Kota Coaching: ಆತ್ಮಹತ್ಯೆ ಆತಂಕ; ಕೋಟಾದಲ್ಲಿ 2 ತಿಂಗಳು ಪರೀಕ್ಷೆ ನಿಷೇಧಿಸಿದ ರಾಜಸ್ಥಾನ ಸರ್ಕಾರ - Vistara News

ದೇಶ

Kota Coaching: ಆತ್ಮಹತ್ಯೆ ಆತಂಕ; ಕೋಟಾದಲ್ಲಿ 2 ತಿಂಗಳು ಪರೀಕ್ಷೆ ನಿಷೇಧಿಸಿದ ರಾಜಸ್ಥಾನ ಸರ್ಕಾರ

Kota Coaching: ಭಾನುವಾರ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ರಾಜಸ್ಥಾನದ ಕೋಟಾದಲ್ಲಿ ಮುಂದಿನ ಎರಡು ತಿಂಗಳ ಕಾಲ ಪರೀಕ್ಷೆಗಳನ್ನು ನಿಷೇಧಿಸಲಾಗಿದೆ.

VISTARANEWS.COM


on

Kota Coaching
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಇಬ್ಬರು ನೀಟ್ ವಿದ್ಯಾರ್ಥಿಗಳು (NEET Suicide) ಆತ್ಮಹತ್ಯೆ (Students Suicide) ಮಾಡಿಕೊಂಡ ಹಿನ್ನೆಲೆಯಲ್ಲಿ, ‘ಕೋಚಿಂಗ್ ಹಬ್’ (Coaching Hub) ಆಗಿರುವ ರಾಜಸ್ಥಾನದ (Rajasthan State) ಕೋಟಾದಲ್ಲಿ (Kota City) ಮುಂದಿನ ಎರಡು ತಿಂಗಳ ಕಾಲ ಯಾವುದೇ ಪರೀಕ್ಷೆಗಳನ್ನು ಕೈಗೊಳ್ಳುವುದು ರದ್ದು ಮಾಡಲಾಗಿದೆ(Exam Banned). ವಿದ್ಯಾರ್ಥಿಗಳಿಗೆ “ಮಾನಸಿಕ ಬೆಂಬಲ ಮತ್ತು ಭದ್ರತೆಯನ್ನು ಒದಗಿಸುವ” ಸಲುವಾಗಿ ಕೋಟಾದ ಕೋಚಿಂಗ್ ಸೆಂಟರ್‌ಗಳಲ್ಲಿನ ಎಲ್ಲಾ ಪರೀಕ್ಷೆಗಳನ್ನು ಮುಂದಿನ ಎರಡು ತಿಂಗಳವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಸರ್ಕಾರದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ(Kota Coaching).

ರಾಜಸ್ಥಾನದ ಕೋಟಾದಲ್ಲಿ ಭಾನುವಾರ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡವರ ವಿದ್ಯಾರ್ಥಿಗಳ ಸಂಖ್ಯೆ 22ಕ್ಕೆ ತಲುಪಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆವಿಷ್ಕರ್ ಶಂಬಾಜಿ ಕಾಸ್ಲೆ (17) ಅವರು ಜವಾಹರ್ ನಗರದಲ್ಲಿರುವ ತಮ್ಮ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಕಟ್ಟಡದ ಆರನೇ ಮಹಡಿಯಿಂದ ಮಧ್ಯಾಹ್ನ 3.15 ರ ಸುಮಾರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಚಿಂಗ್ ಸಂಸ್ಥೆಯ ಸಿಬ್ಬಂದಿ ಕೂಡಲೇ ವಿದ್ಯಾರ್ಥಿಯನ್ನು ವಿಜ್ಞಾನ ನಗರ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ. ಮತ್ತೊಂದೆಡೆ, ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ನಡೆಸಿದ್ದ 18 ವರ್ಷದ ಆದರ್ಶ್ ರಾಜ್ ಎಂಬ ವಿದ್ಯಾರ್ಥಿ ಕೂಡ ತಾನು ಬಾಡಿಗೆಗೆ ಇದ್ದ ಫ್ಲ್ಯಾಟ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಕೋಚಿಂಗ್‌ ಸೆಂಟರ್‌ಗಳ ರಾಜಧಾನಿ ಕೋಟಾದಲ್ಲಿ ಸರಣಿ ಆತ್ಮಹತ್ಯೆ ಆತಂಕಕಾರಿ

ಕಾಸ್ಲೆ ಮತ್ತು ರಾಜ್ ಆತ್ಮಹತ್ಯೆ ಸೇರಿ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 6ಕ್ಕೇರಿಕೆಯಾಗಿದೆ. ಒಟ್ಟಾರೆ ಈ ವರ್ಷ 22 ವಿದ್ಯಾರ್ಥಿಗಳು ಸಾವಿಗೆ ಶರಣಾಗಿದ್ದಾರೆ. ದೇಶದ ಕೋಚಿಂಗ್ ಹಬ್ ಎನಿಸಿಕೊಂಡಿರುವ ರಾಜಸ್ಥಾನದ ಕೋಟಾದಲ್ಲಿ ಕಳೆದ ವರ್ಷ 15 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಜೆಇಇ, ನೀಟ್ ಸೇರಿದಂತೆ ನಾನಾ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು, ಕೋಚಿಂಗ್‌ಗಾಗಿ ಕೋಟಾಗೆ ಸುಮಾರು 3 ಲಕ್ಷ ವಿದ್ಯಾರ್ಥಿಗಳು ದೇಶದ ವಿವಿಧ ಕಡೆಗಳಿಂದ ಆಗಮಿಸುತ್ತಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Prashant Kishor: “ಇನ್ನೆಂದೂ ಚುನಾವಣಾ ಭವಿಷ್ಯ ನುಡಿಯಲ್ಲ”; ಫಲಿತಾಂಶದ ಬಳಿಕ ಪ್ರಶಾಂತ್‌ ಕಿಶೋರ್‌ ಫಸ್ಟ್‌ ರಿಯಾಕ್ಷನ್‌

Prashant Kishor:ಚುನಾವಣಾ ಫಲಿತಾಂಶದ ಬಳಿಕ ಮೊದಲ ಮಾಧ್ಯಮ ಸಂದರ್ಶನ ನೀಡಿರುವ ಪ್ರಶಾಂತ್‌ ಕಿಶೋರ್‌, ಹೌದು, ನಾನು ಮತ್ತು ನನ್ನಂತಹ ಸಮೀಕ್ಷೆಗಾರರು ಈ ಬಾರಿ ಚುನಾವಣೆಯನ್ನು ತಪ್ಪಾಗಿ ಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮಿಂದಾಗಿರುವ ತಪ್ಪು ಲೆಕ್ಕಾಚಾರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸುವ ಮೊದಲು, ಪ್ರಶಾಂತ್ ಕಿಶೋರ್ ಬಿಜೆಪಿ ತನ್ನ 2019 ರ ಚುನಾವಣಾ ಸಾಧನೆಯನ್ನು ಪುನರಾವರ್ತಿಸುತ್ತದೆ ಮತ್ತು ಸುಮಾರು 300 ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದ್ದರು.

VISTARANEWS.COM


on

Prashant Kishor
Koo

ನವದೆಹಲಿ: ಈ ಬಾರಿ ಲೋಕಸಭಾ ಚುನಾವಣಾ ಫಲಿತಾಂಶ(Election Results 2024) ಎಲ್ಲಾ ಎಕ್ಸಿಟ್‌ ಪೋಲ್‌(Exit poll) ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಈ ಬಾರಿ 370 ಸ್ಥಾನಗಳನ್ನು ಖಚಿತವಾಗಿ ಪಡೆದೇ ಪಡೆಯುತ್ತದೆ ಎಂದು ಭವಿಷ್ಯ ನುಡಿದಿದ್ದ ಅದೆಷ್ಟೋ ರಾಜಕೀಯ ವಿಶ್ಲೇಷಕರ ಮಾತು ಸುಳ್ಳಾಗಿದೆ. ಅದರಲ್ಲಿ ರಾಜಕೀಯ ಚಾಣಕ್ಯ, ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಭವಿಷ್ಯವಾಣಿಯೂ ಈಬಾರಿ ಸುಳ್ಳಾಗಿದೆ. ಫಲಿತಾಂಶ ಪ್ರಕಟಗೊಂಡು ನಾಲ್ಕು ದಿನಗಳ ಕಾಲ ಯಾವ ಪ್ರತಿಕ್ರಿಯೆ ನೀಡದೇ ಸುಮ್ಮನಿದ್ದ ಪ್ರಶಾಂತ್‌ ಕಿಶೋರ್‌(Prashant Kishor) ಇದೀಗ ಈ ಬಗ್ಗೆ ಮೌನ ಮುರಿದಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ನೀಡಿರುವ ಭವಿಷ್ಯವಾಣಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಮೊದಲ ಮಾಧ್ಯಮ ಸಂದರ್ಶನ ನೀಡಿರುವ ಪ್ರಶಾಂತ್‌ ಕಿಶೋರ್‌, ಹೌದು, ನಾನು ಮತ್ತು ನನ್ನಂತಹ ಸಮೀಕ್ಷೆಗಾರರು ಈ ಬಾರಿ ಚುನಾವಣೆಯನ್ನು ತಪ್ಪಾಗಿ ಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮಿಂದಾಗಿರುವ ತಪ್ಪು ಲೆಕ್ಕಾಚಾರವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಜೂನ್ 4 ರಂದು ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸುವ ಮೊದಲು, ಪ್ರಶಾಂತ್ ಕಿಶೋರ್ ಬಿಜೆಪಿ ತನ್ನ 2019 ರ ಚುನಾವಣಾ ಸಾಧನೆಯನ್ನು ಪುನರಾವರ್ತಿಸುತ್ತದೆ ಮತ್ತು ಸುಮಾರು 300 ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದ್ದರು.

ಆದರೆ ಬಿಜೆಪಿ ಈ ಬಾರಿ ಕೇವಲ 240 ಲೋಕಸಭಾ ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದರಿಂದ ಅವರ ಭವಿಷ್ಯವಾಣಿ ಸುಳ್ಳಾಗಿದೆ. ದೇಶದ ಮುಂದಿನ ಚುನಾವಣೆಗಳಲ್ಲಿ ನೀವು ಅಂಕಿಅಂಶಗಳನ್ನು ಭವಿಷ್ಯ ನುಡಿಯುವುದನ್ನು ಮುಂದುವರಿಸುತ್ತೀರಾ ಎಂದು ಕೇಳಿದಾಗ, ಪ್ರಶಾಂತ್ ಕಿಶೋರ್, “ಇಲ್ಲ, ನಾನು ಇನ್ನು ಮುಂದೆ ಯಾವ ಚುನಾವಣೆಯಲ್ಲೂ ಸ್ಥಾನಗಳ ಲೆಕ್ಕಾಚಾರವಾಗಲೀ ಭವಿಷ್ಯವನ್ನಾಗಲಿ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ನನ್ನ ಮೌಲ್ಯಮಾಪನವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ ಮತ್ತು ನಾನು ಮಾಡಿದ ಮೌಲ್ಯಮಾಪನವು ಶೇಕಡಾ 20 ರಷ್ಟು ದೊಡ್ಡ ಪ್ರಮಾಣದಲ್ಲಿ ತಪ್ಪಾಗಿದೆ ಎಂದು ನಾನು ಒಪ್ಪಿಕೊಳ್ಳಬೇಕು. ನಾವು ಬಿಜೆಪಿ 300 ರ ಸಮೀಪಕ್ಕೆ ಬರಲಿದೆ ಎಂದು ಹೇಳಿದ್ದೆವು. ಆದರೆ ಅವರಿಗೆ 240 ಸ್ಥಾನಗಳು ಮಾತ್ರ ಸಿಕ್ಕಿತು. ಜನರಿಗೆ ಬಿಜೆಪಿ ಮೇಲೆ ಸ್ವಲ್ಪ ಕೋಪವಿದೆ ಆದರೆ ನರೇಂದ್ರ ಮೋದಿ ವಿರುದ್ಧ ಯಾವುದೇ ವ್ಯಾಪಕ ಅಸಮಾಧಾನವಿಲ್ಲ ಎಂದು ನಾನು ಮೊದಲೇ ಹೇಳಿದ್ದೆ, ಎಂದು ಪ್ರಶಾತ್ ಕಿಶೋರ್ ಹೇಳಿದರು.

ದೇಶದಲ್ಲಿ ಪ್ರತಿಪಕ್ಷಗಳ ಪರ ಜನರ ಒಲವು ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಇಲ್ಲ ಎಂದು ನಾನು ಹೇಳಿದ್ದೆ. ಅದರಂತೆ ಪೂರ್ವ ಮತ್ತು ದಕ್ಷಿಣದಲ್ಲಿ ಅವುಗಳು ಅಷ್ಟೇ ಹಿಂದಿನ ಚುನಾವಣೆಯಷ್ಟೇ ಸ್ಥಾನಗಳನ್ನು ಪಡೆದುಕೊಂಡು ಯಥಾಸ್ಥಿತಿ ಕಾಪಾಡಿಕೊಂಡಿವೆ. ನಿಸ್ಸಂಶಯವಾಗಿ, ನಾವು ತಪ್ಪು ಎಂದು ಸಾಬೀತಾಗಿದೆ. ಆದರೆ ನಂಬರ್‌ ಅನ್ನು ಹೊರತುಪಡಿಸಿ ಗಮನಿಸಿದಾಗ ನಾನು ಹೇಳಿರುವ ಎಲ್ಲಾ ಅಂಶಗಳು ನಿಜವಾಗಿದೆ. ಒಬ್ಬ ರಾಜಕೀಯ ವಿಶ್ಲೇಷಕನಾಗಿ, ತಂತ್ರಗಾರನಾಗಿ ಚುನಾವಣಾ ಭವಿಷ್ಯ ನುಡಿಯುವುದು ತಪ್ಪು. ಮುಂದೆಂದೂ ಅಂತಹ ತಪ್ಪಿ ಮಾಡುವುದಿಲ್ಲ.

ಪ್ರಶಾಂತ್‌ ಕಿಶೋರ್‌ ಏನು ಹೇಳಿದ್ದರು?

ಕಿಶೋರ್, ಸಂದರ್ಶನವೊಂದರಲ್ಲಿ, ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ಗಮನಾರ್ಹ ಅತೃಪ್ತಿ ಇಲ್ಲದ ಕಾರಣ ಬಿಜೆಪಿ ಆರಾಮವಾಗಿ ಬಹುಮತದ ಅಂಕವನ್ನು ದಾಟುತ್ತದೆ ಎಂದು ಹೇಳಿದ್ದರು. “ನಿರಾಶೆಗಳು, ಈಡೇರದ ಆಕಾಂಕ್ಷೆಗಳು ಇರಬಹುದು. ಆದರೆ ವ್ಯಾಪಕ ಕೋಪದ ಬಗ್ಗೆ ಯಾವುದೇ ಸುಳಿವು ಇಲ್ಲ” ಎಂದು ಪ್ರಶಾಂತ್ ಕಿಶೋರ್ ಹೇಳಿದ್ದರು. “ಬಿಜೆಪಿ ತನ್ನ ಮಹತ್ವಾಕಾಂಕ್ಷೆಯ 370 ಸ್ಥಾನ ಗುರಿಯನ್ನು ಸಾಧಿಸಲು ಸಾಧ್ಯವಾಗದಿರಬಹುದು” ಎಂದು ಸುಳಿವು ನೀಡಿದ್ದರು.

ಇದನ್ನೂ ಓದಿ:CWC Meeting: ಇಂದು ದೆಹಲಿಯಲ್ಲಿ CWC ಸಭೆ; ಇಂದೇ ನಿರ್ಧಾರ ಆಗುತ್ತಾ ವಿಪಕ್ಷ ನಾಯಕ ಸ್ಥಾನ?

Continue Reading

ದೇಶ

CWC Meeting: ಇಂದು ದೆಹಲಿಯಲ್ಲಿ CWC ಸಭೆ; ಇಂದೇ ನಿರ್ಧಾರ ಆಗುತ್ತಾ ವಿಪಕ್ಷ ನಾಯಕ ಸ್ಥಾನ?

CWC Meeting:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ CWC ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನು ಈ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿಕ್ಕ ಜಯ ಹಾಗೂ ಕೆಲ ರಾಜ್ಯದಲ್ಲಿ ಕಾಂಗ್ರೆಸ್ ಗೆ ಆದ ನಷ್ಟದ ಬಗ್ಗೆ ಅವಲೋಕನ ನಡೆಯಲಿದೆ. ಇಂಡಿಯಾ ಮೈತ್ರಿಕೂಟವನ್ನ ರಾಜ್ಯಗಳಲ್ಲಿ ಹೇಗೆ ಬಳಸಿಕೊಳ್ಳಬೇಕು. ರಾಜ್ಯವಾರು ಚುನಾವಣೆಗಳಲ್ಲಿ ಏನೆಲ್ಲಾ ಬದಲಾವಣೆ ಆಗಬೇಕು ಹಾಗೂ ರಾಜ್ಯವಾರು ಬಂದಿರುವ ಚುನಾವಣೆ ಫಲಿತಾಂಶದ ಬಗ್ಗೆಯೂ ಚರ್ಚೆ ಇಂದು ನಡೆಯಲಿದೆ.

VISTARANEWS.COM


on

CWC Meeting
Koo

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ(Election Results 2024) ಹೊರಬಿದ್ದ ನಂತರ ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್‌ ಕನಸು ಮತ್ತೊಮ್ಮೆ ಭಗ್ನವಾಗಿದೆ. ಸರ್ಕಾರ ರಚಿಸುವ ಕನಸು ಸ್ವಲ್ಪದರಲ್ಲೇ ಮಿಸ್‌ ಆಗಿರುವುದರಿಂದ ಕಾಂಗ್ರೆಸ್(Congress) ಇದೀಗ ಫಲಿತಾಂಶ ಪರಾಮರ್ಶೆಗೆ ಮುಂದಾಗಿದೆ. ಹೀಗಾಗಿ ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆ(CWC Meeting) ನಡೆಯಲಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಬಗ್ಗೆ ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 11:00 ಗಂಟೆಗೆ ನಡೆಯಬೇಕಿದ್ದ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯನ್ನು ಸಂಜೆ 5:30ಕ್ಕೆ ಮುಂದೂಡಲಾಗಿದೆ. ಸಂಸತ್‌ನ ಸೆಂಟ್ರಲ್‌ ಹಾಲ್‌ನಲ್ಲಿ ಸಬೆ ನಡೆಯಲಿದ್ದು, ಬಳಿಕ ಅಶೋಕ ಹೊಟೇಲ್‌ನಲ್ಲಿ ಸಂಜೆ 7ಗಂಟೆಗೆ ರಾತ್ರಿ ಡಿನ್ನರ್‌ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ CWC ಸದಸ್ಯರು ಭಾಗಿಯಾಗಲಿದ್ದಾರೆ. ಇನ್ನು ಈ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಿಕ್ಕ ಜಯ ಹಾಗೂ ಕೆಲ ರಾಜ್ಯದಲ್ಲಿ ಕಾಂಗ್ರೆಸ್ ಗೆ ಆದ ನಷ್ಟದ ಬಗ್ಗೆ ಅವಲೋಕನ ನಡೆಯಲಿದೆ. ಇಂಡಿಯಾ ಮೈತ್ರಿಕೂಟವನ್ನ ರಾಜ್ಯಗಳಲ್ಲಿ ಹೇಗೆ ಬಳಸಿಕೊಳ್ಳಬೇಕು. ರಾಜ್ಯವಾರು ಚುನಾವಣೆಗಳಲ್ಲಿ ಏನೆಲ್ಲಾ ಬದಲಾವಣೆ ಆಗಬೇಕು ಹಾಗೂ ರಾಜ್ಯವಾರು ಬಂದಿರುವ ಚುನಾವಣೆ ಫಲಿತಾಂಶದ ಬಗ್ಗೆಯೂ ಚರ್ಚೆ ಇಂದು ನಡೆಯಲಿದೆ.

ಇನ್ನು ರಾಜ್ಯದಿಂದ ಈ ಸಭೆಯಲ್ಲಿ ಕರ್ನಾಟಕ ದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ರಾಜ್ಯ ಸಚಿವರ ಜೊತೆಗೆ ಪ್ರತ್ಯೇಕ ಸಭೆಯನ್ನು ನಡೆಸಿದ್ದರು. ಯಾವ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಮತದಾನ ಆಗಿದೆ. ಈ ಎಲ್ಲಾ ಮಾಹಿತಿ ಸಂಗ್ರಹಿಸಿದ್ದಾರೆ. ಸಚಿವರ ಕ್ಷೇತ್ರದಲ್ಲಿ ಲೀಡ್ ಕಡಿಮೆ ಬಂದಿರುವ ಬಗ್ಗೆಯೂ ಚರ್ಚೆ ನಡೆಸುತ್ತೇವೆ. ರಾಹುಲ್ ಗಾಂಧಿ ಈ ಬಗ್ಗೆ ವರದಿ ಕೇಳಿದ್ದಾರೆ. ಕ್ಷೇತ್ರವಾರು ವರದಿಯನ್ನು ನೀಡುತ್ತೇವೆ ಎಂದರು.

ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ ಸ್ಪರ್ಧೆಗೆ ನಾವು ಆತುರದಲ್ಲಿ ಇಲ್ಲ. ಈ ಬಗ್ಗೆ ಇನ್ನೂ ಯೋಚನೆ ಮಾಡಲು ಹೋಗಿಲ್ಲ. ಸೋಲಿನ ದುಖಃದಿಂದ ಈಚೆಗೆ ಬಂದಿಲ್ಲ ಎಂದರು. ಚುನಾವಣೆ ಸೋಲಿಗೆ ಸಚಿವರನ್ನು ಕೈಬಿಡುವ ಬಗ್ಗೆ ಸದ್ಯಕ್ಕೆ ಚರ್ಚೆಯಾಗಿಲ್ಲ. ಮುಂದಿನ ದಿನಗಳಲ್ಲಿ ಹೈಕಮಾಂಡ ನಿರ್ಧಾರ ಮಾಡಿಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ:Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Continue Reading

ರಾಜಕೀಯ

Lok Sabha Election 2024: ಈ ಬಾರಿ 74 ಮಹಿಳಾ ಸಂಸದರು, ಯಾವ ಪಕ್ಷದಲ್ಲಿ ಎಷ್ಟು ಮಂದಿ?

18ನೇ ಲೋಕಸಭೆಗೆ (Lok Sabha Election 2024) ಈ ಬಾರಿ 74 ಮಹಿಳೆಯರು ಸಂಸದರಾಗಿ ಪ್ರವೇಶ ಪಡೆದಿದ್ದರೆ. ಇದರಲ್ಲಿ ಬಹುಪಾಲು ಬಿಜೆಪಿಯದ್ದಾಗಿದ್ದು, ಬಳಿಕ ಕಾಂಗ್ರೆಸ್ ನವರದ್ದಾಗಿದೆ. ಬಿಜೆಪಿ 31, ಕಾಂಗ್ರೆಸ್ 13, ಟಿಎಂಸಿ 11 ಮಹಿಳಾ ಸಂಸದರು ಸೇರಿದಂತೆ ಒಟ್ಟು 74 ಮಹಿಳೆಯರು ಲೋಕಸಭೆಯಲ್ಲಿ ತಮ್ಮ ಪಕ್ಷಗಳನ್ನು ಪ್ರತಿನಿಧಿಸಲಿದ್ದಾರೆ.

VISTARANEWS.COM


on

By

Lok Sabha Election 2024
Koo

ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಈ ಬಾರಿ 74 ಮಹಿಳೆಯರು ಸಂಸದರಾಗಿ (Women MPs) ಆಯ್ಕೆಯಾಗಿದ್ದಾರೆ. ಈ ಸಂಖ್ಯೆಯು 2019ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. 2019ರಲ್ಲಿ ಒಟ್ಟು 78 ಮಹಿಳೆಯರು ಸಂಸದರಾಗಿದ್ದರು. 1952ರ ಚುನಾವಣೆಗೆ (election) ಹೋಲಿಸಿದರೆ ಮಹಿಳಾ ಸಂಸದರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ.

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ (Women’s reservation) ಮಸೂದೆ ಅಂಗೀಕಾರವಾದ ಅನಂತರ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮೊದಲ ಚುನಾವಣೆ ಇದಾಗಿದೆ. ಈ ಕಾನೂನು ಇನ್ನೂ ಜಾರಿಗೆ ಬರಬೇಕಿದೆ.

ಮಹಿಳಾ ಸಂಸದರು ಸಂಖ್ಯೆ ಒಟ್ಟು ಚುನಾಯಿತ ಸದಸ್ಯರಲ್ಲಿ ಕೇವಲ ಶೇ. 13.63ರಷ್ಟಿದೆ. ಇದು ಮಹಿಳೆಯರಿಗೆ ಪ್ರಸ್ತಾಪಿಸಲಾಗಿರುವ ಶೇ. 33 ಮೀಸಲಾತಿಗಿಂತ ಕಡಿಮೆಯಾಗಿದೆ. ದೇಶಾದ್ಯಂತ ಕೆಳಮನೆಗೆ ಆಯ್ಕೆಯಾಗಿರುವ ಒಟ್ಟು ಮಹಿಳಾ ಸಂಸದರ ಪೈಕಿ 11 ಮಂದಿ ಪಶ್ಚಿಮ ಬಂಗಾಳದವರಾಗಿರುವುದು ವಿಶೇಷ.

ಯಾವ ಪಕ್ಷದಿಂದ ಎಷ್ಟು?

ಈ ಬಾರಿ ಲೋಕಸಭೆಯಲ್ಲಿ 14 ರಾಜಕೀಯ ಪಕ್ಷಗಳ ಮಹಿಳಾ ಸಂಸದರು ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸಲಿದ್ದಾರೆ. ಇದರಲ್ಲಿ ಬಿಜೆಪಿ 31 ಮಹಿಳಾ ಸಂಸದರನ್ನು ಹೊಂದಿದ್ದು, ಕಾಂಗ್ರೆಸ್ 13, ತೃಣಮೂಲ ಕಾಂಗ್ರೆಸ್ (ಟಿಎಂಸಿ) 11, ಸಮಾಜವಾದಿ ಪಕ್ಷ (ಎಸ್‌ಪಿ) 5, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) 3 ಮಹಿಳಾ ಸಂಸದರನ್ನು ಹೊಂದಿದೆ.

ಮೊದಲ ಬಾರಿ ಸಂಸದರಾದವರು

74 ಮಹಿಳಾ ಸಂಸದರಲ್ಲಿ 43 ಮಂದಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಜನತಾ ದಳದಿಂದ (ಆರ್‌ಜೆಡಿ) ಆಯ್ಕೆಯಾಗಿರುವ ಮಿಸಾ ಭಾರತಿ ಚೊಚ್ಚಲ ಲೋಕಸಭಾ ಸಂಸದರಾಗಿದ್ದಾರೆ.

ಕಣದಲ್ಲಿ ಇದದ್ದು ಎಷ್ಟು ಮಂದಿ ?

ಒಟ್ಟು 797 ಮಹಿಳಾ ಅಭ್ಯರ್ಥಿಗಳು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಬಿಜೆಪಿ ಗರಿಷ್ಠ 69 ಮತ್ತು ಕಾಂಗ್ರೆಸ್ 41 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಪಿಆರ್ ಎಸ್ ನ ವಿಶ್ಲೇಷಣೆಯ ಪ್ರಕಾರ ಮಹಿಳಾ ಸಂಸದರಲ್ಲಿ ಶೇ. 16ರಷ್ಟು ಮಂದಿ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಶೇ. 41ರಷ್ಟು ಮಂದಿ ಈ ಹಿಂದೆ ಲೋಕಸಭೆಯ ಸದಸ್ಯರಾಗಿದ್ದರು. ಉಳಿದವರಲ್ಲಿ ಒಬ್ಬ ಸಂಸದರು ಮಾತ್ರ ರಾಜ್ಯಸಭಾ ಸದಸ್ಯರಾಗಿದ್ದರು.

ಕಿರಿಯ ಮಹಿಳಾ ಸಂಸದರು

ಸಮಾಜವಾದಿ ಪಕ್ಷದ ಮಚ್ಲಿಶಹರ್‌ನ 25 ವರ್ಷದ ಪ್ರಿಯಾ ಸರೋಜ್ ಮತ್ತು ಕೈರಾನಾ ಕ್ಷೇತ್ರದ 29 ವರ್ಷದ ಇಕ್ರಾ ಚೌಧರಿ ಗೆಲುವು ಸಾಧಿಸಿದ ಅತ್ಯಂತ ಕಿರಿಯ ಸಂಸದರಾಗಿದ್ದಾರೆ.

ಇದನ್ನೂ ಓದಿ: Rahul Gandhi: ರಾಯ್‌ ಬರೇಲಿ V/S ವಯನಾಡ್‌-ರಾಹುಲ್‌ ಆಯ್ಕೆ ಯಾವುದು?

ಮಹಿಳಾ ಮೀಸಲಾತಿ ಎಷ್ಟು?

ಗಮನಾರ್ಹ ಸಂಗತಿ ಎಂದರೆ ನಾಮ್ ತಮಿಲರ್ ಕಚ್ಚಿಯಂತಹ ಪಕ್ಷಗಳು ಶೇ. 50ರಷ್ಟು ಮಹಿಳಾ ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸಿತ್ತು. ಮಹಿಳಾ ಪ್ರಾತಿನಿಧ್ಯವನ್ನು ಹೊಂದಿರುವ ಇತರ ಪಕ್ಷಗಳಲ್ಲಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಕೂಡ ಸೇರಿದೆ. ಈ ಎರಡೂ ಪಕ್ಷಗಳು ಶೇ. 40ರಷ್ಟು ಮಹಿಳಾ ಅಭ್ಯರ್ಥಿಗಳನ್ನು ಹೊಂದಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಬಿಜು ಜನತಾ ದಳ (ಬಿಜೆಡಿ) ಶೇ. 33 ರಷ್ಟು, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಶೇ.29, ಸಮಾಜವಾದಿ ಪಕ್ಷವು ಶೇ. 20 ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶೇ. 25ರಷ್ಟು ಮಹಿಳಾ ಅಭ್ಯರ್ಥಿಗಳನ್ನು ಹೊಂದಿತ್ತು.

Continue Reading

ವೈರಲ್ ನ್ಯೂಸ್

Viral Video: ಮೆಟ್ರೊ ರೈಲಿನೊಳಗೆ ʼವಿದ್ಯಾವಂತ ಮಹಿಳೆಯರʼ ಫೈಟ್‌ ಹೇಗಿದೆ ನೋಡಿ!

ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ವಿಡಿಯೋ ಎಕ್ಸ್ ನಲ್ಲಿ ವೈರಲ್ (Viral Video) ಆಗಿದೆ. ಇದರಲ್ಲಿ ಒಬ್ಬ ಮಹಿಳೆ ಮತ್ತೊಬ್ಬರು ಮೆಟ್ರೋದಲ್ಲಿ ಕುಡಿದಿದ್ದಾರೆ ಎಂದು ಆರೋಪಿಸಿದ್ದು ಹೊಡೆದಾಟಕ್ಕೆ ಕಾರಣವಾಗಿದೆ.

VISTARANEWS.COM


on

By

Viral Video
Koo

ದೆಹಲಿ ಮೆಟ್ರೋ (delhi metro) ಎಲ್ಲರಿಗೂ ಈಗ ಹಾಸ್ಯದ ಕೇಂದ್ರವಾಗಿದೆ ಎನ್ನಬಹುದು. ಯಾಕೆಂದರೆ ಒಂದಲ್ಲ ಒಂದು ಕಾರಣಕ್ಕೆ ದೆಹಲಿ (delhi) ಮೆಟ್ರೋ ನಿರಂತರ ಸುದ್ದಿಯಾಗುತ್ತಲೇ ಇದೆ. ಇದೀಗ ಮೆಟ್ರೋದಲ್ಲಿ ಮಹಿಳೆಯರಿಬ್ಬರು ಹೊಡೆದಾಡಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ. ದೆಹಲಿ ಮೆಟ್ರೋ ಬಗ್ಗೆ ಎಲ್ಲರೂ ಮತ್ತೊಮ್ಮೆ ತಮಾಷೆ ಮಾಡುವಂತಾಗಿದೆ.

ದೆಹಲಿ ಮೆಟ್ರೋದಲ್ಲಿ ಇತ್ತೀಚೆಗೆ ನಡೆದ ಘಟನೆಯಲ್ಲಿ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ವಿಡಿಯೋ ಎಕ್ಸ್ (x) ನಲ್ಲಿ ವೈರಲ್ ಆಗಿದೆ. ಇದರಲ್ಲಿ ಒಬ್ಬ ಮಹಿಳೆ ಮತ್ತೊಬ್ಬರು ಮೆಟ್ರೋದಲ್ಲಿ ಕುಡಿದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಹೊಡೆದಾಟಕ್ಕೆ ಕಾರಣವಾಗಿದೆ. ಮಹಿಳೆಯರಿಬ್ಬರು ಪರಸ್ಪರ ಕೂದಲು ಎಳೆದುಕೊಂಡು ಹೊಡೆದಾಡುತ್ತಿದ್ದರೆ ಉಳಿದವರು ನೋಡಿ ನಗುತ್ತಾ ವಿಡಿಯೋ ಮಾಡುತ್ತಿದ್ದರು.

ಎಕ್ಸ್ ನಲ್ಲಿ ಈ ವಿಡಿಯೋವನ್ನು ರಾಹುಲ್ ಶೈನಿ ಎಂಬವರು ಹಂಚಿಕೊಂಡಿದ್ದು, “ದಯೆಯುಳ್ಳ ಜನರ ದೆಹಲಿ ಎಂದಾದರೂ ಸುಧಾರಿಸುತ್ತದೆಯೇ? ಅದೇ ಪ್ರಸಿದ್ಧ ಸ್ಥಳವಾದ ಮೆಟ್ರೋದಲ್ಲಿ ಮತ್ತೆ ಮಹಿಳೆಯರ ನಡುವೆ ಜಗಳವಾಯಿತು…!! ನಂತರ ಪರಸ್ಪರ ಕಪಾಳ ಮೋಕ್ಷ ಮತ್ತು ಜಗಳ ನಡೆಯಿತು. ಜಗಳದ ನಂತರ ಇಬ್ಬರು ಮಹಿಳೆಯರು.” ಎಂಬ ಶೀರ್ಷಿಕೆ ನೀಡಲಾಗಿದೆ.


ವೈರಲ್ ಆದ ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಂದಿ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಅನೇಕರು ದೆಹಲಿ ಮೆಟ್ರೋಗೆ ಇಂತಹ ಘಟನೆಗಳನ್ನು “ಸಾಮಾನ್ಯ” ಎಂದು ಹೇಳಿದ್ದಾರೆ. ಕೆಲವರು ಇದನ್ನು ಹಾಸ್ಯ ಮಾಡಿದ್ದಾರೆ. ಶುಕ್ರವಾರ ಬೆಳಗ್ಗೆ ಹಂಚಿಕೊಂಡಿರುವ ಈ ವಿಡಿಯೋವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: Viral Video: ಮಕ್ಕಳು ಆಟವಾಡ್ತಿದ್ದ ವಾಟರ್‌ ಪಾರ್ಕ್‌ಗೆ ಏಕಾಏಕಿ ನುಗ್ಗಿದ ಬುಲ್ಡೋಜರ್‌; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

ಇದಕ್ಕೆ ಪ್ರತಿಕ್ರಿಯಿಸಿರುವ ಒಬ್ಬ ಬಳಕೆದಾರ, ಮೆಟ್ರೋ ಎಂದಿಗೂ ನಿರಾಶೆಗೊಳಿಸುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ದೆಹಲಿ ಮೆಟ್ರೋ ಮತ್ತೊಂದು ಹಾಸ್ಯ ಕುಚ್ ಭೀ ಹೋಥಾ ಕಭಿ ಭಿ (ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು)” ಎಂದು ಸೇರಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು ಹಾಸ್ಯಮಯವಾಗಿ, “ಅಸ್ಲಿ ರೆಸ್ಲಿಂಗ್ ಟು ಮೆಟ್ರೋ ಮತ್ತು ಇಂಡಿಯನ್ ರೈಲ್ವೇ ಮೈ ಹೋತಿ ಹೈ (ನಿಜವಾದ ಕುಸ್ತಿ ದೆಹಲಿ ಮೆಟ್ರೋದಲ್ಲಿ ನಡೆಯುತ್ತದೆ)” ಎಂದು ಸೇರಿಸಿದ್ದಾರೆ. ಮತ್ತೊಬ್ಬರು, ಈ ಸಮಸ್ಯೆಯು ಇಂದು ಚಿಕ್ಕದಾಗಿ ಕಾಣಿಸಬಹುದು, ಆದರೆ ನಾಳೆ ಇದು ಬಹಳ ಮಹತ್ವದ್ದಾಗಬಹುದು. ದೆಹಲಿ ಮೆಟ್ರೋ ನಲ್ಲಿ ಹೊಡೆದಾಡುವ ಜನರಿಗೆ ದಂಡ ವಿಧಿಸಬೇಕು. ಎಂದು ಹೇಳಿದ್ದಾರೆ.

Continue Reading
Advertisement
Niveditha Gowda reason behind srujan lokesh name
ಸ್ಯಾಂಡಲ್ ವುಡ್12 mins ago

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ಗೆ ಸೃಜನ್ ಲೋಕೇಶ್ ಕಾರಣ? ಯಾಕೆ ಈ ಗಾಸಿಪ್‌?

Valmiki Corporation Scam
ಕರ್ನಾಟಕ16 mins ago

Valmiki Corporation Scam: ವಾಲ್ಮೀಕಿಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣ; ನಿಗಮ, ಮಂಡಳಿಗಳಿಗೆ ಪತ್ರ ಬರೆದ ಹಣಕಾಸು ಇಲಾಖೆ

Prashant Kishor
ದೇಶ38 mins ago

Prashant Kishor: “ಇನ್ನೆಂದೂ ಚುನಾವಣಾ ಭವಿಷ್ಯ ನುಡಿಯಲ್ಲ”; ಫಲಿತಾಂಶದ ಬಳಿಕ ಪ್ರಶಾಂತ್‌ ಕಿಶೋರ್‌ ಫಸ್ಟ್‌ ರಿಯಾಕ್ಷನ್‌

Fire Accident
ಕರ್ನಾಟಕ48 mins ago

Fire Accident: ಹಾವೇರಿಯಲ್ಲಿ ಧಗಧಗಿಸಿದ ಬೆಂಕಿ; ಸುಟ್ಟು ಭಸ್ಮವಾಯ್ತು 5 ಅಂಗಡಿ

Aamir Khan shooting for Sitaare Zameen Par in Vadodara
ಬಾಲಿವುಡ್53 mins ago

Aamir Khan: ವಡೋದರಾದಲ್ಲಿ ‘ಸಿತಾರೆ ಜಮೀನ್ ಪರ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆಮೀರ್‌ ಖಾನ್‌!

CWC Meeting
ದೇಶ1 hour ago

CWC Meeting: ಇಂದು ದೆಹಲಿಯಲ್ಲಿ CWC ಸಭೆ; ಇಂದೇ ನಿರ್ಧಾರ ಆಗುತ್ತಾ ವಿಪಕ್ಷ ನಾಯಕ ಸ್ಥಾನ?

NDA 3.0
ಕರ್ನಾಟಕ1 hour ago

NDA 3.0: ರಾಜ್ಯಕ್ಕೆ ಸಿಗಲಿದ್ಯಾ 2+1 ಸಚಿವ ಸ್ಥಾನ? ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?

Lok Sabha Election 2024
ರಾಜಕೀಯ2 hours ago

Lok Sabha Election 2024: ಈ ಬಾರಿ 74 ಮಹಿಳಾ ಸಂಸದರು, ಯಾವ ಪಕ್ಷದಲ್ಲಿ ಎಷ್ಟು ಮಂದಿ?

Kotee Movie Kannada Team Gives First Ticket To Kichcha Sudeep
ಸ್ಯಾಂಡಲ್ ವುಡ್2 hours ago

Kotee Movie Kannada: ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​!

Viral Video
ವೈರಲ್ ನ್ಯೂಸ್2 hours ago

Viral Video: ಮೆಟ್ರೊ ರೈಲಿನೊಳಗೆ ʼವಿದ್ಯಾವಂತ ಮಹಿಳೆಯರʼ ಫೈಟ್‌ ಹೇಗಿದೆ ನೋಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ15 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ17 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌