Reliance AGM 2023: ರಿಲಯನ್ಸ್‌ನಲ್ಲಿ ಮಹತ್ವದ ಬದಲಾವಣೆ; ನೀತಾ ಅಂಬಾನಿ ರಾಜೀನಾಮೆ, ಮಕ್ಕಳಿಗೆ ಮಣೆ - Vistara News

ದೇಶ

Reliance AGM 2023: ರಿಲಯನ್ಸ್‌ನಲ್ಲಿ ಮಹತ್ವದ ಬದಲಾವಣೆ; ನೀತಾ ಅಂಬಾನಿ ರಾಜೀನಾಮೆ, ಮಕ್ಕಳಿಗೆ ಮಣೆ

Reliance AGM 2023: ರಿಲಯನ್ಸ್‌ ಇಂಡಸ್ಟ್ರೀಸ್‌ ಮಂಡಳಿಯಲ್ಲಿ ಮಹತ್ವದ ಬದಲಾವಣೆ ಮಾಡಲು ಮುಕೇಶ್‌ ಅಂಬಾನಿ ತೀರ್ಮಾನಿಸಿದ್ದಾರೆ. ಅದರಲ್ಲೂ, ಪತ್ನಿ ನೀತಾ ಅಂಬಾನಿ ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Mukesh Ambani Family
ಮುಕೇಶ್‌ ಅಂಬಾನಿ ಕುಟುಂಬ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಿಲಯನ್ಸ್‌ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (Reliance AGM 2023) ಮಹತ್ವದ ಬದಲಾವಣೆಗಳನ್ನು ಮುಕೇಶ್‌ ಅಂಬಾನಿ ಘೋಷಿಸಿದ್ದಾರೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮಂಡಳಿಯ ಸ್ಥಾನಕ್ಕೆ ಮುಕೇಶ್‌ ಅಂಬಾನಿ ಪತ್ನಿ ನೀತಾ ಅಂಬಾನಿ (Nita Ambani) ರಾಜೀನಾಮೆ ನೀಡಿದ್ದಾರೆ. ಹಾಗೆಯೇ, ಮುಕೇಶ್‌ ಅಂಬಾನಿ (Mukesh Ambani) ಅವರು ತಮ್ಮ ಮಕ್ಕಳನ್ನು ಮಂಡಳಿಗೆ ನೇಮಕ ಮಾಡಿದ್ದಾರೆ.

ರಿಲಯನ್ಸ್‌ ಇಂಡಸ್ಟ್ರೀಸ್‌ ಮಂಡಳಿಗೆ ಮುಕೇಶ್‌ ಅಂಬಾನಿ ಪುತ್ರಿ ಇಶಾ ಅಂಬಾನಿ, ಪುತ್ರರಾದ ಅನಂತ್‌ ಹಾಗೂ ಆಕಾಶ್‌ ಅಂಬಾನಿ ಅವರು ನೇಮಕಗೊಂಡಿದ್ದಾರೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಕಂಪನಿಯ ವಹಿವಾಟುಗಳನ್ನು ಮಕ್ಕಳೇ ನೋಡಿಕೊಳ್ಳಲಿದ್ದು, ಇದಕ್ಕಾಗಿ ಮಂಡಳಿಗೆ ಅವರನ್ನು ನೇಮಿಸಲಾಗಿದೆ. ಇವರು ಕಂಪನಿಯ ಆಗು-ಹೋಗುಗಳನ್ನು ಅರಿತು, ಮುಂದಿನ ದಿನಗಳಲ್ಲಿ ಕಂಪನಿಯನ್ನು ಮುನ್ನಡೆಸಲು ಹುರಿಗೊಳಿಸಲಾಗುತ್ತದೆ. ಹಾಗಾಗಿಯೇ, ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಭೆಯ ಪ್ರಮುಖ ಘೋಷಣೆಗಳು

ರಿಲಯನ್ಸ್‌ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಕೇಶ್‌ ಅಂಬಾನಿ ಅವರು ಹಲವು ಘೋಷಣೆ ಮಾಡಿದರು. “ಸೆಪ್ಟೆಂಬರ್‌ 19ರಂದು ಜಿಯೋ ಏರ್‌ ಫೈಬರ್‌ಗೆ ಚಾಲನೆ ನೀಡಲಾಗುತ್ತದೆ. 2030ರ ವೇಳೆಗೆ 100 ಗಿಗಾವ್ಯಾಟ್‌ ಹಸಿರು ಇಂಧನ ಉತ್ಪಾದನೆ ಗುರಿ ಹೊಂದಲಾಗಿದೆ. 5 ಜಿ ಸೇವೆ ಒದಗಿಸುವಲ್ಲಿ ರಿಲಯನ್ಸ್‌ ಮುಂದಿದೆ. ಡಿಸೆಂಬರ್‌ ವೇಳೆಗೆ ದೇಶಾದ್ಯಂತ 5 ಜಿ ಇಂಟರ್‌ನೆಟ್‌ ಸೇವೆ ಒದಗಿಸುವುದು ನಮ್ಮ ಗುರಿಯಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ: Reliance Brands : ರಿಲಯನ್ಸ್‌ ತೆಕ್ಕೆಗೆ ಆಲಿಯಾ ಭಟ್‌ ಕಿಡ್ಸ್‌ವೇರ್‌ ಬ್ರಾಂಡ್‌

“ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಕಳೆದ 10 ವರ್ಷದಲ್ಲಿ 150 ಶತಕೋಟಿ ಡಾಲರ್‌ ಹೂಡಿಕೆ ಮಾಡಿದೆ. ಇದರಿಂದಾಗಿ ಮೂಲ ಸೌಕರ್ಯ ಅಭಿವೃದ್ಧಿ ಜತೆಗೆ ಉದ್ಯೋಗ ಕೂಡ ಲಭಿಸಿದೆ. 2023ರಲ್ಲಿ ಕಂಪನಿಯು ದೇಶದಲ್ಲಿ 2.6 ಲಕ್ಷ ಜನರಿಗೆ ಉದ್ಯೋಗ ನೀಡಿದೆ. ಜಿಯೋ ಫೈಬರ್‌ 1 ಕೋಟಿ ಗ್ರಾಹಕರನ್ನು ದಾಟಿದೆ. ಇದರಿಂದಾಗಿ ಕಂಪನಿಗೆ ಭಾರಿ ಪ್ರಮಾಣದಲ್ಲಿ ಲಾಭವೂ ಆಗಿದೆ. ಮುಂದಿನ ದಿನಗಳಲ್ಲಿ ಮರು ನವೀಕರಣ ಹಾಗೂ ಜೈವಿಕ ಇಂಧನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

G7 Summit : ನಿಮ್ಮ ಭೇಟಿಯಿಂದ ಸಂತೋಷವಾಗಿದೆ; ಅಮೆರಿಕ ಅಧ್ಯಕ್ಷ ಬೈಡೆನ್​ ಭೇಟಿ ಬಗ್ಗೆ ಮೋದಿ ಉತ್ಸಾಹ

G7 Summit : ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಅಂಶಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಅಧ್ಯಕ್ಷ ಮ್ಯಾಕ್ರನ್ ಅವರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಹಯೋಗದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

VISTARANEWS.COM


on

G7 Summit
Koo

ಅಪುಲಿಯಾ: ಜಿ 7 ಶೃಂಗಸಭೆಯ (G7 Summit) ಹೊರತಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ಇಟಲಿಯಲ್ಲಿ ಅಮರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಅನೌಪಚಾರಿಕವಾಗಿ ಭೇಟಿಯಾದರು. ಭಾರತ ಮತ್ತು ಯುಎಸ್ “ಜಾಗತಿಕ ಒಳಿತನ್ನು ಮತ್ತಷ್ಟು ಹೆಚ್ಚಿಸಲು ಒಟ್ಟಾಗಿ ಕೆಲಸ ಮಾಡುತ್ತಲೇ ಇರುತ್ತವೆ” ಈ ಭೇಟಿಯ ಬಳಿಕ ಮೋದಿ ಹೇಳಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪಿಎಂ ಮೋದಿ ಸಂತೋಷ ವ್ಯಕ್ತಪಡಿಸಿದ್ದಾರೆ. ಯುಎಸ್ ಅಧ್ಯಕ್ಷರನ್ನು ಭೇಟಿಯಾಗುವುದು ಯಾವಾಗಲೂ ಸಂತೋಷವಾಗಿದೆ ಎಂದು ಬರೆದಿದ್ದಾರೆ.

ಜೋ ಬೈಡೆನ್​, ನಿಮ್ಮನ್ನು ಭೇಟಿಯಾಗುವುದು ಯಾವಾಗಲೂ ಸಂತೋಷದ ಸಂಗತಿ. ಜಾಗತಿಕ ಒಳಿತಿಗಾಗಿ ಭಾರತ ಮತ್ತು ಯುಎಸ್ಎ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿವೆ” ಎಂದು ಪಿಎಂ ಮೋದಿ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಅಂಶಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಅಧ್ಯಕ್ಷ ಮ್ಯಾಕ್ರನ್ ಅವರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಹಯೋಗದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ತಮ್ಮ ಸಭೆಯಲ್ಲಿ, ಪಿಎಂ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ಭಾರತ ಮತ್ತು ಫ್ರಾನ್ಸ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ರೂಪಿಸುವ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ರಕ್ಷಣಾ ಸಹಯೋಗವು ಚರ್ಚೆಯಲ್ಲಿ ಪ್ರಮುಖ ವಿಷಯವಾಗಿತ್ತು. ಉಭಯ ನಾಯಕರು ರಕ್ಷಣಾ ಸಹಕಾರವನ್ನು ಹೆಚ್ಚಿಸುವ ಬದ್ಧತೆಯನ್ನು ಪುನರುಚ್ಚರಿಸಿದರು. ಚರ್ಚೆಯ ಸಮಯದಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ಸಾಂಸ್ಕೃತಿಕ ಸಂಬಂಧಗಳ ವೃದ್ಧಿಗೂ ಆದ್ಯತೆ ನೀಡಲಾಯಿತು.

ಇದನ್ನೂ ಓದಿ: Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

ಜಿ 7 ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದೆವು. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಭಾರತ ಮತ್ತು ಫ್ರಾನ್ಸ್ ಅನ್ನು ಒಂದುಗೂಡಿಸುವ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಅವರಲ್ಲಿ ಅತ್ಯುತ್ಸಾಹವಿದೆ. ಎಂದು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಂದು ವರ್ಷದಲ್ಲಿ ನಾಲ್ಕನೇ ಭೇಟಿ

ಒಂದು ವರ್ಷದಲ್ಲಿ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ಮೋದಿಯವರ ನಾಲ್ಕನೇ ಸಭೆ ಇದಾಗಿದೆ. ಯುವಕರಲ್ಲಿ ಸಂಶೋಧನಾ ಜಾಯಮಾನ ಉತ್ತೇಜಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದ್ದಾರೆ.

ಜಿ 7 ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ಅವರು ಯುಕೆ ಪ್ರಧಾನಿ ರಿಷಿ ಸುನಕ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರನ್ನು ಭೇಟಿಯಾದರು. ವಿಶೇಷವೆಂದರೆ, ಭಾರತವು ಗ್ರೂಪ್ ಆಫ್ ಸೆವೆನ್ (ಜಿ 7) ಶೃಂಗಸಭೆಯಲ್ಲಿ ವಿದೇಶಿ ಆಹ್ವಾನಿತ ದೇಶವಾಗಿ ಭಾಗವಹಿಸಿದೆ.

ಜೂನ್ 13 ರಿಂದ 15 ರವರೆಗೆ ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ಬೊರ್ಗೊ ಎಗ್ನಾಜಿಯಾ ರೆಸಾರ್ಟ್​​ನಲ್ಲಿ ಶೃಂಗಸಭೆ ನಡೆದಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

Continue Reading

ದೇಶ

Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

Narendra Modi: ಜಿ-7 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಸೈಬರ್‌ ಭದ್ರತೆ, ಗ್ಲೋಬಲ್‌ ಸೌತ್‌, ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ, ವಿಕಸಿತ ಭಾರತದ ಗುರಿ, ಇಂಧನದ ಸದ್ಬಳಕೆ, ಪರಿಸರ ಜಾಗೃತಿ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಹಾಗೆಯೇ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ, ಫಲಿತಾಂಶವನ್ನೂ ಮೋದಿ ಸ್ಮರಿಸಿದರು. ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ.

VISTARANEWS.COM


on

Narendra Modi
Koo

ರೋಮ್: ಲೋಕಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ವಿದೇಶಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಿ-7 ಶೃಂಗಸಭೆಯಲ್ಲಿ (G7 Summit Italy) ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಅವರು, “ತಂತ್ರಜ್ಞಾನದ ಅಳವಡಿಕೆ ಜತೆಗೆ ಮಾನವ ಕೇಂದ್ರಿತವಾಗಿಯೇ ಏಳಿಗೆ ಹೊಂದಲು ಭಾರತ ಆದ್ಯತೆ ನೀಡುತ್ತಿದೆ. ಜಾಗತಿಕವಾಗಿ ತಂತ್ರಜ್ಞಾನದ ಜತೆಗೇ ಮಾನವ ಕೇಂದ್ರಿತ ಅಭಿವೃದ್ಧಿಯು ಪ್ರಮುಖ ವಿಷಯವಾಗಬೇಕಿದೆ” ಎಂದು ಪ್ರತಿಪಾದಿಸಿದರು.

“ತಂತ್ರಜ್ಞಾನವನ್ನು ಸೃಜನಶೀಲತೆಯ ಸೃಷ್ಟಿಗಾಗಿ, ಅಭಿವೃದ್ಧಿಗಾಗಿ, ಏಳಿಗೆಗಾಗಿ ಬಳಸಬೇಕೇ ಹೊರತು, ವಿನಾಶಕ್ಕಾಗಿ ಅದನ್ನು ಬಳಸಬಾರದು. ಜಗತ್ತಿನಾದ್ಯಂತ ಬೇರೂರಿರುವ ಸಾಮಾಜಿಕ ಅಸಮಾನತೆಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ಇಂದು ತಂತ್ರಜ್ಞಾನವನ್ನು ಬಳಸಬೇಕಾಗಿದೆ. ಭಾರತವು, ಇಂತಹ ಪ್ರಯತ್ನ ಮಾಡುತ್ತಿದೆ. ಕೃತಕ ಬುದ್ಧಿಮತ್ತೆ ಸೇರಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಏಳಿಗೆಯತ್ತ ಮುಂದೆ ಸಾಗುತ್ತಿದೆ. ಎಲ್ಲರಿಗೂ ಕೃತಕ ಬುದ್ಧಿಮತ್ತೆ (AI For All) ಎಂಬ ತತ್ವದೊಂದಿಗೆ, ಕೃತಕ ಬುದ್ಧಿಮತ್ತೆ ಬಳಕೆಗೆ ರಾಷ್ಟ್ರೀಯ ಸ್ಟ್ರ್ಯಾಟಜಿಯೊಂದಿಗೆ ಮುನ್ನಡೆಯುತ್ತಿದೆ” ಎಂದು ತಿಳಿಸಿದರು.

ಚುನಾವಣೆ ಗೆಲುವಿನ ಪ್ರಸ್ತಾಪ

ಕಳೆದ ಲೋಕಸಭೆ ಚುನಾವಣೆ ಕುರಿತು ಕೂಡ ನರೇಂದ್ರ ಮೋದಿ ಮಾತನಾಡಿದರು. “ಇತ್ತೀಚೆಗೆ ಭಾರತದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲೂ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಯಿತು. ತಂತ್ರಜ್ಞಾನದ ಸಹಾಯದಿಂದ ಪಾರದರ್ಶಕವಾಗಿ ಚುನಾವಣೆ ನಡೆಸಲಾಯಿತು. ಜಗತ್ತಿನ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ನಡೆದ ಚುನಾವಣೆ ಫಲಿತಾಂಶವನ್ನು ಕೆಲವೇ ಗಂಟೆಗಳಲ್ಲಿ ಪ್ರಕಟಿಸಲಾಯಿತು. ನಮ್ಮ ದೇಶದ ಜನ ನನಗೆ ಮೂರನೇ ಬಾರಿಗೆ ಸೇವೆ ಮಾಡಲು ಅವಕಾಶ ಕೊಟ್ಟಿರುವುದಕ್ಕೆ ನಾನು ಧನ್ಯನಾಗಿದ್ದೇನೆ” ಎಂದು ಹೇಳಿದರು.

“ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ಕಳೆದ ಆರು ದಶಕಗಳಲ್ಲಿಯೇ ಮೊದಲ ಬಾರಿಗೆ ನಮ್ಮ ದೇಶದ ಜನ ಸತತ ಮೂರನೇ ಬಾರಿಗೆ ಆಯ್ಕೆ ಮಾಡಿದ್ದಾರೆ. ಭಾರತದ ಮತದಾರರು ನೀಡಿದ ಜಯವು ಪ್ರಜಾಪ್ರಭುತ್ವದ ಜಯವಾಗಿದೆ” ಎಂದು ಹೇಳಿದರು. ಸೈಬರ್‌ ಭದ್ರತೆ, ಗ್ಲೋಬಲ್‌ ಸೌತ್‌, ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ-20 ಶೃಂಗಸಭೆ, ವಿಕಸಿತ ಭಾರತದ ಗುರಿ, ಇಂಧನದ ಸದ್ಬಳಕೆ, ಪರಿಸರ ಜಾಗೃತಿ ಸೇರಿ ಹಲವು ವಿಷಯಗಳನ್ನು ಮೋದಿ ಪ್ರಸ್ತಾಪಿಸಿದರು.

ಇದನ್ನೂ ಓದಿ: Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Continue Reading

ದೇಶ

India’s Aamras : ಮಾವಿನಹಣ್ಣಿನ ಖಾದ್ಯಗಳ ಟಾಪ್‌ ಟೆನ್‌ ಪಟ್ಟಿಯಲ್ಲಿ ಭಾರತದ ಆಮ್‌ರಸ್‌ ವಿಶ್ವದಲ್ಲೇ ನಂಬರ್‌ ಒನ್!

ಇದು ಮಾವಿನಹಣ್ಣಿನ ಕಾಲ ಎಂಬ ಪ್ರೀತಿಯು ಅದಕ್ಕಾಗಿ ಕಾಯುವಂತೆ ಮಾಡುತ್ತದೆ. ಸೆಖೆಗಾಲದಲ್ಲಿ ಮಾವಿನಹಣ್ಣಿಗಾಗಿ ಕಾಯುವುದು, ಮಾವಿನಹಣ್ಣಿನಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸುವುದು, ಇನ್ನೂ ಕೆಲವು ತಿಂಗಳುಗಳಿಗಾಗಿ ಮಾವಿನ ಹಣ್ಣಿನಿಂದ ಕೆಲವೊಂದು ಖಾದ್ಯಗಳನ್ನು ತಯಾರಿಸಿ ಇಡುವುದು ಎಲ್ಲವೂ ಪ್ರತಿ ಮನೆಯಲ್ಲೂ ಸಂಭ್ರಮವೇ. ಇಂತಹ ಪಾಕಪ್ರವೀಣರಾದ ನಮ್ಮ ಹಿರಿಮೆಗೆ ಇನ್ನೊಂದು ಗರಿ (India’s aamras)  ದೊರೆತಿದೆ.

VISTARANEWS.COM


on

Aamras
Koo

ಭಾರತೀಯರಿಗೆ ಮಾವಿನಹಣ್ಣಿನ ಕಾಲ ಎಂದರೆ ಪರ್ವಕಾಲ. ಎಷ್ಟೇ ಸೆಖೆ ಇರಲಿ, ಬೇಸಿಗೆಯ ಬಿಸಿಯಿಂದ ಮೈಯೆಲ್ಲ ಸುಡುತ್ತಿರಲಿ, ಇದು ಮಾವಿನಹಣ್ಣಿನ ಕಾಲ ಎಂಬ ಪ್ರೀತಿಯು ಅದಕ್ಕಾಗಿ ಕಾಯುವಂತೆ ಮಾಡುತ್ತದೆ. ಸೆಖೆಗಾಲದಲ್ಲಿ ಮಾವಿನಹಣ್ಣಿಗಾಗಿ ಕಾಯುವುದು, ಮಾವಿನಹಣ್ಣಿನಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸುವುದು, ಇನ್ನೂ ಕೆಲವು ತಿಂಗಳುಗಳಿಗಾಗಿ ಮಾವಿನ ಹಣ್ಣಿನಿಂದ ಕೆಲವೊಂದು ಖಾದ್ಯಗಳನ್ನು ತಯಾರಿಸಿ ಇಡುವುದು ಎಲ್ಲವೂ ಪ್ರತಿ ಮನೆಯಲ್ಲೂ ಸಂಭ್ರಮವೇ. ಭಾರತದಲ್ಲಿ ಹಣ್ಣುಗಳ ರಾಜನಾಗಿ ಮೆರೆಯುವ ಈ ಮಾವಿನಹಣ್ಣು ತನ್ನ ವಿಶೇಷವಾದ ರುಚಿಯಿಂದ ತನ್ನತ್ತ ಪ್ರತಿಯೊಬ್ಬರನ್ನೂ ಸೆಳೆಯುತ್ತದೆ. ಅದರಲ್ಲೂ ನಾವು ಭಾರತೀಯರು ಮಾವಿನಹಣ್ಣಿನ ಬಗೆಬಗೆಯ ಭಕ್ಷ್ಯಗಳನ್ನು ಮಾಡಿ ತಿನ್ನುವುದರಲ್ಲಿ ಸಿದ್ಧಹಸ್ತರು. ಇಂತಹ ಪಾಕಪ್ರವೀಣರಾದ ನಮ್ಮ ಹಿರಿಮೆಗೆ ಇನ್ನೊಂದು ಗರಿ (India’s aamras) ದೊರೆತಿದೆ.

Aamras Or aam ras

ಇದಕ್ಕಿದೆ ಗತಕಾಲದ ಇತಿಹಾಸ

ಮಾವಿನ ಹಣ್ಣಿನ ಆಮ್‌ರಸ್‌ ಎಂಬುದಕ್ಕೆ ಗತಕಾಲದ ಇತಿಹಾಸವಿದೆ. ತಂಪಾದ ಆಮ್‌ರಸ್‌ ಹೆಸರು ಹೇಳಿದರೆ ಸಾಕು ಬಾಯಲ್ಲಿ ನೀರು ಜಿನುಗೀತು. ಇಂತಹ ಆಮ್‌ರಸ್‌ಗೀಗ ಪ್ರಪಂಚದಲ್ಲೇ ನಂಬರ್‌ ವನ್‌ ಸ್ಥಾನ ದೊರೆತಿದೆ.
ಹೌದು. 2024ರ ಜೂನ್‌ ತಿಂಗಳ ಟೇಸ್ಟ್‌ ಅಟ್ಲಾಸ್‌ ಸ್ಪರ್ಧೆಯಲ್ಲಿ ವಿಶ್ವದ ಟಾಪ್‌ 10 ಮಾವಿನ ಹಣ್ಣಿನ ಭಕ್ಷ್ಯಗಳ ಪೈಕಿ ಭಾರತದ ಆಮ್‌ರಸ್‌ಗೆ ಮೊದಲೇ ಸ್ಥಾನ ದೊರೆತಿದೆ.
ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯಗಳಲ್ಲಿ ಅತ್ಯಂತ ಪ್ರಸಿದ್ಧವಾದ ಆಮ್‌ರಸ್‌ ಎಂಬ ಮಾವಿನಹಣ್ಣಿನ ತಿನಿಸು ಬಹಳ ಸರಳವಾದ ಆರದೆ, ಅಮೋಘ ರುಚಿಯ ಮಾವಿನಹಣ್ಣಿನ ಭಕ್ಷ್ಯ. ಮಾವಿನಹಣ್ಣಿನ ಕಾಲದಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಇದನ್ನು ಮಾಡುವ ಜೊತೆಗೆ ಬೆಳಗಿನ ಪೂರಿಯ ಜೊತೆಗೂ ಸೈಡ್‌ ಡಿಶ್‌ ಆಗಿ ತಿನ್ನುತ್ತಾರೆ. ಮಾವಿನ ಹಣ್ಣಿನ ಪಲ್ಪ್‌ ತೆಗೆದು ಅದಕ್ಕೆ ಕೇಸರಿ, ಒಣಶುಠಿ ಪುಡಿ, ಏಲಕ್ಕಿ ಹಾಗೂ ಸಕ್ಕರೆ ಸೇರಿಸಿ ಮಾಡುವ ಸರಳವಾದ ಆಮ್‌ರಸ್‌ ಬಹಳ ರುಚಿಕರ. ಆಲ್ಫೋನ್ಸೋ, ಕೇಸರ್‌ ಮತ್ತಿತರ ಮಾವಿನಹಣ್ಣಿನಲ್ಲಿ ಈ ಆಮ್‌ರಸ್‌ ಮಾಡಿದರೆ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಎಂದರೆ ತಪ್ಪಾಗದು. ಅಷ್ಟು ರುಚಿಕರ. ಇಂತಹ ಆಮ್‌ರಸ್‌ ವಿಶ್ವದಲ್ಲೇ ಮೊದಲ ಸ್ಥಾನ ಗಳಿಸಿದ್ದರಲ್ಲಿ ಅಚ್ಚರಿಯೇನಿಲ್ಲ.

Mango Chutney

ಮಾವಿನಕಾಯಿಯ ಚಟ್ನಿಗೂ ಸ್ಥಾನ

ಮಾವಿನಕಾಯಿಯ ಚಟ್ನಿಯೂ ಟೇಸ್ಟ್‌ ಅಟ್ಲಾಸ್‌ನ ಈ ಸ್ಪರ್ಧೆಯಲ್ಲಿ ಐದನೇ ಸ್ಥಾನ ಪಡೆದಿದೆ. ವಿಶ್ವದ ಅತ್ಯಂತ ರುಚಿಕರ ಡಿಪ್‌ಗಳ ಪೈಕಿ ಮಾವಿನಹಣ್ಣಿನ ಚಟ್ನಿ ಐದನೇ ಸ್ಥಾನ ಪಡೆದಿದ್ದು ವಿಶೇಷ. ಮಾವಿನಹಣ್ಣು, ಬೆಳ್ಳುಳ್ಳಿ, ಕೆಂಪು ಮೆಣಸಿನಕಾಯಿ, ಜೀರಿಗೆ, ಕೊತ್ತಂಬರಿ, ಅರಿಶಿನ, ಲವಂಗ, ಚಕ್ಕೆ, ಏಲಕ್ಕಿ, ಸಕ್ಕರೆ ಹಾಗೂ ವಿನೆಗರ್‌ ಸೇರಿಸಿ ಈ ಚಟ್ನಿಯನ್ನು ಮಾಡಲಾಗುತ್ತದೆಯಂತೆ. ಈ ವಿಶೇಷ ಬಗೆಯ ಚಟ್ನಿಗೆ ವಿಶೇಷ ಸ್ಥಾನ ಲಭಿಸಿದೆ.
ಇನ್ನುಳಿದಂತೆ, ಟಾಪ್‌ ಟೆನ್‌ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಥಾಯ್ಲೆಂಡಿನ ಮ್ಯಾಂಗೋ ಸ್ಟಿಕಿ ರೈಸ್‌, ಮೂರನೇ ಸ್ಥಾನದಲ್ಲಿ ಸೋರ್ಬೆಟಿಸ್‌, ನಾಲ್ಕನೇ ಸ್ಥಾನದಲ್ಲಿ ಇಂಡೋನೇಷ್ಯಾದ ರುಜಕ್‌, ಐದನೇ ಸ್ಥಾನದಲ್ಲಿ ಮಾವಿನಹಣ್ಣಿನ ಚಟ್ನಿ ಇವೆ. ನಂತರದ ಸ್ಥಾನಗಳಲ್ಲಿ ಹಾಂಗ್‌ಕಾಂಗ್‌ನ ಮ್ಯಾಂಗೋ ಪೊಮೇಲೋ ಸಾಗೋ, ಚೈನಾದ ಮಂಗುವೋ ಬುಡಿಂಗ್‌, ಇಂಡೋನೇಷ್ಯಾದ ರುಜಕ್‌ ಸಿಂಗುರ್, ಚೈನಾದ ಬಾವೋಬಿಂಗ್‌, ಥಾಯ್ಲೆಂಡಿನ ಮಾಮುಂಗ್‌ ನಾಮ್‌ ಪ್ಲಾವಾನ್‌ ಟಾಪ್‌ ಟೆನ್‌ ಪಟ್ಟಿಯಲ್ಲಿ ಸ್ಥಾನ ಗಳಿಸಿವೆ. ಮಾವಿನಹಣ್ಣಿನ ವಿಶೇಷಚವಾದ ಚಟ್ನಿಯೂ ಕೂಡಾ ಈ ಪಟ್ಟುಯಲ್ಲಿ ಐದನೇ ಸ್ಥಾನ ಗಳಿಸಿರುವುದು ವಿಶೇಷ.

Continue Reading

ದೇಶ

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ ಘೋಷಿಸಿದೆ.

VISTARANEWS.COM


on

Toyota Technical Education Programme started at Bareilly Government Polytechnic by TKM
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ (Toyota Kirloskar Motor) ಘೋಷಿಸಿದೆ.

ಸ್ಥಳೀಯ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಸಮುದಾಯಗಳನ್ನು ಸಬಲೀಕರಣಗೊಳಿಸಲು, ಟಿಕೆಎಂ ತನ್ನ ಪ್ರಮುಖ ಕಾರ್ಯಕ್ರಮಗಳಾದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮತ್ತು ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಯೊಂದಿಗೆ ಮುಂಚೂಣಿಯಲ್ಲಿದೆ. ಒಂದು ದಶಕಕ್ಕೂ ಹೆಚ್ಚು ಕಾಲದಿಂದ, ಈ ಕಾರ್ಯಕ್ರಮಗಳು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ತರಬೇತಿಯನ್ನು ಒದಗಿಸುವತ್ತ ಗಮನ ಹರಿಸಿವೆ. ‘ಸ್ಕಿಲ್ ಇಂಡಿಯಾ’ ಅಭಿಯಾನಕ್ಕೆ ಗಮನಾರ್ಹ ಕೊಡುಗೆ ನೀಡಿವೆ.

ಇದನ್ನೂ ಓದಿ: Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು 2023 ರ ಜುಲೈ 29 ಮತ್ತು 30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದ 3 ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸಂವಹನ ನಡೆಸುವ ಗೌರವವನ್ನು ಪಡೆದ ಟಿಟಿಟಿಐ ಹಳೆಯ ವಿದ್ಯಾರ್ಥಿ ಮತ್ತು 2022 ರ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಮೆಕಾಟ್ರಾನಿಕ್ಸ್ ಕಂಚಿನ ಪದಕ ವಿಜೇತ ಅಖಿಲೇಶ್ ನರಸಿಂಹ ಮೂರ್ತಿ ಒಂದು ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ.

ಟಿ-ಟಿಇಪಿ ಒಂದು ಸಮಗ್ರ ವರ್ಷ ವಿಡೀ ನಡೆಯುವ ಕಾರ್ಯಕ್ರಮವಾಗಿದೆ. ಇದು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಅನ್ನು ಒಳಗೊಂಡಿದೆ ಮತ್ತು ಅಂತಿಮ ವರ್ಷದ ಐಟಿಐ / ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅನುಗುಣವಾಗಿದೆ. ಈ ಕಾರ್ಯಕ್ರಮದ ಪ್ರಮುಖ ಲಕ್ಷಣಗಳಲ್ಲಿ ಟೊಯೊಟಾದಿಂದ ಟಿ-ಟಿಇಪಿಯ ಪ್ರಮುಖ ತರಬೇತುದಾರರಿಗೆ ವಿಶೇಷ ತರಬೇತಿ, ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಟೊಯೊಟಾ ಡೀಲರ್ ಶಿಪ್‌ಗಳಲ್ಲಿ ಪ್ರಾಯೋಗಿಕ ಕೌಶಲ್ಯ ಅಭಿವೃದ್ಧಿ ಮತ್ತು ಭಾರತೀಯ ವಾಹನ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ತಂತ್ರಜ್ಞಾನಗಳ ತಾಂತ್ರಿಕ ಜ್ಞಾನವನ್ನು ನೀಡಲು ವಿನ್ಯಾಸಗೊಳಿಸಲಾದ ಪಠ್ಯಕ್ರಮ ಸೇರಿವೆ. ಕಳೆದ ವರ್ಷ ಆರ್ಥಿಕವಾಗಿ ಸವಾಲಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡಲು ಟಿಕೆಎಂ ಸ್ಟಾರ್ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಿ-ಟಿಇಪಿ ಮೂಲಕ ತರಬೇತಿ ಪಡೆದಿದ್ದಾರೆ. 70% ಕ್ಕೂ ಹೆಚ್ಚು ಜನರು ದೇಶಾದ್ಯಂತ ವಿವಿಧ ಆಟೋಮೊಬೈಲ್ ಕಂಪನಿಗಳು ಮತ್ತು ಅವುಗಳ ಡೀಲರ್‌ಶಿಪ್‌ಗಳಲ್ಲಿ ಉದ್ಯೋಗವನ್ನು ಪಡೆದಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉತ್ತರ ಪ್ರದೇಶ ಸರ್ಕಾರದ ವಿಧಾನ ಪರಿಷತ್ ಸದಸ್ಯ ಡಿ.ಸಿ. ವರ್ಮಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಾದ ಕೌಶಲ್ಯಗಳೊಂದಿಗೆ ನಮ್ಮ ಯುವಕರನ್ನು ಸಬಲೀಕರಣಗೊಳಿಸುವ ಟಿಕೆಎಂನ ಬದ್ಧತೆಯನ್ನು ನಾವು ಶ್ಲಾಘಿಸುತ್ತೇವೆ. ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ನಂತಹ ಉಪಕ್ರಮಗಳು ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಮ್ಮ ಧ್ಯೇಯದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಿವೆ. ವಿಶೇಷವಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಟಿ-ಟಿಇಪಿ ಮತ್ತು ಸ್ಟಾರ್ ವಿದ್ಯಾರ್ಥಿವೇತನ ಬೆಂಬಲವು ವಿದ್ಯಾರ್ಥಿಗಳಿಗೆ ಟೊಯೊಟಾದ ಮೌಲ್ಯಗಳು, ಉತ್ತಮ ಅಭ್ಯಾಸಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ.

ಆ ಮೂಲಕ ಅವರ ಒಟ್ಟಾರೆ ಕೌಶಲ್ಯ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ ಟೊಯೊಟಾದಂತಹ ಉದ್ಯಮ ಪಾಲುದಾರರ ಸಹಯೋಗದ ಪ್ರಯತ್ನಗಳು ಉತ್ತರ ಪ್ರದೇಶದ ವಿದ್ಯಾರ್ಥಿಗಳಲ್ಲಿ ವಿಶ್ವದರ್ಜೆಯ ಕಾರ್ಯಪಡೆಯ ಲಭ್ಯತೆಯನ್ನು ಹೆಚ್ಚಿಸುತ್ತದೆ, ಅವರ ವೃತ್ತಿಜೀವನದ ಆಕಾಂಕ್ಷೆಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ವಾಹನ ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ ಕಾರ್ಪೊರೇಟ್ ವ್ಯವಹಾರ ಮತ್ತು ಆಡಳಿತದ ಕಂಟ್ರಿ ಹೆಡ್ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಮಾತನಾಡಿ, ಟಿಕೆಎಂನಲ್ಲಿ ಯುವ ಪ್ರತಿಭೆಗಳಿಗೆ ಸುಧಾರಿತ ತಾಂತ್ರಿಕ ಕೌಶಲ್ಯ ಮತ್ತು ಜ್ಞಾನವನ್ನು ಪಡೆಯಲು ಅವಕಾಶಗಳನ್ನು ಸೃಷ್ಟಿಸುವಲ್ಲಿ ತಾಂತ್ರಿಕ ತರಬೇತಿಯ ಪರಿವರ್ತಕ ಶಕ್ತಿಯನ್ನು ನಾವು ಗುರುತಿಸುತ್ತೇವೆ. ನಮ್ಮ ಟಿ-ಟಿಇಪಿ ಸೌಕರ್ಯ ಮತ್ತು ಸ್ಟಾರ್ ಕಾರ್ಯಕ್ರಮವು ಆಟೋಮೋಟಿವ್ ಉದ್ಯಮಕ್ಕೆ ನುರಿತ ಕಾರ್ಯಪಡೆಯನ್ನು ಬೆಳೆಸುವ ನಮ್ಮ ಬದ್ಧತೆಗೆ ಉದಾಹರಣೆಯಾಗಿದೆ. ಅದೇ ಸಮಯದಲ್ಲಿ ವಿಶಾಲವಾದ ‘ಸ್ಕಿಲ್ ಇಂಡಿಯಾ’ ಮಿಷನ್ ಅನ್ನು ಬೆಂಬಲಿಸುತ್ತದೆ, ಅಂತಿಮವಾಗಿ ನಮ್ಮ ಸಮುದಾಯಗಳಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುತ್ತದೆ.

ಟಿ-ಟಿಇಪಿ ಉಪಕ್ರಮದ ಭಾಗವಾಗಿರುವ ಸ್ಟಾರ್ ಕಾರ್ಯಕ್ರಮವು ಅರ್ಹ ವಿದ್ಯಾರ್ಥಿಗಳನ್ನು, ವಿಶೇಷವಾಗಿ ಆರ್ಥಿಕವಾಗಿ ಸವಾಲಿನ ಹಿನ್ನೆಲೆಯಿಂದ ಬಂದವರನ್ನು ವಿದ್ಯಾರ್ಥಿವೇತನವನ್ನು ಒದಗಿಸುವ ಮೂಲಕ ಮತ್ತು ಆಟೋಮೋಟಿವ್ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನಕ್ಕಾಗಿ ಅಗತ್ಯ ಕೌಶಲ್ಯಗಳು ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುವ ಮೂಲಕ ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಪ್ರತಿಭೆಗಳನ್ನು ಪೋಷಿಸಲು, ವಿದ್ಯಾರ್ಥಿಗಳು ತಮ್ಮ ಪೂರ್ಣ ಸಾಮರ್ಥ್ಯವನ್ನು ತಲುಪಲು ಮತ್ತು ವಾಹನ ಉದ್ಯಮ ಮತ್ತು ನಮ್ಮ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ನಾವು ಸಮರ್ಪಿತರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

ಕಾರ್ಯಕ್ರಮದಲಲ್ಲಿ ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನರೇಂದ್ರ ಕುಮಾರ್, ವಾಣಿಜ್ಯ ಟೊಯೊಟಾದ ನಿರ್ದೇಶಕ ಶಿವಂ ಗುಪ್ತಾ ಮಾತನಾಡಿದರು.

Continue Reading
Advertisement
tumkur Murder
ತುಮಕೂರು7 mins ago

Tumkur Murder : ಬೈಕ್ ಆ್ಯಕ್ಸಿಡೆಂಟ್ ಕೇಸ್‌ಗೆ ಬಿಗ್ ಟ್ವಿಸ್ಟ್; ಎದುರಾಳಿಯನ್ನು ಕೊಂದ ಹಂತಕರು ಅರೆಸ್ಟ್‌

Sapthami Gowda breakup story in stage
ಸ್ಯಾಂಡಲ್ ವುಡ್26 mins ago

Sapthami Gowda: ಲವ್‌ ಬ್ರೇಕಪ್‌ ಆಗಿದೆ, ಬಾಯ್‌ಫ್ರೆಂಡ್‌ ನನ್ನ ಜತೆ ಇಲ್ಲ ಎಂದ ಸಪ್ತಮಿ ಗೌಡ!

ESP vs CRO
ಕ್ರೀಡೆ36 mins ago

ESP vs CRO: ಯುರೋ ಕಪ್​ನಲ್ಲಿ ಇಂದು 2 ಪಂದ್ಯ; ಸ್ಪೇನ್‌ಗೆ ಸವಾಲೊಡ್ಡೀತೇ ಕ್ರೊವೇಷಿಯಾ?

Actor Darshan
ಕರ್ನಾಟಕ36 mins ago

Actor Darshan: ಇಂದೇ ಪರಪ್ಪನ ಅಗ್ರಹಾರ ಸೇರ್ತಾರ ದರ್ಶನ್‌, ಪವಿತ್ರಾ ಗೌಡ?

Actor Darshan continue as Agriculture Department ambassador What MB Patil said
ಸ್ಯಾಂಡಲ್ ವುಡ್1 hour ago

Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

Pakistan cricket team
ಕ್ರೀಡೆ1 hour ago

Pakistan Team Troll: ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಪಾಕ್​ಗೆ ಟ್ರೋಲ್​ಗಳ ಛಡಿಯೇಟು

Road Accident
ಕರ್ನಾಟಕ1 hour ago

Road Accident: ಬೆಂಗಳೂರು-ಮೈಸೂರು‌ ಎಕ್ಸ್‌ಪ್ರೆಸ್‌ ವೇಯಲ್ಲಿ ಸರಣಿ ಅಪಘಾತ; ಐದು ಕಾರುಗಳು ಜಖಂ

Importance Of Tilaka
ಧಾರ್ಮಿಕ1 hour ago

Importance Of Tilaka: ಹಣೆಯ ಮೇಲೆ ತಿಲಕ ಇಟ್ಟರೆ ಏನೇನು ಪ್ರಯೋಜನ? ಇದಕ್ಕಿದೆ ವೈಜ್ಞಾನಿಕ ಕಾರಣ!

Raveena Tandon sues man for Rs 100 crore for defamatory
ಬಾಲಿವುಡ್2 hours ago

Raveena Tandon: ರವೀನಾ ಟಂಡನ್ ವಿಡಿಯೊ ವೈರಲ್​ ಮಾಡಿದ ವ್ಯಕ್ತಿ ಮೇಲೆ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

Students Fall Sick
ಯಾದಗಿರಿ2 hours ago

Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು18 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು19 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ19 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌