Jupiter: ಗುರುಗ್ರಹದ ಅತ್ಯದ್ಭುತ ಫೋಟೋ ಸೆರೆ ಹಿಡಿದ ಜುನೋ! ನಾಸಾ ಚಿತ್ರಕ್ಕೆ ಭಾರಿ ಮೆಚ್ಚುಗೆ - Vistara News

ಪ್ರಮುಖ ಸುದ್ದಿ

Jupiter: ಗುರುಗ್ರಹದ ಅತ್ಯದ್ಭುತ ಫೋಟೋ ಸೆರೆ ಹಿಡಿದ ಜುನೋ! ನಾಸಾ ಚಿತ್ರಕ್ಕೆ ಭಾರಿ ಮೆಚ್ಚುಗೆ

Jupiter: ಅಮೆರಿಕದ ನಾಸಾ ಗುರುಗ್ರಹದ ಅಧ್ಯಯನಕ್ಕಾಗಿ ಜುನೋ ಗಗನನೌಕೆಯನ್ನು 2011ರಲ್ಲಿ ಲಾಂಚ್ ಮಾಡಿತ್ತು.

VISTARANEWS.COM


on

Jupiter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್ ಡಿಸಿ, ಅಮೆರಿಕ: ಒಂದೆಡೆ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO) ಚಂದ್ರನ ದಕ್ಷಿಣ ಧ್ರುವನ್ನು ತಲುಪಿ ವಿಶಿಷ್ಟ ಸಾಧನೆ ಮಾಡಿದರೆ(Chandrayaan 3), ಮತ್ತೊಂದೆಡೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆಯಾಗಿರುವ ನಾಸಾ (NASA) ಗುರು ಗ್ರಹದ (Jupiter) ಅದ್ಭುತ ಚಿತ್ರಗಳನ್ನು ಬಿಡುಗಡೆ ಮಾಡಿ, ಎಲ್ಲರೂ ನಿಬ್ಬೆರಗಾಗುವಂತೆ ಮಾಡಿದೆ(Stunning Close-Up Images). ಅಮೂರ್ತ ಜಲವರ್ಣ ವರ್ಣಚಿತ್ರಗಳನ್ನು ಹೋಲುವ ಗುರುಗ್ರಹದ ನಂಬಲಾಗದ ಚಿತ್ರಗಳು ನಾಸಾದಿಂದ ಅದರ ಜುನೋ ಮಿಷನ್ (Juno Mission) ಪಡೆಯಲಾಗಿದೆ. ಜುನೋ ಮೂಲಕ ಸೆರೆ ಹಿಡಿಯಲಾದ ಗುರುಗ್ರಹದ ಫೋಟೋಗಳನ್ನು ನಾಸಾ ಇನ್‌ಸ್ಟಾಗ್ರಾಮ್‌ ವೇದಿಕೆಯಲ್ಲಿ ಹಂಚಿಕೊಂಡಿದೆ. ಗುರುಗ್ರಹದ ಸುತ್ತ ಪ್ರಬಲವಾದ ಬಿರುಗಾಳಿಗಳನ್ನು ಈ ಚಿತ್ರದಲ್ಲಿ ಗುರುತಿಸಬಹುದಾಗಿದೆ. ಬಾಹ್ಯಾಕಾಶ ನೌಕೆಯು ಈ ಚಿತ್ರವನ್ನು ಗ್ರಹದ ಮೋಡದ ಮೇಲ್ಭಾಗದಿಂದ 14,600 ಮೈಲುಗಳು (23,500 ಕಿಮೀ) ತೆಗೆದಿದೆ.

2019ರ ಜುಲೈ ತಿಂಗಳಲ್ಲಿ ಜುನೋ ಉಪಗ್ರಹವು ಗುರುಗ್ರಹದ ಸುತ್ತ 24ನೇ ಹಾರಾಟವನ್ನು ಪೂರ್ಣಗೊಳಸಿದಾಗ ಈ ಚಿತ್ರಗಳನ್ನು ಸೆರೆ ಹಿಡಿದಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆಯಾಗಿರುವ ನ್ಯಾಷನಲ್ ಏರೋನಾಟಿಕ್ಸ್ ಮತ್ತು ಬಾಹ್ಯಾಕಾಶ ಆಡಳಿತವು (NASA) ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಪೋಸ್ಟ್ ಮಾಡಿ ವಿವರಿಸಿದೆ.

ನಾಸಾ ಷೇರ್ ಮಾಡಿದ ಗುರು ಗ್ರಹದ ಫೋಟೋಗಳು

ನಮ್ಮ ಜುನೋ ಬಾಹ್ಯಾಕಾಶ ನೌಕೆಯು ಗುರುಗ್ರಹದ ಉತ್ತರ ಗೋಳಾರ್ಧದಲ್ಲಿ ಬಿರುಗಾಳಿಗಳನ್ನು ಸೆರೆ ಹಿಡಿದಿದೆ. 2019ರಲ್ಲಿ ಗುರುಗ್ರಹದ 24ನೇ ಸುತ್ತು ಪೂರೈಸಿತು. ಬಾಹ್ಯಾಕಾಶ ನೌಕೆಯು ಈ ಚಿತ್ರವನ್ನು ಗ್ರಹದ ಮೋಡದ ಮೇಲ್ಭಾಗದಿಂದ 14,600 ಮೈಲಿಗಳು (23,500 ಕಿಮೀ) ತೆಗೆದುಕೊಂಡಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಹೇಳಿದೆ.

2016ರಲ್ಲಿ ಗುರುಗ್ರಹದ ಕಕ್ಷೆ ಸೇರಿರುವ ಜುನೋ ಅಂದಿನಿಂದಲ ಗುರುಗ್ರಹವನ್ನು ಅಧ್ಯಯನ ಮಾಡುತ್ತಿದೆ. ಗುರುಗ್ರಹ ನಮ್ಮ ಸೌರಮಂಡಲದ ಅತಿದೊಡ್ಡ ದೈತ್ಯ ಗ್ರಹವಾಗಿದೆ. ಭೂಮಿಯ ಆಚೆಗಿನ ಜೀವರಾಶಿಗಳು ಕುರುಹುಗಳನ್ನು ಶೋಧಿಸಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Chandrayaan 3 : ಸೂರ್ಯನೆಡೆಗೆ ಇಸ್ರೋ ನೋಟ! ಮಿಷನ್‌ ಆದಿತ್ಯ ಹೇಗೆ ಕೆಲಸ ಮಾಡಲಿದೆ?

ನಾಸಾ ಹಂಚಿಕೊಂಡಿರುವ ಗುರುಗ್ರಹದ ಫೋಟೋ ನೀಲಿ ಮತ್ತು ಬಿಳಿ ಛಾಯೆಗಳಲ್ಲಿ ಗುರುಗ್ರಹದ ಮೇಲೆ ಬಿರುಗಾಳಿಗಳನ್ನು ತೋರಿಸುತ್ತದೆ. ವೃತ್ತಗಳ ನಡುವೆ ಹೊರಹೊಮ್ಮುವ ಅಲೆ ಅಲೆಯಾದ ಮಾದರಿಗಳೊಂದಿಗೆ ದೊಡ್ಡ ಸುತ್ತುವ ಮಾದರಿಗಳಲ್ಲಿರುವುದನ್ನು ಕಾಣಬಹುದಾಗಿದೆ.

ಕೆಲವೇ ಗಂಟೆಗಳ ಹಿಂದೆ ಹಂಚಿಕೊಳ್ಳಲಾದ ಚಿತ್ರವು ಈಗಾಗಲೇ 6 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ. ಇಂಟರ್ನೆಟ್ ಬಳಕೆದಾರರು ಲವ್‌ಸ್ಟ್ರಕ್ ಮತ್ತು ಫೈರ್ ಎಮೋಜಿಗಳೊಂದಿಗೆ ಕಾಮೆಂಟ್ ವಿಭಾಗವನ್ನು ತುಂಬಿದ್ದಾರೆ. ಕೆಲವು ಬಳಕೆದಾರರು ಚಿತ್ರವನ್ನು ಅದ್ಭುತ ಎಂದು ಕರೆದರೆ, ಇತರರು ಅದನ್ನು ಅತಿ ಸುಂದರ ಎಂದು ಕರೆದಿದ್ದಾರೆ.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ

Harish Poonja: ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್ ಅನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ, ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗಳೆಯಲು ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

CM Siddaramaiah defends FIR against Harish Poonja
Koo

ಮಂಗಳೂರು: ಪ್ರತಿಭಟನೆ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಕಾನೂನು ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ಅನ್ನು ದಾಖಲು ಮಾಡಲಾಗಿದೆ. ಐಪಿಸಿ 353ರ ಪ್ರಕಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಕಾನೂನು ಎಲ್ಲರಿಗೂ ಒಂದೇ. ಹರೀಶ್‌ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲೆ ಇರುವ ಆರೋಪ ಸುಳ್ಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರತಿಕ್ರಿಯೆ ನೀಡಿದರು.

7 ವರ್ಷ ಜೈಲುವಾಸ ಶಿಕ್ಷೆ

ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್ ಅನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ, ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗಳೆಯಲು ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು.

ಶಾಸಕರಾದರೆ ಪೊಲೀಸರಿಗೆ ಧಮ್ಕಿ ಹಾಕಬಹುದೇ?

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮರು ಪ್ರಶ್ನಿಸಿದರು.

ಅರೆಸ್ಟ್‌ ಮಾಡದೇ ವಾಪಸ್‌ ಹೋಗಿದ್ದ ಪೊಲೀಸರು!

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದ ಬೆನ್ನಲ್ಲೇ ಮೇ 22ರಂದು ಅವರನ್ನು ಬಂಧಿಸಲು ಪೊಲೀಸರು ನಡೆಸಿದ ಪ್ರಹಸನ ವಿಫಲವಾಗಿತ್ತು. ಅಂದು ಮಧ್ಯಾಹ್ನದಿಂದ ಅವರ ಮನೆಯಲ್ಲಿ ಠಿಕಾಣಿ ಹೂಡಿದ್ದ ಪೊಲೀಸರು, ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ರಾತ್ರಿ 7.15ರ ಸುಮಾರಿಗೆ ವಾಪಸಾಗಿದ್ದರು. ಅಕ್ರಮ ಕಲ್ಲು ಗಣಿಗಾರಿಕೆ (Illegal quarrying) ಪ್ರಕರಣದಲ್ಲಿ ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕೇಸ್‌ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಮನೆಯಲ್ಲಿ ಹೈಡ್ರಾಮಾವೇ ನಡೆದಿತ್ತು.

ಈ ಸಂಬಂಧ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮಿತ್ತಿಲದಲ್ಲಿರುವ ಶಾಸಕ ಹರೀಶ್ ಪೂಂಜಾ ಮನೆಗೆ ಬುಧವಾರ (ಮೇ 22) ಮಧ್ಯಾಹ್ನದ ವೇಳೆಗೆ ಪೊಲೀಸರು ಆಗಮಿಸಿದ್ದರು. ಸರ್ಕಲ್ ಇನ್ಸ್‌ಪೆಕ್ಟರ್‌ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ಆಗಮಿಸಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಧಾವಿಸಿ, ಆಕ್ರೋಶವನ್ನು ಹೊರಹಾಕಿದ್ದರು.

Harish Poonja case Belthangady BJP MLA Harish Poonja arrested for taunting police

ಮನೆ ಮುಂದೆ ಹೈಡ್ರಾಮಾ

ಹರೀಶ್ ಪೂಂಜ ಬಂಧನಕ್ಕೆ ಪೊಲೀಸರು ಬಂದಿದ್ದರಿಂದ ಗರ್ಡಡಿ ಹರೀಶ್ ಪೂಂಜಾ ನಿವಾಸಕ್ಕೆ ವಕೀಲರ ತಂಡ ಭೇಟಿ ನೀಡಿತು. ಪೊಲೀಸರ ಜತೆ ವಕೀಲರ ತಂಡದಿಂದ ಮಾತುಕತೆ ನಡೆಸಲಾಯಿತು. ಈ ವೇಳೆ ನಿರಂತರವಾಗಿ ಚರ್ಚೆ ನಡೆದಿದ್ದು, ಪೊಲೀಸ್‌ ಕ್ರಮ ತಪ್ಪು ಎಂದು ವಕೀಲರು ವಾದಿಸಿದರು. ಈ ವೇಳೆ ಮನೆಯ ಹೊರಗಡೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗುತ್ತಿದ್ದರು. ಅಲ್ಲದೆ, ಪೊಲೀಸರು ಹಾಗೂ ಕಾರ್ಯಕರ್ತರ ನಡುವಿನ ಹೈಡ್ರಾಮಾಕ್ಕೆ ಪೂಂಜಾ ನಿವಾಸವು ಸಾಕ್ಷಿಯಾಯಿತು. ಇನ್ನು ಪೂಂಜಾ ನಿವಾಸದತ್ತ ಸಂಸದ ನಳಿನ್ ಕುಮಾರ್ ಕಟೀಲ್, ಬ್ರಿಜೇಶ್ ಚೌಟ ದೌಡಾಯಿಸಿದರು. ರಾಜ್ಯ ಸರ್ಕಾರದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದರು. ಬಂಧನ ಮಾಡಿದ್ದೇ ಆದಲ್ಲಿ ಮಂಗಳೂರು ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದ್ದರು.

ನೋಟಿಸ್ ಇಲ್ಲದೇ ಅರೆಸ್ಟ್ ಮಾಡುವುದು ಅಪರಾಧ

ಈ ವೇಳೆ ಶಾಸಕ ಹರೀಶ್ ಪೂಂಜಾ ಪರ ವಕೀಲ ಶಂಭು ಶಂಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ವಿಚಾರಣೆಗೆ ಕರೆದುಕೊಂಡು ಹೋಗಲು ಬಂದಿದ್ದಾಗಿ ಪೊಲೀಸರು ಹೇಳಿದ್ದಾರೆ. ನಿಯಮ ಪ್ರಕಾರ ಆ ಕ್ರಮ ಇಲ್ಲ. ಪೊಲೀಸರು ಮನೆಗೆ ಒಳಗೆ ಕುಳಿತಿದ್ದಾರೆ. ನೋಟಿಸ್ ಈವರೆಗೆ ಕೊಟ್ಟಿಲ್ಲ. ಶಾಸಕರು ಅವರ ಕೆಲಸ ಮಾಡದ ಹಾಗೆ ಮಾಡಿದ್ದಾರೆ. ಮನೆಯಲ್ಲಿಯೇ ಕೂಡಿ ಹಾಕಿದ ಹಾಗೆ ಮಾಡಿದ್ದಾರೆ. ಒತ್ತಡಕ್ಕೆ ಮಣಿದು ಪೊಲೀಸರು ಇಲ್ಲಿಯೇ ಕುಳಿತಿದ್ದಾರೆ. ನೋಟಿಸ್ ಇಲ್ಲದೆ ಅರೆಸ್ಟ್ ಮಾಡುವುದು ಅಪರಾಧ ಎಂದು ಹೇಳಿದ್ದಾರೆ.

ಯಾವುದೇ ನೋಟಿಸ್ ನೀಡದೆ, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕರೆಯುವಂತಿಲ್ಲ. ಅದು ಕಾನೂನು ಬಾಹಿರವಾಗುತ್ತದೆ. ಅಲ್ಲದೆ, ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿವೆ. ಅದರಲ್ಲಿ ಕೆಲವು ಸೆಕ್ಷನ್ ನಾನ್ ಬೇಲಬಲ್ ಸೆಕ್ಷನ್‌ಗಳಿವೆ. ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶದ ಪ್ರಕಾರ 7 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗುವ ಪ್ರಕರಣಗಳಲ್ಲಿ ಬಂಧನ ಅನಿವಾರ್ಯವಲ್ಲ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಬಂಧನ ಮಾಡಲು ಅವಕಾಶವಿರುತ್ತದೆ. ಆದರೆ, ಎಲ್ಲ ಪ್ರಕರಣಗಳಲ್ಲೂ ಬಂಧನ ಅಗತ್ಯವಿಲ್ಲ. ವಿಚಾರಣೆಗೆ ಕರೆಯಲು ಪೇದೆಯ ಮೂಲಕ ನೋಟಿಸ್ ನೀಡಬಹುದು. ಆದರೆ ಹಿರಿಯ ಅಧಿಕಾರಿಗಳು ಬರುವ ಅಗತ್ಯತೆ ಏನಿದೆ? ಇದು ಶಾಸಕ ಪೂಂಜಾ ವಿರುದ್ಧ ಟಾರ್ಗೆಟ್ ಮಾಡಿ ಬಂಧಿಸುವ ಹುನ್ನಾರ ಆಗಿದೆ. ನೋಟಿಸ್ ನೀಡಲು ಕೇಳಿದ್ದೇವೆ. ಈ ವರೆಗೂ ನೋಟಿಸ್ ನೀಡಿಲ್ಲ ಎಂದು ವಕೀಲ ಶಂಭು ಶಂಕರ್ ಆಪಾದಿಸಿದ್ದರು.

Harish Poonja case Belthangady BJP MLA Harish Poonja arrested for taunting police

ವಿಡಿಯೊ ಸ್ಟೇಟಸ್‌ಗೆ ಹಾಕಿದ್ದ ಪೋಲಿಸ್‌ನನ್ನು ಆಚೆ ಕಳಿಸಿದ್ದ ಶಾಸಕ!

ಈ ವೇಳೆ ಪೊಲೀಸ್ ಠಾಣೆ ನಿಮ್ಮ ಅಪ್ಪಂದ ಎಂದು ಶಾಸಕ ಹರೀಶ್ ಪೂಂಜಾ ಅವಾಜ್‌ ಹಾಕುತ್ತಿದ್ದ ದೃಶ್ಯವನ್ನು ವಿಡಿಯೊ ಮಾಡಿ ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಲಾಗಿದ್ದ ಪೊಲೀಸ್‌ ಸಿಬ್ಬಂದಿ ಆನಂದ್‌ ಅವರು ಶಾಸಕರ ಮನೆಗೆ ಬಂದರು. ಅವರನ್ನು ನೋಡಿ ಕೆರಳಿದ ಶಾಸಕ ಹರೀಶ್‌ ಪೂಂಜಾ, ಆನಂದ್‌ಗೆ ಮನೆಯಿಂದ ಹೊರಗೆ ಹೋಗು ಎಂದು ಸೂಚಿಸಿದ್ದರು. ಅಲ್ಲಿಯೇ ಇದ್ದ ಹಿರಿಯ ಅಧಿಕಾರಿಗಳತ್ತ ತಿರುಗಿ, ಇವನನ್ನು ಹೊರಗೆ ಕಳುಹಿಸಿ, ಜನ ಇದ್ದಾರೆ. ಗಲಾಟೆ ಮಾಡ್ತಾರೆ ಅಂತಾ ಅಧಿಕಾರಿಗಳಿಗೆ ಹೇಳಿದ್ದರು. ಬಳಿಕ ಸೆಕ್ಯುರಿಟಿ ಕೊಟ್ಟು ಅಲ್ಲಿಂದ ಆನಂದ್ ಅವರನ್ನು ಪೊಲೀಸರು ಕರೆದೊಯ್ದಿದ್ದರು.

ಹರೀಶ್ ಪೂಂಜಾಗೆ ನೋಟಿಸ್ ಜಾರಿ

ಶಾಸಕ ಹರೀಶ್ ಪೂಂಜಾ ಅವರಿಗೆ ಇನ್ನೂ ನೋಟಿಸ್‌ ಕೊಟ್ಟಿಲ್ಲ ಎಂದು ಅವರ ಪರ ವಕೀಲರು ಆರೋಪ ಮಾಡಿದ ಬೆನ್ನಲ್ಲೇ ವಿಟ್ಲ ಠಾಣೆಯ ಇನ್ಸ್ಪೆಕ್ಟರ್ ನಾಗರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರು ನೋಟಿಸ್ ಜಾರಿ ಮಾಡಿದ್ದರು. ತನಿಖಾಧಿಕಾರಿಗಳ ಜತೆ ಠಾಣೆಗೆ ಬರಲು ನೋಟಿಸ್‌ನಲ್ಲಿ ಸೂಚಿಸಲಾಗಿತ್ತು. ಹೀಗಾಗಿ ರಾತ್ರಿವರೆಗೂ ಬಂಧನಕ್ಕಾಗಿ ಪೊಲೀಸರು ಕಾದಿದ್ದರು. ಈ ವೇಳೆ ಶಾಸಕರ ಮನೆಗೆ ಹೆಚ್ಚಿನ ಪೊಲೀಸರನ್ನು ಕರೆಸಿಕೊಳ್ಳಲಾಗಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಮುಖಂಡರು ಇನ್ನಷ್ಟು ರೋಷಗೊಂಡರು. ಅಂತಿಮವಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಮೂಲಕ ಸೂಚಿಸಿ ಪೊಲೀಸರು ಅಲ್ಲಿಂದ ತೆರಳಿದ್ದರು.

ಏನಿದು ಕೇಸ್‌?

ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲು ಕ್ವಾರಿ ಮೇಲೆ ತಹಸೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಎಂಬುವವರನ್ನು ಬಂಧನ ಮಾಡಲಾಗಿತ್ತು. ಇದನ್ನು ಖಂಡಿಸಿ ರಾತ್ರೋರಾತ್ರಿ ಪೊಲೀಸ್ ಠಾಣೆ ಎದುರು ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ, ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

ಪ್ರತಿಭಟನೆ ವೇಳೆ ‘ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾʼ ಅಂತ ಬೆಳ್ತಂಗಡಿ ಪಿಎಸ್‌ಐ ಮುರುಳಿಧರ್ ನಾಯ್ಕ್‌ಗೆ ಶಾಸಕ ಹರೀಶ್‌ ಪೂಂಜಾ ಧಮ್ಕಿ ಹಾಕಿದ್ದರು. ಮನೆಯಲ್ಲಿದ್ದವರನ್ನು ಯಾವುದೇ ದಾಖಲೆಗಳಿಲ್ಲದೆ ಹೆಂಗಸರು, ಮಕ್ಕಳೆದುರು ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಹೀಗಾಗಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

Continue Reading

ಕ್ರೀಡೆ

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

Hardik Pandya: ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

VISTARANEWS.COM


on

Hardik Pandya
Koo

ಮುಂಬಯಿ: ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿದೆ. ಆದರೆ, ಚಾಲಾಕಿ ಪಾಂಡ್ಯ ಅವರ ಬುದ್ಧಿವಂತಿಕೆಯಿಂದ ಪತ್ನಿಗೆ ನಯಾ ಪೈಸೆಯೂ ಸಿಗುವುದು ಅನುಮಾನ ಎನ್ನುವಂತಿದೆ.

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಅವರು ಮುಂಬೈಯಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದರೂ ಕೂಡ ತಮ್ಮ ಹೆಸರಿನಲ್ಲಿ ಹೆಚ್ಚು ಆಸ್ತಿಯನ್ನು ಮಾಡಿಲ್ಲ. ಬಹುತೇಕ ಆಸ್ತಿಯನ್ನು ತನ್ನ ಪೋಷಕರ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಪಾಂಡ್ಯ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. ಈ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದ ಪಾಂಡ್ಯ, “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ಸಹೋದರ, ತಂದೆ ಮತ್ತು ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೊ ಈಗ ವೈರಲ್​ ಆಗಿದ್ದು ಪಾಂಡ್ಯಗೆ ಜೀವನದಲ್ಲಿ ಮುದೊಂದು ದಿನ ಪ್ರೇಯಸಿಯಿಂದ ದೋಖಾ ಎದುರಾಗುವ ಸುಳಿವು ಮೊದಲೇ ತಿಳಿದಿತ್ತಾ? ಎನ್ನುವ ನಿಗೂಡ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಹಾರ್ದಿಕ್​ ಪಾಂಡ್ಯ ಅವರ ಅಂದಿನ ಸಂದರ್ಶನ ಕಂಡ ನೆಟ್ಟಿಗರು ಇದೀಗ ವಿಭಿನ್ನ ಕಮೆಂಟ್​ ಮಾಡಿದ್ದಾರೆ. ನೀವು ನಿಜವಾಗಿಯೂ ಕೂಡ ಗುಜರಾತಿ ಎನ್ನುವುದು ಸಾಬೀತುಪಡಿಸಿದ್ದೀರಿ ಎಂದಿದ್ದಾರೆ. ನೆಟ್ಟಿಗರು ಈ ಮಾತು ಹೇಳಲು ಕೂಡ ಒಂದು ಕಾರಣವಿದೆ. ಗುಜರಾತಿಗಳು ಪಕ್ಕಾ ಲೆಕ್ಕಾಚಾರದ ಜೀವನ ನಡೆಸುವುದುರಲ್ಲಿ ಎತ್ತಿದ ಕೈ ಇದೇ ಕಾರಣದಿಂದ ಈ ಕಮೆಂಟ್​ ಮಾಡಿದ್ದಾರೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

ಮಾರ್ಚ್ 4 ರಂದು ಪತ್ನಿ ನತಾಶಾ ಅವರ ಹುಟ್ಟುಹಬ್ಬವಿತ್ತು. ಆದರೆ, ಪತ್ನಿಯ ಹುಟ್ಟುಹಬ್ಬಕ್ಕೆ ಹಾರ್ದಿಕ್ ಯಾವುದೇ ಶುಭ ಹಾರೈಕೆಯ ಪೋಸ್ಟ್ ಮಾಡಿಲ್ಲ. ಕೆಲ ದಿನಗಳ ಹಿಂದೆ ನತಾಶಾ ಅವರು ಸಿಂಗಲ್​ ಫೋಟೋವನ್ನು ಮತ್ತು ಮಗನ ಜತೆಗಿನ ಫೋಟೊವನ್ನು ಮಾತ್ರ ಪೋಸ್ಟ್​ ಮಾಡಿದ್ದರು. ಇದೆನೆಲ್ಲ ನೋಡುವಾಗ ಈ ಜೋಡಿ ಸದ್ಯದಲ್ಲೇ ದೂರವಾಗು ಸೂಚನೆಯೊಂದು ಲಭಿಸಿದೆ. ಹಾರ್ದಿಕ್ ಜತೆಗಿರುವ ಇತ್ತೀಚಿನ ಎಲ್ಲ ಪೋಸ್ಟ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಲಾಗಿದೆ. 

ಐಪಿಎಲ್​ ಪಂದ್ಯದಲ್ಲಿಯೂ ನತಾಶಾ ಸ್ಟೇಡಿಯಂಗೆ ಬಂದು ಗಂಡನಿಗೆ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಮುಂಬೈ ತಂಡವನ್ನು ಮುನ್ನಡೆಸಿ ವೇಳೆ ಒಮ್ಮೆಯೂ ಕೂಡ ನತಾಶಾ ಪಂದ್ಯ ನೋಡಲು ಸ್ಟೇಡಿಯಂಗೆ ಬಂದಿರಲಿಲ್ಲ. ಅಲ್ಲದೆ ನತಾಶಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಹೆಸರನ್ನು ಕೂಡ ಬದಲಿಸಿದ್ದಾರೆ ಹೀಗಾಗಿ ಈ ಜೋಡಿ ಬೇರ್ಪಡಲಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಪಾಂಡ್ಯ ಆಗಲಿ ನತಾಶ ಇದುವರೆಗೆ ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

Continue Reading

ಕರ್ನಾಟಕ

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Lockup Death: ಮೊದಲಿಗೆ ಮಗ ಲೋ ಬಿಪಿಯಿಂದ ಮೃತಪಟ್ಟಿದ್ದಾನೆ ಎಂದು ಹೇಳಿದ್ದ ಮೃತ ಯುವಕ ಆದಿಲ್‌ ತಂದೆ, ಇದೀಗ ಲಾಕಪ್‌ ಡೆತ್‌ ಆಗಿದೆ ಎಂದು ಹೇಳಿದ್ದಾರೆ. ಅದೇ ರೀತಿ ಆದಿಲ್‌ ಪತ್ನಿ ಕೂಡ, ತನ್ನ ಪತಿಯನ್ನು ಪೊಲೀಸರೇ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Koo

ದಾವಣಗೆರೆ: ಆದಿಲ್ ಲಾಕಪ್ ಡೆತ್ ಪ್ರಕರಣಕ್ಕೆ (Lockup Death) ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ವಿಚಾರಣೆ ವೇಳೆ ಪೊಲೀಸರ ಹಲ್ಲೆಯಿಂದ ಯುವಕ ಮೃತಪಟ್ಟಿದ್ದ ಎಂಬ ಆರೋಪಗಳು ಕೇಳಿಬಂದಿದ್ದರಿಂದ ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು ಆಗಿತ್ತು. ಆದರೆ, ಮೊದಲಿಗೆ ಮಗನದ್ದು ಲಾಕಪ್‌ ಡೆತ್‌ ಅಲ್ಲ, ಲೋ ಬಿಪಿಯಿಂದ ಮೃತಪಟ್ಟಿದ್ದಾನೆ ಎಂದು ಹೇಳಿದ್ದ ಮೃತ ಯುವಕ ಆದಿಲ್‌ ತಂದೆ ಖಲೀಮುಲ್ಲಾ, ಇದೀಗ ಮತ್ತೆ ಉಲ್ಟಾ ಹೊಡೆದಿದ್ದಾರೆ.

ಆದಿಲ್ ಸಾವು ಪ್ರಕರಣದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ್ದ ಖಲೀಮುಲ್ಲಾ ಅವರು, ಮೊದಲಿಗೆ ಮಗ ಕಡಿಮೆ ರಕ್ತದೊತ್ತಡದಿಂದ (Low Blood Pressure) ಮೃತಪಟ್ಟಿದ್ದಾನೆ. ಅವನಿಗೆ ಯಾವುದೇ ರೀತಿಯಾದ ಮೂರ್ಛೆ ರೋಗ ಇರಲಿಲ್ಲ. ಆತನ ಸಾವಿನ ಬಗ್ಗೆ ನಮಗೆ ಯಾವುದೇ ರೀತಿ ಅನುಮಾನ ಇಲ್ಲ. ನನ್ನ ಮಗ ಕಾರ್ಪೇಂಟರ್ ಕೆಲಸ ಮಾಡಿಕೊಂಡಿದ್ದ. ಯಾವುದೇ ಮಟ್ಕಾ ದಂಧೆ ಮಾಡುತ್ತಿರಲಿಲ್ಲ. ನೆನ್ನೆ ಮಗ ಸಾವನ್ನಪ್ಪಿದ್ದಕ್ಕೆ ನ್ಯಾಯ ಕೇಳಲು ಪೊಲೀಸ್‌ ಠಾಣೆಗೆ ಹೋಗಿದ್ದೆವು. ಆದರೆ, ಯಾರು ಕಲ್ಲು ಹೊಡೆದಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದ್ದರು.

ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಈ ವಯಸ್ಸಲ್ಲಿ ನನಗೆ ದುಡಿಯೋಕೆ ಆಗುತ್ತಾ? ಸರ್ಕಾರ ನನಗೆ ಪರಿಹಾರ ಕೊಡಬೇಕು ಎಂದ ಮೃತ ಆದಿಲ್ ತಂದೆ ಖಲೀಮುಲ್ಲಾ ಮನವಿ ಮಾಡಿದ್ದರು. ಆದರೆ, ಇದೀಗ ತಾವು ಗಾಬರಿಯಲ್ಲಿ ಬೆಳಗ್ಗೆ ಏನೇನೋ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ನಾನು ಗಾಬರಿಗೊಂಡು ಆ ರೀತಿ ಹೇಳಿದ್ದೆ, ಉಲ್ಟಾ ಹೊಡೆದ ತಂದೆ

ಮೊದಲಿಗೆ ಮಗನದ್ದು ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಆದಿಲ್‌ ತಂದೆ ಖಲೀಮುಲ್ಲಾ, ಮತ್ತೆ ಉಲ್ಟಾ ಹೊಡೆದಿದ್ದಾರೆ. ಇದೀಗ ನನ್ನ ಮಗ ಲೋ ಬಿಪಿಯಿಂದ ಸಾವನ್ನಪ್ಪಿಲ್ಲ, ನಾನು ಗಾಬರಿಗೊಂಡು ಆ ರೀತಿ ಬೆಳಗ್ಗೆ ಹೇಳಿದ್ದೆ. ನನ್ನ ಮಗ ಲಾಕಪ್ ಡೆತ್‌ನಿಂದ ಸಾವನ್ನಪ್ಪಿರುವ ಬಗ್ಗೆ ಅನುಮಾನ ಇದೆ. ನನ್ನ ಬಿಪಿಯನ್ನು ನನ್ನ ಮಗನಿಗೆ ಇದೆ ಎಂದು ಹೇಳಿದೆ. ಮಗನ ಸಾವಿನಿಂದ ದಿಗ್ಭ್ರಮೆ ಆಗಿದೆ. ನನ್ನ ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿದರು.

ನನ್ನ ಮಗನಿಗೆ ಮಟ್ಕಾ ದಂಧೆ ಜತೆ ಸಂಬಂಧ ಇಲ್ಲ, ಬಡಗಿ ಕೆಲಸ ಮಾಡುತ್ತಿದ್ದ. ನನ್ನ ಸೊಸೆ ಗಾಬರಿಯಿಂದ ಮಟ್ಕಾ ಆಡುತ್ತಿದ್ದ ಎಂದು ಹೇಳಿದ್ದಾಳೆ ಎಂದು ತಂದೆ ಹೇಳಿದ್ದಾರೆ.

ಇದನ್ನೂ ಓದಿ | Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ನನ್ನ ಗಂಡನನ್ನು ಪೊಲೀಸರೇ ಹೊಡೆದು ಕೊಂದಿದ್ದಾರೆ: ಪತ್ನಿ ಆಕ್ರೋಶ

ಮೃತ ಆದಿಲ್ ಪತ್ನಿ ಹೀನಾಬಾನು ಪೊಲೀಸರ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ನನ್ನ ಗಂಡ ಮಟ್ಕಾ ಆಡಿಸುತ್ತಿದ್ದದ್ದು ಸತ್ಯ. ಆದರೆ, ಪೊಲೀಸರು ಪ್ರತಿ ತಿಂಗಳು ಕಮಿಷನ್ ವಸೂಲು ಮಾಡುತ್ತಿದ್ದರು. ಒಂದು ತಿಂಗಳು ಕೊಡದೆ ಇದಿದ್ದಕ್ಕೆ ಸಿವಿಲ್ ಡ್ರೆಸ್‌ನಲ್ಲಿ ಬಂದು ಪೊಲೀಸರು ಕರೆದುಕೊಂಡು ಹೋದರು. ನೆನ್ನೆ ಸಂಜೆ ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀರಾ ಎಂದರೆ ಹೇಳಲಿಲ್ಲ. ನನ್ನ ಗಂಡನನ್ನು ಪೊಲೀಸರೇ ಹೊಡೆದಿದ್ದಾರೆ. ನನ್ನ ಗಂಡನ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದ್ದಾರೆ.

ಪೊಲೀಸರಿಂದ ನನ್ನ ಗಂಡ ಸಾಕಷ್ಟು ಕಿರುಕುಳ ಅನುಭವಿಸಿದ್ದಾನೆ. ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಬೇಕಾಬಿಟ್ಟಿ ಹೊಡೆದಿದ್ದಾರೆ. ಹೊಡೆದಾದ ಮೇಲೆ ಮೂರ್ಛೆ ರೋಗ ಎಂದು ಸುಳ್ಳು ಹೇಳಿದ್ದಾರೆ. ಈಗ ನನ್ನ ಮಕ್ಕಳು, ನನಗೆ ಯಾರು ಗತಿ? ಪೊಲೀಸರು ನನ್ನ ಗಂಡನ ಬದುಕಿಸಿ ಕೊಡ್ತಾರಾ? ಇಡೀ ಮನೆ ಹುಡುಕಿದರೂ ಒಂದು ಗುಳಿಗೆ ಸಿಗಲ್ಲ. ನನ್ನ ಗಂಡನಿಗೆ ಯಾವುದೇ ರೋಗ ಇರಲಿಲ್ಲ ಎಂದು ಪತ್ನಿ ಹೀನಾಬಾನು ಹೇಳಿದ್ದಾರೆ.

Continue Reading

ಕ್ರೀಡೆ

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

KKR vs SRH Final 2024: ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

VISTARANEWS.COM


on

KKR vs SRH Final 2024
Koo

ಚೆನ್ನೈ: ಈ ಬಾರಿಯ ಐಪಿಎಲ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ತಂಡಗಳು ಮತ್ತೊಮ್ಮೆ ಸೆಣಸಾಟ ನಡೆಸಲು ಸಜ್ಜಾಗಿದೆ. ನಾಳೆ (ಭಾನುವಾರ) ನಡೆಯುವ ಫೈನಲ್​ ಪಂದ್ಯದಲ್ಲಿ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಲಕ್ಕಿ ಕ್ಯಾಪ್ಟನ್​ ಕಮಿನ್ಸ್​


ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಇದನ್ನೂ ಓದಿ IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಲೀಗ್​ ಹಂತದ ಪಂದ್ಯದಲ್ಲಿ ವಿಫಲರಾಗಿದ್ದರೂ ಕೂಡ ಮಹತ್ವದ ಕ್ವಾಲಿಫೈಯರ್​ ಪಂದ್ಯದಲ್ಲಿ ಘಾತಕ ದಾಳಿ ನಡೆಸಿ ಮಿಂಚಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading
Advertisement
CM Siddaramaiah defends FIR against Harish Poonja
ರಾಜಕೀಯ2 mins ago

Harish Poonja: ಪೊಲೀಸರಿಗೆ ಧಮ್ಕಿ ಕೇಸ್‌; ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಆರೋಪ ಸುಳ್ಳಾ: FIR ಸಮರ್ಥಿಸಿಕೊಂಡ ಸಿಎಂ

Saree Fashion
ಫ್ಯಾಷನ್2 hours ago

Saree Fashion: ಮಹಿಳೆಯರ ಮನಗೆದ್ದ ಕಟ್‌ ವರ್ಕ್ ಬಾರ್ಡರ್‌ ಪಾರ್ಟಿ ಸೀರೆ

Hardik Pandya
ಕ್ರೀಡೆ2 hours ago

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಕರ್ನಾಟಕ2 hours ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್2 hours ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ2 hours ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್2 hours ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ3 hours ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ3 hours ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ3 hours ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌