Rakshit Shetty: 'SSE' ಬಿಡುಗಡೆಗೆ ಒಂದು ದಿನ ಮೊದಲೇ ಪ್ರೇಕ್ಷಕರಿಗೆ ಹಬ್ಬ; ಎಲ್ಲೆಲ್ಲಿ ಪ್ರದರ್ಶನ? ಟಿಕೆಟ್‌ ದರ ಎಷ್ಟು? - Vistara News

South Cinema

Rakshit Shetty: ‘SSE’ ಬಿಡುಗಡೆಗೆ ಒಂದು ದಿನ ಮೊದಲೇ ಪ್ರೇಕ್ಷಕರಿಗೆ ಹಬ್ಬ; ಎಲ್ಲೆಲ್ಲಿ ಪ್ರದರ್ಶನ? ಟಿಕೆಟ್‌ ದರ ಎಷ್ಟು?

Rakshit Shetty: ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಪ್ರಮುಖ ನಗರಗಳಲ್ಲಿ ಆಗಸ್ಟ್ 31ರ ಸಂಜೆಯೇ ಸಪ್ತ ಸಾಗರದಾಚೆ ಎಲ್ಲೋ ಸಿನಿ ರಸಿಕರಿಗೆ ದರ್ಶನ ನೀಡಲಿದೆ.

VISTARANEWS.COM


on

Rakshit Shetty sapta sagadache ello
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೇಮಂತ್ ಎಮ್​ ರಾವ್​ ನಿರ್ದೇಶನದ ರಕ್ಷಿತ್​ ಶೆಟ್ಟಿ (Rakshit Shetty) ಅಭಿನಯಿಸಿದ ʻಸಪ್ತ ಸಾಗರದಾಚೆ ಎಲ್ಲೊʼ (Sapta Sagaradaache Ello) ಸಿನಿಮಾ ಸೆಪ್ಟೆಂಬರ್ 1ರಂದು ತೆರೆ ಕಾಣುತ್ತಿದೆ. ಎರಡನೇ ಭಾಗ ಸೈಡ್ ಬಿ ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ಚಿತ್ರತಂಡ ಬಿಡುಗಡೆಗೂ ಹಿಂದಿನ ದಿನವೇ ಚಿತ್ರದ ಪ್ರೀಮಿಯರ್ ಶೋಗಳನ್ನು ಆಯೋಜಿಸಿದೆ. ಸೆಲೆಬ್ರಿಟಿ ಪ್ರೀಮಿಯರ್ ಶೋಗಳು ಮಾತ್ರವಲ್ಲದೇ ಸಾಮಾನ್ಯ ಸಿನಿ ರಸಿಕರಿಗೂ ಸಹ ಪ್ರೀಮಿಯರ್ ಶೋಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿಕೊಟ್ಟಿದೆ.

ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಪ್ರಮುಖ ನಗರಗಳಲ್ಲಿ ಆಗಸ್ಟ್ 31ರ ಸಂಜೆಯೇ ಸಪ್ತ ಸಾಗರದಾಚೆ ಎಲ್ಲೋ ಸಿನಿ ರಸಿಕರಿಗೆ ದರ್ಶನ ನೀಡಲಿದೆ. ಬೆಂಗಳೂರಿನಲ್ಲಿ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಒಟ್ಟು 28 ಪೇಯ್ಡ್ ಪ್ರೀಮಿಯರ್ ಶೋಗಳು ಬೆಂಗಳೂರಿನಲ್ಲಿ ಆಯೋಜನೆಗೊಂಡಿವೆ. ಪಿವಿಆರ್ ಹಾಗೂ ಇತರೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರ 700 ರಿಂದ 900 ರೂಪಾಯಿಗಳವರೆಗೆ ಇದ್ದು, ಸಾಮಾನ್ಯ ಕ್ಲಬ್ ಕ್ಲಾಸ್ ಮಲ್ಟಿಪ್ಲೆಕ್ಸ್‌ಗಳಲ್ಲಿ 300 ರಿಂದ 500 ರೂಪಾಯಿಗಳವರೆಗೂ ಇದೆ. ಮೈಸೂರಿನಲ್ಲಿ ಚಿತ್ರದ ನಾಲ್ಕು ಪ್ರದರ್ಶನಗಳು ನಾಳೆ ಆಯೋಜನೆಗೊಂಡಿದ್ದು ಅಲ್ಲಿ ಟಿಕೆಟ್ ದರ 250 ರೂಪಾಯಿಗಳಾಗಿವೆ. ಇನ್ನು ಚಿತ್ರದ ಬಹುತೇಕ ಎಲ್ಲಾ ಪ್ರದರ್ಶನಗಳ ಟಿಕೆಟ್‌ಗಳೂ ಭರ್ಜರಿಯಾಗಿ ಸೇಲ್ ಆಗುತ್ತಿದ್ದು, ಸಂಪೂರ್ಣವಾಗಿ ಸೋಲ್ಡ್ ಔಟ್ ಆಗಿವೆ.

ಟ್ರೈಲರ್​ನಲ್ಲಿ ನಾಯಕಿ ಪಾತ್ರ ವಹಿಸಿರುವ ರುಕ್ಮಿಣಿ ವಸಂತ್ ಅವರ ಧ್ವನಿಯೇ ಕೇಳಿ ಬರುತ್ತಿದೆ. ಅವರೇ ಕತೆಯನ್ನು ನಿರೂಪಣೆ ಮಾಡಿದಂತಿದೆ. ಸರಳವಾಗಿ ಕಾಣುವ ಅವರು ತಮ್ಮ ಪಾತ್ರದಲ್ಲಿ ತುಸು ಹೆಚ್ಚು ತಲ್ಲೀನರಾಗಿದ್ದಾರೆ. ರಕ್ಷಿತ್​ ಶೆಟ್ಟಿ ಲವರ್​ ಬಾಯ್​ ಆಗಿ, ದುರಂತ ನಾಯಕನಾಗಿ ಮಿಂಚಿದ್ದಾರೆ. ವಿಭಿನ್ನವಾದ ಹೇರ್​ಸ್ಟೈಲ್​ ಮೂಲಕವೂ ಅವರು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Rakshit Shetty: ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೊ ಟ್ರೈಲರ್’​ ಬಿಡುಗಡೆ

ಇದನ್ನೂ ಓದಿ: Rakshit Shetty: ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೊ ಟ್ರೈಲರ್’​ ಬಿಡುಗಡೆ

ಚರಣ್ ರಾಜ್ ಅವರ ಹಿನ್ನೆಲೆ ಸಂಗೀತ ಟ್ರೈಲರ್​ನಲ್ಲಿ ಮೇಳೈಸಿದೆ. ಹಿತ ಮತ್ತು ಮಿತವಾಗಿರುವ ಸಂಗೀತ ವೀಕ್ಷಕನ ಮನಕ್ಕೆ ನಾಟುವಂತಿದೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 1ಕ್ಕೆ ಬಿಡುಗಡೆ ಆಗಲಿದೆ. ಒಂದು ತಿಂಗಳ ಅಂತರದಲ್ಲಿ ಸಿನಿಮಾದ ಎರಡನೇ ಭಾಗವೂ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಜೊತೆಗೆ ಅಚ್ಯುತ್ ಕುಮಾರ್, ಅವಿನಾಶ್, ಚೈತ್ರಾ ಆಚಾರ್ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಸ್ವತಃ ರಕ್ಷಿತ್ ಶೆಟ್ಟಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

Ambareesh Birthday: ಇನ್ನು ರೆಬಲ್‌ ಸ್ಟಾರ್‌ ಹುಟ್ಟುಹಬ್ಬ ನಟ ದರ್ಶನ್‌ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ. ಅಂಬರೀಶ್‌ ಅವರ ವಿಶೇಷ ಪೋಸ್ಟರ್ ರಿಲೀಸ್ ಮಾಡಿ ದರ್ಶನ್‌ ಶುಭಕೋರಿದ್ದಾರೆ. ಎಕ್ಸ್‌ನಲ್ಲಿ ಸ್ಪೆಷಲ್ ಆಗಿ ಅಂಬರೀಶ್ ಅಪ್ಪಾಜಿಗೆ ದರ್ಶನ್ (Darshan) ವಿಶ್ ಮಾಡಿದ್ದಾರೆ. ಅಭಿಷೇಕ್‌ ಅಂಬರೀಶ್‌ ಕಂಠೀರವ ಸ್ಟುಡಿಯೋದಲ್ಲಿರೋ ಅಂಬರೀಶ್ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದ್ದಾರೆ. ಮಾಧ್ಯಮಗಳ ಬಳಿ ಅಂಬರೀಶ್ ಅವರ ನೆನಪುಗಳ ಕುರಿತಾಗಿ ಸುಮಲತಾ ಮಾತನಾಡಿದರು.

VISTARANEWS.COM


on

Ambareesh Birthday during Sumalatha Ambareesh Talks About Abhishek Ambareesh And Aviva
Koo

ಬೆಂಗಳೂರು: ಇಂದು ರೆಬೆಲ್ ಸ್ಟಾರ್ ಅಂಬರೀಶ್ ಜನ್ಮ ದಿನ (Ambareesh Birthday). ಅಂಬಿ ನಮ್ಮನ್ನಗಲಿ ಐದು ವರ್ಷಗಳು ಕಳೆದರೂ ಬದುಕಿದ್ದಾಗ ಅವರು ಅದೆಷ್ಟು ಅಭಿಮಾನಿ ಬಳಗ ಹೊಂದಿದ್ದರೋ ಅಷ್ಟೇ ಫ್ಯಾನ್‌ ಬೇಸ್‌ ಇವತ್ತಿಗೂ ಅವರಿಗಿದೆ. ಇಂದು ಅವರ 72 ನೇ ಜನ್ಮ ದಿನವಾದ ಇಂದು ಪತ್ನಿ ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌ ಕಂಠೀರವ ಸ್ಟುಡಿಯೋದಲ್ಲಿರೋ ಅಂಬರೀಶ್ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದ್ದಾರೆ. ಮಾಧ್ಯಮಗಳ ಬಳಿ ಅಂಬರೀಶ್ ಅವರ ನೆನಪುಗಳ ಕುರಿತಾಗಿ ಸುಮಲತಾ ಮಾತನಾಡಿದರು. ಈ ಸಮಯದಲ್ಲಿ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಅಪ್ಪ ಆಗುತ್ತಿದ್ದಾರೆಯೇ? ನೀವು ಅಜ್ಜಿ ಆಗುತ್ತಿದ್ದೀರಿಯೇ? (Abhishek Ambareesh And Aviva) ಎಂಬ ಪ್ರಶ್ನೆ ಬಂತು. ಆಗ ಸಮಲತಾ ಅವರು ʻʻಸದ್ಯಕ್ಕೆ ಇಲ್ಲ. ಸಿಹಿ ಸುದ್ದಿ ಇದ್ದಾಗ ಖಂಡಿತ ಹೇಳುತ್ತೇನೆʼʼಎಂದರು.

ಈ ವೇಳೆ ಸುಮಲತಾ ಮಾತನಾಡಿ ʻʻಅಂಬಿ ಅಗಲಿ ಆರು ವರ್ಷ ಆಗಿದೆ. ಆದರೆ ಅಂಬಿ ಇದ್ದಾಗ ಎಷ್ಟು ಪ್ರೀತಿ ತೋರಿಸುತ್ತಿದ್ದರೋ ಅಷ್ಟೇ ಪ್ರೀತಿ ಈಗಲೂ ಅಭಿಮಾನಿಗಳು ತೋರಿಸುತ್ತಿದ್ದಾರೆ. ಅಂಬರೀಶ್ ಮಾಡಿದ ಸಮಾಜಮುಖಿ ಕೆಲಸಗಳನ್ನ ನೆನಪಲ್ಲಿಟ್ಕೊಂಡಿದ್ದಾರೆ ಜನ. ಕಳೆದ ವರ್ಷ ಅಂಬರೀಶ್ ಫೌಂಡೇಶನ್ ಶುರು ಮಾಡಿದ್ವಿ. ಫೌಂಡೇಶನ್ ವತಿಯಿಂದ ಸಾಧಕರನ್ನ ಗುರ್ತಿಸಿ ಸನ್ಮಾನಿಸುವ ಕೆಲಸ ಆಗ್ತಿದೆ. ಸಮಾಜಮುಖಿ ಕೆಲಸ ಮಾಡಿದವರಿಗೆ, ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಅಂಬರೀಶ್ ಫೌಂಡೇಶನ್ ವತಿಯಿಂದ ಸನ್ಮಾನ ಆಗುತ್ತಿದೆ. ಮಂಡ್ಯದಲ್ಲಿ ಇಂದು ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ. ಹೋದ ಕಡೆಯಲೆಲ್ಲ ಅಂಬರೀಶ್ ಅವರ ಬಗ್ಗೆ ನಮಗೆ ಗೊತ್ತಿಲ್ಲದ ಕೆಲಸಗಳ ಬಗ್ಗೆ ಹೇಳ್ತಾರೆʼʼಎಂದರು.

ಇದನ್ನೂ ಓದಿ: Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

ಸುಮಲತಾ ಅಂಬರೀಷ್ ಅವರು ಬೆಳಿಗ್ಗೆಯೇ ಮಗ ಅಭಿಷೇಕ್ ಹಾಗೂ ಸೊಸೆ ಅವಿವಾ ಜತೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸ್ಮಾರಕಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ.

ಅಂಬರೀಶ್‌ರನ್ನು ನೆನೆದ ಡಿ ಬಾಸ್‌

ಇನ್ನು ರೆಬಲ್‌ ಸ್ಟಾರ್‌ ಹುಟ್ಟುಹಬ್ಬ ನಟ ದರ್ಶನ್‌ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ. ಅಂಬರೀಶ್‌ ಅವರ ವಿಶೇಷ ಪೋಸ್ಟರ್ ರಿಲೀಸ್ ಮಾಡಿ ದರ್ಶನ್‌ ಶುಭಕೋರಿದ್ದಾರೆ. ಎಕ್ಸ್‌ನಲ್ಲಿ ಸ್ಪೆಷಲ್ ಆಗಿ ಅಂಬರೀಶ್ ಅಪ್ಪಾಜಿಗೆ ದರ್ಶನ್ (Darshan) ವಿಶ್ ಮಾಡಿದ್ದಾರೆ.

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿರವರ ಹುಟ್ಟುಹಬ್ಬದ (Birthday) ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದು ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ದರ್ಶನ್‌ ಅಂಬರೀಶ್‌ಗೆ ಶುಭಕೋರಿದ್ದಾರೆ.

Continue Reading

ಟಾಲಿವುಡ್

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

Pushpa 2: ಸಾಮಿ ಹಾಡನ್ನೂ ಮೀರಿಸುವಂತಿದೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ.

VISTARANEWS.COM


on

Pushpa 2 SOOSEKI Couple Song Lyrical Video out
Koo

ಬೆಂಗಳೂರು: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡು ಔಟ್‌ ಆಗಿದೆ. ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀವ್ಸ್‌ ಪಡೆದುಕೊಂಡಿದೆ.

ಸಾಮಿ ಹಾಡನ್ನೂ ಮೀರಿಸುವಂತಿದೆ ಸೂಸೇನೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Shakhahaari Movie : ಚಿತ್ರಮಂದಿರದಲ್ಲಿ ದಕ್ಕದ ಪ್ರೀತಿ ಶಾಖಾಹಾರಿ ಚಿತ್ರಕ್ಕೆ ಒಟಿಟಿಯಲ್ಲಿ ದೊರೆಯುತ್ತಿದೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ.. ಎಲ್ಲಾ ಜಾಲತಾಣಗಳಲ್ಲು ಬಹಳಷ್ಟು ಜನ ದಿನೇ ದಿನೇ ಮೆಚ್ಚುಗೆ ವ್ಯಕ್ತಪಡಿಸುತ್ತ ಇರುವುದು ಗಮನಾರ್ಹ.

VISTARANEWS.COM


on

Shakhahaari Movie 1 cr minutes of streaming amazon prime
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಿನ್ನ-ವಿಭಿನ್ನ ಪ್ರಯತ್ನಗಳು ನಡೆಯುತ್ತಿವೆ. ಹೊಸಬರ ಜತೆಗೆ ಅನುಭವಿ ತಾರಾಬಳಗ ಕೈ ಜೋಡಿಸಿದಾಗ ಒಂದೊಳ್ಳೆ ಅದ್ಭುತ ಸಿನಿಮಾ ಹೊರಹೊಮ್ಮಲಿದೆ ಎಂಬುದಕ್ಕೆ ʻಶಾಖಾಹಾರಿʼ ಚಿತ್ರ (Shakhahaari Movie) ತಾಜಾ ಉದಾಹರಣೆ. ತನ್ನ ಒಳ್ಳೆಯ ಕಂಟೆಂಟ್‌ನಿಂದಲೇ ಭಾರೀ ಸದ್ದು ಮಾಡಿದ್ದ ಈ ಚಿತ್ರವೀಗ ಅಮೇಜಾನ್ ಪ್ರೈಮ್‌ನಲ್ಲಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಶಾಖಾಹಾರಿ ನೋಡಿದವರೆಲ್ಲಾ ಇಂತಹ ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡ್ವಲ್ಲಾ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಫೆಬ್ರವರಿ 16ರಂದು ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದ ಶಾಖಾಹಾರಿ ಸಿನಿಮಾವೀಗ ಮೂರು ತಿಂಗಳ ಬಳಿಕ ಒಟಿಟಿಗೆ ಲಗ್ಗೆ ಇಟ್ಟಿದೆ. ಶುಕ್ರವಾರದಿಂದ ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮ್ ಆಗಿರುವ ಈ ಚಿತ್ರವನ್ನು ನೋಡಿದವರೆಲ್ಲಾ ವಾವ್ ಇಂತಹ ಪ್ರಯತ್ನಗಳು ಮಾಲಿವುಡ್‌ನಲ್ಲಿ ಮಾತ್ರವಲ್ಲ ನಮ್ಮಲ್ಲಿಯೂ ನಡೆಯುತ್ತವೆ. ಅದಕ್ಕೆ ಪ್ರೇಕ್ಷಕಪ್ರಭು ಬೆನ್ನುತಟ್ಟಬೇಕಷ್ಟೇ.

ಚಿತ್ರಮಂದಿರದಲ್ಲಿ ದಕ್ಕದ ಪ್ರೀತಿ ಶಾಖಾಹಾರಿ ಚಿತ್ರಕ್ಕೆ ಒಟಿಟಿಯಲ್ಲಿ ದೊರೆಯುತ್ತಿದೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ.. ಎಲ್ಲಾ ಜಾಲತಾಣಗಳಲ್ಲು ಬಹಳಷ್ಟು ಜನ ದಿನೇ ದಿನೇ ಮೆಚ್ಚುಗೆ ವ್ಯಕ್ತಪಡಿಸುತ್ತ ಇರುವುದು ಗಮನಾರ್ಹ.

ಇದನ್ನೂ ಓದಿ: Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

ಶಾಖಾಹಾರಿಗೆ ಜೈ ಎಂದ ಸತೀಶ್

ನೀನಾಸಂ ಸತೀಶ್ ಶಾಖಾಹಾರಿ ಸಿನಿಮಾವನ್ನು ಬಾಯ್ ತುಂಬಾ ಹೊಗಳಿದ್ದಾರೆ. ಯಾವ ನೀರಿಕ್ಷೆಯು ಇಲ್ಲದೆ ಸುಮ್ಮನೆ ಸಿನಿಮಾ ನೋಡುತ್ತಾ ಹೋದಾಗ,ಸಿನಿಮಾ ನಮ್ಮನ್ನು ಒಳಗೆ ಸೆಳೆದೊಯ್ಯುತ್ತದೆ,ಸುಳಿಯಂತೆ. ಪ್ರಾಮಾಣಿಕವಾದ, ಯಾರನ್ನೂ ಮೆಚ್ಚಿಸಲು ಅಲ್ಲದೆ ತಮ್ಮಷ್ಟಕ್ಕೆ ತಂಡ ಧ್ಯಾನಿಸಿದೆ. ಸಿನಿಮಾ ಬರೀ ನಿರ್ದೇಶಕ,ಅಥವಾ ನಟರಲ್ಲದೆ ಸಮೂಹದ ಕೆಲಸ ಎಂಬುದನ್ನು ಮತ್ತೆ ಸಾಬೀತು ಮಾಡಿದೆ.ಗೆಳೆಯ ಗೋಪಿ ವಾವ್! ರಘು ಅಣ್ಣ ನಮ್ಮ ಹೆಮ್ಮೆ! ನಿರ್ದೇಶಕ ಸಂದೀಪ್ ,ಮತ್ತು ಛಾಯಾಗ್ರಹಣ, ಸಂಗೀತ ಎಲ್ಲವೂ ಅದ್ಭುತ.ನೋಡಲೇಬೇಕಾದ ನಮ್ಮ ಚಿತ್ರ ಎಂದು ಟ್ವೀಟ್ ಮಾಡಿದ್ದಾರೆ.

ಕ್ಲೈಮ್ಯಾಕ್ಸ್ ಚಿಂದಿ ಎಂದ ಪೃಥ್ವಿ

ನಟ ಪೃಥ್ವಿ ಅಂಬಾರ್ ಕೂಡ ಚಿತ್ರವನ್ನು ನೋಡಿ ಮನಸಾರೆ ಕೊಂಡಾಡಿದ್ದಾರೆ. ಶಾಖಾಹಾರಿ ಬಿಡುಗಡೆ ಸಮಯದಲ್ಲಿ ನನ್ನ ಚಿತ್ರ ಬಿಡುಗಡೆಯಾಗಿತ್ತು. ಹೀಗಾಗಿ ಇಂತಹ ಒಳ್ಳೆ ಸಿನಿಮಾವನ್ನು ಮಿಸ್ ಮಾಡಿಕೊಂಡಿದ್ದೇನೆ. ಅದಕ್ಕಾಗಿ ನನಗೆ ಬೇಸರವಿದೆ. ಚಿತ್ರದ ಕಥೆ, ಟ್ವಿಸ್ಟ್, ಕ್ಲೈಮ್ಯಾಕ್ಸ್ ಎಲ್ಲವೂ ಅದ್ಭುತ. ರಂಗಾಯಣ ರಘು ಸರ್ ಹಾಗೂ ಗೋಪಾಲ್ ದೇಶಪಾಂಡೇ ಸರ್ ಅಭಿನಯ ಸೂಪರ್ ಎಂದಿದ್ದಾರೆ.

ಸಂದೀಪ್ ಸುಂಕದ್ ನಿರ್ದೇಶನದ ‘ಶಾಖಾಹಾರಿ’ ಸಿನಿಮಾದ ಸೂತ್ರಧಾರಿ. ಕನ್ನಡ ಚಿತ್ರರಂಗದ ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಪೊಲೀಸ್ ಅಧಿಕಾರಿಯಾಗಿ ಗೋಪಾಲಕೃಷ್ಣ ದೇಶಪಾಂಡೆ ಅತ್ಯದ್ಬುತವಾಗಿ ನಟಿಸಿದ್ದರು. ಉಳಿದಂತೆ ವಿನಯ್, ನಿಧಿ ಹೆಗಡೆ, ಸುಜಯ್ ಶಾಸ್ತ್ರೀ, ಹರಿಣಿ ಹಾಗೂ ಕಾನ್‌ಸ್ಟೇಬಲ್ ಮಮತಕ್ಕನ ಪಾತ್ರಧಾರಿಯಾಗಿ ಪ್ರತಿಭಾ ನಾಯಕ್ ತಮ್ಮ ಪಾತ್ರಗಳಿಗೆ ನ್ಯಾಯ ಸಲ್ಲಿಸಿದ್ದಾರೆ. ಕೀಲಂಬಿ ಮೀಡಿಯಾ ಲ್ಯಾಬ್ ಬ್ಯಾನರ್ ನಡಿ ರಾಜೇಶ್ ಕೀಲಾಂಬಿ, ರಂಜಿನಿ ಪ್ರಸನ್ನ ಶಾಖಾಹಾರಿಗೆ ಬಂಡವಾಳ ಹೂಡಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ರೋಚಕ ಕಥೆಯೇ ಶಾಖಾಹಾರಿ. ಸಿನಿಮಾದಲ್ಲಿ ಮಾಸ್ತಿಕಟ್ಟೆ ಸುಬ್ರಮಣ್ಯ ಅಲಿಯಾಸ್ ಸುಬ್ಬಣ್ಣ (ರಂಗಾಯಣ ರಘು)ಗೆ ಹಿಂದೆ-ಮುಂದೆ ಯಾರೂ ಇರುವುದಿಲ್ಲ. ಹೋಟೆಲ್ ಮಾಲೀಕನಾಗಿರುವ ಸುಬ್ಬಣ್ಣ, ಬಾಣಸಿಗನಾಗಿಯೂ ಕೆಲಸ ಮಾಡಿಕೊಂಡಿರುತ್ತಾರೆ. ಇವರದ್ದು ಶುದ್ಧ ಶಾಕಾಹಾರಿ ಹೋಟೆಲ್… ಹೀಗಿರುವಾಗ, ಅಲ್ಲಿ ನಡೆಯುವ ಕೆಲ ಘಟನೆಗಳಿಂದ ಸುಬ್ಬಣ್ಣನ ಹೋಟೆಲ್ ಹೇಗೆ ‘ಶಾಖಾ’ಹಾರಿ ಆಗುತ್ತೆ ಎಂಬುದೆ ರೋಚಕ ವಿಷಯ.

Continue Reading

ಸಿನಿಮಾ

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Shilpa Shetty: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್-ಇಂಡಿಯಾ ಸಿನಿಮಾವಾದ ಕೆಡಿ ಸಿನಿಮಾದಲ್ಲಿ ಸತ್ಯವತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ .ಯುಗಾದಿ ಹಬ್ಬದಂದು ಚಿತ್ರತಂಡ, ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿತ್ತು.

VISTARANEWS.COM


on

Shilpa Shetty Visiting Nanjundeshwara Temple
Koo

ಬೆಂಗಳೂರು: ಮೈಸೂರಿನಲ್ಲಿ `ಕೆಡಿ’ ಸಿನಿಮಾ (KD cinema) ಚಿತ್ರೀಕರಣ ನಟಿ ಶಿಲ್ಪಾ ಶೆಟ್ಟಿ ತಂಗಿದ್ದಾರೆ. ಈ ವೇಳೆ ನಟಿ ಬಿಡುವು ಮಾಡಿಕೊಂಡು ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ (Nanjundeshwara Temple) ಬಂದಿದ್ದಾರೆ. ಪೂಜೆ ಸಲ್ಲಿಸಿ, ದೇವಸ್ಥಾನದ ಆವರಣದಲ್ಲಿ ಶಿಲ್ಪಾ ಶೆಟ್ಟಿ ಅವರು ಧ್ಯಾನ ಮಾಡಿದ್ದಾರೆ. ಶಿಲ್ಪಾ ಶೆಟ್ಟಿ ಬಂದಿರುವ ವಿಷಯ ತಿಳಿದು, ಫ್ಯಾನ್ಸ್​ ಮುಗಿಬಿದ್ದಿದ್ದರು.

 ಈ ಮಧ್ಯೆ ಶಿಲ್ಪಾ ಶೆಟ್ಟಿ ಅವರು ಆಗಾಗ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಇತ್ತೀಚೆಗೆ ಮಂಗಳೂರಿಗೆ ತೆರಳಿ ಭೂತ ಕೋಲ ವೀಕ್ಷಿಸಿದ್ದರು. ಈಗ ಅವರು ಮೈಸೂರಿನಲ್ಲಿ ನಂಜನಗೂಡು ನಂಜುಡೇಶ್ವರನ ಸನ್ನಿಧಾನಕ್ಕೆ ತೆರಳಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್-ಇಂಡಿಯಾ ಸಿನಿಮಾವಾದ ಕೆಡಿ ಸಿನಿಮಾದಲ್ಲಿ ಸತ್ಯವತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ .ಯುಗಾದಿ ಹಬ್ಬದಂದು ಚಿತ್ರತಂಡ, ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿತ್ತು. ಶಿಲ್ಪಾ ಶೆಟ್ಟಿ ಕೂಡಾ ತಮ್ಮ ಪೋಸ್ಟರನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಬಹಳ ಎಕ್ಸೈಟ್‌ ಆಗಿದ್ದರು. ರೆಟ್ರೋ ಲುಕ್‌ನಲ್ಲಿ ಕಾರೊಂದರ ಮುಂದೆ ಬ್ಯಾಗ್‌ ಹಿಡಿದು ನಿಂತಿರುವ ಶಿಲ್ಪಾ ಶೆಟ್ಟಿ ಲುಕ್‌ಗೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ.

ಇದನ್ನೂ ಓದಿ: Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading
Advertisement
Virat Kohli
ಕ್ರೀಡೆ7 mins ago

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

PM Narendra Modi
ದೇಶ19 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ20 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ24 mins ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ35 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ38 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ44 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್51 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ55 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ58 mins ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌