Vijay Deverakonda: ಬಿರುಗಾಳಿ ಎಬ್ಬಿಸಿದ ದೇವರಕೊಂಡ ಷೇರ್ ಮಾಡಿದ ಫೋಟೋ! ಇದು ಎಂಗೆಜ್ಮೆಂಟಾ, ಹೊಸ ಸಿನ್ಮಾನಾ? - Vistara News

South Cinema

Vijay Deverakonda: ಬಿರುಗಾಳಿ ಎಬ್ಬಿಸಿದ ದೇವರಕೊಂಡ ಷೇರ್ ಮಾಡಿದ ಫೋಟೋ! ಇದು ಎಂಗೆಜ್ಮೆಂಟಾ, ಹೊಸ ಸಿನ್ಮಾನಾ?

Vijay Deverakonda: ಟಾಲಿವುಡ್ ನಟ ವಿಜಯ್ ದೇವರಕೊಂಡು ಅವರು ಷೇರ್ ಮಾಡಿದ ಫೋಟೋ ಭಾರೀ ಸುದ್ದಿಗೆ ಗ್ರಾಸವಾಗಿದೆ.

VISTARANEWS.COM


on

Vijay Deverakonda Shares cryptic picture on social Media
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು, ಕರ್ನಾಟಕ: ತೆಲುಗು ನಟ (Telugu Actor) ವಿಜಯ್ ದೇವರಕೊಂಡ (Vijay Deverakonda) ಅವರು ಹಂಚಿಕೊಂಡ ಚಿತ್ರವೊಂದು (Cryptic Photo) ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಸಮಂತಾ (Actress Samantha) ಜತೆ ನಟಿಸಿರುವ ಖುಷಿ (Khushi Movie) ಚಿತ್ರದ ಬಿಡುಗಡೆ ಸಂದರ್ಭದಲ್ಲೇ ಪೋಸ್ಟ್ ಮಾಡಲಾಗಿರುವ ‘ಈ ಫೋಟೋ’ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ನಟ ದೇವರಕೊಂಡ ಅವರು ನಿಶ್ಚಿತಾರ್ಥ ಏನಾದ್ರೂ ಮಾಡಿಕೊಂಡ್ರಾ ಎಂದು ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ಫೋಟೋದಲ್ಲಿರುವ ಕೈ ರಶ್ಮಿಕಾ ಮಂದಣ್ಣ (Rasmika Mandanna) ಅವರದ್ದಾ ಅಥವಾ ಸಮಂತಾ ಅವರದ್ದಾ ಎಂಬ ಡಿಸ್ಕಷನ್ ಕೂಡ ಜೋರಾಗಿದೆ.

ವಿಜಯ್ ದೇವರಕೊಂಡ ಹಾಗೂ ನಟಿ ಸಮಂತಾ ಅಭಿನಯದ ಖುಷಿ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದ ಪ್ರಮೋಷನ್ ಕೆಲಸ ಕೂಡ ಜೋರಾಗಿದೆ. ಈ ಹಂತದಲ್ಲಿ ವಿಜಯ್ ದೇವಕೊಂಡ ಅವರು ಸರ್ಪ್ರೈಸ್​ ಸುದ್ದಿ ಕೊಡುವ ಸಾಧ್ಯತೆಗಳು ಇಲ್ಲದಿಲ್ಲ ಎನ್ನಲಾಗುತ್ತಿದೆ. ಈಗ ಷೇರ್ ಮಾಡಲಾಗಿರುವ ಫೋಟೋ ಸಮಂತಾ ಮತ್ತು ದೇವರಕೊಂಡ ಫೋಟೋ ಎನ್ನಲಾಗ್ತಿದೆ. ರಶ್ಮಿಕಾ ಮಂದಣ್ಣ ಜೊತೆಗೆ ಹೊಸ ಸಿನಿಮಾ ಅಂತಾನೂ ನಿರೀಕ್ಷಿಸಲಾಗ್ತಿದೆ.

ಈ ಸುದ್ದಿಯನ್ನೂ ಓದಿ: Kushi Trailer: ಸಮಂತಾ- ವಿಜಯ್ ದೇವರಕೊಂಡ ಅಭಿನಯದ ʻಖುಷಿʼ ಟ್ರೈಲರ್‌ ಔಟ್‌!

ನೆಟ್ಟಿಗರು ವಿಜಯ ದೇವರಕೊಂಡ ಅವರು ತಮ್ಮ ಮನದರಸಿನ ಪರಿಚಯ ಮಾಡ್ತಾರಾ ಎಂದು ಕೇಳುತ್ತಿದ್ದಾರೆ. ಅಥವಾ ಯಾರಿಗೂ ಗೊತ್ತಿಲ್ಲದೇ ಗುಪ್ತವಾಗಿ ದೇವರಕೊಂಡ ಎಂಗೇಜ್ ಆಗಿದ್ದಾರಾ ಎಂದು ಕೇಳಲಾಗುತ್ತಿದೆ. ವಿಜಯ್ ದೇವಕೊಂಡ ಅವರ ಇನ್‌ಸ್ಟಾಗ್ರಾಮ್ ಸ್ಟೇಟಸ್ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಪೋಸ್ಟ್‌ನಲಲಿ ಸಂಥಿಂಗ್ ಸ್ಪೆಷಲ್ ಎಂದು ಬರೆದುಕೊಂಡಿದ್ದಾರೆ. ವಿಜಯ ದೇವರಕೊಂಡ ಅವರು ಯಾರ ಕೈ ಹಿಡಿದುಕೊಂಡಿದ್ದಾರೆ ಎನ್ನುವುದೇ ಈ ಮೋಸ್ಟ್ ಟಾಕಿಂಗ್ ಪಾಯಿಂಟ್ ಆಗಿದೆ. ಇದು ಜೀವನ ಸಂಗಾತಿಯನ್ನು ಪರಿಚಯಿಸುವ ಫೋಟೋನಾ ಅಥವಾ ಹೊಸ ಸಿನಿಮಾದ ಪ್ರಮೋಷನ್ ಎಂಬುದನ್ನು ವಿಜಯ್ ದೇವರಕೊಂಡ ಅವರೇ ಹೇಳಬೇಕು. ಅಲ್ಲಿಯವರೆಗೆ ಕಾಯಬೇಕಷ್ಟೇ.

ಸಿನಿಮಾದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kalki 2898 AD: ‘ಪಿಕೆ’, ʻಗದರ್‌ʼ ಸಿನಿಮಾಗಳ ದಾಖಲೆ ಮುರಿದ ʻಕಲ್ಕಿ 2898 ಎಡಿʼ!

Kalki 2898 AD: ಪ್ರಭಾಸ್ ಅಭಿನಯದ ಈ ಚಿತ್ರವು ಈಗ ಆಮೀರ್ ಖಾನ್ ಅವರ ‘ಪಿಕೆ’ ಮತ್ತು ಸನ್ನಿ ಡಿಯೋಲ್ ಅವರ ಬ್ಲಾಕ್ಬಸ್ಟರ್, ‘ಗದರ್ 2’ ಸಿನಿಮಾ ಕಲೆಕ್ಷನ್‌ನ್ನು ಮೀರಿಸಿದೆ. 10 ನೇ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾವಾಗಿ ಹೊರಹೊಮ್ಮಿದೆ.

VISTARANEWS.COM


on

Kalki 2898 AD box office thrashes 'PK' record
Koo

ಬೆಂಗಳೂರು: ʻಕಲ್ಕಿ 2898 AD‘ ತನ್ನ ಎರಡನೇ ವಾರಾಂತ್ಯದಲ್ಲಿ ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಉತ್ತಮವಾಗಿ ಕಲೆಕ್ಷನ್‌ ಮಾಡಿದೆ. ಎರಡನೇ ಶುಕ್ರವಾರ-ಭಾನುವಾರದ ನಡುವೆ ಸುಮಾರು 230 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಕೇವಲ 11 ದಿನಕ್ಕೆ ಈ ಸಿನಿಮಾ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿದೆ. ಫಿಲ್ಮ್ ಟ್ರೇಡ್ ಪೋರ್ಟಲ್ ಸ್ಯಾಕ್‌ನಿಲ್ಕ್ ಪ್ರಕಾರ, ಚಿತ್ರವು ತನ್ನ ಎರಡನೇ ಭಾನುವಾರದಂದು 500 ಕೋಟಿ ಮೈಲಿಗಲ್ಲನ್ನು ದಾಟಿದೆ.

ಪ್ರಭಾಸ್ ಅಭಿನಯದ ಈ ಚಿತ್ರವು ಈಗ ಆಮೀರ್ ಖಾನ್ ಅವರ ‘ಪಿಕೆ’ ಮತ್ತು ಸನ್ನಿ ಡಿಯೋಲ್ ಅವರ ಬ್ಲಾಕ್ಬಸ್ಟರ್, ‘ಗದರ್ 2’ ಸಿನಿಮಾ ಕಲೆಕ್ಷನ್‌ನ್ನು ಮೀರಿಸಿದೆ. 10 ನೇ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾವಾಗಿ ಹೊರಹೊಮ್ಮಿದೆ.

  • ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಪಟ್ಟಿ ಇದು.
  • ದಂಗಲ್ (2016): 2070.3 ಕೋಟಿ ರೂ
  • ಬಾಹುಬಲಿ 2 (2017): 1788.06 ಕೋಟಿ ರೂ
  • RRR (2022): 1230 ಕೋಟಿ ರೂ
  • ಕೆಜಿಎಫ್ 2 (2022): 1215 ಕೋಟಿ ರೂ
  • ಜವಾನ್ (2023): 1160 ಕೋಟಿ ರೂ
  • ಪಠಾಣ್ (2023): 1055 ಕೋಟಿ ರೂ
  • ಬಜರಂಗಿ ಭಾಯಿಜಾನ್ (2015): 922.03 ಕೋಟಿ ರೂ
  • ಅನಿಮಲ್‌ (2023): 915 ಕೋಟಿ ರೂ
  • ಸೀಕ್ರೆಟ್ ಸೂಪರ್‌ಸ್ಟಾರ್ (2017): 912.75 ಕೋಟಿ ರೂ
  • ಕಲ್ಕಿ 2898 AD (2024): ರೂ 832.2 ಕೋಟಿ
  • ಪಿಕೆ (2014): 792 ಕೋಟಿ ರೂ
  • 2.0 (2018): ರೂ 744.78 ಕೋಟಿ
  • ಗದರ್ 2 (2023): 686 ಕೋಟಿ ರೂ

ಕಲ್ಕಿ 2898 AD ತನ್ನ ಮೊದಲ ವಾರದಲ್ಲಿ ಒಟ್ಟು ರೂ 414.85 ಕೋಟಿ ಗಳಿಸಿತು. ಕಲ್ಕಿ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

ತೆಲುಗು ಪ್ರದರ್ಶನಗಳಲ್ಲಿ 242.85 ಕೋಟಿ ರೂಪಾಯಿಗಳನ್ನು ಮತ್ತು ಹಿಂದಿ ಪ್ರದರ್ಶನಗಳಲ್ಲಿ 211.9 ಕೋಟಿ ರೂಪಾಯಿಗಳನ್ನು ಗಳಿಸಿದೆ. ಚಿತ್ರದ ತಮಿಳು ಶೋಗಳು 30.1 ಕೋಟಿ, ಮಲಯಾಳಂ ಶೋ 18.2 ಕೋಟಿ ಮತ್ತು ಕನ್ನಡ ಪ್ರದರ್ಶನಗಳು ರೂ 3.95 ಕೋಟಿ ರೂ. ಆಗಿದೆ.

ಇದನ್ನೂ ಓದಿ: Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

Continue Reading

ಟಾಲಿವುಡ್

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

Kalki 2898 AD:  ಕಲ್ಕಿ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

VISTARANEWS.COM


on

Kalki 2898 AD box office collection weekend 2
Koo

ಬೆಂಗಳೂರು: ‘ಕಲ್ಕಿ 2898 ಎಡಿ’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಕೇವಲ 11 ದಿನಕ್ಕೆ ಈ ಸಿನಿಮಾ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿದೆ. ಫಿಲ್ಮ್ ಟ್ರೇಡ್ ಪೋರ್ಟಲ್ ಸ್ಯಾಕ್‌ನಿಲ್ಕ್ ಪ್ರಕಾರ, ಚಿತ್ರವು ತನ್ನ ಎರಡನೇ ಭಾನುವಾರದಂದು 500 ಕೋಟಿ ಮೈಲಿಗಲ್ಲನ್ನು ದಾಟಿದೆ.

ಕಲ್ಕಿ 2898 AD ತನ್ನ ಮೊದಲ ವಾರದಲ್ಲಿ ಒಟ್ಟು ರೂ 414.85 ಕೋಟಿ ಗಳಿಸಿತು. ಕಲ್ಕಿ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

ತೆಲುಗು ಪ್ರದರ್ಶನಗಳಲ್ಲಿ 242.85 ಕೋಟಿ ರೂಪಾಯಿಗಳನ್ನು ಮತ್ತು ಹಿಂದಿ ಪ್ರದರ್ಶನಗಳಲ್ಲಿ 211.9 ಕೋಟಿ ರೂಪಾಯಿಗಳನ್ನು ಗಳಿಸಿದೆ. ಚಿತ್ರದ ತಮಿಳು ಶೋಗಳು 30.1 ಕೋಟಿ, ಮಲಯಾಳಂ ಶೋ 18.2 ಕೋಟಿ ಮತ್ತು ಕನ್ನಡ ಪ್ರದರ್ಶನಗಳು ರೂ 3.95 ಕೋಟಿ ರೂ. ಆಗಿದೆ.

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

‘ಬಾಹುಬಲಿ’ಯಿಂದ ‘ಸಲಾರ್’, ‘ಕಲ್ಕಿ 2898 AD’ ವರೆಗೆ ಪ್ರಭಾಸ್ ತಮ್ಮ ಸ್ಟಾರ್ ಪವರ್‌ಗೆ ಸಾಟಿಯಿಲ್ಲ ಎಂಬುದನ್ನು ಸಾಬೀತುಪಡಿಸುತ್ತಲೇ ಬಂದಿದ್ದಾರೆ. ಸಮಕಾಲೀನ ಸಿನಿಮಾರಂಗದಲ್ಲಿ ಅತ್ಯಂತ ಅಪ್ರತಿಮ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರಾಗಿ ಹೊರಹೊಮ್ಮುತ್ತಿದ್ದಾರೆ ಪ್ರಭಾಸ್.‌ ಅಂದಹಾಗೆ ನಾಗ್ ಅಶ್ವಿನ್ ನಿರ್ದೇಶಿಸಿದ, ‘ಕಲ್ಕಿ 2898 AD’ 2898 AD ವರ್ಷದಲ್ಲಿ ಹಿಂದೂಗಳ ಮಹಾಕಾವ್ಯ ಮಹಾಭಾರತದಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗಿದೆ. ಈ ವೈಜ್ಞಾನಿಕ ಆಕ್ಷನ್ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಂತಹ ಲೆಜಂಡರಿ ಕಲಾವಿದರಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಸೇರಿ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

Continue Reading

ಸ್ಯಾಂಡಲ್ ವುಡ್

Chandan Shetty: ಚಂದನ್‌ ಶೆಟ್ಟಿಗೆ ಒಳ್ಳೆ ಹುಡುಗಿ ಜತೆ ಮದುವೆಯಾಗುವ ಕನಸು ಏನೋ ಇತ್ತಂತೆ ಆದರೆ….

Chandan Shetty ಚಂದನ್‌ ಸಂದರ್ಶನವೊಂದರಲ್ಲಿ ಈ ಮುಂಚೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಮಾಧ್ಯಮದ ಸಂದರ್ಶನವೊಂದರಲ್ಲಿ ʻʻಒಳ್ಳೆ, ಚೆನ್ನಾಗಿರುವ ಹುಡುಗಿ ಜತೆ ಮದುವೆಯಾಗುವ ಕನಸು ನನಗೂ ಇತ್ತು. ಅದೇ ರೀತಿ ಹುಡುಗಿ ಸಿಕ್ಕಿದ್ದರು. ಆದರೆ ಕಾರಣಾಂತರದಿಂದ ಹೀಗಾಯ್ತುʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Chandan Shetty talk about future decision
Koo

ಬೆಂಗಳೂರು: : ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಚಂದನ್‌ ಶೆಟ್ಟಿ ಹಲವು ಸಂದರ್ಶನಗಳಲ್ಲಿ ಹಾಗೇ ಸಿನಿಮಾ ಪ್ರಮೋಷನ್‌ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಚಂದನ್‌ ಸಂದರ್ಶನವೊಂದರಲ್ಲಿ ಈ ಮುಂಚೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಮಾಧ್ಯಮದ ಸಂದರ್ಶನವೊಂದರಲ್ಲಿ ʻʻಒಳ್ಳೆ, ಚೆನ್ನಾಗಿರುವ ಹುಡುಗಿ ಜತೆ ಮದುವೆಯಾಗುವ ಕನಸು ನನಗೂ ಇತ್ತು. ಅದೇ ರೀತಿ ಹುಡುಗಿ ಸಿಕ್ಕಿದ್ದರು. ಆದರೆ ಕಾರಣಾಂತರದಿಂದ ಹೀಗಾಯ್ತುʼʼಎಂದು ಹೇಳಿಕೊಂಡಿದ್ದಾರೆ.

ಚಂದನ್‌ ಶೆಟ್ಟಿ ಮಾತನಾಡಿ ʻʻನನಗೂ ಒಳ್ಳೆಯ ಹುಡುಗಿ ಜತೆ ಮದುವೆಯಾಗುವ ಕನಸು ಇತ್ತು. ಆದರೆ ಹೀಗಾಯ್ತು. ಜೀವನ ಅಂದರೆ ಹಾಗೇ ಸಮುದ್ರ ತರಹ. ಕೆಲವು ಸಲ ಚಿಕ್ಕ ಅಲೆ ಬರುತ್ತದೆ, ಕೆಲವು ಸಹ ದೊಡ್ಡ ಅಲೆ ಬರುತ್ತದೆ, ಕೆಲವು ಸಲ ಸುನಾಮಿ ಬರುತ್ತದೆ. ಯಾವಾಗ, ಹೇಗೆ ಆಗುತ್ತದೆ ಗೊತ್ತಾಗಲ್ಲ. ಎಲ್ಲರ ಜೀವನದಲ್ಲಿ ನೋವು ಸರ್ವೇ ಸಾಮಾನ್ಯ. . ನನ್ನ ಜೀವನದಲ್ಲಿ ಇದು ಕೆಟ್ಟ ನೆನಪಾಗಿದೆ ಅಷ್ಟೇ. ಲವ್ ಮಾಡುವ ಸಂದರ್ಭದಲ್ಲಿ ಇಬ್ಬರೂ ಕೂಡ ಬೇರೆ ಬೇರೆಯಾಗಿಯೇ ಇರುತ್ತಾರೆ. ಆಗ ಪ್ರೀತಿಯಲ್ಲಿ ಬಿದ್ದಿರುತ್ತಾರೆ ಹೊರತು ಮದುವೆಯಾಗಿರುವುದಿಲ್ಲ. ಆದರೆ ಲವ್ ಅನ್ನೋದೆ ಬೇರೆ. ಮದುವೆಯೇ ಬೇರೆ. ಮದುವೆಯಾಗಿ ಒಂದೇ ರೂಂನಲ್ಲಿ ಸಂಸಾರ ಮಾಡುತ್ತಾರಲ್ವಾ ಅದೇ ಬೇರೆ. ಅದು ಮದುವೆಯಾದವರಿಗೆ ಮಾತ್ರ ಗೊತ್ತಿರುತ್ತೆʼʼಎಂದರು.

ಇನ್ನು ಮತ್ತೆ ಇಬ್ಬರೂ ಒಂದಾಗ್ತಾರ ಎಂಬ ಪ್ರಶ್ನೆಗೆ ಚಂದನ್‌ ಉತ್ತರಿಸಿ ʻʻನಮ್ಮ ಮನಸ್ಸಿನಲ್ಲಿ ಆದ ಗೊಂದಲಗಳು ಬೇರೆಯವರಿಗೆ ಅರ್ಥವಾಗುವುದಿಲ್ಲ. ಆದರೆ ಎಲ್ಲರೂ ಒಳ್ಳೆಯ ಮನಸ್ಸಿನಿಂದಲೇ ಹೇಳುತ್ತಾರೆ. ಬಿಡಿ ಈವಾಗೆಲ್ಲ ಮುಗೀತು. ಮತ್ತೆ ಈ ಬಗ್ಗೆ ಮಾತು ಬೇಡ. ನಾನು ಹೊಸ ಜೀವನ ಕಟ್ಟಿಕೊಳ್ಳಬೇಕು ಎಂದು ಕಾಯ್ತಾ ಇದ್ದೇನೆ. ಮತ್ತೆ ಹಳೇ ಚಂದನ್ ಶೆಟ್ಟಿ ಬೇಕುʼʼಎಂದರು.

ಇದನ್ನೂ ಓದಿ: Chandan Shetty: ಚಂದನ್‌ ಶೆಟ್ಟಿ ಮತ್ತೆ ಮದುವೆ ಆಗೋದು ಯಾವಾಗ? ಹೆಣ್ಣು ಮಕ್ಕಳ ಮೇಲೆ ಕೈ ಮಾಡಲು ಆಗಲ್ಲ ಎಂದಿದ್ಯಾಕೆ?

ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಈ ಹಾಡಿಗೆ ಧ್ವನಿಯಾಗಿದ್ದಾರೆ. ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ.

Continue Reading

ಟಾಲಿವುಡ್

Raj Tarun: ಯುವ ನಟ ರಾಜ್ ತರುಣ್ ಮಾಜಿ ಪ್ರೇಯಸಿ ವಿರುದ್ಧ ದೂರು ದಾಖಲಿಸಿದ ನಟಿ!

Raj Tarun: ರಾಜ್ ತರುಣ್​ಗೆ ಅವರು ನಟಿಸುತ್ತಿರುವ ಸಿನಿಮಾದ ನಾಯಕ ನಟಿಯೊಂದಿಗೆ ಸಂಬಂಧವಿದ್ದು ಆಕೆಯ ಕಾರಣಕ್ಕೆ ನನಗೆ ಮೋಸ ಮಾಡಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದಾರೆ.

VISTARANEWS.COM


on

Raj Tarun’s Heroine Malvi Malhotra Files Complaint
Koo

ಬೆಂಗಳೂರು: ಉಯ್ಯಾಲ ಜಂಪಾಲ’, ‘ಕುಮಾರಿ 21 ಎಫ್’, ‘ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಟಾಲಿವುಡ್​ನ ಜನಪ್ರಿಯ ಯುವ ನಟ ರಾಜ್ ತರುಣ್ (Raj Tarun) ವಿರುದ್ಧ ಅವರ ಪ್ರೇಯಸಿಯೇ ವಂಚನೆ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಠಾಣೆಯಲ್ಲಿ ಲಾವಣ್ಯ ಹೆಸರಿನ ಯುವತಿ ದೂರು ದಾಖಲಿಸಿದ್ದು, ತಮಗೆ ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದರು. ಮಾತ್ರವಲ್ಲ ರಾಜ್ ತರುಣ್​ಗೆ ಅವರು ನಟಿಸುತ್ತಿರುವ ಸಿನಿಮಾದ ನಾಯಕ ನಟಿಯೊಂದಿಗೆ ಸಂಬಂಧವಿದ್ದು ಆಕೆಯ ಕಾರಣಕ್ಕೆ ನನಗೆ ಮೋಸ ಮಾಡಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದಾರೆ.

”ಲಾವಣ್ಯ ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ನಾನು ರಾಜ್ ತರುಣ್‌ ಜತೆ ಸಂಬಂಧ ಹೊಂದಿಲ್ಲ ಮತ್ತು ನಮ್ಮಿಬ್ಬರ ಮಧ್ಯೆ ಇರುವುದು ಕೇವಲ ಫ್ರೆಂಡ್‌ಶಿಪ್‌. ನಮ್ಮ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ” ಎಂದು ಹೇಳಿಕೊಂಡಿದ್ದಾರೆ. “ತಿರಗಬ್ಯಾಡರ ಸಾಮಿ” ಚಿತ್ರದಲ್ಲಿ ನಟಿಸಿದ್ದರು ಮಾಳವಿ ಮಲ್ಹೋತ್ರಾ.

ಇದೀಗ ಲಾವಣ್ಯ ಈಗ ಇದೇ ಮಾಳವಿ ಅವರು ರಾಜ್ ತರುಣ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಹೈದರಾಬಾದ್​ ಡಿಸಿಪಿ ಅವರನ್ನು ಭೇಟಿ ಆಗಿರುವ ಮಾಳವಿ ಮಲ್ಹೋತ್ರಾ, ʻʻಹಿಮಾಚಲ ಪ್ರದೇಶದಲ್ಲಿ ವಾಸಿಸುತ್ತಿರುವ ತನ್ನ ಕುಟುಂಬಕ್ಕೆ ಲಾವಣ್ಯ ಬೆದರಿಕೆ ಹಾಕಿದ್ದಾಳೆ. ಮತ್ತು ತನ್ನ ಸಹೋದರನಿಗೆ ಕರೆ ಮಾಡಿ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾಳೆ. ಲಾವಣ್ಯ ಯಾರು ಹಾಗೇ ಅವರ ಮುಖವನ್ನು ಇನ್ನೂ ನಾನು ನೋಡಿಲ್ಲ. ರಾಜ್ ತರುಣ್ ಅವರು ನನ್ನ ಮಾಜಿ ಎಕ್ಸ್‌ ಎಂದು ಹೇಳಿದ್ದರಿಂದ ನಾನು ಅವಳನ್ನು ಬ್ಲಾಕ್ ಮಾಡಿದ್ದೇನೆ ರಾಜ್ ತರುಣ್ ಬಳಿಯೂ ನನ್ನ ಅಪ್ಪನ ಫೋನ್ ನಂಬರ್ ಇರಲಿಲ್ಲ. ಆದರೆ ಲಾವಣ್ಯ ಅವಳ ಬಳಿ ಇದೆ. ನನ್ನ ಖಾಸಗಿ ಜೀವನದ ಮೇಲೆ ಆಕೆ ನಿಗಾ ಇರಿಸಿದ್ದಾಳೆ. ನನ್ನ ಖಾಸಗಿ ಜೀವನದಲ್ಲಿ ಮೂಗು ತೂರಿಸಿದ್ದಾಳೆ ಅದು ಅಪರಾಧ. ಪೊಲೀಸರು ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕುʼʼ ಎಂದಿದ್ದಾರೆ. 

ಇದನ್ನೂ ಓದಿ: Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

ಲಾವಣ್ಯ ಈ ಹಿಂದೆ ದೂರು ನೀಡಿದ್ದೇನು?

ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದರು. . “ರಾಜ್ ತರುಣ್ ನನ್ನನ್ನು ನಂಬಿ, ಪ್ರೀತಿಸಿ, ದೈಹಿಕವಾಗಿಯೂ ಬಳಸಿಕೊಂಡಿದ್ದಾರೆ. ಇದಕ್ಕೆ ಕಾರಣ ಒಬ್ಬ ಯುವತಿ . ಹಾಗಾಗಿಯೇ ಆಕೆಯ ಹಾಗೂ ಆಕೆಯ ಸಹೋದರನ ವಿರುದ್ಧ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನಾನು ರಾಜ್‌ತರುಣ್ ಜತೆ 11 ವರ್ಷಗಳಿಂದ ಸಂಬಂಧ ಹೊಂದಿದ್ದೆ. ದೇವಸ್ಥಾನದಲ್ಲಿ ಮದುವೆ ಕೂಡ ಮಾಡಿಕೊಂಡಿದ್ದೇವು. ಆದರೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕಾರಣ 3 ತಿಂಗಳ ಹಿಂದೆ ರಾಜ್ ಮನೆ ಬಿಟ್ಟು ನನ್ನಿಂದ ದೂರ ಉಳಿದಿದ್ದರು’’ ಎಂದು ಲಾವಣ್ಯ ಹೇಳಿಕೆ ನೀಡಿರುವುದಾಗಿ ವರದಿಯಾಗಿತ್ತು.

Continue Reading
Advertisement
Paris Olympics 2024
ಕ್ರೀಡೆ9 mins ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ21 mins ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ42 mins ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ49 mins ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ54 mins ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ1 hour ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Maharashtra Rain
Latest1 hour ago

Maharashtra Rain: ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ರಾಯಗಢ ಕೋಟೆಯಲ್ಲಿ ಪ್ರವಾಸಿಗರಿಗೆ ಪ್ರಾಣ ಸಂಕಟ; ವಿಡಿಯೊ ನೋಡಿ

Money Guide
ಮನಿ-ಗೈಡ್1 hour ago

Money Guide: ಕಡಿಮೆ ಅವಧಿಯಲ್ಲಿ 1 ಕೋಟಿ ರೂ. ಗಳಿಸುವುದು ಹೇಗೆ? ಇಲ್ಲಿದೆ ಹೂಡಿಕೆಯ ಲೆಕ್ಕಾಚಾರ

land fraud
ಕರ್ನಾಟಕ1 hour ago

land fraud: ಭೂ ವಂಚನೆ ತಡೆಗೆ ಪಹಣಿ-ಆಧಾರ್‌ ಜೋಡಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ

Golden Star Ganesh starring Krishnam Pranaya Sakhi movie releasing on 15th August
ಕರ್ನಾಟಕ2 hours ago

Kannada New Movie: ಗಣೇಶ್‌ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ʼಕೃಷ್ಣಂ ಪ್ರಣಯ ಸಖಿʼ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ5 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ7 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ9 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು11 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌