Fraud Case : ಹುಡುಗಿ ಹೆಸರಲ್ಲಿ ಚಾಟಿಂಗ್‌; ಸಲಿಗೆ ಬೆಳೆಸಿ ಸುಲಿಗೆ! - Vistara News

ಕರ್ನಾಟಕ

Fraud Case : ಹುಡುಗಿ ಹೆಸರಲ್ಲಿ ಚಾಟಿಂಗ್‌; ಸಲಿಗೆ ಬೆಳೆಸಿ ಸುಲಿಗೆ!

Fraud Case : ಹುಡುಗಿಯರ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್‌ (Fake profile) ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಖತರ್ನಾಕ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Using a girl name and fraud by two people
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೊಕ್ಯಾಂಟೋ ಆ್ಯಪ್ (Locanto App) ಬಳಸುವವರನ್ನೇ ಟಾರ್ಗೆಟ್‌ ಮಾಡಿ ಸುಲಿಗೆ (Fraud case) ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನದೀಂ ಪಾಷ ಹಾಗೂ ನಾಗೇಶ್ ಬಂಧಿತರು.

ಈ ಖದೀಮರು ಹುಡುಗಿ ಹೆಸರಲ್ಲಿ ಲೊಕ್ಯಾಂಟೋ ಆ್ಯಪ್‌ನಲ್ಲಿ ಚೆಂದದ ಫೋಟೊ ಹಾಕಿ ಫೇಕ್‌ ಪ್ರೊಫೈಲ್ ಕ್ರಿಯೇಟ್‌ ಮಾಡುತ್ತಿದ್ದರು. ಬಳಿಕ ಆ ಅಕೌಂಟ್‌ನಿಂದ‌ ತಾವೇ ಮೊದಲು ಮೆಸೇಜ್ ಮಾಡುತ್ತಿದ್ದರು. ಸಲುಗೆಯಿಂದ ಮಾತಾಡುತ್ತಾ ನಂಬಿಕೆಯನ್ನು ಗಿಟ್ಟಿಸಿಕೊಂಡು ಮರುಳು ಮಾಡುತ್ತಿದ್ದರು.

Nagesh and Nadim Accused
ಬಂಧಿತ ಆರೋಪಿಗಳು

ಹುಡುಗ ಮೋಸದ ಜಾಲಕ್ಕೆ ಬಿದ್ದ ಎಂದು ತಿಳಿದರೆ ಸಾಕು ಲೊಕೇಷನ್ ಕಳಿಸಿ, ಭೇಟಿ ಮಾಡುವ ಪ್ಲ್ಯಾನ್‌ ಮಾಡುತ್ತಾರೆ. ಹುಡುಗಿ ಸಿಗ್ತಾಳೆ ಎಂದು ನಂಬಿ ಆ ಲೊಕೇಷನ್‌ಗೆ ಹೋದರೆ ಮುಗಿತು. ಆಟೋದಲ್ಲಿ ಇವರಿಬ್ಬರು ಪ್ರತ್ಯಕ್ಷರಾಗಿ, ಚಾಕು ತೋರಿಸಿ ಕಿಡ್ನ್ಯಾಪ್ ಮಾಡುತ್ತಿದ್ದರು.

ಇದನ್ನೂ ಓದಿ: Physical Abuse : ಹೋಟೆಲ್‌ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ; ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್‌

ಹುಡುಗನ ಬಳಿ ಇರುವ ಹಣ, ಚಿನ್ನ ಸುಲಿಗೆ ಮಾಡಿ ಬಳಿಕ ಅಕೌಂಟ್‌ನಿಂದಲೂ ಹಣ ಡ್ರಾ ಮಾಡಿಸುತ್ತಿದ್ದರು. ಒಂದು ವೇಳೆ ಈತನ ಬಳಿ ಹಣ ಇಲ್ಲ ಎಂದರೆ ಸ್ನೇಹಿತರಿಗೆ ಕರೆ ಮಾಡಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಪಡೆದುಕೊಳ್ಳುತ್ತಿದ್ದರು. ರಾತ್ರಿಯಿಡೀ ಬಂಧನದಲ್ಲಿ ಇಟ್ಟುಕೊಂಡು ಇರುವುದೆಲ್ಲ ದೋಚಿ ನಂತರ ಬಿಟ್ಟು ಕಳುಹಿಸುತ್ತಿದ್ದರು.

15ಕ್ಕೂ ಜನರಿಗೆ ಗಾಳ ಹಾಕಿದ್ದ ಖದೀಮರು

ಇತ್ತೀಚೆಗೆ ಎಚ್‌ಎಸ್‌ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲೂ ವ್ಯಕ್ತಿಯೊಬ್ಬನನ್ನು ಕರೆಸಿ 60 ಸಾವಿರ ಹಣ ಸುಲಿಗೆ ಮಾಡಿದ್ದರು. ಈ ಸಂಬಂಧ ಮೋಸ ಹೋದ ವ್ಯಕ್ತಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಇಬ್ಬರನ್ನು ಬಂಧಿಸಿ, ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

Uttara Kannada Landslide: ನಿನ್ನೆ ಸಂಜೆ ವೇಳೆಗೆ ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಲ್ಲಿ ಛಿದ್ರಗೊಂಡಿದ್ದ ದೇಹವೊಂದು ಪತ್ತೆಯಾಗಿದ್ದು, ಅದು ಇಲ್ಲಿಂದ ಕೊಚ್ಚಿಕೊಂಡು ಹೋದ ವ್ಯಕ್ತಿಯ ಶವವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ.

VISTARANEWS.COM


on

Uttara kannada landslide 3
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada Landslide) ಅಂಕೋಲಾ- ಶಿರೂರು ಗುಡ್ಡಕುಸಿತ (Ankola Shiruru landslide) ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ದುರಂತದಲ್ಲಿ ನಾಪತ್ತೆಯಾದ 10 ಜನರಲ್ಲಿ ನಿನ್ನೆಯವರೆಗೆ 6 ಮಂದಿಯ ಶವ ಪತ್ತೆಯಾಗಿದೆ. ಇನ್ನೂ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ನಡುವೆ ನಿನ್ನೆ ಸಂಜೆ ವೇಳೆಗೆ ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಲ್ಲಿ ಛಿದ್ರಗೊಂಡಿದ್ದ ದೇಹವೊಂದು ಪತ್ತೆಯಾಗಿದ್ದು, ಅದು ಇಲ್ಲಿಂದ ಕೊಚ್ಚಿಕೊಂಡು ಹೋದ ವ್ಯಕ್ತಿಯ ಶವವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಜಿಲ್ಲಾಡಳಿತದ ಮಾಹಿತಿಯಂತೆ ಇಲ್ಲಿ 10 ಮಂದಿ ಕಣ್ಮರೆಯಾಗಿದ್ದಾರೆ; ಇವರಲ್ಲಿ 6 ಮಂದಿಯ ಶವಗಳು ಸಿಕ್ಕಿವೆ ಹಾಗೂ ಇನ್ನೂ ನಾಲ್ವರಿಗಾಗಿ ಶೋಧ ನಡೆಯುತ್ತಿದೆ.

ಮತ್ತೆ ಗುಡ್ಡ ಕುಸಿತದ ಆತಂಕ

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಣ್ಣು ತೆರವು ಕಾರ್ಯಕ್ಕೆ ಅಡ್ಡಿಯಾಗಿದೆ. ಧಾರಾಕಾರ ಮಳೆಯ ನಡುವೆಯೂ ಮಣ್ಣು ತೆರವು ಭರದಿಂದ ಸಾಗಿದ್ದು, ಐಆರ್‌ಬಿ ಸಿಬ್ಬಂದಿ ತೆರವು ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್‌, ಪೊಲೀಸ್ ತಂಡಗಳು ಶೋಧ ಕಾರ್ಯ ಮುನ್ನಡೆಸಿವೆ. ಮಳೆಯಿಂದಾಗಿ ಗುಡ್ಡದಿಂದ ಝರಿಯಂತೆ ನೀರು ಹರಿದುಬರುತ್ತಿದ್ದು, ಮತ್ತೆ ಗುಡ್ಡ ಕುಸಿತ ಭೀತಿ ತಲೆದೋರಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಾಚರಣೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ವಿಸ್ತಾರ ನ್ಯೂಸ್‌ಗೆ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಪ್ರತಿಕ್ರಿಯೆ ನೀಡಿದ್ದು, ಇನ್ನೂ 40 ಮೀಟರ್ ಕೆಲಸ ಬಾಕಿ ಇದೆ, ಇಂದು ಪೂರ್ಣಗೊಳ್ಳಬಹುದು ಎಂದಿದ್ದಾರೆ. ಆದರೆ ಇಲ್ಲಿನ ಇನ್ನೊಂದು ಬದಿ ಕುಸಿಯುವ ಆತಂಕ ಎದುರಾಗಿದೆ. ನಿನ್ನೆ ಅಲ್ಪ ಪ್ರಮಾಣದಲ್ಲಿದ್ದ ಬಿರುಕು ಇಂದು ಹೆಚ್ಚಾಗಿದೆ. ಅದೂ ಕುಸಿದರೆ ಮತ್ತೆ ಕಾರ್ಯಾಚರಣೆಗೆ ಹಿನ್ನಡೆಯಾಗಬಹುದು ಎಂದಿದ್ದಾರೆ.

ಗಂಗಾವಳಿ ನದಿಯಲ್ಲಿ ಮಣ್ಣಿನ ದಿಬ್ಬಗಳು ನಿರ್ಮಾಣವಾಗಿವೆ. ಇದರಿಂದ ನದಿಯ ಹರಿವು ರಸ್ತೆಗೆ ಕೊರೆತ ಉಂಟುಮಾಡುವ ಸಾಧ್ಯತೆಯಿದೆ. ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುಡ್ಡ ಕುಸಿತದಿಂದ ಉಳುವರೆ ಗ್ರಾಮದ ಮನೆಗಳಿಗೆ ಹಾನಿಯಾದ ವಿಚಾರದಲ್ಲಿ, ಆಸ್ಪತ್ರೆಗೆ ದಾಖಲಾಗಿದ್ದ 15 ಮಂದಿಗೆ ಬಾಡಿಗೆ ಮನೆ ಮಾಡಿ ಇರಿಸಲು ಚಿಂತನೆ ನಡೆಸಲಾಗಿದೆ. ಗುಡ್ಡ ಕುಸಿತದಿಂದ ಮನೆ ಕಳೆದುಕೊಂಡಿರುವ ಉಳುವರೆ ಗ್ರಾಮದ ನಿವಾಸಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕಾಳಜಿ ಕೇಂದ್ರದ ಬದಲು ಬಾಡಿಗೆ ಮನೆ ವ್ಯವಸ್ಥೆ ಮಾಡಲಾಗುತ್ತಿದೆ. ಮನೆ ನಿರ್ಮಾಣವಾಗುವವರೆಗೆ ಬಾಡಿಗೆ ಮನೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ.

ಗ್ಯಾಸ್‌ ಟ್ಯಾಂಕರ್‌ನ ಅನಿಲ

ಮಣ್ಣು ಕುಸಿತದ ವೇಳೆ ನದಿಯಲ್ಲಿ ತೇಲಿಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ತಜ್ಞರ ತಂಡ ಅನಿಲ ಟ್ಯಾಂಕರ್ ಖಾಲಿ ಮಾಡುವ ಕಾರ್ಯ ಮಾಡುತ್ತಿದೆ. ಉಳಿದ ಅನಿಲ ಇಂದು ಖಾಲಿ ಮಾಡುತ್ತೇವೆ. ಭಾರೀ ಮಳೆ ಹಾಗೂ ಗಾಳಿ‌ ಇರುವುದರಿಂದ ಅನಿಲ ಖಾಲಿ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ಸತೀಶ್‌ ಸೈಲ್‌ ತಿಳಿಸಿದ್ದಾರೆ.

ನದಿಯಲ್ಲಿ ತೇಲಿಹೋಗಿದ್ದ ಟ್ಯಾಂಕರ್‌ ಅನ್ನು ಸದ್ಯ ಸಗಡಗೇರಿ‌ ಬಳಿ ನೌಕಾನೆಲೆ, NDRF ತಂಡಗಳು ತಡೆದು ನಿಲ್ಲಿಸಿದ್ದವು. ನಿನ್ನೆ ಶೇ.60ರಷ್ಟು ಗ್ಯಾಸ್ ಅನ್ನು ಗಂಗಾವಳಿ ನದಿಗೆ ಬಿಟ್ಟಿದ್ದ ಹೆಚ್‌ಪಿಎಲ್ ಕಂಪೆನಿ ತಜ್ಞರು, ಇಂದು ಮತ್ತೆ ಶೇ.40ರಷ್ಟು ಗ್ಯಾಸ್ ನೀರಿಗೆ ಬಿಡಲಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕದಳ, SDRF, NDRF, ಪೊಲೀಸರು, ವೈದ್ಯಾಧಿಕಾರಿಗಳ ತಂಡ ಮೊಕ್ಕಾಂ ಹೂಡಿದೆ. ಎರಡು ಆ್ಯಂಬುಲೆನ್ಸ್ ಸ್ಥಳದಲ್ಲಿ ನಿಯೋಜನೆಯಾಗಿದೆ. ಗ್ರಾಮದ 34 ಮನೆಗಳ ಜನರನ್ನು ಜಿಲ್ಲಾಡಳಿತ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದೆ. ಟ್ಯಾಂಕರ್ ಒಟ್ಟು 18 ಕ್ವಿಂಟಾಲ್ ಗ್ಯಾಸ್ ಹೊಂದಿತ್ತು.

ಇದನ್ನೂ ಓದಿ: Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Continue Reading

ಮಳೆ

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain : ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರಲ್ಲಿ ಮನೆ ಮುಂಭಾಗ ಕಂದಕ ನಿರ್ಮಾಣವಾಗಿದೆ. ಬೃಹತ್‌ ಮರಗಳು ಧರೆಗುರುಳಿದ್ದು, ಮನೆಯ ಚಾವಣಿಗಳು ಕುಸಿದು ಬಿದ್ದಿವೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರು ಸೇರಿ ರಾಜ್ಯಾದ್ಯಂತ ಭಾರಿ (Karnataka Rain) ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕವೊಂದು ಸೃಷ್ಟಿಯಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮೇಗೂರು ಗ್ರಾಮದಲ್ಲಿ ಮನೆಯ ಮುಂಭಾಗವೇ 30 ಅಡಿ ಆಳದ ಕಂದಕ ಸೃಷ್ಟಿಯಾಗಿದೆ. ಗ್ರಾಮದ ಪ್ರೇಮ ಬಾಬು ಗೌಡ ಎಂಬುವವರ ಮನೆ ಮುಂದೆ ಕಂದಕ ಸೃಷ್ಟಿಯಾಗಿದ್ದು, ವಿಚಿತ್ರ ಕಂದಕ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕಂದಕದ ಒಳಗಿಂದ ಭೂಮಿ ಒಳಗೆ ನೀರಿನ ಬುಗ್ಗೆ ಹರಿಯುತ್ತಿದೆ. ಬಾವಿ ಆಕಾರದಲ್ಲಿ ಕಂದಕ ಸೃಷ್ಟಿಯಾಗಿದೆ.

ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ಮನೆಯ ಹಿಂಭಾಗದಲ್ಲಿ ಭೂ ಕುಸಿತ ಉಂಟಾಗಿದೆ. ಕಳಸ ತಾಲೂಕಿನ ಮಾವಿನಕೆರೆ ಕಲ್ಲಾನೆಯಲ್ಲಿ ಘಟನೆ ನಡೆದಿದೆ. ಕಲ್ಲಾನೆಯ ಬಾಸ್ಕರ್ ಪೂಜಾರಿ ಎಂಬುವವರು ಕಂಗಲಾಗಿದ್ದಾರೆ. ಮಳೆ ಹೆಚ್ಚಾದಂತೆ ಸ್ವಲ್ಪ ಸ್ವಲ್ಪವೇ ಭೂಮಿ ಕುಸಿಯುತ್ತಿದೆ.

ಪ್ರಪಾತಕ್ಕೆ ಬಿದ್ದ ಲಾರಿ, ಚಾಲಕ ಗ್ರೇಟ್‌ ಎಸ್ಕೇಪ್‌

ಚಿಕ್ಕಮಗಳೂರಿನಲ್ಲಿ ಲಾರಿ ಚಾಲಕರೊಬ್ಬರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಲಾರಿ ಪ್ರಪಾತಕ್ಕೆ ಬಿದ್ದರೂ ಅದೃಷ್ಟವಶಾತ್ ಚಾಲಕ ಬದುಕುಳಿದಿದ್ದಾರೆ. ನಿರಂತರ ಮಳೆಗೆ ನೆಮ್ಮಾರು ಸಮೀಪದ ರಸ್ತೆ ಕುಸಿದು, ಲಾರಿಯೊಂದು ಸುಮಾರು 50 ಅಡಿ ಆಳದಲ್ಲಿ ಬಿದ್ದಿದೆ. ಲಾರಿ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಶೃಂಗೇರಿ ನೆಮ್ಮಾರು ಬಳಿ ರಸ್ತೆ ಕುಸಿದ ಪರಿಣಾಮ ಲಾರಿಯು ಪ್ರಪಾತಕ್ಕೆ ಬಿದ್ದಿದೆ. ನೆಮ್ಮಾರು ವ್ಯಾಪ್ತಿಯ ಹೊಸದೇವರಹಡ್ಳು ಸಮೀಪದಲ್ಲಿ ಘಟನೆ ನಡೆದಿದೆ.

ನಿದ್ರೆಗೆ ಜಾರಿದಾಗ ಮನೆ ಮೇಲೆ ಬಿದ್ದ ಬೃಹತ್‌ ಮರ

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರಿಕಟ್ಟೆ ಸುತ್ತಮುತ್ತ ಅಪಾಯದ ಮಟ್ಟ ಮೀರಿ ಹಳ್ಳ ಕೊಳ್ಳಗಳು ಹರಿಯುತ್ತಿದ್ದು, ಬಸರಿ ಕಟ್ಟೆ -ಬಿಲಾಳು ಕೊಪ್ಪ ರಸ್ತೆಯು ಜಲಾವೃತಗೊಂಡಿದೆ. ಇತ್ತ ಅಜ್ಜಂಪುರ ತಾಲೂಕಿನ ಗುಡ್ಡದಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕುಟುಂಬಸ್ಥರು ಮನೆಯಿಂದ ಎದ್ದು ಓಡಿದ್ದಾರೆ. ಕುಟುಂಬಸ್ಥರು ನಿದ್ದೆಯಲ್ಲಿದ್ದಾಗ ಏಕಾಏಕಿ ಮರ ಬಿದ್ದು, ಚಾವಣಿ ಸಂಪೂರ್ಣ ಹಾನಿಯಾಗಿದೆ. ಗ್ರಾಮದ ರವಿ ಎಂಬುವರಿಗೆ ಸೇರಿದ ಮನೆಯವರು ಪಾರಾಗಿದ್ದಾರೆ.

ಕೊಚ್ಚಿ ಹೋದ ಅಡಿಕೆ ತೋಟ

ಭದ್ರಾ ನದಿ ಪ್ರವಾಹದಿಂದ ತೋಟ-ಗೆದ್ದೆಗಳು ಜಲಾವೃತಗೊಂಡಿದೆ. ಮಹಾಮಳೆಗೆ ಅರ್ಧ ಎಕರೆ ಅಡಿಕೆ‌ ತೋಟ ಕೊಚ್ಚಿ ಹೋಗಿದೆ. ಕಳಸ ತಾಲೂಕಿನ ಮಕ್ಕಿಮನೆಯ ನಾಗೇಂದ್ರ ಎಂಬುವರಿಗೆ ಸೇರಿದ ತೋಟದಲ್ಲಿ ಮಣ್ಣು ಕುಸಿತವಾಗಿ ಅರ್ಧ ಎಕರೆ ಅಡಿಕೆ ಗಿಡಗಳು ಮಣ್ಣುಪಾಲಾಗಿದೆ. ನಡ್ಲುಮನೆಯ ವರ್ಧಮಾನಯ್ಯ ಎಂಬುವವರ 3 ಎಕರೆ ನಾಟಿ ಮಾಡಿದ ಭತ್ತದ ಗದ್ದೆ ಜಲಾವೃತವಾಗಿದೆ.

ಇದನ್ನೂ ಓದಿ: Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

ಕೊಡಗಿನಲ್ಲಿ ಗುಡ್ಡ ಕುಸಿತ ಭೀತಿ; ರಾತ್ರಿ ಸಂಚಾರ ಬಂದ್‌

ಕೊಡಗಿನಲ್ಲಿ ಮಳೆ ತಗ್ಗಿದರೂ ಪ್ರವಾಹದ ಪರಿಸ್ಥಿತಿ ತಗ್ಗಿಲ್ಲ. ಕುಶಾಲನಗರದ ಸಾಯಿ ಬಡಾವಣೆಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಸುಮಾರು 25ಕ್ಕೂ ಅಧಿಕ ಮನೆಗಳಿರುವ ಸಾಯಿ ಬಡಾವಣೆಯೊಳಗೆ ಕಾವೇರಿ ನದಿ ನೀರು ನುಗ್ಗಿ‌ ಜಲಾವೃತಗೊಂಡಿದೆ. ಹೀಗಾಗಿ ನಿವಾಸಿಗಳು ಮನೆಗಳನ್ನು ತೊರೆಯುತ್ತಿದ್ದಾರೆ. ಮಳೆ ಹೆಚ್ಚಾದರೇ ಬಡಾವಣೆಯೇ ಮುಳುಗುವ ಆತಂಕವಿದೆ. ಸಾಯಿ ಬಡಾವಣೆ ಜತೆಗೆ ಕುವೆಂಪು ಬಡಾವಣೆಗೂ ಜಲ ಕಂಟಕವಿದೆ.

ಕೊಡಗು ಜಿಲ್ಲೆಯ ಮಡಿಕೇರಿ ಮಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಇದೆ. ಹೀಗಾಗಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಕೊಡಗು ಡಿಸಿ ಆದೇಶ ಹೊರಡಿಸಿದ್ದಾರೆ. ಗುಡ್ಡದ ಕೆಳಭಾಗದಲ್ಲಿ ಸ್ವಲ್ಪ ಮಣ್ಣು ಜರಿದಿದ್ದು, ಬಿರುಕು ಮೂಡುವ ಸಾಧ್ಯತೆ ಇದೆ.

ಮೈಸೂರಿನಲ್ಲಿ ಜೋರು ಮಳೆಗೆ ಕುಸಿದು ಬಿದ್ದ ಮನೆ

ಕರಾವಳಿ, ಮಲೆನಾಡು ಮಾತ್ರವಲ್ಲದೇ ಒಳನಾಡು ಭಾಗದಲ್ಲೂ ಮಳೆಯು ಅಬ್ಬರಿಸುತ್ತಿದೆ. ಮೈಸೂರಿನಲ್ಲಿ ವರುಣನ ಆರ್ಭಟಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಮೈಸೂರಿನ ಸಾಲಿಗ್ರಾಮ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಸರೋಜಮ್ಮ ದೇವೇಗೌಡ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಪಾತ್ರೆಗಳು, ದಿನಸಿ ಸಾಮಗ್ರಿಗಳು, ಬಟ್ಟೆ ಬರೆ ಎಲ್ಲವೂ ಹಾನಿಯಾಗಿದೆ. ಮನೆಯವರು ಕೆಲಸ ನಿಮಿತ್ತ ಹೊರಗಡೆ ಹೋದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮಳೆಯಿಂದ ವಾಸದ ಮನೆ ಕಳೆದುಕೊಂಡ ಸರೋಜಮ್ಮ, ದೇವೇಗೌಡ ಕಂಗಲಾಗಿದ್ದಾರೆ. ಸಾಲಿಗ್ರಾಮ ತಾಲೂಕು ಆಡಳಿತ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಜೋರಾಗಿ ಬೀಸಿದ ಗಾಳಿಗೆ ನೆಲಕ್ಕುರುಳಿದ ಟವರ್‌

ಭಾರಿ ಗಾಳಿ- ಮಳೆಗೆ ಬೃಹತ್ ಗಾತ್ರದ ಟವರ್ ನೆಲಕ್ಕೆ ಉರುಳಿ ಬಿದ್ದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಭಾರೀ ಗಾಳಿಗೆ ಬೃಹತ್ ಟವರ್ ನೆಲಕ್ಕುರುಳಿದ ಪರಿಣಾಮ ಅಂಗಡಿ ಮುಂಗಟ್ಟು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಹಾಸನದಲ್ಲಿ ಸೇತುವೆ ಮುಳುಗಡೆ, ಹೊಳೆಮಲ್ಲೇಶ್ವರ ದೇಗುಲ ಜಲಾವೃತ

ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಬಾಣಗೇರಿ ಹೊಳೆ ನೀರು ಉಕ್ಕಿ ಹರಿಯುತ್ತಿದೆ. ಮಾಗೇರಿ ಗ್ರಾಮದ ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಸಕಲೇಶಪುರ ತಾಲೂಕಿನ ಮಾಗೇರಿ ಗ್ರಾಮದ ಸೇತುವೆ ಮುಳುಗಡೆಗೊಂಡಿದೆ. ಇದರಿಂದಾಗಿ ಸಕಲೇಶಪುರ-ಮಾಗೇರಿ-ಸೋಮವಾರಪೇಟೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಹರಿಯುತ್ತಿರುವ ನೀರಿನಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಇನ್ನೂ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಮಳೆ ಮುಂದುವರಿದಿದ್ದು, ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ಅಕ್ಕ-ಪಕ್ಕ ಹಾಗೂ ತಗ್ಗು ಪ್ರದೇಶಕ್ಕೂ ನೀರು ನುಗ್ಗಿದೆ. ಹೇಮಾವತಿ ನದಿ ದಂಡೆಯಲ್ಲಿರುವ ಸಕಲೇಶಪುರದ ಹೊಳೆಮಲ್ಲೇಶ್ವರ ದೇಗುಲದ ಮೆಟ್ಟಿಲು ಜಲಾವೃತಗೊಂಡಿದೆ. ಮಳೆ ಹೀಗೆ ಮುಂದುವರೆದರೆ ದೇಗುಲವೂ ಜಲಾವೃತವಾಗುವ ಸಾಧ್ಯತೆ ಇದೆ.

ಉಡುಪಿಯ ಆತ್ರಾಡಿಯಲ್ಲಿ ಕೃತಕ ನೆರೆ

ಉಡುಪಿಯ ಮಲ್ಪೆ- ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಹೆದ್ದಾರಿಯಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಆತ್ರಾಡಿಯ ಮನೆಗಳಿಗೆ ನೀರು ನುಗ್ಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸಿದ ಹಿನ್ನೆಲೆಯಲ್ಲಿ ಚರಂಡಿ ನೀರು ನುಗ್ಗಿ ಈ ಸಮಸ್ಯೆ ಸೃಷ್ಟಿಯಾಗಿದೆ.

ಶಿರೂರು ಗುಡ್ಡ ಕುಸಿತ; ನಿಂತಲ್ಲೇ ನಿಂತ ಟ್ರಕ್‌ಗಳು

ಅಂಕೋಲಾ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಹಿನ್ನೆಲೆ, ಟ್ರಕ್ ಚಾಲಕರು ಕಂಗಾಲಾಗಿದ್ದಾರೆ. ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್‌ನಲ್ಲಿ ಕಳೆದ ಮೂರು ದಿನಗಳಿಂದ ಟ್ರಕ್‌ಗಳು ನಿಂತಲ್ಲೇ ನಿಲ್ಲುವಂತಾಗಿದೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವಾಗದ ಕಾರಣ ಸಂಪರ್ಕ ಬಂದ್ ಆಗಿದೆ. ಮಂಗಳೂರಿನಿಂದ ಎಲ್‌ಪಿಜಿ ಸಾಗಿಸುತ್ತಿದ್ದ ಟ್ಯಾಂಕರ್‌ಗಳು ಶಿರೂರು ಟೋಲ್ ನಲ್ಲಿಯೇ ಸ್ಟ್ರಕ್ ಆಗಿವೆ. ಸುಮಾರು 120 ಅಧಿಕ ಸರಕು ಮತ್ತು ಗ್ಯಾಸ್ ಟ್ಯಾಂಕರ್‌ಗಳು ಟೋಲ್ ಬಳಿ ಮೊಕ್ಕಾಂ ಹೂಡಿವೆ. ಮೂರು ದಿನಗಳಿಂದ ಟ್ರಕ್‌ಗಳಲ್ಲೆ ಅಡುಗೆ ಮನೆ ಮಾಡಿಕೊಂಡು, ಅಲ್ಲೆ ಊಟ ಅಲ್ಲೆ ನಿದ್ರೆ ಮಾಡುತ್ತಿದ್ದಾರೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವಾಗದೆ ಇಲ್ಲಿಂದ ತೆರಳಾಗದ ಸ್ಥಿತಿಯಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Karnataka Assembly Live: “ಸದ್ಯ ಪೈಲಟ್‌ ಪ್ರಾಜೆಕ್ಟ್‌ ಆಗಿ ಇದನ್ನು ಅಳವಡಿಸಿದ್ದೇವೆ. ಪರಿಣಾಮ ನೋಡಿಕೊಂಡು ನಿಮ್ಮ ಅಭಿಪ್ರಾಯ ತಿಳಿಸಿ. ಸಕಾರಾತ್ಮಕ ಅಭಿಪ್ರಾಯ ಬಂದರೆ ಮುಂದಿನ ಅಧಿವೇಶನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸುತ್ತೇವೆ” ಎಂದು ಖಾದರ್‌ ತಿಳಿಸಿದರು. ಸ್ಪೀಕರ್‌ ಕ್ರಮಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ʼಇನ್ನೂ ಎರಡು ವರ್ಷದಲ್ಲಿ ಏನೇನು ಮಾಡಿಸ್ತೀರೋ ನೀವುʼ ಎಂಬ ಉದ್ಗಾರವೂ ಶಾಸಕರ ಕಡೆಯಿಂದ ಕೇಳಿಬಂತು.

VISTARANEWS.COM


on

UT Khader karnataka assembly live
Koo

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ (Vidhan sabha Session) ಶಾಸಕರ ಹಾಜರಾತಿ ಕೊರತೆ ತುಂಬುವ ವಿಶಿಷ್ಟ ಪ್ರಯತ್ನವೊಂದನ್ನು ಸ್ಪೀಕರ್‌ ಯ.ಟಿ ಖಾದರ್‌ (Speaker UT Khader) ಕೈಗೊಂಡಿದ್ದಾರೆ. ಮಧ್ಯಾಹ್ನ ಭೋಜನದ ಬಳಿಕ ಶಾಸಕರು ವಿಶ್ರಾಂತಿ ಪಡೆಯಲು ಸುಖಾಸನಗಳನ್ನು (ರಿಕ್ಲೈನರ್ಸ್)‌ ಹಾಕಿಸಿದ್ದು, ಇಲ್ಲಿ ಶಾಸಕರು ವಿಶ್ರಾಂತಿ ಪಡೆಯಬಹುದಾಗಿದೆ. ಈ ವಿಚಾರವನ್ನು ಸ್ಪೀಕರ್‌ ಇಂದು ಕಲಾಪದಲ್ಲಿ (karnataka assembly live) ತಿಳಿಸಿದರು.

ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಲೇ ಸ್ಪೀಕರ್‌ ಈ ವಿಚಾರವನ್ನು ಪ್ರಸ್ತಾವಿಸಿದರು. ಹಾಜರಾತಿಯ ಕೊರತೆಯ ಬಗ್ಗೆ ಉಲ್ಲೇಖಿಸಿದರು. ಹಾಜರಾತಿ ಹೆಚ್ಚಿಸಲು ತಾವು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು. “ಶಾಸಕರು ಬೆಳಗ್ಗೆ ಬೇಗ ಬರಲಿ ಅನ್ನುವ ಉದ್ದೇಶದಿಂದ ಬೆಳಗ್ಗೆ ತಿಂಡಿಯ ವ್ಯವಸ್ಥೆ ಮಾಡಿಸಿದೆ. ಆಮೇಲೆ ಮಧ್ಯಾಹ್ನ ಊಟಕ್ಕಾಗಿ ದೂರ ಹೋಗಿ ಬರುವುದಕ್ಕೆ ತಡವಾಗುತ್ತದೆ ಎಂಬ ಕಾರಣಕ್ಕಾಗಿ ಉತ್ತಮವಾದ ಊಟದ ವ್ಯವಸ್ಥೆ ಮಾಡಿಸಲಾಗಿದೆ. ಕೆಲವರು ಊಟ ಚೆನ್ನಾಗಿತ್ತು, ಶಾಸಕರ ಭವನಕ್ಕೆ ಹೋಗಿ ನಿದ್ದೆ ಮಾಡಿ ಬರುತ್ತೇನೆ ಎಂದವನು ಬಳಿಕ ಬರುವುದೇ ಇಲ್ಲ. ಇದನ್ನು ತಡೆಯಲು ಇಲ್ಲೇ ಸುಖಾಸನಗಳನ್ನು (ರಿಕ್ಲೈನರ್ಸ್)‌ ಹಾಕಿಸಿದ್ದೇನೆ. ನಿದ್ರೆ ಬಂದರೆ ಇಲ್ಲೇ ಮಾಡಿ. ದೂರ ಹೋಗಬೇಡಿ. ನಿಮ್ಮ ಅಗತ್ಯ ಬಿದ್ದರೆ ಕೂಡಲೇ ಕರೆಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ” ಎಂದು ಸ್ಪೀಕರ್‌ ವಿವರಿಸಿದರು.

“ಸದ್ಯ ಪೈಲಟ್‌ ಪ್ರಾಜೆಕ್ಟ್‌ ಆಗಿ ಇದನ್ನು ಅಳವಡಿಸಿದ್ದೇವೆ. ಪರಿಣಾಮ ನೋಡಿಕೊಂಡು ನಿಮ್ಮ ಅಭಿಪ್ರಾಯ ತಿಳಿಸಿ. ಸಕಾರಾತ್ಮಕ ಅಭಿಪ್ರಾಯ ಬಂದರೆ ಮುಂದಿನ ಅಧಿವೇಶನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಳವಡಿಸುತ್ತೇವೆ” ಎಂದು ಖಾದರ್‌ ತಿಳಿಸಿದರು. ಸ್ಪೀಕರ್‌ ಕ್ರಮಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ʼಇನ್ನೂ ಎರಡು ವರ್ಷದಲ್ಲಿ ಏನೇನು ಮಾಡಿಸ್ತೀರೋ ನೀವುʼ ಎಂಬ ಉದ್ಗಾರವೂ ಶಾಸಕರ ಕಡೆಯಿಂದ ಕೇಳಿಬಂತು.

ʼಲಾಂಜ್‌ನಲ್ಲಿ ಶಿಸ್ತು ಕಾಪಾಡಿ. ಪಿಎಗಳನ್ನು ಮತ್ತಿತರರನ್ನು ಕರೆದುಕೊಂಡು ಸ್ಪೀಕರ್‌ ಕೊಠಡಿಗೆ ನುಗ್ಗಬೇಡಿ. ಮಾರ್ಷಲ್‌ಗಳ ಜೊತೆಗೆ ಗುದ್ದಾಡಬೇಡಿ. ಇದರಿಂದ ನಿಮ್ಮ ಘನತೆ ಹೆಚ್ಚುವುದಿಲ್ಲ. ಅವರು ನಮ್ಮ ಆದೇಶ ಪಾಲಿಸುತ್ತಾರೆ ಅಷ್ಟೇʼʼ ಎಂದು ಸ್ಪೀಕರ್‌ ಶಾಸಕರಿಗೆ ಕಿವಿಮಾತು ಹೇಳಿದರು.

ಕಲಾಪ ಮುಂದೂಡಿಕೆ

ಇಂದು ಕಲಾಪ ಆರಂಭವಾಗುತ್ತಿದ್ದಂತೆ ಗದ್ದಲ ಶುರುವಾಯಿತು. ವಾಲ್ಮೀಕಿ ಹಗರಣದಲ್ಲಿ (Valmiki corporation Scam) ದುಡ್ಡು ಹೊಡೆದ ಸರ್ಕಾರಕ್ಕೆ ಧಿಕ್ಕಾರ ಎಂದು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಕೂಗಿದರು. ಸದನದಲ್ಲಿ ಮತ್ತೆ ಹೋರಾಟ ಮಾಡಲು ಮುಂದಾದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ನಿಂತರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಕೂಡ ಎದ್ದುನಿಂತು ಕೂಗಾಡಿದರು. ಉಭಯ ಪಕ್ಷಗಳ ಸದಸ್ಯರನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗದೆ ಸದನವನ್ನು ಸ್ಪೀಕರ್‌ ಹತ್ತು ನಿಮಿಷಗಳ ಕಾಲ ಮುಂದೂಡಿದರು.

ಇದನ್ನೂ ಓದಿ: Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Continue Reading

ಬೆಂಗಳೂರು

Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು

Train services: ವಿವಿಧ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ರೈಲು ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಕೆಲವು ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ಸ್ಥಗಿತಗೊಂಡರೆ, ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ವಿಸ್ತರಣೆ ಮಾಡಲಾಗಿದೆ.

VISTARANEWS.COM


on

By

Train services
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ಮೆಂಟ್-ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857ರಲ್ಲಿ ವಿವಿಧ ಕಾಮಗಾರಿಯನ್ನು ಇಲಾಖೆಯು ಕೈಗೊಳ್ಳುತ್ತಿದೆ. ಇದರ ಸಲುವಾಗಿ ಕೆಲವು ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ (Train services) ಮಾಡಲಾಗುತ್ತಿದೆ.

ಈ ರೈಲುಗಳ ಸಂಚಾರ ರದ್ದು

ಜುಲೈ 30, ಆಗಸ್ಟ್ 6 ಮತ್ತು 13ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 12658 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ಚೆನ್ನೈನಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ತಾತ್ಕಾಲಿಕ ರದ್ದಾಗಲಿದೆ.

ಈ ಮಾರ್ಗದ ರೈಲುಗಳು ಭಾಗಶಃ ರದ್ದು

ಜುಲೈ 30, ಆಗಸ್ಟ್ 6 ಮತ್ತು 13ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು, ವೈಟ್ ಫೀಲ್ಡ್-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16594 ನಾಂದೇಡ್-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಲಹಂಕ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ & ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.

ಇನ್ನೂ ಜುಲೈ 31, ಆಗಸ್ಟ್ 7 ಮತ್ತು 14ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರ ನಿಲ್ದಾಣಗಳ ನಡುವೆ & ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06243 ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ. ಈ ರೈಲುಗಳು ಯಶವಂತಪುರ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಪ್ರಾರಂಭವಾಗಲಿವೆ.

ಮಾರ್ಗ ಬದಲಾವಣೆ

-ಜುಲೈ 29, ಆಗಸ್ಟ್ 5 ಮತ್ತು 12 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಮೆಂಟ್, ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

-ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ರೈಲು ಸಂಖ್ಯೆ 06269 ಮೈಸೂರು-ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್ಎಂವಿಟಿ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ 00:45 ಗಂಟೆಗೆ ಪ್ರಾರಂಭಿಸಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

-ರೈಲು ಸಂಖ್ಯೆ 16021 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ಇದನ್ನೂ ಓದಿ: Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

ರೈಲುಗಳ ನಿಯಂತ್ರಣ

ಜುಲೈ 30, ಆಗಸ್ಟ್ 6 ಮತ್ತು 13, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11301 ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 5 ನಿಮಿಷ, ರೈಲು ಸಂಖ್ಯೆ 16231 ಮೈಲಾಡುತುರೈ-ಮೈಸೂರು ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 45 ನಿಮಿಷ & ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ಎಕ್ಸ್ ಪ್ರೆಸ್ ರೈಲನ್ನು 100 ನಿಮಿಷ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.

ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ವಿಸ್ತರಣೆ

ಮಯಿಲಾಡುತುರೈ-ಮೈಸೂರು ನಿಲ್ದಾಣಗಳ ನಡುವೆ ಪ್ರತಿದಿನ ಚಲಿಸುವ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಕಡಲೂರು ಪೋರ್ಟ್ವರೆಗೆ ವಿಸ್ತರಿಸಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಹೀಗಾಗಿ ವಿಸ್ತೃತ ರೈಲು ಸೇವೆಯು ಎರಡೂ ಕಡೆಯಿಂದ ಜುಲೈ 19 ರಿಂದ ಪ್ರಾರಂಭವಾಗಲಿದೆ. ವಿಸ್ತರಣೆಗೊಂಡ ಭಾಗದ ರೈಲಿನ ನಿಲುಗಡೆ ಮತ್ತು ಸಮಯ ಹೀಗಿವೆ..

1) ರೈಲು ಸಂಖ್ಯೆ 16232 ಮೈಸೂರು-ಕಡಲೂರು ಪೋರ್ಟ್ ಡೈಲಿ ಎಕ್ಸ್‌ಪ್ರೆಸ್: ಮಯಿಲಾಡುತುರೈಗೆ 06:45 ಗಂಟೆಗೆ ಆಗಮಿಸಿ, 07:00 ಗಂಟೆಗೆ ನಿರ್ಗಮಿಸಲಿದೆ.
ಸಿರ್ಕಾಝಿಗೆ 07:23 ಗಂಟೆಗೆ ಆಗಮಿಸಿ, 07:24 ಗಂಟೆಗೆ ನಿರ್ಗಮಿಸಲಿದೆ.
ಚಿದಂಬರಂಗೆ 07:41 ಗಂಟೆಗೆ ಆಗಮಿಸಿ, 07:42 ಗಂಟೆಗೆ ನಿರ್ಗಮಿಸಲಿದೆ.
ಕಡಲೂರು ಪೋರ್ಟ್‌ಗೆ 08:35 ಗಂಟೆಗೆ ಆಗಮಿಸಲಿದೆ.

2) ರೈಲು ಸಂಖ್ಯೆ 16231 ಕಡಲೂರು ಪೋರ್ಟ್-ಮೈಸೂರು ಡೈಲಿ ಎಕ್ಸ್‌ಪ್ರೆಸ್ :
ಕಡಲೂರು ಪೋರ್ಟ್ ನಿಲ್ದಾಣದಿಂದ 15:40 ಗಂಟೆಗೆ ನಿರ್ಗಮಿಸಲಿದೆ.
ಚಿದಂಬರಂಗೆ 16:07 ಗಂಟೆಗೆ ಆಗಮಿಸಿ, 16:08 ಗಂಟೆಗೆ ನಿರ್ಗಮಿಸಲಿದೆ.
ಸಿರ್ಕಾಝಿಗೆ 16:23 ಗಂಟೆಗೆ ಆಗಮಿಸಿ,16:24 ಗಂಟೆಗೆ ನಿರ್ಗಮಿಸಲಿದೆ.
ಮಯಿಲಾಡುತುರೈಗೆ 17:30 ಗಂಟೆಗೆ ಆಗಮಿಸಿ,17:55 ಗಂಟೆಗೆ ನಿರ್ಗಮಿಸಲಿದೆ.

ಮೈಸೂರು-ಮೈಲಾಡುತುರೈ ನಿಲ್ದಾಣಗಳ ನಡುವಿನ ನಿಲುಗಡೆ ಮತ್ತು ವೇಳಾಪಟ್ಟಿಯಲ್ಲಿ ಬದಲಾಣೆ ಇರುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kanwar Yatra
ದೇಶ55 seconds ago

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Uttara kannada landslide 3
ಉತ್ತರ ಕನ್ನಡ14 mins ago

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

England vs West Indies
ಕ್ರೀಡೆ22 mins ago

England vs West Indies: ವೇಗದ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

Karnataka Rain
ಮಳೆ26 mins ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Vaibhavi Jagdish Bold Photo shoot
ಸ್ಯಾಂಡಲ್ ವುಡ್27 mins ago

Vaibhavi Jagdish: ಬೋಲ್ಡ್‌ ಫೋಟೊ ಹಂಚಿಕೊಂಡು ಕಮೆಂಟ್‌ ಸೆಕ್ಷನ್‌ ಆಫ್‌ ಮಾಡಿದ ಜೈ ಜಗದೀಶ್ ಪುತ್ರಿ!

Kannada Actress Many opportunities for this actress before the release Back Benchers'!
ಸ್ಯಾಂಡಲ್ ವುಡ್46 mins ago

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Donald Trump
ವಿದೇಶ53 mins ago

Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಪ್ರಮುಖ ಸುದ್ದಿ1 hour ago

Olympic Games: ಒಲಿಂಪಿಕ್ಸ್​ನಲ್ಲಿ ಮಹಿಳೆಯರು ಮೊದಲ ಬಾರಿಗೆ ಸ್ಪರ್ಧಿಸಿದ್ದು ಯಾವಾಗ?

Ram Pothineni double ismart second song out
ಟಾಲಿವುಡ್2 hours ago

Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

UT Khader karnataka assembly live
ಪ್ರಮುಖ ಸುದ್ದಿ2 hours ago

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ26 mins ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ20 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ22 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

ಟ್ರೆಂಡಿಂಗ್‌