Answer Sheet: ಪಾಸು ಮಾಡುವಂತೆ ಉತ್ತರ ಪತ್ರಿಕೆಯಲ್ಲಿ ನೋಟುಗಳನ್ನಿಟ್ಟ ವಿದ್ಯಾರ್ಥಿ - Vistara News

ದೇಶ

Answer Sheet: ಪಾಸು ಮಾಡುವಂತೆ ಉತ್ತರ ಪತ್ರಿಕೆಯಲ್ಲಿ ನೋಟುಗಳನ್ನಿಟ್ಟ ವಿದ್ಯಾರ್ಥಿ

Answer Sheet: ಪರೀಕ್ಷೆಯಲ್ಲಿ ಪಾಸು ಮಾಡುವಂತೆ ವಿದ್ಯಾರ್ಥಿಯೊಬ್ಬ ಉತ್ತರ ಪತ್ರಿಕೆಯಲ್ಲಿ ನೋಟುಗಳನ್ನಿಟ್ಟ ಮಾಹಿತಿ ಟ್ವಿಟರ್‌ನಲ್ಲಿ ವೈರಲ್ ಆಗಿದೆ.

VISTARANEWS.COM


on

Notes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪರೀಕ್ಷೆ ಪಾಸಾಗಲು ವಿದ್ಯಾರ್ಥಿಗಳು ನಕಲು ಮಾಡುವ ಪ್ರಯತ್ನಗಳು ನಡೆಯುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ವಿದ್ಯಾರ್ಥಿಯು ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು(Answer Sheet) ಮೌಲ್ಯಮಾಪನ ಮಾಡುವ ಶಿಕ್ಷಕರಿಗೆ (Teacher) ಲಂಚ ನೀಡುವ ಪ್ರಯತ್ನ ಮಾಡಿದ್ದಾನೆ. ತಾನು ಬರೆದ ಉತ್ತರ ಪತ್ರಿಕೆಯಲ್ಲಿ ನೋಟು ಇಟ್ಟು(Currency in Answer Sheet), ಪಾಸು ಮಾಡುವಷ್ಟು ಅಂಕಗಳನ್ನು ನೀಡುವಂತೆ ವಿನಂತಿಸಿಕೊಂಡಿದ್ದಾನೆ. ಈ ಸಂಬಂಧ ಪೋಸ್ಟ್ ಟ್ವಿಟರ್‌ನಲ್ಲಿ(ಈಗ ಎಕ್ಸ್- X App) ವೈರಲ್ ಆಗಿದೆ(Viral News). ಐಪಿಎಸ್ ಅಧಿಕಾರಿ ಅರುಣ್ ಬೋಥ್ರಾ ಅವರು ಈ ಕುರಿತಾದ ಮಾಹಿತಿಯನ್ನು ಟ್ವಿಟರ್‌ನಲ್ಲಿ ಷೇರ್ ಮಾಡಿದ್ದಾರೆ. ಅವರ ಪೋಸ್ಟ್‌ನಲ್ಲಿ ವಿದ್ಯಾರ್ಥಿ ಲಗತಿಸಿದ್ದ ನೋಟುಗಳನ್ನು ಕಾಣಬಹುದಾಗಿದೆ. ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರ ಮಧ್ಯೆ ಚರ್ಚೆಗೆ ಕಾರಣವಾಗಿದೆ.

ಈ ಚಿತ್ರವನ್ನು ಟೀಚರ್ ಕಳುಹಿಸಿದ್ದಾರೆ. ಪಾಸಿಂಗ್ ಮಾರ್ಕ್ಸ್ ಕೊಡುವಂತೆ ಟೀಚರ್‌ಗೆ ವಿನಂತಿಯೊಂದಿಗೆ ಈ ನೋಟುಗಳನ್ನು ಉತ್ತರ ಪ್ರತಿಕೆಯಲ್ಲಿ ಇಡಲಾಗಿತ್ತು. ಈ ಚಿತ್ರವು ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ವ್ಯವಸ್ಥೆಯ ಬಗ್ಗೆ ಸಾಕಷ್ಟು ಮಾತನಾಡುತ್ತದೆ ಎಂದು ಐಪಿಎಸ್ ಅಧಿಕಾರಿ ಬೋಥ್ರಾ ಅವರು ಟ್ವೀಟ್ ಮಾಡಿದ್ದಾರೆ.

ಈ ಪೋಸ್ಟ್ ಆಗಸ್ಟ್ 21ರಂದು ಷೇರ್ ಮಾಡಲಾಗಿದೆ. ಈವರೆಗೂ ಒಂದು ಲಕ್ಷ ವಿವ್ಸ್ ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ. 1200ಕ್ಕೂ ಹೆಚ್ಚು ಲೈಕ್ಸ್ ದೊರೆತಿದ್ದು, ಸಾಕಷ್ಟು ಜನರು ಈ ಪೋಸ್ಟ್‌ಗೆ ಕಮೆಂಟ್ ಮಾಡುತ್ತಿದ್ದಾರೆ.

ನನ್ನ ಪೇಪರ್ ತಿದ್ದುಪಡಿ ದಿನಗಳಲ್ಲಿ ಇದು ನನಗೆ ಕನಿಷ್ಠ ಮೂರು ಬಾರಿ ಸಂಭವಿಸಿದೆ! 20 ವರ್ಷಗಳ ಹಿಂದೆ ನನ್ನ ಸಹೋದ್ಯೋಗಿಗಳಿಗೆ ಇದೇ ರೀತಿಯಾಗಿತ್ತು. ಹಣವು ಸಾಮಾನ್ಯವಾಗಿ ಪರೀಕ್ಷೆಯ ಪ್ರಶ್ನೆಗಳಿಗೆ ಉತ್ತರಗಳ ಬದಲಿಗೆ ದುಃಖದ ಕಥೆಯ ನಿರೂಪಣೆಯೊಂದಿಗೆ ಇರುತ್ತದೆ. ಅಂತಹ ವಿದ್ಯಾರ್ಥಿಗಳು ಸಾಮಾನ್ಯವಾಗಿ ವಿಫಲರಾಗುತ್ತಾರೆ ಎಂದು ಹೇಳಬೇಕಾಗಿಲ್ಲ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Viral video: ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಬೆಂಕಿ ಎಸೆದು ಕೋಲಾಹಲ ಸೃಷ್ಟಿಸಿದ ಮಹಿಳೆ!

ನನ್ನ ಅಜ್ಜಿ ಶಿಕ್ಷಕರಾಗಿದ್ದರು. ನಾನು ಚಿಕ್ಕವನಿದ್ದಾಗ ಮತ್ತು ಒಂದು ಬೇಸಿಗೆಯಲ್ಲಿ ಭೇಟಿ ನೀಡಿದಾಗ ಅವರು ಮನೆಗೆ ಬೋರ್ಡ್ ಪರೀಕ್ಷೆಯ ಉತ್ತರದ ಪ್ರತಿಗಳನ್ನು ಪರೀಕ್ಷಿಸಲು ತರುತ್ತಿದ್ದರು. ಇದು 15-20 ವರ್ಷಗಳ ಹಿಂದಿನ ಮಾತು. ಆಗ 20ರಿಂದ 100 ರೂ.ವರೆಗೆ ನೋಟುಗಳು ಉತ್ತರ ಪತ್ರಿಕೆಯಲ್ಲಿ ಇರುವುದನ್ನು ಗಮನಿಸಿದ್ದೇನೆ. ಆದರೂ , ಅವರ ಬರೆದ ಉತ್ತರಕ್ಕೆ ಅನುಗುಣವಾಗಿಯೇ ಅವರು ಮಾರ್ಕ್ಸ್ ನೀಡುತ್ತಿದ್ದರು ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದರು.

Viral News : ಅಂತ್ಯಸಂಸ್ಕಾರ ಮಾಡಲಾಗಿದ್ದ ಮಗಳು ವಿಡಿಯೊ ಕಾಲ್‌ ಮಾಡಿದಳು!

ಅಂತ್ಯಸಂಸ್ಕಾರವಾಗಿದ್ದ ಮಗಳು ಕೆಲವು ದಿನಗಳ ನಂತರ ಕುಟುಂಬಕ್ಕೆ ವಿಡಿಯೊ ಕಾಲ್‌ ಮಾಡಿ ತಾನಿನ್ನೂ ಬದುಕಿದ್ದೇನೆ ಎಂದು ಹೇಳಿರುವ ವಿಚಿತ್ರ ಘಟನೆ ಬಿಹಾರದಲ್ಲಿ ನಡೆದಿದೆ. ಈ ವಿಚಾರ ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡಿದ್ದು, ಭಾರೀ ವೈರಲ್‌ (Viral News) ಆಗಿದೆ.

ಪುರ್ಣಿಯಾ ಪಟ್ಟಣದಲ್ಲಿ ವಾಸವಾಗಿದ್ದ ಅಂಶು ಕುಮಾರಿ ಹೆಸರಿನ ಯುವತಿ ತಿಂಗಳ ಹಿಂದೆ ತನ್ನ ಪ್ರಿಯತಮನೊಂದಿಗೆ ಓಡಿ ಹೋಗಿದ್ದಳು. ಆಕೆ ಓಡಿಹೋದ ನಂತರ ಆಕೆಗಾಗಿ ಇಡೀ ಕುಟುಂಬ ಎಲ್ಲ ಕಡೆಗಳಲ್ಲಿ ಹುಡುಕಾಡಿತ್ತು. ಮಗಳು ಕಾಣೆಯಾಗಿರುವುದಾಗಿ ಪೊಲೀಸರಿಗೂ ದೂರು ನೀಡಲಾಗಿತ್ತು. ಕಳೆದ ವಾರ ಸ್ಥಳೀಯ ನೀರಿನ ಕಾಲುವೆಯಲ್ಲಿ ಯುವತಿಯ ದೇಹವೊಂದು ಸಿಕ್ಕಿತ್ತು. ಶವದ ಗುರುತು ಹಿಡಿಯುವ ಪರಿಸ್ಥಿತಿಯಲ್ಲಿ ಇರಲಿಲ್ಲವಾದ್ದರಿಂದ ಪೊಲೀಸರು ಅಂಶು ಕುಮಾರಿ ಕುಟುಂಬವನ್ನು ಕರೆಸಿದ್ದರು. ಸ್ಥಳಕ್ಕೆ ಬಂದ ಅಂಶು ಕುಮಾರಿ ಕುಟುಂಬ ಶವ ತೊಟ್ಟಿದ್ದ ಉಡುಪನ್ನು ನೋಡಿ ಅದು ತಮ್ಮದೇ ಮಗಳು ಎಂದು ಹೇಳಿದ್ದರು.

ನಂತರ ಶವವನ್ನು ಅಂಶು ಕುಮಾರಿ ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು. ಮಗಳ ಸಾವಿನಿಂದಾಗಿ ಅಂಶು ಕುಮಾರಿ ತಂದೆ ತೀವ್ರ ನೊಂದಿದ್ದರು. ಅವರ ಕೈನಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಸಾಧ್ಯವಾಗಿಲ್ಲವಾದ್ದರಿಂದ ಯುವತಿಯ ಅಜ್ಜನೇ ಅಂತಿಮ ಕಾರ್ಯಗಳನ್ನು ನಡೆಸಿದ್ದರು.

ಇದಾದ ಕೆಲ ದಿನಗಳಲ್ಲಿ ಅಂಶು ಕುಮಾರಿ ತನ್ನ ಕುಟುಂಬಸ್ಥರಿಗೆ ವಿಡಿಯೊ ಕಾಲ್‌ ಮಾಡಿದ್ದಾಳೆ. “ನಾನಿನ್ನೂ ಬದುಕೇ ಇದ್ದೇನೆ” ಎಂದು ಅಂಶು ಕುಮಾರಿ ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ತಾನು ಹುಡುಗನೊಬ್ಬನನ್ನು ಪ್ರೀತಿಸಿದ್ದು, ಆತನನ್ನು ಮದುವೆಯಾಗಲೆಂದು ಆತನೊಂದಿಗೆ ಓಡಿಬಂದಿರುವುದಾಗಿ ತಿಳಿಸಿದ್ದಾಳೆ. ಸದ್ಯ ಅತ್ತೆ ಮಾವ ಮತ್ತು ಆ ಯುವಕನೊಂದಿಗೆ ಜಾನಕಿ ನಗರದಲ್ಲಿ ವಾಸವಿರುವುದಾಗಿ ತಿಳಿಸಿದ್ದಾಳೆ. ಪೊಲೀಸರು ಕೂಡ ಆಕೆಗೆ ಕರೆ ಮಾಡಿ ವಿಚಾರವನ್ನು ಸ್ಪಷ್ಟಪಡಿಸಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ನ್ಯೂಸ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

Stampede Tips and Tricks: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂಥ ಕಾಲ್ತುಳಿತ ಉಂಟಾದಾಗ ನಮ್ಮನ್ನು ನಾನು ರಕ್ಷಿಸಿಕೊಳ್ಳುವುದು ಹೇಗೆ? ಪ್ರಾಣಾಪಾಯದಿಂದ ಪಾರಾಗುವುದು ಹೇಗೆ? ಇಲ್ಲಿದೆ ವಿಡಿಯೊ ಸಹಿತ ವಿವರಣೆ.

VISTARANEWS.COM


on

By

Viral Video
Koo

ಹತ್ರಾಸ್‌ನಲ್ಲಿ (Hathras) ಇತ್ತೀಚೆಗೆ (Stampede Tips and Tricks) ಬಾಬಾ ಭೋಲೆ (Baba Bhole) ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂತಹ ಕಾಲ್ತುಳಿತ ಸಂದರ್ಭಗಳಲ್ಲಿ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬಹುದು ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ (Viral Video) ಶೇರ್‌ ಆಗುತ್ತಿದೆ.

ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ (satsang) ಮುಖ್ಯ ಭಾಷಣಕಾರರಾಗಿ ಭೋಲೆ ಬಾಬಾ ಆಗಮಿಸಿದ್ದರು. ಭೋಲೆ ಬಾಬಾ ಅವರು ಅವರು ಅಲ್ಲಿಗೆ ಆಗಮಿಸಿದಾಗ ಭಕ್ತರು ಆ ಪ್ರದೇಶದ ಮಣ್ಣನ್ನು ಸಂಗ್ರಹಿಸಲು ಪ್ರಾರಂಭಿಸಲು ತೊಡಗಿದಾಗ ಕಾಲ್ತುಳಿತ ಉಂಟಾಗಿತ್ತು.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಜನರು ಕಾಲ್ತುಳಿತದಿಂದ ಹೇಗೆ ಬದುಕಬಹುದು ಎಂಬುದನ್ನು ವಿವರಿಸಲು ತಜ್ಞರು ಸ್ವಯಂಸೇವಕರ ಗುಂಪಿನ ಸಹಾಯವನ್ನು ಬಳಸಿದ್ದಾರೆ.
ಜನರು ಕಾಲ್ತುಳಿತದಲ್ಲಿ ಹೇಗೆ ಸಿಲುಕಿಕೊಂಡರು ಎಂಬುದನ್ನು ಪ್ರದರ್ಶಿಸುವ ದೃಶ್ಯವೂ ಇದರಲ್ಲಿದೆ. ಇದಲ್ಲದೆ ಇಂತಹ ಸಂದರ್ಭಗಳು ಜನಸಮೂಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನೂ ವಿವರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಜನರು ಎಂದಾದರೂ ಇಂತಹ ಪರಿಸ್ಥಿತಿಯಲ್ಲಿ ಸಿಲುಕಿಕೊಂಡರೆ ಬದುಕುಳಿಯಬಹುದು ಎಂಬುದನ್ನು ತಜ್ಞರು ವಿವರಿಸಿದ್ದಾರೆ. ಇದಕ್ಕಾಗಿ ಪರಿಣಿತರು ಸಹಾಯಕವಾದ ಸಲಹೆಗಳು ಮತ್ತು ಭಂಗಿಗಳನ್ನು ಹೇಳಿದ್ದಾರೆ. ಇಂಥ ಕಾಲ್ತುಳಿತ ಸಂದರ್ಭದಲ್ಲಿ ಅಡ್ಡಲಾಗಿ ಮಲಗುವ ಮೂಲಕ ಮತ್ತು ಎರಡೂ ಕೈಗಳಿಂದ ತಲೆ ಮತ್ತು ಮುಖವನ್ನು ರಕ್ಷಿಸಿಕೊಳ್ಳುವ ಮೂಲಕ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ವಿಡಿಯೊದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಗಿದೆ.

ಕಾಲ್ತುಳಿತದಲ್ಲಿ ಸಿಲುಕಿಕೊಳ್ಳುವ ಜನರು ವಿವಿಧ ಕಡೆಯಿಂದ ಒಂದೇ ಬಾರಿಗೆ ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಆಗ ಉಸಿರು ಕಟ್ಟುತ್ತದೆ. ಪಕ್ಕೆಲುಬುಗಳು, ಹೃದಯ ಮತ್ತು ಪ್ರಮುಖ ಅಂಗಗಳಿಗೆ ಹಾನಿಯುಂಟಾಗುತ್ತದೆ. ಈ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುವ ಭಂಗಿಯನ್ನು ತಜ್ಞರು ವಿವರಿಸಿದ್ದಾರೆ.

ಹತ್ರಾಸ್‌ನಲ್ಲಿ ಏನಾಗಿತ್ತು?

ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ಪ್ರದೇಶದ ರಾತಿ ಭಾನ್‌ಪುರ್ ಗ್ರಾಮದಲ್ಲಿ ಇತ್ತೀಚೆಗೆ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಪ್ರಚಾರಕರು ಆಯೋಜಿಸಿದ್ದ ‘ಸತ್ಸಂಗ’ದಲ್ಲಿ ಲಕ್ಷಾಂತರ ಜನರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿತ್ತು. ಧಾರ್ಮಿಕ ಸಭೆ ಮುಗಿದ ಅನಂತರ ಕಾಲ್ತುಳಿತ ಉಂಟಾಗಿತ್ತು.


ಘಟನೆಯ ಬಳಿಕ ಸ್ವಯಂ ಘೋಷಿತ ಬೋಧಕ ಬಾಬಾ ನಾರಾಯಣ ಹರಿ ಅಲಿಯಾಸ್ ಸಾಕರ್ ವಿಶ್ವ ಹರಿ ‘ಭೋಲೆ ಬಾಬಾ’ ಅವರು ಬೆಂಗಾವಲು ಪಡೆಯೊಂದಿಗೆ ಗ್ರಾಮವನ್ನು ತೊರೆದಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ‘ಸೇವಕ್’ ಎಂದೂ ಕರೆಯಲ್ಪಡುವ ಹಲವಾರು ಸ್ವಯಂಸೇವಕರು ಭೋಲೆ ಬಾಬಾ ಅವರ ಬೆಂಗಾವಲು ಪಡೆ ವಾಹನ ರಸ್ತೆ ದಾಟುವಾಗ ರಸ್ತೆಯ ಎರಡೂ ಬದಿಗಳಲ್ಲಿ ನಿಂತಿದ್ದರು.

ಈ ಕುರಿತು ಮಾಹಿತಿ ನೀಡಿರುವ ಪ್ರತ್ಯಕ್ಷದರ್ಶಿ ಗೋಪಾಲ್ ಕುಮಾರ್, ಬಾಬಾ ಅವರು ಬೈಪಾಸ್ ಮಾಡುವ ಮೂಲಕ ಗೊತ್ತುಪಡಿಸಿದ ಮಾರ್ಗದಿಂದ ಆಗಮಿಸಿ, ನಿರ್ಗಮಿಸಿದರು. ಅವರ ಸುತ್ತಲೂ ವಾಹನಗಳಿದ್ದವು ಮತ್ತು ಹೆದ್ದಾರಿಯ ಒಂದು ಭಾಗವು ಭಕ್ತರು ಮತ್ತು ವಾಹನಗಳಿಂದ ತುಂಬಿ ಬಹುತೇಕ ಜಾಮ್ ಆಗಿತ್ತು ಎಂದು ಹೇಳಿದರು.

ಬಾಬಾ ಅವರ ವಾಹನವು ಹೆದ್ದಾರಿಯನ್ನು ತಲುಪುತ್ತಿದ್ದಂತೆ ನೂರಾರು ಭಕ್ತರು ಅವರ ಪಾದದ ಅಡಿಯ ಮಣ್ಣು ಪಡೆಯಲು ಅವರ ಕಾರಿನ ಕಡೆಗೆ ಧಾವಿಸಿದರು. ಇದರಲ್ಲಿ ಕೆಲವರು ಬಿದ್ದರು. ಬೃಹತ್ ಜನಸಮೂಹವು ಹೆದ್ದಾರಿಯತ್ತ ಧಾವಿಸಿದ್ದು, ಬಿದ್ದವರಲ್ಲಿ ಕೆಲವರಿಗೆ ಮೇಲಕ್ಕೆ ಎಳಲೂ ಸಾಧ್ಯವಾಗಲಿಲ್ಲ. ಇದು ಕಾಲ್ತುಳಿತಕ್ಕೆ ಕಾರಣವಾಯಿತು. ಅವರಲ್ಲಿ ಕೆಲವರು ಸತ್ತರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಪೊಲೀಸರು ಆರು ಜನರು ಸೇರಿ ಎಲ್ಲಾ ಸೇವಾದಾರರನ್ನು ಬಂಧಿಸಿದ್ದರೆ ಎಂದು ತಿಳಿಸಿದರು.

ಪ್ರಮುಖ ಆರೋಪಿ ಪ್ರಕಾಶ್ ಮಧುಕರ್ ಕುರಿತು ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ಪೊಲೀಸರು ಬಂಧಿಸಿದ್ದಾರೆ. ಭೋಲೆ ಬಾಬಾ ಅವರ ಹೆಸರಿನಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ ಕೇಳದ ಕಾರಣ ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಐಜಿ (ಅಲಿಗಢ ರೇಂಜ್) ಶಲಭ್ ಮಾಥುರ್ ತಿಳಿಸಿದ್ದಾರೆ.

Continue Reading

ದೇಶ

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Deadly Attack: ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Deadly Attack
Koo

ಚಂಢಿಗಡ: ಪಂಜಾಬ್‌ನ ಶಿವಸೇನೆ ಮುಖಂಡ(Shivsena Leader)ನ ಮೇಲೆ ನಾಲ್ವರು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ(Deadly Attack) ನಡೆಸಿರುವ ಘಟನೆ ಲುಧಿಯಾನದಲ್ಲಿ ನಡೆದಿದೆ. ಶಿವಸೇನೆ ನಾಯಕ ಸಂದೀಪ್‌ ಥಾಪರ್‌ ಅಲಿಯಾಸ್‌ ಗೋರಾ ಮೇಲೆ ಸ್ಕೂಟರ್‌ನಲ್ಲಿ ಬಂದ ನಿಹಾಂಗ್ ಉಡುಪಿನಲ್ಲಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ವೈರಲ್‌(Viral Video) ಆಗಿದೆ.

ವೈರಲ್‌ ವಿಡಿಯೋದಲ್ಲೇನಿದೆ?

ಥಾಪರ್‌ ಆಸ್ಪತ್ರೆಯಿಂದ ಹೊರ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಆತನನ್ನು ಹಿಂಬಾಲಿಸಲು ಶುರು ಮಾಡುತ್ತಾರೆ. ಆಗ ದಾಳಿಕೋರರಲ್ಲಿ ಒಬ್ಬ ಕತ್ತಿಯಿಂದ ಥಾಪರ್ ತಲೆಯ ಮೇಲೆ ಬಿಡದೇ ಹೊಡೆಯಲು ಶುರು ಮಾಡುತ್ತಾನೆ. ಥಾಪರ್ ಕೈ ಜೋಡಿಸಿ ಬಿಟ್ಟು ಬಿಡಿ ಎಂದು ಅಂಗಾಲಾಚುತ್ತಿದ್ದರೂ ಅದನ್ನು ಲೆಕ್ಕಿಸದೇ ಆತನ ಮೇಲೆ ನಿರಂತರ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ನಿಹಾಂಗ್ ಕತ್ತಿಯಿಂದ ದಾಳಿ ಮುಂದುವರಿಸಿದಾಗ ಶಿವಸೇನಾ ಪಂಜಾಬ್ ನಾಯಕ ಬ್ಯಾಲೆನ್ಸ್‌ ಕಳೆದುಕೊಂಡು ಸ್ಕೂಟರ್ ಸಮೇತ ರಸ್ತೆಯಲ್ಲಿ ಬಿದ್ದಿದ್ದಾರೆ. ಅಲ್ಲೇ ಇದ್ದ ಪ್ರಯಾಣಿಕರು ಆಘಾತದಿಂದ ನೋಡುತ್ತಿದ್ದಂತೆ ದಾಳಿಕೋರರು ಸ್ಕೂಟರ್​​ನಲ್ಲಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ಅನೇಕ ಜನ ಥಾಪರ್‌ ಸಹಾಯಕ್ಕೆ ಬರಲೇ ಇಲ್ಲ. ಟ್ರಸ್ಟ್‌ನ ಸಂಸ್ಥಾಪಕ-ಅಧ್ಯಕ್ಷ ರವೀಂದರ್ ಅರೋರಾ ಅವರ ನಾಲ್ಕನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಥಾಪರ್ ಅವರು ಸಂವೇದನಾ ಟ್ರಸ್ಟ್ ಎಂಬ ಎನ್‌ಜಿಒ ಕಚೇರಿಯಿಂದ ಸಿವಿಲ್ ಆಸ್ಪತ್ರೆ ಬಳಿ ತೆರಳಿದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಮಾರಣಾಂತಿಕ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಥಾಪರ್‌ನನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿಂದ ಅವರನ್ನು ಸ್ಥಳೀಯ ದಯಾನಂದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಯಿತು. ಅಪರಿಚಿತ ದಾಳಿಕೋರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಜಸ್ಕಿರಂಜಿತ್ ಸಿಂಗ್ ತೇಜಾ ತಿಳಿಸಿದ್ದಾರೆ.

ಘಟನೆಯ ನಂತರ, ಶಿವಸೇನಾ ಪಂಜಾಬ್ ನಾಯಕರು ಸಿವಿಲ್ ಆಸ್ಪತ್ರೆಯ ಹೊರಗೆ ಜಮಾಯಿಸಿ ಪಂಜಾಬ್ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು. ಥಾಪರ್‌ಗೆ ಮೂವರು ಬಂದೂಕುಧಾರಿಗಳ ಭದ್ರತೆ ನೀಡಲಾಗಿತ್ತು. ಪೊಲೀಸರು ಒಂದು ವಾರದ ಹಿಂದೆ ಅವರ ಭದ್ರತೆಯನ್ನು ಹಿಂತೆಗೆದುಕೊಂಡರು. ಇದರ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ. ಥಾಪರ್‌ ಮೇಲಿನ ದಾಳಿಗೆ ಹಿಂದೂ ಸಂಘಟನೆ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಹಿಂದೂ ಮುಖಂಡರಿಗೆ ಸರ್ಕಾರ ಭದ್ರತೆ ನೀಡುತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯ ಮೇಲೆ ಇಂತಹ ಕ್ರೂರ ದಾಳಿ ಖಂಡನೀಯ. ಇದು ನಿವಾಸಿಗಳಲ್ಲಿ ಭೀತಿ ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

ದೇಶ

Lalu Prasad Yadav: ಮುಂದಿನ ತಿಂಗಳು ಮೋದಿ ರಾಜೀನಾಮೆ; ಲಾಲು ಪ್ರಸಾದ್‌ ಯಾದವ್‌ ಸ್ಫೋಟಕ ಭವಿಷ್ಯ

Lalu Prasad Yadav: ರಾಷ್ಟ್ರೀಯ ಜನತಾದಳದ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಲು ಪ್ರಸಾದ್‌ ಯಾದವ್‌ ಅವರು ಮಾತನಾಡಿದರು. ಇದೇ ವೇಳೆ ಅವರು, ಮುಂದಿನ ತಿಂಗಳು ನರೇಂದ್ರ ಮೋದಿ ಸರ್ಕಾರ ಪತನವಾಗಲಿದೆ. ಹಾಗಾಗಿ, ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಿರಬೇಕು ಎಂಬುದಾಗಿ ಸೂಚಿಸಿದ್ದಾರೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Lalu Prasad Yadav
Koo

ಪಟನಾ: ಟಿಡಿಪಿ, ಜೆಡಿಯು ಸೇರಿ ಹಲವು ಪಕ್ಷಗಳ ಒಕ್ಕೂಟವಾದ ಎನ್‌ಡಿಎ ಮೈತ್ರಿಕೂಟವು ಕೇಂದ್ರದಲ್ಲಿ ಸರ್ಕಾರ ರಚಿಸಿದೆ. ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ನರೇಂದ್ರ ಮೋದಿ ಸರ್ಕಾರ (Narendra Modi Government) ಪತನವಾಗುತ್ತದೆ ಎಂದೇ ಪ್ರತಿಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಮೊದಲಿಗೆ ಮಮತಾ ಬ್ಯಾನರ್ಜಿ, ನಂತರ ಮಲ್ಲಿಕಾರ್ಜುನ ಖರ್ಗೆ ಅವರು, “ಶೀಘ್ರದಲ್ಲೇ ಮೋದಿ ಸರ್ಕಾರ ಪತನವಾಗುತ್ತದೆ” ಎಂದು ಹೇಳಿದ್ದರು. ಈಗ ಮೋದಿ ಸರ್ಕಾರ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ (Lalu Prasad Yadav) ಭವಿಷ್ಯ ನುಡಿದಿದ್ದಾರೆ.

“ನರೇಂದ್ರ ಮೋದಿ ಸರ್ಕಾರವು ತುಂಬ ದುರ್ಬಲವಾಗಿದೆ. ಅದು ಆಗಸ್ಟ್‌ನಲ್ಲಿ ಪತನವಾಗುವ ಸಾಧ್ಯತೆ ಇದೆ. ಯಾವಾಗ ಬೇಕಾದರೂ ಮತ್ತೆ ಚುನಾವಣೆ ಘೋಷಣೆಯಾಗಬಹುದು. ಹಾಗಾಗಿ, ಪಕ್ಷದ ಕಾರ್ಯಕರ್ತರು, ಮುಖಂಡರು ಚುನಾವಣೆಗೆ ಸಜ್ಜಾಗಿರಬೇಕು” ಎಂದು ಹೇಳಿದ್ದಾರೆ. ರಾಷ್ಟ್ರೀಯ ಜನತಾದಳದ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪಕ್ಷದ ಕಾರ್ಯಕರ್ತರಿಗೆ ಹೀಗೆ ಕರೆ ನೀಡಿದ್ದಾರೆ.

15 ದಿನದಲ್ಲಿ ಪತನ ಎಂದಿದ್ದ ಖರ್ಗೆ

“ದೇಶದ ಜನರು ಬಹುಮತದ ಸರ್ಕಾರವನ್ನು ಆಯ್ಕೆ ಮಾಡಿಲ್ಲ. ಅಲ್ಪಮತದ ಸರ್ಕಾರವು ದೇಶದಲ್ಲಿದೆ. ಆಕಸ್ಮಿಕವಾಗಿ ಬಿಜೆಪಿ ಮೈತ್ರಿಕೂಟವು ಸರ್ಕಾರ ರಚಿಸಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಎನ್‌ಡಿಎ ಮೈತ್ರಿಕೂಟದ ಸರ್ಕಾರವು ಪತನವಾಗಬಹುದು” ಎಂಬುದಾಗಿ ಪಿಟಿಐ ಸುದ್ದಿಸಂಸ್ಥೆಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 240 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಟಿಡಿಪಿ, ಜೆಡಿಯು, ಎಲ್‌ಜೆಪಿ ಹಾಗೂ ಏಕನಾಥ್‌ ಶಿಂಧೆ ಬಣದ ಶಿವಸೇನೆಯ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಿದೆ.

ಮೊದಲು ಭವಿಷ್ಯ ನುಡಿದಿದ್ದು ಮಮತಾ

ಕೇಂದ್ರ ಸರ್ಕಾರವು ಶೀಘ್ರದಲ್ಲೇ ಪತನವಾಗಲಿದೆ ಎಂದು ಮೋದಿ ಪ್ರಮಾಣವಚನ ಸ್ವೀಕರಿಸುತ್ತಲೇ ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ. ಯಾವ ಸರ್ಕಾರವೂ 15 ದಿನದಲ್ಲಿ ಬೇಕಾದರು ಪತನವಾಗಬಹುದು” ಎಂದಿದ್ದರು.

ಇದನ್ನೂ ಓದಿ: Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Continue Reading

ಬೆಂಗಳೂರು

Sudha Murty: ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ; ಇದಕ್ಕೆ ಕಾರಣ ಕಾಶಿಯಂತೆ!

ಆರು ವರ್ಷಗಳ ಹಿಂದೆ ನನ್ನ ತಾಯಿ ತೀರಿಕೊಂಡಾಗ ಅವರ ಕಪಾಟಿನಲ್ಲಿದ್ದ ವಸ್ತುಗಳನ್ನು ತೆಗೆಯಲು ಕೇವಲ ಅರ್ಧ ಗಂಟೆ ಸಾಕಾಯಿತು. ಏಕೆಂದರೆ ಅವರ ಬಳಿ ಕೇವಲ 8-10 ಸೀರೆಗಳು ಮಾತ್ರ ಇದ್ದವು. ನನ್ನ ಅಜ್ಜಿ 32 ವರ್ಷಗಳ ಹಿಂದೆ ನಿಧನರಾದಾಗ ಅವರ ಬಳಿ ಕೇವಲ ನಾಲ್ಕು ಸೀರೆಗಳು ಇದ್ದವು. ಇವೆಲ್ಲ ನನ್ನ ಮೇಲೆ ಪರಿಣಾಮ ಬೀರಿವೆ ಎಂದು ಸುಧಾ ಮೂರ್ತಿ (Sudha Murty) ಅವರು ಸಂದರ್ಶನದಲ್ಲಿ ಹೇಳಿದ್ದಾರೆ.

VISTARANEWS.COM


on

By

Sudha Murty
Koo

ತಮ್ಮ ಸರಳತೆಯಿಂದಲೇ ಸುದ್ದಿಯಲ್ಲಿರುವ ರಾಜ್ಯಸಭೆಯ ನೂತನ (Rajya Sabha) ಸದಸ್ಯೆ (MP), ಲೇಖಕಿ, ಇನ್ಫೋಸಿಸ್‌ನ ಸಂಸ್ಥಾಪಕ (Infosys chairman) ನಾರಾಯಣ ಮೂರ್ತಿ (Narayana Murthy) ಅವರ ಪತ್ನಿ ಸುಧಾ ಮೂರ್ತಿ (Sudha Murty) ಅವರು ಕಳೆದ 30 ವರ್ಷಗಳಿಂದ ಒಂದೇ ಒಂದು ಸೀರೆಯನ್ನೂ ಖರೀದಿ ಮಾಡಿಲ್ಲವಂತೆ! ಇತ್ತೀಚಿಗೆ ಅವರು ನೀಡಿರುವ ಸಂದರ್ಶನವೊಂದರಲ್ಲಿ ಈ ವಿಚಾರ ಬಹಿರಂಗಪಡಿಸಿದ್ದಾರೆ.

ಇದಕ್ಕೆ ಮುಖ್ಯ ಕಾರಣ ಕಾಶಿಗೆ ಪ್ರವಾಸ ಮಾಡಿರುವುದು ಎಂಬುದಾಗಿ ಅವರು ತಿಳಿಸಿದ್ದಾರೆ! ಅಪಾರ ಸಂಪತ್ತು ಇದ್ದರೂ ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ತಮ್ಮ ಸರಳವಾದ ಉಡುಗೆ ತೊಡುಗೆಗಳಿಂದ, ಸಾಮಾನ್ಯ ಜೀವನ ಶೈಲಿಯಿಂದ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ.

ದಿ ವಾಯ್ಸ್ ಆಫ್ ಫ್ಯಾಶನ್‌ಗೆ ನೀಡಿದ ಸಂದರ್ಶನದಲ್ಲಿ ಸುಧಾ ಮೂರ್ತಿ ಅವರು ಈ ವಿಚಾರವನ್ನು ಹೀಗೆ ಹಂಚಿಕೊಂಡಿದ್ದಾರೆ: ಕಾಶಿಗೆ ಹೋದಾಗ ನೀವು ತುಂಬಾ ಇಷ್ಟಪಡುವ ಯಾವುದಾದರೂ ಒಂದನ್ನು ತ್ಯಜಿಸಬೇಕು ಎಂದು ಹೇಳಲಾಗುತ್ತದೆ. ನಾನು ಶಾಪಿಂಗ್ ಮಾಡಲು ಇಷ್ಟಪಡುತ್ತೇನೆ. ಆದ್ದರಿಂದ ಗಂಗೆಗೆ ನಾನು ಭರವಸೆ ನೀಡಿದೆ. ಈ ಜೀವಿತಾವಧಿಯಲ್ಲಿ ಶಾಪಿಂಗ್ ಅನ್ನು ತ್ಯಜಿಸುತ್ತೇನೆ!

ಪೋಷಕರು ಮತ್ತು ಅಜ್ಜಿಯರು ಕನಿಷ್ಠ ಆಸ್ತಿಯೊಂದಿಗೆ ಮಿತವ್ಯಯದ ಜೀವನವನ್ನು ನಡೆಸುತ್ತಿದ್ದರು. ಅವರ ಬದ್ಧತೆಯು ನನ್ನ ಜೀವನದ ಮೇಲೆ ಆಳವಾಗಿ ಪರಿಣಾಮ ಬೀರಿದೆ ಎಂದು 73 ವರ್ಷದ ಸುಧಾ ಮೂರ್ತಿ ಅವರು ಹೇಳಿದರು.

ಆರು ವರ್ಷಗಳ ಹಿಂದೆ ನನ್ನ ತಾಯಿ ತೀರಿಕೊಂಡಾಗ ಅವರ ಕಪಾಟಿನಲ್ಲಿದ್ದ ವಸ್ತುಗಳನ್ನು ನೀಡಲು ಕೇವಲ ಅರ್ಧ ಗಂಟೆ ತೆಗೆದುಕೊಂಡಿತು. ಏಕೆಂದರೆ ಅವರು ಅದರಲ್ಲಿ ಕೇವಲ 8- 10 ಸೀರೆಗಳನ್ನು ಮಾತ್ರ ಹೊಂದಿದ್ದರು. ನನ್ನ ಅಜ್ಜಿ 32 ವರ್ಷಗಳ ಹಿಂದೆ ನಿಧನರಾದಾಗ, ಅವರ ಬಳಿ ಕೇವಲ ನಾಲ್ಕು ಸೀರೆಗಳು ಇದ್ದವು ಎಂದು ಸುಧಾ ಮೂರ್ತಿ ಅವರು ನೆನಪಿಸಿಕೊಂಡಿದ್ದಾರೆ.


ಎರಡು ದಶಕಗಳಿಂದ ಸುಧಾ ಮೂರ್ತಿ ಅವರು ತಮ್ಮ ಸಹೋದರಿಯರು, ಆಪ್ತ ಸ್ನೇಹಿತರು ಮತ್ತು ಸಾಂದರ್ಭಿಕವಾಗಿ ಅವರು ಕೆಲಸ ಮಾಡುವ ಎನ್‌ಜಿಒಗಳು ಉಡುಗೊರೆಯಾಗಿ ನೀಡಿದ ಸೀರೆಗಳನ್ನು ಧರಿಸುತ್ತಿದ್ದಾರೆ. ಅವರ ಬಳಿ ಇರುವ ಅತ್ಯಮೂಲ್ಯವಾದ ಅಸ್ತಿ ಎಂದರೆ ಇನ್ಫೋಸಿಸ್ ಫೌಂಡೇಶನ್‌ನೊಂದಿಗಿನ ತಮ್ಮ ಕೆಲಸದ ಮೂಲಕ ತಮ್ಮ ಜೀವನವನ್ನು ಪರಿವರ್ತಿಸಲು ಸಹಾಯ ಮಾಡಿದ ಮಹಿಳೆಯರ ಗುಂಪಿನಿಂದ ನೀಡಿರುವ ಎರಡು ಕಸೂತಿ ಸೀರೆಗಳಾಗಿವೆ ಎಂದು ಸುಧಾ ಮೂರ್ತಿ ಅವರು ಹೇಳಿದರು.

ಸಹೋದರಿಯರು ಆರಂಭದಲ್ಲಿ ಪ್ರತಿ ವರ್ಷ ಒಂದೆರಡು ಸೀರೆಗಳನ್ನು ಉಡುಗೊರೆಯಾಗಿ ನೀಡುತ್ತಿದ್ದರು. ನನ್ನ ಸಂಗ್ರಹದಲ್ಲಿ ಬೆಳೆಯುತ್ತಿರುವ ಸೀರೆಗಳನ್ನು ನಿಭಾಯಿಸುವುದು ಕಷ್ಟ ಎಂದು ಅನಿಸಿದ ಮೇಲೆ ಅವರಿಗೆ ಈ ಉಡುಗೊರೆ ಬೇಡ, ನನ್ನ ಬಳಿ ಈಗಾಗಲೇ ತುಂಬಾ ಇದೆ ಎಂದು ಹೇಳಲು ಪ್ರಾರಂಭಿಸಿದ್ದಾಗಿ ಸುಧಾ ಮೂರ್ತಿ ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

ನಾನು ಈಗ ಐವತ್ತು ವರ್ಷಗಳಿಂದ ಸೀರೆಗಳನ್ನು ಧರಿಸುತ್ತಿದ್ದೇನೆ. ಅವುಗಳನ್ನು ಧರಿಸಿದ ಬಳಿಕ ಒಗೆದು, ಇಸ್ತ್ರಿ ಮಾಡಿ ಇಡುತ್ತೇನೆ. ನನ್ನ ಸೀರೆಗಳನ್ನು ನೆಲವನ್ನು ಗುಡಿಸುವಂತೆ ನಾನು ಧರಿಸುವುದಿಲ್ಲ. ಆದ್ದರಿಂದ ಅದು ಕೊಳಕಾಗುವುದಿಲ್ಲ ಮತ್ತು ದೀರ್ಘ ಬಾಳಿಕೆ ಬರುತ್ತದೆ ಎಂದು ಅವರು ಹೇಳಿದರು.

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷರಾದ ಸುಧಾ ಮೂರ್ತಿ ಅವರು ರಾಜ್ಯಸಭೆಯ ತಮ್ಮ ಚೊಚ್ಚಲ ಭಾಷಣದಲ್ಲಿ, ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮದ ಕುರಿತು ಮಾತನಾಡಿದ್ದರು. ಅಲ್ಲದೇ ಅವರು 57 ದೇಶೀಯ ಪ್ರವಾಸಿ ತಾಣಗಳನ್ನು ವಿಶ್ವ ಪರಂಪರೆಯ ತಾಣಗಳಾಗಿ ಗುರುತಿಸುವಂತೆ ಸಲಹೆ ನೀಡಿದ್ದರು.

Continue Reading
Advertisement
Shivamogga News Give top priority to cleanliness says Raju Hiriyawali
ಶಿವಮೊಗ್ಗ2 mins ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Viral Video
ದೇಶ5 mins ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ6 mins ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Deadly Attack
ದೇಶ26 mins ago

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Viral Video
Latest29 mins ago

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Anganwadi workers should make good use of mobile phones says MLA Channareddy Patil Thunnur
ಯಾದಗಿರಿ39 mins ago

Yadgiri News: ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಉಪಯುಕ್ತ : ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

congratulation ceremony for Dr. Jinadatta Hadagali on 7th July in Dharwad
ಧಾರವಾಡ40 mins ago

Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

Virat kohli
ಪ್ರಮುಖ ಸುದ್ದಿ43 mins ago

Virat Kohli : ನಿವೃತ್ತಿ ಬಳಿಕ ಪತ್ನಿ ಜತೆ ಲಂಡನ್​ಗೆ ತೆರಳಿ ನೆಲೆಸಲಿದ್ದಾರೆ ವಿರಾಟ್​ ಕೊಹ್ಲಿ,

Porn Passport
ವಿದೇಶ45 mins ago

Porn Passport: ಪೋರ್ನ್ ಪಾಸ್‌ಪೋರ್ಟ್! ಅಶ್ಲೀಲ ವಿಡಿಯೊ ವೀಕ್ಷಿಸಲು ಇದು ಕಡ್ಡಾಯ!!

Lalu Prasad Yadav
ದೇಶ47 mins ago

Lalu Prasad Yadav: ಮುಂದಿನ ತಿಂಗಳು ಮೋದಿ ರಾಜೀನಾಮೆ; ಲಾಲು ಪ್ರಸಾದ್‌ ಯಾದವ್‌ ಸ್ಫೋಟಕ ಭವಿಷ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ4 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ4 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ6 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ8 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು9 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು9 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ14 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌