕೆ ಹೊಡೆದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಸದ್ಯ ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
police constable commits suicide
ಬೆಂಗಳೂರು3 mins ago

police constable : 3 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಕಾನ್ಸ್‌ಟೇಬಲ್‌ ನಾಪತ್ತೆ; ಪಾಳು ಬಾವಿಯಲ್ಲಿ ಶವವಾಗಿ ಪತ್ತೆ

New Rules
ವಾಣಿಜ್ಯ11 mins ago

New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

new criminal law
ಕ್ರೈಂ30 mins ago

New Criminal Law: ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ ಹಾಸನದಲ್ಲಿ ದಾಖಲು, ಯಾವ ಕೇಸ್?‌

tumkur News Assault Case
ತುಮಕೂರು46 mins ago

Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

Amith Shah
ದೇಶ47 mins ago

Amit Shah: ಹೊಸ ಕ್ರಿಮಿನಲ್ ಕಾನೂನಿನಲ್ಲಿ ಶಿಕ್ಷೆಯ ಬದಲು ನ್ಯಾಯಕ್ಕೆ ಪ್ರಾಧಾನ್ಯತೆ; ಅಮಿತ್ ಶಾ

Parliament Sessions
ದೇಶ48 mins ago

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Meghana Raj didn't want to enter the film Father Sundarraj
ಸ್ಯಾಂಡಲ್ ವುಡ್54 mins ago

Meghana Raj: ಮೇಘನಾ ರಾಜ್‌  ಫಿಲ್ಮ್​ಗೆ ಎಂಟ್ರಿ ಕೊಟ್ಟಿದ್ದು ಇಷ್ಟವಿರಲಿಲ್ಲ; ಬೇಸರ ಹೊರಹಾಕಿದ್ದ ಅಪ್ಪ ಸುಂದರರಾಜ್​ 

Assault Case in Hubballi
ಹುಬ್ಬಳ್ಳಿ1 hour ago

Assault case: ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಗ್ಯಾಂಗ್ ವಾರ್! ನಡುರಸ್ತೆಯಲ್ಲೆ ಹೊಡಿಬಡಿ

DK ShivaKumar
ಪ್ರಮುಖ ಸುದ್ದಿ1 hour ago

DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

M.R.Jayaram
ಪ್ರಮುಖ ಸುದ್ದಿ1 hour ago

M.R.Jayaram: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ22 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌