Chandrayaan 3: 14 ದಿನಗಳ ನಂತರ ಭೂಮಿಗೆ ಮರಳಲಿವೆಯೇ ವಿಕ್ರಮ್, ಪ್ರಗ್ಯಾನ್? - Vistara News

ತಂತ್ರಜ್ಞಾನ

Chandrayaan 3: 14 ದಿನಗಳ ನಂತರ ಭೂಮಿಗೆ ಮರಳಲಿವೆಯೇ ವಿಕ್ರಮ್, ಪ್ರಗ್ಯಾನ್?

ಲ್ಯಾಂಡರ್ (vikram lander) ಮತ್ತು ರೋವರ್ (rover pragyan) ಎರಡನ್ನೂ 14 ದಿನ ಕಾರ್ಯಾಚರಿಸುವಂತೆಯೇ ವಿನ್ಯಾಸಗೊಳಿಸಲಾಗಿದೆ. ಅವುಗಳ ಸೆಲ್‌ಗಳು ಸೂರ್ಯನ ಬಿಸಿಲು- ಶಾಖದಿಂದ ರಿಚಾರ್ಜ್‌ ಆಗಬೇಕಿವೆ.

VISTARANEWS.COM


on

vikram lander pragyan rover
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಚಂದ್ರಯಾನ 3 (Chandrayaan 3) ನಿನ್ನೆ (ಆ.23) ಚಂದ್ರನ ದಕ್ಷಿಣ ಧ್ರುವದಲ್ಲಿ (south pole) ಯಶಸ್ವಿಯಾಗಿ ಇಳಿದಿದ್ದು, ವಿಕ್ರಮ್ ಲ್ಯಾಂಡರ್‌ನ (vikram lander) ಹೊಟ್ಟೆಯಲ್ಲಿದ್ದ ಪ್ರಗ್ಯಾನ್ ರೋವರ್‌ (rover pragyan) ಕೆಳಗಿಳಿದು ಚಲಿಸಲು ಆರಂಭಿಸಿದೆ. ಈ ಲ್ಯಾಂಡರ್‌ ಹಾಗೂ ರೋವರ್‌ 14 ದಿನ ಏನೇನು ಮಾಡಲಿವೆ, ನಂತರ ಇವುಗಳ ಕತೆ ಏನು, ಭೂಮಿಗೆ ಮರಳಲಿವೆಯೇ ಇತ್ಯಾದಿ ಕುತೂಹಲಗಳು ಈಗ ಮೂಡಿವೆ.

ಚಂದ್ರನ ಒಂದು ದಿನದಷ್ಟು ಕಾಲ ಈ ಪ್ರಗ್ಯಾನ್‌ ರೋವರ್‌ ಇಲ್ಲಿ ಹಲವು ಸರಣಿ ಪ್ರಯೋಗಗಳನ್ನು ಇಲ್ಲಿ ನಡೆಸಲಿದೆ. ಚಂದ್ರನ ಒಂದು ದಿನ ಭೂಮಿಯ 14 ದಿನಗಳಿಗೆ ಸಮವಾಗಿದೆ. ಇಷ್ಟು ದಿನ ಕಾಲ ನಡೆಸುವ ಪ್ರಯೋಗಗಳಿಂದ ಪಡೆದ ಡೇಟಾವನ್ನು ರೋವರ್ ಲ್ಯಾಂಡರ್‌ಗೆ ಕಳುಹಿಸುತ್ತದೆ, ಲ್ಯಾಂಡರ್‌ ಅದನ್ನು ಭೂಮಿಗೆ ಕಳುಹಿಸುತ್ತದೆ.

ಇಲ್ಲಿನ 14 ದಿನಗಳ ನಂತರ, ಚಂದ್ರನ ಮೇಲೆ ರಾತ್ರಿ ಕವಿಯುತ್ತದೆ. ಅದು 14 ದಿನಗಳವರೆಗೆ ಇರಲಿದೆ. ವಿಪರೀತ ಚಳಿಯ ವಾತಾವರಣವಿರುತ್ತದೆ. ವಿಕ್ರಮ್ ಮತ್ತು ಪ್ರಗ್ಯಾನ್ ಬಿಸಿಲಿನಲ್ಲಿ ಮಾತ್ರ ಕೆಲಸ ಮಾಡಬಹುದು. ಯಾಕೆಂದರೆ ಅವುಗಳ ಸೆಲ್‌ಗಳು ಸೂರ್ಯನ ಬಿಸಿಲು- ಶಾಖದಿಂದ ರಿಚಾರ್ಜ್‌ ಆಗಬೇಕಿವೆ. ಹೀಗಾಗಿ 14 ದಿನಗಳ ನಂತರ ಇವು ನಿಷ್ಕ್ರಿಯವಾಗುತ್ತವೆ. ಲ್ಯಾಂಡರ್ ಮತ್ತು ರೋವರ್ ಎರಡನ್ನೂ 14 ದಿನ ಕಾರ್ಯಾಚರಿಸುವಂತೆಯೇ ವಿನ್ಯಾಸಗೊಳಿಸಲಾಗಿದೆ.

ಆದರೆ ಚಂದ್ರನ ಮೇಲೆ ಸೂರ್ಯ ಮತ್ತೆ ಕಾಣಿಸಿಕೊಂಡಾಗ, ವಿಕ್ರಮ್ ಮತ್ತು ಪ್ರಗ್ಯಾನ್ ಮತ್ತೆ ಚೇತರಿಸಿಕೊಂಡು ಕೆಲಸ ಆರಂಭಿಸುವ ಸಾಧ್ಯತೆಯನ್ನು ಇಸ್ರೋ ವಿಜ್ಞಾನಿಗಳು ತಳ್ಳಿಹಾಕುವುದಿಲ್ಲ. ಹೀಗಾದರೆ ಅದು ಚಂದ್ರಯಾನ ಯೋಜನೆಗೆ ಬೋನಸ್ ಆಗಲಿದೆ.

ಆದರೆ ವಿಕ್ರಮ್ ಮತ್ತು ಪ್ರಗ್ಯಾನ್‌ಗಳನ್ನು ಮತ್ತೆ ಭೂಮಿಗೆ ಕರೆತರುವ ಚಿಂತನೆ- ಯೋಜನೆಯನ್ನು ಇಸ್ರೋ ಮಾಡಿಲ್ಲ. ಕೆಲಸ ಮಾಡುವಷ್ಟು ಕಾಲ ಇವುಗಳನ್ನು ಮುಂದುವರಿಸಲಾಗುತ್ತದೆ. ಕೆಲಸ ಮಾಡದ ಸ್ಥಿತಿಗೆ ತಲುಪಿದ ಬಳಿಕ ಇವುಗಳನ್ನು ಮರಳಿ ತರುವುದೂ ವ್ಯರ್ಥ.

Vikram Lander

ಚಂದ್ರಯಾನ 3ರ ಒಟ್ಟು ತೂಕ ಎಷ್ಟು?

ಚಂದ್ರಯಾನ 3ರ ಒಟ್ಟು ತೂಕ 3,900 ಕೆ.ಜಿ. ಪ್ರೊಪಲ್ಷನ್ ಮಾಡ್ಯೂಲ್ 2,148 ಕೆಜಿ ತೂಗುತ್ತದೆ. ಲ್ಯಾಂಡರ್ ಮಾಡ್ಯೂಲ್ 1,752 ಕೆಜಿ ಹಾಗೂ ರೋವರ್ 26 ಕೆಜಿ ತೂಗುತ್ತವೆ. ಚಂದ್ರಯಾನ 3 ಲ್ಯಾಂಡರ್‌ ಇಳಿದ ಜಾಗದ ಫೋಟೋವನ್ನು ಇಸ್ರೋ ಈಗಾಗಲೇ ಹಂಚಿಕೊಂಡಿದೆ. ಬುಧವಾರ ಸಂಜೆ 6.04ಕ್ಕೆ ನಡೆದ ನಿಖರವಾದ ಸಾಫ್ಟ್ ಲ್ಯಾಂಡಿಂಗ್ ನಂತರ ವಿಕ್ರಮ್ ಅದರ ಕ್ಯಾಮೆರಾದಿಂದ ಫೋಟೋ ತೆಗೆದಿದೆ. ಚಂದ್ರನ ದಕ್ಷಿಣ ಧ್ರುವದ ಭಾಗಶಃ ಸಮತಟ್ಟಾದ ಪ್ರದೇಶದಲ್ಲಿ ಲ್ಯಾಂಡರ್‌ ಇಳಿದಿದೆ.

ರೋವರ್ ಪ್ರಗ್ಯಾನ್ ಏನು ಮಾಡುತ್ತದೆ?

ಪ್ರಗ್ಯಾನ್ ಚಂದ್ರನ ಮೇಲ್ಮೈಯ ರಾಸಾಯನಿಕ ಸಂಯೋಜನೆಯನ್ನು ಪರಿಶೀಲಿಸುತ್ತದೆ. ಚಂದ್ರನ ಮಣ್ಣು ಮತ್ತು ಬಂಡೆಗಳನ್ನು ಪರೀಕ್ಷಿಸಲಿದೆ. ವಾತಾವರಣದ ಅಯಾನುಗಳು, ಎಲೆಕ್ಟ್ರಾನ್‌ಗಳ ಸಾಂದ್ರತೆ, ಧ್ರುವ ಪ್ರದೇಶದ ಸಮೀಪವಿರುವ ಚಂದ್ರನ ಮೇಲ್ಮೈಯ ಉಷ್ಣತೆ, ಗುಣಲಕ್ಷಣಗಳನ್ನು ಅಳೆಯುತ್ತದೆ.

ಇದನ್ನೂ ಓದಿ: Chandrayaan 3: ಚಂದ್ರನ ಮೇಲೆ ವಾಕಿಂಗ್‌ ಹೊರಟ ರೋವರ್‌ ಪ್ರಗ್ಯಾನ್!‌ ‘ಮೇಡ್ ಇನ್ ಇಂಡಿಯಾ, ಮೇಡ್ ಫಾರ್ ಮೂನ್’ ಎಂದ ಇಸ್ರೋ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

Tata Motors: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿರುವ ಟಾಟಾ ಮೋಟಾರ್ಸ್ ಭಾರತದ ನಂ. 1 ಎಸ್‌ಯುವಿ ಟಾಟಾ ನೆಕ್ಸಾನ್ ತನ್ನ 7ನೇ ವರ್ಷದ ವಾರ್ಷಿಕೋತ್ಸವದಂದು 7 ಲಕ್ಷ ವಾಹನ ಮಾರಾಟದ ಸಂಭ್ರಮಾಚರಣೆ ಮಾಡುತ್ತಿದ್ದು, ಈ ಪ್ರಯುಕ್ತ ರೂ.1 ಲಕ್ಷವರೆಗಿನ ಪ್ರಯೋಜನಗಳನ್ನು ಗ್ರಾಹಕರಿಗೆ ಒದಗಿಸಲಾಗುತ್ತಿದೆ.

VISTARANEWS.COM


on

Tata Motors SUV Tata Nexon 7th Anniversary Benefit up to Rs 1 lakh for customers
Koo

ಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿರುವ ಟಾಟಾ ಮೋಟಾರ್ಸ್ (Tata Motors) ಭಾರತದ ನಂ. 1 ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವದಂದು 7 ಲಕ್ಷ ಯುನಿಟ್ ಮಾರಾಟದ ಸಂಭ್ರಮಾಚರಣೆ ಮಾಡುತ್ತಿದೆ.

2017ರಲ್ಲಿ ಬಿಡುಗಡೆಯಾದ ನೆಕ್ಸಾನ್ 2021 ರಿಂದ 2023 ರವರೆಗೆ ಸತತ ಮೂರು ವರ್ಷಗಳಲ್ಲಿ ಮೂರು ಬಾರಿ ಭಾರತದ ಅತಿ ಹೆಚ್ಚು ಮಾರಾಟವಾದ ಎಸ್‌ಯುವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. 2018ರಲ್ಲಿ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಗಳಿಸಿದ ಭಾರತದ ಮೊದಲ ವಾಹನ ಎಂಬ ಖ್ಯಾತಿಯನ್ನು ನೆಕ್ಸಾನ್ ಹೊಂದಿದೆ. ಆ ಮೂಲಕ ಎಲ್ಲಾ ಭಾರತೀಯ ಆಟೋಮೊಬೈಲ್‌ಗಳಿಗೆ ಅನುಸರಿಸಲು ಹೊಸ ಮಾನದಂಡವನ್ನು ಹಾಕಿಕೊಟ್ಟಿದೆ. ಅಂದಿನಿಂದ ಇಂದಿನವರೆಗೂ ಅದರ ಗೆಲುವಿನ ಓಟ ಮುಂದುವರಿದಿದೆ.

ಇದನ್ನೂ ಓದಿ: ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಫೆಬ್ರವರಿ 2024ರಲ್ಲಿ, ಹೊಸ ಜನರೇಷನ್‌ನ ನೆಕ್ಸಾನ್ 2022ರ ಹೆಚ್ಚಿನ ಪ್ರೋಟೋಕಾಲ್ ಪ್ರಕಾರ ಜಿಎನ್‌ಸಿಎಪಿ 5 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ. ನೆಕ್ಸಾನ್.ಇವಿ ಕೂಡ ಅದೇ ದಾರಿಯಲ್ಲಿ ಸಾಗಿದ್ದು, ಇದೇ ತಿಂಗಳಲ್ಲಿ ಭಾರತ್- ಎನ್‌ಸಿಎಪಿಯಿಂದ ಪ್ರತಿಷ್ಠಿತ 5-ಸ್ಟಾರ್ ರೇಟಿಂಗ್ ಅನ್ನು ಗಳಿಸಿದೆ.

41 ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದಿರುವ ನೆಕ್ಸಾನ್‌ನ ಅತ್ಯದ್ಭುತ ಕಾರ್ಯಕ್ಷಮತೆಯು ಗಮನ ಸೆಳೆಯುತ್ತದೆ ಮತ್ತು ಅದರಿಂದಲೇ ಮಾರಾಟ ಹೆಚ್ಚಿದೆ. ಕಳೆದ ಎರಡು ವರ್ಷಗಳಲ್ಲಿ (2022 ಮತ್ತು 2023) 3 ಲಕ್ಷಕ್ಕೂ ಹೆಚ್ಚು ನೆಕ್ಸಾನ್ ಯುನಿಟ್‌ಗಳು ಮಾರಾಟವಾಗಿವೆ. ಪೆಟ್ರೋಲ್, ಡೀಸೆಲ್ ಮತ್ತು ಎಲೆಕ್ಟ್ರಿಕ್ ಎಂಬ ಬಹು ಪವರ್‌ಟ್ರೇನ್‌ಗಳಲ್ಲಿ ಲಭ್ಯವಿರುವ ನೆಕ್ಸಾನ್, ಸಮಯದ ಜತೆಗೆ ದೃಢವಾಗಿ ಬೆಳವಣಿಗೆ ಹೊಂದಿದೆ. ಸೆಗ್ಮೆಂಟಿನಲ್ಲಿ ಅತಿ ಆಕರ್ಷಕವಾದ ಅದರ ವಿನ್ಯಾಸ, ವಿಭಾಗದಲ್ಲಿಯೇ ಅತ್ಯುತ್ತಮ ಅನ್ನಿಸುವ ಫೀಚರ್‌ಗಳು ಮತ್ತು ಟೆಕ್ ಫಾರ್ವರ್ಡ್ ಗುಣಗಳಿಂದಾಗಿ ನೆಕ್ಸಾನ್ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿದೆ.

ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್‌ನ ಮುಖ್ಯ ವಾಣಿಜ್ಯ ಅಧಿಕಾರಿ ವಿವೇಕ್ ಶ್ರೀವತ್ಸ ಈ ಕುರಿತು ಮಾತನಾಡಿ, 2017 ರಲ್ಲಿ ಬಿಡುಗಡೆ ಆದಾಗಿನಿಂದಲೂ ನೆಕ್ಸಾನ್ ವಿನ್ಯಾಸ, ಸುರಕ್ಷತೆ, ಸೌಕರ್ಯ ಮತ್ತು ಚಾಲನಾ ಅನುಭವದ ವಿಚಾರದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ. ಕಳೆದ ಏಳು ವರ್ಷಗಳಲ್ಲಿ ದೊಡ್ಡದಾಗಿ ವಿಸ್ತಾರಗೊಂಡಿರುವ ನೆಕ್ಸಾನ್‌ನ ಗ್ರಾಹಕರ ಅಚಲವಾದ ಬೆಂಬಲ ಮತ್ತು ಪ್ರೀತಿಯಿಂದಾಗಿ ನೆಕ್ಸಾನ್ ಉದ್ಯಮದಲ್ಲಿ ಐಕಾನಿಕ್ ಬ್ರ್ಯಾಂಡ್ ಆಗಿ ರೂಪುಗೊಂಡಿದೆ.

ಪವರ್‌ಟ್ರೇನ್‌ಗಳು ಮತ್ತು ವೇರಿಯಂಟ್‌ಗಳ ವಿವಿಧ ಆಯ್ಕೆಗಳ ಮೂಲಕ ಗ್ರಾಹಕರ ಅಗತ್ಯ ಮತ್ತು ಆಸಕ್ತಿಗೆ ತಕ್ಕಂತೆ ನೆಕ್ಸಾನ್ ಅನ್ನು ಒದಗಿಸಲಾಗುತ್ತಿದೆ ಎಂಬುದನ್ನು ನಾವು ಖಚಿತಪಡಿಸಿಕೊಂಡಿದ್ದೇವೆ. 7 ವರ್ಷಗಳಲ್ಲಿ 7 ಲಕ್ಷ ವಾಹನ ಮಾರಾಟ ಮಾಡಿರುವ ಮಹತ್ವದ ಸಾಧನೆಯನ್ನು ಆಚರಿಸಲು ಮತ್ತು ಬೆಳೆಯುತ್ತಿರುವ ನೆಕ್ಸಾನ್ ಕುಟುಂಬಕ್ಕೆ ನಮ್ಮ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾವು ಅಸ್ತಿತ್ವದಲ್ಲಿರುವ ಮತ್ತು ಹೊಸ ಗ್ರಾಹಕರಿಗೆ ಹಲವು ಉತ್ತಮ ಪ್ರಯೋಜನಗಳನ್ನು ಒದಗಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

ದೇಶಾದ್ಯಂತ ಇರುವ ಎಲ್ಲಾ ಟಾಟಾ ಮೋಟಾರ್ಸ್ ಪ್ರಯಾಣಿಕ ವಾಹನಗಳ ವಿತರಕರು ಮತ್ತು ಶೋರೂಮ್‌ಗಳು ನೆಕ್ಸಾನ್ ಗೆಲುವನ್ನು ಸಂಭ್ರಮಿಸಲು ಹಲವಾರು ವಿಶೇಷ ಕಾರ್ಯಕ್ರಮಗಳು ಮತ್ತು ಗ್ರಾಹಕರ ಸಭೆಗಳನ್ನು ಆಯೋಜಿಸುತ್ತಿವೆ. ಹೊಸ ನೆಕ್ಸಾನ್ ಅನ್ನು ಬುಕಿಂಗ್ ಮಾಡುವವರಿಗೆ, ಜತೆಗೆ ತಮ್ಮ ಹೊಸ ನೆಕ್ಸಾನ್ ಅನ್ನು ಬುಕಿಂಗ್ ಮಾಡಿ ಡೆಲಿವರಿಗಾಗಿ ಕಾಯುತ್ತಿರುವ ಗ್ರಾಹಕರಿಗೆ ಅಥವಾ ತಮ್ಮ ಅಸ್ತಿತ್ವದಲ್ಲಿರುವ ನೆಕ್ಸಾನ್ ಅನ್ನು ಅದರ ಹೊಸ ಅವತಾರಕ್ಕೆ ಅಪ್‌ಗ್ರೇಡ್ ಮಾಡಲು ಬಯಸುಸುವವರಿಗೆ 1 ಲಕ್ಷ ರೂ.ವರೆಗಿನ (ಮಾಡೆಲ್ ಮತ್ತು ವೇರಿಯಂಟ್ ಅನ್ನು ಆಧರಿಸಿ) ಪ್ರಯೋಜನಗಳನ್ನು ಒದಗಿಸಲಾಗುತ್ತಿದೆ. ಭಾರತದ ನಂ. 1 ಎಸ್‌ಯುವಿಯನ್ನು ತಮ್ಮದಾಗಿಸಿಕೊಳ್ಳಲು ಇದು ಸಕಾಲವಾಗಿದೆ.

ಅತ್ಯಾಧುನಿಕ ಕನೆಕ್ಟಿವಿಟಿ, ಅಪ್‌ಗ್ರೇಡ್ ಮಾಡಿದ ಸುರಕ್ಷತಾ ಫೀಚರ್‌ಗಳು ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿರುವ ನೆಕ್ಸಾನ್ ಅತ್ಯುತ್ತಮ ಕಾರ್ಯಕ್ಷಣತೆ ಪ್ರದರ್ಶಿಸಲು ಸನ್ನದ್ಧವಾಗಿದೆ ಮತ್ತು ಗ್ರಾಹಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತದೆ. ಜತೆಗೆ ಈ ಸೆಗ್ಮೆಂಟಿನಲ್ಲಿ ಇದು ಮುಂಚೂಣಿಯಲ್ಲಿ ನಿಂತಿದೆ. ಆಧುನಿಕ ಮತ್ತು ಪ್ರೀಮಿಯಂ ವಿನ್ಯಾಸವನ್ನು ಹೊಂದಿರುವ ಈ ಎಸ್‌ಯುವಿ ಯಾವಾಗಲೂ ರಸ್ತೆಯಲ್ಲಿ ಘನತೆಯಿಂದ ಕಾಣಿಸಿಕೊಳ್ಳುತ್ತದೆ ಮತ್ತು ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ನೀಡುತ್ತದೆ. ಗ್ರಾಹಕರು ಮತ್ತು ಅಭಿಮಾನಿಗಳ ಅತ್ಯುತ್ಸಾಹದ ಪ್ರತಿಕ್ರಿಯೆಯು ನೆಕ್ಸಾನ್ ಅನ್ನು ಭಾರತೀಯ ಆಟೋ ಉದ್ಯಮದ ಸ್ಪರ್ಧಾತ್ಮಕ ವಿಭಾಗದ ನಾಯಕನನ್ನಾಗಿ ಮಾಡಿದೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಜೂನ್ 30 ರವರೆಗೆ ಮಾಡಿದ ಬುಕಿಂಗ್‌ಗಳಿಗೆ ಮಾತ್ರ ಈ ಸೀಮಿತ ಅವಧಿಯ ಪ್ರಯೋಜನಗಳು ಲಭ್ಯವಿರುತ್ತವೆ. ನಿಯಮಗಳು ಮತ್ತು ಷರತ್ತುಗಳು ಅನ್ವಯಿಸುತ್ತವೆ ಎಂದು ತಿಳಿಸಿದೆ.

Continue Reading

ದೇಶ

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ ಘೋಷಿಸಿದೆ.

VISTARANEWS.COM


on

Toyota Technical Education Programme started at Bareilly Government Polytechnic by TKM
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ (Toyota Kirloskar Motor) ಘೋಷಿಸಿದೆ.

ಸ್ಥಳೀಯ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಸಮುದಾಯಗಳನ್ನು ಸಬಲೀಕರಣಗೊಳಿಸಲು, ಟಿಕೆಎಂ ತನ್ನ ಪ್ರಮುಖ ಕಾರ್ಯಕ್ರಮಗಳಾದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮತ್ತು ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಯೊಂದಿಗೆ ಮುಂಚೂಣಿಯಲ್ಲಿದೆ. ಒಂದು ದಶಕಕ್ಕೂ ಹೆಚ್ಚು ಕಾಲದಿಂದ, ಈ ಕಾರ್ಯಕ್ರಮಗಳು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ತರಬೇತಿಯನ್ನು ಒದಗಿಸುವತ್ತ ಗಮನ ಹರಿಸಿವೆ. ‘ಸ್ಕಿಲ್ ಇಂಡಿಯಾ’ ಅಭಿಯಾನಕ್ಕೆ ಗಮನಾರ್ಹ ಕೊಡುಗೆ ನೀಡಿವೆ.

ಇದನ್ನೂ ಓದಿ: Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು 2023 ರ ಜುಲೈ 29 ಮತ್ತು 30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದ 3 ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸಂವಹನ ನಡೆಸುವ ಗೌರವವನ್ನು ಪಡೆದ ಟಿಟಿಟಿಐ ಹಳೆಯ ವಿದ್ಯಾರ್ಥಿ ಮತ್ತು 2022 ರ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಮೆಕಾಟ್ರಾನಿಕ್ಸ್ ಕಂಚಿನ ಪದಕ ವಿಜೇತ ಅಖಿಲೇಶ್ ನರಸಿಂಹ ಮೂರ್ತಿ ಒಂದು ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ.

ಟಿ-ಟಿಇಪಿ ಒಂದು ಸಮಗ್ರ ವರ್ಷ ವಿಡೀ ನಡೆಯುವ ಕಾರ್ಯಕ್ರಮವಾಗಿದೆ. ಇದು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಅನ್ನು ಒಳಗೊಂಡಿದೆ ಮತ್ತು ಅಂತಿಮ ವರ್ಷದ ಐಟಿಐ / ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅನುಗುಣವಾಗಿದೆ. ಈ ಕಾರ್ಯಕ್ರಮದ ಪ್ರಮುಖ ಲಕ್ಷಣಗಳಲ್ಲಿ ಟೊಯೊಟಾದಿಂದ ಟಿ-ಟಿಇಪಿಯ ಪ್ರಮುಖ ತರಬೇತುದಾರರಿಗೆ ವಿಶೇಷ ತರಬೇತಿ, ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಟೊಯೊಟಾ ಡೀಲರ್ ಶಿಪ್‌ಗಳಲ್ಲಿ ಪ್ರಾಯೋಗಿಕ ಕೌಶಲ್ಯ ಅಭಿವೃದ್ಧಿ ಮತ್ತು ಭಾರತೀಯ ವಾಹನ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ತಂತ್ರಜ್ಞಾನಗಳ ತಾಂತ್ರಿಕ ಜ್ಞಾನವನ್ನು ನೀಡಲು ವಿನ್ಯಾಸಗೊಳಿಸಲಾದ ಪಠ್ಯಕ್ರಮ ಸೇರಿವೆ. ಕಳೆದ ವರ್ಷ ಆರ್ಥಿಕವಾಗಿ ಸವಾಲಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡಲು ಟಿಕೆಎಂ ಸ್ಟಾರ್ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಿ-ಟಿಇಪಿ ಮೂಲಕ ತರಬೇತಿ ಪಡೆದಿದ್ದಾರೆ. 70% ಕ್ಕೂ ಹೆಚ್ಚು ಜನರು ದೇಶಾದ್ಯಂತ ವಿವಿಧ ಆಟೋಮೊಬೈಲ್ ಕಂಪನಿಗಳು ಮತ್ತು ಅವುಗಳ ಡೀಲರ್‌ಶಿಪ್‌ಗಳಲ್ಲಿ ಉದ್ಯೋಗವನ್ನು ಪಡೆದಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉತ್ತರ ಪ್ರದೇಶ ಸರ್ಕಾರದ ವಿಧಾನ ಪರಿಷತ್ ಸದಸ್ಯ ಡಿ.ಸಿ. ವರ್ಮಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಾದ ಕೌಶಲ್ಯಗಳೊಂದಿಗೆ ನಮ್ಮ ಯುವಕರನ್ನು ಸಬಲೀಕರಣಗೊಳಿಸುವ ಟಿಕೆಎಂನ ಬದ್ಧತೆಯನ್ನು ನಾವು ಶ್ಲಾಘಿಸುತ್ತೇವೆ. ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ನಂತಹ ಉಪಕ್ರಮಗಳು ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಮ್ಮ ಧ್ಯೇಯದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಿವೆ. ವಿಶೇಷವಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಟಿ-ಟಿಇಪಿ ಮತ್ತು ಸ್ಟಾರ್ ವಿದ್ಯಾರ್ಥಿವೇತನ ಬೆಂಬಲವು ವಿದ್ಯಾರ್ಥಿಗಳಿಗೆ ಟೊಯೊಟಾದ ಮೌಲ್ಯಗಳು, ಉತ್ತಮ ಅಭ್ಯಾಸಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ.

ಆ ಮೂಲಕ ಅವರ ಒಟ್ಟಾರೆ ಕೌಶಲ್ಯ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ ಟೊಯೊಟಾದಂತಹ ಉದ್ಯಮ ಪಾಲುದಾರರ ಸಹಯೋಗದ ಪ್ರಯತ್ನಗಳು ಉತ್ತರ ಪ್ರದೇಶದ ವಿದ್ಯಾರ್ಥಿಗಳಲ್ಲಿ ವಿಶ್ವದರ್ಜೆಯ ಕಾರ್ಯಪಡೆಯ ಲಭ್ಯತೆಯನ್ನು ಹೆಚ್ಚಿಸುತ್ತದೆ, ಅವರ ವೃತ್ತಿಜೀವನದ ಆಕಾಂಕ್ಷೆಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ವಾಹನ ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ ಕಾರ್ಪೊರೇಟ್ ವ್ಯವಹಾರ ಮತ್ತು ಆಡಳಿತದ ಕಂಟ್ರಿ ಹೆಡ್ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಮಾತನಾಡಿ, ಟಿಕೆಎಂನಲ್ಲಿ ಯುವ ಪ್ರತಿಭೆಗಳಿಗೆ ಸುಧಾರಿತ ತಾಂತ್ರಿಕ ಕೌಶಲ್ಯ ಮತ್ತು ಜ್ಞಾನವನ್ನು ಪಡೆಯಲು ಅವಕಾಶಗಳನ್ನು ಸೃಷ್ಟಿಸುವಲ್ಲಿ ತಾಂತ್ರಿಕ ತರಬೇತಿಯ ಪರಿವರ್ತಕ ಶಕ್ತಿಯನ್ನು ನಾವು ಗುರುತಿಸುತ್ತೇವೆ. ನಮ್ಮ ಟಿ-ಟಿಇಪಿ ಸೌಕರ್ಯ ಮತ್ತು ಸ್ಟಾರ್ ಕಾರ್ಯಕ್ರಮವು ಆಟೋಮೋಟಿವ್ ಉದ್ಯಮಕ್ಕೆ ನುರಿತ ಕಾರ್ಯಪಡೆಯನ್ನು ಬೆಳೆಸುವ ನಮ್ಮ ಬದ್ಧತೆಗೆ ಉದಾಹರಣೆಯಾಗಿದೆ. ಅದೇ ಸಮಯದಲ್ಲಿ ವಿಶಾಲವಾದ ‘ಸ್ಕಿಲ್ ಇಂಡಿಯಾ’ ಮಿಷನ್ ಅನ್ನು ಬೆಂಬಲಿಸುತ್ತದೆ, ಅಂತಿಮವಾಗಿ ನಮ್ಮ ಸಮುದಾಯಗಳಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುತ್ತದೆ.

ಟಿ-ಟಿಇಪಿ ಉಪಕ್ರಮದ ಭಾಗವಾಗಿರುವ ಸ್ಟಾರ್ ಕಾರ್ಯಕ್ರಮವು ಅರ್ಹ ವಿದ್ಯಾರ್ಥಿಗಳನ್ನು, ವಿಶೇಷವಾಗಿ ಆರ್ಥಿಕವಾಗಿ ಸವಾಲಿನ ಹಿನ್ನೆಲೆಯಿಂದ ಬಂದವರನ್ನು ವಿದ್ಯಾರ್ಥಿವೇತನವನ್ನು ಒದಗಿಸುವ ಮೂಲಕ ಮತ್ತು ಆಟೋಮೋಟಿವ್ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನಕ್ಕಾಗಿ ಅಗತ್ಯ ಕೌಶಲ್ಯಗಳು ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುವ ಮೂಲಕ ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಪ್ರತಿಭೆಗಳನ್ನು ಪೋಷಿಸಲು, ವಿದ್ಯಾರ್ಥಿಗಳು ತಮ್ಮ ಪೂರ್ಣ ಸಾಮರ್ಥ್ಯವನ್ನು ತಲುಪಲು ಮತ್ತು ವಾಹನ ಉದ್ಯಮ ಮತ್ತು ನಮ್ಮ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ನಾವು ಸಮರ್ಪಿತರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

ಕಾರ್ಯಕ್ರಮದಲಲ್ಲಿ ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನರೇಂದ್ರ ಕುಮಾರ್, ವಾಣಿಜ್ಯ ಟೊಯೊಟಾದ ನಿರ್ದೇಶಕ ಶಿವಂ ಗುಪ್ತಾ ಮಾತನಾಡಿದರು.

Continue Reading

ಕರ್ನಾಟಕ

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

Bengaluru News: ಬೆಂಗಳೂರಿನ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ 2 ದಿನಗಳ ಗ್ರೋಯಿಂಗ್ ಎಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಓರಿಯೆಂಟೆಡ್ ಕಾಂಗ್ರೆಗೇಷನ್ ಸ್ಟೇಜ್ (GETOCS 4.0) ದಲ್ಲಿ ವಿದ್ಯಾರ್ಥಿಗಳು ಬೆಂಕಿ ನಂದಿಸುವ ಬಾಲ್‌ಗಳನ್ನು ಹೊಂದಿದ ಡ್ರೋನ್‌ಗಳನ್ನು ಬಳಸಿ ಅದ್ಭುತ ಮಾದರಿಯನ್ನು ಪ್ರದರ್ಶಿಸಿದರು.

VISTARANEWS.COM


on

engineering students have invented a unique fire extinguisher drone at bengaluru
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿಶ್ವದೆಲ್ಲೆಡೆ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲಾಗದ ಅದೆಷ್ಟೋ ಸಂದರ್ಭಗಳಲ್ಲಿ ಪ್ರಾಣ ನಷ್ಟ ಕೂಡ ಸಂಭವಿಸುತ್ತಿವೆ. ಹಲವು ಸಂದರ್ಭಗಳಲ್ಲಿ ಬೆಂಕಿ ನಂದಿಸುವ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ತಲುಪುವುದು ಕಷ್ಟವಾಗುತ್ತದೆ. ಹಾಗೆಯೇ ಅತೀ ಎತ್ತರದ ಕಟ್ಟಡಗಳಿಗೆ ಅಂಟಿಕೊಂಡ ಬೆಂಕಿಯನ್ನು ನಂದಿಸುವುದು ಸವಾಲಾಗಿಯೇ ಪರಿಣಮಿಸುತ್ತದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗೋಪಾಲನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌‌ ಮತ್ತು ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ವಿಶಿಷ್ಟ ಡ್ರೋನ್‌ ಆವಿಷ್ಕರಿಸಿದ್ದು, ಆ ಮೂಲಕ ಯಶಸ್ವಿಯಾಗಿ ಬೆಂಕಿ (Bengaluru News) ನಂದಿಸಬಹುದಾಗಿದೆ.

ನಗರದಲ್ಲಿ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ ಎರಡು ದಿನಗಳ ಗ್ರೋಯಿಂಗ್ ಎಲೆಕ್ಟ್ರಾನಿಕ್ಸ್ ಟೆಕ್ನಾಲಜಿ ಓರಿಯೆಂಟೆಡ್ ಕಾಂಗ್ರೆಗೇಷನ್ ಸ್ಟೇಜ್ (GETOCS 4.0) ದಲ್ಲಿ ವಿದ್ಯಾರ್ಥಿಗಳು ಬೆಂಕಿ ನಂದಿಸುವ ಬಾಲ್‌ಗಳನ್ನು ಹೊಂದಿದ ಡ್ರೋನ್‌ಗಳನ್ನು ಬಳಸಿ ಅದ್ಭುತ ಮಾದರಿಯನ್ನು ಪ್ರದರ್ಶಿಸಿದರು.

ಈ ವಿನೂತನ ಮಾದರಿಯು ತೀವ್ರವಾದ ಬೆಂಕಿಯನ್ನು ತ್ವರಿತವಾಗಿ ನಂದಿಸುವಲ್ಲಿ ಸಫಲವಾಗುತ್ತದೆ. ಇದರಿಂದಾಗಿ ಜೀವಗಳನ್ನು ರಕ್ಷಿಸುವುದರ ಜತೆಗೆ ಕಟ್ಟಡಗಳಿಗೆ ಆಗುವ ಹಾನಿಯನ್ನು ಕೂಡಾ ತಡೆಯುತ್ತದೆ ಮತ್ತು ಪರಿಸರವನ್ನು ರಕ್ಷಿಸುತ್ತದೆ. ಈ ಡ್ರೋನ್‌ಗಳ ಕ್ಷಿಪ್ರ ನಿಯೋಜನೆಯಿಂದ ಹತ್ತಿರದ ಪ್ರದೇಶಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾದ ಮಾದರಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಮೂಲಕ ವಿಶಾಲ ಪ್ರದೇಶವನ್ನು ಕವರ್‌ ಮಾಡಬಹುದಾಗಿದೆ. ಪ್ರದರ್ಶಿಸಲಾದ ಈ ಮಾದರಿಯನ್ನು ನೋಡಿದ ತಜ್ಞರು, ನಾವು ನೋಡಿದ ಅತ್ಯುತ್ತಮ ಪ್ರಾತ್ಯಕ್ಷಿಕೆ ಇದಾಗಿದೆ ಎಂದು ವಿದ್ಯಾರ್ಥಿಗಳ ಈ ಅನ್ವೇಷಣೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ಎಲ್‌ಆರ್‌ಡಿಇ, ಡಿಆರ್‌ಡಿಒ ನಿವೃತ್ತ ಹೆಚ್ಚುವರಿ ನಿರ್ದೇಶಕ ಪ್ರೊ. ಹರ್ಜಿಂದರ್ ಸಿಂಗ್ ಭಾಟಿಯಾ ಅವರು ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಶೈಕ್ಷಣಿಕ ಅನ್ವೇಷಣೆಗಳ ಹೊರತಾಗಿ, ಎಲೆಕ್ಟ್ರಾನಿಕ್ಸ್ ಹಾರ್ಡ್‌ವೇರ್ ಯೋಜನೆಗಳು ಪ್ರಸ್ತುತ ಸಮಾಜದ ಅಗತ್ಯ ಮತ್ತು ಸವಾಲುಗಳನ್ನು ಪ್ರತಿನಿಧಿಸುವಂತಾಗಬೇಕು. ಇವುಗಳು ಕಡಿಮೆ ವೆಚ್ಚದ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವುದಾಗಲಿ, ಪರಿಸರ ಮೇಲ್ವಿಚಾರಣಾ ವ್ಯವಸ್ಥೆಗಳನ್ನು ಹೆಚ್ಚಿಸುವುದಾಗಲಿ ಅಥವಾ ಗ್ರಾಹಕ ಬಳಕೆಯ ವಿನೂತನ ಎಲೆಕ್ಟ್ರಾನಿಕ್ಸ್ ಉಪಕರಣ ಅನ್ವೇಷಿಸುವುದಾಗಿರಲಿ, ಈ ಯೋಜನೆಗಳು ನಮ್ಮ ಸುತ್ತಲಿನ ಜನರ ಜೀವನದ ಮೇಲೆ ಅರ್ಥಪೂರ್ಣ ಪರಿಣಾಮವನ್ನು ಬೀರುವ ಸಾಮರ್ಥ್ಯವನ್ನು ಹೊಂದಿರಬೇಕು.

ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಎಂಜಿನಿಯರ್‌ ಸಂಸ್ಥೆಯಲ್ಲಿ (IETE) ಸದಸ್ಯತ್ವ ಪಡೆಯುವುದರಿಂದ, ISRO, DRDO, LRDE ಮತ್ತು ಇತರ ಸಂಸ್ಥೆಗಳ ವಿವಿಧ ಉಚಿತ ಕೋರ್ಸ್‌ಗಳ ಪ್ರಯೋಜನ ಪಡೆಯಬಹುದಾಗಿದೆ. ಮುಂಬರುವ ವರ್ಷಗಳಲ್ಲಿ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಅದ್ಭುತ ಭವಿಷ್ಯ ಅಡಗಿದೆ ಎಂಬುದನ್ನು ಒತ್ತಿ ಹೇಳುತ್ತೇನೆ ಎಂದು ತಿಳಿಸಿದರು.

GETOCS 4.0, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (EC) ವಿಭಾಗವು ನಡೆಸಿದ ಕಾರ್ಯಕ್ರಮವಾಗಿದ್ದು, ದಾಖಲಾತಿಗಳ ಪ್ರಸ್ತುತಿ, ರೊಬೊಟಿಕ್ ಸ್ಪರ್ಧೆಗಳು, ಸರ್ಕ್ಯೂಟ್ ಡೀಬಗ್ ಮಾಡುವುದು, ಪ್ರಾಜೆಕ್ಟ್ ಪ್ರದರ್ಶನಗಳು, ತಾಂತ್ರಿಕ ರಸಪ್ರಶ್ನೆ ಮತ್ತು ಚರ್ಚೆಗಳಂತಹ ವಿವಿಧ ಚಟುವಟಿಕೆಗಳ ಮೂಲಕ ಭಾಗವಹಿಸುವವರು ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸಿತ್ತು.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಗುರುವಾರ ಮುಕ್ತಾಯಗೊಂಡ ಈ ವಾರ್ಷಿಕ ಎರಡು ದಿನಗಳ ಕಾರ್ಯಕ್ರಮವು ಯಾವುದೇ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿ ಕೊಟ್ಟಿತ್ತು. GETOCS 4.0ನ ಪ್ರಾಥಮಿಕ ಕಾರ್ಯಸೂಚಿಯು ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವುದು, ಸಾಮಾಜಿಕ ಆರೋಗ್ಯವನ್ನು ಹೆಚ್ಚಿಸುವುದು ಮತ್ತು ಹೆಚ್ಚಿನ ಸಂಶೋಧನೆ-ಆಧಾರಿತ ಯೋಜನೆಗಳನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.

ಗೋಪಾಲನ್ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಸಿ. ಪ್ರಭಾಕರ್ ಮಾತನಾಡಿ, ನಮ್ಮ ವಿದ್ಯಾರ್ಥಿಗಳು ಕೈಗಾರಿಕೆಗಳಿಗೆ ಪ್ರಯೋಜನಕಾರಿಯಾದ ನವೀನ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ನಾವು ಗುಣಮಟ್ಟದ ಯೋಜನೆಗಳತ್ತ ಗಮನಹರಿಸುತ್ತಿದ್ದೇವೆ ಮತ್ತು ರಾಷ್ಟ್ರಕ್ಕೆ ನೆರವಾಗುವಂತಹ ಯೋಜನೆಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದೇವೆ. ಹೆಚ್ಚುವರಿಯಾಗಿ, ನಾವು 30 ಲಕ್ಷ ರೂ.ದೊಂದಿಗೆ ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಇಂಟೆಲ್ ಪ್ರಯೋಗಾಲಯವನ್ನು ಸ್ಥಾಪಿಸುತ್ತಿದ್ದೇವೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಗಳ ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಕೂಡಾ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಗೋಪಾಲನ್ ಇನ್‌ಸ್ಟಿಟ್ಯೂಷನ್ಸ್ ಸಿಇಒ ಡಾ. ಭಾಸ್ಕರ್ ರೆಡ್ಡಿ ಸಿ.ಎಂ. ಮಾತನಾಡಿ, ” GETOCS.4.0 ಕಾರ್ಯಕ್ರಮವನ್ನು ಇಸಿಇ ವಿಭಾಗವು ಆಯೋಜಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ. ಈ ರೀತಿಯ ಕಾರ್ಯಕ್ರಮವು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಜ್ಞಾನವನ್ನು ಒರೆಗೆ ಹಚ್ಚುತ್ತದೆ ಎಂದರು.

ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌‌ ಮತ್ತು ಮ್ಯಾನೇಜ್‌ ಮೆಂಟ್‌ನ ಪ್ರಾಂಶುಪಾಲ ಡಾ. ಅರುಣ್ ವಿಕಾಸ್ ಸಿಂಗ್ ಮಾತನಾಡಿ, ಪ್ರತಿಷ್ಠಿತ ಕಂಪನಿಗಳಲ್ಲಿ ವಿದ್ಯಾರ್ಥಿಗಳ ಉದ್ಯೋಗಾವಕಾಶವನ್ನು ಹೆಚ್ಚಿಸಲು ನಿಯಮಿತ ಶೈಕ್ಷಣಿಕ ತರಗತಿಗಳ ಜತೆಗೆ ಹೆಚ್ಚುವರಿ ಕೌಶಲ್ಯಗಳನ್ನು ಪಡೆದುಕೊಳ್ಳುವ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಟ್ಟರು. ನಾವು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ಕೌಶಲ್ಯದ ಬಗ್ಗೆ ತರಬೇತಿ ನೀಡುತ್ತೇವೆ, ಇದರಿಂದ ಅವರು ಉದ್ಯೋಗಿಗಳಾಗದೆ ಉದ್ಯೋಗದಾತರಾಗಬಹುದು ಎಂದು ಹೇಳಿದರು.

ಇದನ್ನೂ ಓದಿ: Tata Motors: ಪಂಚ್. ಇವಿ, ನೆಕ್ಸಾನ್.ಇವಿಗೆ ಭಾರತ್-ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್

ಕಾರ್ಯಕ್ರಮದಲ್ಲಿ ಗೋಪಾಲನ್ ಆರ್ಗ್ಯಾನಿಕ್ಸ್ ನ ನಿರ್ದೇಶಕಿ ಸುನೀತಾ ಪ್ರಭಾಕರ್‌, ಎಸ್. ಅನಂತ ಪದ್ಮನಾಭಂ, ಇಸಿಇ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಕುಮಾರ್, ಕಾರ್ಯಕ್ರಮ ಸಂಘಟನಾ ಸಮಿತಿಯ ಮುಖ್ಯಸ್ಥ ಡಾ. ಕೆ.ಸುರೇಶ್, ಉಜಿರೆಯ ಧರ್ಮಸ್ಥಳ ಎಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಮಧುಸೂದನ್, ಬಿಎಂಎಸ್ ಪ್ರಾಧ್ಯಾಪಕ ಡಾ. ಪುರುಷೋತ್ತಮ್, ಏರೋನಾಟಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಕೆ. ನಟರಾಜನ್, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ ಮತ್ತು ಮ್ಯಾನೇಜ್ಮೆಂಟ್‌ನ ಪ್ರಧಾನ ವಿಜ್ಞಾನಿ ಮತ್ತು ಇಸಿಇ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಸುರೇಶ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Tata Motors: ಪಂಚ್. ಇವಿ, ನೆಕ್ಸಾನ್.ಇವಿಗೆ ಭಾರತ್-ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್

Tata Motors: ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆ ಮತ್ತು ಭಾರತದ ಇವಿ ಕ್ರಾಂತಿಯ ಪ್ರವರ್ತಕರಾಗಿರುವ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ (ಟಿಪಿಇಎಂ) ಇಂದು ಮಹತ್ವದ ಪ್ರಕಟಣೆಯಲ್ಲಿ ಪಂಚ್.ಇವಿ ಮತ್ತು ನೆಕ್ಸಾನ್.ಇವಿ ಭಾರತ್-ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್ ಪಡೆದಿದೆ ಎಂದು ಘೋಷಿಸಿದೆ. ಪಂಚ್.ಇವಿ ಇಲ್ಲಿಯವರೆಗೆ ಯಾವುದೇ ವಾಹನ ಕೂಡ ಗಳಿಸದೇ ಇದ್ದ ಅತ್ಯಧಿಕ ಸ್ಕೋರ್‌ ಪಡೆಯುವ ಮೂಲಕ ಮೈಲುಗಲ್ಲು ಸ್ಥಾಪಿಸಿದೆ.

VISTARANEWS.COM


on

Tata Motors Panch EV Nexon EV 5 star rating by Bharat NCAP
Koo

ಬೆಂಗಳೂರು: ಟಾಟಾ ಮೋಟಾರ್ಸ್‌ನ (Tata Motors) ಅಂಗಸಂಸ್ಥೆ ಮತ್ತು ಭಾರತದ ಇವಿ ಕ್ರಾಂತಿಯ ಪ್ರವರ್ತಕರಾಗಿರುವ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ (ಟಿಪಿಇಎಂ) ಇಂದು ಮಹತ್ವದ ಪ್ರಕಟಣೆಯಲ್ಲಿ ಪಂಚ್.ಇವಿ ಮತ್ತು ನೆಕ್ಸಾನ್.ಇವಿ ಭಾರತ್-ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್ ಪಡೆದಿದೆ ಎಂದು ಘೋಷಿಸಿದೆ.

ಪಂಚ್.ಇವಿ ಇಲ್ಲಿಯವರೆಗೆ ಯಾವುದೇ ವಾಹನ ಕೂಡ ಗಳಿಸದೇ ಇದ್ದ ಅತ್ಯಧಿಕ ಸ್ಕೋರ್‌ ಪಡೆಯುವ ಮೂಲಕ ಮೈಲಿಗಲ್ಲು ಸ್ಥಾಪಿಸಿದೆ. ಪಂಚ್.ಇವಿ ಅಡಲ್ಟ್ ಆಕ್ಯುಪೆಂಟ್ಸ್ ಪ್ರೊಟೆಕ್ಷನ್(ಎಓಪಿ) ಅಂದರೆ ವಯಸ್ಕರ ರಕ್ಷಣೆ ವಿಭಾಗದಲ್ಲಿ ದಾಖಲೆಯ 31.46/32 ಅಂಕಗಳು, ಚಿಲ್ಡ್ರನ್ ಆಕ್ಯುಪೆಂಟ್ ಪ್ರೊಟೆಕ್ಷನ್ (ಸಿಓಪಿ) ಅಂದರೆ ಮಕ್ಕಳ ರಕ್ಷಣೆ ವಿಭಾಗದಲ್ಲಿ 45/49 ಅಂಕಗಳನ್ನು ಪಡೆದುಕೊಂಡಿದೆ.

ನೆಕ್ಸಾನ್.ಇವಿ ಎಓಪಿ ಮತ್ತು ಸಿಓಪಿಯಲ್ಲಿ ಕ್ರಮವಾಗಿ 29.86/32 ಮತ್ತು 44.95/49 ಅಂಕಗಳನ್ನು ಗಳಿಸಿದೆ. ಈ ಮೂಲಕ ಟಾಟಾ ಮೋಟಾರ್ಸ್ ಈಗ ಭಾರತ್-ಎನ್‌ಸಿಎಪಿ ಮತ್ತು ಗ್ಲೋಬಲ್-ಎನ್‌ಸಿಎಪಿ ಪರೀಕ್ಷೆಗಳಲ್ಲಿ 5-ಸ್ಟಾರ್‌ಗಳನ್ನು ಗಳಿಸಿರುವ ಅತಿ ಸುರಕ್ಷಿತ ಶ್ರೇಣಿಯ ಎಸ್‌ಯುವಿ ಉತ್ಪನ್ನ ಶ್ರೇಣಿಗಳನ್ನು ಹೊಂದಿರುವ ಏಕೈಕ ಒಇಎಂ ಆಗಿದೆ.

ಇದನ್ನೂ ಓದಿ: Aliens: ಏಲಿಯನ್‌ಗಳು ಅನ್ಯಗ್ರಹ ಜೀವಿಗಳಲ್ಲ; ಈ ಭೂಮಿಯ ರಹಸ್ಯ ನಿವಾಸಿಗಳು! ಹಾರ್ವರ್ಡ್ ವಿಜ್ಞಾನಿಗಳ ಸಂಶೋಧನೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಈ ಕುರಿತು ಮಾತನಾಡಿ, “ನೆಕ್ಸಾನ್.ಇವಿ ಮತ್ತು ಪಂಚ್.ಇವಿ ಭಾರತ್-ಎನ್‌ಸಿಎಪಿಯಲ್ಲಿ 5-ಸ್ಟಾರ್ ರೇಟಿಂಗ್ ಅನ್ನು ಪಡೆದಿದೆ. ಈ ಮಹತ್ವದ ಸಾಧನೆ ಮಾಡಿದ್ದಕ್ಕಾಗಿ ಟಾಟಾ ಮೋಟಾರ್ಸ್‌ಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತಿದ್ದೇನೆ. ದೇಶದಲ್ಲಿ ಸುರಕ್ಷಿತ ವಾಹನಗಳು ಇರಬೇಕು ಎನ್ನುವ ಭಾರತ ಸರ್ಕಾರದ ದೃಷ್ಟಿಗೆ ಈ ಪ್ರಮಾಣೀಕರಣವು ಸೂಕ್ತವಾಗಿ ಹೊಂದಿಕೆಯಾಗುತ್ತದೆ ಮತ್ತು ಭಾರತದ ಆಟೋಮೊಬೈಲ್ ಉದ್ಯಮವನ್ನು ‘ಆತ್ಮನಿರ್ಭರ’ ಮಾಡುವಲ್ಲಿ ಭಾರತ್-ಎನ್‌ಸಿಎಪಿಯ ಪಾತ್ರವನ್ನು ಒತ್ತಿಹೇಳುತ್ತದೆ. ಭಾರತ್-ಎನ್‌ಸಿಎಪಿ ಕಾರು ಸುರಕ್ಷತಾ ಮಾನದಂಡವು ಭಾರತವನ್ನು ಜಾಗತಿಕ ಆಟೋಮೊಬೈಲ್ ಹಬ್ ಮಾಡಲು ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಅವುಗಳ ರಫ್ತು ಯೋಗ್ಯತೆಯನ್ನು ಹೆಚ್ಚಿಸುವ ಸರ್ಕಾರದ ದೃಷ್ಟಿಯನ್ನು ಅರಿತುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಕುರಿತು ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಮತ್ತು ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಎಂಡಿ ಶೈಲೇಶ್ ಚಂದ್ರ ಮಾತನಾಡಿ, ಮೊದಲು ಬಹಳ ಕಡಿಮೆ ಚರ್ಚೆ ಆಗುತ್ತಿದ್ದ ಸುರಕ್ಷತೆ ವಿಚಾರ ಈಗ ಭಾರತೀಯ ಕಾರು ಖರೀದಿದಾರರ ಪ್ರಮುಖ ಆದ್ಯತೆಯಾಗಿದೆ. ಸುರಕ್ಷತೆ ಎಂಬುದು ಟಾಟಾ ಮೋಟಾರ್ಸ್‌ನ ನಮ್ಮ ಡಿಎನ್‌ಎಯಲ್ಲಿಯೇ ಇದೆ. ಅದರಿಂದಲೇ ನಾವು ಉದ್ಯಮದಲ್ಲಿ ಮಾನದಂಡ ಸ್ಥಾಪಿಸುವಂತಾಗಿದೆ.

ಇದನ್ನೂ ಓದಿ: Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

ಸುರಕ್ಷತಾ ಮಾನದಂಡವನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಪ್ರವರ್ತಕರಾಗಿ ಮುಂದುವರೆದಿದ್ದೇವೆ. ಬೆಲೆಯನ್ನು ಲೆಕ್ಕಿಸದೆ ನಾವು ತಯಾರಿಸುವ ಪ್ರತಿಯೊಂದು ವಾಹನವೂ ಸುರಕ್ಷಿತವಾಗಿರಬೇಕು ಎಂಬುದರ ಕುರಿತು ನಾವು ಬದ್ಧವಾಗಿದ್ದೇವೆ. ನಾವು ಕಟ್ಟುನಿಟ್ಟಾದ ಸರ್ಕಾರಿ ಸುರಕ್ಷತಾ ಮಾನದಂಡಗಳನ್ನು ಒಪ್ಪಿಕೊಳ್ಳುತ್ತೇವೆ ಮತ್ತು ಅತ್ಯುತ್ತಮ ಫಲಿತಾಂಶಗಳನ್ನು ಪಡೆದು ಭಾರತ್-ಎನ್‌ಸಿಎಪಿ ಪ್ರೋಟೋಕಾಲ್ ಅನ್ನು ಪಾಲಿಸಿದ ಹಾಗೂ ಅಲ್ಲಿಗೆ ವಾಹನವನ್ನು ಕಳುಹಿಸಿದ ಮೊದಲ ವಾಹನ ತಯಾರಕರು ಎಂದು ಹೆಮ್ಮೆಪಡುತ್ತೇವೆ. ಪಂಚ್.ಇವಿ ಭಾರತದಲ್ಲಿ ಉತ್ಪಾದಿಸಲ್ಪಡುವ ಸುರಕ್ಷಿತ ಇವಿ ವಾಹನ ಎಂದು ಹೇಳಿಕೊಳ್ಳಲು ನಾವು ಸಂತೋಷಪಡುತ್ತೇವೆ. ಜತೆಗೆ ನೆಕ್ಸಾನ್.ಇವಿ 5-ಸ್ಟಾರ್ ರೇಟಿಂಗ್‌ ಪಡೆಯುವುದರ ಮೂಲಕ ಸುರಕ್ಷತೆಯ ಪರಂಪರೆಯನ್ನು ಮುಂದುವರೆಸಿದೆ.

ಒಟ್ಟಾಗಿ, ಭಾರತ್-ಎನ್‌ಸಿಎಪಿ ಅಡಿಯಲ್ಲಿ ಪರೀಕ್ಷೆಗೆ ಒಳಗಾದ ನಮ್ಮ ಎಲ್ಲಾ ನಾಲ್ಕು ಎಸ್‌ಯುವಿಗಳು 5-ಸ್ಟಾರ್ ರೇಟಿಂಗ್‌ಗಳನ್ನು ಪಡೆದಿವೆ. ಈ ಮೂಲಕ ಎಲ್ಲಾ ಪ್ರಯಾಣಿಕ ವಾಹನಗಳು ಅನುಸರಿಸಬಹುದಾದ ಮಾನದಂಡವನ್ನು ಸ್ಥಾಪಿಸಿವೆ. ಸುರಕ್ಷತೆಯ ಕುರಿತಾದ ನಮ್ಮ ಗಟ್ಟಿ ನಿಲುವು ಮುಂದುವರಿಯುತ್ತದೆ. ಅದಕ್ಕೆ ಬೇಕಾದ ಉತ್ತಮ ಆರ್ & ಡಿ ಬೆಂಬಲವು ನಮಗೆ ಈ ನಿಟ್ಟಿನಲ್ಲಿ ಬೆಳೆಯಲು ಹಾಗೂ ಪ್ರತಿ ಪ್ರಯಾಣಿಕರಿಗೆ ಸುರಕ್ಷಿತ ಭವಿಷ್ಯವನ್ನು ರಚಿಸಲು ದಾರಿ ಮಾಡಿಕೊಡಲು ನಮಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಪಂಚ್.ಇವಿ ಪ್ರಾರಂಭವಾದಾಗಿನಿಂದಲೂ ಇವಿ ಆಸಕ್ತರಿಗೆ ಮತ್ತು ಮೊದಲ ಬಾರಿಯ ಖರೀದಿದಾರರಲ್ಲಿ ಆಕರ್ಷಣೆ ಉಂಟು ಮಾಡಿದೆ. ಗ್ರಾಮೀಣ ಮಾರುಕಟ್ಟೆಗಳಲ್ಲಿ 35%ಕ್ಕಿಂತ ಹೆಚ್ಚು ಇವಿ ಮಾಲೀಕರು ಇದ್ದಾರೆ. ದೀರ್ಘ ರೇಂಜ್, ಉತ್ಕೃಷ್ಟ ಕಾರ್ಯಕ್ಷಮತೆ, ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪ್ರತೀ ವಿಭಾಗಗಳಲ್ಲಿ ಸಿಗುವ 2 – 3 ವಿಭಿನ್ನ ವೈಶಿಷ್ಟ್ಯಗಳನ್ನು ಹೊಂದಿರುವ ಪಂಚ್.ಇವಿ ತನ್ನ ಕುಟುಂಬದಲ್ಲಿ 10,000 ಕ್ಕೂ ಹೆಚ್ಚು ಹೆಮ್ಮೆಯ ಸದಸ್ಯರನ್ನು ಹೊಂದಿದೆ. ಇದು ನಿಜವಾದ ವಿದ್ಯುತ್ ಎಸ್ ಯು ವಿ ಮಾತ್ರವಲ್ಲ, ಇದು ಚಲನಶೀಲತೆಯ ಭವಿಷ್ಯಕ್ಕೆ ಒಂದು ಮಹತ್ವದ ಹೆಜ್ಜೆಯಾಗಿದೆ. ಪಂಚ್.ಇವಿ ಅನುಕೂಲ ವಿಚಾರದಲ್ಲಿಯೂ ಹೆಚ್ಚು ಅಂಕ ಗಳಿಸುತ್ತದೆ ಮತ್ತು ಗ್ರಾಹಕರಿಗೆ ಸುಭವಾಗಿ ಪ್ರೀಮಿಯಂ ಅನುಭವವನ್ನು ನೀಡುತ್ತದೆ.

ಇದನ್ನೂ ಓದಿ: OTT Release: ಈ ವಾರ ಒಟಿಟಿಯಲ್ಲಿ ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು

ಭಾರತದ ಇವಿ ಕ್ರಾಂತಿಯ ಕಿಕ್‌ಸ್ಟಾರ್ಟರ್ ಎಂದು ಮನ್ನಣೆ ಪಡೆದಿರುವ ನೆಕ್ಸಾನ್.ಇವಿ 2020ರಲ್ಲಿ ಪ್ರಾರಂಭವಾದಾಗಿನಿಂದ 68,000 ಯೂನಿಟ್‌ಗಳನ್ನು ಮಾರಾಟ ಮಾಡಿದೆ. 2023ರಲ್ಲಿ ಅನಾವರಣಗೊಂಡ ಎಸ್‌ಯುವಿಯ ನವೀಕರಿಸಿದ ಗೇಮ್‌ಚೇಂಜಿಂಗ್ ಹೊಸ ಅವತಾರವು ಇಡೀ ಭಾರತೀಯ ವಾಹನ ಉದ್ಯಮದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡುತ್ತದೆ. ಇದರ ಆಕರ್ಷಕ ಡಿಜಿಟಲ್-ಫಸ್ಟ್ ವಿನ್ಯಾಸ, ತಂತ್ರಜ್ಞಾನ- ಚಾಲಿತ ಚಾಲನಾ ಅನುಭವ ಮತ್ತು ಅದ್ಭುತ ಆವಿಷ್ಕಾರಗಳು ಇದನ್ನು ಚಕ್ರಗಳಿರುವ ಗ್ಯಾಜೆಟ್ ಎಂದು ಕರೆಯುವಂತೆ ಮಾಡಿದೆ ಮತ್ತು ಈ ಕಾರು ಭಾರತೀಯ ಇವಿ ಉದ್ಯಮದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ.

Continue Reading
Advertisement
Drowns in Lake
ಕರ್ನಾಟಕ18 mins ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ54 mins ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ55 mins ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ2 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ2 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ2 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ2 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ3 hours ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ3 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ3 hours ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ2 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ8 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌