G20 Summit 2023: ಜಿ20 ಶೃಂಗ ಸಭೆಯ ಆತಿಥ್ಯ ರಾಷ್ಟ್ರ ಭಾರತದಿಂದ ಭರದ ಸಿದ್ಧತೆ! ವಿಶ್ವ ನಾಯಕರಿಗೆ ಬುಲೆಟ್‌ಪ್ರೂಫ್ ಕಾರ್ - Vistara News

ದೇಶ

G20 Summit 2023: ಜಿ20 ಶೃಂಗ ಸಭೆಯ ಆತಿಥ್ಯ ರಾಷ್ಟ್ರ ಭಾರತದಿಂದ ಭರದ ಸಿದ್ಧತೆ! ವಿಶ್ವ ನಾಯಕರಿಗೆ ಬುಲೆಟ್‌ಪ್ರೂಫ್ ಕಾರ್

G20 Summit 2023: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸೆಪ್ಟೆಂಬರ್ 9ರಿಂದ 11ರವರೆಗೆ ಭಾರತದ ಅಧ್ಯಕ್ಷತೆಯಲ್ಲಿ 2023ರ ಸಾಲಿನ ಜಿ20 ಶೃಂಗಸಭೆ ನಡೆಯಲಿದೆ.

VISTARANEWS.COM


on

G20 Summit 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಿ20 ಶೃಂಗಸಭೆಗೆ (G20 Summit 2023) ಆತಿಥ್ಯವನ್ನು ವಹಿಸುತ್ತಿರುವ ಭಾರತವು ಇದಕ್ಕಾಗಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ದಿಲ್ಲಿಯಲ್ಲಿ (New Delhi) ಸೆಪ್ಟೆಂಬರ್ 9ರಿಂದ 10ರವರೆಗೆ ನಡೆಯಲಿರುವ ಈ ಶೃಂಗಸಭೆಯಲ್ಲಿ 25 ರಾಷ್ಟ್ರಗಳ ನಾಯಕರು (Leaders From 25 Countries) ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಜಿ20 ಶೃಂಗಸಭೆಯು ಭಾರತಕ್ಕೆ (Host Country India) ಈ ರೀತಿಯ ಮೊದಲ ಕಾರ್ಯಕ್ರಮವಾಗಿದ್ದು, ಶೃಂಗಸಭೆಯು ಯಾವುದೇ ತೊಂದರೆಯಿಲ್ಲದೆ ಮುಕ್ತಾಯಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಅವಿರತವಾಗಿ ದುಡಿಯುತ್ತಿದೆ.

ವಿಶ್ವ ನಾಯಕರ ಭದ್ರತೆಗೆ ವಿಶೇಷ ಆದ್ಯತೆ

ಶೃಂಗ ಸಭೆ ನಡೆಯಲಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿರುವ ಎಲ್ಲ ಉನ್ನತ ಮಟ್ಟದ ಹೊಟೇಲ್‌ಗಳನ್ನು ಅಂತಾರಾಷ್ಟ್ರೀಯ ಅತಿಥಿಗಳಿಗಾಗಿ ಮುಂಗಡವಾಗಿ ಬುಕ್ ಮಾಡಲಾಗಿದೆ. ಕಾರ್ಯಕ್ರಮದ ವೇಲೆ ಸಂಚಾರ ದಟ್ಟಣೆಯನ್ನು ತಪ್ಪಿಸುವುದಕ್ಕಾಗಿ ದಿಲ್ಲಿ ಪೊಲೀಸರು ಟ್ರಾಫಿಕ್ ರಿಹರ್ಸಲ್ ಮಾಡುತ್ತಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆ 2023 ಭದ್ರತೆಯ ದೃಷ್ಟಿಯಿಂದ ಒಂದು ನಿರ್ಣಾಯಕ ಘಟನೆಯಾಗಿದೆ ಮತ್ತು ಅದಕ್ಕಾಗಿಯೇ ಭಾರತ ಸರ್ಕಾರವು ಭೇಟಿ ನೀಡುವ ನಾಯಕರ ಭದ್ರತಾ ಅಗತ್ಯಗಳನ್ನು ಸರಿಹೊಂದಿಸಲು 20 ಆಡಿ ಬುಲೆಟ್ ರೆಸಿಸ್ಟೆಂಟ್ ಕಾರುಗಳನ್ನು 18 ಕೋಟಿ ರೂ. ಬಾಡಿಗೆಗೆ ಪಡೆದಿದೆ.

ದಿಲ್ಲಿಯಲ್ಲಿ ಸಾರ್ವಜನಿಕ ರಜೆ

ಬುಲೆಟ್ ರೆಸಿಸ್ಟೆಂಟ್ ಕಾರುಗಳನ್ನು ವಿವಿಧ ರಾಷ್ಟ್ರಗಳ ನಾಯಕರು ಮತ್ತು ಸರ್ಕಾರದ ಮುಖ್ಯಸ್ಥರಿಗೆ ವಹಿಸುವುದು ಪ್ರೋಟೋಕಾಲ್ ಕಾರ್ಯವಿಧಾನವಾಗಿದೆ. ನವದಿಲ್ಲಿಯಲ್ಲಿ ನಡೆಯುವ ಶೃಂಗಸಭೆಯು ವರ್ಷವಿಡೀ ನಡೆದ ಎಲ್ಲಾ G20 ಸಭೆಗಳು ಮತ್ತು ಪ್ರಕ್ರಿಯೆಗಳ ಅಂತಿಮಘಟ್ಟವಾಗಿದೆ. ಮೆಗಾ ಈವೆಂಟ್ ಯಾವುದೇ ಗೊಂದಲವಿಲ್ಲದೆ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೆಪ್ಟೆಂಬರ್ 8-10 ರವರೆಗೆ ದೆಹಲಿಯಲ್ಲಿ ಸಾರ್ವಜನಿಕ ರಜೆ ಘೋಷಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ಜಿ20 ಶೃಂಗಸಭೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಪ್ರಧಾನಿ ಮೋದಿ; ಹೊಗಳಿ, ಹೇಳಿಕೆ ಬಿಡುಗಡೆ ಮಾಡಿದ ಅಮೆರಿಕ ವೈಟ್​ಹೌಸ್​

ಯಾವ ರಾಷ್ಟ್ರಗಳು, ಸಂಘಟನೆಗಳು ಭಾಗವಹಿಸುತ್ತಿವೆ?

ಜಿ20 ಗ್ರೂಪ್‌ನ 20 ಸದಸ್ಯ ರಾಷ್ಟ್ರಗಳನ್ನು ಹೊರತುಪಡಿಸಿ, 9 ದೇಶಗಳ ನಾಯಕರನ್ನು ಈ ಶೃಂಗ ಸಭೆಗೆ ಸೇರಲು ಆಹ್ವಾನಿಸಲಾಗಿದೆ. ವಿಶ್ವಸಂಸ್ಥೆ, ಐಎಂಎಫ್, ವಿಶ್ವ ಬ್ಯಾಂಕ್, ವಿಶ್ವ ಆರೋಗ್ಯ ಸಂಸ್ಥೆ, ಐಎಲ್ಒ, ವಿಶ್ವ ವ್ಯಾಪಾರ ಸಂಘಟನೆ, ಎಫ್ಎಸ್‌ಬಿ, ಒಇಸಿಡಿ ಪಾಲ್ಗೊಳ್ಳಲಿವೆ. ಅಲ್ಲದೇ, ಎಯು, ಎುಡಿಎ-ಎನ್ಇಪಿಎಡಿ, ಆಸಿಯಾನ್ ಸೇರಿದಂತೆ ಪ್ರಾದೇಶಿಕ ಸಂಸ್ಥೆಗಳ ಚೇರ್ಮನ್‌ಗಳಿಗೆ ಆಹ್ವಾನ ನೀಡಲಾಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Parliament Security Breach: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ಗೆ ಎಂಟ್ರಿ ಕೊಡೋಕೆ ಯತ್ನ; ತಪ್ಪಿದ ಭಾರೀ ಅವಘಡ

Parliament Security Breach: ಸಂಸತ್‌ ಭವನದ ಎದುರು ನಿಯೋಜನೆಗೊಂಡಿರುವ CISF ಭದ್ರತಾ ಸಿಬ್ಬಂದಿ ಮೂವರನ್ನು ತಪಾಸಣೆ ನಡೆಸಿದಾಗ ಇವರ ಬಳಿ ನಕಲಿ ಆಧಾರ್‌ ಕಾರ್ಡ್‌ ಇರುವುದು ಕಂಡು ಬಂದಿದ್ದು, ತಕ್ಷಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಫೋರ್ಜರಿ ಮತ್ತು ವಂಚನೆ ಪ್ರಕರಣ ದಾಖಲಿಸಿ ತನಿಖೆಗೊಳಪಡಿಸಲಾಗಿದೆ. ಇದರ ಬೆನ್ನಲ್ಲೇ CISF ಸಿಬ್ಬಂದಿ ಹಾಗೂ ದಿಲ್ಲಿ ಪೊಲೀಸರು ಸಂಸತ್‌ ಭವನದ ಸಂಪೂರ್ಣ ಭದ್ರತೆಯನ್ನು ಮರುಪರಿಶೀಲಿಸಿದ್ದಾರೆ.

VISTARANEWS.COM


on

Parliament Security Breach
Koo

ನವದೆಹಲಿ: ಸಂಸತ್‌(Parliament Security Breach) ನುಗ್ಗಿ ಯುವಕರು ಸ್ಮೋಕ್‌ ಬಾಂಬ್‌(Color Smoke Bomb) ಸಿಡಿಸಿ ದಾಂಧಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅಂತಹದ್ದೇ ಒಂದು ಘಟನೆ ಸ್ವಲ್ಪದರಲ್ಲೇ ತಪ್ಪಿದೆ. ನಕಲಿ ಆಧಾರ್‌ ಕಾರ್ಡ್‌(Fake Aadhaar Card) ಬಳಸಿ ಸಂಸತ್‌ ಭವನಕ್ಕೆ ಎಂಟ್ರಿ ಕೊಡಲು ಯತ್ನಿಸಿದ್ದ ಮೂವರನ್ನು ಭದ್ರತಾ ಪಡೆ ಅರೆಸ್ಟ್‌ ಮಾಡಿದೆ. ಇನ್ನು ಬಂಧಿತರನ್ನು ಖಾಸಿಂ, ಮೋನೀಶ್‌ ಮತ್ತಿ ಸೋಯೆಬ್‌ ಎಂದು ಗುರುತಿಸಲಾಗಿದೆ.

ಏನಿದು ಘಟನೆ?

ಗುರುವಾರ ಭದ್ರತಾ ಸಿಬ್ಬಂದಿ ನಿತ್ಯದ ನಡೆಸುವಂತೆ ತಪಾಸಣೆ ವೇಳೆ ಈ ಮೂರು ಕಾರ್ಮಿಕರು ನಕಲಿ ಆಧಾರ್‌ ಕಾರ್ಡ್‌ ಹೊಂದಿರುವುದು ಪತ್ತೆಯಾಗಿದೆ. ಸಂಸತ್‌ ಭವನದ ಎದುರು ನಿಯೋಜನೆಗೊಂಡಿರುವ CISF ಭದ್ರತಾ ಸಿಬ್ಬಂದಿ ಮೂವರನ್ನು ತಪಾಸಣೆ ನಡೆಸಿದಾಗ ಇವರ ಬಳಿ ನಕಲಿ ಆಧಾರ್‌ ಕಾರ್ಡ್‌ ಇರುವುದು ಕಂಡು ಬಂದಿದ್ದು, ತಕ್ಷಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಫೋರ್ಜರಿ ಮತ್ತು ವಂಚನೆ ಪ್ರಕರಣ ದಾಖಲಿಸಿ ತನಿಖೆಗೊಳಪಡಿಸಲಾಗಿದೆ. ಇದರ ಬೆನ್ನಲ್ಲೇ CISF ಸಿಬ್ಬಂದಿ ಹಾಗೂ ದಿಲ್ಲಿ ಪೊಲೀಸರು ಸಂಸತ್‌ ಭವನದ ಸಂಪೂರ್ಣ ಭದ್ರತೆಯನ್ನು ಮರುಪರಿಶೀಲಿಸಿದ್ದಾರೆ.

ಇನ್ನು ಈ ಮೂವರು ನೌಕರರು ಡೀ ವೀ ಪ್ರಾಜೆಕ್ಟ್‌ ಲಿಮಿಟೆಡ್‌ ನಿಯೋಜಿಸಿರುವ ಗುತ್ತಿಗೆ ನೌಕರರಾಗಿದ್ದು, ಇವರು ಸಂಸತ್‌ ಭವನದ ಒಳಗೆ ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. IPC ಸೆಕ್ಷನ್‌ಗಳು 465 (ನಕಲಿ), 419 (ವ್ಯಕ್ತಿತ್ವದಿಂದ ವಂಚನೆ), 120B (ಅಪರಾಧದ ಪಿತೂರಿ), 471 (ನಕಲಿ ದಾಖಲೆಯನ್ನು ಅಸಲಿ ಎಂದು ಬಳಸುವುದು), ಮತ್ತು 468 (ವಂಚನೆಯ ಉದ್ದೇಶಕ್ಕಾಗಿ ನಕಲಿ) ಅಡಿಯಲ್ಲಿ ಮೂವರ ಮೇಲೂ FIR ದಾಖಲಿಸಲಾಗಿದೆ.

ಬುಧವಾರ ಇಬ್ಬರು ಆಗುಂತಕರು ಲೋಕಸಭೆಗೆ ಬಂದು ಬಣ್ಣದ ಸ್ಮೋಕ್ ಬಾಂಬ್ ಸಿಡಿಸಿ (Color Smoke Bomb) ಆತಂಕದ ಪರಿಸ್ಥಿತಿ ಸೃಷ್ಟಿಸಿದ್ದರು. ಈ ಲೋಕಸಭೆ ಭದ್ರತಾ ಲೋಪ ಪ್ರಕರಣಕ್ಕೆ (Security Breach in Lok Sabha) ಸಂಬಂಧಿಸಿದಂತೆ, ಕರ್ನಾಟಕದ ಮನೋರಂಜನ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿತ್ತು. ಇಡೀ ಪ್ರಕರಣದ ಮಾಸ್ಟರ್‌ಮೈಂಡ್ ಎನ್ನಲಾಗಿದ್ದ ಲಲಿತ್ ಝಾ(Masterminde Lalit Jha), ದಿಲ್ಲಿಯ ಕರ್ತವ್ಯ ಪಥ ಪೊಲೀಸ್ ಠಾಣೆಗೆ ಹೋಗಿ ಗುರುವಾರ ಶರಣಾಗಿದ್ದಾನೆ(Surrendered to police). ಬಳಿಕ ಆತನನ್ನು ಔಪಚಾರಿಕವಾಗಿ ನವದೆಹಲಿ ಜಿಲ್ಲಾ ಪೊಲೀಸರು (Delhi Police) ಅರೆಸ್ಟ್ ಮಾಡಿ, ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಿದ್ದಾರೆ. ಕೋಲ್ಕೊತಾ ಮೂಲದ ಶಿಕ್ಷಕ ಲಲಿತ್ ಝಾ, ಘಟನೆ ನಡೆದ ಕೂಡಲೇ ಪರಾರಿಯಾಗಿದ್ದ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಶಿಫಾರಸಿನ ಅನ್ವಯ ಪಾಸ್ ‌ಪಡೆದುಕೊಂಡಿದ್ದ ಡಿ. ಮನೋರಂಜನ್ ಮತ್ತು ಉತ್ತರ ಪ್ರದೇಶದ ಸಾಗರ್ ಶರ್ಮಾ ಅವರು ಸಂಸತ್ ಭದ್ರತೆಯನ್ನು ಭೇದಿಸಿದ್ದರು ಮತ್ತು ಲೋಕಸಭೆ ವಿಸಿಟರ್ ಗ್ಯಾಲರಿಗೆ ಆಗಮಿಸಿದ್ದರು. ಕಲಾಪ ನಡೆಯುತ್ತಿದ್ದ ವೇಳೆ, ಮನೋರಂಜನ್ ಮತ್ತು ಸಾಗರ್ ಶರ್ಮಾ ಅವರು ವಿಸಿಟರ್ ಗ್ಯಾಲರಿಯಂದ ಸಂಸದರು ಇರುವಲ್ಲಿಗೆ ಜಂಪ್ ಮಾಡಿ, ಬಣ್ಣದ ಸ್ಮೋಕ್ ಬಾಂಬ್ ಸಿಡಿಸಿದ್ದರು. ಇದು ಭಾರೀ ಆತಂಕಕ್ಕೆ ಕಾರಣವಾಗಿತ್ತು. ಅಲ್ಲದೇ, ಸಂಸತ್ತಿನ ಹೊರಗೆ ನೀಲಂ ಆಜಾದ್ ಮತ್ತು ಅಮೋಲ್ ಶಿಂಧೆ ಅವರು ಬಣ್ಣದ ಸ್ಮೋಕ್ ಬಾಂಬ್ ಸಿಡಿಸಿದ್ದರು. ಬಳಿಕ ಈ ನಾಲ್ವರು ಅಲ್ಲದೇ, ವಿಕ್ಕಿ ಶರ್ಮಾ ಎಂಬಾತನನ್ನು ದಿಲ್ಲಿ ಪೊಲೀಸರು ಬಂಧಿಸಿದ್ದರು. ಆದರೆ, ಸಂಸತ್ ಭದ್ರತಾ ಲೋಪ ಪ್ರಕರಣದ ಮುಖ್ಯ ಆರೋಪಿಯಾಗಿದ್ದ ಲಲಿತ್ ಝಾ ಮಾತ್ರ ತಲೆ ಮರೆಸಿಕೊಂಡಿದ್ದ ಮತ್ತು ಆತನನ್ನು ಗುರುವಾರ ಬಂಧಿಸಲಾಗಿದೆ.

Pulses Benefits: ಬೇಳೆಕಾಳುಗಳಲ್ಲಿರುವ ಎಲ್ಲ ಪೋಷಕಾಂಶಗಳು ದೇಹಕ್ಕೆ ಸೇರಬೇಕಾದರೆ ಹೀಗೆ ಮಾಡಿ!

Continue Reading

Lok Sabha Election 2024

Election Results 2024: ಸಂಸದರಾಗಿ ಆಯ್ಕೆಯಾದ ಉತ್ತರ ಪ್ರದೇಶದ ಎಂಟು ಶಾಸಕರು; ಶೀಘ್ರ ಉಪಚುನಾವಣೆ

Election Results 2024: ಉತ್ತರ ಪ್ರದೇಶದಿಂದ ಸ್ಪರ್ಧಿಸಿದ್ದ ಎಂಟು ಶಾಸಕರು ಸಂಸದರಾಗಿ ಆಯ್ಕೆಯಾಗಿದ್ದು, ಈ ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯದಲ್ಲಿ ಮಿನಿ ವಿಧಾನಸಭಾ ಚುನಾವಣೆ ನಡೆಯಲಿದೆ. ರಾಜಕೀಯವಾಗಿ ಬಹಳ ನಿರ್ಣಾಯಕ ರಾಜ್ಯವಾದ ಉತ್ತರ ಪ್ರದೇಶದಲ್ಲಿ 13 ಶಾಸಕರು ಮತ್ತು ನಾಲ್ಕು ಎಂಎಲ್‌ಸಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅಂತಿಮವಾಗಿ ಮೂವರು ಎಂಎಲ್‌ಸಿಗಳು ಮತ್ತು ಐವರು ಶಾಸಕರು ಸೇರಿದಂತೆ ಎಂಟು ಮಂದಿ ಜನಪ್ರತಿನಿಧಿಗಳು ಸೋಲು ಕಂಡಿದ್ದಾರೆ.

VISTARANEWS.COM


on

Election Results 2024
Koo

ಲಕ್ನೋ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ (Election Results 2024). 294 ಸೀಟುಗಳನ್ನು ಗೆದ್ದುಕೊಂಡ ಬಿಜೆಪಿ ನೇತೃತ್ವದ ಎನ್‌ಡಿಒ (NDA) ಒಕ್ಕೂಟ ಸರ್ಕಾರ ರಚನೆಗೆ ಮುಂದಾಗಿದೆ. ಮಿತ್ರಪಕ್ಷಗಳು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಬೆಂಬಲ ಸೂಚಿಸಿದ್ದು, ಜೂನ್‌ 9ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇತ್ತ ಉತ್ತರ ಪ್ರದೇಶದಿಂದ ಸ್ಪರ್ಧಿಸಿದ್ದ ಎಂಟು ಶಾಸಕರು ಸಂಸದರಾಗಿ ಆಯ್ಕೆಯಾಗಿದ್ದು, ಈ ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯದಲ್ಲಿ ಮಿನಿ ವಿಧಾನಸಭಾ ಚುನಾವಣೆ ನಡೆಯಲಿದೆ.

ರಾಜಕೀಯವಾಗಿ ಬಹಳ ನಿರ್ಣಾಯಕ ರಾಜ್ಯವಾದ ಉತ್ತರ ಪ್ರದೇಶದಲ್ಲಿ 13 ಶಾಸಕರು ಮತ್ತು ನಾಲ್ಕು ಎಂಎಲ್‌ಸಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅಂತಿಮವಾಗಿ ಮೂವರು ಎಂಎಲ್‌ಸಿಗಳು ಮತ್ತು ಐವರು ಶಾಸಕರು ಸೇರಿದಂತೆ ಎಂಟು ಮಂದಿ ಜನಪ್ರತಿನಿಧಿಗಳು ಸೋಲು ಕಂಡಿದ್ದಾರೆ.

ಗೆದ್ದ ಶಾಸಕರು

ಬಿಜೆಪಿಯ ಪ್ರವೀಣ್‌ ಪಟೇಲ್‌ (ಫುಲ್ಪುರ್‌), ಅತುಲ್‌ ಗಾರ್ಗ್‌ (ಗಾಜಿಯಾಬಾದ್‌) ಮತ್ತು ಅನೂಪ್‌ ಪ್ರಧಾನ್‌ (ಖೈರ್‌) ಸಂಸದರಾಗಿ ಆಯ್ಕೆಯಾಗಿದ್ದಾರೆ. ಇನ್ನು ಸಮಾಜವಾದಿ ಪಾರ್ಟಿ (ಎಸ್‌ಪಿ)ಯ ಅಖಿಲೇಶ್‌ ಯಾದವ್‌ (ಕಾರ್ಹಾಲ್), ಝಿಯಾ ಯುಆರ್‌ ರೆಹಮಾನ್‌ (ಕುಂಡರ್ಕಿ) ಮತ್ತು ಲಾಲ್ಜಿ ವರ್ಮಾ (ಕಡೆಹರಿ), ನಿಷಾದ್ ಪಕ್ಷದ ವಿನೋದ್ ಕುಮಾರ್ ಬಿಂಡ್ (ಭದೋಹಿ), ಆರ್‌ಎಲ್‌ಡಿಯ ಚಂದನ್ ಚೌಹಾಣ್ (ಬಿಜ್ನೋರ್) ಜಯ ಗಳಿಸಿದ ಶಾಸಕರು. ಇನ್ನು ಎಂಎಲ್‌ಸಿಗಳ ಪೈಕಿ ಪಿಡಬ್ಲ್ಯುಡಿ ಸಚಿವ, ಬಿಜೆಪಿಯ ಜಿತಿನ್ ಪ್ರಸಾದ್‌ ಅವರು ಪಿಲಿಭಿತ್ ಲೋಕಸಭಾ ಕ್ಷೇತ್ರದಿಂದ 1,64,935 ಮತಗಳ ಅಂತರದಿಂದ ಗೆದ್ದಿದ್ದಾರೆ.

ಸೋತ ಸಚಿವರು

ತೋಟಗಾರಿಕೆ, ಕೃಷಿ ಮಾರುಕಟ್ಟೆ, ಕೃಷಿ ವಿದೇಶಿ ವ್ಯಾಪಾರ ಮತ್ತು ಕೃಷಿ ರಫ್ತು ಖಾತೆ ರಾಜ್ಯ ಸಚಿವ, ಎಂಎಲ್‌ಸಿ ದಿನೇಶ್ ಪ್ರತಾಪ್ ಸಿಂಗ್ ಅವರು ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ 3,90,030 ಮತಗಳ ಅಂತರದಿಂದ ಸೋಲಿನ ಆಘಾತ ಅನುಭವಿಸಿದ್ದಾರೆ. ಮೈನ್ಪುರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ, ಉತ್ತರ ಪ್ರದೇಶ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಯವೀರ್ ಸಿಂಗ್ ಅವರು ಮೈನ್ಪುರಿ ಸಂಸದೀಯ ಕ್ಷೇತ್ರದ ಹಾಲಿ ಸಂಸದೆ ಎಸ್‌ಪಿಯ ಡಿಂಪಲ್ ಯಾದವ್ ವಿರುದ್ಧ ಸೋಲುಂಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 41 ಪಕ್ಷಗಳ ಸಂಸದರು!

ಬಲಾಬಲ ಹೇಗಿದೆ?

ದೆಹಲಿ ಗದ್ದುಗೆಗೆ ಏರುವಲ್ಲಿ ಉತ್ತರ ಪ್ರದೇಶ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಯಾಕೆಂದರೆ ಇಲ್ಲಿ ಅತೀ ಹೆಚ್ಚಿನ 80 ಸ್ಥಾನಗಳಿವೆ. ಹೀಗಾಗಿ ಈ ರಾಜ್ಯದಲ್ಲಿ ಅತೀ ಹೆಚ್ಚಿನ ಸ್ಥಾನ ಪಡೆಯಲು ರಾಜಕೀಯ ಪಕ್ಷಗಳು ಗಮನ ಹರಿಸುತ್ತವೆ. ಕಳೆದ ಬಾರಿ ಇಲ್ಲಿ ಬಿಜೆಪಿ 62 ಸ್ಥಾನಗಳನ್ನು ಪಡೆದುಕೊಂಡಿತ್ತು. ಆದರೆ ಈ ಬಾರಿ ಈ ಸಂಖ್ಯೆಯಲ್ಲಿ ಭಾರೀ ಕುಸಿತವಾಗಿದ್ದು ಕೇಸರಿ ಪಾಳಯಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಬಿಜೆಪಿ 33, ಎಸ್‌ಪಿ 37, ಕಾಂಗ್ರೆಸ್‌ 6, ಆರ್‌ಎಲ್‌ಡಿ 2, ಎಎಸ್‌ಪಿಕೆಆರ್‌ ಮತ್ತು ಅದಾಲ್‌ ತಲಾ 1 ಕಡೆ ಗೆದ್ದುಕೊಂಡಿದೆ.

Continue Reading

ರಾಜಕೀಯ

Lok Sabha Election 2024: ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

ಮೊದಲ ಲೋಕಸಭೆಯಿಂದ 11ನೇ (1996-98) ಲೋಕಸಭೆವರೆಗೆ ಪದವಿಪೂರ್ವ ಪದವಿಗಳನ್ನು ಹೊಂದಿರುವ ಸಂಸದರ ಪ್ರಮಾಣವು ನಿರಂತರವಾಗಿ ಹೆಚ್ಚಾಗುತ್ತಾ ಸಾಗಿದರೂ 17ನೇ ಲೋಕಸಭೆಯಲ್ಲಿ ಶೇ. 27ರಿಂದ 18ನೇ ಲೋಕಸಭೆಯಲ್ಲಿ ಶೇ. 22 ಕ್ಕೆ ಇಳಿಕೆಯಾಗಿದೆ. ವಿಜೇತ ಅಭ್ಯರ್ಥಿಗಳ (Lok Sabha Election 2024) ಪೈಕಿ ಶೇ. 19ರಷ್ಟು ಮಂದಿಯ ಶೈಕ್ಷಣಿಕ ಅರ್ಹತೆ 12ನೇ ತರಗತಿಗಿಂತ ಕೆಳಗಿದೆ ಎಂದು ಎಡಿಆರ್ ವರದಿ ಹೇಳಿದೆ.

VISTARANEWS.COM


on

By

Lok Sabha Election 2024
Koo

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಗೆದ್ದು ಸಂಸತ್ತು ಪ್ರವೇಶಿಸಿರುವ ಶೇ. 19ರಷ್ಟು ನೂತನ ಸಂಸದರ (MPs) ಶೈಕ್ಷಣಿಕ ಅರ್ಹತೆ (education qualification) 12 ನೇ ತರಗತಿಗಿಂತ ಕೆಳಗಿದೆ. ಶೇ. 77ರಷ್ಟು ಅಭ್ಯರ್ಥಿಗಳು ಪದವಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಅರ್ಹತೆಯನ್ನು ಪಡೆದಿದ್ದಾರೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ಹೇಳಿದೆ.

ವಿಜೇತ ಅಭ್ಯರ್ಥಿಗಳಲ್ಲಿ ಸುಮಾರು 105 ಮಂದಿ ತಮ್ಮ ಶೈಕ್ಷಣಿಕ ಅರ್ಹತೆಯನ್ನು 5ನೇ ತರಗತಿ ಮತ್ತು 12 ನೇ ತರಗತಿಯ ನಡುವೆ ಎಂದು ಘೋಷಿಸಿದ್ದಾರೆ. 420 ಅಭ್ಯರ್ಥಿಗಳು ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಪದವಿಯನ್ನು ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ. 17 ವಿಜೇತ ಅಭ್ಯರ್ಥಿಗಳು ಡಿಪ್ಲೊಮಾ ಮಾಡಿದ್ದು, ಒಬ್ಬ ವಿಜೇತರು “ಕೇವಲ ಸಾಕ್ಷರರು” ಎಂದು ಹೇಳಿಕೊಂಡಿದ್ದಾರೆ.

ಚುನಾವಣಾ ಕಣದಲ್ಲಿ ಇಳಿಯುವಾಗ ತಾವು ಅನಕ್ಷರಸ್ಥರೆಂದು ಘೋಷಿಸಿಕೊಂಡ ಎಲ್ಲಾ 121 ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ.

ಯಾರು ಎಷ್ಟು?

5ನೇ ತರಗತಿಯವರೆಗೆ ಓದಿರುವ ಇಬ್ಬರು ವಿಜೇತ ಅಭ್ಯರ್ಥಿಗಳಿದ್ದರೆ, ನಾಲ್ವರು 8 ನೇ ತರಗತಿಯವರೆಗೆ ಓದಿದ್ದೇವೆ ಎಂದು ಹೇಳಿದ್ದಾರೆ. 34 ಅಭ್ಯರ್ಥಿಗಳು ತಾವು 10 ನೇ ತರಗತಿಯವರೆಗೆ ಮತ್ತು 65 ಅಭ್ಯರ್ಥಿಗಳು 12ನೇ ತರಗತಿಯವರೆಗೆ ಓದಿರುವುದಾಗಿ ಘೋಷಿಸಿದ್ದಾರೆ.

ಕೃಷಿಕರು

ಪಿ ಆರ್ ಎಸ್ ಶಾಸಕಾಂಗ ಸಂಶೋಧನೆ ವಿಶ್ಲೇಷಣೆಯ ಪ್ರಕಾರ 543 ಸಂಸದರಲ್ಲಿ ಛತ್ತೀಸ್‌ಗಢದ ಶೇ. 91 ಸಂಸದರು, ಮಧ್ಯಪ್ರದೇಶದಿಂದ ಶೇ. 72 ಮತ್ತು ಗುಜರಾತ್‌ನ ಶೇ. 65 ಸಂಸದರು ಕೃಷಿಯನ್ನು ತಮ್ಮ ವೃತ್ತಿ ಎಂದು ಘೋಷಿಸಿದ್ದಾರೆ.
18ನೇ ಲೋಕಸಭೆಗೆ ಚುನಾಯಿತರಾದ ಸಂಸದರಲ್ಲಿ ಸುಮಾರು ಶೇ. 7 ರಷ್ಟು ಮಂದಿ ವಕೀಲರು ಮತ್ತು ಶೇ. 4ರಷ್ಟು ಮಂದಿ ವೈದ್ಯಕೀಯ ವೃತ್ತಿಯವರು ಇದ್ದಾರೆ.


ಪ್ರಾರಂಭದಿಂದ 11ನೇ (1996-98) ಲೋಕಸಭೆಯವರೆಗೆ ಪದವಿಪೂರ್ವ, ಪದವಿಗಳನ್ನು ಹೊಂದಿರುವ ಸಂಸದರ ಪ್ರಮಾಣವು ಸ್ಥಿರವಾಗಿ ಹೆಚ್ಚಾಗಿದೆ. ಪ್ರಾರಂಭದಲ್ಲಿ ಕಾಲೇಜು ಶಿಕ್ಷಣ ಪಡೆಯದ ಸಂಸದರ ಪ್ರಮಾಣವೂ ಹೆಚ್ಚಾಗಿತ್ತು. 17 ನೇ ಲೋಕಸಭೆಯಲ್ಲಿ ಶೇ. 27ರಿಂದ 18ನೇ ಲೋಕಸಭೆಯಲ್ಲಿ ಶೇ. 22 ಕ್ಕೆ ಇಳಿದಿದೆ ಎಂದು ಪಿಆರ್ ಎಸ್ ವರದಿ ತಿಳಿಸಿದೆ.

18ನೇ ಲೋಕಸಭೆಯಲ್ಲಿ ಶೇ. 5ರಷ್ಟು ಸಂಸದರಲ್ಲಿ ಮೂವರು ಮಹಿಳೆಯರು ಡಾಕ್ಟರೇಟ್ ಪದವಿಗಳನ್ನು ಹೊಂದಿದ್ದಾರೆ ಎಂದು ವಿಶ್ಲೇಷಣೆ ವರದಿ ಬಹಿರಂಗಪಡಿಸಿದೆ.

ಇದನ್ನೂ ಓದಿ: Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

ಕಣದಲ್ಲಿದ್ದ 8,390 ಅಭ್ಯರ್ಥಿಗಳ ಪೈಕಿ 121 ಅಭ್ಯರ್ಥಿಗಳು ತಾವು ಅನಕ್ಷರಸ್ಥರು ಮತ್ತು 359 ಅಭ್ಯರ್ಥಿಗಳು ತಾವು 5ನೇ ತರಗತಿಯವರೆಗೆ ಓದಿರುವುದಾಗಿ ಹೇಳಿದ್ದಾರೆ.

ಅಧಿಕೃತ ಮಾಹಿತಿಯ ಪ್ರಕಾರ 647 ಅಭ್ಯರ್ಥಿಗಳು ತಮ್ಮ ಶಿಕ್ಷಣ ಮಟ್ಟವನ್ನು 8 ನೇ ತರಗತಿಯವರೆಗೆ ವರದಿ ಮಾಡಿದ್ದಾರೆ. ಒಟ್ಟು 1,303 ಅಭ್ಯರ್ಥಿಗಳು ತಾವು ಶಾಲೆಯನ್ನು ತೇರ್ಗಡೆಗೊಳಿಸಿರುವುದಾಗಿ ಘೋಷಿಸಿದರು. 1,502 ಅಭ್ಯರ್ಥಿಗಳು ತಾವು ಪದವಿಯನ್ನು ಹೊಂದಿರುವುದಾಗಿ ಹೇಳಿದ್ದಾರೆ. 198 ಅಭ್ಯರ್ಥಿಗಳು ಡಾಕ್ಟರೇಟ್ ಪಡೆದಿರುವುದಾಗಿ ಘೋಷಿಸಿದ್ದರು.

Continue Reading

ರಾಜಕೀಯ

Lok Sabha Election 2024: ಈ ಬಾರಿ 24 ಮುಸ್ಲಿಂ ಸಂಸದರ ಆಯ್ಕೆ; ಕಾಂಗ್ರೆಸ್‌, ಎಸ್‌ಪಿಯಿಂದಲೇ ಹೆಚ್ಚು

ತೃಣಮೂಲ ಕಾಂಗ್ರೆಸ್‌ನ ಯೂಸುಫ್ ಪಠಾಣ್ ಸೇರಿದಂತೆ ಒಟ್ಟು 24 ಮುಸ್ಲಿಂ ಅಭ್ಯರ್ಥಿಗಳ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಗೆಲುವು ಸಾಧಿಸಿ ಸಂಸತ್ತನ್ನು ಪ್ರವೇಶಿಸಿದ್ದಾರೆ. 2019ರಲ್ಲಿ ಒಟ್ಟು 115 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದು, ಈ ಬಾರಿ ಸ್ವತಂತ್ರ ಅಭ್ಯರ್ಥಿಗಳು ಸೇರಿ ಒಟ್ಟು 78 ಮುಸ್ಲಿಮರು ಸ್ಪರ್ಧೆಗೆ ಇಳಿದಿದ್ದರು.

VISTARANEWS.COM


on

By

Lok Sabha Election 2024
Koo

ಯೂಸುಫ್ ಪಠಾಣ್ (Yusuf Pathan), ಅಸಾದುದ್ದೀನ್ ಓವೈಸಿ (Asaduddin Owaisi) ಮತ್ತು ಇಕ್ರಾ ಚೌಧರಿ (Iqra Choudhary) ಸೇರಿದಂತೆ ಒಟ್ಟು 24 ಮುಸ್ಲಿಂ ಸಂಸದರು (Muslim MPs) ಈ ಬಾರಿ ಲೋಕಸಭಾ ಚುನಾವಣೆಯನ್ನು (Lok Sabha Election 2024) ಗೆದ್ದು ಸಂಸತ್ತಿಗೆ ಪ್ರವೇಶಿಸಿದ್ದಾರೆ. 2019ರಲ್ಲಿ ಚುನಾವಣೆಯಲ್ಲಿ ಒಟ್ಟು 115 ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈ ಬಾರಿ ಸ್ವತಂತ್ರ ಅಭ್ಯರ್ಥಿಗಳು ಸೇರಿ ಒಟ್ಟು 78 ಮುಸ್ಲಿಮರು ಚುನಾವಣೆ ಕಣದಲ್ಲಿದ್ದರು.

ಮೊದಲ ಪ್ರಯತ್ನದಲ್ಲೇ ಯಶಸ್ಸು

ರಾಜಕೀಯ ಪ್ರವೇಶಿಸಿದ ಬಳಿಕ ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಇಳಿದ ಕ್ರಿಕೆಟಿಗ- ರಾಜಕಾರಣಿ ಯೂಸುಫ್ ಪಠಾಣ್ ಅವರು ತೃಣಮೂಲ ಕಾಂಗ್ರೆಸ್ ನಲ್ಲಿ ಟಿಕೆಟ್‌ ಪಡೆದು ಪಶ್ಚಿಮ ಬಂಗಾಳದ ಬರ್ಹಾಂಪುರದಿಂದ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಅವರನ್ನು ಕೆಳಗಿಳಿಸಿದ್ದಾರೆ.

ಉತ್ತರ ಪ್ರದೇಶದ ಸಹರಾನ್‌ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಇಮ್ರಾನ್‌ ಮಸೂದ್‌ ಕೂಡ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿದ್ದಾರೆ.

ಕಿರಿಯ ಸಂಸದ

ಕೈರಾನಾದಲ್ಲಿ ಸಮಾಜವಾದಿ ಪಕ್ಷದ ಇಕ್ರಾ ಚೌಧರಿ ಕಿರಿಯ ಸಂಸದರಲ್ಲಿ ಒಬ್ಬರಾಗಿದ್ದಾರೆ. ಇವರು ಬಿಜೆಪಿಯ ಪ್ರದೀಪ್ ಕುಮಾರ್ ಅವರನ್ನು 69,116 ಮತಗಳಿಂದ ಸೋಲಿಸಿದರು.


ಅಸಾದುದ್ದೀನ್ ಓವೈಸಿ

ದಕ್ಷಿಣದಲ್ಲಿ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು 3,38,087 ಮತಗಳ ಅಂತರದಿಂದ ಭಾರತೀಯ ಜನತಾ ಪಕ್ಷದ ಫೈರ್‌ಬ್ರಾಂಡ್ ನಾಯಕಿ ಮಾಧವಿ ಲತಾ ಅವರನ್ನು ಸೋಲಿಸುವ ಮೂಲಕ ತಮ್ಮ ಹೈದರಾಬಾದ್ ಭದ್ರಕೋಟೆಯನ್ನು ಉಳಿಸಿಕೊಂಡರು. ಲಡಾಖ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಹನೀಫಾ ಅವರು ಕಾಂಗ್ರೆಸ್‌ನ ಜಮ್ಯಾಂಗ್ ತ್ಸ್ರಿಂಗ್ ನಾಮ್ಗ್ಯಾಲ್ ಅವರನ್ನು ಸೋಲಿಸಿದರು.

2024ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮುಸ್ಲಿಂ ಸಂಸದರು

ಕಾಂಗ್ರೆಸ್‌ನಿಂದ ಧುಬ್ರಿಯಲ್ಲಿ ರಾಕಿಬುಲ್ ಹುಸೇನ್, ಕಿಶನ್‌ಗಂಜ್ ನಲ್ಲಿ ಮೊಹಮ್ಮದ್ ಜಾವೇದ್, ಕತಿಹಾರ್ ನಲ್ಲಿ ತಾರಿಕ್ ಅನ್ವರ್, ವಡಕರ(3)ರಲ್ಲಿ ಶಾಫಿ ಪರಂಬಿಲ್, ಸಹರಾನ್ಪುರ್(1)ರಲ್ಲಿ ಇಮ್ರಾನ್ ಮಸೂದ್, ಮಲ್ದಹಾ ದಕ್ಷಿಣ(8)ದಲ್ಲಿ ಇಶಾ ಖಾನ್ ಚೌಧರಿ, ಲಕ್ಷದ್ವೀಪ (1)ರಲ್ಲಿ ಮುಹಮ್ಮದ್ ಹಮದುಲ್ಲಾ ಸಯೀದ್

ಸಮಾಜವಾದಿ ಪಕ್ಷ

ಕೈರಾನಾ (2)ರಲ್ಲಿ ಇಕ್ರಾ ಚೌಧರಿ, ರಾಂಪುರ(7)ರಲ್ಲಿ ಮೊಹಿಬ್ಬುಲ್ಲಾ, ಸಂಭಾಲ್(8)ರಲ್ಲಿ ಜಿಯಾ ಉರ್ ರೆಹಮಾನ್, ಗಾಜಿಪುರ (75)ರಲ್ಲಿ ಅಫ್ಜಲ್ ಅನ್ಸಾರಿ


ಟಿಎಂಸಿ

ಜಂಗೀಪುರ (9) ಖಲೀಲೂರ್ ರಹಮಾನ್, ಬಹರಂಪುರ (10) ಪಠಾಣ್ ಯೂಸುಫ್, ಮುರ್ಷಿದಾಬಾದ್ (11) ಅಬು ತಾಹರ್ ಖಾನ್, ಬಸಿರ್ಹತ್ (18) ಎಸ್ಕೆ ನೂರುಲ್ ಇಸ್ಲಾಂ, ಉಲುಬೇರಿಯಾ (26) ಸಜ್ದಾ ಅಹಮದ್

ಐಯುಎಂಎಲ್

ಮಲಪ್ಪುರಂ (6) ಇ.ಟಿ. ಮೊಹಮ್ಮದ್ ಬಶೀರ್, ಪೊನ್ನಾನಿ (7) ಡಿ.ಆರ್. ಎಂಪಿ ಅಬ್ದುಸ್ಸಮದ್ ಸಮದಾನಿ, ರಾಮನಾಥಪುರ (35) ನವಸ್ಕನಿ ಕೆ

ಎಐಎಂಐಎಂ

ಹೈದರಾಬಾದ್ (9) ಅಸಾದುದ್ದೀನ್ ಓವೈಸಿ

ಇದನ್ನೂ ಓದಿ: Modi 3.0 Government: ನರೇಂದ್ರ ಮೋದಿ ಮುಂದೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಇಟ್ಟಿರುವ ಬೇಡಿಕೆಗಳು ಇಷ್ಟು!

ಇಂದ್

ಬಾರಾಮುಲ್ಲಾ(1)ಅಬ್ದುಲ್ ರಶೀದ್ ಶೇಖ್, ಲಡಾಖ್ (1) ಮೊಹಮ್ಮದ್ ಹನೀಫಾ

ಎನ್ ಸಿ

ಶ್ರೀನಗರ (2) ಅಗಾ ಸೈಯದ್ ರುಹುಲ್ಲಾ ಮೆಹದಿ, ಅನಂತನಾಗ್-ರಾಜೌರಿ(3) ಮಿಯಾನ್ ಅಲ್ತಾಫ್ ಅಹ್ಮದ್

Continue Reading
Advertisement
Parliament Security Breach
ದೇಶ40 seconds ago

Parliament Security Breach: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ಗೆ ಎಂಟ್ರಿ ಕೊಡೋಕೆ ಯತ್ನ; ತಪ್ಪಿದ ಭಾರೀ ಅವಘಡ

road accident gauribidanuru
ಕ್ರೈಂ3 mins ago

Road Accident: ಭೀಕರ ಕಾರು ಅಪಘಾತ, 3 ಸಾವು, ಮರದಲ್ಲಿ ನೇತಾಡಿದ ಪ್ರಯಾಣಿಕನ ಶವ

Bigg Boss OTT 3 Know when and where to stream the show
ಬಿಗ್ ಬಾಸ್12 mins ago

Bigg Boss OTT 3: ಬಿಗ್​ ಬಾಸ್​ ಒಟಿಟಿ ಪ್ರಸಾರಕ್ಕೆ ಮುಹೂರ್ತ ಫಿಕ್ಸ್​: ಹೊಸ ನಿರೂಪಕನಾಗಿ ಅನಿಲ್​ ಕಪೂರ್​ ಎಂಟ್ರಿ!

Election Results 2024
Lok Sabha Election 202428 mins ago

Election Results 2024: ಸಂಸದರಾಗಿ ಆಯ್ಕೆಯಾದ ಉತ್ತರ ಪ್ರದೇಶದ ಎಂಟು ಶಾಸಕರು; ಶೀಘ್ರ ಉಪಚುನಾವಣೆ

self harming attempt
ಕ್ರೈಂ30 mins ago

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Lok Sabha Election 2024
ರಾಜಕೀಯ32 mins ago

Lok Sabha Election 2024: ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

Lok Sabha Election 2024
ರಾಜಕೀಯ40 mins ago

Lok Sabha Election 2024: ಈ ಬಾರಿ 24 ಮುಸ್ಲಿಂ ಸಂಸದರ ಆಯ್ಕೆ; ಕಾಂಗ್ರೆಸ್‌, ಎಸ್‌ಪಿಯಿಂದಲೇ ಹೆಚ್ಚು

Viral Video
ವೈರಲ್ ನ್ಯೂಸ್41 mins ago

Viral Video: ಪುಷ್ಪ 2 ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಅಜ್ಜಿ; ವಾವ್ಹ್‌ ಕ್ಯೂಟ್ ಎಂದ ನೆಟ್ಟಿಗರು

Manipur violence
ದೇಶ49 mins ago

Manipur Violence: ಮಣಿಪುರ ಹಿಂಸಾಚಾರ; ಮೋಸ್ಟ್‌ ವಾಂಟೆಡ್‌ ಗಲಭೆಕೋರ ಅರೆಸ್ಟ್‌

love sex dhoka koppala
ಕ್ರೈಂ59 mins ago

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌