ಎಲ್ಲ ನೌಕರರಿಗೂ ಐಷಾರಾಮಿ ಪ್ರವಾಸ; ಕಂಪನಿಲಿ ಕೆಲಸ ಖಾಲಿ ಇದೆಯಾ ಅಂತ ಕೇಳಿದ ನೆಟಿಜನ್ಸ್!‌ - Vistara News

ವೈರಲ್ ನ್ಯೂಸ್

ಎಲ್ಲ ನೌಕರರಿಗೂ ಐಷಾರಾಮಿ ಪ್ರವಾಸ; ಕಂಪನಿಲಿ ಕೆಲಸ ಖಾಲಿ ಇದೆಯಾ ಅಂತ ಕೇಳಿದ ನೆಟಿಜನ್ಸ್!‌

ʻನನಗಾದರೂ ಇಂಥದ್ದೊಂದು ಸಂಸ್ಥೆಯಲ್ಲಿ ಕೆಲಸ ಸಿಕ್ಕಿದ್ದಿದ್ದರೆʼ ಎಂದು ಅನೇಕರು ಕಾಮೆಂಟಿಸಿದ್ದಾರೆ. ಇನ್ನೂ ಕೆಲವರು, ʻಕೆಲಸ ಖಾಲಿ ಇದ್ಯಾ?ʼ ಎಂದು ಕೇಳಿದ್ದಾರೆ. ಅಂಥದ್ದೇನು ಮಾಡಿತು ಈ ಕಂಪನಿ?

VISTARANEWS.COM


on

ಎಲ್ಲ ನೌಕರರಿಗೂ ೨ ವಾರಗಳ ಬಾಲಿ ಪ್ರವಾಸ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರವಾಸ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಆದರೂ ಮನಸೋ ಇಚ್ಛೆ ಪ್ರವಾಸ ಮಾಡಲು ಬಹುತೇಕರಿಗೆ ಸಾಧ್ಯವಾಗುವುದಿಲ್ಲ. ʻಹಲ್ಲಿದ್ದವನಿಗೆ ಕಡಲೆ ಸಿಗುವುದಿಲ್ಲ, ಕಡಲೆ ಸಿಕ್ಕಿದವನಿಗೆ ಹಲ್ಲಿರುವುದಿಲ್ಲʼ ಎಂಬ ಗಾದೆಯಂತೆ, ಮನೆಯಲ್ಲಿ ಖಾಲಿ ಕೂತಿದ್ದರೂ ದುಡ್ಡಿಲ್ಲ, ದುಡ್ಡಿದ್ದರೂ ಕೆಲಸದ ಒತ್ತಡ ಎಂದು ಪ್ರವಾಸ ಮಾಡಲಾಗದೇ ಒದ್ದಾಡುವವರೇ ಹೆಚ್ಚು. ಇಂಥದ್ದರಲ್ಲಿ ಇತ್ತೀಚೆಗೆ ಕೊರೋನಾ ಯುಗದಲ್ಲಿ ಬಹಳಷ್ಟು ಮಂದಿ ವರ್ಕ್‌ ಫ್ರಂ ಹೋಂ ನೆಪದಲ್ಲಿ, ತಮಗೆ ಬೇಕಾದ ಪ್ರವಾಸೀ ಸ್ಥಳದಲ್ಲಿ ತಿಂಗಳುಗಟ್ಟಲೆ ಕುಳಿತು ಕೆಲಸ ಮಾಡುವ ಪ್ರವೃತ್ತಿ ಬೆಳೆಸಿಕೊಂಡು ಮನಸ್ಸಿದ್ದಲ್ಲಿ ಮಾರ್ಗ ಎಂದು ಕಂಡುಕೊಂಡಿದ್ದಾರೆ.

೨ ವಾರಗಳ ಬಾಲಿ ಪ್ರವಾಸ

ಆದರೂ ಎಲ್ಲರಿಗೂ ಸಾಧ್ಯವಾಗುವ ವಿಚಾರ ಇದಲ್ಲ. ಅನೇಕರಿಗೆ ಮನಸ್ಸಿದ್ದರೂ ಮಾಡಲು ಸಾಧ್ಯವಾಗುವುದಿಲ್ಲ. ಅಂಥದ್ದರಲ್ಲಿ ಕೆಲಸ ಮಾಡುವ ಸಂಸ್ಥೆಯೇ ನಿಮ್ಮ ಎದುರೊಂದು ಐಷಾರಾಮಿ ಹಾಲಿಡೇ ಪ್ಯಾಕೇಜೊಂದನ್ನು ಇಟ್ಟು, ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಾ ಹಾಲಿಡೇ ಮಾಡೋಣ ಎಂದರೆ!? ಯಾರಿಗುಂಟು ಯಾರಿಗಿಲ್ಲ ಈ ಜಾಕ್‌ಪಾಟ್‌ ಅಂತ ಒಂದೇ ಬಾರಿಗೆ ಕುಣಿದು ಕುಪ್ಪಳಿಸಿ ಈ ಅವಕಾಶವನ್ನು ಮಾತ್ರ ಹೆಂಗಾದರೂ ಸರಿ ಬಳಸಿಕೊಳ್ಳಲೇಬೇಕು ಎಂದು ಸರದಿಯಲ್ಲಿ ನಾ ಮುಂದು ತಾ ಮುಂದು ಎಂದು ನಿಲ್ಲುವುದಿಲ್ಲವೇ! ಆದರೂ ಇಂಥದ್ದೆಲ್ಲ ನಡೆಯುವುದುಂಟಾ ಎಂದು ನೀವು ವಾಸ್ತವ ಲೋಕಕ್ಕೆ ಬಂದರೆ, ನಿಜಕ್ಕೂ ಇಲ್ಲೊಂದು ವಿಶಿಷ್ಟ ಆದರೂ ಸತ್ಯ ಎಂಬಂಥ ಇಂಥದ್ದೇ ಘಟನೆ ನಡೆದಿದೆ.

೨ ವಾರಗಳ ಬಾಲಿ ಪ್ರವಾಸ

ಸೂಪ್‌ ಏಜೆನ್ಸಿ ಎಂಬ ಸಿಡ್ನಿಯಲ್ಲಿರುವ ಆಸ್ಟ್ರೇಲಿಯನ್‌ ಮೂಲದ ಡಿಜಿಟಲ್‌ ಮಾರ್ಕೆಟಿಂಗ್ ಕಂಪನಿಯೊಂದು ತನ್ನೆಲ್ಲ ನೌಕರರನ್ನು ಎರಡು ವಾರಗಳ ಬಾಲಿ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವುದು ಸದ್ಯಕ್ಕೀಗ ಇಂಟರ್ನೆಟ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೇವಲ ಒಬ್ಬರೋ ಇಬ್ಬರೋ, ಅಥವಾ ಆಯ್ಕೆ ಮಾಡಿದ ಒಂದು ಟೀಮ್‌ ಅನ್ನು ಕರೆದೊಯ್ಯುವುದು ಹಲವೆಡೆ ಚಾಲ್ತಿಯಲ್ಲಿದ್ದರೂ, ತನ್ನ ಎಲ್ಲ ನೌಕರರ ಎಲ್ಲ ಖರ್ಚುವೆಚ್ಚಗಳನ್ನು ಭರಿಸಿ ಐಷಾರಾಮಿ ಪ್ರವಾಸಕ್ಕೆ ಬಾಲಿ ಐಲ್ಯಾಂಡ್‌ಗೆ ಕರೆದೊಯ್ದಿರುವುದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಕಂಪನಿಯೀಗ ಎಲ್ಲರ ಫೇವರಿಟ್‌ ಕಂಪನಿಯಾಗಿದ್ದು ಇದರ ಬಾಸ್‌ಗೆ ʻಜಗತ್ತಿನ ಅತ್ಯುತ್ತಮ ಬಾಸ್‌ʼ ಎಂದು ಹೆಸರಿಟ್ಟು ಜನರು ಜಾಲತಾಣಗಳಲ್ಲಿ ಹೊಗಳುತ್ತಿದ್ದಾರೆ.

ಎಲ್ಲ ನೌಕರರಿಗೂ ೨ ವಾರಗಳ ಬಾಲಿ ಪ್ರವಾಸ

ಈ ಕಂಪನಿ ತನ್ನ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಹಂಚಿಕೊಂಡ ವಿಡಿಯೋ ಇದೀಗ ವೈರಲ್‌ ಆಗಿದ್ದು, ಈ ಸಂಸ್ಥೆಯ ನೌಕರರೆಲ್ಲರೂ, ಚಾರಣ, ಪ್ರತಿದಿನ ಮಾಡುತ್ತಿದ್ದ ಯೋಗ, ಈಜುಕೊಳದಲ್ಲಿ ಮೋಜು ಮಸ್ತಿ, ತಿನ್ನುವುದು ಹಾಗೂ ಕುಡಿಯುವುದನ್ನು ಜೊತೆಯಾಗಿ ಮಾಡಿದ್ದು, ಇವೆಲ್ಲವುಗಳ ಜತೆ ಎಲ್ಲರೂ ಸೇರಿ ಕೆಲಸವನ್ನೂ ಮಾಡಿದ್ದಾರೆ. ಕಚೇರಿಯಲ್ಲಿ ಕೆಲಸ ಮಾಡುವಂತೆಯೇ ಬಾಲಿಯಲ್ಲೂ ಒಂದು ನಿರ್ದಿಷ್ಟ ಸಮಯದಲ್ಲಿ ಕೆಲಸ ನಿರ್ವಹಿಸಿದ್ದು, ಉಳಿದ ಸಮಯದಲ್ಲಿ ಮನಸ್ಸಿಗೆ ಉಲ್ಲಾಸ ನೀಡುವ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ʻನಮ್ಮ ಸಂಸ್ಥೆಯ ಮೊದಲ ವರ್ಕಿಂಗ್‌ ಹಾಲಿಡೇʼ ಎಂದು ಸಂಸ್ಥೆ ತನ್ನ ವಿಡಿಯೋಗೆ ಟೈಟಲ್‌ ನೀಡಿದ್ದು, ಮಿಲಿಯಗಟ್ಟಲೆ ಜನರು ನೋಡಿ ಖುಷಿಪಟ್ಟಿದ್ದಾರೆ.

ಎಲ್ಲ ನೌಕರರಿಗೂ ೨ ವಾರಗಳ ಬಾಲಿ ಪ್ರವಾಸ

ಹಲವಾರು ಮಂದಿ ಇದಕ್ಕೆ ಪ್ರತಿಕ್ರಿಯಿಸುತ್ತಿದ್ದು, ʻನನಗಾದರೂ ಇಂಥದ್ದೊಂದು ಸಂಸ್ಥೆಯಲ್ಲಿ ಕೆಲಸ ಸಿಕ್ಕಿದ್ದಿದ್ದರೆʼ ಎಂದು ಅನೇಕರು ಕಾಮೆಂಟಿಸಿದ್ದಾರೆ. ಇನ್ನೂ ಕೆಲವರು, ʻಕೆಲಸ ಖಾಲಿ ಇದ್ಯಾ?ʼ ಎಂದೂ ತಮಾಷೆ ಮಾಡಿದ್ದಾರೆ.

ಲಾಸ್‌ ವೇಗಾಸ್‌ನ ಕ್ಯಾಸಿನೊ ಒಂದು ತನ್ನ ೫೪೦೦ ಮಂದಿ ನೌಕರರಲ್ಲಿ ಪ್ರತಿಯೊಬ್ಬರಿಗೂ ತಲಾ ೫೦೦೦ಡಾಲರ್‌ (೩.೮೬ ಲಕ್ಷ ರೂ) ಬೋನಸ್‌ ನೀಡಿ ಸರ್ಪ್ರೈಸ್‌ ನೀಡಿತ್ತು. ಇದೂ ಅಂಥದ್ದೇ ಒಂದು ವಿಶಿಷ್ಟ ಪ್ರಕರಣವಾಗಿದ್ದು ಎಲ್ಲರೂ ಕಂಪನಿಯ ಬಾಸನ್ನು ಕೊಂಡಾಡುತ್ತಿದ್ದಾರೆ.‌ ನೌಕರರನ್ನು ಖುಷಿಯಾಗಿಟ್ಟುಕೊಳ್ಳುವುದು ಹೀಗೂ ಸಾಧ್ಯ ಎಂದು ತೋರಿಸಿಕೊಟ್ಟಿದೆ.

ಇದನ್ನೂ ಓದಿ: Solo Travel: ಸೋಲೋ ಪ್ರವಾಸ ಗೆಲ್ಲೋಕೆ 15 ಸೂತ್ರಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Hardik Pandya: ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Hardik Pandya
Koo

ಲಂಡನ್​: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರ ವಿವಾಹ ಮುರಿದು ಬಿದ್ದಿದೆಯೇ?, ಈ ಜೋಡಿ ವಿಚ್ಛೇದನಕ್ಕೆ ಪಡೆಯಲಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ನತಾಶಾ ರಹಸ್ಯ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ ನೋಡುವಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿದೆ.

ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿದೆ. ಈ ಫೋಟೊವನ್ನು ಅವರು ತಮ್ಮ ಮುಂದಿನ ಜೀವನದ ಅರ್ಥ ಕಲ್ಪಿಸುವ ನಿಟ್ಟಿನಲ್ಲಿಯೇ ಹಾಕಿದಂತಿದೆ.


ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading

ದೇಶ

ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ಚೇಸ್‌ ಮಾಡಿ ಹಾಲಿವುಡ್ ಸಿನಿಮಾ ಸ್ಟೈಲಲ್ಲಿ ಕಳ್ಳತನ; ರೋಚಕ Video ಇಲ್ಲಿದೆ!

ಮಧ್ಯಪ್ರದೇಶದ ಆಗ್ರಾ-ಮುಂಬೈ ಹೆದ್ದಾರಿಯ ದೆವಾಸ್-ಶಾಜಾಪುರ್‌ ರಸ್ತೆಯಲ್ಲಿ ಟ್ರಕ್‌ ಒಂದು ಚಲಿಸುತ್ತಿರುತ್ತಿದೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ವೇಗವಾಗಿ ಚಲಿಸುತ್ತದೆ. ಇದೇ ವೇಳೆ ಕಳ್ಳನೊಬ್ಬನು ಹಾಗೆಯೇ ಟ್ರಕ್‌ ಹತ್ತುತ್ತಾನೆ. ಬೆಲೆ ಬಾಳುವ ವಸ್ತುಗಳ ಮೂಟೆಯೊಂದನ್ನು ಅಲ್ಲಿಂದ ಕೆಳಗೆ ಎಸೆಯುತ್ತಾನೆ. ಅದಾದ ನಂತರ, ಚಲಿಸುತ್ತಿರುವ ಟ್ರಕ್‌ನಿಂದಲೇ ಚಲಿಸುತ್ತಿರುವ ಬೈಕ್‌ ಮೇಲೆ ಇಳಿಯುತ್ತಾನೆ. ಆತನು ಬೈಕ್‌ ಹತ್ತಲು ಉಳಿದ ಇಬ್ಬರು ಸಹಾಯ ಮಾಡುತ್ತಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Viral Video
Koo

ಭೋಪಾಲ್‌: ಚಲಿಸುತ್ತಿರುವ ವಾಹನದಿಂದಲೇ ಕಳ್ಳತನ ಮಾಡುವುದು, ಸಿಸಿಟಿವಿ, ಸೆಕ್ಯುರಿಟಿ ಇದ್ದರೂ ಬ್ಯಾಂಕ್‌ ದರೋಡೆ ಮಾಡುವುದು ಸೇರಿ ಹಲವು ಭೀಕರ ಕಳ್ಳತನಗಳನ್ನು ಸಿನಿಮಾಗಳಲ್ಲಿ ನೋಡಿರುತ್ತೇವೆ. ಆದರೆ, ಮಧ್ಯಪ್ರದೇಶದಲ್ಲಿ (Madhya Pradesh) ಹಾಲಿವುಡ್‌ ಸಿನಿಮಾ ರೀತಿಯಲ್ಲಿಯೇ ಮೂವರು ಕಳ್ಳರು ಚಲಿಸುತ್ತಿದ್ದ ಟ್ರಕ್‌ನಿಂದ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಚಲಿಸುತ್ತಿದ್ದ ಟ್ರಕ್‌ಅನ್ನು ಬೈಕ್‌ ಮೇಲೆಯೇ ಚೇಸ್‌ ಮಾಡಿದ ಕಳ್ಳರು ಭಾರಿ ಪ್ರಮಾಣದ ವಸ್ತುಗಳನ್ನು ಕದ್ದಿದ್ದಾರೆ. ಸಿನಿಮೀಯ ರೀತಿಯ ಕಳ್ಳತನದ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ. ‌

ಹೌದು, ಆಗ್ರಾ-ಮುಂಬೈ ಹೆದ್ದಾರಿಯ ದೆವಾಸ್-ಶಾಜಾಪುರ್‌ ರಸ್ತೆಯಲ್ಲಿ ಟ್ರಕ್‌ ಒಂದು ಚಲಿಸುತ್ತಿರುತ್ತಿದೆ. ವೇಗವಾಗಿ ಚಲಿಸುತ್ತಿದ್ದ ಟ್ರಕ್‌ ಹಿಂದೆ ಬೈಕ್‌ ವೇಗವಾಗಿ ಚಲಿಸುತ್ತದೆ. ಇದೇ ವೇಳೆ ಕಳ್ಳನೊಬ್ಬನು ಹಾಗೆಯೇ ಟ್ರಕ್‌ ಹತ್ತುತ್ತಾನೆ. ಬೆಲೆ ಬಾಳುವ ವಸ್ತುಗಳ ಮೂಟೆಯೊಂದನ್ನು ಅಲ್ಲಿಂದ ಕೆಳಗೆ ಎಸೆಯುತ್ತಾನೆ. ಅದಾದ ನಂತರ, ಚಲಿಸುತ್ತಿರುವ ಟ್ರಕ್‌ನಿಂದಲೇ ಚಲಿಸುತ್ತಿರುವ ಬೈಕ್‌ ಮೇಲೆ ಇಳಿಯುತ್ತಾನೆ. ಆತನು ಬೈಕ್‌ ಹತ್ತಲು ಉಳಿದ ಇಬ್ಬರು ಸಹಾಯ ಮಾಡುತ್ತಾರೆ. ಸ್ವಲ್ಪ ಸಮತೋಲನ ತಪ್ಪಿದರೂ ಬಿದ್ದು ಮೃತಪಡುವ ಸಾಧ್ಯತೆಗಳು ಜಾಸ್ತಿ ಇದ್ದರೂ ಸಿನಿಮೀಯ ರೀತಿಯಲ್ಲಿ ಮೂವರು ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ.

ವಿಡಿಯೊ ವೈರಲ್‌ ಆಗುತ್ತಲೇ ನೂರಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ್ದಾರೆ. “ಯಾವ ಸಿನಿಮಾದ ದೃಶ್ಯ ಇದು” ಎಂದು ಒಬ್ಬರು ಅಚ್ಚರಿ ವ್ಯಕ್ತಪಡಿಸಿದ್ದಾರೆ. “ಅವರ ಬ್ಯಾಲೆನ್ಸ್‌, ಧೈರ್ಯ, ಚಾಣಾಕ್ಷತನವನ್ನು ಖಂಡಿತವಾಗಿಯೂ ಮೆಚ್ಚಬೇಕು. ಇವರ ಕೌಶಲಗಳು ಎಲ್ಲರಿಗೂ ಬರುವುದಿಲ್ಲ” ಎಂದು ಮತ್ತೊಬ್ಬರು ಕಳ್ಳರ ಸಾಹಸವನ್ನು ಕೊಂಡಾಡಿದ್ದಾರೆ. “ಹೆದ್ದಾರಿಗಳಲ್ಲಿ ಸಂಚರಿಸುವವರಿಗೆ ಇಂತಹ ಕಳ್ಳರು ಅಪಾಯಕಾರಿ. ಮೂವರನ್ನೂ ಒದ್ದು ಒಳಗೆ ಹಾಕಬೇಕು” ಎಂಬುದಾಗಿ ಇನ್ನೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗೆ, ಕಳ್ಳರ ಸಾಹಸವನ್ನು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಶ್ಲೇಷಿಸಿದ್ದಾರೆ.

ವಿಡಿಯೊ ವೈರಲ್‌ ಆಗುತ್ತಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅವರು ಟ್ರಕ್‌ನಿಂದ ಯಾವೆಲ್ಲ ವಸ್ತುಗಳನ್ನು ಎಗರಿಸಿದರು ಎಂಬುದರ ಕುರಿತು ಇದುವರೆಗೆ ಯಾವುದೇ ಮಾಹಿತಿ ಇಲ್ಲ. ಹೆದ್ದಾರಿಗಳಲ್ಲಿ ಬೆಲೆ ಬಾಳುವ ವಸ್ತುಗಳನ್ನು ತುಂಬಿಕೊಂಡು ಸಾವಿರಾರು ಟ್ರಕ್‌ಗಳು ಚಲಿಸುತ್ತಲೇ ಇರುತ್ತವೆ. ಹೀಗೆ, ಸಿನಿಮಾ ರೀತಿಯಲ್ಲಿ ಸ್ಟಂಟ್‌ ಮಾಡಿ, ಆ ವಸ್ತುಗಳನ್ನು ಕಳ್ಳತನ ಮಾಡಿದರೆ, ಯಾರೂ ಟ್ರಕ್‌ಗಳ ಮೂಲಕ ವಸ್ತುಗಳನ್ನು ಸಾಗಿಸಲು ಧೈರ್ಯ ಮಾಡುವುದಿಲ್ಲ. ಇಂತಹ ಪ್ರಕರಣಗಳನ್ನು ಗಂಭೀರವಾಗ ಪರಿಗಣಿಸಿ, ಅಪರಾಧಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

ಇದನ್ನೂ ಓದಿ: Viral Video: ಚಲಿಸುವ ಬೈಕ್​ನಲ್ಲಿ ಆಲಿಂಗನ, ಬಿಸಿ ಚುಂಬನ; ಲಜ್ಜೆಯಿಲ್ಲದ ಜೋಡಿಯ ಸ್ಟಂಟ್​ ವಿಡಿಯೊ ವೈರಲ್​

Continue Reading

ಪ್ರಮುಖ ಸುದ್ದಿ

West Bengal: ಬಂಗಾಳದಲ್ಲಿ ಎಲೆಕ್ಷನ್‌ ಹಿಂಸಾಚಾರ; ಬಿಜೆಪಿ ಅಭ್ಯರ್ಥಿಯನ್ನು ಕಲ್ಲೆಸೆದು ಓಡಿಸಿದ ಟಿಎಂಸಿ ಕಾರ್ಯಕರ್ತರು, Video ಇದೆ

West Bengal: ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

VISTARANEWS.COM


on

West Bengal
Koo

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ (West Bengal) ಚುನಾವಣೆ ಇರಲಿ, ಮತ ಎಣಿಕೆ ದಿನವೇ ಇರಲಿ, ಹಿಂಸಾಚಾರ ನಡೆದೇ ನಡೆಯುತ್ತವೆ. ಮತಯಂತ್ರಗಳನ್ನು ಧ್ವಂಸಗೊಳಿಸುವುದು, ಎದುರಾಳಿ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ನಡೆಸುವುದು ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆಯುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯ (Lok Sabha Election 2024) ಆರನೇ ಹಂತದ ಮತದಾನದ ವೇಳೆ ಟಿಎಂಸಿ ಪಕ್ಷದ ದುಷ್ಕರ್ಮಿಗಳು ಬಿಜೆಪಿ ಅಭ್ಯರ್ಥಿಯ (BJP Candidate) ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಗಲಿಬಿಲಿಗೊಂಡ ಬಿಜೆಪಿ ಅಭ್ಯರ್ಥಿಯು ಗ್ರಾಮದಿಂದಲೇ ಓಡಿ ಹೋಗುವಂತಾಯಿತು.

ಹೌದು, ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇದೆಲ್ಲ ಟಿಎಂಸಿ ಕೃತ್ಯ ಎಂದು ದೂರಿದೆ.

ಬಿಜೆಪಿ ನಾಯಕ ಅಮಿತ್‌ ಮಾಳವೀಯ ಅವರು ಕಲ್ಲುತೂರಾಟದ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆ. ಟಿಎಂಸಿಯ ಗೂಂಡಾಗಳು ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜನರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ. ಇಷ್ಟಾದರೂ, ರಾಜ್ಯದಿಂದ ಟಿಎಂಸಿಯನ್ನು ಕಿತ್ತೆಸೆಯುವ ದಿಸೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಮತದಾನ ಮಾಡುತ್ತಿದ್ದಾರೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರತಿಯೊಂದು ಹಂತದ ಮತದಾನದ ವೇಳೆಯೂ ಪಶ್ಚಿಮ ಬಂಗಾಳದಲ್ಲಿ ಭಾರಿ ಹಿಂಸಾಚಾರ ಸಂಭವಿಸಿದೆ. ಮತಗಟ್ಟೆಗಳ ಬಳಿ ಜನ ಶಾಂತಿಯಿಂದ ಮತದಾನ ಮಾಡಲೂ ಆಗದಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕವೂ ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಿಂಸಾಚಾರ ನಡೆದಿತ್ತು. ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜತೆಗೆ ತನಿಖೆಗೂ ಆದೇಶಿಸಿತ್ತು.

ಇದನ್ನೂ ಓದಿ: Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

Continue Reading

ಕ್ರೀಡೆ

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

Hardik Pandya: ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

VISTARANEWS.COM


on

Hardik Pandya
Koo

ಮುಂಬಯಿ: ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿದೆ. ಆದರೆ, ಚಾಲಾಕಿ ಪಾಂಡ್ಯ ಅವರ ಬುದ್ಧಿವಂತಿಕೆಯಿಂದ ಪತ್ನಿಗೆ ನಯಾ ಪೈಸೆಯೂ ಸಿಗುವುದು ಅನುಮಾನ ಎನ್ನುವಂತಿದೆ.

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಅವರು ಮುಂಬೈಯಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದರೂ ಕೂಡ ತಮ್ಮ ಹೆಸರಿನಲ್ಲಿ ಹೆಚ್ಚು ಆಸ್ತಿಯನ್ನು ಮಾಡಿಲ್ಲ. ಬಹುತೇಕ ಆಸ್ತಿಯನ್ನು ತನ್ನ ಪೋಷಕರ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಪಾಂಡ್ಯ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. ಈ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದ ಪಾಂಡ್ಯ, “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ಸಹೋದರ, ತಂದೆ ಮತ್ತು ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೊ ಈಗ ವೈರಲ್​ ಆಗಿದ್ದು ಪಾಂಡ್ಯಗೆ ಜೀವನದಲ್ಲಿ ಮುದೊಂದು ದಿನ ಪ್ರೇಯಸಿಯಿಂದ ದೋಖಾ ಎದುರಾಗುವ ಸುಳಿವು ಮೊದಲೇ ತಿಳಿದಿತ್ತಾ? ಎನ್ನುವ ನಿಗೂಡ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಹಾರ್ದಿಕ್​ ಪಾಂಡ್ಯ ಅವರ ಅಂದಿನ ಸಂದರ್ಶನ ಕಂಡ ನೆಟ್ಟಿಗರು ಇದೀಗ ವಿಭಿನ್ನ ಕಮೆಂಟ್​ ಮಾಡಿದ್ದಾರೆ. ನೀವು ನಿಜವಾಗಿಯೂ ಕೂಡ ಗುಜರಾತಿ ಎನ್ನುವುದು ಸಾಬೀತುಪಡಿಸಿದ್ದೀರಿ ಎಂದಿದ್ದಾರೆ. ನೆಟ್ಟಿಗರು ಈ ಮಾತು ಹೇಳಲು ಕೂಡ ಒಂದು ಕಾರಣವಿದೆ. ಗುಜರಾತಿಗಳು ಪಕ್ಕಾ ಲೆಕ್ಕಾಚಾರದ ಜೀವನ ನಡೆಸುವುದುರಲ್ಲಿ ಎತ್ತಿದ ಕೈ ಇದೇ ಕಾರಣದಿಂದ ಈ ಕಮೆಂಟ್​ ಮಾಡಿದ್ದಾರೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರನ್ನು ಪಾಂಡ್ಯ ಗರ್ಭಿಣಿ ಮಾಡಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

ಮಾರ್ಚ್ 4 ರಂದು ಪತ್ನಿ ನತಾಶಾ ಅವರ ಹುಟ್ಟುಹಬ್ಬವಿತ್ತು. ಆದರೆ, ಪತ್ನಿಯ ಹುಟ್ಟುಹಬ್ಬಕ್ಕೆ ಹಾರ್ದಿಕ್ ಯಾವುದೇ ಶುಭ ಹಾರೈಕೆಯ ಪೋಸ್ಟ್ ಮಾಡಿಲ್ಲ. ಕೆಲ ದಿನಗಳ ಹಿಂದೆ ನತಾಶಾ ಅವರು ಸಿಂಗಲ್​ ಫೋಟೋವನ್ನು ಮತ್ತು ಮಗನ ಜತೆಗಿನ ಫೋಟೊವನ್ನು ಮಾತ್ರ ಪೋಸ್ಟ್​ ಮಾಡಿದ್ದರು. ಇದೆನೆಲ್ಲ ನೋಡುವಾಗ ಈ ಜೋಡಿ ಸದ್ಯದಲ್ಲೇ ದೂರವಾಗು ಸೂಚನೆಯೊಂದು ಲಭಿಸಿದೆ. ಹಾರ್ದಿಕ್ ಜತೆಗಿರುವ ಇತ್ತೀಚಿನ ಎಲ್ಲ ಪೋಸ್ಟ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಲಾಗಿದೆ. 

ಐಪಿಎಲ್​ ಪಂದ್ಯದಲ್ಲಿಯೂ ನತಾಶಾ ಸ್ಟೇಡಿಯಂಗೆ ಬಂದು ಗಂಡನಿಗೆ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಮುಂಬೈ ತಂಡವನ್ನು ಮುನ್ನಡೆಸಿ ವೇಳೆ ಒಮ್ಮೆಯೂ ಕೂಡ ನತಾಶಾ ಪಂದ್ಯ ನೋಡಲು ಸ್ಟೇಡಿಯಂಗೆ ಬಂದಿರಲಿಲ್ಲ. ಅಲ್ಲದೆ ನತಾಶಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಹೆಸರನ್ನು ಕೂಡ ಬದಲಿಸಿದ್ದಾರೆ ಹೀಗಾಗಿ ಈ ಜೋಡಿ ಬೇರ್ಪಡಲಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಪಾಂಡ್ಯ ಆಗಲಿ ನತಾಶ ಇದುವರೆಗೆ ಯಾವುದೆ ಪ್ರತಿಕ್ರಿಯೆ ನೀಡಿಲ್ಲ.

Continue Reading
Advertisement
Hardik Pandya
ಕ್ರೀಡೆ12 seconds ago

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Fire Accident
ದೇಶ30 mins ago

Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

Psycho Killer Girish throws a stone on the head of the sleeping person and kills
ಕ್ರೈಂ36 mins ago

Psycho Killer: ಕುಡಿದು ಬರ್ತಾನೆ, ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸ್ತಾನೆ! ಕಿಲ್ಲರ್‌ ಅಂದರ್‌!

Malaysia Masters final
ಕ್ರೀಡೆ40 mins ago

Malaysia Masters final: ಪ್ರಶಸ್ತಿ ಬರ ನೀಗಿಸುವ ನಿರೀಕ್ಷೆಯಲ್ಲಿ ಪಿ.ವಿ.ಸಿಂಧು; ಇಂದು ಫೈನಲ್​

Accident
ದೇಶ56 mins ago

Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್1 hour ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ1 hour ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ2 hours ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ2 hours ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ2 hours ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌