ಪಾಕ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರಿಗೆ ಎಚ್ಚರಿಕೆಯ ಸಂದೇಶ ನೀಡಿದ ಕಿಂಗ್​ ಕೊಹ್ಲಿ - Vistara News

ಕ್ರಿಕೆಟ್

ಪಾಕ್​ ಪಂದ್ಯಕ್ಕೂ ಮುನ್ನ ಸಹ ಆಟಗಾರರಿಗೆ ಎಚ್ಚರಿಕೆಯ ಸಂದೇಶ ನೀಡಿದ ಕಿಂಗ್​ ಕೊಹ್ಲಿ

ಪಾಕಿಸ್ತಾನದಂತಹ ಉತ್ತಮ ಗುಣಮಟ್ಟದ ಬೌಲಿಂಗ್ ದಾಳಿಯನ್ನು ಎದುರಿಸಲು ಅತ್ಯುತ್ತಮ ಪ್ರದರ್ಶನವನ್ನೇ ನೀಡಬೇಕು ಎಂದು ವಿರಾಟ್​​ ಕೊಹ್ಲಿ ಸಹ ಆಟಗಾರರಿಗೆ ಒತ್ತಾಯಿಸಿದ್ದಾರೆ.

VISTARANEWS.COM


on

virat kohli and shaheen afridi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಲ್ಲೆಕೆಲೆ: 16ನೇ ಆವೃತ್ತಿ ಏಷ್ಯಾಕಪ್​ನ ಶನಿವಾರದ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ(IND vs PAK) ಸವಾಲು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನವೇ ಟೀಮ್​ ಇಂಡಿಯಾದ ಅನುಭವಿ ಆಟಗಾರ ವಿರಾಟ್​​ ಕೊಹ್ಲಿ(virat kohli) ಅವರು ತನ್ನ ಸಹ ಆಟಗಾರರಿಗೆ ಎಚ್ಚರಿಕೆ ಸಂದೇಶವೊಂದನ್ನು ನೀಡಿದ್ದಾರೆ. ಪಾಕಿಸ್ತಾನದಂತಹ ಉತ್ತಮ ಗುಣಮಟ್ಟದ ಬೌಲಿಂಗ್ ದಾಳಿಯನ್ನು ಎದುರಿಸಲು ಅತ್ಯುತ್ತಮ ಪ್ರದರ್ಶನವನ್ನೇ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಡೆಗಣಿಸಿದರೆ ಅಪಾಯ ಗ್ಯಾರಂಟಿ

ಸ್ಟಾರ್​ ಸ್ಪೋರ್ಟ್ಸ್​ ಸಂದರ್ಶನದಲ್ಲಿ ಶುಕ್ರವಾರ ಮಾತನಾಡಿದ ವಿರಾಟ್​ ಕೊಹ್ಲಿ, ನಮ್ಮ ತಂಡ ಎಷ್ಟೇ ಬಲಿಷ್ಠವಾಗಿದ್ದರೂ ಪಾಕ್​ ಬೌಲರ್​ಗಳನ್ನು ಕಡೆಗಣಿಸಬಾರದು ಅವರ ಬೌಲಿಂಗ್​ ಉತ್ಕೃಷ್ಟ ಮಟ್ಟದಿಂದ ಕೂಡಿದೆ. ಯಾವುದೇ ಹಂತದಲ್ಲಿ ಪಂದ್ಯದ ಚಿತ್ರಣವನ್ನೇ ಬದಲಾಯಿಸಬಲ್ಲ ಪ್ರಭಾವಶಾಲಿ ಬೌಲರ್‌ಗಳನ್ನು ಬಾಬರ್​ ಪಡೆ ಹೊಂದಿದೆ. ಹೀಗಾಗಿ ನಮ್ಮ ಎಲ್ಲ ಬ್ಯಾಟರ್​ಗಳು ಎಚ್ಚರಿಕೆಂದ ಆಡಬೇಕು. ಹಗುರವಾಗಿ ಕಾಣಬಾರದು. ಅವರ ದಾಳಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ರೂಪಿಸಬೇಕು ಎಂದು ಪಂದ್ಯಕ್ಕೂ ಮುನ್ನವೇ ಎಚ್ಚರಿಸಿದ್ದಾರೆ.

ಸ್ಥಿರ ಪ್ರದರ್ಶನ ನೀಡುವೆ

ತಮ್ಮ ಬ್ಯಾಟಿಂಗ್​ ಬಗ್ಗೆ ಮಾಹಿತಿ ನೀಡಿದ ಕೊಹ್ಲಿ, ಮೇಲಿನ ಮಾತು ನನಗೂ ಕೂಟ ಅನ್ವಯವಾಗುತ್ತದೆ. ಪ್ರತಿದಿನ, ಪ್ರತಿ ಅಭ್ಯಾಸದ ಅವಧಿ, ಪ್ರತಿ ವರ್ಷ, ಪ್ರತಿ ಋತುವಿನಲ್ಲಿ ತಂಡಕ್ಕಾಗಿ ಉತ್ತಮ ಪ್ರದರ್ಶನ ನೀಡಲು ನೆರವಾಗುವುದೇ ನನ್ನ ಮೊದಲ ಗುರಿ. ಈ ಮನಸ್ಥಿತಿಯಿಲ್ಲದೆ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಕಳೆದ ವರ್ಷ ಟಿ20 ವಿಶ್ವಕಪ್​ನಲ್ಲಿ ನಾನು ಪಾಕ್​ ವಿರುದ್ಧ ತೋರಿದ ಪ್ರದರ್ಶನವನ್ನೇ ಮತ್ತೆ ಮರುಕಳಿಸಲು ಪ್ರಯತ್ನಿಸುತ್ತೇನೆ. ಹಾಗಂತ ಪಾಕ್ ಬೌಲರ್​ಗಳನ್ನು ಯಾವ ಕಾರಣಕ್ಕೂ ಕಡೆಗಣಿಸಲಾರೆ ಎಚ್ಚರಿಕೆಯ ಆಟವಾಡುವೆ ಎಂದು ತಿಳಿಸಿದರು.

ಇದನ್ನೂ ಓದಿ Asia Cup 2023: ಭಾರತ-ಪಾಕ್​ ಏಷ್ಯಾಕಪ್ ಟೂರ್ನಿಯ​ ರೆಕಾರ್ಡ್​ ಹೀಗಿದೆ

ಕೊಹ್ಲಿ ಬಗ್ಗೆ ಬಾಬರ್​ ಮೆಚ್ಚುಗೆಯ ಮಾತು

ಬಾಬರ್​ ಅಜಂ ಅವರು ಕೊಹ್ಲಿಯನ್ನು ಹೊಗಳಿದ್ದಾರೆ. ನನ್ನ ಮತ್ತು ವಿರಾಟ್ ಕೊಹ್ಲಿ ಮಧ್ಯೆಯ ಕಮೆಂಟ್​ಗಳು ತುಂಬಾ ಆಹ್ಲಾದಕರವಾಗಿವೆ. ಅದು ನನಗೆ ತುಂಬಾ ಹೆಮ್ಮೆಯ ಕ್ಷಣವಾಗಿದೆ. ಮತ್ತು ಇದು ತುಂಬಾ ಒಳ್ಳೆಯದಾಗಿದೆ. ಏಕೆಂದರೆ ಕೆಲವು ವಿಷಯಗಳು ಮತ್ತು ಕೆಲವು ಪ್ರಶಂಸೆಗಳು ನಮ್ಮ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅವರೊಬ್ಬರ ಸ್ಟಾರ್​ ಆಟಗಾರ” ಎಂದು ಬಾಬರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“2019 ರ ವಿಶ್ವಕಪ್‌ನಲ್ಲಿ ನಾನು ವಿರಾಟ್​ ಕೊಹ್ಲಿಯನ್ನು ಮೊದಲ ಬಾರಿ ಭೇಟಿಯಾದೆ. ಆಗ ಅವರು ಉತ್ತುಂಗದ ಫಾರ್ಮ್​ನಲ್ಲಿದ್ದರು. ಈಗ ಕೂಡ ಇದ್ದಾರೆ. ನಾನು ಅವರಿಂದ ಕ್ರಿಕೆಟ್​ನಲ್ಲಿ ಕಲಿಯಬೇಕಿರುವುದು ತಂಬಾ ಇದೆ. ಅವರನ್ನು ಭೇಟಿಯಾದ ಪ್ರತಿ ಸಲವು ಹಲವು ಸಲಹೆಯನ್ನು ಪಡೆದಿದ್ದೇನೆ. ವಿಶ್ವಕಪ್ ಕ್ರಿಕೆಟ್​ ಕೂಡ ಹತ್ತಿರ ಇರುವ ಕ್ಷಣದಲ್ಲಿ ದಿಗ್ಗಜ ಆಟಗಾರನಿಂದ ಸಲಹೆ ಪಡೆದರೆ ಉತ್ತಮ. ಅವರ ಮೇಲೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.

ಪಂದ್ಯಕ್ಕೆ ಮಳೆಯ ಚಿಂತೆ

ಭಾರತಕ್ಕೆ ಈ ಕೂಟದ ಮೊದಲ ಪಂದ್ಯವಾದರೆ, ಪಾಕ್​ಗೆ ಎರಡನೇ ಪಂದ್ಯ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಉಭಯ ದೇಶಗಳ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತ್ತಿದ್ದಾರೆ. ಆದರೆ ಅಭಿಮಾನಿಗಳ ಈ ಆಸೆಗೆ ಮಳೆ ತಣ್ಣೀರೆರಚುವ ಸಾಧ್ಯತೆ ಇದೆ. ಹೌದು ಪಂದ್ಯ ನಡೆಯುವ ದಿನ ಕ್ಯಾಂಡಿಯಲ್ಲಿ ಶೇ. 90ರಷ್ಟು ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

Team India: ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

VISTARANEWS.COM


on

Team India
Koo

ನವದೆಹಲಿ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಚುಟುಕು ಕ್ರಿಕೆಟ್‌ನಲ್ಲಿ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಭಾರತ(Team India) ಕ್ರಿಕೆಟ್‌ ತಂಡ ಇಂದು (ಗುರುವಾರ) ಬೆಳಗ್ಗೆ ತವರಿಗೆ ಮರಳಲಿದೆ. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರ, ಡೊಳ್ಳು, ತಮಟೆ ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು. ತಮಟೆ ಮತ್ತು ಡೊಳ್ಳಿನ ಸದ್ದಿಗೆ ರೋಹಿತ್​ ಶರ್ಮ(Rohit Sharma), ಹಾರ್ದಿಕ್​ ಪಾಂಡ್ಯ(Hardik Pandya), ರಿಷಭ್​ ಪಂತ್(Rishabh Pant)​ ವಿಶ್ವಕಪ್​ ಟ್ರೋಫಿಯನ್ನು ಕೈಯಲ್ಲಿ ಹಿಡಿದ ಮಸ್ತ್​ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದರು. ತಮಟೆ ಬಡಿಯುತ್ತಾ ಸ್ವಾಗತ ಕೋರುತ್ತಿದ್ದವ ಜತೆ ಒಂದೆಡರು ಹೆಜ್ಜೆ ಹಾಕಿ ಸಂಭ್ರಮಿಸಿದರು. ತಮಡೆ ಬಡಿಯುತ್ತಿರುವವರು ಕೂಡ ರೋಹಿತ್​ಗೆ ಸಾಥ್​ ನೀಡಿದರು. ನಾಯಕ ನೃತ್ಯ ಮಾಡುವುದನ್ನು ಕಂಡ ಉಪನಾಯಕ ಹಾರ್ದಿಕ್​ ಪಾಂಡ್ಯ, ವಿಕೆಟ್​ ಕೀಪರ್​ ರಿಷಭ್ ಪಂತ್​ ಕೂಡ ತಾವೇನು ಕಮ್ಮಿ ಇಲ್ಲ ಎನ್ನುವಂತೆ ಕುಣಿದು ಕುಪ್ಪಳಿಸಿದರು.

ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಭಾರತಕ್ಕೆ ಬಂದಿಳಿದೆ. ವಿಮಾನ ನಿಲ್ದಾಣಕ್ಕೆ ತಂಡ ಆಗಮಿಸುತ್ತಿದ್ದಂತೆ ವಿಶ್ವಕಪ್​ ಟ್ರೋಫಿಯ ಆಕೃತಿಯ ಕೇಕ್​ ಕತ್ತರಿಸಲಾಯಿತು. ಇದೇ ವೇಳೆ ಕೊಹ್ಲಿಯ ಕುಟುಂಬಸ್ಥರು ಕೂಡ ಹಾಜರಾಗಿದ್ದರು.

ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

ಮೋದಿ ಭೇಟಿಯ ಬಳಿಕ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಆಟಗಾರರು ಮುಂಬೈಗೆ ಆಗಮಿಸಿ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

ಇದನ್ನೂ ಓದಿ Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು.

ಜೂನ್‌ 29ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ 2024ರ ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆ ಮೂಲಕ ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

Continue Reading

ಕ್ರೀಡೆ

Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

Suryakumar Yadav: ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

VISTARANEWS.COM


on

Suryakumar Yadav
Koo

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತೀಥ್ಯದಲ್ಲಿ ನಡೆದ ಟಿ-20 ವಿಶ್ವಕಪ್‌(T20 World Cup 2024) ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಗಳಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಚುಟುಕು ಕ್ರಿಕೆಟ್‌ನಲ್ಲಿ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್‌ ತಂಡ ಇಂದು (ಗುರುವಾರ) ಬೆಳಗ್ಗೆ ತವರಿಗೆ ಮರಳಲಿದೆ. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ಸೂರ್ಯಕುಮಾರ್​(Suryakumar Yadav) ಅವರು ತಮಟೆ ಸದ್ದಿಗೆ ಮಸ್ತ್​ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಭಾರತಕ್ಕೆ ಬಂದಿಳಿದೆ. ಈ ವೇಳೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರಗಳ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದರು. ತಮಟೆ ಬಡಿಯುತ್ತಾ ಸ್ವಾಗತ ಕೋರುತ್ತಿದ್ದವ ಜತೆ ಸೂರ್ಯಕುಮಾರ್​ ಮಸ್ತ್​ ಆಗಿ ಒಂದೆಡರು ಸ್ಟೆಪ್ಸ್​ ಹಾಕಿ ಸಂಭ್ರಮಿಸಿದ್ದಾರೆ. ತಮಡೆ ಬಡಿಯುತ್ತಿರುವವರು ಕೂಡ ಸೂರ್ಯಕುಮಾರ್​ ಜತೆ ಕುಣಿದಿದ್ದಾರೆ.

ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

ಮೋದಿ ಭೇಟಿಯ ಬಳಿಕ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಆಟಗಾರರು ಮುಂಬೈಗೆ ಆಗಮಿಸಿ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

ಇದನ್ನೂ ಓದಿ Team India: ಭಾರತಕ್ಕೆ ಬಂದಿಳಿದ ಟೀಮ್‌ ಇಂಡಿಯಾ; ವಿಶ್ವಕಪ್‌ ಹೀರೋಗಳಿಗೆ ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು.

ಜೂನ್‌ 29ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ 2024ರ ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆ ಮೂಲಕ ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

Continue Reading

ಕ್ರಿಕೆಟ್

T20 World Cup 2024: ವಿವಾದಾತ್ಮಕ ಕ್ಯಾಚ್​ನ ಮತ್ತೊಂದು ವಿಡಿಯೊ ವೈರಲ್​

T20 World Cup 2024: ರೋಹಿತ್‌ ಶರ್ಮಾ (Rohit Sharma) ನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ಇಂದು(ಗುರುವಾರ) ದೆಹಲಿಗೆ ಆಗಮಿಸಿದರು.

VISTARANEWS.COM


on

T20 World Cup 2024
Koo

ಬಾರ್ಬಡೋಸ್​​: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್(T20 World Cup 2024)​ ಫೈನಲ್​ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್ (Suryakumar Yadav Catch)​ ಅವರು ಹಿಡಿದ ಕ್ಯಾಚ್​ ಬಗೆಗಿನ ಚರ್ಚೆಗಳು ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಐಸಿಸಿ(ICC) ಈ ಕ್ಯಾಚ್​ನ ಮತ್ತೊಂದು ವಿಡಿಯೊವನ್ನು ಹಂಚಿಕೊಂಡಿದೆ.

ಹೌದು, ಸೂರ್ಯಕುಮಾರ್​ ಅವರು ಕ್ಯಾಚ್​ ಹಿಡಿದ ವಿಡಿಯೊದಲ್ಲಿ ಬೌಂಡರಿ ಲೈನ್​ಗೆ ಬಳಸುವ ಕುಶನ್ ಹಿಂದಕ್ಕೆ ಜಾರಿದ ಮಾರ್ಕ್​ ಕಂಡುಬಂದಿತ್ತು. ಹೀಗಾಗಿ ಇದು ಚರ್ಚೆಗೆ ಗ್ರಾಸವಾಗಲು ಕಾರಣ. ಭಾರತದ ಬೌಲಿಂಗ್ ವೇಳೆ ಬೇಕಂತಲೇ ಕುಶನ್ ಹಿಂದಕ್ಕೆ ದೂಡಲಾಗಿತ್ತು, ಸೂರ್ಯಕುಮಾರ್(Suryakumar Yadav) ಅವರು ಬೌಂಡರಿ ಗೆರೆಯನ್ನು ತುಳಿದಿದ್ದರೂ ಕೂಡ ಔಟ್​ ನೀಡಲಾಗಿದೆ ಎಂದೆಲ್ಲ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

ಸ್ಪಷ್ಟನೇ ನೀಡಿದ್ದ ಸಂಖ್ಯಾಶಾಸ್ತ್ರಜ್ಞ


ವಿವಾದಾತ್ಮಕ ಕ್ಯಾಚ್​ ಬಗೆಗಿನ ಎಲ್ಲ ಅನುಮಾನಗಳಿಗೆ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ ರಜನೀಶ್ ಗುಪ್ತಾ ಎಂಬವರು ಸ್ಪಷ್ಟನೆ ನೀಡಿದ್ದರು. “ನಾನು ಅಂದು ಮೈದಾನದ ಟಿವಿ ಕಾಮೆಂಟರಿ ಬಾಕ್ಸ್‌ನಲ್ಲಿದ್ದೆ. ಬಿಳಿ ಗೆರೆಯು ಬೌಂಡರಿಯಾಗಿರಲಿಲ್ಲ ಎಂದು ನಾನು ಹೇಳಬಲ್ಲೆ. ಏಕೆಂದರೆ ಬೌಂಡರಿ ರೋಪ್ ವೆಡ್ಜ್ ಆ ಬಿಳಿ ಗೆರೆಯ ಹಿಂದೆ ಇತ್ತು. ಪಂದ್ಯದ ಆರಂಭದಿಂದಲೂ ಹಾಗೆಯೇ ಇತ್ತು. ಪಿಚ್ ಅನ್ನು ಬದಲಾಯಿಸಿದಾಗ, ಬೌಂಡರಿಗಳನ್ನು ಸರಿಹೊಂದಿಸಲಾಗುತ್ತದೆ. ಹೀಗಾಗಿ ಈ ಬಗ್ಗೆ ಚರ್ಚೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದರು. ಆದರೂ ಕೂಡ ಚರ್ಚೆಗಳು ನಡೆಯಲುತ್ತಲೇ ಇದೆ. ಇದೇ ಕಾರಣದಿಂದ ಐಸಿಸಿ ಈ ಕ್ಯಾಚ್ನ ಮತ್ತೊಂದು ವಿಡಿಯೊ ಹಂಚಿಕೊಂಡಿದೆ.

ಇದನ್ನೂ ಓದಿ Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29, ಶನಿವಾರ ರಾತ್ರಿ ನಡೆದಿದ್ದ ಅತ್ಯಂತ ರೋಚಕ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಟೀಮ್​ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ ಅಂತರದ ಗೆಲುವು ಸಾಧಿಸಿ 13 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರವನ್ನು ನೀಗಿಸಿತ್ತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತು.

ತವರಿಗೆ ಬಂದಿಳಿದ ಟೀಮ್‌ ಇಂಡಿಯಾ

ರೋಹಿತ್‌ ಶರ್ಮಾ (Rohit Sharmaನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ಇಂದು(ಗುರುವಾರ) ದೆಹಲಿಗೆ ಆಗಮಿಸಿದ್ದಾರೆ. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

Continue Reading

ಕ್ರೀಡೆ

Champions Trophy 2025: ಲಾಹೋರ್‌ನಲ್ಲಿ ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯ

Champions Trophy 2025: ಚಾಂಪಿಯನ್ಸ್​ ಟ್ರೋಫಿ 2025 ಫೆಬ್ರವರಿ 19ರಿಂದ ಮಾರ್ಚ್‌ 9ರ ತನಕ ನಡೆಯಲಿದೆ. ಮಾರ್ಚ್​ 9ರಂದು ಫೈನಲ್‌ ನಡೆಯಲಿದೆ. ಚಾರ್ಚ್​ 10 ಮೀಸಲು ದಿನವಾಗಿದೆ.

VISTARANEWS.COM


on

Champions Trophy 2025
Koo

ಮುಂಬಯಿ: ಪಾಕಿಸ್ತಾನ ಆತೀಥ್ಯದಲ್ಲಿ ಮುಂದಿನ ವರ್ಷ ನಡೆಯುವ ಬಹುನಿರೀಕ್ಷಿತ ಚಾಂಪಿಯನ್ಸ್​ ಟ್ರೋಫಿ(Champions Trophy 2025) ಟೂರ್ನಿಯ ತಾತ್ಕಾಲಿಕ ವೇಳಾಪಟ್ಟಿಯೊಂದನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪ್ರಕಟಿಸಿದೆ. ಅದರಂತೆ ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ-ಪಾಕಿಸ್ತಾನ(IND vs PAK) ನಡುವಿನ ಪಂದ್ಯ ಮಾರ್ಚ್‌ ಒಂದರಂದು ಲಾಹೋರ್‌ನಲ್ಲಿ ನಿಗದಿಗೊಳಿಸಿದೆ. ಆದರೆ, ಭಾರತ ತಂಡ ಪಾಕ್​ಗೆ ತೆರಳುವ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಪಾಕ್​ಗೆ ತೆರಳುವ ಸಾಧ್ಯತೆಯೂ ಇಲ್ಲ.

ಪಾಕಿಸ್ತಾನದ 3 ತಾಣಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಲಾಹೋರ್‌ನಲ್ಲಿ 7, ರಾವಲ್ಪಿಂಡಿಯಲ್ಲಿ 5 ಮತ್ತು ಕರಾಚಿಯಲ್ಲಿ 3 ಪಂದ್ಯಗಳನ್ನು ಆಡಲಾಗುವುದು. ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಹಾಗೂ ಒಂದು ಸೆಮಿಫೈನಲ್‌, ರಾವಲ್ಪಿಂಡಿಯಲ್ಲಿ ಇನ್ನೊಂದು ಸೆಮಿಫೈನಲ್‌, ಲಾಹೋರ್‌ನಲ್ಲಿ ಫೈನಲ್‌ ನಡೆಯಲಿದೆ. ಒಂದು ವೇಳೆ ಭಾರತ ಸೆಮಿಫೈನಲ್‌ ಪ್ರವೇಶಿಸಿದರೆ ಆ ಪಂದ್ಯವನ್ನು ಲಾಹೋರ್‌ನಲ್ಲಿ ಆಡಲಾಗುವುದು. ಸದ್ಯ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಪಂದ್ಯಾವಳಿ ನಡೆಯುವ ಸ್ಟೇಡಿಯಂನ ಸಿದ್ಧತೆಯಲ್ಲಿ ತೊಡಗಿದೆ. ಕೆಲ ದಿನಗಳ ಹಿಂದೆ ಲಾಹೋರ್​ ಸ್ಟೇಡಿಯಂ ಸಿದ್ಧತೆ ನಡೆಸುವ ವಿಡಿಯೊ ವೈರಲ್​ ಆಗಿತ್ತು.

ಚಾಂಪಿಯನ್ಸ್​ ಟ್ರೋಫಿ 2025 ಫೆಬ್ರವರಿ 19ರಿಂದ ಮಾರ್ಚ್‌ 9ರ ತನಕ ನಡೆಯಲಿದೆ. ಮಾರ್ಚ್​ 9ರಂದು ಫೈನಲ್‌ ನಡೆಯಲಿದೆ. ಚಾರ್ಚ್​ 10 ಮೀಸಲು ದಿನವಾಗಿದೆ.

ಇದನ್ನೂ ಓದಿ Team India: ಭಾರತಕ್ಕೆ ಬಂದಿಳಿದ ಟೀಮ್‌ ಇಂಡಿಯಾ; ವಿಶ್ವಕಪ್‌ ಹೀರೋಗಳಿಗೆ ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತ ತಂಡವು ಪ್ರಯಾಣಿಸಲು ನಿರಾಕರಿಸಿದ ನಂತರ, ಕಳೆದ ವರ್ಷದ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಯಿತ್ತು. ಕೇವಲ ನಾಲ್ಕು ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸಿ ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದಿದ್ದವು. ಭಾರತ ಎಲ್ಲ ಪಂದ್ಯಗಳನ್ನು ಲಂಕಾದಲ್ಲಿ ಆಡಿತ್ತು.

ಚಾಂಪಿಯನ್ಸ್​ ಟ್ರೋಫಿಯ ಯಶಸ್ಸಿಗೆ ಪಿಸಿಬಿ ಬದ್ಧವಾಗಿದ್ದರೂ, ಭದ್ರತಾ ಕಾರಣಗಳಿಂದಾಗಿ ಭಾರತವು ಭಾಗವಹಿಸದಿದ್ದರೆ, ಆಗ ಏಷ್ಯಾ ಕಪ್​ನಂತೆ​ ಹೈಬ್ರಿಡ್ ಮಾದರಿಯ ಮೊರೆ ಹೋಗಬೇಕಿದೆ. ಆದರೆ ಸ್ವತಂತ್ರ ಏಜೆನ್ಸಿಯೊಂದಿಗೆ ಸಮಾಲೋಚಿಸಿ ಸಮಗ್ರ ಭದ್ರತಾ ಮೌಲ್ಯಮಾಪನವನ್ನು ನಡೆಸಿ ಪಾಕಿಸ್ತಾನದಲ್ಲಿಯೇ ಟೂರ್ನಿ ನಡೆಸಿ ಎಂದು ಪಿಸಿಬಿ ಹೇಳುವ ಸಾಧ್ಯತೆಗಳಿವೆ. ಐಸಿಸಿ ಈ ವಿನಂತಿಯನ್ನು ಒಪ್ಪಿಕೊಂಡಿದೆ ಎಂದು ಇತ್ತೀಚಿನ ವರದಿಗಳು ಹೇಳಿವೆ. ಭಾರತ ಪಾಕ್​ನಲ್ಲಿ ಆಡಲಿದೆಯಾ ಅಥವಾ ಬಿಸಿಸಿಐ ಒತ್ತಾಯಕ್ಕೆ ಮಣಿದು ಟೂರ್ನಿ ಪಾಕ್​ ನಿಂದ ಶಿಫ್ಟ್​ ಆಗಲಿದೆಯಾ ಎನ್ನುವುದನ್ನು ಕಾದು ನೋಡಬೇಕಿದೆ.

ಅರ್ಹತೆ ಪಡೆದ ತಂಡಗಳು

ಐಸಿಸಿ ನಿಯಮಗಳ ಪ್ರಕಾರ 2023ರ ಸಾಲಿನ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಅಂಕಪಟ್ಟಿಯ ಅಗ್ರ 7ರಲ್ಲಿ ಸ್ಥಾನ ಪಡೆಯುವ ತಂಡಗಳು ಟೂರ್ನಿಗೆ ಅರ್ಹತೆ ಪಡೆದಿದೆ. ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಅರ್ಹತೆ ಪಡೆದ ತಂಡಗಳಾಗಿವೆ.

Continue Reading
Advertisement
Actor Darshan Will Attend The Court Hearing From Online
ಸಿನಿಮಾ3 mins ago

Actor Darshan: ಇಂದು ನ್ಯಾಯಾಲಯಕ್ಕೆ ಹಾಜರಾಗ್ತಿಲ್ಲ ದರ್ಶನ್ &ಟೀಂ; ಕಾರಣವೇನು?

Price Hike
ವಾಣಿಜ್ಯ5 mins ago

Price Hike: ಮೊಬೈಲ್ ಕಂಪನಿಗಳಿಂದ ದರ ಏರಿಕೆ; ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬಹುದೆ?

Team India
ಕ್ರೀಡೆ10 mins ago

Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

Dengue fever rises across the state including Bengaluru BBMP Commissioner also get fever
ಪ್ರಮುಖ ಸುದ್ದಿ11 mins ago

Dengue Fever: ಹಾಸನ ಜಿಲ್ಲೆಯಲ್ಲಿ ಮೂರು ಮಕ್ಕಳ ಬಲಿ ಪಡೆದ ಜ್ವರ; ಡೆಂಗ್ಯು ಮರಣ ಮೃದಂಗ?

Varalaxmi Sarathkumar Reception attend By sudeep Family
ಸ್ಯಾಂಡಲ್ ವುಡ್39 mins ago

Varalaxmi Sarathkumar: ವರಲಕ್ಷ್ಮಿ ಶರತ್‌ಕುಮಾರ್ ರಿಸಪ್ಷನ್‌ನಲ್ಲಿ ಮಿಂಚಿದ ಕಿಚ್ಚ ಸುದೀಪ್ ಕುಟುಂಬ!

fraud case bagepalli
ಕ್ರೈಂ46 mins ago

Fraud Case: ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್, ಗರ್ಭಿಣಿಯಿಂದ ಪೊಲೀಸ್‌ಗೆ ದೂರು

Suryakumar Yadav
ಕ್ರೀಡೆ46 mins ago

Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

Kalki 2898 AD records global box office collection
ಟಾಲಿವುಡ್1 hour ago

Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?

Dengue Fever In Children
ಆರೋಗ್ಯ1 hour ago

Dengue Fever In Children: ಮಗುವಿನ ಮೈ ಬಿಸಿ ಆಗಿದೆಯೇ? ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ

Teachers Transfer
ಶಿಕ್ಷಣ1 hour ago

Teachers Transfer: 10 ವರ್ಷ ಒಂದೇ ಕಡೆ ಇದ್ದ 5,000 ಶಿಕ್ಷಕರ ವರ್ಗಾವಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ7 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌