ST Somashekhar : ಜನಸ್ಪಂದನ ಕಾರ್ಯಕ್ರಮಕ್ಕೆ ಡಿಕೆಶಿಗೆ ಆಹ್ವಾನ; ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಫಿಕ್ಸಾ? - Vistara News

Latest

ST Somashekhar : ಜನಸ್ಪಂದನ ಕಾರ್ಯಕ್ರಮಕ್ಕೆ ಡಿಕೆಶಿಗೆ ಆಹ್ವಾನ; ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಫಿಕ್ಸಾ?

ST Somashekhar : ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ ಅವರು ಶನಿವಾರ ಬೆಳಗ್ಗೆ ಮೋದಿ ಕಾರ್ಯಕ್ರಮದ ಕಡೆಗೆ ತಲೆ ಹಾಕಿಲ್ಲ. ಆದರೆ, ಸಂಜೆ ಡಿಕೆಶಿ ಜತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ!

VISTARANEWS.COM


on

ST Somashekhar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಶವಂತಪುರದ ಬಿಜೆಪಿ ಶಾಸಕರಾಗಿರುವ ಎಸ್‌ಟಿ ಸೋಮಶೇಖರ್‌ (ST Somashekhar) ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯ (Operation Hasta) ಸುದ್ದಿ ನಿಜವಾಗುವ ಕಾಲ ಸನ್ನಿಹಿತವಾದಂತೆ ಕಾಣುತ್ತಿದೆ. ಹಂತ ಹಂತವಾಗಿ ಬಿಜೆಪಿಯಿಂದ ದೂರವಾಗುತ್ತಾ, ಕಾಂಗ್ರೆಸ್‌ಗೆ ಹತ್ತಿರವಾಗುತ್ತಿರುವ ಅವರ ನಡೆಯಲ್ಲಿ ಶನಿವಾರ ಒಂದು ನಿರ್ಣಾಯಕ ದಿನವಾಗುವ ಸಾಧ್ಯತೆ ಇದೆ.

ಜನಸ್ಪಂದನ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್‌ಗೆ ಆಹ್ವಾನ

ಬಿಜೆಪಿ ಪಕ್ಷದ ಎಲ್ಲ ಕಾರ್ಯಕ್ರಮಗಳಿಂದ ದೂರವಾಗಿ ನಿಂತಿರುವ ಎಸ್‌ಟಿ ಸೋಮಶೇಖರ್‌ ಅವರು ಶನಿವಾರ ಸಂಜೆ ತಮ್ಮ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾರೆ. ಇದರಲ್ಲಿ ಅವರು ವೇದಿಕೆ ಹಂಚಿಕೊಳ್ಳುತ್ತಿರುವುದು ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರ ಜತೆ.

ಚೇಂಜ್‌ ಮೇಕರ್ಸ್‌ ಆಫ್‌ ಕನಕಪುರ ನಿವಾಸಿ ಸಂಘ ಎಂಬ ಸಂಸ್ಥೆ, ಶೋಭಾ ಫಾರೆಸ್ಟ್‌ ವ್ಯೂ ನಿವಾಸಿ ಸಂಘ (ಎಸ್‌ಫ್‌ವಿ) ಜತೆ ಸೇರಿಕೊಂಡು ಯಶವಂತಪುರ ವಿಧಾನಸಭಾ ಕ್ಷೇತ್ರದ ಹೆಮ್ಮಿಗೆ ಪುರ ವಾರ್ಡ್‌ ಸಂಖ್ಯೆ 198ರ ನಿವಾಸಿಗಳ ಜತೆ ʻಜನಸ್ಪಂದನʼ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಅಧ್ಯಕ್ಷತೆಯನ್ನು ವಹಿಸುವವರು ಶಾಸಕ ಎಸ್‌.ಟಿ. ಸೋಮಶೇಖರ್‌. ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ST Somashekhar

ಎಸ್‌ಟಿ ಸೋಮಶೇಖರ್‌ ಅವರು ಇತ್ತೀಚೆಗೆ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆಯೋಜಿಸಿದ್ದ ಬೆಂಗಳೂರು ಶಾಸಕರ ಸಭೆಯಲ್ಲಿ ಅವರು ಗೈರು ಹಾಜರಾಗಿದ್ದರು. ಮಾತ್ರವಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಸೋಮಶೇಖರ್‌ ಮಾತ್ರ ತಿರುಗಿ ನೋಡಿಲ್ಲ!

ಬಿ.ಎಸ್‌. ಯಡಿಯೂರಪ್ಪ ಅವರು ಸೋಮಶೇಖರ್‌ ಅವರ ಜತೆ ಮಾತನಾಡುವ ಹೊಣೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವಹಿಸಿದ್ದರು. ಆದರೆ, ಬೊಮ್ಮಾಯಿ ಅವರು ಮಾತನಾಡಿಲ್ಲ. ಸಿ.ಟಿ. ರವಿ, ಆರ್‌. ಅಶೋಕ್‌ ಅವರು ಕರೆಸಿಕೊಂಡು ಮಾತನಾಡಿದರೂ ಸೋಮಶೇಖರ್‌ ಅವರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ ಹೊರತು ಸಾಂತ್ವನ ಸಿಕ್ಕಿಲ್ಲ ಎನ್ನಲಾಗಿದೆ.

ಇದರ ನಡುವೆ ಸೋಮಶೇಖರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಮತ್ತು ಅವರ ಕ್ಷೇತ್ರಕ್ಕೆ ದೊಡ್ಡ ಮೊತ್ತದ ಅನುದಾನವನ್ನು ಪಡೆದುಕೊಂಡು ಬಂದಿದ್ದರು. ಇದೆಲ್ಲವೂ ಸೋಮಶೇಖರ್‌ ಅವರು ಕಾಂಗ್ರೆಸ್‌ಗೆ ಹೋಗುವ ಸಂದೇಶ ಎಂಬಂತೆ ವಿಶ್ಲೇಷಿಸಲಾಗುತ್ತಿದೆ.

ಇದೀಗ ತಮ್ಮ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್‌ ಅವರಿಗೆ ಸಂಬಂಧಿಸಿದ ಸಂಘಟನೆಗಳು ಆಯೋಜಿಸಿರುವ ಜನಸ್ಪಂದನ ಕಾರ್ಯಕರ್ಮದಲ್ಲಿ ಎಸ್‌ಟಿ ಸೋಮಶೇಖರ್‌ ಭಾಗವಹಿಸುತ್ತಿರುವುದು ಭಾರಿ ಸದ್ದು ಮಾಡಿದೆ.

ಇದನ್ನೂ ಓದಿ: Operation Hasta : ಮೋದಿ ಬಂದ್ರೂ ಬರಲಿಲ್ಲ ಸೋಮಶೇಖರ್‌, ಸಿಎಂ ಭೇಟಿಯಾದ್ರು ಶಿವರಾಂ ಹೆಬ್ಬಾರ್‌! ಏನಾಗ್ತಿದೆ?

ಸಿದ್ದರಾಮಯ್ಯ ಭೇಟಿ ಮಾಡಿದ ಶಿವರಾಮ್‌ ಹೆಬ್ಬಾರ್‌

ಈ ನಡುವೆ, ಆಪರೇಷನ್‌ ಹಸ್ತದ ಸುಳಿಗೆ ಸಿಲುಕಿದ್ದಾರೆ ಎಂದು ಹೇಳಲಾದ ಇನ್ನೊಬ್ಬ ಶಾಸಕ ಶಿವರಾಮ ಹೆಬ್ಬಾರ್‌ ಅವರು ಕೂಡಾ ಶನಿವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅವರು ಬರ ಘೋಷಣೆ ಮತ್ತು ಪರಿಹಾರದ ಬೇಡಿಕೆಯನ್ನು ಇಟ್ಟುಕೊಂಡು ಹೋಗಿದ್ದಾರಾದರೂ, ನಿಜವಾದ ಉದ್ದೇಶ ಅದಲ್ಲ ಎನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಹಿಳೆ

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

ಫ್ರಾನ್ಸ್ ನ 101 ವರ್ಷದ ಯೋಗ ಶಿಕ್ಷಕಿಯೊಬ್ಬರು (French Yoga Teacher) ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪುರಸ್ಕಾರ ಪಡೆದಿದ್ದಾರೆ. ಈ ಕುರಿತು ರಾಷ್ಟ್ರಪತಿ ಭವನದಿಂದ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

VISTARANEWS.COM


on

By

French Yoga Teacher
Koo

ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ (French Yoga Teacher) ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ (Charlotte Chopin) ಅವರಿಗೆ ಭಾರತದ (India) ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ( Padma Shri award) ಅನ್ನು ನೀಡಿ ಗೌರವಿಸಲಾಯಿತು.

ನವದೆಹಲಿಯ (new delhi) ರಾಷ್ಟ್ರಪತಿ ಭವನದಲ್ಲಿ ( Rashtrapati Bhawan) ಗುರುವಾರ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಹಸಿರು ಸೀರೆಯನ್ನು ಧರಿಸಿದ ಶಾರ್ಲೆಟ್ ಚಾಪಿನ್ ವೇದಿಕೆಯತ್ತ ನಡೆದು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಯೋಗ ಕ್ಷೇತ್ರದಲ್ಲಿ ಶಾರ್ಲೆಟ್ ಚಾಪಿನ್ ಅವರ ಪ್ರಯತ್ನವನ್ನು ಶ್ಲಾಘಿಸಿ ರಾಷ್ಟ್ರಪತಿಯವರ ಕಚೇರಿಯು ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯೋಗ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಶಾರ್ಲೆಟ್ ಚಾಪಿನ್ ಅವರಿಗೆ ಪ್ರದಾನ ಮಾಡಿದರು. ಅವರು ಪ್ರಸಿದ್ಧ ಫ್ರೆಂಚ್ ಯೋಗ ಶಿಕ್ಷಕಿಯಾಗಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯೋಗವನ್ನು ಕಲಿಸುತ್ತಿದ್ದಾರೆ ಮತ್ತು 101ನೇ ವಯಸ್ಸಿನಲ್ಲಿ ಯೋಗ ಶಿಕ್ಷಕರಾಗಿ ಸಕ್ರಿಯರಾಗಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.


ಶಾರ್ಲೆಟ್ ಚಾಪಿನ್ ಯಾರು?

ಚಾಪಿನ್ ಫ್ರಾನ್ಸ್ ಮೂಲದವರಾಗಿದ್ದು, ಪ್ರಸ್ತುತ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ವಯಸ್ಸಿನ ಮಿತಿಯ ಮಾನದಂಡಗಳನ್ನು ಮೀರಿ ಚಾಪಿನ್ ಅವರು 50 ವರ್ಷ ವಯಸ್ಸಿನ ಅನಂತರ ಯೋಗವನ್ನು ಕಲಿತರು. 1982 ರಲ್ಲಿ ಫ್ರಾನ್ಸ್ ನಲ್ಲಿ ಕಲಿಸಲು ಪ್ರಾರಂಭಿಸಿದರು. ಅವರು ದೇಶದಲ್ಲಿ ಯೋಗದ ಅಲೆಯನ್ನು ಸೃಷ್ಟಿಸಿದರು. ಇದು ಪ್ರಸಿದ್ಧ ಫಿಟ್ನೆಸ್ ಅಭ್ಯಾಸವನ್ನು ಮಾಡಿದರು. ಅವರು ಫ್ರೆಂಚ್ ಟಿವಿ ಶೋ, ‘ಫ್ರಾನ್ಸ್ ಗಾಟ್ ಇನ್‌ಕ್ರೆಡಿಬಲ್ ಟ್ಯಾಲೆಂಟ್’ ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

2023ರ ಜುಲೈನಲ್ಲಿ ಅವರು ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಪ್ರವಾಸದಲ್ಲಿದ್ದಾಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲ ಬಾರಿಗೆ ಪ್ಯಾರಿಸ್‌ನಲ್ಲಿ ಭೇಟಿಯಾದರು. ಯೋಗ ಕ್ಷೇತ್ರದಲ್ಲಿ ಅವರ ಅಸಾಧಾರಣ ಕೆಲಸದಿಂದ ಪ್ರಭಾವಿತರಾದ ಪ್ರಧಾನಿ, ಯೋಗದಲ್ಲಿ ಚಾಪಿನ್ ಅವರ ಆಳವಾದ ನಂಬಿಕೆ ಮತ್ತು ಫ್ರಾನ್ಸ್‌ನಲ್ಲಿ ಯೋಗವನ್ನು ಉತ್ತೇಜಿಸಲು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.

ಯೋಗವು ಸಂತೋಷವನ್ನು ತರುತ್ತದೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ ಎಂದು ಜುಲೈನಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದಾಗ ಚಾಪಿನ್ ಹೇಳಿದ್ದರು.

Continue Reading

ದೇಶ

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

ಎರ್ನಾಕುಲಂ- ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದ್ದು, ಇದರ ವೇಳಾಪಟ್ಟಿಯನ್ನು ಭಾರತೀಯ ರೈಲ್ವೆ ಇಲಾಖೆ ಪ್ರಕಟಿಸಿದೆ.

VISTARANEWS.COM


on

By

Vande Bharat Express
Koo

ಬೆಂಗಳೂರು: ಲೋಕಸಭೆ ಚುನಾವಣೆ- 2024 (lok sabha election-2024) ಮುಗಿದ ಬಳಿಕ ಎರ್ನಾಕುಲಂ- ಬೆಂಗಳೂರು ( Ernakulam-Bengaluru) ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಶೀಘ್ರದಲ್ಲೇ ಕೊಚ್ಚಿಯ (kochi) ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ. ಕೊಚ್ಚಿ ಮತ್ತು ಬೆಂಗಳೂರು ನಡುವೆ ಬಹು ನಿರೀಕ್ಷಿತ ಈ ರೈಲು ಪ್ರಾರಂಭವು ದೈನಂದಿನ ಪ್ರಯಾಣಿಕರಿಗೆ ಸಾಕಷ್ಟು ಪ್ರಯೋಜನಕಾರಿಯಾಗಲಿದೆ ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಸಂಚಾರ ಸಮಯ

ರೈಲು ಎರ್ನಾಕುಲಂನಿಂದ ಬೆಳಗ್ಗೆ 5 ಗಂಟೆಗೆ ಹೊರಟು ಮಧ್ಯಾಹ್ನ 1.35 ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರಿನಿಂದ ಮಧ್ಯಾಹ್ನ 2.05 ಕ್ಕೆ ಹೊರಟು ರಾತ್ರಿ 10.45 ಕ್ಕೆ ಮರಳಿ ಎರ್ನಾಕುಲಂ ತಲುಪಲಿದೆ.

ನಿಲುಗಡೆ

ಎರ್ನಾಕುಲಂ- ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ಈರೋಡ್ ಮತ್ತು ಸೇಲಂ ನಿಲ್ದಾಣಗಳಲ್ಲಿ ಕೆಲವು ನಿಮಿಷಗಳ ಕಾಲ ನಿಲುಗಡೆ ಮಾಡಲಿದೆ.

ತಿರುವನಂತಪುರಂ-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್

ತಿರುವನಂತಪುರಂ ಸೆಂಟ್ರಲ್ – ಮಂಗಳೂರು (Thiruvananthapuram-Managaluru) ಸೆಂಟ್ರಲ್ ವಂದೇ ಭಾರತ್ ರೈಲು ಸಂಖ್ಯೆ 20632 ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಮೇ 13ರಿಂದ ಭಾರತೀಯ ರೈಲ್ವೆಯು ತಿರುವನಂತಪುರಂ- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ನಿರ್ಗಮನ ಮತ್ತು ಆಗಮನದ ಸಮಯವನ್ನು ಬದಲಾಯಿಸಿದೆ.

ಪರಿಣಾಮ ಏನು?

ತಿರುವನಂತಪುರಂ- ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಮಯ ಬದಲಾವಣೆಯಿಂದ ತಿರುವನಂತಪುರಂ, ಎರ್ನಾಕುಲಂ ಜಂಕ್ಷನ್, ತ್ರಿಶೂರ್, ಶೋರನೂರ್ ಜಂಕ್ಷನ್, ತಿರೂರ್, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ನಿಲ್ದಾಣಕ್ಕೆ ಆಗಮನ ಮತ್ತು ನಿರ್ಗಮನ ಸಮಯದಲ್ಲಿ ಬದಲಾವಣೆ ಆಗಲಿದೆ. ಆದ್ದರಿಂದ ಹೊಸ ವೇಳಾಪಟ್ಟಿಯನ್ನು ಪ್ರಯಾಣಿಕರು ಪರಿಶೀಲಿಸುವಂತೆ ಭಾರತೀಯ ರೈಲ್ವೆ ಇಲಾಖೆ ಸೂಚಿಸಿದೆ.

ಕೆಲವೇ ತಿಂಗಳುಗಳ ಹಿಂದೆ ರೈಲ್ವೇ ಸಚಿವಾಲಯವು ರೈಲು ಸಂಖ್ಯೆ 20631/ 632 ಕಾಸರಗೋಡು-ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಆದೇಶಿಸಿತ್ತು.

ಪರಿಷ್ಕೃತ ಸಮಯ

ಎರ್ನಾಕುಲಂ ಜಂಕ್ಷನ್ ಸಂಜೆ 6.35/ 6.38 ಆಗಮಿಸಲಿದ್ದು, 6.42/ 6.45ಕ್ಕೆ ನಿರ್ಗಮಿಸಲಿದೆ. ತ್ರಿಶೂರ್ ಗೆ ಸಂಜೆ 7.40/ 7.42ಕ್ಕೆ ಆಗಮಿಸಿ 7.56/7.58 ನಿರ್ಗಮಿಸಲಿದೆ.

ಶೋರನೂರು ಜಂಕ್ಷನ್ ಗೆ ರಾತ್ರಿ 8.15/ 8.17ಕ್ಕೆ ಆಗಮನ 8.30/ 8.32ಕ್ಕೆ ನಿರ್ಗಮನ, ತಿರುರ್ ಗೆ 8.52/ 8.54ಕ್ಕೆ ಆಗಮನ, 9.02/ 9.04ಕ್ಕೆ ನಿರ್ಗಮನ, ಕೋಝಿಕ್ಕೋಡ್ 9.23/ 9.25ಕ್ಕೆ ಆಗಮನ 9.32/9.34ಕ್ಕೆ ನಿರ್ಗಮನ, ಕಣ್ಣೂರು ಗೆ 10.24/ 10.36ಕ್ಕೆ ಆಗಮನ 10.36/ 10.38ಕ್ಕೆ ನಿರ್ಗಮನ, ಕಾಸರಗೋಡುಗೆ 11.45/ 11.48ಕ್ಕೆ ಆಗಮನ 11.46/ 11.48 ನಿರ್ಗಮನ ಮಾಡಲಿದೆ.

ಇದನ್ನೂ ಓದಿ: Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

ಇತರ ರೈಲುಗಳು

ತಿರುವನಂತಪುರಂ-ಮಂಗಳೂರು ಮಾರ್ಗದಲ್ಲಿ ಓಡುತ್ತಿರುವ ಪ್ರಸ್ತುತ ಎಕ್ಸ್‌ಪ್ರೆಸ್ ರೈಲುಗಳು ಅದೇ ಪ್ರಯಾಣವನ್ನು ಮಾಡಲು 13 ರಿಂದ 14 ಗಂಟೆಗಳವರೆಗೆ ಬೇಕಾಗುತ್ತದೆ. ಉದಾಹರಣೆಗೆ ಮಂಗಳೂರು ಸೆಂಟ್ರಲ್-ನಾಗರ್‌ಕೋಯಿಲ್ ಪರಶುರಾಮ್ ಎಕ್ಸ್‌ಪ್ರೆಸ್ ಟ್ರೇನ್ ನಂ. 16649, ಪ್ರತಿದಿನ ಬೆಳಗ್ಗೆ 5.05 ಕ್ಕೆ ಸೆಂಟ್ರಲ್‌ನಿಂದ ಹೊರಟು ಸಂಜೆ 6.40 ಕ್ಕೆ ತಿರುವನಂತಪುರವನ್ನು ತಲುಪುತ್ತದೆ, ಇದು ಸಾರಿಗೆಯಲ್ಲಿ 13 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹಿಂದಿರುಗುವ ಪ್ರಯಾಣದಲ್ಲಿ ತಿರುವನಂತಪುರದಿಂದ ಬೆಳಗ್ಗೆ 6.10ಕ್ಕೆ ಹೊರಟು ರಾತ್ರಿ 9 ಗಂಟೆಗೆ ಸೆಂಟ್ರಲ್ ತಲುಪುವ ರೈಲು ಸಂಖ್ಯೆ 16650 ಗಂಟೆಗೆ ಸರಾಸರಿ 42 ಕಿ.ಮೀ .ವೇಗದಲ್ಲಿ ಪ್ರಯಾಣಿಸಿದರೂ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.

Continue Reading

ಮಹಿಳೆ

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

ಎಲ್ಲರ ಬದುಕಿನಲ್ಲಿ ತಾಯಿಯಾಗಿ ಒಬ್ಬಳು ಇದ್ದೇ ಇರುತ್ತಾಳೆ. ಅದು ಹೆಂಡತಿಯಾಗಿರಬಹುದು, ಸಹೋದರಿಯಾಗಿರಬಹುದು ಅಥವಾ ಜನ್ಮವಿತ್ತ, ಸಾಕಿ ಸಲಹಿದ ತಾಯಿಯಾಗಿರಬಹುದು. ಇಲ್ಲಿ ಅವರ ಸ್ಥಾನಕ್ಕಿಂತ ಅವರು ಮಾಡುವ ಕರ್ತವ್ಯಕ್ಕೆ ಗೌರವ ಕೊಡಲೇಬೇಕು. ಇದಕ್ಕಾಗಿ ವರ್ಷದಲ್ಲೊಮ್ಮೆ ತಾಯಂದಿರ ದಿನವನ್ನು (Mother’s Day) ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಈ ಬಾರಿ ಇಂದು ಈ ದಿನ ವಿಶೇಷವಾಗಿದೆ.

VISTARANEWS.COM


on

By

Mother's Day
Koo

ತಾಳ್ಮೆ, ಸಹನೆ, ಶಾಂತಿ, ಪರಸ್ಪರ ಹೊಂದಾಣಿಕೆ ಇವನ್ನೆಲ್ಲ ಹೆಣ್ಣು (girl) ಮಕ್ಕಳಿಗೆ (child) ಯಾರೂ ಕಲಿಸಬೇಕಾಗಿಲ್ಲ. ಅದು ಅವರಿಗೆ ಹುಟ್ಟಿನಿಂದಲೇ ಬಂದಿರುತ್ತದೆ. ಎಂತಹ ಕಠಿಣ ಪರಿಸ್ಥಿತಿಯಾಗಿರಲಿ ತಾಯಿ (Mother’s Day) ಅದನ್ನು ಎದುರಿಸಲು ಕ್ಷಣ ಮಾತ್ರದಲ್ಲಿ ಸಜ್ಜಾಗುತ್ತಾಳೆ. ತಮ್ಮ ಮಕ್ಕಳ ವಿಚಾರಕ್ಕೆ ಬಂದರೆ ಆಕೆ ಯಾವುದೇ ತ್ಯಾಗಕ್ಕೂ ಸಜ್ಜಾಗುತ್ತಾಳೆ, ತನ್ನ ಪ್ರಾಣವನ್ನು ಒತ್ತೆ ಇಟ್ಟಾದರೂ ಸರಿ ಮಕ್ಕಳನ್ನು ಎಲ್ಲ ರೀತಿಯ ಸಂಕಷ್ಟದಿಂದ ಪಾರು ಮಾಡುತ್ತಾಳೆ.

ಎಲ್ಲರಿಗೂ ತಮ್ಮ ತಾಯಿಯ ಬಗ್ಗೆ ಹೇಳಬೇಕಾದ ಸಾವಿರಾರು ವಿಷಯಗಳಿರುತ್ತವೆ. ಇದಕ್ಕೆ ತಾಯಂದಿರ ದಿನಕ್ಕಿಂತ ಉತ್ತಮ ದಿನ ಬೇರೆ ಯಾವುದಿದೆ. ಹೆಣ್ಣು ತಾಯಿಯಾಗಿ, ಅಕ್ಕನಾಗಿ, ಅಜ್ಜಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ ತನ್ನ ಕರ್ತವ್ಯವನ್ನು ಚೆನ್ನಾಗಿ ನಿಭಾಯಿಸುತ್ತಾಳೆ. ಹೀಗಾಗಿಯೇ ತಾಯಂದಿರ ದಿನದ ಈ ಶುಭ ಸಂದರ್ಭದಲ್ಲಿ ಆಕೆಗೊಂದು ಶುಭ ಸಂದೇಶ ಕಳುಹಿಸಲು ಮರೆಯದಿರಿ.

ಸಿಹಿ ಶುಭಾಶಯಗಳೊಂದಿಗೆ ಆಕೆಯನ್ನು ಗೌರವಿಸುವ ಜೊತೆಗೆ ಸುಂದರವಾದ ಹೂಗೊಂಚಲು, ಅರ್ಥಪೂರ್ಣವಾದ ಉಡುಗೊರೆ ಅಥವಾ ಅವಳೊಂದಿಗೆ ಸಮಯ ಕಳೆಯುವ ಮೂಲಕ ಮೆಚ್ಚುಗೆಯನ್ನು ತೋರಿಸಿ. ಇದು ಯಾವಾಗಲೂ ಆಕೆಯನ್ನು ಸಂತೋಷದಲ್ಲಿ ಇರುವಂತೆ ಮಾಡುತ್ತದೆ ಮತ್ತು ಸದಾ ಆಕೆಯ ನೆನಪಿನಲ್ಲಿ ಇರುವಂತೆ ಮಾಡುತ್ತದೆ.

ತಾಯಂದಿರ ದಿನದ ವಿಶೇಷವಾಗಿ ತಾಯಿಗೆ ವಿಶೇಷ ಅಡುಗೆ ಮಾಡಿ ಬಡಿಸಿ, ಇಲ್ಲವಾದರೆ ಅವರ ನೆಚ್ಚಿನ ರೆಸ್ಟೋರೆಂಟ್ ಗೆ ಹೋಗಿ ಊಟ ಮಾಡಿಸಿ. ಇದರಿಂದ ಸಾಕಷ್ಟು ಸಮಯವನ್ನು ಆಕೆಗೆ ನೀವು ಕೊಟ್ಟಂತಾಗುತ್ತದೆ.


ತಾಯಂದಿರ ದಿನ ಯಾವಾಗ?

ತಾಯಂದಿರ ದಿನವನ್ನು ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರ ಆಚರಿಸಲಾಗುತ್ತದೆ. ರಜಾ ದಿನದಲ್ಲಿ ಇದು ಬರುವುದರಿಂದ ಈ ದಿನವನ್ನು ಹೆಚ್ಚು ವಿಶೇಷವಾಗಿ ಆಚರಿಸಬಹುದಾಗಿದೆ.

ತಾಯಿಯಂದಿರ ದಿನವು ಈ ಬಾರಿ ಮೇ 12ರಂದು ಭಾನುವಾರ ಆಚರಿಸಲಾಗುತ್ತಿದೆ. ಪ್ರಪಂಚದಾದ್ಯಂತ ಈ ದಿನವನ್ನು ಬೇರೆಬೇರೆ ದಿನಗಳಂದು ಆಚರಿಸಲಾಗುತ್ತಿದೆ.

ಆಸ್ಟ್ರೇಲಿಯಾ, ಕೆನಡಾ, ಡೆನ್ಮಾರ್ಕ್, ಇಟಲಿ, ಫಿನ್‌ಲ್ಯಾಂಡ್, ಸ್ವಿಟ್ಜರ್ಲೆಂಡ್ ಮತ್ತು ಟರ್ಕಿ ಯಲ್ಲಿ ಈ ಬಾರಿ ಮೇ 12ರಂದು ಅಮ್ಮಂದಿರನ್ನು ಗೌರವಿಸಲಾಗುತ್ತಿದೆ. ಯುಕೆಯಲ್ಲಿ ಮಾರ್ಚ್‌ನಲ್ಲಿ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ಮೆಕ್ಸಿಕೋ ಈ ವರ್ಷ ಮೇ 10 ರಂದು ತಾಯಂದಿರ ದಿನವನ್ನು ಆಚರಿಸಲಾಗಿದೆ. ಥೈಲ್ಯಾಂಡ್ ಆಗಸ್ಟ್ 12 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಯಾಕೆಂದರೆ ಈ ದಿನ ಇಲ್ಲಿ ರಾಣಿ ಸಿರಿಕಿಟ್ ಅವರ ಜನ್ಮದಿನವಾಗಿದೆ.

ಯಾಕೆ ಆಚರಣೆ ?

ತಾಯಂದಿರ ದಿನದ ಆಚರಣೆಯು 1800 ರ ದಶಕದ ಅಂತ್ಯದಲ್ಲಿ ಪ್ರಾರಂಭಿಸಲಾಯಿತು. ಹಲವಾರು ವಿಭಿನ್ನ ಘಟನೆಗಳ ಸಂಯೋಜನೆಯಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಸಾಮಾಜಿಕ ಕಾರ್ಯಕರ್ತೆ ಮತ್ತು ಸಮುದಾಯ ಸಂಘಟಕಿ ಅನ್ನಾ ಮಾರಿಯಾ ರೀವ್ಸ್ ಜಾರ್ವಿಸ್ ಅವರು ಮೊದಲ ಬಾರಿಗೆ ತಾಯಂದಿರ ದಿನದ ಪ್ರಸ್ತಾಪವನ್ನು ಮುಂದಿಟ್ಟರು.

ತಾಯಂದಿರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಸಹಾಯ ಮಾಡುವ ಮಹಿಳಾ ಕ್ಲಬ್‌ಗಳ ಸ್ಥಾಪಕರಾದ ಜಾರ್ವಿಸ್ ಅವರು 1868 ರಲ್ಲಿ ತಾಯಂದಿರ ಸ್ನೇಹ ದಿನವನ್ನು ಆಯೋಜಿಸಿದರು, ಇದು ಅಂತರ್ಯುದ್ಧದ ಅನಂತರ ಒಕ್ಕೂಟ ಮತ್ತು ಒಕ್ಕೂಟದ ಸೈನಿಕರ ತಾಯಂದಿರನ್ನು ಸಾಮರಸ್ಯದಿಂದ ಒಟ್ಟುಗೂಡಿಸುವ ಉದ್ದೇಶವನ್ನು ಹೊಂದಿತ್ತು.

ಬಳಿಕ ಎರಡು ವರ್ಷಗಳ ಅನಂತರ 1870 ರಲ್ಲಿ ಜೂಲಿಯಾ ವಾರ್ಡ್ ಹೋವ್ ಅವರು ವಿಶ್ವ ಶಾಂತಿಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ತಾಯಿಯ ದಿನದ ಘೋಷಣೆಯನ್ನು ಮಾಡಿ ಜೂನ್‌ನಲ್ಲಿ ತಾಯಿಯ ದಿನವನ್ನು ಆಚರಿಸಲು ಒತ್ತಾಯಿಸಿದರು. ಆ ಸಮಯದಲ್ಲಿಯೇ ತಾಯಂದಿರನ್ನು ಗೌರವಿಸಲು ಕೆಲವು ರೀತಿಯ ಕಲ್ಪನೆಯನ್ನು ಅವರು ಮಂಡಿಸಿದ್ದರು. ಆದರೆ ಅದು ಸುಮಾರು 35 ವರ್ಷಗಳವರೆಗೆ ಸಾಧ್ಯವಾಗಲಿಲ್ಲ.

1905 ರಲ್ಲಿ ಜಾರ್ವಿಸ್ ಅವರ ಮರಣದ ಅನಂತರ ಅವರ ಮಗಳು ಅನ್ನಾ ಪತ್ರ ಬರೆಯುವ ಅಭಿಯಾನವನ್ನು ಪ್ರಾರಂಭಿಸಿದರು. ತನ್ನ ತಾಯಿಯ ಕೆಲಸವನ್ನು ಮಾತ್ರವಲ್ಲದೆ ಎಲ್ಲಾ ತಾಯಂದಿರಿಗೆ ಮತ್ತು ಅವರ ಮಕ್ಕಳ ಪರವಾಗಿ ಅವರು ಮಾಡುವ ತ್ಯಾಗವನ್ನು ಗೌರವಿಸಲು ತಾಯಂದಿರ ದಿನಾಚರಣೆಗೆ ಕರೆ ನೀಡಿದರು.

ತಾಯಂದಿರ ದಣಿವರಿಯದ ಕೆಲಸವನ್ನು ಗೌರವಿಸುವ ಸಲುವಾಗಿ ಅಧ್ಯಕ್ಷ ವುಡ್ರೊ ವಿಲ್ಸನ್ ಅವರು 1914 ರಲ್ಲಿ ಘೋಷಣೆಗೆ ಸಹಿ ಹಾಕಿ ಅಧಿಕೃತವಾಗಿ ಮೇ ತಿಂಗಳ ಎರಡನೇ ಭಾನುವಾರವನ್ನು ತಾಯಂದಿರ ದಿನವೆಂದು ಘೋಷಿಸಿದರು.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ಪ್ರಾರಂಭದಲ್ಲಿ ತಾಯಂದಿರ ದಿನಚರಣೆಯ ಉದ್ದೇಶವೇ ಬೇರೆಯಾಗಿತ್ತು. ಆದರೆ ಇವತ್ತು ವ್ಯಾಪಾರೀಕರಣವಾಗಿದೆ. ಹೀಗಾಗಿ ರಜಾ ದಿನದಂದೇ ಎಲ್ಲರೂ ತಮ್ಮ ತಾಯೊಂದಿಗೆ ಸ್ವಲ್ಪ ಸಮಯ ಕಳೆಯಲಿ ಎನ್ನುವ ಉದ್ದೇಶದಿಂದ ಎಲ್ಲರೂ ಮೇ ತಿಂಗಳ ಎರಡನೇ ಭಾನುವಾರ ಈ ದಿನಾಚರಣೆಗೆ ಇಷ್ಟಪಡುತ್ತಾರೆ. ಹೀಗಾಗಿ ಇಂದು ವಿಶ್ವದಾದ್ಯಂತ ತಾಯಂದಿರ ದಿನ ಆಚರಿಸಲಾಗುತ್ತಿದೆ.

ನಿತ್ಯದ ಕೆಲಸದ ಜಂಜಾಟದಲ್ಲಿರುವ ಎಲ್ಲರಿಗೂ ಇವತ್ತು ತಾಯಂದಿರ ದಿನ ಆಚರಿಸುವುದು ಅನಿವಾರ್ಯವಾಗಿರುವುದರಿಂದ ಈ ದಿನ ಅಮೂಲ್ಯವಾದ ದಿನವಾಗಿ ಉಳಿದಿದೆ. ಹೀಗಾಗಿ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲ ತಾಯಂದಿರಿಗೂ ಶುಭ ಹಾರೈಸೋಣ.

Continue Reading

ವಿದೇಶ

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಘರ್ಷಣೆ ಸಂಭವಿಸಿದ ಅನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (Pakistan occupied Kashmir) ಉದ್ವಿಗ್ನತೆ ಹೆಚ್ಚಾಗಿದೆ. ಮುಜಫರಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಮೀರ್‌ಪುರ, ಆಜಾದ್ ಜಮ್ಮು ಮತ್ತು ಕಾಶ್ಮೀರ (ಎಜೆಕೆ) ನಲ್ಲಿ ಮಾರುಕಟ್ಟೆ, ಶಾಲೆ ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ.

VISTARANEWS.COM


on

By

Pakistan Occupied Kashmir
Koo

ಪಾಕ್ ಆಕ್ರಮಿತ ಕಾಶ್ಮೀರದ (Pakistan occupied Kashmir) ಕೆಲವು ಭಾಗಗಳಲ್ಲಿ ಹಿಂಸಾತ್ಮಕ ಘರ್ಷಣೆಗಳು (protest) ಮುಂದುವರಿದಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರನ್ನು ಹತ್ಯೆ (murder) ಮಾಡಲಾಗಿದೆ. ಮುಜಫರಾಬಾದ್‌ನಲ್ಲಿ (Muzaffarabad) ಪ್ರತಿಭಟನಾಕಾರರನ್ನು ಪೊಲೀಸರು ನಿಯಂತ್ರಿಸಿದ್ದರೂ ಸಾಮಾನ್ಯ ಜನ ಜೀವನ ಮತ್ತು ವ್ಯವಹಾರಗಳು ಅಸ್ತವ್ಯಸ್ತಗೊಂಡಿದೆ.

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಘರ್ಷಣೆ ಸಂಭವಿಸಿದ ಅನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಮುಜಫರಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಮೀರ್‌ಪುರ, ಆಜಾದ್ ಜಮ್ಮು ಮತ್ತು ಕಾಶ್ಮೀರ (jammu and kashmir) ನಲ್ಲಿ ಮಾರುಕಟ್ಟೆ, ಶಾಲೆ ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ.

ಕಾರಣ ಏನು?

ಅವಾಮಿ ಆಕ್ಷನ್ ಕಮಿಟಿ (AAC) ಶುಕ್ರವಾರ ಹಣದುಬ್ಬರದ ವಿರುದ್ಧ ಪಿಒಕೆಯ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸಿತು. ಇದು ಪಾಕಿಸ್ತಾನಿ ಭದ್ರತಾ ಪಡೆಗಳ ಮೇಲೆ ಹಲ್ಲೆಗೆ ಕಾರಣವಾಗಿತ್ತು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಮುಜಫರಾಬಾದ್‌ನಲ್ಲಿ ಮೇ 10 ರಂದು ನಡೆದ ಮುಷ್ಕರದಿಂದ ನಗರ ಸ್ತಬ್ಧವಾಗಿತ್ತು.

ಪ್ರತಿಭಟಕರರ ಶಾಂತಿಯುತ ಪ್ರದರ್ಶನಗಳಿಗೆ ಅಡ್ಡಿಯಾಗಿದ್ದರಿಂದ ಪ್ರತಿಭಟನೆ ಉಗ್ರ ರೂಪ ಪಡೆದಿತ್ತು.
ಎಎಸಿ ಹೆಚ್ಚಿನ ತೆರಿಗೆಗಳು, ವಿದ್ಯುತ್ ಬಿಲ್‌ಗಳು ಮತ್ತು ಹಣದುಬ್ಬರ ಹಠಾತ್ ಏರಿಕೆ ವಿರುದ್ಧ ಶುಕ್ರವಾರ ಎಎಸಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿತು. ಜನರ ಮನೆಗಳು ಮತ್ತು ಮಸೀದಿಗಳ ಸುತ್ತಲೂ ಪೊಲೀಸರು ಅಶ್ರುವಾಯು ಶೆಲ್ ಅನ್ನು ಆಶ್ರಯಿಸಿದಾಗ ಘರ್ಷಣೆಗಳು ಭುಗಿಲೆದ್ದಿತು.

ಇದರಿಂದ ಸಮಹ್ನಿ, ಸೆಹನ್ಸಾ, ಮೀರ್‌ಪುರ್, ರಾವಲಕೋಟ್, ಖುಯಿರಟ್ಟಾ, ತಟ್ಟಪಾನಿ ಮತ್ತು ಹಟ್ಟಿಯಾನ್ ಬಾಲಾ ಮುಂತಾದ ಪಿಒಕೆಯ ಬಹು ಭಾಗಗಳಲ್ಲಿ ಮುಷ್ಕರಕ್ಕೆ ಕರೆ ನೀಡಲಾಯಿತು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಏನಾಗುತ್ತಿದೆ?

ಅವಾಮಿ ಕ್ರಿಯಾ ಸಮಿತಿಯು ಪಿಒಕೆಯ ಮುಜಫರಾಬಾದ್‌ಗೆ ಶಾಂತಿಯುತ ಮೆರವಣಿಗೆಗಳನ್ನು ಶುಕ್ರವಾರ ನಡೆಸಿತು, ವಿದ್ಯುತ್ ಬಿಲ್‌ಗಳ ಮೇಲೆ ವಿಧಿಸಲಾದ “ಅನ್ಯಾಯ” ತೆರಿಗೆಗಳ ವಿರುದ್ಧ ಪ್ರತಿಭಟಿಸಿತು. ಇದು ಹಣದುಬ್ಬರ ಗಗನಕ್ಕೇರಲು ಕಾರಣವಾಯಿತು. ಇಸ್ಲಾಂ ಗಢ್ ಬಳಿ ಪ್ರತಿಭಟನಾಕಾರರು ಮತ್ತು ಪೊಲೀಸರು ಘರ್ಷಣೆ ಮಾಡಿದಾಗ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು.

ಎಎಸಿ ಮುಜಫರಾಬಾದ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿತು. ]ಇದು ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ಮೆರವಣಿಗೆಯನ್ನು ತಡೆಯಲು ಪೊಲೀಸರು ನಗರಕ್ಕೆ ಹೋಗುವ ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಹಾಕಿದರು. ಇದು ಘರ್ಷಣೆಗೆ ಕಾರಣವಾಯಿತು. ರಾತ್ರಿಯ ದಾಳಿಯಲ್ಲಿ ಪೊಲೀಸರು ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದಾಗ ಸಮಿತಿಯು ಶನಿವಾರ ಮುಷ್ಕರಕ್ಕೆ ಕರೆ ನೀಡಿತು.

ಪಿಒಕೆ ಸರ್ಕಾರವು ಈ ಪ್ರದೇಶದಲ್ಲಿ ಸೆಕ್ಷನ್ 144 ಅನ್ನು ವಿಧಿಸಿದರೆ, ಮೇ 10 ಮತ್ತು 11 ರಂದು ಶಿಕ್ಷಣ ಸಂಸ್ಥೆ ಮತ್ತು ಕಚೇರಿಗಳನ್ನು ಮುಚ್ಚಲಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಎಲ್ಲಾ ಜಿಲ್ಲೆಗಳಲ್ಲಿ ಶನಿವಾರ ಜನರು ಸಾವಿರಾರು ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಸಾಮಾಜಿಕ ಮಾಧ್ಯಮಗಳಲ್ಲಿನ ವಿಡಿಯೋ ಮತ್ತು ಫೋಟೋಗಳಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಲಾಠಿಗಳನ್ನು ಬಳಸಿರುವುದನ್ನು ತೋರಿಸಿತ್ತು. ಅಶ್ರುವಾಯು ಬಳಸಿ ಗುಂಪನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದರು. ಹಿಂಸಾತ್ಮಕ ಘರ್ಷಣೆಯ ಅನಂತರ ಶುಕ್ರವಾರ ಹತ್ತಾರು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

ಮೂವರು ಸಾವು

ಪಾಕಿಸ್ತಾನಿ ಪಡೆಗಳು ನಿರಾಯುಧ ನಾಗರಿಕರ ಮೇಲೆ ಗುಂಡು ಹಾರಿಸಿದ್ದು ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪಿಒಕೆ ಕಾರ್ಯಕರ್ತ ಅಮ್ಜದ್ ಅಯೂಬ್ ಮಿರ್ಜಾ ಹೇಳಿದ್ದಾರೆ.‌ ಮಿರ್ಜಾ ಅವರು ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಕರೆ ನೀಡಿದ್ದು, ಪರಿಸ್ಥಿತಿ ಕೈ ಮೀರುತ್ತಿದೆ. ಕೇಂದ್ರವು ದೂರ ಉಳಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಭಾರತವು ಈಗ ತನ್ನೆಲ್ಲ ಗಮನವನ್ನು ಪಾಕಿಸ್ತಾನಿ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಮೇಲೆ ಕೇಂದ್ರೀಕರಿಸಬೇಕು ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಈ ಆಕ್ರಮಿತ ಪ್ರದೇಶದ ಸ್ವಾತಂತ್ರ್ಯಕ್ಕೆ ಸಹಾಯ ಮಾಡಬೇಕು ಎಂದು ತಿಳಿಸಿದರು.

Continue Reading
Advertisement
IPL 2024
ಐಪಿಎಲ್ 202422 mins ago

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

French Yoga Teacher
ಮಹಿಳೆ49 mins ago

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

Vande Bharat Express
ದೇಶ57 mins ago

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

ಕರ್ನಾಟಕ1 hour ago

Vijayapura News: ಮೀನುಗಳ ಮಾರಣ ಹೋಮ; ಬಿಸಿಲ ತಾಪಕ್ಕೆ 17 ಸಾವಿರ ಮತ್ಸ್ಯಗಳ ಸಾವು

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 hour ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Adhir Ranjan
ದೇಶ1 hour ago

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ2 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

felicitation programme for SSLC student Harshita D M who got 2nd place in the state
ತುಮಕೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

130 crore crop compensation amount paid to Vijayanagara district says DC m S Diwakar
ವಿಜಯನಗರ2 hours ago

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Prajwal Revanna Case Naveen Gowda post against MLA A Manju
ರಾಜಕೀಯ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 hour ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ2 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ2 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ15 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌