Paper Cup Health Effects: ಹುಷಾರ್‌! ಪೇಪರ್‌ ಕಪ್‌, ಸ್ಟ್ರಾಗಳಲ್ಲೂ ಇವೆ ಹಾನಿಕಾರಕ ರಾಸಾಯನಿಕಗಳು! - Vistara News

ಆರೋಗ್ಯ

Paper Cup Health Effects: ಹುಷಾರ್‌! ಪೇಪರ್‌ ಕಪ್‌, ಸ್ಟ್ರಾಗಳಲ್ಲೂ ಇವೆ ಹಾನಿಕಾರಕ ರಾಸಾಯನಿಕಗಳು!

ಪ್ಲಾಸ್ಟಿಕ್‌ ವಸ್ತುಗಳಿಗೆ ಪರ್ಯಾಯ ಎಂದು ಬಿಂಬಿತವಾಗುತ್ತಿರುವ ಪರಿಸರ-ಸ್ನೇಹಿ (Paper cup Health Effects) ವಸ್ತುಗಳು ಹೇಳಿಕೊಂಡಷ್ಟು ಸುರಕ್ಷಿತವಲ್ಲ (Are eco-friendly products harmful?) ಎನ್ನುತ್ತಿದ್ದಾರೆ ತಜ್ಞರು. ಏನೆನ್ನುತ್ತವೆ ಅಧ್ಯಯನಗಳು?

VISTARANEWS.COM


on

Paper Cup Health Effects
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾನಿಕಾರವಾದ ಪ್ಲಾಸ್ಟಿಕ್‌ಗಳ (Paper cup health effects) ಬದಲಿಗೆ ಪರಿಸರ-ಸ್ನೇಹಿ ಮತ್ತು ಸುಸ್ಥಿರ ಆಯ್ಕೆಗಳತ್ತ ಮುಖ ಮಾಡಲು ಪ್ರಯತ್ನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಒಂದೇ ಬಾರಿ ಬಳಸಿ ಬಿಸಾಡುವ ಪ್ಲಾಸ್ಟಿಕ್‌ಗಳಿಗೆ ಪರ್ಯಾಯವೆಂಬಂತೆ ಪೇಪರ್‌ ಲೋಟಗಳು, ಸ್ಟ್ರಾಗಳು ಬಳಕೆಗೆ ಬರುತ್ತಿವೆ. ಎಷ್ಟೋ ಬಾರಿ ಬಿದಿರಿನ ಸ್ಟ್ರಾಗಳು ಸಹ ಗ್ರಾಹಕರಿಗೆ ಇಷ್ಟವಾಗುತ್ತವೆ. ಆದರೆ ಇವೆಲ್ಲವೂ ಪರಿಸರಕ್ಕೆ (eco-friendly products) ಸೂಕ್ತವೇ? ಇವುಗಳಿಂದ ಯಾವುದೇ ಹಾನಿಯಿಲ್ಲವೇ? ಈ ಬಗ್ಗೆ ಐರೋಪ್ಯ ದೇಶಗಳ ಎರಡು ಬೇರೆ ಬೇರೆ ವಿಜ್ಞಾನಿಗಳ ತಂಡ ಅಧ್ಯಯನ ನಡೆಸಿದ್ದು, ಹೇಳುವಂಥ ಪೂರಕ ಪರಿಣಾಮವೇನೂ ಕಾಣುತ್ತಿಲ್ಲ ಎನ್ನುತ್ತದೆ ಅಧ್ಯಯನ.

Paper Cup

ಪರ್ಯಾಯ ಆಯ್ಕೆಗಳೂ ಸುರಕ್ಷಿತವಲ್ಲ ಎಂಬುದು ಇದರ ಅರ್ಥವೇ? ಏನು ಹೇಳುತ್ತಿದ್ದಾರೆ ಸಂಶೋಧನೆ ನಡೆಸಿದವರು? ಮೊದಲಿಗೆ ಪ್ಲಾಸ್ಟಿಕ್‌ ಕಪ್‌ಗಳ ಬದಲಿಗೆ ಚಾಲ್ತಿಯಲ್ಲಿರುವ ಪೇಪರ್‌ ಕಪ್‌ಗಳ ಬಗ್ಗೆ ಹೇಳುವುದಾದರೆ, ಅವುಗಳು ಸರಿಯಾಗಿ ರೀಸೈಕಲ್‌ ಮಾಡದೆ ಸುತ್ತಲಿನ ಪರಿಸರದಲ್ಲಿ ಎಲ್ಲೆಂದರಲ್ಲಿ ಬಿಸಾಡಿದರೆ, ಪ್ಲಾಸ್ಟಿಕ್‌ ಕಪ್‌ಗಳಿಂದ ಕಡಿಮೆ ಹಾನಿಯನ್ನೇನೂ ಇವು ಮಾಡುವುದಿಲ್ಲ ಎನ್ನುತ್ತದೆ ಸ್ವೀಡನ್‌ನಲ್ಲಿ ನಡೆಸಲಾದ ಈ ಅಧ್ಯಯನ. ಪ್ರಾಯೋಗಿಕವಾಗಿ ಪೇಪರ್‌ ಕಪ್‌ಗಳು ಮತ್ತು ಪ್ಲಾಸ್ಟಿಕ್‌ ಕಪ್‌ಗಳನ್ನು ಜೌಗು ನೆಲದ ಮೇಲೆ ಕೆಲವು ದಿನಗಳ ಕಾಲ ಇರಿಸಲಾಯಿತು. ಸೊಳ್ಳೆ ಸೇರಿದಂತೆ ಕ್ರಿಮಿ-ಕೀಟಗಳು ಅದರ ಮೇಲೆ ಮೊಟ್ಟೆ ಇಟ್ಟವು. ಆದರೆ ಎರಡೂ ಕಪ್‌ಗಳಿಂದ ಹೊರಸೂಸಿದ ರಾಸಾಯನಿಕಗಳು ಈ ಮೊಟ್ಟೆಗಳ ಮೇಲೆ ಸಮಾನ ಪ್ರಮಾಣದಲ್ಲಿ ಹಾನಿಕಾರಕ ಪರಿಣಾಮಗಳನ್ನು (Are eco-friendly products harmful?) ಬೀರಿದವು.

Paper Cup The thing is

ವಿಷಯವೇನೆಂದರೆ

ಆಹಾರವನ್ನು ಪ್ಯಾಕ್‌ ಮಾಡಲು ಬಳಸುವ ಯಾವುದೇ ವಸ್ತುಗಳ ಮೇಲ್ಮೈಗೆ ತೆಳುವಾದ ಕೋಟಿಂಗ್‌ ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಪಾಲಿಲ್ಯಾಕ್ಟೈಡ್‌ (ಪಿಎಲ್‌ಎ) ಎಂಬ ಜೈವಿಕ ವಸ್ತುವಿನಿಂದ ಈ ಮೇಲಿನ ಹೊದಿಕೆಯನ್ನು ಮಾಡಲಾಗುತ್ತದೆ. ಈ ಪಿಎಲ್‌ಎ ಸಿದ್ಧವಾಗುವುದು ರಾಸಾಯನಿಕಗಳಿಂದ ಅಲ್ಲ, ಜೈವಿಕವಾದ ವಸ್ತುಗಳಿಂದ. ಅಂದರೆ ಜೋಳ, ಕಬ್ಬು ಮುಂತಾದ ನೈಸರ್ಗಿಕ ಪದಾರ್ಥಗಳಿಂದ. ಪೆಟ್ರೋಲಿಯಂ ಉತ್ಪನ್ನಗಳಿಗಿಂತ ತ್ವರಿತವಾಗಿ ಕೊಳೆತು ಮಣ್ಣಾಗುವ ಸಾಮರ್ಥ್ಯವಿದೆ ಈ ಪಿಎಲ್‌ಎಗಿದೆ. ಆದರೆ ಇದಕ್ಕೆ ಸೂಕ್ತವಾದ ವಾತಾವರಣ ಬೇಕು. ಹೇಗೆಂದರೆ ಹಾಗೆ ಬಿಸಾಡಿದರೆ, ಸರಿಯಾಗಿ ರೀಸೈಕಲ್‌ ಮಾಡದಿದ್ದರೆ ಕಂಟಕ ತಪ್ಪಿದ್ದಲ್ಲ. ನೇರವಾಗಿ ಮಣ್ಣಲ್ಲಿ ಅಥವಾ ನೀರಿನಲ್ಲಿ ಇವು ಬೆರೆತರೆ ಕೊಳೆತು ಗೊಬ್ಬರವಾಗುವುದಿಲ್ಲ. ಅವುಗಳನ್ನು ಕ್ರಮ ಪ್ರಕಾರವೇ ಮಣ್ಣಾಗಿಸಬೇಕು.

Pipes are no less

ಕೊಳವೆಗಳೇನು ಕಡಿಮೆಯಿಲ್ಲ!

ಇದು ಕಪ್‌ಗಳ ವಿಷಯದಲ್ಲಾಯಿತು. ಸ್ಟ್ರಾಗಳಿಗೆ ಇಂಥ ಸಮಸ್ಯೆಯೇನಿಲ್ಲ ಎಂದು ಭಾವಿಸಿದರೆ- ಸರಿ ಮತ್ತು ತಪ್ಪು! ಅಲ್ಲಿರುವ ಸಮಸ್ಯೆ ಇದಲ್ಲ, ನಿಜ. ಬೇರೆ ಸ್ವರೂಪದ್ದು. ಬೆಲ್ಜಿಯಂನಲ್ಲಿ ನಡೆಸಿದ ಅಧ್ಯಯನ ಇದರ ಮೇಲೆ ಬಹಳಷ್ಟು ಬೆಳಕು ಚೆಲ್ಲಿದ್ದು, ಬಳಸುವ ವಸ್ತುಗಳ ವಿಷಯದಲ್ಲಿ ದುಂದು ಮಾಡದೆ ಕೃಪಣರಾಗುವುದು ಎಷ್ಟು ಮಹತ್ವದ್ದು ಎಂಬುದನ್ನು ಹೇಳುತ್ತದೆ. ಸ್ಥಳೀಯವಾಗಿ ಲಭ್ಯವಿರುವ ೩೯ ಬ್ರಾಂಡ್‌ಗಳ ಸ್ಟ್ರಾಗಳನ್ನು ಈ ಅಧ್ಯಯನಕ್ಕೆ ತೆಗೆದುಕೊಳ್ಳಲಾಗಿತ್ತು. ಅವುಗಳಲ್ಲಿ ಪ್ಲಾಸ್ಟಿಕ್‌, ಪೇಪರ್‌, ಬಿದಿರು, ಗಾಜು ಮತ್ತು ಸ್ಟೀಲ್‌ ಸ್ಟ್ರಾಗಳಿದ್ದವು. ಇವುಗಳಲ್ಲಿ ಪಿಎಫ್‌ಎ ವಸ್ತುಗಳು (ಪಿಎಫ್‌ಎಎಸ್‌) ಎಷ್ಟು ಸ್ಟ್ರಾಗಳಲ್ಲಿದೆ ಎಂಬುದನ್ನು ಪರಿಶೀಲಿಸುವುದು ಮುಖ್ಯ ಉದ್ದೇಶವಾಗಿತ್ತು.

ಈ ಸ್ಟ್ರಾಗಳ ಪೈಕಿ ಸಮಾರು ಶೇ. 69ರಷ್ಟು ಬ್ರಾಂಡ್‌ಗಳಲ್ಲಿ 18 ವಿಧದ ಪಿಎಫ್‌ಎಎಸ್‌ಗಳು ಪತ್ತೆಯಾಗಿವೆ. ಪೇಪರ್‌ ಸ್ಟ್ರಾಗಳ ಶೇ. 90ರಷ್ಟು ಬ್ರಾಂಡ್‌ಗಳಲ್ಲಿ, ಬಿದಿರಿನ ಸ್ಟ್ರಾಗಳ ಶೇ. 80ರಷ್ಟು ಬ್ರಾಂಡ್‌ಗಳಲ್ಲಿ, ಪ್ಲಾಸ್ಟಿಕ್‌ ಸ್ಟ್ರಾಗಳ ಶೇ. 75ರಷ್ಟು ಬ್ರಾಂಡ್‌ಗಳಲ್ಲಿ, ಗಾಜಿನ ಸ್ಟ್ರಾಗಳ ಶೇ. 40ರಷ್ಟು ಬ್ರಾಂಡ್‌ಗಳಲ್ಲಿ ಪಿಎಫ್‌ಎಎಸ್‌ ಪತ್ತೆಯಾಗಿವೆ. ಆದರೆ ಸ್ಟೀಲ್‌ ಸ್ಟ್ರಾಗಳಲ್ಲಿ ಇಂಥ ಯಾವುದೇ ರಾಸಾಯನಿಕಗಳು ಪತ್ತೆಯಾಗಿಲ್ಲ ಎನ್ನುತ್ತದೆ ಅಧ್ಯಯನ.

ಏನಿದು ರಾಸಾಯನಿಕ?

ಏನಿದು ಪಿಎಫ್‌ಎಎಸ್‌ ಅಂದರೆ? ಇದನ್ನು ಯುರೋಪ್‌ನಲ್ಲಿ ಮಾತ್ರವೇ ಉಪಯೋಗಿಸುತ್ತಾರೆಯೇ? perfluoroalkyl substances ಎಂಬುದು ಇದರ ಪೂರ್ಣರೂಪ. ಇದನ್ನು ನಿತ್ಯ ಬಳಕೆಯ ಹಲವಾರು ವಸ್ತುಗಳಲ್ಲಿ, ಅಂದರೆ ಮಳೆಯನ್ನು ತಡೆಯುವಂಥ ಬಟ್ಟೆಗಳಿಂದ ಹಿಡಿದು, ನಾನ್‌ಸ್ಟಿಕ್‌ ಪ್ಯಾನ್‌ಗಳವರೆಗೆ ಬಹಳಷ್ಟು ವಸ್ತುಗಳಲ್ಲಿ ಇವು ಬಳಕೆಯಾಗುತ್ತವೆ. ಇವು ಕರಗಲು ಸಾವಿರಾರು ವರ್ಷಗಳು ಬೇಕಾಗುವುದರಿಂದ ʻಫಾರ್‌ಎವರ್‌ ಕೆಮಿಕಲ್ಸ್‌ʼ ಎಂದೇ ಕುಖ್ಯಾತಿ ಗಳಿಸಿವೆ. ಜಲ, ಮಣ್ಣು ಮುಂತಾದ ನಿಸರ್ಗದ ಮೂಲಗಳನ್ನೆಲ್ಲಾ ಕಲುಷಿತಗೊಳಿಸುತ್ತವೆ.

ಇವು, ಭಾರತವೂ ಸೇರಿದಂತೆ, ಎಲ್ಲಾ ದೇಶಗಳಲ್ಲೂ ಬಳಕೆಯಲ್ಲಿವೆ. ಇದ್ದರೇನೀಗ ಎಂದರೆ- ಕಡಿಮೆ ತೂಕದ ಮಗು ಹುಟ್ಟುವಂತೆ ಮಾಡುವ, ಥೈರಾಯ್ಡ್‌ ಹಾಗೂ ಕೊಲೆಸ್ಟ್ರಾಲ್ ಸಮಸ್ಯೆ ತರುವ, ಯಕೃತ್ತು ಹಾಳು ಮಾಡುವ, ಕಿಡ್ನಿಗೆ ಮಾರಕವಾಗುವ ಮತ್ತು ಲಸಿಕೆಗಳು ಕೆಲಸ ಮಾಡದಂತೆ ತಡೆಯುವಂಥ ಸಾಮರ್ಥ್ಯಗಳೆಲ್ಲಾ ಈ ರಾಸಾಯನಿಕಗಳಿಗಿವೆ. ಇನ್ನೂ ಏನು ಬೇಕು? ಹಾಗಾಗಿ ಸ್ಟ್ರಾ ಬಳಕೆಯನ್ನು ತೀರಾ ಅಗತ್ಯ ಸನ್ನಿವೇಶಗಳಲ್ಲಿ ಮಾಡುವುದು, ಪೇಪರ್‌ ಕಪ್‌ಗಳ ಬದಲು ಗಾಜು, ಪಿಂಗಾಣಿ ಅಥವಾ ಸ್ಟೀಲ್‌ ಕಪ್‌ಗಳನ್ನು ಬಳಸುವ…

ಇದನ್ನೂ ಓದಿ: Tips to Keep Joints Healthy: ಹೀಗೆ ಮಾಡಿ, ಕೀಲುಗಳ ಸ್ವಾಸ್ಥ್ಯ ಕಾಪಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Monsoon Skincare: ಮಳೆಗಾಲದಲ್ಲಿ ಚರ್ಮದ ಆರೈಕೆ ಹೇಗಿರಬೇಕು?

Monsoon Skincare: ಚಳಿಗಾಲಕ್ಕೆ ನಮ್ಮ ಚರ್ಮ ಹೆಚ್ಚಿನ ಆರೈಕೆಯನ್ನು ಬೇಡುತ್ತದೆ ಎಂಬುದು ನಮಗೆ ಗೊತ್ತಿದೆ. ಆದರೆ ಮಳೆಗಾಲದಲ್ಲಿ ಈ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ ನಾವು. ತೇವಾಂಶ ಹೆಚ್ಚಿರುವ ಋತುವಿನಲ್ಲೂ ಚರ್ಮಕ್ಕೆ ಬೇರೆ ರೀತಿಯ ಆರೈಕೆ ಬೇಕಾಗುತ್ತದೆ? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Monsoon Skincare
Koo

ಕಾಲಕ್ಕೆ ತಕ್ಕಂತೆ ನಡೆಯಬೇಕು ಎಂಬ ಮಾತು ಸರ್ವಕಾಲಕ್ಕೂ ಸತ್ಯ. ಏಕೆಂದರೆ, ಬೇಸಿಗೆಯಲ್ಲಿದ್ದಂತೆ ಮಳೆಗಾಲದಲ್ಲಿ ಇರುವುದಕ್ಕೆ ಸಾಧ್ಯವಿಲ್ಲ. ಮಳೆಗಾಲಕ್ಕೆಂದೇ ಕೆಲವು ಪ್ರದೇಶಗಳಲ್ಲಿ ವಿಶೇಷ ತಯಾರಿಯೂ ಬೇಕಾಗುತ್ತದೆ. ಮೂರು ತಿಂಗಳು ಸತತವಾಗಿ ಮಳೆ ಚಚ್ಚುವ ಸ್ಥಳಗಳಲ್ಲಿ ಹೊರ ಜಗತ್ತಿನ ಸಂಪರ್ಕವೂ ಕಡಿಮೆಯಾಗಬಹುದು. ಅದಕ್ಕಾಗಿ ಅಕ್ಕಿ-ಬೇಳೆಗಳಲ್ಲಿ ಶೇಖರಿಸಿಟ್ಟುಕೊಂಡು, ಕೆಲವು ವಿಶೇಷ ಬಗೆಯ ತರಕಾರಿಗಳನ್ನು ಬೇಸಿಗೆಯಲ್ಲಿ ಒಣಗಿಸಿಟ್ಟುಕೊಂಡು, ದೀರ್ಘಕಾಲ ಬಾಳಿಕೆ ಬರುವ ಬೂದುಗುಂಬಳ, ಸಿಹಿಕುಂಬಳ, ಗಡ್ಡೆಗೆಣಸುಗಳು ಮುಂತಾದವನ್ನು ಮಳೆಗಾಲಕ್ಕೆಂದೇ ಕಾಪಿಟ್ಟುಕೊಳ್ಳುತ್ತಾರೆ. ಇವೆಲ್ಲ ಕೆಲವು ಪ್ರದೇಶಗಳ ಮಾತಾಯಿತು. ಆದರೆ ಹಾಗೆಲ್ಲ ಇಲ್ಲದ ಸ್ಥಳಗಳಲ್ಲೂ ಮಳೆಗಾಲಕ್ಕೆ ಸ್ವಲ್ಪ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಸೂಕ್ತ ವಸ್ತ್ರಗಳು, ಭಿನ್ನ ರೀತಿಯ ಆಹಾರಗಳು… ಹೀಗೆ. ಆದರೆ ತ್ವಚೆಯ ಆರೈಕೆಗಾಗಿ ನಾವೇನು ಮಾಡುತ್ತೇವೆ? ಚಳಿಗಾಲಕ್ಕೆ ನಮ್ಮ ಚರ್ಮ ಹೆಚ್ಚಿನ ಆರೈಕೆಯನ್ನು ಬೇಡುತ್ತದೆ ಎಂಬುದು ನಮಗೆ ಗೊತ್ತಿದೆ. ಆದರೆ ಮಳೆಗಾಲದಲ್ಲಿ ಈ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ ನಾವು. ತೇವಾಂಶ ಹೆಚ್ಚಿರುವ ಋತುವಿನಲ್ಲೂ ಚರ್ಮಕ್ಕೆ ಬೇರೆ ರೀತಿಯ ಆರೈಕೆ ಬೇಕಾಗುತ್ತದೆ. ಏನದು ಎಂಬುದನ್ನು ತಿಳಿಯೋಣ.
ಹವಾಮಾನ ಶುಷ್ಕವಾಗಿದ್ದಾಗ ಹೆಚ್ಚಿನ ತೇವವನ್ನು ತ್ವಚೆಗೆ ನಾವೇ ಒದಗಿಸಬೇಕಾಗುತ್ತದೆ. ಆದರೆ ಋತುಮಾನವೇ ಒದ್ದೆ ಸುರಿಯುತ್ತಿರುವಾಗ ಚರ್ಮದ ಸೂಕ್ಷ್ಮ ರಂಧ್ರಗಳು ಮುಚ್ಚಿಬಿಡಬಹುದು. ಕಾರಣ, ತೈಲದಂಥ ಸೇಬಮ್‌ ಸ್ರವಿಸುವಿಕೆ ಹೆಚ್ಚಾಗುತ್ತದೆ. ಇದರ ಜೊತೆಗೆ, ವೈರಸ್‌, ಬ್ಯಾಕ್ಟೀರಿಯಗಳ ಕಾಟವೂ ಹೆಚ್ಚಿರುತ್ತದೆ. ಇವೆಲ್ಲದರ ಫಲವಾಗಿ ಚರ್ಮ ಹೊಳಪು ಕಳೆದುಕೊಂಡು, ಮಂಕಾಗಿ, ಎಣ್ಣೆ ಸುರಿದು, ಮೊಡವೆಗಳೂ ಹೆಚ್ಚುವಂತಾಗುತ್ತದೆ. ಹಾಗಾಗಿ ಮಳೆಗಾಲದಲ್ಲಿ ಚರ್ಮದ ಆರೈಕೆಯನ್ನು (Monsoon Skincare) ಪ್ರತ್ಯೇಕವಾಗಿ ಮಾಡಬೇಕಾಗುತ್ತದೆ.

Asian woman face wash exfoliate scrub soap foam with skincare cl

ಸ್ವಚ್ಛತೆ

ಎಣ್ಣೆ ಸುರಿಯುವ ಮುಖವನ್ನು ತೊಳೆದು ಶುದ್ಧವಾಗಿ ಇರಿಸಿಕೊಳ್ಳುವುದು ಮುಖ್ಯ. ಅದಕ್ಕಾಗಿ ಒಳ್ಳೆಯ ಕ್ಲೆನ್ಸರ್‌ ಬಳಸಿ. ಮುಖದ ಎಣ್ಣೆಯನ್ನು ತೆಗೆಯುವ ನೆವದಲ್ಲಿ, ತ್ವಚೆಯ ನೈಸರ್ಗಿಕ ತೈಲವನ್ನೂ ಕಿತ್ತು ತೆಗೆಯುವಂಥ ಕಠೋರ ಕ್ಲೆನ್ಸರ್‌ಗಳು ಬೇಡ. ಆದರೆ ಎಣ್ಣೆಗರೆಯುವ ಮುಖವನ್ನು ಸರಿಯಾಗಿ ಸ್ವಚ್ಛಗೊಳಿಸುವಂತಿರಬೇಕು. ಜೊತೆಗೆ ಸನ್‌ಬ್ಲಾಕ್‌, ಮೇಕಪ್‌ ಮುಂತಾದ ಯಾವುದನ್ನೇ ಆದರೂ ಮುಖದ ಮೇಲೆ ಉಳಿಸಿಕೊಳ್ಳುವಂತಿಲ್ಲ. ಅದನ್ನೂ ರಾತ್ರಿ ಮಲಗುವ ಮುನ್ನ ಸಂಪೂರ್ಣ ತೆಗೆಯಬೇಕಾಗುತ್ತದೆ. ಹಾಗಿಲ್ಲದಿದ್ದರೆ ಚರ್ಮದ ರಂಧ್ರಗಳು ಬಿಗಿಯುವುದು ಖಚಿತ.

ಎಕ್ಸ್‌ಫಾಲಿಯೇಟರ್‌

ಲಘುವಾದ ಸ್ಕ್ರಬ್‌ಗಳು ಈ ಹೊತ್ತಿಗೆ ಬೇಕು. ಕಾರಣ, ಒಮ್ಮೆ ಮನೆಯಿಂದ ಹೊರಗೆ ಹೋಗ ಬಂದರೆ ವಾತಾವರಣದ ಕೊಳೆಯೆಲ್ಲ ಎಣ್ಣೆ ಸುರಿಯುವ ಮುಖಕ್ಕೆ ಅಂಟಿಕೊಳ್ಳುತ್ತದೆ. ಹಾಗಾಗಿ ಮೇಲ್ಪದರದ ಕೊಳೆಯನ್ನು ಸೌಮ್ಯವಾಗಿ ತೆಗೆಯುವುದು ಅಗತ್ಯ. ಇದಕ್ಕಾಗಿ ನಿಮ್ಮಿಷ್ಟದ ಫೇಸ್‌ಮಾಸ್ಕ್‌ ಉಪಯೋಗಿಸಿದರೂ ಆದೀತು. ಇವುಗಳನ್ನು ವಾರದಲ್ಲಿ ಮೂರು ಬಾರಿಯವರೆಗೂ ಉಪಯೋಗಿಸಬಹುದು.

skin care

ಮಾಯಿಶ್ಚರೈಸರ್

ಇದು ಮಳೆಗಾಲದಲ್ಲೂ ಬೇಕು. ಆದರೆ ಬಹಳ ಜಿಡ್ಡಿರುವಂಥದ್ದನ್ನು ಬಳಸಬೇಡಿ. ಲಘುವಾಗಿ ಚರ್ಮಕ್ಕೆ ತೇವವನ್ನು ಒದಗಿಸಿದರೆ ಸಾಕಾಗುತ್ತದೆ. ಹಾಗೆಂದು ಸಂಪೂರ್ಣ ಬಳಸದೆಯೂ ಇರಬೇಡಿ. ಇದು ಗಾಳಿ ಜೋರಾಗಿರುವ ಸಮಯವಾದ್ದರಿಂದ ಚರ್ಮವೆಲ್ಲ ಬಿರಿದಂತೆ ಆಗಬಹುದು. ವಾತಾವರಣದಲ್ಲಿ ತೇವ ಹೆಚ್ಚಿರುವ ಕಾರಣ ತೀರಾ ಎಣ್ಣೆಯ ಕ್ರೀಮ್‌ಗಳು ಬೇಡ.

ಅತಿಯಾಗಬಾರದು

ಜಾಹೀರಾತುಗಳಲ್ಲಿ ಏನೇನೋ ನೋಡಿ, ಸಿಕ್ಕಿದ್ದೆಲ್ಲವನ್ನೂ ತಂದು ಮುಖಕ್ಕೆ ಬಳಿದು ಪ್ರಯತ್ನಿಸುವ ಕಾಲವಿದು. ಹ್ಯಾಲುರೋನಿಕ್‌ ಆಮ್ಲ, ಗ್ಲೈಕಾಲ್‌, ರೆಟಿನಾಲ್‌ ಮುಂತಾದ ಹತ್ತು ಹಲವು ಅಂಶಗಳಿರುವ ನಾಲ್ಕಾರು ಉತ್ಪನ್ನಗಳನ್ನು ಒಟ್ಟಿಗೇ ಮುಖಕ್ಕೆ ಹಚ್ಚಿಕೊಳ್ಳುವವರಿದ್ದಾರೆ. ಉದಾ, ವಿಟಮಿನ್‌ ಸಿ, ವಿಟಮಿನ್‌ ಇ ಮತ್ತು ರೆಟಿನಾಲ್‌- ಇವಿಷ್ಟನ್ನೂ ಒಟ್ಟಿಗೆ ಚರ್ಮಕ್ಕೆ ಲೇಪಿಸಿದರೆ ಚರ್ಮದ ಮೇಲಿರುವ ಸೂಕ್ಷ್ಮ ರಕ್ಷಾ ಪರದೆ ಸಂಪೂರ್ಣ ನಾಶವಾಗಬಹುದು. ಯಾವ ಅಂಶದ ಗುಣಗಳು ಏನೇನು ಎಂಬುದನ್ನು ತಿಳಿದು ಬಳಸಬೇಕು. ಈ ನಿಟ್ಟಿನಲ್ಲಿ ತಜ್ಞರಲ್ಲಿ ಕೇಳಿಯೇ ಮುಂದುವರಿಯಿರಿ.

ಇದನ್ನೂ ಓದಿ: Mosquito Repellent Plants: ನಿಮಗೆ ಗೊತ್ತೆ? ಈ 5 ಬಗೆಯ ಗಿಡಗಳು ಸೊಳ್ಳೆಗಳನ್ನು ಓಡಿಸುತ್ತವೆ!

ಪೋಷಕಾಂಶ

ನಮ್ಮ ಚರ್ಮದ ಆರೋಗ್ಯ ಶೇ. ೭೦ರಷ್ಟು ನಿರ್ಧಾರವಾಗುವುದು ನಮ್ಮ ದೇಹಕ್ಕೆ ದೊರೆಯುವ ಸತ್ವಗಳ ಮೇಲೆ. ಉಳಿದ ಶೇ. ೩೦ರಷ್ಟು ಮಾತ್ರವೇ ಇತರ ಆರೈಕೆಯನ್ನು ಅವಲಂಬಿಸಿದೆ. ಹಾಗಾಗಿ ಮಳೆಗಾಲವಾದರೂ ಸಾಕಷ್ಟು ನೀರು ಕುಡಿಯಿರಿ. ಈ ದಿನಗಳಲ್ಲಿ ದೊರೆಯುವ ಹಣ್ಣು-ತರಕಾರಿಗಳನ್ನು ತಿನ್ನಿ. ಜಿಡ್ಡಿ, ಕರಿದ ತಿಂಡಿಗಳನ್ನು ತಿಂದಷ್ಟೂ ಚರ್ಮದ ಅವಸ್ಥೆ ಹದಗೆಡುತ್ತದೆ. ದೇಹವನ್ನು ಆಗಾಗ ಡಿಟಾಕ್ಸ್‌ ಮಾಡಿ.

Continue Reading

ಆರೋಗ್ಯ

Mosquitoes Bite: ಎಣ್ಣೆ ಹೊಡೆಯುವವರನ್ನು ಸೊಳ್ಳೆಗಳು ಕಚ್ಚುವುದು ಹೆಚ್ಚು! ಇದಕ್ಕಿದೆ ವೈಜ್ಞಾನಿಕ ಕಾರಣ!

ಮಲೇರಿಯಾ, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುವ ಹೆಣ್ಣು ಸೊಳ್ಳೆಗಳು (Mosquitoes Bite) ಸಂತಾನೋತ್ಪತ್ತಿಗಾಗಿ ಮಾನವರನ್ನು ಕಚ್ಚುತ್ತವೆ. ಅದರಲ್ಲೂ ಕೆಲವರನ್ನು ಹೆಚ್ಚಾಗಿ ಕಚ್ಚುತ್ತವೆ. ಇದಕ್ಕೆ ಹಲವು ಪ್ರಮುಖ ಕಾರಣಗಳಿವೆ. ಇದರಲ್ಲಿ ರಕ್ತದ ಪ್ರಕಾರವೂ ಒಂದು ಪ್ರಮುಖ ಕಾರಣ ಎಂಬುದು ಗೊತ್ತಿದೆಯೇ? ಅದು ಹೇಗೆ, ಬೇರೆ ಯಾರಿಗೆಲ್ಲ ಹೆಚ್ಚಾಗಿ ಸೊಳ್ಳೆಗಳು ಕಚ್ಚುತ್ತವೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Mosquitoes Bite
Koo

ಒಂದೇ ಸಮಯದಲ್ಲಿ ಒಂದೇ ಸ್ಥಳದಲ್ಲಿ ಇದ್ದರೂ ಸಾಮಾನ್ಯವಾಗಿ ಕೆಲವರಿಗೆ ಮಾತ್ರ ಸೊಳ್ಳೆಗಳು (Mosquitoes Bite) ಹೆಚ್ಚಾಗಿ ಕಡಿಯುವುದನ್ನು ಕಾಣುತ್ತೇವೆ. ಆದರೆ ಯಾಕೆ ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ. ಹೆಣ್ಣು ಸೊಳ್ಳೆಗಳು (female Mosquitoes) ಮಾತ್ರ ರಕ್ತದಿಂದ (blood) ಪ್ರೊಟೀನ್ ಗಳನ್ನು (proteins) ಪಡೆಯಲು ಮನುಷ್ಯರನ್ನು ಕಚ್ಚುತ್ತವೆ ಮತ್ತು ಬಳಿಕ ಮೊಟ್ಟೆಗಳನ್ನು ಇಡುತ್ತದೆ. ಅದರಲ್ಲೂ ಕೆಲವರಿಗೆ ಮಾತ್ರ ಹೆಚ್ಚಾಗಿ ಸೊಳ್ಳೆಗಳು ಕಚ್ಚುತ್ತವೆ.

ಕೆಲವರು ಸೊಳ್ಳೆಗಳಿಗೆ ಹೆಚ್ಚು ಆಕರ್ಷಕವಾಗಿರಲು ಹಲವು ಕಾರಣಗಳೂ ಇವೆ. ಬೆವರು, ಲ್ಯಾಕ್ಟಿಕ್ ಆಮ್ಲ, ಅಮೋನಿಯಾ ಮತ್ತು ಇತರ ಸಂಯುಕ್ತಗಳಿಂದ ಸೊಳ್ಳೆಗಳು ಕೆಲವರಿಗೆ ಹೆಚ್ಚಾಗಿ ಕಚ್ಚುತ್ತದೆ.

ಸೊಳ್ಳೆಗಳು ಮಲೇರಿಯಾ, ಝಿಕಾ ಮತ್ತು ಡೆಂಗ್ಯೂ ಜ್ವರದಂತಹ ಹಲವು ಸಾಂಕ್ರಾಮಿಕ ರೋಗಗಳನ್ನು ಹರಡುವ ಕಾರಣ ಸೊಳ್ಳೆ ಕಡಿತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುತ್ತದೆ.

ಸೂಳ್ಳೆಗಳು ಕೆಲವು ಜನರನ್ನು ಮಾತ್ರ ಹೆಚ್ಚಾಗಿ ಕಡಿಯಲು ಕಾರಣಗಳಿವೆ ಎನ್ನುತ್ತಾರೆ ವಿಜ್ಞಾನಿಗಳು. ಇದಕ್ಕಾಗಿ ವಿವಿಧ ಅಂಶಗಳ ಬಗ್ಗೆ ಸಂಶೋಧನೆ ನಡೆಸಲಾಗಿದ್ದು ಅದರಲ್ಲಿ ರಕ್ತದ ಪ್ರಕಾರವೂ ಒಂದು ಕಾರಣವಾಗಿದೆ.

Mosquitoes Bite


ರಕ್ತದ ಪ್ರಕಾರ ಹೇಗೆ ಕಾರಣ?

ಒಂದು ರಕ್ತದ ಪ್ರಕಾರವನ್ನು ಹೊಂದಿರುವ ಜನರು ಇತರರಿಗಿಂತ ಹೆಚ್ಚು ಸೊಳ್ಳೆ ಕಡಿತಕ್ಕೆ ಒಳಗಾಗುತ್ತಾರೆ. ಪೋಷಕರಿಂದ ಪಡೆದಿರುವ ವಿಭಿನ್ನ ರಕ್ತ ಪ್ರಕಾರಗಳನ್ನು ಹೊಂದಿರುವ ಜನರು ತಮ್ಮ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ನಿರ್ದಿಷ್ಟ ಪ್ರೋಟೀನ್‌ಗಳ (ಪ್ರತಿಜನಕ) ವಿಭಿನ್ನ ಸೆಟ್‌ಗಳನ್ನು ಹೊಂದಿರುತ್ತಾರೆ.

ಎ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ಎ ಪ್ರತಿಜನಕ ಮಾತ್ರ ಇರುತ್ತದೆ. ಬಿ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ಬಿ ಪ್ರತಿಜನಕ ಮಾತ್ರ, ಎಬಿ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ಎ ಮತ್ತು ಬಿ ಪ್ರತಿಜನಕ, ಒ ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿ ಎ ಅಥವಾ ಬಿ ಪ್ರತಿಜನಕವಿರುವುದಿಲ್ಲ.

ಕೆಲವು ಜನರು ಲಾಲಾರಸ ಅಥವಾ ಕಣ್ಣೀರಿನಂತಹ ದೇಹದ ದ್ರವಗಳಲ್ಲಿ ಈ ಪ್ರತಿಜನಕಗಳನ್ನು ಹೊಂದಿರುತ್ತಾರೆ. ಎ ರಕ್ತದ ಪ್ರಕಾರವನ್ನು ಹೊಂದಿರುವವರು ಎ ಪ್ರಕಾರದ ಪ್ರತಿಜನಕವನ್ನು ಸ್ರವಿಸುತ್ತಾರೆ. ಒ ರಕ್ತದ ಗುಂಪು ಹೊಂದಿರುವವರು ಹೆಚ್ ಪ್ರತಿಜನಕವನ್ನು ಸ್ರವಿಸುತ್ತಾರೆ. ಅಧ್ಯಯನಗಳ ಪ್ರಕಾರ ಸೊಳ್ಳೆಗಳು ಇತರ ರಕ್ತ ಪ್ರಕಾರಗಳಿಗಿಂತ ಒ ರಕ್ತದ ಗುಂಪಿನ ಜನರಿಗೆ ಹೆಚ್ಚು ಆಕರ್ಷಿತವಾಗುತ್ತವೆ. ಇದಕ್ಕೆ ರಕ್ತದ ಪ್ರಕಾರ ಮತ್ತು ಸ್ರವಿಸುವ ಸ್ಥಿತಿ ಮುಖ್ಯ ಕಾರಣವಾಗಿದೆ.

ಸೊಳ್ಳೆಗಳು ಎ, ಬಿ ಪ್ರತಿಜನಕಕ್ಕಿಂತ ಹೆಚ್ ಪ್ರತಿಜನಕವನ್ನು ಹೊಂದಿರುವ ಜನರತ್ತ ಹೆಚ್ಚು ಆಕರ್ಷಿತವಾಗುತ್ತವೆ. ಯಾಕೆಂದರೆ ಇದು ಲಾಲಾರಸ ಮತ್ತು ಕಣ್ಣೀರಿನಲ್ಲಿ ಕಂಡುಬರುವುದರಿಂದ ಸೊಳ್ಳೆಗಳು ಒಬ್ಬ ವ್ಯಕ್ತಿಯನ್ನು ಸಮೀಪಿಸಿದಾಗ ಈ ಪ್ರತಿಜನಕಗಳನ್ನು ಬಹುಬೇಗನೆ ಗ್ರಹಿಸುತ್ತದೆ ಎನ್ನಲಾಗುತ್ತದೆ.

ಇನ್ನು ಹಲವು ಕಾರಣಗಳು

ಸೊಳ್ಳೆಗಳು ನಮ್ಮತ್ತ ಹೆಚ್ಚು ಆಕರ್ಷಿತವಾಗಲು ಇನ್ನು ಹಲವು ಕಾರಣಗಳಿವೆ.

ಇಂಗಾಲದ ಡೈಆಕ್ಸೈಡ್

ಉಸಿರಾಡುವಾಗ ಇಂಗಾಲದ ಡೈಆಕ್ಸೈಡ್ ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆಯಾದರೆ ಸೊಳ್ಳೆಯು ಇವರತ್ತ ಬಹುಬೇಗನೆ ಆಕರ್ಷಿತಗೊಳ್ಳುತ್ತದೆ. ಗಾಳಿಯಲ್ಲಿ ಇಂಗಾಲದ ಡೈಆಕ್ಸೈಡ್‌ನ ಹೆಚ್ಚಳವು ಹತ್ತಿರದಲ್ಲಿರುವ ಸೊಳ್ಳೆಯನ್ನು ಎಚ್ಚರಿಸುತ್ತದೆ.

ದೇಹದ ವಾಸನೆ

ದೇಹದ ವಾಸನೆಯು ಇತರ ಜನರಿಗಿಂತ ಸೊಳ್ಳೆಗಳು ನಿಮ್ಮತ್ತ ಆಕರ್ಷಿತರಾಗಲು ಇನ್ನೊಂದು ಪ್ರಮುಖ ಕಾರಣ. ಯಾಕೆಂದರೆ ವಾಸನೆಯನ್ನು ಬಹುಬೇಗನೆ ಸೊಳ್ಳೆಗಳು ಗ್ರಹಿಸುತ್ತವೆ.
ಚರ್ಮದ ಮೇಲಿನ ಸಂಯುಕ್ತಗಳಲ್ಲಿ ಅಮೋನಿಯಾ ಮತ್ತು ಲ್ಯಾಕ್ಟಿಕ್ ಆಮ್ಲ ಸೊಳ್ಳೆಗಳನ್ನು ಬಹುಬೇಗನೆ ಆಕರ್ಷಿಸುತ್ತವೆ. ಚರ್ಮದ ಮೇಲೀನಾ ಬ್ಯಾಕ್ಟೀರಿಯಾಗಳು ಕೂಡ ದೇಹದ ವಾಸನೆಗೆ ಕಾರಣವಾಗಿರುತ್ತದೆ.

Mosquitoes Bite


ದೇಹದ ತಾಪಮಾನ

ದೇಹದ ತಾಪಮಾನವು ಸೊಳ್ಳೆಗಳನ್ನು ಆಕರ್ಷಿಸಲು ಕಾರಣವಾಗಿರುತ್ತದೆ. ದೇಹದ ತಾಪವು ಹೆಚ್ಚು ಇಂಗಾಲದ ಡೈಆಕ್ಸೈಡ್ ಉತ್ಪತ್ತಿಯಾಗಲು, ಕಾರಣವಾಗಿರುತ್ತದೆ.

ಬಣ್ಣ

ಈ ಬಗ್ಗೆ ಸ್ಪಷ್ಟತೆ ಇಲ್ಲ. ಆದರೂ ಸೊಳ್ಳೆಗಳು ಕಪ್ಪು ವಸ್ತುಗಳಿಗೆ ಹೆಚ್ಚು ಆಕರ್ಷಿತವಾಗುತ್ತವೆ ಎಂಬುದನ್ನು ಅಧ್ಯಯನವೊಂದು ಹೇಳಿದೆ. ನೀವು ಗಾಢ ಬಣ್ಣಗಳನ್ನು ಧರಿಸಿದರೆ ನೀವು ಹೆಚ್ಚು ಸೊಳ್ಳೆ ಕಡಿತವನ್ನು ಪಡೆಯುತ್ತೀರಿ ಎನ್ನಬಹುದು.

ಮದ್ಯಪಾನ

ಸೊಳ್ಳೆಗಳು ಮದ್ಯಪಾನ ಮಾಡುವ ಜನರತ್ತ ಹೆಚ್ಚು ಆಕರ್ಷಿತವಾಗಬಹುದು. ಇದರಲ್ಲಿ ವಾಸನೆ ಪ್ರಮುಖ ಅಂಶವಾಗಿದೆ ಎನ್ನಲಾಗುತ್ತದೆ. ಅಂದರೆ ಮದ್ಯಪಾನ ಮಾಡುವವರಿಗೆ ಸೊಳ್ಳೆಗಳು ಹೆಚ್ಚು ಕಚ್ಚುತ್ತವೆ ಎಂದಾಯಿತು!

ಇದನ್ನೂ ಓದಿ: Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

ಗರ್ಭಿಣಿಯರು

ಗರ್ಭಿಣಿಯರಲ್ಲದ ಮಹಿಳೆಯರಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯ ಸೊಳ್ಳೆಗಳು ಗರ್ಭಿಣಿಯರತ್ತ ಆಕರ್ಷಿತವಾಗುತ್ತದೆ. ಗರ್ಭಿಣಿಯರು ಹೆಚ್ಚು ಇಂಗಾಲದ ಡೈಆಕ್ಸೈಡ್ ಅನ್ನು ಬಿಡುಗಡೆ ಮಾಡುವುದರಿಂದ ಮತ್ತು ಹೆಚ್ಚಿನ ದೇಹದ ಉಷ್ಣತೆಯನ್ನು ಹೊಂದಿರುವುದರಿಂದ ಇವರತ್ತ ಸೊಳ್ಳೆಗಳು ಹೆಚ್ಚು ಆಕರ್ಷಿತರಾಗುತ್ತಾರೆ.

Continue Reading

ಆರೋಗ್ಯ

Walking Benefits: ಊಟದ ಬಳಿಕ ಕಿರು ನಡಿಗೆಯಿಂದ ಸಿಗುವ ಆರೋಗ್ಯ ಲಾಭಗಳು ಏನೇನು?

ಉತ್ತಮ ಆರೋಗ್ಯಕ್ಕಾಗಿ ದೈಹಿಕ ಚಟುವಟಿಕೆ ಬಹುಮುಖ್ಯವಾಗಿದೆ. ಅದರಲ್ಲೂ ನಡಿಗೆ (Walking Benefits) ದೇಹಕ್ಕೆ ಸಂಪೂರ್ಣ ವ್ಯಯಮವನ್ನು ಒದಗಿಸುತ್ತದೆ. ದೈನಂದಿನ ದಿನಚರಿಯಲ್ಲಿ ಊಟದ ಅನಂತರ ನಡಿಗೆಯನ್ನು ಸೇರಿಸುವುದು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಹೆಚ್ಚು ಸಮತೋಲಿತ ಮತ್ತು ಆರೋಗ್ಯಕರ ಜೀವನಶೈಲಿಗೆ ವಿಶೇಷವಾದ ಕೊಡುಗೆಯನ್ನು ನೀಡುತ್ತದೆ. ಸಾಕಷ್ಟು ಆರೋಗ್ಯ ಪ್ರಯೋಜನವನ್ನು ಒದಗಿಸುತ್ತದೆ.

VISTARANEWS.COM


on

By

Walking Benefits
Koo

ನಿತ್ಯದ ಒತ್ತಡದ ಜಂಜಾಟದಲ್ಲಿ ಈಗಿನ ಜನರಿಗೆ ನೆಮ್ಮದಿಯಾಗಿ ಕುಳಿತು ಊಟ (lunch) ಮಾಡಲು ಪುರುಸೊತ್ತಿಲ್ಲ. ಇದ್ದರೂ ಮೊಬೈಲ್ (mobile), ಟಿವಿಯಲ್ಲಿ (TV) ಮಗ್ನರಾಗಿ ಬಿಡುತ್ತಾರೆ. ಇನ್ನು ಊಟವಾದ ಬಳಿಕ ಮೊಬೈಲ್ ಕೈಯಲ್ಲಿ ಹಿಡಿದು ಕುಳಿತು ಬಿಡುತ್ತಾರೆ. ಹೀಗಾಗಿ ಊಟವಾದ ಬಳಿಕ ನಡೆಯುವ ಅಭ್ಯಾಸ (Walking Benefits) ಬಹುತೇಕ ಮಂದಿಯಲ್ಲಿ ಕಡಿಮೆಯಾಗಿದೆ.

ಊಟದ ಅನಂತರ ಕೊಂಚ ನಡೆದರೆ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಉತ್ತಮ ಆರೋಗ್ಯಕ್ಕಾಗಿ ದೈಹಿಕ ಚಟುವಟಿಕೆ ಬಹುಮುಖ್ಯವಾಗಿದೆ. ಅದರಲ್ಲೂ ನಡಿಗೆ ದೇಹಕ್ಕೆ ಸಂಪೂರ್ಣ ವ್ಯಯಮವನ್ನು ಒದಗಿಸುತ್ತದೆ.
ನಡಿಗೆಯು ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುವ ವ್ಯಾಯಾಮವಾಗಿದೆ. ಇದು ಸ್ನಾಯುಗಳನ್ನು ಬಲಪಡಿಸುತ್ತದೆ, ಮಾನಸಿಕ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ ಮತ್ತು ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ.

ಊಟದ ಅನಂತರ ನಡೆಯುವುದು ವಿಶೇಷವಾಗಿ ಅನುಕೂಲಕರವಾಗಿದೆ. ಯಾಕೆಂದರೆ ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ವಿಶ್ರಾಂತಿಗೆ ದೇಹ ಮತ್ತು ಮನಸ್ಸನ್ನು ಉತ್ತೇಜಿಸುತ್ತದೆ. ಊಟದ ಅನಂತರದ ಚಟುವಟಿಕೆಯು ಉಬ್ಬುವುದು ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ. ಮಧುಮೇಹದಂತಹ ಚಯಾಪಚಯ ಅಸ್ವಸ್ಥತೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ತಿಂದ ಅನಂತರ ಸಣ್ಣ ನಡಿಗೆಯನ್ನು ಅಳವಡಿಸಿಕೊಳ್ಳುವುದರಿಂದ ಆರೋಗ್ಯವನ್ನು ಸ್ವಸ್ಥವಾಗಿ ಕಾಪಾಡಿಕೊಳ್ಳಬಹುದು.

Walking Benefits


ಊಟದ ಬಳಿಕ ನಡಿಗೆಯಿಂದ ಏನು ಪ್ರಯೋಜನ?

ಮಧ್ಯಾಹ್ನ ಮತ್ತು ರಾತ್ರಿ ಊಟದ ಬಳಿಕ ಕನಿಷ್ಠ ನೂರು ಹೆಜ್ಜೆ ನಡೆದರೆ ಸಾಕಷ್ಟು ಪ್ರಯೋಜನಗಳಿವೆ. ಅವುಗಳಲ್ಲಿ ಮುಖ್ಯವಾಗಿ:

ಹೃದಯ ರಕ್ತನಾಳದ ಆರೋಗ್ಯವನ್ನು ಹೆಚ್ಚಿಸುತ್ತದೆ

ಊಟದ ಅನಂತರ ಲಘು ನಡಿಗೆಯಲ್ಲಿ ತೊಡಗುವುದರಿಂದ ರಕ್ತದೊತ್ತಡ, ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸಬಹುದು. ಇದು ಉತ್ತಮ ರಕ್ತಪರಿಚಲನೆ ಮತ್ತು ಹೃದಯದ ಕಾರ್ಯವನ್ನು ಉತ್ತೇಜಿಸುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಹೃದಯರಕ್ತನಾಳದ ದಕ್ಷತೆಯನ್ನು ಹೆಚ್ಚಿಸುತ್ತದೆ.

ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ

ದೇಹದ ಸ್ವಾಭಾವಿಕ ಮೂಡ್ ಎಲಿವೇಟರ್‌ಗಳಾದ ಎಂಡಾರ್ಫಿನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ವಾಕಿಂಗ್ ಒತ್ತಡ ಮತ್ತು ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಊಟದ ಅನಂತರದ ನಡಿಗೆಯು ದೇಹಕ್ಕೆ ವಿಶ್ರಾಂತಿಯನ್ನು ಕೊಡುತ್ತದೆ. ಮಾನಸಿಕ ಆಯಾಸವನ್ನು ಕಡಿಮೆ ಮಾಡುತ್ತದೆ ಮತ್ತು ಯೋಗಕ್ಷೇಮದ ಪ್ರಜ್ಞೆಯನ್ನು ಉತ್ತೇಜಿಸುತ್ತದೆ. ಮಾನಸಿಕ ಆರೋಗ್ಯ ಮತ್ತು ಒಟ್ಟಾರೆ ಜೀವನದ ಗುಣಮಟ್ಟಕ್ಕೆ ಉತ್ತಮ ಕೊಡುಗೆ ನೀಡುತ್ತವೆ.

ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ

ವಾಕಿಂಗ್‌ನಂತಹ ದೈಹಿಕ ಚಟುವಟಿಕೆಯು ಸಿರ್ಕಾಡಿಯನ್ ಲಯ ಮತ್ತು ವಿಶ್ರಾಂತಿಯನ್ನು ಉತ್ತೇಜಿಸುವ ಮೂಲಕ ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ರಾತ್ರಿಯ ಊಟದ ಅನಂತರ ನಡೆಯುವುದು ನಿರ್ದಿಷ್ಟವಾಗಿ ವಿಶ್ರಾಂತಿ ಪಡೆಯಲು ಮತ್ತು ರಾತ್ರಿಯ ನಿದ್ರೆಗಾಗಿ ತಯಾರಾಗಲು ಸಹಾಯ ಮಾಡುತ್ತದೆ.

ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ

ಊಟದ ಅನಂತರ ನಡೆಯುವುದರಿಂದ ದೇಹದಾದ್ಯಂತ ರಕ್ತಪರಿಚಲನೆ ಮತ್ತು ಆಮ್ಲಜನಕದ ಹರಿವನ್ನು ಹೆಚ್ಚಿಸುವ ಮೂಲಕ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದು. ಇದರಿಂದಾಗಿ ಹೆಚ್ಚು ಉತ್ಸಾಹದ ಅನುಭವ ಸಿಗುತ್ತದೆ. ದೈನಂದಿನ ಕೆಲಸಗಳಲ್ಲಿ ನಿರಂತರ ಶಕ್ತಿಯ ಮಟ್ಟ ಹೆಚ್ಚಿಸಲು ಇದು ಸಹಾಯ ಮಾಡುತ್ತದೆ.

ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಯನ್ನು ಉತ್ತೇಜಿಸುತ್ತದೆ

ವಾಕಿಂಗ್‌ನಂತಹ ನಿಯಮಿತ ದೈಹಿಕ ಚಟುವಟಿಕೆಯು ಕರುಳಿನ ಸೂಕ್ಷ್ಮಜೀವಿಯ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರುತ್ತದೆ. ಸರಿಯಾದ ಜೀರ್ಣಕ್ರಿಯೆ, ಪ್ರತಿರಕ್ಷಣಾ ಕಾರ್ಯ, ಮತ್ತು ಮಾನಸಿಕ ಆರೋಗ್ಯಕ್ಕೂ ಆರೋಗ್ಯಕರ ಕರುಳಿನ ಸೂಕ್ಷ್ಮಾಣುಜೀವಿ ಅತ್ಯಗತ್ಯ. ವಾಕಿಂಗ್ ಕರುಳಿನ ಬ್ಯಾಕ್ಟೀರಿಯಾಗಳ ನಡುವೆ ವೈವಿಧ್ಯತೆ ಮತ್ತು ಸಮತೋಲನವನ್ನು ಉತ್ತೇಜಿಸುವ ಮೂಲಕ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ.

Walking Benefits


ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ

ನಡಿಗೆಯು ಗ್ಯಾಸ್ಟ್ರಿಕ್ ಜ್ಯೂಸ್ ಮತ್ತು ಆಹಾರವನ್ನು ಒಡೆಯಲು ಅಗತ್ಯವಾದ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಉಬ್ಬುವುದು, ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ

ಊಟದ ಅನಂತರದ ನಡಿಗೆಯು ಇನ್ಸುಲಿನ್‌ಗೆ ದೇಹದ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಧುಮೇಹ ಹೊಂದಿರುವ ವ್ಯಕ್ತಿಗಳಿಗೆ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದರಿಂದ ಶಕ್ತಿಯ ಕುಸಿತವನ್ನು ತಡೆಯಬಹುದು ಮತ್ತು ಮಧುಮೇಹಕ್ಕೆ ಸಂಬಂಧಿಸಿದ ದೀರ್ಘಕಾಲೀನ ತೊಡಕುಗಳ ಅಪಾಯವನ್ನು ಕಡಿಮೆ ಮಾಡಬಹುದು.

ತೂಕ ನಿರ್ವಹಣೆಗೆ ಸಹಾಯ

ಊಟದ ಅನಂತರ ನಡೆಯುವುದು ಕ್ಯಾಲೊರಿಗಳನ್ನು ಸುಡುಲು ಸಹಾಯ ಮಾಡುತ್ತದೆ. ಇದು ದೇಹದ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಈ ಚಟುವಟಿಕೆಯು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚುವರಿ ಕ್ಯಾಲೊರಿಗಳನ್ನು ಕೊಬ್ಬಿನಂತೆ ಸಂಗ್ರಹಿಸುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು ಬೊಜ್ಜು ಸಂಬಂಧಿತ ಕಾಯಿಲೆಗಳಾದ ಹೃದ್ರೋಗ, ಪಾರ್ಶ್ವವಾಯು ಮತ್ತು ಕೆಲವು ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Tulsi Tea Benefits: ನಿತ್ಯವೂ ತುಳಸಿ ಚಹಾ ಕುಡಿಯುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತೇ?

ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು

ನಡಿಗೆಯು ಮೆದುಳಿಗೆ ರಕ್ತದ ಹರಿವನ್ನು ಉತ್ತೇಜಿಸುತ್ತದೆ. ಇದು ಅರಿವಿನ ಕಾರ್ಯ, ಸ್ಮರಣೆ ಮತ್ತು ಏಕಾಗ್ರತೆಯನ್ನು ಸುಧಾರಿಸುತ್ತದೆ. ಊಟದ ಅನಂತರ ಒಂದು ಸಣ್ಣ ನಡಿಗೆಯು ಮನಸ್ಸನ್ನು ಉಲ್ಲಾಸಗೊಳಿಸಲು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸಮಸ್ಯೆ-ಪರಿಹರಿಸುವ ಸಾಮರ್ಥ್ಯವನ್ನು ಸುಧಾರಿಸುತ್ತದೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ. ಒಟ್ಟಾರೆ ಮಾನಸಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

Continue Reading

ಆರೋಗ್ಯ

Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Chandipura Virus: ಗುಜರಾತ್‌ನಲ್ಲಿ ಚಾಂದಿಪುರ ವೈರಸ್ ಪತ್ತೆಯಾಗಿದೆ. ಈಗಾಗಲೇ ವೈರಸ್‌ಗೆ 6 ಮಕ್ಕಳು ಬಲಿಯಾಗಿದ್ದು, ಆತಂಕ ಮೂಡಿಸಿದೆ. ಜುಲೈ 10ರಿಂದ ಗುಜರಾತ್‌ನಲ್ಲಿ ಶಂಕಿತ ಚಂಡಿಪುರ ವೈರಲ್ ಸೋಂಕಿನಿಂದ ಆರು ಮಕ್ಕಳು ಮೃತಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 12ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ಮಾಹಿತಿ ನೀಡಿದ್ದಾರೆ. ಚಾಂದಿಪುರ ವೈರಸ್ ಸೋಂಕು ಹೆಚ್ಚಾಗಿ ಮಕ್ಕಳಿಗೆ ಬಾಧಿಸುತ್ತದೆ. ಅದರಲ್ಲಿಯೂ 9 ತಿಂಗಳಿನಿಂದ 14 ವರ್ಷದ ಮಕ್ಕಳಿಗೆ ಬಾಧಿಸುವ ಸಾಧ್ಯತೆ ಅಧಿಕ. ಈ ವೈರಸ್ ಮಕ್ಕಳ ಮೇಲೆ ದಾಳಿ ಮಾಡಿದಾಗ ಮೊದಲಿಗೆ ಜ್ವರ, ಅತಿಸಾರ, ವಾಂತಿ, ಎನ್ಸೆಫಾಲಿಟಿಸ್ ಎಂದು ಕರೆಯಲ್ಪಡುವ ಮೆದುಳಿನ ಜ್ವರದಂತಹ ರೋಗಲಕ್ಷಣಗಳನ್ನು ತೋರಿಸುತ್ತದೆ.

VISTARANEWS.COM


on

Chandipura Virus
Koo

ಗಾಂಧಿನಗರ: ರಾಜ್ಯ ಸೇರಿದಂತೆ ದೇಶದ ಕೆಲವೆಡೆ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದೆ. ಇತ್ತ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಹಾವಳಿ ಕಂಡು ಬಂದಿದೆ. ಈ ಮಧ್ಯೆ ಗುಜರಾತ್‌ನಲ್ಲಿ ಚಾಂದಿಪುರ ವೈರಸ್ (Chandipura Virus) ಪತ್ತೆಯಾಗಿದೆ. ಈಗಾಗಲೇ ವೈರಸ್‌ಗೆ 6 ಮಕ್ಕಳು ಬಲಿಯಾಗಿದ್ದು, ಆತಂಕ ಮೂಡಿಸಿದೆ.

ಜುಲೈ 10ರಿಂದ ಗುಜರಾತ್‌ನಲ್ಲಿ ಶಂಕಿತ ಚಂಡಿಪುರ ವೈರಲ್ ಸೋಂಕಿನಿಂದ ಆರು ಮಕ್ಕಳು ಮೃತಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 12ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ಮಾಹಿತಿ ನೀಡಿದ್ದಾರೆ. ಎಲ್ಲ ಸೋಂಕಿತರ ರಕ್ತದ ಮಾದರಿಗಳನ್ನು ದೃಢೀಕರಣಕ್ಕಾಗಿ ಪುಣೆಯ ನ್ಯಾಷನಲ್ ಇನ್ಸ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ (National Institute of Virology)ಗೆ ಕಳುಹಿಸಲಾಗಿದೆ.

ರೋಗ ಲಕ್ಷಣ

ಚಾಂದಿಪುರ ವೈರಸ್ ಸೋಂಕು ಬಾಧಿತರಲ್ಲಿ ಸಾಮಾನ್ಯ ಜ್ವರದ ಲಕ್ಷಣವೇ ಕಂಡು ಬರುತ್ತದೆ. ಬಾಧಿತರಲ್ಲಿ ದಿಢೀರ್ ಜ್ವರ, ತೀವ್ರ ತಲೆನೋವು, ವಾಂತಿ, ಸ್ನಾಯು ಸೆಳೆತ, ಪ್ರಜ್ಞಾಹೀನತೆ, ಅರೆನಿದ್ರಾವಸ್ಥೆ ಕಂಡು ಬರುತ್ತದೆ. ತಕ್ಷಣ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಮಾರಣಾಂತಿಕವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ರಾಬ್ಡೋವೆರಿಡೆ ವರ್ಗಕ್ಕೆ ಸೇರಿದ ವೈರಸ್ ಈ ರೋಗಕ್ಕೆ ಕಾರಣ.

ಯಾಕಾಗಿ ಈ ಹೆಸರು?

ಮಹಾರಾಷ್ಟ್ರದ ಚಾಂದಿಪುರದಲ್ಲಿ 1965ರಲ್ಲಿ ಇದು ಮೊದಲ ಬಾರಿ ಕಾಣಿಸಿಕೊಂಡಿತ್ತು. ಹೀಗಾಗಿ ಇದನ್ನು ಚಾಂದಿಪುರ ವೈರಸ್‌ ಎಂದು ಕರೆಯುತ್ತಾರೆ. ಚಾಂದಿಪುರ ವೈರಸ್ ಸೋಂಕು ಹೆಚ್ಚಾಗಿ ಮಕ್ಕಳಿಗೆ ಬಾಧಿಸುತ್ತದೆ. ಅದರಲ್ಲಿಯೂ 9 ತಿಂಗಳಿನಿಂದ 14 ವರ್ಷದ ಮಕ್ಕಳಿಗೆ ಬಾಧಿಸುವ ಸಾಧ್ಯತೆ ಅಧಿಕ. ಈ ವೈರಸ್ ಮಕ್ಕಳ ಮೇಲೆ ದಾಳಿ ಮಾಡಿದಾಗ ಮೊದಲಿಗೆ ಜ್ವರ, ಅತಿಸಾರ, ವಾಂತಿ, ಎನ್ಸೆಫಾಲಿಟಿಸ್ ಎಂದು ಕರೆಯಲ್ಪಡುವ ಮೆದುಳಿನ ಜ್ವರದಂತಹ ರೋಗಲಕ್ಷಣಗಳನ್ನು ತೋರಿಸುತ್ತದೆ. ಈ ವೈರಸ್ ವಿರುದ್ಧ ಯಾವುದೇ ಲಸಿಕೆ ಇಲ್ಲದ ಕಾರಣ ಇದನ್ನು ಇನ್ನಷ್ಟು ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ.

ಒಬ್ಬರಿಂದ ಒಬ್ಬರಿಗೆ ಹರಡುತ್ತಾ?

ಇದು ಸಾಂಕ್ರಾಮಿಕ ರೋಗ ಅಲ್ಲದಿದ್ದರೂ ಸೊಳ್ಳೆ, ನೊಣ, ಉಣ್ಣೆಗಳಿಂದ ಈ ಸೋಂಕು ಹರಡುತ್ತದೆ. ಶುಚಿತ್ವ ಕೊರತೆಯೇ ಮುಖ್ಯ ಕಾರಣ. ಸದ್ಯ ಈ ರೀತಿಯ ಅನೇಕ ಪ್ರಕರಣಗಳು ಗುಜರಾತ್‌ನಲ್ಲಿ ಕಂಡುಬಂದಿವೆ. ಗುಜರಾತ್‌ನ ಸಬರ್‌ಕಾಂಠಾ ರಾವಳಿ, ಮಹಿಸಾರ, ಖೇಡಾ ಜಿಲ್ಲೆಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಜತೆಗೆ ರಾಜಸ್ಥಾನ, ಮಧ್ಯ ಪ್ರದೇಶದಲ್ಲಿಯೂ ಸೋಂಕು ಬಾಧಿಸಿರುವುದು ವರದಿಯಾಗಿದೆ. ಶಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರೋಗದಿಂದ ಪಾರಾಗುವುದು ಹೇಗೆ?

ಚಾಂದಿಪುರ ವೈರಸ್‌ನಿಂದ ತಪ್ಪಿಸಿಕೊಳ್ಳಲು ನೈರ್ಮಲ್ಯ ಕಾಪಾಡುವುದು ಅಗತ್ಯ. ಸೊಳ್ಳೆ, ನೊಣ ಮತ್ತು ಕೀಟಗಳು ಕಡಿಯದಂತೆ ಎಚ್ಚರ ವಹಿಸಿ. ಮಕ್ಕಳಿಗೆ ರಾತ್ರಿ ಪೂರ್ಣ ತೋಳಿನ ಬಟ್ಟೆಗಳನ್ನು ತೊಡಿಸಿ. ಸೊಳ್ಳೆಗಳು ಮತ್ತು ಕೀಟಗಳಿಂದ ತಪ್ಪಿಸಿಕೊಳ್ಳಲು ಬಲೆಗಳನ್ನು ಬಳಸಿ. ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿಡಿ. ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸಲು ಬಿಡಬೇಡಿ. ಮನೆಯ ಸುತ್ತಮುತ್ತ ನೀಡು ಕಟ್ಟಿ ನಿಲ್ಲದಂತೆ ನೋಡಿಕೊಳ್ಳಿ. ಸಾಕು ಪ್ರಾಣಿಗಳ ಬಳಿಗೆ ತೆರಳುವಾಗ ಎಚ್ಚರವಹಿಸಿ.

ಇದನ್ನೂ ಓದಿ: Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Continue Reading
Advertisement
Dina Bhavishya
ಭವಿಷ್ಯ4 mins ago

Dina Bhavishya : ಈ ದಿನ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡವೇ ಬೇಡ

Bangladesh Violence
ವಿದೇಶ5 hours ago

Bangladesh Violence: ಬಾಂಗ್ಲಾ ಧಗ ಧಗ; ಭುಗಿಲೆದ್ದ ಹಿಂಸಾಚಾರಕ್ಕೆ 35 ಮಂದಿ ಬಲಿ

Karnataka Assembly
ಪ್ರಮುಖ ಸುದ್ದಿ5 hours ago

Karnataka Assembly : ಗದ್ದಲದಲ್ಲೇ ಮುಕ್ತಾಯಗೊಂಡ ಮೂರನೇ ದಿನದ ವಿಧಾನಮಂಡಲ ಅಧಿವೇಶನ

Udhayanidhi Stalin
ದೇಶ6 hours ago

Udhayanidhi Stalin: ತಮಿಳುನಾಡು ಉಪ ಮುಖ್ಯಮಂತ್ರಿಯಾಗಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್?

The Ambani family gave a wedding special reception to the staff and housekeepers
ದೇಶ6 hours ago

Anant Radhika Wedding: ಸಿಬ್ಬಂದಿ, ಮನೆಗೆಲಸದವರಿಗೆ ಮದುವೆಯ ಭರ್ಜರಿ ಔತಣಕೂಟ ನೀಡಿದ ಅಂಬಾನಿ ಫ್ಯಾಮಿಲಿ!

Police Suspended
ಕರ್ನಾಟಕ6 hours ago

Police Suspended : ಠಾಣೆಯಲ್ಲೇ ಕೈಮಿಲಾಯಿಸಿದ ಪೊಲೀಸ್​ ಅಧಿಕಾರಿಗಳಿಬ್ಬರು ಸಸ್ಪೆಂಡ್​​

Train Derail
ದೇಶ7 hours ago

Train Derail: “ಪ್ರಚಾರದ ಗೀಳು ಬಿಟ್ಟು ರೈಲುಗಳ ಸುರಕ್ಷತೆ ಬಗ್ಗೆ ಗಮನ ಹರಿಸಿ”- ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

Natasa Stankovic
ಪ್ರಮುಖ ಸುದ್ದಿ7 hours ago

Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

Neet UG
ದೇಶ8 hours ago

NEET UG 2024: ನೀಟ್‌ ಅಕ್ರಮ; ನಾಲ್ವರು ಏಮ್ಸ್‌ ವಿದ್ಯಾರ್ಥಿಗಳು ಸಿಬಿಐ ಬಲೆಗೆ

Farmers should get crop insurance immediately says MP BY Raghavendra
ಶಿವಮೊಗ್ಗ8 hours ago

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ14 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌