ಚಾಮರಾಜಪೇಟೆ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣ: ಶಾಸಕ ಜಮೀರ್‌ ಅಹ್ಮದ್‌ - Vistara News

ಕರ್ನಾಟಕ

ಚಾಮರಾಜಪೇಟೆ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣ: ಶಾಸಕ ಜಮೀರ್‌ ಅಹ್ಮದ್‌

ಚಾಮರಾಜಪೇಟೆ ಮೈದಾನ ಎಲ್ಲ ಸಮುದಾಯದವರಿಗೂ ಸೇರಬೇಕು ಎಂದು ಜುಲೈ 12ರಂದು ವಿವಿಧ ಸಂಘಟನೆಗಳು ಚಾಮರಾಜಪೇಟೆ ಬಂದ್‌ಗೆ ಕರೆ ನೀಡಿವೆ. ಜುಲೈ 10ರಂದು ಬಕ್ರೀದ್‌ ಹಿನ್ನೆಲೆಯಲ್ಲಿ ದಿನೇದಿನೆ ವಿವಾದ ತೀವ್ರವಾಗುತ್ತಿದೆ.

VISTARANEWS.COM


on

Zameer ahmad Khan about Speaker post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನೇಕ ದಿನಗಳಿಂದ ವಿವಾದಕ್ಕೆ ಕಾರಣವಾಗಿರುವ ಚಾಮರಾಜಪೇಟೆ ಆಟದ ಮೈದಾನದಲ್ಲಿ ಇದೇ ವರ್ಷದಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ವಕ್ಕೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಾಗುತ್ತದೆ ಎಂದು ಚಾಮರಾಜಪೇಟೆ ಶಾಸಕ ಬಿ.ಜಡ್‌. ಜಮೀರ್‌ ಅಹ್ಮದ್‌ ಖಾನ್‌ ಶುಕ್ರವಾರ ತಿಳಿಸಿದ್ದಾರೆ.

ವಿವಾದದ ಕುರಿತಂತೆ ಚರ್ಚಿಸಲು ತಮ್ಮ ನೇತೃತ್ವದಲ್ಲಿ ಚಾಮರಾಜಪೇಟೆಯ ವೆಂಕಟರಾಮ್ ಕಲಾ ಭವನದಲ್ಲಿ ಆಯೋಜನೆಯಾಗಿದ್ದ ಎಲ್ಲ ವಾರ್ಡ್‌ಗಳ ಸಭೆಯಲ್ಲಿ ಜಮೀರ್‌ ಮಾತನಾಡಿದ್ದಾರೆ.

ಆಟದ ಮೈದಾನ ಉಳಿಸಿ ಎಂದು ಅನೇಕರು ಬೇಡಿಕೆ ಇಟ್ಟಿದ್ದಾರೆ. ಆಟದ ಮೈದಾನ ಎಲ್ಲಿ ಹೋಗಿದೆ ಎಂಬುದು ಪ್ರಶ್ನೆ. ಆಟದ ಮೈದಾನವನ್ನು ತೆಗೆದುಕೊಂಡು ಹೋಗೋಕೆ ಸಾಧ್ಯವೇ? ನೂರಾರು ವರ್ಷಗಳಿಂದ ಆಟದ ಮೈದಾನವಾಗಿದೆ, ಜಮೀರ್ ಜೀವಂತವಾಗಿರುವ ತನಕ ಆಟದ ಮೈದಾನವಾಗಿಯೇ ಇರುತ್ತದೆ. ಚಾಮರಾಜಪೇಟೆಯವರು ಯಾರೂ ನನ್ನ ವಿರುದ್ಧ ಮಾತನಾಡುವುದಿಲ್ಲ. ನನ್ನ‌ ವಿರುದ್ಧ ಮಾತನಾಡುವವರು ಚಾಮರಾಜಪೇಟೆಯವರೇ ಅಲ್ಲ. ಇಷ್ಟೆಲ್ಲಾ ಮಾತನಾಡುವವರು ಕೋವಿಡ್ ಸಮಯದಲ್ಲಿ ಎಲ್ಲಿ ಇದ್ದರು? ಕೋವಿಡ್ ಸಮಯದಲ್ಲಿ 580 ಶವಗಳನ್ನು ಎತ್ತಿದ್ದೇವೆ ಎಂದು ಮೈದಾನದ ಕುರಿತು ಪ್ರತಿಭಟನೆ ನಡೆಸುತ್ತಿರುವವರನ್ನು ಜಮೀರ್‌ ಟೀಕಿಸಿದರು.

ನನಗೆ ಹಿಂದು ಮುಸ್ಲಿಂ ಎಂಭ ಭೇದ ಇಲ್ಲ. ನನಗೆ ಗೊತ್ತಿರುವುದು ಹೆಣ್ಣು ಗಂಡು ಮಾತ್ರ. ರಾಜಕೀಯ ವಿವಾದ ಸೃಷ್ಟಿ ಮಾಡಲು ಹೀಗೆಲ್ಲ ಮಾಡುತ್ತಿದ್ದಾರೆ. ಇದೆಲ್ಲದರ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿದೆ. ಇದಕ್ಕೆಲ್ಲ ಚಾಮರಾಜಪೇಟೆ ಮತದಾರರೇ ಉತ್ತರ ನೀಡುತ್ತಾರೆ ಎಂದರು.

ನನ್ನ ಕೊರಳ ಪಟ್ಟಿ ಹಿಡಿದು ಕೇಳುವ ಹಕ್ಕು ಚಾಮರಾಜಪೇಟೆಯ ಜನತೆಗೆ ಇದೆ. ಎಂಎಲ್‌ಎ ಎಂದ ಕೂಡಲೆ ದೊಡ್ಡವನಲ್ಲ, ನೀವು ಆಯ್ಕೆ ಮಾಡಿ ಕಳಿಸಿದ್ದೀರಿ. ಏನೇ ಇದ್ದರೂ ಕೇಳಿ, ನಾನೊಬ್ಬ ಗುಲಾಮ. ನಾನು ಕ್ಷೇತ್ರದ ಜನರ ಸೇವಕ. ಹೇ ಜಮೀರ್ ಈ ಕೆಲಸ ಮಾಡು ಎಂದರೆ ನಾನು ಮಾಡುತ್ತೇನೆ. ಈ ವರ್ಷದಿಂದಲೇ ಆಗಸ್ಟ್‌ 15ರಂದು ತ್ರಿವರ್ಣ ಧ್ವಜಾರೋಹಣವನ್ನು ನನ್ನ ನೇತೃತ್ವದಲ್ಲೆ ಮಾಡಲಾಗುತ್ತದೆ. ಗಣರಾಜ್ಯೋತ್ಸವಕ್ಕೂ ಧ್ವಜಾರೋಹಣ ನೆರವೇರಿಸಲಾಗುತ್ತದೆ. ತಲೆಯ ಮೇಲೆ ಹೊತ್ತುಕೊಂಡು ಧ್ವಜಾರೋಹಣಕ್ಕೆ ಸಿದ್ಧನಾಗಿದ್ದೇನೆ ಎಂದರು.

ಜುಲೈ 12ರ ಬಂದ್‌ ಕುರಿತು ಪ್ರತಿಕ್ರಿಯಿಸಿ, ಯಾವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಬಂದ್‌ಗೆ ಕರೆ ಕೊಟ್ಟಿದ್ದಾರೆ ಗೊತ್ತಿಲ್ಲ. ಬಂದ್‌ಗೆ ಪೊಲೀಸರು ಇನ್ನೂ ಅನುಮತಿ ಕೊಟ್ಟಿಲ್ಲ. ಪೊಲೀಸರು ಅನುಮತಿ ನೀಡಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ | ಚಾಮರಾಜಪೇಟೆ ಮೈದಾನ: ದಾಖಲೆ ಇದ್ದರೂ ಒಪ್ಪದ ಬಿಬಿಎಂಪಿ, ದ್ವಂದ್ವ ಮುಂದುವರಿಕೆ

ಪ್ರಕರಣದ ವಿವರ ನೀಡಿದ ಜಮೀರ್‌

ಈ ವಿಚಾರದಲ್ಲಿ ಮೊದಲಿಗೆ 1945ರಲ್ಲಿ ರಲ್ಲಿ ಕೋರ್ಟ್ ನಲ್ಲಿ ದಾವೆ ಹೂಡಲಾಗಿತ್ತು. ಒಂದು ವರ್ಷ ವಾದ ನಡೆದರೂ ಅಂದಿನ ಮುನ್ಸಿಪಲ್ ಸಂಸ್ಥೆ ದಾಖಲೆ ನೀಡಲು ವಿಫಲವಾಗಿತ್ತು. 1958ರಲ್ಲಿ ಕಾರ್ಪೋರೇಷನ್ ವತಿಯಿಂದ ಮೈಸೂರು ನ್ಯಾಯಾಲಯಕ್ಕೆ ಅಪೀಲು ಹೋಗಲಾಯಿತು. ಅಲ್ಲಿಯೂ ದಾಖಲೆ ನೀಡಲು ಕಾರ್ಪೋರೇಷನ್ ವಿಫಲವಾಗಿತ್ತು.
ಸುಪ್ರೀಂಕೋರ್ಟ್‌ನಲ್ಲೂ ದಾಖಲೆ ಸಲ್ಲಿಸುವಲ್ಲಿ ಕಾರ್ಪೋರೇಷನ್ ವಿಫಲವಾಗಿದೆ. 1964ರಲ್ಲಿ ಸುಪ್ರೀಂಕೋರ್ಟ್‌ ಪ್ರರಕಣವನ್ನು ಇತ್ಯರ್ಥ ಮಾಡಿ, 1965ರಲ್ಲಿ ವಕ್ಫ್‌ ಪರವಾಗಿ ಗೆಜೆಟ್ ನೊಟಿಫಿಕೇಷನ್ ಆಗಿದೆ.
ಗೆಜೆಟ್ ನೊಟಿಫಿಕೇಷನ್ ಆದಾಗ ಅಂದಿನ ಕಾರ್ಪೋರೇಷನ್ ವಿರೋಧಿಸದೆ ಸುಮ್ಮನಿತ್ತು. ಆದರೆ 1972ರಲ್ಲಿ ಕಾರ್ಪೋರೇಷನ್ ವತಿಯಿಂದ ಮತ್ತೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಯಿತು ಎಂದು ಪ್ರರಕಣದ ಇತಿಹಾಸವನ್ನು ಜಮೀರ್‌ ತಿಳಿಸಿದರು.

ಸಂಸದರು ಬಂದಿಲ್ಲ

ಇದಕ್ಕೂ ಮುನ್ನ ಮಾತನಾಡಿದ ಮಾಜಿ ಕಾರ್ಪೊರೇಟರ್‌ ಚಂದ್ರಶೇಖರ್‌ ಮಾತನಾಡಿ, ಸಭೆಗೆ ಸಂಸದ ಪಿ.ಸಿ. ಮೋಹನ್‌, ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಅವರನ್ನೂ ಆಹ್ವಾನಿಸಿದ್ದೆವು, ಆದರೆ ಯಾವ ಕಾರಣಕ್ಕೆ ಬಂದಿಲ್ಲ ಗೊತ್ತಾಗುತ್ತಿಲ್ಲ. ಸ್ಥಳೀಯ ಶಾಸಕರು ಆಟದ ಮೈದಾನವನ್ನು ಉಳಿಸಿಕೊಂಡು ಹೋಗಬೇಕು ಎನ್ನುವುದು ನಮ್ಮ ಆಸೆ. ನಾವು ಇರುವವರೆಗೂ ಆಟದ ಮೈದಾನ ಉಳಿಸಿಕೊಂಡು ಹೋಗುತ್ತೇವೆ ಎಂದು ಶಾಸಕರು ಭರವಸೆ ನೀಡಲಿ. 45 ವರ್ಷಗಳಿಂದ ಹೀಗೆಯೇ ಇದೆ. ಅವರು ನಮಾಜ್ ಮಾಡಿಕೊಂಡು ಹೋಗುತ್ತಾ ಇದ್ದಾರೆ, ನಾವು ಆಟ ಆಡಿಕೊಂಡು ಹೋಗುತ್ತಾ ಇದ್ದೇವೆ. ಹಾಗೆ ಹೇಳಿದರೆ ಮಾತ್ರವೇ ನಾವು ಪ್ರತಿಭಟನೆಯನ್ನು ಕೈಬಿಡುತ್ತೇವೆ. ಬಿಬಿಎಂಪಿ ಆಯುಕ್ತರ ಹೇಳಿಕೆಯಿಂದ ಈ ಗೊಂದಲ ಸೃಷ್ಟಿಯಾಗಿದೆ. ಅದನ್ನು ಸರಿ ಪಡಿಸಲು ಈ ಸಭೆಯಲ್ಲಿ ಪ್ರಯತ್ನ ಪಡಲಾಗುವುದು ಎಂದರು.

ಇದನ್ನೂ ಓದಿ | ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಜುಲೈ 12ರಂದು ಚಾಮರಾಜಪೇಟೆ ಬಂದ್‌ ಕರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Rotary June Run : ಮ್ಯಾರಥಾನ್​ನಲ್ಲಿ ಸುಮಾರು 2 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನೋಂದಣಿ ಪ್ರಾರಂಭಗೊಂಡಿದ್ದು ಸಾವಿರ ಮಂದಿ ಆಸಕ್ತಿ ತೋರಿದ್ದಾರೆ. ಕ್ಯೂಆರ್​​ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. 10 ಕಿಲೋ ಮೀಟರ್​, 5 ಕಿಲೋ ಮೀಟರ್​, 3 ಕಿಲೋ ಮೀಟರ್​ ಹಾಗೂ 1 ಕಿಲೋಮೀಟರ್ ವಿಭಾಗದಲ್ಲಿ ಓಟ ನಡೆಯಲಿದೆ.

VISTARANEWS.COM


on

Rotary June Run
Koo

ಬೆಂಗಳೂರು: ರೋಟರಿ ಜಿಲ್ಲೆ 3192ರ ವತಿಯಿಂದ ಜೂನ್​ 9ರಂದು (ಭಾನುವಾರ) ಬೆಳಗ್ಗೆ 5 ಗಂಟೆಗೆ ನಗರದ ವಿಜ್ಞಾನ ಮತ್ತು ಕೃಷಿ ವಿಶ್ವವಿದ್ಯಾಲಯ (ಜಿಕೆವಿಕೆ) ಆವರಣದಲ್ಲಿ ‘ರೋಟರಿ ಜೂನ್​ ರನ್’​ (Rotary June Run) ಮ್ಯಾರಥಾನ್​ ಆಯೋಜಿಸಲಾಗಿದೆ. ‘ವಿಸ್ತಾರ ನ್ಯೂಸ್​’ ಈ ಮ್ಯಾರಥಾನ್​ಗೆ ಮಾಧ್ಯಮ ಸಹಯೋಗ ನೀಡುತ್ತಿದೆ. ಸಮಾಜಮುಖಿ ಕಾರ್ಯಗಳಿಗೆ ನಿಧಿ ಸಂಗ್ರಹ ಮಾಡುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಲಾಗಿದ್ದು, ಸಾವಿರಾರು ಓಟದ ಆಸಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮ್ಯಾರಥಾನ್​ನಲ್ಲಿ ಸುಮಾರು 2 ಸಾವಿರ ಓಟದ ಆಸಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ನೋಂದಣಿ ಪ್ರಾರಂಭಗೊಂಡಿದ್ದು, ಸುಮಾರು ಒಂದು ಸಾವಿರ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಕ್ಯೂಆರ್​​ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. 10 ಕಿಲೋ ಮೀಟರ್​, 5 ಕಿಲೋ ಮೀಟರ್​, 3 ಕಿಲೋ ಮೀಟರ್​ ಹಾಗೂ 1 ಕಿಲೋಮೀಟರ್ ವಿಭಾಗದಲ್ಲಿ ಓಟದ ಸ್ಪರ್ಧೆ ನಡೆಯಲಿದೆ.

ಕಾರ್ಯಕ್ರಮದ ಅತಿಥಿಗಳಾಗಿ ವಿಸ್ತಾರ ನ್ಯೂಸ್​​ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿರಣ್​ ಕುಮಾರ್ ಡಿ. ಕೆ ಮತ್ತು ಸಹಾಯಕ ಸಂಪಾದಕ ಚಂದನ್ ಶರ್ಮಾ ಅವರು ಪಾಲ್ಗೊಳ್ಳಲಿದ್ದಾರೆ. ಇವರು ಬೆಳಗ್ಗೆ 5 ಗಂಟೆಗೆ ಓಟಕ್ಕೆ ಚಾಲನೆ ನೀಡಲಿದ್ದಾರೆ. 10 ವರ್ಷಗಳಿಂದ ರೋಟರಿ ಸಂಸ್ಥೆಯು ಈ ಓಟವನ್ನು ಆಯೋಜಿಸಿಕೊಂಡು ಬರುತ್ತಿದೆ. ಕೊರೊನಾ ಕಾಲದಲ್ಲಿ ಮ್ಯಾರಥಾನ್​ಗೆ ಅಡಚಣೆಯಾಗಿರುವುದು ಬಿಟ್ಟರೆ ನಿರಂತರವಾಗಿ ಸಮಾಜ ಮುಖಿ ಕಾರ್ಯಗಳ ಉದ್ದೇಶವನ್ನು ಇಟ್ಟುಕೊಂಡು ಓಟ ಆಯೋಜಿಸಿಕೊಂಡು ಬರಲಾಗಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

ಓಟದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವವರು ವೆಬ್​ಸೈಟ್​ ಅಥವಾ ಕ್ಯೂಆರ್ ಕೋಡ್​ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಓಟದ ಆಸಕ್ತರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ.

ಸಾಮಾಜಿಕ ಕಾರ್ಯಕ್ಕಾಗಿ ನಿಧಿ ಸಂಗ್ರಹ

ಮ್ಯಾರಥಾನ್​ ವೇಳೆ ಸಂಗ್ರಹವಾಗುವ ನಿಧಿಯನ್ನು ಪರಿಸರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಯೋಜನೆಗಳು ಸೇರಿದಂತೆ ಸಮಾಜಮುಖಿ ಕಾರ್ಯಗಳಿಗಾಗಿ ವಿನಿಯೋಗಿಸಲಾಗುವುದು. ಪರಿಸರಕ್ಕೆ ಸಂಬಂದಿಸಿದಂತೆ ಚಿತ್ರದುರ್ಗ
ಜಿಲ್ಲೆಯ ಚಳ್ಳಕೆರೆ ಸಮೀಪದ ಸುಮಾರು 1200 ಎಕರೆ ಬರಡು ಭೂಮಿಯಲ್ಲಿ
ಸಸಿಗಳನ್ನು ನೆಡಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ‘ಹ್ಯಾಪಿ ಸ್ಕೂಲ್’ ಯೋಜನೆಯಡಿ ಸರ್ಕಾರಿ ಶಾಲೆಗಳ
ಉನ್ನತೀಕರಣ, ಸೈಕಲ್ ವಿತರಣೆ, ಇ ಕಿಟ್ ವಿತರಣೆ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ಮಕ್ಕಳಿಗೆ ಆಟದ ಪ್ರದೇಶ ನಿರ್ಮಾಣ ನೀಡಲಾಗುವುದು. ಅದೇ ರೀತಿ ಹೆಣ್ಣು ಮಕ್ಕಳ ಶೌಚಾಲಯ ನಿರ್ಮಿಸಲಾಗುವುದು. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಡವರಿಗೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆ, ಮುಟ್ಟಿನ ನೈರ್ಮಲ್ಯ ಇತರೆ ಯೋಜನೆಗಳಿಗಾಗಿ ಬಳಸಲಾಗುವುದು ಎಂದು ರೋಟರಿ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಟಿ ನಿರಂಜನ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

ಚಿತ್ರದುರ್ಗದಲ್ಲಿ 1200 ಎಕರೆ ಬರಡು ಭೂಮಿಯನ್ನು ದತ್ತು ತೆಗೆದುಕೊಳ್ಳಲಾಗಿದೆ. 400 ಎಕರೆ ಪ್ರದೇಶದಲ್ಲಿ ಗಿಡಗಳನ್ನು ನೆಡಲಾಗಿದೆ. ಇನ್ನೂ 800 ಎಕರೆ ಪ್ರದೇಶವನ್ನು ಅರಣ್ಯೀಕರಣ ಮಾಡಬೇಕಾಗಿದೆ. ಓಟದಲ್ಲಿ ಸಂಗ್ರಹಗೊಂಡಿರುವ ಮೊತ್ತವನ್ನು ಅಲ್ಲಿಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ನಡೆದ ಗುರುದತ್ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಸಂಗ್ರಹಿಸಿದ ಹಣದಲ್ಲಿ ರೋಟರಿ 119ನೇ ವರ್ಷಾಚರಣೆಯ ಸಂದರ್ಭದಲ್ಲಿ 119 ರೋಗಿಗಳ ಹೃದಯ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆಡೆಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Continue Reading

ಬೆಂಗಳೂರು

Murder Case : ಪ್ರಬುದ್ಧಳ ಕೊಲೆ ಮಾಡಿದ್ದು ತಮ್ಮನ ಸ್ನೇಹಿತನೇ; ಕನ್ನಡಕದ ಹಿಂದಿನ ರಹಸ್ಯ ರಿವೀಲ್‌

Suspicious Case : ಬೆಂಗಳೂರಿನಲ್ಲಿ ಕಾಲೇಜು ಹುಡುಗಿಯೊಬ್ಬಳ ಮೃತದೇಹವು ಕುತ್ತಿಗೆ ಹಾಗೂ ಎಡಗೈ ಕೊಯ್ದ ಸ್ಥಿತಿಯಲ್ಲಿ ಮನೆಯ ಬಾತ್‌ ರೂಮಿನಲ್ಲಿ ಪತ್ತೆಯಾಗಿತ್ತು. ಮೊದಮೊದಲು ಇದು ಆತ್ಮಹತ್ಯೆ ಇರಬಹುದು ಎಂದು ಶಂಕಿಸಲಾಗಿತ್ತು. ಇದೀಗ ತನಿಖೆ ವೇಳೆ ಯುವತಿಯ ಸಾವಿನ ಸೀಕ್ರೇಟ್‌ ರಿವೇಲ್‌ ಆಗಿದ್ದು, ತಮ್ಮನ ಸ್ನೇಹಿತ ಕೊಲೆಗಾರ (Murder case) ಎಂದು ತಿಳಿದು ಬಂದಿದೆ.

VISTARANEWS.COM


on

By

Murder Case in Bengaluru
Koo

ಬೆಂಗಳೂರು: ಬೆಂಗಳೂರಿನ (Bengaluru News) ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ (Suspicious Case) ಪ್ರಬುದ್ಧ (21) ಎಂಬಾಕೆ (prabuddha murder case) ಮೃತಪಟ್ಟಿದ್ದಳು. ತನಿಖೆಗಿಳಿದ ಪೊಲೀಸರಿಗೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇದು ಆತ್ಮಹತ್ಯೆಯಲ್ಲ, ಕೊಲೆ ಎಂಬುದು (Murder Case) ಸಾಬೀತಾಗಿತ್ತು. ಆದರೆ ಕೊಲೆಗಾರರು ಯಾರು? ಯಾಕಾಗಿ ಕೊಲೆ ನಡೆಯಿತು ಎಂಬುದು ತಿಳಿದಿರಲಿಲ್ಲ. ಇದೀಗ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಅಪ್ರಾಪ್ತನೊಬ್ಬ ಸ್ನೇಹಿತನ ಕನ್ನಡಕ ರಿಪೇರಿ ವಿಚಾರಕ್ಕೆ ಪ್ರಬುದ್ಧಳ ಕೊಲೆ ನಡೆದು ಹೋಗಿದೆ.

ಪ್ರಬುದ್ಧಳ ತಮ್ಮ ಹಾಗೂ ಹತ್ಯೆ ಮಾಡಿದ ಆರೋಪಿ ಇಬ್ಬರು ಸ್ನೇಹಿತರಾಗಿದ್ದರು. ಆರೋಪಿ ತನ್ನ ಸ್ನೇಹಿತನ ಕನ್ನಡಕವನ್ನು ಡ್ಯಾಮೇಜ್ ಮಾಡಿದ್ದ. ಇದನ್ನು ರಿಪೇರಿ‌ ಮಾಡಿಸಿ ಕೊಡು ಎಂದು ಸ್ನೇಹಿತ ಪಟ್ಟು ಹಿಡಿದಿದ್ದ. ಆದರೆ ರಿಪೇರಿಗೆ ಕಾಸಿಲ್ಲದೇ ಅಪ್ರಾಪ್ತ ಆರೋಪಿ ಸುಮ್ಮನಾಗಿದ್ದ.

ಕೊಲೆಯಾದ ದಿನ ಪ್ರಬುದ್ಧ ಮನೆಗೆ ಬಂದಿದ್ದ ಆರೋಪಿ, ಪರ್ಸ್‌ನಲ್ಲಿದ್ದ ಎರಡು ಸಾವಿರ ರೂಪಾಯಿ ಕದ್ದಿದ್ದ. ಆರೋಪಿ ಕದಿಯುವುದನ್ನು ಕಂಡ ಪ್ರಬುದ್ಧ ಪ್ರಶ್ನೆ ಮಾಡಿದ್ದಳು. ಇದರಿಂದ ಗಾಬರಿಗೊಂಡ ಆರೋಪಿ ಕ್ಷಮಿಸಿಬಿಡು ಎಂದು ಕಾಲು ಹಿಡಿದುಕೊಂಡಿದ್ದ.

ಈ ಗಲಿಬಿಲಿಯಲ್ಲಿ ಆರೋಪಿ ಕಾಲು ಹಿಡಿದಾಗ ಪ್ರಬುದ್ಧ ಆಯ ತಪ್ಪಿ ಬಿದ್ದಿದ್ದಳು. ಈ ವೇಳೆ ತಲೆಗೆ ಪೆಟ್ಟು ಬಿದ್ದಾಗ, ಪ್ರಜ್ಞೆ ತಪ್ಪಿದ್ದಳು. ಇದರಿಂದ ಆತಂಕಗೊಂಡ ಆರೋಪಿ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಕೈ ಹಾಗೂ ಕುತ್ತಿಗೆಯನ್ನು ಕೊಯ್ದು ಅಲ್ಲಿಂದ ಪರಾರಿ ಆಗಿದ್ದ. ಪ್ರಜ್ಞೆ ತಪ್ಪಿದ್ದ ಪ್ರಬುದ್ಧ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಳು.

ಇದನ್ನೂ ಓದಿ: Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

ಏನಿದು ಘಟನೆ?

ಮೇ 15ರ ಮಧ್ಯಾಹ್ನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಬುದ್ಧ ಎಂಬಾಕೆ ಮನೆಯ ಬಾತ್‌ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಆಕೆಯ ಕುತ್ತಿಗೆ ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.

ಆ ದಿನ ಪ್ರಬುದ್ಧ ತಾಯಿ ಸೌಮ್ಯಗೆ ಕರೆ ಮಾಡಿ ಫ್ರೆಂಡ್ಸ್‌ ಜತೆಗೆ ಇದ್ದೀನಿ ಪಾನಿಪುರಿ ತಿಂದು ಮನೆಗೆ ಹೋಗುತ್ತಿನಿ ಅಂದಿದ್ದಳು. ನಂತರ ಆಫೀಸ್‌ ಮುಗಿಸಿ ಮನೆಗೆ ಬಂದು ನೋಡಿದಾಗ ಮಗಳು ಬಾತ್‌ ರೂಮಿನಲ್ಲಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮನೆಯ ಮುಂದಿನ ಡೋರ್‌ ಲಾಕ್‌ ಆಗಿತ್ತು. ಆದರೆ ಹಿಂದಿನ ಡೋರ್‌ ಓಪನ್‌ ಆಗಿತ್ತು ಎಂದು ಸೌಮ್ಯ ಘಟನೆ ವಿವರ ನೀಡಿದ್ದರು. ಮಗಳ ಫೋನ್‌ ಸೋಫ್‌ ಮೇಲೆ ಇತ್ತು. ಆಕೆಯನ್ನು ಆಸ್ಪತ್ರೆಗೆ ಕೆರೆದುಕೊಂಡು ಹೋಗಿ ಬರುವಷ್ಟರಲ್ಲಿ ಫೋನ್‌ ಕೂಡ ಕಳ್ಳತನ ಆಗಿತ್ತು. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವವಳು ಅಲ್ಲ.. ಯಾರೋ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆಗೆ ಕಾರಣವನ್ನು ಭೇದಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

Couples Fight: ನಾಲ್ಕು ಗೋಡೆಗಳ ಮಧ್ಯೆ ಇರಬೇಕಿದ್ದ ಜಗಳ ಬೀದಿಗೆ ಬಂದಿದ್ದಲ್ಲದೆ, ಪೊಲೀಸ್‌ ಠಾಣೆ ಮೆಟ್ಟಿಲನ್ನೂ ಏರಿತ್ತು. ಪತ್ನಿ ಮನೆಯವರನ್ನು ಠಾಣೆಗೆ ಕರೆಸಿದ್ದ ಆರೋಪಿ ಅಲ್ಲಿಯೂ ಜಗಳ ತೆಗೆದಿದ್ದ, ಕೊನೆಗೆ ಸಿಟ್ಟು ನೆತ್ತಿಗೇರಿ ಠಾಣೆಯ ಮುಂಭಾಗದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದ ಗುದ್ದಿ ಒಡೆದು ಹಾಕಿದ್ದಾನೆ. ಪತಿ – ಪತ್ನಿಯ ಜಗಳದಿಂದ ಈಗ ಸಾರ್ವಜನಿಕ ಆಸ್ತಿ ನಷ್ಟವಾಗುವಂತೆ ಆಗಿದೆ. ಅಲ್ಲದೆ, ಪತ್ನಿ ಹಾಗೂ ಆಕೆಯ ಮನೆಯವರ ಮೇಲೆ ಕಂಪ್ಲೇಂಟ್‌ ಕೊಡಲು ಬಂದಾತ ಸಿಟ್ಟಿನಿಂದ ಮಾಡಿಕೊಂಡ ಅವಾಂತರದಿಂದ ತನ್ನ ಮೇಲೆಯೇ ಕೇಸ್‌ ಹಾಕಿಸಿಕೊಂಡಂತೆ ಆಗಿದೆ.

VISTARANEWS.COM


on

Couples Fight Man breaks glass of police station in anger against wife
Koo

ಬೆಂಗಳೂರು: ಗಂಡ – ಹೆಂಡತಿ ಜಗಳ (Couples Fight) ಉಂಡು ಮಲಗುವ ತನಕ ಎಂಬುದು ಹಳೇ ಗಾಧೆ. ಈಗ ಲೇಟೆಸ್ಟ್‌ ಗಾಧೆಯೊಂದು ಬಂದಿದೆ. “ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ (Police Station) ಗ್ಲಾಸ್ ಪೀಸ್ ಪೀಸ್ ಆಗುವ ತನಕ!” ಎಂದು ಮಾರ್ಪಾಟು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ನಾಲ್ಕು ಗೋಡೆಗಳ ಮಧ್ಯೆ ಇರಬೇಕಿದ್ದ ಜಗಳ ಬೀದಿಗೆ ಬಂದಿದ್ದಲ್ಲದೆ, ಪೊಲೀಸ್‌ ಠಾಣೆ ಮೆಟ್ಟಿಲನ್ನೂ ಏರಿತ್ತು. ಪತ್ನಿ ಮನೆಯವರನ್ನು ಠಾಣೆಗೆ ಕರೆಸಿದ್ದ ಆರೋಪಿ ಅಲ್ಲಿಯೂ ಜಗಳ ತೆಗೆದಿದ್ದ, ಕೊನೆಗೆ ಸಿಟ್ಟು ನೆತ್ತಿಗೇರಿ ಠಾಣೆಯ ಮುಂಭಾಗದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದ ಗುದ್ದಿ ಒಡೆದು ಹಾಕಿದ್ದಾನೆ.

ಜಯನಗರದ ಶ್ರೀಧರ್ ಎಂಬಾತನೇ ಪೊಲೀಸ್‌ ಠಾಣೆಯ ಗಾಜಿನ ಬಾಗಿಲನ್ನು ಒಡೆದು ಹಾಕಿದ ಆರೋಪಿಯಾಗಿದ್ದಾನೆ. ಪತಿ ಹಾಗೂ ಪತ್ನಿಯ ಜಗಳದಿಂದ ಈಗ ಸಾರ್ವಜನಿಕ ಆಸ್ತಿ ನಷ್ಟವಾಗುವಂತೆ ಆಗಿದೆ. ಅಲ್ಲದೆ, ಪತ್ನಿ ಹಾಗೂ ಆಕೆಯ ಮನೆಯವರ ಮೇಲೆ ಕಂಪ್ಲೇಂಟ್‌ ಕೊಡಲು ಬಂದಾತ ಸಿಟ್ಟಿನಿಂದ ಮಾಡಿಕೊಂಡ ಅವಾಂತರದಿಂದ ತನ್ನ ಮೇಲೆಯೇ ಕೇಸ್‌ ಹಾಕಿಸಿಕೊಂಡಂತೆ ಆಗಿದೆ.

ಜಯನಗರದ ಶ್ರೀಧರ್ ಎಂಬಾತ ಕಳೆದ ಎರಡು ವರ್ಷಗಳ ಹಿಂದೆ ಅರ್ಚನಾ ಎಂಬಾಕೆ ಮದುವೆಯಾಗಿದ್ದ. ಮಗುವಾದ ನಂತರ ಪತ್ನಿ ಅರ್ಚನಾ ಅವರು ಪತಿ ಶ್ರೀಧರ್ ಮನೆಗೆ ಬಾರದೇ ತಂದೆ ಮನೆಯಾದ ಮಾರೇನಹಳ್ಳಿಯಲ್ಲಿಯೇ ಉಳಿದುಕೊಂಡಿದ್ದರು. ಶ್ರೀಧರ್‌ ಎಷ್ಟೇ ಕರೆದರೂ ಮನೆಗೆ ಬರಲು ಒಪ್ಪಲಿಲ್ಲ. ಈ ಬಗ್ಗೆ ಠಾಣೆಗೆ ದೂರು ನೀಡಲು ಜಯನಗರ ಪೊಲೀಸ್‌ ಠಾಣೆಗೆ ಶ್ರೀಧರ್ ಬಂದಿದ್ದ.

ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ದೂರು ನೀಡಬೇಕು. ಮಗುವಾದ ಮೇಲೆ ಪತ್ನಿಯು ತವರು ಮನೆಯಿಂದ ವಾಪಸ್‌ ಬರುತ್ತಿಲ್ಲ. ನೀವೇ ನನಗೆ ನ್ಯಾಯ ಕೊಡಿ ಎಂದು ಪೊಲೀಸರಿಗೆ ಕೇಳಿಕೊಂಡಿದ್ದ. ಹೀಗಾಗಿ ನಾನು ದೂರು ಕೊಡುತ್ತೇನೆ ಎಂದು ಹೇಳಿದ್ದ. ಆಗ ಪೊಲೀಸರು ಸಹ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿದರಾಯಿತು ಎಂದು ಶ್ರೀಧರ ಪತ್ನಿಯ ಕುಟುಂಬಸ್ಥರನ್ನು ಠಾಣೆಗೆ ಕರೆಸಿದ್ದರು. ಮೊದಲು ಮಾತನಾಡಿಕೊಂಡು ಎಲ್ಲವನ್ನೂ ಬಗೆಹರಿಸಿಕೊಳ್ಳಿ. ಕುಟುಂಬ ಎಂದ ಮೇಲೆ ಮಾತುಗಳು ಬರುತ್ತವೆ, ಹೋಗುತ್ತವೆ. ಎಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂಬ ಕಿವಿ ಮಾತನ್ನೂ ಪೊಲೀಸರು ನೀಡಿದ್ದಾರೆ.

ಇದನ್ನೂ ಓದಿ: Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ಶ್ರೀಧರ್‌ ಮೇಲೆ ಎಫ್‌ಐಆರ್‌

ಈ ವೇಳೆ ಮಾತುಕತೆ ಮಾಡುತ್ತಿದ್ದ ವೇಳೆ ಶ್ರೀಧರ್‌ಗೂ ಹಾಗೂ ಆತನ ಪತ್ನಿಯ ಮನೆಯವರಿಗೂ ಜಗಳ ಶುರುವಾಗಿದೆ. ಶ್ರೀಧರ್‌ಗೆ ತನ್ನ ಕೋಪವನ್ನು ನಿಯಂತ್ರಣ ಮಾಡಿಕೊಳ್ಳಲು ಆಗಿಲ್ಲ. ಹಾಗಾಗಿ ಗಲಾಟೆ ಭರದಲ್ಲಿ ಅಲ್ಲಿಯೇ ಇದ್ದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದಲೇ ಬಲವಾಗಿ ಗುದ್ದಿದ್ದಾನೆ. ಆಗ ಗ್ಲಾಸ್‌ಗಳು ಪೀಸ್‌ ಪೀಸ್‌ ಆಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಕೇಸ್‌ ಅಡಿ ಶ್ರೀಧರ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದಾರೆ.

Continue Reading

ಕ್ರೈಂ

Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

Rave party: ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

VISTARANEWS.COM


on

Bangalore rave party case Hema got locked up to give build up infront of Police
Koo

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ (Telugu actress Hema) ಅವರು ಪೊಲೀಸರ ಮುಂದೆ ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆಗಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ. ನಾನು ತೆಲುಗಿನ ಫೇಮಸ್‌ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.

ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಅಪಾರ ಪ್ರಮಾಣದ ಮಾದಕ ವಸ್ತು ಸಿಕ್ಕಿರುವ ಕೇಸ್‌ನ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಎರಡು ದಿನ ಎಗ್ಗಿಲ್ಲದೆ ಪಾರ್ಟಿ ನಡೆದಿದೆ. ಹೀಗಾಗಿ ಆ ಜೋಶ್‌ನಲ್ಲಿದ್ದ ನಟಿ ಹೇಮಾ ಅವರು ಪೊಲೀಸರು ದಾಳಿ ಮಾಡಿದ ವೇಳೆ ತಮ್ಮ ಬಗ್ಗೆ ಹೇಳಿಕೊಂಡು ಸರಿಯಾಗಿ ಸಿಕ್ಕಿಬಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ತಾವು ದೊಡ್ಡ ಹಳ್ಳ ತೋಡಿ ಬಚಾವ್‌ ಆಗುತ್ತೇನೆ ಎಂದು ಮಾಡಿದ ಪ್ಲ್ಯಾನ್‌ ಫ್ಲಾಪ್‌ ಆಗಿದ್ದು, ಆ ಹಳ್ಳಕ್ಕೆ ಅವರೇ ಬಿದ್ದಂತೆ ಆಗಿದೆ.

ಅಸಲಿಗೆ ಸಿಸಿಬಿ ಪೊಲೀಸರಿಗೆ ಹೇಮಾ ಒಬ್ಬರು ನಟಿ ಎಂಬುದೇ ಗೊತ್ತಾಗಿರಲಿಲ್ಲ. ಸಾಮಾನ್ಯವಾಗಿ ಎಲ್ಲರನ್ನು ವಿಚಾರಣೆ ನಡೆಸುವಂತೆಯೇ ಹೇಮಾರನ್ನೂ ವಿಚಾರಿಸುತ್ತಿದ್ದರು. ಈ ವೇಳೆ ಪೊಲೀಸರರ ಮುಂದೆ ಹೇಮಾ ನಾನು ದೊಡ್ಡ ನಟಿ ಇದ್ದೇನೆ. ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ ಎಂದು ಹೇಳಿಕೊಂಡಿದ್ದರು. ಆಗ ಪೊಲೀಸರು ಪರಿಶೀಲನೆ ಮಾಡಿದಾಗ ಆಕೆ ನಟಿ ಅನ್ನೋದು ಗೊತ್ತಾಗಿದೆ.

ಕಿರಿಕ್‌ ಮಾಡಿದ್ದ ನಟಿ ಹೇಮಾ

ಜಿಆರ್ ಫಾರ್ಮ್ ಹೌಸ್‌ನಲ್ಲಿ ಶನಿವಾರ ರಾತ್ರಿಯಿಂದಲೇ ರೇವ್ ಪಾರ್ಟಿ ಶುರುವಾಗಿತ್ತು ಎಂಬುದು ಗೊತ್ತಾಗಿದೆ. ಒಂದು ದಿನ ಪಾರ್ಟಿ ಆದ ಬಳಿಕ ಸಿಸಿಬಿ ಪೊಲೀಸರಿಗೆ ವಿಚಾರ ತಿಳಿದು ರೈಡ್ ಮಾಡಲಾಗಿದೆ‌. ಇದರ ಜತೆಗೆ ಸಿಸಿಬಿ ಪೊಲೀಸರೊಂದಿಗೆ ನಟಿ ಹೇಮಾ ಕಿರಿಕ್ ಮಾಡಿದ್ದಾರೆ. ವಿಚಾರಣೆಗೆಂದು ಪೊಲೀಸರು ಇರಿಸಿಕೊಂಡಿದ್ದಾಗ ಕಿರಿಕ್ ತೆಗೆದು, ನನಗೆ ಸರಿಯಾದ ಊಟ ಕೊಟ್ಟಿಲ್ಲ. ನಾನೊಬ್ಬ ನಟಿ ಸರಿಯಾಗಿ ಟ್ರೀಟ್ ಮಾಡಿ ಎಂದು ಆಕ್ರೋಶ ಹೊರಹಾಕಿದ್ದರು ಎಂದು ತಿಳಿದುಬಂದಿದೆ.

ರೇವ್‌ ಪಾರ್ಟಿ ಕೇಸ್‌; ಹೆಬ್ಬಗೋಡಿ ಠಾಣೆಯ ಎಎಸ್‌ಐ ಸೇರಿ ಮೂವರ ಸಸ್ಪೆಂಡ್‌

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಗೆ (Rave party) ಸಂಬಂಧಪಟ್ಟಂತೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿನ ಎಎಸ್ಐ ಸೇರಿ ಮೂವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ವೇಳೆ ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ಗಳಿಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್‌ ಬಾಲದಂಡಿ ಚಾರ್ಜ್ ಮೆಮೋ‌ ನೀಡಿದ್ದು, ಇಷ್ಟೆಲ್ಲ ಆಗುತ್ತಿದ್ದರೂ ನಿಮ್ಮ ಗಮನಕ್ಕೆ ಯಾಕೆ ಬಂದಿಲ್ಲ? ಇದಕ್ಕೆ ಕಾರಣ ನೀಡಿ ಎಂದು ವಿವರಣೆಯನ್ನು ಕೇಳಿದ್ದಾರೆ. ಡಿವೈಎಸ್ಪಿ ಹಾಗೂ ಇನ್ಸ್‌ಪೆಕ್ಟರ್‌ ಅವರ ಉತ್ತರ ಆಧರಿಸಿ ಅವರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಠಾಣೆಯ ಎಸ್.ಬಿ. ಗಿರೀಶ್, ಎಎಸ್ಐ ನಾರಾಯಣ ಸ್ವಾಮಿ ಮತ್ತು ಬೀಟ್ ಕಾನ್ಸ್‌ಟೇಬಲ್ ದೇವರಾಜು ಅಮಾನತಾದವರು. ಸಿಸಿಬಿ ಪೊಲೀಸರಿಗೆ ಸಿಕ್ಕ ಮಾಹಿತಿ ಸ್ಥಳೀಯ ಪೊಲೀಸರಿಗೆ ಯಾಕೆ ಇರಲಿಲ್ಲ ಎಂದು ಪ್ರಶ್ನೆ ಮಾಡಲಾಗಿದ್ದು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

ರೇವ್‌ ಪಾರ್ಟಿಯಲ್ಲಿ ತೆಲುಗು ನಟಿಯರಾದ ಹೇಮಾ (Telugu actress Hema) ಹಾಗೂ ಆಶಿ ರಾಯ್ (Aashi Roy) ಒಳಗೊಂಡಂತೆ 103 ಮಂದಿ ಭಾಗಿಯಾಗಿದ್ದರು. ಇಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಷ್ಟೂ ಮಂದಿಯನ್ನು ತಪಾಸಣೆಗೊಳಪಡಿಸಲಾಗಿತ್ತು. ಈಗ ವೈದ್ಯಕೀಯ ವರದಿ ಬಂದಿದ್ದು, ಅವರಲ್ಲಿ 86 ಮಂದಿಯ ರಿಪೋರ್ಟ್ ಪಾಸಿಟಿವ್ ಬಂದಿದೆ. ನಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ.

ವಾಸು ಎಂಬಾತನ ಬರ್ತ್‌ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.

Sunset To Sun Rise victory ಶೀರ್ಷಿಕೆಯಲ್ಲಿ ಈ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಸುಮಾರು ನೂರೈವತ್ತು ಮಂದಿ ಸೇರಿದ್ದರು. ಪೊಲೀಸ್‌ ದಾಳಿ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದರು. ಆದರೆ, ಬಹುತೇಕ ಮಂದಿ ಸಿಕ್ಕಿಬಿದ್ದಿದ್ದರು. ಈಗ ಸಿಕ್ಕಿಬಿದ್ದವರಲ್ಲಿ ಬಹುತೇಕರ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಪಾಸಿಟಿವ್ ಅಂಶ ಪತ್ತೆಯಾಗಿದೆ. ಹೀಗಾಗಿ ಪಾಸಿಟಿವ್‌ ರಿಪೋರ್ಟ್‌ ಬಂದವರಿಗೆ ಸಿಸಿಬಿ ನೋಟಿಸ್ ನೀಡಲಿದ್ದು, ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ್ದ ಹೇಮಾ!

ಈ ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿದ್ದಂತೆ ವಿಡಿಯೊವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದ ಹೇಮಾ, ನಾನು ಆ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಲೇ ಇಲ್ಲ. ಹೈದರಾಬಾದ್‌ನ ಫಾರ್ಮ್‌ ಹೌಸ್‌ನಲ್ಲಿದ್ದೇನೆ ಎಂದು ವಿಡಿಯೊ ಸಂದೇಶವನ್ನು ಹರಿಬಿಟ್ಟಿದ್ದರು. ಆದರೆ, ಮುಜುಗರ ತಪ್ಪಿಸಲು ಅವರು ಅದೇ ಫಾರಂ ಹೌಸ್‌ನ ಒಂದು ಕಡೆ ಬಂದು ವಿಡಿಯೊ ಮಾಡಿದ್ದಾರೆ ಎಂದು ಹಲವರು ಅಂದೇ ಹೇಳಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವರು ವಾದಿಸಿದ್ದರು. ಈಗ ಈ ಸಂಬಂಧ ಪೊಲೀಸರಿಗೆ ಬಂದಿರುವ ರಿಪೋರ್ಟ್‌ ವೈರಲ್‌ ಆಗಿದ್ದು, ಅವರು ಸಹ ಮಾದಕ ವಸ್ತು ಸೇವನೆ ಮಾಡಿರುವುದು ಸಾಬೀತಾಗಿದೆ ಎಂದು ತಿಳಿದುಬಂದಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದರು. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದರು.. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಫಾರ್ಮ್ ಹೌಸ್‌ನ ಇಂಚಿಂಚನ್ನೂ ಜಾಲಾಡಿದ್ದರು.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಅಂದೇ ಪೊಲೀಸರು ಬಂಧಿಸಿದ್ದರು. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಎಂಟ್ರಿಗೆ ಪಾಸ್‌ವರ್ಡ್‌ ನೀಡಿದ್ದ ವಾಸು

ಪಾರ್ಟಿ ಆಯೋಜಕ, ಆರೋಪಿ ವಾಸು ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದ. ಆದರೆ, ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರೂ ಬಾರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಮಾದಕ ವಸ್ತುಗಳ ವಶಕ್ಕೆ

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿದ್ದವು. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿತ್ತು. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಇದನ್ನೂ ಓದಿ: Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

ನಟಿ ಆಶಿ ರಾಯ್ ಹೇಳಿದ್ದೇನು?

ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆಶಿ ರಾಯ್‌ ಸಹ ವಿಡಿಯೊವೊಂದನ್ನು ಮಾಡಿ ಸ್ಪಷ್ಟನೆ ನೀಡಿದ್ದಾರೆ. ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದರು. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

Continue Reading
Advertisement
Rotary June Run
ಪ್ರಮುಖ ಸುದ್ದಿ37 mins ago

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Flight Turbulence
ವಿದೇಶ47 mins ago

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

Murder Case in Bengaluru
ಬೆಂಗಳೂರು48 mins ago

Murder Case : ಪ್ರಬುದ್ಧಳ ಕೊಲೆ ಮಾಡಿದ್ದು ತಮ್ಮನ ಸ್ನೇಹಿತನೇ; ಕನ್ನಡಕದ ಹಿಂದಿನ ರಹಸ್ಯ ರಿವೀಲ್‌

t20 cricket
ಪ್ರಮುಖ ಸುದ್ದಿ48 mins ago

T20 Cricket : ಬಾಂಗ್ಲಾದೇಶ ತಂಡವನ್ನು ಸೋಲಿಸಿ ಇತಿಹಾಸ ನಿರ್ಮಿಸಿದ ಕ್ರಿಕೆಟ್​ ಶಿಶು ಅಮೆರಿಕ

Couples Fight Man breaks glass of police station in anger against wife
ಕ್ರೈಂ53 mins ago

Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

bangladesh mp murder ಹನಿ ಟ್ರ್ಯಾಪ್
ಕ್ರೈಂ1 hour ago

ಹನಿ ಟ್ರ್ಯಾಪ್‌ ಮಾಡಿ ಕೋಲ್ಕತಾಗೆ ಕರೆಸಿಕೊಂಡು ಬಾಂಗ್ಲಾದೇಶ ಸಂಸದನ ಕೊಲೆ; ಚರ್ಮ ಸುಲಿದು, ದೇಹ ಪೀಸ್‌ ಪೀಸ್‌

Bangalore rave party case Hema got locked up to give build up infront of Police
ಕ್ರೈಂ1 hour ago

Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

Karnataka Rain
ಮಳೆ1 hour ago

Karnataka Rain : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ; ಗಾಳಿ-ಮಳೆಗೆ ಮರ ಮುರಿದು ಬಿದ್ದು ಜಾನುವಾರು ಸಾವು

Viral Video
ವೈರಲ್ ನ್ಯೂಸ್2 hours ago

Viral Video: ಮದುವೆಗೂ ಮೊದಲು ವಧುವನ್ನು ಕಿಡ್ನ್ಯಾಪ್‌ ಮಾಡಲೇಬೇಕು! ಇದು ಈ ಜನಾಂಗದ ಕಡ್ಡಾಯ ನಿಯಮ!

DC m s Diwakar instructed for adequate supply of sowing seed, fertilizers in monsoon season
ಮಳೆ2 hours ago

Vijayanagara News: ಬಿತ್ತನೆ ಬೀಜ, ರಸ ಗೊಬ್ಬರ ಸಮರ್ಪಕ ಪೂರೈಕೆಗೆ ಡಿಸಿ ದಿವಾಕರ್ ಸೂಚನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌