KS Eshwarappa : ಶಿವಾಜಿ ಇಲ್ಲದೆ ಹೋಗಿದ್ರೆ ನಮ್ದೆಲ್ಲ ಕಟ್‌ ಆಗಿರ್ತಿತ್ತು!; ಕೈ ಸನ್ನೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ ಈಶ್ವರಪ್ಪ - Vistara News

ಕರ್ನಾಟಕ

KS Eshwarappa : ಶಿವಾಜಿ ಇಲ್ಲದೆ ಹೋಗಿದ್ರೆ ನಮ್ದೆಲ್ಲ ಕಟ್‌ ಆಗಿರ್ತಿತ್ತು!; ಕೈ ಸನ್ನೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ ಈಶ್ವರಪ್ಪ

KS Eshwarappa : ಕೆ.ಎಸ್‌. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶಿವಾಜಿ ಇಲ್ಲದೆ ಹೋಗಿದ್ದರೆ ನಮ್ದೆಲ್ಲ ಕಟ್ಟಾಗಿರ್ತಿತ್ತು ಎಂದಿದ್ದಾರೆ. ಇದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

VISTARANEWS.COM


on

Shivaji EShwarappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಾಗಲಕೋಟೆ: ಶಿವಾಜಿ ಮಹಾರಾಜರು (Shivaji Maharaj) ಇಲ್ಲದೆ ಹೋಗಿದ್ದರೆ ನಾವೆಲ್ಲಾ ಹಿಂದು ಆಗಿ ಇರೋಕೆ ಸಾಧ್ಯವೇ ಇರಲಿಲ್ಲ. ನಮ್ದೆಲ್ಲ ಕಟ್ಟಾಗಿ ಹೋಗಿರ್ತಿತ್ತು!: ಹೀಗೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ (KS Eshwarappa). ಅವರು ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಪ್ರತಿಮೆ ತೆರವು ವಿವಾದಕ್ಕೆ (Shivaji statue controversy) ಪ್ರತಿಕ್ರಿಯಿಸುತ್ತಾ ಬಾಯಿ ಮಾತು ಮಾತ್ರವಲ್ಲ, ಕೈಸನ್ನೆಯಲ್ಲೂ ಮಾತನಾಡಿದರು. ಎಲ್ಲ ಕಟ್‌ ಆಗಿ ಹೋಗಿರ್ತಿದ್ವಿ ಎಂದು ಹೇಳಿ ಕೈ ಸನ್ನೆ ಮೂಲಕ ಪರೋಕ್ಷವಾಗಿ ನಾವೆಲ್ಲ ಮುಸ್ಲಿಂ ಆಗಿರುತ್ತಿದ್ದೆವು ಎಂದು ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ʻʻದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಅಪಮಾನ ಮಾಡೋದ್ರಿಂದ ಮುಸಲ್ಮಾನರ ಮತಗಳು ತಮಗೆ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ ಅವರು. ಕಾಂಗ್ರೆಸ್‌ನವರು ದೇಶ ದ್ರೋಹಿಗಳಿಗೆ ಬೆಂಬಲ ಕೊಡುತ್ತಿದ್ದಾರೆ. ಛತ್ರಪತಿ ಶಿವಾಜಿ ಅವರ ಪ್ರತಿಮೆ ಸ್ಥಾಪನೆ ಮಾಡಿ ಎರಡು ದಿನ ಆದ ಬಳಿಕ ಯಾಕೆ ತೆರವು ಮಾಡಿದರು. ಶಿವಾಜಿ ಪ್ರತಿಮೆ ತೆರವು ಮಾಡುವಂತೆ ಒಬ್ಬ ಸಚಿವರು ಡಿಸಿ ಮತ್ತು ಎಸ್‌ಪಿಗೆ ಧಮಕಿ ಹಾಕಿದರು ಎಂದು ಹೇಳಿದರು.

ʻʻಶಿವಾಜಿ ಪ್ರತಿಮೆ ತೆರವು ಕೇವಲ ಬಾಗಲಕೋಟೆಗೆ ಮಾಡಿದ ಅವಮಾನ ಅಲ್ಲ. ಇದು ಈಡೀ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ. ಇದರ ಫಲವನ್ನು ಮುಂದೆ ಅನುಭವಿಸ್ತಾರೆ ಅನುಭವಿಸಲಿʼʼ ಎಂದು ಹೇಳುತ್ತಾ, ʻʻಶಿವಾಜಿ ಮಹಾರಾಜರು ಇರಲಿಲ್ಲ ಅಂದ್ರೆ ಇಂದು ನಾವು-ನೀವು ಇರುತ್ತಿರಲಿಲ್ಲ. ನಾನು ಸೀರಿಯಸ್ ಆಗಿ ಹೇಳ್ತೀನಿ, ಎಲ್ಲಾ ಕಟ್ ಆಗಿ ಹೋಗ್ತಿತ್ತುʼʼ ಎಂದು ಹೇಳಿದರು.

ನಾನು ರೀತಿ (ಕಟ್‌ ಆಗ್ತಿತ್ತು) ಹೇಳಿಕೆ ನೀಡಿದ್ದಕ್ಕೆ ಯಾರಾದರೂ ಕೇಸು ಹಾಕುವುದಿದ್ದರೆ ಹಾಕಲಿ ಎಂದೂ ಈಶ್ವರಪ್ಪ ಸವಾಲು ಹಾಕಿದರು. ಶಿವಾಜಿ ಮಹಾರಾಜರು ದೇಶದಲ್ಲಿದ್ದಿದ್ದಕ್ಕೇ ನಾವೆಲ್ಲ ಹಿಂದೂಗಳಾಗಿ ಉಳಿದಿದ್ದೇವೆ ಎಂದು ಮತ್ತೊಮ್ಮೆ ಹೇಳಿದರು.

ಡಿ.ಕೆ ಶಿವಕುಮಾರ್‌ಗೆ ಈಶ್ವರಪ್ಪ ಸವಾಲು

ʻʻವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಕಾಂಟ್ರಾಕ್ಟರ್‌ಗಳನ್ನು ಎತ್ತಿಕಟ್ಟಿದ್ದಾರೆʼʼ ಎಂಬ ಡಿಕೆ ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ʻʻಡಿಕೆಶಿ ಡಿಸಿಎಂ ಆದ ದಿನದಂದಲೂ ಸಿಎಂ ಅವರೋ, ಸಿದ್ದರಾಮಯ್ಯನವರೋ ಅನ್ನೋ ರೀತಿ ಮಾತನಾಡ್ತಿದ್ದಾರೆ. ಎಲ್ಲಾ ಇಲಾಖೆಗಳು ನಿಮ್ಮ ಕೈಯಲ್ಲೇ ಇವೆ ತನಿಖೆ ಮಾಡಿಸಿ. ಯಾವುದಾದರೊಂದು ಇಲಾಖೆಗೆ ಒಬ್ಬ ಜಡ್ಜ್ ಅವರನ್ನ ಚೇರಮನ್ ಮಾಡಿ. ೧೫ ದಿನ ಅವರಿಗೆ ಸಮಯ ಕೊಡಿ.. ಒಂದು ಕೇಸ್ ಕೊಡಿ ನೋಡೋಣʼʼ ಎಂದು ಸವಾಲು ಹಾಕಿದರು.

ʻಎಲ್ಲರದೂ ತನಿಖೆ ಮಾಡಿಸ್ತೀವಿ ಅಂತಾರೆ. ಬ್ಲ್ಯಾಕ್ ಮೇಲ್ ತಂತ್ರದ ರಾಜಕಾರಣವನ್ನು ಬಿಜೆಪಿ ನಂಬೋಲ್ಲ. ನೇರವಾಗಿ ನನ್ನದೊಂದು ಸವಾಲ್ ಡಿ.ಕೆ. ಶಿವಕುಮಾರ್‌ಗೆ. ಹಾಲಿ ಅಥವಾ ನಿವೃತ್ತ ಜಡ್ಜ್ ಅವರ ನೇತೃತ್ವದಲ್ಲಿ ಸಮಿತಿ ಆಗಿ, ತನಿಖೆಯಾಗಲಿ. ನಿಜಕ್ಕೂ ಕಳಕಳಿ ಇದ್ದರೆ ನಿಮ್ಮ ಕಾಲದಿಂದ ಇಲ್ಲಿಯವರೆಗೂ ತನಿಖೆ ಮಾಡಿಸಿʼʼ ಎಂದು ಹೇಳಿದರು.

ʻʻಬರೀ ತನಿಖೆ ತನಿಖೆ ಅನ್ನೋ ಡಿಕೆಶಿ ಯಾರು…? ಅವರು ಡಿಕೆಶಿ ಯಾವ ಜೈಲಿನಿಂದ ಹೊರಬಂದವರು? ಯಾವ ಬೇಲ್ ನಲ್ಲಿ ಬಂದವರು, ಯಾವ ಜೈಲಿನಲ್ಲಿ ಇದ್ದವರು ಇವ್ರುʼ ಎಂದು ಆಕ್ರೋಶದಿಂದ ಕೇಳಿದ ಈಶ್ವರಪ್ಪ ಅವರು, ಬ್ಲ್ಯಾಕ್ ಮೇಲ್ ತಂತ್ರ ಮಾಡಿದ್ರೆ ಜನ ನಂಬೋಲ್ಲ ಎಂದರು.

ಕಪ್ಪು ಹಣ ತಂದಿಲ್ಲ ಎಂದ ಸುಬ್ರಹ್ಮಣ್ಯಂ ಸ್ವಾಮಿ: ಈಶ್ವರಪ್ಪ ಉತ್ತರವೇನು?

ಕಪ್ಪು ಹಣ ತರುವಲ್ಲಿ ಬಿಜೆಪಿ ವಿಫಲ ಆಗಿದೆ ಎಂಬ ಸ್ವಪಕ್ಷದ ನಾಯಕ ಸುಬ್ರಹ್ಮಣ್ಯ ಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ʻʻಚುನಾವಣೆ ಬಂದಾಗ ಯಾರ ಬಾಯಿ ಕೂಡಾ ಹಿಡಿಯೋಕೆ ಆಗಲ್ಲ. ಏನೂ ಬೇಕಾದ್ರು ಹೇಳೋಕೆ ನಿಮಗೆ ಅವಕಾಶ ಇದೆ. ರಾಜ್ಯದ ಜನ ಬಹಳ ಬುದ್ಧಿವಂತರಿದಾರೆ. ಮೋದಿ ಬಂದ್ಮೇಲೆ ವ್ಯಕ್ತಿಗಳಿಗೆ, ರೈತರಿಗೆ ವೈಯಕ್ತಿಕವಾಗಿ ಏನು ಮಾಡಿದ್ದಾರೆ. ರಾಜ್ಯಕ್ಕೆ, ದೇಶಕ್ಕೆ ಏನು ಮಾಡಿದ್ದಾರೆ. ವಿಶ್ವಕ್ಕೆ ಜನ ಏನು‌ ಮಾಡಿದ್ದಾರೆ ಎಲ್ಲವನ್ನೂ ಜನ ನೋಡಿದ್ದಾರೆ. ರಾಹುಲ್ ಗಾಂಧಿ ಮುಂದಿಟ್ಕೊಂಡು ಅವ್ರು ಹೋಗಲಿʼʼ ಎಂದರು.

ʻʻಸತ್ತೋಗಿರುವ ಹೆಣ ಯಾಕೆ ಹೊರಗೆ ತೆಗಿತಿದೀರಿ. ಹೊಸದು ಕೊಲೆ ಆಗಿದ್ರೆ ಹೇಳಿʼʼ ಎನ್ನುವ ಮೂಲಕ ಪರೋಕ್ಷವಾಗಿ ಕಪ್ಪು ಹಣದ ವಿಷಯ ಸತ್ತೋಗಿರುವ ವಿಷಯ ಎಂದರು ಈಶ್ವರಪ್ಪ.

ಸಿದ್ದರಾಮಯ್ಯ ರಾಜ್ಯದ ನಂಬರ್‌ ಒನ್‌ ಪಕ್ಷಾಂತರ ಪ್ರವೀಣ

ಬಿಜೆಪಿಗೆ ಪಕ್ಷಾಂತರಗೊಂಡಿದ್ದ ಕಾಂಗ್ರೆಸ್ ಶಾಸಕರ ಮೇಲೆ ಸಿದ್ದರಾಮಯ್ಯ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯದಲ್ಲಿ ಪಕ್ಷಾಂತರ ಪ್ರವೀಣಾ ಯಾರು? ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಬಂದವ್ರು ಯಾರು? ಸಿದ್ದರಾಮಯ್ಯ ಅವರು ನಂಬರ್‌ ಒನ್‌ ಪಕ್ಷಾಂತ ಪ್ರವೀಣ. ಅವರಿಗೆ ಪಕ್ಷಾಂತರದ ಬಗ್ಗೆ ಮಾತನಾಡುವ ಅಧಿಕಾರವೇ ಇಲ್ಲ ಎಂದರು.

17 ಜನ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಆಡಳಿತ ಸರಿಯಿಲ್ಲ, ಬಿಜೆಪಿಗೆ ಹೋಗ್ತೀವಿ ಅಂತ ರಾಜೀನಾಮೆ ನೀಡಿ ಬಿಜೆಪಿಗೆ ಬಂದ್ರು. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ ಪಕ್ಷಾಂತರವಾದ 17 ಜನರನ್ನು ಮರಳಿ ಪಕ್ಷಕ್ಕೆ ತರಲ್ಲ ಅನ್ನೋದು ಅಷ್ಟೇ ಸತ್ಯ ಎಂದು ವಿಧಾನಸೌಧಲ್ಲಿ ಸಿದ್ದರಾಮಯ್ಯ ಹೇಳಿದ್ರು ಈಗ ಸಾಫ್ಟ್‌ ಕಾರ್ನರ್‌ ತೋರಿಸುತ್ತಿದ್ದಾರೆ ಎಂದು ತಿವಿದರು.

ಇದನ್ನು ಓದಿ: CM Siddaramaiah : ಸಿದ್ಧಾಂತ ಒಪ್ಪಿದವರು ಸೇರಬಹುದು ಎಂದ ಸಿಎಂ ಸಿದ್ದರಾಮಯ್ಯ; ಆಪರೇಷನ್‌ ಹಸ್ತಕ್ಕೆ ಗ್ರೀನ್‌ ಸಿಗ್ನಲ್‌?

ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ದೊಡ್ಡ ಸೋಲು ಗ್ಯಾರಂಟಿ

ಕಾಂಗ್ರೆಸ್‌ನವರು ಆಪರೇಷನ್‌ ಹಸ್ತಕ್ಕೆ ಹೊರಟಿಸುವುದು ಭಯದಿ. ಲೋಕಸಭೆಯಲ್ಲಿ ಸಮೀಕ್ಷೆಯಲ್ಲಿ ಬಿಜೆಪಿ 23 ಸ್ಥಾನ ಬರುತ್ತೆ ಅಂತ ಹೇಳಲಾಗಿದೆ. ಅದಕ್ಕಾಗಿ ಅವ್ರು ನಿದ್ದೆ ಮಾಡುತ್ತಿಲ್ಲ. 23 ಸ್ಥಾನಗಳು ಬರ್ತಿದ್ದಂಗೆ ರಾಜ್ಯದಲ್ಲಿ ಈ ಸರ್ಕಾರ ಇರುತ್ತಾ? ನಾವು ಕರೆಯೋದೇ ಬೇಡ, ಕಾಂಗ್ರೆಸ್ಸಿನವರು ದಿಕ್ಕು ದಿಕ್ಕಾಗಿ ಹೋಗ್ತಾರೆ. ಅವ್ರ ಪಾರ್ಟಿ ಉಳಿಯಲ್ಲ,. ಮಗೂಗೆ ಮೂರು ತಿಂಗಳು ಈಗ (ಸರ್ಕಾರಕ್ಕೆ). ಇನ್ನೊಂದು ಮೂರು ತಿಂಗಳಾಗಲಿ, ಲೋಕಸಭಾ ಎಲೆಕ್ಷನ್ ಅಗಲಿ. ಆವಾಗ ಇವರುಗಳ ಪರಿಸ್ಥಿತಿ ನೋಡುವಿರಂತೆʼʼ ಎಂದರು ಈಶ್ವರಪ್ಪ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading
Advertisement
Latest9 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest10 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest10 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest12 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest13 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest15 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest15 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest16 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest1 day ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌